top of page
News Articles
Sathyapatha News Plus


ಪುತ್ತೂರು: ಆನ್ ಲೈನ್ ಮೂಲಕ ವಂಚಿಸುತ್ತಿದ್ದಾತ ಅರೆಸ್ಟ್
ಪುತ್ತೂರು: ಆನ್ಲೈನ್ ಮೂಲಕ 2.37 ಲಕ್ಷ ರೂಪಾಯಿಗೂ ಅಧಿಕ ಹಣ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲಾ ಸೈಬರ್ ಅಪರಾಧ ಪೊಲೀಸರು ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನನ್ನು ಮೂಲತಃ ಮಹಾರಾಷ್ಟ್ರದವನಾಗಿದ್ದು, ಸದ್ಯ ಮಂಡ್ಯ ಜಿಲ್ಲೆಯ ಕೃಷ್ಣರಾಜಪೇಟೆಯಲ್ಲಿ ವಾಸವಿರುವ ಅವಿನಾಶ್ ರಮೇಶ್ ಗೌಡ (24) ಎಂದು ಗುರುತಿಸಲಾಗಿದೆ. ಪುತ್ತೂರಿನ ಯಶೋಧರ ಎಂಬವರು ನೀಡಿದ ದೂರಿನ ಪ್ರಕಾರ, ಅಪರಿಚಿತ ವ್ಯಕ್ತಿಯೊಬ್ಬನು ವಿಮಾ ಕಂಪನಿಯ ಪ್ರತಿನಿಧಿ ಎಂದು ಹೇಳಿಕೊಂಡು ವಿವಿಧ ಮೊಬೈಲ್ ಸಂಖ್ಯೆಗಳಿಂದ ಕರೆ ಮಾಡಿ ಹೊಸ ವಿಮಾ ಪಾಲಿಸಿ ಖರೀದಿಸಲು ಹಾಗೂ ಪ್ರೀಮಿಯಂ ಪಾವತಿಸಲು ಒತ್ತಾಯಿಸಿದ್ದ.
Feb 131 min read


ಬಿಎಸ್ಸಿ ಕ್ರಿಮಿನಾಲಜಿ ಓದುತ್ತಿದ್ದ ಕಾಸರಗೋಡಿನ ಹಿಂದೂ ಯುವತಿ ವಯನಾಡಿನ ಮುಸ್ಲಿಂ ಯುವಕನೊಂದಿಗೆ ಪರಾರಿ......!
ಮಂಗಳೂರು, ಫೆ.11: ಮುಕ್ಕ ಶ್ರೀನಿವಾಸ್ ಕಾಲೇಜಿನಲ್ಲಿ ಬಿಎಸ್ಸಿ ಕ್ರಿಮಿನಾಲಜಿ ಓದುತ್ತಿದ್ದ ಕಾಸರಗೋಡು ಮೂಲದ 22 ವರ್ಷದ ಯುವತಿ ಕೇರಳದ ವಯನಾಡು ಮೂಲದ ಯುವಕನೊಂದಿಗೆ ತೆರಳಿದ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿ ಜೋಡಿಯನ್ನು ವಯನಾಡಿನಲ್ಲಿ ಪತ್ತೆಹಚ್ಚಿದ್ದಾರೆ. ಕಾಸರಗೋಡು ಜಿಲ್ಲೆಯ ಮಧೂರು ಸಮೀಪದ ಮೀಪುಗುರಿ ನಿವಾಸಿಯಾದ ಯುವತಿ ಕಳೆದ ಮೂರು ವರ್ಷಗಳಿಂದ ಮಂಗಳೂರಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಈ ಬಾರಿ ಬಿಎಸ್ಸಿ ಪದವಿ ಪೂರ್ಣಗೊಳಿಸಿದ್ದರೂ, ಸುರತ್ಕಲ್ ಬಳಿಯ ಪೇಯಿಂಗ್ ಗೇಸ್ಟ್ (ಪಿಜಿ) ವಸತಿಯಲ್ಲಿ ತನ್ನ ಸಹ
Feb 111 min read


