top of page
News Articles
Sathyapatha News Plus


ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ‘ಡಿವೈನ್ ಸ್ಟಾರ್’ ರಿಷಬ್ ಶೆಟ್ಟಿ ವಿಶೇಷ ಪ್ರಾರ್ಥನೆ
ಸ್ಯಾಂಡಲ್ವುಡ್ನ ಖ್ಯಾತ ನಟ ಹಾಗೂ ನಿರ್ದೇಶಕ **ರಿಷಬ್ ಶೆಟ್ಟಿ** ಅವರು ಇಂದು (ಏಪ್ರಿಲ್ 6) ಕುಟುಂಬ ಸಮೇತರಾಗಿ ದಕ್ಷಿಣ ಕನ್ನಡದ ಪ್ರಸಿದ್ಧ ಪುಣ್ಯಕ್ಷೇತ್ರ **ಕುಕ್ಕೆ ಶ್ರೀ ಸುಬ್ರಹ್ಮಣ್ಯ**ಕ್ಕೆ ಭೇಟಿ ನೀಡಿದರು. ಪತ್ನಿ ಪ್ರಗತಿ ಶೆಟ್ಟಿ ಹಾಗೂ ತಾಯಿ ರತ್ನಾವತಿ ಅವರೊಂದಿಗೆ ಆಗಮಿಸಿದ ಅವರು, ಸುಬ್ರಹ್ಮಣ್ಯ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಹೊಸಳ್ಳಿಗಮ್ಮ ದೇವಿಯ ಸನ್ನಿಧಿಗೂ ತೆರಳಿ ಪ್ರಾರ್ಥಿಸಿದರು. ಕ್ಷೇತ್ರದ ಪಾವಿತ್ರ್ಯತೆಯಲ್ಲಿ ಮಿಂದೆದ್ದ ಶೆಟ್ಟಿ ಕುಟುಂಬವು ಮಧ್ಯಾಹ್ನದ ಮಹಾಪೂಜೆಯಲ್ಲಿ ಪಾಲ್ಗೊಂಡು ದೇವರ ಕೃಪೆಗೆ ಪಾತ್ರವಾಯಿತು. 'ಕಾಂತಾರ' ಚಿತ್ರದ ಮೂಲಕ ಭಾ
Apr 61 min read


ಯುದ್ಧದ ಬಿಸಿ: ಪುತ್ತೂರು ಬೈಪಾಸ್ನಲ್ಲಿ ಇಂಧನಕ್ಕಾಗಿ ಆಟೋ ರಿಕ್ಷಾಗಳ ಕಿಲೋಮೀಟರ್ ಉದ್ದದ ಸಾಲು
ಯುದ್ಧದ ಜಾಗತಿಕ ಪರಿಣಾಮದಿಂದಾಗಿ ಇಂಧನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ಪುತ್ತೂರು ಬೈಪಾಸ್ ರಸ್ತೆಯಲ್ಲಿ ಆಟೋ ರಿಕ್ಷಾಗಳು ಸಾಲಾಗಿ ನಿಂತಿವೆ. ಬೆಳಿಗ್ಗೆಯಿಂದಲೇ ರಿಕ್ಷಾಗಳು ಸರತಿ ಸಾಲಿನಲ್ಲಿ ನಿಂತಿರುವುದರಿಂದ ಸಂಚಾರ ದಟ್ಟಣೆ ಉಂಟಾಗಿದೆ. ಯುದ್ಧದ ಬಿಸಿ ಸ್ಥಳೀಯ ಸಾರಿಗೆಯ ಮೇಲೆ ನೇರ ಪರಿಣಾಮ ಬೀರುತ್ತಿದ್ದು, ಸಾಮಾನ್ಯ ಜನರ ದೈನಂದಿನ ಬದುಕು ಅಸ್ತವ್ಯಸ್ತಗೊಂಡಿದೆ.
Apr 31 min read


