top of page
News Articles
Sathyapatha News Plus


ರಾಜ್ಯದ ಮೊದಲ ದೋಣಿ ಆಂಬ್ಯುಲೆನ್ಸ್ ಲೋಕಾರ್ಪಣೆ: ಮಂಗಳೂರಿನ ಮೀನುಗಾರರಿಂದ ಹೊಸ ಕ್ರಾಂತಿ
ಮಂಗಳೂರಿನ ಉಳ್ಳಾಲದ ಮೀನುಗಾರರು ಸಮುದ್ರದಲ್ಲಿನ ತುರ್ತು ಪರಿಸ್ಥಿತಿಗಳನ್ನು ಎದುರಿಸಲು ರಾಜ್ಯದ ಮೊದಲ 'ದೋಣಿ ಆಂಬ್ಯುಲೆನ್ಸ್' (Boat Ambulance) ಸೇವೆಯನ್ನು ಆರಂಭಿಸುವ ಮೂಲಕ ಮಾದರಿಯಾಗಿದ್ದಾರೆ. ಸಮುದ್ರದ ಮಧ್ಯೆ ದೋಣಿ ಮಗುಚಿದಾಗ, ಬೆಂಕಿ ಅವಘಡ ಸಂಭವಿಸಿದಾಗ ಅಥವಾ ಮೀನುಗಾರರ ಆರೋಗ್ಯದಲ್ಲಿ ಏರುಪೇರಾದಾಗ ತಕ್ಷಣದ ಚಿಕಿತ್ಸೆ ಸಿಗದೆ ಸಂಭವಿಸುವ ಸಾವುಗಳನ್ನು ತಡೆಗಟ್ಟುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ದಶಕಗಳಿಂದ ಸರ್ಕಾರಿ ಸಮುದ್ರ ಆಂಬ್ಯುಲೆನ್ಸ್ಗಾಗಿ ಕಾಯುತ್ತಿದ್ದ ಮೀನುಗಾರರು, ಕೊನೆಗೆ ಸರ್ಕಾರದ ನೆರವಿಗೆ ಕಾಯದೆ ತಾವೇ ಒಗ್ಗೂಡಿ ಈ ಕ್ರಾಂತಿಕಾರಕ ಹೆಜ್ಜೆಯನ್ನು ಇಟ್ಟಿದ್ದಾರೆ.
Feb 41 min read


ಮಂಜೇಶ್ವರ: ತಂದೆಯ ಅಟ್ಟಹಾಸಕ್ಕೆ ಬಲಿಯಾದ ಮಗಳು; ಚಿಕಿತ್ಸೆ ಫಲಿಸದೆ ದೊಡ್ಡಪ್ಪನೂ ಸಾವು
ಮಂಜೇಶ್ವರ: ಕುಂಜತ್ತೂರು ತೂಮಿನಾಡಿನಲ್ಲಿ ನಡೆದ ಕೌಟುಂಬಿಕ ಕಲಹದ ಭೀಕರ ಘಟನೆಯಲ್ಲಿ, ತಂದೆಯ ಕೃತ್ಯಕ್ಕೆ ಮಗಳು ಬಲಿಯಾದ ಬೆನ್ನಲ್ಲೇ ಗಂಭೀರವಾಗಿ ಗಾಯಗೊಂಡಿದ್ದ ದೊಡ್ಡಪ್ಪ ಶೇಕುಂಞ(50) ಅವರು ಮಂಗಳವಾರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇದರೊಂದಿಗೆ ಈ ಪ್ರಕರಣದಲ್ಲಿ ಸಾವಿನ ಸಂಖ್ಯೆ ಎರಡಕ್ಕೆ ಏರಿಕೆಯಾಗಿದೆ. ಸೋಮವಾರ ಸಂಜೆ ನಡೆದ ಜಗಳದ ವೇಳೆ ಆರೋಪಿ ಉಮರ್ ತನ್ನ ಸಂಬಂಧಿಕರ ಮೇಲೆ ಕತ್ತಿಯಿಂದ ಹಲ್ಲೆ ಮಾಡಲು ಮುಂದಾಗಿದ್ದನು. ಈ ಸಂದರ್ಭದಲ್ಲಿ ಗಲಾಟೆ ತಡೆಯಲು ಅಡ್ಡಬಂದ ಪುತ್ರಿ ಜುಮೈರಾ (18) ತಂದೆಯ ಕೃತ್ಯಕ್ಕೆ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಳು. ಹಲ್ಲೆ ತಡೆಯಲು ಬಂದ ಉಮರ್ನ ಅಣ್ಣ ಶೇಕು
Feb 31 min read


