top of page
News Articles
Sathyapatha News Plus


ವಿಮಾನದ ತುರ್ತು ಬಾಗಿಲು ತೆರೆಯಲು ಯತ್ನಿಸಿದ ಪ್ರಯಾಣಿಕ: ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಆತಂಕ
ಕೌಲಾಲಂಪುರದಿಂದ ಕೊಚ್ಚಿಗೆ ಆಗಮಿಸುತ್ತಿದ್ದ ಬಾಟಿಕ್ ಏರ್ ವಿಮಾನದಲ್ಲಿ ಪ್ರಯಾಣಿಕನೊಬ್ಬ ತುರ್ತು ನಿರ್ಗಮನ ದ್ವಾರ ತೆರೆಯಲು ಯತ್ನಿಸಿದ ಭೀಕರ ಘಟನೆ ನಡೆದಿದೆ. ವಿಮಾನವು ಲ್ಯಾಂಡಿಂಗ್ ಆಗುವ ಕೆಲವೇ ನಿಮಿಷಗಳ ಮೊದಲು ನಡೆದ ಈ ಕೃತ್ಯದಿಂದಾಗಿ ವಿಮಾನದಲ್ಲಿದ್ದ ಪ್ರಯಾಣಿಕರು ತೀವ್ರ ಭಯಭೀತರಾಗಿದ್ದರು. ಆರೋಪಿಯನ್ನು ಕೇರಳದ ಪಾಲಕ್ಕಾಡ್ ಜಿಲ್ಲೆಯ ಕೂತನಾಡ್ ನಿವಾಸಿ, 34 ವರ್ಷದ ಜಮ್ಶೀರ್ ಅಥಾನಿಕ್ಕಲ್ ಎಂದು ಗುರುತಿಸಲಾಗಿದೆ. ತುರ್ತು ಬಾಗಿಲನ್ನು ತೆರೆಯಲು ಯತ್ನಿಸಿದ ಈತನನ್ನು ತಡೆಯಲು ಬಂದ ಕ್ಯಾಬಿನ್ ಸಿಬ್ಬಂದಿ ಹಾಗೂ ಸಹ ಪ್ರಯಾಣಿಕರಿಗೆ ಈತ ಬೆದರಿಕೆ ಹಾಕಿದ್ದಾನೆ. ಬಳಿಕ ಎಲ್ಲರೂ ಸೇರಿ ಆತನನ್ನು
Aug 81 min read


ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ: ಪುತ್ತೂರು ಉಪವಿಭಾಗದ 4 ತಾಲೂಕುಗಳಲ್ಲಿ ಆ.8ರಂದು ಶಾಲಾ-ಕಾಲೇಜುಗಳಿಗೆ ರಜೆ
ಮಂಗಳೂರು, ಆ.7: ಭಾರತೀಯ ಹವಾಮಾನ ಇಲಾಖೆ (IMD) ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ನೀಡಿರುವ ಹವಾಮಾನ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಉಪವಿಭಾಗದಾದ್ಯಂತ ಮಳೆ ಮುಂದುವರಿದಿದೆ. ಇದೇ ಹವಾಮಾನ ಪರಿಸ್ಥಿತಿ ಮುಂದುವರಿಯುವ ಸಾಧ್ಯತೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಹಲವು ತುರ್ತು ಕ್ರಮಗಳನ್ನು ಕೈಗೊಂಡಿದೆ. ಪುತ್ತೂರು ಉಪವಿಭಾಗದ ತಹಶೀಲ್ದಾರರ ಮನವಿಯ ಮೇರೆಗೆ ಪುತ್ತೂರು, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕುಗಳ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ
Aug 71 min read


ಅಪ್ಪನ ರೂಪದಲ್ಲಿ ಬಂದ ಕ್ರೂರಿ..! ನಾಲ್ಕು ವರ್ಷದ ಮಗಳ ಮೇಲೆ ಅಮಾನವೀಯ ಕೃತ್ಯ
ಗಾಂಧೀನಗರ (ಗುಜರಾತ್): ಮಾನವೀಯತೆಯನ್ನೇ ಬೆಚ್ಚಿಬೀಳಿಸುವ ಘಟನೆ ಗುಜರಾತ್ನ ಗಾಂಧೀನಗರದಲ್ಲಿ ಬೆಳಕಿಗೆ ಬಂದಿದೆ. ಪತ್ನಿ ಮನೆ ಬಿಟ್ಟು ತವರು ಮನೆಗೆ ತೆರಳಿದ ಕೋಪದಲ್ಲಿ ಸ್ವಂತ ನಾಲ್ಕು ವರ್ಷದ ಮಗಳ ಮೇಲೆಯೇ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ 32 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಪ್ರಕಾರ, ಆರೋಪಿ ತನ್ನ ಮನೆಯಲ್ಲಿ ವಾಸವಾಗಿದ್ದ ಪತ್ನಿಯ ಸ್ನೇಹಿತೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದನು. ಆಕೆ ಒಬ್ಬಳೇ ಇದ್ದ ವೇಳೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪವೂ ಕೇಳಿಬಂದಿದೆ. ಈ ವಿಚಾರ ತಿಳಿದ ಬಳಿಕ ಪತಿ-ಪತ್ನಿ ನಡುವೆ ತೀವ್ರ ಜಗಳ ನಡೆದಿದ್ದು, ಮನನೊಂದ ಪತ್ನಿ ತನ್ನ ನಾಲ್ಕು
Aug 71 min read