ಇಂದು (ಏ. 01)ಎಣ್ಮೂರು ಶ್ರೀ ನಾಗಬ್ರಹ್ಮ ಕೋಟಿ-ಚೆನ್ನಯ್ಯ ಆದಿ ಬೈದರ್ಕಳ ನೇಮೋತ್ಸವ
ಇತಿಹಾಸ ಪ್ರಸಿದ್ಧ ಕಾರಣಿಕ ಶಕ್ತಿಗಳಾದ ಶ್ರೀ ನಾಗಬ್ರಹ್ಮ ಕೋಟಿ ಚೆನ್ನಯ್ಯ ಆದಿ ಬೈದರುಗಳ ನೇಮೋತ್ಸವವು ಏಪ್ರಿಲ್ 1ರಂದು ಎಣ್ಣೂರು ಕಟ್ಟಬೀಡು ಮತ್ತು ಗರಡಿಯಲ್ಲಿ ಅತ್ಯಂತ ಸಡಗರದಿಂದ ನಡೆಯಿತು. ಆನುವಂಶಿಕ ಆಡಳಿತದಾರರಾದ ಕಟ್ಟಬೀಡು ರಾಮಕೃಷ್ಣ ಶೆಟ್ಟಿಯವರ ನೇತೃತ್ವದಲ್ಲಿ ನಡೆದ ಈ ಧಾರ್ಮಿಕ ಕಾರ್ಯಕ್ರಮದಲ್ಲಿ ನಾಗ ತಂಬಿಲ, ಮುಹೂರ್ತ ತೋರಣ ಮತ್ತು ಭಂಡಾರ ಏರುವಿಕೆ ಶಾಸ್ತ್ರೋಕ್ತವಾಗಿ ಜರುಗಿದವು. ಈ ಪುಣ್ಯ ಕಾರ್ಯಕ್ರಮಕ್ಕೆ ಜಿಲ್ಲೆ ಹಾಗೂ ಹೊರರಾಜ್ಯಗಳಿಂದ ಸಾವಿರಾರು ಭಕ್ತರು ಆಗಮಿಸಿ ದೈವಗಳ ದರ್ಶನ ಪಡೆದರು. ರಾತ್ರಿ ದೈವಗಳ ಗರಡಿ ಇಳಿಯುವಿಕೆ ಮತ್ತು ಕಿನ್ನಿದಾರು ದರ್ಶನ ರಂಗಸ್ಥಳದಲ್ಲಿ ಸಾರವ
Apr 11 min read


ಎಣ್ಮೂರು ಶ್ರೀ ಆದಿಬೈದೇರುಗಳ ನೇಮೋತ್ಸವ: ಏಪ್ರಿಲ್ 1 ರಿಂದ ವೈಭವದ ಧಾರ್ಮಿಕ ಕಾರ್ಯಕ್ರಮಗಳು
ದಕ್ಷಿಣ ಕನ್ನಡ ಜಿಲ್ಲೆಯ ಎಣ್ಮೂರು ಕಟ್ಟಬೀಡಿನಲ್ಲಿ ಸುಗ್ಗಿ ತಿಂಗಳ ಪೂವೆಯಂದು ಶ್ರೀ ಆದಿಬೈದೇರುಗಳ ನೇಮೋತ್ಸವವು ಅತ್ಯಂತ ಶ್ರದ್ಧಾಭಕ್ತಿಯಿಂದ ಜರಗಲಿದೆ. ಮಾರ್ಚ್ 25 ರಿಂದಲೇ ವಿವಿಧ ಧಾರ್ಮಿಕ ವಿಧಿವಿಧಾನಗಳು ಆರಂಭಗೊಂಡಿದ್ದು, ಉಳ್ಳಾಕ್ಕುಳ ಬೀಡಿನಲ್ಲಿ ತಂಬಿಲ ಹಾಗೂ ಗರಡಿಯಲ್ಲಿ ಗೊನೆ ಕಡಿಯುವ ಮುಖಾಂತರ ಚಾಲನೆ ನೀಡಲಾಗಿದೆ. ಮಾರ್ಚ್ 30 ಮತ್ತು 31 ರಂದು ಶ್ರೀ ಉಳ್ಳಾಕುಳ ಮತ್ತು ಇಷ್ಟ ದೇವತೆಗಳ ನೇಮೋತ್ಸವ ಹಾಗೂ ಸಾರ್ವಜನಿಕ ಅನ್ನಸಂತರ್ಪಣೆ ನೆರವೇರಲಿದೆ. ಏಪ್ರಿಲ್ 1ರ ಬುಧವಾರದಂದು ಈ ಉತ್ಸವದ ಪ್ರಮುಖ ಘಟ್ಟಗಳು ನಡೆಯಲಿವೆ. ಅಂದು ಮಧ್ಯಾಹ್ನ 12:30ಕ್ಕೆ ಎಣ್ಮೂರು ಕಟ್ಟಬೀಡಿನಿಂದ ಸಂಪ್ರದಾಯ
Mar 301 min read


