top of page
News Articles
Sathyapatha News Plus


ಬಸ್ ಕಿಟಕಿಯಿಂದ ಹೊರಗೆ ತಲೆ ಹಾಕಿ ಗುಟ್ಕಾ ಉಗಿಯಲು ಹೋಗಿ ವಿದ್ಯಾರ್ಥಿ ದುರ್ಮರಣ!
ಧಾರವಾಡದಲ್ಲಿ ಕರುಳು ಹಿಂಡುವ ಘಟನೆಯೊಂದು ನಡೆದಿದ್ದು, ಚಲಿಸುವ ಬಸ್ ಕಿಟಕಿಯಿಂದ ಹೊರಗೆ ತಲೆ ಹಾಕಿ ಗುಟ್ಕಾ ಉಗಿಯಲು ಯತ್ನಿಸಿದ ೧೭ ವರ್ಷದ ಐಟಿಐ ವಿದ್ಯಾರ್ಥಿ ಪಕ್ಕಿರೇಶ್ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಹುಬ್ಬಳ್ಳಿಯಿಂದ ಲಕ್ಷ್ಮೇಶ್ವರಕ್ಕೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದಾಗ ಈ ದುರಂತ ಸಂಭವಿಸಿದೆ. ವಿದ್ಯಾರ್ಥಿ ತಲೆ ಹೊರಹಾಕಿದಾಗ ಹಿಂಬದಿಯಿಂದ ಅತಿ ವೇಗವಾಗಿ ಬಂದ ಟಿಪ್ಪರ್ ಲಾರಿಯೊಂದು ಆತನ ತಲೆಗೆ ಬಲವಾಗಿ ಡಿಕ್ಕಿ ಹೊಡೆದಿದ್ದು, ತಲೆ ದೇಹದಿಂದ ಬೇರ್ಪಟ್ಟು ರಸ್ತೆಗೆ ಬಿದ್ದಿದೆ. ಅಪಾಯದ ಮುನ್ಸೂಚನೆ ಇದ್ದರೂ ಮಾಡುವ ಇಂತಹ ದುಸ್ಸಾಹಸಗಳು ತಂದಿಡುವ ಆಪತ್ತಿಗೆ ಈ ಘಟನೆ
Jul 21 min read


ಹಸು ವಧೆ ನಿಷೇಧ: ಸುಪ್ರೀಂಗೆ ತಮಿಳುನಾಡು ಮೇಲ್ಮನವಿ
ಬಕ್ರೀದ್ ಸೇರಿದಂತೆ ಯಾವುದೇ ದಿನಗಳಲ್ಲಿ ಹಸು ಮತ್ತು ಕರುಗಳ ವಧೆ ಮಾಡಬಾರದು ಎಂಬ ಮದ್ರಾಸ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದೆ. ಪಶುಸಂಗೋಪನೆ ಇಲಾಖೆ ಕಾರ್ಯದರ್ಶಿ ಮೂಲಕ ಈ ಅರ್ಜಿ ಸಲ್ಲಿಕೆಯಾಗಿದೆ. ಕೊಯಂಬತ್ತೂರಿನಲ್ಲಿ ಬಕ್ರೀದ್ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಹಸು ವಧೆ ತಡೆಯುವ ಕುರಿತು ಮಾತ್ರ ಮೂಲ ಅರ್ಜಿ ಇತ್ತು. ಆದರೆ, ಹೈಕೋರ್ಟ್ ತನ್ನ ವ್ಯಾಪ್ತಿ ಮೀರಿ ರಾಜ್ಯದಾದ್ಯಂತ ಹಸು ವಧೆಗೆ ಸಂಪೂರ್ಣ ನಿಷೇಧ ಹೇರಿದೆ ಎಂದು ಸರ್ಕಾರ ವಾದಿಸಿದೆ. ತಮಿಳುನಾಡು ಪ್ರಾಣಿ ಸಂರಕ್ಷಣಾ ಕಾಯ್ದೆಗಳು ಹಸು ವಧೆಯನ್ನು ನಿಯಂತ್ರಿಸುತ್ತವೆಯೇ ಹೊ
Jul 21 min read


ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್: ಶಾಲೆಗಳಿಗೆ ರಜೆ, ಜನರಿಗೆ ಕಟ್ಟುನಿಟ್ಟಿನ ಸೂಚನೆ
ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದೆ. ಮುಂದಿನ ದಿನಗಳಲ್ಲೂ ಇದೇ ಹವಾಮಾನ ಪರಿಸ್ಥಿತಿ ಮುಂದುವರಿಯುವ ಸಾಧ್ಯತೆ ಇರುವುದರಿಂದ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಹಲವು ತುರ್ತು ಕ್ರಮಗಳನ್ನು ಕೈಗೊಂಡಿದೆ. ಅದರಂತೆ, ಜುಲೈ 2, 2026 ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳು ಮತ್ತು ಪದವಿ
Jul 11 min read