ಪುತ್ತೂರು: ಮೋರಿಗೆ ಡಿಕ್ಕಿಯಾಗಿ ಹೊತ್ತಿ ಉರಿದ ಕಾರು; ಯುವಕ-ಯುವತಿ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು
ಪುತ್ತೂರು: ರಾಷ್ಟ್ರೀಯ ಹೆದ್ದಾರಿ 75ರ ನೀರಕಟ್ಟೆ ಸಮೀಪದ ಕಾಂಚನ ಕ್ರಾಸ್ ಬಳಿ ಶುಕ್ರವಾರ ಭೀಕರ ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿದ ಕಾರು ಮೋರಿಗೆ ಡಿಕ್ಕಿಯಾಗಿ ಬೆಂಕಿಗಾಹುತಿಯಾಗಿದೆ. ಕಾರಿನಲ್ಲಿದ್ದ ಯುವಕ ಮತ್ತು ಯುವತಿ ಸಮಯಪ್ರಜ್ಞೆ ಮೆರೆದು ತಕ್ಷಣ ಹೊರಬಂದಿದ್ದರಿಂದ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ. ಹಾಸನದಿಂದ ಉಪ್ಪಿನಂಗಡಿ ಕಡೆಗೆ ಸಂಚರಿಸುತ್ತಿದ್ದ ಈ ಕಾರು, ಹೆದ್ದಾರಿ ಚತುಷ್ಪಥ ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲಿ ನಿಯಂತ್ರಣ ತಪ್ಪಿ ವಿರುದ್ಧ ದಿಕ್ಕಿನ ಮೋರಿಗೆ ವೇಗವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಇಂಜಿನ್ ಭಾಗದಲ್ಲಿ ಕಿಡಿ ಕಾಣಿಸಿಕೊಂಡು ಕ್ಷಣಾರ್
Jan 311 min read


ಕಾಪು: ಕೆಎಂಎಫ್ ಮಾಜಿ ಅಧ್ಯಕ್ಷ ದಿವಾಕರ ಶೆಟ್ಟಿ ಅವರ ಮನೆಗೆ ನುಗ್ಗಿದ ಕಳ್ಳರು; ಲಕ್ಷಾಂತರ ನಗದು ಕಳವು
ಕಾಪು: ದಕ್ಷಿಣ ಕನ್ನಡ ಹಾಲು ಉತ್ಪಾದಕರ ಒಕ್ಕೂಟದ (DKMUL) ಮಾಜಿ ಅಧ್ಯಕ್ಷರಾದ ದಿವಾಕರ ಶೆಟ್ಟಿ ಅವರ ಮನೆಗೆ ಗುರುವಾರ ರಾತ್ರಿ ನುಗ್ಗಿದ ಕಳ್ಳರು ಲಕ್ಷಾಂತರ ರೂಪಾಯಿ ಮೌಲ್ಯದ ನಗದನ್ನು ದೋಚಿ ಪರಾರಿಯಾಗಿದ್ದಾರೆ. ಮನೆಯ ಮಾಲೀಕರು ಊರಿನಲ್ಲಿ ಇಲ್ಲದ ಸಮಯವನ್ನೇ ಹೊಂಚು ಹಾಕಿದ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ. ದಿವಾಕರ ಶೆಟ್ಟಿ ಅವರು ಕುಟುಂಬದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಮುಂಬೈಗೆ ತೆರಳಿದ್ದರು. ಈ ಸಂದರ್ಭದಲ್ಲಿ ಮನೆಯ ಮೇಲ್ವಿಚಾರಣೆಯ ಜವಾಬ್ದಾರಿಯನ್ನು ಕಾಪು ಪುರಸಭೆಯ ಸದಸ್ಯರಾದ ಸುರೇಶ್ ಶೇರಿಗಾರ್ ಅವರಿಗೆ ವಹಿಸಲಾಗಿತ್ತು. ಘಟನೆ ನಡೆದ ರಾತ್ರಿ ಸುರೇಶ್ ಅವರು ಮನೆಯ ಮೇಲಿನ ಮಹಡಿ
Jan 311 min read