ರೀಲ್ಸ್ ಅಜ್ಜಿ' ಎಂದೇ ಖ್ಯಾತರಾಗಿದ್ದ ಉತ್ತರ ಕನ್ನಡದ ಲಕ್ಷ್ಮಿ ನಾಯ್ಕ 93ನೇ ವಯಸ್ಸಿನಲ್ಲಿ ನಿಧನ
ಉತ್ತರ ಕನ್ನಡ ಜಿಲ್ಲೆಯಲ್ಲಿ ‘ರೀಲ್ಸ್ ಅಜ್ಜಿ’ ಎಂದೇ ಖ್ಯಾತರಾಗಿದ್ದ ಲಕ್ಷ್ಮಿ ನಾಯ್ಕ (93) ಅವರು ಶನಿವಾರ ವಯೋಸಹಜ ಅನಾರೋಗ್ಯದಿಂದ ನಿಧನರಾದರು. ಯಲ್ಲಾಪುರ ತಾಲೂಕಿನ ಕೆರೆಹೊಸಹಳ್ಳಿಯ ನಿವಾಸಿಯಾಗಿದ್ದ ಲಕ್ಷ್ಮಿ ನಾಯ್ಕ ಅವರು, ತಮ್ಮ ಮೊಮ್ಮಗ ಹಾಗೂ ಡ್ರಾಮಾ ಜೂನಿಯರ್ ಸ್ಪರ್ಧಿ ಸೂರಜ್ ಜೊತೆಗಿನ ರೀಲ್ಸ್ಗಳ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಜನಪ್ರಿಯತೆ ಗಳಿಸಿದ್ದರು. ಅವರ ಸರಳತೆ ಮತ್ತು ಸಹಜ ಅಭಿನಯ ಜನಮನ ಗೆದ್ದಿತ್ತು. ಲಕ್ಷ್ಮಿ ನಾಯ್ಕ ಅವರ ನಿಧನವನ್ನು ಮೊಮ್ಮಗ ಸೂರಜ್ ಅವರು ಇನ್ಸ್ಟಾಗ್ರಾಮ್ ಪೋಸ್ಟ್ ಮೂಲಕ ದೃಢಪಡಿಸಿದ್ದಾರೆ. ಅವರ ಅಗಲಿಕೆಗೆ ಸಾಮಾಜಿಕ ಜಾಲತಾಣಗಳಲ್ಲಿ ಸಂತಾಪ ವ್ಯಕ್ತವ
Mar 291 min read


ಹರೇಕಳ ಹಾಜಬ್ಬ, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಪ್ರದಾನ
ಮಂಗಳೂರು ವಿಶ್ವವಿದ್ಯಾನಿಲಯದ ಆವರಣದ ಮಂಗಳ ಸಭಾಂಗಣದಲ್ಲಿ ಶನಿವಾರ 44ನೇ ವಾರ್ಷಿಕ ಘಟಿಕೋತ್ಸವವು ಅತ್ಯಂತ ವೈಭವದಿಂದ ಜರುಗಿತು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕದ ರಾಜ್ಯಪಾಲ ಹಾಗೂ ಕುಲಾಧಿಪತಿ ಥಾವರ್ ಚಂದ್ ಗೆಹೋಟ್ ಅವರು, ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿ ಮಾಡಿದ ಅಕ್ಷರ ಸಂತ ಪದ್ಮಶ್ರೀ ಹರೇಕಳ ಹಾಜಬ್ಬ ಹಾಗೂ ಕಲಾ ಸೇವೆಯಲ್ಲಿ ತೊಡಗಿರುವ ದೈವ ನರ್ತಕ ರವೀಶ್ ಪಡುಮಲೆ ಅವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಿದರು. ಸಾಧಕರ ಅನುಪಮ ಸೇವೆಯನ್ನು ಪರಿಗಣಿಸಿ ಈ ಗೌರವ ನೀಡಲಾಗಿದ್ದು, ಸಭಿಕರ ಮೆಚ್ಚುಗೆಗೆ ಪಾತ್ರವಾಯಿತು. ಇದೇ ವೇಳೆ ತೆಂಕುತಿಟ್ಟಿನ ಹಿರಿಯ ಯಕ್ಷಗಾನ ಕಲಾವಿದ ಸೂರಿಕು
Mar 281 min read


ಮಂಗಳೂರು ಶಾಕ್: ಫ್ಲೈಓವರ್ ಮೇಲೆ ದಾಳಿ – ‘ಟಾಬ್ಲೆಟ್ ಆರಿಫ್’ ಭೀಕರ ಹತ್ಯೆ!
ಮಂಗಳೂರು ನಗರದ ಹೊರವಲಯದ ತೊಕ್ಕೊಟ್ಟು ಫ್ಲೈಓವರ್ ಮೇಲ್ಬಾಗದಲ್ಲಿ ಶುಕ್ರವಾರ ಬೆಳಿಗ್ಗೆ ವ್ಯಕ್ತಿಯೋರ್ವನನ್ನು ಮಾರಕಾಸ್ತ್ರಗಳಿಂದ ಕಡಿದು ಹತ್ಯೆ ಮಾಡಿರುವ ಘಟನೆ ನಡೆದಿದೆ. Ad ಮೃತರನ್ನು ಮುಳ್ಳುಗುಡ್ಡೆ ಹೌಸ್, ತಲಪಾಡಿ ನಿವಾಸಿ ಆರಿಫ್ (46), ಅಲಿಯಾಸ್ ‘ಟಾಬ್ಲೆಟ್ ಆರಿಫ್’ ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ಆರಿಫ್ ಅವರು ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಹಿಂಬದಿಯಿಂದ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಢಿಕ್ಕಿ ಹೊಡೆದಿದ್ದಾರೆ. ಢಿಕ್ಕಿಯಿಂದ ರಸ್ತೆಗೆ ಬಿದ್ದ ಬಳಿಕ, ಆರೋಪಿಗಳು ಅವರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆಗೈದಿದ್ದಾರೆ ಎಂದು ತಿಳಿದುಬಂದಿದ
Mar 271 min read