ಮಂಗಳೂರು: ಗೋಡೆ ಕುಸಿದು ದುರಂತ: ಮೂವರು ಸಾವು ಶಂಕೆ
ಮಂಗಳೂರಿನಲ್ಲಿ ತಡೆಗೋಡೆಯೊಂದು ಬಾಡಿಗೆ ಮನೆಗಳ ಮೇಲೆ ಕುಸಿದು ಬಿದ್ದ ಪರಿಣಾಮ, ಆರು ಮಂದಿ ಅವಶೇಷಗಳಡಿ ಸಿಲುಕಿದ ದಾರುಣ ಘಟನೆ ಸಂಭವಿಸಿದೆ. ತಡೆಗೋಡೆ ಕುಸಿತದ ರಭಸಕ್ಕೆ ನಾಲ್ಕು ಮನೆಗಳ ಹಿಂಭಾಗದ ಗೋಡೆಗಳು ಸಂಪೂರ್ಣ ಜಖಂಗೊಂಡಿದ್ದು, ಎರಡು ಕುಟುಂಬಗಳಿಗೆ ತೀವ್ರ ಹಾನಿಯಾಗಿದೆ. ಘಟನೆ ನಡೆದ ತಕ್ಷಣ ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದ್ದು, ಲಾಲ್ಬಾಬು ಹಾಗೂ ಇಬ್ಬರು ಬಾಲಕಿಯರನ್ನು ಸುರಕ್ಷಿತವಾಗಿ ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ತೀವ್ರವಾಗಿ ಗಾಯಗೊಂಡಿದ್ದ ಲಾಲ್ಬಾಬು ಅವರ ಇಬ್ಬರು ಹೆಣ್ಣು ಮಕ್ಕಳು ಹಾಗೂ ಮತ್ತೊಂದು ಕುಟುಂಬದ ಶಾಂತಾ ಎಂಬುವವರು ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
Jul 11 min read


ಮತದಾರರ ಪಟ್ಟಿ ಪರಿಷ್ಕರಣೆ ಆರಂಭ: ಮನೆ ಮನೆಗೆ ಬರಲಿದ್ದಾರೆ ಚುನಾವಣಾಧಿಕಾರಿಗಳು
ಭಾರತದ ಚುನಾವಣಾ ಆಯೋಗವು ರಾಜ್ಯದಲ್ಲಿ ಇಂದಿನಿಂದ ಒಂದು ತಿಂಗಳ ಕಾಲ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಕಾರ್ಯವನ್ನು ಕೈಗೆತ್ತಿಕೊಂಡಿದೆ. ಈಗಾಗಲೇ ಶೇ. 91.61 ರಷ್ಟು ಮ್ಯಾಪಿಂಗ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಬಾಕಿ ಉಳಿದಿರುವ ಮತದಾರರ ಮ್ಯಾಪಿಂಗ್ ಹಾಗೂ ಪರಿಶೀಲನೆಗಾಗಿ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್ಓ) ನಿಮ್ಮ ಮನೆ ಮನೆಗೆ ಭೇಟಿ ನೀಡಲಿದ್ದಾರೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ಮತದಾರರ ಪೈಕಿ ನಕಲಿ ಹಾಗೂ ಅನರ್ಹ ಮತದಾರರನ್ನು ಪಟ್ಟಿಯಿಂದ ತೆಗೆದುಹಾಕುವುದು ಈ ಅಭಿಯಾನದ ಮುಖ್ಯ ಉದ್ದೇಶವಾಗಿದೆ. ಅಧಿಕಾರಿಗಳು ನೀಡುವ ಎಸ್ಐಆರ್ ಅರ್ಜಿಯಲ್ಲಿ ಮತದಾರರು ಸರಿಯಾದ
Jun 301 min read


ಗುಟ್ಕಾ, ಪಾನ್ ಮಸಾಲಾ ನಿಷೇಧದ ಎಚ್ಚರಿಕೆ ನೀಡಿದ ಸಿಎಂ ಡಿ.ಕೆ.ಶಿವಕುಮಾರ್
ಪಾನ್ ಮಸಾಲಾ ಮತ್ತು ಗುಟ್ಕಾಗಳಲ್ಲಿ ಅಮಲು ಪದಾರ್ಥಗಳನ್ನು ಬೆರೆಸಲಾಗುತ್ತಿದೆ ಎಂಬ ಮಾಹಿತಿ ಬರುತ್ತಿದ್ದು, ಇದು ನಿಜವಾಗಿದ್ದರೆ ರಾಜ್ಯದಲ್ಲಿ ಇವುಗಳ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ನಗರದ ಕಂಠೀರವ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ನಶಾ ಮುಕ್ತ ಭಾರತ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಾದಕದ್ರವ್ಯ ಮುಕ್ತ ಕರ್ನಾಟಕ ನಿರ್ಮಾಣ ಮಾಡುವುದು ಸರ್ಕಾರದ ಗುರಿಯಾಗಿದೆ. ಇಂತಹ ಕಂಪನಿಗಳಿಂದ ಬರುವ 100 ಕೋಟಿ ರೂ. ಆದಾಯ ಹೋದರೂ ಚಿಂತೆಯಿಲ್ಲ ಎಂದು ಸ್ಪಷ್ಟಪಡಿಸಿದರು. ಮಾದಕ ವ್ಯಸನ ತಡೆಯುವುದು ದೊಡ್ಡ ಸವ
Jun 291 min read


