top of page
News Articles
Sathyapatha News Plus


ಉದಯಪುರದಲ್ಲಿ ರಶ್ಮಿಕಾ-ವಿಜಯ್ ಅದ್ಧೂರಿ ವಿವಾಹ? ಹೋಟೆಲ್ ಸಿದ್ಧತೆಯ ವೀಡಿಯೋ ಲೀಕ್!
ಹೈದರಾಬಾದ್: ಟಾಲಿವುಡ್ನ ಬಹುನಿರೀಕ್ಷಿತ ಜೋಡಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅಂತಿಮವಾಗಿ ವೈವಾಹಿಕ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ ಎಂಬ ಸುದ್ದಿ ಸಿನಿಕ್ರಿಯೆ ಪಡೆದಿದೆ. ರಾಜಸ್ಥಾನದ ಉದಯಪುರದಲ್ಲಿರುವ ಐತಿಹಾಸಿಕ 'ಸಿಟಿ ಪ್ಯಾಲೇಸ್' ಹೋಟೆಲ್ನಲ್ಲಿ ಇವರ ಮದುವೆಯ ಸಿದ್ಧತೆಗಳು ಭರದಿಂದ ಸಾಗುತ್ತಿದ್ದು, ಇದಕ್ಕೆ ಸಂಬಂಧಿಸಿದ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕಳೆದ ಐದಾರು ವರ್ಷಗಳಿಂದ ಪ್ರೀತಿಯಲ್ಲಿದ್ದ ಈ ಜೋಡಿ, ಕಳೆದ ವರ್ಷವೇ ವಿಜಯ್ ನಿವಾಸದಲ್ಲಿ ಅತ್ಯಂತ ಸರಳವಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು ಎಂಬ ಮಾತುಗಳು ಈಗ ದಟ್ಟವಾಗಿವೆ. ಮದುವೆಯ ವಿಚಾರವ
4 hours ago1 min read


ಫಿಲಂ ಚೇಂಬರ್ ನೂತನ ಅಧ್ಯಕ್ಷರಾಗಿ ಹಿರಿಯ ನಟಿ ಜಯಮಾಲಾ ಆಯ್ಕೆ: ಭರ್ಜರಿ ಗೆಲುವು
ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ (ಫಿಲಂ ಚೇಂಬರ್) ಪ್ರತಿಷ್ಠಿತ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಹಿರಿಯ ನಟಿ ಜಯಮಾಲಾ ಅವರು ಭರ್ಜರಿ ಜಯ ಸಾಧಿಸಿದ್ದಾರೆ. ತೀವ್ರ ಕುತೂಹಲ ಕೆರಳಿಸಿದ್ದ ಈ ಚುನಾವಣೆಯಲ್ಲಿ ತಮ್ಮ ಪ್ರತಿಸ್ಪರ್ಧಿ ಭಾ.ಮಾ ಹರೀಶ್ ಅವರ ವಿರುದ್ಧ 170 ಮತಗಳ ಬೃಹತ್ ಅಂತರದಿಂದ ಗೆಲುವು ದಾಖಲಿಸುವ ಮೂಲಕ ಸ್ಯಾಂಡಲ್ವುಡ್ನ ಚುಕ್ಕಾಣಿ ಹಿಡಿಯಲು ಸಜ್ಜಾಗಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಚಲಾವಣೆಯಾದ ಒಟ್ಟು 813 ಮತಗಳ ಪೈಕಿ ಜಯಮಾಲಾ ಅವರು 512 ಮತಗಳನ್ನು ಪಡೆಯುವಲ್ಲಿ ಯಶಸ್ವಿಯಾದರು. ಇನ್ನು ಎದುರಾಳಿ ಅಭ್ಯರ್ಥಿ ಭಾ.ಮಾ ಹರೀಶ್ ಅವರು ಕೇವಲ 334 ಮತಗಳನ್ನು ಪಡ
1 day ago1 min read