ಎನ್ಐಎ ತನಿಖೆಯಲ್ಲಿದ್ದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗೆ ನ್ಯಾಯಾಲಯದಿಂದ ಜಾಮೀನು
ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ 26ನೇ ಆರೋಪಿ ರಿಯಾಜ್ ಎಚ್. ವೈ.ಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಪ್ರಮುಖ ಆರೋಪಿ ಮುಸ್ತಾಫಾ ಪೈಚಾರ್ಗೆ ಆಶ್ರಯ ನೀಡಿದ ಆರೋಪದ ಮೇಲೆ ಕೊಡಗು ಮೂಲದ ಈತನನ್ನು ಎನ್ಐಎ ಬಂಧಿಸಿತ್ತು. 2022ರ ಜುಲೈನಲ್ಲಿ ನಡೆದ ಈ ಭೀಕರ ಹತ್ಯೆ ಪ್ರಕರಣದಲ್ಲಿ ಒಟ್ಟು 26 ಮಂದಿಯನ್ನು ವಶಕ್ಕೆ ಪಡೆಯಲಾಗಿತ್ತು. ಸುದೀರ್ಘ ವಿಚಾರಣೆಯ ನಂತರ, ಆಶ್ರಯ ನೀಡಿದ ಆರೋಪ ಎದುರಿಸುತ್ತಿದ್ದ ರಿಯಾಜ್ಗೆ ಈಗ ನ್ಯಾಯಾಂಗ ಸಮ್ಮತಿ ದೊರೆತಿದ್ದು, ಜೈಲಿನಿಂದ ಬಿಡುಗಡೆಯಾಗಲಿದ್ದಾನೆ.
Mar 251 min read


ರಾಜ್ಯಾದ್ಯಂತ ಸಂಚಲನ ಮೂಡಿಸಿದ್ದ ಅಕ್ಷಯ್ ಕಲ್ಲೇಗ ಕೊಲೆ ಕೇಸ್ನಲ್ಲಿ ಬಿಗ್ ಅಪ್ಡೇಟ್
ಪುತ್ತೂರಿನ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯಾಗಿದ್ದು, 3ನೇ ಮತ್ತು 4ನೇ ಆರೋಪಿಗಳಿಗೆ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥರಾಗಿದ್ದ ಅಕ್ಷಯ್ ಅವರ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿದ್ದ ಮಂಜುನಾಥ್ ಶೆಣೈ ಮತ್ತು ಕೇಶವ ಅವರಿಗೆ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಬಿಡುಗಡೆಯ ಆದೇಶ ನೀಡಿದೆ. 2023ರ ನವೆಂಬರ್ 6ರಂದು ನೆಹರು ನಗರದಲ್ಲಿ ಅಕ್ಷಯ್ ಅವರನ್ನು ಮಾರಕಾಸ್ತ್ರಗಳಿಂದ ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಪ್ರಕರಣದ ತನಿಖೆ ನಡೆಸಿದ್ದ ಪೊಲೀಸರು ಒಟ್ಟು ನಾಲ್ವರು ಆರೋಪಿಗಳನ್
Mar 251 min read


ಬೈಕ್ ಅಪಘಾತ: ಸವಾರ ದುರ್ಮರಣ
ನಿಂತಿಕಲ್ಲು: ಇಲ್ಲಿನ ಕೆನರಾ ಬ್ಯಾಂಕ್ ಮುಂಭಾಗದಲ್ಲಿ ಬೈಕ್ ಮತ್ತು ವಿದ್ಯುತ್ ಕಂಬದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸವಾರ ಲೋಕೇಶ್ ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯ ಹೆಚ್ಚಿನ ವಿವರಗಳು ಇನ್ನಷ್ಟೇ ಲಭ್ಯವಾಗಬೇಕಿದೆ.
Mar 241 min read


