top of page
News Articles
Sathyapatha News Plus


ಸುಳ್ಯ: ಸಾಲ ಮರಳಿಸುವ ನೆಪದಲ್ಲಿ ಚಿನ್ನಾಭರಣ ದೋಚಿದ ಮಹಿಳೆ ಆರೋಪಿಯನ್ನು ಬಂಧಿಸಿದ ಪೊಲೀಸರು
ಸಾಲ ಮರುಪಾವತಿಸುವ ನೆಪದಲ್ಲಿ ಮನೆಗೆ ಬಂದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿದ್ದ ಶೃತಿ ಹಾಗೂ ಆಕೆಗೆ ಸಹಕರಿಸಿದ ಪ್ರದೀಪ್ ಎಂಬುವವರನ್ನು ಸುಳ್ಯ ಪೊಲೀಸರು ಬಂಧಿಸಿದ್ದಾರೆ. ಪುಣ್ಯಶ್ರೀ ಎಂಬುವವರ ತಂದೆಯಿಂದ 6 ಲಕ್ಷ ರೂ. ಸಾಲ ಪಡೆದಿದ್ದ ಶೃತಿ, ಏಪ್ರಿಲ್ 7 ರಂದು ಹಣ ನೀಡುವ ನೆಪದಲ್ಲಿ ಅವರ ಮನೆಗೆ ಬಂದಿದ್ದರು. ಮನೆಯವರು ಕೆಲಸಕ್ಕೆ ತೆರಳಿದ್ದನ್ನು ಗಮನಿಸಿ, ಕಪಾಟಿನ ಬೀಗದ ಕೀ ಬಳಸಿ ಸುಮಾರು 62.5 ಗ್ರಾಂ ಚಿನ್ನಾಭರಣಗಳನ್ನು ಕಳವು ಮಾಡಿದ್ದರು. ಮನೆಯವರು ನೀಡಿದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, ಅವರಿಂದ ಕಳವಾದ ಸುಮಾರು 5 ಲಕ್ಷ ರೂ.
2 days ago1 min read


ಮಾರಕಾಸ್ತ್ರಗಳಿಂದ ಕೊಚ್ಚಿ ಸರ್ಕಾರಿ ಶಾಲಾ ಶಿಕ್ಷಕಿಯ ಭೀಕರ ಕೊಲೆ
ಕಲಬುರಗಿ: ಜಿಲ್ಲೆಯ ಕಮಲಾಪುರ ತಾಲೂಕಿನ ಕಲ್ಮೂಡ ಗ್ರಾಮದ ಬಳಿ ಸರ್ಕಾರಿ ಶಾಲಾ ಶಿಕ್ಷಕಿ ಜ್ಯೋತಿ ಕಪಾಳೆ ಹಿರೇಮಠ (57) ಅವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಹಂತಕರು ಸಾಕ್ಷ್ಯ ನಾಶಪಡಿಸಲು ಪೆಟ್ರೋಲ್ ಸುರಿದು ಶವವನ್ನು ಸುಟ್ಟುಹಾಕಿದ್ದು, ಈ ಕೃತ್ಯವು ಇಡೀ ಜಿಲ್ಲೆಯನ್ನು ಬೆಚ್ಚಿಬೀಳಿಸಿದೆ. ಮೃತರು ಬೀದರ್ ಜಿಲ್ಲೆಯ ವಂದರಖೇಡ ಗ್ರಾಮದ ಶಾಲೆಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಕಲಬುರಗಿಯಿಂದ ಬೀದರ್ಗೆ ತೆರಳುವ ಮಾರ್ಗಮಧ್ಯೆ ಈ ಅಮಾನುಷ ಘಟನೆ ನಡೆದಿದೆ. ಆರಂಭದಲ್ಲಿ ಅಪರಿಚಿತ ಮಹಿಳೆಯ ಕೊಲೆ ಎಂದು ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು, ನಂತರ ತನಿಖ
7 days ago1 min read


ಭಾರತದ ಇತಿಹಾಸದಲ್ಲೇ ಮಹತ್ವದ ತೀರ್ಪು ತಂದೆ-ಮಗನ ಲಾಕಪ್ ಡೆತ್ ಪ್ರಕರಣ: ಒಂಬತ್ತು ಪೊಲೀಸರಿಗೆ ಮರಣದಂಡನೆ ಶಿಕ್ಷೆ
ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾಥನ್ಕುಲಂನಲ್ಲಿ ನಡೆದ ತಂದೆ-ಮಗನ ಅಮಾನವೀಯ ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧುರೈ ಜಿಲ್ಲಾ ನ್ಯಾಯಾಲಯ ಐತಿಹಾಸಿಕ ತೀರ್ಪು ನೀಡಿದೆ. ಪೊಲೀಸ್ ಕಸ್ಟಡಿಯಲ್ಲಿ ಜಯರಾಜ್ ಮತ್ತು ಬೆನ್ನಿಕ್ಸ್ ಅವರ ಸಾವಿಗೆ ಕಾರಣರಾದ ಇನ್ಸ್ಪೆಕ್ಟರ್ ಶ್ರೀಧರ್ ಸೇರಿದಂತೆ ಒಂಬತ್ತು ಪೊಲೀಸರಿಗೆ ನ್ಯಾಯಾಧೀಶ ಜಿ. ಮುತ್ತುಕುಮಾರನ್ ಮರಣದಂಡನೆ ವಿಧಿಸಿದ್ದಾರೆ. ಈ ಪ್ರಕರಣವನ್ನು ‘ಅಪರೂಪದಲ್ಲಿ ಅಪರೂಪದ ಪ್ರಕರಣ’ ಎಂದು ಬಣ್ಣಿಸಿರುವ ನ್ಯಾಯಾಲಯವು, ಪೊಲೀಸರ ಈ ಕ್ರೌರ್ಯವು ಸಮಾಜದಲ್ಲಿ ಕಾನೂನಿನ ಮೇಲಿದ್ದ ವಿಶ್ವಾಸವನ್ನೇ ಅಲುಗಾಡಿಸಿದೆ ಎಂದು ಅಭಿಪ್ರಾಯಪಟ್ಟಿದೆ. 2020ರ ಕೊರೊ
7 days ago1 min read


