top of page
News Articles
Sathyapatha News Plus


ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ನಿಂದ ಸಹ ಕೈದಿಗಳಿಗೆ ಕಿರುಕುಳ ಆರೋಪ
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ವಿರುದ್ಧ ಗಂಭೀರ ಆರೋಪವೊಂದು ಕೇಳಿಬಂದಿದೆ. ಅವರು ತಮ್ಮ ಸಹ ಕೈದಿಗಳಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ವರದಿಯಾಗಿದೆ. ಈ ಬಾರಿ ದರ್ಶನ್ ಜೈಲು ಸೇರಿದಾಗಿನಿಂದ ಜೈಲಿನಲ್ಲಿ ಕಠಿಣ ನಿಯಮಗಳು ಜಾರಿಯಲ್ಲಿದ್ದು, ಇತ್ತೀಚೆಗೆ ಜೈಲಿನ ಪಾರ್ಟಿ ವಿಡಿಯೋ ವೈರಲ್ ಆದ ನಂತರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಿದೆ. ಜೈಲಿನ ಮುಖ್ಯ ಸೂಪರಿಂಟೆಂಡೆಂಟ್ ಆಗಿ ಐಪಿಎಸ್ ಅಧಿಕಾರಿ ಅಂಶು ಕುಮಾರ್ ನೇಮಕಗೊಂಡ ನಂತರ, ಜೈಲಿನಲ್ಲಿ ಅತಿ ಕಠಿಣ ರೂಲ್ಸ್ಗಳನ್ನು ಜಾರಿಗೆ ತಂದಿದ್ದಾರೆ. ಜೈಲಿನಲ್ಲ
Dec 8, 20251 min read


ಮತ್ತೆ ಅಲ್ಪ ಏರಿಕೆ ಕಂಡ ಬಂಗಾರದ ದರ
ಇಂದು, ಡಿಸೆಂಬರ್ 8, 2025 ರಂದು ಬೆಂಗಳೂರಿನಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ ₹13,042/ಗ್ರಾಂ ಮತ್ತು 22 ಕ್ಯಾರೆಟ್ ಚಿನ್ನದ ಬೆಲೆ ₹11,955/ಗ್ರಾಂ ಇದೆ, ಚಿನ್ನದ ದರದಲ್ಲಿ ಅಲ್ಪ ಏರಿಕೆ ಕಂಡುಬಂದಿದ್ದು, ಬೆಳ್ಳಿ ಬೆಲೆ ಕೊಂಚ ಇಳಿಕೆಯಾಗಿದೆ. ಇಂದಿನ ಚಿನ್ನದ ದರ (ಡಿಸೆಂಬರ್ 8, 2025) 24 ಕ್ಯಾರೆಟ್ (1 ಗ್ರಾಂ): ₹13,042 22 ಕ್ಯಾರೆಟ್ (1 ಗ್ರಾಂ): ₹11,955 ಬೆಳ್ಳಿ ಬೆಲೆ (1 ಗ್ರಾಂ): ₹189
Dec 8, 20251 min read


ಮಂಗಳೂರಿನ ನೆಹರೂ ಮೈದಾನದಲ್ಲಿ ನೂತನ ಆಸ್ಟ್ರೋ ಟರ್ಫ್ ಫುಟ್ಬಾಲ್ ಕ್ರೀಡಾಂಗಣ ಉದ್ಘಾಟನೆ
ಮಂಗಳೂರು ನಗರದ ಹೃದಯಭಾಗದಲ್ಲಿರುವ ನೆಹರೂ ಮೈದಾನದಲ್ಲಿ ಸುಸಜ್ಜಿತ ಆಸ್ಟ್ರೋ ಟರ್ಫ್ ಫುಟ್ಬಾಲ್ ಕ್ರೀಡಾಂಗಣವು ಬುಧವಾರದಂದು ವಿಧ್ಯುಕ್ತವಾಗಿ ಉದ್ಘಾಟನೆಗೊಂಡಿತು. ಕ್ರೀಡಾಭಿಮಾನಿಗಳ ಬಹುಕಾಲದ ಕನಸಾಗಿದ್ದ ಈ ಕ್ರೀಡಾಂಗಣವನ್ನು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಮಂಗಳೂರಿನಲ್ಲಿ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಂಗಣ ನಿರ್ಮಾಣಗೊಂಡಿರುವುದು ಸಂತಸ ತಂದಿದೆ. ಮುಂದಿನ ದಿನಗಳಲ್ಲಿ ಈ ಕ್ರೀಡಾಂಗಣಕ್ಕೆ ಇನ್ನಷ್ಟು ಅಗತ್ಯ ಸೌಲಭ್ಯಗಳನ್ನು ಒದಗಿಸುವ ಮೂಲಕ ಇದನ್ನು ಉನ್ನತ ದರ್ಜೆಗೆ ಏರಿಸಲಾಗುವುದು ಎಂದು ಭರವಸೆ ನ
Dec 3, 20251 min read