ಗಾಯಕ ಅರಿಜಿತ್ ಸಿಂಗ್ ನಿವೃತ್ತಿ ಘೋಷಣೆ: ಸಂಗೀತ ಲೋಕಕ್ಕೆ ದಿಢೀರ್ ಶಾಕ್!
ಭಾರತೀಯ ಸಂಗೀತ ಲೋಕದ ಧ್ರುವತಾರೆ, ಸುಮಧುರ ಧ್ವನಿಯ ಗಾಯಕ ಅರಿಜಿತ್ ಸಿಂಗ್ ಅವರು ಹಿನ್ನೆಲೆ ಗಾಯನಕ್ಕೆ ವಿದಾಯ ಹೇಳುವ ಮೂಲಕ ತಮ್ಮ ಅಭಿಮಾನಿಗಳಿಗೆ ಭಾರಿ ಅಚ್ಚರಿ ನೀಡಿದ್ದಾರೆ. ಈ ಕುರಿತು ತಮ್ಮ ಇನ್ಸ್ಟಾಗ್ರಾಮ್ ಹ್ಯಾಂಡಲ್ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, "ಇನ್ನು ಮುಂದೆ ನಾನು ಹಿನ್ನೆಲೆ ಗಾಯಕನಾಗಿ ಯಾವುದೇ ಹೊಸ ಅವಕಾಶಗಳನ್ನು ಒಪ್ಪಿಕೊಳ್ಳುವುದಿಲ್ಲ ಎಂದು ಘೋಷಿಸಲು ನನಗೆ ಸಂತೋಷವಾಗಿದೆ. ನಾನು ಈ ವೃತ್ತಿಜೀವನವನ್ನು ಇಲ್ಲಿಗೆ ಅಂತ್ಯಗೊಳಿಸುತ್ತಿದ್ದೇನೆ. ಇದೊಂದು ಅದ್ಭುತ ಪ್ರಯಾಣವಾಗಿತ್ತು" ಎಂದು ಭಾವುಕರಾಗಿ ಬರೆದುಕೊಂಡಿದ್ದಾರೆ. ಅರಿಜಿತ್ ಸಿಂಗ್ ಇಂದು ಭಾರತೀಯ ಸಂಗೀತ ಚಿತ್ರೋದ್
5 days ago1 min read


ಇನ್ಸ್ಟಾಗ್ರಾಮ್ ವೈರಲ್ ಸ್ಟಾರ್ ಆಶಾ ಪಂಡಿತ್ ಇನ್ನಿಲ್ಲ
ತಮ್ಮ ವಿಶಿಷ್ಟ ವಿಡಿಯೋಗಳ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಅತೀ ಕಡಿಮೆ ಅವಧಿಯಲ್ಲಿ ಜನಪ್ರಿಯತೆ ಗಳಿಸಿದ್ದ ನಾಗುರಿ ಆಶಾ (ಆಶಾ ಪಂಡಿತ್) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರ ಹಠಾತ್ ಸಾವು ಅಭಿಮಾನಿಗಳಲ್ಲಿ ತೀವ್ರ ಆಘಾತ ಮೂಡಿಸಿದೆ. ಡಿಜಿಟಲ್ ಲೋಕದ ಉದಯೋನ್ಮುಖ ಪ್ರತಿಭೆಯನ್ನು ಕಳೆದುಕೊಂಡ ಹಿನ್ನೆಲೆಯಲ್ಲಿ ನೆಟ್ಟಿಗರು ಸಾಮಾಜಿಕ ಜಾಲತಾಣಗಳಲ್ಲಿ ಸಂತಾಪ ಸೂಚಿಸುತ್ತಿದ್ದಾರೆ.
Jan 231 min read


ಇನ್ಸ್ಟಾಗ್ರಾಮ್ ವೈರಲ್ ಸ್ಟಾರ್ ಆಶಾ ಪಂಡಿತ್ ಇನ್ನಿಲ್ಲ
ತಮ್ಮ ವಿಶಿಷ್ಟ ವಿಡಿಯೋಗಳ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಅತೀ ಕಡಿಮೆ ಅವಧಿಯಲ್ಲಿ ಜನಪ್ರಿಯತೆ ಗಳಿಸಿದ್ದ ನಾಗುರಿ ಆಶಾ (ಆಶಾ ಪಂಡಿತ್) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರ ಹಠಾತ್ ಸಾವು ಅಭಿಮಾನಿಗಳಲ್ಲಿ ತೀವ್ರ ಆಘಾತ ಮೂಡಿಸಿದೆ. ಡಿಜಿಟಲ್ ಲೋಕದ ಉದಯೋನ್ಮುಖ ಪ್ರತಿಭೆಯನ್ನು ಕಳೆದುಕೊಂಡ ಹಿನ್ನೆಲೆಯಲ್ಲಿ ನೆಟ್ಟಿಗರು ಸಾಮಾಜಿಕ ಜಾಲತಾಣಗಳಲ್ಲಿ ಸಂತಾಪ ಸೂಚಿಸುತ್ತಿದ್ದಾರೆ.
Jan 231 min read


ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿದ 'ಗಿಲ್ಲಿ' ನಟ: ಕಾವೇರಿ ನಿವಾಸದಲ್ಲಿ ಸನ್ಮಾನ
ಬೆಂಗಳೂರು: ಬಿಗ್ ಬಾಸ್ ರಿಯಾಲಿಟಿ ಶೋ ಮುಗಿದ ನಂತರವೂ 'ಗಿಲ್ಲಿ' ನಟನ ಜನಪ್ರಿಯತೆ ಕುಗ್ಗಿಲ್ಲ. ಹೋದ ಕಡೆಯೆಲ್ಲಾ ಅಭಿಮಾನಿಗಳ ಪ್ರೀತಿ ಹಾಗೂ ಸನ್ಮಾನಗಳಿಗೆ ಪಾತ್ರರಾಗುತ್ತಿರುವ ನಟ, ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದರು. ನಗರದ ಕಾವೇರಿ ನಿವಾಸದಲ್ಲಿ ನಡೆದ ಈ ಭೇಟಿಯಲ್ಲಿ, ಸಿಎಂ ಅವರು ನಟನಿಗೆ ಗಂಧದ ಹಾರ ಹಾಕಿ ಆತ್ಮೀಯವಾಗಿ ಸನ್ಮಾನಿಸಿದರು. ನಟನ ಭುಜದ ಮೇಲೆ ಕೈ ಹಾಕಿ ಬೆನ್ನು ತಟ್ಟಿದ ಸಿದ್ದರಾಮಯ್ಯ, ಅವರ ಮುಂದಿನ ವೃತ್ತಿಜೀವನಕ್ಕೆ ಶುಭ ಹಾರೈಸಿದರು. ಎಂದಿನಂತೆ ಸರಳ ಶರ್ಟ್ ಧರಿಸಿದ್ದ ಗಿಲ್ಲಿ ನಟ ಸಿಎಂ ಅವರೊಂದಿಗೆ ಕೆಲ ಹೊತ್ತು ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ನ
Jan 221 min read


ಬಿಗ್ ಬಾಸ್ ಕನ್ನಡ ಸೀಸನ್ 12: ಹಳ್ಳಿ ಹೈದ 'ಗಿಲ್ಲಿ ನಟರಾಜ್' ಮುಡಿಗೆ ವಿಜಯದ ಪಟ್ಟ!
ಬೆಂಗಳೂರು: ಕಿರುತೆರೆಯ ಅತ್ಯಂತ ಜನಪ್ರಿಯ ರಿಯಾಲಿಟಿ ಶೋ 'ಬಿಗ್ ಬಾಸ್ ಕನ್ನಡ ಸೀಸನ್ 12' ಕ್ಕೆ ಅದ್ಧೂರಿ ತೆರೆ ಬಿದ್ದಿದೆ. ಕಳೆದ ಹಲವು ವಾರಗಳಿಂದ ಕುತೂಹಲ ಕೆರಳಿಸಿದ್ದ ಗ್ರ್ಯಾಂಡ್ ಫಿನಾಲೆಯಲ್ಲಿ, ಕನ್ನಡಿಗರ ಮನಗೆದ್ದಿದ್ದ 'ಹಳ್ಳಿ ಹೈದ' ಗಿಲ್ಲಿ ನಟರಾಜ್ ಅಂತಿಮವಾಗಿ ವಿನ್ನರ್ ಆಗಿ ಹೊರಹೊಮ್ಮಿದ್ದಾರೆ. ಬಿಡದಿಯ ಬಿಗ್ ಬಾಸ್ ಮನೆಯಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ನಟರಾಜ್ ಟ್ರೋಫಿ ಎತ್ತಿ ಹಿಡಿಯುವ ಮೂಲಕ ಇತಿಹಾಸ ಬರೆದಿದ್ದಾರೆ. ಇನ್ನು ಮನೆಯ ಪ್ರಬಲ ಸ್ಪರ್ಧಿಯಾಗಿದ್ದ ರಕ್ಷಿತಾ ಶೆಟ್ಟಿ ರನ್ನರ್ ಅಪ್ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ. ಈ ಬಾರಿಯ ಫಿನಾಲೆಯಲ್ಲಿ ಗಿಲ್ಲಿ ನಟರಾಜ್, ಅ
Jan 191 min read


