top of page
News Articles
Sathyapatha News Plus


ಇಂದಿನ ಚಿನ್ನ ಮತ್ತು ಬೆಳ್ಳಿ ದರ ವಿವರ
ಬೆಂಗಳೂರು: ಇಂದು ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಹೊಸ ಬದಲಾವಣೆ ಕಂಡುಬಂದಿದೆ. 24 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ ₹1,53,170 ಆಗಿದ್ದು, 22 ಕ್ಯಾರೆಟ್ ಚಿನ್ನ ₹1,40,400 ತಲುಪಿದೆ. ಅದೇ ರೀತಿ 18 ಕ್ಯಾರೆಟ್ ಚಿನ್ನದ ಬೆಲೆ ₹1,14,880 ಆಗಿದೆ. ಇನ್ನು ಪ್ರತಿ 1 ಕೆಜಿ ಬೆಳ್ಳಿಯ ದರ ₹2,45,000 ದಾಖಲಾಗಿದೆ.
1 day ago1 min read


ಸೆ.21ರಿಂದ ವಿಧಾನಮಂಡಲ ವಿಶೇಷ ಅಧಿವೇಶನ: ಕಸ್ತೂರಿ ರಂಗನ್ ವರದಿ ಕುರಿತು ಚರ್ಚೆ?
ಬೆಂಗಳೂರು: ರಾಜ್ಯದಲ್ಲಿ ಉಂಟಾಗಿರುವ ಭೀಕರ ಬರಗಾಲ, ಕುಡಿಯುವ ನೀರು ಮತ್ತು ಮೇವಿನ ಅಭಾವ ಹಾಗೂ ಪಶ್ಚಿಮ ಘಟ್ಟಗಳ ಕಸ್ತೂರಿ ರಂಗನ್ ವರದಿ ಕುರಿತು ವಿಸ್ತೃತ ಚರ್ಚೆ ನಡೆಸಲು ರಾಜ್ಯ ಸರ್ಕಾರ ಸೆಪ್ಟೆಂಬರ್ 21 ರಿಂದ 23 ರವರೆಗೆ ಮೂರು ದಿನಗಳ ಕಾಲ ವಿಧಾನಮಂಡಲದ ವಿಶೇಷ ಅಧಿವೇಶನ ಕರೆದಿದೆ. ಈ ಕಲಾಪದಲ್ಲಿ ಕಸ್ತೂರಿ ರಂಗನ್ ವರದಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಹೊರಡಿಸಿರುವ 7ನೇ ಕರಡು ಅಧಿಸೂಚನೆ, ತೋಟಗಾರಿಕೆ ಫಾರ್ಮ್ಗಳ ಜಮೀನು ಪರಭಾರೆ ತಿದ್ದುಪಡಿ ವಿಧೇಯಕ ಹಾಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಮರುಪರಿಶೀಲನೆ ಸೇರಿದಂತೆ ಪ್ರಮುಖ ವಿಷಯಗಳ ಬಗ್ಗೆ ಚರ್ಚೆ ನಡೆಯಲಿದೆ.
1 day ago1 min read


ಕಾಲಿನ ನೋವಿನಿಂದ ಆಸ್ಪತ್ರೆ ಸೇರಿದ ನಿರ್ದೇಶಕ ಓಂ ಪ್ರಕಾಶ್ ರಾವ್: ಬಿಗ್ಬಾಸ್ಗೆ ಮತ್ತೆ ಕಮ್ಬ್ಯಾಕ್ ಮಾಡ್ತಾರಾ?
ಬಿಗ್ಬಾಸ್ ಮನೆಗೆ ಎರಡನೇ ಬಾರಿಗೆ ಎಂಟ್ರಿ ಕೊಟ್ಟಿದ್ದ ಖ್ಯಾತ ನಿರ್ದೇಶಕ ಓಂ ಪ್ರಕಾಶ್ ರಾವ್ ಅವರು ಅನಾರೋಗ್ಯದ ಕಾರಣದಿಂದ ಮನೆಯಿಂದ ಹೊರಬಂದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಹಳೆಯ ಅಪಘಾತದಲ್ಲಿ ಗಾಯಗೊಂಡಿದ್ದ ಅವರ ಕಾಲಿನಲ್ಲಿ ಮತ್ತೆ ಊತ ಮತ್ತು ತೀವ್ರ ನೋವು ಕಾಣಿಸಿಕೊಂಡಿದೆ. Q ವಿಮಾನದ ಸೀಟಿನಲ್ಲಿ ಕುಳಿತಿರಬೇಕಾದ ಸನ್ನಿವೇಶ ಹಾಗೂ ಬಿಗ್ಬಾಸ್ ಟಾಸ್ಕ್ಗಳಲ್ಲಿ ನಿರಂತರವಾಗಿ ಭಾಗವಹಿಸಿದ್ದೇ ಈ ನೋವಿಗೆ ಕಾರಣ ಎನ್ನಲಾಗಿದೆ. ಪ್ರಸ್ತುತ ವೈದ್ಯಕೀಯ ತಪಾಸಣೆ ಮತ್ತು ಚಿಕಿತ್ಸೆ ಪಡೆಯುತ್ತಿರುವ ಅವರು ಗುಣಮುಖರಾದ ಬಳಿಕ ಮತ್ತೆ ದೊಡ್ಮನೆಗೆ ಮರಳುವ ಸಾಧ್ಯತೆಯಿದೆ.
1 day ago1 min read


