top of page
News Articles
Sathyapatha News Plus


ಸಾಕು ಬೆಕ್ಕಿನ ಸಮಯಪ್ರಜ್ಞೆ: ಕುಸಿಯುವ ಮುನ್ನವೇ ಹೊರ ಓಡಿ ತಂದೆ-ಮಗನ ಪ್ರಾಣ ಉಳಿಸಿದ ಮೂಕಪ್ರಾಣಿ!
ಬಾಗಲಕೋಟೆ ನಗರದ ವಲ್ಲಭಬಾಯಿ ನಗರದಲ್ಲಿ ಧಾರಾಕಾರ ಮಳೆಗೆ ಮನೆಯ ಮೇಲ್ಛಾವಣಿ ಕುಸಿದು ಬೀಳುವ ಕೆಲವೇ ಕ್ಷಣಗಳ ಮುನ್ನ, ಸಾಕು ಬೆಕ್ಕಿನ ಕಾರಣದಿಂದ ತಂದೆ ಮತ್ತು ಮಗ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ರೋಮಾಂಚನಕಾರಿ ಘಟನೆ ಸ್ಥಳೀಯರಲ್ಲಿ ತೀವ್ರ ಅಚ್ಚರಿ ಮೂಡಿಸಿದ್ದು, ಸಾಕು ಬೆಕ್ಕೇ ಈ ಕುಟುಂಬದ ಪಾಲಿಗೆ ನಿಜವಾದ ಜೀವ ರಕ್ಷಕನಾಗಿದೆ. ಮನೆಯಲ್ಲಿದ್ದ ಶಬ್ಬೀರ್ ಬಾಗವಾನ್ ಮತ್ತು ಅವರ ಪುತ್ರ ಆರ್ಬಾಜ್ ಅವರು ಮಣ್ಣು ಉದುರುವುದನ್ನು ಗಮನಿಸುವಷ್ಟರಲ್ಲಿ, ಅವರ ಸಾಕು ಬೆಕ್ಕು ಭಯದಿಂದ ಹೊರಗೆ ಓಡಿದೆ. ಅದನ್ನು ಹಿಡಿಯಲು ತಂದೆ-ಮಗ ಇಬ್ಬರೂ ಮನೆಯಿಂದ ಹೊರಬಂದ ತಕ್ಷಣ ಇಡೀ ಮೇಲ್ಛಾವಣಿ ಧರೆಗುರುಳಿದೆ. ಅದೃಷ್
Jun 71 min read


ಎಲ್ಪಿಜಿ ಸಿಲಿಂಡರ್ ದರ ಏರಿಕೆ: ಜನಸಾಮಾನ್ಯರಿಗೆ ಮತ್ತೊಂದು ಬೆಲೆ ಏರಿಕೆ ಬರೆ
ಪೆಟ್ರೋಲ್, ಡೀಸೆಲ್ ಮತ್ತು ಸಿಎನ್ಜಿ ದರ ಏರಿಕೆಯ ಬೆನ್ನಲ್ಲೇ ದೇಶದ ಜನಸಾಮಾನ್ಯರಿಗೆ ಮತ್ತೊಂದು ಆಘಾತ ಎದುರಾಗಿದೆ. ಗೃಹಬಳಕೆಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಪ್ರತಿ ಸಿಲಿಂಡರ್ಗೆ 29 ರೂಪಾಯಿ ಹೆಚ್ಚಳ ಮಾಡಲಾಗಿದೆ. ಕಳೆದ ಮೂರು ತಿಂಗಳಲ್ಲಿ ಇದು ಎರಡನೇ ಬಾರಿ ದರ ಏರಿಕೆಯಾಗಿದ್ದು, ಪರಿಷ್ಕೃತ ದರಗಳು ಇಂದಿನಿಂದಲೇ (ಜೂನ್ 7) ಜಾರಿಗೆ ಬಂದಿವೆ. ಹೊಸ ದರ ಪರಿಷ್ಕರಣೆಯ ನಂತರ, ದೆಹಲಿಯಲ್ಲಿ 14.2 ಕೆಜಿ ಗೃಹಬಳಕೆಯ ಸಿಲಿಂಡರ್ ಬೆಲೆ 913 ರೂಪಾಯಿಯಿಂದ 942 ರೂಪಾಯಿಗೆ ಏರಿಕೆಯಾಗಿದೆ. ಮಧ್ಯಪ್ರಾಚ್ಯದಲ್ಲಿ ಮುಂದುವರಿದಿರುವ ಸಂಘರ್ಷ ಹಾಗೂ ಜಾಗತಿಕ ಮಾರುಕಟ್ಟೆಯಲ್ಲಿ ಇಂಧನ ಪೂರೈಕೆಯ ಮೇಲಿನ ಒತ್ತಡ
Jun 71 min read