ಪ್ರಯಾಣಿಕರ ತುರ್ತು ಚಿಕಿತ್ಸೆಗೆ ಮಂಗಳೂರಿನಲ್ಲಿ ವಿಮಾನ ಇಳಿಕೆ: ಏರ್ ಇಂಡಿಯಾ ಎಕ್ಸ್ಪ್ರೆಸ್ಗೆ ಕ್ಷಿಪ್ರ ಸ್ಪಂದನೆ
ಮಂಗಳೂರು: ರಿಯಾದ್ನಿಂದ ತಿರುವನಂತಪುರಕ್ಕೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನವೊಂದು (Air India Express), ವಿಮಾನದಲ್ಲಿದ್ದ ಪ್ರಯಾಣಿಕರೊಬ್ಬರಿಗೆ ತುರ್ತು ವೈದ್ಯಕೀಯ ಚಿಕಿತ್ಸೆಯ ಅಗತ್ಯ ಎದುರಾದ ಹಿನ್ನೆಲೆಯಲ್ಲಿ, ಸೋಮವಾರ ತಡರಾತ್ರಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಸಮಯಕ್ಕೆ ಸರಿಯಾಗಿ ವಿಮಾನ ನಿಲ್ದಾಣದ ಅಧಿಕಾರಿಗಳು ಮತ್ತು ವೈದ್ಯಕೀಯ ತಂಡದ ಕ್ಷಿಪ್ರ ಪ್ರತಿಕ್ರಿಯೆಯಿಂದಾಗಿ ಅಸ್ವಸ್ಥ ಪ್ರಯಾಣಿಕರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲು ಸಾಧ್ಯವಾಗಿದೆ. ರಿಯಾದ್ನಿಂದ ತಿರುವನಂತಪುರಂ ಕಡೆಗೆ ಪ್ರಯಾಣಿಸುತ್ತಿದ್ದ ವಿಮಾನದೊಳಗೆ ಸು
Dec 3, 20251 min read


ಇಂದಿನ ಚಿನ್ನದ ದರ
ಡಿಸೆಂಬರ್ 3, 2025 ರಂದು, ಬೆಂಗಳೂರಿನಲ್ಲಿ 1 ಗ್ರಾಂ 24 ಕ್ಯಾರಟ್ ಚಿನ್ನದ ಬೆಲೆ ₹13,058 ಮತ್ತು 1 ಗ್ರಾಂ 22 ಕ್ಯಾರಟ್ ಚಿನ್ನದ ಬೆಲೆ ₹11,970 ಆಗಿದೆ. ಬೆಳ್ಳಿ ಬೆಲೆ 1 ಗ್ರಾಂಗೆ ₹191 ಕ್ಕೆ ತಲುಪಿದೆ. ಚಿನ್ನ ಮತ್ತು ಬೆಳ್ಳಿ ದರಗಳು ಏರಿಕೆ ಕಂಡಿವೆ. 24 ಕ್ಯಾರಟ್ ಚಿನ್ನ (1 ಗ್ರಾಂ): ₹13,058 22 ಕ್ಯಾರಟ್ ಚಿನ್ನ (1 ಗ್ರಾಂ): ₹11,970 ಬೆಳ್ಳಿ (1 ಗ್ರಾಂ): ₹191
Dec 3, 20251 min read


