top of page
News Articles
Sathyapatha News Plus


ಫುಟ್ಬಾಲ್ ದಿಗ್ಗಜ ಲಿಯೋನೆಲ್ ಮೆಸ್ಸಿ ಅಂತಾರಾಷ್ಟ್ರೀಯ ಫುಟ್ಬಾಲ್ಗೆ ಅಧಿಕೃತ ವಿದಾಯ
ಅರ್ಜೆಂಟೀನಾದ ವಿಶ್ವಕಪ್ ವಿಜೇತ ನಾಯಕ, ಫುಟ್ಬಾಲ್ ಜಗತ್ತಿನ ಸಾರ್ವಕಾಲಿಕ ಶ್ರೇಷ್ಠ ಆಟಗಾರ ಲಿಯೋನೆಲ್ ಮೆಸ್ಸಿ ಅಂತಾರಾಷ್ಟ್ರೀಯ ಫುಟ್ಬಾಲ್ ವೃತ್ತಿಜೀವನಕ್ಕೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ್ದಾರೆ. ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಸುದೀರ್ಘ ಪೋಸ್ಟ್ ಹಂಚಿಕೊಳ್ಳುವ ಮೂಲಕ ಈ ಭಾವುಕ ನಿರ್ಧಾರವನ್ನು ವಿಶ್ವದಾದ್ಯಂತ ಇರುವ ತಮ್ಮ ಕೋಟ್ಯಂತರ ಅಭಿಮಾನಿಗಳಿಗೆ ತಿಳಿಸಿದ್ದಾರೆ. ಕಳೆದ ಎರಡು ದಶಕಗಳಿಗೂ ಹೆಚ್ಚು ಕಾಲ ಅರ್ಜೆಂಟೀನಾ ರಾಷ್ಟ್ರೀಯ ತಂಡಕ್ಕೆ ಅಪ್ರತಿಮ ಸೇವೆ ಸಲ್ಲಿಸಿದ ಮೆಸ್ಸಿ, 2022ರ ಫೀಫಾ ವಿಶ್ವಕಪ್ ಹಾಗೂ ಕೋಪಾ ಅಮೆರಿಕ ಟ್ರೋಫಿಗಳನ್ನು ಗೆದ್ದುಕೊಡುವಲ್ಲಿ ಪ್ರಮುಖ ಪಾತ್ರ ವಹಿಸಿ
Aug 311 min read


ಸರ್ಕಾರಿ ಶಾಲೆಗಳಲ್ಲಿ ಶೂ, ಸಾಕ್ಸ್ ವಿತರಣೆ ವಿಳಂಬ: ಸರ್ಕಾರದ ವಿರುದ್ಧ AIDSO ಆಕ್ರೋಶ
ಶೈಕ್ಷಣಿಕ ವರ್ಷ ಆರಂಭವಾಗಿ ಮೂರು ತಿಂಗಳು ಕಳೆದರೂ ಸರ್ಕಾರಿ ಶಾಲಾ ಮಕ್ಕಳಿಗೆ ಶೂ ಮತ್ತು ಸಾಕ್ಸ್ ವಿತರಿಸದಿರುವುದಕ್ಕೆ AIDSO ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಬೆಂಗಳೂರಿನ ಶಿಬಿರದಲ್ಲಿ ಮಾತನಾಡಿದ ರಾಜ್ಯ ಕಾರ್ಯದರ್ಶಿ ಅಜಯ್ ಕಾಮತ್, ವಿದ್ಯಾರ್ಥಿಗಳ ಮೂಲಸೌಕರ್ಯ ಹಾಗೂ ಪೌಷ್ಟಿಕ ಆಹಾರದ ಕುರಿತು ಸರ್ಕಾರದ ಆದ್ಯತೆಗಳನ್ನು ಪ್ರಶ್ನಿಸಿದರು. ಕೆಲವು ಶಾಲೆಗಳಲ್ಲಿ ರಾಗಿ ಗಂಜಿ ವಿತರಣೆ ನಿಂತಿರುವುದನ್ನು ಖಂಡಿಸಿದ ಅವರು, ಸರ್ಕಾರಿ ಕಲ್ಯಾಣ ಯೋಜನೆಗಳು ವಿಳಂಬವಿಲ್ಲದೆ ತಲುಪಬೇಕು ಮತ್ತು ಯುವಕರಿಗೆ ಉದ್ಯೋಗಾವಕಾಶ ಹೆಚ್ಚಿಸಬೇಕು ಎಂದು ಆಗ್ರಹಿಸಿದರು.
Aug 311 min read


