top of page
News Articles
Sathyapatha News Plus


ಪುತ್ತೂರು: ದಾಂಪತ್ಯ ಕಲಹಕ್ಕೆ ಬಲಿಯಾದ ಪತ್ನಿ; ಪತಿಯೂ ಆತ್ಮಹತ್ಯೆಗೆ ಯತ್ನ
ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದ ಗೋಳ್ತಿಲದಲ್ಲಿ ದಾಂಪತ್ಯ ಕಲಹವೊಂದು ಕೊಲೆಯಲ್ಲಿ ಅಂತ್ಯವಾದ ಘೋರ ಘಟನೆ ಇಂದು ನಡೆದಿದೆ. ದಂಪತಿಗಳ ನಡುವೆ ನಡೆದ ಮಾತಿನ ಚಕಮಕಿ ವಿಕೋಪಕ್ಕೆ ತಿರುಗಿ, ಆವೇಶಕ್ಕೊಳಗಾದ ಪತಿಯು ಪತ್ನಿಯನ್ನು ಹತ್ಯೆ ಮಾಡಿದ್ದಾನೆ ಎಂದು ವರದಿಯಾಗಿದೆ. ಪತ್ನಿಯನ್ನು ಕೊಲೆ ಮಾಡಿದ ನಂತರ ಪತಿಯೂ ಸಹ ಆತ್ಮಹತ್ಯೆಗೆ ಯತ್ನಿಸಿದ್ದು, ಆತನ ಸ್ಥಿತಿ ಸದ್ಯ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಆತನನ್ನು ತಕ್ಷಣ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳೀಯವಾಗಿ ಈ ಘಟನೆಯು ಭಾರೀ ಆತಂಕ ಮತ್ತು ಆಘಾತವನ್ನು ಸೃಷ್ಟಿಸಿದೆ. ವಿಷಯ ತಿಳಿಯುತ್ತಿದ್ದಂತೆಯೇ ಪುತ್ತೂರು ಗ್ರಾಮಾಂತರ ಠಾ
Mar 201 min read


ತಲೆನೋವಿಗೆ ಮಾತ್ರೆ ಸೇವಿಸಿ ಪ್ರಾಣ ಕಳೆದುಕೊಂಡ 10 ವರ್ಷದ ಬಾಲಕ
ಕಡಬ ತಾಲೂಕಿನ ರಾಮಕುಂಜದ 10 ವರ್ಷದ ಬಾಲಕನೊಬ್ಬ ತಲೆನೋವಿಗಾಗಿ ಮನೆಯಲ್ಲಿದ್ದ ಔಷಧ ಸೇವಿಸಿದ ಬಳಿಕ ಮೃತಪಟ್ಟಿದ್ದಾನೆ. ಸಂಜೀವ ಪೂಜಾರಿ ಅವರ ಪುತ್ರನಿಗೆ ಪದೇಪದೇ ತಲೆನೋವು ಕಾಣಿಸಿಕೊಳ್ಳುತ್ತಿತ್ತು ಎಂದು ತಿಳಿದುಬಂದಿದೆ. ಮಾರ್ಚ್ 18ರಂದು ಸಂಜೆ ತಲೆನೋವಿನ ಬಾಧೆಯಿಂದ ಬಾಲಕನು ಮನೆಯಲ್ಲಿದ್ದ ಔಷಧಿಯನ್ನು ಸೇವಿಸಿದ್ದು, ತಕ್ಷಣವೇ ತೀವ್ರ ಅಸ್ವಸ್ಥಗೊಂಡು ಹೊರಳಾಡತೊಡಗಿದ್ದನು. ತಂದೆ ಕೂಡಲೇ ಆತನನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ಕೊಡಿಸಿದರು. ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿಗೆ ಕರೆದೊಯ್ದರೂ, ಪರೀಕ್ಷಿಸಿದ ವೈದ್ಯರು ಬಾಲಕ ಮೃತಪಟ್ಟಿರುವುದಾಗಿ ಘೋಷಿಸಿದರು. ಈ ಬಗ್ಗ
Mar 201 min read