ಮಂಗಳೂರಿಗರಿಗೆ ಡಬಲ್ ಶಾಕ್: ವಂದೇ ಭಾರತ್ ಮಂಗಳೂರು ನಗರಕ್ಕೆ ಇಲ್ಲ, ಗೊಮ್ಮಟೇಶ್ವರ ಎಕ್ಸ್ಪ್ರೆಸ್ ವೇಳಾಪಟ್ಟಿ ಬದಲಾವಣೆ?
ಮಂಗಳೂರು, ಫೆ.11: ಬೆಂಗಳೂರು–ಮಂಗಳೂರು ಮಧ್ಯೆ ವಂದೇ ಭಾರತ್ ರೈಲು ಸಂಚಾರ ಆರಂಭವಾಗಲಿದೆ ಎಂಬ ನಿರೀಕ್ಷೆಯ ನಡುವೆ ಕರಾವಳಿಗರಿಗೆ ಡಬಲ್ ಶಾಕ್ ಎದುರಾಗುವ ಸಾಧ್ಯತೆ ಮೂಡಿದೆ. ಮಂಗಳೂರು ನಗರಕ್ಕೆ ವಂದೇ ಭಾರತ್ ಪ್ರವೇಶಿಸದಿರುವ ಪ್ರಸ್ತಾವನೆ ಜೊತೆಗೆ, ಹಗಲಿನ ಜನಪ್ರಿಯ 16575/16576 ಗೊಮ್ಮಟೇಶ್ವರ ಎಕ್ಸ್ಪ್ರೆಸ್ ರೈಲಿನ ವೇಳಾಪಟ್ಟಿಯನ್ನು ಬದಲಾಯಿಸುವ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ಮಾಹಿತಿಯ ಪ್ರಕಾರ, ಬೆಂಗಳೂರು–ಗೋವಾ ವಂದೇ ಭಾರತ್ ಎಕ್ಸ್ಪ್ರೆಸ್ ಪಡೀಲ್ ಬೈಪಾಸ್ ಮೂಲಕವೇ ಸಂಚರಿಸಲಿದೆ. ಇದರಿಂದ ಮಂಗಳೂರು ಜಂಕ್ಷನ್ಗೆ ರೈಲು ಬಾರದಿರುವ ಸಾಧ್ಯತೆ ಇದೆ. ಇದೇ ವೇಳೆ, ಹೊಸ ರೈಲಿನ ವ
Feb 111 min read


ಬೆಳ್ತಂಗಡಿ ವಿದ್ಯಾರ್ಥಿನಿ ಅಪಹರಣ ಯತ್ನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ವರದಿಯಾಗಿದ್ದ ಅಪ್ರಾಪ್ತ ವಿದ್ಯಾರ್ಥಿನಿಯ ಅಪಹರಣ ಯತ್ನ ಪ್ರಕರಣಕ್ಕೆ ಇದೀಗ ಅಚ್ಚರಿಯ ತಿರುವು ದೊರೆತಿದೆ. ಪೊಲೀಸರ ತನಿಖೆಯಲ್ಲಿ ಅಪಹರಣ ಯತ್ನವೆಂಬ ಆರೋಪ ಸುಳ್ಳು ಎಂಬುದು ಬಹಿರಂಗವಾಗಿದ್ದು, ಕಾಲೇಜಿಗೆ ಸೇರಬೇಕೆಂಬ ಉದ್ದೇಶದಿಂದ ವಿದ್ಯಾರ್ಥಿನಿಯೇ ಸಿನಿಮೀಯ ಮಾದರಿಯ ನಕಲಿ ಕಥೆ ಕಟ್ಟಿಕೊಂಡಿದ್ದಾಳೆ ಎಂಬುದು ಬೆಳಕಿಗೆ ಬಂದಿದೆ. ಫೆಬ್ರವರಿ 9ರಂದು ಬೆಳಗ್ಗೆ 8.30ರ ಸುಮಾರಿಗೆ ಬೆಳ್ತಂಗಡಿ ನಗರದ ಸುದೇಮುಗೇರು ಪ್ರದೇಶದಲ್ಲಿ 16 ವರ್ಷದ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಸ್ಕೂಟಿಯಲ್ಲಿ ಕಾಲೇಜಿಗೆ ತೆರಳುತ್ತಿದ್ದ ವೇಳೆ
Feb 101 min read


ಬೆಳ್ತಂಗಡಿಯಲ್ಲಿ ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿ ಅಪಹರಣ ಯತ್ನ
ಬೆಳ್ತಂಗಡಿ, ಫೆ.9: ಅಪ್ರಾಪ್ತ ವಯಸ್ಕ ಕಾಲೇಜು ವಿದ್ಯಾರ್ಥಿನಿಯನ್ನು ಅಪಹರಿಸಲು ಯತ್ನಿಸಿದ ಘಟನೆ ಬೆಳ್ತಂಗಡಿಯಲ್ಲಿ ಸೋಮವಾರ ಬೆಳಿಗ್ಗೆ ವರದಿಯಾಗಿದೆ. ಅಪಹರಣ ಯತ್ನ ವಿಫಲವಾದ ಬಳಿಕ ದುಷ್ಕರ್ಮಿಗಳು ಚಾಕುವಿನಿಂದ ಹಲ್ಲೆ ನಡೆಸಿ ಪರಾರಿಯಾದ ಘಟನೆ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಫೆಬ್ರವರಿ 9ರಂದು ಬೆಳಿಗ್ಗೆ ಸುಮಾರು 8.30ರ ವೇಳೆಗೆ ಬೆಳ್ತಂಗಡಿ ನಗರದ ಸುದೇಮುಗೇರು ನಿವಾಸಿ ಹಾಗೂ ಪ್ರಥಮ ವರ್ಷದ ಪಿಯುಸಿ ವಿದ್ಯಾರ್ಥಿನಿ ಕಾಲೇಜಿಗೆ ತೆರಳಲು ಸಂತೆಕಟ್ಟೆ ಕಡೆಗೆ ಸ್ಕೂಟರ್ನಲ್ಲಿ ತೆರಳುತ್ತಿದ್ದಳು. ಈ ವೇಳೆ ಬಟ್ಟೆಯಿಂದ ಮುಚ್ಚಿದ ನಂಬರ್ ಪ್ಲೇಟ್ ಹೊಂದಿದ್ದ ಕಾರಿನಲ್ಲಿ ಬಂದ ಮೂವರು ಅಪರಿಚಿತರು
Feb 91 min read