ಕುಂದಾಪುರ ಶೂಟೌಟ್ ಬಳಿಕ ಉಡುಪಿಯಲ್ಲಿ ಮತ್ತೊಂದು ರಕ್ತಪಾತಕಾಂಗ್ರೆಸ್ ಮುಖಂಡ ಡೇವಿಡ್ ಡಿಸೋಜಾ ಗುಂಡಿನ ದಾಳಿಗೆ ಬಲಿ
ಉಡುಪಿ: ಕುಂದಾಪುರದಲ್ಲಿ ನಡೆದ ಶೂಟೌಟ್ ಘಟನೆ ಮಾಸುವ ಮುನ್ನವೇ, ಉಡುಪಿ ಜಿಲ್ಲೆಯಲ್ಲಿ ಮತ್ತೊಂದು ಭೀಕರ ಗುಂಡಿನ ದಾಳಿ ಸಂಭವಿಸಿದ್ದು, ಕಾಂಗ್ರೆಸ್ ಮುಖಂಡ ಡೇವಿಡ್ ಡಿಸೋಜಾ (ಪ್ರಿನ್ಸ್) ದುಷ್ಕರ್ಮಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದಾರೆ. ಈ ಘಟನೆಯಿಂದ ಕರಾವಳಿ ಭಾಗವೇ ಬೆಚ್ಚಿಬಿದ್ದಿದೆ. ಸ್ಥಳೀಯವಾಗಿ ಪ್ರಭಾವಿ ನಾಯಕನಾಗಿದ್ದ ಡೇವಿಡ್ ಡಿಸೋಜಾ ಅವರು ಮುದರಂಗಡಿ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷರಾಗಿದ್ದು, ಸಾರ್ವಜನಿಕ ಸೇವೆಯಲ್ಲಿ ಸಕ್ರಿಯರಾಗಿದ್ದರು. ಅಪರಿಚಿತರು ನಡೆಸಿದ ಗುಂಡಿನ ದಾಳಿಯಲ್ಲಿ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಶೂಟೌಟ್ಗೆ ನಿಖರ ಕಾರಣ ಇನ್ನಷ್ಟೇ ತಿಳಿದುಬ
Aug 71 min read


ವರ್ಕ್ ಫ್ರಂ ಹೋಂ' ಹೆಸರಲ್ಲಿ ಕೋಟ್ಯಂತರ ವಂಚನೆ: ಇನ್ಸ್ಟಾಗ್ರಾಂ ರೀಲ್ಸ್ ಮೂಲಕ ಜನರಿಗೆ ಬಲೆ ಬೀಸಿದ್ದ ದಂಪತಿ ಬಂಧನ
ಇನ್ಸ್ಟಾಗ್ರಾಂ ರೀಲ್ಸ್ ಮೂಲಕ ‘ವರ್ಕ್ ಫ್ರಂ ಹೋಂ’ ಹೆಸರಿನಲ್ಲಿ ಪ್ಯಾಕಿಂಗ್ ಕೆಲಸ ನೀಡುವುದಾಗಿ ನಂಬಿಸಿ ಸಾರ್ವಜನಿಕರಿಂದ ಕೋಟ್ಯಂತರ ರೂಪಾಯಿ ವಂಚನೆ ನಡೆಸಿದ್ದ ಆರೋಪದ ಮೇಲೆ ಕಿರಣ್ ಮತ್ತು ಆತನ ಪತ್ನಿ ಆರತಿ ಅವರನ್ನು ದೇವನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ‘ಕಾಳಿಕಾ ದೇವಿ ಎಂಟರ್ಪ್ರೈಸಸ್’ ಹೆಸರಿನಲ್ಲಿ ನಕಲಿ ಸಂಸ್ಥೆ ಸ್ಥಾಪಿಸಿ, ಮೇಣದ ಬತ್ತಿ, ಅಗರಬತ್ತಿ ಹಾಗೂ ಡ್ರೈ ಫ್ರೂಟ್ಸ್ ಪ್ಯಾಕಿಂಗ್ ಕೆಲಸವನ್ನು ಮನೆಬಾಗಿಲಿಗೆ ನೀಡುವುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಜಾಹೀರಾತು ಮಾಡುತ್ತಿದ್ದರು. ಕಚ್ಚಾ ವಸ್ತುಗಳ ಪ್ಯಾಕಿಂಗ್ ಕೆಲಸಕ್ಕಾಗಿ ₹1 ಲಕ್ಷ ಡೆಪಾಸಿಟ್ ಮಾಡಿದರೆ ಪ್ರತಿ ತಿಂಗಳು
Aug 71 min read


ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ ಉಡುಪಿಯ ಯುವತಿ ಆತ್ಮಹತ್ಯೆ
ಉಡುಪಿ, ಆ.7: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿಯೊಬ್ಬರು ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸ್ ಠಾಣೆ ವ್ಯಾಪ್ತಿಯ ಕಲ್ಮಾಡಿಯಲ್ಲಿರುವ ತಮ್ಮ ನಿವಾಸದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ. ಮೃತರನ್ನು ಕಲ್ಮಾಡಿ ನಿವಾಸಿ ಕೃತಿ ಬಂಗೇರಾ (27) ಎಂದು ಗುರುತಿಸಲಾಗಿದೆ. ಅವರು ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದು, ನಗರದ ಕಡಿಯಾಳಿ ಸಮೀಪದ ಖಾಸಗಿ ಹೋಟೆಲ್ನಲ್ಲಿ ಕೆಲಸ ಮಾಡುತ್ತಿದ್ದರು. ಕಳೆದ ಕೆಲವು ತಿಂಗಳಿಂದ ಅವರು ಕೆಲಸಕ್ಕೆ ತೆರಳದೆ ಮನೆಯಲ್ಲೇ ಇದ್ದರು ಎಂದು ತಿಳಿದುಬಂದಿದೆ. ಘಟನೆಯ ದಿನ ತಾಯಿ ಕೆಲಸದ ನಿಮಿತ್ತ ಹೊರಗೆ ತೆರಳಿ
Aug 71 min read


ಬಿ.ಸಿ.ರೋಡ್ನಲ್ಲಿ ಭೀಕರ ಅಪಘಾತ: ಟಿಪ್ಪರ್ ಡಿಕ್ಕಿಯಾಗಿ ಸ್ಕೂಟರ್ ಸಹಸವಾರ ಸಾವು, ಸವಾರನಿಗೆ ತೀವ್ರ ಗಾಯ
ಬಂಟ್ವಾಳದ ಬಿ.ಸಿ.ರೋಡ್ನ ಎನ್.ಜಿ. ಸರ್ಕಲ್ನಲ್ಲಿ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸಹಸವಾರ ಯಶ್ವಂತ್ ಕುಲಾಲ್ ಮೃತಪಟ್ಟಿದ್ದು, ಸವಾರ ದಯಾನಂದ ಗಂಭೀರವಾಗಿ ಗಾಯಗೊಂಡಿದ್ದಾರೆ. ಕಲ್ಲಡ್ಕ ಕಡೆಯಿಂದ ಲೊರೆ ಕಡೆಗೆ ಅತಿವೇಗ ಮತ್ತು ಅಜಾಗರೂಕತೆಯಿಂದ ಧಾವಿಸಿ ಬಂದ ಟಿಪ್ಪರ್ ಲಾರಿಯು, ಮಂಗಳೂರಿನಿಂದ ಧರ್ಮಸ್ಥಳದ ಕಡೆಗೆ ತೆರಳುತ್ತಿದ್ದ ಸ್ಕೂಟರ್ಗೆ ನೇರವಾಗಿ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಸ್ಕೂಟರ್ನಲ್ಲಿದ್ದ ಇಬ್ಬರೂ ರಸ್ತೆಗೆ ಬಿದ್ದು ತೀವ್ರ ಗಾಯಗೊಂಡಿದ್ದರು. ಗಾಯಾಳುಗಳನ್ನು ತಕ್ಷಣವೇ ಮಂಗಳೂರಿನ ಜಿಲ್ಲಾ ಸರ್ಕಾರಿ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಯಿ
Aug 71 min read


