top of page
News Articles
Sathyapatha News Plus


ಎಣ್ಮೂರು ಶ್ರೀ ನಾಗಬ್ರಹ್ಮ ಕೋಟಿ ಚೆನ್ನಯ ಗರಡಿಯಲ್ಲಿ ಚೌತಿ ತಂಬಿಲ ಮತ್ತು ಕದಿರು ಪ್ರಸಾದ ವಿತರಣೆ
ಇತಿಹಾಸ ಪ್ರಸಿದ್ಧ ಎಣ್ಮೂರು ಶ್ರೀ ನಾಗಬ್ರಹ್ಮ ಕೋಟಿ ಚೆನ್ನಯರ ಆದಿ ಬೈದೇರುಗಳ ಗರಡಿಯಲ್ಲಿ ಪೂರ್ವ ಸಂಪ್ರದಾಯದಂತೆ ಪತ್ತನಾಜೆಯಂದು ಮುಚ್ಚಿದ್ದ ಗರ್ಭಗುಡಿಯ ಬಾಗಿಲನ್ನು ಚೌತಿಯಂದು ತೆರೆದು ವಿಶೇಷ ತಂಬಿಲ ಸೇವೆ ನೆರವೇರಿಸಲಾಯಿತು. ಬೈದೇರುಗಳ ತಂಬಿಲ, ದರ್ಶನ ಬಲಿ ಹಾಗೂ ದೇಯಿ ಬೈದೇತಿಯವರ ಗರ್ಭಗುಡಿಯಲ್ಲಿ ವಿಶೇಷ ತಂಬಿಲ ನಡೆದು ಭಕ್ತರಿಗೆ ಕದಿರು ಪ್ರಸಾದ ವಿತರಿಸಲಾಯಿತು. ಕಂಚುಕಲ್ಲಿಗೆ ತೆಂಗಿನಕಾಯಿ ಒಡೆದು ಊರಿನ ಕ್ಷೇಮಕ್ಕಾಗಿ ಪ್ರಾರ್ಥಿಸಲಾಯಿತು. ಅನುವಂಶಿಕ ಆಡಳಿತದಾರ ಕಟ್ಟಬೀಡು ರಾಮಕೃಷ್ಣ ಶೆಟ್ಟಿಯವರ ಪ್ರಾರ್ಥನೆಯೊಂದಿಗೆ ಭಕ್ತರಿಗೆ ಗಂಧ ಪ್ರಸಾದ ನೀಡಲಾಯಿತು. ನಂತರ ಸಾರ್ವಜನಿಕ ಅನ್ನಸಂತರ
1 day ago1 min read


ಮಂಗಳೂರು ಜೈಲಿನಲ್ಲಿ ಭಾಸ್ಕರ ಶೆಟ್ಟಿ ಕೊಲೆ ಆರೋಪಿಗಳ ಮೇಲೆ ಹಲ್ಲೆ ಪ್ರಕರಣ : 14 ಮಂದಿ ದೋಷಿಗಳು
ಮಂಗಳೂರು: ಉಡುಪಿಯ ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣದ ಆರೋಪಿಗಳಾದ ನವನೀತ್ ಶೆಟ್ಟಿ ಹಾಗೂ ಜ್ಯೋತಿಷಿ ನಿರಂಜನ್ ಭಟ್ ಮೇಲೆ ಮಂಗಳೂರು ಜಿಲ್ಲಾ ಕಾರಾಗೃಹದಲ್ಲೇ ದಾಳಿ ನಡೆಸಿದ ಪ್ರಕರಣದಲ್ಲಿ 14 ಮಂದಿ ಆರೋಪಿಗಳು ದೋಷಿಗಳೆಂದು ನ್ಯಾಯಾಲಯ ತೀರ್ಪು ನೀಡಿದೆ. ದೋಷಿಗಳ ಶಿಕ್ಷೆಯ ಪ್ರಮಾಣವನ್ನು ಸೆಪ್ಟೆಂಬರ್ 16ರಂದು ಪ್ರಕಟಿಸಲಾಗುವುದು. 2017ರ ಸೆಪ್ಟೆಂಬರ್ 11ರಂದು ಮಧ್ಯಾಹ್ನ ಸುಮಾರು 12.30ರ ವೇಳೆಗೆ ಮಂಗಳೂರು ಜಿಲ್ಲಾ ಕಾರಾಗೃಹದ ಹೊಸ ಕಟ್ಟಡದ ‘ಬಿ’ ಬ್ಲಾಕ್ನ ವರಾಂಡದಲ್ಲಿ ಈ ದಾಳಿ ನಡೆದಿತ್ತು. ಭಾಸ್ಕರ ಶೆಟ್ಟಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ನವನೀತ್ ಶೆಟ್ಟಿ ಮತ್ತು ನಿರಂಜನ್ ಭಟ್ ಅ
3 days ago1 min read