ಪುತ್ತೂರಿನಲ್ಲಿ 1.6 ಕ್ವಿಂಟಾಲ್ ಗಾಂಜಾ ವಶ; ಮೂವರು ಆರೋಪಿಗಳ ಬಂಧನ
ಪುತ್ತೂರು: ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಯಶಸ್ವಿ ಕಾರ್ಯಾಚರಣೆಯಲ್ಲಿ ಪೊಲೀಸರು ಸುಮಾರು ರೂ.53 ಲಕ್ಷ ಮೌಲ್ಯದ 1 ಕ್ವಿಂಟಾಲ್ 6 ಕೆಜಿ 50 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಡಿಶಾ ಮೂಲದ ವ್ಯಕ್ತಿಯೊಬ್ಬರನ್ನು ಒಳಗೊಂಡಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಂಜಾ ಸಾಗಾಟಕ್ಕೆ ಹಣ ಹಾಗೂ ವಾಹನದ ವ್ಯವಸ್ಥೆ ಮಾಡಿಕೊಟ್ಟ ಆರೋಪಿಗಳಾಗಿ ಬೆಳ್ತಂಗಡಿ ಚಾರ್ಮಾಡಿ ನಿವಾಸಿ ಮಹಮ್ಮದ್ ಫಯಾಜ್ ಡಿ.ಕೆ (27), ಬೆಳ್ತಂಗಡಿ ಕಕ್ಕಿಂಜೆ ನಿವಾಸಿ ನಝೀರ್ (42) ಮತ್ತು ಒಡಿಶಾ ಮೂಲದ ದೀಪಕ್ ಪಾತ್ರ (37)
Feb 81 min read


ಗಡಾಯಿಕಲ್ಲು ಚಾರಣಕ್ಕೆ ತಾತ್ಕಾಲಿಕ ನಿಷೇಧ
ಬೇಸಿಗೆಯ ಹಿನ್ನೆಲೆಯಲ್ಲಿ ಕಾಡ್ಗಿಚ್ಚು ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ಬೆಳ್ತಂಗಡಿಯ ಪ್ರಸಿದ್ಧ ಗಡಾಯಿಕಲ್ಲು (ಜಮಲಾಬಾದ್ ಕೋಟೆ) ಚಾರಣವನ್ನು ಫೆಬ್ರವರಿ 7ರಿಂದ ಜಾರಿಗೆ ಬರುವಂತೆ ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಬೆಳ್ತಂಗಡಿ ವಲಯ ವನ್ಯಜೀವಿ ವಿಭಾಗವು ಈ ಆದೇಶ ಹೊರಡಿಸಿದ್ದು, ಮುಂದಿನ ಸೂಚನೆಯವರೆಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ.
Feb 61 min read


ದಕ್ಷಿಣ ಕನ್ನಡದ ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ವೇಗ: ದೆಹಲಿಯಲ್ಲಿ ಕೇಂದ್ರ ಕಾರ್ಯದರ್ಶಿಗಳೊಂದಿಗೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಚರ್ಚೆ
ನವದೆಹಲಿ/ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಗತಿಯಲ್ಲಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ ಯೋಜನೆಗಳನ್ನು ತ್ವರಿತವಾಗಿ ಪೂರ್ಣಗೊಳಿಸುವ ನಿಟ್ಟಿನಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಮಹತ್ವದ ಹೆಜ್ಜೆ ಇಟ್ಟಿದ್ದಾರೆ. ಇಂದು ನವದೆಹಲಿಯಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಕಾರ್ಯದರ್ಶಿ ಉಮಾಶಂಕರ್ ಅವರನ್ನು ಭೇಟಿಯಾದ ಸಂಸದರು, ಜಿಲ್ಲೆಯ ಹೆದ್ದಾರಿ ಕಾಮಗಾರಿಗಳ ಪ್ರಸ್ತುತ ಸ್ಥಿತಿಗತಿಗಳ ಬಗ್ಗೆ ಸವಿಸ್ತಾರವಾಗಿ ಚರ್ಚಿಸಿದರು. ಯಾವುದೇ ಕಾರಣಕ್ಕೂ ಕಾಮಗಾರಿಗಳು ವಿಳಂಬವಾಗದಂತೆ ಎಚ್ಚರವಹಿಸಿ, ನಿಗದಿತ ಕಾಲಮಿತಿಯೊಳಗೆ ಯೋಜನೆಗಳನ್ನು ಲೋಕಾರ್ಪಣೆಗೊಳಿಸಬೇಕೆಂದು ಅವರ
Feb 61 min read


