top of page
News Articles
Sathyapatha News Plus


ಬೆಳ್ತಂಗಡಿ ಖೋಟಾ ನೋಟು ಜಾಲ: ಬಾಡಿಗೆ ಮನೆ ಮೇಲೆ ಪೊಲೀಸ್ ದಾಳಿ
ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಅಡೆಂಜದಲ್ಲಿ ಬೆಳಕಿಗೆ ಬಂದಿದ್ದ ಖೋಟಾ ನೋಟು ಮುದ್ರಣ ಜಾಲದ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದಾರೆ. ಡಿವೈಎಸ್ಪಿ ನೇತೃತ್ವದ ಪೊಲೀಸ್ ತಂಡವು ಕುವೆಟ್ಟು ಗ್ರಾಮದ ಪಿಲಿಚಂಡಿಕಲ್ಲು ರಸ್ತೆಯಲ್ಲಿರುವ ಆರೋಪಿಗಳ ಬಾಡಿಗೆ ಮನೆಗಳ ಮೇಲೆ ದಿಢೀರ್ ದಾಳಿ ನಡೆಸಿದೆ. ದಾಳಿಯ ವೇಳೆ ಕೊಠಡಿಯಲ್ಲಿದ್ದ ಎರಡು ಪ್ರಿಂಟರ್ಗಳು, ಪೇಂಟ್ ಡಬ್ಬಗಳು ಮತ್ತು ಮುದ್ರಣಕ್ಕೆ ಬಳಸುತ್ತಿದ್ದ ಎ4 ಸೈಜ್ ಪೇಪರ್ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ತಲೆಮರೆಸಿಕೊಂಡಿರುವ ಮುಖ್ಯ ಆರೋಪಿ ಅಬ್ದುಲ್ ಶಕೀಲ್ ಹಾಗೂ ಬಂಧಿತ ಸಂದೀಪ್ ಶೋಳಂಬಿ ಈ ಮನೆಯಲ್ಲಿ ವಾಸ್ತವ್ಯವಿದ್ದು, ನೋಟು
Jul 271 min read


ನೇಪಾಳದಲ್ಲಿ ಮತ್ತೆ ಭಾರತದ ₹200, ₹500 ನೋಟುಗಳಿಗೆ ಮಾನ್ಯತೆ!
ಭಾರತದೊಂದಿಗಿನ ದ್ವಿಪಕ್ಷೀಯ ಸಂಬಂಧ ಸುಧಾರಿಸುವ ನಿಟ್ಟಿನಲ್ಲಿ ನೇಪಾಳ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಸುಮಾರು ಒಂದು ದಶಕದ ನಿರ್ಬಂಧದ ನಂತರ ಭಾರತದ ₹200 ಮತ್ತು ₹500 ಮುಖಬೆಲೆಯ ಹೊಸ ಕರೆನ್ಸಿ ನೋಟುಗಳ ಬಳಕೆಗೆ ನೇಪಾಳ ಸರ್ಕಾರ ಅಧಿಕೃತ ಅನುಮತಿ ನೀಡಿದೆ. 2016ರ ನೋಟು ಅಮಾನ್ಯೀಕರಣದ ಬಳಿಕ ₹100 ಕ್ಕಿಂತ ಹೆಚ್ಚಿನ ಭಾರತೀಯ ನೋಟುಗಳ ಮೇಲೆ ನೇಪಾಳ ನಿರ್ಬಂಧ ಹೇರಿತ್ತು. ಇದೀಗ ಈ ನಿಯಮವನ್ನು ಸಡಿಲಿಸಲಾಗಿದ್ದು, ಎರಡು ದೇಶಗಳ ನಡುವಿನ ವ್ಯಾಪಾರ, ಪ್ರವಾಸೋದ್ಯಮ ಮತ್ತು ಗಡಿ ಭಾಗದ ಸಾರ್ವಜನಿಕರಿಗೆ ದೊಡ್ಡ ಮಟ್ಟದ ಅನುಕೂಲವಾಗಲಿದೆ. ಹೊಸ ನಿಯಮದ ಪ್ರಕಾರ, ಭಾರತ ಮತ್ತು ನೇಪಾಳದ ನಾಗರಿಕರು ಗರ
Jul 271 min read


ಧರ್ಮೇಂದ್ರ ಪ್ರಧಾನ್ ರಾಜೀನಾಮೆ – ವಿದ್ಯಾರ್ಥಿಗಳ ಹೋರಾಟಕ್ಕೆ ಬೆದರಿದ ಮೋದಿ ಸರ್ಕಾರ
ದೇಶಾದ್ಯಂತ ಭಾರೀ ಸಂಚಲನ ಮೂಡಿಸಿರುವ ನೀಟ್-ಯುಜಿ (NEET-UG) ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ವ್ಯವಸ್ಥಿತ ಅಕ್ರಮಗಳ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಶನಿವಾರ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ದೆಹಲಿಯ ಜಂತರ್ ಮಂತರ್ ಹಾಗೂ ಸಂಸತ್ತಿನ ಆವರಣದಲ್ಲಿ ವಿದ್ಯಾರ್ಥಿ ಸಂಘಟನೆಗಳು ನಡೆಸಿದ ತೀವ್ರ ಸ್ವರೂಪದ ಪ್ರತಿಭಟನೆಗಳು ಮತ್ತು ವಿಪಕ್ಷಗಳ ತೀವ್ರ ಒತ್ತಡದ ಹಿನ್ನೆಲೆಯಲ್ಲಿ ಈ ನಿರ್ಣಾಯಕ ಬೆಳವಣಿಗೆ ನಡೆದಿದೆ. ವಿದ್ಯಾರ್ಥಿಗಳ ಭವಿಷ್ಯದ ರಕ್ಷಣೆ ಮತ್ತು ಪರೀಕ್ಷಾ ವ್ಯವಸ್ಥೆಯ ಮೇಲಿನ ನ
Jul 251 min read