ಕಾಲೇಜು ಚುನಾವಣೆಯಲ್ಲಿ ವಿದ್ಯಾರ್ಥಿಗಳ ಮಧ್ಯೆ ತಾರತಮ್ಯ ಮಾಡಬೇಡಿ: ಪವನ್ ಕುಮಾರ್ ಶಿರ್ವ ಒತ್ತಾಯ
ಮಂಗಳೂರು ವಿಶ್ವವಿದ್ಯಾಲಯದ ಕಾಲೇಜು ಚುನಾವಣೆಯು ‘ಎಲ್ಲಾ ವಿದ್ಯಾರ್ಥಿಗಳು ಒಂದೇ’ ಎಂಬುದಕ್ಕೆ ಸಾಕ್ಷಿಯಾಗಿದೆ. ಆದ್ದರಿಂದ ಚುನಾವಣೆಯಲ್ಲಿ ಯಾವುದೇ ಕಾರಣಕ್ಕೂ ವಿದ್ಯಾರ್ಥಿಗಳ ಮಧ್ಯೆ ತಾರತಮ್ಯ ಮಾಡಬಾರದು ಎಂದು ಪವನ್ ಕುಮಾರ್ ಶಿರ್ವ ಹೇಳಿದ್ದಾರೆ. ಈ ಹಿಂದೆ ನಡೆದುಕೊಂಡು ಬಂದಿರುವ ಪದ್ಧತಿ ಮತ್ತು ಸಂಪ್ರದಾಯದಂತೆಯೇ ಮುಂದೆಯೂ ಕಾಲೇಜು ಚುನಾವಣೆಗಳನ್ನು ನಡೆಸುವುದು ಅತ್ಯಂತ ಸೂಕ್ತವಾಗಿದೆ. ಇದು ವಿದ್ಯಾರ್ಥಿಗಳಲ್ಲಿ ಸಮಾನತೆ ಮತ್ತು ಒಗ್ಗಟ್ಟನ್ನು ಕಾಯ್ದುಕೊಳ್ಳಲು ನೆರವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
2 days ago1 min read


PhD ನಕಲಿ ಶಂಕೆ: 452 ಬೋಧಕರಿಗೆ ಕಾಲೇಜು ಶಿಕ್ಷಣ ಇಲಾಖೆ ಶಾಕ್!
ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ 452 ಅತಿಥಿ ಉಪನ್ಯಾಸಕರ ಪಿಎಚ್ಡಿ (PhD) ಪದವಿಯ ಸತ್ಯಾಸತ್ಯತೆ ಪರಿಶೀಲನೆಗೆ ಕಾಲೇಜು ಶಿಕ್ಷಣ ಇಲಾಖೆ ಮುಂದಾಗಿದೆ. 2025-26ರ ನೇಮಕಾತಿಯಲ್ಲಿ 'PhD ಇದೆ' ಎಂದು ನಮೂದಿಸಿದ್ದ ಅಭ್ಯರ್ಥಿಗಳು, 2026-27ರ ಆನ್ಲೈನ್ ಅರ್ಜಿಯಲ್ಲಿ ಈ ಅರ್ಹತೆಯನ್ನು ಕ್ಲೇಮ್ ಮಾಡದಿರುವುದು ಅನುಮಾನಕ್ಕೆ ಕಾರಣವಾಗಿದೆ. ಈ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ಇಲಾಖೆಯು ಸಂಬಂಧಪಟ್ಟ ಉಪನ್ಯಾಸಕರಿಗೆ ನೋಟಿಸ್ ಜಾರಿ ಮಾಡಿದೆ. ನೋಟಿಸ್ ಪಡೆದವರಲ್ಲಿ ಕಲಬುರಗಿ, ಯಾದಗಿರಿ, ಬೀದರ್, ಹುಬ್ಬಳ್ಳಿ ಹಾಗೂ ರಾಯಚೂರು ಸೇರಿದಂತೆ ಉತ್ತರ ಕರ್ನಾಟಕ ಭಾಗದವರೇ ಹೆಚ್ಚಾಗಿದ್ದಾ
2 days ago1 min read