ಕೋಳಿ ಅಂಕಕ್ಕೆ ಪೊಲೀಸರ ಬ್ರೇಕ್: ಸಂಪ್ರದಾಯ ಉಳಿಸಲು ಫೆ.1ರಂದು ಪುತ್ತೂರಿನಲ್ಲಿ ಬೃಹತ್ ಸಮಾಲೋಚನಾ ಸಭೆ
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೂಜಿನ ನೆಪವೊಡ್ಡಿ ಪೊಲೀಸರು ಸಾಂಪ್ರದಾಯಿಕ ಕೋಳಿ ಅಂಕಗಳಿಗೆ ತಡೆ ನೀಡುತ್ತಿರುವುದನ್ನು ವಿರೋಧಿಸಿ ಈಗ ಹೋರಾಟದ ಕಿಚ್ಚು ಹತ್ತಿಕೊಂಡಿದೆ. ಕರಾವಳಿಯ ಈ ಪ್ರಾಚೀನ ಸಂಪ್ರದಾಯವನ್ನು ಉಳಿಸುವ ನಿಟ್ಟಿನಲ್ಲಿ 'ದಕ್ಷಿಣ ಕನ್ನಡ ಸಾಂಪ್ರದಾಯಿಕ ಆಚರಣಾ ಹಿತರಕ್ಷಣಾ ವೇದಿಕೆ'ಯು ಫೆಬ್ರವರಿ 1ರಂದು ಪುತ್ತೂರಿನ ಕೊಟೇಚಾ ಹಾಲ್ನಲ್ಲಿ ಬೃಹತ್ ಸಮಾಲೋಚನಾ ಸಭೆಯನ್ನು ಆಯೋಜಿಸಿದೆ. ಈ ಸಭೆಯಲ್ಲಿ ಕೋಳಿ ಅಂಕದ ಅಭಿಮಾನಿಗಳು, ದೈವಾರಾಧಕರು ಹಾಗೂ ಮುಖಂಡರು ಭಾಗವಹಿಸಿ ಮುಂದಿನ ಹೋರಾಟದ ರೂಪುರೇಷೆಗಳ ಬಗ್ಗೆ ಚರ್ಚಿಸಲಿದ್ದಾರೆ. ಕರಾವಳಿಯ ಧಾರ್ಮಿಕ ಚೌಕಟ್ಟಿನಲ್ಲಿ ಕೋಳಿ ಅಂಕಕ
Jan 311 min read


ಕಾಣಿಯೂರು: ಕೃಷಿಕರ ಮಳಿಗೆಯಿಂದ 55 ಕೆಜಿ ಅಡಿಕೆ, 35 ಕೆಜಿ ಕಾಳುಮೆಣಸು ದೋಚಿದ ಕಿಡಿಗೇಡಿಗಳು
ಕಾಣಿಯೂರು: ಕಡಬ ತಾಲೂಕಿನ ಕಾಯಿಮಣ ಗ್ರಾಮದಲ್ಲಿ ರೈತರೊಬ್ಬರ ದಾಸ್ತಾನು ಮಳಿಗೆಗೆ ನುಗ್ಗಿದ ಅಪರಿಚಿತ ಕಳ್ಳರು, ಮಾರಾಟಕ್ಕೆಂದು ಸಂಗ್ರಹಿಸಿಟ್ಟಿದ್ದ ಅಡಿಕೆ ಮತ್ತು ಕಾಳುಮೆಣಸನ್ನು ದೋಚಿರುವ ಘಟನೆ ವರದಿಯಾಗಿದೆ. ಸ್ಥಳೀಯ ನಿವಾಸಿ ಉಷಾ ಎಂ. ಎಂಬುವವರು ತಮ್ಮ ಮನೆಯ ಸಮೀಪದ ಮಳಿಗೆಯಲ್ಲಿ ಗೋನಿಚೀಲಗಳಲ್ಲಿ ಶೇಖರಿಸಿಟ್ಟಿದ್ದ ಕೃಷಿ ಉತ್ಪನ್ನಗಳು ಕಳ್ಳತನವಾಗಿದ್ದು, ಜನವರಿ 13ರಿಂದ 18ರ ಅವಧಿಯಲ್ಲಿ ಈ ಕೃತ್ಯ ನಡೆದಿದೆ ಎಂದು ಅಂದಾಜಿಸಲಾಗಿದೆ. ಈ ಘಟನೆಯು ಆ ಭಾಗದ ಕೃಷಿಕರಲ್ಲಿ ಆತಂಕವನ್ನು ಮೂಡಿಸಿದೆ. ಕಳ್ಳರು ಮಳಿಗೆಯಿಂದ ಸುಮಾರು 35 ಕೆ.ಜಿ. ಕಾಳುಮೆಣಸು, 55 ಕೆ.ಜಿ. ಹಳೆ ಅಡಿಕೆ ಹಾಗೂ ಸುಲಿದು ಸಿದ
Jan 301 min read


