top of page
News Articles
Sathyapatha News Plus


ಮಂಗಳೂರು ಜೈಲಿನಲ್ಲಿ ಭಾಸ್ಕರ ಶೆಟ್ಟಿ ಕೊಲೆ ಆರೋಪಿಗಳ ಮೇಲೆ ಹಲ್ಲೆ ಪ್ರಕರಣ : 14 ಮಂದಿ ದೋಷಿಗಳು
ಮಂಗಳೂರು: ಉಡುಪಿಯ ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣದ ಆರೋಪಿಗಳಾದ ನವನೀತ್ ಶೆಟ್ಟಿ ಹಾಗೂ ಜ್ಯೋತಿಷಿ ನಿರಂಜನ್ ಭಟ್ ಮೇಲೆ ಮಂಗಳೂರು ಜಿಲ್ಲಾ ಕಾರಾಗೃಹದಲ್ಲೇ ದಾಳಿ ನಡೆಸಿದ ಪ್ರಕರಣದಲ್ಲಿ 14 ಮಂದಿ ಆರೋಪಿಗಳು ದೋಷಿಗಳೆಂದು ನ್ಯಾಯಾಲಯ ತೀರ್ಪು ನೀಡಿದೆ. ದೋಷಿಗಳ ಶಿಕ್ಷೆಯ ಪ್ರಮಾಣವನ್ನು ಸೆಪ್ಟೆಂಬರ್ 16ರಂದು ಪ್ರಕಟಿಸಲಾಗುವುದು. 2017ರ ಸೆಪ್ಟೆಂಬರ್ 11ರಂದು ಮಧ್ಯಾಹ್ನ ಸುಮಾರು 12.30ರ ವೇಳೆಗೆ ಮಂಗಳೂರು ಜಿಲ್ಲಾ ಕಾರಾಗೃಹದ ಹೊಸ ಕಟ್ಟಡದ ‘ಬಿ’ ಬ್ಲಾಕ್ನ ವರಾಂಡದಲ್ಲಿ ಈ ದಾಳಿ ನಡೆದಿತ್ತು. ಭಾಸ್ಕರ ಶೆಟ್ಟಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ನವನೀತ್ ಶೆಟ್ಟಿ ಮತ್ತು ನಿರಂಜನ್ ಭಟ್ ಅ
3 days ago1 min read


8 ತಿಂಗಳ ಬಳಿಕ ಪತ್ತೆಯಾದ ಬೆಂಗಳೂರಿನ ಇಬ್ಬರು ವಿದ್ಯಾರ್ಥಿನಿಯರು; ಓರ್ವಳು ಗರ್ಭಿಣಿ!
ಬೆಂಗಳೂರು: ಕಾಲೇಜಿಗೆ ತೆರಳುವುದಾಗಿ ಹೇಳಿ ಮನೆಯಿಂದ ಹೊರಟು ಎಂಟು ತಿಂಗಳಿನಿಂದ ನಾಪತ್ತೆಯಾಗಿದ್ದ ಬೆಂಗಳೂರಿನ ವಿದ್ಯಾರಣ್ಯಪುರದ ಇಬ್ಬರು ವಿದ್ಯಾರ್ಥಿನಿಯರನ್ನು ಕೊನೆಗೂ ಸಿಐಡಿ ಪೊಲೀಸರು ಪತ್ತೆಹಚ್ಚಿದ್ದಾರೆ. ಪ್ರಕರಣದ ತನಿಖೆ ವೇಳೆ ಹೊರಬಂದ ಹಲವು ಅಚ್ಚರಿಯ ಸಂಗತಿಗಳು ಪೊಲೀಸರನ್ನೇ ಬೆಚ್ಚಿಬೀಳಿಸಿವೆ. ಜನವರಿ 31ರಂದು ಕಾಲೇಜಿಗೆ ತೆರಳುವುದಾಗಿ ಮನೆಯಿಂದ ಹೊರಟಿದ್ದ ಇಬ್ಬರು ಯುವತಿಯರು ಬಳಿಕ ಮನೆಗೆ ವಾಪಸ್ ಬಂದಿರಲಿಲ್ಲ. ಮೊಬೈಲ್ ಫೋನ್ ಹಾಗೂ ಎಟಿಎಂ ಕಾರ್ಡ್ ಬಳಕೆ ಮಾಡದ ಹಿನ್ನೆಲೆಯಲ್ಲಿ ಅವರ ಚಲನವಲನದ ಬಗ್ಗೆ ಪೊಲೀಸರಿಗೆ ಯಾವುದೇ ಸುಳಿವು ಸಿಗದೆ ತನಿಖೆ ಸವಾಲಾಗಿತ್ತು. ವಿದ್ಯಾರಣ್ಯಪುರ ಪೊಲ
6 days ago1 min read


ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮೂವರು ಆರೋಪಿಗಳು ನ್ಯಾಯಾಂಗ ಬಂಧನಕ್ಕೆ
ವಿಟ್ಲ: ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ವಿಟ್ಲ ಠಾಣಾ ವ್ಯಾಪ್ತಿಯ ನಿವಾಸಿಯಾಗಿರುವ ಸಂತ್ರಸ್ತ ಅಪ್ರಾಪ್ತ ಬಾಲಕ ನೀಡಿದ ದೂರಿನಂತೆ, 2026ರ ಫೆಬ್ರವರಿಯಿಂದ ಆಗಸ್ಟ್ ತಿಂಗಳ ಅವಧಿಯಲ್ಲಿ ಲೈಂಗಿಕ ದೌರ್ಜನ್ಯ ನಡೆದಿರುವುದಾಗಿ ಆರೋಪಿಸಲಾಗಿದೆ. ಈ ಕುರಿತು ಸೆಪ್ಟೆಂಬರ್ 4, 2026ರಂದು ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು. ದೂರಿನ ಆಧಾರದ ಮೇಲೆ ವಿಟ್ಲ ಪೊಲೀಸ್ ಠಾಣೆಯಲ್ಲಿ
Sep 81 min read


24 ವರ್ಷಗಳ ಬಳಿಕ IVF ಮೂಲಕ ಪಡೆದ ಅವಳಿ ಮಕ್ಕಳ ಸಾವು: ತಾಯಿಯಿಂದಲೇ ಕೃತ್ಯ!
ಬೆಂಗಳೂರು: 24 ವರ್ಷಗಳ ದಾಂಪತ್ಯ ಜೀವನದ ಬಳಿಕ IVF ಚಿಕಿತ್ಸೆಯ ಮೂಲಕ ಅವಳಿ ಹೆಣ್ಣು ಮಕ್ಕಳನ್ನು ಪಡೆದಿದ್ದ ದಂಪತಿಯ ಕುಟುಂಬದಲ್ಲಿ ದುರಂತ ಸಂಭವಿಸಿದೆ. ನಾಲ್ಕು ತಿಂಗಳ ಅವಳಿ ಮಕ್ಕಳು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಬೆಂಗಳೂರಿನ ವಾಜರಹಳ್ಳಿಯ ಬಿಸಿಸಿಹೆಚ್ಎಸ್ ಲೇಔಟ್ನಲ್ಲಿ ನಡೆದಿದೆ. ಮಕ್ಕಳ ತಾಯಿಯೇ ಈ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದ್ದು, ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿರುವುದಾಗಿ ತಿಳಿದುಬಂದಿದೆ. ವಾಜರಹಳ್ಳಿಯ ನಿವಾಸಿಗಳಾದ ರಾಮಲಿಂಗಪ್ಪ ಮತ್ತು ಉಮಾದೇವಿ 2002ರಲ್ಲಿ ವಿವಾಹವಾಗಿದ್ದರು. ಹಲವು ವರ್ಷಗಳ ಕಾಲ ಮಕ್ಕಳಿಗಾಗಿ ಕಾದಿದ್ದ ದಂಪತಿ, ಬಳಿಕ IVF ಚಿಕಿತ್ಸೆಯ ಮೊರ
Sep 41 min read


ಪುತ್ತೂರು ಪ್ರೆಸ್ ಕ್ಲಬ್ನಲ್ಲಿ ತಳ್ಳಾಟ, ನಿಂದನೆ: ಪ್ರಕರಣ ದಾಖಲು
ಪುತ್ತೂರು: ಸ್ಪಷ್ಟನೆ ನೀಡಲು ಪ್ರೆಸ್ ಕ್ಲಬ್ಗೆ ಆಗಮಿಸಿದ್ದ ರಾಜಕೀಯ ಪಕ್ಷವೊಂದರ ಕಾರ್ಯಕರ್ತನಿಗೆ ತಳ್ಳಾಡಿ, ಅವಾಚ್ಯವಾಗಿ ನಿಂದಿಸಿ ಜೀವ ಬೆದರಿಕೆ ಹಾಕಿದ ಘಟನೆ ಸೆ. 1ರಂದು ನಡೆದಿದೆ. ಕೆಮ್ಮಿಂಜೆ ನಿವಾಸಿ ಅಬ್ದುಲ್ ಹಕೀಂ ದೂರು ನೀಡಿದವರಾಗಿದ್ದಾರೆ. ತಮ್ಮ ಮೇಲಿನ ಆರೋಪಗಳಿಗೆ ಸ್ಪಷ್ಟನೆ ನೀಡಲು ಅವರು ಪತ್ರಿಕಾಗೋಷ್ಠಿಗೆ ಬಂದಿದ್ದಾಗ ಉದಯ ಪಾಟಾಳಿ, ಜುನೈದ್ ಬಿಜಿ, ಇಸಾಕ್ ಸಾಲ್ಮರ, ಬಶೀರ್ ಪರ್ಲಡ್ಕ ಸೇರಿದಂತೆ ಹಲವರು ಸೇರಿ ದೌರ್ಜನ್ಯ ಎಸಗಿದ್ದಾರೆ ಎನ್ನಲಾಗಿದೆ. ಅಲ್ಲದೆ ಪ್ರೆಸ್ ಕ್ಲಬ್ನಿಂದ ಹೊರಬರದಂತೆ ಅಕ್ರಮವಾಗಿ ತಡೆದಿದ್ದಾರೆ ಎಂದೂ ಆರೋಪಿಸಲಾಗಿದೆ. ಈ ಕುರಿತು ಅಬ್ದುಲ್ ಹಕೀಂ ನೀಡಿದ
Sep 31 min read


