top of page
News Articles
Sathyapatha News Plus


ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್
ಭಾರತದಲ್ಲಿ ಮರಣದಂಡನೆ ಶಿಕ್ಷೆಯನ್ನು ಜಾರಿಗೊಳಿಸಲು ಪ್ರಸ್ತುತ ಚಾಲ್ತಿಯಲ್ಲಿರುವ ‘ಗಲ್ಲಿಗೇರಿಸುವ’ ಪದ್ಧತಿಯನ್ನೇ ಮುಂದುವರಿಸಲು ಸುಪ್ರೀಂ ಕೋರ್ಟ್ ನಿರ್ಧರಿಸಿದೆ. ಗಲ್ಲಿಗೇರಿಸುವ ಬದಲಿಗೆ ಮಾರಣಾಂತಿಕ ಇಂಜೆಕ್ಷನ್ ಅಥವಾ ಗುಂಡಿಕ್ಕುವಿಕೆಯಂತಹ ಕಡಿಮೆ ನೋವಿನ ವಿಧಾನಗಳನ್ನು ಬಳಸಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನ್ಯಾಯಾಲಯವು ವಜಾಗೊಳಿಸಿದೆ. ವಕೀಲ ರಿಷಿ ಮಲ್ಹೋತ್ರಾ ಅವರು ಸಲ್ಲಿಸಿದ್ದ ಈ ಅರ್ಜಿಯಲ್ಲಿ, ಗಲ್ಲಿಗೇರಿಸುವಿಕೆಯು ಅತ್ಯಂತ ಕ್ರೂರ ಹಾಗೂ ನೋವಿನಿಂದ ಕೂಡಿದ್ದು, ವ್ಯಕ್ತಿಯ ಘನತೆಗೆ ಕುಂದು ತರುತ್ತದೆ ಎಂದು ವಾದಿಸಿದ್ದರು. ಅಲ್ಲದೆ, ಗ್ಯಾಸ್ ಚೇಂಬರ
Aug 181 min read


ವಸತಿ ರಹಿತರಿಗೆ ಗುಡ್ನ್ಯೂಸ್: ಪ್ರತಿ ಜಿಲ್ಲೆಯಲ್ಲಿ 50 ಸಾವಿರ ನಿವೇಶನ ಹಂಚಿಕೆಗೆ ಸರ್ಕಾರ ಸಿದ್ಧತೆ
ಬೆಂಗಳೂರು: ರಾಜ್ಯದ ನಿವೇಶನ ಹಾಗೂ ವಸತಿ ರಹಿತರಿಗೆ ನಿವೇಶನ ಒದಗಿಸುವ ಚುನಾವಣಾ ಪ್ರಣಾಳಿಕೆಯ ಭರವಸೆಯನ್ನು ಈಡೇರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ರಾಜ್ಯದ ಪ್ರತಿ ಜಿಲ್ಲೆಯಲ್ಲಿ ತಲಾ 50 ಸಾವಿರ ನಿವೇಶನಗಳನ್ನು ಹಂಚಿಕೆ ಮಾಡಲು ಸರ್ಕಾರ ಉದ್ದೇಶಿಸಿದ್ದು, ನಿವೇಶನಗಳ ರಚನೆಗೆ ಅಗತ್ಯ ಕ್ರಮಗಳನ್ನು ತುರ್ತಾಗಿ ಕೈಗೊಳ್ಳುವಂತೆ ಸೂಚಿಸಿದೆ. ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರು ಈ ಸಂಬಂಧ ಕಂದಾಯ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗೆ ಟಿಪ್ಪಣಿ ಮೂಲಕ ನಿರ್ದೇಶನ ನೀಡಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ 30×40, ನಗರದಲ್ಲಿ 20×30 ಅಡಿ ನಿವೇಶನ ಸರ್ಕಾರದ
Aug 181 min read