ಅನ್ನಭಾಗ್ಯ ಪಡಿತರ: 75 ವರ್ಷ ಮೇಲ್ಪಟ್ಟ ಹಿರಿಯರಿಗೆ ಬೆರಳಚ್ಚಿನಿಂದ ವಿನಾಯಿತಿ, ಮನೆಬಾಗಿಲಿಗೆ ರೇಷನ್!
ಕರ್ನಾಟಕ ಸರ್ಕಾರವು ಅನ್ನಭಾಗ್ಯ ಯೋಜನೆಯಡಿ ಪಡಿತರ ಪಡೆಯುವ ಬಿಪಿಎಲ್ (BPL) ಕಾರ್ಡ್ದಾರರಿಗೆ ಮಹತ್ವದ ಪರಿಹಾರ ನೀಡಲು ಮುಂದಾಗಿದೆ. 75 ವರ್ಷ ಮೇಲ್ಪಟ್ಟ ವಯೋವೃದ್ಧರು, ಅನಾರೋಗ್ಯ ಪೀಡಿತರು ಮತ್ತು ದೈಹಿಕ ಶ್ರಮದಿಂದ ಬೆರಳಚ್ಚು ಸವೆದು ಪಡಿತರ ವಂಚಿತರಾಗುತ್ತಿದ್ದ ಫಲಾನುಭವಿಗಳಿಗೆ ಇನ್ಮುಂದೆ ಬಯೋಮೆಟ್ರಿಕ್ ಬೆರಳಚ್ಚಿನಿಂದ ವಿನಾಯಿತಿ ನೀಡಲಾಗುತ್ತಿದೆ. ವಯೋಸಹಜವಾಗಿ ಬೆರಳಿನ ರೇಖೆಗಳು ಸವೆದು ಯಂತ್ರದಲ್ಲಿ ಪತ್ತೆಯಾಗದಿರುವುದು ಮತ್ತು ನೆಟ್ವರ್ಕ್ ಸಮಸ್ಯೆಯಿಂದ ಸಾರ್ವಜನಿಕರು ಎದುರಿಸುತ್ತಿದ್ದ ತೊಂದರೆಯನ್ನು ತಪ್ಪಿಸಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಈ ಕ್ರಮ ಕೈಗೊಂಡಿದೆ. ಇಂತಹ ಅರ
2 days ago1 min read


ಗಣೇಶೋತ್ಸವ: ಧಾರ್ಮಿಕ ಹಬ್ಬದ ಜತೆಗೆ ಸಾವಿರಾರು ಕೋಟಿ ವಹಿವಾಟು
ಮುಂಬೈ: ಗಣೇಶೋತ್ಸವ ದೇಶದ ಪ್ರಮುಖ ಧಾರ್ಮಿಕ ಹಬ್ಬಗಳಲ್ಲೊಂದಾಗಿರುವುದರ ಜತೆಗೆ, ವಿವಿಧ ವಲಯಗಳಲ್ಲಿ ದೊಡ್ಡ ಪ್ರಮಾಣದ ಆರ್ಥಿಕ ಚಟುವಟಿಕೆಗೆ ಕಾರಣವಾಗುತ್ತಿದೆ. 2024ರಲ್ಲಿ ಗಣೇಶೋತ್ಸವಕ್ಕೆ ಸಂಬಂಧಿಸಿದ ವಹಿವಾಟು ಸುಮಾರು ₹25,000 ಕೋಟಿ ಇದ್ದರೆ, 2025ರಲ್ಲಿ ಅದು ₹45,000 ಕೋಟಿಗೆ ಏರಿಕೆಯಾಗಿದೆ ಎಂದು ಅಂದಾಜಿಸಲಾಗಿದೆ. 2026ರಲ್ಲಿ ಈ ಪ್ರಮಾಣ ಸುಮಾರು ₹60,000 ಕೋಟಿ ತಲುಪುವ ನಿರೀಕ್ಷೆ ಇದೆ. ಗಣೇಶ ಮೂರ್ತಿಗಳ ಮಾರಾಟ, ಸಿಹಿ-ಮೋದಕ, ಕ್ಯಾಟರಿಂಗ್, ಅಲಂಕಾರ, ಲೈಟಿಂಗ್, ಬಟ್ಟೆ ಮತ್ತು ಜವಳಿ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಹಬ್ಬದ ಸಂದರ್ಭದಲ್ಲಿ ವಹಿವಾಟು ಹೆಚ್ಚಾಗುತ್ತದೆ. ಲಭ್ಯವಿರುವ ಅಂ
3 days ago1 min read