ವಿಟ್ಲ : ಅಡ್ಯನಡ್ಕದಲ್ಲಿ ಆಕಸ್ಮಿಕ ದುರಂತ: ಕೆರೆಗೆ ಬಿದ್ದು 32 ವರ್ಷದ ವ್ಯಕ್ತಿ ಸಾವು
ವಿಟ್ಲ, ಆ.7: ವಿಟ್ಲ ಸಮೀಪದ ಅಡ್ಯನಡ್ಕ ಗ್ರಾಮದ ಮನಿಮುಂಡ ಪ್ರದೇಶದಲ್ಲಿ ಕಾಲು ಜಾರಿ ಕೆರೆಗೆ ಬಿದ್ದ ಪರಿಣಾಮ ಕೂಲಿ ಕಾರ್ಮಿಕನೋರ್ವ ಮೃತಪಟ್ಟ ದುರ್ಘಟನೆ ನಡೆದಿದೆ. ಮೃತರನ್ನು ದಿನೇಶ್ ನಾಯ್ಕ (32) ಎಂದು ಗುರುತಿಸಲಾಗಿದೆ. ಅವರು ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದು, ಪತ್ನಿ ಹಾಗೂ ತಂದೆ-ತಾಯಿಯನ್ನು ಅಗಲಿದ್ದಾರೆ. ಲಭ್ಯವಾದ ಮಾಹಿತಿಯಂತೆ, ದಿನೇಶ್ ಅವರು ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದಿದ್ದು, ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮು
Aug 71 min read


ರಾಷ್ಟ್ರೀಯ ಹಸ್ತಮಗ್ಗ ದಿನ: ಕೈಮಗ್ಗ ಉತ್ಪನ್ನಗಳೊಂದಿಗೆ GRWM ವಿಡಿಯೋ ಹಂಚಿಕೊಳ್ಳಿ – ಪ್ರಧಾನಿ ಮೋದಿ ಕರೆ
ನವದೆಹಲಿ, ಆ. 6: ಭಾರತದ ಸಮೃದ್ಧ ಹಸ್ತಮಗ್ಗ ಪರಂಪರೆಯನ್ನು ವಿಶ್ವದಾದ್ಯಂತ ಜನಪ್ರಿಯಗೊಳಿಸುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ವಿಶೇಷ ಕರೆ ನೀಡಿದ್ದಾರೆ. ಆಗಸ್ಟ್ 7ರಂದು ಆಚರಿಸಲಾಗುವ ರಾಷ್ಟ್ರೀಯ ಹಸ್ತಮಗ್ಗ ದಿನದ ಅಂಗವಾಗಿ ತಮ್ಮ ನೆಚ್ಚಿನ ಹಸ್ತಮಗ್ಗ ಉಡುಪುಗಳು ಮತ್ತು ಉತ್ಪನ್ನಗಳೊಂದಿಗೆ GRWM (Get Ready With Me) ಸೇರಿದಂತೆ ಸೃಜನಾತ್ಮಕ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವಂತೆ ಅವರು ಮನವಿ ಮಾಡಿದ್ದಾರೆ. ಜೊತೆಗೆ #NationalHandloomDay ಹ್ಯಾಶ್ಟ್ಯಾಗ್ ಬಳಸುವಂತೆ ಕರೆ ನೀಡಿದ್ದಾರೆ. ಸಾಮಾಜಿಕ ಜಾಲತಾಣ 'ಎಕ್ಸ್' ಮತ್ತು ಇನ್ಸ್ಟಾಗ್ರಾಂನಲ್ಲ
Aug 61 min read


ರೋಗವನ್ನು ಮೂಲದಿಂದ ನಿವಾರಿಸುವ ಸಾಮರ್ಥ್ಯ ಹೋಮಿಯೋಪತಿ ಔಷಧಿಗಿದೆ.-ಡಾ.ಶ್ರೀ ದೇವಿ ವೆಂಕಟಾಪುರ
ಮಂಗಳೂರು : ಯಾವುದೇ ಅಡ್ಡ ಪರಿಣಾಮವಿಲ್ಲದ; ರೋಗವನ್ನು ಮೂಲದಿಂದ ನಿವಾರಿಸುವ ಹೋಮಿಯೋಪತಿ ಔಷಧಿಗಳನ್ನು ಶಿಶುವಿನಿಂದ ಹಿಡಿದು ಎಲ್ಲಾ ವಯೋಮಾನದ ವ್ಯಕ್ತಿಗಳು ತಮ್ಮ ಇತರ ಔಷಧಿಯೊಂದಿಗೆ ಕೂಡಾ ಸೇವಿಸಬಹುದು ಎಂದು ಹೋಮಿಯೋಪತಿ ತಜ್ಞರಾದ ಆಯುಷ್ ಇಲಾಖೆಯ ಡಾ.ಶ್ರೀ ದೇವಿ ವೆಂಕಟಾಪುರ ತಿಳಿಸಿದರು. ಅವರು ಯುವವಾಹಿನಿ (ರಿ.) ಕಂಕನಾಡಿ ಘಟಕದ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಆಯುಷ್ ಇಲಾಖೆಯ (ರಾಷ್ಟ್ರೀಯ ಆಯುಷ್ ಅಭಿಯಾನ ಯೋಜನೆಯಡಿ) ಸಹಯೋಗದೊಂದಿಗೆ ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ (KSTA) ಭವನ, ಗೋರಿಗುಡ್ಡದಲ್ಲಿ ನಡೆದ ಉಚಿತ ಆರೋಗ್ಯ ತಪಾಸಣೆ ಹಾಗೂ ಹೋಮಿಯೋಪತಿ ಚಿಕಿತ್ಸಾ ಶಿಬಿರದ ಕಾರ್ಯಕ
Aug 61 min read