ಹೊಸ ವರ್ಷಾಚರಣೆ: ಪೊಲೀಸ್ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ
ಮಂಗಳೂರು: ಹೊಸ ವರ್ಷದ ಸಂಭ್ರಮಾಚರಣೆಯನ್ನು ಶಾಂತಿ, ಸುರಕ್ಷತೆ ಮತ್ತು ಸಾರ್ವಜನಿಕ ಸುವ್ಯವಸ್ಥೆಯೊಂದಿಗೆ ಆಚರಿಸುವಂತೆ ಪೊಲೀಸ್ ಇಲಾಖೆ ಸ್ಪಷ್ಟ ಆದೇಶಗಳನ್ನು ಹೊರಡಿಸಿದೆ. ಕಾರ್ಯಕ್ರಮಗಳ ಆಯೋಜಕರು ಹಾಗೂ ಸಾರ್ವಜನಿಕರು ಕೆಳಕಂಡ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ತಿಳಿಸಲಾಗಿದೆ. ಮುಖ್ಯ ಸೂಚನೆಗಳು: ಅನುಮತಿ ಇಲ್ಲದೆ ಯಾವುದೇ ರೀತಿಯ ಆಚರಣೆಗಳಿಗೆ ಅವಕಾಶವಿಲ್ಲ. ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ಸಂಭ್ರಮಾಚರಣೆ ನಡೆಸಬೇಕು. ಅತೀವೇಗ ಚಾಲನೆ, ವೀಲಿಂಗ್, ಅಸಭ್ಯ ವರ್ತನೆ ನಡೆಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ನಗರಾದ್ಯಂತ ಬಂದೋಬಸ್ತ್ ಕರ್ತವ್ಯ ಬಲಪಡಿಸಲಾಗಿದ್ದು, ಪಿ
Dec 31, 20251 min read


ನಟನೆಗೆ ದಳಪತಿ ವಿಜಯ್ ಗುಡ್ಬೈ: ಸಿನಿಪಯಣ ಮುಗಿಸಿ ರಾಜಕೀಯದತ್ತ ಸಂಪೂರ್ಣ ಚಿತ್ತ
ಚೆನ್ನೈ: ತಮಿಳು ಚಿತ್ರರಂಗದ ಅಪ್ರತಿಮ ನಟ, ಸೂಪರ್ಸ್ಟಾರ್ ದಳಪತಿ ವಿಜಯ್ ಅವರು ತಮ್ಮ 33 ವರ್ಷಗಳ ಸುದೀರ್ಘ ನಟನಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ್ದಾರೆ. ಮಲೇಷ್ಯಾದಲ್ಲಿ ನಡೆದ ತಮ್ಮ ಕೊನೆಯ ಚಿತ್ರ ‘ಜನ ನಾಯಗನ್’ ಆಡಿಯೋ ಲಾಂಚ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇನ್ನು ಮುಂದೆ ತಾವು ಬಣ್ಣದ ಲೋಕದಿಂದ ದೂರ ಸರಿದು ಸಂಪೂರ್ಣವಾಗಿ ರಾಜಕೀಯ ಜೀವನದಲ್ಲಿ ತೊಡಗಿಸಿಕೊಳ್ಳುವುದಾಗಿ ಭಾವುಕರಾಗಿ ತಿಳಿಸಿದರು. "ನಾನು ಮರಳಿನಲ್ಲಿ ಸಣ್ಣ ಮನೆ ಕಟ್ಟಲು ಬಂದವನು, ಆದರೆ ನೀವು ನನಗೆ ಅರಮನೆ ಕಟ್ಟಿಕೊಟ್ಟಿದ್ದೀರಿ" ಎಂದು ಅಭಿಮಾನಿಗಳ ಪ್ರೀತಿಗೆ ವಿಜಯ್ ಕೃತಜ್ಞತೆ ಸಲ್ಲಿಸಿದರು. 1992ರಲ್ಲಿ ನಾ
Dec 28, 20251 min read