ಬೆಳಗಾವಿ: ಪ್ರೇಮದ ಹೆಸರಲ್ಲಿ ಯುವತಿಗೆ ನಂಬಿಕೆ ದ್ರೋಹ; ವಿಡಿಯೋ ಹರಿಬಿಡುವುದಾಗಿ ಬೆದರಿಸಿ ಲಕ್ಷಾಂತರ ಹಣ ದೋಚಿದ ಕಿರಾತಕ - ತನಿಖೆಯಲ್ಲಿ ಪೊಲೀಸರ ಶಾಮೀಲು ಶಂಕೆ!"
ಬೆಳಗಾವಿ: ನಗರದ ಶಾಹಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರೇಮ, ಮದುವೆ ಹೆಸರಿನಲ್ಲಿ ಯುವತಿಯನ್ನು ಮೋಸಗೊಳಿಸಿ, ಅಶ್ಲೀಲ ವಿಡಿಯೋ ಚಿತ್ರೀಕರಿಸಿ ಹಣ ಹಾಗೂ ಚಿನ್ನ ದೋಚಿದ ಆರೋಪದ ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿಯನ್ನು ಇಶ್ವರ ಸಿಂಗ್ ಪ್ರೇಮ್ ಸಿಂಗ್ ಬದ್ಗುಜರ್ ಎಂದು ಗುರುತಿಸಲಾಗಿದ್ದು, ಇವನು ಬೆಳಗಾವಿಯ ಮಾಧವ ಕಾಲೋನಿ ನಿವಾಸಿ ಎಂದು ತಿಳಿದುಬಂದಿದೆ. ಫೇಸ್ಬುಕ್ ಮೂಲಕ ಪರಿಚಯವಾದ ಯುವತಿಯೊಂದಿಗೆ ಆತ ಪ್ರೇಮ ಸಂಬಂಧ ಬೆಳೆಸಿ, ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಹೊಂದಿದ್ದಾನೆ ಎನ್ನಲಾಗಿದೆ. ದೂರುದಾರೆಯ ಪ್ರಕಾರ, ಆಕೆಯ ಅನುಮತಿ ಇಲ್ಲದೇ ಅಶ್ಲೀಲ ವಿಡಿಯೋಗಳನ್ನು ಚಿತ್ರೀಕರಿಸಿದ್ದಾನ
Apr 61 min read


ಜಿಮ್ ಟ್ರೈನರ್ ಸಮೀರ್ ಅಸಲಿ ರೂಪ ಬಯಲು: ಯುವತಿಗೆ ಎಂಟು ಬಾರಿ ಗರ್ಭಪಾತದ ಮಾತ್ರೆ ನೀಡಿದ ಕಿರಾತಕ
ಹುಬ್ಬಳ್ಳಿಯಲ್ಲಿ ಜಿಮ್ ಟ್ರೈನರ್ ಸಮೀರ್ ಎಂಬಾತನ ಲವ್ ಜಿಹಾದ್ ಕೃತ್ಯಗಳು ಬಯಲಾಗುತ್ತಿವೆ. ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಬಲವಂತವಾಗಿ 8 ರಿಂದ 10 ಬಾರಿ ಗರ್ಭಪಾತದ ಮಾತ್ರೆಗಳನ್ನು ನೀಡಿದ್ದ ಎನ್ನುವ ಆಘಾತಕಾರಿ ವಿಚಾರ ಬೆಳಕಿಗೆ ಬಂದಿದೆ. ಆರೋಪಿಯ ಮೊಬೈಲ್ ಪರಿಶೀಲಿಸಿದಾಗ ಯುವತಿ ಮಾತ್ರೆ ಸೇವಿಸುತ್ತಿರುವ ವಿಡಿಯೋಗಳು ಮತ್ತು ಇತರ ಯುವತಿಯರೊಂದಿಗೆ ನಡೆಸಿದ ಚಾಟ್ಗಳು ಪತ್ತೆಯಾಗಿವೆ. ಸಂತ್ರಸ್ತೆಯ ದೂರಿನಂತೆ ವಿದ್ಯಾನಗರ ಠಾಣೆಯಲ್ಲಿ ಬಿಎನ್ಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಜಿಮ್ಗೆ ಬರುತ್ತಿದ್ದ ಹಿಂದೂ ಯುವತಿಯರನ್ನೇ ಗುರಿಯಾಗಿಸಿ ಸಮೀರ್ ವಂಚಿಸುತ್ತಿದ್ದ ಎಂಬ ಆರೋಪ ಕೇಳಿಬಂ
Apr 51 min read


