top of page
News Articles
Sathyapatha News Plus


ನೀಟ್ ಮರು ಪರೀಕ್ಷೆ ಹಿನ್ನೆಲೆ: ದೇಶದಲ್ಲಿ ಟೆಲಿಗ್ರಾಮ್ ಸೇವೆ ತಾತ್ಕಾಲಿಕ ಸ್ಥಗಿತ?
ನೀಟ್-ಯುಜಿ 2026 ಮರು ಪರೀಕ್ಷೆಯನ್ನು ಅತ್ಯಂತ ಪಾರದರ್ಶಕ ಹಾಗೂ ಸುರಕ್ಷಿತವಾಗಿ ನಡೆಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ಪ್ರಶ್ನೆಪತ್ರಿಕೆ ಸೋರಿಕೆ, ಸುಳ್ಳು ವದಂತಿ ಹಾಗೂ ಆನ್ಲೈನ್ ವಂಚನೆಗಳನ್ನು ತಡೆಗಟ್ಟಲು ದೇಶಾದ್ಯಂತ ಜನಪ್ರಿಯ ಮೆಸೇಜಿಂಗ್ ಆಪ್ ಆದ ಟೆಲಿಗ್ರಾಮ್ ಅನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲು ನಿರ್ಧರಿಸಲಾಗಿದೆ ಎಂದು ವರದಿಯಾಗಿದೆ. ಮಾಹಿತಿ ತಂತ್ರಜ್ಞಾನ ಸಚಿವಾಲಯದ ನಿರ್ದೇಶನದಂತೆ ಜೂನ್ 21ರ ಪರೀಕ್ಷೆ ಹಿನ್ನೆಲೆಯಲ್ಲಿ ಜೂನ್ 22ರವರೆಗೆ ಈ ನಿರ್ಬಂಧ ಇರಲಿದೆ. ಮುಖ್ಯವಾಗಿ ಟೆಲಿಗ್ರಾಮ್ನ 'ಮೆಸೇಜ್ ಎಡಿಟಿಂಗ್' ವೈಶಿಷ್ಟ್ಯವನ್ನು ದುರುಪಯೋಗಪಡಿಸಿಕೊಂಡ
Jun 161 min read


ಜೈಪುರದಲ್ಲಿ ಪ್ರತಿಭಟನೆ ವೇಳೆ ಅಭಿಜಿತ್ ದಿಪ್ಕೆ ಮೇಲೆ ಹಲ್ಲೆ
ರಾಜಸ್ಥಾನದ ಜೈಪುರದ ಶಹೀದ್ ಸ್ಮಾರಕದ ಬಳಿ ಸೋಮವಾರ ನಡೆದ ಶಾಂತಿಯುತ ಪ್ರತಿಭಟನೆ ವೇಳೆ ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್ ದಿಪ್ಕೆ ಅವರ ಮೇಲೆ ಕೆಲ ಕಿಡಿಗೇಡಿಗಳು ದೈಹಿಕ ಹಲ್ಲೆ ನಡೆಸಿದ್ದಾರೆ. ಬೆಂಬಲಿಗರ ಹೆಗಲ ಮೇಲೆ ನಿಂತು ಮಾತನಾಡಲು ತೆರಳುತ್ತಿದ್ದಾಗ ಇಬ್ಬರು ವ್ಯಕ್ತಿಗಳು ಅವರ ಸ್ಕಾರ್ಫ್ ಎಳೆದು ಕಪಾಳಮೋಕ್ಷ ಮಾಡಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಿಬಿಎಸ್ಇ ಅಕ್ರಮಗಳನ್ನು ಖಂಡಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಅಭಿಜಿತ್ ಈ ಪ್ರತಿಭಟನೆ ಹಮ್ಮಿಕೊಂಡಿದ್ದರು. ಇದು ಯುವಕ
Jun 161 min read


ಅಮೆರಿಕ-ಇರಾನ್ ನಡುವೆ ಶಾಂತಿ ಒಪ್ಪಂದ: 108 ದಿನಗಳ ಸಂಘರ್ಷಕ್ಕೆ ಮುಕ್ತಿ
ಜಾಗತಿಕ ಆರ್ಥಿಕತೆ ಮತ್ತು ತೈಲ ಮಾರುಕಟ್ಟೆಯಲ್ಲಿ ತೀವ್ರ ಆತಂಕ ಮೂಡಿಸಿದ್ದ ಅಮೆರಿಕ ಹಾಗೂ ಇರಾನ್ ನಡುವಿನ 108 ದಿನಗಳ ಸುದೀರ್ಘ ಸಂಘರ್ಷ ಕೊನೆಗೂ ಅಂತ್ಯಗೊಂಡಿದೆ. ಉಭಯ ರಾಷ್ಟ್ರಗಳು ಒಟ್ಟು 14 ಪ್ರಮುಖ ಅಂಶಗಳ ಆಧಾರದ ಮೇಲೆ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ ಹಾಕಿವೆ. ಜೂನ್ 19ರಂದು ಸ್ವಿಟ್ಚರ್ಲೆಂಡ್ನಲ್ಲಿ ಈ ಒಪ್ಪಂದದ ಅಧಿಕೃತ ಸಹಿ ಸಮಾರಂಭ ನಡೆಯಲಿದ್ದು, ಜಗತ್ತಿಗೆ ತೈಲ ಬಿಕ್ಕಟ್ಟಿನ ಭೀತಿಯಿಂದ ಮುಕ್ತಿ ಸಿಕ್ಕಂತಾಗಿದೆ. ಈ ಮಹತ್ವದ ಬೆಳವಣಿಗೆಯನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ 'ಟ್ರೂತ್ ಸೋಷಿಯಲ್' ಖಾತೆಯಲ್ಲಿ ಅಧಿಕೃತವಾಗಿ ಘೋಷಿಸಿದ್ದಾರೆ. ಇರಾನ್ ಜೊತೆಗಿನ ಒಪ್ಪಂದ ಪೂ
Jun 151 min read


