top of page
News Articles
Sathyapatha News Plus


ಬಿಳಿನೆಲೆ ಹಲ್ಲೆ ಪ್ರಕರಣ: ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ಮಂಜೂರು
ಕೆಲ ದಿನಗಳ ಹಿಂದೆ ಕಡಬ ತಾಲೂಕಿನ ಬಿಳಿನೆಲೆಯಲ್ಲಿ ನಡೆದ ಹಲ್ಲೆ ಹಾಗೂ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ಬಿಳಿನೆಲೆ ಗ್ರಾಮದ ನಿವಾಸಿಗಳಾದ ಸುನಿಲ್, ಮನೋಜ್ ಮತ್ತು ಮನ್ವಿತ್ ಜಾಮೀನು ಪಡೆದ ಆರೋಪಿಗಳಾಗಿದ್ದಾರೆ. ಘಟನೆಯ ವಿವರ: ಜುಲೈ 16ರಂದು ಸಂಜೆ ಸುಮಾರು 7.30ರ ವೇಳೆಗೆ ಬಿಳಿನೆಲೆಯ ಪೌಲ್ಟ್ರಿ ಫಾರ್ಮ್ ಒಂದರ ಹತ್ತಿರ ಅವಿನಾಶ್ ಎಂಬವರು ಸತೀಶ್ ಮತ್ತು ಸುಬ್ರಾಯ ಅವರೊಂದಿಗೆ ಮಾತನಾಡುತ್ತಾ ನಿಂತಿದ್ದರು. ಈ ವೇಳೆ ಅಲ್ಲಿಗೆ ಬಂದ ಸುನಿಲ್, ಮ
Aug 41 min read


ಸಿಪಿಎಸ್ ಪರೀಕ್ಷೆ: ಕೆಇಎಯಿಂದ ತಾತ್ಕಾಲಿಕ ಕೀ ಉತ್ತರ ಪ್ರಕಟ
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ಆಗಸ್ಟ್ 2 ರಂದು ರಾಜ್ಯಾದ್ಯಂತ ಯಶಸ್ವಿಯಾಗಿ ನಡೆಸಿದ್ದ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ (ಸಿಪಿಸಿ) ನೇಮಕಾತಿ ಪರೀಕ್ಷೆಯ ತಾತ್ಕಾಲಿಕ ಕೀ ಉತ್ತರಗಳನ್ನು ತನ್ನ ಅಧಿಕೃತ ವೆಬ್ಸೈಟ್ನಲ್ಲಿ ಪ್ರಕಟಿಸಿದೆ. ಪರೀಕ್ಷೆಗೆ ಹಾಜರಾಗಿದ್ದ ಅಭ್ಯರ್ಥಿಗಳು ತಮ್ಮ ಉತ್ತರಗಳನ್ನು ಪರಿಶೀಲಿಸಿಕೊಳ್ಳಬಹುದು. ಕೆಇಎ ಬಿಡುಗಡೆ ಮಾಡಿರುವ ಕೀ ಉತ್ತರಗಳಿಗೆ ಯಾವುದೇ ಆಕ್ಷೇಪಣೆಗಳಿದ್ದಲ್ಲಿ, ಅವುಗಳನ್ನು ಸಲ್ಲಿಸಲು ಆಸಕ್ತ ಅಭ್ಯರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ. ಆಕ್ಷೇಪಣೆ ಸಲ್ಲಿಸಲು ಆಗಸ್ಟ್ 6 ರ ಬೆಳಿಗ್ಗೆ 10.30 ರವರೆಗೆ ಕಾಲಾವಕಾಶ ನೀಡಲಾಗಿದೆ. ಅಭ್ಯರ್ಥಿಗಳು ಹೆಚ್ಚಿನ
Aug 41 min read