ಇನ್ಮುಂದೆ ಯಾವ ಚುನಾವಣೆಯಲ್ಲೂ ಸ್ಪರ್ಧಿಸಲ್ಲ: ಸಿದ್ದರಾಮಯ್ಯ ಬಾಂಬ್!
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂಬರುವ ಯಾವುದೇ ಲೋಕಸಭೆ ಅಥವಾ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ದಿವಂಗತ ವೀರಣ್ಣನವರ ನುಡಿ ನಮನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ನಿರ್ಧಾರಕ್ಕೆ ವಯಸ್ಸಿನ ಕಾರಣಕ್ಕಿಂತ ಇಂದಿನ ದುಬಾರಿ ಚುನಾವಣಾ ವ್ಯವಸ್ಥೆಯೇ ಮುಖ್ಯ ಕಾರಣ ಎಂದಿದ್ದಾರೆ. "ಈಗ ಚುನಾವಣೆ ಎದುರಿಸಲು ಟನ್ ಗಟ್ಟಲೆ ಹಣ ಬೇಕು. ವ್ಯವಸ್ಥೆ ಸುಧಾರಿಸದಿದ್ದರೆ ಪ್ರಾಮಾಣಿಕವಾಗಿ ರಾಜಕಾರಣ ಮಾಡಲು ಸಾಧ್ಯವಿಲ್ಲ" ಎಂದು ಕಳವಳ ವ್ಯಕ್ತಪಡಿಸಿದರು. 1991ರ ಕೊಪ್ಪಳ ಲೋಕಸಭಾ ಸೋಲನ್ನು ನೆನಪಿಸಿಕೊಂಡ ಅವರು, ರಾಜಕಾರಣದಲ್ಲಿ ಸಕ್ರಿಯವಾಗಿರುತ್ತೇನೆ ಆದ
Aug 311 min read


ಕಾರವಾರ: ಅರಬ್ಬಿ ಸಮುದ್ರದಲ್ಲಿ ಮುಳುಗಿದ ಮೀನುಗಾರಿಕಾ ಬೋಟ್; 24 ಮೀನುಗಾರರ ಸಾಹಸಿಕ ರಕ್ಷಣೆ!
ಕಾರವಾರ: ಇಲ್ಲಿನ ಅಂಜದೀವ್ ದ್ವೀಪದ ಸಮೀಪ ಮೀನುಗಾರಿಕೆಗೆ ತೆರಳಿದ್ದ ಬೆಳಂಬರ್ ಮೂಲದ ನೀಲಕಂಠ ಖಾರ್ವಿ ಅವರಿಗೆ ಸೇರಿದ 'ಶ್ರೀ ಮಾತಾ' ಎಂಬ ಮೀನುಗಾರಿಕಾ ಬೋಟ್ ಅರಬ್ಬಿ ಸಮುದ್ರದಲ್ಲಿ ಅವಘಡಕ್ಕೀಡಾಗಿ ಮುಳುಗಡೆಯಾಗಿದೆ. ವಿಷಯ ತಿಳಿಯುತ್ತಿದ್ದಂತೆಯೇ ಸಮೀಪದಲ್ಲಿದ್ದ ಐದಾರು ಬೋಟ್ಗಳ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿ, ಹಗ್ಗದ ನೆರವಿನಿಂದ ಬೋಟ್ನಲ್ಲಿದ್ದ ಎಲ್ಲಾ 24 ಮಂದಿ ಮೀನುಗಾರರನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ. ಬೋಟ್ ಅನ್ನು ಉಳಿಸಲು ಯತ್ನಿಸಿದರೂ ಅದು ಸಂಪೂರ್ಣವಾಗಿ ಸಮುದ್ರದ ಪಾಲಾಗಿದೆ. ಘಟನೆಯಲ್ಲಿ ಸುಮಾರು 50 ಲಕ್ಷ ರೂಪಾಯಿಗೂ ಅಧಿಕ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.
Aug 301 min read


ಮನ್ ಕೀ ಬಾತ್: ಕರ್ನಾಟಕದ ನಿಂಗಮ್ಮ, ಚಿಕ್ಕಮಗಳೂರಿನ ರೈತರ ಸಾಧನೆಗೆ ಪ್ರಧಾನಿ ಮೋದಿ ಶ್ಲಾಘನೆ
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಮ್ಮ ‘ಮನ್ ಕಿ ಬಾತ್’ ರೇಡಿಯೋ ಕಾರ್ಯಕ್ರಮದಲ್ಲಿ ದೇಶದ ನವೀನ ಆಲೋಚನೆಗಳು ಹಾಗೂ ಕರ್ನಾಟಕದ ಯಶೋಗಾಥೆಗಳನ್ನು ವಿಶೇಷವಾಗಿ ಪ್ರಸ್ತಾಪಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ‘ಪಿಎಂ ಸ್ವನಿಧಿ’ ಯೋಜನೆಯಡಿ ಸಾಲ ಪಡೆದು ಸ್ವಾವಲಂಬಿ ಬದುಕು ಕಟ್ಟಿಕೊಂಡ ಬೆಂಗಳೂರಿನ ಬೀದಿಬದಿ ವ್ಯಾಪಾರಿ ನಿಂಗಮ್ಮ ಅವರ ಸಾಧನೆಯನ್ನು ಮೋದಿ ಶ್ಲಾಘಿಸಿದರು. ಹಾಗೆಯೇ, ಕಾಫಿ ತೋಟಗಳ ನಡುವೆ ಪರ್ಯಾಯ ಬೆಳೆಯಾಗಿ ಅವಕಾಡೊ ಬೆಳೆದು ಯಶಸ್ಸು ಕಂಡ ಚಿಕ್ಕಮಗಳೂರಿನ ರೈತರ ನೂತನ ಕೃಷಿ ಪದ್ಧತಿಯನ್ನು ಪ್ರಶಂಸಿದರು. ಭಾರತದ ರಾಜವಂಶಗಳ ಇತಿಹಾಸ ತಿಳಿಸುವ ‘Bharat Rajya’ ವೆಬ್ಸೈಟ್, ಮಾದಕ ದ್ರ
Aug 301 min read