ಮನೆಗೆ ತಡವಾಗಿ ಬಂದಿದ್ದಕ್ಕೆ ಮಾತಿನ ಚಕಮಕಿ: ಕೆರೆಗೆ ಬಿದ್ದು ಪ್ರಾಣ ಕಳೆದುಕೊಂಡ ತಾಯಿ-ಮಗಳು
ಮಡಿಕೇರಿ: ಮನೆಗೆ ತಡವಾಗಿ ಬಂದಿದ್ದಕ್ಕೆ ತಾಯಿ ಗದರಿಸಿದ್ದರಿಂದ ಮನನೊಂದ ಮಗಳು ಕೆರೆಗೆ ಹಾರಿದ್ದು, ಆಕೆಯನ್ನು ರಕ್ಷಿಸಲು ಹೋದ ತಾಯಿಯೂ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ಕೊಡಗು ಜಿಲ್ಲೆಯ ತಲಕಾವೇರಿ ಸಮೀಪದ ಕೆಂಪರಾಜಮೊಟ್ಟೆ ಕಾಲೋನಿಯಲ್ಲಿ ನಡೆದಿದೆ. ಮೃತರನ್ನು ಪ್ರೇಮಾ (45) ಹಾಗೂ ಅವರ ಮಗಳು ಪ್ರಿಯಾಂಕಾ (14) ಎಂದು ಗುರುತಿಸಲಾಗಿದೆ. ಪ್ರಿಯಾಂಕಾ ಕರಿಕೆಯ ಆಶ್ರಮ ಶಾಲೆಯಲ್ಲಿ 8ನೇ ತರಗತಿ ವ್ಯಾಸಂಗ ಮಾಡುತ್ತಿದ್ದಳು. ಶನಿವಾರ ಶಾಲೆಯಿಂದ ಮನೆಗೆ ತಡವಾಗಿ ಬಂದಿದ್ದಕ್ಕೆ ತಾಯಿ ಪ್ರೇಮಾ ಆಕೆಯನ್ನು ಗದರಿಸಿದ್ದರು. ಇದರಿಂದ ಆಕ್ರೋಶಗೊಂಡ ಪ್ರಿಯಾಂಕಾ, ಮನೆಯ ಪಕ್ಕದಲ್ಲಿದ್ದ ಕೆರೆಗೆ
Sep 11 min read


ಪುತ್ತೂರಿನಲ್ಲಿ ಅಕ್ರಮ ಗೋ ಸಾಗಾಟ ಪತ್ತೆ: ಪಿಕ್ಅಪ್ ವಾಹನ ತಡೆದು ಓರ್ವ ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ ಭಜರಂಗದಳ
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಜಿಡೆಕಲ್ಲು ಬಳಿ ಮುಂಜಾನೆ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ಆರೋಪದ ಮೇಲೆ ಪಿಕ್ಅಪ್ ವಾಹನವನ್ನು ತಡೆದು, ಮೂರು ಹಸುಗಳು ಹಾಗೂ ಒಂದು ಹೋರಿಯನ್ನು ರಕ್ಷಿಸಲಾಗಿದೆ. ಖಚಿತ ಮಾಹಿತಿ ಆಧರಿಸಿ ಭಜರಂಗದಳದ ಕಾರ್ಯಕರ್ತರು ಜಿಡೆಕಲ್ಲು ಬಳಿ ವಾಹನವನ್ನು ತಡೆದು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಗೋವುಗಳನ್ನು ವಾಹನದಲ್ಲಿ ಕ್ರೂರ ಹಾಗೂ ಅಮಾನುಷ ರೀತಿಯಲ್ಲಿ ಸಾಗಿಸುತ್ತಿದ್ದದ್ದು ಪತ್ತೆಯಾಗಿದೆ ಎನ್ನಲಾಗಿದೆ. ವಾಹನದಲ್ಲಿದ್ದ ಮೂವರು ಆರೋಪಿಗಳ ಪೈಕಿ ಇಬ್ಬರು ಸ್ಥಳದಿಂದ ಪರಾರಿಯಾಗಿದ್ದು, ಓರ್ವನನ್ನು ಭಜರಂಗದಳದ ಕಾರ್ಯಕರ್ತರು ಹಿಡಿದು ಪೊಲೀಸರಿಗ
Aug 231 min read


