top of page
News Articles
Sathyapatha News Plus


ಮಂಗಳೂರು ರೈಲ್ವೆ ವಲಯದಲ್ಲಿ ಬೃಹತ್ ಅಭಿವೃದ್ಧಿ: ಸಚಿವ ವಿ. ಸೋಮಣ್ಣ
ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪದಲ್ಲೇ ಪ್ರಯಾಣಿಕರ ಅನುಕೂಲಕ್ಕಾಗಿ ಹೊಸ ರೈಲು ನಿಲ್ದಾಣ ನಿರ್ಮಿಸಲು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ. ಸಂಸದ ಬ್ರಿಜೇಶ್ ಚೌಟ ಅವರ ಪ್ರಸ್ತಾವನೆಯಂತೆ ಈ ಯೋಜನೆಯ ಅಧ್ಯಯನ ಆರಂಭವಾಗಿದೆ. ಇದೇ ವೇಳೆ ಕರಾವಳಿ ಜನರ ಬಹುದಿನಗಳ ಕನಸಾದ ಮಂಗಳೂರು–ಬೆಂಗಳೂರು 'ವಂದೇ ಭಾರತ್ ಎಕ್ಸ್ಪ್ರೆಸ್' ರೈಲು ಸಂಚಾರ ಇನ್ನು ಒಂದು ತಿಂಗಳೊಳಗೆ ಅಧಿಕೃತವಾಗಿ ಪ್ರಾರಂಭವಾಗಲಿದೆ ಎಂದು ಸಚಿವರು ಭರವಸೆ ನೀಡಿದ್ದಾರೆ. ಹಾಸನ-ಮಂಗಳೂರು ಘಾಟ್ ಮಾರ್ಗದ ವಿದ್ಯುದೀಕರಣ ಪೂರ್ಣಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಈ ಹೈಸ್ಪೀಡ್ ರೈಲಿಗೆ ಹಸಿರು
May 241 min read


ಮಂಗಳೂರು–ಸುಬ್ರಹ್ಮಣ್ಯ ಮಾರ್ಗಕ್ಕೆ MEMU ರೈಲು ಬೇಡಿಕೆ: ಸಚಿವ ಸೋಮಣ್ಣಗೆ ಮನವಿ, ಸಂಸದ ಬ್ರಿಜೇಶ್ ಚೌಟ ಬೆಂಬಲ
ಮಂಗಳೂರು, ಮೇ 23: ಮಂಗಳೂರು ಜಂಕ್ಷನ್ನಲ್ಲಿ ನಡೆದ ಅಮೃತ ಭಾರತ್ ಅಭಿವೃದ್ಧಿ ಪರಿಶೀಲನಾ ಸಭೆಯಲ್ಲಿ, ಮಂಗಳೂರು–ಸುಬ್ರಹ್ಮಣ್ಯ ರೋಡ್ ಪ್ಯಾಸೆಂಜರ್ ರೈಲನ್ನು MEMU (ಮೆಮು) ರೈಲಿಗೆ ಮೇಲ್ದರ್ಜೆಗೇರಿಸುವಂತೆ ಮಹತ್ವದ ಬೇಡಿಕೆ ಮುಂದಿರಿಸಲಾಯಿತು. ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೆ ಈ ಕುರಿತು ಮನವಿ ಸಲ್ಲಿಸಿದರು. ಈ ಬೇಡಿಕೆಗೆ ಸ್ಥಳೀಯ ಸಂಸದರು ಸಹ ಬೆಂಬಲ ಸೂಚಿಸಿದ್ದು, ಶೀಘ್ರದಲ್ಲೇ ಸಕಾರಾತ್ಮಕ ಸ್ಪಂದನೆ ದೊರೆಯುವ ನಿರೀಕ್ಷೆ ವ್ಯಕ್ತವಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ ಸಂಚರಿಸುವ ಪ್ರಯಾಣಿಕರಿಗೆ ವೇಗವಾದ ಹಾಗೂ ಹೆಚ್ಚು ಆವೃತ್ತಿಯ ರೈಲು ಸೇವೆ ಒದಗಿಸುವ ದೃಷ್ಟಿಯಿಂದ MEMU ರೈಲ
May 231 min read