ಗ್ಯಾರಂಟಿ ಯೋಜನೆಗಳು ಎಂದಿನಂತೆ ಮುಂದುವರಿಕೆ: ವದಂತಿ ನಂಬದಂತೆ ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟನೆ
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳು ಎಂದಿನಂತೆ ಮುಂದುವರಿಯಲಿವೆ, ಸಾರ್ವಜನಿಕರು ಹಾಗೂ ಫಲಾನುಭವಿಗಳು ಯಾವುದೇ ಆತಂಕ ಪಡಬೇಕಾದ ಅಗತ್ಯವಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಕುರಿತು ಚರ್ಚೆಗಳು ಆರಂಭವಾದ ಬೆನ್ನಲ್ಲೇ, "ಗ್ಯಾರಂಟಿ ಇದೆ, ಗ್ಯಾರಂಟಿ ಇರುತ್ತದೆ. ಯಾವುದೇ ಕಾರಣಕ್ಕೂ ಯೋಜನೆಗಳನ್ನು ನಿಲ್ಲಿಸುವುದಿಲ್ಲ" ಎಂದು ಅವರು ಸಾಮಾಜಿಕ ಜಾಲತಾಣದ ಮೂಲಕ ಭರವಸೆ ನೀಡಿದ್ದಾರೆ. ಕಾಂಗ್ರೆಸ್ ಸರ್ಕಾರದ ಜನಪರ ಯೋಜನೆಗಳಾದ ‘ಗೃಹಲಕ್ಷ್ಮಿ’ ಮತ್ತು ‘ಗೃಹಜ್ಯೋತಿ’ಯನ್ನು ಸ್ಥಗಿತಗೊಳಿಸಲಾಗುತ್ತಿದೆ ಎಂಬ ವಿರೋಧ ಪಕ್ಷ
Jun 141 min read


ಕೊಲ್ಲೂರು ಮೂಕಾಂಬಿಕೆಗೆ ತಮಿಳುನಾಡು ರಾಜಕಾರಣಿಗಳ ವಿಶೇಷ ನಂಟು
ಕೊಲ್ಲೂರು ಮೂಕಾಂಬಿಕೆ ದೇವಿಗೂ ತಮಿಳುನಾಡಿನ ರಾಜಕಾರಣಿಗಳಿಗೂ ವಿಶೇಷ ನಂಟಿದೆ. ಇತ್ತೀಚೆಗೆ ನಟ, ರಾಜಕಾರಣಿ ವಿಜಯ್ ಅವರು ಕೊಲ್ಲೂರಿಗೆ ಭೇಟಿ ನೀಡಿ, ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಸುಮಾರು 500 ಗ್ರಾಂ ತೂಕದ ಬೆಳ್ಳಿಯ ಖಡ್ಗ ಹಾಗೂ ರೇಷ್ಮೆ ಸೀರೆಯನ್ನು ಕಾಣಿಕೆಯಾಗಿ ಸಮರ್ಪಿಸಿದ್ದಾರೆ. ವಿಜಯ್ಗಿಂತ ಮುನ್ನ ತಮಿಳುನಾಡಿನ ಮಾಜಿ ಮುಖ್ಯಮಂತ್ರಿಗಳಾದ ಎಂ. ಜಿ. ರಾಮಚಂದ್ರನ್, ಜಾನಕಿ ಮತ್ತು ಜಯಲಲಿತಾ ಅವರು ದೇವಿಯ ದರ್ಶನ ಪಡೆದಿದ್ದರು. 1980ರಲ್ಲಿ ಎಂಜಿಆರ್ ಅವರು ದೇವಿಗೆ 1 ಕೆಜಿ ತೂಕದ ಚಿನ್ನದ ಖಡ್ಗವನ್ನು ಅರ್ಪಿಸಿದ್ದು, ಅದನ್ನು ಇಂದಿಗೂ ದೇವಿಯ ಸೇವೆಯಲ್ಲಿ ಬಳಸಲಾಗುತ್ತದೆ. ಅದೇ ರೀತಿ 2004ರಲ
Jun 141 min read