ಮಗಳು ಕ್ಯಾಂಡಿ ಕದ್ದಿದ್ದಕ್ಕೆ ಮಗಳ ಪ್ರಾಣವನ್ನೇ ತೆಗೆದ ಕ್ರೂರಿ ತಂದೆ
ಉತ್ತರ ಪ್ರದೇಶದ ರತನ್ಪುರದಲ್ಲಿ ತಂದೆಯೊಬ್ಬ ತನ್ನ 12 ವರ್ಷದ ಮಗಳನ್ನು ಕ್ಷುಲ್ಲಕ ಕಾರಣಕ್ಕಾಗಿ ಕೋಲಿನಿಂದ ಹೊಡೆದು ಕೊಂದಿರುವ ದಾರುಣ ಘಟನೆ ನಡೆದಿದೆ. ಅಂಗಡಿಯೊಂದರಲ್ಲಿ ಬಾಲಕಿ ಕ್ಯಾಂಡಿ ಕದ್ದಿದ್ದಾಳೆಂದು ಮಾಲೀಕರು ದೂರು ನೀಡಿದ್ದರಿಂದ ಕೋಪಗೊಂಡ ತಂದೆ ಪುಷ್ಪೇಂದ್ರ ಅಲಿಯಾಸ್ ಪಪ್ಪು ಶರ್ಮಾ, ಮನೆಗೆ ಬರುತ್ತಿದ್ದಂತೆ ಮಗಳ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿ ಪ್ರಾಣ ತೆಗೆದಿದ್ದಾನೆ. ಈ ಘಟನೆಗೆ ಸಂಬಂಧಿಸಿದಂತೆ ಬಾಲಕಿಯ ತಾಯಿ ಆರತಿ ನೀಡಿದ ದೂರಿನ ಮೇರೆಗೆ ನರೋರಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಾರ್ಚ್ 29 ರಂದು ಪೊಲೀಸರು ಬಂಧಿಸಿದ್ದು, ಕೃತ್
Mar 301 min read


ಮಂಗಳೂರು ಶಾಕ್: ಫ್ಲೈಓವರ್ ಮೇಲೆ ದಾಳಿ – ‘ಟಾಬ್ಲೆಟ್ ಆರಿಫ್’ ಭೀಕರ ಹತ್ಯೆ!
ಮಂಗಳೂರು ನಗರದ ಹೊರವಲಯದ ತೊಕ್ಕೊಟ್ಟು ಫ್ಲೈಓವರ್ ಮೇಲ್ಬಾಗದಲ್ಲಿ ಶುಕ್ರವಾರ ಬೆಳಿಗ್ಗೆ ವ್ಯಕ್ತಿಯೋರ್ವನನ್ನು ಮಾರಕಾಸ್ತ್ರಗಳಿಂದ ಕಡಿದು ಹತ್ಯೆ ಮಾಡಿರುವ ಘಟನೆ ನಡೆದಿದೆ. Ad ಮೃತರನ್ನು ಮುಳ್ಳುಗುಡ್ಡೆ ಹೌಸ್, ತಲಪಾಡಿ ನಿವಾಸಿ ಆರಿಫ್ (46), ಅಲಿಯಾಸ್ ‘ಟಾಬ್ಲೆಟ್ ಆರಿಫ್’ ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ಆರಿಫ್ ಅವರು ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಹಿಂಬದಿಯಿಂದ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಢಿಕ್ಕಿ ಹೊಡೆದಿದ್ದಾರೆ. ಢಿಕ್ಕಿಯಿಂದ ರಸ್ತೆಗೆ ಬಿದ್ದ ಬಳಿಕ, ಆರೋಪಿಗಳು ಅವರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆಗೈದಿದ್ದಾರೆ ಎಂದು ತಿಳಿದುಬಂದಿದ
Mar 271 min read


ಕಲಬುರಗಿ ಜಿಲ್ಲೆಯಲ್ಲಿ ಹೃದಯ ವಿದ್ರಾವಕ ಘಟನೆ – ಚೂರಿಯಿಂದ ಪತ್ನಿ ಕೊಲೆ
ಕಲಬುರಗಿ ಜಿಲ್ಲೆಯ ಅಫಜಲ್ಪುರ ತಾಲ್ಲೂಕಿನ ಬಾಳೂರಗಿ ಗ್ರಾಮದ ಸಮೀಪ ಗುರುವಾರ ಭೀಕರ ಘಟನೆ ನಡೆದಿದೆ. ಪತ್ನಿಯನ್ನು ಪತಿ ಚೂರಿಯಿಂದ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ಆರೋಪಿಯನ್ನು ಅಕ್ಷಯ್ ಜಾಧವ್ ಎಂದು ಗುರುತಿಸಲಾಗಿದ್ದು, ಅವನನ್ನು ಪೋಷಕರೊಂದಿಗೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೃತಪಟ್ಟ ಮಹಿಳೆಯನ್ನು ಶೈಲಾ (28) ಎಂದು ಗುರುತಿಸಲಾಗಿದ್ದು, ಆಕೆ ಮಹಾರಾಷ್ಟ್ರದ ಬಾರಾಮತಿ ಮೂಲದವರು. ಪೊಲೀಸರ ಮಾಹಿತಿಯ ಪ್ರಕಾರ, ದಂಪತಿ ಗಣಗಾಪುರಕ್ಕೆ ಹೋಗುವ ನೆಪದಲ್ಲಿ ಕಲಬುರಗಿಗೆ ಬಂದಿದ್ದರು. ಮಾರ್ಗಮಧ್ಯೆ ಹೊಲದ ಬಳಿ ಕಾರನ್ನು ನಿಲ್ಲಿಸಿದ ಆರೋಪಿಯು ಪತ್ನಿಯ ಮೇಲೆ ಚೂರಿಯಿಂದ ದಾಳಿ ನಡೆಸಿದ್ದಾನೆ. ದಾಳಿ
Mar 261 min read