ಆರು ದಿನಗಳ ನಂತರ ಪುನರಾರಂಭಗೊಂಡ ಅಮರನಾಥ ಯಾತ್ರೆ
ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ಸುರಿಯುತ್ತಿದ್ದ ನಿರಂತರ ಮಳೆ, ಭೂಕುಸಿತ ಹಾಗೂ ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಪವಿತ್ರ ಅಮರನಾಥ ಯಾತ್ರೆಯನ್ನು ಶನಿವಾರದಂದು ಆಡಳಿತ ಮಂಡಳಿಯು ಅಧಿಕೃತವಾಗಿ ಪುನರಾರಂಭಿಸಿದೆ. ಉಧಮ್ಪುರ ಮತ್ತು ರಾಂಬನ್ ಮಾರ್ಗದ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿದ್ದ ಬಂಡೆ ಹಾಗೂ ಮಣ್ಣಿನ ಅವಶೇಷಗಳನ್ನು ಯಶಸ್ವಿಯಾಗಿ ತೆರವುಗೊಳಿಸಿದ ನಂತರ, ಭಗವತಿ ನಗರದ ಮೂಲ ಶಿಬಿರದಿಂದ ಹೊಸ ಯಾತ್ರಿಕರ ತಂಡಕ್ಕೆ ಅಧಿಕಾರಿಗಳು ಚಾಲನೆ ನೀಡಿದ್ದಾರೆ. ಈ 18 ನೇ ಬ್ಯಾಚ್ನಲ್ಲಿ 1,470 ಮಹಿಳೆಯರು, 25 ಮಕ್ಕಳು ಹಾಗೂ 54 ಸಾಧುಗಳು ಸೇರಿದಂತೆ ಒಟ್ಟು 6
Jul 251 min read


ಅಸ್ತ್ರ ಲಕ್ಕಿ ಸ್ಕೀಮ್ ದಂದೆ: ಕೋಟ್ಯಂತರ ರೂಪಾಯಿ ವಂಚಿಸಿ ಲಂಚುಲಾಲ್ ನಾಪತ್ತೆ!
ಜನರ ಕಣ್ಣಿಗೆ ಮಣ್ಣೆರಚಿ ಹಣ ಗಳಿಸುತ್ತಿದ್ದ 'ಅಸ್ತ್ರ' ಸಂಸ್ಥೆಯ ಮಾಲೀಕ ಲಂಚುಲಾಲ್ ಕೊನೆಗೂ ವಂಚನೆ ಎಸಗಿ ನಾಪತ್ತೆಯಾಗಿದ್ದಾನೆ. ಮಂಗಳೂರು, ಚಿಕ್ಕಮಗಳೂರು ಮತ್ತು ಶಿವಮೊಗ್ಗದ ಸುಮಾರು 50 ಸಾವಿರಕ್ಕೂ ಹೆಚ್ಚು ಜನರಿಂದ ಲಕ್ಕಿ ಸ್ಟೀಮ್ ಹಾಗೂ ಕುರಿ ಫಂಡ್ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ಸಂಗ್ರಹಿಸಿದ್ದ ಈತ, ಈಗ ಗ್ರಾಹಕರಿಗೆ ಹಣ ಹಿಂತಿರುಗಿಸದೇ ಪರಾರಿಯಾಗಿದ್ದಾನೆ. ಬ್ಯಾಂಕ್ ಖಾತೆ ಫ್ರೀಜ್ ಆಗಿದೆ ಎಂದು ಏಜಂಟರನ್ನು ನಂಬಿಸುತ್ತಿದ್ದ ಈತ, ಪ್ರಸ್ತುತ ದುಬೈಗೆ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ. ಇಂದು ಮಂಗಳೂರಿನ ನವಭಾರತ್ ಸರ್ಕಲ್ನಲ್ಲಿರುವ ಅಸ್ತ್ರ ಗ್ರೂಪ್ ಕಚೇರಿಗೆ ನೂರಾರು ವಂಚಿತ ಗ್ರಾ
Jul 241 min read