ಏಪ್ರಿಲ್ 1ರಿಂದ ಅಗತ್ಯ ಔಷಧಗಳ ಬೆಲೆ ಏರಿಕೆ
ಕೇಂದ್ರ ಸರ್ಕಾರವು ಅಗತ್ಯ ಔಷಧಗಳ ವಾರ್ಷಿಕ ಬೆಲೆ ಪರಿಷ್ಕರಣೆಯನ್ನು ಪ್ರಕಟಿಸಿದ್ದು, ಏಪ್ರಿಲ್ 1, 2026ರಿಂದ ಜಾರಿಗೆ ಬರಲಿದೆ. ಈ ಹೊಸ ನಿಯಮದಂತೆ ಸುಮಾರು 1,000ಕ್ಕೂ ಹೆಚ್ಚು ಔಷಧಗಳ ಬೆಲೆಯಲ್ಲಿ ಶೇಕಡ 0.6 ರಷ್ಟು ಏರಿಕೆಯಾಗಲಿದೆ. ಇದರಿಂದಾಗಿ ಸಾಮಾನ್ಯ ಜನರಿಗೆ ಔಷಧಗಳ ವೆಚ್ಚ ಸ್ವಲ್ಪ ಮಟ್ಟಿಗೆ ಹೆಚ್ಚಾಗುವ ಸಾಧ್ಯತೆಯಿದೆ. ಮುಖ್ಯವಾಗಿ ನೋವು ನಿವಾರಕಗಳು, ಆಂಟಿಬಯಾಟಿಕ್ಸ್, ಮಧುಮೇಹ ಮತ್ತು ಕ್ಯಾನ್ಸರ್ ಚಿಕಿತ್ಸೆಗೆ ಬಳಸುವ ಔಷಧಗಳ ದರ ಏರಲಿದೆ. ಸೋಂಕು ನಿವಾರಕಗಳೂ ಈ ಪಟ್ಟಿಯಲ್ಲಿದ್ದು, ಅಗತ್ಯ ವಸ್ತುಗಳ ಬೆಲೆ ಏರಿಕೆಯ ನಡುವೆ ಈಗ ಆರೋಗ್ಯ ರಕ್ಷಣೆಯೂ ದುಬಾರಿಯಾಗಲಿದೆ. ಜನಸಾಮಾನ್ಯರ ಮೇಲೆ ಇದ
Mar 201 min read


ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಳದ ಜಾತ್ರೋತ್ಸವ ಪೂರ್ವಭಾವಿ ಸಭೆ
ಸುಳ್ಯ ಸೀಮೆಯ ಪ್ರಸಿದ್ಧ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವರ ಕಾಲಾವಧಿ ಜಾತ್ರೋತ್ಸವವು ಏಪ್ರಿಲ್ 13 ರಿಂದ 20 ರವರೆಗೆ ಸಂಭ್ರಮದಿಂದ ನಡೆಯಲಿದೆ. ಈ ಹಿನ್ನೆಲೆಯಲ್ಲಿ ದೇವಳದ ಅಕ್ಷಯ ಮಂದಿರದಲ್ಲಿ ಮಾರ್ಚ್ 19 ರಂದು ಜಾತ್ರೋತ್ಸವದ ಪೂರ್ವಭಾವಿ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ಅತ್ಯಂತ ಯಶಸ್ವಿಯಾಗಿ ಜರುಗಿತು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಕೊಳಲುಮೂಲೆ ಅಧ್ಯಕ್ಷತೆ ವಹಿಸಿ ಆಮಂತ್ರಣ ಬಿಡುಗಡೆ ಮಾಡಿದರು. ಜಾತ್ರೋತ್ಸವ ಸಮಿತಿ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ ಸಿದ್ಧತೆಗಳ ಬಗ್ಗೆ ಮಾಹಿತಿ ನೀಡಿದರು. ಏಪ್ರಿಲ್ 1 ರಂದು ಗೊನೆ ಮುಹೂರ್ತ ನಡೆಯಲಿದ್ದು, ಸೀಮೆಯ ಭಕ್ತಾದಿಗಳು
Mar 201 min read


ಕತಾರ್ ಅನಿಲ ತಾಣದ ಮೇಲೆ ದಾಳಿ: ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ತಲ್ಲಣ
ಕತಾರ್ನ ಲಾಸ್ ರಫನ್ LNG ತಾಣದ ಮೇಲೆ ಇರಾನ್ ನಡೆಸಿದ ದಾಳಿಯು ಜಾಗತಿಕ ಅನಿಲ ಮಾರುಕಟ್ಟೆಯಲ್ಲಿ ಭಾರೀ ಆತಂಕ ಸೃಷ್ಟಿಸಿದೆ. ವಿಶ್ವದ ಒಟ್ಟು LNG ಪೂರೈಕೆಯಲ್ಲಿ ಶೇ. 25ರಷ್ಟು ಪಾಲು ಹೊಂದಿರುವ ಈ ಕೇಂದ್ರದ ಮೇಲಿನ ಅಡಚಣೆಯಿಂದಾಗಿ ಅನಿಲ ಕೊರತೆ ಮತ್ತು ಸರಬರಾಜು ವಿಳಂಬವಾಗಲಿದೆ. ಇದರಿಂದ ಅನಿಲ ಬೆಲೆಗಳು ಗಣನೀಯವಾಗಿ ಏರಿಕೆಯಾಗಲಿದ್ದು, ವಿಶೇಷವಾಗಿ ನಾರ್ಡ್ ಸ್ಟ್ರೀಮ್ ಪೈಪ್ಲೈನ್ ನಾಶದ ನಂತರ LNG ಮೇಲೆ ಹೆಚ್ಚು ಅವಲಂಬಿತವಾಗಿರುವ ಜರ್ಮನಿ ಸೇರಿದಂತೆ ಯುರೋಪಿಯನ್ ರಾಷ್ಟ್ರಗಳಿಗೆ ದೊಡ್ಡ ಹೊಡೆತ ಬೀಳಲಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಈ ಬಿಕ್ಕಟ್ಟಿನಿಂದಾಗಿ ಭಾರತ, ಜಪಾನ್ ಮತ್ತು ತುರ್ಕಿಯೆ
Mar 191 min read