ಮೂರು ಗಂಟೆಗಳ ಕಾಲ ಸುಳ್ಯ ನಗರ ಬ್ಲಾಕ್: ಸಾರ್ವಜನಿಕರಿಗೆ ತೀವ್ರ ತೊಂದರೆ — ತುರ್ತು ಸೇವೆಗಳಿಗೂ ಅಡ್ಡಿಯಾಗಿದ್ದರೆ ಹೊಣೆ ಯಾರು?
ಸುಳ್ಯ: ಸುಮಾರು 500 ಮಂದಿಯ ಮೆರವಣಿಗೆಗಾಗಿ ಸುಳ್ಯ ನಗರದ ಪ್ರಮುಖ ರಸ್ತೆಯೇ ಸುಮಾರು ಮೂರು ಗಂಟೆಗಳ ಕಾಲ ಬಂದ್ ಆಗಿದ್ದರಿಂದ ವಿದ್ಯಾರ್ಥಿಗಳು, ಉದ್ಯೋಗಿಗಳು ಹಾಗೂ ಸಾರ್ವಜನಿಕರು ಪರದಾಡುವಂತಾದ ಘಟನೆ ಸೆ.11ರಂದು ನಡೆದಿದೆ. ಯಾವುದೇ ಪರ್ಯಾಯ ಮಾರ್ಗದ ವ್ಯವಸ್ಥೆಯಿಲ್ಲದೆ ಮುಖ್ಯ ರಸ್ತೆಯಲ್ಲಿ ಸಂಚಾರ ಸಂಪೂರ್ಣ ಸ್ಥಗಿತಗೊಂಡ ಪರಿಣಾಮ ನಗರದಲ್ಲಿ ಭಾರೀ ಸಂಚಾರ ದಟ್ಟಣೆ ಉಂಟಾಯಿತು. ಪ್ರವಾದಿ ಮುಹಮ್ಮದ್ ಅವರ ಜನ್ಮದಿನದ ಅಂಗವಾಗಿ ನಡೆದ ಕಾಲ್ನಡಿಗೆ ಜಾಥಾ ಹಾಗೂ ದಫ್ ಪ್ರದರ್ಶನ ಸಂಜೆ 4 ಗಂಟೆಗೆ ನಿಗದಿಯಾಗಿತ್ತು. ಆದರೆ ಮೆರವಣಿಗೆ ರಾತ್ರಿ 7.30ರವರೆಗೂ ಮುಂದುವರಿದ ಪರಿಣಾಮ ಈ ಅವಧಿಯಲ್ಲಿ ಮುಖ್ಯ ರಸ್ತ
3 days ago1 min read


ಬೆಳ್ತಂಗಡಿಯಲ್ಲಿ ಲೋಕಾಯುಕ್ತ ದಾಳಿ: ಕುವೆಟ್ಟು, ಮಡಂತ್ಯಾರು ಗ್ರಾ.ಪಂ. ಕಚೇರಿಗಳಲ್ಲಿ ಕಡತಗಳ ಪರಿಶೀಲನೆ
ಬೆಳ್ತಂಗಡಿ: ತಾಲೂಕಿನ ಕುವೆಟ್ಟು ಮತ್ತು ಮಡಂತ್ಯಾರು ಗ್ರಾಮ ಪಂಚಾಯತ್ ಕಚೇರಿಗಳ ಮೇಲೆ ಮಂಗಳವಾರ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ಕೈಗೊಂಡಿದ್ದಾರೆ. ಗ್ರಾಮ ಪಂಚಾಯತ್ಗಳಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಲೋಕಾಯುಕ್ತ ಕೇಂದ್ರ ಕಚೇರಿಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಈ ಪರಿಶೀಲನೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಉಡುಪಿ ಜಿಲ್ಲೆಯ ಲೋಕಾಯುಕ್ತ ಇನ್ಸ್ಪೆಕ್ಟರ್ ಮಂಜುನಾಥ್ ಶಂಕರಹಳ್ಳಿ ನೇತೃತ್ವದಲ್ಲಿ ರಾಘವೇಂದ್ರ ಸಾಲಿಗ್ರಾಮ, ಆದರ್ಶ್, ಅರುಣ್ ಕುಮಾರ್, ಸೂರಜ್ ಕಾಪು ಸೇರಿದಂತೆ ಒಟ್ಟು ಎಂಟು ಮಂದಿಯ ತಂಡ ಬೆಳಗ್ಗೆ ಸುಮ
6 days ago1 min read