ಕಲ್ಲೇಗ ಕೊಲೆ ಪ್ರಕರಣ: ಪ್ರಮುಖ ಆರೋಪಿ ಚೇತನ್ಗೆ ಹೈಕೋರ್ಟ್ ಜಾಮೀನು
ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥರಾಗಿದ್ದ ಅಕ್ಷಯ್ ಕಲ್ಲೇಗ ಅವರ ಕೊಲೆ ಪ್ರಕರಣದಲ್ಲಿ ಪ್ರಥಮ ಆರೋಪಿ ಕೃಷ್ಣನಗರದ ಚೇತನ್ಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಪ್ರಕರಣದಲ್ಲಿ ಪ್ರಮುಖ ಆರೋಪಿಗಳಿಗೆ ಜಾಮೀನು ದೊರೆಯುತ್ತಿರುವುದು ಮಹತ್ವದ ಬೆಳವಣಿಗೆಯಾಗಿದೆ. 2023ರ ನವೆಂಬರ್ 6ರಂದು ರಾತ್ರಿ ನೆಹರುನಗರದಲ್ಲಿ ಅಕ್ಷಯ್ ಕಲ್ಲೇಗ ಅವರನ್ನು ಹತ್ಯೆ ಮಾಡಲಾಗಿತ್ತು. ಘಟನೆಗೆ ಸಂಬಂಧಿಸಿ ಕೃಷ್ಣನಗರದ ಚೇತನ್, ಪಡೀಲು ನಿವಾಸಿ ಮನೀಷ್, ಬನ್ನೂರಿನ ಮಂಜುನಾಥ್ ಯಾನೆ ಹರಿ ಹಾಗೂ ಕೇಶವ ಪಡೀಲ್ ಅವರನ್ನು ಪೊಲೀಸರು ಬಂಧಿಸಿದ್ದರು. ಪ್ರಕರಣದಲ್ಲಿ ಸುಮಾರು ಮೂರು ವರ್ಷಗಳ ಬಳಿಕ ಪ್ರಥಮ ಆರೋಪಿ ಚೇತನ್
Aug 231 min read


ಪುತ್ತೂರು: ಡಿಜಿಟಲ್ ಸೇವಾ ಕೇಂದ್ರದಲ್ಲಿ ದಾಖಲೆ ವಿವಾದಕ್ಕೆ ಗಲಾಟೆ; ಓರ್ವನ ಬಂಧನ, ಮೂರು ಪ್ರಕರಣ ದಾಖಲು
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ದರ್ಬೆ ಪ್ರದೇಶದಲ್ಲಿರುವ ಡಿಜಿಟಲ್ ಸೇವಾ ಕೇಂದ್ರವೊಂದರಲ್ಲಿ ದಾಖಲೆಗಳಿಗೆ ಸಂಬಂಧಿಸಿದ ವಿವಾದ ವಿಕೋಪಕ್ಕೆ ತಿರುಗಿ ಎರಡು ಗುಂಪುಗಳ ನಡುವೆ ಭೀಕರ ಗಲಾಟೆ ನಡೆದಿದೆ. ತಾಂತ್ರಿಕ ದೋಷದಿಂದ ಕೆಲವು ಪ್ರಮುಖ ದಾಖಲೆಗಳು ಹಾನಿಗೊಳಗಾದ ವಿಚಾರವಾಗಿ ಆರಂಭವಾದ ವಾಗ್ವಾದವು ಅಂತಿಮವಾಗಿ ಪರಸ್ಪರ ಹಲ್ಲೆ ಮತ್ತು ಕ್ರಿಮಿನಲ್ ಬೆದರಿಕೆಗೆ ಕಾರಣವಾಗಿದೆ. ಘಟನೆಗೆ ಸಂಬಂಧಿಸಿದಂತೆ ಹಲ್ಲೆಗೊಳಗಾದ ಮಹಿಳೆಯೊಬ್ಬರು ನೀಡಿದ ದೂರಿನನ್ವಯ, ಹಾನಿಗೊಳಗಾದ ದಾಖಲೆಗಳನ್ನು ಸರಿಪಡಿಸಿಕೊಡಲು ಅಥವಾ ₹300 ವೆಚ್ಚ ಪಾವತಿಸಲು ಕೋರಿದಾಗ ಅಂಗಡಿ ಮಾಲೀಕರು ತಮ್ಮ ಮೇಲೆ ಹಲ್ಲೆ ನಡೆಸಿ ಬೆದರಿಕೆ ಹ
Aug 231 min read


ಉಡುಪಿಯಲ್ಲಿ 10.8 ಟನ್ ರಾಸಾಯನಿಕ ಬಳಸಿಹಣ್ಣಾಗಿಸಿದ್ದ ಬಾಳೆಹಣ್ಣುಗಳ ವಶ
ರಾಸಾಯನಿಕ ಬಳಸಿ ಹಣ್ಣಾಗಿಸಿದ್ದ 10.89 ಟನ್ ಬಾಳೆಹಣ್ಣು ಉಡುಪಿಯಲ್ಲಿ ವಶ ಉಡುಪಿ: ಜಿಲ್ಲೆಯಲ್ಲಿ ಆಹಾರ ಸುರಕ್ಷತಾ ಅಧಿಕಾರಿಗಳು ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ, ರಾಸಾಯನಿಕ ಬಳಸಿ ಹಣ್ಣಾಗಿಸಲಾಗಿದೆ ಎಂದು ಶಂಕಿಸಲಾದ 10,890 ಕೆ.ಜಿ. ಬಾಳೆಹಣ್ಣುಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಲೆವೂರು, ಕೆಮ್ತೂರು ಹಾಗೂ ದುಗ್ಗಲಿಪಾಡವು ಪ್ರದೇಶಗಳಲ್ಲಿರುವ ಬಾಳೆಹಣ್ಣು ಮಾರಾಟದ ಅಂಗಡಿಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿದರು. ಈ ವೇಳೆ ಹೆಚ್ಚಿನ ಪ್ರಮಾಣದ ಬಾಳೆಹಣ್ಣುಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಲಾಗಿದೆ. ಅಧಿಕಾರಿಗಳ ಪ್ರಕಾರ, ಬಾಳೆಹಣ್ಣುಗಳನ್ನು ನೈಸರ್ಗಿಕವಾಗಿ ಹಣ್ಣಾಗಿಸುವ ಬದಲು ರಾಸಾಯನಿ
Aug 201 min read