ಮೂರು ಗಂಟೆಗಳ ಕಾಲ ಸುಳ್ಯ ನಗರ ಬ್ಲಾಕ್: ಸಾರ್ವಜನಿಕರಿಗೆ ತೀವ್ರ ತೊಂದರೆ — ತುರ್ತು ಸೇವೆಗಳಿಗೂ ಅಡ್ಡಿಯಾಗಿದ್ದರೆ ಹೊಣೆ ಯಾರು?
ಸುಳ್ಯ: ಸುಮಾರು 500 ಮಂದಿಯ ಮೆರವಣಿಗೆಗಾಗಿ ಸುಳ್ಯ ನಗರದ ಪ್ರಮುಖ ರಸ್ತೆಯೇ ಸುಮಾರು ಮೂರು ಗಂಟೆಗಳ ಕಾಲ ಬಂದ್ ಆಗಿದ್ದರಿಂದ ವಿದ್ಯಾರ್ಥಿಗಳು, ಉದ್ಯೋಗಿಗಳು ಹಾಗೂ ಸಾರ್ವಜನಿಕರು ಪರದಾಡುವಂತಾದ ಘಟನೆ ಸೆ.11ರಂದು ನಡೆದಿದೆ. ಯಾವುದೇ ಪರ್ಯಾಯ ಮಾರ್ಗದ ವ್ಯವಸ್ಥೆಯಿಲ್ಲದೆ ಮುಖ್ಯ ರಸ್ತೆಯಲ್ಲಿ ಸಂಚಾರ ಸಂಪೂರ್ಣ ಸ್ಥಗಿತಗೊಂಡ ಪರಿಣಾಮ ನಗರದಲ್ಲಿ ಭಾರೀ ಸಂಚಾರ ದಟ್ಟಣೆ ಉಂಟಾಯಿತು. ಪ್ರವಾದಿ ಮುಹಮ್ಮದ್ ಅವರ ಜನ್ಮದಿನದ ಅಂಗವಾಗಿ ನಡೆದ ಕಾಲ್ನಡಿಗೆ ಜಾಥಾ ಹಾಗೂ ದಫ್ ಪ್ರದರ್ಶನ ಸಂಜೆ 4 ಗಂಟೆಗೆ ನಿಗದಿಯಾಗಿತ್ತು. ಆದರೆ ಮೆರವಣಿಗೆ ರಾತ್ರಿ 7.30ರವರೆಗೂ ಮುಂದುವರಿದ ಪರಿಣಾಮ ಈ ಅವಧಿಯಲ್ಲಿ ಮುಖ್ಯ ರಸ್ತ
4 days ago1 min read


ಪ್ರಜ್ವಲ್ ರೇವಣ್ಣ ಜೈಲು ಮೊಬೈಲ್ ರಹಸ್ಯ ಬಯಲು: 7 ಜನರ ವಿರುದ್ಧ ಎಫ್ಐಆರ್!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅಕ್ರಮವಾಗಿ ಬಳಸಿದ್ದ ಮೊಬೈಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳ್ಳಾಟಕ್ಕೆ ಸಾಥ್ ನೀಡಿದ ಏಳು ಜನರ ವಿರುದ್ಧ ಪ್ರಸ್ತುತ ಕೇಸ್ ದಾಖಲಾಗಿದೆ. ಪೊಲೀಸರ ತನಿಖೆಯಲ್ಲಿ ಈ ಪ್ರಕರಣದ ಲಿಂಕ್ ಡಿಜೆ ಹಳ್ಳಿಗೆ ತಲುಪಿದ್ದು, ಪ್ರತಾಪ್ ರಾವ್, ತೌಸಿಪ್, ಸಿದ್ದಿಕ್, ಪ್ರಕಾಶ್ ಹಾಗೂ ಮಂಜುನಾಥ್ ಸೇರಿದಂತೆ 7 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಜೈಲಿನಲ್ಲಿ ಪರಿಚಯವಾಗಿದ್ದ ಗಲಭೆ ಪ್ರಕರಣದ ಆರೋಪಿಗಳಿಂದ ಪ್ರಜ್ವಲ್ 1 ಲಕ್ಷ ರೂ.ಗೆ ಮೊಬೈಲ್ ಹಾಗೂ 50 ಸಾವಿರ ರೂ.ಗೆ ಸಿಮ್ ಪಡೆದಿದ್ದರು ಎನ್ನಲಾಗಿದೆ. ಆಂಧ್ರದ ಪುಂಗನೂರಿನಿಂದ ತಂದಿದ್ದ ಈ ಸಿಮ್ ಮೂಲ
4 days ago1 min read


ದೆಹಲಿಯ ಭಾರತ ಮಂಟಪದಲ್ಲಿ ಬ್ರಿಕ್ಸ್ ಶೃಂಗಸಭೆ: ಪುಟಿನ್ಗೆ 'ತಿರುಕ್ಕುರಳ್' ರಷ್ಯನ್ ಆವೃತ್ತಿ ಉಡುಗೊರೆ ನೀಡಿದ ಪ್ರಧಾನಿ ಮೋದಿ
ನವದೆಹಲಿ: ಇಲ್ಲಿನ ‘ಭಾರತ ಮಂಟಪ’ದಲ್ಲಿ ನಡೆಯುತ್ತಿರುವ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲು ಆಗಮಿಸಿದ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಆತ್ಮೀಯವಾಗಿ ಅಪ್ಪಿಕೊಳ್ಳುವ ಮೂಲಕ ಸ್ವಾಗತಿಸಿದರು. ಈ ವೇಳೆ ಉಭಯ ನಾಯಕರ ನಡುವೆ ಉನ್ನತ ಮಟ್ಟದ ದ್ವಿಪಕ್ಷೀಯ ಸಭೆ ನಡೆಯಿತು. ಜಾಗತಿಕ ರಾಜಕೀಯ ಮತ್ತು ಆರ್ಥಿಕ ವಿದ್ಯಮಾನಗಳ ಹಿನ್ನೆಲೆಯಲ್ಲಿ ನಡೆದ ಈ ಭೇಟಿಯು ಭಾರತ ಮತ್ತು ರಷ್ಯಾ ನಡುವಿನ ಸುದೀರ್ಘ ರಾಜತಾಂತ್ರಿಕ ಹಾಗೂ ತಾಂತ್ರಿಕ ಸಂಬಂಧಗಳನ್ನು ಮತ್ತಷ್ಟು ಗಟ್ಟಿಗೊಳಿಸಿದೆ. ಸಭೆಯ ಪ್ರಮುಖ ಆಕರ್ಷಣೆಯಾಗಿ, ಪ್ರಧಾನಿ ಮೋದಿ ಅವರು ತಮಿಳು ದಾರ್ಶನಿಕ ಸ
5 days ago1 min read