'ಕಾಂತಾರ ಅಧ್ಯಾಯ 1' ದೈವದ ಪಾತ್ರದ ಅನುಕರಣೆ: ವಿವಾದದ ಬಳಿಕ ಕ್ಷಮೆಯಾಚಿಸಿದ ನಟ ರಣವೀರ್ ಸಿಂಗ್
ಗೋವಾದಲ್ಲಿ ಇತ್ತೀಚೆಗೆ ನಡೆದ ಭಾರತೀಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ (IFFI) ಸಮಾರೋಪ ಸಮಾರಂಭದಲ್ಲಿ ಬಾಲಿವುಡ್ ನಟ ರಣವೀರ್ ಸಿಂಗ್ ಅವರು 'ಕಾಂತಾರ ಅಧ್ಯಾಯ 1' ಚಿತ್ರದ ದೈವದ ಪಾತ್ರವನ್ನು ತಮಾಷೆಯಾಗಿ ಅನುಕರಣೆ ಮಾಡಿ ವಿವಾದಕ್ಕೆ ಸಿಲುಕಿದ್ದಾರೆ. ರಣವೀರ್ ಸಿಂಗ್ ಅವರು ದೈವದ ಪಾತ್ರವನ್ನು 'ಹೆಣ್ಣು ದೆವ್ವ' ಎಂದು ಉಲ್ಲೇಖಿಸಿ ಟೀಕೆಗೆ ಗುರಿಯಾಗಿದ್ದರು. ಕರಾವಳಿ ಪ್ರದೇಶದ ಹಲವರು ಈ ಹೇಳಿಕೆ ಮತ್ತು ಅನುಕರಣೆಯ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು, ನಟನು ತಕ್ಷಣವೇ ಕ್ಷಮೆಯಾಚಿಸಬೇಕು ಎಂದು ವ್ಯಾಪಕವಾಗಿ ಆಗ್ರಹಿಸಿದ್ದರು. ಈ ವಿವಾದವು ಹಿಂದೂ ಸಮುದಾಯದ ಭಾವ
Dec 2, 20251 min read


ಸಮಂತಾ ಸೈಲೆಂಟ್ ಮರುಮದುವೆ: ಇಶಾ ಯೋಗ ಕೇಂದ್ರದಲ್ಲಿ ರಾಜ್ ನಿಧಿಮೋರ್ ಜೊತೆ ದಾಂಪತ್ಯಕ್ಕೆ ಕಾಲಿಟ್ಟ ನಟಿ!
ಜನಪ್ರಿಯ ನಟಿ ಸಮಂತಾ ರುತ್ ಪ್ರಭು ಅವರು ಯಾವುದೇ ಅದ್ದೂರಿತನವಿಲ್ಲದೆ ಸಿಂಪಲ್ ಆಗಿ ಮರುಮದುವೆಯಾಗಿದ್ದಾರೆ. ಈ ಸುದ್ದಿ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಸಂಚಲನ ಮೂಡಿಸಿದೆ. ಸಮಂತಾ ಅವರು ತಮ್ಮ ಆಪ್ತ ಗೆಳೆಯ ರಾಜ್ ನಿಧಿಮೋರ್ ಜೊತೆ ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಇಶಾ ಯೋಗ ಕೇಂದ್ರದ ಲಿಂಗ ಭೈರವಿ ದೇವಸ್ಥಾನದಲ್ಲಿ ಸದ್ದಿಲ್ಲದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕೇವಲ 30 ಆಪ್ತ ಅತಿಥಿಗಳ ಸಮ್ಮುಖದಲ್ಲಿ ನಡೆದ ಈ ವಿವಾಹ ಸಮಾರಂಭದಲ್ಲಿ ಸಮಂತಾ ಅವರು ಕೆಂಪು ಸೀರೆಯಲ್ಲಿ ಮಿಂಚಿದರೆ, ಮದುಮಗ ರಾಜ್ ನಿಧಿಮೋರ್ ಬಿಳಿ ಶೆರ್ವಾನಿಯಲ್ಲಿ ಕಾಣಿಸಿಕೊಂಡಿದ್ದಾರೆ. ಕಳೆದ ಕೆಲವು ದಿನಗಳಿಂದ ಈ ಜೋಡಿ
Dec 2, 20251 min read