ರಾಜ್ಯದ ಮೊದಲ ದೋಣಿ ಆಂಬ್ಯುಲೆನ್ಸ್ ಲೋಕಾರ್ಪಣೆ: ಮಂಗಳೂರಿನ ಮೀನುಗಾರರಿಂದ ಹೊಸ ಕ್ರಾಂತಿ
ಮಂಗಳೂರಿನ ಉಳ್ಳಾಲದ ಮೀನುಗಾರರು ಸಮುದ್ರದಲ್ಲಿನ ತುರ್ತು ಪರಿಸ್ಥಿತಿಗಳನ್ನು ಎದುರಿಸಲು ರಾಜ್ಯದ ಮೊದಲ 'ದೋಣಿ ಆಂಬ್ಯುಲೆನ್ಸ್' (Boat Ambulance) ಸೇವೆಯನ್ನು ಆರಂಭಿಸುವ ಮೂಲಕ ಮಾದರಿಯಾಗಿದ್ದಾರೆ. ಸಮುದ್ರದ ಮಧ್ಯೆ ದೋಣಿ ಮಗುಚಿದಾಗ, ಬೆಂಕಿ ಅವಘಡ ಸಂಭವಿಸಿದಾಗ ಅಥವಾ ಮೀನುಗಾರರ ಆರೋಗ್ಯದಲ್ಲಿ ಏರುಪೇರಾದಾಗ ತಕ್ಷಣದ ಚಿಕಿತ್ಸೆ ಸಿಗದೆ ಸಂಭವಿಸುವ ಸಾವುಗಳನ್ನು ತಡೆಗಟ್ಟುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ದಶಕಗಳಿಂದ ಸರ್ಕಾರಿ ಸಮುದ್ರ ಆಂಬ್ಯುಲೆನ್ಸ್ಗಾಗಿ ಕಾಯುತ್ತಿದ್ದ ಮೀನುಗಾರರು, ಕೊನೆಗೆ ಸರ್ಕಾರದ ನೆರವಿಗೆ ಕಾಯದೆ ತಾವೇ ಒಗ್ಗೂಡಿ ಈ ಕ್ರಾಂತಿಕಾರಕ ಹೆಜ್ಜೆಯನ್ನು ಇಟ್ಟಿದ್ದಾರೆ.
Feb 41 min read


ಮಂಜೇಶ್ವರ: ತಂದೆಯ ಅಟ್ಟಹಾಸಕ್ಕೆ ಬಲಿಯಾದ ಮಗಳು; ಚಿಕಿತ್ಸೆ ಫಲಿಸದೆ ದೊಡ್ಡಪ್ಪನೂ ಸಾವು
ಮಂಜೇಶ್ವರ: ಕುಂಜತ್ತೂರು ತೂಮಿನಾಡಿನಲ್ಲಿ ನಡೆದ ಕೌಟುಂಬಿಕ ಕಲಹದ ಭೀಕರ ಘಟನೆಯಲ್ಲಿ, ತಂದೆಯ ಕೃತ್ಯಕ್ಕೆ ಮಗಳು ಬಲಿಯಾದ ಬೆನ್ನಲ್ಲೇ ಗಂಭೀರವಾಗಿ ಗಾಯಗೊಂಡಿದ್ದ ದೊಡ್ಡಪ್ಪ ಶೇಕುಂಞ(50) ಅವರು ಮಂಗಳವಾರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇದರೊಂದಿಗೆ ಈ ಪ್ರಕರಣದಲ್ಲಿ ಸಾವಿನ ಸಂಖ್ಯೆ ಎರಡಕ್ಕೆ ಏರಿಕೆಯಾಗಿದೆ. ಸೋಮವಾರ ಸಂಜೆ ನಡೆದ ಜಗಳದ ವೇಳೆ ಆರೋಪಿ ಉಮರ್ ತನ್ನ ಸಂಬಂಧಿಕರ ಮೇಲೆ ಕತ್ತಿಯಿಂದ ಹಲ್ಲೆ ಮಾಡಲು ಮುಂದಾಗಿದ್ದನು. ಈ ಸಂದರ್ಭದಲ್ಲಿ ಗಲಾಟೆ ತಡೆಯಲು ಅಡ್ಡಬಂದ ಪುತ್ರಿ ಜುಮೈರಾ (18) ತಂದೆಯ ಕೃತ್ಯಕ್ಕೆ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಳು. ಹಲ್ಲೆ ತಡೆಯಲು ಬಂದ ಉಮರ್ನ ಅಣ್ಣ ಶೇಕು
Feb 31 min read