80s AI Trend: ನಿಮ್ಮ ಸೌಂದರ್ಯದ ಫೋಟೋ ಸೈಬರ್ ಅಪರಾಧಿಗಳ ಕೈಗೆ? ಜಾಗ್ರತೆ!
ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುವ '1980ರ ದಶಕದ AI ಫೋಟೋ ಟ್ರೆಂಡ್' ಬಳಕೆದಾರರ ಭದ್ರತೆಗೆ ದೊಡ್ಡ ಅಪಾಯ ತಂದೊಡ್ಡಬಹುದು ಎಂದು ಸೈಬರ್ ತಜ್ಞರು ಎಚ್ಚರಿಸಿದ್ದಾರೆ. ನಿಮ್ಮ ಸೆಲ್ಫಿಗಳನ್ನು 80ರ ದಶಕದ ವಿಂಟೇಜ್ ಲುಕ್ಗೆ ಬದಲಾಯಿಸುವ ಈ ಆಪ್ಗಳಿಗೆ ಮೂಲ ಫೋಟೋಗಳನ್ನು ಅಪ್ಲೋಡ್ ಮಾಡುವುದರಿಂದ ಮುಖದ ಡೇಟಾ (Facial Data) ಕಳುವಾಗುವ ಸಾಧ್ಯತೆಯಿದೆ. ಈ ಛಾಯಾಚಿತ್ರಗಳನ್ನು ಸೈಬರ್ ಅಪರಾಧಿಗಳು ಡೀಪ್ಫೇಕ್ ತಂತ್ರಜ್ಞಾನಕ್ಕೆ, ಅಕ್ರಮ ಚಟುವಟಿಕೆಗಳಿಗೆ ಅಥವಾ ಡಾರ್ಕ್ ವೆಬ್ನಲ್ಲಿ ಮಾರಾಟ ಮಾಡಲು ದುರುಪಯೋಗಪಡಿಸಿಕೊಳ್ಳಬಹುದು. ವಿಶೇಷವಾಗಿ ಯುವತಿಯರು ತಮ್ಮ ಫೋಟೋಗಳನ್ನು ಅಪ್ಲೋಡ್ ಮಾಡುವಾ
5 days ago1 min read


ಶಬರಿಮಲೆಯಲ್ಲಿ ಇನ್ಮುಂದೆ ದಿನಕ್ಕೆ 5 ಪಡಿಪೂಜೆ: ಹೊಸ ಬುಕಿಂಗ್ಗೆ ದೇವಸ್ವಂ ಮಂಡಳಿ ಮಹತ್ವದ ನಿರ್ಧಾರ
ಶಬರಿಮಲೆ: ಶಬರಿಮಲೆಯ ಅತ್ಯಂತ ಪವಿತ್ರ ಪಡಿಪೂಜೆ ಬುಕಿಂಗ್ ಕುರಿತು ತಿರುವಾಂಕೂರು ದೇವಸ್ವಂ ಮಂಡಳಿಯು ಪ್ರಮುಖ ನಿರ್ಧಾರ ಕೈಗೊಂಡಿದೆ. ಇನ್ಮುಂದೆ ದೇವಾಲಯದಲ್ಲಿ ದಿನಕ್ಕೆ ಐದು ಪಡಿಪೂಜೆಗಳನ್ನು ನೆರವೇರಿಸಲು ನಿರ್ಧರಿಸಲಾಗಿದ್ದು, ಈ ಕುರಿತು ಕೇರಳ ಹೈಕೋರ್ಟ್ನ ದೇವಸ್ವಂ ಪೀಠಕ್ಕೆ ಮಾಹಿತಿ ನೀಡಲಾಗಿದೆ. ಪ್ರಸ್ತುತ ಕಾಯ್ದಿರಿಸಲಾದ ಪೂಜೆಗಳು ಮುಗಿದ ನಂತರವಷ್ಟೇ ಹೊಸ ಬುಕಿಂಗ್ಗಳನ್ನು ಸ್ವೀಕರಿಸಲಾಗುವುದು ಎಂದು ಮಂಡಳಿ ತಿಳಿಸಿದೆ. ಅಲ್ಲದೆ, ಈಗಾಗಲೇ ಬುಕ್ ಮಾಡಿರುವ ಭಕ್ತರ ವಿವರಗಳನ್ನು ಡಿಜಿಟಲೀಕರಣಗೊಳಿಸಲಾಗುತ್ತಿದ್ದು, ಮೃತಪಟ್ಟವರ ಹೆಸರುಗಳನ್ನು ಪಟ್ಟಿಯಿಂದ ತೆರವುಗೊಳಿಸಲಾಗುತ್ತಿದೆ. ಅಯ್ಯ
5 days ago1 min read