ಇಂದೋರ್: ಇವಿ ಕಾರ್ ಸ್ಫೋಟಕ್ಕೆ ಹೊತ್ತಿ ಉರಿದ ಮನೆ, ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ
ಇಂದೋರ್ನ ಬಂಗಾಳಿ ಚೌಕದ ವಸತಿ ಕಟ್ಟಡವೊಂದರಲ್ಲಿ ಬುಧವಾರ ಮುಂಜಾನೆ ಭೀಕರ ದುರಂತ ಸಂಭವಿಸಿದೆ. ಮನೆಯ ಮುಂದೆ ಚಾರ್ಜಿಂಗ್ಗೆ ಇಟ್ಟಿದ್ದ ಇಲೆಕ್ಟ್ರಿಕ್ (ಇವಿ) ಕಾರು ಆಕಸ್ಮಿಕವಾಗಿ ಸ್ಫೋಟಗೊಂಡ ಪರಿಣಾಮ ಇಡೀ ಮನೆಗೆ ಬೆಂಕಿ ವ್ಯಾಪಿಸಿದೆ. ಈ ಅವಘಡದಲ್ಲಿ ಬಾಲಕಿ ಸೇರಿದಂತೆ ಒಂದೇ ಕುಟುಂಬದ ಏಳು ಸದಸ್ಯರು ಪ್ರಾಣ ಕಳೆದುಕೊಂಡಿದ್ದಾರೆ. ಮೃತರನ್ನು ವಿಜಯ್ ಸೇಥಿಯಾ, ಸುಮನ್ ಮತ್ತು ರಾಶಿ ಸೇರಿದಂತೆ ಏಳು ಜನ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿರುವ ಸೌರಭ್ ಮತ್ತು ಆಶಿಶ್ ಸೇರಿದಂತೆ ಮೂವರು ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಅಗ್ನಿಶಾಮಕ ದಳವು ಸ್ಥಳಕ್ಕ
Mar 191 min read


ಪಾಕಿಸ್ತಾನದ ಗಣರಾಜ್ಯೋತ್ಸವ ಆಚರಣೆ ರದ್ದು
ವಿಶ್ವದಾದ್ಯಂತ ಉಂಟಾಗಿರುವ ಇಂಧನ ಮತ್ತು ಅನಿಲ ಬಿಕ್ಕಟ್ಟಿನಿಂದ ಕಂಗೆಟ್ಟಿರುವ ಪಾಕಿಸ್ತಾನ, ಈ ಬಾರಿ ಮಾರ್ಚ್ 23ರಂದು ನಡೆಯಬೇಕಿದ್ದ ತನ್ನ 'ಗಣರಾಜ್ಯೋತ್ಸವ' ಆಚರಣೆಯನ್ನು ರದ್ದುಗೊಳಿಸಿದೆ. ತೀವ್ರ ಹಣಕಾಸಿನ ಮುಗ್ಗಟ್ಟು ಮತ್ತು ಇಂಧನ ಕೊರತೆಯಿಂದಾಗಿ ಸಂಭ್ರಮಾಚರಣೆಗೆ ಬ್ರೇಕ್ ಹಾಕಲಾಗಿದ್ದು, ಸರ್ಕಾರದ ಈ ನಿರ್ಧಾರ ನೆರೆಹೊರೆಯ ರಾಷ್ಟ್ರಗಳಲ್ಲಿ ಚರ್ಚೆಗೆ ಗ್ರಾಸವಾಗಿದೆ. ದೊಡ್ಡ ಮಟ್ಟದ ಕಾರ್ಯಕ್ರಮಗಳ ಬದಲಿಗೆ ಸರಳವಾಗಿ ಆಚರಿಸುವಂತೆ ಸರ್ಕಾರ ಜನರಿಗೆ ಸೂಚಿಸಿದೆ. "ಆಹಾರ ಮತ್ತು ಪಾನೀಯಗಳನ್ನು ಸೇವಿಸಿ ಅದ್ಧೂರಿಯಾಗಿ ಸಂಭ್ರಮಿಸಬೇಡಿ, ಕೇವಲ ಕೇಕ್ ಕತ್ತರಿಸಿ ಮನೆಗೆ ತೆರಳಿ" ಎಂದು ಜನರಲ್ಲಿ ವಿನಂ
Mar 191 min read