ಅರಂತೋಡು–ಎಲಿಮಲೆ ಸಂಪರ್ಕ ರಸ್ತೆಯ ದುರವಸ್ಥೆ-ಮರ್ಕಂಜ ದಾಟುವಲ್ಲಿ ವಾಹನ ಸವಾರರಿಗೆ ಭಾರಿ ಸಂಕಷ್ಟ
ಸುಬ್ರಹ್ಮಣ್ಯ ಹಾಗೂ ಮಡಿಕೇರಿಯನ್ನು ಸಂಪರ್ಕಿಸುವ ಪ್ರಮುಖ ಮಾರ್ಗಗಳಲ್ಲಿ ಒಂದಾದ ಅರಂತೋಡು–ಎಲಿಮಲೆ ರಸ್ತೆ ನಿತ್ಯ ಅನೇಕ ವಾಹನಗಳ ಸಂಚಾರಕ್ಕೆ ಸಾಕ್ಷಿಯಾಗುತ್ತಿದೆ. ಆದರೆ ಈ ರಸ್ತೆಯ ಮಾರ್ಕಂಜ ವ್ಯಾಪ್ತಿಯಲ್ಲಿ ಮಾತ್ರ ರಸ್ತೆ ಸಂಪೂರ್ಣ ಹದಗೆಟ್ಟು, ಸಾರ್ವಜನಿಕರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ. ಒಂದೆಡೆ ಗುಂಡಿಗಳಿಂದ ತುಂಬಿದ ರಸ್ತೆ, ಮತ್ತೊಂದೆಡೆ ಮಣ್ಣು ಮತ್ತು ಜಲ್ಲಿಯು ರಸ್ತೆಮೇಲೆ ಹರಡಿಕೊಂಡಿರುವುದರಿಂದ ದ್ವಿಚಕ್ರ ವಾಹನ ಸವಾರರು, ಕಾರುಗಳು ಹಾಗೂ ಬಸ್ಗಳು ಸಂಚರಿಸುವುದು ಅತಿ ಕಷ್ಟಕರವಾಗಿದೆ. ವಿಶೇಷವಾಗಿ ಮಳೆಯಾದ ಸಂದರ್ಭಗಳಲ್ಲಿ ರಸ್ತೆ ಇನ್ನಷ್ಟು ಅಪಾಯಕಾರಿಯಾಗಿ ಮಾರ್ಪಡುತ್ತಿದ್ದ
Jan 291 min read


ಶೀಘ್ರವೇ ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ಘೋಷಣೆ?
ಕರಾವಳಿ ಜನರ ದಶಕಗಳ ಕನಸಾದ ತುಳು ಭಾಷೆಯನ್ನು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯನ್ನಾಗಿ ಘೋಷಿಸಲು ರಾಜ್ಯ ಸರ್ಕಾರ ಗಂಭೀರ ಕ್ರಮ ಕೈಗೊಂಡಿದೆ. ಈ ಕುರಿತು ವಿಧಾನಸಭೆಯಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ಪ್ರಶ್ನೆಗೆ ಉತ್ತರಿಸಿದ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಶೀಘ್ರದಲ್ಲೇ ಉನ್ನತ ಮಟ್ಟದ ಸಭೆ ನಡೆಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದರು. ತುಳು ಭಾಷೆಯ ಐತಿಹಾಸಿಕ ಹಿನ್ನೆಲೆ, ಲಿಪಿ ಮತ್ತು ಸಾಹಿತ್ಯ ಪರಂಪರೆಯ ಕುರಿತು ಅಧ್ಯಯನ ನಡೆಸಲು ರಚಿಸಲಾಗಿದ್ದ ಡಾ. ಮೋಹನ್ ಆಳ್
Jan 291 min read


ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಮೈಸೂರು ಸಂಸದ ಯದುವೀರ್ ಒಡೆಯರ್ ಭಕ್ತಿಪೂರ್ವಕ ದರ್ಶನ
ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ನಾಗಾರಾಧನೆಯ ಪುಣ್ಯಕ್ಷೇತ್ರವಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಮೈಸೂರು ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಜನವರಿ 27ರಂದು ಭೇಟಿ ನೀಡಿ ದೇವರ ದರ್ಶನ ಪಡೆದರು. ಸುಬ್ರಹ್ಮಣ್ಯದ ಮಠದಲ್ಲಿ ಆಯೋಜಿಸಲಾಗಿದ್ದ 'ರಾಷ್ಟ್ರೀಯ ವಿದ್ವತ್ ಸಮ್ಮೇಳನ – ವಿಶ್ವ ಸಂಭ್ರಮ' ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಅವರು, ಈ ಸಂದರ್ಭದಲ್ಲಿ ಕ್ಷೇತ್ರದ ಅಧಿದೇವತೆ ಶ್ರೀ ಸುಬ್ರಹ್ಮಣ್ಯ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ಕೃತಾರ್ಥರಾದರು. ದೇವಳಕ್ಕೆ ಆಗಮಿಸಿದ ಸಂಸದರನ್ನು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾ
Jan 281 min read