ಸಕಲೇಶಪುರ–ಸುಬ್ರಹ್ಮಣ್ಯ ಘಾಟ್ನಲ್ಲಿ ವಂದೇ ಭಾರತ್ ಟ್ರಯಲ್ ರನ್ಗೆ ಸಿದ್ಧತೆ: ಆ.11ರಿಂದ ಸುರಕ್ಷತಾ ಪರೀಕ್ಷೆ ಆರಂಭ
ಬೆಂಗಳೂರು, ಆ.6: ಬಹುನಿರೀಕ್ಷಿತ ಬೆಂಗಳೂರು–ಮಂಗಳೂರು ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸೇವೆ ಆರಂಭದತ್ತ ಮಹತ್ವದ ಹೆಜ್ಜೆ ಇಟ್ಟಿದ್ದು, ಆಗಸ್ಟ್ 11ರಿಂದ 20ರವರೆಗೆ ಪರೀಕ್ಷಾರ್ಥ ಸಂಚಾರ (ಟ್ರಯಲ್ ರನ್) ನಡೆಸಲು ರೈಲ್ವೆ ಇಲಾಖೆ ಸಿದ್ಧತೆ ಪೂರ್ಣಗೊಳಿಸಿದೆ. ಈ ಅವಧಿಯಲ್ಲಿ ರೈಲಿನ ಕಾರ್ಯಕ್ಷಮತೆ ಹಾಗೂ ಸುರಕ್ಷತಾ ಮಾನದಂಡಗಳನ್ನು ವಿವಿಧ ಹಂತಗಳಲ್ಲಿ ಪರಿಶೀಲಿಸಲಾಗುತ್ತದೆ. ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ಟ್ರಯಲ್ ರನ್ಗೆ ಅಗತ್ಯ ಸಿದ್ಧತೆಗಳನ್ನು ಪೂರ್ಣಗೊಳಿಸಿದ್ದು, ಭಾರತೀಯ ರೈಲ್ವೆಯ ಸಂಶೋಧನೆ, ವಿನ್ಯಾಸ ಮತ್ತು ಮಾನಕ ಸಂಸ್ಥೆ (RDSO) ಅಧಿಕಾರಿಗಳ ತಂಡವು ಪರೀಕ್ಷಾರ್ಥ ಸಂಚಾರದ ಮೇಲ್ವಿಚ
Aug 61 min read


ಸಂಪಾಜೆಯಲ್ಲಿ ಕಾಡುಕೋಣ ಬೇಟೆ; ಮಾಂಸ ಮಾರಾಟಕ್ಕೆ ಯತ್ನ – ಇಬ್ಬರ ಬಂಧನ, ಓರ್ವ ಪರಾರಿ
ಸಂಪಾಜೆ, ಆ.6: ಕೊಡಗು ಜಿಲ್ಲೆಯ ಚೆಂಬು ಅರಣ್ಯ ವಲಯದಲ್ಲಿ ಕಾಡು ಪ್ರಾಣಿಯನ್ನು ಬೇಟೆಯಾಡಿ ಅದರ ಮಾಂಸವನ್ನು ಮಾರಾಟಕ್ಕೆ ಸಾಗಿಸುತ್ತಿದ್ದ ಪ್ರಕರಣವನ್ನು ಅರಣ್ಯ ಇಲಾಖೆ ಭೇದಿಸಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದೆ. ಮತ್ತೋರ್ವ ಆರೋಪಿ ತಲೆಮರೆಸಿಕೊಂಡಿದ್ದು, ಆತನಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಬಂಧಿತ ಆರೋಪಿಗಳನ್ನು ಗೌತಮ್ (ಚೆಂಬು) ಹಾಗೂ ಶರತ್ (ಪೆರಾಜೆ) ಎಂದು ಗುರುತಿಸಲಾಗಿದೆ. ಯತಿನ್ (ಕಾಡುಪಂಜ) ಎಂಬ ಆರೋಪಿ ಪರಾರಿಯಾಗಿದ್ದಾನೆ. ಪ್ರಾಥಮಿಕ ತನಿಖೆಯ ಪ್ರಕಾರ, ಆರೋಪಿಗಳು ಕೊಡಗು ವ್ಯಾಪ್ತಿಯ ಚೆಂಬು ಅರಣ್ಯದ ಕಾಡುಪಂಜ ಪ್ರದೇಶದಲ್ಲಿ ಕಾಡುಕೋಣವನ್ನು ಅಕ್ರಮವಾಗಿ ಬೇಟೆಯಾಡಿ ಹತ್ಯೆ ಮಾ
Aug 61 min read


