top of page
News Articles
Sathyapatha News Plus


ಮೊಬೈಲ್ ಗ್ರಾಹಕರಿಗೆ ಬಿಗ್ ನ್ಯೂಸ್: ಇನ್ನು ಮುಂದೆ 28ರ ಬದಲು 30 ದಿನಗಳ ರೀಚಾರ್ಜ್ ಪ್ಲಾನ್ ಲಭ್ಯ!
ದೇಶದ ಮೊಬೈಲ್ ಬಳಕೆದಾರರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ. ಸದ್ಯ ಬಹುತೇಕ ಟೆಲಿಕಾಂ ಕಂಪನಿಗಳು 28 ದಿನಗಳ ವ್ಯಾಲಿಡಿಟಿ ನೀಡುತ್ತಿದ್ದು, ಇದರಿಂದ ಗ್ರಾಹಕರು ವರ್ಷಕ್ಕೆ 13 ಬಾರಿ ರೀಚಾರ್ಜ್ ಮಾಡಬೇಕಾದ ಅನಿವಾರ್ಯತೆ ಇತ್ತು. ಈ ಬಗ್ಗೆ ಸಂಸದ ರಾಘವ್ ಚಡ್ಡಾ ರಾಜ್ಯಸಭೆಯಲ್ಲಿ ಧ್ವನಿ ಎತ್ತಿದ್ದರು. ಇದರ ಬೆನ್ನಲ್ಲೇ ಕೇಂದ್ರ ಟೆಲಿಕಾಂ ಸಚಿವ ಜ್ಯೋತಿರಾಧಿತ್ಯ ಸಿಂಧಿಯಾ ಅವರು, ಎಲ್ಲಾ ಆಪರೇಟರ್ಗಳು ಕಡ್ಡಾಯವಾಗಿ 30 ದಿನಗಳ ರೀಚಾರ್ಜ್ ಆಯ್ಕೆಯನ್ನು ಗ್ರಾಹಕರಿಗೆ ನೀಡಬೇಕು ಎಂದು ಸೂಚನೆ ನೀಡಿದ್ದಾರೆ. ಈ ಹೊಸ ಸೂಚನೆಯಿಂದಾಗಿ ಗ್ರಾಹಕರಿಗೆ ತಮ್ಮ ಅನುಕೂಲಕ್ಕೆ ತಕ್ಕಂತೆ ತಿಂಗಳ ಪೂರ್ತಿ ಅನ್ವ
Mar 311 min read


ಹಾರ್ಮುಜ್ ಜಲಸಂಧಿಯಲ್ಲಿ ಭಾರತದ 18 ಹಡಗುಗಳು ಬಂದಿ: ದೇಶದಲ್ಲಿ ಇಂಧನ ಅಭಾವದ ಭೀತಿ!
ಪಶ್ಚಿಮ ಏಷ್ಯಾದಲ್ಲಿ ಉಲ್ಬಣಿಸಿರುವ ಅಮೆರಿಕ-ಇರಾನ್ ಯುದ್ಧವು ಭಾರತದ ಇಂಧನ ಭದ್ರತೆಯ ಮೇಲೆ ನೇರ ಪರಿಣಾಮ ಬೀರಿದೆ. ವಿಶ್ವದ ಅತ್ಯಂತ ಸೂಕ್ಷ್ಮ ಸಮುದ್ರ ಮಾರ್ಗವಾದ ಹಾರ್ಮುಜ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ 18 ಬೃಹತ್ ಹಡಗುಗಳು ಸಿಲುಕಿಕೊಂಡಿದ್ದು, ಇಂಧನ ಸಾಗಾಟ ಸ್ಥಗಿತಗೊಂಡಿದೆ ಎಂದು ಕೇಂದ್ರ ನೌಕಾಯಾನ ಸಚಿವಾಲಯದ ಮೂಲಗಳು ತಿಳಿಸಿವೆ. ಈ ಹಡಗುಗಳಲ್ಲಿ ಭಾರತದ ಅಡುಗೆ ಮನೆಗಳಿಗೆ ಅತ್ಯಗತ್ಯವಾದ ಎಲ್ಪಿಜಿ (LPG) ಮತ್ತು ದೇಶದ ಇಂಧನ ಅಗತ್ಯದ ಬೆನ್ನೆಲುಬಾಗಿರುವ ಕಚ್ಚಾ ತೈಲ (Crude Oil) ಹಾಗೂ ಪೆಟ್ರೋಲಿಯಂ ಉತ್ಪನ್ನಗಳಿವೆ. ಯುದ್ಧದ ಹಿನ್ನೆಲೆಯಲ್ಲಿ ಈ ಮಾರ್ಗದಲ್ಲಿ ಹಡಗುಗಳ ಸಂಚಾರಕ್ಕ
Mar 311 min read