ಕೇರಳದಲ್ಲಿ ಭೀಕರ ಕಾರು ಅಪಘಾತ: ಸುರತ್ಕಲ್ ಮೂಲದ ಯುವಕ ಸಾವು, ನಾಲ್ವರಿಗೆ ಗಾಯ
ಮಂಗಳೂರು: ಕೇರಳದ ಕೊಟ್ಟಾಯಂನಲ್ಲಿ ಬುಧವಾರ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಮಂಗಳೂರಿನ ಸುರತ್ಕಲ್ ಸಮೀಪದ ಕಾನಾ ನಿವಾಸಿ ಶಾನವಾಜ್ ಅಲಿಯಾಸ್ ಶಮೀಮ್ (26) ಎಂಬ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೂಲತಃ ಮುಲ್ಕಿ ತಾಲ್ಲೂಕಿನ ಅಂಗರಗುಡ್ಡೆ ನಿವಾಸಿಯಾಗಿದ್ದ ಶಮೀಮ್, ಪ್ರಸ್ತುತ ಕಾನಾದ ಚಿರಾಗ್ ಫ್ಲಾಟ್ಸ್ನಲ್ಲಿ ವಾಸವಿದ್ದರು. ಈ ಘಟನೆಯಲ್ಲಿ ಕಾರಿನಲ್ಲಿದ್ದ ಇತರ ನಾಲ್ವರು ಗಾಯಗೊಂಡಿದ್ದು, ಒಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಮೃತ ಶಮೀಮ್ ಮತ್ತು ಅವರ ಸ್ನೇಹಿತರು ಕೊಟ್ಟಾಯಂನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವೊಂದಕ್ಕೆ ಬೌನ್ಸರ್ಗಳಾಗಿ ತೆರಳಿದ್ದರು. ಬುಧವಾರ ಬೆಳಿಗ್
Jan 281 min read


ಬಾಲಕ ಸುಮಂತ್ ಸಾವು ಪ್ರಕರಣ: ಕೂಲಂಕುಷ ತನಿಖೆಗೆ ಗೃಹ ಸಚಿವರಿಗೆ ಶಾಸಕ ಹರೀಶ್ ಪೂಂಜ ಆಗ್ರಹ
ಬೆಳ್ತಂಗಡಿ: ಓಡಿಲ್ನಾಳ ಗ್ರಾಮದ ಸಂಬೋಳ್ಯ ನಿವಾಸಿ ಸುಮಂತ್ ಎಂಬ ಬಾಲಕನ ಅನುಮಾನಾಸ್ಪದ ಸಾವಿನ ಪ್ರಕರಣವು ತಾಲ್ಲೂಕಿನಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಈ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಶಾಸಕ ಹರೀಶ್ ಪೂಂಜ ಅವರು ಒತ್ತಾಯಿಸಿದ್ದಾರೆ. ಇತ್ತೀಚೆಗೆ ಬೆಂಗಳೂರಿನಲ್ಲಿ ಗೃಹ ಸಚಿವ ಜಿ. ಪರಮೇಶ್ವರ್ ಅವರನ್ನು ಭೇಟಿಯಾದ ಶಾಸಕರು, ಪ್ರಕರಣದ ಸತ್ಯಾಸತ್ಯತೆಯನ್ನು ಶೀಘ್ರವಾಗಿ ಹೊರತರುವಂತೆ ಅಧಿಕೃತವಾಗಿ ಮನವಿ ಸಲ್ಲಿಸಿದರು. ಬಾಲಕ ಸುಮಂತ್ ಸಾವಿನ ಹಿಂದೆ ಹಲವಾರು ಅನುಮಾನಗಳು ವ್ಯಕ್ತವಾಗುತ್ತಿದ್ದು, ಇದು ಕೇವಲ ಆಕಸ್ಮಿಕವೇ ಅಥವಾ ಬೇರೆನಾದರೂ ಸಂಚು ಇದೆಯೇ ಎಂಬ ಆತಂಕ ಕುಟುಂಬಸ್ಥರನ್ನು ಕಾಡುತ್ತಿ
Jan 281 min read