Fancy Number Auction: ವಾಹನಗಳ ಫ್ಯಾನ್ಸಿ ನಂಬರ್ ಹರಾಜಿನಿಂದ ಸಾರಿಗೆ ಇಲಾಖೆಗೆ ₹118.14 ಕೋಟಿ ಆದಾಯ
ಬೆಂಗಳೂರು: ವಾಹನಗಳ ನೋಂದಣಿ ಸಂಖ್ಯೆ ಇದೀಗ ಕೇವಲ ವಾಹನದ ಗುರುತಾಗಿ ಉಳಿದಿಲ್ಲ. ಪ್ರತಿಷ್ಠೆ, ಅದೃಷ್ಟ ಹಾಗೂ ವೈಯಕ್ತಿಕ ಗುರುತಿನ ಸಂಕೇತವಾಗಿಯೂ ಫ್ಯಾನ್ಸಿ ನಂಬರ್ಗಳಿಗೆ ಬೇಡಿಕೆ ಹೆಚ್ಚಾಗಿದೆ. ರಾಜಕಾರಣಿಗಳು, ಚಲನಚಿತ್ರರಂಗದ ಗಣ್ಯರು, ಉದ್ಯಮಿಗಳು ಹಾಗೂ ಐಷಾರಾಮಿ ಕಾರು ಮಾಲೀಕರು ತಮ್ಮಿಷ್ಟದ ನೋಂದಣಿ ಸಂಖ್ಯೆ ಪಡೆಯಲು ಪೈಪೋಟಿ ನಡೆಸುತ್ತಿರುವ ಪರಿಣಾಮ ಸಾರಿಗೆ ಇಲಾಖೆಗೆ ಭರ್ಜರಿ ಆದಾಯ ಹರಿದುಬಂದಿದೆ. 2025-26ನೇ ಸಾಲಿನಲ್ಲಿ ಪ್ರೀಮಿಯಂ ನೋಂದಣಿ ಸಂಖ್ಯೆಗಳ ಇ-ಹರಾಜಿನ ಮೂಲಕ ಸಾರಿಗೆ ಇಲಾಖೆ ₹118.14 ಕೋಟಿ ತೆರಿಗೆಯೇತರ ಆದಾಯ ಗಳಿಸಿದೆ. ಕಳೆದ ಐದು ವರ್ಷಗಳಲ್ಲೇ ಇದು ಗರಿಷ್ಠ ಆದಾಯವಾಗಿದೆ. ಐ
Aug 181 min read


ರೈಲ್ವೆಯಲ್ಲಿ 3,993 ಹುದ್ದೆಗಳಿಗೆ ಭರ್ಜರಿ ನೇಮಕಾತಿ: ಸೆ.13ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ
ರೈಲ್ವೆ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಮಹತ್ವದ ಅವಕಾಶ ದೊರೆತಿದೆ. ಭಾರತೀಯ ರೈಲ್ವೆಯಲ್ಲಿ ಜೂನಿಯರ್ ಎಂಜಿನಿಯರ್ (JE) ಹಾಗೂ ಡಿಪೋ ಮೆಟೀರಿಯಲ್ ಸೂಪರಿಂಟೆಂಡೆಂಟ್ (DMS) ಸೇರಿದಂತೆ ಒಟ್ಟು 3,993 ಹುದ್ದೆಗಳ ನೇಮಕಾತಿಗೆ ರೈಲ್ವೆ ನೇಮಕಾತಿ ಮಂಡಳಿ (RRB) ಅಧಿಸೂಚನೆ ಹೊರಡಿಸಿದೆ. ದೇಶದ ವಿವಿಧ ರೈಲ್ವೆ ವಲಯಗಳು, RRBಗಳು ಹಾಗೂ ಉತ್ಪಾದನಾ ಘಟಕಗಳ ವ್ಯಾಪ್ತಿಯಲ್ಲಿ ಈ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಸಿಕಂದರಾಬಾದ್ ರೈಲ್ವೆ ವಲಯದಲ್ಲಿ 110 ಹುದ್ದೆಗಳು ಲಭ್ಯವಿವೆ. ವಿದ್ಯಾರ್ಹತೆ ಏನು? ಅಭ್ಯರ್ಥಿಗಳು ಹುದ್ದೆಗೆ ಅನುಗುಣವಾಗಿ ಸಂಬಂಧಿತ ಎಂಜಿನಿಯರಿಂಗ್ ವಿಭಾಗದಲ್ಲಿ ಡಿಪ
Aug 171 min read


ನಾಗರಪಂಚಮಿ: ಆ.17ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಸಾರ್ವತ್ರಿಕ ರಜೆ
ಮಂಗಳೂರು: ನಾಗರಪಂಚಮಿ ಹಬ್ಬದ ಪ್ರಯುಕ್ತ ಆಗಸ್ಟ್ 17, ಸೋಮವಾರದಂದು ದಕ್ಷಿಣ ಕನ್ನಡ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳು ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳು ಹಾಗೂ ಸರ್ಕಾರಿ ಕಚೇರಿಗಳಿಗೆ ಸೋಮವಾರ ರಜೆ ಇರಲಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ. ನಾಗರಪಂಚಮಿ ಹಿನ್ನೆಲೆಯಲ್ಲಿ ಜಿಲ್ಲೆಯ ಜನತೆಗೆ ಅನುಕೂಲವಾಗುವಂತೆ ಈ ರಜೆ ಘೋಷಿಸಲಾಗಿದ್ದು, ಸಂಬಂಧಪಟ್ಟ ಎಲ್ಲಾ ಶಿಕ್ಷಣ ಸಂಸ್ಥೆಗಳು ಹಾಗೂ ಸರ್ಕಾರಿ ಕಚೇರಿಗಳು ರಜೆಯನ್ನು ಪಾಲಿಸುವಂತೆ ಸೂಚಿಸಲಾಗಿದೆ.
Aug 161 min read