ಯಶವಂತಪುರ–ಮಂಗಳೂರು ವಂದೇ ಭಾರತ್ 2ನೇ ಟ್ರಯಲ್ ರನ್ ಯಶಸ್ವಿ: ನಿಗದಿತ ಸಮಯಕ್ಕೂ ಮುನ್ನ ಸಂಚಾರ ಪೂರ್ಣ!
ಬೆಂಗಳೂರು: ಬಹುನಿರೀಕ್ಷಿತ ಯಶವಂತಪುರ ಹಾಗೂ ಮಂಗಳೂರು ಜಂಕ್ಷನ್ ನಡುವಿನ 16 ಬೋಗಿಗಳ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ 2ನೇ ಪ್ರಾಯೋಗಿಕ ಸಂಚಾರ (ಟ್ರಯಲ್ ರನ್) ಯಶಸ್ವಿಯಾಗಿ ಪೂರ್ಣಗೊಂಡಿದೆ. ದಕ್ಷಿಣ ಪಶ್ಚಿಮ ರೈಲ್ವೆಯ ತಾಂತ್ರಿಕ ಅಧಿಕಾರಿಗಳು ಮತ್ತು ಸಿಬ್ಬಂದಿ ಈ ಪ್ರಯಾಣದಲ್ಲಿ ಪಾಲ್ಗೊಂಡು ರೈಲಿನ ಸಂಚಾರ ಸಮಯ, ಕಾರ್ಯಾಚರಣೆ ಹಾಗೂ ಸುರಕ್ಷತಾ ಮಾನದಂಡಗಳನ್ನು ಕೂಲಂಕಷವಾಗಿ ಪರಿಶೀಲಿಸಿದರು. ಘಾಟ್ ಪ್ರದೇಶದಲ್ಲಿ ವಿದ್ಯುತ್ ಮತ್ತು ಎಂಜಿನಿಯರಿಂಗ್ ವಿಭಾಗದ ಅಧಿಕಾರಿಗಳು ರೈಲಿನ ವೇಗವನ್ನು ಪರೀಕ್ಷಿಸಿದ್ದು, ಈ ಬಾರಿಯ ಟ್ರಯಲ್ ರನ್ ನಿಗದಿತ ಸಮಯಕ್ಕಿಂತ ಮುಂಚಿತವಾಗಿಯೇ ತಲುಪಿದೆ. ಮೊದಲ ಟ್ರಯಲ
5 days ago1 min read


ಇನ್ಮುಂದೆ ವಾಟ್ಸಾಪ್ ಮೂಲಕವೇ ಕೆಎಸ್ಆರ್ಟಿಸಿ ಬಸ್ ಟಿಕೆಟ್ ಬುಕ್ ಮಾಡಿ
ಬೆಂಗಳೂರು: ದಸರಾ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಸಂಚಾರವನ್ನು ಸುಲಭಗೊಳಿಸಲು ಕರ್ನಾಟಕ ಸರಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಸರಕಾರದ ಈ ನೂತನ ಸೇವೆಯಡಿ, ಪ್ರಯಾಣಿಕರು ಈಗ ನೇರವಾಗಿ ವಾಟ್ಸಾಪ್ ಮೂಲಕ ಕೆಎಸ್ಆರ್ಟಿಸಿ ಬಸ್ ಟಿಕೆಟ್ಗಳನ್ನು ಬುಕ್ ಮಾಡಬಹುದು. ಇದುವರೆಗೆ ಟಿಕೆಟ್ಗಾಗಿ ಬಸ್ ನಿಲ್ದಾಣಗಳಲ್ಲಿ ಸರತಿ ಸಾಲಿನಲ್ಲಿ ನಿಲ್ಲುವ ಅಥವಾ ಆನ್ಲೈನ್ ಪೋರ್ಟಲ್ಗಳ ಮೂಲಕ ಕಾಯ್ದಿರಿಸುವ ಅನಿವಾರ್ಯತೆ ಇತ್ತು. ಆದರೆ ಈಗ, ನಿಮ್ಮ ಸ್ಮಾರ್ಟ್ಫೋನ್ನಲ್ಲಿ ವಾಟ್ಸಾಪ್ ತೆರೆದು, ನಿಗಮದ ಅಧಿಕೃತ ಸಂಖ್ಯೆಗೆ ಸಂದೇಶ ಕಳುಹಿಸುವ ಮೂಲಕ ಸುಲಭವಾಗಿ ಟಿಕೆಟ್ ಕಾಯ್ದಿರಿಸಬಹುದು. ಈ ಸೇವೆಯು ಬೆಂಗಳೂರು ಮ
5 days ago1 min read