ಶ್ರೀಲಂಕಾದಲ್ಲಿ 'ದಿತ್ವಾ' ಚಂಡಮಾರುತಕ್ಕೆ 123 ಬಲಿ: ಭಾರತದಿಂದ ನೆರವಿನ ಹಸ್ತ!
ಭಾರಿ ಅವಾಂತರ ಸೃಷ್ಟಿಸಿರುವ 'ದಿತ್ವಾ' ಚಂಡಮಾರುತವು ಶ್ರೀಲಂಕಾದ ಕರಾವಳಿಗೆ ಅಪ್ಪಳಿಸಿ ದ್ವೀಪರಾಷ್ಟ್ರವನ್ನು ತತ್ತರಿಸುವಂತೆ ಮಾಡಿದೆ. ಸತತ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆ ಮತ್ತು ಉಂಟಾಗಿರುವ ಭೀಕರ ಪ್ರವಾಹದಿಂದಾಗಿ ಇದುವರೆಗೆ 123 ಜನರು ಪ್ರಾಣ ಕಳೆದುಕೊಂಡಿದ್ದು, 130ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ ಎಂದು ವಿಪತ್ತು ನಿರ್ವಹಣಾ ಕೇಂದ್ರ (DMC) ತಿಳಿಸಿದೆ. ಪ್ರವಾಹ ಸಂತ್ರಸ್ತರಾಗಿರುವ ಸುಮಾರು 43,995 ಜನರನ್ನು ಸರ್ಕಾರಿ ಸ್ವಾಮ್ಯದ ಪರಿಹಾರ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ. ರಾಜಧಾನಿ ಕೊಲಂಬೊ ಸೇರಿದಂತೆ ಹಲವು ಪ್ರಮುಖ ಭಾಗಗಳಲ್ಲಿ ಪ್ರವಾಹ ಸೃಷ್ಟಿಯಾಗಿದ್ದು,
Dec 2, 20251 min read


ಪ್ರಧಾನಿ ಮೋದಿ 'ನಾಟಕ' ಎಂಬ ಹೇಳಿಕೆಗೆ ಪ್ರಿಯಾಂಕಾ ಗಾಂಧಿ ತಿರುಗೇಟು
ಸಂಸತ್ತಿನ ಚಳಿಗಾಲದ ಅಧಿವೇಶನ ಪ್ರಾರಂಭವಾಗುತ್ತಿದ್ದಂತೆ ಆಡಳಿತಾರೂಢ ಬಿಜೆಪಿ ಮತ್ತು ವಿರೋಧ ಪಕ್ಷಗಳ ನಡುವಿನ ವಾಕ್ಸಮರ ತಾರಕಕ್ಕೇರಿದೆ. ಅಧಿವೇಶನಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ವಿರೋಧ ಪಕ್ಷಗಳ ವರ್ತನೆಯನ್ನು 'ನಾಟಕ' ಎಂದು ಟೀಕಿಸಿದ್ದಕ್ಕೆ ಕಾಂಗ್ರೆಸ್ ನಾಯಕಿ ಹಾಗೂ ವಯನಾಡು ಸಂಸದೆ ಪ್ರಿಯಾಂಕಾ ಗಾಂಧಿ ಅವರು ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಧಾನಿಯವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ ಪ್ರಿಯಾಂಕಾ ಗಾಂಧಿ, ಸಂಸತ್ತಿನಲ್ಲಿ ಜನರ ಜ್ವಲಂತ ಸಮಸ್ಯೆಗಳನ್ನು ಎತ್ತಿ ತೋರಿಸುವುದು ನಾಟಕವಲ್ಲ. ಬದಲಾಗಿ, ಈ ಸಮಸ್ಯೆಗಳ ಬಗ್ಗೆ ಚರ್ಚಿಸಲು ಅವಕಾಶ ನೀಡದೆ ಸರ್ಕಾರವೇ ಪಲಾಯನ ಮಾಡ
Dec 2, 20251 min read