ಪ್ರಧಾನಿ ಮೋದಿ ಜೀವನಾಧಾರಿತ 'ಮಾ ವಂದೇ' ಚಿತ್ರೀಕರಣ ಆರಂಭ: ಉನ್ನಿ ಮುಕುಂದನ್ ಮೋದಿಯಾಗಿ ಅಬ್ಬರ!
ಭಾರತದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರ ಜೀವನಗಾಥೆಯನ್ನು ಬೆಳ್ಳಿತೆರೆಯ ಮೇಲೆ ತರಲು ಸಿದ್ಧವಾಗಿರುವ 'ಮಾ ವಂದೇ' (Maa Vande) ಸಿನಿಮಾದ ಚಿತ್ರೀಕರಣವು ಕೇರಳದಲ್ಲಿ ಭಾನುವಾರ ಅತ್ಯಂತ ವೈಭವಯುತವಾಗಿ ಹಾಗೂ ಸಾಂಪ್ರದಾಯಿಕ ಪೂಜಾ ವಿಧಿವಿಧಾನಗಳೊಂದಿಗೆ ಚಾಲನೆ ಪಡೆದುಕೊಂಡಿದೆ. ಸ್ಟಾರ್ ತಾರಾಗಣ ಮತ್ತು ತಾಂತ್ರಿಕ ತಂಡ: ಈ ಚಿತ್ರದಲ್ಲಿ ಮಲಯಾಳಂನ ಖ್ಯಾತ ನಟ ಉನ್ನಿ ಮುಕುಂದನ್ ಅವರು ಪ್ರಧಾನಿ ಮೋದಿ ಅವರ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದು ವಿಶೇಷ. ರಾಷ್ಟ್ರ ಪ್ರಶಸ್ತಿ ವಿಜೇತ ತೆಲುಗು ನಿರ್ದೇಶಕ ಕ್ರಾಂತಿ ಕುಮಾರ್ ಸಿ.ಎಚ್. ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಅಷ್ಟೇ ಅಲ್ಲ
Dec 23, 20251 min read


ಜೈಲಿನಲ್ಲಿದ್ದರೂ ದರ್ಶನ್ 'ಡೆವಿಲ್' ಸಿನಿಮಾಕ್ಕೆ ಭರ್ಜರಿ ಓಪನಿಂಗ್: ಅಭಿಮಾನಿಗಳಿಂದ ಉತ್ತಮ ಪ್ರತಿಕ್ರಿಯೆ
ಚಿತ್ರದುರ್ಗದ ನಿವಾಸಿ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ ಅವರು ಬಳ್ಳಾರಿ ಜೈಲಿನಿಂದಲೇ ತಮ್ಮ ಅಭಿಮಾನಿಗಳಿಗೆ ಸಂದೇಶ ಕಳುಹಿಸಿ, ತಾವು ನಟಿಸಿರುವ ಬಹುನಿರೀಕ್ಷಿತ 'ಡೆವಿಲ್' ಚಿತ್ರವನ್ನು ಯಶಸ್ವಿಗೊಳಿಸುವಂತೆ ವಿನಂತಿಸಿಕೊಂಡಿದ್ದರು. ಅವರ ಮನವಿಗೆ ಸ್ಪಂದಿಸಿದ ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಚಿತ್ರಮಂದಿರಗಳತ್ತ ದೌಡಾಯಿಸಿದ್ದಾರೆ. ಬುಧವಾರ (ಡಿಸೆಂಬರ್ 10) ಬಿಡುಗಡೆಯಾದ ಈ ಚಿತ್ರಕ್ಕೆ ದರ್ಶನ್ ಅಭಿಮಾನಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹಲವು ಚಿತ್ರಮಂದಿರಗಳಲ್ಲಿ ಬೆಳಿಗ್ಗೆ 6.30 ರಿಂದಲೇ ಪ್ರದರ್ಶನಗಳು ಪ್
Dec 11, 20251 min read


ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ನಿಂದ ಸಹ ಕೈದಿಗಳಿಗೆ ಕಿರುಕುಳ ಆರೋಪ
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ವಿರುದ್ಧ ಗಂಭೀರ ಆರೋಪವೊಂದು ಕೇಳಿಬಂದಿದೆ. ಅವರು ತಮ್ಮ ಸಹ ಕೈದಿಗಳಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ವರದಿಯಾಗಿದೆ. ಈ ಬಾರಿ ದರ್ಶನ್ ಜೈಲು ಸೇರಿದಾಗಿನಿಂದ ಜೈಲಿನಲ್ಲಿ ಕಠಿಣ ನಿಯಮಗಳು ಜಾರಿಯಲ್ಲಿದ್ದು, ಇತ್ತೀಚೆಗೆ ಜೈಲಿನ ಪಾರ್ಟಿ ವಿಡಿಯೋ ವೈರಲ್ ಆದ ನಂತರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಿದೆ. ಜೈಲಿನ ಮುಖ್ಯ ಸೂಪರಿಂಟೆಂಡೆಂಟ್ ಆಗಿ ಐಪಿಎಸ್ ಅಧಿಕಾರಿ ಅಂಶು ಕುಮಾರ್ ನೇಮಕಗೊಂಡ ನಂತರ, ಜೈಲಿನಲ್ಲಿ ಅತಿ ಕಠಿಣ ರೂಲ್ಸ್ಗಳನ್ನು ಜಾರಿಗೆ ತಂದಿದ್ದಾರೆ. ಜೈಲಿನಲ್ಲ
Dec 8, 20251 min read