ಗೃಹಲಕ್ಷ್ಮಿ ಯೋಜನೆಯ 27ನೇ ಕಂತು ಬಿಡುಗಡೆ
ಯುಗಾದಿ ಮತ್ತು ರಂಜಾನ್ ಹಬ್ಬಗಳ ಸಂಭ್ರಮದಲ್ಲಿರುವ ರಾಜ್ಯದ ಮಹಿಳೆಯರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. ತಾಂತ್ರಿಕ ಕಾರಣಗಳಿಂದ ವಿಳಂಬವಾಗಿದ್ದ ಗೃಹಲಕ್ಷ್ಮಿ ಯೋಜನೆಯ 27ನೇ ಕಂತಿನ ಹಣವನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು ಫಲಾನುಭವಿಗಳ ಖಾತೆಗೆ ನೇರವಾಗಿ ಜಮೆ ಮಾಡಿದೆ. ಹಬ್ಬದ ಖರ್ಚುಗಳ ನಡುವೆ ಈ ಹಣ ಬಂದಿರುವುದು ಬಡ ಮತ್ತು ಮಧ್ಯಮ ವರ್ಗದ ಮಹಿಳೆಯರಿಗೆ ದೊಡ್ಡ ಆಸರೆಯಾಗಿದೆ. ಆದರೆ, ಕಳೆದ ಎರಡು ತಿಂಗಳ ಬಾಕಿ ಹಣದ ಬಗ್ಗೆ ಇಲಾಖೆಯು ಇನ್ನೂ ಅಧಿಕೃತ ಸ್ಪಷ್ಟನೆ ನೀಡಿಲ್ಲ. ಬಾಕಿ ಮೊತ್ತವು ಶೀಘ್ರವೇ ಬಿಡುಗಡೆಯಾಗಲಿದೆ ಎಂಬ ನಿರೀಕ್ಷೆಯಲ್ಲಿ ಮಹಿಳೆಯರಿದ್ದಾರೆ. ಪ್ರಸ್ತುತ ಬಂದಿರುವ ಕಂತಿ
Mar 191 min read


ಹೊಸ ವರ್ಷದ ರಾಶಿ ಭವಿಷ್ಯ
: 🐏 ಮೇಷ ಇಂದು ನಿಮ್ಮಲ್ಲಿ ಉತ್ಸಾಹ ಹೆಚ್ಚು. ಹೊಸ ಕೆಲಸಗಳನ್ನು ಪ್ರಾರಂಭಿಸಲು ಒಳ್ಳೆಯ ದಿನ. ಆದರೆ ಆತುರದ ನಿರ್ಧಾರಗಳನ್ನು ತಪ್ಪಿಸಿ. 🐂 ವೃಷಭ ಆರ್ಥಿಕವಾಗಿ ಲಾಭ ಸಾಧ್ಯ. ಕುಟುಂಬದವರೊಂದಿಗೆ ಸಮಯ ಕಳೆಯಲು ಅವಕಾಶ ಸಿಗಬಹುದು. ಆರೋಗ್ಯದ ಕಡೆ ಸ್ವಲ್ಪ ಗಮನ ಕೊಡಿ. 👬 ಮಿಥುನ ಸಂವಹನದಲ್ಲಿ ಯಶಸ್ಸು. ಕೆಲಸದ ಸ್ಥಳದಲ್ಲಿ ಮೆಚ್ಚುಗೆ ಸಿಗಬಹುದು. ಹೊಸ ಪರಿಚಯಗಳು ಉಪಯುಕ್ತವಾಗುತ್ತವೆ. 🦀 ಕಟಕ ಭಾವನಾತ್ಮಕ ದಿನ. ಕುಟುಂಬದ ವಿಷಯಗಳಲ್ಲಿ ತೊಡಗಿಸಿಕೊಳ್ಳುವ ಸಾಧ್ಯತೆ. ಶಾಂತ ಮನಸ್ಸು ಉಳಿಸಿಕೊಳ್ಳಿ. 🦁 ಸಿಂಹ ನಾಯಕತ್ವ ಗುಣ ತೋರುತ್ತೀರಿ. ಕೆಲಸದಲ್ಲಿ ಸಾಧನೆ ಸಾಧ್ಯ. ಹಣಕಾಸು ವಿಚಾರಗಳಲ್ಲಿ ಎಚ್ಚರಿಕೆ
Mar 191 min read


ರಷ್ಯಾ ತೈಲ ಹೊತ್ತ ಹಡಗು ಚೀನಾ ಬಿಟ್ಟು ಮಂಗಳೂರಿನತ್ತ: ಭಾರತಕ್ಕೆ ಬಂತು 30 ಮಿಲಿಯನ್ ಬ್ಯಾರೆಲ್ ಕಚ್ಚಾ ತೈಲ!
ಚೀನಾದತ್ತ ಸಾಗುತ್ತಿದ್ದ ರಷ್ಯಾದ 'ಅಕ್ವಾ ಟೈಟಾನ್' ತೈಲ ಟ್ಯಾಂಕರ್ ದಿಢೀರ್ ಗಮ್ಯಸ್ಥಾನ ಬದಲಿಸಿ ಮಂಗಳೂರಿನತ್ತ ಬರುತ್ತಿದೆ. ಜನವರಿಯಲ್ಲಿ ಬಾಲ್ಟಿಕ್ ಬಂದರಿನಿಂದ ಹೊರಟಿದ್ದ ಈ ಹಡಗು, ಮಾರ್ಚ್ 21 ರಂದು ನವಮಂಗಳೂರು ಬಂದರು ತಲುಪುವ ನಿರೀಕ್ಷೆಯಿದೆ. ಮಧ್ಯಪ್ರಾಚ್ಯದ ಬಿಕ್ಕಟ್ಟಿನಿಂದಾಗಿ ತೈಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ಈ ವಾರ ಭಾರತವು ರಷ್ಯಾದಿಂದ 30 ಮಿಲಿಯನ್ ಬ್ಯಾರೆಲ್ ಕಚ್ಚಾ ತೈಲ ಖರೀದಿಸಿದೆ. ಇದರಿಂದಾಗಿ ಚೀನಾಕ್ಕೆ ಹೋಗಬೇಕಿದ್ದ ಏಳು ಟ್ಯಾಂಕರ್ಗಳು ಭಾರತದತ್ತ ಮುಖ ಮಾಡಿವೆ. ಈ ಬೆಳವಣಿಗೆಯು ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಭಾರತದ ಪ್ರಾಮುಖ್ಯತೆಯನ್ನು ಎತ್ತಿ ತೋರಿಸಿದೆ. ವೋ
Mar 181 min read