ಪ್ಲಿಪ್ಕಾರ್ಟ್ನಿಂದ ಶೀಘ್ರವೇ ಫುಡ್ ಡೆಲಿವರಿ ಸೇವೆ ಶುರು: ಝೊಮ್ಯಾಟೋ, ಸ್ವಿಗ್ಗಿಗೆ ಟಕ್ಕರ್!
ವಾಲ್ಮಾರ್ಟ್ ಒಡೆತನದ ಇ-ಕಾಮರ್ಸ್ ದೈತ್ಯ ಪ್ಲಿಪ್ಕಾರ್ಟ್ ಶೀಘ್ರದಲ್ಲೇ ಭಾರತದಲ್ಲಿ ಫುಡ್ ಡೆಲಿವರಿ ಸೇವೆ ಆರಂಭಿಸಲು ಮುಂದಾಗಿದೆ. ವರದಿಗಳ ಪ್ರಕಾರ, ಮುಂದಿನ ಒಂದು ತಿಂಗಳೊಳಗೆ ಬೆಂಗಳೂರಿನಲ್ಲಿ ಪ್ರಾಯೋಗಿಕವಾಗಿ ಈ ಸೇವೆಗೆ ಚಾಲನೆ ನೀಡುವ ಸಾಧ್ಯತೆಯಿದೆ. ಈಗಾಗಲೇ ಮಾರುಕಟ್ಟೆಯಲ್ಲಿ ಪ್ರಾಬಲ್ಯ ಹೊಂದಿರುವ ಝೊಮ್ಯಾಟೋ ಮತ್ತು ಸ್ವಿಗ್ಗಿಗೆ ಪ್ರಬಲ ಸ್ಪರ್ಧೆ ನೀಡಲು ಕಂಪನಿ ಯೋಜನೆ ರೂಪಿಸಿದೆ. ಆದರೆ, ಈ ಸೇವೆಯ ಅಧಿಕೃತ ಚಾಲನೆಯ ದಿನಾಂಕ ಹಾಗೂ ಇತರೆ ಪ್ರಮುಖ ವಿವರಗಳನ್ನು ಪ್ಲಿಪ್ಕಾರ್ಟ್ ಇನ್ನೂ ಅಧಿಕೃತವಾಗಿ ಬಹಿರಂಗಪಡಿಸಿಲ್ಲ.
Jul 241 min read


ಕಾಮನ್ವೆಲ್ತ್ ಗೇಮ್ಸ್ 2026: ಉದ್ಘಾಟನೆಗೂ ಮುನ್ನವೇ ಭಾರತಕ್ಕೆ ಒಲಿದ ಮೊದಲ ಪದಕ!
2026ರ ಗ್ಲಾಸ್ಗೋ ಕಾಮನ್ವೆಲ್ತ್ ಗೇಮ್ಸ್ ಅಧಿಕೃತವಾಗಿ ಉದ್ಘಾಟನೆಗೊಳ್ಳುವ ಮುನ್ನವೇ ಭಾರತ ತನ್ನ ಪದಕದ ಖಾತೆಯನ್ನು ತೆರೆದಿದೆ. ಪ್ರಮುಖ ಕ್ರೀಡೆಗಳ ಕಡಿತದ ನಡುವೆಯೂ 124 ಕ್ರೀಡಾಪಟುಗಳೊಂದಿಗೆ ಕಣಕ್ಕಿಳಿದಿರುವ ಭಾರತೀಯ ತಂಡಕ್ಕೆ ಈ ಸುದ್ದಿ ದೊಡ್ಡ ಆಶಾಭಾವನೆ ತಂದಿದೆ. ಮಹಿಳೆಯರ 75 ಕೆಜಿ ಬಾಕ್ಸಿಂಗ್ ವಿಭಾಗದಲ್ಲಿ ಒಲಿಂಪಿಕ್ ಪದಕ ವಿಜೇತೆ ಲವ್ಲಿನಾ ಬೊರ್ಗೊಹೈನ್ ‘ಬೈ’ (Bye) ಪಡೆಯುವ ಮೂಲಕ ನೇರವಾಗಿ ಸೆಮಿಫೈನಲ್ ಪ್ರವೇಶಿಸಿದ್ದಾರೆ. ಬಾಕ್ಸಿಂಗ್ ನಿಯಮಗಳ ಪ್ರಕಾರ ಸೆಮಿಫೈನಲ್ ತಲುಪಿದ ಸ್ಪರ್ಧಿಗಳಿಗೆ ಕನಿಷ್ಠ ಕಂಚಿನ ಪದಕ ಖಾತರಿಯಾಗುವುದರಿಂದ, ಭಾರತಕ್ಕೆ ಮೊದಲ ಪದಕ ನಿಶ್ಚಿತವಾಗಿದೆ. ಈ ವಿಭ
Jul 241 min read


ಅಮೆರಿಕದಿಂದ ಪ್ರಮುಖ ನಿರ್ಧಾರ: ಭಾರತ ಸೇರಿ 17 ದೇಶಗಳ ಉತ್ಪನ್ನಗಳ ಮೇಲೆ ಹೆಚ್ಚುವರಿ ಸುಂಕ ಹೇರಿಕೆ
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಬೆನ್ನಲ್ಲೇ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಹತ್ವದ ಕ್ರಮ ಕೈಗೊಂಡಿದ್ದಾರೆ. ಬಲವಂತದ ದುಡಿಮೆಯ ಮೂಲಕ ತಯಾರಾಗುವ ಉತ್ಪನ್ನಗಳ ನಿಯಂತ್ರಣದಲ್ಲಿ ವಿಫಲವಾಗಿರುವ ಭಾರತ ಸೇರಿದಂತೆ 17 ದೇಶಗಳ ಸರಕುಗಳ ಮೇಲೆ ಅಮೆರಿಕ ಹೆಚ್ಚುವರಿಯಾಗಿ ಶೇಕಡಾ 10 ರಷ್ಟು ಸುಂಕವನ್ನು ವಿಧಿಸಿದೆ. ಈ ನೂತನ ನಿಯಮವು ಶುಕ್ರವಾರದಿಂದಲೇ ಜಾರಿಗೆ ಬರಲಿದೆ. ಯುಎಸ್ಟಿಆರ್ ನಡೆಸಿದ 60 ವ್ಯಾಪಾರ ಪಾಲುದಾರ ರಾಷ್ಟ್ರಗಳ ಪರಿಶೀಲನೆಯ ನಂತರ 'ಸೆಕ್ಷನ್ 301' ರ ಅಡಿಯಲ್ಲಿ ಈ ಕಠಿಣ ನಿರ್ಧಾರ ತೆಗೆದುಕೊಳ್ಳಲಾಗಿದೆ. ಮಾನವ ಹಕ್ಕುಗಳ ಉಲ್ಲಂಘನೆ ತಡೆಯುವುದು ಮತ್ತು ಅನ್ಯಾಯದ ವ್
Jul 241 min read