ಪೋಷಕರಿಗೆ ದೂರು ನೀಡುವ ಭಯ: ತರಗತಿ ಶಿಕ್ಷಕಿಯನ್ನೇ ಸಂಚು ರೂಪಿಸಿ ಕೊಂದ 10ನೇ ತರಗತಿ ವಿದ್ಯಾರ್ಥಿಗಳು!
ತೆಲಂಗಾಣದ ನಲ್ಗೊಂಡ ಜಿಲ್ಲೆಯ ಕೊಂಡಮಲ್ಲೇಪಲ್ಲಿಯಲ್ಲಿ ದುಬಾರಿ ಜೀವನಶೈಲಿಯ ಆಸೆಗೆ ಬಿದ್ದ ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳು, ತಮ್ಮ ಬಳಿಯಿದ್ದ ಅಕ್ರಮ ಹಣ ಮತ್ತು ಮೊಬೈಲ್ ವಿಚಾರವನ್ನು ಪೋಷಕರಿಗೆ ತಿಳಿಸುವುದಾಗಿ ಎಚ್ಚರಿಸಿದ ರೂಪಾ ರೆಡ್ಡಿ ಎಂಬ ಶಿಕ್ಷಕಿಯನ್ನು ಭೀಕರವಾಗಿ ಕೊಲೆ ಮಾಡಿದ್ದಾರೆ. ಹಾಸ್ಟೆಲ್ ತಪಾಸಣೆ ವೇಳೆ ಸಿಕ್ಕಿಬಿದ್ದಿದ್ದ ವಿದ್ಯಾರ್ಥಿಗಳು, ಶಿಕ್ಷಕಿಯ ವಿರುದ್ಧ ದ್ವೇಷ ಸಾಧಿಸಿ ವಾರದ ಹಿಂದೆಯೇ ಕೊಲೆಗೆ ಸಂಚು ರೂಪಿಸಿದ್ದರು. ಚಾಕು, ಮುಖವಾಡ ಧರಿಸಿ ಮನೆಯೊಳಗೆ ನುಗ್ಗಿ ಈ ಕೃತ್ಯ ಎಸಗಿದ್ದಾರೆ. ಕೊನೆಯದಾಗಿ ಶಿಕ್ಷಕಿ ಫೋನ್ನಲ್ಲಿ ಮಾತನಾಡುತ್ತಿದ್ದಾಗ 'ಬಾಬು' ಎಂದು ಉಚ್ಚರಿಸಿ
Aug 201 min read


ಇನ್ಸ್ಟಾಗ್ರಾಂ ರೀಲ್ಸ್ ನಂಬಿ 16 ವರ್ಷದ ಬಾಲಕನ ಹತ್ಯೆ; ‘ಮಾನವ ವೃಷಣ’ ಮಾರಾಟದ ಸುಳ್ಳು ಸುದ್ದಿ ನಂಬಿ ಭೀಕರ ಕೃತ್ಯ!
ಭೋಪಾಲ್: ಇನ್ಸ್ಟಾಗ್ರಾಂನಲ್ಲಿ ಹರಿದಾಡಿದ ಸುಳ್ಳು ರೀಲ್ಸ್ಗಳನ್ನು ನಂಬಿದ 20 ವರ್ಷದ ಬಿಬಿಎ ವಿದ್ಯಾರ್ಥಿಯೊಬ್ಬ, ಗಲ್ಫ್ ರಾಷ್ಟ್ರಗಳಲ್ಲಿ ಮಾನವ ವೃಷಣಗಳಿಗೆ ₹1ರಿಂದ ₹1.5 ಕೋಟಿ ವರೆಗೆ ಬೆಲೆ ಇದೆ ಎಂದು ಭಾವಿಸಿ, ಇತರರನ್ನು ನಂಬಿಸಿ 16 ವರ್ಷದ ಬಾಲಕನ ಹತ್ಯೆಗೆ ಕಾರಣನಾದ ಆರೋಪ ಕೇಳಿಬಂದಿದೆ. ಭೋಪಾಲ್ನ ಜೋಹೆಬ್ ಖಾನ್ ಎಂಬ ಬಿಬಿಎ ವಿದ್ಯಾರ್ಥಿ ಇನ್ಸ್ಟಾಗ್ರಾಂನಲ್ಲಿ ಮಾನವ ವೃಷಣಗಳು ಗಲ್ಫ್ ರಾಷ್ಟ್ರಗಳಲ್ಲಿ ಕೋಟ್ಯಂತರ ರೂಪಾಯಿಗೆ ಮಾರಾಟವಾಗುತ್ತವೆ ಎಂಬ ರೀಲ್ಸ್ಗಳನ್ನು ನೋಡಿದ್ದಾನೆ ಎನ್ನಲಾಗಿದೆ. ಇದೇ ರೀತಿಯ ಮತ್ತಷ್ಟು ರೀಲ್ಸ್ಗಳು ಆತನಿಗೆ ಕಾಣಿಸಿಕೊಂಡ ಪರಿಣಾಮ, ಈ ಸುಳ್ಳು ಮಾಹಿತಿಯನ
Aug 191 min read