ಕೇರಳದಲ್ಲಿ ಭಾರಿ ಮಳೆ, ಪ್ರವಾಹ ಹಾಗೂ ಭೂಕುಸಿತ: 15 ಮಂದಿ ಬಲಿ, ಹಲವರು ನಾಪತ್ತೆ
ದೇವರನಾಡು ಕೇರಳದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಸಾಲು ಸಾಲು ಅನಾಹುತಗಳು ಸಂಭವಿಸಿವೆ. ಭೀಕರ ಪ್ರವಾಹ ಹಾಗೂ ಭೂಕುಸಿತದ ಪರಿಣಾಮವಾಗಿ ಈವರೆಗೆ 15 ಜನರು ಪ್ರಾಣ ಕಳೆದುಕೊಂಡಿದ್ದು, 7 ಜನರು ನಾಪತ್ತೆಯಾಗಿದ್ದಾರೆ. ಪರಿಸ್ಥಿತಿಯ ಗಂಭೀರತೆಯನ್ನು ಪರಿಗಣಿಸಿ ರಾಜ್ಯ ಸರ್ಕಾರವು ತಕ್ಷಣವೇ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದು, ರಾಜ್ಯಾದ್ಯಂತ ಒಟ್ಟು 316 ಪರಿಹಾರ ಶಿಬಿರಗಳನ್ನು ತೆರೆದು 11,018 ಕ್ಕೂ ಹೆಚ್ಚು ಜನರಿಗೆ ಸುರಕ್ಷಿತ ಆಶ್ರಯ ಕಲ್ಪಿಸಿದೆ. ಮಳೆ ಅಬ್ಬರಕ್ಕೆ ರಾಜ್ಯದ ವಿವಿಧ ಜಿಲ್ಲೆಗಳು ತೀವ್ರವಾಗಿ ತತ್ತರಿಸಿವೆ. ಕೊಟ್ಟಾಯಂ ಜಿಲ್ಲೆಯಲ್ಲಿ ಮಗುವೂ
Aug 41 min read


ಆ. 4ರಂದು ಭಾರೀ ಮಳೆ ಸಾಧ್ಯತೆ: ಉಡುಪಿ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ
ಉಡುಪಿ: ಹವಾಮಾನ ಇಲಾಖೆ ಭಾರೀ ಮಳೆಯ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಆಗಸ್ಟ್ 4 (ಮಂಗಳವಾರ) ರಜೆ ಘೋಷಿಸಲಾಗಿದೆ. ಉಡುಪಿ ಜಿಲ್ಲಾಧಿಕಾರಿ ಸ್ವರೂಪ್ ಟಿ.ಕೆ. ಅವರು ಈ ಕುರಿತು ಪ್ರಕಟಣೆ ಹೊರಡಿಸಿದ್ದು, ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಇದೀಗ ಕರ್ನಾಟಕದಲ್ಲಿ ನೈರುತ್ಯ ಮುಂಗಾರು ಚುರುಕುಗೊಂಡಿದ್ದು, ಮುಂದಿನ ಮೂರು ದಿನಗಳ ಕಾಲ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಹವಾಮಾನ ಇಲಾಖೆ ಮುನ್ಸೂಚನೆಯ ಪ್ರಕಾರ, ಆಗಸ್ಟ್ 7
Aug 31 min read


ಉಳ್ಳಾಲ: ವಿದ್ಯುತ್ ಆಘಾತದಿಂದ ಮೆಸ್ಕಾಂ ಲೈನ್ಮೆನ್ ದುರಂತ ಸಾವು
ಉಳ್ಳಾಲ ತಾಲೂಕಿನ ಉಚ್ಚಿಲ ನಯಾಪಟ್ಟಣದಲ್ಲಿ ಇಂದು ಬೆಳಿಗ್ಗೆ ಟ್ರಾನ್ಸ್ಫಾರ್ಮರ್ ದುರಸ್ತಿ ವೇಳೆ ವಿದ್ಯುತ್ ಆಘಾತಕ್ಕೊಳಗಾಗಿ ಮೆಸ್ಕಾಂ ಲೈನ್ಮೆನ್ ಮೃತಪಟ್ಟಿದ್ದಾರೆ. ಅಂಬಿಕಾರೋಡ್ ಪಿಲಾರು ನಿವಾಸಿ ಶೇಖ್ ಝಮೀರ್ (49) ಮೃತಪಟ್ಟ ದೌರ್ಭಾಗ್ಯಕರ ವ್ಯಕ್ತಿಯಾಗಿದ್ದಾರೆ. ಟ್ರಾನ್ಸ್ಫಾರ್ಮರ್ನಲ್ಲಿದ್ದ ದೋಷ ಸರಿಪಡಿಸಲು ಬಂದಿದ್ದ ಝಮೀರ್, ಜಿಒಎಸ್ (ಗ್ರೂಪ್ ಆಪರೇಟೆಡ್ ಸ್ವಿಚ್) ಆಫ್ ಆಗಿದೆಯೆಂದು ಭಾವಿಸಿ ಟಿಸಿ ಏರಿದ್ದರು. ಈ ವೇಳೆ ವಿದ್ಯುತ್ ಸ್ಪರ್ಶಿಸಿ ಕೆಳಗೆ ಬಿದ್ದ ಅವರನ್ನು ಆಸ್ಪತ್ರೆಗೆ ಒಯ್ಯುವಾಗ ದಾರಿ ಮಧ್ಯೆ ಕೊನೆಯುಸಿರೆಳೆದರು. ಮೃತ ಶೇಖ್ ಝಮೀರ್ ಅವರು ಪತ್ನಿ ಹಾಗೂ ಓರ್ವ ಹೆಣ್ಣುಮಗಳ
Aug 31 min read