ಅಪ್ರಾಪ್ತ ಫುಟ್ಬಾಲ್ ಆಟಗಾರ್ತಿ ಮೇಲೆ ಅತ್ಯಾಚಾರ: ಕೋಚ್ ಬಂಧನ
ಫುಟ್ಬಾಲ್ನಲ್ಲಿ ದೊಡ್ಡ ಅವಕಾಶಗಳ ಭರವಸೆ ನೀಡಿ ಅಪ್ರಾಪ್ತ ಆಟಗಾರ್ತಿ ಮೇಲೆ ಮೂರು ವರ್ಷಗಳ ಕಾಲ ಅತ್ಯಾಚಾರ ಎಸಗಿದ ಹಾಗೂ ವಿಡಿಯೋ ಮಾಡಿ ಬ್ಲ್ಯಾಕ್ಮೇಲ್ ಮಾಡಿದ ಆರೋಪದ ಮೇಲೆ ಫುಟ್ಬಾಲ್ ತರಬೇತುದಾರನನ್ನು ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಖಾಸಗಿ ಫುಟ್ಬಾಲ್ ತರಬೇತುದಾರ ಅಭಿಜಿತ್ ಮೆಂಡಲ್ (36) ಬಂಧಿತ ಆರೋಪಿಯಾಗಿದ್ದಾನೆ. ಈತನ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. 2023 ರಲ್ಲಿ ವಸಾಯಿಯಲ್ಲಿರುವ ತರಬೇತಿ ಅಕಾಡೆಮಿಗೆ ಸೇರಿದ್ದ 17 ವರ್ಷದ ಬಾಲಕಿಯ ನಂಬಿಕೆ ಗಳಿಸಿ ಈ ಕೃತ್ಯ ಎಸಗಿ
Jun 141 min read


ಸರ್ಕಾರಿ ಕಾಲೇಜುಗಳಲ್ಲಿ 50 ಎಐ ಲ್ಯಾಬ್ ಸ್ಥಾಪನೆಗೆ ಸರ್ಕಾರದ ಒಪ್ಪಿಗೆ
ಗ್ರಾಮೀಣ ಹಾಗೂ ಹಂತ-2 ಮತ್ತು ಹಂತ-3 ನಗರಗಳ ವಿದ್ಯಾರ್ಥಿಗಳಿಗೆ ಉದಯೋನ್ಮುಖ ತಂತ್ರಜ್ಞಾನಗಳ ಪರಿಚಯ ಮಾಡಿಸಲು ಮತ್ತು ಅವರ ಉದ್ಯೋಗಾವಕಾಶ ಹೆಚ್ಚಿಸಲು ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ರಾಜ್ಯದ ವಿವಿಧ ಸರ್ಕಾರಿ ಕಾಲೇಜುಗಳಲ್ಲಿ ಒಟ್ಟು 50 ಕೃತಕ ಬುದ್ಧಿಮತ್ತೆ (AI) ಪ್ರಯೋಗಾಲಯಗಳ ಸ್ಥಾಪನೆಗೆ ಅಧಿಕೃತ ಅನುಮೋದನೆ ನೀಡಲಾಗಿದೆ. ಈ ಅತ್ಯಾಧುನಿಕ ಪ್ರಯೋಗಾಲಯಗಳು ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಕಲಿಕೆ, ಹೊಸ ಪ್ರಯೋಗಗಳು ಮತ್ತು ಕೌಶಲ್ಯಾಭಿವೃದ್ಧಿಗೆ ಭದ್ರವಾದ ಮೂಲಸೌಕರ್ಯ ಒದಗಿಸಲಿವೆ. 2026-27ನೇ ಸಾಲಿನ ಬಜೆಟ್ನಲ್ಲಿ ಘೋಷಿತವಾದ ಈ ಯೋಜನೆಯನ್ನು ಕೇಂದ್ರ ಸರ್ಕಾರದ ‘ಎಐ ಮಿಷನ್’ ಸ
Jun 141 min read


ದಕ್ಷಿಣ ಕನ್ನಡದಲ್ಲಿ ಲಕ್ಕಿ ಸ್ಕೀಮ್ ದಂಧೆ: ಕೋಟ್ಯಂತರ ರೂ. ವಂಚಿಸಿ ಕಚೇರಿ ಬಂದ್!
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದ ಒಂದೂವರೆ ವರ್ಷದಿಂದ 'ಲಕ್ಕಿ ಸ್ಕೀಮ್' ಹೆಸರಿನಲ್ಲಿ ನಡೆಯುತ್ತಿದ್ದ ಬೃಹತ್ ವಂಚನೆ ಜಾಲ ಈಗ ಬಯಲಿಗೆ ಬಂದಿದೆ. ಮಂಗಳೂರು, ಪುತ್ತೂರು, ಬೆಳ್ತಂಗಡಿ ಸೇರಿದಂತೆ ಹಲವೆಡೆ ತಿಂಗಳಿಗೆ 1,000 ರೂ. ಕಂತಿನಂತೆ ಕಾರು, ಬೈಕ್ ಹಾಗೂ ಚಿನ್ನದ ಆಮಿಷವೊಡ್ಡಿ ಸಾವಿರಾರು ಗ್ರಾಹಕರಿಂದ ಕೋಟ್ಯಂತರ ರೂಪಾಯಿ ವಸೂಲಿ ಮಾಡಲಾಗಿತ್ತು. ಸದ್ಯ ಈ ಸಂಸ್ಥೆಗಳು ಕಚೇರಿಗಳನ್ನು ಮುಚ್ಚಿ ಜನರಿಗೆ ಪಂಗನಾಮ ಹಾಕಲು ಸಜ್ಜಾಗಿವೆ. ತುಳು ಚಿತ್ರರಂಗದ ಸೆಲೆಬ್ರಿಟಿಗಳನ್ನು ಬಳಸಿ ಸಾಮಾಜಿಕ ಜಾಲತಾಣಗಳಲ್ಲಿ ಭರ್ಜರಿ ಪ್ರಚಾರ ನೀಡಲಾಗಿತ್ತು. ಆದರೆ ಸ್ಕೀಮ್ ಅವಧಿ ಮುಗಿದು 5 ತಿಂಗಳು ಕಳೆದರೂ ಗ್ರಾ
Jun 131 min read


ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಭೇಟಿ*
ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಜೂನ್ 12ರಂದು ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದಾರೆ. ಸಿಎಂ ಭೇಟಿ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಪೊಲೀಸರು ಸೂಕ್ತ ಬಂದೋಬಸ್ತ್ ಕೈಗೊಂಡಿದ್ದು, ಸಾರ್ವಜನಿಕರಿಗೆ ಕೆಲವು ಪ್ರಮುಖ ಸೂಚನೆಗಳನ್ನು ನೀಡಿದ್ದಾರೆ. ವಿಶೇಷ ಬಂದೋಬಸ್ತ್ ಇರುವ ಕಾರಣ ಮಧ್ಯಾಹ್ನ 12 ರಿಂದ ಸಂಜೆ 5 ಗಂಟೆಯವರೆಗೆ ಭಕ್ತರು ದರ್ಶನ ತಪ್ಪಿಸುವುದು ಸೂಕ್ತ ಎಂದು ಪೊಲೀಸರು ತಿಳಿಸಿದ್ದಾರೆ. ಭಕ್ತರಿಗೆ ಪ್ರವೇಶ ನಿಷೇಧವಿಲ್ಲದಿದ್ದರೂ, ಭದ್ರತೆಯ ದೃಷ್ಟಿಯಿಂದ ದರ್ಶನದ ವೇಳೆ ಅನಾನುಕೂಲವಾಗಬಹುದು ಎಂದು ಪ್ರಕಟಣೆಯಲ್ಲಿ ಕೋರಲಾಗಿದೆ. ಈ ಹಿಂದೆ ತಮ
Jun 121 min read


ಧರ್ಮಸ್ಥಳ ಪ್ರಕರಣ: ಸುಳ್ಳು ಸುದ್ದಿ ನಂಬಬೇಡಿ ಎಂದ ನಟ ಪ್ರಕಾಶ್ ರಾಜ್
ಧರ್ಮಸ್ಥಳದ ಬುರುಡೆ ಪ್ರಕರಣದಲ್ಲಿ ತಮ್ಮ ಹೆಸರು ಕೇಳಿಬರುತ್ತಿದ್ದಂತೆ ನಟ ಪ್ರಕಾಶ್ ರಾಜ್ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ಅಧಿಕೃತ ಸ್ಪಷ್ಟನೆ ನೀಡಿದ್ದಾರೆ. ನನ್ನ ಬಗ್ಗೆ ಹರಡುತ್ತಿರುವುದೆಲ್ಲವೂ ಸಂಪೂರ್ಣ ಸುಳ್ಳು ಸುದ್ದಿ ಎಂದು ಅವರು ಕಿಡಿಕಾರಿದ್ದಾರೆ. ಇದು ಕೋಟ್ಯಂತರ ಭಕ್ತರ ನಂಬಿಕೆಯ ಸೂಕ್ಷ್ಮ ವಿಷಯವಾಗಿದೆ. ನಾನು ಸದ್ಯ ಊರಿನಲ್ಲಿಲ್ಲ, ಇನ್ನೆರಡು ದಿನಗಳಲ್ಲಿ ಖುದ್ದಾಗಿ ಬಂದು ಮಾಧ್ಯಮಗಳ ಮುಂದೆ ಸೂಕ್ತ ಪ್ರತಿಕ್ರಿಯೆ ನೀಡಲಿದ್ದೇನೆ. ಅಲ್ಲಿಯವರೆಗೆ ಯಾರೂ ಗಾಳಿ ಸುದ್ದಿ ನಂಬಬೇಡಿ ಎಂದು ವಿನಂತಿಸಿದ್ದಾರೆ. ಪ್ರಕರಣದ ಆರೋಪಿ ಚಿನ್ನಯ್ಯ ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದು,
Jun 121 min read