ಪುತ್ತೂರು: ದಾಂಪತ್ಯ ಕಲಹಕ್ಕೆ ಬಲಿಯಾದ ಪತ್ನಿ; ಪತಿಯೂ ಆತ್ಮಹತ್ಯೆಗೆ ಯತ್ನ
ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದ ಗೋಳ್ತಿಲದಲ್ಲಿ ದಾಂಪತ್ಯ ಕಲಹವೊಂದು ಕೊಲೆಯಲ್ಲಿ ಅಂತ್ಯವಾದ ಘೋರ ಘಟನೆ ಇಂದು ನಡೆದಿದೆ. ದಂಪತಿಗಳ ನಡುವೆ ನಡೆದ ಮಾತಿನ ಚಕಮಕಿ ವಿಕೋಪಕ್ಕೆ ತಿರುಗಿ, ಆವೇಶಕ್ಕೊಳಗಾದ ಪತಿಯು ಪತ್ನಿಯನ್ನು ಹತ್ಯೆ ಮಾಡಿದ್ದಾನೆ ಎಂದು ವರದಿಯಾಗಿದೆ. ಪತ್ನಿಯನ್ನು ಕೊಲೆ ಮಾಡಿದ ನಂತರ ಪತಿಯೂ ಸಹ ಆತ್ಮಹತ್ಯೆಗೆ ಯತ್ನಿಸಿದ್ದು, ಆತನ ಸ್ಥಿತಿ ಸದ್ಯ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಆತನನ್ನು ತಕ್ಷಣ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳೀಯವಾಗಿ ಈ ಘಟನೆಯು ಭಾರೀ ಆತಂಕ ಮತ್ತು ಆಘಾತವನ್ನು ಸೃಷ್ಟಿಸಿದೆ. ವಿಷಯ ತಿಳಿಯುತ್ತಿದ್ದಂತೆಯೇ ಪುತ್ತೂರು ಗ್ರಾಮಾಂತರ ಠಾ
Mar 201 min read


ಕಡಬ ಗುಂಡೇಟು ಪ್ರಕರಣಕ್ಕೆ ಹೊಸ ತಿರುವು - ವೈದ್ಯಕೀಯ ವರದಿ ಅಚ್ಚರಿ ಮಾಹಿತಿ ಬಹಿರಂಗ
ದಕ್ಷಿಣ ಕನ್ನಡ ಜಿಲ್ಲೆಯ ರಾಮಕುಂಜ (ಕಡಬ ತಾಲೂಕು)ದಲ್ಲಿ ಜನವರಿ 24ರಂದು ನಡೆದ 17 ವರ್ಷದ ಬಾಲಕ ಮೋಕ್ಷ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ವೈದ್ಯಕೀಯ ಮಾಹಿತಿ ಹೊರಬಿದ್ದಿದೆ. ಆರಂಭಿಕವಾಗಿ ಮೋಕ್ಷ್ ತನ್ನ ತಂದೆಗೆ ಚಾಕುವಿನಿಂದ ಇರಿದು ಬಳಿಕ ತಾನು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿತ್ತು. ಆದರೆ ಇದೀಗ ಬಂದ ವೈದ್ಯಕೀಯ ಪರೀಕ್ಷಾ ವರದಿ ಪ್ರಕರಣಕ್ಕೆ ಹೊಸ ಆಯಾಮ ನೀಡಿದೆ. ತಂದೆ ವಸಂತ ಅಮೀನ್ ಅವರ ಹೊಟ್ಟೆ ಭಾಗಕ್ಕೆ ತಗುಲಿರುವುದು ಚಾಕುವಿನ ಗಾಯವಲ್ಲ, ಬದಲಾಗಿ ಬಂದೂಕಿನ ಗುಂಡೇಟು ಎಂದು ದೃಢಪಟ್ಟಿದೆ. ಇದರಿಂದ ಪ್ರಕರಣದ ದಿಕ್ಕೇ ಬದಲಾಗಿದೆ. ಏನಾಗಿದೆ ಘ
Feb 181 min read