ಕೈತಪ್ಪಿದ ಸಚಿವ ಸ್ಥಾನ: ಶಾಸಕ ಸ್ಥಾನಕ್ಕೆ ಯಶವಂತರಾಯ ಗೌಡ ಪಾಟೀಲ್ ರಾಜೀನಾಮೆ; ಮೈಸೂರಿನಲ್ಲಿ ಪ್ರತಿಭಟನೆ ವೇಳೆ ಬೆಂಬಲಿಗ ವಿಷ ಸೇವನೆ ಯತ್ನ
ಬೆಂಗಳೂರು, ಆ. 3: ರಾಜ್ಯ ಸಚಿವ ಸಂಪುಟ ಪುನರ್ರಚನೆ ಹಿನ್ನೆಲೆಯಲ್ಲಿ ಇಂದು ಸಂಜೆ 4 ಗಂಟೆಗೆ ರಾಜಭವನದಲ್ಲಿ ನೂತನ ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭ ನಿಗದಿಯಾಗಿರುವ ನಡುವೆ, ಸಚಿವ ಸ್ಥಾನ ಕೈತಪ್ಪಿದ ಅಸಮಾಧಾನ ಹಲವು ನಾಯಕರಲ್ಲಿ ಮತ್ತು ಅವರ ಬೆಂಬಲಿಗರಲ್ಲಿ ವ್ಯಕ್ತವಾಗಿದೆ. ವಿಜಯಪುರ ಜಿಲ್ಲೆಯ ಇಂಡಿ ಕ್ಷೇತ್ರದ ಶಾಸಕ ಯಶವಂತರಾಯ ಗೌಡ ಪಾಟೀಲ್ ಅವರು ಸಚಿವ ಸ್ಥಾನ ದೊರೆಯದ ಹಿನ್ನೆಲೆಯಲ್ಲಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ತಿಳಿದುಬಂದಿದೆ. ಹಿರಿಯ ನಾಯಕರಾಗಿದ್ದರೂ ತಮ್ಮನ್ನು ಸಚಿವ ಸಂಪುಟದಿಂದ ಹೊರಗಿಟ್ಟಿರುವುದು ತೀವ್ರ ನಿರಾಶೆಗೆ ಕಾರಣವಾಗಿದ್ದು, ಈ ನಿರ್ಧಾರಕ್ಕೆ ವ
Aug 31 min read