ಲಾರಿಯಲ್ಲಿ ಹಿಂಸಾತ್ಮಕವಾಗಿ ಜಾನುವಾರು ಸಾಗಾಟ: ಮಂಗಳೂರಿನಲ್ಲಿ ನಾಲ್ವರ ಬಂಧನ, 27 ಕೋಣಗಳ ರಕ್ಷಣೆ
ಹಾವೇರಿಯಿಂದ ಕೇರಳದ ಕಣ್ಣೂರಿಗೆ ಹಿಂಸಾತ್ಮಕವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಜಾಲವನ್ನು ಕಂಕನಾಡಿ ನಗರ ಪೊಲೀಸರು ಭೇದಿಸಿದ್ದಾರೆ. ಜಪ್ಪಿನಮೊಗೇರು ಇಂಡಿಯಾನ ಹಾಲ್ ಎದುರು ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಗಸ್ತು ತಿರುಗುತ್ತಿದ್ದ ಪೊಲೀಸರು ಕಾರ್ಯಾಚರಣೆ ನಡೆಸಿ, ಐಷರ್ ಲಾರಿಯಲ್ಲಿದ್ದ 27 ಕೋಣಗಳನ್ನು ರಕ್ಷಿಸಿದ್ದಾರೆ. ಈ ಅಕ್ರಮ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದ ಸಯ್ಯದ್ ಮೆಹಬೂಬ್ ಅಲಿ, ಹಾವೇರಿಯ ಅರುಣ ಚಂದ್ರಪ್ಪ, ಹಾಸನದ ಹಿರಿಯಣ್ಣ ಗೌಡ ಮತ್ತು ಹಾವೇರಿಯ ಸುನೀಲ್ ಲಕ್ಷ್ಮಪ್ಪ ಜಾವಳ್ಳಿ ಎಂಬ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಜಾನುವಾರುಗಳ ಸಾಗಾಟಕ್ಕೆ
May 171 min read


ನವ ಮಂಗಳೂರು ಬಂದರಿನಲ್ಲಿ ಉದ್ಯೋಗಾವಕಾಶ – NMPAಯಲ್ಲಿ 12 ಮ್ಯಾನೇಜರ್ ಹುದ್ದೆಗಳ ಭರ್ತಿ ಅರ್ಜಿ ಅಹ್ವಾನ
ಮಂಗಳೂರು: New Mangalore Port Authority (NMPA) ವತಿಯಿಂದ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಪ್ರಕಟವಾಗಿದೆ. ಒಟ್ಟು 12 ಹುದ್ದೆಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಕೇಂದ್ರ ಸರ್ಕಾರದ ಅಡಿಯಲ್ಲಿ ಉದ್ಯೋಗ ಪಡೆಯಲು ಬಯಸುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಈ ನೇಮಕಾತಿಯಲ್ಲಿ ಐಸಿಟಿ (ICT), ಲೀಗಲ್ (Legal), ಪರಿಸರ (Environment) ಹಾಗೂ ಬಿಸಿನೆಸ್ ಡೆವಲಪ್ಮೆಂಟ್ (Business Development) ವಿಭಾಗಗಳಲ್ಲಿ ಹುದ್ದೆಗಳು ಲಭ್ಯವಿವೆ. ಮಂಗಳೂರಿನ ಪ್ರಮುಖ ಬಂದರು ಸಂಸ್ಥೆಯಲ್ಲಿ ಸ್ಥಿರ ಉದ್ಯೋಗ ಮತ್ತು ಆಕರ್ಷಕ ವೇತನದೊಂದಿಗ
May 111 min read


ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆದಾಯದಲ್ಲಿ ದಾಖಲೆ: ಸತತ 15ನೇ ವರ್ಷವೂ ರಾಜ್ಯದ ನಂ.1
ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ನಾಗಾರಾಧನಾ ಕ್ಷೇತ್ರವಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನವು 2025-26ನೇ ಸಾಲಿನ ಆರ್ಥಿಕ ವರ್ಷದಲ್ಲಿ ದಾಖಲೆ ಮೊತ್ತದ ಆದಾಯ ಗಳಿಸಿದೆ. ಈ ವರ್ಷ ದೇವಸ್ಥಾನಕ್ಕೆ ಒಟ್ಟು 167.89 ಕೋಟಿ ರೂಪಾಯಿ ಆದಾಯ ಬಂದಿದ್ದು, ಕಳೆದ ವರ್ಷಕ್ಕಿಂತ 12 ಕೋಟಿ ರೂಪಾಯಿ ಹೆಚ್ಚಳವಾಗಿದೆ. ಈ ಮೂಲಕ ರಾಜ್ಯದ ಮುಜರಾಯಿ ಇಲಾಖೆಯ ಅಡಿಯಲ್ಲಿ ಅತಿ ಹೆಚ್ಚು ಆದಾಯ ಗಳಿಸುವ ದೇಗುಲವಾಗಿ ಸತತ 15ನೇ ಬಾರಿಗೆ ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡಿದೆ. ದೇವಸ್ಥಾನದ ಒಟ್ಟು ಆದಾಯದಲ್ಲಿ ಹರಕೆ ಸೇವೆಗಳಿಂದ 64.08 ಕೋಟಿ ರೂ. ಮತ್ತು ಸ್ಥಿರ ಠೇವಣಿ ಬಡ್ಡಿಯಿಂದ 49.11 ಕೋಟಿ ರೂ. ಸಂಗ್ರಹವಾಗ
May 111 min read