ಇಂದಿನ ಚಿನ್ನದ ದರ ಎಷ್ಟಿದೆ ಚೆಕ್ ಮಾಡಿ
ಇಂದು (ಮಾರ್ಚ್ 31, 2026) ಕರ್ನಾಟಕದಲ್ಲಿ ಚಿನ್ನದ ಬೆಲೆ ದಿಢೀರ್ ಏರಿಕೆ ಕಂಡಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ಇಂದಿನ ತಾಜಾ ದರಗಳ ವಿವರ ಇಲ್ಲಿದೆ: ಇಂದಿನ ಚಿನ್ನದ ಬೆಲೆ (ಪ್ರತಿ 1 ಗ್ರಾಂಗೆ): 24 ಕ್ಯಾರೆಟ್ (ಅಪರಂಜಿ): ₹14,929 22 ಕ್ಯಾರೆಟ್ (ಆಭರಣ ಚಿನ್ನ): ₹13,685 18 ಕ್ಯಾರೆಟ್: ₹11,197 ಬೆಲೆ ಏರಿಕೆ: ನಿನ್ನೆಗಿಂತ ಇಂದು ಚಿನ್ನದ ಬೆಲೆಯಲ್ಲಿ ಗಣನೀಯ ಏರಿಕೆ ಕಂಡುಬಂದಿದೆ. 24 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹14,929 ಕ್ಕೆ ತಲುಪಿದೆ. ಬೆಳ್ಳಿ ದರ: ಬೆಳ್ಳಿ ಬೆಲೆಯಲ್ಲೂ ಭಾರಿ ಏರಿಕೆ ಕಂಡಿದ್ದು, ಪ್ರತಿ ಕೆ.ಜಿಗೆ ₹2.5 ಲಕ್ಷದ ಗಡಿ ತಲುಪಿದೆ. ಪ
Mar 311 min read


ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ: ರಿಸಲ್ಟ್ ವೀಕ್ಷಿಸಲು ಹೀಗೆ ಮಾಡಿ
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 2026ನೇ ಸಾಲಿನ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಇಂದು ಅಧಿಕೃತವಾಗಿ ಬಿಡುಗಡೆ ಮಾಡಿದೆ. ಫೆಬ್ರವರಿ ಮತ್ತು ಮಾರ್ಚ್ ತಿಂಗಳಿನಲ್ಲಿ ಪರೀಕ್ಷೆ ಬರೆದಿದ್ದ ಲಕ್ಷಾಂತರ ವಿದ್ಯಾರ್ಥಿಗಳು ಈಗ ಇಲಾಖೆಯ ಅಧಿಕೃತ ವೆಬ್ಸೈಟ್ ಆದ karresults.nic.in ಗೆ ಭೇಟಿ ನೀಡಿ ತಮ್ಮ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ. ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸುವ ಮೂಲಕ ಅಂಕಪಟ್ಟಿಯನ್ನು ಡೌನ್ಲೋಡ್ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ವೆಬ್ಸೈಟ್ನಲ್ಲಿ ಫಲಿತಾಂಶ ವೀಕ್ಷಿಸಿದ ನಂತರ ಅಭ್ಯರ್ಥಿಗ
Mar 311 min read


2027ರ ಜನಗಣತಿಯಲ್ಲಿ ಹೊಸ ನಿಯಮ: ಲಿವ್-ಇನ್ ಜೋಡಿಗಳಿಗೆ 'ವಿವಾಹಿತ' ಸ್ಥಾನಮಾನ
2027ರ ರಾಷ್ಟ್ರೀಯ ಜನಗಣತಿಯಲ್ಲಿ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆಯನ್ನು ತಂದಿದೆ. ಅದರಂತೆ, ದೀರ್ಘಕಾಲದಿಂದ ಲಿವ್-ಇನ್ ಸಂಬಂಧದಲ್ಲಿರುವ ಮತ್ತು ತಮ್ಮ ಬಾಂಧವ್ಯವನ್ನು 'ಸ್ಥಿರ' ಎಂದು ಭಾವಿಸುವ ಜೋಡಿಗಳನ್ನು ಇನ್ಮುಂದೆ ಅಧಿಕೃತವಾಗಿ ವಿವಾಹಿತ ದಂಪತಿಗಳೆಂದೇ ಪರಿಗಣಿಸಲಾಗುತ್ತದೆ. ಜನಗಣತಿ ಇಲಾಖೆಯ ಅಧಿಕೃತ ವೆಬ್ಸೈಟ್ನ ಪ್ರಶ್ನೋತ್ತರ ವಿಭಾಗದಲ್ಲಿ ಈ ಬಗ್ಗೆ ಸ್ಪಷ್ಟನೆಯನ್ನು ನೀಡಲಾಗಿದ್ದು, ಸಾಮಾಜಿಕ ಬದಲಾವಣೆಗಳಿಗೆ ಪೂರಕವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಹೊಸ ನಿಯಮದ ಪ್ರಕಾರ, ಮದುವೆಯಾಗದಿದ್ದರೂ ಒಟ್ಟಾಗಿ ವಾಸಿಸುತ್ತಿರುವ ಜೋಡಿಗಳು ತಮ್ಮ ಸಂಬಂಧ ಸ್ಥಿರವಾಗಿದೆ ಎಂದು ಘೋಷಿಸಿಕೊಂಡರೆ
Mar 311 min read