'ಕಾಂತಾರ ಅಧ್ಯಾಯ 1' ದೈವದ ಪಾತ್ರದ ಅನುಕರಣೆ: ವಿವಾದದ ಬಳಿಕ ಕ್ಷಮೆಯಾಚಿಸಿದ ನಟ ರಣವೀರ್ ಸಿಂಗ್
ಗೋವಾದಲ್ಲಿ ಇತ್ತೀಚೆಗೆ ನಡೆದ ಭಾರತೀಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ (IFFI) ಸಮಾರೋಪ ಸಮಾರಂಭದಲ್ಲಿ ಬಾಲಿವುಡ್ ನಟ ರಣವೀರ್ ಸಿಂಗ್ ಅವರು 'ಕಾಂತಾರ ಅಧ್ಯಾಯ 1' ಚಿತ್ರದ ದೈವದ ಪಾತ್ರವನ್ನು ತಮಾಷೆಯಾಗಿ ಅನುಕರಣೆ ಮಾಡಿ ವಿವಾದಕ್ಕೆ ಸಿಲುಕಿದ್ದಾರೆ. ರಣವೀರ್ ಸಿಂಗ್ ಅವರು ದೈವದ ಪಾತ್ರವನ್ನು 'ಹೆಣ್ಣು ದೆವ್ವ' ಎಂದು ಉಲ್ಲೇಖಿಸಿ ಟೀಕೆಗೆ ಗುರಿಯಾಗಿದ್ದರು. ಕರಾವಳಿ ಪ್ರದೇಶದ ಹಲವರು ಈ ಹೇಳಿಕೆ ಮತ್ತು ಅನುಕರಣೆಯ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು, ನಟನು ತಕ್ಷಣವೇ ಕ್ಷಮೆಯಾಚಿಸಬೇಕು ಎಂದು ವ್ಯಾಪಕವಾಗಿ ಆಗ್ರಹಿಸಿದ್ದರು. ಈ ವಿವಾದವು ಹಿಂದೂ ಸಮುದಾಯದ ಭಾವ
Dec 2, 20251 min read


ಸಮಂತಾ ಸೈಲೆಂಟ್ ಮರುಮದುವೆ: ಇಶಾ ಯೋಗ ಕೇಂದ್ರದಲ್ಲಿ ರಾಜ್ ನಿಧಿಮೋರ್ ಜೊತೆ ದಾಂಪತ್ಯಕ್ಕೆ ಕಾಲಿಟ್ಟ ನಟಿ!
ಜನಪ್ರಿಯ ನಟಿ ಸಮಂತಾ ರುತ್ ಪ್ರಭು ಅವರು ಯಾವುದೇ ಅದ್ದೂರಿತನವಿಲ್ಲದೆ ಸಿಂಪಲ್ ಆಗಿ ಮರುಮದುವೆಯಾಗಿದ್ದಾರೆ. ಈ ಸುದ್ದಿ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಸಂಚಲನ ಮೂಡಿಸಿದೆ. ಸಮಂತಾ ಅವರು ತಮ್ಮ ಆಪ್ತ ಗೆಳೆಯ ರಾಜ್ ನಿಧಿಮೋರ್ ಜೊತೆ ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಇಶಾ ಯೋಗ ಕೇಂದ್ರದ ಲಿಂಗ ಭೈರವಿ ದೇವಸ್ಥಾನದಲ್ಲಿ ಸದ್ದಿಲ್ಲದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕೇವಲ 30 ಆಪ್ತ ಅತಿಥಿಗಳ ಸಮ್ಮುಖದಲ್ಲಿ ನಡೆದ ಈ ವಿವಾಹ ಸಮಾರಂಭದಲ್ಲಿ ಸಮಂತಾ ಅವರು ಕೆಂಪು ಸೀರೆಯಲ್ಲಿ ಮಿಂಚಿದರೆ, ಮದುಮಗ ರಾಜ್ ನಿಧಿಮೋರ್ ಬಿಳಿ ಶೆರ್ವಾನಿಯಲ್ಲಿ ಕಾಣಿಸಿಕೊಂಡಿದ್ದಾರೆ. ಕಳೆದ ಕೆಲವು ದಿನಗಳಿಂದ ಈ ಜೋಡಿ
Dec 2, 20251 min read