ಚಿನ್ನ, ಬೆಳ್ಳಿ ದರ ಭಾರಿ ಇಳಿಕೆ!
ದೇಶೀಯ ಮತ್ತು MCX ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಗಣನೀಯವಾಗಿ ಇಳಿಕೆಯಾಗಿದೆ. MCX ನಲ್ಲಿ ಗೋಲ್ಡ್ ಫ್ಯೂಚರ್ಸ್ ಬೆಲೆ ₹500 ರಷ್ಟು ಕಡಿಮೆಯಾಗಿದ್ದು, ಹೂಡಿಕೆದಾರರಲ್ಲಿ ಸಂತಸ ಮೂಡಿಸಿದೆ. ಇದು ಆಭರಣ ಪ್ರಿಯರಿಗೆ ಮತ್ತು ದೀರ್ಘಕಾಲೀನ ಹೂಡಿಕೆದಾರರಿಗೆ ಖರೀದಿಸಲು ಉತ್ತಮ ಸಮಯವಾಗಿದೆ. ಬೆಳ್ಳಿ ಬೆಲೆ ಕೂಡ ಇಳಿಕೆ: ಚಿನ್ನದ ಜೊತೆಗೆ ಬೆಳ್ಳಿ ಬೆಲೆಯಲ್ಲೂ ಭಾರಿ ಕುಸಿತ ಕಂಡುಬಂದಿದೆ. MCX ನಲ್ಲಿ ಬೆಳ್ಳಿ ದರ ₹2,300 ರಷ್ಟು ಇಳಿಕೆಯಾಗಿದ್ದು, ಹೂಡಿಕೆದಾರರಿಗೆ ಇದು ಸಿಹಿ ಸುದ್ದಿಯಾಗಿದೆ. ಬೆಂಗಳೂರಿನಲ್ಲಿ ಪ್ರತಿ ಕಿಲೋ ಬೆಳ್ಳಿ ದರ ₹2,650 ಕ್ಕೆ ತಲುಪಿದೆ.
Mar 181 min read


ಕುಕ್ಕೆ ಸುಬ್ರಹ್ಮಣ್ಯ ಪ್ರಾಧಿಕಾರ ರಚನೆಗೆ ವಿರೋಧ: ಜನಾಂದೋಲನಕ್ಕೆ ಸಿದ್ಧತೆ
ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಪ್ರಾಧಿಕಾರ ರಚಿಸುವ ಸರ್ಕಾರದ ನಿರ್ಧಾರಕ್ಕೆ ಸ್ಥಳೀಯರಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು, ಹೋರಾಟ ತೀವ್ರಗೊಂಡಿದೆ. ಮಾರ್ಚ್ 17ರಂದು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಶಿವರಾಮ ಮತ್ತು ಇತರ ಪ್ರಮುಖರು ಭಾಗವಹಿಸಿ, ಈ ನಿರ್ಧಾರವು ದೇವಾಲಯದ ಸ್ವಾಯತ್ತತೆ ಹಾಗೂ ಸ್ಥಳೀಯರ ಹಿತಾಸಕ್ತಿಗೆ ಮಾರಕ ಎಂದು ಆಕ್ರೋಶ ವ್ಯಕ್ತಪಡಿಸಿದರು. ಪ್ರಾಧಿಕಾರ ರಚನೆಯ ವಿರುದ್ಧ ಸಂಘಟಿತ ಹೋರಾಟ ರೂಪಿಸಲು ನಿರ್ಧರಿಸಲಾಗಿದ್ದು, ಮಾರ್ಚ್ 19ರಂದು ಬೃಹತ್ ಸಾರ್ವಜನಿಕ ಸಭೆಯನ್ನು ಆಯೋಜಿಸಲಾಗಿದೆ. ಈ ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾ
Mar 181 min read