26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ: ಧರ್ಮಸ್ಥಳದಲ್ಲಿ ನಡೆದ ಅಪರೂಪದ ಪುನರ್ಮಿಲನ!
ಹೆತ್ತ ಕರುಳಿನ ತೀವ್ರ ಹಂಬಲ ಹಾಗೂ ಪ್ರಾರ್ಥನೆಗೆ ಕೊನೆಗೂ ಜಯ ಸಿಕ್ಕಿದೆ. "ಕಣ್ಣು ಮುಚ್ಚುವ ಮುನ್ನ ಹಿರಿಯ ಮಗನನ್ನು ಒಮ್ಮೆಯಾದರೂ ನೋಡಬೇಕು" ಎಂಬ ವೃದ್ಧ ತಾಯಿಯ ಕಣ್ಣೀರಿನ ಕರೆಗೆ ಭಗವಂತ ಓಗೊಟ್ಟಿದ್ದಾನೆ. ಬರೋಬ್ಬರಿ 26 ವರ್ಷಗಳ ಹಿಂದೆ, ಕೇವಲ 12 ವರ್ಷದ ಬಾಲಕನಾಗಿದ್ದಾಗ ನಾಪತ್ತೆಯಾಗಿದ್ದ ಮಗ, ಇದೀಗ ಮಹಾರಾಷ್ಟ್ರದ ‘ಸಲೀಂ’ ಆಗಿ ಸ್ವಂತ ಮನೆಗೆ ಮರಳಿ ಬಂದಿರುವ ವಿಸ್ಮಯಕಾರಿ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ ನಡೆದಿದೆ. ಧರ್ಮಸ್ಥಳದ ಅಶೋಕನಗರದ ನಿವಾಸಿಯಾಗಿದ್ದ ಸತೀಶ್ ಎಂಬಾತನೇ ಇಷ್ಟು ವರ್ಷಗಳ ಬಳಿಕ ಮರಳಿ ಬಂದು ಹೆತ್ತ ತಾಯಿಯ ಕಣ್ಣಲ್ಲಿ ಆನಂದಬಾಷ್ಪ ತರ
Jun 121 min read


ಫಿಫಾ ವಿಶ್ವಕಪ್ಗೆ ಇಂದು ಚಾಲನೆ: ಚಾಂಪಿಯನ್ ತಂಡಕ್ಕೆ ಸಿಗಲಿದೆ ₹476 ಕೋಟಿ ಬಹುಮಾನ!
ಜಗತ್ತಿನ ಅತ್ಯಂತ ಜನಪ್ರಿಯ ಕ್ರೀಡಾಕೂಟ 23ನೇ ಆವೃತ್ತಿಯ ಫಿಫಾ ಪುರುಷರ ಫುಟ್ಬಾಲ್ ವಿಶ್ವಕಪ್ಗೆ ಇಂದು ಅಮೆರಿಕ, ಮೆಕ್ಸಿಕೊ ಮತ್ತು ಕೆನಡಾದಲ್ಲಿ ಜಂಟಿಯಾಗಿ ಚಾಲನೆ ದೊರೆಯಲಿದೆ. ಇತಿಹಾಸದಲ್ಲೇ ಮೊದಲ ಬಾರಿಗೆ 48 ತಂಡಗಳು ಭಾಗವಹಿಸುತ್ತಿರುವ ಈ ಬೃಹತ್ ಟೂರ್ನಿಯಲ್ಲಿ ಫೈನಲ್ ಒಳಗೊಂಡಂತೆ ಒಟ್ಟು 140 ಪಂದ್ಯಗಳು ನಡೆಯಲಿವೆ. ಮೆಕ್ಸಿಕೋ ಸಿಟಿಯ ಐತಿಹಾಸಿಕ ಅಜ್ಟೆಕಾ ಕ್ರೀಡಾಂಗಣದಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಆತಿಥೇಯ ಮೆಕ್ಸಿಕೋ ಮತ್ತು ಸೌತ್ ಆಫ್ರಿಕಾ ತಂಡಗಳು ಮುಖಾಮುಖಿಯಾಗಲಿವೆ. ಈ ಬಾರಿಯ ವಿಶ್ವಕಪ್ನಲ್ಲಿ ನಿಖರ ನಿರ್ಧಾರಗಳಿಗಾಗಿ ಸಂಪೂರ್ಣವಾಗಿ ಕೃತಕ ಬುದ್ಧಿಮತ್ತೆ (AI) ತಂತ್ರಜ
Jun 111 min read


ಆರ್ಟಿಇ ಶಿಕ್ಷಣ 10ನೇ ತರಗತಿವರೆಗೆ ವಿಸ್ತರಿಸಿದ್ದ ಸರ್ಕಾರದ ಸುತ್ತೋಲೆಗೆ ಹೈಕೋರ್ಟ್ ತಡೆ
ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಆರ್ಟಿಇ ಅಡಿ 8ನೇ ತರಗತಿವರೆಗೆ ಇದ್ದ ಉಚಿತ ಶಿಕ್ಷಣವನ್ನು 10ನೇ ತರಗತಿಯವರೆಗೆ ವಿಸ್ತರಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಮೇ 21ರಂದು ಶಾಲಾ ಶಿಕ್ಷಣ ಇಲಾಖೆ ಹೊರಡಿಸಿದ್ದ ಈ ಸುತ್ತೋಲೆಯನ್ನು ಪ್ರಶ್ನಿಸಿ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳ ಒಕ್ಕೂಟ ಅರ್ಜಿ ಸಲ್ಲಿಸಿತ್ತು. ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಶೋಕ್ ಎಸ್. ಕಿಣಗಿ ಅವರಿದ್ದ ಪೀಠವು ಈ ಆದೇಶ ನೀಡಿದೆ. ಆರ್ಟಿಇ ಕಾಯ್ದೆಯಡಿ 6ರಿಂದ 14 ವರ್ಷದೊಳಗಿನವರಿಗೆ ಮಾತ್ರ ಉಚಿತ ಶಿಕ್ಷಣಕ್ಕೆ ಅವಕಾಶವಿದೆ. ನಿರ್ದಿಷ್ಟ ವರ್ಗಕ್ಕೆ ಮಾತ್ರ ವಿಸ್ತರಿಸುವುದು ಕಾನ
Jun 111 min read