ವಿಟ್ಲ: ಅಕ್ರಮ ಪಡಿತರ ಅಕ್ಕಿ ವಶ; ಓರ್ವನ ಬಂಧನ
ವಿಟ್ಲದ ಶಿವಾಜಿ ನಗರದಲ್ಲಿ ಅಕ್ರಮವಾಗಿ ಪಡಿತರ ಅಕ್ಕಿಯನ್ನು ದಾಸ್ತಾನು ಇರಿಸಿದ್ದ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಆಹಾರ ನಿರೀಕ್ಷಕ ಪ್ರಶಾಂತ್ ಶೆಟ್ಟಿ ಮತ್ತು ವಿಟ್ಲ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ, ಮನೆಯಂಗಳದಲ್ಲಿ ನಿಲ್ಲಿಸಿದ್ದ ಆಟೋರಿಕ್ಷಾದಲ್ಲಿದ್ದ ಅಕ್ಕಿಯನ್ನು ಪತ್ತೆಹಚ್ಚಿದ್ದಾರೆ. ಪರಿಶೀಲನೆಯಲ್ಲಿ ಆಟೋರಿಕ್ಷಾದಲ್ಲಿದ್ದ 15 ಪ್ಲಾಸ್ಟಿಕ್ ಚೀಲಗಳಲ್ಲಿ ಒಟ್ಟು 679.38 ಕೆಜಿ ತೂಕದ ಪಡಿತರ ಅಕ್ಕಿ ಪತ್ತೆಯಾಗಿದೆ. ಇದರ ಅಂದಾಜು ಮೌಲ್ಯ ₹23,098 ಎಂದು ತಿಳಿದುಬಂದಿದ್ದು, ಅಕ್ಕಿಯ ಜೊತೆಗೆ ಸಾಗಾಟಕ್ಕೆ ಬಳಸುತ್ತಿದ್ದ ಆಟೋರಿಕ್ಷಾವನ್ನು ಅಧಿಕಾರಿಗಳು ವಶ
May 101 min read


ಕುಟ್ರುಪ್ಪಾಡಿಯಲ್ಲಿ ದಾರುಣ ಘಟನೆ: ಡ್ಯಾಂನಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿನಿಯರ ಸಾವು
ಕುಟ್ರುಪ್ಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹರಿಯುವ ಗುಂಡ್ಯ ಹೊಳೆಯ ಕೊಲ್ಯದಕಟ್ಟ ಡ್ಯಾಂ ಬಳಿ ಶುಕ್ರವಾರ ಸಂಜೆ ಸಂಭವಿಸಿದ ದಾರುಣ ಘಟನೆಯಲ್ಲಿ ಇಬ್ಬರು ವಿದ್ಯಾರ್ಥಿನಿಯರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಮೃತರನ್ನು ಕುಟ್ರುಪ್ಪಾಡಿ ಗ್ರಾಮದ ವಿಮಲಗಿರಿ ನಿವಾಸಿಗಳಾದ ಅರ್ಪಿತಾ (21) ಹಾಗೂ ಸುನೀತಾ (15) ಎಂದು ಗುರುತಿಸಲಾಗಿದೆ. ರಜೆ ಹಿನ್ನೆಲೆಯಲ್ಲಿ ಐವರು ವಿದ್ಯಾರ್ಥಿನಿಯರು ಸ್ನೇಹಿತರೊಂದಿಗೆ ಡ್ಯಾಂ ಬಳಿ ತೆರಳಿ ನೀರಿನಲ್ಲಿ ಸ್ನಾನಕ್ಕೆ ಇಳಿದಿದ್ದರು. ಈ ವೇಳೆ ಅರ್ಪಿತಾ ಮತ್ತು ಸುನೀತಾ ಅವರು ನೀರಿನ ಆಳವನ್ನು ಅಂದಾಜಿಸದೆ ಮುಂದೆ ಸಾಗಿದ್ದು, ಏಕಾಏಕಿ ಮುಳುಗತೊಡಗಿದ್ದಾರೆ. ಜೊತೆ
May 81 min read


ಕುಕ್ಕೆಗೆ ಬರುತ್ತಿದ್ದ ಬಸ್ ಚಾಲಕನಿಗೆ ಹೃದಯಘಾತ ತನ್ನ ಪ್ರಾಣ ಹೋದರೂ 24 ಮಂದಿ ಪ್ರಯಾಣಿಕರ ಜೀವ ಉಳಿಸಿದ ವೀರ ಚಾಲಕ
ಮಡಿಕೇರಿ ಸಮೀಪದ ಕಾಟಿಕೇರಿಯಲ್ಲಿ ಚಾಲಕ ಶಿವಕುಮಾರ್ ಅವರು ಹೃದಯಾಘಾತದ ನಡುವೆಯೂ ಸಮಯಪ್ರಜ್ಞೆ ಮೆರೆದು 24 ಪ್ರಯಾಣಿಕರ ಪ್ರಾಣ ಉಳಿಸಿದ್ದಾರೆ. ಬೆಂಗಳೂರಿನಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಬಸ್ ಚಲಾಯಿಸುವಾಗ ತೀವ್ರ ಎದೆನೋವು ಕಾಣಿಸಿಕೊಂಡರೂ, ಎದೆಗುಂದದ ಅವರು ಬಸ್ಸನ್ನು ರಸ್ತೆಯ ಪಕ್ಕದ ಗುಡ್ಡಕ್ಕೆ ಒರಗಿಸಿ ಸುರಕ್ಷಿತವಾಗಿ ನಿಲ್ಲಿಸಿದರು. ಈ ಮೂಲಕ ಸಂಭವಿಸಬಹುದಾಗಿದ್ದ ಭೀಕರ ದುರಂತವೊಂದು ತಪ್ಪಿದಂತಾಗಿದೆ. ಬಸ್ಸನ್ನು ನಿಲ್ಲಿಸಿದ ಕೆಲವೇ ಕ್ಷಣಗಳಲ್ಲಿ ಶಿವಕುಮಾರ್ ಅವರು ಸೀಟಿನಲ್ಲೇ ಕೊನೆಯುಸಿರೆಳೆದಿದ್ದು, ಅವರ ಕರ್ತವ್ಯನಿಷ್ಠೆ ಎಲ್ಲರ ಕಣ್ಣಾಲಿಗಳನ್ನು ಒದ್ದೆಯಾಗಿಸಿದೆ. ವಿಷಯ ತಿಳಿದ
May 81 min read