ಸೌಜನ್ಯ ಹತ್ಯೆ ಪ್ರಕರಣ: ಸಿಬಿಐಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ
ದಶಕದ ಹಿಂದೆ ನಡೆದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಇಂದು ಸಿಬಿಐಗೆ (CBI) ನೋಟಿಸ್ ಜಾರಿ ಮಾಡಿದೆ. 2012ರಲ್ಲಿ ಧರ್ಮಸ್ಥಳ ಸಮೀಪ ನಡೆದ ಈ ಭೀಕರ ಘಟನೆಯ ತನಿಖೆಯಲ್ಲಿನ ಲೋಪದೋಷಗಳ ಕುರಿತು ಸಲ್ಲಿಸಲಾದ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಾಲಯವು, ಕೇಂದ್ರ ತನಿಖಾ ಸಂಸ್ಥೆಯಿಂದ ಸಮಗ್ರ ವಿವರಣೆಯನ್ನು ಕೇಳಿದೆ. ಇದು ಪ್ರಕರಣಕ್ಕೆ ಈಗ ಹೊಸ ತಿರುವು ನೀಡಿದೆ. ಈ ಹಿಂದೆ ಕೆಳಹಂತದ ನ್ಯಾಯಾಲಯವು ಆರೋಪಿ ಸಂತೋಷ್ ರಾವ್ನನ್ನು ಸಾಕ್ಷ್ಯಾಧಾರಗಳ ಕೊರತೆಯಿಂದ ಬಿಡುಗಡೆ ಮಾಡಿತ್ತು. ಬೆಳ್ತಂಗಡಿ ಪೊಲೀಸರಿಂದ ಆರಂಭವಾಗಿ ಸಿಐಡಿ ಮತ್ತು ಬಳಿಕ ಸಿಬಿಐ ಕೈ ಸೇರಿದ ಈ ತ
Mar 231 min read


ಮಂಗಳೂರು: ಯುದ್ಧದ ಕಾರ್ಮೋಡ; ಪಾತಾಳಕ್ಕೆ ಕುಸಿದ ಮೀನಿನ ದರ
ಕೊಲ್ಲಿ ರಾಷ್ಟ್ರಗಳ ಯುದ್ಧದ ಭೀತಿಯು ಕರಾವಳಿಯ ಮೀನುಗಾರಿಕೆ ಉದ್ಯಮವನ್ನು ಸಂಕಷ್ಟಕ್ಕೆ ದೂಡಿದೆ. ರಫ್ತು ವಹಿವಾಟು ಸಂಪೂರ್ಣ ಸ್ಥಗಿತಗೊಂಡಿರುವುದರಿಂದ ಮಾರುಕಟ್ಟೆಯಲ್ಲಿ ಮೀನಿನ ಬೇಡಿಕೆ ಕುಸಿದಿದ್ದು, ಪ್ರತಿ ಕೆಜಿಗೆ ಸುಮಾರು 100 ರಿಂದ 200 ರೂಪಾಯಿಗಳಷ್ಟು ದರ ಇಳಿಕೆಯಾಗಿದೆ. ಇದರಿಂದ ಮೀನುಗಾರರು ಮತ್ತು ವ್ಯಾಪಾರಸ್ಥರು ಅಸಲು ಕೂಡ ಸಿಗದೆ ಕಣ್ಣೀರು ಹಾಕುವಂತಾಗಿದೆ. ಅಡುಗೆ ಅನಿಲದ (LPG) ವ್ಯತ್ಯಯ ಹಾಗೂ ಯುದ್ಧದ ಆತಂಕದಿಂದಾಗಿ ನಗರದ ಪ್ರಮುಖ ಮೀನು ಉಟದ ಹೋಟೆಲ್ಗಳು ಮುಚ್ಚುತ್ತಿವೆ. ಹೋಟೆಲ್ ಮಾಲೀಕರು ಮಾರುಕಟ್ಟೆಗೆ ಬಾರದ ಕಾರಣ ಲಕ್ಷಾಂತರ ರೂಪಾಯಿ ಮೌಲ್ಯದ ವಹಿವಾಟು ಸ್ಥಗಿತಗೊಂಡಿದೆ. ನ
Mar 231 min read