ಸುಳ್ಯ: ಕಾಣೆಯಾಗಿದ್ದ ಅಪ್ರಾಪ್ತ ಬಾಲಕಿ ಪತ್ತೆ, ಲೈಂಗಿಕ ದೌರ್ಜನ್ಯ ಎಸಗಿದ ಯುವಕನ ಬಂಧನ
ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೇ ತಿಂಗಳಲ್ಲಿ ಕಾಣೆಯಾಗಿದ್ದ ಅಪ್ರಾಪ್ತ ಬಾಲಕಿಯನ್ನು ಪೊಲೀಸರು ಯಶಸ್ವಿಯಾಗಿ ಪತ್ತೆಹಚ್ಚಿದ್ದಾರೆ. ಮೇ 7ರಂದು ಮಂಗಳೂರಿಗೆ ಕೆಲಸಕ್ಕೆಂದು ತೆರಳಿದ್ದ ಬಾಲಕಿ ಮನೆಗೆ ಮರಳದಿದ್ದಾಗ, ಕುಟುಂಬದವರು ಮೇ 11ರಂದು ಸುಳ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಬಾಲಕಿ ಪತ್ತೆಯಾದ ನಂತರ ಆಕೆಯಿಂದ ಮಾಹಿತಿ ಪಡೆದ ಪೊಲೀಸರು, ಪ್ರಕರಣಕ್ಕೆ ಬಿಎನ್ಎಸ್ ಹಾಗೂ ಪೋಕ್ಸೋ (POCSO) ಕಾಯ್ದೆಯಡಿ ಹೆಚ್ಚುವರಿ ಲೈಂಗಿಕ ದೌರ್ಜನ್ಯದ ಕಲಂಗಳನ್ನು ಸೇರ್ಪಡೆಗೊಳಿಸಿದ್ದಾರೆ. ಬಾಲಕಿ ನೀಡಿದ ಹೇಳಿಕೆಯ ಆಧಾರದ ಮೇಲೆ ತನಿಖೆ ಚುರುಕುಗೊಳಿಸಲಾಗಿದೆ. ಈ ಕೃತ್ಯಕ್ಕೆ ಸಂಬಂಧಿಸಿದಂತೆ ಕಡಬ ಮೂ
Jul 241 min read


ದೆಹಲಿಯಲ್ಲಿ ತೀವ್ರಗೊಂಡ ವಿದ್ಯಾರ್ಥಿ ಪ್ರತಿಭಟನೆ: ಮೊಬೈಲ್ ಇಂಟರ್ನೆಟ್ ಸ್ಥಗಿತ, ಬಿಗಿ ಪೊಲೀಸ್ ಬಂದೋಬಸ್ತ್
ರಾಜಧಾನಿ ನವದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಭಾರಿ ಜನಬೆಂಬಲ ವ್ಯಕ್ತವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಜಂತರ್ ಮಂತರ್ನ 1.5 ಕಿಲೋಮೀಟರ್ ವ್ಯಾಪ್ತಿಯಲ್ಲಿ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ಜೊತೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನಿವಾಸದ ಸುತ್ತಮುತ್ತ ಬಿಎನ್ಎಸ್ಎಸ್ ಸೆಕ್ಷನ್ 163 ಜಾರಿಗೊಳಿಸಿ ಕಟ್ಟೆಚ್ಚರ ವಹಿಸಲಾಗಿದೆ. ಪ್ರತಿಭಟನೆಯು 34ನೇ ದಿನಕ್ಕೆ ಕಾಲಿಟ್ಟಿದ್ದರೂ ಸರ್ಕಾರ ಮತ್ತು ಪ್ರತಿಭಟನಾಕಾರರ ನಡುವಿನ ಮಾತುಕತೆಗಳು ವಿಫಲಗೊಂಡಿವೆ. ಕೇಂದ್ರ ಸಚಿವ ಜಿತೇಂದ್ರ ಸಿಂ
Jul 241 min read