ಗೃಹಲಕ್ಷ್ಮಿ ಯೋಜನೆಗೆ 3 ವರ್ಷದ ಸಂಭ್ರಮ: 1.2 ಕೋಟಿ ಮಹಿಳೆಯರಿಗೆ ಆರ್ಥಿಕ ಬಲ ಎಂದ ಡಿಕೆ ಶಿವಕುಮಾರ್
ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ 'ಗೃಹಲಕ್ಷ್ಮಿ' ಯೋಜನೆಯು ಯಶಸ್ವಿಯಾಗಿ ಮೂರು ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ತೀವ್ರ ಸಂತಸ ಮತ್ತು ಹೆಮ್ಮೆ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸಂದೇಶ ಹಂಚಿಕೊಂಡಿರುವ ಅವರು, "ನಮ್ಮ ಸರ್ಕಾರದ ಈ ಪ್ರಮುಖ ಯೋಜನೆಯು ಮೂರು ವರ್ಷಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿರುವುದು ಅತ್ಯಂತ ಸಂತೋಷದ ಸಂಗತಿ. ರಾಜ್ಯದ 1.2 ಕೋಟಿಗೂ ಹೆಚ್ಚು ಕುಟುಂಬಗಳ ಯಜಮಾನಿಯರಿಗೆ ಈ ಯೋಜನೆ ಆರ್ಥಿಕ ಭದ್ರತೆಯ ಜೊತೆಗೆ ಸ್ವಾಭಿಮಾನ ಹಾಗೂ ಆತ್ಮಸ್ಥೈರ್ಯವನ್ನು ತಂದುಕೊಟ್ಟಿದೆ," ಎಂದು ಹೇಳಿದ್ದಾರೆ. ಗೃಹಲಕ್ಷ್ಮಿಯು ಕೇವಲ ಒಂದು ಸರ್ಕಾರಿ ಸ
Aug 301 min read


ಚೀನಾ-ನೇಪಾಳ ಗಡಿಯಲ್ಲಿ ಭೀಕರ ಭೂಕುಸಿತ: 49 ಭಾರತೀಯರು ಸೇರಿ 546 ಜನ ನಾಪತ್ತೆ, 16 ಸಾವು
ನೇಪಾಳದಲ್ಲಿ ಸಂಭವಿಸಿದ ಭೀಕರ ಪ್ರವಾಹದ ಬೆನ್ನಲ್ಲೇ, ಚೀನಾ-ನೇಪಾಳ ಗಡಿಯಲ್ಲಿರುವ ಟಿಬೆಟ್ನ ಗೈರಾಂಗ್ ಭೂ ಬಂದರು ಪ್ರದೇಶದಲ್ಲಿ ಭಾರೀ ಭೂಕುಸಿತ ಮತ್ತು ಹಿಮಕುಸಿತ ಸಂಭವಿಸಿದೆ. ಈ ದುರಂತದಲ್ಲಿ ಕನಿಷ್ಠ 16 ಮಂದಿ ಮೃತಪಟ್ಟಿದ್ದು, 546 ಜನರು ನಾಪತ್ತೆಯಾಗಿದ್ದಾರೆ ಎಂದು ಚೀನಾದ ಪ್ರಾದೇಶಿಕ ಸರ್ಕಾರ ತಿಳಿಸಿದೆ. ನಾಪತ್ತೆಯಾದವರಲ್ಲಿ 23 ದೇಶಗಳ 261 ವಿದೇಶಿ ಪ್ರಜೆಗಳು ಸೇರಿದ್ದಾರೆ. ಇವರಲ್ಲಿ ಕೈಲಾಸ-ಮಾನಸ ಸರೋವರ ಯಾತ್ರೆಗೆ ತೆರಳಿದ್ದ 49 ಭಾರತೀಯ ಯಾತ್ರಿಕರು ಸೇರಿರುವುದು ತೀವ್ರ ಆತಂಕಕ್ಕೆ ಕಾರಣವಾಗಿದೆ. ಜೊತೆಗೆ ನೇಪಾಳದ 104, ಲಾಟ್ವಿಯಾದ 33, ಅಮೆರಿಕದ 18 ಹಾಗೂ ಬ್ರಿಟನ್ನ 15 ಪ್ರಜೆಗಳು
Aug 301 min read