ಎಣ್ಮೂರು ಶ್ರೀ ಆದಿಬೈದೇರುಗಳ ನೇಮೋತ್ಸವ: ಏಪ್ರಿಲ್ 1 ರಿಂದ ವೈಭವದ ಧಾರ್ಮಿಕ ಕಾರ್ಯಕ್ರಮಗಳು
ದಕ್ಷಿಣ ಕನ್ನಡ ಜಿಲ್ಲೆಯ ಎಣ್ಮೂರು ಕಟ್ಟಬೀಡಿನಲ್ಲಿ ಸುಗ್ಗಿ ತಿಂಗಳ ಪೂವೆಯಂದು ಶ್ರೀ ಆದಿಬೈದೇರುಗಳ ನೇಮೋತ್ಸವವು ಅತ್ಯಂತ ಶ್ರದ್ಧಾಭಕ್ತಿಯಿಂದ ಜರಗಲಿದೆ. ಮಾರ್ಚ್ 25 ರಿಂದಲೇ ವಿವಿಧ ಧಾರ್ಮಿಕ ವಿಧಿವಿಧಾನಗಳು ಆರಂಭಗೊಂಡಿದ್ದು, ಉಳ್ಳಾಕ್ಕುಳ ಬೀಡಿನಲ್ಲಿ ತಂಬಿಲ ಹಾಗೂ ಗರಡಿಯಲ್ಲಿ ಗೊನೆ ಕಡಿಯುವ ಮುಖಾಂತರ ಚಾಲನೆ ನೀಡಲಾಗಿದೆ. ಮಾರ್ಚ್ 30 ಮತ್ತು 31 ರಂದು ಶ್ರೀ ಉಳ್ಳಾಕುಳ ಮತ್ತು ಇಷ್ಟ ದೇವತೆಗಳ ನೇಮೋತ್ಸವ ಹಾಗೂ ಸಾರ್ವಜನಿಕ ಅನ್ನಸಂತರ್ಪಣೆ ನೆರವೇರಲಿದೆ. ಏಪ್ರಿಲ್ 1ರ ಬುಧವಾರದಂದು ಈ ಉತ್ಸವದ ಪ್ರಮುಖ ಘಟ್ಟಗಳು ನಡೆಯಲಿವೆ. ಅಂದು ಮಧ್ಯಾಹ್ನ 12:30ಕ್ಕೆ ಎಣ್ಮೂರು ಕಟ್ಟಬೀಡಿನಿಂದ ಸಂಪ್ರದಾಯ
Mar 301 min read


ಭದ್ರಾವತಿ: ಹಳ್ಳಕ್ಕೆ ಉರುಳಿದ ಖಾಸಗಿ ಬಸ್
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಕಾಗೆಹಳ್ಳ ಗ್ರಾಮದ ಬಳಿ ಇಂದು ಭೀಕರ ಬಸ್ ಅಪಘಾತ ಸಂಭವಿಸಿದೆ. ಚನ್ನಗಿರಿಯಿಂದ ಭದ್ರಾವತಿಗೆ ಬರುತ್ತಿದ್ದ 'ಶ್ರೀ ರೇಣುಕಾಂಬ' ಹೆಸರಿನ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹಳ್ಳಕ್ಕೆ ಉರುಳಿ ಬಿದ್ದಿದೆ. ಈ ಅವಘಡದಲ್ಲಿ ಬಸ್ಸಿನಲ್ಲಿದ್ದ 30ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ಬಸ್ ಸಂಪೂರ್ಣವಾಗಿ ಜಖಂಗೊಂಡಿದೆ. ಚಾಲಕನ ಅತಿ ವೇಗವೇ ಈ ಘಟನೆಗೆ ಕಾರಣ ಎಂದು ಪ್ರಾಥಮಿಕವಾಗಿ ತಿಳಿದುಬಂದಿದೆ. ಅಪಘಾತದ ತೀವ್ರತೆಗೆ ಹಲವು ಪ್ರಯಾಣಿಕರ ಸ್ಥಿತಿ ಗಂಭೀರವಾಗಿದ್ದು, ಸ್ಥಳೀಯರ ಸಹಾಯದಿಂದ ಗಾಯಾಳುಗಳನ್ನು ಕೂಡಲೇ ಭದ್ರಾವತಿಯ ಸರ್ಕಾರಿ ಆಸ್ಪತ್ರ
Mar 301 min read