ಶಿವಮೊಗ್ಗ: ರೌಡಿಶೀಟರ್ ಕೊಲೆ ಆರೋಪಿ ಮೇಲೆ ಪೊಲೀಸ್ ಫೈರಿಂಗ್, ಮೆಗ್ಗಾನ್ಗೆ ದಾಖಲು
ಶಿವಮೊಗ್ಗದ ರಾಮಿನಕೊಪ್ಪದಲ್ಲಿ ರೌಡಿಶೀಟರ್ ಕಿರಣ್ ಅಲಿಯಾಸ್ ಕುಳ್ಳಿ ಕಿರಣ್ನನ್ನು ಭಾನುವಾರ ಸಂಜೆ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಈ ಪ್ರಕರಣದ ಪ್ರಮುಖ ಆರೋಪಿ ಉಮೇಶ್ ನಾಯ್ಕ್ (27) ಬಂಧನಕ್ಕೆ ಲಿಂಗಾಪುರಕ್ಕೆ ತೆರಳಿದ್ದ ಪೊಲೀಸರ ಮೇಲೆಯೇ ಆರೋಪಿ ಹಲ್ಲೆಗೆತ್ನಿಸಿದ್ದಾನೆ. ಆರೋಪಿ ಉಮೇಶ್, ಪೊಲೀಸ್ ಸಿಬ್ಬಂದಿ ತಮ್ಮಣ್ಣ ಜಂಬಗಿ ಅವರ ಮೇಲೆ ದಾಳಿ ನಡೆಸಿದಾಗ ತುಂಗಾನಗರ ಇನ್ಸ್ಪೆಕ್ಟರ್ ಗುರುರಾಜ್ ಕರ್ಕಿ ಅವರು ಗಾಳಿಯಲ್ಲಿ ಗುಂಡು ಹಾರಿಸಿ ಎಚ್ಚರಿಕೆ ನೀಡಿದರು. ಆದಾಗ್ಯೂ ಆರೋಪಿ ಮತ್ತೆ ಹಲ್ಲೆಗೆ ಮುಂದಾದಾಗ, ಆತ್ಮರಕ್ಷಣೆಗಾಗಿ ಇನ್ಸ್ಪೆಕ್ಟರ್ ಆರೋಪಿಯ ಕಾಲಿಗೆ ಗುಂಡು ಹಾರಿ
Sep 71 min read


ಬೆಂಗಳೂರು–ಮಂಗಳೂರು ವಂದೇ ಭಾರತ್: ಪುತ್ತೂರಿನಲ್ಲಿ ನಿಲುಗಡೆಗೆ ಡಾ. ಅರುಣಾ ಶ್ಯಾಮ್ ಮನವಿ
ಬೆಂಗಳೂರು ಮತ್ತು ಮಂಗಳೂರು ನಡುವೆ ಸಂಚರಿಸಲಿರುವ 16 ಬೋಗಿಗಳ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಪುತ್ತೂರು ರೈಲು ನಿಲ್ದಾಣದಲ್ಲಿ ನಿಯಮಿತ ನಿಲುಗಡೆ ಕಲ್ಪಿಸುವಂತೆ ಹಿರಿಯ ವಕೀಲರಾದ ಡಾ. ಅರುಣಾ ಶ್ಯಾಮ್. ಎಂ. ಅವರು ರೈಲ್ವೆ ಮಂಡಳಿಗೆ ಮನವಿ ಮಾಡಿದ್ದಾರೆ. ಸೆಪ್ಟೆಂಬರ್ 5ರಂದು ಯಶವಂತಪುರ–ಮಂಗಳೂರು ಸೆಂಟ್ರಲ್ ನಡುವೆ ಮತ್ತೊಂದು ಪ್ರಾಯೋಗಿಕ ಸಂಚಾರ ನಿಗದಿಯಾಗಿದ್ದು, ಈ ವೇಳೆಯಲ್ಲೇ ಪುತ್ತೂರಿನಲ್ಲಿ ಪ್ರಾಯೋಗಿಕ ನಿಲುಗಡೆ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಪುತ್ತೂರು ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ವಾಣಿಜ್ಯ, ಶೈಕ್ಷಣಿಕ ಹಾಗೂ ಆಡಳಿತ ಕೇಂದ್ರವಾಗಿದೆ. ಇಲ್ಲಿಂದ ಪ್ರತಿನಿತ್ಯ ಬೆಂ
Sep 71 min read


ಪೆರುವಾಜೆ: ಕೌಟುಂಬಿಕ ಕಲಹ - ಪತ್ನಿ, ಅತ್ತೆಯ ಮೇಲೆ ಹಲ್ಲೆ ನಡೆಸಿ, ವಿಷ ಸೇವಿಸಿದ ಪತಿ!
ಪೆರುವಾಜೆ (ದಕ್ಷಿಣ ಕನ್ನಡ): ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ ಅತ್ತೆಯ ಮೇಲೆ ಹರಿತವಾದ ಸಾಧನದಿಂದ ಭೀಕರ ಹಲ್ಲೆ ನಡೆಸಿ, ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಪೆರುವಾಜೆ ಗ್ರಾಮದ ಅನವುಗುಡಿ ಎಂಬಲ್ಲಿ ಶನಿವಾರ ಮಧ್ಯಾಹ್ನ ಸಂಭವಿಸಿದೆ. ಮುಕ್ಕೂರು ನಿವಾಸಿ ಗಣೇಶ್ (38) ಹಲ್ಲೆ ನಡೆಸಿದ ಆರೋಪಿ. ಈತನ ಪತ್ನಿ ವಿನಿತಾ (32) ಮತ್ತು ಆಕೆಯ ತಾಯಿ ಕುಸುಮಾ (50) ಗಂಭೀರ ಗಾಯಗೊಂಡ ಸಂತ್ರಸ್ತರು. ಪೊಲೀಸರು ನೀಡಿದ ಮಾಹಿತಿಯಂತೆ, ಶನಿವಾರ ಮಧ್ಯಾಹ್ನ ಅನವುಗುಡಿಯಲ್ಲಿರುವ ಮನೆಯಲ್ಲಿ ಕೌಟುಂಬಿಕ ವಿಚಾರಕ್ಕೆ ಸ
Sep 61 min read