ಕರ್ನಾಟಕ ಶಾಸನಸಭೆಗೆ ನೂತನ ಪದಾಧಿಕಾರಿಗಳ ನೇಮಕ: ಉಪಾಸಭಾಪತಿಯಾಗಿ ನಟಿ ಉಮಾಶ್ರೀ
ಕರ್ನಾಟಕ ವಿಧಾನಸಭೆಯ ನೂತನ ಸ್ಪೀಕರ್ ಆಗಿ ರೋಣ ಕ್ಷೇತ್ರದ ಶಾಸಕ ಜಿ. ಎಸ್. ಪಾಟೀಲ್ ಹಾಗೂ ಡೆಪ್ಯೂಟಿ ಸ್ಪೀಕರ್ ಆಗಿ ವಿರಾಜಪೇಟೆ ಶಾಸಕ ಎ. ಎಸ್. ಪೊನ್ನಣ್ಣ ಆಯ್ಕೆಯಾಗಿದ್ದಾರೆ. ವಿಧಾನ ಪರಿಷತ್ತಿನ ಸಭಾಪತಿಯಾಗಿ ಸಲೀಂ ಅಹ್ಮದ್ ಮತ್ತು ಉಪಸಭಾಪತಿಯಾಗಿ ಉಮಾಶ್ರೀ ಅವರನ್ನು ನಿಯೋಜಿಸಲಾಗಿದ್ದು, ಉಭಯ ಸದನಗಳಿಗೆ ಹೊಸ ಸಾರಥ್ಯ ಲಭಿಸಿದೆ.
Aug 31 min read


ಪರೀಕ್ಷೆಗೆ ಬಂದ ತಾಯಿಗೆ ಆಸರೆಯಾದ ಮಹಿಳಾ ಪೊಲೀಸ್; ಮಗುವಿಗೆ ಜೋಗುಳ ಹಾಡಿ ಮಾನವೀಯತೆ ಮೆರೆದ ಸಿಬ್ಬಂದಿ
ಬೆಂಗಳೂರು, ಆ. 3: ಪೊಲೀಸ್ ಕಾನ್ಸ್ಟೆಬಲ್ ನೇಮಕಾತಿ ಪರೀಕ್ಷೆಗೆ ಎಂಟು ತಿಂಗಳ ಮಗುವಿನೊಂದಿಗೆ ಆಗಮಿಸಿದ್ದ ತಾಯಿಯೊಬ್ಬರಿಗೆ ಮಹಿಳಾ ಪೊಲೀಸ್ ಸಿಬ್ಬಂದಿ ಮಾನವೀಯತೆ ಮೆರೆದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪರೀಕ್ಷಾ ಕೇಂದ್ರಕ್ಕೆ ಬಂದಿದ್ದ ತಾಯಿ ಪರೀಕ್ಷಾ ಕೊಠಡಿಗೆ ತೆರಳುವ ವೇಳೆ ಮಗು ಅಳಲು ಆರಂಭಿಸಿತು. ಇದರಿಂದ ತಾಯಿ ಆತಂಕಕ್ಕೊಳಗಾದಾಗ ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್ ಸಿಬ್ಬಂದಿ ಮಗುವನ್ನು ತಮ್ಮ ಆರೈಕೆಯಲ್ಲಿ ನೋಡಿಕೊಳ್ಳುವುದಾಗಿ ಭರವಸೆ ನೀಡಿದರು. ಬಳಿಕ ಮಗುವಿಗೆ ಜೋಗುಳ ಹಾಡಿ ಸಮಾಧಾನಪಡಿಸಿದ ಅವರು, ಮಗು ಶಾಂತವಾಗುವಂತೆ ನೋಡಿಕೊಂಡರು. ಇದರಿಂದ ತಾಯಿ ಯಾವುದೇ ಆತಂಕವಿಲ್ಲದೆ ಪರೀಕ್
Aug 31 min read


ಮಲೆನಾಡು-ಕರಾವಳಿಯಲ್ಲಿ ಮುಂದುವರಿದ ವರುಣನ ಆರ್ಭಟ: ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ!
ಮಲೆನಾಡು ಮತ್ತು ಕರಾವಳಿ ಭಾಗಗಳಲ್ಲಿ ಭಾರೀ ಮಳೆ ಮುಂದುವರಿದಿದ್ದು, ಮುಂಜಾಗ್ರತಾ ಕ್ರಮವಾಗಿ ಚಿಕ್ಕಮಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಹಲವು ತಾಲೂಕುಗಳ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ. ಕಾಫಿನಾಡಿನಲ್ಲಿ ನಿರಂತರ ಮಳೆಯಿಂದಾಗಿ ಕೊಪ್ಪ ಮತ್ತು ಶೃಂಗೇರಿ ತಾಲೂಕುಗಳ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಭನ್ವರ್ ಸಿಂಗ್ ಆದೇಶಿಸಿದ್ದಾರೆ. ತುಂಗಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ನದಿ ತೀರದ ಜನರಿಗೆ ಎಚ್ಚರಿಕೆ ನೀಡಲಾಗಿದೆ. ಮತ್ತೊಂದೆಡೆ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಅವರು ಮಂಗಳೂರು, ಬಂಟ್ವಾಳ, ಉಳ್ಳಾಲ ಸೇರಿದಂತೆ ವಿವಿಧ ತಾಲೂಕುಗಳಲ್ಲಿ 10ನೇ ತರಗ
Aug 31 min read