ಮಂಗಳೂರು: ಚಿಪ್ಪು ಹಂದಿ ಚಿಪ್ಪು ಮಾರಾಟಕ್ಕೆ ಯತ್ನ – ಮೂವರು ಬಂಧನ
ಮಂಗಳೂರು ನಗರದ ಕದ್ರಿ ಉದ್ಯಾನವನದ ಬಳಿಯಲ್ಲಿ ಚಿಪ್ಪು ಹಂದಿಯ ಚಿಪ್ಪುಗಳನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರನ್ನು ಸಿಐಡಿ ಅರಣ್ಯ ಸಂಚಾರಿ ದಳದ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಬೆಂಗಳೂರು ನಿವಾಸಿ ಹೆಚ್.ಆರ್. ಜಗದೀಶ (50), ಕನಕಪುರದ ಸಿದ್ದು ನಾಯ್ಕ (38) ಮತ್ತು ಬನಶಂಕರಿಯ ಬಾಬು (48) ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ಸುಮಾರು 5.2008 ಕೆ.ಜಿ ತೂಕದ ಚಿಪ್ಪುಗಳನ್ನು ಹಾಗೂ ಅಂದಾಜು 3 ಲಕ್ಷ ರೂ. ಮೌಲ್ಯದ ಕೆಎ 05 ಎಂಎಸ್ 1049 ಸಂಖ್ಯೆಯ ಬಿಳಿ ಬಣ್ಣದ ಮಾರುತಿ ಸ್ವಿಫ್ಟ್ ಕಾರನ್ನು ವಶಪಡಿಸಿಕೊಂಡಿದ್ದಾರೆ. ಪವನ್ ನೆಟ್ಟೂರು ಐಪಿಎಸ್ ಅವರ ಮಾರ್ಗದರ್ಶನದಲ್ಲಿ ನಡೆದ
May 71 min read


ಕಡಬದಲ್ಲಿ ಭೀಕರ ಘಟನೆ: ಅತ್ತಿಗೆಯ ಮೇಲೆ ಪೆಟ್ರೋಲ್ ಸುರಿದು ಕೊಲೆ ಯತ್ನ
ಕಡಬ, ಮೇ 6: ಆಸ್ತಿ ವಿಚಾರ ಹಾಗೂ ಅಸೂಯೆಯಿಂದ ಮೈದುನನೊಬ್ಬ ಅತ್ತಿಗೆಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಲು ಯತ್ನಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಐತ್ತೂರು ಗ್ರಾಮದ ಪಾದೆಮಜಲು ಎಂಬಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ. ಐತ್ತೂರು ಗ್ರಾಮದ ನಿವಾಸಿ ಬೇಬಿ ಕೆ.ಎಸ್ (35) ಅವರು ಈ ಘಟನೆಯಲ್ಲಿ ಸಾವಿನ ಅಂಚಿನಿಂದ ಪಾರಾಗಿದ್ದಾರೆ. ಅವರು ತಮ್ಮ ಪತಿ ನೋಣಯ್ಯ ಗೌಡ ಮತ್ತು ಇಬ್ಬರು ಮಕ್ಕಳೊಂದಿಗೆ ವಾಸವಾಗಿದ್ದು, ಕುಟುಂಬಕ್ಕೆ ಸೇರಿದ ಜಾಗವನ್ನು ಮೊದಲು ಅತ್ತೆಯವರು ಇಬ್ಬರು ಸಹೋದರರಿಗೆ ಹಂಚಿಕೆ ಮಾಡಿದ್ದರು. ತಮಗೆ ಸಿಕ್ಕ ಜಾಗದಲ್ಲಿ ಮನೆ ನಿರ್ಮಾಣಕ್ಕಾಗಿ ಬೇಬಿ ಅವರು ಅ
May 61 min read