ಬಿಸಿಯೂಟ ಯೋಜನೆಗೆ ಅಡುಗೆ ಅನಿಲ ಸಂಕಷ್ಟ: ತತ್ತರಿಸಿದ ಸರ್ಕಾರಿ ಶಾಲೆಗಳು
ಮಧ್ಯಪ್ರಾಚ್ಯ ಸಂಘರ್ಷದ ಪರಿಣಾಮವಾಗಿ ಇಂಧನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ಇದೀಗ ಜಿಲ್ಲೆಯ 1961 ಸರ್ಕಾರಿ ಶಾಲೆಗಳ ಬಿಸಿಯೂಟ ಯೋಜನೆಗೆ ಸಿಲಿಂಡರ್ ಕೊರತೆ ಎದುರಾಗಿದೆ. ಸುಮಾರು 3 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟ ಒದಗಿಸುವುದು ಶಿಕ್ಷಕರಿಗೆ ದೊಡ್ಡ ಸವಾಲಾಗಿದೆ. ಜಿಲ್ಲೆಗೆ ತಿಂಗಳಿಗೆ ಸುಮಾರು 5900 ಸಿಲಿಂಡರ್ಗಳ ಅವಶ್ಯಕತೆಯಿದ್ದು, ಕಳೆದ ನಾಲ್ಕು ದಿನಗಳಿಂದ ಅನೇಕ ಶಾಲೆಗಳಿಗೆ ಪೂರೈಕೆಯಾಗದ ಕಾರಣ ಬಿಸಿಯೂಟದ ವ್ಯವಸ್ಥೆ ಹದಗೆಟ್ಟಿದೆ. ಏಜೆನ್ಸಿಗಳು ಕರೆ ಸ್ವೀಕರಿಸದ ಕಾರಣ ಶಿಕ್ಷಕರು ಅಸಹಾಯಕರಾಗಿದ್ದಾರೆ. ಗ್ಯಾಸ್ ಏಜೆನ್ಸಿಗಳಿಗೆ ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ
Mar 181 min read


ಮೂಡುಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಸಸ್ಪೆಂಡ್ : ಲೈಂಗಿಕ ಕಿರುಕುಳ ಆರೋಪದ ಹಿನ್ನೆಲೆ ಕ್ರಮ
ಮೂಡುಬಿದಿರೆ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ. ವಿರುದ್ಧ ಕೇಳಿಬಂದ ಲೈಂಗಿಕ ಕಿರುಕುಳ ಮತ್ತು ಭ್ರಷ್ಟಾಚಾರದ ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ, ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ಆದೇಶಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಆಡಿಯೋ ಮತ್ತು ವಿಡಿಯೋ ತುಣುಕುಗಳು ಇಲಾಖೆಯ ಘನತೆಗೆ ಧಕ್ಕೆ ತಂದಿವೆ ಎಂದು ಪ್ರಾಥಮಿಕ ತನಿಖೆಯಲ್ಲಿ ಗುರುತಿಸಲಾಗಿದೆ. ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿರುವುದು ಮೇಲ್ನೋಟಕ್ಕೆ ದೃಢಪಟ್ಟ ಹಿನ್ನೆಲೆಯಲ್ಲಿ ಈ ಶಿಸ್ತು ಕ್ರಮ ಕೈಗೊಳ್ಳಲಾಗಿದೆ. ಎಸಿಪಿ ಮಟ್ಟ
Mar 181 min read


ರಾಜ್ಯಾದ್ಯಂತ ಇಂದಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭ
ರಾಜ್ಯಾದ್ಯಂತ ಇಂದಿನಿಂದ ಎಸ್ಎಸ್ಎಲ್ಸಿ ಪರೀಕ್ಷೆಗಳು ಆರಂಭವಾಗುತ್ತಿದ್ದು, ಒಟ್ಟು 2,871 ಕೇಂದ್ರಗಳಲ್ಲಿ 9,02,899 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ದಕ್ಷಿಣ ಕನ್ನಡದಲ್ಲಿ 29,397 ಹಾಗೂ ಉಡುಪಿಯಲ್ಲಿ 14,151 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಪರೀಕ್ಷಾ ಮಂಡಳಿಯು ಸುಸೂತ್ರ ನಿರ್ವಹಣೆಗೆ ಎಲ್ಲಾ ರೀತಿಯ ಅಗತ್ಯ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ. ಪರೀಕ್ಷಾ ಅಕ್ರಮಗಳನ್ನು ತಡೆಯಲು ಎಲ್ಲಾ ಕೇಂದ್ರಗಳಲ್ಲಿ ಸಿಸಿಟಿವಿ ಕಣ್ಣಾವಲು ಅಳವಡಿಸಲಾಗಿದ್ದು, ಹೆಚ್ಚಿನ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ವಿದ್ಯಾರ್ಥಿಗಳು ಯಾವುದೇ ಆತಂಕವಿಲ್ಲದೆ ಪರೀಕ್ಷೆ ಎದುರಿಸಲು ಪೂರಕ ವ
Mar 181 min read