ಸುಳ್ಯದ ಮೂವರು ಶಿಕ್ಷಕರಿಗೆ ಜಿಲ್ಲಾ ಮಟ್ಟದ ‘ಉತ್ತಮ ಶಿಕ್ಷಕ’ ಪ್ರಶಸ್ತಿ
ಸುಳ್ಯ: ಶಿಕ್ಷಕರ ದಿನಾಚರಣೆಯ ಶುಭ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ‘ಉತ್ತಮ ಶಿಕ್ಷಕ’ ಪ್ರಶಸ್ತಿಯನ್ನು ಪ್ರಕಟಿಸಲಾಗಿದ್ದು, ಸುಳ್ಯ ತಾಲೂಕಿನ ಮೂವರು ಸಾಧಕ ಶಿಕ್ಷಕರು ಈ ಗೌರವಕ್ಕೆ ಭಾಜನರಾಗಿದ್ದಾರೆ. * ಕಿರಿಯ ಪ್ರಾಥಮಿಕ ವಿಭಾಗ: ಪಾಂಡಿಗದ್ದೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕ ಯಶೋಧರ ಕೆ. * ಹಿರಿಯ ಪ್ರಾಥಮಿಕ ವಿಭಾಗ: ಏಣ್ಮೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕಿ ಭುವನೇಶ್ವರಿ ಕೆ. * ಪ್ರೌಢಶಾಲಾ ವಿಭಾಗ: ಅರಂತೋಡು ಎನ್ಎಂಪಿಯು ಕಾಲೇಜಿನ ಪ್ರೌಢಶಾಲಾ ವಿಭಾಗದ ಸಹಶಿಕ್ಷಕ ಕಿಶೋರ್ ಕುಮಾರ್. ಶಿಕ್ಷಣ ಕ್ಷೇತ್ರಕ್ಕೆ ಸಲ್ಲಿಸಿದ ಗಣನೀಯ ಸೇವೆಯನ್ನು ಗು
Sep 51 min read


ಎನ್ಐಟಿ ಸುರತ್ಕಲ್: ಹಣ ದುರುಪಯೋಗ ಆರೋಪ, ಇಬ್ಬರು ಉಪನ್ಯಾಸಕರ ಬಂಧನ
ಮಂಗಳೂರಿನ ಪ್ರತಿಷ್ಠಿತ ಸುರತ್ಕಲ್ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯ (ಎನ್ಐಟಿ) ಇಬ್ಬರು ಬೋಧಕ ಸಿಬ್ಬಂದಿ ವಿರುದ್ಧ ಸಾರ್ವಜನಿಕ ಸೇವಕರಿಂದ ನಂಬಿಕೆ ದ್ರೋಹ ಹಾಗೂ ಭಾರಿ ಪ್ರಮಾಣದ ಹಣ ದುರುಪಯೋಗ ಆರೋಪದಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಂಸ್ಥೆಯ ಆಡಳಿತ ಮಂಡಳಿಯು ನೀಡಿದ ಅಧಿಕೃತ ದೂರಿನ ಮೇರೆಗೆ ಈ ಸಕಾಲಿಕ ಕ್ರಮ ಕೈಗೊಳ್ಳಲಾಗಿದೆ. ಸಂಸ್ಥೆಯು ಕೈಗೊಂಡ ಆಂತರಿಕ ವಿಚಾರಣೆ ಮತ್ತು ಆಡಿಟ್ ವೇಳೆಯಲ್ಲಿ ಆರ್ಥಿಕ ಅಕ್ರಮ ನಡೆದಿರುವುದು ಪ್ರಾಥಮಿಕವಾಗಿ ಬೆಳಕಿಗೆ ಬಂದಿತ್ತು. ಆಡಳಿತ ಮಂಡಳಿಯು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ತಪ್ಪಿತಸ್ಥ ಸಿಬ್ಬಂದಿ ವಿರುದ್ಧ ಕಾನೂನು ಪ್ರಕಾರ ಸೂಕ್ತ
Sep 51 min read