ಮಂಗಳೂರಿನ KFC ಔಟ್ಲೆಟ್ನಲ್ಲಿ ಕೊಳೆತ ಚಿಕನ್ ಪತ್ತೆ: ಆರೋಗ್ಯಾಧಿಕಾರಿಗಳ ದಾಳಿ
ಮಂಗಳೂರು: ನಗರದ ಸಿಟಿ ಸೆಂಟರ್ ಮಾಲ್ನಲ್ಲಿರುವ KFC ಔಟ್ಲೆಟ್ನಲ್ಲಿ ಕೊಳೆತ ಚಿಕನ್ ನೀಡಲಾಗಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು, ಹಲವು ತಿಂಗಳ ಹಿಂದೆ ಪ್ಯಾಕ್ ಮಾಡಲಾಗಿದ್ದ ಚಿಕನ್ ಮಾಂಸ ಪತ್ತೆಯಾಗಿದೆ. ಮಾಜಿ ಮೇಯರ್ ಹಾಗೂ ಬಿಜೆಪಿ ನಾಯಕಿ ಕವಿತಾ ಸನಿಲ್ ಅವರು ತಮ್ಮ 10 ವರ್ಷದ ಮಗುವಿಗಾಗಿ ಸ್ವಿಗ್ಗಿ ಮೂಲಕ KFCಯ ‘ಫೆರಿ ಫೆರಿ’ ಚಿಕನ್ ಆರ್ಡರ್ ಮಾಡಿದ್ದರು ಎನ್ನಲಾಗಿದೆ. ಆಹಾರ ಸೇವಿಸುತ್ತಿದ್ದ ವೇಳೆ ಚಿಕನ್ ಕಪ್ಪು ಬಣ್ಣಕ್ಕೆ ತಿರುಗಿರುವುದು ಹಾಗೂ ದುರ್ವಾಸನೆ ಬರುತ್ತಿರುವುದು ಗಮನಕ್ಕೆ ಬಂದ ಹಿನ್ನೆಲೆಯಲ್ಲಿ, ಅವರು ಬಿಲ್ ಸಮೇತ ಸಿಟಿ ಸೆಂಟರ್
Aug 162 min read


ವಿವಾಹಿತ, ವಯಸ್ಕ ಮಕ್ಕಳಿಗೂ ವಿಮೆ ಪರಿಹಾರ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
ನವದೆಹಲಿ: ಅಪಘಾತದಲ್ಲಿ ಪೋಷಕರು ಮೃತಪಟ್ಟ ಸಂದರ್ಭದಲ್ಲಿ ಅವರ ವಯಸ್ಕ, ವಿವಾಹಿತ ಹಾಗೂ ಉದ್ಯೋಗಸ್ಥ ಮಕ್ಕಳು ಕೂಡ ವಿಮೆ ಪರಿಹಾರ ಪಡೆಯಲು ಅರ್ಹರು ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ನ್ಯಾಯಮೂರ್ತಿಗಳಾದ ಎನ್. ಕೋಟೀಶ್ವರ್ ಸಿಂಗ್ ಮತ್ತು ಎನ್.ವಿ. ಅಂಜಾರಿಯಾ ಅವರನ್ನೊಳಗೊಂಡ ಪೀಠ ಈ ತೀರ್ಪು ನೀಡಿದೆ. ಮೃತ ವ್ಯಕ್ತಿಯ ಮೇಲೆ ಸಂಪೂರ್ಣವಾಗಿ ಆರ್ಥಿಕವಾಗಿ ಅವಲಂಬಿತರಾಗಿರುವವರು ಮಾತ್ರವಲ್ಲದೆ, ಅವರ ಆಸ್ತಿಯಲ್ಲಿ ಕಾನೂನುಬದ್ಧ ಹಕ್ಕು ಹೊಂದಿರುವವರು ಹಾಗೂ ಮೃತರನ್ನು ಕಾನೂನುಬದ್ಧವಾಗಿ ಪ್ರತಿನಿಧಿಸುವವರೂ ಮೋಟಾರ್ ಅಪಘಾತ ಪರಿಹಾರಕ್ಕೆ ಅರ್ಜಿ ಸಲ್ಲಿಸಬಹುದು ಎಂದು ನ್ಯಾಯಪೀಠ ಸ್ಪಷ್ಟಪಡಿ
Aug 161 min read