ವಿಟ್ಲದಲ್ಲಿ ಅಮಲು ಪದಾರ್ಥ ಸೇವನೆ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ – ಯುವಕ ಬಂಧನ
ನಾಲ್ಕು ಮಾರ್ಗ ಜಂಕ್ಷನ್ನಲ್ಲಿ ತಪಾಸಣೆ ವೇಳೆ ಘಟನೆ | ವೈದ್ಯಕೀಯ ವರದಿಯಲ್ಲಿ ಡ್ರಗ್ಸ್ ಸೇವನೆ ದೃಢ ವಿಟ್ಲದ ಜನಸಂಚಾರ ಜೋರಾಗಿರುವ ನಾಲ್ಕು ಮಾರ್ಗ ಜಂಕ್ಷನ್ನಲ್ಲಿ ಭಾನುವಾರ ಮಧ್ಯಾಹ್ನ ನಡೆದ ಒಂದು ಘಟನೆ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಸಾಮಾನ್ಯ ವಾಹನ ತಪಾಸಣೆ ನಡೆಯುತ್ತಿದ್ದ ವೇಳೆ, ಅಮಲು ಪದಾರ್ಥ ಸೇವಿಸಿದ್ದ ಯುವಕನೊಬ್ಬ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆ ನಡೆದಿದೆ. ಬಂಟ್ವಾಳ ತಾಲೂಕಿನ ಕೊಳ್ನಾಡು ನಿವಾಸಿ ಮಹಮ್ಮದ್ ಅಸ್ಬೀರ್ (26) ಬಂಧಿತ ಆರೋಪಿ. ವಿಟ್ಲ ಪೊಲೀಸ್ ಉಪನಿರೀಕ್ಷಕ ಬಿ.ಎಸ್. ನಾಯಕ್ ಅವರ ನೇತೃತ್ವದಲ್ಲಿ ತಪಾಸಣೆ ನಡೆಯುತ್ತಿದ್ದಾ
May 61 min read


ಮುಂಗಾರು ಮುನ್ನ ಮಂಗಳೂರು ಸಜ್ಜು - ಭಾರೀ ಮಳೆ ಎದುರಿಸಲು ಜಿಲ್ಲಾಡಳಿತದ ಭರದ ಸಿದ್ಧತೆ
ಮುಂಗಾರು ಮಳೆಗಾಲದ ಸಿದ್ಧತೆಯ ಭಾಗವಾಗಿ ಜಿಲ್ಲಾಡಳಿತ ಸಮಗ್ರ ಯೋಜನೆಗಳನ್ನು ರೂಪಿಸಿದೆ. ವಿಕೇಂದ್ರೀಕೃತ ವ್ಯವಸ್ಥೆಯಡಿ ಪ್ರತಿ ಗ್ರಾಮ ಪಂಚಾಯತ್ ಮತ್ತು ವಾರ್ಡ್ಗಳಿಗೆ ಇನ್ಸಿಡೆಂಟ್ ಕಮಾಂಡರ್ಗಳನ್ನು ನೇಮಿಸಿ, ತುರ್ತು ಕಾರ್ಯಗಳಿಗೆ ತಲಾ 30,000 ರೂಪಾಯಿ ಅನುದಾನ ಬಿಡುಗಡೆ ಮಾಡಲಾಗಿದೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ 24/7 ಕಾರ್ಯನಿರ್ವಹಿಸುವ ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲಾಗಿದ್ದು, ಅಗ್ನಿಶಾಮಕ ದಳ ಮತ್ತು ಹೆದ್ದಾರಿ ಇಲಾಖೆಯೊಂದಿಗೆ ಸಮನ್ವಯ ಸಾಧಿಸಲಾಗಿದೆ. ಅಪಾಯಕಾರಿ ಮರಗಳ ತೆರವು, ಚರಂಡಿಗಳ ಹೂಳು ತೆಗೆಯುವುದು ಹಾಗೂ ಅಸುರಕ್ಷಿತ ಕಟ್ಟಡಗಳ ದುರಸ್ತಿಗೆ ಆದ್ಯತೆ ನೀಡಲಾಗಿದೆ. ಕಡಲತೀರಗಳಲ
May 61 min read


ಮಂಗಳೂರು: ಗುದದ್ವಾರದಲ್ಲಿ ಮೊಬೈಲ್ ಅಡಗಿಸಿ ಜೈಲು ಪ್ರವೇಶಿಸಲು ಯತ್ನಿಸಿದ ಕೈದಿ ಪತ್ತೆ
ಮಂಗಳೂರು, ಮೇ 01: ಆಸ್ಪತ್ರೆಯಿಂದ ಬಿಡುಗಡೆಯಾದ ಕೈದಿಯೊಬ್ಬನು ಗುದದ್ವಾರದಲ್ಲಿ ಮೊಬೈಲ್ ಅಡಗಿಸಿಕೊಂಡು ಜೈಲಿಗೆ ಪ್ರವೇಶಿಸಲು ಯತ್ನಿಸಿದ ಘಟನೆ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಮುಹಮ್ಮದ್ ತೋಹಿದ್ ಎಂಬ ಕೈದಿಯನ್ನು ಏಪ್ರಿಲ್ 24ರಂದು ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಬಳಿಕ ಏಪ್ರಿಲ್ 29ರಂದು ಡಿಸ್ಚಾರ್ಜ್ ಆಗಿದ್ದ ತೋಹಿದ್ ಅವರನ್ನು ಸಂಜೆ ವೇಳೆ ಮಂಗಳೂರು ಕೊಡಿಯಾಲ್ಬೈಲಿನ ಜಿಲ್ಲಾ ಕಾರಾಗೃಹಕ್ಕೆ ಕರೆದೊಯ್ಯಲಾಯಿತು. ಜೈಲಿನ ಪ್ರವೇಶದ್ವಾರದಲ್ಲಿ ಕರ್ತವ್ಯದಲ್ಲಿದ್ದ ಕೆಎಸ್ಐಎಸ್ಎಫ್ ಸಿಬ್ಬಂದಿ ಯಂತ್ರದ ಮೂಲಕ ತಪಾಸಣೆ ನಡೆಸಿದಾಗ ಸಂಶಯಾಸ್ಪದ
May 11 min read