ಮಗಳು ಕ್ಯಾಂಡಿ ಕದ್ದಿದ್ದಕ್ಕೆ ಮಗಳ ಪ್ರಾಣವನ್ನೇ ತೆಗೆದ ಕ್ರೂರಿ ತಂದೆ
ಉತ್ತರ ಪ್ರದೇಶದ ರತನ್ಪುರದಲ್ಲಿ ತಂದೆಯೊಬ್ಬ ತನ್ನ 12 ವರ್ಷದ ಮಗಳನ್ನು ಕ್ಷುಲ್ಲಕ ಕಾರಣಕ್ಕಾಗಿ ಕೋಲಿನಿಂದ ಹೊಡೆದು ಕೊಂದಿರುವ ದಾರುಣ ಘಟನೆ ನಡೆದಿದೆ. ಅಂಗಡಿಯೊಂದರಲ್ಲಿ ಬಾಲಕಿ ಕ್ಯಾಂಡಿ ಕದ್ದಿದ್ದಾಳೆಂದು ಮಾಲೀಕರು ದೂರು ನೀಡಿದ್ದರಿಂದ ಕೋಪಗೊಂಡ ತಂದೆ ಪುಷ್ಪೇಂದ್ರ ಅಲಿಯಾಸ್ ಪಪ್ಪು ಶರ್ಮಾ, ಮನೆಗೆ ಬರುತ್ತಿದ್ದಂತೆ ಮಗಳ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿ ಪ್ರಾಣ ತೆಗೆದಿದ್ದಾನೆ. ಈ ಘಟನೆಗೆ ಸಂಬಂಧಿಸಿದಂತೆ ಬಾಲಕಿಯ ತಾಯಿ ಆರತಿ ನೀಡಿದ ದೂರಿನ ಮೇರೆಗೆ ನರೋರಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಾರ್ಚ್ 29 ರಂದು ಪೊಲೀಸರು ಬಂಧಿಸಿದ್ದು, ಕೃತ್
Mar 301 min read


ತೊಕ್ಕೊಟ್ಟು ಆರಿಫ್ ಕೊಲೆ ಪ್ರಕರಣ: ತನಿಖೆ ಈಗ ಸಿಸಿಬಿ ವಶಕ್ಕೆ
ತೊಕ್ಕೊಟ್ಟಿನ 'ಟಾಬ್ಲೆಟ್ ಆರಿಫ್' ಕೊಲೆ ಪ್ರಕರಣದ ತನಿಖೆಯನ್ನು ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರು ಸಿಸಿಬಿ ಎಸಿಪಿ ತಂಡಕ್ಕೆ ಹಸ್ತಾಂತರಿಸಿದ್ದಾರೆ. ಈ ಕೃತ್ಯದಲ್ಲಿ ಆರು ಮಂದಿ ಆರೋಪಿಗಳಿರುವುದು ದೃಢಪಟ್ಟಿದ್ದು, ಅವರು ನಿರಂತರವಾಗಿ ಸ್ಥಳ ಬದಲಾಯಿಸುತ್ತಿರುವುದು ಪೊಲೀಸರಿಗೆ ಸವಾಲಾಗಿದೆ. ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗಾಗಿ ಸಿಸಿಬಿ ತಂಡ ಈಗ ಕಾರ್ಯಾಚರಣೆ ಚುರುಕುಗೊಳಿಸಿದೆ. ಕೊಲೆಗೆ ಸಂಚು ರೂಪಿಸಿದ ಹಾಗೂ ಆರೋಪಿಗಳಿಗೆ ಆಶ್ರಯ ನೀಡಿದ ಶಂಕಿತರನ್ನು ವಿಚಾರಣೆಗೆ ಒಳಪಡಿಸಲಾಗುತ್ತಿದೆ. ಅಪರಾಧಿಗಳಿಗೆ ಸಹಾಯ ಮಾಡುವವರು ಬಿಎನ್ಎಸ್ ಸೆಕ್ಷನ್ 249(ಎ) ಅಡಿಯಲ್ಲಿ ಕಠಿಣ
Mar 301 min read


ಇಂದಿನ ಚಿನ್ನದ ದರ
ಮಾರ್ಚ್ 30, 2026 ರಂದು ಕರ್ನಾಟಕದಲ್ಲಿ ಚಿನ್ನದ ಬೆಲೆ ಇಳಿಕೆಯಾಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್ ಆಭರಣ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹13,500 ಆಗಿದ್ದರೆ, 10 ಗ್ರಾಂಗೆ ₹1,35,000 ಆಗಿದೆ. 24 ಕ್ಯಾರೆಟ್ ಅಪರಂಜಿ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹14,728 ರಷ್ಟಿದೆ. ಕಳೆದ ದಿನಕ್ಕೆ ಹೋಲಿಸಿದರೆ ಚಿನ್ನದ ದರದಲ್ಲಿ ಸುಮಾರು ₹75 ರಿಂದ ₹81 ರಷ್ಟು ಇಳಿಕೆ ಕಂಡುಬಂದಿದೆ.
Mar 301 min read


