top of page
News Articles
Sathyapatha News Plus


ನಾಪತ್ತೆಯಾಗಿದ್ದ ಸಾಕುನಾಯಿ ಪತ್ತೆ: ಹುಡುಕಿಕೊಟ್ಟ ವ್ಯಕ್ತಿಗೆ ₹50 ಸಾವಿರ ಬಹುಮಾನ!
ಸಾಕು ನಾಯಿಗಳು ಕೇವಲ ಪ್ರಾಣಿಗಳಲ್ಲ, ಅವು ಮನೆಯ ಅವಿಭಾಜ್ಯ ಅಂಗ ಎಂಬುದನ್ನು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಶ್ವಾನಪ್ರೇಮಿ ಗಣೇಶ್ ಕೇರ ಸಾಬೀತುಪಡಿಸಿದ್ದಾರೆ. ಇತ್ತೀಚೆಗೆ ನಾಪತ್ತೆಯಾಗಿದ್ದ ಅವರ ಪ್ರೀತಿಯ ದೇಸಿ ತಳಿಯ ವಿಶೇಷ ಚೇತನ ನಾಯಿ ‘ಚಿನ್ನು’ ಕೊನೆಗೂ ಪತ್ತೆಯಾಗಿದೆ. ಮೂರ್ಛೆ ರೋಗದಿಂದ ಬಳಲುತ್ತಿದ್ದ ಈ ನಾಯಿ ಮೂರು ವಾರಗಳ ಹಿಂದೆ ಕಾಣೆಯಾಗಿತ್ತು. ಇದರಿಂದ ಕಂಗಾಲಾಗಿದ್ದ ಮಾಲೀಕ ಗಣೇಶ್ ಅವರು, ನಾಯಿಯನ್ನು ಹುಡುಕಿಕೊಟ್ಟವರಿಗೆ ₹50 ಸಾವಿರ ನಗದು ಬಹುಮಾನ ನೀಡುವುದಾಗಿ ಪತ್ರಿಕೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಜಾಹೀರಾತು ನೀಡಿದ್ದರು. ಸ್ಥಳೀಯ ನಿವಾಸಿ ಪುರಂದರ ಪೋಳ್ಯ ಎಂಬುವವರು ಸ
Jun 241 min read


ಕಿಡಿಗೇಡಿಗಳ ಕೃತ್ಯಕ್ಕೆ 300 ಅಡಿಕೆ ಮರಗಳು ಭಸ್ಮ: ಕಡಬದ ಯೇನೆಕಲ್ನಲ್ಲಿ ಕಂಗಾಲಾದ ರೈತ ಕುಟುಂಬ
ಕಡಬ ತಾಲೂಕಿನ ಯೇನೆಕಲ್ ಗ್ರಾಮದ ರೈತ ಗಿರಿಧರ ಅಂಬೆಕಲ್ಲು ಎಂಬುವವರ ತೋಟದಲ್ಲಿ ಕೊಳೆ ರೋಗ ನಿಯಂತ್ರಣಕ್ಕಾಗಿ ಮೈಲುತುತ್ತು ದ್ರಾವಣ ಸಿಂಪಡಿಸಿದ ಕೇವಲ ಮೂರೇ ದಿನದಲ್ಲಿ ಸುಮಾರು 300ಕ್ಕೂ ಹೆಚ್ಚು ಅಡಿಕೆ ಗಿಡ ಮತ್ತು ಮರಗಳು ಸಂಪೂರ್ಣವಾಗಿ ಕರಟಿ ಹೋಗಿರುವ ದಾರುಣ ಘಟನೆ ವರದಿಯಾಗಿದೆ. ಜೂನ್ 19ರಂದು ಸಿಂಪಡಿಸಲಾಗಿದ್ದ ದ್ರಾವಣದ ಮೊದಲ ಬ್ಯಾರೆಲ್ನಲ್ಲಿದ್ದ ರಾಸಾಯನಿಕದಿಂದಾಗಿ ಈ ದುರಂತ ಸಂಭವಿಸಿದ್ದು, ಕಣ್ಣೆದುರೇ ಒಣಗುತ್ತಿರುವ ಮರಗಳನ್ನು ಕಂಡು ರೈತ ಕುಟುಂಬ ಕಂಗಾಲಾಗಿದೆ. ತೋಟದ ಆರಂಭದ ಭಾಗದಲ್ಲಿ ಸಿಂಪಡಿಸಲಾಗಿದ್ದ ಒಂದು ಡ್ರಂ ದ್ರಾವಣದ ಜಾಗದಲ್ಲಿ ಮಾತ್ರ ಗಿಡಗಳು ಸುಟ್ಟು ಹೋಗಿದ್ದು, ತೋಟದ ಇ
Jun 231 min read


ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ: ಬಂಡಾಯ ಬಣದ ತೀರ್ಮಾನ
ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಸ್ಥಾನದಿಂದ ಬಂಡಾಯ ನಾಯಕರು ವಜಾಗೊಳಿಸಿದ್ದಾರೆ. ಇದರೊಂದಿಗೆ ಪಕ್ಷದ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರನ್ನೂ ಪಕ್ಷದಿಂದ ಅಮಾನತುಗೊಳಿಸಲಾಗಿದೆ. ಕೋಲ್ಕತ್ತಾದ ನ್ಯೂಟೌನ್ನ ಪಂಚತಾರಾ ಹೋಟೆಲ್ನಲ್ಲಿ ನಡೆದ ಬಂಡಾಯ ಬಣದ ವಿಶೇಷ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ರುತಬ್ರತಾ ಬ್ಯಾನರ್ಜಿ ನೇತೃತ್ವದ ಈ ಶಿಬಿರವು, ಮಾಜಿ ಸಚಿವ ಅರೂಪ್ ರಾಯ್ ಅವರನ್ನು ಟಿಎಂಸಿಯ ಹೊಸ ಅಖಿಲ ಭಾರತ ಅಧ್ಯಕ್ಷರನ್ನಾಗಿ ಘೋಷಿಸಿದೆ. ಅಭಿಷೇಕ್ ಬ್ಯಾನರ್ಜಿ ಅವರ ಕಾರ್ಯವೈಖರಿ ವಿರುದ್ಧ ತ
Jun 231 min read


ಅರ್ಜಿ ಹಾಕುವವರೆಗೂ ಗೃಹಲಕ್ಷ್ಮಿ, ಗೃಹಜ್ಯೋತಿ ನಿಲ್ಲತ್ತಾ? ಅರ್ಜಿ ಸಲ್ಲಿಕೆ ಯಾವಾಗ? ಸರ್ಕಾರದ ಸ್ಪಷ್ಟನೆ ಇಲ್ಲಿದೆ
ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆಗಳಲ್ಲಿ ನಡೆದಿರುವ ಅಕ್ರಮಗಳಿಗೆ ಕಡಿವಾಣ ಹಾಕಲು ಸರ್ಕಾರ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಅರ್ಹ ಫಲಾನುಭವಿಗಳ ಪಟ್ಟಿಯನ್ನು ಪರಿಷ್ಕರಿಸಲು ನಿರ್ಧರಿಸಲಾಗಿದ್ದು, ಅಲ್ಲಿಯವರೆಗೆ ಸದ್ಯ ಚಾಲ್ತಿಯಲ್ಲಿರುವ ಸೌಲಭ್ಯಗಳು ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ ಎಂದು ಗ್ಯಾರಂಟಿ ಯೋಜನಾ ಅನುಷ್ಠಾನದ ಅಧ್ಯಕ್ಷ ಹೆಚ್.ಎಂ. ರೇವಣ್ಣ ಅವರು ಮಹತ್ವದ ಸ್ಪಷ್ಟನೆ ನೀಡಿದ್ದಾರೆ. ಈ ಯೋಜನೆಗಳಲ್ಲಿ ಒಂದೇ ಮನೆಯಲ್ಲಿ ಇಬ್ಬರು-ಮೂವರು ಸೌಲಭ್ಯ ಪಡೆಯುತ್ತಿರುವುದು, ಆದಾಯ ತೆರಿಗೆ ಪಾವತಿದಾರರು ಹಾಗೂ ವಾಣಿಜ್ಯ ಉದ್ದೇಶಕ್ಕೆ ಗೃಹಬಳಕೆಯ ವಿದ್ಯುತ್ ಪಡೆಯುತ್ತಿರುವುದು ಸರ್ಕಾರದ ಗಮನಕ
Jun 231 min read


ಕತಾರ್ ಅನಿಲ ಕೇಂದ್ರದಲ್ಲಿ ಭೀಕರ ಸ್ಫೋಟ: 54 ಮಂದಿಗೆ ಗಾಯ, 18 ಜನ ನಾಪತ್ತೆ
ಕತಾರ್ನ ಪ್ರಮುಖ ನೈಸರ್ಗಿಕ ಅನಿಲ ರಫ್ತು ಕೇಂದ್ರವಾದ ರಾಸ್ ಲಾಫನ್ ಕೈಗಾರಿಕಾ ಪ್ರದೇಶದಲ್ಲಿ ಭಾನುವಾರ ರಾತ್ರಿ ಭಾರೀ ಸ್ಫೋಟ ಸಂಭವಿಸಿದೆ. ಈ ಘಟನೆಯಲ್ಲಿ ಕನಿಷ್ಠ 54 ಮಂದಿ ಗಾಯಗೊಂಡಿದ್ದು, 18 ಮಂದಿ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇರಾನ್ ಯುದ್ಧದ ಸಂದರ್ಭದಲ್ಲಿ ನಡೆದ ದಾಳಿಯ ಬಳಿಕ ಸ್ಥಗಿತಗೊಂಡಿದ್ದ ಅನಿಲ ರಫ್ತು ಕಾರ್ಯಾಚರಣೆಯನ್ನು ಪುನರಾರಂಭಿಸಲು ಕಾರ್ಮಿಕರು ಯತ್ನಿಸುತ್ತಿದ್ದಾಗ ಈ ಅವಘಡ ನಡೆದಿದೆ. ಸ್ಫೋಟದ ತೀವ್ರತೆಗೆ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ವಿಶ್ವದ ಅಗ್ರ ನೈಸರ್ಗಿಕ ಅನಿಲ ಉತ್ಪಾದಕ ರಾಷ್ಟ್ರವಾದ ಕತಾರ್
Jun 221 min read