ಇಸ್ರೇಲ್ ದಾಳಿಗೆ ಇರಾನ್ ನಾಯಕ ಅಲಿ ಲಾರಿಜಾನಿ ಬಲಿ
ಇಸ್ರೇಲ್ ಮಂಗಳವಾರ ಮುಂಜಾನೆ ನಡೆಸಿದ ಭೀಕರ ವೈಮಾನಿಕ ದಾಳಿಯಲ್ಲಿ ಇರಾನ್ನ ಹಿರಿಯ ಭದ್ರತಾ ನಾಯಕ ಅಲಿ ಲಾರಿಜಾನಿ ಮೃತಪಟ್ಟಿದ್ದಾರೆ ಎಂದು ಇರಾನ್ ಸರ್ಕಾರ ಅಧಿಕೃತವಾಗಿ ದೃಢಪಡಿಸಿದೆ. ಇಸ್ರೇಲ್ ಈ ಹತ್ಯೆಯ ಜವಾಬ್ದಾರಿಯನ್ನು ಹೊತ್ತುಕೊಂಡ ಬೆನ್ನಲ್ಲೇ, ಇರಾನ್ನ ರಾಷ್ಟ್ರೀಯ ಭದ್ರತಾ ಮಂಡಳಿಯು ಲಾರಿಜಾನಿ ಅವರ ಸಾವಿನ ಸುದ್ದಿಯನ್ನು ಪ್ರಕಟಿಸಿ ಅವರಿಗೆ ಗೌರವ ಸಲ್ಲಿಸಿದೆ. ದೇಶದ ಅಭಿವೃದ್ಧಿ ಮತ್ತು ಇಸ್ಲಾಮಿಕ್ ಕ್ರಾಂತಿಗಾಗಿ ಲಾರಿಜಾನಿ ಸಲ್ಲಿಸಿದ ಸೇವೆ ಅಪಾರವೆಂದು ಬಣ್ಣಿಸಿರುವ ಇರಾನ್ ಸರ್ಕಾರ, ಅವರನ್ನು 'ಹುತಾತ್ಮ' ಎಂದು ಕರೆದಿದೆ. ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಲಾರ
Mar 181 min read


ಕಾಬೂಲ್ ಆಸ್ಪತ್ರೆ ಮೇಲೆ ಪಾಕ್ ವಾಯುಪಡೆ ಭೀಕರ ದಾಳಿ: 400 ಮಂದಿ ಸಾವು?
ಅಫ್ಘಾನಿಸ್ತಾನದ ಕಾಬೂಲ್ನಲ್ಲಿರುವ ಪುನರ್ವಸತಿ ಆಸ್ಪತ್ರೆಯ ಮೇಲೆ ಪಾಕಿಸ್ತಾನ ವಾಯುಪಡೆ ದಾಳಿ ನಡೆಸಿದೆ. ನೂರಾರು ಜನರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಆಸ್ಪತ್ರೆಯ ಬಹುಭಾಗ ಭಸ್ಮಗೊಂಡಿದ್ದು, ರಕ್ಷಣಾ ಕಾರ್ಯ ಮುಂದುವರೆದಿದೆ. ಪಾಕಿಸ್ತಾನ ವಾಯುಪಡೆ ತನ್ನ ಜೆಎಫ್-17 ಮತ್ತು ಎಫ್-16 ಯುದ್ಧ ವಿಮಾನಗಳನ್ನು ಬಳಸಿ ಕಾಬೂಲ್ನ ಐದು ಸ್ಥಳಗಳ ಮೇಲೆ ದಾಳಿ ಮಾಡಿದೆ. ಅಫ್ಘಾನಿಸ್ತಾನದ ಆರೋಪಗಳನ್ನು ಪಾಕಿಸ್ತಾನ ತಳ್ಳಿ ಹಾಕಿದೆ. ಈ ಬಗ್ಗೆ ಯಾವುದೇ ಆಸ್ಪತ್ರೆಯನ್ನು ಗುರಿಯಾಗಿಸಿಕೊಂಡಿಲ್ಲ ಎಂದು ಹೇಳಿಕೊಂಡಿದೆ.
Mar 171 min read


ಯುದ್ಧ ಭೀತಿ ನಡುವೆ ನೆಮ್ಮದಿ ಸುದ್ದಿ: ಅಡುಗೆ ಅನಿಲ ಹೊತ್ತ 'ಶಿವಾಲಿಕ್' ಹಡಗು ಸುರಕ್ಷಿತವಾಗಿ ಭಾರತಕ್ಕೆ ಆಗಮನ!
ಮಧ್ಯಪ್ರಾಚ್ಯದ ಯುದ್ಧ ಭೀತಿಯ ನಡುವೆಯೂ ಅಡುಗೆ ಅನಿಲ ಪೂರೈಕೆಯ ಆತಂಕ ದೂರವಾಗಿದೆ. ಎಲ್ಪಿಜಿ ಹೊತ್ತ ‘ಶಿವಾಲಿಕ್’ ಹಡಗು ಹೊರ್ಮುಜ್ ಜಲಸಂಧಿಯನ್ನು ಸುರಕ್ಷಿತವಾಗಿ ದಾಟಿ ಗುಜರಾತ್ನ ಮುಂದ್ರಾ ಬಂದರನ್ನು ತಲುಪಿದೆ. ಇದು ದೇಶದ ಇಂಧನ ಭದ್ರತೆಗೆ ನೆಮ್ಮದಿ ತಂದಿದೆ. ಇಂಡಿಯನ್ ಆಯಿಲ್ ಕಾರ್ಪೊರೇಷನ್ (IOCL) ಉದ್ದೇಶಿತ 46 ಸಾವಿರ ಮೆಟ್ರಿಕ್ ಟನ್ ಅನಿಲದಲ್ಲಿ, ಮೊದಲ ಹಂತವಾಗಿ ಮುಂದ್ರಾ ಬಂದರಿನಲ್ಲಿ 20 ಸಾವಿರ ಟನ್ ಇಳಿಸಲಾಗುವುದು. ಅಲ್ಲಿನ ಪ್ರಕ್ರಿಯೆ ಮುಗಿದ ನಂತರ ಹಡಗು ಮಂಗಳೂರಿನತ್ತ ಪಯಣ ಬೆಳೆಸಲಿದೆ. ಉಳಿದ 26 ಸಾವಿರ ಟನ್ ಎಲ್ಪಿಜಿಯೊಂದಿಗೆ ಶಿವಾಲಿಕ್ ಹಡಗು ಮೂರ್ನಾಲ್ಕು ದಿನಗಳಲ್ಲಿ ನವಮಂ
Mar 171 min read