ರಾಜ್ಯದ 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್: ಗುಡುಗು ಸಹಿತ ಮಳೆ ಮುನ್ಸೂಚನೆ
ರಾಜ್ಯದ ಹಲವೆಡೆ ಕಳೆದ ಕೆಲವು ದಿನಗಳಿಂದ ಮಳೆ ಮುಂದುವರಿದಿದ್ದು, ಇಂದು ಬೆಂಗಳೂರು ಸೇರಿದಂತೆ 17 ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಮುನ್ನೆಚ್ಚರಿಕೆ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಿಸಿದೆ. ಗಾಳಿ ಹಾಗೂ ಮಿಂಚಿನ ಆರ್ಭಟ ಇರಲಿದ್ದು, ಕರಾವಳಿ ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ಪ್ರಭಾವ ಹೆಚ್ಚಿರಲಿದೆ ಎಂದು ತಿಳಿದುಬಂದಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಕೊಡಗು, ಮೈಸೂರು ಮತ್ತು ಬೆಂಗಳೂರಿನಲ್
Mar 301 min read


ತಮಿಳುನಾಡು ಚುನಾವಣೆ: ಎರಡು ಕ್ಷೇತ್ರಗಳಲ್ಲಿ ನಟ ವಿಜಯ್ ಸ್ಪರ್ಧೆ
2026ರ ಏಪ್ರಿಲ್ 23ರಂದು ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ರಾಜಕೀಯ ಕಳೆಗಟ್ಟಿದೆ. ನಟ ದಳಪತಿ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ' (TVK) ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ವಿಜಯ್ ಅವರು ಪೆರಂಬೂರು ಮತ್ತು ತಿರುಚ್ಚಿ ಪೂರ್ವ ಕ್ಷೇತ್ರಗಳಿಂದ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಇದು ವಿಜಯ್ ಅವರ ಚೊಚ್ಚಲ ಚುನಾವಣಾ ಕಣವಾಗಿದೆ. ಪ್ರಸ್ತುತ ಈ ಎರಡೂ ಕ್ಷೇತ್ರಗಳು ಡಿಎಂಕೆ ವಶದಲ್ಲಿದ್ದು, ಪೆರಂಬೂರಿನಲ್ಲಿ ಆರ್.ಡಿ. ಶೇಖರ್ ಮತ್ತು ತಿರುಚ್ಚಿ ಪೂರ್ವದಲ್ಲಿ ಇನಿಗೋ ಇರುದಯರಾಜ್ ಶಾಸಕರಾಗಿದ್ದಾರೆ. ವಿಜಯ್ ಅವರ ಈ ನಡೆ 2026ರ ಏಪ್ರಿಲ್ 23ರಂದು ನಡೆಯಲಿರುವ ತಮಿ
Mar 291 min read


ಪಾಕಿಸ್ತಾನದಲ್ಲಿನ ಭಯೋತ್ಪಾದನಾ ಜಾಲಗಳ ಕುರಿತು ಸಿಆರ್ಎಸ್ ವರದಿ
ಕಾಂಗ್ರೆಷನಲ್ ರಿಸರ್ಚ್ ಸರ್ವಿಸ್ನ (CRS) ಇತ್ತೀಚಿನ ವರದಿಯು ಪಾಕಿಸ್ತಾನದಲ್ಲಿ ಹಲವಾರು ಉಗ್ರಗಾಮಿ ಗುಂಪುಗಳು ಸಕ್ರಿಯವಾಗಿರುವುದನ್ನು ದೃಢಪಡಿಸಿದೆ. ಸತತ ಮಿಲಿಟರಿ ಕಾರ್ಯಾಚರಣೆಗಳ ಹೊರತಾಗಿಯೂ, ಅಮೆರಿಕ ಮತ್ತು ವಿಶ್ವಸಂಸ್ಥೆಯಿಂದ ಭಯೋತ್ಪಾದಕ ಸಂಘಟನೆಗಳೆಂದು ಗುರುತಿಸಲ್ಪಟ್ಟ ಜಾಲಗಳನ್ನು ಸಂಪೂರ್ಣವಾಗಿ ಹತ್ತಿಕ್ಕಲು ಸಾಧ್ಯವಾಗಿಲ್ಲ ಎಂದು ವರದಿ ತಿಳಿಸಿದೆ. ಪಾಕಿಸ್ತಾನವು ಇಂದಿಗೂ ಇಂತಹ ಸಶಸ್ತ್ರ ಗುಂಪುಗಳ ಪ್ರಮುಖ ಕೇಂದ್ರವಾಗಿದೆ ಎಂದು ವಿಶ್ಲೇಷಿಸಲಾಗಿದೆ. ಈ ಉಗ್ರಗಾಮಿ ಗುಂಪುಗಳನ್ನು ಜಾಗತಿಕ, ಅಫ್ಘಾನಿಸ್ತಾನ-ಕೇಂದ್ರಿತ, ಭಾರತ-ಕಾಶ್ಮೀರ ಆಧಾರಿತ, ದೇಶೀಯ ಮತ್ತು ಪಂಥೀಯ ಎಂದು ಐದು ವಿಧಗ
Mar 291 min read