ತಡರಾತ್ರಿ ಭೂಕುಸಿತ: ಪ್ರಯಾಣಿಕರ ನೆರವಿಗೆ ಧಾವಿಸಿ ಸೈ ಎನಿಸಿಕೊಂಡ ಸಂಸದ ಬ್ರಿಜೇಶ್ ಚೌಟ
ಸುಬ್ರಹ್ಮಣ್ಯ - ಸಕಲೇಶಪುರ ಮಧ್ಯೆ ತಡರಾತ್ರಿ ಭೂಕುಸಿತ ಸಂಭವಿಸಿ ರೈಲು ಸಂಚಾರ ಸಂಪೂರ್ಣ ಅಡಚಣೆಗೊಂಡಿತ್ತು. ತಕ್ಷಣವೇ ಕಾರ್ಯಪ್ರವೃತ್ತರಾದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ರೈಲ್ವೆ ಸಚಿವಾಲಯ ಮತ್ತು ನೈಋತ್ಯ ರೈಲ್ವೆ ಅಧಿಕಾರಿಗಳ ಗಮನಕ್ಕೆ ವಿಚಾರ ತಂದರು. ಪ್ರಯಾಣಿಕರು ಸುರಕ್ಷಿತವಾಗಿ ತಮ್ಮ ಊರುಗಳನ್ನು ತಲುಪಲು ಬದಲಿ ಸಾರಿಗೆ ವ್ಯವಸ್ಥೆ ಕಲ್ಪಿಸಿದರು. ಕೊನೆಯವರೆಗೆ ಸ್ಥಳದಲ್ಲೇ ನಿಂತು ಆಪತ್ಭಾಂದವನಂತೆ ಸಹಾಯ ಮಾಡಿದ ಅವರ ಕಾರ್ಯ ಅತ್ಯಂತ ಶ್ಲಾಘನೀಯವಾಗಿದೆ. ಸಂಸದರ ಈ ತ್ವರಿತ ಸ್ಪಂದನೆಗೆ ಪ್ರಯಾಣಿಕರು ಭಾರಿ ಮೆಚ್ಚುಗೆ ವ್ಯಕ್ತಪಡಿಸಿದ್ದು, 'ನಮ್ಮ ಸಂಸದರು ನಮ್ಮ ಹೆಮ್ಮೆ' ಎಂದು ಹಾರ
Aug 21 min read


ಕುಕ್ಕೆ ಸುಬ್ರಹ್ಮಣ್ಯ: ಭಾರೀ ಮಳೆಗೆ ಗುಡ್ಡ ಕುಸಿತ, ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದ ಕಾಂಪೌಂಡ್ ಹಾನಿ
ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ಪರಿಸರದಲ್ಲಿ ಇಂದು ಭಾರೀ ಮಳೆಯಾಗಿದೆ. ಮಳೆಯ ರಭಸಕ್ಕೆ ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದ ಹಿಂಬಾಗದ ಗುಡ್ಡ ಜರಿದು ಬಿದ್ದಿದೆ. ಗುಡ್ಡ ಜರಿತದ ಜೊತೆಗೆ ಬೃಹತ್ ಮರವೊಂದು ಉರುಳಿ ಬಿದ್ದ ಪರಿಣಾಮವಾಗಿ, ದೈವಸ್ಥಾನದ ಕಾಂಪೌಂಡ್ ಸಂಪೂರ್ಣವಾಗಿ ಹಾನಿಗೀಡಾಗಿದೆ. ಅದೃಷ್ಟವಶಾತ್ ದೊಡ್ಡ ಮಟ್ಟದ ಅನಾಹುತವೊಂದು ತಪ್ಪಿದಂತಾಗಿದೆ. ಈ ಪ್ರದೇಶದಲ್ಲಿ ಗುಡ್ಡ ಇನ್ನೂ ಜರಿಯುವ ಅಪಾಯವಿದ್ದು, ಸ್ಥಳದಲ್ಲಿ ಅನೇಕ ಮರಗಳು ಅಪಾಯಕಾರಿ ಸ್ಥಿತಿಯಲ್ಲಿವೆ. ಇದರಿಂದಾಗಿ ಸ್ಥಳೀಯರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
Aug 21 min read