ಪ್ರಶ್ನೆಪತ್ರಿಕೆ ಸೋರಿಕೆ ತಡೆಗೆ 'ಫಾಸ್ಟ್ ಟ್ರ್ಯಾಕ್ ಕೋರ್ಟ್': ಪ್ರಧಾನಿ ಮೋದಿ ಅಭಯ
ದೇಶದಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಪ್ರತಿಭಟನೆಗಳು ನಡೆಯುತ್ತಿರುವ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ ಅವರು ಮಹತ್ವದ ಘೋಷಣೆ ಮಾಡಿದ್ದಾರೆ. ಪರೀಕ್ಷಾ ಅಕ್ರಮ ಹಾಗೂ ಸೋರಿಕೆ ಪ್ರಕರಣಗಳಲ್ಲಿ ಭಾಗಿಯಾದ ಅಪರಾಧಿಗಳಿಗೆ ತ್ವರಿತ ಹಾಗೂ ಕಠಿಣ ಶಿಕ್ಷೆ ಖಾತರಿಪಡಿಸಲು 'ತ್ವರಿತಗತಿ ನ್ಯಾಯಾಲಯಗಳನ್ನು' (Fast-Track Courts) ಸ್ಥಾಪಿಸಲು ಸರ್ಕಾರ ನಿರ್ಧರಿಸಿದೆ ಎಂದು ಅವರು ಪ್ರಕಟಿಸಿದ್ದಾರೆ. ಸಾಮಾಜಿಕ ಜಾಲತಾಣ 'ಎಕ್ಸ್' (X) ನಲ್ಲಿ ಈ ಕುರಿತು ಸಂದೇಶ ಹಂಚಿಕೊಂಡಿರುವ ಪ್ರಧಾನಿಯವರು, ದೇಶದ ಯುವಜನತೆಯ ಹಿತಾಸಕ್ತಿ ಮತ್ತು ಭವಿಷ್ಯವೇ ತಮ್ಮ ಸರ್ಕಾರದ ಪ್ರಥಮ ಆದ್ಯತೆಯಾಗಿದೆ ಎಂದಿದ್ದಾರೆ.
Jul 231 min read


ಕೌಟುಂಬಿಕ ಕಿರುಕುಳಕ್ಕೆ ವಿವಾಹಿತೆ ಬಲಿ: ಅತ್ತೆ, ಮಾವ, ನಾದಿನಿ ಬಂಧನ!
ಸುಳ್ಯ ತಾಲೂಕಿನಲ್ಲಿ ಕೌಟುಂಬಿಕ ಕಿರುಕುಳದಿಂದಾಗಿ ಫಾತಿಮತ್ ನಿಶಾನ ಎಂಬ ವಿವಾಹಿತೆ ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಳ ಮಾವ ಸಿ.ಪಿ. ಅಳವಿ, ಅತ್ತೆ ಅಯಿಷಾ ಹಾಗೂ ನಾದಿನಿ ಫಸಿಲಾ ಅವರನ್ನು ಸುಳ್ಯ ಠಾಣೆ ಪೊಲೀಸರು ಜುಲೈ 22ರಂದು ಬಂಧಿಸಿದ್ದಾರೆ. ನಾಲ್ಕು ವರ್ಷಗಳ ಹಿಂದೆ ವಿವಾಹವಾಗಿದ್ದ ಫಾತಿಮತ್ ನಿಶಾನ ಅವರು ಜುಲೈ 18ರ ರಾತ್ರಿ ತಾಯಿಗೆ ಕರೆ ಮಾಡಿ, ಗಂಡನ ಮನೆಯವರಿಂದ ತಮಗೆ ಸತತವಾಗಿ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡಲಾಗುತ್ತಿದೆ ಎಂದು ಅಳಲು ತೋಡಿಕೊಂಡಿದ್ದರೆಂದು ದೂರಿನಲ್ಲಿ ತಿಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮೃತರ ಕುಟುಂಬದವರು ಸುಳ್ಯ ಪೊಲೀಸ್ ಠಾಣ
Jul 231 min read


ವಾಟ್ಸಪ್ನಲ್ಲಿ ಮದುವೆ ಕಾರ್ಡ್ ಬಂತಾ? ಎಚ್ಚರ, ಅರಣ್ಯ ಅಧಿಕಾರಿಗೆ 9.96 ಲಕ್ಷ ರೂ. ವಂಚನೆ!
ವಾಟ್ಸಪ್ನಲ್ಲಿ ಅಪರಿಚಿತ ಸಂಖ್ಯೆಯಿಂದ ಬಂದ ಮದುವೆ ಆಹ್ವಾನ ಪತ್ರಿಕೆಯ ಫೈಲ್ ಓಪನ್ ಮಾಡಿದ ಸರ್ಕಾರಿ ಅಧಿಕಾರಿಯೊಬ್ಬರು ಸೈಬರ್ ವಂಚಕರ ಬಲೆಗೆ ಬಿದ್ದು ಬರೋಬ್ಬರಿ 9.96 ಲಕ್ಷ ರೂಪಾಯಿ ಕಳೆದುಕೊಂಡಿದ್ದಾರೆ. ಅರಣ್ಯ ಇಲಾಖೆಯ ಉದ್ಯೋಗಿ ರಮೇಶ್ ಬಾಬು ಅವರಿಗೆ ಜುಲೈ 14ರಂದು ವಾಟ್ಸಪ್ನಲ್ಲಿ ಅಪರಿಚಿತ ಸಂಖ್ಯೆಯಿಂದ ಆಹ್ವಾನ ಪತ್ರಿಕೆಯ ಸಂದೇಶ ಬಂದಿತ್ತು. ಅದನ್ನು ಪರಿಚಿತರದ್ದು ಎಂದು ನಂಬಿ ಅವರು ಫೈಲ್ ಡೌನ್ಲೋಡ್ ಮಾಡಿದ್ದಾರೆ. ಈ ರೀತಿಯ 'ಎಪಿಕೆ ಫೈಲ್' (APK File) ಕ್ಲಿಕ್ ಮಾಡುತ್ತಿದ್ದಂತೆ ಸೈಬರ್ ಕಳ್ಳರು ಮೊಬೈಲ್ ಹ್ಯಾಕ್ ಮಾಡಿ ಹಣ ದೋಚಿದ್ದಾರೆ. ಅಪರಿಚಿತ ಲಿಂಕ್ ಹಾಗೂ ಫೈಲ್ಗಳ ಕುರಿತು ಜ
Jul 231 min read