ರೀಲ್ಸ್ ಅಜ್ಜಿ' ಎಂದೇ ಖ್ಯಾತರಾಗಿದ್ದ ಉತ್ತರ ಕನ್ನಡದ ಲಕ್ಷ್ಮಿ ನಾಯ್ಕ 93ನೇ ವಯಸ್ಸಿನಲ್ಲಿ ನಿಧನ
ಉತ್ತರ ಕನ್ನಡ ಜಿಲ್ಲೆಯಲ್ಲಿ ‘ರೀಲ್ಸ್ ಅಜ್ಜಿ’ ಎಂದೇ ಖ್ಯಾತರಾಗಿದ್ದ ಲಕ್ಷ್ಮಿ ನಾಯ್ಕ (93) ಅವರು ಶನಿವಾರ ವಯೋಸಹಜ ಅನಾರೋಗ್ಯದಿಂದ ನಿಧನರಾದರು. ಯಲ್ಲಾಪುರ ತಾಲೂಕಿನ ಕೆರೆಹೊಸಹಳ್ಳಿಯ ನಿವಾಸಿಯಾಗಿದ್ದ ಲಕ್ಷ್ಮಿ ನಾಯ್ಕ ಅವರು, ತಮ್ಮ ಮೊಮ್ಮಗ ಹಾಗೂ ಡ್ರಾಮಾ ಜೂನಿಯರ್ ಸ್ಪರ್ಧಿ ಸೂರಜ್ ಜೊತೆಗಿನ ರೀಲ್ಸ್ಗಳ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಜನಪ್ರಿಯತೆ ಗಳಿಸಿದ್ದರು. ಅವರ ಸರಳತೆ ಮತ್ತು ಸಹಜ ಅಭಿನಯ ಜನಮನ ಗೆದ್ದಿತ್ತು. ಲಕ್ಷ್ಮಿ ನಾಯ್ಕ ಅವರ ನಿಧನವನ್ನು ಮೊಮ್ಮಗ ಸೂರಜ್ ಅವರು ಇನ್ಸ್ಟಾಗ್ರಾಮ್ ಪೋಸ್ಟ್ ಮೂಲಕ ದೃಢಪಡಿಸಿದ್ದಾರೆ. ಅವರ ಅಗಲಿಕೆಗೆ ಸಾಮಾಜಿಕ ಜಾಲತಾಣಗಳಲ್ಲಿ ಸಂತಾಪ ವ್ಯಕ್ತವ
Mar 291 min read


ಎಸ್ಎಸ್ಎಲ್ಸಿಯಲ್ಲಿ ಹಿಂದಿ ಅಂಕಗಳ ಪರಿಗಣನೆ ರದ್ದು: ಸಿಎಂ ಸಿದ್ದರಾಮಯ್ಯ ಘೋಷಣೆ
ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಈ ಸಾಲಿನಿಂದಲೇ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶದಲ್ಲಿ ತೃತೀಯ ಭಾಷೆ ಹಿಂದಿಯ ಅಂಕಗಳನ್ನು ಪರಿಗಣಿಸದಿರಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿಸಿದರು. ಈ ಬದಲಾವಣೆಯಿಂದಾಗಿ ಒಟ್ಟು ಅಂಕಗಳ ಪ್ರಮಾಣವು 625 ರಿಂದ 525 ಕ್ಕೆ ಇಳಿಕೆಯಾಗಲಿದೆ. ಶಿಕ್ಷಣದಲ್ಲಿ ದ್ವಿಭಾಷಾ ನೀತಿಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಈ ಮಹತ್ವದ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅವರು ಸ್ಪಷ್ಟಪಡಿಸಿದರು. ಖಾಸಗಿ ಶಾಲೆಗಳ ವಿರೋಧದ ಕುರಿತು ಪ್ರತಿಕ್ರಿಯಿಸಿದ ಸಿಎಂ, ಯಾವುದೇ ಹೊಸ ತೀರ್ಮಾನಕ್ಕೆ ಪರ-ವಿರೋಧ ಸಹಜ ಎಂದು ಮಾರ್
Mar 291 min read