ಕುಮಾರಧಾರ ನದಿಯಲ್ಲಿ, ನಾಪತ್ತೆಯಾಗಿದ 26 ವರ್ಷದ ಯುವಕನ ಮೃತದೇಹ ಪತ್ತೆ
ಕಡಬ: ಕುಮಾರಧಾರ ನದಿಯ ನೀರಿನ ಸೆಳೆತಕ್ಕೆ ಸಿಲುಕಿ ಸೋಮವಾರ ಸಂಜೆ ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆಯಾಗಿದೆ. ಮೃತರನ್ನು ಮಂಜು ಅವರ ಪುತ್ರ ರಕ್ಷಿತ್ (26) ಎಂದು ಗುರುತಿಸಲಾಗಿದೆ. ಸೋಮವಾರ ಸಂಜೆ ಐತ್ತೂರು ಗ್ರಾಮದ ಅರಬ್ಬಿ ತೋಡು ಪ್ರದೇಶದಲ್ಲಿ ರಕ್ಷಿತ್ ತನ್ನ ಸ್ನೇಹಿತರೊಂದಿಗೆ ಸ್ನಾನಕ್ಕೆ ತೆರಳಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ರಕ್ಷಿತ್ಗೆ ಈಜು ತಿಳಿದಿದ್ದರೂ ನದಿಯ ಬಲವಾದ ಸುಳಿಗೆ ಸಿಲುಕಿ ನೀರಿನಲ್ಲಿ ಮುಳುಗಿದ್ದಾನೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಘಟನೆ ನಡೆದ ತಕ್ಷಣ ಸ್ನೇಹಿತರು ಹಾಗೂ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕಡಬ ಪೊಲೀಸರು ಮತ್ತು ಪುತ್ತೂರಿನ ಅ
Apr 281 min read


ಕಡಬ: ಸ್ನಾನಕ್ಕೆಂದು ನದಿಗಿಳಿದ ಯುವಕ ನೀರಿನ ಸೆಳೆತಕ್ಕೆ ಸಿಲುಕಿ ನಾಪತ್ತೆ
ಕಡಬದ ಐತ್ತೂರು ಗ್ರಾಮದ ಅರಬ್ಬಿ ತೋಡಿನಲ್ಲಿ ಸ್ನಾನಕ್ಕೆಂದು ಇಳಿದಿದ್ದ ಯುವಕ ರಕ್ಷಿತ್ (26) ನೀರಿನ ಸೆಳೆತಕ್ಕೆ ಸಿಲುಕಿ ನಾಪತ್ತೆಯಾಗಿದ್ದಾರೆ. ಮೂಲತಃ ಮರ್ದಾಳದ ನಿವಾಸಿಯಾಗಿರುವ ಇವರು ರಬ್ಬರ್ ಟ್ಯಾಪಿಂಗ್ ಕೆಲಸ ಮಾಡುತ್ತಿದ್ದರು. ಸೋಮವಾರ ಸಂಜೆ ಸ್ನೇಹಿತರೊಂದಿಗೆ ನದಿಗೆ ತೆರಳಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಯುವಕ ನಾಪತ್ತೆಯಾದ ವಿಷಯ ತಿಳಿಯುತ್ತಿದ್ದಂತೆ ಕಡಬ ಪೊಲೀಸರು ಮತ್ತು ಸ್ಥಳೀಯರು ಸ್ಥಳಕ್ಕೆ ಧಾವಿಸಿ ತೀವ್ರ ಹುಡುಕಾಟ ನಡೆಸಿದ್ದಾರೆ. ಆದರೆ, ಕತ್ತಲಾದ ಕಾರಣ ಕಾರ್ಯಾಚರಣೆಗೆ ಅಡ್ಡಿಯಾಗಿದ್ದು, ಸದ್ಯ ನಾಪತ್ತೆಯಾದ ರಕ್ಷಿತ್ ಅವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಹೆಚ್ಚಿನ ಮಾ
Apr 271 min read