ರೈಲ್ವೆ ಇಲಾಖೆಯಲ್ಲಿ ಬಂಪರ್ ನೇಮಕಾತಿ: 4,029 ಹುದ್ದೆಗಳಿಗೆ ಅರ್ಜಿ ಆಹ್ವಾನ, ಸೆಪ್ಟೆಂಬರ್ 13 ಕೊನೆಯ ದಿನ!
ಕೇಂದ್ರ ಸರ್ಕಾರದ ಉದ್ಯೋಗ ಗಿಟ್ಟಿಸಿಕೊಳ್ಳಲು ಕಾಯುತ್ತಿರುವ ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ ಲಭಿಸಿದೆ. ಭಾರತೀಯ ರೈಲ್ವೆ ಸಚಿವಾಲಯದ ರೈಲ್ವೆ ನೇಮಕಾತಿ ಮಂಡಳಿಯು (RRB) ಜೂನಿಯರ್ ಎಂಜಿನಿಯರ್ (JE) ಹಾಗೂ ಡಿಪೋಟ್ ಮೆಟೀರಿಯಲ್ ಸೂಪರಿಟೆಂಡೆಂಟ್ (DMS) ಸೇರಿದಂತೆ ಒಟ್ಟು 4,029 ಖಾಲಿ ಹುದ್ದೆಗಳ ಭರ್ತಿಗೆ ಬೃಹತ್ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಇವುಗಳಲ್ಲಿ ಆರ್ಆರ್ಬಿ ಬೆಂಗಳೂರು ವಲಯವೊಂದರಲ್ಲೇ 299 ಹುದ್ದೆಗಳು ಲಭ್ಯವಿದ್ದು, ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 13 ಕೊನೆಯ ದಿನವಾಗಿದೆ. ವಿದ್ಯಾರ್ಹತೆ ಮತ್ತು ವಯೋಮಿತಿ: ಅಂಗೀಕೃತ ವಿಶ್ವವಿದ್ಯಾನಿಲ
Aug 291 min read


ಬೆಲೆ ಏರಿಕೆ ಬಿಸಿ: ಸಕ್ಕರೆ, ಬೆಲ್ಲದ ದರ ಏಕಾಏಕಿ ಜಿಗಿತ, ಜನಸಾಮಾನ್ಯರು ಕಂಗಾಲು!
ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರ ಜೇಬಿಗೆ ಕತ್ತರಿ ಬಿದ್ದಿದ್ದು, ಸಕ್ಕರೆ ಮತ್ತು ಬೆಲ್ಲದ ದರ ಏಕಾಏಕಿ ಹೆಚ್ಚಾಗಿ ಗ್ರಾಹಕರಿಗೆ ಕಹಿಯಾಗಿದೆ. ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಕೆ.ಜಿಗೆ 66 ರೂಪಾಯಿ ಇದ್ದ ಸಕ್ಕರೆ ದರ ಈಗ 70 ರೂಪಾಯಿಗೆ ತಲುಪಿದೆ. ಇನ್ನು ಬೆಲ್ಲದ ಬೆಲೆಯಲ್ಲಿ ಭಾರಿ ಜಿಗಿತ ಕಂಡಿದ್ದು, ನಾಲ್ಕು ದಿನಗಳ ಹಿಂದೆ ಕೆ.ಜಿಗೆ 68 ರೂಪಾಯಿ ಇದ್ದದ್ದು ಈಗ ಬರೋಬ್ಬರಿ 12 ರೂಪಾಯಿ ಹೆಚ್ಚಳವಾಗಿ 80 ರೂಪಾಯಿಗೆ ಏರಿಕೆಯಾಗಿದೆ. ಈ ದಿಢೀರ್ ದರ ಏರಿಕೆ ಮಧ್ಯಮ ವರ್ಗ ಹಾಗೂ ಬಡಜನರ ಮಾಸಿಕ ಆಯವ್ಯಯದ ಮೇಲೆ ಗಂಭೀರ ಪರಿಣಾಮ ಬೀರಿದೆ.
Aug 291 min read


ಚೀನಾದ ಸಿಚುವಾನ್ನಲ್ಲಿ 5.1 ತೀವ್ರತೆಯ ಭೂಕಂಪ: ಪ್ರವಾಹದ ಭೀತಿ
ನೇಪಾಳ ಮತ್ತು ಟಿಬೆಟ್ ಗಡಿಯಲ್ಲಿ ಸಂಭವಿಸಿದ ಭೀಕರ ಪ್ರವಾಹದ ಬೆನ್ನಲ್ಲೇ, ನೈಋತ್ಯ ಚೀನಾದ ಸಿಚುವಾನ್ ಪ್ರಾಂತ್ಯದಲ್ಲಿ ಶುಕ್ರವಾರ ಮಧ್ಯಾಹ್ನ 5.1 ತೀವ್ರತೆಯ ಭೂಕಂಪ ಸಂಭವಿಸಿದೆ. ಲಾಂಗ್ಚಾಂಗ್ ಸಮೀಪ 13 ಕಿ.ಮೀ ಆಳದಲ್ಲಿ ಇದು ದಾಖಲಾಗಿದೆ. ಮಣ್ಣು ಕುಸಿತದಿಂದ ನದಿಗೆ ಅಡ್ಡಲಾಗಿ ಸೃಷ್ಟಿಯಾಗಿದ್ದ ಕೃತಕ ಸರೋವರ ಒಡೆದು ಪ್ರವಾಹ ಉಂಟಾಗುವ ಆತಂಕ ಎದುರಾಗಿದೆ. ಇದರಿಂದಾಗಿ ಟಿಬೆಟ್ ಭಾಗದಲ್ಲಿ ಪ್ರಸ್ತುತ ರಕ್ಷಣಾ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಪ್ರವಾಹದ ಬೆದರಿಕೆಯಿಂದ ತುರ್ತು ಪಡೆಗಳನ್ನು 1 ಕಿ.ಮೀ ಹಿಂದಕ್ಕೆ ಸರಿಯಲು ಸೂಚಿಸಲಾಗಿದೆ. ಮುನ್ನೆಚ್ಚರಿಕೆಯಾಗಿ ಕಣಿವೆ ಪ್ರದ
Aug 291 min read