ಸೌಜನ್ಯ ಕೊಲೆ ಪ್ರಕರಣ: ಸಿಬಿಐ ತನಿಖೆಗೆ ಸುಪ್ರೀಂ ಕೋರ್ಟ್ ತರಾಟೆ, ಆದೇಶ ಕಾಯ್ದಿರಿಸಿಕೆ
ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ 14 ವರ್ಷಗಳ ಹಿಂದೆ ನಡೆದಿದ್ದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸುದೀರ್ಘ ವಿಚಾರಣೆ ನಡೆಸಿ ತನ್ನ ಆದೇಶವನ್ನು ಕಾಯ್ದಿರಿಸಿದೆ. ವಿಚಾರಣೆ ವೇಳೆ ಸಿಬಿಐ ನಡೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಪೀಠವು, ಸರಿಯಾದ ತನಿಖೆ ನಡೆಸದೆ ಸಿಬ್ಬಂದಿ ಮತ್ತು ಹಣಕಾಸಿನ ಅಭಾವದ ನೆಪ ಹೇಳುತ್ತಿರುವುದನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತು. ಪ್ರಕರಣವನ್ನು ಎಸ್ಐಟಿಗೆ ವಹಿಸಲು ರಾಜ್ಯ ಸರ್ಕಾರ ಸಮ್ಮತಿಸಿದ್ದು, ನಿವೃತ್ತ ನ್ಯಾಯಾಧೀಶರ ಮೇಲ್ವಿಚಾರಣೆಗೆ ಅರ್ಜಿದಾರರು ಕೋರಿದ್ದಾರೆ. ತನಿಖಾ ಏಜೆನ್ಸಿ ಕುರಿತ
Jul 231 min read


ಬಂಟ್ವಾಳದಲ್ಲಿ ಖಾಸಗಿ ಶಾಲಾ ಬಸ್ ಮೇಲೆ ಬೃಹತ್ ಮರ ಉರುಳಿ ಬಿದ್ದು ಮೂವರಿಗೆ ಗಾಯ
ಮಂಗಳೂರು, ಜುಲೈ 22: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ಸಮೀಪ ಬುಧವಾರ ಖಾಸಗಿ ಶಾಲೆಯ ಬಸ್ ಮೇಲೆ ಬೃಹತ್ ಗಾತ್ರದ ಮರ ಏಕಾಏಕಿ ಉರುಳಿಬಿದ್ದ ಪರಿಣಾಮ ಹಲವು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ನಡೆದಿದೆ. ಗಾಯಗೊಂಡವರಲ್ಲಿ ಮೂವರು ವಿದ್ಯಾರ್ಥಿಗಳ ಸ್ಥಿತಿ ಗಂಭೀರವಾಗಿದ್ದು, ಓರ್ವ ವಿದ್ಯಾರ್ಥಿಯ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ. ಕಲ್ಲಡ್ಕದ ಖಾಸಗಿ ಶಾಲೆಗೆ ಸೇರಿದ ಬಸ್ ವಿದ್ಯಾರ್ಥಿಗಳನ್ನು ಕರೆದುಕೊಂಡು ತೆರಳುತ್ತಿದ್ದ ವೇಳೆ ರಸ್ತೆ ಬದಿಯಲ್ಲಿದ್ದ ಬೃಹತ್ ಮರ ಏಕಾಏಕಿ ಬಸ್ ಮೇಲೆ ಉರುಳಿಬಿದ್ದಿದೆ. ಮರ ಬಿದ್ದ ರಭಸಕ್ಕೆ ಬಸ್ನ ಮೇ
Jul 221 min read