'ಇ-ಸ್ವತ್ತು 2.0' ತಾಂತ್ರಿಕ ದೋಷ: ಸದನದಲ್ಲಿ ಸರ್ಕಾರದ ವಿರುದ್ಧ ಕಿಶೋರ್ ಕುಮಾರ್ ಪುತ್ತೂರು ಆಕ್ರೋಶ
ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಧಾನ ಪರಿಷತ್ ಅಧಿವೇಶನದ ಶೂನ್ಯ ವೇಳೆಯಲ್ಲಿ, ಸದಸ್ಯರಾದ ಶ್ರೀ ಕಿಶೋರ್ ಕುಮಾರ್ ಪುತ್ತೂರು ಅವರು ರಾಜ್ಯದ ಗ್ರಾಮೀಣ ಭಾಗದ ಜನರು ಎದುರಿಸುತ್ತಿರುವ 'ಇ-ಸ್ವತ್ತು 2.0' ತಂತ್ರಾಂಶದ ವೈಫಲ್ಯದ ಬಗ್ಗೆ ಸರ್ಕಾರದ ಗಮನ ಸೆಳೆದರು. ಉದಯವಾಣಿ ದಿನಪತ್ರಿಕೆಯ ವರದಿಯನ್ನು ಉಲ್ಲೇಖಿಸಿದ ಅವರು, ಗ್ರಾಮೀಣ ನಾಗರಿಕರಿಗೆ ಆಸ್ತಿ ದಾಖಲೆಗಳನ್ನು ಸುಲಭವಾಗಿ ಒದಗಿಸಲು ಡಿಸೆಂಬರ್ 1ರಿಂದ ಜಾರಿಗೆ ತಂದ ಈ ಹೊಸ ತಂತ್ರಾಂಶವು, ಆರಂಭವಾದ ಒಂದೇ ತಿಂಗಳೊಳಗೆ ತಾಂತ್ರಿಕ ದೋಷಗಳಿಂದಾಗಿ ಸಂಪೂರ್ಣವಾಗಿ ಕೈಕೊಟ್ಟಿದೆ ಎಂದು ದೂರಿದರು. ತಂತ್ರಾಂಶದ ವಿಳಂಬದಿಂದಾಗಿ ಪ್ರಸ್ತುತ 36,000ಕ್ಕೂ ಹೆ
Jan 281 min read


ಬೆಂಗಳೂರು: ಬಿಎಂಟಿಸಿ ಬಸ್ಸಿಗೆ ರೈಲು ಡಿಕ್ಕಿ;
ಬೆಂಗಳೂರು: ನಗರದ ಕಾಡುಗೋಡಿಯ ಸಾದರಮಂಗಲ ರೈಲ್ವೆ ಕ್ರಾಸಿಂಗ್ ಬಳಿ ಬಿಎಂಟಿಸಿ ಬಸ್ ಮತ್ತು ರೈಲಿನ ನಡುವೆ ಭೀಕರ ಅಪಘಾತ ಸಂಭವಿಸಿದೆ. ಸಾದರಮಂಗಲದಲ್ಲಿ ಪ್ರಯಾಣಿಕರನ್ನು ಇಳಿಸಿ ಖಾಲಿ ಬಸ್ಸು ಡಿಪೋಗೆ ಹಿಂತಿರುಗುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಅದೃಷ್ಟವಶಾತ್ ಬಸ್ಸಿನಲ್ಲಿ ಪ್ರಯಾಣಿಕರು ಯಾರೂ ಇಲ್ಲದ ಕಾರಣ ಯಾವುದೇ ಜೀವಹಾನಿ ಸಂಭವಿಸಿಲ್ಲ. ಆದರೆ ರೈಲಿನ ಡಿಕ್ಕಿಯ ರಭಸಕ್ಕೆ ಬಿಎಂಟಿಸಿ ಬಸ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಡಿಪೋ ಸಂಖ್ಯೆ 51ಕ್ಕೆ ಸೇರಿದ್ದ ಈ ಬಸ್ಸು, ಇಕ್ಕಟ್ಟಾದ ರಸ್ತೆಯಲ್ಲಿ ಹಿಂಬದಿಗೆ ಚಲಿಸಿ ನಂತರ ಮುಂದಕ್ಕೆ ಹೋಗಲು ಪ್ರಯತ್ನಿಸುತ್ತಿತ್ತು. ಈ ಸಂದರ್ಭದಲ್ಲಿ ಚಾಲಕನು ಹಳಿ
Jan 271 min read