ಚಿನ್ನದ ಬೆಲೆಯಲ್ಲಿ ಸತತ ಇಳಿಕೆ: ಎರಡು ದಿನಗಳಲ್ಲಿ ರೂ. 600 ಕುಸಿತ!
ಆಭರಣ ಚಿನ್ನದ ಬೆಲೆಯಲ್ಲಿ ಸತತ ಎರಡನೇ ದಿನವೂ ಇಳಿಕೆ ಕಂಡುಬಂದಿದೆ. ಬುಧವಾರ 10 ಗ್ರಾಂ ಚಿನ್ನದ ದರದಲ್ಲಿ ರೂ. 395 ಕುಸಿತ ದಾಖಲಾಗಿದ್ದರೆ, ಗುರುವಾರ ಮತ್ತಷ್ಟು ರೂ. 195 ಇಳಿಕೆಯಾಗಿದೆ. ಇದರೊಂದಿಗೆ ಕಳೆದ ಎರಡು ದಿನಗಳಲ್ಲಿ ಒಟ್ಟು ಸುಮಾರು ರೂ. 600ರಷ್ಟು ದರ ಕಡಿಮೆಯಾದಂತಾಗಿದೆ. ಜಾಗತಿಕ ಮಾರುಕಟ್ಟೆಯ ಏರಿಳಿತಗಳು ದೇಶೀಯ ಮಾರುಕಟ್ಟೆಯ ಮೇಲೂ ನೇರ ಪರಿಣಾಮ ಬೀರಿವೆ. ಪ್ರಸ್ತುತ ದೇಶೀಯ ಹಾಗೂ ಬೆಂಗಳೂರು ಮಾರುಕಟ್ಟೆಯಲ್ಲಿ 22 ಕ್ಯಾರಟ್ ಚಿನ್ನದ ಪ್ರತಿ ಗ್ರಾಂ ದರ ರೂ. 13,350 ಆಗಿದ್ದು, 24 ಕ್ಯಾರಟ್ ಚಿನ್ನದ ಪ್ರತಿ ಗ್ರಾಂ ದರ ರೂ. 14,564 ತಲುಪಿದೆ. ಇನ್ನು 18 ಕ್ಯಾರಟ್ ಚಿನ್ನದ ಪ್ರತಿ ಗ್
Jun 111 min read


ರಸ್ತೆ ಡಿವೈಡರ್ಗಳ ಮೇಲಿನ ಫ್ಲೆಕ್ಸ್, ಬ್ಯಾನರ್ ತೆರವುಗೊಳಿಸಲು ದ.ಕ ಡಿಸಿ ಸೂಚನೆ
ದಕ್ಷಿಣ ಕನ್ನಡ ಜಿಲ್ಲೆಯ ರಸ್ತೆಗಳ ಡಿವೈಡರ್ಗಳ ಮೇಲೆ ಅಳವಡಿಸಲಾಗಿರುವ ಎಲ್ಲಾ ಅನಧಿಕೃತ ಹಾಗೂ ಅಪಾಯಕಾರಿ ಫ್ಲೆಕ್ಸ್ ಮತ್ತು ಬ್ಯಾನರ್ಗಳನ್ನು ತಕ್ಷಣವೇ ತೆರವುಗೊಳಿಸುವಂತೆ ಜಿಲ್ಲಾಧಿಕಾರಿ ದರ್ಶನ್ ಎಚ್. ವಿ. ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಜಿಲ್ಲೆಯಲ್ಲಿ ಪ್ರಸ್ತುತ ಮುಂಗಾರು ಮಳೆ ಚುರುಕುಗೊಂಡಿದೆ. ಗಾಳಿ-ಮಳೆಗೆ ಈ ಬ್ಯಾನರ್ಗಳು ಕಳಚಿ ವಾಹನ ಸವಾರರು ಹಾಗೂ ಪಾದಚಾರಿಗಳ ಮೇಲೆ ಬಿದ್ದು ಅಪಘಾತಗಳು ಮತ್ತು ಜೀವಹಾನಿ ಸಂಭವಿಸುವ ಸಾಧ್ಯತೆ ಇರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ. ಡಿವೈಡರ್ ಮೇಲಿನ ಬೋರ್ಡ್ಗಳಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವ ಬಗ್ಗೆ ಜಿಲ್ಲಾಡಳಿತಕ್ಕೆ ದೂರುಗಳು ಬ
Jun 111 min read