ಚಾಮರಾಜನಗರದಲ್ಲಿ ಗುಂಡಿನ ಸದ್ದು: ಅರಣ್ಯ ಸಿಬ್ಬಂದಿ–ಶಂಕಿತ ಬೇಟೆಗಾರರ ನಡುವೆ ಗುಂಡಿನ ಚಕಮಕಿ; ಮೂವರು ಸಾವು, DRFO ಕಚೇರಿ ಧ್ವಂಸ
ಚಾಮರಾಜನಗರ, ಆ.15: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಹನೂರು ತಾಲೂಕಿನ ಶಾಗ್ಯ ಸಮೀಪದ ಹೊಳೆದಟ್ಟಿ ಅರಣ್ಯ ಪ್ರದೇಶದಲ್ಲಿ ಅರಣ್ಯ ಸಿಬ್ಬಂದಿ ಮತ್ತು ಶಂಕಿತ ಬೇಟೆಗಾರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಮೃತಪಟ್ಟಿರುವ ಘಟನೆ ಶನಿವಾರ ನಡೆದಿದೆ. ಘಟನೆಯ ಬಳಿಕ ಮೃತರ ಸಂಬಂಧಿಕರು ಹಾಗೂ ಗ್ರಾಮಸ್ಥರು ಆಕ್ರೋಶಗೊಂಡು ಶಾಗ್ಯದಲ್ಲಿರುವ DRFO ಕಚೇರಿಗೆ ನುಗ್ಗಿ ಪೀಠೋಪಕರಣಗಳನ್ನು ಧ್ವಂಸಗೊಳಿಸಿದ್ದಾರೆ. ಇದರಿಂದ ಪ್ರದೇಶದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಮೃತರನ್ನು ಹನೂರು ತಾಲೂಕಿನ ತೋಮಿಯರ್ಪಾಳ್ಯದ ನಿವಾಸಿಗಳಾದ ಕುಮಾರ್, ಆಂಥೋಣಿಸ್ವಾಮಿ ಹಾಗೂ ಪೀಟರ್ ಎಂದು ಗುರುತಿಸಲ
Aug 152 min read


ಬಂಟ್ವಾಳದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹4.90 ಲಕ್ಷ ಮೌಲ್ಯದ ಎಂ.ಡಿ.ಎಂ.ಎ, ಗಾಂಜಾ, ಕಾರು–ಮೊಬೈಲ್ಗಳು ವಶ
ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸರು ನಡೆಸಿದ ಭರ್ಜರಿ ಕಾರ್ಯಾಚರಣೆಯಲ್ಲಿ ನಿಷೇಧಿತ ಮಾದಕ ವಸ್ತುಗಳಾದ ಎಂ.ಡಿ.ಎಂ.ಎ ಹಾಗೂ ಗಾಂಜಾ ಸೇರಿದಂತೆ ಒಟ್ಟು ₹4.90 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದು, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಆಗಸ್ಟ್ 12ರಂದು ಬಂಟ್ವಾಳ ಕಾವಳಪಡೂರು ವ್ಯಾಪ್ತಿಯಲ್ಲಿ ಬಂಟ್ವಾಳ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕ ಯಶ್ ಕುಮಾರ್ ಶರ್ಮಾ, ಐಪಿಎಸ್ ಅವರ ನೇತೃತ್ವದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದರು. ದಾಳಿಯ ವೇಳೆ ಸುಮಾರು ₹2.25 ಲಕ್ಷ ಮೌಲ್ಯದ 22.57 ಗ್ರಾಂ ಎಂ.ಡಿ.ಎಂ.ಎ, 30.34 ಗ್ರಾಂ ಗಾಂಜಾ, ಮಾದಕ ವಸ್ತುಗಳ ಸಾಗಾಟಕ್ಕೆ ಬಳಸಲಾಗುತ್ತಿದ್ದ ಕಾರ
Aug 141 min read