ನೆರೆಯ ದೇಶಗಳಿಂದ ಅಡಿಕೆ ಆಮದು: ಸಂಸತ್ತಿನಲ್ಲಿ ಗಂಭೀರ ವಿಷಯ ಪ್ರಸ್ತಾಪಿಸಿದ ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ
ಸುಂಕಮುಕ್ತ ವ್ಯವಸ್ಥೆಯ ದುರ್ಬಳಕೆಯಿಂದ ದೇಶದ ಅಡಿಕೆ ಬೆಳೆಗಾರರಿಗೆ ಆರ್ಥಿಕ ಸಂಕಷ್ಟ: ಸಂಸದರ ಮನವಿ ನವದೆಹಲಿ: ಭೂತಾನ್, ಮಯನ್ಮಾರ್ ಮತ್ತು ಶ್ರೀಲಂಕಾದಂತಹ ನೆರೆಯ ದೇಶಗಳಿಂದ ಭಾರೀ ಪ್ರಮಾಣದಲ್ಲಿ ಅಡಿಕೆ ಆಮದು ಆಗುತ್ತಿರುವುದು ದೇಶದ ಅಡಿಕೆ ಬೆಳೆಗಾರರ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಲೋಕಸಭೆಯ ಚಳಿಗಾಲದ ಅಧಿವೇಶನದ ಮೊದಲ ದಿನವೇ ಪ್ರಸ್ತಾಪಿಸಿ ಸದನದ ಗಮನ ಸೆಳೆದಿದ್ದಾರೆ. ನೆರೆಯ ಸಣ್ಣ ದೇಶಗಳಿಗೆ ವ್ಯಾಪಾರ ಉತ್ತೇಜನ ನೀಡುವ ಸದುದ್ದೇಶದಿಂದ ಜಾರಿಯಲ್ಲಿರುವ ಸುಂಕ ಮುಕ್ತ (Duty-Free Quota-Free - DFQF) ವ್ಯವಸ್ಥೆಯಡಿ ಶೂನ್ಯ ಸು
Dec 2, 20251 min read


ಪುತ್ತೂರಿನಲ್ಲಿ ಮುಂದುವರಿದ ಬಿಜೆಪಿ-ಪುತ್ತಿಲ ಪರಿವಾರ ಜಟಾಪಟಿ: ಕಾರ್ಯಕ್ರಮದಿಂದ ಬಿಜೆಪಿ ಉಪಾಧ್ಯಕ್ಷ ಹೊರಕ್ಕೆ!
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಬಿಜೆಪಿ ಮತ್ತು ಪುತ್ತಿಲ ಪರಿವಾರದ ನಡುವಿನ ಮುಸುಕಿನ ಜಟಾಪಟಿ ತಾರಕಕ್ಕೇರಿದೆ. ಇತ್ತೀಚೆಗೆ ನಡೆದ ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮದಲ್ಲಿ ಈ ಭಿನ್ನಮತ ಸ್ಫೋಟಗೊಂಡಿದ್ದು, ಪುತ್ತಿಲ ಪರಿವಾರದ ಕಾರ್ಯಕರ್ತರು ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತ ಅವರನ್ನು ಕಾರ್ಯಕ್ರಮದಿಂದ ಹೊರದಬ್ಬಿದ ಘಟನೆ ವರದಿಯಾಗಿದೆ. ರಾಜಕೀಯ ಕೆಸರೆರೆಚಾಟ ಈಗ ದೇವರ ಕಾರ್ಯಕ್ರಮಕ್ಕೂ ಹಬ್ಬಿರುವುದು ಸ್ಥಳೀಯ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಯು ಪುತ್ತೂರಿನಲ್ಲಿ ಪಕ್ಷದೊಳಗೆ ನಡೆಯುತ್ತಿರುವ ಆಂತರಿಕ ತಿಕ್ಕಾಟವನ್ನು ಮತ
Dec 1, 20251 min read