ಕಂಬ ಸಹಿತ ರಸ್ತೆ ಕಾಂಕ್ರೀಟೀಕರಣ: ಸುಳ್ಯದಲ್ಲಿ ವಿಲಕ್ಷಣ ಕಾಮಗಾರಿ ವೈರಲ್!
ಸುಳ್ಯದ ಪದವಿ ಪೂರ್ವ ಕಾಲೇಜು ಬಳಿಯಿಂದ ಶಾಸ್ತ್ರಿ ಸರ್ಕಲ್ಗೆ ಸಂಪರ್ಕಿಸುವ ಒಳರಸ್ತೆಯಲ್ಲಿ ಇತ್ತೀಚೆಗೆ ವಿಲಕ್ಷಣ ಘಟನೆಯೊಂದು ಬೆಳಕಿಗೆ ಬಂದಿದೆ. ಸ್ಥಳೀಯ ಆಡಳಿತ ಕೈಗೆತ್ತಿಕೊಂಡಿದ್ದ ರಸ್ತೆ ಅಭಿವೃದ್ಧಿಯ ಕಾಂಕ್ರೀಟೀಕರಣ ಕಾಮಗಾರಿ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ. ಇಲ್ಲಿನ ಗುತ್ತಿಗೆದಾರ ಮತ್ತು ಇಂಜಿನಿಯರ್ ಜುಗಲ್ ಬಂದಿಯಿಂದಾಗಿ ರಸ್ತೆ ಬದಿಯ ವಿದ್ಯುತ್ ಕಂಬಗಳನ್ನೂ ಸೇರಿಸಿ ಕಾಂಕ್ರೀಟ್ ಹಾಕಲಾಗಿದೆ. ಕಂಬಗಳನ್ನು ಸ್ಥಳಾಂತರಿಸದೆಯೇ ಈ ರೀತಿ ಅವೈಜ್ಞಾನಿಕವಾಗಿ ರಸ್ತೆ ನಿರ್ಮಿಸಿರುವುದು ಸಾರ್ವಜನಿಕರ ಆಶ್ಚರ್ಯ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ. ಈ ಎಡವಟ್ಟಿನ ಫೋಟೋ ಹಾಗೂ ವಿಡಿಯೋಗಳು
Jun 291 min read


ಫ್ರಾನ್ಸ್ನಲ್ಲಿ ಭೀಕರ ವಿಮಾನ ಅಪಘಾತ: 11 ಸ್ಕೈಡೈವರ್ಗಳ ಸಾವು
ಈಶಾನ್ಯ ಫ್ರಾನ್ಸ್ನ ನ್ಯಾನ್ಸಿ ಬಳಿಯ ಟೊಂಬ್ಲೇನ್ ಪಟ್ಟಣದಲ್ಲಿ ಭಾನುವಾರ ಸಂಭವಿಸಿದ ಭೀಕರ ನಾಗರಿಕ ವಿಮಾನ ಅಪಘಾತದಲ್ಲಿ ಕನಿಷ್ಠ 11 ಜನರು ದುರಂತ ಅಂತ್ಯ ಕಂಡಿದ್ದಾರೆ. ಮೃತರನ್ನು ಪೈಲಟ್ ಮತ್ತು ಹತ್ತು ಪ್ರಯಾಣಿಕರು ಎಂದು ಗುರುತಿಸಲಾಗಿದೆ. ಅಪಘಾತಕ್ಕೀಡಾದ ವಿಮಾನವು ಸ್ಥಳೀಯ ಪ್ಯಾರಾಚೂಟಿಸ್ಟ್ ಶಾಲೆಗೆ ಸೇರಿದ್ದಾಗಿದ್ದು, ಸ್ಕೈಡೈವಿಂಗ್ ಪ್ರವಾಸದಲ್ಲಿದ್ದ ಜನರ ಗುಂಪನ್ನು ಹೊತ್ತೊಯ್ಯುತ್ತಿತ್ತು. ಟೊಂಬ್ಲೇನ್ ವಿಮಾನ ನಿಲ್ದಾಣದ ಸಮೀಪದಲ್ಲೇ ಈ ದುರಂತ ಸಂಭವಿಸಿದೆ ಎಂದು ಸ್ಥಳೀಯ ಅಧಿಕಾರಿಗಳು ಖಚಿತಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ಫ್ರೆಂಚ್ ಆಂತರಿಕ ಸಚಿವರು ಧಾವಿಸುತ್ತಿದ್ದು, ತನಿಖೆ ಆರಂಭವಾಗ
Jun 291 min read