ಬೆಂಗಳೂರು-ಮಂಗಳೂರು ನಡುವೆ ನಾಳೆ 'ವಂದೇ ಭಾರತ್' ರೈಲು ಪ್ರಾಯೋಗಿಕ ಸಂಚಾರ: ವೇಳಾಪಟ್ಟಿ ಇಲ್ಲಿದೆ!
ಕರಾವಳಿ ಮತ್ತು ರಾಜಧಾನಿ ನಡುವಿನ ಪ್ರಯಾಣಿಕರ ಬಹುದಿನದ ಕನಸು ನನಸಾಗುವ ಕಾಲ ಹತ್ತಿರವಾಗಿದ್ದು, ಯಶವಂತಪುರ ಮತ್ತು ಮಂಗಳೂರು ಸೆಂಟ್ರಲ್ ನಡುವೆ 16 ಬೋಗಿಗಳ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ಪ್ರಾಯೋಗಿಕ ಸಂಚಾರ ಶನಿವಾರ (ಸೆ.5) ನಡೆಯಲಿದೆ. ಭಾರತೀಯ ರೈಲ್ವೆಯು ಈ ಮಾರ್ಗದಲ್ಲಿ ಚಾಲನಾ ಸಮಯ ಹಾಗೂ ಮಾರ್ಗದ ಕಾರ್ಯಸಾಧ್ಯತೆಯನ್ನು ಪರಿಶೀಲಿಸಲು ಖಾಲಿ ರೇಕ್ನೊಂದಿಗೆ ಟ್ರಯಲ್ ರನ್ ನಡೆಸುತ್ತಿದೆ. ಪ್ರಾಯೋಗಿಕ ಸಂಚಾರದ ತಾತ್ಕಾಲಿಕ ವೇಳಾಪಟ್ಟಿ: * ಯಶವಂತಪುರ ➔ ಮಂಗಳೂರು ಸೆಂಟ್ರಲ್: * ಯಶವಂತಪುರ ನಿರ್ಗಮನ: ಬೆಳಗ್ಗೆ 06:05 * ಹಾಸನ: ಬೆಳಗ್ಗೆ 09:00 / 09:05 * ಸಕಲೇಶಪುರ: ಬೆಳಗ್ಗ
Sep 41 min read


ಶೇಣಿಯಲ್ಲಿ 23ನೇ ವರ್ಷದ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಮತ್ತು ಸತ್ಯನಾರಾಯಣ ಪೂಜೆ
ಸುಳ್ಯ: ಚೊಕ್ಕಾಡಿ ಸಮೀಪದ ಶೇಣಿಯಲ್ಲಿ ಸಾರ್ವಜನಿಕ ಶ್ರೀ ಕೃಷ್ಣ ಸೇವಾ ಸಮಿತಿ (ರಿ.) ಆಶ್ರಯದಲ್ಲಿ 23ನೇ ವರ್ಷದ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಹಾಗೂ ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮವು 2026ರ ಸೆಪ್ಟೆಂಬರ್ 6ರ ಆದಿತ್ಯವಾರ ಬೆಳಿಗ್ಗೆ 9-00 ಗಂಟೆಗೆ ಜರುಗಲಿದೆ. ಕಾರ್ಯಕ್ರಮದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಸಮಿತಿಯ ಅಧ್ಯಕ್ಷರಾದ ಶ್ರೀ ಶಿವ ಸುಬ್ರಹ್ಮಣ್ಯ ಭಟ್ ನಾಟಿಕೇರಿ ವಹಿಸಲಿದ್ದು, ಚೊಕ್ಕಾಡಿ ಶ್ರೀ ರಾಮ ದೇವಾಲಯದ ಅರ್ಚಕರಾದ ಶ್ರೀ ರಘುರಾಮ ಭಟ್ ಉದ್ಘಾಟನೆ ನೆರವೇರಿಸಲಿದ್ದಾರೆ. ನಿವೃತ್ತ ಮುಖ್ಯೋಪಾಧ್ಯಾಯಿನಿ ಶ್ರೀಮತಿ ನಳಿನಿ ವಿ. ಮುಖ್ಯ ಅತಿಥಿಗಳಾಗಿ ಹಾಗೂ ದ
Sep 31 min read


ಪುತ್ತೂರು ಪ್ರೆಸ್ ಕ್ಲಬ್ನಲ್ಲಿ ತಳ್ಳಾಟ, ನಿಂದನೆ: ಪ್ರಕರಣ ದಾಖಲು
ಪುತ್ತೂರು: ಸ್ಪಷ್ಟನೆ ನೀಡಲು ಪ್ರೆಸ್ ಕ್ಲಬ್ಗೆ ಆಗಮಿಸಿದ್ದ ರಾಜಕೀಯ ಪಕ್ಷವೊಂದರ ಕಾರ್ಯಕರ್ತನಿಗೆ ತಳ್ಳಾಡಿ, ಅವಾಚ್ಯವಾಗಿ ನಿಂದಿಸಿ ಜೀವ ಬೆದರಿಕೆ ಹಾಕಿದ ಘಟನೆ ಸೆ. 1ರಂದು ನಡೆದಿದೆ. ಕೆಮ್ಮಿಂಜೆ ನಿವಾಸಿ ಅಬ್ದುಲ್ ಹಕೀಂ ದೂರು ನೀಡಿದವರಾಗಿದ್ದಾರೆ. ತಮ್ಮ ಮೇಲಿನ ಆರೋಪಗಳಿಗೆ ಸ್ಪಷ್ಟನೆ ನೀಡಲು ಅವರು ಪತ್ರಿಕಾಗೋಷ್ಠಿಗೆ ಬಂದಿದ್ದಾಗ ಉದಯ ಪಾಟಾಳಿ, ಜುನೈದ್ ಬಿಜಿ, ಇಸಾಕ್ ಸಾಲ್ಮರ, ಬಶೀರ್ ಪರ್ಲಡ್ಕ ಸೇರಿದಂತೆ ಹಲವರು ಸೇರಿ ದೌರ್ಜನ್ಯ ಎಸಗಿದ್ದಾರೆ ಎನ್ನಲಾಗಿದೆ. ಅಲ್ಲದೆ ಪ್ರೆಸ್ ಕ್ಲಬ್ನಿಂದ ಹೊರಬರದಂತೆ ಅಕ್ರಮವಾಗಿ ತಡೆದಿದ್ದಾರೆ ಎಂದೂ ಆರೋಪಿಸಲಾಗಿದೆ. ಈ ಕುರಿತು ಅಬ್ದುಲ್ ಹಕೀಂ ನೀಡಿದ
Sep 31 min read