ಬೆಳ್ತಂಗಡಿಯಲ್ಲಿ ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿ ಅಪಹರಣ ಯತ್ನ
ಬೆಳ್ತಂಗಡಿ, ಫೆ.9: ಅಪ್ರಾಪ್ತ ವಯಸ್ಕ ಕಾಲೇಜು ವಿದ್ಯಾರ್ಥಿನಿಯನ್ನು ಅಪಹರಿಸಲು ಯತ್ನಿಸಿದ ಘಟನೆ ಬೆಳ್ತಂಗಡಿಯಲ್ಲಿ ಸೋಮವಾರ ಬೆಳಿಗ್ಗೆ ವರದಿಯಾಗಿದೆ. ಅಪಹರಣ ಯತ್ನ ವಿಫಲವಾದ ಬಳಿಕ ದುಷ್ಕರ್ಮಿಗಳು ಚಾಕುವಿನಿಂದ ಹಲ್ಲೆ ನಡೆಸಿ ಪರಾರಿಯಾದ ಘಟನೆ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಫೆಬ್ರವರಿ 9ರಂದು ಬೆಳಿಗ್ಗೆ ಸುಮಾರು 8.30ರ ವೇಳೆಗೆ ಬೆಳ್ತಂಗಡಿ ನಗರದ ಸುದೇಮುಗೇರು ನಿವಾಸಿ ಹಾಗೂ ಪ್ರಥಮ ವರ್ಷದ ಪಿಯುಸಿ ವಿದ್ಯಾರ್ಥಿನಿ ಕಾಲೇಜಿಗೆ ತೆರಳಲು ಸಂತೆಕಟ್ಟೆ ಕಡೆಗೆ ಸ್ಕೂಟರ್ನಲ್ಲಿ ತೆರಳುತ್ತಿದ್ದಳು. ಈ ವೇಳೆ ಬಟ್ಟೆಯಿಂದ ಮುಚ್ಚಿದ ನಂಬರ್ ಪ್ಲೇಟ್ ಹೊಂದಿದ್ದ ಕಾರಿನಲ್ಲಿ ಬಂದ ಮೂವರು ಅಪರಿಚಿತರು
Feb 91 min read


ಮಂಜೇಶ್ವರ: ತಂದೆಯ ಅಟ್ಟಹಾಸಕ್ಕೆ ಬಲಿಯಾದ ಮಗಳು; ಚಿಕಿತ್ಸೆ ಫಲಿಸದೆ ದೊಡ್ಡಪ್ಪನೂ ಸಾವು
ಮಂಜೇಶ್ವರ: ಕುಂಜತ್ತೂರು ತೂಮಿನಾಡಿನಲ್ಲಿ ನಡೆದ ಕೌಟುಂಬಿಕ ಕಲಹದ ಭೀಕರ ಘಟನೆಯಲ್ಲಿ, ತಂದೆಯ ಕೃತ್ಯಕ್ಕೆ ಮಗಳು ಬಲಿಯಾದ ಬೆನ್ನಲ್ಲೇ ಗಂಭೀರವಾಗಿ ಗಾಯಗೊಂಡಿದ್ದ ದೊಡ್ಡಪ್ಪ ಶೇಕುಂಞ(50) ಅವರು ಮಂಗಳವಾರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇದರೊಂದಿಗೆ ಈ ಪ್ರಕರಣದಲ್ಲಿ ಸಾವಿನ ಸಂಖ್ಯೆ ಎರಡಕ್ಕೆ ಏರಿಕೆಯಾಗಿದೆ. ಸೋಮವಾರ ಸಂಜೆ ನಡೆದ ಜಗಳದ ವೇಳೆ ಆರೋಪಿ ಉಮರ್ ತನ್ನ ಸಂಬಂಧಿಕರ ಮೇಲೆ ಕತ್ತಿಯಿಂದ ಹಲ್ಲೆ ಮಾಡಲು ಮುಂದಾಗಿದ್ದನು. ಈ ಸಂದರ್ಭದಲ್ಲಿ ಗಲಾಟೆ ತಡೆಯಲು ಅಡ್ಡಬಂದ ಪುತ್ರಿ ಜುಮೈರಾ (18) ತಂದೆಯ ಕೃತ್ಯಕ್ಕೆ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಳು. ಹಲ್ಲೆ ತಡೆಯಲು ಬಂದ ಉಮರ್ನ ಅಣ್ಣ ಶೇಕು
Feb 31 min read


ಸಾಧ್ವಿ ಪ್ರೇಮ್ ಬೈಸಾ ನಿಗೂಢ ಅಂತ್ಯ: ಸಾವಿಗೂ ಮುನ್ನ ಇನ್ಸ್ಟಾದಲ್ಲಿ 'ಅಗ್ನಿ ಪರೀಕ್ಷೆ'ಯ ಬಗ್ಗೆ ಬರೆದುಕೊಂಡಿದ್ದೇಕೆ?
ರಾಜಸ್ಥಾನದ ಜನಪ್ರಿಯ ಧಾರ್ಮಿಕ ಕಥೆಗಾರ್ತಿ ಸಾಧ್ವಿ ಪ್ರೇಮ್ ಬೈಸಾ ಅವರು ಜನವರಿ 28, 2026 ರಂದು ಜೋಧ್ಪುರದ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ಅವರ ಸಾವು ಹಲವು ಆಘಾತಕಾರಿ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಆರಂಭದಲ್ಲಿ ಜ್ವರದ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದರು. ಆದರೆ, ಅವರ ನಿಧನದ ಕೆಲವೇ ಗಂಟೆಗಳ ನಂತರ ಅವರ ಅಧಿಕೃತ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಕಾಣಿಸಿಕೊಂಡ "ವಿದಾಯ" ಪೋಸ್ಟ್ ಇದು ಕೇವಲ ಸಾವಲ್ಲ, ಬದಲಿಗೆ ವ್ಯವಸ್ಥಿತ ಪಿತೂರಿ ಅಥವಾ ಮಾನಸಿಕ ಒತ್ತಡದಿಂದ ಉಂಟಾದ ಆತ್ಮಹತ್ಯೆ ಎಂಬ ಅನುಮಾನಗಳಿಗೆ ಪುಷ್ಟಿ ನೀಡಿದೆ. ತಮ್ಮ ಕೊನೆಯ ಪ
Jan 291 min read