ಬಸ್ ಟಿಕೆಟ್ ದರ ಭಾರಿ ಹೆಚ್ಚಳಕ್ಕೆ ಸರ್ಕಾರದ ಮುಂದೆ ಸಾರಿಗೆ ನಿಗಮಗಳ ಪ್ರಸ್ತಾವನೆ
ತೀವ್ರ ಆರ್ಥಿಕ ನಷ್ಟ ಹಾಗೂ ಡೀಸೆಲ್ ದರ ಏರಿಕೆಯಿಂದ ತತ್ತರಿಸಿರುವ ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ಸೇರಿದಂತೆ ನಾಲ್ಕೂ ಸಾರಿಗೆ ನಿಗಮಗಳು ಬಸ್ ಟಿಕೆಟ್ ದರವನ್ನು ಭಾರಿ ಪ್ರಮಾಣದಲ್ಲಿ ಹೆಚ್ಚಿಸಲು ಮುಖ್ಯಮಂತ್ರಿಗಳಿಗೆ ಅಧಿಕೃತ ಪ್ರಸ್ತಾವನೆ ಸಲ್ಲಿಸಿವೆ. ಕಳೆದ ವರ್ಷವಷ್ಟೇ ದರ ಹೆಚ್ಚಳವಾಗಿದ್ದರೂ, ಪ್ರಸ್ತುತ ಬಿಎಂಟಿಸಿ ಶೇಕಡಾ 44 ರಷ್ಟು ಹಾಗೂ ಕೆಎಸ್ಆರ್ಟಿಸಿ ಶೇಕಡಾ 33 ರಷ್ಟು ಟಿಕೆಟ್ ದರ ಏರಿಕೆ ಮಾಡಲು ಅನುಮತಿ ಕೋರಿವೆ. ಇದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಪ್ರತಿನಿತ್ಯದ ಇಂಧನ ದರ ಏರಿಕೆಯಿಂದಾಗಿ ನಿಗಮಗಳಿಗೆ ವರ್ಷಕ್ಕೆ 480 ಕೋಟಿ ರೂ. ಹೆಚ್ಚುವರಿ ಹೊರೆ ಬೀಳುತ್ತಿದೆ. ಸರ್ಕಾರದ
Jun 221 min read


ದಾವಣಗೆರೆ: ಪ್ಲಾಸ್ಟಿಕ್ ಕವರ್ ಕಚ್ಚಿ ಸಾಕುನಾಯಿ ಭೀಕರ ಸ್ಫೋಟಕ್ಕೆ ಬಲಿ
ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ನಲ್ಕುದರೆ ಗ್ರಾಮದಲ್ಲಿ ರಸ್ತೆಯಲ್ಲಿ ಬಿದ್ದಿದ್ದ ಪ್ಲಾಸ್ಟಿಕ್ ಕವರ್ ಕಚ್ಚುತ್ತಿದ್ದಂತೆ ಭೀಕರ ಸ್ಫೋಟ ಸಂಭವಿಸಿ ಸಾಕುನಾಯಿಯೊಂದು ಸ್ಥಳದಲ್ಲೇ ಸಾವನ್ನಪ್ಪಿದೆ. ಮಾಲೀಕ ರುದ್ರೇಶ್ ಅವರೊಂದಿಗೆ ಜಮೀನಿಗೆ ತೆರಳುತ್ತಿದ್ದ ನಾಯಿ, ರಸ್ತೆ ಬದಿಯ ಪ್ಲಾಸ್ಟಿಕ್ ಕವರ್ನಲ್ಲಿ ಆಹಾರವಿದೆ ಎಂದು ಭಾವಿಸಿ ಕಚ್ಚಿದೆ. ತಕ್ಷಣವೇ ಸ್ಫೋಟ ಸಂಭವಿಸಿದ್ದು, ನಾಯಿಯ ಮುಖ ಛಿದ್ರಗೊಂಡು ಮೃತಪಟ್ಟಿದೆ. ಸ್ಫೋಟದ ಸದ್ದು ಒಂದು ಕಿಲೋಮೀಟರ್ವರೆಗೆ ಕೇಳಿಸಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಕಾಡುಹಂದಿ ನಿಯಂತ್ರಣಕ್ಕೆ ಇಟ್ಟಿದ್ದ ಸಿಡಿಮದ್ದು ಇದಾಗಿರಬಹುದು ಎಂದು ಶಂಕಿಸಲಾಗ
Jun 221 min read


ಮುಂದಿನ 5 ದಿನ ರಾಜ್ಯದಾದ್ಯಂತ ಭಾರಿ ಮಳೆ: ಐಎಂಡಿ ಮುನ್ಸೂಚನೆ
ಕರ್ನಾಟಕದಲ್ಲಿ ಮುಂಗಾರು ಮಳೆ ತೀವ್ರತೆ ಕಳೆದುಕೊಂಡಿರುವ ನಡುವೆಯೇ, ಮುಂದಿನ ಐದು ದಿನಗಳ ಕಾಲ ಅಂದರೆ ಜೂನ್ 24ರವರೆಗೆ ರಾಜ್ಯದ ಹಲವೆಡೆ ಭರ್ಜರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಪ್ರಸ್ತುತ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮುಂಗಾರು ಸಾಮಾನ್ಯ ಸ್ಥಿತಿಯಲ್ಲಿದ್ದು, ಇಂದಿನಿಂದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಮಾರುತಗಳು ತೀವ್ರಗೊಳ್ಳಲಿವೆ. ಇದರಿಂದಾಗಿ ಈ ಭಾಗಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜೂನ್ 21 ರಿಂದ ಮುಂಗಾರು ಆರ್ಭಟ ಹೆಚ್ಚಾ
Jun 221 min read