ದರ್ಬೆ ಸೈಬರ್ ಸೆಂಟರ್ ಗಲಾಟೆ ಪ್ರಕರಣ: ಸತ್ಯಾಸತ್ಯತೆ ಬಿಚ್ಚಿಟ್ಟ ಸಂತ್ರಸ್ತ ಮುಬಾಶಿರ; ಕ್ಷಮೆ ಕೇಳಿದರೆ ಕೇಸ್ ವಾಪಸ್ ಪಡೆಯಲು ಸಿದ್ಧ
ಪುತ್ತೂರು / ಮಂಗಳೂರು: ಪುತ್ತೂರು ನಗರದ ದರ್ಬೆಯ ಸೈಬರ್ ಕೇಂದ್ರವೊಂದರಲ್ಲಿ ಜನನ ಪ್ರಮಾಣಪತ್ರ ಲ್ಯಾಮಿನೇಷನ್ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಗಲಾಟೆ ಪ್ರಕರಣವು ರಾಜಕೀಯ ಹಾಗೂ ಕೋಮು ಸ್ವರೂಪ ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ, ಸಂತ್ರಸ್ತ ಮಂಡೆಕೋಲು ನಿವಾಸಿ ಮುಬಾಶಿರ ಅವರು ಮಂಗಳೂರಿನಲ್ಲಿ ಮಾಧ್ಯಮಗಳ ಮುಂದೆ ಹಾಜರಾಗಿ ಘಟನೆಯ ಪೂರ್ಣ ವಾಸ್ತವಾಂಶವನ್ನು ಸ್ಪಷ್ಟಪಡಿಸಿದ್ದಾರೆ. ಆಗಸ್ಟ್ 21ರಂದು ಊಟಕ್ಕೆ ಬಂದಿದ್ದಾಗ ಪಕ್ಕದ ಸೈಬರ್ ಸೆಂಟರ್ಗೆ ಮಗುವಿನ ಬರ್ತ್ ಸರ್ಟಿಫಿಕೇಟ್ ಲ್ಯಾಮಿನೇಷನ್ ಮತ್ತು ಆಧಾರ್ ಕಾರ್ಡ್ ಪ್ರಿಂಟ್ಗೆ ನೀಡಿದ್ದೆವು. ಆದರೆ ಸಿಬ್ಬಂದಿಯ ನಿರ್ಲಕ್ಷ್ಯದಿಂದ ಸರ್ಟಿ
Aug 281 min read


ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸಲು ಪುತ್ತೂರು ಶಾಸಕ ಅಶೋಕ್ ರೈ ಆಗ್ರಹ
ಮಂಗಳೂರು: ಮಂಗಳೂರಿನಲ್ಲಿ ಮುಂದಿನ ದಿನಗಳಲ್ಲಿ ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಯಲ್ಲೇ ತುಳು ಭಾಷೆಯನ್ನು ಕರ್ನಾಟಕದ ಹೆಚ್ಚುವರಿ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಿಸಬೇಕೆಂದು ಆಗ್ರಹಿಸಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ. ಬುಧವಾರ ಈ ಸಂಬಂಧ ಮುಖ್ಯಮಂತ್ರಿಗಳನ್ನು ಭೇಟಿಯಾದ ಶಾಸಕರು, ಕರಾವಳಿ ಭಾಗದ ಜನರ ಬಹುವರ್ಷಗಳ ಈ ಪ್ರಮುಖ ಬೇಡಿಕೆಯನ್ನು ಈಡೇರಿಸುವಂತೆ ಸವಿಸ್ತಾರವಾಗಿ ಮಾತುಕತೆ ನಡೆಸಿ ಮನವಿ ಪತ್ರ ಹಸ್ತಾಂತರಿಸಿದರು. ಶಾಸಕರು ತಮ್ಮ ಮನವಿಯಲ್ಲಿ, ತುಳು ಭಾಷೆಯು ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾಗಿದ್ದು ಸುದೀರ್ಘ ಇತಿಹಾಸವನ್ನು ಹೊ
Aug 281 min read