ಚಲಿಸುವ ಕಾರಿನಲ್ಲೇ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ: ಇಬ್ಬರು ಆರೋಪಿಗಳ ಬಂಧನ
ಲಿಫ್ಟ್ ನೀಡುವ ನೆಪದಲ್ಲಿ ಕಾರಿಗೆ ಹತ್ತಿಸಿಕೊಂಡು ಮಹಿಳೆಯೊಬ್ಬರ ಮೇಲೆ ಚಲಿಸುವ ಕಾರಿನಲ್ಲೇ ಸಾಮೂಹಿಕ ಅತ್ಯಾಚಾರ ಎಸಗಿದ ಘೋರ ಘಟನೆ ಪಂತ್ನಗರದಲ್ಲಿ ನಡೆದಿದೆ. ಜನವರಿ 25ರಂದು ಬೆಳಿಗ್ಗೆ ಮಹಿಳೆ ಎಂದಿನಂತೆ ಮನೆಯಿಂದ ಕಚೇರಿಗೆ ನಡೆದುಕೊಂಡು ಹೋಗುತ್ತಿದ್ದಾಗ, ಕಾರಿನಲ್ಲಿ ಬಂದ ಇಬ್ಬರು ಆರೋಪಿಗಳು ಲಿಫ್ಟ್ ನೀಡುವುದಾಗಿ ನಂಬಿಸಿ ಆಕೆಯನ್ನು ಕಾರಿಗೆ ಹತ್ತಿಸಿಕೊಂಡಿದ್ದರು. ಮಹಿಳೆ ಕಾರು ಹತ್ತಿದ ಕೂಡಲೇ ಒಬ್ಬ ಆರೋಪಿಯು ಹಿಂದಿನ ಆಸನಕ್ಕೆ ಬಂದು ಆಕೆಯ ಮೇಲೆ ದೌರ್ಜನ್ಯ ಎಸಗಿದ್ದು, ಬಳಿಕ ನಿರ್ಜನ ಪ್ರದೇಶದಲ್ಲಿ ಬಿಟ್ಟು ಪರಾರಿಯಾಗಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಸಂತ್ರಸ್ತ ಮಹಿಳೆ ನೀಡಿದ ದೂರಿನ
Jan 291 min read


ದಾವಣಗೆರೆ: ಪತ್ನಿ ಓಡಿಹೋದ ಅವಮಾನ ತಾಳಲಾರದೆ ನವವಿವಾಹಿತ ಹಾಗೂ ಮದುವೆ ಮಾಡಿಸಿದ ಮಾವ ಬಲಿ!
ದಾವಣಗೆರೆ ತಾಲೂಕಿನ ಗುಮ್ಮನೂರಿನಲ್ಲಿ ಮದುವೆಯಾದ ಕೇವಲ 45 ದಿನಕ್ಕೆ ಹರೀಶ್ (30) ಎಂಬ ನವವಿವಾಹಿತ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ನಡೆದಿದೆ. ಮೃತ ಹರೀಶ್ ಸಾವಿಗೂ ಮುನ್ನ ಎರಡು ಪುಟಗಳ ಡೆತ್ನೋಟ್ ಬರೆದಿದ್ದು, ಅದರಲ್ಲಿ ತನ್ನ ಪತ್ನಿಯ ಕಿರುಕುಳ ಹಾಗೂ ಆಕೆಯ ವರ್ತನೆಯೇ ಸಾವಿಗೆ ನೇರ ಕಾರಣ ಎಂದು ಉಲ್ಲೇಖಿಸಿದ್ದಾರೆ. ಪತ್ನಿ ಬೇರೆ ಯುವಕನೊಂದಿಗೆ ಓಡಿಹೋಗಿದ್ದಲ್ಲದೆ, ತನ್ನ ಮೇಲೆಯೇ ಸುಳ್ಳು ಆರೋಪಗಳನ್ನು ಮಾಡಿ ತನಗೆ ಹಾಗೂ ತನ್ನ ಕುಟುಂಬಕ್ಕೆ ಜೀವಬೆದರಿಕೆ ಒಡ್ಡಿದ್ದಳು ಎಂದು ಹರೀಶ್ ಡೆತ್ನೋಟ್ನಲ್ಲಿ ಅಳಲು ತೋಡಿಕೊಂಡಿದ್ದಾರೆ. ಹರೀಶ್ ಸಾವಿನ ಬೆನ್ನಲ್ಲೇ, ಈ ಮದುವೆಯನ್ನು ಮುಂದ
Jan 281 min read