2026-27ರ ಕಂಬಳ ವೇಳಾಪಟ್ಟಿ ಬಿಡುಗಡೆ: ಅಕ್ಟೋಬರ್ 18ರಿಂದ ಮೈಸೂರು ದಸರಾ ಕಂಬಳದೊಂದಿಗೆ ಸೀಸನ್ ಆರಂಭ!
ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳ 2026-27ನೇ ಸಾಲಿನ ಅಧಿಕೃತ ಕಂಬಳ ವೇಳಾಪಟ್ಟಿಯನ್ನು ರಾಜ್ಯ ಕಂಬಳ ಸಮಿತಿ ಅಧ್ಯಕ್ಷ ಬೆಳಪು ದೇವಿಪ್ರಸಾದ್ ಶೆಟ್ಟಿ ಬಿಡುಗಡೆ ಮಾಡಿದ್ದಾರೆ. ಈ ಬಾರಿಯ ಕಂಬಳ ಋತುವು ಅಕ್ಟೋಬರ್ 18 ಮತ್ತು 19ರಂದು ಸಾಂಸ್ಕೃತಿಕ ನಗರಿ ಮೈಸೂರು ದಸರಾ ಅಂಗವಾಗಿ ನಡೆಯುವ ಕಂಬಳದೊಂದಿಗೆ ಆರಂಭಗೊಳ್ಳಲಿದೆ. ನವೆಂಬರ್ 7ರಂದು ಪಣಪಿಲ, ನವೆಂಬರ್ 14ರಂದು ಸಾಣೂರು, ಡಿಸೆಂಬರ್ 19ರಂದು ಮಂಗಳೂರು ಹಾಗೂ ಜನವರಿ 23ರಂದು ಮೂಡುಬಿದಿರೆಯಲ್ಲಿ ಕಂಬಳ ಕೂಟಗಳು ನಡೆಯಲಿವೆ. 2027ರ ಜನವರಿ 30ರಂದು ಪುತ್ತೂರಿನ ಪ್ರಸಿದ್ಧ ಕೋಟಿಚೆನ್ನಯ ಜೋಡುಕರೆ ಕಂಬಳ ಹಾಗೂ ಮಾರ್ಚ್ 27ರಂದು ಉಪ್ಪಿ
Jul 221 min read


ತಿರುಮಲ ಭಕ್ತರಿಗೆ ಶೀಘ್ರ ಪ್ರಸಾದ: ಕ್ಯೂಲೈನ್ಗಳಲ್ಲಿ 'ಕನ್ವೇಯರ್ ಬೆಲ್ಟ್' ತಂತ್ರಜ್ಞಾನ ಜಾರಿ!
ತಿರುಮಲಕ್ಕೆ ಆಗಮಿಸುವ ಲಕ್ಷಾಂತರ ಭಕ್ತಾದಿಗಳಿಗೆ ಶೀಘ್ರ ಹಾಗೂ ಸುಲಭವಾಗಿ ಆಹಾರ-ಪಾನೀಯ ತಲುಪಿಸಲು ತಿರುಮಲ ತಿರುಪತಿ ದೇವಸ್ಥಾನ ಮಂಡಳಿ (TTD) ಹೊಸ ತಂತ್ರಜ್ಞಾನಾಧಾರಿತ ಹೆಜ್ಜೆಯನ್ನಿಟ್ಟಿದೆ. ಸರತಿ ಸಾಲಿನಲ್ಲಿ ಗಂಟೆಗಟ್ಟಲೆ ಕಾಯುವ ಭಕ್ತರಿಗೆ ‘ಆಹಾರ ಪೂರೈಸುವ ಕನ್ವೇಯರ್ ವ್ಯವಸ್ಥೆ’ಯನ್ನು ಪ್ರಾಯೋಗಿಕವಾಗಿ ಜಾರಿಗೆ ತರಲಾಗಿದೆ. ಪ್ರಸ್ತುತ ಟಿಟಿಡಿಯ ಆಕ್ಟೋಪಸ್ ಕಟ್ಟಡದಿಂದ ಕೃಷ್ಣ ತೇಜ ಅತಿಥಿ ಗೃಹದವರೆಗೆ 3.5 ಕಿ.ಮೀ. ಉದ್ದದ ಸಾಲಿನಲ್ಲಿ ನಿರಂತರವಾಗಿ ಅನ್ನಪ್ರಸಾದ ವಿತರಿಸಲಾಗುತ್ತಿದೆ. ಮಾನವ ಶ್ರಮವನ್ನು ಕಡಿಮೆ ಮಾಡಿ, ಯಂತ್ರಗಳ ನೆರವಿನಿಂದ ಪ್ರಸಾದ ವಿತರಣೆಯನ್ನು ಇನ್ನಷ್ಟು ವೇಗಗೊಳಿಸಲು
Jul 211 min read


ಸುಳ್ಯ: ವಿವಾಹಿತೆ ಅನುಮಾನಾಸ್ಪದ ಸಾವು; ಅತ್ತೆ, ಮಾವನ ವಿರುದ್ಧ ಕೊಲೆ ಆರೋಪ
ನಾಲ್ಕು ವರ್ಷಗಳ ಹಿಂದೆ ವಿವಾಹವಾಗಿದ್ದ ಪುತ್ತೂರು ಕೆದಂಬಾಡಿಯ ಫಾತಿಮತ್ ನಿಶಾನ ಎಂಬುವರು ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಜುಲೈ 18ರ ರಾತ್ರಿ ತಾಯಿಗೆ ಕರೆ ಮಾಡಿದ್ದ ನಿಶಾನಾ, ತನಗೆ ಗಂಡನ ಮನೆಯವರು ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡುತ್ತಿರುವುದಾಗಿ ತಿಳಿಸಿದ್ದರು. ಇದೇ ವೇಳೆ ಫೋನ್ ಕಸಿದುಕೊಂಡ ಮಾವ ಅಲವಿ, ಆಕೆಯನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದರೆಂದು ಆರೋಪಿಸಲಾಗಿದೆ. ಪೋಷಕರು ಸ್ಥಳಕ್ಕೆ ತೆರಳುವಷ್ಟರಲ್ಲಿ ನಿಶಾನಾ ಮೃತಪಟ್ಟಿದ್ದರು. ಕೌಟುಂಬಿಕ ಕಿರುಕುಳ ಹಾಗೂ ಹತ್ಯೆ ಆರೋಪದಡಿ ಮೃತರ ಮಾವ ಅಲವಿ, ಅತ್ತೆ ಆಯಿಷ ಮತ್ತು ನಾದಿನಿ ಫಸೀಲಾ ವಿರುದ್ಧ ಸುಳ್ಯ ಪೊಲೀಸ್ ಠಾಣೆಯಲ್ಲಿ (
Jul 211 min read