ಬೆಂಗಳೂರಿನಲ್ಲಿ ಮೊಳಗಿದ ಭಜನಾಮೃತ: ಶ್ರೀ ರಾಮ ಭಜನಾ ಮಂಡಳಿಯ 4ನೇ ವರ್ಷದ ಮಂಗಳೋತ್ಸವ ವೈಭವದ ಸಂಪನ್ನ
ಕಡಲ ತೀರದ ಯುವಕರು ಉದ್ಯೋಗನಿಮಿತ್ತ ಬೆಂಗಳೂರಿನಲ್ಲಿ ನೆಲೆಸಿ ನಮ್ಮ ಸಂಸ್ಕೃತಿ ಯನ್ನು ಉಳಿಸಬೇಕು ಎಂಬ ನಿಟ್ಟಿನಲ್ಲಿ 10/05/2022 ರ ರಾಮನವಮಿಯ ದಿನ ಆರಂಭಿಸಿದ ಭಜನಾ ತಂಡಕ್ಕೆ ಮೊನ್ನೆಯ 2026ರ ರಾಮ ನವಮಿಯ ದಿನವಾದ ಮಾರ್ಚ್ 26ಕ್ಕೆ ನಾಲ್ಕನೇ ವರ್ಷದ ಸಂಭ್ರಮ. ಆ ಪ್ರಯುಕ್ತ 4ನೇ ವರ್ಷದ ಮಂಗಳೋತ್ಸವವನ್ನು ಶ್ರೀ ಬುಗುಡಿಕುಂಟೆ, ಮುನೇಶ್ವರ ದೇವಸ್ಥಾನ , ರಾಯಸಂದ್ರ - ಚಿಕ್ಕನಾಗಮಂಗಳ ಇಲ್ಲಿ ದೇವಸ್ಥಾನದ ವ್ಯವಸ್ಥಾಪಕ ಸಮಿತಿಯ ಸಹಕಾರ ಮತ್ತು ಶ್ರೀ ರಾಮ ಭಜನಾ ಮಂಡಳಿಯ ಸರ್ವ ಭಜಕರ ಸಹಕಾರ, ಹಾಗೂ ಭಜನಾ ಮಂಡಳಿಗಳ ಹಿತೈಷಿಗಳ ಸಹಕಾರದಿಂದ ಬಹಳ ಸೊಗಸಾಗಿ ಭಜನಾ ಸಂಕೀರ್ತನೆ ಮುಖೇನ ಭಕ್ತಿಯ ಸುಧೆಯ
Mar 281 min read


ಹರೇಕಳ ಹಾಜಬ್ಬ, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಪ್ರದಾನ
ಮಂಗಳೂರು ವಿಶ್ವವಿದ್ಯಾನಿಲಯದ ಆವರಣದ ಮಂಗಳ ಸಭಾಂಗಣದಲ್ಲಿ ಶನಿವಾರ 44ನೇ ವಾರ್ಷಿಕ ಘಟಿಕೋತ್ಸವವು ಅತ್ಯಂತ ವೈಭವದಿಂದ ಜರುಗಿತು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕದ ರಾಜ್ಯಪಾಲ ಹಾಗೂ ಕುಲಾಧಿಪತಿ ಥಾವರ್ ಚಂದ್ ಗೆಹೋಟ್ ಅವರು, ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿ ಮಾಡಿದ ಅಕ್ಷರ ಸಂತ ಪದ್ಮಶ್ರೀ ಹರೇಕಳ ಹಾಜಬ್ಬ ಹಾಗೂ ಕಲಾ ಸೇವೆಯಲ್ಲಿ ತೊಡಗಿರುವ ದೈವ ನರ್ತಕ ರವೀಶ್ ಪಡುಮಲೆ ಅವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಿದರು. ಸಾಧಕರ ಅನುಪಮ ಸೇವೆಯನ್ನು ಪರಿಗಣಿಸಿ ಈ ಗೌರವ ನೀಡಲಾಗಿದ್ದು, ಸಭಿಕರ ಮೆಚ್ಚುಗೆಗೆ ಪಾತ್ರವಾಯಿತು. ಇದೇ ವೇಳೆ ತೆಂಕುತಿಟ್ಟಿನ ಹಿರಿಯ ಯಕ್ಷಗಾನ ಕಲಾವಿದ ಸೂರಿಕು
Mar 281 min read


ನೇಪಾಳದ ಮಾಜಿ ಪ್ರಧಾನಿ ಕೆ.ಪಿ. ಶರ್ಮಾ ಓಲಿ ಬಂಧನ
ನೇಪಾಳದಲ್ಲಿ ಕಳೆದ ವರ್ಷ ನಡೆದ ಭೀಕರ ಹಿಂಸಾಚಾರ ಹಾಗೂ ಆಡಳಿತ ವೈಫಲ್ಯದ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಕೆ.ಪಿ. ಶರ್ಮಾ ಓಲಿ ಅವರನ್ನು ಬಂಧಿಸಲಾಗಿದೆ. 2025ರ ಸೆಪ್ಟೆಂಬರ್ನಲ್ಲಿ ಭ್ರಷ್ಟಾಚಾರ ಮತ್ತು ನಿರುದ್ಯೋಗದ ವಿರುದ್ಧ ಯುವ ಸಮುದಾಯ ನಡೆಸಿದ 'Gen Z' ಪ್ರತಿಭಟನೆಯಲ್ಲಿ 77 ಜನರು ಪ್ರಾಣ ಕಳೆದುಕೊಂಡಿದ್ದರು. ಈ ಸಾವುಗಳಿಗೆ ಮತ್ತು ಹಿಂಸಾಚಾರಕ್ಕೆ ಓಲಿ ಅವರೇ ಕಾರಣ ಎಂಬ ಗಂಭೀರ ಆರೋಪದಡಿಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಬಾಲೆನ್ ಶಾ ಅವರು ನೇಪಾಳದ ನೂತನ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಈ ಮಹತ್ವದ ಬೆಳವಣಿಗೆ ನಡೆದಿದೆ. ದೇಶದ ಕಾನೂನು ಸುವ್ಯವಸ್ಥೆ ಕಾಪಾಡಲು ಮತ್ತು ಜನಸಾ
Mar 281 min read