ಚಾಮರಾಜನಗರದಲ್ಲಿ ಗುಂಡಿನ ಸದ್ದು: ಅರಣ್ಯ ಸಿಬ್ಬಂದಿ–ಶಂಕಿತ ಬೇಟೆಗಾರರ ನಡುವೆ ಗುಂಡಿನ ಚಕಮಕಿ; ಮೂವರು ಸಾವು, DRFO ಕಚೇರಿ ಧ್ವಂಸ
ಚಾಮರಾಜನಗರ, ಆ.15: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಹನೂರು ತಾಲೂಕಿನ ಶಾಗ್ಯ ಸಮೀಪದ ಹೊಳೆದಟ್ಟಿ ಅರಣ್ಯ ಪ್ರದೇಶದಲ್ಲಿ ಅರಣ್ಯ ಸಿಬ್ಬಂದಿ ಮತ್ತು ಶಂಕಿತ ಬೇಟೆಗಾರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಮೃತಪಟ್ಟಿರುವ ಘಟನೆ ಶನಿವಾರ ನಡೆದಿದೆ. ಘಟನೆಯ ಬಳಿಕ ಮೃತರ ಸಂಬಂಧಿಕರು ಹಾಗೂ ಗ್ರಾಮಸ್ಥರು ಆಕ್ರೋಶಗೊಂಡು ಶಾಗ್ಯದಲ್ಲಿರುವ DRFO ಕಚೇರಿಗೆ ನುಗ್ಗಿ ಪೀಠೋಪಕರಣಗಳನ್ನು ಧ್ವಂಸಗೊಳಿಸಿದ್ದಾರೆ. ಇದರಿಂದ ಪ್ರದೇಶದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಮೃತರನ್ನು ಹನೂರು ತಾಲೂಕಿನ ತೋಮಿಯರ್ಪಾಳ್ಯದ ನಿವಾಸಿಗಳಾದ ಕುಮಾರ್, ಆಂಥೋಣಿಸ್ವಾಮಿ ಹಾಗೂ ಪೀಟರ್ ಎಂದು ಗುರುತಿಸಲ
Aug 152 min read


ಕಾಂಗ್ರೆಸ್ ಕಚೇರಿಯಲ್ಲಿ ಪೂರ್ಣ ‘ವಂದೇ ಮಾತರಂ’ ಗಾಯನ; ವೈರಲ್ ವಿಡಿಯೊ ಕುರಿತು ಹೊಸ ಚರ್ಚೆ
ನವದೆಹಲಿ: ಭಾರತದ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ನವದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿ ‘ಇಂದಿರಾ ಗಾಂಧಿ ಭವನ’ದಲ್ಲಿ ಪೂರ್ಣ ‘ವಂದೇ ಮಾತರಂ’ ಗಾಯನ ನಡೆದಿರುವುದು ರಾಜಕೀಯ ವಲಯದಲ್ಲಿ ಗಮನ ಸೆಳೆದಿದೆ. ರಾಷ್ಟ್ರೀಯ ಗೀತೆಗೆ ಸಂಬಂಧಿಸಿದಂತೆ ಕಳೆದ ಹಲವು ತಿಂಗಳಿಂದ ನಡೆಯುತ್ತಿರುವ ರಾಜಕೀಯ ಚರ್ಚೆಗೆ ಈ ಬೆಳವಣಿಗೆ ಮತ್ತೊಂದು ಆಯಾಮ ನೀಡಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಸೇರಿದಂತೆ ಹಲವು ನಾಯಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಈ ವೇಳೆ ‘ವಂದೇ ಮಾತರಂ’ನ ಆರು
Aug 151 min read


ಕೆಯ್ಯರಿನಲ್ಲಿ ಭೀಕರ ಅಪಘಾತ: KSRTC ಬಸ್–ಬೈಕ್ ಮುಖಾಮುಖಿ ಡಿಕ್ಕಿ, ಸವಾರ ಸ್ಥಳದಲ್ಲೇ ಮೃತ್ಯು
ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ ನೆಲ್ಲಿಗುರಿ ಬಳಿ ಇಂದು (ಆ.15) KSRTC ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಾಡಾವು ಕಟ್ಟೆಯಿಂದ ಸವಣೂರು ಕಡೆಗೆ ತೆರಳುತ್ತಿದ್ದ KSRTC ಬಸ್ ಹಾಗೂ ಸವಣೂರಿನಿಂದ ಪುತ್ತೂರು ಕಡೆಗೆ ಸಾಗುತ್ತಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅಪಘಾತದ ತೀವ್ರತೆಗೆ ಬೈಕ್ ಸವಾರ ಕುಮಾರಮಂಗಿಲ ಸಮೀಪದ ಬಂಬಿಲ ನಿವಾಸಿ ಅಭಿಲಾಷ್ (24) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯ ಬಳಿಕ ಸ್ಥಳದಲ್ಲಿ ಜನರು ಜಮಾಯಿಸಿದ್ದು, ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಮೃತರು ತಂದೆ, ತಾಯಿ ಹಾಗೂ ಅಣ್
Aug 151 min read