ಸ್ನೇಹಿತರ ಬಳಗ (ರಿ.) ಕಲ್ಪಡ ಇದರ 10ನೆ ವರುಷದ ದಶಮ ಸಂಭ್ರಮ ಲೋಗೋ ಹಾಗೂ ಲಕ್ ಡಿಪ್ ಬಿಡುಗಡೆ
ಸ್ನೇಹಿತರ ಬಳಗ (ರಿ.) ಕಲ್ಪಡ ಇದರ 10ನೆ ವರುಷದ ದಶಮ ಸಂಭ್ರಮ ಲೋಗೋ ಹಾಗೂ ಲಕ್ ಡಿಪ್ ಬಿಡುಗಡೆ ಕಾರ್ಯಕ್ರಮವನ್ನು ದಿನಾಂಕ 21/6/2026 ನೇ ಭಾನುವಾರ ಬೆಳಿಗ್ಗೆ ಶ್ರೀ ಉಳ್ಳಾಕುಲು ದೈವಸ್ಥಾನದ ಆಡಳಿತ ಮು ಕ್ತೇಸರರು ಹಾಗೂ ಸ್ನೇಹಿತರ ಬಳಗದ ಗೌರವಧ್ಯಕ್ಷ ರಾದ ಶ್ರೀ ಶಿವರಾಮ ಉಪಾಧ್ಯಾಯ ಕಲ್ಪಡ ಇವರು ಬಿಡುಗಡೆ ಮಾಡಿದರು. ಈ ಸಂಧರ್ಭದಲ್ಲಿ ಶ್ರೀ ಉಳ್ಳಾಕುಲು ದೈವಸ್ಥಾನದ ಮಾಜಿ ಅಧ್ಯಕ್ಷರಾದ ಭಾಸ್ಕರ ಗೌಡ ಕಲ್ಪಡ ಗುತ್ತು, ಬಳಗದ ಅಧ್ಯಕ್ಷರಾದ ಸುರೇಶ್ ಗುತ್ತು, ದೈವದ ಪರಿಚಾರಕ ರಾದ ಶ್ರೀಧರ ಕಲ್ಪಡ, ಲಿಂಗಪ್ಪ ಕಲ್ಪಡ ಹಾಗೂ ಬಳಗದ ಎಲ್ಲಾ ಪದಾಧಿಕಾರಿಗಳು, ಸರ್ವಸದಸ್ಯರು ಪಾಲ್ಗೊಂಡಿದ್ದರು. ದಶಮಾನೋತ್
Jun 211 min read


ಆಲಂಕಾರು: ಪತ್ನಿಯ ಕೊಂದು ಪತಿ ಆತ್ಮಹತ್ಯೆ ಶಂಕೆ: ಎರಡು ವರ್ಷದ ಮಗು ಅನಾಥ
ಆಲಂಕಾರು ಪೇಟೆಯಲ್ಲಿ ಹೋಟೆಲ್ ನಡೆಸುತ್ತಿದ್ದ ಬಜಗೋಳಿಯ ದಿನೇಶ್ ಮತ್ತು ಸಿದ್ದಕಟ್ಟೆಯ ಸಂಗೀತ ದಂಪತಿ ಆಲಂಕಾರು ಕಜೆಯ ಬಾಡಿಗೆ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಪತ್ನಿಯನ್ನು ಕೊಲೆ ಮಾಡಿ, ಬಳಿಕ ಪತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಒಂದು ತಿಂಗಳ ಹಿಂದೆ ಹೋಟೆಲ್ ವ್ಯವಹಾರ ಬಿಟ್ಟು ತೆರಳಿದ್ದ ದಂಪತಿ, ಜೂನ್ 19ರ ಸಂಜೆ ಮತ್ತೆ ಬಾಡಿಗೆ ಮನೆಗೆ ಮರಳಿದ್ದರು. ಜೂನ್ 20ರಂದು ಮನೆಯ ಒಳಗಿನಿಂದ ಚಿಲಕ ಹಾಕಿದ ಸ್ಥಿತಿಯಲ್ಲಿ ಇಬ್ಬರ ಸಾವು ಬೆಳಕಿಗೆ ಬಂದಿದೆ. ಮನೆಯಲ್ಲಿದ್ದ ಎರಡು ವರ್ಷದ ಹೆಣ್ಣು ಮಗು ದೃವಿ ಅತ್ತುಕೊಂಡು ನಿದ್ರೆಗೆ ಜಾರಿತ್ತು. ಮಗುವಿನ ಅಳುವಿನ ಶ
Jun 211 min read