ರಾಜ್ಯಕ್ಕೆ 4ನೇ ರ್ಯಾಂಕ್ ಪಡೆದಿದ್ದ ಪ್ರತಿಭಾನ್ವಿತ ವಿದ್ಯಾರ್ಥಿನಿ ಅಭಿಜ್ಞಾ ಭಟ್ ನಿಧನ
ಸುಳ್ಯದ ಖ್ಯಾತ ಇಎನ್ಟಿ ತಜ್ಞ ವೈದ್ಯರಾದ ಡಾ. ರವಿಶಂಕರ್ ಅವರ ಹಿರಿಯ ಪುತ್ರಿ ಅಭಿಜ್ಞಾ ಭಟ್ ಅವರು ಅಲ್ಪಕಾಲದ ಅಸೌಖ್ಯದಿಂದ ಜೂನ್ 10ರಂದು ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅಭಿಜ್ಞಾ ಭಟ್ ಅವರು ಇತ್ತೀಚೆಗೆ ಪ್ರಕಟವಾದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 596 ಅಂಕಗಳನ್ನು ಪಡೆದಿದ್ದರು. ಆ ಮೂಲಕ ರಾಜ್ಯಕ್ಕೆ 4ನೇ ರ್ಯಾಂಕ್ ಗಳಿಸಿ, ಸುಳ್ಯ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ಹೆಮ್ಮೆ ತಂದಿದ್ದರು. ಅತ್ಯುತ್ತಮ ಶೈಕ್ಷಣಿಕ ಸಾಧನೆಯ ಮೂಲಕ ಭವಿಷ್ಯದ ಭರವಸೆಯಾಗಿದ್ದ ಅಭಿಜ್ಞಾ ಅವರ ಅಕಾಲಿಕ ನಿಧನಕ್ಕೆ ಕುಟುಂಬಸ್ಥರು, ಶಿಕ್ಷಕರು ಹಾಗೂ ಸ್ನೇಹಿತರು ತೀವ್ರ ಸಂತಾಪ ಸೂಚಿಸಿದ್ದಾರೆ.
Jun 111 min read


ಧರ್ಮಸ್ಥಳದಲ್ಲಿ ‘ಶ್ರೀಗಣ’ ಕಿರುಚಿತ್ರ ಬಿಡುಗಡೆ
ತುಳುನಾಡಿನ ದೈವ ಆರಾಧನೆ, ಸಂಸ್ಕೃತಿ ಮತ್ತು ಪರಂಪರೆಯನ್ನು ಬಿಂಬಿಸುವ ‘ಶ್ರೀಗಣ’ ಕಿರುಚಿತ್ರವನ್ನು ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಮಾತೃಶ್ರೀ ಹೇಮಾವತಿ ವೀ. ಹೆಗ್ಗಡೆಯವರು ಜೂನ್ 9, 2026ರಂದು ಧರ್ಮಸ್ಥಳದಲ್ಲಿ ಬಿಡುಗಡೆಗೊಳಿಸಿದರು. ಬಿಡುಗಡೆ ಬಳಿಕ ಕಿರುಚಿತ್ರವನ್ನು ವೀಕ್ಷಿಸಿದ ಪೂಜ್ಯ ಹೆಗ್ಗಡೆ ದಂಪತಿಗಳು, ತುಳುನಾಡಿನ ಸಾಂಸ್ಕೃತಿಕ ಪರಂಪರೆ ಮತ್ತು ದೈವ ಆರಾಧನೆಯ ಮಹತ್ವವನ್ನು ಪರಿಣಾಮಕಾರಿಯಾಗಿ ಚಿತ್ರಿಸಿರುವ ಯುವಕರ ಪ್ರಯತ್ನವನ್ನು ಶ್ಲಾಘಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಧರ್ಮಸ್ಥಳದ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳಾದ ಶ್ರೀ ಡಿ. ಹ
Jun 111 min read


ರಸ್ತೆ ಅಪಘಾತ: ಗಾಯಾಳು ರಕ್ಷಿಸಿದರೆ ಸಿಗಲಿದೆ ₹25 ಸಾವಿರ ಬಹುಮಾನ!
ರಸ್ತೆ ಅಪಘಾತಕ್ಕೊಳಗಾದವರನ್ನು ಸಕಾಲದಲ್ಲಿ ಆಸ್ಪತ್ರೆಗೆ ಸೇರಿಸಿ ನೆರವು ನೀಡುವವರಿಗಾಗಿ ಕೇಂದ್ರ ಸರ್ಕಾರ 'ರಹಾ-ವೀರ್' ಯೋಜನೆ ಜಾರಿಗೆ ತಂದಿದೆ. ಇದರ ಅಡಿಯಲ್ಲಿ ಜೀವ ಉಳಿಸಿದವರಿಗೆ 25 ಸಾವಿರ ರೂಪಾಯಿ ನಗದು ಬಹುಮಾನ ಹಾಗೂ ಕಾನೂನಿನ ರಕ್ಷಣೆ ಸಿಗಲಿದೆ. ಅಪಘಾತ ಸಂಭವಿಸಿದ ಮೊದಲ ಒಂದು ಗಂಟೆಯನ್ನು 'ಗೋಲ್ಡನ್ ಅವರ್' ಎನ್ನಲಾಗುತ್ತದೆ. ಈ ಅವಧಿಯಲ್ಲಿ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಕೊಡಿಸಿದರೆ ಪ್ರಾಣ ಉಳಿಸಬಹುದು. ಇದಕ್ಕೆ ಯಾವುದೇ ವೈದ್ಯಕೀಯ ತರಬೇತಿ ಬೇಡ, ಸಮಯಕ್ಕೆ ಸರಿಯಾಗಿ ಆಸ್ಪತ್ರೆಗೆ ತಲುಪಿಸಿದರೆ ಸಾಕು. ಪೊಲೀಸ್ ಕಿರಿಕಿರಿ ಹಾಗೂ ಕೋರ್ಟ್ ಅಲೆದಾಟದ ಭಯದಿಂದ ಜನ ಸಹಾಯ ಮಾಡಲು ಹಿಂಜರಿಯು
Jun 111 min read