ಮಂಗಳೂರು-ಬೆಂಗಳೂರು ರೈಲು ಸಂಚಾರ ಸಂಪೂರ್ಣ ಸ್ಥಗಿತ: ಭೂಕುಸಿತದಿಂದ ಪ್ರಯಾಣಿಕರ ಪರದಾಟ
ಘಟ್ಟ ಪ್ರದೇಶ ಹಾಗೂ ಕರಾವಳಿ ಭಾಗದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಸಕಲೇಶಪುರ ಬಳಿಯ ಎಡಕುಮೇರಿ ಮತ್ತು ಸಿರಿಬಾಗಿಲು ನಡುವೆ ರೈಲು ಹಳಿಯ ಮೇಲೆ ಭಾರಿ ಭೂಕುಸಿತ ಸಂಭವಿಸಿದೆ. ಇದರಿಂದಾಗಿ ಮಂಗಳೂರು ಹಾಗೂ ಬೆಂಗಳೂರು ನಡುವೆ ಸಂಚರಿಸುವ ರೈಲುಗಳ ಸಂಚಾರವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದ್ದು, ಹಲವು ರೈಲುಗಳನ್ನು ಆಂಶಿಕವಾಗಿ ರದ್ದುಗೊಳಿಸಲಾಗಿದೆ. ಬೆಂಗಳೂರು, ಮುರುಡೇಶ್ವರ, ಕೋಝಿಕ್ಕೋಡ್, ವಿಜಯಪುರ ಹಾಗೂ ಕಾರವಾರ ಕಡೆಗೆ ಸಂಚರಿಸುತ್ತಿದ್ದ ರೈಲುಗಳನ್ನು ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ಹಾಗೂ ಕಬಕ ಪುತ್ತೂರು ನಿಲ್ದಾಣಗಳಲ್ಲೇ ತಡೆಯಲಾಗಿದೆ. ಇದರಿಂದಾಗಿ ಸಾವಿರಾರು ಪ್ರಯಾಣಿಕರು ತೀ
Aug 21 min read


ಮಳೆ ಕೊರತೆ ಬಿಸಿ: ರಾಜ್ಯದಲ್ಲಿ ಅಕ್ಕಿ ದರ ಶೇ.35ರಷ್ಟು ಭಾರೀ ಏರಿಕೆ, ಗ್ರಾಹಕರು ಕಂಗಾಲು!
ರಾಜ್ಯದಲ್ಲಿ ಉಂಟಾಗಿರುವ ತೀವ್ರ ಮಳೆ ಕೊರತೆಯು ಜನರ ದೈನಂದಿನ ಜೀವನದ ಮೇಲೆ ನೇರ ಪರಿಣಾಮ ಬೀರಿದೆ. ಭತ್ತದ ಬಿತ್ತನೆ ಗಣನೀಯವಾಗಿ ಕುಂಠಿತಗೊಂಡ ಹಿನ್ನೆಲೆಯಲ್ಲಿ ಅಕ್ಕಿ ಬೆಲೆ ಕಳೆದ ಒಂದು ದಶಕದಲ್ಲೇ ಕಾಣದಷ್ಟು ಹೆಚ್ಚಳವಾಗಿದೆ. ಸ್ಟೀಮ್ ಹಾಗೂ ಸೋನಾ ಮಸೂರಿ ಸೇರಿದಂತೆ ಪ್ರಮುಖ ವಿಧದ ಅಕ್ಕಿ ದರಗಳು ಕಳೆದ ಎರಡು ತಿಂಗಳಲ್ಲಿ ಶೇ.35ರಷ್ಟು ಏರಿಕೆಯಾಗಿದ್ದು, ಗ್ರಾಹಕರಿಗೆ ಭಾರೀ ಆಘಾತ ತಂದಿದೆ. ಶೇ.50ರಷ್ಟು ಮಳೆ ಕೊರತೆಯಿಂದಾಗಿ ರೈತರು ಬಿತ್ತನೆ ಮುಂದೂಡಿದ್ದು, ಉತ್ಪಾದನೆ ಕುಸಿಯುವ ಆತಂಕ ಮಾರುಕಟ್ಟೆಯಲ್ಲಿ ಸೃಷ್ಟಿಯಾಗಿದೆ. ಪೂರೈಕೆಯಲ್ಲೂ ತೀವ್ರ ವ್ಯತ್ಯಯ ಉಂಟಾಗಿದ್ದು, ಬೆಂಗಳೂರಿನ ಯಶವಂತಪುರ ಎಪಿ
Aug 21 min read