ಜೀವಂತ ವ್ಯಕ್ತಿಯನ್ನೇ 'ಮೃತ' ಎಂದು ನಮೂದಿಸಿದ ಬಿಎಲ್ಒ: ಮಂಗಳೂರಿನಲ್ಲಿ ಮತದಾರರ ಪಟ್ಟಿ ಯಡವಟ್ಟು!
ಮಂಗಳೂರು: ಬದುಕಿರುವ ವ್ಯಕ್ತಿಯೊಬ್ಬರನ್ನು ಮತದಾರರ ಸರ್ವೇ ಕರಡು ಪಟ್ಟಿಯಲ್ಲಿ 'ಮರಣ ಹೊಂದಿದ್ದಾರೆ' ಎಂದು ನಮೂದಿಸಿರುವ ಆಘಾತಕಾರಿ ಘಟನೆ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ನಡೆದಿದೆ. ಮಂಗಳೂರಿನ ಬಿಜೈ ನಿವಾಸಿ, 61 ವರ್ಷದ ಡೊನಾಲ್ಡ್ ಜೋಸೆಫ್ ರೇಗೋ ಈ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬಲಿಯಾದ ದುರ್ದೈವಿ. ಗಣತಿ ನಮೂನೆಯನ್ನು ಹಿಂದಿರುಗಿಸದೇ ಇರಲು 'ಮರಣ'ವೇ ಕಾರಣ ಎಂದು ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ. ಈ ಕುರಿತು ಮಾಧ್ಯಮಗಳ ಮುಂದೆ ತೀವ್ರ ಬೇಸರ ವ್ಯಕ್ತಪಡಿಸಿದ ಡೊನಾಲ್ಡ್ ರೇಗೋ, "ನಾನು ಇಲ್ಲೇ ಹುಟ್ಟಿ ಬೆಳೆದವನು. ನನ್ನ ಬಳಿ ಅಧಿಕೃತ ವೋಟರ್ ಐಡಿ ಇದೆ. ಹಿಂದೆ ಗಲ್
Sep 31 min read


ದಕ್ಷಿಣ ಕನ್ನಡ: ಸೆಪ್ಟೆಂಬರ್ 1 ರಿಂದ ಆಟೋ ರಿಕ್ಷಾ ಪ್ರಯಾಣ ದರ ಬದಲಾವಣೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಟೋ ರಿಕ್ಷಾ ಪ್ರಯಾಣ ದರಗಳನ್ನು ಪರಿಷ್ಕರಿಸಲಾಗಿದ್ದು, ಸೆಪ್ಟೆಂಬರ್ 1ರಿಂದಲೇ ಹೊಸ ದರಗಳು ಜಾರಿಗೆ ಬಂದಿವೆ. ಉಪ ಆಯುಕ್ತ ದರ್ಶನ್ ಎಚ್ವಿ ಅಧ್ಯಕ್ಷತೆಯಲ್ಲಿ ನಡೆದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ (RTA) ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಹೊಸ ನಿಯಮದಂತೆ, ಮೊದಲ 1.5 ಕಿಲೋಮೀಟರ್ಗೆ ಕನಿಷ್ಠ ದರವನ್ನು ರೂ.40 (ಗರಿಷ್ಠ ಮೂವರು ಪ್ರಯಾಣಿಕರು) ನಿಗದಿಪಡಿಸಲಾಗಿದೆ. ತದನಂತರದ ಪ್ರತಿ ಹೆಚ್ಚುವರಿ ಕಿಲೋಮೀಟರ್ಗೆ ರೂ.20 ಪಾವತಿಸಬೇಕಾಗುತ್ತದೆ. ಇನ್ನು ಕಾಯುವಿಕೆ ಶುಲ್ಕಕ್ಕೆ ಸಂಬಂಧಿಸಿದಂತೆ ಮೊದಲ 10 ನಿಮಿಷ ಉಚಿತವಾಗಿದ್ದು, ನಂತರದ ಪ್ರತಿ
Sep 11 min read