ರಾಜ್ಯದಲ್ಲಿ ಅಸ್ತವ್ಯಸ್ತ ಹವಾಮಾನ: ಉಷ್ಣಾಂಶ ಏರಿಕೆಯಿಂದ ಜನರ ಆರೋಗ್ಯಕ್ಕೆ ಕಂಗೆಡಿಸುವ ಭೀತಿ
ಬೆಂಗಳೂರು: ರಾಜ್ಯದಲ್ಲಿ ಹವಾಮಾನ ವೈಪರೀತ್ಯ ತೀವ್ರಗೊಂಡಿದ್ದು, ಒಂದೆಡೆ ಮಳೆ ಮತ್ತೊಂದೆಡೆ ಅಸಾಮಾನ್ಯ ಬಿಸಿಲಿಗೆ ಸಾರ್ವಜನಿಕರು ತತ್ತರಿಸಿದ್ದಾರೆ. ಸೆಪ್ಟೆಂಬರ್ನಲ್ಲೇ ಬೇಸಿಗೆಯಂತಹ ವಾತಾವರಣ ಸೃಷ್ಟಿಯಾಗಿದ್ದು, ರಾಜ್ಯದ ಹಲವು ಭಾಗಗಳಲ್ಲಿ ವಾಡಿಕೆಗಿಂತ 2ರಿಂದ 3 ಡಿಗ್ರಿ ಸೆಲ್ಸಿಯಸ್ನಷ್ಟು ತಾಪಮಾನ ಏರಿಕೆಯಾಗಿದೆ. ಕೊಪ್ಪಳದಲ್ಲಿ ಗರಿಷ್ಠ 37°C ದಾಖಲಾಗಿದ್ದರೆ, ಕಲಬುರಗಿ, ಬಳ್ಳಾರಿ, ರಾಯಚೂರಿನಲ್ಲಿ 34°C ಹಾಗೂ ಬೆಂಗಳೂರಿನಲ್ಲಿ 30.9°C ಉಷ್ಣಾಂಶ ದಾಖಲಾಗಿದೆ. ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ಪ್ರಕಾರ, 'ಸೂಪರ್ ಎಲ್ ನಿನೊ' ಪರಿಣಾಮದಿಂದ ಮುಂದಿನ ದಿನಗಳಲ್ಲಿ ಬೆಂಗಳೂರಿನಲ್ಲಿ ತ
5 days ago1 min read


ದಕ್ಷಿಣ ಕನ್ನಡ DCC ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ನೇಮಕ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ (DCC) ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ಅವರನ್ನು ನೇಮಕ ಮಾಡಲಾಗಿದೆ. ಅಖಿಲ ಭಾರತ ಕಾಂಗ್ರೆಸ್ ಸಮಿತಿ (AICC) ಅಧ್ಯಕ್ಷರ ಅನುಮೋದನೆಯ ಮೇರೆಗೆ ರಾಜ್ಯದ ವಿವಿಧ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ನೇಮಕಾತಿಯನ್ನು ಪ್ರಕಟಿಸಲಾಗಿದೆ. ಈ ಹೊಸ ನೇಮಕಾತಿಗಳು ಸೆಪ್ಟೆಂಬರ್ 9, 2026ರಿಂದಲೇ ತಕ್ಷಣದಿಂದ ಜಾರಿಗೆ ಬಂದಿವೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ತಮ್ಮ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪದ್ಮರಾಜ್ ಪೂಜಾರಿ ಅವರ ನೇಮಕದಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆ ಮತ್ತು ಬಲವರ
6 days ago1 min read


ಯಶವಂತಪುರ-ಮಂಗಳೂರು ವಂದೇ ಭಾರತ್ 2ನೇ ಪ್ರಾಯೋಗಿಕ ಸಂಚಾರ: ಕಬಕ ಪುತ್ತೂರಿನಲ್ಲೂ ನಿಲುಗಡೆ
ಮಂಗಳೂರು: ಯಶವಂತಪುರ ಹಾಗೂ ಮಂಗಳೂರು ಜಂಕ್ಷನ್ ನಡುವೆ ಪ್ರಸ್ತಾವಿತ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ 16 ಬೋಗಿಗಳ 2ನೇ ಪ್ರಾಯೋಗಿಕ ಸಂಚಾರ ಗುರುವಾರ ನಡೆಯಲಿದೆ. ರೈಲ್ವೆ ಮಂಡಳಿಯ ಸೂಚನೆಯಂತೆ ಈ ಖಾಲಿ ರೈಲಿನ ಪ್ರಯೋಗಾರ್ಥ ಸಂಚಾರ ನಡೆಯಲಿದ್ದು, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರಸ್ತೆ ಹಾಗೂ ಪಡೀಲು ನಿಲ್ದಾಣಗಳ ಜೊತೆಗೆ ಈ ಬಾರಿ ಕಬಕ ಪುತ್ತೂರು ನಿಲ್ದಾಣದಲ್ಲೂ ನಿಲುಗಡೆ ನೀಡಲಾಗಿದೆ. ಯಶವಂತಪುರದಿಂದ ಬೆಳಿಗ್ಗೆ 6.50ಕ್ಕೆ ಹೊರಡುವ ರೈಲು ಮಧ್ಯಾಹ್ನ 2.50ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ. ಮರಳಿ ಮಧ್ಯಾಹ್ನ 3.10ಕ್ಕೆ ಹೊರಟು ರಾತ್ರಿ 10.30ಕ್ಕೆ ಯಶವಂತಪುರ ತಲುಪುವ ನಿರೀಕ್ಷೆಯಿದೆ. ಈ ವ
6 days ago1 min read