NEET-UG 2026 ಮರುಪರೀಕ್ಷೆ ಇಂದು: 22.79 ಲಕ್ಷ ವಿದ್ಯಾರ್ಥಿಗಳಿಗೆ ಕಠಿಣ ನಿಯಮಗಳು
ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ರದ್ದಾಗಿದ್ದ NEET-UG 2026 ಪರೀಕ್ಷೆಯು ಇಂದು ಮಧ್ಯಾಹ್ನ 2 ಗಂಟೆಯಿಂದ ಸಂಜೆ 5.15ರವರೆಗೆ ವಿಶ್ವದಾದ್ಯಂತ ಮರುನಡೆಯುತ್ತಿದೆ. ದೇಶದ 22.79 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಪರೀಕ್ಷೆಗೆ ಹಾಜರಾಗುತ್ತಿದ್ದು, ಎನ್ಟಿಎ (NTA) ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ಕೈಗೊಂಡಿದೆ. ಅಭ್ಯರ್ಥಿಗಳಿಗೆ ಹೊಸ ಅಡ್ಮಿಟ್ ಕಾರ್ಡ್ ಹಾಗೂ ಆಧಾರ್ ಬಯೋಮೆಟ್ರಿಕ್ ತಪಾಸಣೆ ಕಡ್ಡಾಯಗೊಳಿಸಲಾಗಿದೆ. ಮಧ್ಯಾಹ್ನ 1.30ರ ನಂತರ ಬರುವವರಿಗೆ ಪ್ರವೇಶ ನಿಷೇಧಿಸಲಾಗಿದೆ. ಅರ್ಧ ತೋಳಿನ ಹಗುರ ಉಡುಪು ಮತ್ತು ಸರಳ ಚಪ್ಪಲಿ ಧರಿಸಲು ಮಾತ್ರ ಅವಕಾಶವಿದ್ದು, ಶೂ, ಗಡಿಯಾರ ಹಾಗೂ
Jun 211 min read


ಮುರುಳ್ಯ: ಬಾವಿಗೆ ಬಿದ್ದು ಐದು ವರ್ಷದ ಅವಳಿ ಮಕ್ಕಳ ದಾರುಣ ಸಾವು
ಮುರುಳ್ಯ ಗ್ರಾಮದ ಕಡೀರ ಎಂಬಲ್ಲಿ ವಸಂತ ಹಾಗೂ ದಿವ್ಯ ದಂಪತಿಗಳ ಐದು ವರ್ಷದ ಅವಳಿ ಮಕ್ಕಳಾದ ಜಸ್ವಿತ್ ಮತ್ತು ಜಾವಿನ್ ಬಾವಿಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಮನೆಯ ಸಮೀಪದಲ್ಲಿದ್ದ 15 ಅಡಿ ಆಳದ ಕೆರೆಗೆ (ಬಾವಿ) ಆಟವಾಡುತ್ತಿದ್ದ ಮಕ್ಕಳಿಬ್ಬರು ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಕೊನೆಯುಸಿರೆಳೆದಿದ್ದಾರೆ. ಘಟನೆ ವೇಳೆ ಪೋಷಕರು ಕೆಲಸಕ್ಕೆ ತೆರಳಿದ್ದು, ಮನೆಯಲ್ಲಿ ಅಜ್ಜ-ಅಜ್ಜಿ ಮಾತ್ರ ಇದ್ದರು. ಸುಳ್ಯ ಅಗ್ನಿಶಾಮಕ ಠಾಣೆ ಸಿಬ್ಬಂದಿ ಮಕ್ಕಳ ಮೃತದೇಹಗಳನ್ನು ಮೇಲಕ್ಕೆತ್ತಿದ್ದಾರೆ.
Jun 201 min read


20 ಲಕ್ಷ ದೋಚಿದ ಸಿಐಡಿ ಇನ್ಸ್ಪೆಕ್ಟರ್ ಸೇರಿ ಮೂವರ ಬಂಧನ
ಆನ್ಲೈನ್ ಟ್ರೇಡಿಂಗ್ನಲ್ಲಿ ಹೆಚ್ಚಿನ ಲಾಭದ ಆಮಿಷ ಒಡ್ಡಿ ಕೇರಳದ ಯುವಕರನ್ನು ಬೆಂಗಳೂರಿಗೆ ಕರೆಸಿ 20 ಲಕ್ಷ ರೂ. ದೋಚಿದ್ದ ಸಿಐಡಿ ಇನ್ಸ್ಪೆಕ್ಟರ್ ಮಹೇಶ್ ಕನಕಗಿರಿ ಸೇರಿದಂತೆ ಮೂವರು ಆರೋಪಿಗಳನ್ನು ಮಡಿವಾಳ ಪೊಲೀಸರು ಬಂಧಿಸಿದ್ದಾರೆ. ಕೇರಳದ ಯುವಕರು 25 ಲಕ್ಷ ಹಣದೊಂದಿಗೆ ಮಡಿವಾಳದ ಹೋಟೆಲ್ಗೆ ಬಂದಾಗ, ಆರೋಪಿಗಳು ಪೊಲೀಸ್ ಜೀಪ್ನಲ್ಲಿ ಬಂದು ಬೆದರಿಕೆ ಹಾಕಿದ್ದಾರೆ. ನಂತರ ಯುವಕರ ಮೇಲೆ ಹಲ್ಲೆ ನಡೆಸಿ ಹಣದೊಂದಿಗೆ ಪರಾರಿಯಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಬಾಧಿತ ಯುವಕರು ನೀಡಿದ ದೂರಿನನ್ವಯ ಡಕಾಯಿತಿ ಮತ್ತು ಒಳಸಂಚು ಪ್ರಕರಣ ದಾಖಲಾಗಿದ್ದು, ಮಡಿವಾಳ ಎಸಿಪಿ ವಾಸುದೇವ್ ನೇತೃತ್
Jun 201 min read