ಚಿನ್ನಪ್ರಿಯರಿಗೆ ಶಾಕ್; ಮತ್ತೆ ಗಗನಕ್ಕೇರಿದ ಬಂಗಾರದ ಬೆಲೆ!
ಇಂದಿನ ಚಿನ್ನದ ಮಾರುಕಟ್ಟೆಯಲ್ಲಿ ಭರ್ಜರಿ ಏರಿಕೆ ಕಂಡುಬಂದಿದ್ದು, ಬಂಗಾರದ ದರ ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ತಲುಪಿದೆ. ಜಾಗತಿಕ ಮಾರುಕಟ್ಟೆಯ ಏರಿಳಿತಗಳು ಮತ್ತು ಹೂಡಿಕೆದಾರರಿಂದ ಹೆಚ್ಚುತ್ತಿರುವ ಬೇಡಿಕೆಯು ಭಾರತೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ದಿಢೀರ್ ಹೆಚ್ಚಾಗಲು ಪ್ರಮುಖ ಕಾರಣವಾಗಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿ 22 ಕ್ಯಾರೆಟ್ ಆಭರಣ ಚಿನ್ನದ ಬೆಲೆ ಪ್ರತಿ ಗ್ರಾಮ್ಗೆ ಅಂದಾಜು ₹13,442 ತಲುಪಿದ್ದರೆ, 10 ಗ್ರಾಮ್ ಚಿನ್ನದ ಬೆಲೆ ₹1,34,420 ರ ಆಸುಪಾಸಿನಲ್ಲಿದೆ. ಅದೇ ರೀತಿ, ಅತ್ಯಂತ ಶುದ್ಧವಾದ 24 ಕ್ಯಾರೆಟ್ ಅಪರಂಜಿ ಚಿನ್ನದ ಬೆಲೆ ಪ್ರತಿ ಗ್ರಾಮ್ಗೆ ಅಂದಾಜು ₹14,674 ಕ್ಕ
Aug 61 min read


ವಾಲಿಬಾಲ್ ಆಡುವಾಗ ಕುಸಿದು ಬಿದ್ದು 10ನೇ ತರಗತಿ ವಿದ್ಯಾರ್ಥಿ ಸಾವು
ಸುರತ್ಕಲ್ ಸಮೀಪದ ಸೂರಿಂಜೆಯಲ್ಲಿ ಬುಧವಾರ ಸಂಜೆ ಶೋಕದ ವಾತಾವರಣ ಆವರಿಸಿದೆ. ಸ್ನೇಹಿತರೊಂದಿಗೆ ಮೈದಾನದಲ್ಲಿ ವಾಲಿಬಾಲ್ ಆಡುತ್ತಿದ್ದ 10ನೇ ತರಗತಿ ವಿದ್ಯಾರ್ಥಿ ಲಿಖಿತ್ ಅಮೀನ್ (15) ಇದ್ದಕ್ಕಿದ್ದಂತೆ ಕುಸಿದು ಬಿದ್ದು ಮೃತಪಟ್ಟಿದ್ದಾನೆ. ಈತ ಸ್ಥಳೀಯ ಮಾಧವ ಅಮೀನ್ ಅವರ ಪುತ್ರ. ಆಟದ ಮಧ್ಯೆ ಕುಸಿದು ಬಿದ್ದ ಬಾಲಕನನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾನೆ. ಸೂರಿಂಜೆ ಕೋಟೆ ಬೋಳ್ಳಾರು ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಯಾಗಿದ್ದ ಈತನ ಅಕಾಲಿಕ ಸಾವು ಕುಟುಂಬಸ್ಥರು ಹಾಗೂ ಗ್ರಾಮಸ್ಥರಲ್ಲಿ ತೀವ್ರ ದುಃಖ ಸೃಷ್ಟಿಸಿದೆ.
Aug 61 min read


ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಉಮರ್ ಫಾರೂಕ್ ಎನ್ಐಎ ಬಲೆಗೆ
ಮಂಗಳೂರು, ಆ.6: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮತ್ತೊಬ್ಬ ಆರೋಪಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಅಧಿಕಾರಿಗಳು ಕೇರಳದ ಕೊಚ್ಚಿಯಲ್ಲಿ ಬಂಧಿಸಿದ್ದಾರೆ. ಬಂಧಿತನನ್ನು ಸುಳ್ಯ ತಾಲೂಕಿನ ಕಲ್ಲುಮುಟ್ಟು ನಿವಾಸಿ ಉಮರ್ ಫಾರೂಕ್ ಎಂದು ಗುರುತಿಸಲಾಗಿದೆ. ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳ ಪಟ್ಟಿಯಲ್ಲಿ ಈತನ ಹೆಸರು ಇದ್ದು, ಮಾಹಿತಿ ನೀಡಿದವರಿಗೆ ಎನ್ಐಎ ₹2 ಲಕ್ಷ ಬಹುಮಾನ ಘೋಷಿಸಿತ್ತು. 2022ರ ಜುಲೈ 26ರಂದು ನಡೆದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆಯಲ್ಲಿ, ಪಿಎಫ್ಐ ಸಂಘಟನೆಯ ಕಾರ್ಯಕರ್ತರು ಹಿಂದ
Aug 61 min read


ಮಂಗಳೂರು ಕಾಲೇಜು ಕ್ಯಾಂಪಸ್ಗೆ ಗಾಂಜಾ ತಂದಿದ್ದ ಮೂವರು ವಿದ್ಯಾರ್ಥಿಗಳು ಪೊಲೀಸರ ವಶಕ್ಕೆ; ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲು
ಮಂಗಳೂರು, ಆ.5: ಖಾಸಗಿ ಕಾಲೇಜಿನ ಕ್ಯಾಂಪಸ್ಗೆ ಗಾಂಜಾ ತಂದಿದ್ದ ಮೂವರು ವಿದ್ಯಾರ್ಥಿಗಳನ್ನು ಕಾಲೇಜು ಆಡಳಿತ ಮಂಡಳಿ ಪತ್ತೆಹಚ್ಚಿ ಪೊಲೀಸರಿಗೆ ಒಪ್ಪಿಸಿದ ಘಟನೆ ಮಂಗಳವಾರ ಮಂಗಳೂರಿನಲ್ಲಿ ನಡೆದಿದೆ. ಕಾಲೇಜು ಆಡಳಿತ ಮಂಡಳಿ ನಡೆಸಿದ ತಪಾಸಣೆಯ ವೇಳೆ ವಿದ್ಯಾರ್ಥಿಗಳ ಬಳಿ ಸಣ್ಣ ಸಣ್ಣ ಪೊಟ್ಟಣಗಳಲ್ಲಿ ಪ್ಯಾಕ್ ಮಾಡಲಾಗಿದ್ದ ಸುಮಾರು 290 ಗ್ರಾಂ ಗಾಂಜಾ ಪತ್ತೆಯಾಗಿದೆ. ಕೂಡಲೇ ಕಾಲೇಜು ಅಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೂವರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತ ವಿದ್ಯಾರ್ಥಿಗಳನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ, ಮೂವರೂ ಮಾ
Aug 51 min read


ಸಾಲಗಾರರಿಗೆ ಬಿಗ್ ರಿಲೀಫ್: RBI ರೆಪೋ ದರ 5.25%ರಲ್ಲೇ ಯಥಾಸ್ಥಿತಿ; EMIನಲ್ಲಿ ಸದ್ಯಕ್ಕೆ ಬದಲಾವಣೆ ಇಲ್ಲ
ನವದೆಹಲಿ, ಆ. 5: ಭಾರತೀಯ ರಿಸರ್ವ್ ಬ್ಯಾಂಕ್ (RBI) ಹಣಕಾಸು ನೀತಿ ಸಮಿತಿ (MPC) ಸಭೆಯಲ್ಲಿ ರೆಪೋ ದರವನ್ನು 5.25%ರಲ್ಲೇ ಯಥಾಸ್ಥಿತಿಯಲ್ಲಿ ಮುಂದುವರಿಸಲು ನಿರ್ಧರಿಸಿದೆ. ಆರ್ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು, ಜಾಗತಿಕ ಕಚ್ಚಾ ತೈಲದ ಬೆಲೆ ಏರಿಕೆ ಹಾಗೂ ಹಣದುಬ್ಬರದ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಎಚ್ಚರಿಕೆಯ ನಿಲುವು ಅನುಸರಿಸಲಾಗಿದೆ. ಆರು ಸದಸ್ಯರ ಹಣಕಾಸು ನೀತಿ ಸಮಿತಿ (MPC) ಏಕಮತದಿಂದ ರೆಪೋ ದರದಲ್ಲಿ ಯಾವುದೇ ಬದಲಾವಣೆ ಮಾಡದಿರಲು ತೀರ್ಮಾನಿಸಿದೆ. ಜೊತೆಗೆ, ತನ್ನ "ತಟಸ್ಥ (Neutral)" ಹಣಕಾಸು ನೀತಿ ನಿಲುವನ್ನು ಸಹ ಮ
Aug 51 min read