ಬೆಂಗಳೂರು: ಹಲವೆಡೆ ಆರೋಗ್ಯ ಅಧಿಕಾರಿಗಳ ಹಠಾತ್ ದಾಳಿ: ಅವಧಿ ಮೀರಿದ ಆಹಾರ ವಸ್ತುಗಳು ವಶ
ಬೆಂಗಳೂರು ನಗರದ ವಿವಿಧೆಡೆ ಆಹಾರ ಮತ್ತು ದಿನಬಳಕೆಯ ವಸ್ತುಗಳನ್ನು ಮಾರಾಟ ಮಾಡುವ ಸೂಪರ್ ಮಾರ್ಕೆಟ್ಗಳು ಹಾಗೂ ಮಳಿಗೆಗಳ ಮೇಲೆ ಆರೋಗ್ಯ ಅಧಿಕಾರಿಗಳು ಹಠಾತ್ ದಾಳಿ ನಡೆಸಿದ್ದಾರೆ. ಲಿಂಗರಾಜಪುರಂನಲ್ಲಿರುವ ಲಿಯೋ ಮಾರ್ಟ್, ಸ್ವಿಗ್ಗಿ ಇನ್ಸ್ಟಾಮಾರ್ಟ್ ಸೇರಿದಂತೆ ಹಲವು ಸಂಸ್ಥೆಗಳಲ್ಲಿ ತಪಾಸಣೆ ನಡೆಸಿದ ಅಧಿಕಾರಿಗಳು, ಸೇವನೆಗೆ ಯೋಗ್ಯವಲ್ಲದ ಹಾಗೂ ಅವಧಿ ಮೀರಿದ ಅಪಾರ ಪ್ರಮಾಣದ ಆಹಾರ ಪದಾರ್ಥಗಳನ್ನು ಪತ್ತೆಹಚ್ಚಿ ವಶಪಡಿಸಿಕೊಂಡಿದ್ದಾರೆ. ಈ ಉಲ್ಲಂಘನೆಯನ್ನು ಗಂಭೀರವಾಗಿ ಪರಿಗಣಿಸಿರುವ ಆರೋಗ್ಯ ಇಲಾಖೆಯು, ನಿಯಮ ಮೀರಿ ನಡೆದುಕೊಂಡ ಅಂಗಡಿಗಳು ಮತ್ತು ಕಂಪನಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ
Sep 91 min read


ಬೆಳ್ತಂಗಡಿಯಲ್ಲಿ ಲೋಕಾಯುಕ್ತ ದಾಳಿ: ಕುವೆಟ್ಟು, ಮಡಂತ್ಯಾರು ಗ್ರಾ.ಪಂ. ಕಚೇರಿಗಳಲ್ಲಿ ಕಡತಗಳ ಪರಿಶೀಲನೆ
ಬೆಳ್ತಂಗಡಿ: ತಾಲೂಕಿನ ಕುವೆಟ್ಟು ಮತ್ತು ಮಡಂತ್ಯಾರು ಗ್ರಾಮ ಪಂಚಾಯತ್ ಕಚೇರಿಗಳ ಮೇಲೆ ಮಂಗಳವಾರ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ಕೈಗೊಂಡಿದ್ದಾರೆ. ಗ್ರಾಮ ಪಂಚಾಯತ್ಗಳಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಲೋಕಾಯುಕ್ತ ಕೇಂದ್ರ ಕಚೇರಿಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಈ ಪರಿಶೀಲನೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಉಡುಪಿ ಜಿಲ್ಲೆಯ ಲೋಕಾಯುಕ್ತ ಇನ್ಸ್ಪೆಕ್ಟರ್ ಮಂಜುನಾಥ್ ಶಂಕರಹಳ್ಳಿ ನೇತೃತ್ವದಲ್ಲಿ ರಾಘವೇಂದ್ರ ಸಾಲಿಗ್ರಾಮ, ಆದರ್ಶ್, ಅರುಣ್ ಕುಮಾರ್, ಸೂರಜ್ ಕಾಪು ಸೇರಿದಂತೆ ಒಟ್ಟು ಎಂಟು ಮಂದಿಯ ತಂಡ ಬೆಳಗ್ಗೆ ಸುಮ
Sep 91 min read
Archive
bottom of page