ಪುತ್ತೂರು: ಮೋರಿಗೆ ಡಿಕ್ಕಿಯಾಗಿ ಹೊತ್ತಿ ಉರಿದ ಕಾರು; ಯುವಕ-ಯುವತಿ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು
ಪುತ್ತೂರು: ರಾಷ್ಟ್ರೀಯ ಹೆದ್ದಾರಿ 75ರ ನೀರಕಟ್ಟೆ ಸಮೀಪದ ಕಾಂಚನ ಕ್ರಾಸ್ ಬಳಿ ಶುಕ್ರವಾರ ಭೀಕರ ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿದ ಕಾರು ಮೋರಿಗೆ ಡಿಕ್ಕಿಯಾಗಿ ಬೆಂಕಿಗಾಹುತಿಯಾಗಿದೆ. ಕಾರಿನಲ್ಲಿದ್ದ ಯುವಕ ಮತ್ತು ಯುವತಿ ಸಮಯಪ್ರಜ್ಞೆ ಮೆರೆದು ತಕ್ಷಣ ಹೊರಬಂದಿದ್ದರಿಂದ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ. ಹಾಸನದಿಂದ ಉಪ್ಪಿನಂಗಡಿ ಕಡೆಗೆ ಸಂಚರಿಸುತ್ತಿದ್ದ ಈ ಕಾರು, ಹೆದ್ದಾರಿ ಚತುಷ್ಪಥ ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲಿ ನಿಯಂತ್ರಣ ತಪ್ಪಿ ವಿರುದ್ಧ ದಿಕ್ಕಿನ ಮೋರಿಗೆ ವೇಗವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಇಂಜಿನ್ ಭಾಗದಲ್ಲಿ ಕಿಡಿ ಕಾಣಿಸಿಕೊಂಡು ಕ್ಷಣಾರ್
Jan 311 min read


ಕಾಪು: ಕೆಎಂಎಫ್ ಮಾಜಿ ಅಧ್ಯಕ್ಷ ದಿವಾಕರ ಶೆಟ್ಟಿ ಅವರ ಮನೆಗೆ ನುಗ್ಗಿದ ಕಳ್ಳರು; ಲಕ್ಷಾಂತರ ನಗದು ಕಳವು
ಕಾಪು: ದಕ್ಷಿಣ ಕನ್ನಡ ಹಾಲು ಉತ್ಪಾದಕರ ಒಕ್ಕೂಟದ (DKMUL) ಮಾಜಿ ಅಧ್ಯಕ್ಷರಾದ ದಿವಾಕರ ಶೆಟ್ಟಿ ಅವರ ಮನೆಗೆ ಗುರುವಾರ ರಾತ್ರಿ ನುಗ್ಗಿದ ಕಳ್ಳರು ಲಕ್ಷಾಂತರ ರೂಪಾಯಿ ಮೌಲ್ಯದ ನಗದನ್ನು ದೋಚಿ ಪರಾರಿಯಾಗಿದ್ದಾರೆ. ಮನೆಯ ಮಾಲೀಕರು ಊರಿನಲ್ಲಿ ಇಲ್ಲದ ಸಮಯವನ್ನೇ ಹೊಂಚು ಹಾಕಿದ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ. ದಿವಾಕರ ಶೆಟ್ಟಿ ಅವರು ಕುಟುಂಬದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಮುಂಬೈಗೆ ತೆರಳಿದ್ದರು. ಈ ಸಂದರ್ಭದಲ್ಲಿ ಮನೆಯ ಮೇಲ್ವಿಚಾರಣೆಯ ಜವಾಬ್ದಾರಿಯನ್ನು ಕಾಪು ಪುರಸಭೆಯ ಸದಸ್ಯರಾದ ಸುರೇಶ್ ಶೇರಿಗಾರ್ ಅವರಿಗೆ ವಹಿಸಲಾಗಿತ್ತು. ಘಟನೆ ನಡೆದ ರಾತ್ರಿ ಸುರೇಶ್ ಅವರು ಮನೆಯ ಮೇಲಿನ ಮಹಡಿ
Jan 311 min read


ಕೋಳಿ ಅಂಕಕ್ಕೆ ಪೊಲೀಸರ ಬ್ರೇಕ್: ಸಂಪ್ರದಾಯ ಉಳಿಸಲು ಫೆ.1ರಂದು ಪುತ್ತೂರಿನಲ್ಲಿ ಬೃಹತ್ ಸಮಾಲೋಚನಾ ಸಭೆ
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೂಜಿನ ನೆಪವೊಡ್ಡಿ ಪೊಲೀಸರು ಸಾಂಪ್ರದಾಯಿಕ ಕೋಳಿ ಅಂಕಗಳಿಗೆ ತಡೆ ನೀಡುತ್ತಿರುವುದನ್ನು ವಿರೋಧಿಸಿ ಈಗ ಹೋರಾಟದ ಕಿಚ್ಚು ಹತ್ತಿಕೊಂಡಿದೆ. ಕರಾವಳಿಯ ಈ ಪ್ರಾಚೀನ ಸಂಪ್ರದಾಯವನ್ನು ಉಳಿಸುವ ನಿಟ್ಟಿನಲ್ಲಿ 'ದಕ್ಷಿಣ ಕನ್ನಡ ಸಾಂಪ್ರದಾಯಿಕ ಆಚರಣಾ ಹಿತರಕ್ಷಣಾ ವೇದಿಕೆ'ಯು ಫೆಬ್ರವರಿ 1ರಂದು ಪುತ್ತೂರಿನ ಕೊಟೇಚಾ ಹಾಲ್ನಲ್ಲಿ ಬೃಹತ್ ಸಮಾಲೋಚನಾ ಸಭೆಯನ್ನು ಆಯೋಜಿಸಿದೆ. ಈ ಸಭೆಯಲ್ಲಿ ಕೋಳಿ ಅಂಕದ ಅಭಿಮಾನಿಗಳು, ದೈವಾರಾಧಕರು ಹಾಗೂ ಮುಖಂಡರು ಭಾಗವಹಿಸಿ ಮುಂದಿನ ಹೋರಾಟದ ರೂಪುರೇಷೆಗಳ ಬಗ್ಗೆ ಚರ್ಚಿಸಲಿದ್ದಾರೆ. ಕರಾವಳಿಯ ಧಾರ್ಮಿಕ ಚೌಕಟ್ಟಿನಲ್ಲಿ ಕೋಳಿ ಅಂಕಕ
Jan 311 min read