ತುಳುನಾಡಿನ ದೈವಕ್ಕೆ ರಣವೀರ್ ಸಿಂಗ್ ಅಪಮಾನ: 'ಹೆಣ್ಣು ದೆವ್ವ' ಎಂದಿದ್ದಕ್ಕೆ ವ್ಯಾಪಕ ಟೀಕೆ
ಬಾಲಿವುಡ್ ನಟ ರಣವೀರ್ ಸಿಂಗ್ ಅವರು 'ಕಾಂತಾರ' (Kantara) ಸಿನಿಮಾದಲ್ಲಿ ಬರುವ ತುಳುನಾಡಿನ ದೈವದ ಕುರಿತು ನೀಡಿದ ಹೇಳಿಕೆ ಮತ್ತು ಮಾಡಿದ ಅನುಕರಣೆ ಇದೀಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಗೋವಾ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ (IFFI) ನಿರೂಪಕರಾಗಿದ್ದ ರಣವೀರ್ ಸಿಂಗ್, ನಟ-ನಿರ್ದೇಶಕ ರಿಷಬ್ ಶೆಟ್ಟಿ (Rishab Shetty) ಅವರ ಅಭಿನಯವನ್ನು ಹೊಗಳುವ ಭರದಲ್ಲಿ ದೈವವನ್ನು 'ಹೆಣ್ಣು ದೆವ್ವ' (Lady Ghost) ಎಂದು ಉಲ್ಲೇಖಿಸಿ ಅಪಹಾಸ್ಯ ಮಾಡಿದ್ದಾರೆ ಎನ್ನಲಾಗಿದೆ. ಅವರ ಈ ನಡೆಯು ದೈವಾರಾಧಕರ ಮತ್ತು ಸೋಷಿಯಲ್ ಮೀಡಿಯಾ ಬಳಕೆದಾರರ ಕೆಂಗಣ್ಣಿಗೆ ಗುರಿಯಾಗಿದ್ದು, ತುಳುನಾಡಿನ ಧಾರ್ಮಿಕ ಮತ್ತು
Nov 30, 20251 min read


ನಟ ಧರ್ಮೇಂದ್ರ ಆರೋಗ್ಯ ಸ್ಥಿರ: ವದಂತಿಗಳಿಗೆ ತೆರೆ ಎಳೆದ ಇಶಾ ಡಿಯೋಲ್
ಇತ್ತೀಚೆಗೆ ಬಾಲಿವುಡ್ನ ಹಿರಿಯ ನಟ ಧರ್ಮೇಂದ್ರ ಅವರ ಆರೋಗ್ಯದ ಕುರಿತು ಹಬ್ಬಿದ್ದ ವದಂತಿಗಳಿಗೆ ಅವರ ಪುತ್ರಿ, ನಟಿ ಇಶಾ ಡಿಯೋಲ್ ತೆರೆ ಎಳೆದಿದ್ದಾರೆ. ನಟ ನಿಧನರಾಗಿದ್ದಾರೆ ಎಂಬ ಸುಳ್ಳು ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಡಲು ಪ್ರಾರಂಭಿಸಿದ ನಂತರ, ಇಶಾ ಡಿಯೋಲ್ ತಕ್ಷಣವೇ ಮಧ್ಯಪ್ರವೇಶಿಸಿ, ತಮ್ಮ ತಂದೆ ಚೇತರಿಸಿಕೊಳ್ಳುತ್ತಿದ್ದಾರೆ ಮತ್ತು ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ದೃಢಪಡಿಸಿದ್ದಾರೆ. ಈ ರೀತಿಯ ತಪ್ಪು ಮಾಹಿತಿಯನ್ನು ಹರಡದಂತೆ ಅವರು ಜನರಲ್ಲಿ ಹಾಗೂ ಮಾಧ್ಯಮಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. ನಟಿ ಇಶಾ ಡಿಯೋಲ್ ಅವರು ಮಂಗಳವಾರ ಬೆಳಿಗ್ಗೆ ತಮ್ಮ ಅಧಿಕೃತ ಇನ್ಸ್ಟಾಗ್ರಾಮ್
Nov 11, 20251 min read