ವೆನೆಜುವೆಲಾ ಭೂಕಂಪ: ಮಗಳನ್ನು ಬದುಕಿಸಿ ಪ್ರಾಣತ್ಯಾಗ ಮಾಡಿದ ತಾಯಿ
ವೆನೆಜುವೆಲಾದ ಭೀಕರ ಭೂಕಂಪದಲ್ಲಿ ಫುಟ್ಬಾಲ್ ಆಟಗಾರ ಹೆಕ್ಟರ್ ಬೆಲ್ಲೊ ಪತ್ನಿ ಆಂಡ್ರಿಯಾ ಬೆಲ್ಲೊ ತಮ್ಮ ಒಂದು ವರ್ಷದ ಮಗಳು ಅಲಾನಾಳನ್ನು ರಕ್ಷಿಸುವ ವೇಳೆ ಪ್ರಾಣತ್ಯಾಗ ಮಾಡಿದ್ದಾರೆ. ಕಟ್ಟಡ ಕುಸಿದು ಅವಶೇಷಗಳಡಿ ಸಿಲುಕಿದ್ದ ಆಂಡ್ರಿಯಾ, ಮಗಳನ್ನು ಎದೆಗೆ ಬಿಗಿಯಾಗಿ ಅಪ್ಪಿಕೊಂಡು ಮೃತಪಟ್ಟಿದ್ದಾರೆ. ತಾಯಿಯ ಈ ರಕ್ಷಣಾತ್ಮಕ ನಡೆಯಿಂದಾಗಿ ಪುಟ್ಟ ಮಗು ಪವಾಡಸದೃಶವಾಗಿ ಬದುಕುಳಿದಿದೆ. ರಕ್ಷಣಾ ಸಿಬ್ಬಂದಿ ಮಗುವನ್ನು ಸುರಕ್ಷಿತವಾಗಿ ಹೊರತೆಗೆದು ಆಸ್ಪತ್ರೆಗೆ ದಾಖಲಿಸಿದ್ದು, ಮಗುವಿನ ಆರೋಗ್ಯ ಸ್ಥಿರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಮನಕಲುಕುವ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆ
Jun 281 min read


ಮುಂದಿನ 7 ದಿನ ಕರ್ನಾಟಕದಲ್ಲಿ ವರುಣನ ಆರ್ಭಟ: ಕರಾವಳಿಗೆ 'ಯೆಲ್ಲೋ ಅಲರ್ಟ್' ಘೋಷಣೆ
ಮುಂಗಾರು ಮಳೆಯ ಅಬ್ಬರದ ನಡುವೆಯೇ ಕರ್ನಾಟಕದಾದ್ಯಂತ ಮುಂದಿನ 7 ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ 30 ರಿಂದ ರಾಜ್ಯದ ಕೆಲವು ಸ್ಥಳಗಳಲ್ಲಿ ಮಳೆಯ ತೀವ್ರತೆ ಮತ್ತಷ್ಟು ಹೆಚ್ಚಾಗಲಿದೆ ಎಂದು ವರದಿ ತಿಳಿಸಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಮುಂದಿನ 7 ದಿನಗಳ ಕಾಲ ನಿರಂತರ ಮಳೆಯಾಗಲಿದ್ದು, 'ಯೆಲ್ಲೋ ಅಲರ್ಟ್' ಘೋಷಿಸಲಾಗಿದೆ. ಜೂನ್ 27 ರಿಂದ 30 ರವರೆಗೆ ಭಾರಿ ಮಳೆಯೊಂದಿಗೆ ಭೀಕರ ಗುಡುಗು, ಸಿಡಿಲು ಹಾಗೂ ಬಿರುಗಾಳಿ ಬೀಸುವ ಸಾಧ್ಯತೆ ಇದೆ. ಜುಲೈ 1 ರಿಂದ ಜುಲೈ 3 ರವರೆಗೆ ಮುಂಗಾರು ಆರ್ಭಟ ಮುಂದುವ
Jun 281 min read


ಶಾಲಾ ವೇಳಾಪಟ್ಟಿ ಬದಲಾವಣೆ: ರಾಜ್ಯದ ಎಲ್ಲಾ ಶಾಲೆಗಳಿಗೂ ಶನಿವಾರ ಏಕರೂಪದ ಹೊಸ ಸಮಯ ನಿಗದಿ!
ರಾಜ್ಯದ ಶಾಲಾ ವಿದ್ಯಾರ್ಥಿ ಹಾಗೂ ಶಿಕ್ಷಕರಿಗೆ ಶಿಕ್ಷಣ ಇಲಾಖೆ ಮಹತ್ವದ ಸಿಹಿ ಸುದ್ದಿ ನೀಡಿದೆ. ಇನ್ಮುಂದೆ ಕರ್ನಾಟಕದಾದ್ಯಂತ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳಿಗೆ ಅನ್ವಯವಾಗುವಂತೆ ಶನಿವಾರದ ತರಗತಿಗಳ ವೇಳಾಪಟ್ಟಿಯಲ್ಲಿ ದೊಡ್ಡ ಬದಲಾವಣೆ ತರಲಾಗಿದೆ. ಹೊಸ ಆದೇಶದ ಪ್ರಕಾರ, ಶನಿವಾರ ಬೆಳಗ್ಗೆ 8:30 ರಿಂದ ಮಧ್ಯಾಹ್ನ 12:30 ರವರೆಗೆ ತರಗತಿಗಳು ನಡೆಯಲಿವೆ. ಈ ಹಿಂದೆ ವಿವಿಧ ಜಿಲ್ಲೆಗಳಲ್ಲಿದ್ದ ಸಮಯದ ಭಿನ್ನತೆ ಹಾಗೂ ಗೊಂದಲಗಳಿಗೆ ತೆರೆ ಎಳೆಯಲು ಇಲಾಖೆಯು ಈ ಕಟ್ಟುನಿಟ್ಟಿನ ಏಕರೂಪದ ಸೂಚನೆ ನೀಡಿದೆ.
Jun 271 min read