ಬಳ್ಪ -ಕೋಡಿಂಬಾಳ: ಜನವಸತಿ ಪ್ರದೇಶಕ್ಕೆ ಲಗ್ಗೆಯಿಟ್ಟ ಕಾಡಾನೆಗಳ ಹಿಂಡು; ಗ್ರಾಮಸ್ಥರಲ್ಲಿ ಆತಂಕ
ಕೋಡಿಂಬಾಳ: ಬಳ್ಪ ಪರಿಸರದಲ್ಲಿ ಸಂಚರಿಸುತ್ತಿದ್ದ ಕಾಡಾನೆಗಳ ಹಿಂಡು ಇದೀಗ ಪಕ್ಕದ ಕೋಡಿಂಬಾಳ ಗ್ರಾಮಕ್ಕೆ ಲಗ್ಗೆಯಿಟ್ಟಿದೆ. ಎಣ್ಣೆಮಜಲು ಬಳಿಯ ಬೀರಿಕಾಡು ಪ್ರದೇಶದ ಮೂಲಕ ನದಿ ದಾಟಿ ಬಂದಿರುವ ಆನೆಗಳು, ಕೊರಿಯರ್ ಸಮೀಪದ ಖಾಸಗಿ ರಬ್ಬರ್ ತೋಟದಲ್ಲಿ ಠಿಕಾಣಿ ಹೂಡಿವೆ. ಜನವಸತಿ ಹಾಗೂ ಕೃಷಿ ತೋಟಗಳ ಸನಿಹದಲ್ಲೇ ಆನೆಗಳು ಬೀಡುಬಿಟ್ಟಿರುವುದರಿಂದ ಸ್ಥಳೀಯ ಕೃಷಿಕರು, ಕಾರ್ಮಿಕರು ಮತ್ತು ಶಾಲಾ ಮಕ್ಕಳು ತೀವ್ರ ಆತಂಕಕ್ಕೊಳಗಾಗಿದ್ದಾರೆ. ಗ್ರಾಮಸ್ಥರು ಒಂಟಿಯಾಗಿ ಸಂಚರಿಸದೆ ಜಾಗರೂಕರಾಗಿರುವಂತೆ ಎಚ್ಚರಿಕೆ ಸಂದೇಶ ರವಾನಿಸಲಾಗುತ್ತಿದೆ. ಅರಣ್ಯ ಇಲಾಖಾಧಿಕಾರಿಗಳು ತಕ್ಷಣವೇ ಸ್ಥಳಕ್ಕೆ ಆಗಮಿಸಿ, ಕಾಡಾನೆಗಳನ್
Aug 281 min read


ಕಡಬ: ಪ.ಪಂ ಅಧ್ಯಕ್ಷೆಯ ಮನೆಯಲ್ಲೇ ಕಳ್ಳತನ
ಕಡಬ ಪಟ್ಟಣ ಪಂಚಾಯತ್ ವ್ಯಾಪ್ತಿಯ ಅಡ್ಡಗದ್ದೆ ಎಂಬಲ್ಲಿ ಮನೆಯ ಮರದ ಬಾಕ್ಸ್ ಒಡೆದು ಅದರಲ್ಲಿದ್ದ ₹84,800/- ನಗದು ಹಣವನ್ನು ಕಳ್ಳರು ದೋಚಿರುವ ಘಟನೆ ನಡೆದಿದೆ. ಕಡಬ ಪಟ್ಟಣ ಪಂಚಾಯತ್ ಅಧ್ಯಕ್ಷೆ ತಮನ್ನಾ ಜಬೀನ್ (43) ಅವರ ಮನೆಯಲ್ಲಿ ಈ ಕಳವು ಸಂಭವಿಸಿದ್ದು, ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರೆ ತಮನ್ನಾ ಜಬೀನ್ ಅವರು ಕುಟುಂಬದೊಂದಿಗೆ ಕಡಬ ಅಡ್ಡಗದ್ದೆಯಲ್ಲಿರುವ ಗಂಡನ ಮನೆಯಲ್ಲಿ ವಾಸವಾಗಿದ್ದು, ಮಲಗುವ ಕೋಣೆಯ ಮರದ ಬಾಕ್ಸ್ನಲ್ಲಿ ಹಣ ಸಂಗ್ರಹಿಸಿಟ್ಟಿದ್ದರು. ಆಗಸ್ಟ್ 18 ರಂದು ಕಾರ್ಯಕ್ರಮ ನಿಮಿತ್ತ ಕುಟುಂಬ ಸಮೇತ ಉಡುಪಿಗೆ ತೆರಳಿ ಅಂದೇ ಮನೆಗೆ ಹಿಂತಿರುಗಿದ್ದರು. ಬಳಿಕ
Aug 281 min read


ಟಾರ್ಗೆಟ್ ಪೂರ್ಣಗೊಳಿಸಿಲ್ಲ ಎಂದು 200 ಬಸ್ಕಿ ಶಿಕ್ಷೆ: ತೀವ್ರ ಅನಾರೋಗ್ಯಕ್ಕೆ ತುತ್ತಾದ ಯುವ ಉದ್ಯೋಗಿ!
ಚೀನಾದ ಹ್ಯಾಂಗ್ಝೌನಲ್ಲಿರುವ ಖಾಸಗಿ ಸಾಲ ಒದಗಿಸುವ ಕಂಪನಿಯೊಂದರಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ನಿಗದಿತ ದೈನಂದಿನ ಕೆಲಸದ ಟಾರ್ಗೆಟ್ ಪೂರ್ಣಗೊಳಿಸಿಲ್ಲ ಎಂಬ ಕಾರಣಕ್ಕೆ ಮ್ಯಾನೇಜರ್ ನೀಡಿದ 200 ಸ್ಕ್ವಾಟ್ಸ್ (ಬಸ್ಕಿ) ಶಿಕ್ಷೆಯಿಂದಾಗಿ ಯಾಂಗ್ ಎಂಬ ಯುವ ಉದ್ಯೋಗಿ ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ. ಹಣಕಾಸು ಸಲಹೆಗಾರರಾಗಿದ್ದ ಯಾಂಗ್ ಜುಲೈ 28ರಂದು ಟಾರ್ಗೆಟ್ ತಲುಪಲು ವಿಫಲರಾಗಿದ್ದರು. ಮ್ಯಾನೇಜರ್ ದಂಡ ಅಥವಾ 200 ಬಸ್ಕಿ ಶಿಕ್ಷೆಯ ಷರತ್ತು ವಿಧಿಸಿದ್ದರಿಂದ, ಹಣವಿಲ್ಲದೆ ಯಾಂಗ್ ಬಸ್ಕಿ ಹೊಡೆದು ವಿಡಿಯೊ ಕಳುಹಿಸಿದ್ದರು. ಕೊನೆಯಲ್ಲಿ ಕುಸಿದುಬಿದ್ದ ಆಕೆಗೆ ತೀವ್ರ ಕಾಲುನೋವು ಕಾಣಿ
Aug 271 min read