ಸಪ್ತ ಸಿಂಧು: 2047ರ ವಿಕಸಿತ ಭಾರತಕ್ಕೆ ಪ್ರಧಾನಿ ಮೋದಿ ಘೋಷಿಸಿದ 7 ಮಹಾಶಕ್ತಿಗಳು
ನವದೆಹಲಿ: ಭಾರತದ 80ನೇ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ರೂಪಿಸುವ ಮಹತ್ವಾಕಾಂಕ್ಷೆಯ ಗುರಿಯನ್ನು ಮುಂದಿಟ್ಟಿದ್ದಾರೆ. ಕೆಂಪುಕೋಟೆಯಿಂದ ದೇಶವನ್ನುದ್ದೇಶಿಸಿ ಮಾತನಾಡಿದ ಅವರು, ಭಾರತದ ಸಮಗ್ರ ಅಭಿವೃದ್ಧಿಗೆ “ಸಪ್ತ ಸಿಂಧು” ಪರಿಕಲ್ಪನೆಯಡಿ ಏಳು ಪ್ರಮುಖ ಶಕ್ತಿಕ್ಷೇತ್ರಗಳಿಗೆ ಒತ್ತು ನೀಡಬೇಕೆಂದು ಕರೆ ನೀಡಿದ್ದಾರೆ. ಉತ್ಪಾದನೆ, ಕೃಷಿ, ತಂತ್ರಜ್ಞಾನ, ಮೂಲಸೌಕರ್ಯ, ರಕ್ಷಣಾ ಕ್ಷೇತ್ರ, ಹಸಿರು ಮತ್ತು ನೀಲಿ ಆರ್ಥಿಕತೆ ಹಾಗೂ ಭಾರತದ ಸಾಫ್ಟ್ ಪವರ್—ಈ ಏಳು ಕ್ಷೇತ್ರಗಳು 2047ರ ವಿಕಸಿತ ಭಾರತದ
Aug 152 min read


ಬಂಟ್ವಾಳದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹4.90 ಲಕ್ಷ ಮೌಲ್ಯದ ಎಂ.ಡಿ.ಎಂ.ಎ, ಗಾಂಜಾ, ಕಾರು–ಮೊಬೈಲ್ಗಳು ವಶ
ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸರು ನಡೆಸಿದ ಭರ್ಜರಿ ಕಾರ್ಯಾಚರಣೆಯಲ್ಲಿ ನಿಷೇಧಿತ ಮಾದಕ ವಸ್ತುಗಳಾದ ಎಂ.ಡಿ.ಎಂ.ಎ ಹಾಗೂ ಗಾಂಜಾ ಸೇರಿದಂತೆ ಒಟ್ಟು ₹4.90 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದು, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಆಗಸ್ಟ್ 12ರಂದು ಬಂಟ್ವಾಳ ಕಾವಳಪಡೂರು ವ್ಯಾಪ್ತಿಯಲ್ಲಿ ಬಂಟ್ವಾಳ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕ ಯಶ್ ಕುಮಾರ್ ಶರ್ಮಾ, ಐಪಿಎಸ್ ಅವರ ನೇತೃತ್ವದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದರು. ದಾಳಿಯ ವೇಳೆ ಸುಮಾರು ₹2.25 ಲಕ್ಷ ಮೌಲ್ಯದ 22.57 ಗ್ರಾಂ ಎಂ.ಡಿ.ಎಂ.ಎ, 30.34 ಗ್ರಾಂ ಗಾಂಜಾ, ಮಾದಕ ವಸ್ತುಗಳ ಸಾಗಾಟಕ್ಕೆ ಬಳಸಲಾಗುತ್ತಿದ್ದ ಕಾರ
Aug 141 min read


ರಾಜ್ಯದಲ್ಲಿ ಗುಟ್ಕಾ–ಪಾನ್ ಮಸಾಲಾ ನಿಷೇಧ ಆದೇಶಕ್ಕೆ ಬ್ರೇಕ್: ಎರಡೇ ದಿನಕ್ಕೆ ವಾಪಸ್ ಪಡೆಯಲು ಸಿಎಂ ಸೂಚನೆ
ಬೆಂಗಳೂರು: ರಾಜ್ಯದಲ್ಲಿ ಗುಟ್ಕಾ ಹಾಗೂ ತಂಬಾಕು ಅಥವಾ ನಿಕೋಟಿನ್ ಒಳಗೊಂಡ ಪಾನ್ ಮಸಾಲಾ ಉತ್ಪನ್ನಗಳ ಮೇಲೆ ಹೇರಲಾಗಿದ್ದ ಒಂದು ವರ್ಷದ ನಿಷೇಧ ಆದೇಶವನ್ನು ಇದೀಗ ವಾಪಸ್ ಪಡೆಯಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ವರದಿಯಾಗಿದೆ. ಕೆಲವೇ ದಿನಗಳ ಹಿಂದೆ ಆಹಾರ ಸುರಕ್ಷತಾ ಆಯುಕ್ತರು ರಾಜ್ಯಾದ್ಯಂತ ತಂಬಾಕು ಹಾಗೂ ನಿಕೋಟಿನ್ ಒಳಗೊಂಡ ಗುಟ್ಕಾ ಮತ್ತು ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ, ದಾಸ್ತಾನು, ವಿತರಣೆ, ಸಾಗಣೆ ಹಾಗೂ ಮಾರಾಟವನ್ನು ಒಂದು ವರ್ಷದ ಅವಧಿಗೆ ನಿಷೇಧಿಸಿ ಆದೇಶ ಹೊರಡಿಸಿದ್ದರು. ಆದರೆ, ಈ ಆದೇಶವನ್ನು ತಮ್ಮ ಗಮನಕ್ಕೆ ತರದೆ ಹೊರಡಿಸಲಾಗಿ
Aug 141 min read