ಕಾಣಿಯೂರು: ಕೃಷಿಕರ ಮಳಿಗೆಯಿಂದ 55 ಕೆಜಿ ಅಡಿಕೆ, 35 ಕೆಜಿ ಕಾಳುಮೆಣಸು ದೋಚಿದ ಕಿಡಿಗೇಡಿಗಳು
ಕಾಣಿಯೂರು: ಕಡಬ ತಾಲೂಕಿನ ಕಾಯಿಮಣ ಗ್ರಾಮದಲ್ಲಿ ರೈತರೊಬ್ಬರ ದಾಸ್ತಾನು ಮಳಿಗೆಗೆ ನುಗ್ಗಿದ ಅಪರಿಚಿತ ಕಳ್ಳರು, ಮಾರಾಟಕ್ಕೆಂದು ಸಂಗ್ರಹಿಸಿಟ್ಟಿದ್ದ ಅಡಿಕೆ ಮತ್ತು ಕಾಳುಮೆಣಸನ್ನು ದೋಚಿರುವ ಘಟನೆ ವರದಿಯಾಗಿದೆ. ಸ್ಥಳೀಯ ನಿವಾಸಿ ಉಷಾ ಎಂ. ಎಂಬುವವರು ತಮ್ಮ ಮನೆಯ ಸಮೀಪದ ಮಳಿಗೆಯಲ್ಲಿ ಗೋನಿಚೀಲಗಳಲ್ಲಿ ಶೇಖರಿಸಿಟ್ಟಿದ್ದ ಕೃಷಿ ಉತ್ಪನ್ನಗಳು ಕಳ್ಳತನವಾಗಿದ್ದು, ಜನವರಿ 13ರಿಂದ 18ರ ಅವಧಿಯಲ್ಲಿ ಈ ಕೃತ್ಯ ನಡೆದಿದೆ ಎಂದು ಅಂದಾಜಿಸಲಾಗಿದೆ. ಈ ಘಟನೆಯು ಆ ಭಾಗದ ಕೃಷಿಕರಲ್ಲಿ ಆತಂಕವನ್ನು ಮೂಡಿಸಿದೆ. ಕಳ್ಳರು ಮಳಿಗೆಯಿಂದ ಸುಮಾರು 35 ಕೆ.ಜಿ. ಕಾಳುಮೆಣಸು, 55 ಕೆ.ಜಿ. ಹಳೆ ಅಡಿಕೆ ಹಾಗೂ ಸುಲಿದು ಸಿದ
Jan 301 min read


ಅರಂತೋಡು–ಎಲಿಮಲೆ ಸಂಪರ್ಕ ರಸ್ತೆಯ ದುರವಸ್ಥೆ-ಮರ್ಕಂಜ ದಾಟುವಲ್ಲಿ ವಾಹನ ಸವಾರರಿಗೆ ಭಾರಿ ಸಂಕಷ್ಟ
ಸುಬ್ರಹ್ಮಣ್ಯ ಹಾಗೂ ಮಡಿಕೇರಿಯನ್ನು ಸಂಪರ್ಕಿಸುವ ಪ್ರಮುಖ ಮಾರ್ಗಗಳಲ್ಲಿ ಒಂದಾದ ಅರಂತೋಡು–ಎಲಿಮಲೆ ರಸ್ತೆ ನಿತ್ಯ ಅನೇಕ ವಾಹನಗಳ ಸಂಚಾರಕ್ಕೆ ಸಾಕ್ಷಿಯಾಗುತ್ತಿದೆ. ಆದರೆ ಈ ರಸ್ತೆಯ ಮಾರ್ಕಂಜ ವ್ಯಾಪ್ತಿಯಲ್ಲಿ ಮಾತ್ರ ರಸ್ತೆ ಸಂಪೂರ್ಣ ಹದಗೆಟ್ಟು, ಸಾರ್ವಜನಿಕರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ. ಒಂದೆಡೆ ಗುಂಡಿಗಳಿಂದ ತುಂಬಿದ ರಸ್ತೆ, ಮತ್ತೊಂದೆಡೆ ಮಣ್ಣು ಮತ್ತು ಜಲ್ಲಿಯು ರಸ್ತೆಮೇಲೆ ಹರಡಿಕೊಂಡಿರುವುದರಿಂದ ದ್ವಿಚಕ್ರ ವಾಹನ ಸವಾರರು, ಕಾರುಗಳು ಹಾಗೂ ಬಸ್ಗಳು ಸಂಚರಿಸುವುದು ಅತಿ ಕಷ್ಟಕರವಾಗಿದೆ. ವಿಶೇಷವಾಗಿ ಮಳೆಯಾದ ಸಂದರ್ಭಗಳಲ್ಲಿ ರಸ್ತೆ ಇನ್ನಷ್ಟು ಅಪಾಯಕಾರಿಯಾಗಿ ಮಾರ್ಪಡುತ್ತಿದ್ದ
Jan 291 min read