ನೇಪಾಳ ಪ್ರವಾಹ: ಬಲಿಯಾದವರ ಸಂಖ್ಯೆ 270ಕ್ಕೆ ಏರಿಕೆ, 288 ಭಾರತೀಯರು ನಾಪತ್ತೆ
ನೇಪಾಳದಲ್ಲಿ ಸಂಭವಿಸಿದ ದಿಢೀರ್ ಪ್ರವಾಹಕ್ಕೆ ಮಡಿದವರ ಸಂಖ್ಯೆ 270 ದಾಟಿದೆ. ಅಲ್ಲಿಗೆ ತೆರಳಿದ್ದ 288 ಭಾರತೀಯ ಪ್ರಜೆಗಳು ಪ್ರಸ್ತುತ ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಖಚಿತಪಡಿಸಿದೆ. ಪರಿಸ್ಥಿತಿಯ ಮೇಲ್ವಿಚಾರಣೆ ಹಾಗೂ ಸಂತ್ರಸ್ತರಿಗೆ ನೆರವಾಗಲು ದೆಹಲಿ ಮತ್ತು ಕಠ್ಮಂಡುವಿನಲ್ಲಿ ವಿಶೇಷ ಕಂಟ್ರೋಲ್ ರೂಮ್ಗಳನ್ನು ಸ್ಥಾಪಿಸಲಾಗಿದೆ. ಪ್ರವಾಹ ಪೀಡಿತ ಪ್ರದೇಶಗಳಿಂದ ತಮಿಳುನಾಡಿನ 21 ಭಾರತೀಯರನ್ನು ಯಶಸ್ವಿಯಾಗಿ ರಕ್ಷಿಸಿ ವಾಪಸ್ ಕರೆತರಲಾಗುತ್ತಿದೆ. ಇತ್ತ ಚೀನಾ ಗಡಿಯ ಟಿಬೆಟ್ ಭಾಗದಲ್ಲಿ ಸುಮಾರು 200 ಕೈಲಾಸ ಮಾನಸಸರೋವರ ಯಾತ್ರಿಕರು ಸಿಲುಕಿಕೊಂಡಿದ್ದು,
Aug 271 min read


ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಹಾಗೂ ಪ್ರತಿಭಾ ಪುರಸ್ಕಾರ
ಬೆಳಂದೂರು: ಸರಕಾರಿ ಪ್ರಥಮ ದರ್ಜೆ ಕಾಲೇಜು, ಬೆಳಂದೂರು ವತಿಯಿಂದ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಸ್ವಾಗತ, ಶೈಕ್ಷಣಿಕ ಚಟುವಟಿಕೆಗಳ ಉದ್ಘಾಟನೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕಾಲೇಜಿನಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಶ್ರೀ ರಾಘವ ಅವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಪದ್ಮನಾಭ ಕೆ., ಪ್ರಾಂಶುಪಾಲರು, ಸರಕಾರಿ ಪ್ರಥಮ ದರ್ಜೆ ಕಾಲೇಜು, ಬೆಳ್ತಂಗಡಿ ಹಾಗೂ ಶ್ರೀ ವಚನ ಜಯರಾಮ್, ಅಧ್ಯಕ್ಷರು ವಿದ್ಯಾಭಿಮಾನಿಗಳ ಸಂಘ ಹಾಗೂ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ವೇಣುಗೋಪಾಲ ಕಳುವಾಜೆ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಪ್ರಥಮ ವರ್ಷದ ವಿದ್ಯ
Aug 271 min read


ಕರ್ನಾಟಕದಲ್ಲಿ H1N1 ಮತ್ತು ಇನ್ಫ್ಲುಯೆನ್ಸ ಪ್ರಕರಣ ಹೆಚ್ಚಳ
ಕರ್ನಾಟಕದಲ್ಲಿ H1N1 ಹಾಗೂ ಇನ್ಫ್ಲುಯೆನ್ಸ ಪ್ರಕರಣಗಳು ಏರಿಕೆಯಾಗಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿದೆ. ಆದರೆ, ಮಳೆಗಾಲದಲ್ಲಿ ಈ ಸೋಂಕು ಹೆಚ್ಚುವುದು ಸಾಮಾನ್ಯವಾಗಿದ್ದು, ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದೆ ಎಂದು ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ. IHIP ದತ್ತಾಂಶದಂತೆ ಆಗಸ್ಟ್ 22ರವರೆಗೆ 4,212 ಪ್ರಕರಣಗಳು ವರದಿಯಾಗಿದ್ದು, ಇದು ನಿರೀಕ್ಷಿತ ಕಾಲೋಚಿತ ಮಾದರಿಯಲ್ಲೇ ಇದೆ. ಆರೋಗ್ಯ ಸಚಿವ ಯು.ಟಿ. ಖಾದರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, ಅಗತ್ಯ ಔಷಧಿಗಳು ಹಾಗೂ ವೈದ್ಯಕೀಯ ಮೂಲಸೌಕರ್ಯಗಳ ದಾಸ್ತಾನು ಸಮರ್ಪಕವಾಗಿದೆ ಎಂದು ತಿಳಿಸಲಾಗಿದೆ. ಸಾರ್ವಜನಿಕರು ಭಯಪಡದೆ ಕೆಮ್ಮುವಾಗ ಬಾಯಿ ಮು
Aug 271 min read