ಬಂಟ್ವಾಳದಲ್ಲಿ ಸಮಯಪ್ರಜ್ಞೆ ಮೆರೆದ 5ನೇ ತರಗತಿ ಬಾಲಕ: ಅಡುಗೆ ಸಿಬ್ಬಂದಿಯ ಕೈ ಉಳಿಸಿದ ಮನ್ವಿತ್ಗೆ ಸಿಎಂ ಡಿಕೆಶಿ ಮೆಚ್ಚುಗೆ
ಬಂಟ್ವಾಳ: ವಿದ್ಯುತ್ ಚಾಲಿತ ಕಾಯಿ ತುರಿಯುವ ಯಂತ್ರದಲ್ಲಿ ಅಕ್ಷರ ದಾಸೋಹ ಸಿಬ್ಬಂದಿಯ ಕೈಬೆರಳು ಸಿಲುಕಿಕೊಂಡ ವೇಳೆ, ಸಮಯಪ್ರಜ್ಞೆ ಮೆರೆದ 5ನೇ ತರಗತಿ ವಿದ್ಯಾರ್ಥಿಯೊಬ್ಬ ವಿದ್ಯುತ್ ಸಂಪರ್ಕ ಕಡಿತಗೊಳಿಸಿ ಸಂಭವಿಸಬಹುದಿದ್ದ ಭಾರೀ ಅನಾಹುತವನ್ನು ತಪ್ಪಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನರಿಕೊಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಶಾಲೆಯ ಅಡುಗೆ ಸಿಬ್ಬಂದಿಯೊಬ್ಬರು ವಿದ್ಯುತ್ ಚಾಲಿತ ಯಂತ್ರದಲ್ಲಿ ತೆಂಗಿನಕಾಯಿ ತುರಿಯುತ್ತಿದ್ದ ವೇಳೆ ಆಕಸ್ಮಿಕವಾಗಿ ಅವರ ಕೈಬೆರಳು ಯಂತ್ರದೊಳಗೆ ಸಿಲುಕಿಕೊಂಡಿದೆ. ನೋವಿನಿಂದ ಅವರು ಕಿರುಚಿಕೊಂಡಾಗ ಪರಿಸ್ಥಿತಿಯ ಗಂಭೀರತೆಯನ
Aug 141 min read


ಹಾಸ್ಟೆಲ್–ಪಿಜಿಗಳ ಕಳಪೆ ಆಹಾರಕ್ಕೆ ಬ್ರೇಕ್: ಕಠಿಣ ಕ್ರಮಕ್ಕೆ ಯು.ಟಿ. ಖಾದರ್ ಖಡಕ್ ವಾರ್ನಿಂಗ್!
ಬೆಂಗಳೂರು, ಆ.13: ಹೋಟೆಲ್ಗಳಲ್ಲಿ ಆಹಾರದ ಗುಣಮಟ್ಟ ಹಾಗೂ ಸ್ವಚ್ಛತೆ ಪರಿಶೀಲನೆ ನಡೆಯುತ್ತಿರುವ ಬೆನ್ನಲ್ಲೇ, ರಾಜ್ಯದ ಹಾಸ್ಟೆಲ್ಗಳು, ಪಿಜಿಗಳು ಹಾಗೂ ಕ್ಯಾಂಟೀನ್ಗಳಲ್ಲಿನ ಆಹಾರ ವ್ಯವಸ್ಥೆಯ ಮೇಲೂ ಆರೋಗ್ಯ ಇಲಾಖೆ ನಿಗಾ ವಹಿಸಲು ಮುಂದಾಗಿದೆ. ರಾಜ್ಯದ ವಿವಿಧೆಡೆ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ, ಖಾಸಗಿ ಹಾಗೂ ಸಹಕಾರಿ ಹಾಸ್ಟೆಲ್ಗಳಲ್ಲಿ ಆಹಾರ ತಯಾರಿಕೆ ಮತ್ತು ಪೂರೈಕೆ ವ್ಯವಸ್ಥೆಯನ್ನು ಪರಿಶೀಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಆಹಾರದ ಗುಣಮಟ್ಟ, ಅಡುಗೆಮನೆಯ ಸ್ವಚ್ಛತೆ ಹಾಗೂ ಆಹಾರ ಪದಾರ್ಥಗಳ ಸಂಗ್ರಹಣೆ ಸೇರಿದಂತೆ ಹಲವು ಅಂಶಗಳನ್ನು ತಪಾಸಣೆ ಮಾಡಲಾಗುತ್ತದೆ. ಪಿಜಿಗಳಲ್ಲಿಯೂ
Aug 131 min read