SSLC ಪರೀಕ್ಷೆ ಅಂಕ ಇಳಿಕೆ: 625ರ ಬದಲಿಗೆ ಇನ್ನು 525 ಅಂಕ?
2026ರ SSLC ಪರೀಕ್ಷೆಯಿಂದ ಅನ್ವಯವಾಗುವಂತೆ ಒಟ್ಟು ಅಂಕಗಳನ್ನು 625ರಿಂದ 525ಕ್ಕೆ ಇಳಿಕೆ ಮಾಡಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ನೂತನ ನಿಯಮದಂತೆ ಅಂಕಪಟ್ಟಿಯಲ್ಲಿ ಇನ್ನು ಮುಂದೆ ಅಂಕಗಳ ಬದಲಿಗೆ 'ಗ್ರೇಡ್' ವ್ಯವಸ್ಥೆಯನ್ನು ಪ್ರಮುಖವಾಗಿ ನಮೂದಿಸಲಾಗುತ್ತದೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈ ಐತಿಹಾಸಿಕ ಬದಲಾವಣೆಯು ವಿದ್ಯಾರ್ಥಿಗಳ ಮೇಲಿನ ಒತ್ತಡ ಕಡಿಮೆ ಮಾಡಲಿದೆ ಎಂದು ಆಶಿಸಿದ್ದಾರೆ. ಈ ಹಿಂದೆ ತೃತೀಯ ಭಾಷೆಯಾದ ಹಿಂದಿ ಸೇರಿದಂತೆ ಒಟ್ಟು 625 ಅಂಕಗಳಿಗೆ ಪರೀಕ್ಷೆ ನಡೆಯುತ್ತಿತ್ತು. ಆದರೆ ಇನ್ನು ಮುಂದೆ ತೃತೀಯ ಭಾಷೆಯ 100 ಅಂಕಗಳನ್ನು ಅಂಕಪಟ್ಟಿಯಲ್ಲಿ ಒಟ್ಟ
Mar 271 min read


ಡಾಲರ್ ಎದುರು ರೂಪಾಯಿ ಭಾರೀ ಕುಸಿತ: 94.15 ತಲುಪಿ ಐತಿಹಾಸಿಕ ಕನಿಷ್ಠ!
ಭಾರತೀಯ ಕರೆನ್ಸಿ ಮಾರುಕಟ್ಟೆಯಲ್ಲಿ ಶುಕ್ರವಾರ ಮಹತ್ವದ ಕುಸಿತ ದಾಖಲಾಗಿದ್ದು, ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯ ₹94.1575 ರಷ್ಟು ಕುಸಿದು ಹೊಸ ಐತಿಹಾಸಿಕ ಕನಿಷ್ಠ ಮಟ್ಟ ತಲುಪಿದೆ. ಈ ಬೆಳವಣಿಗೆ ದೇಶದ ಆರ್ಥಿಕ ಪರಿಸ್ಥಿತಿಯ ಮೇಲೆ ಆತಂಕ ಮೂಡಿಸಿದೆ. ಮಧ್ಯಪ್ರಾಚ್ಯದಲ್ಲಿ ಉಲ್ಬಣಗೊಂಡ ಯುದ್ಧ ಪರಿಸ್ಥಿತಿ ಜಾಗತಿಕ ಮಾರುಕಟ್ಟೆಗಳಲ್ಲಿ ಅಸ್ಥಿರತೆ ಉಂಟುಮಾಡಿದ್ದು, ಹೂಡಿಕೆದಾರರು ಸುರಕ್ಷಿತ ಹೂಡಿಕೆಗಳಾದ ಡಾಲರ್ ಕಡೆ ಮುಖ ಮಾಡಿದ್ದಾರೆ. ಇದರ ಪರಿಣಾಮವಾಗಿ ರೂಪಾಯಿ ಮೌಲ್ಯ ಕುಸಿತ ಕಂಡಿದೆ. ಯುದ್ಧ ಆರಂಭವಾದ ನಂತರ ರೂಪಾಯಿ ಸುಮಾರು 3.5% ರಷ್ಟು ದುರ್ಬಲಗೊಂಡಿದೆ. ಇದೇ ವೇಳೆ, ಅಂತರಾಷ್ಟ್ರೀಯ ಮ
Mar 271 min read
Archive
bottom of page