ಖ್ಯಾತ ಮಲಯಾಳಂ ನಟ ಸಲೀಂ ಕುಮಾರ್ ನಿಧನ: ಚಿತ್ರರಂಗಕ್ಕೆ ತುಂಬಲಾರದ ನಷ್ಟ
ಮಲಯಾಳಂ ಚಿತ್ರರಂಗದ ಖ್ಯಾತ ನಟ ಹಾಗೂ ರಾಷ್ಟ್ರ ಪ್ರಶಸ್ತಿ ವಿಜೇತ ಸಲೀಂ ಕುಮಾರ್ (56) ಅವರು ಶನಿವಾರ ರಾತ್ರಿ ಕೊಚ್ಚಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತಾದರೂ, ಫಲಕಾರಿಯಾಗದೆ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಮಿಮಿಕ್ರಿ ಕಲಾವಿದರಾಗಿ ವೃತ್ತಿಜೀವನ ಆರಂಭಿಸಿದ ಸಲೀಂ ಕುಮಾರ್, 300ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿ ದಕ್ಷಿಣ ಭಾರತದಾದ್ಯಂತ ಜನಪ್ರಿಯತೆ ಗಳಿಸಿದ್ದರು. 'ಆದಾಮಿಂತೆ ಮಗನ್ ಅಬು' ಚಿತ್ರದ ಅತ್ಯುತ್ತಮ ನಟನೆಗಾಗಿ ಅವರಿಗೆ ರಾಷ್ಟ್ರ ಪ್ರಶಸ್ತಿ ಒಲಿದಿತ್ತು. ಕೇವಲ ಹಾಸ್ಯ
Jun 71 min read


ನಾರ್ವೆ ಚೆಸ್ ಚಾಂಪಿಯನ್ ಆದ ಪ್ರಜ್ಞಾನಂದ: ಭಾರತಕ್ಕೆ ಸಂದ ಐತಿಹಾಸಿಕ ಗೌರವ
ಭಾರತದ ಯುವ ಗ್ರ್ಯಾಂಡ್ಮಾಸ್ಟರ್ ಆರ್. ಪ್ರಜ್ಞಾನಂದ ಅವರು ನಾರ್ವೆ ಚೆಸ್ 2026 ಟೂರ್ನಿಯಲ್ಲಿ ಚಾಂಪಿಯನ್ ಆಗಿ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಈ ಪ್ರಶಸ್ತಿ ಗೆದ್ದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ 20 ವರ್ಷದ ಪ್ರಜ್ಞಾನಂದ ಪಾತ್ರರಾಗಿದ್ದಾರೆ. ಟೂರ್ನಿಯ ಆರಂಭದಲ್ಲಿ ಸತತ ಎರಡು ಸೋಲುಗಳನ್ನು ಕಂಡು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದ್ದ ಅವರು, ಅದ್ಭುತವಾಗಿ ಪುಟಿದೆದ್ದರು. ಮ್ಯಾಗ್ನಸ್ ಕಾರ್ಲ್ಸನ್, ಅಲಿರೆಝಾ ಫಿರೌಜ್ಜಾ ಮತ್ತು ಡಿ. ಗುಕೇಶ್ ಅವರಂತಹ ದಿಗ್ಗಜರನ್ನು ಮಣಿಸಿ, ಕ್ಲಾಸಿಕಲ್ ವಿಭಾಗದಲ್ಲಿ ಸತತ ನಾಲ್ಕು ಗೆಲುವು ದಾಖಲಿಸಿದರು. ಅಂತಿಮ ಸುತ್ತಿನಲ್ಲಿ ಜರ್ಮನಿಯ ವಿನ್ಸೆಂಟ್ ಕೀಮರ
Jun 71 min read


ಸಿಇಟಿ ಫಲಿತಾಂಶ: ದಕ್ಷಿಣ ಕನ್ನಡ ಜಿಲ್ಲೆಯ ವಿದ್ಯಾರ್ಥಿಗಳಿಗೆ ರ್ಯಾಂಕ್ಗಳ ಸುರಿಮಳೆ
ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ಎಂಜಿನಿಯರಿಂಗ್ ವಿಭಾಗದ ಮೊದಲ 10 ರ್ಯಾಂಕ್ಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯು ಭರ್ಜರಿ ನಾಲ್ಕು ರ್ಯಾಂಕ್ಗಳನ್ನು ಮುಡಿಗೇರಿಸಿಕೊಂಡಿದೆ. ಮಂಗಳೂರಿನ 'ದಿ ಲರ್ನಿಂಗ್ ಸೆಂಟರ್ ಪಿಯು ಕಾಲೇಜು' ಮೂರು ರ್ಯಾಂಕ್ಗಳನ್ನು ಬಾಚಿಕೊಂಡರೆ, ಬೆಳ್ತಂಗಡಿಯ 'ವಿದ್ವತ್ ಪಿಯು ಕಾಲೇಜು' ಒಂದು ರ್ಯಾಂಕ್ ಗಳಿಸಿ ಜಿಲ್ಲೆಗೆ ಕೀರ್ತಿ ತಂದಿದೆ. ದಿ ಲರ್ನಿಂಗ್ ಸೆಂಟರ್ನ ಇರಾ ಜೈನ್ 4ನೇ ರ್ಯಾಂಕ್, ರಿಶೊನ್ ಫೆರ್ನಾಂಡಿಸ್ 5ನೇ ರ್ಯಾಂಕ್ ಹಾಗೂ ಅಭಿ ಸಣ್ಣಯ್ಯ 8ನೇ ರ್ಯಾಂಕ್ ಪಡೆದು ಸಾಧನೆ ಮಾಡಿದ್ದಾರೆ. ವಿದ್ವತ್ ಕಾಲೇಜಿನ ಚಿನ್ಮಯ್ ಜಿ.ಕೆ 7ನೇ ರ್ಯಾಂಕ್ ಪಡೆದಿದ
Jun 61 min read