ರಾಜ್ಯಾದ್ಯಂತ ಮುಂದುವರಿಯಲಿರುವ ಚಳಿ: ಹವಾಮಾನ ಇಲಾಖೆ ಮುನ್ಸೂಚನೆ
ಬೆಂಗಳೂರು: ಕರ್ನಾಟಕದಾದ್ಯಂತ ಮುಂದಿನ ನಾಲ್ಕು ದಿನಗಳ ಕಾಲ ಒಣ ಹವೆ ಮುಂದುವರಿಯಲಿದ್ದು, ಚಳಿಯ ತೀವ್ರತೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶೇಷವಾಗಿ ದಕ್ಷಿಣ ಒಳನಾಡು ಮತ್ತು ಮಲೆನಾಡು ಭಾಗಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಕಡಿಮೆ ಇರಲಿದ್ದು, ಬೆಳಗಿನ ಜಾವ ದಟ್ಟ ಮಂಜು ಕವಿಯುವ ಸಾಧ್ಯತೆಯಿದೆ. ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ 27°C ಮತ್ತು ಕನಿಷ್ಠ 18°C ತಾಪಮಾನ ದಾಖಲಾಗುವ ನಿರೀಕ್ಷೆಯಿದೆ. ಪ್ರಮುಖ ನಗರಗಳ ತಾಪಮಾನ ಗಮನಿಸುವುದಾದರೆ, ಮಂಗಳೂರಿನಲ್ಲಿ 31-24°C, ಶಿವಮೊಗ್ಗದಲ್ಲಿ 32-19°C ಹಾಗೂ ಬೆಳಗಾವಿಯಲ್ಲಿ 29-19°C ಇರಲಿದೆ. ಕರಾವಳಿ ಮತ್ತು ಮಲೆ
Jan 271 min read


ಬೆಳ್ತಂಗಡಿ: ವಿದ್ಯುತ್ ಪಂಪ್ ಆನ್ ಮಾಡುವಾಗ ಶಾಕ್ ತಗುಲಿ ವ್ಯಕ್ತಿ ದುರ್ಮರಣ
ಬೆಳ್ತಂಗಡಿ: ತಾಲೂಕಿನ ಗುರಿಪಳ್ಳದಲ್ಲಿ ಗಣರಾಜ್ಯೋತ್ಸವದ ದಿನವಾದ ಇಂದು (ಜನೆವರಿ 26) ಬೆಳಿಗ್ಗೆ ಸಂಭವಿಸಿದ ವಿದ್ಯುತ್ ಅವಘಡದಲ್ಲಿ 48 ವರ್ಷದ ವ್ಯಕ್ತಿಯೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಗುರಿಪಳ್ಳದ ಕಡಿಯಾರು ಗ್ರಾಮದ ನಿವಾಸಿ ಶಿವಪ್ರಸಾದ್ ಆದಪ್ಪ ಎಂಬವರೇ ಮೃತಪಟ್ಟ ದುರ್ದೈವಿ. ಮನೆಯ ಬಳಿಯ ನೀರಿನ ಪಂಪ್ ಆನ್ ಮಾಡಲು ಹೋದಾಗ ಈ ಘೋರ ದುರಂತ ಸಂಭವಿಸಿದೆ. ಕುಟುಂಬದ ಮೂಲಗಳ ಪ್ರಕಾರ, ಶಿವಪ್ರಸಾದ್ ಅವರು ಎಂದಿನಂತೆ ತಮ್ಮ ಬೆಳಗಿನ ದಿನಚರಿಯ ಕೆಲಸಕ್ಕೆಂದು ಹೊರಬಂದಿದ್ದರು. ಈ ವೇಳೆ ಪಂಪ್ ಸೆಟ್ ಸ್ವಿಚ್ ಹಾಕುವಾಗ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಗಂಭೀರವಾಗಿ ಗಾಯಗೊಂಡು ನೆಲಕ್ಕೆ ಉರುಳಿ ಬಿ
Jan 261 min read


ಶರಣ್ ಪಂಪ್ವೆಲ್ಗೆ ಜಿಲ್ಲಾ ಪ್ರವೇಶ ನಿಷೇಧ: ಶಾಂತಿ ಕಾಪಾಡಲು ಜಿಲ್ಲಾಧಿಕಾರಿ ಕ್ರಮ
ಹಾಸನ: ಶ್ರವಣಬೆಳಗೊಳ ಹಾಗೂ ಅರಸೀಕೆರೆಯಲ್ಲಿ ಭಾನುವಾರ ಆಯೋಜಿಸಲಾಗಿದ್ದ 'ಹಿಂದೂ ಸಮಾಜೋತ್ಸವ' ಕಾರ್ಯಕ್ರಮದಲ್ಲಿ ಭಾಗವಹಿಸಬೇಕಿದ್ದ ವಿಶ್ವ ಹಿಂದೂ ಪರಿಷತ್ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ಅವರಿಗೆ ಜಿಲ್ಲಾ ಪ್ರವೇಶವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಅವರು ಆದೇಶ ಹೊರಡಿಸಿದ್ದಾರೆ. ಶರಣ್ ಪಂಪ್ವೆಲ್ ಅವರು ಈ ಹಿಂದೆ ವಿವಿಧ ಜಿಲ್ಲೆಗಳಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಅವರ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿವೆ. ಈ ಇತಿಹಾಸವನ್ನು ಗಮನಿಸಿ ಮುನ್ನೆಚ್ಚರಿಕಾ ಕ್ರಮವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು
Jan 261 min read