ಶೀಘ್ರವೇ ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ಘೋಷಣೆ?
ಕರಾವಳಿ ಜನರ ದಶಕಗಳ ಕನಸಾದ ತುಳು ಭಾಷೆಯನ್ನು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯನ್ನಾಗಿ ಘೋಷಿಸಲು ರಾಜ್ಯ ಸರ್ಕಾರ ಗಂಭೀರ ಕ್ರಮ ಕೈಗೊಂಡಿದೆ. ಈ ಕುರಿತು ವಿಧಾನಸಭೆಯಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ಪ್ರಶ್ನೆಗೆ ಉತ್ತರಿಸಿದ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಶೀಘ್ರದಲ್ಲೇ ಉನ್ನತ ಮಟ್ಟದ ಸಭೆ ನಡೆಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದರು. ತುಳು ಭಾಷೆಯ ಐತಿಹಾಸಿಕ ಹಿನ್ನೆಲೆ, ಲಿಪಿ ಮತ್ತು ಸಾಹಿತ್ಯ ಪರಂಪರೆಯ ಕುರಿತು ಅಧ್ಯಯನ ನಡೆಸಲು ರಚಿಸಲಾಗಿದ್ದ ಡಾ. ಮೋಹನ್ ಆಳ್
Jan 291 min read


ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಮೈಸೂರು ಸಂಸದ ಯದುವೀರ್ ಒಡೆಯರ್ ಭಕ್ತಿಪೂರ್ವಕ ದರ್ಶನ
ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ನಾಗಾರಾಧನೆಯ ಪುಣ್ಯಕ್ಷೇತ್ರವಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಮೈಸೂರು ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಜನವರಿ 27ರಂದು ಭೇಟಿ ನೀಡಿ ದೇವರ ದರ್ಶನ ಪಡೆದರು. ಸುಬ್ರಹ್ಮಣ್ಯದ ಮಠದಲ್ಲಿ ಆಯೋಜಿಸಲಾಗಿದ್ದ 'ರಾಷ್ಟ್ರೀಯ ವಿದ್ವತ್ ಸಮ್ಮೇಳನ – ವಿಶ್ವ ಸಂಭ್ರಮ' ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಅವರು, ಈ ಸಂದರ್ಭದಲ್ಲಿ ಕ್ಷೇತ್ರದ ಅಧಿದೇವತೆ ಶ್ರೀ ಸುಬ್ರಹ್ಮಣ್ಯ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ಕೃತಾರ್ಥರಾದರು. ದೇವಳಕ್ಕೆ ಆಗಮಿಸಿದ ಸಂಸದರನ್ನು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾ
Jan 281 min read


ಕೇರಳದಲ್ಲಿ ಭೀಕರ ಕಾರು ಅಪಘಾತ: ಸುರತ್ಕಲ್ ಮೂಲದ ಯುವಕ ಸಾವು, ನಾಲ್ವರಿಗೆ ಗಾಯ
ಮಂಗಳೂರು: ಕೇರಳದ ಕೊಟ್ಟಾಯಂನಲ್ಲಿ ಬುಧವಾರ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಮಂಗಳೂರಿನ ಸುರತ್ಕಲ್ ಸಮೀಪದ ಕಾನಾ ನಿವಾಸಿ ಶಾನವಾಜ್ ಅಲಿಯಾಸ್ ಶಮೀಮ್ (26) ಎಂಬ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೂಲತಃ ಮುಲ್ಕಿ ತಾಲ್ಲೂಕಿನ ಅಂಗರಗುಡ್ಡೆ ನಿವಾಸಿಯಾಗಿದ್ದ ಶಮೀಮ್, ಪ್ರಸ್ತುತ ಕಾನಾದ ಚಿರಾಗ್ ಫ್ಲಾಟ್ಸ್ನಲ್ಲಿ ವಾಸವಿದ್ದರು. ಈ ಘಟನೆಯಲ್ಲಿ ಕಾರಿನಲ್ಲಿದ್ದ ಇತರ ನಾಲ್ವರು ಗಾಯಗೊಂಡಿದ್ದು, ಒಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಮೃತ ಶಮೀಮ್ ಮತ್ತು ಅವರ ಸ್ನೇಹಿತರು ಕೊಟ್ಟಾಯಂನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವೊಂದಕ್ಕೆ ಬೌನ್ಸರ್ಗಳಾಗಿ ತೆರಳಿದ್ದರು. ಬುಧವಾರ ಬೆಳಿಗ್
Jan 281 min read