ಕಾಸರಗೋಡು: ಮದುವೆ ನಿಶ್ಚಯವಾಗಿದ್ದ ಯುವತಿ ಆತ್ಮಹತ್ಯೆ; ಆಘಾತ ತಾಳಲಾರದೆ ಭಾವಿ ಪತಿಯೂ ಆತ್ಮಹತ್ಯೆ
ಕಾಸರಗೋಡು: ಮದುವೆಯ ಸಂಭ್ರಮಕ್ಕೆ ಸಿದ್ಧವಾಗಬೇಕಿದ್ದ ಯುವ ಜೋಡಿಯ ಬದುಕು ದುರಂತದಲ್ಲಿ ಅಂತ್ಯಗೊಂಡಿದೆ. ಎಸ್ಬಿಐ ಉದ್ಯೋಗಿಯಾಗಿದ್ದ ಯುವತಿ ಅನುಶ್ರೀ ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲೇ, ಆಕೆಯ ಭಾವಿ ಪತಿ ಅಮಲ್ ಕೂಡ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಅನುಶ್ರೀ ಹುಣಸೂರಿನ ಎಸ್ಬಿಐ ಶಾಖೆಯಲ್ಲಿ, ಅಮಲ್ ಎರ್ನಾಕುಳಂನ ಎಸ್ಬಿಐ ಶಾಖೆಯಲ್ಲಿ ಉದ್ಯೋಗಿಯಾಗಿದ್ದರು. ಕುಟುಂಬಸ್ಥರ ಒಪ್ಪಿಗೆಯೊಂದಿಗೆ ಮುಂದಿನ ವರ್ಷ ಡಿಸೆಂಬರ್ 26ರಂದು ಇವರ ವಿವಾಹ ನಿಗದಿಯಾಗಿತ್ತು. ಮಂಗಳವಾರ ಹುಣಸೂರಿನಲ್ಲಿದ್ದ ಅನುಶ್ರೀ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಸುದ್ದಿ ತಿಳಿದ ಬಳಿಕ ತೀವ್ರ ಮನನೊಂದ
Aug 131 min read


ಡಿಗ್ರಿ ಪಾಸಾದವರಿಗೆ ಸುವರ್ಣಾವಕಾಶ: ಕರ್ನಾಟಕ ಹೈಕೋರ್ಟ್ನಲ್ಲಿ SDA ಹುದ್ದೆಗಳ ನೇಮಕಾತಿ
ಬೆಂಗಳೂರು: ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಪದವೀಧರರಿಗೆ ಕರ್ನಾಟಕ ಹೈಕೋರ್ಟ್ ಸಿಹಿಸುದ್ದಿ ನೀಡಿದೆ. ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಖಾಲಿ ಇರುವ 20 ದ್ವಿತೀಯ ದರ್ಜೆ ಸಹಾಯಕ (SDA) ಹುದ್ದೆಗಳ ಭರ್ತಿಗೆ ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಆಗಸ್ಟ್ 13, 2026ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಸೆಪ್ಟೆಂಬರ್ 11, 2026 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ₹25,500ರಿಂದ ₹81,100ರವರೆಗೆ ವೇತನ ದೊರೆಯಲಿದೆ. ಹುದ್ದೆಗಳ ವಿವರ ಇಲಾಖೆ: ಕರ್ನಾಟಕ ಉಚ್ಚ ನ್ಯಾಯಾಲಯ ಹುದ್ದೆ: ದ್ವಿತೀಯ ದರ್ಜೆ ಸಹಾಯಕರು (SDA) ಒಟ್ಟು ಹುದ್ದೆಗಳು: 20 ಉಳ
Aug 132 min read


ಕರ್ನಾಟಕದಲ್ಲಿ 15,000 ಶಿಕ್ಷಕರ ನೇಮಕಾತಿ: ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ
ಬೆಂಗಳೂರು: ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಶಿಕ್ಷಣ ಇಲಾಖೆ ಭರ್ಜರಿ ಅವಕಾಶ ನೀಡಿದೆ. ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ 15,000 ಶಿಕ್ಷಕರ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಪ್ರಕಟಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಆಗಸ್ಟ್ 18, 2026ರಿಂದ ಸೆಪ್ಟೆಂಬರ್ 7, 2026ರವರೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ವಿವರ ಕಲ್ಯಾಣ ಕರ್ನಾಟಕ – 6,967 ಹುದ್ದೆಗಳು ಪದವೀಧರ ಪ್ರಾಥಮಿಕ ಶಿಕ್ಷಕರು (GPT): 3,228 ಪ್ರೌಢಶಾಲಾ ಸಹ ಶಿಕ್ಷಕರು (HSTR): 2,214 ಪ್ರಾಥಮಿಕ ಶಾಲಾ ಶಿಕ್ಷಕರು (PST): 800 ದೈಹಿಕ ಶಿಕ್ಷಣ ಶಿಕ್ಷಕರು: 425 ಗಣಕಯಂತ್ರ ವಿಜ
Aug 131 min read