ಮಂಗಳೂರು ಸೆಂಟ್ರಲ್ ಮತ್ತು ಸುಬ್ರಹ್ಮಣ್ಯ ರೈಲು ಸಂಚಾರ ರದ್ದು: ಪ್ರಯಾಣಿಕರಿಗೆ ಮುನ್ಸೂಚನೆ
ನರಿಮೊಗರು ಮತ್ತು ಪಡೀಲ್ ನಿಲ್ದಾಣಗಳ ನಡುವೆ ರೈಲ್ವೆ ಹಳಿ ನಿರ್ವಹಣಾ ಕಾರ್ಯ (BCM) ನಡೆಯಲಿರುವ ಹಿನ್ನೆಲೆಯಲ್ಲಿ ಮಂಗಳೂರು ಸೆಂಟ್ರಲ್ ಮತ್ತು ಸುಬ್ರಹ್ಮಣ್ಯ ರೋಡ್ ನಡುವಿನ ಪ್ಯಾಸೆಂಜರ್ ರೈಲು (ಸಂಖ್ಯೆ 56629) ಸಂಚಾರವನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ. ಮಾರ್ಚ್ 23 ರಿಂದ ಏಪ್ರಿಲ್ 14 ರವರೆಗೆ ಮೊದಲ ಹಂತದ ಸೇವೆ ಸ್ಥಗಿತಗೊಳ್ಳಲಿದ್ದು, ಪ್ರಯಾಣಿಕರು ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಲು ಸೂಚಿಸಲಾಗಿದೆ. ದ್ವಿತೀಯ ಹಂತದಲ್ಲಿ ಜೂನ್ 10 ರಿಂದ ಜೂನ್ 21 ರವರೆಗೆ ರೈಲು ಸಂಚಾರ ಮತ್ತೆ ರದ್ದಾಗಲಿದೆ. ಹಳಿಗಳ ಬಲವರ್ಧನೆಗಾಗಿ ಲೈನ್ ಬ್ಲಾಕ್ ಮತ್ತು ಪವರ್ ಬ್ಲಾಕ್ ಅನಿವಾರ್ಯವಾಗಿದ್ದು, ಸುರಕ್ಷ
Mar 221 min read


ಗ್ಯಾಸ್ ಪಂಪ್ನಲ್ಲಿ ಆಟೋ ಚಾಲಕನ ಅಟ್ಟಹಾಸ: ಸಿಬ್ಬಂದಿ ಮೇಲೆ ಹಲ್ಲೆ, ದಾಂಧಲೆ!
ಬಂಟ್ವಾಳದ ಮೆಲ್ಕಾರ್ ಬಳಿಯ ಗ್ಯಾಸ್ ಪಂಪ್ ಏಜೆನ್ಸಿಯಲ್ಲಿ ಶುಕ್ರವಾರ ಸಂಜೆ ಅಫ್ರೀಝ್ ಎಂಬಾತ ಸಿಬ್ಬಂದಿ ಅಶ್ವಿನ್ ಮೇಲೆ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಮ್ಯಾನೇಜರ್ ಕುನಲ್ ಭುಕ್ಕಿಯಾ ನೀಡಿದ ದೂರಿನಂತೆ, ಆರೋಪಿಯು ಕಚೇರಿಯ ಸೊತ್ತುಗಳನ್ನು ಧ್ವಂಸಗೊಳಿಸಿದ್ದಾನೆ. ಈ ಕೃತ್ಯದಿಂದ ಸುಮಾರು ₹48,000 ಮೌಲ್ಯದ ನಷ್ಟ ಸಂಭವಿಸಿದೆ ಎಂದು ವರದಿಯಾಗಿದೆ. ಘಟನೆಗೆ ಸಂಬಂಧಿಸಿದಂತೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ (BNS) ವಿವಿಧ ಕಲಂ ಅಡಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿ ಅಫ್ರೀಝ್ ವಿರುದ್ಧ ತನಿಖೆ ಆರಂಭಿಸಿದ್ದು, ಆಟೋರಿಕ್ಷಾ ಮೂಲಕ ಪಂಪ್ ಆವರಣಕ್
Mar 211 min read


ಪುತ್ತೂರು: ದಾಂಪತ್ಯ ಕಲಹಕ್ಕೆ ಬಲಿಯಾದ ಪತ್ನಿ; ಪತಿಯೂ ಆತ್ಮಹತ್ಯೆಗೆ ಯತ್ನ
ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದ ಗೋಳ್ತಿಲದಲ್ಲಿ ದಾಂಪತ್ಯ ಕಲಹವೊಂದು ಕೊಲೆಯಲ್ಲಿ ಅಂತ್ಯವಾದ ಘೋರ ಘಟನೆ ಇಂದು ನಡೆದಿದೆ. ದಂಪತಿಗಳ ನಡುವೆ ನಡೆದ ಮಾತಿನ ಚಕಮಕಿ ವಿಕೋಪಕ್ಕೆ ತಿರುಗಿ, ಆವೇಶಕ್ಕೊಳಗಾದ ಪತಿಯು ಪತ್ನಿಯನ್ನು ಹತ್ಯೆ ಮಾಡಿದ್ದಾನೆ ಎಂದು ವರದಿಯಾಗಿದೆ. ಪತ್ನಿಯನ್ನು ಕೊಲೆ ಮಾಡಿದ ನಂತರ ಪತಿಯೂ ಸಹ ಆತ್ಮಹತ್ಯೆಗೆ ಯತ್ನಿಸಿದ್ದು, ಆತನ ಸ್ಥಿತಿ ಸದ್ಯ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಆತನನ್ನು ತಕ್ಷಣ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳೀಯವಾಗಿ ಈ ಘಟನೆಯು ಭಾರೀ ಆತಂಕ ಮತ್ತು ಆಘಾತವನ್ನು ಸೃಷ್ಟಿಸಿದೆ. ವಿಷಯ ತಿಳಿಯುತ್ತಿದ್ದಂತೆಯೇ ಪುತ್ತೂರು ಗ್ರಾಮಾಂತರ ಠಾ
Mar 201 min read