ರೈಲಿನಲ್ಲಿ ಹೆರಿಗೆ: ಪ್ರಯಾಣಿಕ ಮಹಿಳೆಯರ ಸಾಹಸ – ತಾಯಿ, ಮಗು ಸುರಕ್ಷಿತ
ಬಂಟ್ವಾಳ (ಬಿ.ಸಿ.ರೋಡ್), ಏ.27: ಮಂಗಳೂರುದಿಂದ ಬೆಂಗಳೂರು ಕಡೆಗೆ ಸಂಚರಿಸುತ್ತಿದ್ದ ರೈಲಿನಲ್ಲಿ ಗರ್ಭಿಣಿ ಮಹಿಳೆಗೆ ತುರ್ತು ಹೆರಿಗೆ ನಡೆಸಿದ ಘಟನೆ ಭಾನುವಾರ ಮುಸ್ಸಂಜೆ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ಸಮೀಪ ನಡೆದಿದೆ. ಮೈಸೂರು ಮೂಲದ ತುಂಬು ಗರ್ಭಿಣಿ ಮಹಿಳೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದಾಗ ಏಕಾಏಕಿ ಹೆರಿಗೆ ನೋವು ಕಾಣಿಸಿಕೊಂಡಿದೆ. ರೈಲು ಬಿ.ಸಿ.ರೋಡ್ ತಲುಪುವಷ್ಟರಲ್ಲಿ ಆಕೆಗೆ ತೀವ್ರ ರಕ್ತಸ್ರಾವವೂ ಉಂಟಾಗಿದ್ದು, ಪರಿಸ್ಥಿತಿ ಗಂಭೀರವಾಗಿದೆ. ಇದರಿಂದಾಗಿ ರೈಲನ್ನು ತಕ್ಷಣ ನಿಲ್ಲಿಸಿ, ವೈದ್ಯಕೀಯ ನೆರವಿಗಾಗಿ ಸುಮಾರು 30 ನಿಮಿಷಗಳ ಕಾಲ ಕಾಯಲಾಗಿದೆ. ಆದರೆ ಸಮಯಕ್ಕೆ ಸರಿಯಾಗಿ ವೈದ್ಯರು
Apr 271 min read


ದೈವದ ಭಂಡಾರ ಮೆರವಣಿಗೆ ವೇಳೆ ಕಾಲು ಸಂಕ ಕುಸಿತ; ಎಂಟು ಮಂದಿಗೆ ಗಾಯ
ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ತಾಲೂಕಿನ ಪುಚ್ಚೆಮೊಗರು ಬಾವದಬೈಲಿನಲ್ಲಿ ದೈವದ ಭಂಡಾರ ಮೆರವಣಿಗೆ ವೇಳೆ ಕಾಲು ಸಂಕ ಕುಸಿದು ಎಂಟು ಮಂದಿ ಗಾಯಗೊಂಡಿದ್ದಾರೆ. ತಾಕೋಡೆ ಬರ್ಕೆ ಧರ್ಮನೇಮಕ್ಕೆ ದೈವದ ಭಂಡಾರವನ್ನು ಪಲ್ಲಕ್ಕಿಯಲ್ಲಿ ಹೊತ್ತು ಸಾಗಿಸುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಸಂಕವು ಏಕಾಏಕಿ ಕುಸಿದ ಪರಿಣಾಮ ಪಲ್ಲಕ್ಕಿ ಉರುಳಿ ಬಿದ್ದಿದ್ದು, ಗಾಯಾಳುಗಳನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಅವಘಡದಲ್ಲಿ ಪಲ್ಲಕ್ಕಿಯಲ್ಲಿದ್ದ ದೈವದ ಮೊಗಮೂರ್ತಿ ಹಾಗೂ ಇತರ ಧಾರ್ಮಿಕ ಪರಿಕರಗಳಿಗೆ ಹಾನಿಯುಂಟಾಗಿದೆ. ಪಲ್ಲಕ್ಕಿ ಹೊತ್ತವರು ಮತ್ತು ಮೆರವಣಿಗೆಯಲ್ಲಿದ್ದ ಭಕ್
Apr 251 min read


ಎಸ್ಎಸ್ಎಲ್ಸಿ ಫಲಿತಾಂಶ: ಅಂಧ ವಿದ್ಯಾರ್ಥಿನಿಗೆ ಕೊನೆಗೂ ಸಿಕ್ಕಿತು ನ್ಯಾಯ
ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಅಂಧ ವಿದ್ಯಾರ್ಥಿನಿ ಲೀಸಾ ಖಾನಮ್ ಅವರಿಗೆ ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ಸಂಭವಿಸಿದ್ದ ಅನ್ಯಾಯಕ್ಕೆ ಕೊನೆಗೂ ನ್ಯಾಯ ದೊರೆತಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ತಾಂತ್ರಿಕ ದೋಷದಿಂದ ಆರಂಭಿಕ ಫಲಿತಾಂಶದಲ್ಲಿ ಕೆಲವು ವಿಷಯಗಳಿಗೆ ‘ಗೈರು ಹಾಜರು’ ಎಂದು ನಮೂದಿಸಲಾಗಿದ್ದು, ಅವರು ಅನುತ್ತೀರ್ಣರಾಗಿದ್ದಾರೆ ಎಂಬ ತಪ್ಪು ಮಾಹಿತಿ ಹರಡಿತ್ತು. ಈ ಘಟನೆಯಿಂದ ಆತಂಕಕ್ಕೊಳಗಾದ ವಿದ್ಯಾರ್ಥಿನಿ ಹಾಗೂ ಕುಟುಂಬದವರ ಮನಸ್ಥಿತಿ ಅತೀವ ದುಃಖಕರವಾಗಿತ್ತು. ಆದರೆ ವಿಷಯದ ಗಂಭೀರತೆಯನ್ನು ಅರಿತ ಸ್ಥಳೀಯ ಶಾಸಕರು ಮತ್ತು ಶಿಕ್ಷಣ ಇಲಾಖೆಯ ಹಿರಿಯ ಅಧಿ
Apr 251 min read