ವಾಣಿಜ್ಯ ಇಂಧನ ಪೂರೈಕೆ ನಿರ್ಬಂಧ ತೆರವು: ಕೇಂದ್ರ ಸರ್ಕಾರದ ದೊಡ್ಡ ಕೊಡುಗೆ
ದೇಶದ ವಾಣಿಜ್ಯ ಹಾಗೂ ಕೈಗಾರಿಕಾ ಕ್ಷೇತ್ರಕ್ಕೆ ಕೇಂದ್ರ ಸರ್ಕಾರ ದೊಡ್ಡ ಸಿಹಿಸುದ್ದಿ ನೀಡಿದೆ. ಗೃಹೇತರ ಪ್ಯಾಕೇಜ್ಡ್ ಎಲ್ಪಿಜಿ ಪೂರೈಕೆಗೆ ವಿಧಿಸಲಾಗಿದ್ದ ಎಲ್ಲಾ ವಲಯವಾರು ಮಿತಿಗಳು ಮತ್ತು ನಿರ್ಬಂಧಗಳನ್ನು ತಕ್ಷಣದಿಂದಲೇ ಸಂಪೂರ್ಣವಾಗಿ ರದ್ದುಗೊಳಿಸಿ ಆದೇಶ ಹೊರಡಿಸಿದೆ. ಇರಾನ್-ಅಮೆರಿಕ ನಡುವಿನ ಉದ್ವಿಗ್ನತೆಯಿಂದಾಗಿ ಈ ಹಿಂದೆ ಎಲ್ಪಿಜಿ ಪೂರೈಕೆ ಮೇಲೆ ಕಠಿಣ ನಿರ್ಬಂಧಗಳನ್ನು ಹೇರಲಾಗಿತ್ತು. ಪ್ರಸ್ತುತ ಅಂತರರಾಷ್ಟ್ರೀಯ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿರುವುದರಿಂದ, ಬಿಕ್ಕಟ್ಟಿನ ಮುಂಚಿನಂತೆಯೇ ಇಂಧನ ಸರಬರಾಜನ್ನು ಪುನಃ ಆರಂಭಿಸಲಾಗಿದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಈ ಸಡಿಲಿಕೆಯಿಂದಾಗ
Jun 261 min read


ಪುತ್ತೂರಿನಲ್ಲಿ ಅಪರೂಪದ ಆಚರಣೆ: 25 ವರ್ಷಗಳ ಹಿಂದೆ ಮೃತಪಟ್ಟ ಜೋಡಿಗೆ ‘ಪ್ರೇತ ವಿವಾಹ’!
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಮುಂಡೂರಿನಲ್ಲಿ ತುಳುನಾಡಿನ ಸಾಂಪ್ರದಾಯಿಕ ಆಚರಣೆಯಾದ ಅಪರೂಪದ ‘ಪ್ರೇತ ವಿವಾಹ’ ನಡೆದಿದೆ. ಸುಮಾರು 25 ವರ್ಷಗಳ ಹಿಂದೆ ಬಾಲ್ಯದಲ್ಲೇ ಮೃತಪಟ್ಟಿದ್ದ ಆನಂದ ಮತ್ತು ಸರೋಜಾ ಎಂಬವರ ಆತ್ಮಗಳಿಗೆ ಶಾಂತಿ ಸಿಗಲಿ ಹಾಗೂ ಕುಟುಂಬದ ದೋಷಗಳು ನಿವಾರಣೆಯಾಗಲಿ ಎಂಬ ಉದ್ದೇಶದಿಂದ ಈ ವಿಶಿಷ್ಟ ವಿವಾಹವನ್ನು ಶ್ರದ್ಧಾಭಕ್ತಿಯಿಂದ ನೆರವೇರಿಸಲಾಗಿದೆ. ಮೃತ ಆನಂದ ಅವರ ಕುಟುಂಬದಲ್ಲಿ ಸಂತಾನ ಭಾಗ್ಯದ ಕೊರತೆ ಹಾಗೂ ವಿವಾಹ ತಡೆ ಸೇರಿದಂತೆ ಹಲವು ಸಮಸ್ಯೆಗಳು ಎದುರಾಗಿದ್ದವು. ಜ್ಯೋತಿಷಿಗಳ ಸಲಹೆಯಂತೆ ‘ಪ್ರಶ್ನಾ ಚಿಂತನೆ’ ನಡೆಸಿದಾಗ, ಮದುವೆಯಾಗದೆ ಮೃತಪಟ್ಟ ಆನಂದನ ಅತೃಪ್ತ ಆತ್ಮವೇ
Jun 251 min read