ಪ್ರಶ್ನೆಪತ್ರಿಕೆ ಸೋರಿಕೆ: ಇಂದು ನೀಟ್ ದೇಶವ್ಯಾಪಿ ಮಾಕ್ ಡ್ರಿಲ್, ನಾಳೆ ಮರುಪರೀಕ್ಷೆ
ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ನಾಳೆ ನೀಟ್-ಯುಜಿ ಮರುಪರೀಕ್ಷೆ ನಡೆಯಲಿದ್ದು, ಈ ದೆಸೆಯಿಂದ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) ಇಂದು ದೇಶದ 551 ನಗರಗಳಲ್ಲಿ ಪೂರ್ಣ ಪ್ರಮಾಣದ ಮಾಕ್ ಡ್ರಿಲ್ ಹಮ್ಮಿಕೊಂಡಿದೆ. ಬೆಳಗ್ಗೆಯಿಂದ ರಾತ್ರಿವರೆಗೆ ಪ್ರಶ್ನೆಪತ್ರಿಕೆ ವಿತರಣೆ ಮತ್ತು ಸಂಗ್ರಹಣೆಯ ಅಣುಕು ಕಾರ್ಯಾಚರಣೆ ನಡೆಯಲಿದೆ. ನಾಳೆ ದೇಶಾದ್ಯಂತ 5,500ಕ್ಕೂ ಹೆಚ್ಚು ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಜಿಲ್ಲಾಡಳಿತ, ರಾಜ್ಯ ಪೊಲೀಸ್ ಹಾಗೂ ಕೇಂದ್ರದ ವಿಶೇಷ ತಂಡಗಳನ್ನೊಳಗೊಂಡ ಮೂರು ಹಂತದ ಕಟ್ಟುನಿಟ್ಟಿನ ಭದ್ರತೆಯನ್ನು ನಿಯೋಜಿಸಲಾಗಿದೆ. ಸುರಕ್ಷತೆಗಾಗಿ 2.5 ಲಕ್ಷ ಪೊಲೀಸರು ಹಾಗ
Jun 201 min read


ಬೆಂಗಳೂರು-ಮಂಗಳೂರು ವಂದೇ ಭಾರತ್: ಶೀಘ್ರದಲ್ಲೇ ಪ್ರಾಯೋಗಿಕ ಸಂಚಾರ
ಕರ್ನಾಟಕದ ಕರಾವಳಿ ಮತ್ತು ರಾಜಧಾನಿ ಬೆಂಗಳೂರು ನಡುವೆ ಹೈಸ್ಪೀಡ್ ರೈಲು ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಡಲಾಗಿದೆ. ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರಸ್ತೆಯ ನಡುವಿನ 55 ಕಿಮೀ ಕಠಿಣ ಘಾಟ್ ವಿಭಾಗದಲ್ಲಿ ಜೂನ್ ಕೊನೆಯ ವಾರದಲ್ಲಿ ವಂದೇ ಭಾರತ್ ಎಕ್ಸ್ಪ್ರೆಸ್ನ ಪ್ರಾಯೋಗಿಕ ಸಂಚಾರ ನಡೆಯುವ ಸಾಧ್ಯತೆಯಿದೆ. ಸುರಕ್ಷತೆಯ ದೃಷ್ಟಿಯಿಂದ ಈ ಘಾಟಿ ಪ್ರದೇಶದಲ್ಲಿ ರೈಲುಗಳ ಗರಿಷ್ಠ ವೇಗವನ್ನು ಗಂಟೆಗೆ 30 ಕಿ.ಮೀಗೆ ಸೀಮಿತಗೊಳಿಸಲಾಗಿದೆ. ಇದಕ್ಕಾಗಿ ಚೆನ್ನೈನ ಇಂಟಿಗ್ರಲ್ ಕೋಚ್ ಫ್ಯಾಕ್ಟರಿಯಲ್ಲಿ ರೈಲಿಗೆ ವಿಶೇಷ ‘ಸ್ವಯಂಚಾಲಿತ ತುರ್ತು ಬ್ರೇಕಿಂಗ್’ (AEB) ತಂತ್ರಜ್ಞಾನವನ್ನು ಅಳವಡಿ
Jun 191 min read