ಇಂದಿನ ಚಿನ್ನದ ದರ
ಇಂದಿನ (ನವೆಂಬರ್ 20, 2025) ಚಿನ್ನದ ದರಗಳು ಇಲ್ಲಿವೆ. ಕರ್ನಾಟಕದ ಪ್ರಮುಖ ನಗರಗಳಾದ ಬೆಂಗಳೂರು, ಮಂಗಳೂರು ಮತ್ತು ಮೈಸೂರಿನಲ್ಲಿ 22 ಕ್ಯಾರೆಟ್ ಮತ್ತು 24 ಕ್ಯಾರೆಟ್ ಚಿನ್ನದ ಬೆಲೆಗಳಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ. ಕರ್ನಾಟಕದಲ್ಲಿ ಇಂದಿನ ಚಿನ್ನದ ದರ (ಪ್ರತಿ 10 ಗ್ರಾಂಗೆ): 24 ಕ್ಯಾರೆಟ್ ಚಿನ್ನ: ₹1,24,690 (ನಿನ್ನೆಗೆ ಹೋಲಿಸಿದರೆ ₹170 ಇಳಿಕೆ) 22 ಕ್ಯಾರೆಟ್ ಚಿನ್ನ: ₹1,14,300 (ನಿನ್ನೆಗೆ ಹೋಲಿಸಿದರೆ ₹150 ಇಳಿಕೆ)
Dec 1, 20251 min read


ಮಹಿಳೆಯರ ರಕ್ಷಣೆಗಾಗಿ 'ಸುರಕ್ಷಾ' SOS ಆ್ಯಪ್ ಲೋಕಾರ್ಪಣೆ: ತುರ್ತು ನೆರವಿಗೆ ತಕ್ಷಣದ ಸ್ಪಂದನೆ
ಮಹಿಳೆಯರ ಸುರಕ್ಷತೆಯನ್ನು ಬಲಪಡಿಸುವ ನಿಟ್ಟಿನಲ್ಲಿ ತುಮಕೂರು ಪೊಲೀಸರು ಮಹತ್ವದ ಹೆಜ್ಜೆಯನ್ನಿಟ್ಟಿದ್ದು, ಬೆಂಗಳೂರಿನ ನಂತರ ಇದೀಗ ತುಮಕೂರಿನಲ್ಲೂ 'ಸುರಕ್ಷಾ' SOS ಆ್ಯಪ್ಗೆ ಅಧಿಕೃತವಾಗಿ ಚಾಲನೆ ನೀಡಲಾಗಿದೆ. ಕೆಲಸಕ್ಕೆ ಹೋಗುವ ಮಹಿಳೆಯರು, ಕಾಲೇಜು ವಿದ್ಯಾರ್ಥಿನಿಯರು ಹಾಗೂ ನಿರ್ಜನ ಪ್ರದೇಶಗಳಲ್ಲಿ ಸಂಚರಿಸುವಾಗ ಎದುರಾಗುವ ಯಾವುದೇ ಆತಂಕ ಅಥವಾ ಅಪಾಯಕಾರಿ ಸನ್ನಿವೇಶಗಳಲ್ಲಿ ತ್ವರಿತ ನೆರವು ಒದಗಿಸಲು ಈ ಆ್ಯಪ್ ಅತ್ಯಂತ ಪರಿಣಾಮಕಾರಿ ಸಾಧನವಾಗಲಿದೆ. ಮಹಿಳಾ ರಕ್ಷಣೆಗೆ ಪ್ರಾಮುಖ್ಯತೆ ನೀಡುವ ರಾಜ್ಯ ಸರ್ಕಾರದ ಯೋಜನೆಯಡಿ, ತುಮಕೂರು ಸ್ಮಾರ್ಟ್ ಸಿಟಿ ಘಟಕವು ಈ ಮಹತ್ವದ ಆ್ಯಪ್ ಅನ್ನು ಅಭಿವೃದ್ಧಿ
Dec 1, 20251 min read