ಪುತ್ತೂರು: ಕುಮಾರಧಾರ ನದಿ ಪ್ರವಾಹಕ್ಕೆ ಮುಳುಗಿದ ಮಹಾಲಿಂಗೇಶ್ವರ ದೇವರ ಸ್ನಾನದ ಕಟ್ಟೆ
ಕಳೆದ ಎರಡು ದಿನಗಳಿಂದ ಎಡಬಿಡದೆ ಸುರಿಯುತ್ತಿರುವ ಭಾರೀ ಮಳೆಗೆ ಕುಮಾರಧಾರ ನದಿ ಉಕ್ಕಿ ಹರಿಯುತ್ತಿದೆ. ಇದರ ಪರಿಣಾಮವಾಗಿ ವೀರಮಂಗಲದಲ್ಲಿರುವ ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಅವಭೃತ ಸ್ನಾನದ ಕಟ್ಟೆ ಸಂಪೂರ್ಣ ಜಲಾವೃತಗೊಂಡಿದೆ. ನದಿಯ ನೀರಿನ ಮಟ್ಟ ಗಣನೀಯವಾಗಿ ಏರಿಕೆಯಾಗಿದ್ದು, ತೀರದ ಪಕ್ಕದಲ್ಲಿರುವ ಕೆಲವು ತೋಟಗಳಿಗೂ ಪ್ರವಾಹದ ನೀರು ನುಗ್ಗಿದೆ. ಇದು ಸ್ಥಳೀಯರಲ್ಲಿ ಆತಂಕ ಮೂಡಿಸಿದ್ದು, ಕೃಷಿಕರು ಸಂಕಷ್ಟಕ್ಕೆ ಸಿಲುಕುವಂತಾಗಿದೆ. ಮಳೆ ಮುಂದುವರಿದರೆ ನೀರಿನ ಮಟ್ಟ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಆದ್ದರಿಂದ ನದಿ ತೀರದ ನಿವಾಸಿಗಳು ಹಾಗೂ ಭಕ್ತರು ಅನಗತ್ಯವಾಗಿ
Aug 21 min read


ಬೆಳ್ತಂಗಡಿ: ಕಾಡಾನೆ ದಾಳಿಗೆ ವ್ಯಕ್ತಿ ಬಲಿ – ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವೇಳೆ ದುರಂತ
ಬೆಳ್ತಂಗಡಿ, ಆ. 2: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ನೇಲಡ್ಕ ಸಮೀಪದ ಮುಚ್ಚಿರಡ್ಕದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಮೃತಪಟ್ಟಿರುವ ದುರ್ಘಟನೆ ಶನಿವಾರ ಸಂಜೆ ಸಂಭವಿಸಿದೆ. ಮೃತರನ್ನು ಇಡಾಲು ನಿವಾಸಿ ಬಾಲಕೃಷ್ಣ ಗೌಡ (55) ಎಂದು ಗುರುತಿಸಲಾಗಿದೆ. ಮಾಹಿತಿಯಂತೆ, ಬಾಲಕೃಷ್ಣ ಗೌಡ ಅವರು ಎಂದಿನಂತೆ ಕೆಲಸಕ್ಕೆ ತೆರಳಿದ್ದು, ಸಂಜೆ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದೆ. ರಾತ್ರಿ ತಡವಾದರೂ ಮನೆಗೆ ಮರಳದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಹಾಗೂ ಸ್ಥಳೀಯರು ಅವರನ್ನು ಹುಡುಕಾಟ ಆರಂಭಿಸಿದರು. ಹುಡುಕಾಟದ ವೇಳೆ ಅವರು ಧರಿಸಿದ್ದ ಪ್ಲಾಸ್ಟಿಕ
Aug 21 min read