ಉಳ್ಳಾಲದಲ್ಲಿ ಕತ್ತಿ ಹಿಡಿದು ಸಾರ್ವಜನಿಕರಿಗೆ ಬೆದರಿಕೆ: ಇಬ್ಬರ ಬಂಧನ
ಉಳ್ಳಾಲ: ಮಧ್ಯರಾತ್ರಿ ಮದ್ಯಪಾನದ ಮತ್ತಿನಲ್ಲಿ ಕತ್ತಿ ಹಿಡಿದು ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸಿ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ರೌಡಿಶೀಟರ್ ಸೇರಿ ಇಬ್ಬರನ್ನು ಮಂಗಳೂರು ಪೊಲೀಸರು ಶನಿವಾರ ತಡರಾತ್ರಿ ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಮಾರ್ಗತಲೆ ಉಳ್ಳಾಲ ನಿವಾಸಿ ಹಾಗೂ ವೆಲ್ಡಿಂಗ್ ಕೆಲಸ ಮಾಡುತ್ತಿದ್ದ ಮಹಮ್ಮದ್ ಶಕೀರ್ (31) ಮತ್ತು ಮಂಚಿಲ ಉಳ್ಳಾಲ ನಿವಾಸಿ, ಆಟೋ ಚಾಲಕ ಅಶ್ಫಾಕ್ (28) ಎಂದು ಗುರುತಿಸಲಾಗಿದೆ. ಶನಿವಾರ ತಡರಾತ್ರಿ ಸುಮಾರು 12ರಿಂದ 12.20ರ ನಡುವೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಹಮ್ಮದ್ ಶಕೀರ್ ಮದ್ಯ ಸೇವಿಸಿ ಕತ್ತಿ ಹಿಡಿದು ಸಾರ್ವಜನಿಕರ ಮೇ
Aug 101 min read


ಡೇವಿಡ್ ಡಿಸೋಜ ಹತ್ಯೆ ಪ್ರಕರಣ: ಯುಪಿಸಿಎಲ್ ಗುತ್ತಿಗೆ ವೈಮನಸ್ಸೇ ಕೊಲೆಗೆ ಕಾರಣ? ಸುಪಾರಿ ಕಿಂಗ್ ಪತ್ತೆಗೆ ಜಾಲ!
ಉಡುಪಿಯ ಕಾಂಗ್ರೆಸ್ ಮುಖಂಡ ಹಾಗೂ ಉದ್ಯಮಿ ಡೇವಿಡ್ ಡಿಸೋಜ ಅವರ ಬರ್ಬರ ಹತ್ಯೆ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಉತ್ತರ ಭಾರತದ ವ್ಯಕ್ತಿಯೊಬ್ಬ ಹತ್ಯೆಗೆ ಸುಪಾರಿ ನೀಡಿರುವುದು ಪೊಲೀಸರ ತನಿಖೆಯಲ್ಲಿ ಪತ್ತೆಯಾಗಿದೆ. ಯುಪಿಸಿಎಲ್ ಗುತ್ತಿಗೆಗೆ ಸಂಬಂಧಿಸಿದಂತೆ ಉಂಟಾದ ಆರ್ಥಿಕ ವೈಮನಸ್ಸೇ ಈ ಕೊಲೆಗೆ ಪ್ರಮುಖ ಕಾರಣವಾಗಿರಬಹುದು ಎಂಬ ಬಲವಾದ ಅನುಮಾನ ವ್ಯಕ್ತವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ಅವರು, ಡೇವಿಡ್ ಹಾಗೂ ಮತ್ತೊಬ್ಬ ಗುತ್ತಿಗೆದಾರನ ನಡುವೆ ಕೋಟಿಗಟ್ಟಲೆ ಮೌಲ್ಯದ ಗುತ್ತಿಗೆ ವಿಚಾರದಲ್ಲಿ ತೀವ್ರ ವೈಮನಸ್ಸು ಉಂಟಾಗಿತ್
Aug 91 min read


ಹಣಕಾಸು ವೈಷಮ್ಯಕ್ಕೆ ಕಾಂಗ್ರೆಸ್ ಮುಖಂಡನ ಹತ್ಯೆ: ಪರಾರಿಯಾಗಲು ಯತ್ನಿಸಿದ ಆರೋಪಿ ಕಾಲಿಗೆ ಗುಂಡೇಟು!
ಉಡುಪಿ: ಮುದರಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಹಾಗೂ ಗುತ್ತಿಗೆದಾರ ಡೇವಿಡ್ ಡಿಸೋಜಾ ಅವರ ಹಾಡಹಗಲಿನ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಮೂವರು ಶಾರ್ಪ್ ಶೂಟರ್ಗಳನ್ನು ಬಂಧಿಸಿದ್ದಾರೆ. ಹಣಕಾಸಿನ ವೈಷಮ್ಯದ ಹಿನ್ನೆಲೆಯಲ್ಲಿ ಉತ್ತರ ಭಾರತದ ಸುಪಾರಿ ಕಿಲ್ಲರ್ಗಳಿಗೆ ಗುತ್ತಿಗೆ ನೀಡಿ ಈ ಕೊಲೆ ಮಾಡಿಸಲಾಗಿದೆ ಎಂಬುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಬಂಧಿತ ಆರೋಪಿಗಳನ್ನು ಉತ್ತರ ಪ್ರದೇಶ, ಜಾರ್ಖಂಡ್ ಹಾಗೂ ಬಿಹಾರ ಮೂಲದ ಶಾರ್ಪ್ ಶೂಟರ್ಗಳು ಎಂದು ಗುರುತಿಸಲಾಗಿದೆ. ಹತ್ಯೆಯ ನಂತರ ಪರಾರಿಯಾಗಲು ಯತ್ನಿಸುತ್ತಿದ್ದ ಆ
Aug 81 min read