ಖ್ಯಾತ ಚಿತ್ರ ನಿರ್ದೇಶಕ ಭಾರತಿರಾಜ ಇನ್ನಿಲ್ಲ
ತಮಿಳು ಚಿತ್ರರಂಗದ ದೃಶ್ಯ ವೈಭವವನ್ನು ಬದಲಿಸಿದ ಖ್ಯಾತ ನಿರ್ದೇಶಕ ಹಾಗೂ ನಟ ಭಾರತಿರಾಜ (84) ಅವರು ಜೂನ್ 10 ರಂದು ಚೆನ್ನೈನಲ್ಲಿ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಕೊನೆಯುಸಿರೆಳೆದರು. ಗ್ರಾಮೀಣ ಸೊಗಡಿನ ಕಥೆಗಳ ಮೂಲಕ ಸಿನಿಮಾ ರಂಗದಲ್ಲಿ ಹೊಸ ಅಲೆ ಸೃಷ್ಟಿಸಿದ್ದ ಇವರು, 1977ರಲ್ಲಿ '16 ವಯತಿನಿಲೆ' ಚಿತ್ರದ ಮೂಲಕ ನಿರ್ದೇಶಕರಾಗಿ ಪಾದಾರ್ಪಣೆ ಮಾಡಿದ್ದರು. ಇವರ ಸಿನಿಮಾಗಳು ನೈಜತೆಗೆ ಹೆಸರಾಗಿದ್ದವು. ಐದು ದಶಕಗಳ ಸುದೀರ್ಘ ಸಿನಿಮಾ ಪಯಣದಲ್ಲಿ ಆರು ರಾಷ್ಟ್ರ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದ್ದ ಭಾರತಿರಾಜ ಅವರ ಅಗಲಿಕೆಗೆ ಇಡೀ ಭಾರತೀ
Jun 101 min read


ಶಕ್ತಿ ಯೋಜನೆ: ಮಹಿಳೆಯರಿಗೆ ಶೀಘ್ರದಲ್ಲೇ ಉಚಿತ ಸ್ಮಾರ್ಟ್ ಕಾರ್ಡ್
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಶಕ್ತಿ’ ಯೋಜನೆಯಡಿ ಉಚಿತ ಬಸ್ ಪ್ರಯಾಣ ಮಾಡುವ ಮಹಿಳೆಯರಿಗೆ ಶೀಘ್ರದಲ್ಲೇ ‘ಸ್ಮಾರ್ಟ್ ಕಾರ್ಡ್’ ವಿತರಿಸಲಾಗುವುದು. ಇದರಿಂದಾಗಿ ಇನ್ಮುಂದೆ ಪ್ರಯಾಣದ ವೇಳೆ ಆಧಾರ್ ಕಾರ್ಡ್ ತೋರಿಸುವ ಗೊಂದಲ ನಿವಾರಣೆಯಾಗಲಿದೆ. ಸಾರಿಗೆ ಸಚಿವ ಬೈರತಿ ಸುರೇಶ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಈ ನಿರ್ಧಾರ ಪ್ರಕಟಿಸಿದ್ದಾರೆ. ರಾಜ್ಯದ ಮೂರು ಕೋಟಿಗೂ ಅಧಿಕ ಮಹಿಳಾ ಫಲಾನುಭವಿಗಳಿಗೆ ಈ ಸ್ಮಾರ್ಟ್ ಕಾರ್ಡ್ಗಳನ್ನು ಸಂಪೂರ್ಣ ಉಚಿತವಾಗಿ ನೀಡಲು ಸರ್ಕಾರ ಯೋಜಿಸಿದೆ. ಇದೇ ವೇಳೆ ಪುರುಷರು ಮೆಟ್ರೋ ಮಾದರಿಯಲ್ಲಿ ಶುಲ್ಕ ಪಾವತಿಸಿ ರೀಚಾರ್ಜ್ ಮಾಡಬಹುದಾದ ಕಾರ್ಡ್ ಪಡೆಯಬಹುದು. ಈ ಬೃಹತ್ ಯೋ
Jun 101 min read
Archive
bottom of page