ಪುತ್ತೂರು :ಮದುವೆ ಭರವಸೆ ಪ್ರಕರಣಹೈಕೋರ್ಟ್ ಮಧ್ಯಂತರ ತಡೆ, ₹75 ಸಾವಿರ ಪಾವತಿ ಆದೇಶ
ಬೆಂಗಳೂರು, ಏಪ್ರಿಲ್ 24: ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿ, ನಂತರ ಆಕೆ ಮಗುವಿಗೆ ಜನ್ಮ ನೀಡಿದ ಬಳಿಕ ವಂಚನೆ ಮಾಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ಮಧ್ಯಂತರ ಆದೇಶ ಹೊರಡಿಸಿದೆ. ಪುತ್ತೂರಿನ ಬಿಜೆಪಿ ಮಾಜಿ ಮುಖಂಡನ ಪುತ್ರ ಕೃಷ್ಣ ಜೆ. ರಾವ್ ಸಲ್ಲಿಸಿದ್ದ ಪ್ರಕರಣ ರದ್ದು ಅರ್ಜಿಯನ್ನು ವಿಚಾರಿಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ, ಪ್ರಕರಣಕ್ಕೆ ತಾತ್ಕಾಲಿಕ ತಡೆ ನೀಡಿದರೂ, ಕಟ್ಟುನಿಟ್ಟಿನ ಷರತ್ತುಗಳನ್ನು ವಿಧಿಸಿದೆ. ಈ ಪ್ರಕರಣದಲ್ಲಿ ಪ್ರಮುಖವಾಗಿ ಗಮನಸೆಳೆದ ಅಂಶವೆಂದರೆ, ಆರೋಪಿಯೊಂದಿಗೆ ದೈಹಿಕ ಸಂಬಂಧದಿಂದ ಯುವತಿಗೆ
Apr 241 min read


ಮಂಗಳೂರಿನಲ್ಲಿ ಹೈಕೋರ್ಟ್ ಸರ್ಕ್ಯೂಟ್ ಪೀಠ ಸ್ಥಾಪನೆಗೆ ಚಾಲನೆ: ಕಾರ್ಯಸಾಧ್ಯತೆ ಪರಿಶೀಲನೆಗೆ ಸಮಿತಿ ರಚನೆ
ಮಂಗಳೂರಿನಲ್ಲಿ ಹೈಕೋರ್ಟ್ ಸರ್ಕ್ಯೂಟ್ ಪೀಠ ಸ್ಥಾಪನೆಯ ದಶಕಗಳ ಬೇಡಿಕೆಗೆ ಈಗ ಹೊಸ ಚೈತನ್ಯ ಬಂದಿದೆ. ಈ ಪ್ರಸ್ತಾವನೆಯ ಕಾರ್ಯಸಾಧ್ಯತೆಯನ್ನು ಪರಿಶೀಲಿಸಲು ಶೀಘ್ರದಲ್ಲೇ ವಿಶೇಷ ಸಮಿತಿಯೊಂದನ್ನು ರಚಿಸಲಾಗುವುದು ಎಂದು ಕರ್ನಾಟಕ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಅವರು ಭರವಸೆ ನೀಡಿದ್ದಾರೆ. ಈ ಬೆಳವಣಿಗೆಯು ಕರಾವಳಿ ಭಾಗದ ಜನರಲ್ಲಿ ನ್ಯಾಯಾಂಗ ವಿಕೇಂದ್ರೀಕರಣದ ಆಶಾವಾದವನ್ನು ಮೂಡಿಸಿದೆ. ವಿಧಾನ ಪರಿಷತ್ ಸದಸ್ಯ ಐವನ್ ಡಿ'ಸೋಜಾ ನೇತೃತ್ವದ ಕ್ರಿಯಾ ಸಮಿತಿಯು ಇತ್ತೀಚೆಗೆ ಮುಖ್ಯ ನ್ಯಾಯಮೂರ್ತಿಗಳು ಹಾಗೂ ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತ್ತು. ಮೂಲಸೌಕರ್ಯಗಳ ಪರಿಶೀಲನೆಗಾಗ
Apr 211 min read
Archive
bottom of page