ಬೆಂಗಳೂರು: ಎಟಿಎಂಗೆ ಹಣ ತುಂಬುವ ನೆಪದಲ್ಲಿ ಒಂದು ಕೋಟಿಗೂ ಅಧಿಕ ನಗದಿನೊಂದಿಗೆ ಸಿಬ್ಬಂದಿ ಪರಾರಿ
ಬೆಂಗಳೂರು: ನಗರದ ಎಟಿಎಂಗಳಿಗೆ ನಗದು ಠೇವಣಿ ಮಾಡುವ ಜವಾಬ್ದಾರಿ ಹೊತ್ತಿದ್ದ ಖಾಸಗಿ ಕಂಪನಿಯ ಸಿಬ್ಬಂದಿಯೇ ಒಂದು ಕೋಟಿ ರೂಪಾಯಿಗೂ ಅಧಿಕ ಹಣವನ್ನು ದೋಚಿ ಪರಾರಿಯಾದ ಘಟನೆ ಕೋರಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹಿಟಾಚಿ ಪೇಮೆಂಟ್ ಸರ್ವಿಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯ ಸಿಬ್ಬಂದಿಗಳು ಆ್ಯಕ್ಸಿಸ್ ಬ್ಯಾಂಕ್ನ ಎಟಿಎಂಗಳಿಗೆ ಜಮಾ ಮಾಡಬೇಕಿದ್ದ ಹಣದೊಂದಿಗೆ ನಾಪತ್ತೆಯಾಗಿದ್ದಾರೆ. ನಗರದಲ್ಲಿ ಇತ್ತೀಚೆಗಷ್ಟೇ 400 ಕೋಟಿ ರೂಪಾಯಿ ದರೋಡೆ ಪ್ರಕರಣ ಸದ್ದು ಮಾಡುತ್ತಿರುವಾಗಲೇ ಈ ಘಟನೆ ಬೆಳಕಿಗೆ ಬಂದಿದ್ದು, ಸಾರ್ವಜನಿಕರಲ್ಲಿ ಭಾರೀ ಆತಂಕ ಮೂಡಿಸಿದೆ. ಜನವರಿ 19ರಂದು ಕೋರಮಂಗಲದ ಆ್ಯಕ್ಸಿಸ್
Jan 271 min read


ಜಾಮೀನು ನೀಡುವ ಮುನ್ನ ಎಚ್ಚರ: ರೌಡಿಗಳು ಸಿಗದಿದ್ದರೆ ಜಾಮೀನುದಾರರಿಗೆ ಸಂಕಷ್ಟ; ಮಂಗಳೂರು ಕಮಿಷನರ್ ವಾರ್ನಿಂಗ್!
ಮಂಗಳೂರು: ಗಂಭೀರ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿ ನ್ಯಾಯಾಲಯದಿಂದ ಜಾಮೀನು ಪಡೆದು ತಲೆಮರೆಸಿಕೊಳ್ಳುವ ಆರೋಪಿಗಳಿಗೆ ಮಾತ್ರವಲ್ಲ, ಅವರಿಗೆ ಶ್ಯೂರಿಟಿ (ಜಾಮೀನು ಭರವಸೆ) ನೀಡುವವರಿಗೂ ಇನ್ಮುಂದೆ ಪೊಲೀಸರು ಬಿಸಿ ಮುಟ್ಟಿಸಲಿದ್ದಾರೆ. "ಅಪರಾಧಿಗಳಿಗೆ ಜಾಮೀನು ನೀಡುವಾಗ ಸಾರ್ವಜನಿಕರು ಎಚ್ಚರಿಕೆ ವಹಿಸಬೇಕು, ಇಲ್ಲದಿದ್ದರೆ ಗಂಭೀರ ಕಾನೂನು ಪರಿಣಾಮ ಎದುರಿಸಬೇಕಾಗುತ್ತದೆ" ಎಂದು ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರು ಕಡಕ್ ಎಚ್ಚರಿಕೆ ನೀಡಿದ್ದಾರೆ. ಈ ಮೂಲಕ ನ್ಯಾಯಾಂಗ ಪ್ರಕ್ರಿಯೆಯಿಂದ ತಪ್ಪಿಸಿಕೊಳ್ಳುವ ರೌಡಿಗಳಿಗೆ ಸಾಥ್ ನೀಡುವವರಿಗೆ ಆಯುಕ್ತರು ನೇರ ಸಂದೇಶ ರವಾನಿಸಿದ್ದಾರೆ.
Jan 251 min read