ಪಾಕ್ ಉಗ್ರನೊಂದಿಗೆ ಸಂಪರ್ಕ: ರಾಜ್ಯದಲ್ಲಿ ಇಬ್ಬರು ಶಂಕಿತರ ಬಂಧನ
ಪಾಕಿಸ್ತಾನ ಮೂಲದ ಶಂಕಿತ ಉಗ್ರನೊಂದಿಗೆ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ಇಬ್ಬರು ಯುವಕರನ್ನು ತುಮಕೂರು ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ತುಮಕೂರಿನ ಅಲ್ಲಾಬಕ್ಷ್ ಮತ್ತು ದಾವಣಗೆರೆಯ ಜಮೀರ್ ಖಾನ್ ಎಂದು ಗುರುತಿಸಲಾಗಿದೆ. ದೇಶವಿರೋಧಿ ಕೃತ್ಯಗಳ ಸಂಚಿನ ಹಿನ್ನೆಲೆಯಲ್ಲಿ ಕೇಂದ್ರ ಗುಪ್ತಚರ ಇಲಾಖೆಯ ಮಾಹಿತಿಯ ಮೇರೆಗೆ ಈ ಜಂಟಿ ಕಾರ್ಯಾಚರಣೆ ನಡೆಸಲಾಗಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ಪಾಕಿಸ್ತಾನದ ‘ರಾಣಾ’ ಎಂಬಾತ ಇನ್ಸ್ಟಾಗ್ರಾಮ್ ಮತ್ತು ವಾಟ್ಸ್ಆ್ಯಪ್ ಗುಂಪುಗಳ ಮೂಲಕ ಇವರನ್ನು ಸಂಪರ್ಕಿಸಿದ್ದನು. ಆರಂಭದಲ್ಲಿ ಧಾರ್ಮಿಕ ವಿಚಾರಗಳನ್ನು ಹಂಚಿಕೊಳ್ಳುತ್ತಿದ್ದ ಆತ, ಇತ್ತೀಚೆಗೆ ಪುಣೆಯ
Jun 61 min read


ಜಂತರ್ ಮಂತರ್ನಲ್ಲಿ ಇಂದು 'ಕಾಕ್ರೋಚ್ ಜನತಾ ಪಾರ್ಟಿ' ಪ್ರತಿಭಟನೆ: ನಿಯಮಾವಳಿ ಬಿಡುಗಡೆ
ಕಾಕ್ರೋಚ್ ಜನತಾ ಪಾರ್ಟಿ' ಇಂದು (ಜೂನ್ 6) ನವದೆಹಲಿಯ ಜಂತರ್ ಮಂತರ್ನಲ್ಲಿ ತನ್ನ ಮೊದಲ ಸಾರ್ವಜನಿಕ ಪ್ರತಿಭಟನೆಯನ್ನು ನಡೆಸಲು ಸಜ್ಜಾಗಿದೆ. ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಈ ಧರಣಿ ಹಮ್ಮಿಕೊಳ್ಳಲಾಗಿದೆ. ಈ ಪ್ರತಿಭಟನೆಗೆ ಮುನ್ನ, ಗುಂಪು ಭಾಗವಹಿಸುವವರಿಗಾಗಿ ‘ಮಾಡಬೇಕಾದ ಮತ್ತು ಮಾಡಬಾರದ ಕೆಲಸಗಳ’ ಪ್ರಮುಖ ಪಟ್ಟಿಯನ್ನು ಸಾಮಾಜಿಕ ಮಾಧ್ಯಮದಲ್ಲಿ ಬಿಡುಗಡೆ ಮಾಡಿದೆ. ಭಾಗವಹಿಸುವವರು ರಾಷ್ಟ್ರಧ್ವಜವನ್ನು ಹೊತ್ತು ತರಲು, ಸನ್ಸ್ಕ್ರೀನ್ ಹಚ್ಚಿಕೊಳ್ಳಲು, ಟೋಪಿಗಳನ್ನು ಧರಿಸಲು ಮತ್ತು ಸಾಕಷ್ಟು ನೀರು ಕುಡಿದು ಹೈಡ್ರೀಕರಿಸಿಕೊಳ್ಳಲು ಸೂಚಿಸಲಾಗಿದೆ. ಜೊತೆಗೆ ಪ್
Jun 61 min read