'ಮಹಾನಟಿ ಸೀಸನ್ 2' ವಿಜೇತೆ ಮಂಗಳೂರಿನ ವಂಶಿ; ಚಿನ್ನದ ಕಿರೀಟ ಮುಡಿಗೇರಿಸಿಕೊಂಡ ನಟಿ!
ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾದ ಜನಪ್ರಿಯ ರಿಯಾಲಿಟಿ ಶೋ 'ಮಹಾನಟಿ ಸೀಸನ್ 2' ರ ವಿಜೇತರಾಗಿ ಮಂಗಳೂರಿನ ಪ್ರತಿಭೆ ವಂಶಿ ರತ್ನಾಕರ್ ಹೊರಹೊಮ್ಮಿದ್ದಾರೆ. ಕಳೆದ ಹಲವು ತಿಂಗಳುಗಳಿಂದ ತಮ್ಮ ನಟನಾ ಸಾಮರ್ಥ್ಯವನ್ನು ಪ್ರದರ್ಶಿಸುತ್ತಾ ಬಂದಿದ್ದ ವಂಶಿ, ಅಂತಿಮವಾಗಿ ಮಹಾನಟಿ ಪಟ್ಟವನ್ನು ತಮ್ಮದಾಗಿಸಿಕೊಂಡರು. ಅವರಿಗೆ ವೈಟ್ಗೋಲ್ಡ್ ವತಿಯಿಂದ 15 ಲಕ್ಷ ರೂ. ಮೌಲ್ಯದ ಚಿನ್ನದ ಕಿರೀಟವನ್ನು ಬಹುಮಾನವಾಗಿ ನೀಡಲಾಗಿದೆ. ಬೆಳಗಾವಿಯ ವರ್ಷಾ ಡಿಗ್ರಜೆ ಅವರು ಮೊದಲ ರನ್ನರ್ ಅಪ್ ಆಗಿ ಹೊರಹೊಮ್ಮಿದರೆ, ಮೈಸೂರಿನ ಶ್ರೀಯಾ ಅಗಮ್ಯ ಅವರು ಎರಡನೇ ರನ್ನರ್ ಅಪ್ ಸ್ಥಾನ ಪಡೆದಿದ್ದಾರೆ. ವರ್ಷಾ ಡಿಗ್ರಜೆ ಅವರಿಗೆ
Nov 10, 20251 min read


ಕಾರ್ತಿಕ ಹುಣ್ಣಿಮೆಯಂದು ಬೃಹತ್ ಸೂಪರ್ ಮೂನ್ ದರ್ಶನ!
ಇಂದು ಕಾರ್ತಿಕ ಹುಣ್ಣಿಮೆಯ ಪವಿತ್ರ ದಿನವಾಗಿದ್ದು, ರಾತ್ರಿ ಆಕಾಶದಲ್ಲಿ ಅತ್ಯಂತ ವಿಶಿಷ್ಟವಾದ ಖಗೋಳ ವಿದ್ಯಮಾನವೊಂದು ಗೋಚರಿಸಲಿದೆ. ಚಂದ್ರನು ತನ್ನ ಕಕ್ಷೆಯಲ್ಲಿ ಭೂಮಿಗೆ ತೀರಾ ಸಮೀಪ ಬರುವ ಕಾರಣ, ಇಂದು ಸೂಪರ್ ಮೂನ್ ದರ್ಶನವಾಗಲಿದೆ. ಹುಣ್ಣಿಮೆಯ ದಿನದಂದು ಚಂದ್ರ ಭೂಮಿಗೆ ಸಮೀಪಿಸುವುದರಿಂದ (ಸುಮಾರು 3,56,400 ಕಿ.ಮೀ.) ಮಾಮೂಲಿಗಿಂತಲೂ ದೊಡ್ಡದಾಗಿ ಮತ್ತು ಪ್ರಕಾಶಮಾನವಾಗಿ ಗೋಚರಿಸಲಿದ್ದಾನೆ. ಹುಣ್ಣಿಮೆಯ ಜೊತೆಗೆ ಚಂದ್ರ ಭೂಮಿಗೆ ಅತೀ ಸಮೀಪದಲ್ಲಿರುವ ಈ ವಿದ್ಯಮಾನವು ಕೇವಲ ಕಣ್ಣಿಗೆ ಹಬ್ಬ ಮಾತ್ರವಲ್ಲದೆ, ಒಂದು ಅಪರೂಪದ ಪ್ರಕೃತಿಯ ಸೊಬಗಾಗಿದೆ. ಪ್ರತಿ 28 ದಿನಗಳಿಗೊಮ್ಮೆ ಚಂದ್ರನು ದೀರ್
Nov 5, 20251 min read
Archive
bottom of page