ಮಂಗಳೂರಿನಿಂದ ಕ್ರೂಸ್ ಪ್ರವಾಸೋದ್ಯಮಕ್ಕೆ ಹೊಸ ಚಾಲನೆ: ರಾಜ್ಯ ಸರ್ಕಾರದಿಂದ ಮಹತ್ವದ ಹೆಜ್ಜೆ
ಕರ್ನಾಟಕದ ಕರಾವಳಿ ಭಾಗದಲ್ಲಿ ಕ್ರೂಸ್ ಪ್ರವಾಸೋದ್ಯಮವನ್ನು ಉತ್ತೇಜಿಸಲು ರಾಜ್ಯ ಪ್ರವಾಸೋದ್ಯಮ ಇಲಾಖೆ ಮಹತ್ವದ ಹೆಜ್ಜೆ ಇಟ್ಟಿದೆ. ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್ ಅವರ ಸೂಚನೆಯಂತೆ, ಮಂಗಳೂರಿನಿಂದ ಕ್ರೂಸ್ ಸೇವೆ ಆರಂಭಿಸಲು ಪ್ರಮುಖ ಸಂಸ್ಥೆಯಾದ ವಾಟರ್ವೇಸ್ ಲೀಷರ್ ಟೂರಿಸಂ ಲಿಮಿಟೆಡ್ ತಾತ್ವಿಕ ಅನುಮೋದನೆ ನೀಡಿದೆ ಎಂದು ಇಲಾಖೆಯ ಕಾರ್ಯದರ್ಶಿ ಡಾ. ರಾಮ್ ಪ್ರಸಾತ್ ಮನೋಹರ್ ತಿಳಿಸಿದ್ದಾರೆ. ಇತ್ತೀಚೆಗೆ ಮುಂಬೈನಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ, ಮಂಗಳೂರಿನ ಮೂಲಸೌಕರ್ಯ, ಮಾರುಕಟ್ಟೆ ಅವಕಾಶಗಳು ಹಾಗೂ ಕಾರ್ಯಾಚರಣೆಯ ಕುರಿತು ಸುದೀರ್ಘ ಚರ್ಚೆ ನಡೆಸಲಾಯಿತು. ಮುಂದಿನ ತಿಂಗಳು ಸಂಸ್ಥೆಯ
Aug 11 min read


ಮಂಗಳೂರು ವಿವಿಯಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
ಮಂಗಳೂರು, ಆ. 1: ಮಂಗಳೂರು ವಿಶ್ವವಿದ್ಯಾನಿಲಯವು 2026–27ನೇ ಶೈಕ್ಷಣಿಕ ಸಾಲಿಗೆ ವಿವಿಧ ಸ್ನಾತಕೋತ್ತರ ಅಧ್ಯಯನ ವಿಭಾಗಗಳಲ್ಲಿ ಅತಿಥಿ ಉಪನ್ಯಾಸಕರ (Guest Faculty) ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಆಗಸ್ಟ್ 1, 2026ರೊಳಗೆ ನಿಗದಿತ ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ವಿಶ್ವವಿದ್ಯಾನಿಲಯದ ಕನ್ನಡ, ಇಂಗ್ಲಿಷ್, ಇತಿಹಾಸ, ಅರ್ಥಶಾಸ್ತ್ರ, ರಾಜ್ಯಶಾಸ್ತ್ರ, ಸಮಾಜಶಾಸ್ತ್ರ, ಸೋಷಿಯಲ್ ವರ್ಕ್, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ, ಜಿಯೋಗ್ರಫಿ, ಲೈಬ್ರರಿ ಮತ್ತು ಇನ್ಫಾರ್ಮೇಷನ್ ಸೈನ್ಸ್, ಬಯೋಕೆಮಿಸ್ಟ್ರಿ, ಮೆಡಿಕಲ್ ಫಿಸಿಕ್ಸ್, ಫಿಸ
Aug 11 min read
Archive
bottom of page