ಕೃಷ್ಣ ಜನ್ಮಾಷ್ಟಮಿ, ತೆನೆ ಹಬ್ಬಕ್ಕೆ ಸ್ಥಳೀಯ ರಜೆ ಘೋಷಿಸಲು ಶಾಸಕ ವೇದವ್ಯಾಸ ಕಾಮತ್ ಮನವಿ
ಮಂಗಳೂರು: ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಕ್ರೈಸ್ತ ಸಮುದಾಯದ ಮರಿಯ ಜಯಂತಿ (ತೆನೆ ಹಬ್ಬ) ಆಚರಣೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಸ್ಥಳೀಯ ರಜೆ ಘೋಷಿಸುವಂತೆ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಅವರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಇದೇ ಸೆಪ್ಟೆಂಬರ್ 4 ರಂದು ಕರಾವಳಿ ಜಿಲ್ಲೆಗಳಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಅತ್ಯಂತ ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುತ್ತದೆ. ಇದು ಕೇವಲ ಧಾರ್ಮಿಕ ಆಚರಣೆಯಾಗಿರದೆ, ಭಾರತೀಯ ಸಂಸ್ಕೃತಿ, ಕುಟುಂಬ ಮೌಲ್ಯಗಳು ಹಾಗೂ ನೈತಿಕ ಶಿಕ್ಷಣವನ್ನು ಮುಂದಿನ ಪೀಳಿಗೆಗೆ ತಲುಪಿಸುವ ಮಹತ್ವ
Sep 11 min read


ಕಾರವಾರ: ಅರಬ್ಬಿ ಸಮುದ್ರದಲ್ಲಿ ಮುಳುಗಿದ ಮೀನುಗಾರಿಕಾ ಬೋಟ್; 24 ಮೀನುಗಾರರ ಸಾಹಸಿಕ ರಕ್ಷಣೆ!
ಕಾರವಾರ: ಇಲ್ಲಿನ ಅಂಜದೀವ್ ದ್ವೀಪದ ಸಮೀಪ ಮೀನುಗಾರಿಕೆಗೆ ತೆರಳಿದ್ದ ಬೆಳಂಬರ್ ಮೂಲದ ನೀಲಕಂಠ ಖಾರ್ವಿ ಅವರಿಗೆ ಸೇರಿದ 'ಶ್ರೀ ಮಾತಾ' ಎಂಬ ಮೀನುಗಾರಿಕಾ ಬೋಟ್ ಅರಬ್ಬಿ ಸಮುದ್ರದಲ್ಲಿ ಅವಘಡಕ್ಕೀಡಾಗಿ ಮುಳುಗಡೆಯಾಗಿದೆ. ವಿಷಯ ತಿಳಿಯುತ್ತಿದ್ದಂತೆಯೇ ಸಮೀಪದಲ್ಲಿದ್ದ ಐದಾರು ಬೋಟ್ಗಳ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿ, ಹಗ್ಗದ ನೆರವಿನಿಂದ ಬೋಟ್ನಲ್ಲಿದ್ದ ಎಲ್ಲಾ 24 ಮಂದಿ ಮೀನುಗಾರರನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ. ಬೋಟ್ ಅನ್ನು ಉಳಿಸಲು ಯತ್ನಿಸಿದರೂ ಅದು ಸಂಪೂರ್ಣವಾಗಿ ಸಮುದ್ರದ ಪಾಲಾಗಿದೆ. ಘಟನೆಯಲ್ಲಿ ಸುಮಾರು 50 ಲಕ್ಷ ರೂಪಾಯಿಗೂ ಅಧಿಕ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.
Aug 301 min read


ದರ್ಬೆ ಸೈಬರ್ ಸೆಂಟರ್ ಗಲಾಟೆ ಪ್ರಕರಣ: ಸತ್ಯಾಸತ್ಯತೆ ಬಿಚ್ಚಿಟ್ಟ ಸಂತ್ರಸ್ತ ಮುಬಾಶಿರ; ಕ್ಷಮೆ ಕೇಳಿದರೆ ಕೇಸ್ ವಾಪಸ್ ಪಡೆಯಲು ಸಿದ್ಧ
ಪುತ್ತೂರು / ಮಂಗಳೂರು: ಪುತ್ತೂರು ನಗರದ ದರ್ಬೆಯ ಸೈಬರ್ ಕೇಂದ್ರವೊಂದರಲ್ಲಿ ಜನನ ಪ್ರಮಾಣಪತ್ರ ಲ್ಯಾಮಿನೇಷನ್ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಗಲಾಟೆ ಪ್ರಕರಣವು ರಾಜಕೀಯ ಹಾಗೂ ಕೋಮು ಸ್ವರೂಪ ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ, ಸಂತ್ರಸ್ತ ಮಂಡೆಕೋಲು ನಿವಾಸಿ ಮುಬಾಶಿರ ಅವರು ಮಂಗಳೂರಿನಲ್ಲಿ ಮಾಧ್ಯಮಗಳ ಮುಂದೆ ಹಾಜರಾಗಿ ಘಟನೆಯ ಪೂರ್ಣ ವಾಸ್ತವಾಂಶವನ್ನು ಸ್ಪಷ್ಟಪಡಿಸಿದ್ದಾರೆ. ಆಗಸ್ಟ್ 21ರಂದು ಊಟಕ್ಕೆ ಬಂದಿದ್ದಾಗ ಪಕ್ಕದ ಸೈಬರ್ ಸೆಂಟರ್ಗೆ ಮಗುವಿನ ಬರ್ತ್ ಸರ್ಟಿಫಿಕೇಟ್ ಲ್ಯಾಮಿನೇಷನ್ ಮತ್ತು ಆಧಾರ್ ಕಾರ್ಡ್ ಪ್ರಿಂಟ್ಗೆ ನೀಡಿದ್ದೆವು. ಆದರೆ ಸಿಬ್ಬಂದಿಯ ನಿರ್ಲಕ್ಷ್ಯದಿಂದ ಸರ್ಟಿ
Aug 281 min read