ದಸರಾಗೆ 'ಗಜಪಯಣ' ಚಾಲನೆ: ಈ ಬಾರಿ ಸಾಂಪ್ರದಾಯಿಕ ಕಂಬಳ ಸಂಭ್ರಮ
ಈ ಬಾರಿಯ ಮೈಸೂರು ದಸರಾ ಮಹೋತ್ಸವದಲ್ಲಿ ಕಂಬಳ ಕ್ರೀಡೆ ಆಯೋಜಿಸಲಾಗುವುದು ಎಂದು ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ. ವೀರನಹೊಸಹಳ್ಳಿಯಲ್ಲಿ ಸಾಂಪ್ರದಾಯಿಕ 'ಗಜಪಯಣ'ಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಸೂಚನೆಯಂತೆ ಈಗಾಗಲೇ ಗುರುತಿಸಲಾದ ಜಾಗದಲ್ಲಿ ಕಂಬಳ ನಡೆಯಲಿದೆ ಎಂದರು. ಇದೇ ವೇಳೆ ದಸರಾದ ಪ್ರಮುಖ ಆಕರ್ಷಣೆಯಾಗಿದ್ದ 'ಅಭಿಮನ್ಯು' ಆನೆಗೆ ವಿಶೇಷ ಪೂಜೆ ಸಲ್ಲಿಸಿ ಗೌರವದ ಬೀಳ್ಕೊಡುಗೆ ನೀಡಲಾಯಿತು. ಕಳೆದ 25 ವರ್ಷಗಳಿಂದ ದಸರಾದಲ್ಲಿ ಸಕ್ರಿಯವಾಗಿ ಭಾಗವಹಿಸಿ, 6 ಬಾರಿ ಯಶಸ್ವಿಯಾಗಿ ಚಿನ್ನದ ಅಂಬಾರಿ ಹೊತ್ತಿದ್ದ ಅಭಿಮನ್ಯು ಈ ಬಾರಿ ನಿವೃತ್ತಿ ಹೊಂದಿದ್ದಾ
Aug 271 min read


ಶಾಸ್ತ್ರಿ ಸರ್ಕಲ್ನಲ್ಲಿ ಗುಂಡಿ ಗಂಡಾಂತರ ಬಾಳೆಗಿಡ ನೆಟ್ಟರೂ ಎಚ್ಚೆತ್ತುಕೊಳ್ಳದ ಆಡಳಿತ: ಈ ‘ಮರಣಗುಂಡಿ’ಗೆ ಕಾಯಂ ಪರಿಹಾರ ಎಂದು?
ಸುಳ್ಯದ ಹೃದಯಭಾಗ ಶಾಸ್ತಿ ಸರ್ಕಲ್ನಲ್ಲಿ ಬೇಸಿಗೆಯಲ್ಲಿ ತೆಗೆದ ಪೈಪ್ಲೈನ್ ಗುಂಡಿ ಈಗ ಸಾರ್ವಜನಿಕರನ್ನು ಬಲಿ ಪಡೆಯಲು ಕಾದಿದೆ. ಆಟೋ ಚಾಲಕರು ಬಾಳೆಗಿಡ ನೆಟ್ಟು ಮೂರು ಬಾರಿ ಪ್ರತಿಭಟಿಸಿದರೂ, ಆಡಳಿತ ವರ್ಗದ ‘ಕಣ್ಣೊರೆಸುವ ತಂತ್ರ’ ಬರೀ ಜಲ್ಲಿಕಲ್ಲು ಹಾಕುವುದಕ್ಕಷ್ಟೇ ಸೀಮಿತವಾಗಿದೆ. ಮಳೆಗೆ ಕಲ್ಲು ಕೊಚ್ಚಿಹೋಗಿ ವಾಹನ ಸವಾರರು ಅಡ್ಡಬಿದ್ದು ಮೂಳೆ ಮುರಿದುಕೊಳ್ಳುವ ಭೀತಿಯಲ್ಲಿದ್ದಾರೆ. ಅಷ್ಟೇ ಏಕೆ, ಕೆಲವು ದಿನಗಳ ಹಿಂದೆಯಷ್ಟೇ ಆಂಬುಲೆನ್ಸ್ ಒಂದಕ್ಕೆ ಈ ಗುಂಡಿಯಿಂದಾಗಿ ಪಲ್ಟಿಯಾಗುವ ಪರಿಸ್ಥಿತಿ ಎದುರಾಗಿತ್ತು! ಅದೃಷ್ಟವಶಾತ್ ದೊಡ್ಡ ಅನಾಹುತ ತಪ್ಪಿದೆ. ರಸ್ತೆ ದುರಸ್ತಿ ಮಾಡಲು ಇನ್ನೆಷ್ಟು ಬ
Aug 271 min read
Archive
bottom of page