ಮಂಗಳೂರು: ಕಟ್ಟಡದಿಂದ ಬಿದ್ದು ರಾಷ್ಟ್ರ ಮಟ್ಟದ ಪವರ್ ಲಿಫ್ಟರ್ ಸಾವು!
ಮಂಗಳೂರಿನ ಪದವಿನಂಗಡಿ ಸಮೀಪದ ಹೊಸ ಕಟ್ಟಡವೊಂದರ ನಾಲ್ಕನೇ ಮಹಡಿಯಲ್ಲಿ ವೆಲ್ಡಿಂಗ್ ಕೆಲಸ ಮಾಡುತ್ತಿದ್ದ ರಾಷ್ಟ್ರ ಮಟ್ಟದ ಪವರ್ ಲಿಫ್ಟರ್ ಸಂತೋಷ್ ಪೂಜಾರಿ (45) ಅವರು ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ತಲೆಗೆ ತೀವ್ರ ಪೆಟ್ಟಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗಲಿಲ್ಲ. ಸ್ವಂತ ಉದ್ಯೋಗ ಹೊಂದಿದ್ದ ಕ್ರೀಡಾಪಟು ಉಳ್ಳಾಲ ಧರ್ಮನಗರದ ನಿವಾಸಿಯಾದ ಇವರು ತೊಕ್ಕೊಟ್ಟು ಶಕ್ತಿ ಭಾರತ್ ವ್ಯಾಯಾಮ ಶಾಲೆಯ ಸದಸ್ಯರಾಗಿದ್ದರು. ಈ ಹಿಂದೆ ವಿದೇಶದಲ್ಲಿ ವೆಲ್ಡಿಂಗ್ ಕೆಲಸ ಮಾಡಿಕೊಂಡಿದ್ದ ಇವರು, ಊರಿಗೆ ಮರಳಿದ ಬಳಿಕ ಉಳ್ಳಾಲ ಬೈಲನಲ್ಲಿ ಸ್ವಂತ ವೆಲ್ಡಿಂಗ್ ಶಾಪ್
Jun 51 min read
ಡಿಕೆಶಿ ಸರ್ಕಾರಕ್ಕೆ ಆರಂಭದಲ್ಲೇ ಶಾಕ್: ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ!
ಖಾತೆ ಹಂಚಿಕೆ ಬೆನ್ನಲ್ಲೇ ಅಸಮಾಧಾನ ಸ್ಫೋಟ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಂಪುಟದ ಖಾತೆ ಹಂಚಿಕೆಯಾದ ಕೇವಲ 48 ಗಂಟೆಗಳಲ್ಲಿಯೇ ಕಾಂಗ್ರೆಸ್ ಸರ್ಕಾರಕ್ಕೆ ಭಾರಿ ಹಿನ್ನಡೆಯಾಗಿದೆ. ತಮಗೆ ಹಂಚಿಕೆಯಾಗಿದ್ದ ಜಲಸಂಪನ್ಮೂಲ ಖಾತೆಯಿಂದ ಅಸಮಾಧಾನಗೊಂಡ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ಅವರು ಸಚಿವ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ. ಮಾತು ತಪ್ಪಿದ ಸಿಎಂ: ರೆಡ್ಡಿ ಆಕ್ರೋಶ ಬೆಂಗಳೂರು ನಗರಾಭಿವೃದ್ಧಿ ಖಾತೆಯ ಮೇಲೆ ಕಣ್ಣಿಟ್ಟಿದ್ದ ರೆಡ್ಡಿಗೆ ನಿರಾಸೆಯಾಗಿದ್ದು, ಆ ಖಾತೆ ಕೃಷ್ಣಭೈರೇಗೌಡ ಪಾಲಾಗಿದೆ. 2023 ರಲ್ಲಿ ಡಿ.ಕೆ. ಶಿವಕುಮಾರ್ ಅವರು ನೀಡಿದ್ದ ಭರವಸೆಯನ್ನು ಉಳಿಸಿಕೊಳ್
Jun 51 min read