K-SET 2026: ಪ್ರಾಧ್ಯಾಪಕರಾಗುವ ಕನಸು ಕಂಡವರಿಗೆ ಗುಡ್ ನ್ಯೂಸ್; ಅರ್ಜಿ ಆಹ್ವಾನಿಸಿದ KEA
ಬೆಂಗಳೂರು: ಸರ್ಕಾರಿ ಹಾಗೂ ಅನುದಾನಿತ ಕಾಲೇಜುಗಳಲ್ಲಿ ಸಹಾಯಕ ಪ್ರಾಧ್ಯಾಪಕರಾಗುವ ಕನಸು ಕಾಣುತ್ತಿರುವ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಗುಡ್ ನ್ಯೂಸ್ ನೀಡಿದೆ. ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆ (K-SET) 2026ಕ್ಕೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅರ್ಹ ಅಭ್ಯರ್ಥಿಗಳು ಸೆಪ್ಟೆಂಬರ್ 5ರೊಳಗೆ ಅರ್ಜಿ ಸಲ್ಲಿಸಬಹುದು. ಪ್ರಮುಖ ದಿನಾಂಕಗಳು ಅರ್ಜಿ ಸಲ್ಲಿಕೆ ಆರಂಭ: ಆಗಸ್ಟ್ 10, 2026 ಅರ್ಜಿ ಸಲ್ಲಿಸಲು ಕೊನೆಯ ದಿನ: ಸೆಪ್ಟೆಂಬರ್ 5, 2026 ಶುಲ್ಕ ಪಾವತಿಗೆ ಕೊನೆಯ ದಿನ: ಸೆಪ್ಟೆಂಬರ್ 6, 2026 ಪ್ರವೇಶ ಪತ್ರ ಬಿಡುಗಡೆ: ಅಕ್ಟೋಬರ್ 1, 2026ರಿಂದ K-SET ಪರ
Aug 121 min read


ಶಿರಾಡಿಘಾಟ್ ಮಾರ್ಗದಲ್ಲಿ ವಂದೇ ಭಾರತ್ ರೈಲಿನ ಯಶಸ್ವಿ ಪ್ರಾಯೋಗಿಕ ಸಂಚಾರ
ಬೆಂಗಳೂರು–ಮಂಗಳೂರು ಸಂಪರ್ಕಕ್ಕೆ ಹೊಸ ನಿರೀಕ್ಷೆ; ಸಕಲೇಶಪುರ–ಕುಕ್ಕೆ ಸುಬ್ರಹ್ಮಣ್ಯ ನಡುವೆ ಟ್ರಯಲ್ ರನ್ ಸಕಲೇಶಪುರ: ಬೆಂಗಳೂರು ಮತ್ತು ಮಂಗಳೂರು ನಡುವಿನ ವೇಗದ ರೈಲು ಸಂಪರ್ಕದ ನಿರೀಕ್ಷೆಯಲ್ಲಿದ್ದ ಪ್ರಯಾಣಿಕರಿಗೆ ಮಹತ್ವದ ಬೆಳವಣಿಗೆ ನಡೆದಿದೆ. ಅತ್ಯಾಧುನಿಕ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ಪ್ರಾಯೋಗಿಕ ಸಂಚಾರವು ಸಕಲೇಶಪುರದಿಂದ ದಕ್ಷಿಣ ಕನ್ನಡದ ಕುಕ್ಕೆ ಸುಬ್ರಹ್ಮಣ್ಯವರೆಗೆ ಯಶಸ್ವಿಯಾಗಿ ನಡೆದಿದೆ. ಅತ್ಯಂತ ಕಠಿಣ ಹಾಗೂ ತಿರುವುಗಳಿಂದ ಕೂಡಿರುವ ಶಿರಾಡಿಘಾಟ್ ರೈಲು ಮಾರ್ಗದಲ್ಲಿ ವಂದೇ ಭಾರತ್ ರೈಲು ಸಂಚರಿಸಿರುವುದು ಈ ಭಾಗದ ರೈಲು ಸಂಪರ್ಕದ ದೃಷ್ಟಿಯಿಂದ ಮಹತ್ವದ ಬೆಳವಣಿಗೆಯಾಗಿದೆ. ಟ್
Aug 121 min read
Archive
bottom of page