ಮಂಗಳೂರಿಗೆ ಬಂದಿಳಿದ ಬಾಲಿವುಡ್ ಬಾದ್ಶಾ ಶಾರುಖ್ ಖಾನ್: ಅಭಿಮಾನಿಗಳಲ್ಲಿ ಸೃಷ್ಟಿಯಾಯ್ತು ಹೊಸ ಸಂಚಲನ!
ಬಾಲಿವುಡ್ನ ಸೂಪರ್ ಸ್ಟಾರ್ ಶಾರುಖ್ ಖಾನ್ ಇಂದು ಕರಾವಳಿ ನಗರಿ ಮಂಗಳೂರಿಗೆ ಭೇಟಿ ನೀಡಿದ್ದಾರೆ. ಕಿಂಗ್ ಖಾನ್ ಆಗಮನದ ಸುದ್ದಿಯಿಂದಲೇ ಸ್ಥಳೀಯ ಅಭಿಮಾನಿಗಳಲ್ಲಿ ಭಾರಿ ಕುತೂಹಲ ಮತ್ತು ಹೊಸ ಸಂಚಲನ ಮೂಡಿದ್ದು, ಮುಂಜಾನೆಯಿಂದಲೇ ಅವರನ್ನು ನೋಡಲು ಜನ ಮುಗಿಬಿದ್ದಿದ್ದರು. ಇಂದು ಬೆಳಿಗ್ಗೆ ವಿಶೇಷ ವಿಮಾನದ ಮೂಲಕ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶಾರುಖ್ ಬಂದಿಳಿದರು. ವಿಮಾನ ನಿಲ್ದಾಣದ ಹೊರಗೆ ನೆರೆದಿದ್ದ ಅಭಿಮಾನಿಗಳ ದಂಡನ್ನು ಕಂಡು, ಬಿಗಿ ಪೊಲೀಸ್ ಭದ್ರತೆಯ ನಡುವೆಯೂ ಬಾದ್ಶಾ ಎಂದಿನ ತಮ್ಮ ಮುಗುಳ್ನಗೆಯೊಂದಿಗೆ ಕೈಬೀಸಿ ಧನ್ಯವಾದ ತಿಳಿಸಿದರು. ಮಂಗಳೂರಿನ ಖ್ಯಾತ ‘ರೋಹನ್ ಕಾ
Jun 251 min read


ಯು.ಟಿ. ಖಾದರ್ಗೆ ದಕ್ಷಿಣ ಕನ್ನಡ ಸೇರಿ ನಾಲ್ಕು ಜಿಲ್ಲೆಗಳ ಉಸ್ತುವಾರಿ ಜವಾಬ್ದಾರಿ
ಮಂಗಳೂರು ಶಾಸಕ ಹಾಗೂ ಪ್ರಸ್ತುತ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾಗಿರುವ ಯು.ಟಿ. ಖಾದರ್ ಅವರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸ್ಥಾನವನ್ನು ನೀಡಿ ಆದೇಶ ಹೊರಡಿಸಲಾಗಿದೆ. ಸಿದ್ದರಾಮಯ್ಯ ನೇತೃತ್ವದ ಈ ಹಿಂದಿನ ಸರ್ಕಾರದಲ್ಲಿ ಸ್ಪೀಕರ್ ಆಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ್ದ ಖಾದರ್ ಅವರಿಗೆ ಈಗ ಮಹತ್ವದ ಜವಾಬ್ದಾರಿ ಸಿಕ್ಕಿದೆ. ಸದ್ಯಕ್ಕೆ ಜಿಲ್ಲೆಯಲ್ಲಿ ಎದುರಾಗಿರುವ ಪ್ರಕೃತಿ ವಿಕೋಪದ ಸಮರ್ಥ ನಿರ್ವಹಣೆಗಾಗಿ ಮಾತ್ರ ಈ ಉಸ್ತುವಾರಿ ಜವಾಬ್ದಾರಿಯನ್ನು ನೀಡಲಾಗಿದೆ ಎಂದು ತಿಳಿದುಬಂದಿದೆ. ಮುಂಬರುವ ದಿನಗಳಲ್ಲಿ ಜಿಲ್ಲೆಗಳಿಗೆ ಪೂರ್ಣ ಪ್ರಮಾಣದ ಉಸ್ತುವಾರಿ ಸಚಿವರ ಸ್ಥಾನದ ಮರು ಹಂಚ
Jun 251 min read