ತಲೆನೋವಿಗೆ ಮಾತ್ರೆ ಸೇವಿಸಿ ಪ್ರಾಣ ಕಳೆದುಕೊಂಡ 10 ವರ್ಷದ ಬಾಲಕ
ಕಡಬ ತಾಲೂಕಿನ ರಾಮಕುಂಜದ 10 ವರ್ಷದ ಬಾಲಕನೊಬ್ಬ ತಲೆನೋವಿಗಾಗಿ ಮನೆಯಲ್ಲಿದ್ದ ಔಷಧ ಸೇವಿಸಿದ ಬಳಿಕ ಮೃತಪಟ್ಟಿದ್ದಾನೆ. ಸಂಜೀವ ಪೂಜಾರಿ ಅವರ ಪುತ್ರನಿಗೆ ಪದೇಪದೇ ತಲೆನೋವು ಕಾಣಿಸಿಕೊಳ್ಳುತ್ತಿತ್ತು ಎಂದು ತಿಳಿದುಬಂದಿದೆ. ಮಾರ್ಚ್ 18ರಂದು ಸಂಜೆ ತಲೆನೋವಿನ ಬಾಧೆಯಿಂದ ಬಾಲಕನು ಮನೆಯಲ್ಲಿದ್ದ ಔಷಧಿಯನ್ನು ಸೇವಿಸಿದ್ದು, ತಕ್ಷಣವೇ ತೀವ್ರ ಅಸ್ವಸ್ಥಗೊಂಡು ಹೊರಳಾಡತೊಡಗಿದ್ದನು. ತಂದೆ ಕೂಡಲೇ ಆತನನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ಕೊಡಿಸಿದರು. ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿಗೆ ಕರೆದೊಯ್ದರೂ, ಪರೀಕ್ಷಿಸಿದ ವೈದ್ಯರು ಬಾಲಕ ಮೃತಪಟ್ಟಿರುವುದಾಗಿ ಘೋಷಿಸಿದರು. ಈ ಬಗ್ಗ
Mar 201 min read


ಖಾಕಿ ಪಡೆಗೆ ಕಪ್ಪುಚುಕ್ಕೆ: ಮೂಡುಬಿದಿರೆ ಇನ್ಸ್ಪೆಕ್ಟರ್ನಿಂದ ಮಹಿಳೆಯರಿಗೆ ಲೈಂಗಿಕ ಕಿರುಕುಳ, ಹಣಕ್ಕಾಗಿ ಸುಲಿಗೆ!
ಖಾಕಿ ಪಡೆಗೆ ಮತ್ತೊಂದು ಕಪ್ಪು ಚುಕ್ಕೆ ಬಂದಿದೆ. ಮೂಡುಬಿದಿರೆ ಠಾಣೆಯ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ. ವಿರುದ್ಧ ಸಾಲು ಸಾಲು ಲೈಂಗಿಕ ಕಿರುಕುಳ ಹಾಗೂ ಸುಲಿಗೆಯ ಗಂಭೀರ ಆರೋಪಗಳು ಕೇಳಿಬಂದಿವೆ. ಗಂಡನನ್ನು ಬಂಧಿಸಿದ ನೆಪದಲ್ಲಿ ಮಹಿಳೆಯರಿಗೆ ಲೈಂಗಿಕ ಟಾರ್ಚರ್ ನೀಡುತ್ತಿದ್ದ ಎನ್ನಲಾಗಿದೆ. ಪೋಸ್ಟಿಂಗ್ಗಾಗಿ ತಾವು 50 ಲಕ್ಷ ರೂ. ಲಂಚ ನೀಡಿರುವುದಾಗಿ ಹೇಳಿಕೊಳ್ಳುತ್ತಿದ್ದ ಇನ್ಸ್ಪೆಕ್ಟರ್, ಸಾರ್ವಜನಿಕರಿಂದ ಹಣಕ್ಕಾಗಿ ಸುಲಿಗೆ ಮಾಡುತ್ತಿದ್ದರು. ಹಣ ನೀಡದಿದ್ದರೆ ರೌಡಿಶೀಟ್ ತೆರೆಯುವ ಬೆದರಿಕೆ ಹಾಕುತ್ತಿದ್ದರು ಎಂಬ ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ಸ್ಥಳೀಯ ಪೊಲೀಸ್ ಅಧಿಕಾರಿಗಳು ಕ್ರಮ ಕೈಗ
Mar 171 min read