ತಂದೆಗೆ ಚೂರಿ ಇರಿದು, ಬಳಿಕ ಶೂಟೌಟ್ ಮಾಡಿಕೊಂಡು ಆತ್ಮಹತ್ಯೆ: ಕಡಬದಲ್ಲಿ ಭೀಕರ ಘಟನೆ
ಕಡಬ: ತಂದೆಯನ್ನೇ ಚೂರಿಯಿಂದ ಇರಿದು ಕೊಲೆ ಯತ್ನ ನಡೆಸಿದ ಬಳಿಕ ಮನೆಯಲ್ಲಿದ್ದ ಕೋವಿಯಿಂದ ಶೂಟೌಟ್ ಮಾಡಿಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಭೀಕರ ಘಟನೆ ಶನಿವಾರ ಸಂಜೆ ಕಡಬ ಠಾಣಾ ವ್ಯಾಪ್ತಿಯ ರಾಮಕುಂಜ ಗ್ರಾಮದ ಪಾದೆ ಎಂಬಲ್ಲಿ ನಡೆದಿದೆ. ಶೂಟೌಟ್ ಮಾಡಿಕೊಂಡು ಮೃತಪಟ್ಟ ಯುವಕನನ್ನು ರಾಮಕುಂಜ ಗ್ರಾಮದ ಪಾದೆ ನಿವಾಸಿ ವಸಂತ ಅಮೀನ್ ಎಂಬವರ ಪುತ್ರ ಮೋಕ್ಷ ಎಂದು ಗುರುತಿಸಲಾಗಿದೆ. ಶನಿವಾರ ಸಂಜೆ ತಂದೆ–ಮಗನ ನಡುವೆ ತೀವ್ರ ಜಗಳ ನಡೆದಿದ್ದು, ಆ ಸಂದರ್ಭದಲ್ಲಿ ಮೋಕ್ಷ ತನ್ನ ತಂದೆ ವಸಂತ ಅಮೀನ್ ಅವರಿಗೆ ಚೂರಿಯಿಂದ ಇರಿದು ಗಂಭೀರವಾಗಿ ಗಾಯಗೊಳಿಸಿದ್ದಾನೆ ಎನ್ನಲಾಗಿದೆ. ಅನಂತರ ಮನೆಗೆಲ್ಲಿದ್ದ
Jan 241 min read


ಮಂಗಳೂರು: ನಕಲಿ ಚಿನ್ನದ ಬಳೆ ಅಡವಿಟ್ಟು ₹14.89 ಲಕ್ಷ ಸಾಲ – ಮೂವರ ಬಂಧನ
ಕಾವೂರು ವ್ಯಾಪ್ತಿಯ ಸಹಕಾರಿ ಸಂಸ್ಥೆಯೊಂದರಲ್ಲಿ ನಕಲಿ ಚಿನ್ನದ ಬಳೆಗಳನ್ನು ಅಡವಿಟ್ಟು ₹14.89 ಲಕ್ಷ ಸಾಲ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾವೂರು ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಮೊಹಮ್ಮದ್ ನಝೀರ್, ಜಮಾಲುದ್ದೀನ್ ಎ.ಎಚ್. ಹಾಗೂ ಸೈನಾಝ್ ಎಂದು ಗುರುತಿಸಲಾಗಿದೆ. ಪ್ರಕರಣದ ಮತ್ತೊಬ್ಬ ಆರೋಪಿ ದಿಲ್ಶಾದ್ ತಲೆಮರೆಸಿಕೊಂಡಿದ್ದು, ಆಕೆಯ ಪತ್ತೆಗೆ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ಬಂಧಿತರು ಹಾಗೂ ತಲೆಮರೆಸಿಕೊಂಡಿರುವ ಆರೋಪಿ 2024ರ ಜೂನ್ 24ರಿಂದ ಅಕ್ಟೋಬರ್ 5ರವರೆಗೆ ನಕಲಿ ಚಿನ್ನದ ಬಳೆಗಳನ್ನು ಅಡವಿಟ್ಟು ಸಾಲ ಪಡೆದಿದ್ದರು. ಬ್ಯಾಂಕ್ನ ಚಿನ
Jan 241 min read
Archive
bottom of page