ಮ್ಯಾಟ್ರಿಮೋನಿ ವೆಬ್ಸೈಟ್ ಮೂಲಕ ಪರಿಚಯ: ಉದ್ಯಮಿಗೆ ₹87 ಲಕ್ಷ ವಂಚನೆ
ಮ್ಯಾಟ್ರಿಮೋನಿ ವೆಬ್ಸೈಟ್ ಮೂಲಕ ಪರಿಚಯವಾಗಿ ಮದುವೆಯಾಗುವುದಾಗಿ ನಂಬಿಸಿ ಉದ್ಯಮಿಯೊಬ್ಬರಿಗೆ ಲಕ್ಷಾಂತರ ರೂಪಾಯಿ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಬೆಳ್ತಂಗಡಿ ನಿವಾಸಿಯಾದ ಉದ್ಯಮಿಗೆ 2024ರ ಮೇ ತಿಂಗಳಲ್ಲಿ ಅನಿಷಾ ಪಾಲನ್ನ (35) ಎಂಬ ಯುವತಿಯ ಪರಿಚಯವಾಗಿತ್ತು. ಬಳಿಕ ಆರೋಪಿತೆಯು ಇನ್ಸ್ಟಾಗ್ರಾಂ ಹಾಗೂ ಮೊಬೈಲ್ ಮೂಲಕ ದೂರುದಾರರೊಂದಿಗೆ ನಿರಂತರ ಸಂಪರ್ಕದಲ್ಲಿದ್ದಳು. ಮದುವೆಯಾಗುವುದಾಗಿ ನಂಬಿಸಿದ ಆಕೆ, ವಿವಿಧ ಕಟ್ಟುಕಥೆಗಳನ್ನು ಹೇಳಿ ಹಂತಹಂತವಾಗಿ ದೂರುದಾರರಿಂದ ಒಟ್ಟು ₹87,22,710 ಹಣವನ್ನು ತನ್ನ ಬೇರೆ ಬೇರೆ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿಕೊಂಡಿದ್ದಾಳೆ. ಹಣ ಪಡೆದ ನಂತರ ಆರೋಪಿತ
Jul 211 min read


ವಿಶ್ವ ತುಳುವೆರ್ (ರಿ) ಸಂಘಟನೆಗೆ ನೂತನ ಪದಾಧಿಕಾರಿಗಳ ಆಯ್ಕೆ: ಪ್ರಚಾರ ನಿರ್ವಾಹಕ ಅಧ್ಯಕ್ಷರಾಗಿ ಕೀರ್ತಿ ಕಾರ್ಕಳ
ಪ್ರಸಿದ್ಧ ಸಾಂಸ್ಕೃತಿಕ ಹಾಗೂ ಸಾಮಾಜಿಕ ಸಂಘಟನೆಯಾದ 'ವಿಶ್ವ ತುಳುವೆರ್ (ರಿ)' ಸಂಸ್ಥೆಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಸಂಘಟನೆಯನ್ನು ಮತ್ತಷ್ಟು ಬಲಪಡಿಸಲು ಪ್ರಮುಖ ಮುಖಂಡರಿಗೆ ಜವಾಬ್ದಾರಿಗಳನ್ನು ಹಂಚಿಕೆ ಮಾಡಲಾಗಿದೆ. ಈ ಪೈಕಿ ಸಂಘಟನೆಯ ಪ್ರಚಾರ ನಿರ್ವಾಹಕ ಅಧ್ಯಕ್ಷರಾಗಿ 'ತುಳುನಾಡ ತುಡರ್' ಖ್ಯಾತಿಯ ಕೀರ್ತಿ ಕಾರ್ಕಳ ಅವರು ಅಧಿಕೃತವಾಗಿ ಆಯ್ಕೆಯಾಗಿದ್ದಾರೆ. ತುಳು ಹಾಗೂ ಕನ್ನಡ ಕಿರುತೆರೆಯಲ್ಲಿ ನಟನಾಗಿ ಸಣ್ಣ ಪುಟ್ಟ ಪಾತ್ರಗಳ ಮೂಲಕ ಮನೆಮಾತಾಗಿರುವ ಕೀರ್ತಿ ಕಾರ್ಕಳ ಅವರು, 'ನಮ್ಮ ತುಳುನಾಡು ಟ್ರಸ್ಟಿ'ನ ರಾಜ್ಯ ಸಂಚಾಲಕರಾಗಿಯೂ ತುಳು ಭಾಷೆ ಮತ್ತು ತುಳುನಾಡಿನ ಅಭಿ
Jul 201 min read
Archive
bottom of page