ಬಳ್ಪ -ಕೋಡಿಂಬಾಳ: ಜನವಸತಿ ಪ್ರದೇಶಕ್ಕೆ ಲಗ್ಗೆಯಿಟ್ಟ ಕಾಡಾನೆಗಳ ಹಿಂಡು; ಗ್ರಾಮಸ್ಥರಲ್ಲಿ ಆತಂಕ
ಕೋಡಿಂಬಾಳ: ಬಳ್ಪ ಪರಿಸರದಲ್ಲಿ ಸಂಚರಿಸುತ್ತಿದ್ದ ಕಾಡಾನೆಗಳ ಹಿಂಡು ಇದೀಗ ಪಕ್ಕದ ಕೋಡಿಂಬಾಳ ಗ್ರಾಮಕ್ಕೆ ಲಗ್ಗೆಯಿಟ್ಟಿದೆ. ಎಣ್ಣೆಮಜಲು ಬಳಿಯ ಬೀರಿಕಾಡು ಪ್ರದೇಶದ ಮೂಲಕ ನದಿ ದಾಟಿ ಬಂದಿರುವ ಆನೆಗಳು, ಕೊರಿಯರ್ ಸಮೀಪದ ಖಾಸಗಿ ರಬ್ಬರ್ ತೋಟದಲ್ಲಿ ಠಿಕಾಣಿ ಹೂಡಿವೆ. ಜನವಸತಿ ಹಾಗೂ ಕೃಷಿ ತೋಟಗಳ ಸನಿಹದಲ್ಲೇ ಆನೆಗಳು ಬೀಡುಬಿಟ್ಟಿರುವುದರಿಂದ ಸ್ಥಳೀಯ ಕೃಷಿಕರು, ಕಾರ್ಮಿಕರು ಮತ್ತು ಶಾಲಾ ಮಕ್ಕಳು ತೀವ್ರ ಆತಂಕಕ್ಕೊಳಗಾಗಿದ್ದಾರೆ. ಗ್ರಾಮಸ್ಥರು ಒಂಟಿಯಾಗಿ ಸಂಚರಿಸದೆ ಜಾಗರೂಕರಾಗಿರುವಂತೆ ಎಚ್ಚರಿಕೆ ಸಂದೇಶ ರವಾನಿಸಲಾಗುತ್ತಿದೆ. ಅರಣ್ಯ ಇಲಾಖಾಧಿಕಾರಿಗಳು ತಕ್ಷಣವೇ ಸ್ಥಳಕ್ಕೆ ಆಗಮಿಸಿ, ಕಾಡಾನೆಗಳನ್
Aug 281 min read


ದೇವರಕೊಲ್ಲಿ ಬಳಿ ಭೀಕರ ಅಪಘಾತ: ಟಿಟಿ ಮೇಲೆ ಮಗುಚಿದ ಲಾರಿ; ಹಲವರಿಗೆ ಗಂಭೀರ ಗಾಯ
ದೇವರಕೊಲ್ಲಿ: ಮಾಣಿ–ಮೈಸೂರು ರಾಷ್ಟ್ರೀಯ ಹೆದ್ದಾರಿಯ ದೇವರಕೊಲ್ಲಿ ಅಬ್ಬಿಕೊಲ್ಲಿ ಬಳಿ ಇಂದು ಸಂಜೆ ಭೀಕರ ಅಪಘಾತ ಸಂಭವಿಸಿದೆ. ಟೆಂಪೋ ಟ್ರಾವೆಲ್ಲರ್ (ಟಿಟಿ) ವಾಹನದ ಮೇಲೆ ಲಾರಿಯೊಂದು ಮಗುಚಿ ಬಿದ್ದಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಅಪಘಾತದ ಬಳಿಕ ಟಿಟಿ ವಾಹನದೊಳಗೆ ಕೆಲವರು ಸಿಲುಕಿಕೊಂಡಿದ್ದರು. ಕ್ರೇನ್ ಮೂಲಕ ಲಾರಿಯನ್ನು ಮೇಲಕ್ಕೆತ್ತಿ ರಕ್ಷಣಾ ಕಾರ್ಯ ನಡೆಸಲಾಗಿದ್ದು, ಗಾಯಾಳುಗಳನ್ನು ಮೂರು ಅಂಬ್ಯುಲೆನ್ಸ್ಗಳ ಮೂಲಕ ಕೆವಿಜಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಘಟನೆಯಲ್ಲಿ ಸಾವು ಸಂಭವಿಸಿರುವ ಶಂಕೆಯೂ ವ್ಯಕ್ತವಾಗಿದ್ದು, ಈ ಕುರಿತು ಅಧಿಕೃತ ಮಾಹಿತಿ ಇನ್ನಷ್ಟೇ ಲ
Aug 261 min read
Archive
bottom of page