ಮುಖ್ಯಮಂತ್ರಿ ಕುರ್ಚಿಗೇರಿದ ಬೆನ್ನಲ್ಲೇ ಆ್ಯಕ್ಷನ್ -ಪ್ರತಿ ತಾಲೂಕಿನಲ್ಲೂ ವಿಶೇಷ ಪೊಲೀಸ್ ಸ್ಕ್ವಾಡ್ ರಚನೆಗೆ ಸಿಎಂ ಡಿಕೆ ಶಿವಕುಮಾರ್ ಸೂಚನೆ
ರಾಜ್ಯದಲ್ಲಿ ಹೆಚ್ಚುತ್ತಿರುವ ರೌಡಿಸಂ, ಡ್ರಗ್ಸ್ ದಂಧೆ, ಜೂಜಾಟ ಹಾಗೂ ಮಟ್ಕಾ ಸೇರಿದಂತೆ ವಿವಿಧ ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ. ಈ ನಿಟ್ಟಿನಲ್ಲಿ ಕಾನೂನು ಸುವ್ಯವಸ್ಥೆ ಬಲಪಡಿಸಲು ರಾಜ್ಯದ ಪ್ರತಿ ತಾಲೂಕಿನಲ್ಲಿ ವಿಶೇಷ ಪೊಲೀಸ್ ಸ್ಕ್ವಾಡ್ಗಳನ್ನು ರಚಿಸುವಂತೆ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಮಹತ್ವದ ನಿರ್ದೇಶನ ನೀಡಿದ್ದಾರೆ. ವಿಧಾನಸೌಧದಲ್ಲಿ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಯ ಬಳಿಕ ಮಾತನಾಡಿದ ಸಿಎಂ, ಪ್ರತಿ ತಂಡದಲ್ಲಿ 10 ರಿಂದ 15 ಪೊಲೀಸ್ ಸಿಬ್ಬಂದಿ ಇರಲಿದ್ದಾರೆ ಎಂದು ತಿಳಿಸಿದರು. ಈ ವಿಶೇಷ ಸ್ಕ್ವಾಡ್
Jun 41 min read


ಕಾರಿನಲ್ಲಿ ಉಸಿರುಗಟ್ಟಿ ಮೂರು ವರ್ಷದ ಮಗು ಸಾವು
ಕಲಬುರಗಿ ಜಿಲ್ಲೆಯ ಶಹಾಬಾದ್ ತಾಲೂಕಿನ ತೊನಸನಹಳ್ಳಿ (ಎಸ್) ಗ್ರಾಮದಲ್ಲಿ ಕಾರಿನೊಳಗೆ ಉಸಿರುಗಟ್ಟಿ ಮೂರು ವರ್ಷದ ಮಗು ಮೃತಪಟ್ಟಿರುವ ಧೃತಿಗೆಡಿಸುವ ಘಟನೆ ನಡೆದಿದೆ. ಕೊಟ್ಟುರೇಶ್ವರ ಎಂಬವರ ಪುತ್ರ ಬಸವಪ್ರಭು ಮೃತ ದುರ್ದೈವಿಯಾಗಿದ್ದಾನೆ. ಪೋಷಕರು ಮಗುವನ್ನು ಕಾರಿನಲ್ಲಿ ಶಾಲೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿ ಕಾರನ್ನು ಲಾಕ್ ಮಾಡದೇ ಪಾರ್ಕ್ ಮಾಡಿ ತೆರಳಿದ್ದರು. ಈ ವೇಳೆ ಮಗು ಆಟವಾಡುತ್ತಾ ಕಾರಿನೊಳಗೆ ಪ್ರವೇಶಿಸಿದ್ದು, ತಾನಾಗಿಯೇ ಕಾರಿನ ಎಲ್ಲಾ ಡೋರ್ಗಳು ಲಾಕ್ ಆಗಿವೆ. ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಮಗುವಿಗಾಗಿ ಹುಡುಕಾಡಿದ ಪೋಷಕರು, ಕೊನೆಗೆ ಕಾರು ತೆರೆದು ನೋಡಿದಾಗ ಮಗು ಶವವಾಗಿ ಪತ್
Jun 41 min read


ಸ್ನ್ಯಾಪ್ಚಾಟ್ನಲ್ಲಿ ಹುಡುಗಿ ಸೋಗು: ಪುತ್ತೂರು ನಿವಾಸಿಗೆ ₹4.84 ಲಕ್ಷ ವಂಚನೆ
ದಿನ ಕಳೆದಂತೆ ಸೈಬರ್ ವಂಚಕರ ಹಾವಳಿ ಹೆಚ್ಚಾಗುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ನ್ಯಾಪ್ಚಾಟ್ನಲ್ಲಿ ಹುಡುಗಿಯ ಸೋಗಿನಲ್ಲಿ ಬಂದ ವಂಚಕನೊಬ್ಬ ಪುತ್ತೂರು ನಿವಾಸಿಗೆ ಬರೋಬ್ಬರಿ 4,84,203 ರೂಪಾಯಿ ವಂಚಿಸಿದ್ದಾನೆ. ಈ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಂಚಕನು ‘ಅನ್ನಪೂರ್ಣ ಗೌಡ’ ಎಂಬ ಹೆಸರಿನ ನಕಲಿ ಐಡಿ ಬಳಸಿ, ತಾನು ಬೆಂಗಳೂರಿನ ವಿಪ್ರೋ ಕಂಪನಿ ಉದ್ಯೋಗಿ ಎಂದು ನಂಬಿಸಿದ್ದನು. ಬಳಿಕ ವಾಟ್ಸಾಪ್ ಸಂಖ್ಯೆ ಪಡೆದು ನಿರಂತರ ಚಾಟಿಂಗ್ ಮಾಡಿದ್ದಲ್ಲದೆ, ತನಗೆ ಹಣಕಾಸಿನ ತೊಂದರೆ ಇದೆ ಎಂದು ಹಂತ ಹಂತವಾಗಿ ಲಕ್
Jun 41 min read


ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಘೋಷಣೆ
ರಾಜ್ಯದ ಎಲ್ಲಾ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ನೂತನ ಸಿಎಂ ಡಿ.ಕೆ. ಶಿವಕುಮಾರ್ ಅವರು ಸಿಹಿ ಸುದ್ದಿ ನೀಡಿದ್ದಾರೆ. ಅಧಿಕಾರ ಸ್ವೀಕರಿಸಿದ ಬಳಿಕ ವಿಧಾನಸೌಧದಲ್ಲಿ ನಡೆಸಿದ ತಮ್ಮ ಮೊದಲ ಸುದ್ದಿಗೋಷ್ಠಿಯಲ್ಲಿ ಅವರು ಈ ಮಹತ್ವದ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಇದುವರೆಗೆ ಕೇವಲ ವಿದ್ಯಾರ್ಥಿನಿಯರಿಗೆ ಮಾತ್ರ ಸೀಮಿತವಾಗಿದ್ದ ಉಚಿತ ಬಸ್ ಪಾಸ್ ಸೌಲಭ್ಯವನ್ನು, ಇನ್ನು ಮುಂದೆ ಶಾಲಾ ಬಾಲಕರು ಹಾಗೂ ಕಾಲೇಜು ಯುವಕರಿಗೂ ವಿಸ್ತರಿಸಲಾಗುವುದು ಎಂದು ಸಿಎಂ ತಿಳಿಸಿದ್ದಾರೆ. ಉಚಿತ ಪಾಸ್ ಪಡೆಯಲು ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವುದು ಕಡ್ಡಾಯವಾಗಿರುತ್ತದೆ. ಇದಕ್ಕಾಗಿ ಎಷ್ಟು ಸಾವಿರ ಕೋಟಿ ರೂಪಾ
Jun 41 min read


ದಕ್ಷಿಣ ಕನ್ನಡ ರೈತರ ಗನ್ ಲೈಸನ್ಸ್ ಸಮಸ್ಯೆ: ತುರ್ತು ಸ್ಪಂದನೆಗೆ ಸಂಸದ ಕ್ಯಾ. ಚೌಟ ಪತ್ರ
ದಕ್ಷಿಣ ಕನ್ನಡ ಜಿಲ್ಲೆಯ ಕೃಷಿಕರು ವನ್ಯಜೀವಿಗಳ ಉಪಟಳದಿಂದ ಬೆಳೆ ರಕ್ಷಿಸಿಕೊಳ್ಳಲು ಬಳಸುವ ಬಂದೂಕು ಪರವಾನಗಿ (ಗನ್ ಲೈಸನ್ಸ್) ನವೀಕರಣ ಪ್ರಕ್ರಿಯೆಯಲ್ಲಿ ಎದುರಿಸುತ್ತಿರುವ ಸಮಸ್ಯೆಗಳನ್ನು ತಕ್ಷಣ ಬಗೆಹರಿಸಬೇಕೆಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ರಾಜ್ಯ ಪೊಲೀಸ್ ಮಹಾ ನಿರ್ದೇಶಕರು ಹಾಗೂ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಕಠಿಣ ನಿಯಮಗಳ ನೆಪವೊಡ್ಡಿ ಅಧಿಕಾರಿಗಳು ರೈತರ ನವೀಕರಣ ಅರ್ಜಿಗಳನ್ನು ವ್ಯವಸ್ಥಿತವಾಗಿ ತಿರಸ್ಕರಿಸುತ್ತಿರುವುದು ಕಳವಳಕಾರಿಯಾಗಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ. ಕಳೆದೊಂದು ವರ್ಷದಲ್ಲಿ ವನ್ಯಜೀವಿಗಳು ಕೃಷಿ ಭ
Jun 31 min read