ಬಾಲಕ ಸುಮಂತ್ ಸಾವು ಪ್ರಕರಣ: ಕೂಲಂಕುಷ ತನಿಖೆಗೆ ಗೃಹ ಸಚಿವರಿಗೆ ಶಾಸಕ ಹರೀಶ್ ಪೂಂಜ ಆಗ್ರಹ
ಬೆಳ್ತಂಗಡಿ: ಓಡಿಲ್ನಾಳ ಗ್ರಾಮದ ಸಂಬೋಳ್ಯ ನಿವಾಸಿ ಸುಮಂತ್ ಎಂಬ ಬಾಲಕನ ಅನುಮಾನಾಸ್ಪದ ಸಾವಿನ ಪ್ರಕರಣವು ತಾಲ್ಲೂಕಿನಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಈ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಶಾಸಕ ಹರೀಶ್ ಪೂಂಜ ಅವರು ಒತ್ತಾಯಿಸಿದ್ದಾರೆ. ಇತ್ತೀಚೆಗೆ ಬೆಂಗಳೂರಿನಲ್ಲಿ ಗೃಹ ಸಚಿವ ಜಿ. ಪರಮೇಶ್ವರ್ ಅವರನ್ನು ಭೇಟಿಯಾದ ಶಾಸಕರು, ಪ್ರಕರಣದ ಸತ್ಯಾಸತ್ಯತೆಯನ್ನು ಶೀಘ್ರವಾಗಿ ಹೊರತರುವಂತೆ ಅಧಿಕೃತವಾಗಿ ಮನವಿ ಸಲ್ಲಿಸಿದರು. ಬಾಲಕ ಸುಮಂತ್ ಸಾವಿನ ಹಿಂದೆ ಹಲವಾರು ಅನುಮಾನಗಳು ವ್ಯಕ್ತವಾಗುತ್ತಿದ್ದು, ಇದು ಕೇವಲ ಆಕಸ್ಮಿಕವೇ ಅಥವಾ ಬೇರೆನಾದರೂ ಸಂಚು ಇದೆಯೇ ಎಂಬ ಆತಂಕ ಕುಟುಂಬಸ್ಥರನ್ನು ಕಾಡುತ್ತಿ
Jan 281 min read


'ಇ-ಸ್ವತ್ತು 2.0' ತಾಂತ್ರಿಕ ದೋಷ: ಸದನದಲ್ಲಿ ಸರ್ಕಾರದ ವಿರುದ್ಧ ಕಿಶೋರ್ ಕುಮಾರ್ ಪುತ್ತೂರು ಆಕ್ರೋಶ
ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಧಾನ ಪರಿಷತ್ ಅಧಿವೇಶನದ ಶೂನ್ಯ ವೇಳೆಯಲ್ಲಿ, ಸದಸ್ಯರಾದ ಶ್ರೀ ಕಿಶೋರ್ ಕುಮಾರ್ ಪುತ್ತೂರು ಅವರು ರಾಜ್ಯದ ಗ್ರಾಮೀಣ ಭಾಗದ ಜನರು ಎದುರಿಸುತ್ತಿರುವ 'ಇ-ಸ್ವತ್ತು 2.0' ತಂತ್ರಾಂಶದ ವೈಫಲ್ಯದ ಬಗ್ಗೆ ಸರ್ಕಾರದ ಗಮನ ಸೆಳೆದರು. ಉದಯವಾಣಿ ದಿನಪತ್ರಿಕೆಯ ವರದಿಯನ್ನು ಉಲ್ಲೇಖಿಸಿದ ಅವರು, ಗ್ರಾಮೀಣ ನಾಗರಿಕರಿಗೆ ಆಸ್ತಿ ದಾಖಲೆಗಳನ್ನು ಸುಲಭವಾಗಿ ಒದಗಿಸಲು ಡಿಸೆಂಬರ್ 1ರಿಂದ ಜಾರಿಗೆ ತಂದ ಈ ಹೊಸ ತಂತ್ರಾಂಶವು, ಆರಂಭವಾದ ಒಂದೇ ತಿಂಗಳೊಳಗೆ ತಾಂತ್ರಿಕ ದೋಷಗಳಿಂದಾಗಿ ಸಂಪೂರ್ಣವಾಗಿ ಕೈಕೊಟ್ಟಿದೆ ಎಂದು ದೂರಿದರು. ತಂತ್ರಾಂಶದ ವಿಳಂಬದಿಂದಾಗಿ ಪ್ರಸ್ತುತ 36,000ಕ್ಕೂ ಹೆ
Jan 281 min read
Archive
bottom of page



