ಭಾರಿ ಅವಾಂತರ ಸೃಷ್ಟಿಸಿರುವ 'ದಿತ್ವಾ' ಚಂಡಮಾರುತವು ಶ್ರೀಲಂಕಾದ ಕರಾವಳಿಗೆ ಅಪ್ಪಳಿಸಿ ದ್ವೀಪರಾಷ್ಟ್ರವನ್ನು ತತ್ತರಿಸುವಂತೆ ಮಾಡಿದೆ. ಸತತ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆ ಮತ್ತು ಉಂಟಾಗಿರುವ ಭೀಕರ ಪ್ರವಾಹದಿಂದಾಗಿ ಇದುವರೆಗೆ 123 ಜನರು ಪ್ರಾಣ ಕಳೆದುಕೊಂಡಿದ್ದು, 130ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ ಎಂದು ವಿಪತ್ತು ನಿರ್ವಹಣಾ ಕೇಂದ್ರ (DMC) ತಿಳಿಸಿದೆ. ಪ್ರವಾಹ ಸಂತ್ರಸ್ತರಾಗಿರುವ ಸುಮಾರು 43,995 ಜನರನ್ನು ಸರ್ಕಾರಿ ಸ್ವಾಮ್ಯದ ಪರಿಹಾರ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ. ರಾಜಧಾನಿ ಕೊಲಂಬೊ ಸೇರಿದಂತೆ ಹಲವು ಪ್ರಮುಖ ಭಾಗಗಳಲ್ಲಿ ಪ್ರವಾಹ ಸೃಷ್ಟಿಯಾಗಿದ್ದು,
ಶ್ವೇತಭವನದ ಬಳಿ ನಡೆದ ಗುಂಡಿನ ದಾಳಿಯ ಘಟನೆಗೆ ತೀವ್ರ ಪ್ರತಿಕ್ರಿಯೆ ನೀಡಿರುವ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, 3ನೇ ಜಗತ್ತಿನ ದೇಶಗಳಿಂದ ಅಮೆರಿಕಕ್ಕೆ ಶಾಶ್ವತವಾಗಿ ವಲಸೆ ನಿಲ್ಲಿಸುವ ಮಹತ್ವದ ನಿರ್ಧಾರವನ್ನು ಘೋಷಿಸಿದ್ದಾರೆ. ಭದ್ರತಾ ಕಾಳಜಿಗಳನ್ನು ಮುಂದಿಟ್ಟುಕೊಂಡು, ಶ್ವೇತಭವನದ ಘಟನೆಯ ನಂತರ ವಲಸೆ ನೀತಿಯ ವಿರುದ್ಧ ವ್ಯಾಪಕ ಮತ್ತು ತೀವ್ರ ಕ್ರಮ ಕೈಗೊಳ್ಳುವುದಾಗಿ ಅವರು ತಿಳಿಸಿದ್ದಾರೆ. ಅಮೆರಿಕದ ಭದ್ರತಾ ವ್ಯವಸ್ಥೆ ಸಂಪೂರ್ಣವಾಗಿ ಚೇತರಿಸಿಕೊಳ್ಳಲು ಈ ನಿರ್ಧಾರ ಅತ್ಯಗತ್ಯ ಎಂದು ಟ್ರಂಪ್ ಪ್ರತಿಪಾದಿಸಿದ್ದಾರೆ. ಅಲ್ಲದೆ, ದೇಶದ ತಾಂತ್ರಿಕ ಪ್ರಗತಿ ಮತ್ತು ಜನರ ಜೀವನ ಪರಿಸ್ಥಿತಿಗಳ
"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.