ಡೇವಿಡ್ ಡಿಸೋಜಾ ಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ಶಿರೂರು ಬಳಿ ಮೂವರು ಶೂಟರ್ಗಳು ಅರೆಸ್ಟ್
ಹಣಕಾಸಿನ ವಿಚಾರಕ್ಕೆ ಉತ್ತರ ಭಾರತದ ಶೂಟರ್ಗಳಿಗೆ ಸುಪಾರಿ; ಮೂವರು ಆರೋಪಿಗಳ ಬಂಧನ — ಪರಾರಿಯಾಗಲು ಯತ್ನಿಸಿದ ಆರೋಪಿ ಕಾಲಿಗೆ ಪೊಲೀಸರಿಂದ ಗುಂಡು ಉಡುಪಿ, ಆ. 8: ಮುದರಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಹಾಗೂ ಗುತ್ತಿಗೆದಾರ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಡೇವಿಡ್ ಡಿಸೋಜಾ ಅವರನ್ನು ಹತ್ಯೆ ಮಾಡಲು ಉತ್ತರ ಭಾರತದ ಸುಪಾರಿ ಕಿಲ್ಲರ್ಗಳಿಗೆ ಗುತ್ತಿಗೆ ನೀಡಲಾಗಿತ್ತು ಎಂಬುದು ಪೊಲೀಸ್ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ, ಜಾರ್ಖಂಡ್ ಹಾಗೂ ಬಿಹಾರ ಮೂಲದ
Aug 82 min read


ಅಪ್ಪನ ರೂಪದಲ್ಲಿ ಬಂದ ಕ್ರೂರಿ..! ನಾಲ್ಕು ವರ್ಷದ ಮಗಳ ಮೇಲೆ ಅಮಾನವೀಯ ಕೃತ್ಯ
ಗಾಂಧೀನಗರ (ಗುಜರಾತ್): ಮಾನವೀಯತೆಯನ್ನೇ ಬೆಚ್ಚಿಬೀಳಿಸುವ ಘಟನೆ ಗುಜರಾತ್ನ ಗಾಂಧೀನಗರದಲ್ಲಿ ಬೆಳಕಿಗೆ ಬಂದಿದೆ. ಪತ್ನಿ ಮನೆ ಬಿಟ್ಟು ತವರು ಮನೆಗೆ ತೆರಳಿದ ಕೋಪದಲ್ಲಿ ಸ್ವಂತ ನಾಲ್ಕು ವರ್ಷದ ಮಗಳ ಮೇಲೆಯೇ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ 32 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಪ್ರಕಾರ, ಆರೋಪಿ ತನ್ನ ಮನೆಯಲ್ಲಿ ವಾಸವಾಗಿದ್ದ ಪತ್ನಿಯ ಸ್ನೇಹಿತೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದನು. ಆಕೆ ಒಬ್ಬಳೇ ಇದ್ದ ವೇಳೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪವೂ ಕೇಳಿಬಂದಿದೆ. ಈ ವಿಚಾರ ತಿಳಿದ ಬಳಿಕ ಪತಿ-ಪತ್ನಿ ನಡುವೆ ತೀವ್ರ ಜಗಳ ನಡೆದಿದ್ದು, ಮನನೊಂದ ಪತ್ನಿ ತನ್ನ ನಾಲ್ಕು
Aug 71 min read


ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಉಮರ್ ಫಾರೂಕ್ ಎನ್ಐಎ ಬಲೆಗೆ
ಮಂಗಳೂರು, ಆ.6: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮತ್ತೊಬ್ಬ ಆರೋಪಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಅಧಿಕಾರಿಗಳು ಕೇರಳದ ಕೊಚ್ಚಿಯಲ್ಲಿ ಬಂಧಿಸಿದ್ದಾರೆ. ಬಂಧಿತನನ್ನು ಸುಳ್ಯ ತಾಲೂಕಿನ ಕಲ್ಲುಮುಟ್ಟು ನಿವಾಸಿ ಉಮರ್ ಫಾರೂಕ್ ಎಂದು ಗುರುತಿಸಲಾಗಿದೆ. ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳ ಪಟ್ಟಿಯಲ್ಲಿ ಈತನ ಹೆಸರು ಇದ್ದು, ಮಾಹಿತಿ ನೀಡಿದವರಿಗೆ ಎನ್ಐಎ ₹2 ಲಕ್ಷ ಬಹುಮಾನ ಘೋಷಿಸಿತ್ತು. 2022ರ ಜುಲೈ 26ರಂದು ನಡೆದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆಯಲ್ಲಿ, ಪಿಎಫ್ಐ ಸಂಘಟನೆಯ ಕಾರ್ಯಕರ್ತರು ಹಿಂದ
Aug 61 min read
Archive
bottom of page