ಬಾಂಗ್ಲಾದಲ್ಲಿ ಮತ್ತೆ ಮೃತ್ಯು ನರ್ತನ: ಗ್ಯಾರೇಜ್ಗೆ ಬೆಂಕಿ ಹಚ್ಚಿ ಹಿಂದೂ ಯುವಕನ ಸಜೀವ ದಹನ!
ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂ ಸಮುದಾಯದವರನ್ನು ಗುರಿಯಾಗಿಸಿಕೊಂಡು ನಡೆಸಲಾಗುತ್ತಿರುವ ದಾಳಿಗಳು ನಿಲ್ಲುವ ಲಕ್ಷಣ ಕಾಣುತ್ತಿಲ್ಲ. ನರಸಿಂಗ್ಲಿ ಜಿಲ್ಲೆಯಲ್ಲಿ 23 ವರ್ಷದ ಹಿಂದೂ ಯುವಕ ಚಂಚಲ್ ಚಂದ್ರ ಭೌಮಿಕ್ ಎಂಬುವವರನ್ನು ಅವರು ಮಲಗಿದ್ದ ಗ್ಯಾರೇಜ್ ಒಳಗೇ ಸುಟ್ಟು ಹಾಕಿರುವ ಭೀಕರ ಘಟನೆ ನಡೆದಿದೆ. ಮೂಲತಃ ಕುಮಿಲ್ಲಾ ಜಿಲ್ಲೆಯ ಲಕ್ಷ್ಮೀಪುರ ಗ್ರಾಮದವರಾದ ಚಂಚಲ್, ಕೆಲಸದ ನಿಮಿತ್ತ ನರಸಿಂಗ್ಲಿಯಲ್ಲಿ ವಾಸವಿದ್ದರು. ಇಡೀ ಕುಟುಂಬಕ್ಕೆ ಆಧಾರವಾಗಿದ್ದ ಏಕೈಕ ಪುತ್ರನನ್ನೇ ಕಳೆದುಕೊಂಡ ಕುಟುಂಬ ಈಗ ಬೀದಿಗೆ ಬಿದ್ದಂತಾಗಿದ್ದು, ಇಡೀ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಶುಕ್ರವಾ
Jan 251 min read


ದೇಶದ ಅತಿ ದೊಡ್ಡ ರಾಬರಿ: ಬೆಳಗಾವಿ ಗಡಿಭಾಗದಲ್ಲಿ 400 ಕೋಟಿ ರೂ ಹಣವಿದ್ದ 2 ಕಂಟೇನರ್ ಹೈಜಾಕ್
ಗೋವಾದಿಂದ ಮಹಾರಾಷ್ಟ್ರಕ್ಕೆ ಸುಮಾರು ₹400 ಕೋಟಿ ನಗದು ಸಾಗಿಸುತ್ತಿದ್ದ ಎರಡು ಕಂಟೇನರ್ಗಳನ್ನು ಹೈಜಾಕ್ ಮಾಡಿರುವ ಘಟನೆ ದೇಶದ ಅಪರಾಧ ಇತಿಹಾಸದಲ್ಲೇ ಅತಿದೊಡ್ಡ ದರೋಡೆ ಪ್ರಕರಣಗಳಲ್ಲೊಂದು ಎಂದು ಪರಿಗಣಿಸಲಾಗಿದೆ. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಅಪಾಯಕಾರಿ ಹಾಗೂ ಅರಣ್ಯ ಪ್ರದೇಶವಾದ ಚೋರ್ಲಾ ಘಾಟ್ ಮಾರ್ಗದಲ್ಲಿ ಈ ಕೃತ್ಯ ನಡೆದಿದ್ದು, ಘಟನೆ ನಡೆದ ಹಲವು ತಿಂಗಳ ಬಳಿಕ ಇದೀಗ ಪ್ರಕರಣ ಬಹಿರಂಗವಾಗಿದೆ. 2025ರ ಅಕ್ಟೋಬರ್ 16ರಂದು ನಡೆದ ಈ ದರೋಡೆ ಪ್ರಕರಣ, ಕರ್ನಾಟಕ, ಮಹಾರಾಷ್ಟ್ರ ಮತ್ತು ಗೋವಾ – ಈ ಮೂರು ರಾಜ್ಯಗಳ ಪೊಲೀಸ್ ವ್ಯವಸ್ಥೆಯನ್ನು ತೀವ್ರ ಎಚ್ಚರಿಕೆಯಲ್ಲಿರಿಸಿದೆ. ಗೋವಾದಿಂದ ಮಹ
Jan 251 min read


ಸುಳ್ಳು ವಿಡಿಯೋ ಪ್ರಕರಣ : ವ್ಯಕ್ತಿಯ ಆತ್ಮಹತ್ಯೆಗೆ ಕಾರಣವಾದ ಶಿಂಜಿತಾ ಮುಸ್ತಫಾ ಬಂಧನ
ತಿರುವನಂತಪುರಂ: ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಪಡೆಯಲು ಬಸ್ಸಿನಲ್ಲಿ ವ್ಯಕ್ತಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಸುಳ್ಳು ವಿಡಿಯೋ ಹಂಚಿಕೊಂಡು, ಅವರ ಸಾವಿಗೆ ಕಾರಣವಾದ ಆರೋಪದಡಿ ಶಿಂಜಿತಾ ಮುಸ್ತಫಾ ಎಂಬಾಕೆಯನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ. ಖಾಸಗಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ದೀಪಕ್ ಎಂಬುವವರು ತನಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಶಿಂಜಿತಾ ವಿಡಿಯೋ ಮಾಡಿ ವೈರಲ್ ಮಾಡಿದ್ದಳು. ಇದರಿಂದ ಮನನೊಂದ ದೀಪಕ್ ಆತ್ಮಹತ್ಯೆ ಮಾಡಿಕೊಂಡಿದ್ದರು. ತನಿಖೆಯ ವೇಳೆ ಬಸ್ ಚಾಲಕ ಮತ್ತು ಕಂಡಕ್ಟರ್ ಅಂತಹ ಯಾವುದೇ ಘಟನೆ ನಡೆದಿಲ್ಲ ಎಂದು ಸಾಕ್ಷ್ಯ ನೀಡಿದ್ದಾರೆ. ದೀಪಕ್
Jan 221 min read
Archive
bottom of page