ನೀಟ್ ಮರುಪರೀಕ್ಷೆ: ಟೆಲಿಗ್ರಾಂ ನಿಷೇಧದ ತೀರ್ಪು ಕಾಯ್ದಿರಿಸಿದ ಹೈಕೋರ್ಟ್
ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ತಡೆಗೆ ಜೂನ್ 22ರವರೆಗೆ ದೇಶದಲ್ಲಿ ಟೆಲಿಗ್ರಾಂ ಆ್ಯಪ್ ಅನ್ನು ತಾತ್ಕಾಲಿಕವಾಗಿ ನಿರ್ಬಂಧಿಸುವ ಕೇಂದ್ರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯ ತೀರ್ಪನ್ನು ದೆಹಲಿ ಹೈಕೋರ್ಟ್ ಕಾಯ್ದಿರಿಸಿದೆ. ವಿಚಾರಣೆ ವೇಳೆ ನ್ಯಾಯಮೂರ್ತಿ ತೇಜಸ್ ಕರಿಯಾ ಅವರು, ಕೇವಲ ನೀಟ್ ಆಕಾಂಕ್ಷಿಗಳಿಗಾಗಿ ದೇಶದ 150 ಮಿಲಿಯನ್ ಬಳಕೆದಾರರ ಹಕ್ಕುಗಳನ್ನು ನಿರ್ಬಂಧಿಸಬಹುದೇ? ಹಾಗೂ ಸೋರಿಕೆ ತಡೆಗೆ ಟೆಲಿಗ್ರಾಂ ಸೂಕ್ತ ಕ್ರಮ ಕೈಗೊಂಡಿದೆಯೇ ಎಂದು ಕೇಂದ್ರವನ್ನು ಪ್ರಶ್ನಿಸಿದರು. ಟೆಲಿಗ್ರಾಂ ಪರ ವಾದಿಸಿದ ವಕೀಲ ಧ್ರುವ ಮೆಹ್ತಾ, ಆಕ್ಷೇಪಾರ್ಹ ಪೋಸ್ಟ್ಗಳನ್ನು ಮಾತ್ರ
Jun 191 min read


ಛತ್ತೀಸ್ಗಢದಲ್ಲಿ ಮರಳು ಗಣಿಗಾರಿಕೆ ವಿವಾದ: ಮಾಜಿ ಪಂಚಾಯತ್ ಅಧ್ಯಕ್ಷ ಸೇರಿ ಮೂವರ ಭೀಕರ ಹತ್ಯೆ
ಛತ್ತೀಸ್ಗಢದ ಕೊರಿಯಾ ಜಿಲ್ಲೆಯ ಸೋನ್ಹತ್ ಪೊಲೀಸ್ ಠಾಣೆ ವ್ಯಾಪ್ತಿಯ ನೌಗೈನ್ ಗ್ರಾಮದಲ್ಲಿ ಮರಳು ಗಣಿಗಾರಿಕೆ ವಿವಾದಕ್ಕೆ ಸಂಬಂಧಿಸಿದಂತೆ ಭೀಕರ ಹತ್ಯಾಕಾಂಡ ನಡೆದಿದೆ. ಬಿಜೆಪಿ ನಾಯಕ ಹಾಗೂ ಜನಪದ್ ಪಂಚಾಯತ್ ಮಾಜಿ ಅಧ್ಯಕ್ಷ ಭರತ್ ಸಿಂಗ್ ಅಲಿಯಾಸ್ ಲಲ್ಲಾ ಸಿಂಗ್ ಸೇರಿದಂತೆ ಮೂವರು ಈ ಘಟನೆಯಲ್ಲಿ ದುರಂತ ಅಂತ್ಯ ಕಂಡಿದ್ದಾರೆ. ಮಂಗಳವಾರ ತಡರಾತ್ರಿ ನಡೆದ ಈ ಘಟನೆಯಲ್ಲಿ ಭರತ್ ಸಿಂಗ್ ಅವರ ಫಾರ್ಚೂನರ್ ಎಸ್ಯುವಿ ಕಾರನ್ನು ಟ್ರಕ್ಗಳ ನಡುವೆ ಸಿಲುಕಿಸಿ, ತಪ್ಪಿಸಿಕೊಳ್ಳದಂತೆ ಮಾಡಿ, ಪೆಟ್ರೋಲ್ ಸುರಿದು ಬೆಂಕಿ ಹಚ್ಚಲಾಗಿದೆ ಎಂದು ಆರೋಪಿಸಲಾಗಿದೆ. ಇಡೀ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿ
Jun 181 min read


ಪಾವತಿಸಿದರೆ ಸಿಗಲಿವೆ ಹೆಚ್ಚುವರಿ ಸೌಲಭ್ಯ - ದುಬಾರಿಯಾಗುತ್ತಾ ಇನ್ಸ್ಟಾ, ಫೇಸ್ಬುಕ್, ವಾಟ್ಸಾಪ್?!
ಸಾಮಾಜಿಕ ಜಾಲತಾಣ ದೈತ್ಯ ‘ಮೆಟಾ’ ಸಂಸ್ಥೆಯು ಫೇಸ್ಬುಕ್, ಇನ್ಸ್ಟಾಗ್ರಾಮ್ ಹಾಗೂ ವಾಟ್ಸಾಪ್ಗಳಿಗಾಗಿ ಜಾಗತಿಕವಾಗಿ ಹೊಸ ‘ಪ್ಲಸ್’ ಸಬ್ಸ್ಕ್ರಿಪ್ಷನ್ ಯೋಜನೆಗಳನ್ನು ಪ್ರಕಟಿಸಿದೆ. ಈ ಕುರಿತು ಸಂಸ್ಥೆಯ ಪ್ರಾಡಕ್ಟ್ ವಿಭಾಗದ ಮುಖ್ಯಸ್ಥೆ ನವೋಮಿ ಗ್ಲೈಡ್ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಇನ್ಸ್ಟಾಗ್ರಾಮ್ ಮತ್ತು ಫೇಸ್ಬುಕ್ ಪ್ಲಸ್ಗೆ ಮಾಸಿಕ ಸುಮಾರು ರೂ. 377 ಹಾಗೂ ವಾಟ್ಸಾಪ್ ಪ್ಲಸ್ಗೆ ರೂ. 282 ಶುಲ್ಕ ನಿಗದಿಪಡಿಸಲಾಗಿದೆ. ಕೃತಕ ಬುದ್ಧಿಮತ್ತೆ (AI) ಕ್ಷೇತ್ರದಲ್ಲಿನ ಹೂಡಿಕೆಗಾಗಿ ಹೊಸ ಆದಾಯ ಮೂಲ ಸೃಷ್ಟಿಸಲು ಮೆಟಾ ಈ ಚಂದಾದಾರಿಕೆ ಮಾದರಿ ಪರಿಚಯಿಸಿದೆ. ಈ ಪ್ರೀಮಿಯಂ ಯೋಜನೆಯಡಿ ಬಳಕೆದ
Jun 181 min read