ಖಾಕಿ ಪಡೆಗೆ ಕಪ್ಪುಚುಕ್ಕೆ: ಮೂಡುಬಿದಿರೆ ಇನ್ಸ್ಪೆಕ್ಟರ್ನಿಂದ ಮಹಿಳೆಯರಿಗೆ ಲೈಂಗಿಕ ಕಿರುಕುಳ, ಹಣಕ್ಕಾಗಿ ಸುಲಿಗೆ!
ಖಾಕಿ ಪಡೆಗೆ ಮತ್ತೊಂದು ಕಪ್ಪು ಚುಕ್ಕೆ ಬಂದಿದೆ. ಮೂಡುಬಿದಿರೆ ಠಾಣೆಯ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ. ವಿರುದ್ಧ ಸಾಲು ಸಾಲು ಲೈಂಗಿಕ ಕಿರುಕುಳ ಹಾಗೂ ಸುಲಿಗೆಯ ಗಂಭೀರ ಆರೋಪಗಳು ಕೇಳಿಬಂದಿವೆ. ಗಂಡನನ್ನು ಬಂಧಿಸಿದ ನೆಪದಲ್ಲಿ ಮಹಿಳೆಯರಿಗೆ ಲೈಂಗಿಕ ಟಾರ್ಚರ್ ನೀಡುತ್ತಿದ್ದ ಎನ್ನಲಾಗಿದೆ. ಪೋಸ್ಟಿಂಗ್ಗಾಗಿ ತಾವು 50 ಲಕ್ಷ ರೂ. ಲಂಚ ನೀಡಿರುವುದಾಗಿ ಹೇಳಿಕೊಳ್ಳುತ್ತಿದ್ದ ಇನ್ಸ್ಪೆಕ್ಟರ್, ಸಾರ್ವಜನಿಕರಿಂದ ಹಣಕ್ಕಾಗಿ ಸುಲಿಗೆ ಮಾಡುತ್ತಿದ್ದರು. ಹಣ ನೀಡದಿದ್ದರೆ ರೌಡಿಶೀಟ್ ತೆರೆಯುವ ಬೆದರಿಕೆ ಹಾಕುತ್ತಿದ್ದರು ಎಂಬ ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ಸ್ಥಳೀಯ ಪೊಲೀಸ್ ಅಧಿಕಾರಿಗಳು ಕ್ರಮ ಕೈಗ
Mar 171 min read


ರಾಜ್ಯದ ಹಲವೆಡೆ ಮುಂದಿನ ಮೂರ್ನಾಲ್ಕು ದಿನ ಭಾರಿ ಮಳೆ ಮುನ್ಸೂಚನೆ
ಕರ್ನಾಟಕದ ವಿವಿಧ ಭಾಗಗಳಲ್ಲಿ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಮಾರ್ಚ್ 16ರಿಂದಲೇ ಮಳೆ ಆರಂಭವಾಗಲಿದ್ದು, ಮಾ. 21ರಂದು ದಕ್ಷಿಣ ಕನ್ನಡ, ಉಡುಪಿ, ಮೈಸೂರು, ಚಿಕ್ಕಮಗಳೂರು ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ವರ್ಷಧಾರೆಯಾಗಲಿದ್ದು, ಕೊಪ್ಪಳ, ವಿಜಯಪುರ ಹಾಗೂ ದಾವಣಗೆರೆ ಜಿಲ್ಲೆಗಳಲ್ಲೂ ಮಳೆಯ ಮುನ್ಸೂಚನೆ ನೀಡಲಾಗಿದೆ. ಮಾರ್ಚ್ 18ರಿಂದ ಬೆಳಗಾವಿ, ಧಾರವಾಡ ಮತ್ತು ಗದಗ ಜಿಲ್ಲೆಗಳಲ್ಲಿ ಮಳೆಯ ನಿರೀಕ್ಷೆಯಿದ್ದು, ಮಾ. 19ರಿಂದ ಚಿತ್ರದುರ್ಗದಲ್ಲ
Mar 161 min read
Archive
bottom of page