ಬಾಲಕಿ ಮೇಲಿನ ಲೈಂಗಿಕ ಕಿರುಕುಳ: ಇಬ್ಬರು ಬಾಲಕರ ವಿರುದ್ಧ ಕೇಸ್
ಬೆಳ್ತಂಗಡಿ ತಾಲೂಕಿನ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಾಲಕಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪದ ಮೇಲೆ ಇಬ್ಬರು ಅಪ್ರಾಪ್ತ ಬಾಲಕರ ವಿರುದ್ಧ ಪ್ರಕರಣ ದಾಖಲಾಗಿದೆ. ಆರೋಪಿಗಳ ಪೈಕಿ 16 ವರ್ಷದ ಓರ್ವ ಬಾಲಕನನ್ನು ಪೊಲೀಸರು ಈಗಾಗಲೇ ವಶಕ್ಕೆ ಪಡೆದಿದ್ದಾರೆ. ಮತ್ತೊಬ್ಬ 17 ವರ್ಷದ ಆರೋಪಿ ಬಾಲಕ ಸದ್ಯ ಪರಾರಿಯಾಗಿದ್ದು, ಆತನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಬಾಲಕರಿಬ್ಬರು ಸೇರಿ 2023ರಲ್ಲಿ ಸಂತ್ರಸ್ತೆಯನ್ನು ಸ್ಥಳೀಯ ಡ್ಯಾಂ ಒಂದರ ಬಳಿಗೆ ಕರೆದೊಯ್ದು ದೌರ್ಜನ್ಯ ಎಸಗಿದ್ದರು ಮತ್ತು ಈ ಬಗ್ಗೆ ಯಾರಿಗಾದರೂ ತಿಳಿಸಿದರೆ ಜೀವ ಬೆದರಿಕೆ ಒಡ್ಡಿದ್ದರು ಎಂದು ದೂರಿನಲ್ಲ
Jun 251 min read


ಪ್ರಾಣಿಗಳಿಗೂ ಬದುಕುವ ಹಕ್ಕಿದೆ: ಹೈಕೋರ್ಟ್ ಮಹತ್ವದ ತೀರ್ಪು
ಪ್ರಾಣಿಗಳಿಗೂ ಹಿಂಸೆಯಿಲ್ಲದೆ ಬದುಕುವ ಹಕ್ಕಿದೆ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ನಾಯಿಗಳ ಮೇಲಿನ ಕ್ರೌರ್ಯ ಮತ್ತು ಲೈಂಗಿಕ ದುರ್ಬಳಕೆಯ ಆರೋಪ ಎದುರಿಸುತ್ತಿರುವ ಬೆಂಗಳೂರಿನ ಕೆ.ಇ. ರಮೇಶ್ ಎಂಬಾತನಿಗೆ 9 ನಾಯಿಗಳ ಕಸ್ಟಡಿಯನ್ನು ಮರಳಿ ನೀಡಬಾರದು ಎಂದು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠವು ಆದೇಶಿಸಿದೆ. ನಾಗಸಂದ್ರದ ನಿವಾಸಿಯಾದ ರಮೇಶ್ ವಿರುದ್ಧ ಬಿಎನ್ಎಸ್ ಹಾಗೂ ಪ್ರಾಣಿ ಕ್ರೌರ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಈ ಹಿಂದೆ ನಾಯಿಗಳನ್ನು ಮಾಲೀಕನಿಗೆ ಹಿಂತಿರುಗಿಸಲು ಮ್ಯಾಜಿಸ್ಟ್ರೇಟ್ ನ್ಯಾಯಾಲಯ ನೀಡಿದ್ದ ಆದೇಶವನ್ನು ಹೈಕೋರ್ಟ್ ಕಟುವಾಗಿ
Jun 251 min read


ಅಯೋಧ್ಯೆ ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಶಂಕಿತ ಉಗ್ರ ಹರಿಹರದಲ್ಲಿ ಬಂಧನ!
ದಾವಣಗೆರೆ ಜಿಲ್ಲೆಯ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ ಬಂಧನಕ್ಕೊಳಪಟ್ಟಿದ್ದ ಉತ್ತರ ಪ್ರದೇಶ ಮೂಲದ ಶಂಕಿತ ಉಗ್ರ ಸುಹೇಲ್ (20), ತನಿಖೆ ವೇಳೆ ದಿಗಿಲುಗೊಳಿಸುವ ಸ್ಫೋಟಕ ಸತ್ಯಗಳನ್ನು ಬಿಚ್ಚಿಟ್ಟಿದ್ದಾನೆ. ಅಯೋಧ್ಯೆಯ ಭವ್ಯ ಶ್ರೀರಾಮ ಮಂದಿರವನ್ನು ಬಾಂಬ್ ಇಟ್ಟು ಸ್ಫೋಟಿಸಲು ತಾನು ಸಂಚು ರೂಪಿಸಿದ್ದಾಗಿ ಆತ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ತನಿಖಾಧಿಕಾರಿಗಳು ಈತನ ಮೊಬೈಲ್ ಪರಿಶೀಲಿಸಿದಾಗ ಪಾಕಿಸ್ತಾನದ ಕಂಟ್ರಿ ಕೋಡ್ ಹೊಂದಿರುವ ಹಲವು ವಾಟ್ಸಾಪ್ ಗ್ರೂಪ್ಗಳು ಹಾಗೂ ಮಾರಕಾಸ್ತ್ರಗಳನ್ನು ಹಿಡಿದಿರುವ ಚಿತ್ರಗಳು ಪತ್ತೆಯಾಗಿವೆ. ವಿ
Jun 241 min read