ಅಕ್ರಮ ಜಾನುವಾರು ಸಾಗಾಟ: ಉಪ್ಪಿನಂಗಡಿಯಲ್ಲಿ ಇಬ್ಬರ ಬಂಧನ
ಹಾಸನದಿಂದ ಕೇರಳಕ್ಕೆ ದಾಖಲೆಗಳಿಲ್ಲದೆ ಅಕ್ರಮ ಹಾಗೂ ಹಿಂಸಾತ್ಮಕವಾಗಿ ಈಚರ್ ಲಾರಿಯಲ್ಲಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಉಪ್ಪಿನಂಗಡಿ ಪೊಲೀಸರು ಜೂನ್ 17ರ ನಸುಕಿನ ಜಾವ 34 ನೆಕ್ಕಿಲಾಡಿಯ ಆನೆಬೈಲ್ ಎಂಬಲ್ಲಿ ಬಂಧಿಸಿದ್ದಾರೆ. ಮತ್ತೊಬ್ಬ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. ಬಂಧಿತರನ್ನು ಲಾರಿ ಚಾಲಕ ಕಡೂರು ನಿವಾಸಿ ಪರ್ದಿನ್ ಖಾನ್ ಹಾಗೂ ಹೊಳೆನರಸೀಪುರದ ಜಾವೀದ್ ಪಾಷಾ ಎಂದು ಗುರುತಿಸಲಾಗಿದೆ. ರೆಹಮಾನ್ ಹೊಸೂರು ಪರಾರಿಯಾದ ಆರೋಪಿ. ಉಪ್ಪಿನಂಗಡಿ ಉಪನಿರೀಕ್ಷಕ ಸುತೇಶ್ ಕೆ.ಪಿ. ಮತ್ತು ಸಿಬ್ಬಂದಿ ರೌಂಡ್ಸ್ ಕರ್ತವ್ಯದಲ್ಲಿದ್ದಾಗ ಈ ಕಾರ್ಯಾಚರಣೆ ನಡೆಸಿದ್ದಾರೆ. ಲಾರಿ
Jun 181 min read


ಚಲಿಸುವ ರೈಲಿನಲ್ಲೇ ಗರ್ಭಿಣಿಗೆ ಹೆರಿಗೆ: ತಾಯಿ-ಮಗು ಸುರಕ್ಷಿತ
ಅಸ್ಸಾಂನಲ್ಲಿ ಚಲಿಸುತ್ತಿದ್ದ ಅವಧ್ ಅಸ್ಸಾಂ ಎಕ್ಸ್ಪ್ರೆಸ್ ರೈಲಿನಲ್ಲಿ ಜೂನ್ 14ರಂದು ಗರ್ಭಿಣಿಯೊಬ್ಬರಿಗೆ ಏಕಾಏಕಿ ತೀವ್ರ ಹೆರಿಗೆ ನೋವು ಕಾಣಿಸಿಕೊಂಡಿದೆ. ಈ ವೇಳೆ ರೈಲಿನಲ್ಲಿದ್ದ ಸಹ ಪ್ರಯಾಣಿಕ ನರ್ಸ್ ಹಾಗೂ ರೈಲ್ವೆ ಸಿಬ್ಬಂದಿಯ ಸಮಯೋಚಿತ ನೆರವು ಮತ್ತು ಧೈರ್ಯದಿಂದ ಮಹಿಳೆ ಸುರಕ್ಷಿತವಾಗಿ ಮಗುವಿಗೆ ಜನ್ಮ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ರೈಲ್ವೆ ಅಧಿಕಾರಿಗಳು ತಕ್ಷಣವೇ ಕಾರ್ಯಪ್ರವೃತ್ತರಾಗಿ ರಂಗಿಯಾ ನಿಲ್ದಾಣದಲ್ಲಿ ವೈದ್ಯಕೀಯ ತಂಡವನ್ನು ಸಜ್ಜುಗೊಳಿಸಿದರು. ರೈಲು ನಿಲ್ದಾಣಕ್ಕೆ ತಲುಪುತ್ತಿದ್ದಂತೆ ಡಾ. ಶರತ್ ಚಂದ್ರ ನೇತೃತ್ವದ ತಂಡವು ತಾಯಿ ಮತ್ತು ಅಕಾಲಿಕವಾಗಿ ಜನಿಸಿದ ಮಗುವನ
Jun 181 min read
Archive
bottom of page