ಕೊನೆಗೂ ವಿಧಾನಸೌಧದ ಗದ್ದುಗೆ ಏರಿದ ಕನಕಪುರ ಬಂಡೆ: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಬಹುನಿರೀಕ್ಷಿತ ಬೆಳವಣಿಗೆಯೊಂದಕ್ಕೆ ಇಂದು ತೆರೆಬಿದ್ದಿದ್ದು, ಕೆಪಿಸಿಸಿ ಅಧ್ಯಕ್ಷ ಹಾಗೂ ಕಾಂಗ್ರೆಸ್ನ ಹಿರಿಯ ನಾಯಕ ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಬೆಂಗಳೂರಿನ ಲೋಕಭವನ ಆವರಣದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಅಧಿಕಾರ ಮತ್ತು ಗೌಪ್ಯತೆಯ ಪ್ರತಿಜ್ಞಾವಿಧಿ ಬೋಧಿಸಿದರು. ಸಾವಿರಾರು ಕಾರ್ಯಕರ್ತರು, ಗಣ್ಯರು ಹಾಗೂ ವಿವಿಧ ಕ್ಷೇತ್ರಗಳ ಪ್ರಮುಖರ ಸಮ್ಮುಖದಲ್ಲಿ ನಡೆದ ಸಮಾರಂಭ ರಾಜಕೀಯವಾಗಿ ಮಹತ್ವ ಪಡೆದಿತ್ತು. ಸಾಂಪ್ರದಾಯಿಕ ಉಡುಗೆಯಲ್ಲಿ ವೇದಿಕೆ ಏರಿದ ಡಿ.ಕ
Jun 31 min read


ಇರಾನ್ನಿಂದ ಯುಎಸ್ ನೆಲೆಗಳ ಮೇಲೆ ಡ್ರೋನ್, ಕ್ಷಿಪಣಿ ದಾಳಿ: ಕುವೈತ್, ಬಹ್ರೇನ್ನಲ್ಲಿ ತಲ್ಲಣ!
ಕೆಶ್ಮ್ ದ್ವೀಪದ ಮೇಲಿನ ದಾಳಿಗೆ ಪ್ರತೀಕಾರವಾಗಿ ಇರಾನ್ ಸಶಸ್ತ್ರ ಪಡೆಗಳು ಕುವೈತ್ ಮತ್ತು ಬಹ್ರೇನ್ನಲ್ಲಿರುವ ಅಮೆರಿಕದ ಮಿಲಿಟರಿ ನೆಲೆಗಳನ್ನು ಗುರಿಯಾಗಿಸಿ ಕ್ಷಿಪಣಿ ಹಾಗೂ ಡ್ರೋನ್ ದಾಳಿ ನಡೆಸಿವೆ. ಆದರೆ, ಅಮೆರಿಕ ಸೇನೆಯು ಈ ವರದಿಗಳನ್ನು ಸಂಪೂರ್ಣವಾಗಿ ತಳ್ಳಿಹಾಕಿದೆ. ಇದೇ ವೇಳೆ ಕುವೈತ್ನಾದ್ಯಂತ ಭಾರಿ ಸ್ಫೋಟದ ಶಬ್ದಗಳು ಕೇಳಿಬಂದಿದ್ದು, ತನ್ನ ವಾಯು ರಕ್ಷಣಾ ವ್ಯವಸ್ಥೆಯು ಶತ್ರುಗಳ ಕ್ಷಿಪಣಿ ಮತ್ತು ಡ್ರೋನ್ಗಳನ್ನು ಯಶಸ್ವಿಯಾಗಿ ಹೊಡೆದುರುಳಿಸಿದೆ ಎಂದು ಕುವೈತ್ ಸೇನೆ ತಿಳಿಸಿದೆ. ಅಂತಾರಾಷ್ಟ್ರೀಯ ಜಲಪ್ರದೇಶದಲ್ಲಿ ಅಮೆರಿಕ ಡ್ರೋನ್ ಅನ್ನು ಇರಾನ್ ಹೊಡೆದುರುಳಿಸಿದ ನಂತರ ಈ ಸಂಘರ್ಷ ತಾ
Jun 31 min read


ಅಣ್ಣಾಮಲೈ ಮನವೊಲಿಸಿದ ಅಮಿತ್ ಶಾ: ತಮಿಳುನಾಡು ಬಿಜೆಪಿಯಲ್ಲಿ ಬದಲಾವಣೆಯ ಗಾಳಿ!
ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಪಕ್ಷಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದ ಘಟನೆ ತೀವ್ರ ಸಂಚಲನ ಮೂಡಿಸಿದೆ. ಅವರು ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರನ್ನು ಭೇಟಿಯಾಗಿ ರಾಜೀನಾಮೆ ಪತ್ರ ಸಲ್ಲಿಸಿದ್ದರು. ಅಲ್ಲದೆ, ಬಿಜೆಪಿಯಿಂದ ಹೊರಬಂದು 'ಮಕ್ಕಳ್ ಶಕ್ತಿ ಇಯಕ್ಕಂ' ಹೆಸರಿನ ಸ್ವತಂತ್ರ ಸಂಘಟನೆ ಆರಂಭಿಸಲು ನಿರ್ಧರಿಸಿದ್ದರು ಎಂದು ವರದಿಯಾಗಿತ್ತು. ಆದರೆ, ಈ ರಾಜಕೀಯ ಹೈಡ್ರಾಮಾಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಎಂಟ್ರಿ ಕೊಟ್ಟ ಬೆನ್ನಲ್ಲೇ ಕಥೆ ಸಂಪೂರ್ಣ ಉಲ್ಟಾ ಆಗಿದೆ. ಅಣ್ಣಾಮಲೈ ಅವರೊಂದಿಗೆ ಗಹನವಾದ ಚರ್ಚೆ ನಡೆಸಿದ ಅಮಿತ್ ಶಾ, ಅವರ ಅಸಮಾಧಾನವನ್ನು ಶಮನಗೊಳಿಸ
Jun 31 min read