ರಾಜ್ಯದ ಹಲವೆಡೆ ಮುಂದಿನ ಮೂರ್ನಾಲ್ಕು ದಿನ ಭಾರಿ ಮಳೆ ಮುನ್ಸೂಚನೆ
ಕರ್ನಾಟಕದ ವಿವಿಧ ಭಾಗಗಳಲ್ಲಿ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಮಾರ್ಚ್ 16ರಿಂದಲೇ ಮಳೆ ಆರಂಭವಾಗಲಿದ್ದು, ಮಾ. 21ರಂದು ದಕ್ಷಿಣ ಕನ್ನಡ, ಉಡುಪಿ, ಮೈಸೂರು, ಚಿಕ್ಕಮಗಳೂರು ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ವರ್ಷಧಾರೆಯಾಗಲಿದ್ದು, ಕೊಪ್ಪಳ, ವಿಜಯಪುರ ಹಾಗೂ ದಾವಣಗೆರೆ ಜಿಲ್ಲೆಗಳಲ್ಲೂ ಮಳೆಯ ಮುನ್ಸೂಚನೆ ನೀಡಲಾಗಿದೆ. ಮಾರ್ಚ್ 18ರಿಂದ ಬೆಳಗಾವಿ, ಧಾರವಾಡ ಮತ್ತು ಗದಗ ಜಿಲ್ಲೆಗಳಲ್ಲಿ ಮಳೆಯ ನಿರೀಕ್ಷೆಯಿದ್ದು, ಮಾ. 19ರಿಂದ ಚಿತ್ರದುರ್ಗದಲ್ಲ
Mar 161 min read


ಉಡುಪಿ ಅಬಕಾರಿ ಡಿಸಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ: ಕೋಟ್ಯಂತರ ಮೌಲ್ಯದ ಆಸ್ತಿ ಪತ್ತೆ
ಉಡುಪಿ ಜಿಲ್ಲಾ ಅಬಕಾರಿ ಡಿಸಿ ಶ್ರೀನಿವಾಸ್ ಟಿ.ಎಂ. ಅವರ ನಿವಾಸ ಸೇರಿದಂತೆ ರಾಜ್ಯದ 15 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಭರ್ಜರಿ ಬೇಟೆಯಾಡಿದ್ದಾರೆ. ಮಂಗಳೂರು ವಿಭಾಗದ ಎಸ್ಪಿ ದಿನೇಶ್ ಕುಮಾರ್ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ, ಅಕ್ರಮವಾಗಿ ಗಳಿಸಿದ ಎನ್ನಲಾದ ಬರೋಬ್ಬರಿ 6.90 ಕೋಟಿ ರೂಪಾಯಿ ಮೌಲ್ಯದ ಸ್ಥಿರಾಸ್ತಿಗಳನ್ನು ಪತ್ತೆಹಚ್ಚಲಾಗಿದೆ. ಇದರಲ್ಲಿ 11 ನಿವೇಶನಗಳು ಮತ್ತು 31 ಎಕರೆ ಕೃಷಿ ಭೂಮಿ ಸೇರಿವೆ. ಕೇವಲ ಸ್ಥಿರಾಸ್ತಿಯಷ್ಟೇ ಅಲ್ಲದೆ, 2.66 ಕೋಟಿ ರೂಪಾಯಿ ಮೌಲ್ಯದ ಚರಾಸ್ತಿಗಳೂ ಲೋಕಾಯುಕ್ತರ ಕೈಗೆ ಸಿಕ್ಕಿವೆ. ದಾಳಿಯ ವೇಳೆ ಒಂದೂವರೆ ಕೋಟಿಗೂ ಅಧಿಕ ನಗದು ಹಾಗೂ ಚಿನ್ನಾ
Mar 141 min read


ಬೈಕ್ ಡಿಕ್ಕಿ: ಪ್ರಗತಿಪರ ಕೃಷಿಕ ದಿನೇಶ್ ಗಟ್ಟಿ ನಿಧನ
ಮಂಗಳೂರಿನ ಕುತ್ತಾರು ಸಮೀಪದ ಮದನಿ ನಗರದಲ್ಲಿ ರಸ್ತೆ ದಾಟುತ್ತಿದ್ದಾಗ ವೇಗವಾಗಿ ಬಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ, ಮುಂಡೋಳಿ ನಿವಾಸಿ ಹಾಗೂ ಪ್ರಗತಿಪರ ಕೃಷಿಕ ದಿನೇಶ್ ಗಟ್ಟಿ (50) ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ. ಬೈಕ್ ಸವಾರನ ಅತಿವೇಗ ಮತ್ತು ನಿರ್ಲಕ್ಷ್ಯವೇ ಈ ಅಪಘಾತಕ್ಕೆ ನೇರ ಕಾರಣ ಎನ್ನಲಾಗಿದೆ. ಕೂಡಲೇ ದಿನೇಶ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದರು. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಈ ಘಟನೆ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಹಾಗ
Mar 121 min read
Archive
bottom of page