ಮಹಿಳೆಯರ ಆರೋಗ್ಯಕ್ಕೆ ರಾಜ್ಯ ಸರ್ಕಾರದ ‘ಋತುತಾರೆ’ ಯೋಜನೆ: ನಟಿ ರಮ್ಯಾ ಬ್ರ್ಯಾಂಡ್ ಅಂಬಾಸಿಡರ್
ಬೆಂಗಳೂರು: ಮಹಿಳೆಯರ ಆರೋಗ್ಯ ಮತ್ತು ಆರೋಗ್ಯ ಜಾಗೃತಿಗೆ ಉತ್ತೇಜನ ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರ ‘ಋತುತಾರೆ’ ಎಂಬ ಹೊಸ ಯೋಜನೆಯನ್ನು ಆರಂಭಿಸಿದೆ. ಈ ಯೋಜನೆಯ ಕುರಿತು ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಆರೋಗ್ಯ ಸಚಿವ ಯು.ಟಿ. ಖಾದರ್ ಮಾಹಿತಿ ನೀಡಿದರು. ಸಚಿವ ಯು.ಟಿ. ಖಾದರ್ ಮಾತನಾಡಿ, ಮಹಿಳೆಯರ ಆರೋಗ್ಯ ಸಂಬಂಧಿತ ಸಮಸ್ಯೆಗಳ ಕುರಿತು ಸಮಗ್ರವಾಗಿ ಕಾರ್ಯನಿರ್ವಹಿಸುವ ಉದ್ದೇಶದಿಂದ ‘ಋತುತಾರೆ’ ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು. ಈ ಯೋಜನೆಗೆ ಮಹಿಳಾ ತಜ್ಞೆ ಡಾ. ಜೋಸ್ನಾ ಅವರ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿಯನ್ನು ರಚಿಸಲಾಗಿದ್ದು, ಮಹಿಳೆಯರ ಆರೋಗ್ಯ, ಮಾನಸಿಕ ಒತ್ತಡ ಸೇ
Aug 41 min read


Old Monk ಸೇರಿ ಪ್ರಸಿದ್ಧ ಮದ್ಯ ಬ್ರ್ಯಾಂಡ್ಗಳಿಗೆ ದೇಶದಲ್ಲಿ ನಿಷೇಧ!
ಭಾರತದಲ್ಲಿ ಕೆಲವು ಮದ್ಯ ಬ್ರ್ಯಾಂಡ್ಗಳ ಮಾರಾಟಕ್ಕೆ ತಾತ್ಕಾಲಿಕ ನಿಷೇಧ: ಕಾರಣವೇನು? ನವದೆಹಲಿ: ಭಾರತದ ಆಹಾರ ಸುರಕ್ಷತಾ ಮತ್ತು ಮಾನದಂಡ ಪ್ರಾಧಿಕಾರ (FSSAI) ದೇಶದ ಕೆಲವು ಪ್ರಸಿದ್ಧ ರಮ್ ಮತ್ತು ವಿಸ್ಕಿ ಬ್ರ್ಯಾಂಡ್ಗಳ ಮಾರಾಟಕ್ಕೆ ತಾತ್ಕಾಲಿಕ ನಿಷೇಧ ಹೇರಿದೆ. ಉತ್ಪಾದನಾ ಪ್ರಕ್ರಿಯೆಯಲ್ಲಿ ಅನುಮೋದಿತ ಮಾನದಂಡಗಳನ್ನು ಮೀರಿ ಕೃತಕ ಸುವಾಸನೆ (Artificial Flavouring) ಬಳಸಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ರಾಯಿಟರ್ಸ್ ವರದಿ ಪ್ರಕಾರ, ಡಿಯಾಜಿಯೋ ಇಂಡಿಯಾದ ಯುನೈಟೆಡ್ ಸ್ಪಿರಿಟ್ಸ್, ಇನ್ಬ್ರೂ ಬೆವರೇಜಸ್ ಹಾಗೂ ಮೋಹನ್ ರಾಕಿ ಸ್ಪ್ರಿಂಗ್ವಾಟರ್ ಕಂಪನಿಗಳ ಕಾ
Aug 42 min read
Archive
bottom of page