ನಿಶ್ಚಿತಾರ್ಥವಾದ ಯುವಕನನ್ನು ಕೋಟೆಯಿಂದ ತಳ್ಳಿ ಕೊಲೆ ಯುವತಿ ಮತ್ತು ಪ್ರಿಯಕರ ಪೊಲೀಸ್ ಕಸ್ಟಡಿಗೆ
ಪುಣೆಯ ಲೋಹಗಢ ಕೋಟೆಯಲ್ಲಿ ನಡೆದಿದ್ದ 26 ವರ್ಷದ ಕೇತನ್ ಅಗರವಾಲ್ ಸಾವಿನ ಪ್ರಕರಣ ಇದೀಗ ಭೀಕರ ಕೊಲೆ ಪ್ರಕರಣವಾಗಿ ತಿರುವು ಪಡೆದುಕೊಂಡಿದೆ. ನಿಶ್ಚಿತಾರ್ಥವಾಗಿದ್ದ ಕೇತನ್ ಅಗರವಾಲ್ರನ್ನು ಅವರ ಭವಿಷ್ಯದ ಪತ್ನಿ ಸಿಯಾ ಗೋಯಲ್ ಹಾಗೂ ಆಕೆಯ ಸ್ನೇಹಿತ ಚೇತನ್ ಚೌಧರಿ ಸೇರಿ ಕೋಟೆಯಿಂದ ತಳ್ಳಿಹಾಕಿ ಕೊಲೆ ಮಾಡಿದ್ದಾರೆ ಎಂಬ ಆರೋಪದ ಮೇಲೆ ಇಬ್ಬರನ್ನೂ ಪೊಲೀಸರು ಬಂಧಿಸಿದ್ದಾರೆ. ಮಂಗಳವಾರ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಬಳಿಕ, ಪುಣೆ ಮ್ಯಾಜಿಸ್ಟ್ರೇಟ್ ಕೋರ್ಟ್ ಇಬ್ಬರನ್ನೂ ಜೂನ್ 29ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. "ಜಾರಿ ಬಿದ್ದು ಸತ್ತಿದ್ದಾರೆ" ಎಂದು ಹೇಳಿದ್ದ ಸಿಯಾ ಜೂನ್ 18ರ
Jun 241 min read


ಫಿಫಾ ವಿಶ್ವಕಪ್: ರೊನಾಲ್ಡೊ ಅಬ್ಬರ, ಪೋರ್ಚುಗಲ್ಗೆ ಭರ್ಜರಿ ಜಯದೊಂದಿಗೆ ಐತಿಹಾಸಿಕ ದಾಖಲೆ!
ಫಿಫಾ ವಿಶ್ವಕಪ್ನ 45ನೇ ಪಂದ್ಯದಲ್ಲಿ ಕ್ರಿಸ್ಟಿಯಾನೊ ರೊನಾಲ್ಡೊ ನಾಯಕತ್ವದ ಪೋರ್ಚುಗಲ್ ತಂಡ ಉಜ್ಬೇಕಿಸ್ತಾನ್ ವಿರುದ್ಧ 5-0 ಅಂತರದ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ರೊನಾಲ್ಡೊ ಎರಡು ಆಕರ್ಷಕ ಗೋಲುಗಳನ್ನು ಗಳಿಸುವ ಮೂಲಕ ವಿಶ್ವಕಪ್ ಇತಿಹಾಸದಲ್ಲೇ ಅಪರೂಪದ ಮಹಾನ್ ವಿಶ್ವ ದಾಖಲೆಯನ್ನು ನಿರ್ಮಿಸಿದ್ದಾರೆ. ಕಳೆದ ಪಂದ್ಯದಲ್ಲಿ ಗೋಲು ಗಳಿಸದೆ ಟೀಕೆಗೆ ಒಳಗಾಗಿದ್ದ 41 ವರ್ಷದ ರೊನಾಲ್ಡೊ, ಈ ಪಂದ್ಯದಲ್ಲಿ ಎರಡು ಗೋಲು ಬಾರಿಸಿ ಮಿಂಚಿದ್ದಾರೆ. ಈ ಮೂಲಕ ಪೋರ್ಚುಗಲ್ನ ಲೆಜೆಂಡ್ ಆಟಗಾರ ‘ಯುಸೇಬಿಯೊ’ ಅವರ 60 ವರ್ಷಗಳ ಹಳೆಯ ದಾಖಲೆಯನ್ನು ಬ್ರೇಕ್ ಮಾಡಿದ್ದಾರೆ. ಜೊತೆಗೆ ವಿಶ್ವಕಪ್ನ ಸತತ 6 ಆವೃ
Jun 241 min read
Archive
bottom of page