ಡಿಕೆ ಶಿವಕುಮಾರ್ ಸಿಎಂ ಆಗಿ ಇಂದು ಪ್ರಮಾಣವಚನ: ಸರ್ಕಾರಿ ನೌಕರರಿಗೆ ಅರ್ಧದಿನ ರಜೆ!
ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿಗಳ ಕಟ್ಟಡದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಮಧ್ಯಾಹ್ನದ ನಂತರ ರಜೆ ಘೋಷಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಅಧಿಕೃತ ಆದೇಶ ಹೊರಡಿಸಿದೆ. ಈ ಐತಿಹಾಸಿಕ ಪ್ರಮಾಣ ವಚನ ಸಮಾರಂಭವು ಇಂದು ಅಪರಾಹ್ನ 4:05 ಗಂಟೆಗೆ ಬೆಂಗಳೂರಿನ ‘ಲೋಕಭವನ’ದಲ್ಲಿ ಅದ್ಧೂರಿಯಾಗಿ ನಡೆಯಲಿದೆ. ಕಾರ್ಯಕ್ರಮಕ್ಕೆ ಗಣ್ಯಾತಿಗಣ್ಯರು ಹಾಗೂ ಲಕ್ಷಾಂತರ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸುವ ನಿರೀಕ್ಷ
Jun 31 min read


ನಾಳೆ ಡಿ.ಕೆ. ಶಿವಕುಮಾರ್ ಪ್ರಮಾಣವಚನ: ಮಧ್ಯಾಹ್ನದಿಂದ ಸರ್ಕಾರಿ ನೌಕರರಿಗೆ ರಜೆ, ಸಂಚಾರ ಮಾರ್ಪಾಡು
ನಿಯೋಜಿತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪ್ರಮಾಣವಚನ ಸಮಾರಂಭವು ನಾಳೆ ಲೋಕಭವನದಲ್ಲಿ ನಡೆಯಲಿದ್ದು, ಸುತ್ತಮುತ್ತಲ ಪ್ರದೇಶಗಳಲ್ಲಿ ಭದ್ರತೆ ಹಾಗೂ ಸಂಚಾರ ದಟ್ಟಣೆ ನಿಯಂತ್ರಣಕ್ಕಾಗಿ ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡಗಳ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ನಾಳೆ ಮಧ್ಯಾಹ್ನದಿಂದ ರಜೆ ಘೋಷಿಸಲಾಗಿದೆ. ಲೋಕಭವನದ ಕಾರ್ಯಕ್ರಮಕ್ಕೆ ಕೇವಲ ಆಹ್ವಾನಿತರಿಗೆ ಮಾತ್ರ ಪ್ರವೇಶವಿದ್ದು, ಸಾರ್ವಜನಿಕರಿಗೆ ಅವಕಾಶವಿರುವುದಿಲ್ಲ. ಸಾರ್ವಜನಿಕರ ಅನುಕೂಲಕ್ಕಾಗಿ ನಾಳೆ ಮಧ್ಯಾಹ್ನ 12 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಲೋ
Jun 21 min read


ತಮಿಳುನಾಡು ಬಿಜೆಪಿಗೆ ಬಿಗ್ ಶಾಕ್: ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಕೆ. ಅಣ್ಣಾಮಲೈ ರಾಜೀನಾಮೆ
ತಮಿಳುನಾಡು ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ ಬಿಜೆಪಿ ನಾಯಕ ಕೆ. ಅಣ್ಣಾಮಲೈ ಮಂಗಳವಾರ (ಜೂನ್ 2) ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ದೆಹಲಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್ ಅವರನ್ನು ಭೇಟಿಯಾಗಿ ಅವರು ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದರು. ತಮಿಳುನಾಡು ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ನೈನಾರ್ ನಾಗೇಂದ್ರನ್ ಅವರನ್ನು ನೇಮಿಸಿದಾಗಿನಿಂದಲೂ ಅಣ್ಣಾಮಲೈ ಅಸಮಾಧಾನಗೊಂಡಿದ್ದರು. ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್ ಹಾಗೂ ಬಿ.ಎಲ್. ಸಂತೋಷ್ ಅವರೊಂದಿಗಿನ ಸಭೆಯಲ್ಲಿ, ಪಕ್ಷ ತೊರೆದು ಸ್ವಂತವಾಗಿ ಹೊಸ ಆಂದೋಲನ ರೂಪಿಸಿಕೊಳ್ಳುವ ಇಚ್ಛೆಯನ್ನು ಅವರು ವ್ಯಕ
Jun 21 min read
Archive
bottom of page