ತಂಬಾಕು ಮತ್ತು ಪಾನ್ ಮಸಾಲಾ ಮೇಲೆ ಹೊಸ ಸೆಸ್ ವಿಧಿಸುವ ಮಸೂದೆ ಮಂಡನೆ: ಬೆಲೆ ಇಳಿಕೆ ತಡೆಯಲು ಸರ್ಕಾರದ ನಿರ್ಧಾರ
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸೋಮವಾರ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ತಂಬಾಕು, ತಂಬಾಕು ಉತ್ಪನ್ನಗಳು ಮತ್ತು ಪಾನ್ ಮಸಾಲಾ ಮೇಲೆ ಹೊಸ ಸೆಸ್ ವಿಧಿಸುವ ಸಂಬಂಧದ ಮಹತ್ವದ ಮಸೂದೆಯನ್ನು ಮಂಡಿಸಲಿದ್ದಾರೆ. ಜಿಎಸ್ಟಿ ದರ ಕಡಿತದ ನಂತರವೂ ಈ ಉತ್ಪನ್ನಗಳ ಬೆಲೆ ಇಳಿಯಬಾರದು ಎಂಬ ಉದ್ದೇಶದಿಂದ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ. ಈ ಉತ್ಪನ್ನಗಳ ಮೇಲೆ ಸದ್ಯಕ್ಕೆ 2026ರ ಮಾರ್ಚ್ವರೆಗೆ ವಿಧಿಸಲಾಗುತ್ತಿರುವ ಪರಿಹಾರಾತ್ಮಕ ಸೆಸ್ನ ಬದಲು, ಇನ್ನು ಮುಂದೆ ಆರೋಗ್ಯ ಮತ್ತು ಭದ್ರತಾ ಸೆಸ್ ರೂಪದಲ್ಲಿ ಸುಂಕ ವಿಧಿಸಲು ಸರ್ಕಾರ ತೀರ್ಮಾನಿಸಿದೆ. ಈ ಹೊಸ ಸುಂಕವನ್ನು ವಿಧಿಸುವುದರ ಹಿಂದ
Dec 1, 20251 min read


ಕೋಣಿ ಗ್ರಾಮದಲ್ಲಿ ಅಪಘಾತ: ಮೂವರಿಗೆ ಗಾಯ
ಕೋಣಿ ಗ್ರಾಮದ ಎಚ್ಎಂಟಿ ಕ್ರಾಸ್ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಮತ್ತು ರಿಕ್ಷಾದಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡಿದ್ದಾರೆ. ಈ ಘಟನೆಯು ನಿನ್ನೆ, ಸೋಮವಾರ ಮಧ್ಯಾಹ್ನ ಸುಮಾರು 3:30 ರ ಸುಮಾರಿಗೆ ನಡೆದಿದೆ. ಗಾಯಗೊಂಡವರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಬಂದ ಸಂಚಾರ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ಅಪಘಾತಕ್ಕೆ ಆಟೋ ರಿಕ್ಷಾ ಚಾಲಕನ ಅಜಾಗರೂಕತೆ ಕಾರಣ ಎಂದು ತಿಳಿದುಬಂದಿದೆ. ಬಸ್ರೂರು ಪೇಟೆ ಕಡೆಯಿಂದ ಮೂರುಕೈ ಕಡೆಗೆ ಬರುತ್ತಿದ್ದ ಬೈಕ್ (KA 20 EB 6656) ಇದ್ದಕ್ಕಿದ್ದಂತೆ ಸೂಚನೆ ನೀಡದೆ ರಸ್ತೆಯಲ್ಲಿ ತಿರುಗಿಸಿದ ರಿಕ್ಷಾ (KA
Dec 1, 20251 min read
Archive
bottom of page


