top of page
News Articles
Sathyapatha News Plus


ಬಳ್ಳಾರಿ: ಹಾಸ್ಟೆಲ್ನಲ್ಲಿ ವಿದ್ಯಾರ್ಥಿಯಿಂದಲೇ ಮಾರಣಾಂತಿಕ ಹಲ್ಲೆ, ಓರ್ವ ಬಾಲಕ ಸಾವು
ಬಳ್ಳಾರಿಯ ಖಾಸಗಿ ಶಾಲೆಯ ಹಾಸ್ಟೆಲ್ನಲ್ಲಿ ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆ ಭೀಕರ ಕೊಲೆಯಲ್ಲಿ ಅಂತ್ಯವಾಗಿದೆ. 9ನೇ ತರಗತಿಯ ವಿದ್ಯಾರ್ಥಿಯೊಬ್ಬ ವಾರ್ಡನ್ ಸೇರಿದಂತೆ ಸಹಪಾಠಿಗಳ ಮೇಲೆ ರಾಡ್ನಿಂದ ಹಲ್ಲೆ ನಡೆಸಿದ್ದು, ಈ ಘಟನೆಯಲ್ಲಿ ಓರ್ವ ಬಾಲಕ ಮೃತಪಟ್ಟು, ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಪಿ ಬಾಲಕ ಸದ್ಯ ಪರಾರಿಯಾಗಿದ್ದಾನೆ. ಘಟನೆಯು ಪೋಷಕರಲ್ಲಿ ತೀವ್ರ ಆಕ್ರೋಶ ಮೂಡಿಸಿದೆ. ವಿದ್ಯಾರ್ಥಿಯು ರಾಡ್ನಿಂದ ಹೊಡೆದಿದ್ದಾನೆ ಎಂದು ಮಂಡಳಿ ಹೇಳುತ್ತಿದ್ದರೂ, ಚಾಕುವಿನಿಂದ ಇರಿದಿರುವ ಶಂಕೆ ವ್ಯಕ್ತವಾಗಿದೆ. ಇಷ್ಟು ಮಂದಿಯ ಮೇ
Mar 91 min read


ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ಬೇಗೆ: ಒಣಹವೆ ಮುಂದುವರಿಕೆ
ರಾಜ್ಯಾದ್ಯಂತ ಬಿಸಿಲಿನ ಅಬ್ಬರ ಜೋರಾಗಿದ್ದು, ಇಂದು ಕೂಡ ಒಣಹವೆಯ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು ಮತ್ತು ಕೋಲಾರದಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆಯಿದ್ದು, ಕರಾವಳಿ ನಗರಿ ಮಂಗಳೂರಿನಲ್ಲಿ 31-25 ಡಿಗ್ರಿ ಸೆಲ್ಸಿಯಸ್ ತಾಪಮಾನವಿರಲಿದೆ. ಕೆಲವೆಡೆ ಮೋಡ ಕವಿದ ವಾತಾವರಣ ಕಂಡುಬಂದರೂ, ಮಧ್ಯಾಹ್ನದ ವೇಳೆಗೆ ಉಷ್ಣಾಂಶ ಏರಿಕೆಯಾಗಲಿದೆ. ಬೆಂಗಳೂರಿನಲ್ಲಿ ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದ್ದು, ಜನರು ಬಿಸಿಲಿನಿಂದ ರಕ್ಷಿಸಿಕೊಳ್ಳಲು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
Mar 91 min read


ಅತಿಥಿ ಉಪನ್ಯಾಸಕಿಯರಿಗೆ ಮಾತೃತ್ವ ರಜೆ ಭಾಗ್ಯ; ಶಾಲಾ-ಕಾಲೇಜುಗಳಲ್ಲಿ ಬೋಧಕ ಹುದ್ದೆಗಳ ಭರ್ತಿಗೆ ಗ್ರೀನ್ ಸಿಗ್ನಲ್
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ 2026-27ನೇ ಸಾಲಿನ ಬಜೆಟ್ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಆನೆಬಲ ನೀಡಲಾಗಿದ್ದು, ಶಾಲಾ-ಕಾಲೇಜುಗಳಲ್ಲಿ ಖಾಲಿ ಇರುವ ಬರೋಬ್ಬರಿ 15,000 ಬೋಧಕ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಘೋಷಿಸಿದ್ದಾರೆ. 'ಉತ್ತಮ ಕಲಿಕೆ ಉಜ್ವಲ ಭವಿಷ್ಯ' ಎಂಬ ಘೋಷವಾಕ್ಯದಡಿ ಮುಂದಿನ ಮೂರು ವರ್ಷಗಳಲ್ಲಿ 3,900 ಕೋಟಿ ರೂ. ವೆಚ್ಚದಲ್ಲಿ ಒಟ್ಟು 800 ಸರ್ಕಾರಿ ಶಾಲೆಗಳನ್ನು 'ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ' (KPS) ಉನ್ನತೀಕರಿಸಲಾಗುವುದು. ಮೂಲಸೌಕರ್ಯಕ್ಕಾಗಿ 565 ಕೋಟಿ ರೂ. ಮೀಸಲಿಡಲಾಗಿದ್ದು, ಹೊಸ ಕೊಠಡಿಗಳ ನಿರ್ಮಾಣ ಹಾಗೂ ಪೀಠೋಪಕರಣಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದ
Mar 61 min read


ದಕ್ಷಿಣ ಕನ್ನಡ ಜಿಲ್ಲೆಗೆ ಎರಡು ಹೊಸ ಪೊಲೀಸ್ ಠಾಣೆ ಮಂಜೂರು
ರಾಜ್ಯ ಸರ್ಕಾರವು ಕಾನೂನು ಸುವ್ಯವಸ್ಥೆ ಕಾಪಾಡಲು 12 ನೂತನ ಪೊಲೀಸ್ ಠಾಣೆಗಳ ಸ್ಥಾಪನೆಗೆ ಮುಂದಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ 17ನೇ ಬಜೆಟ್ನಲ್ಲಿ ಈ ಘೋಷಣೆ ಮಾಡಿದ್ದು, ಇದರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮಾಣಿ ಮತ್ತು ಸಜಿಪನಡು ಎಂಬಲ್ಲಿ ಎರಡು ಹೊಸ ಠಾಣೆಗಳು ಆರಂಭವಾಗಲಿವೆ. ಈ ನೂತನ ಠಾಣೆಗಳ ಸ್ಥಾಪನೆಯಿಂದ ಸ್ಥಳೀಯವಾಗಿ ಅಪರಾಧ ನಿಯಂತ್ರಣಕ್ಕೆ ಹೆಚ್ಚಿನ ಬಲ ಸಿಗಲಿದೆ. ಸಾರ್ವಜನಿಕರ ಸುರಕ್ಷತೆಗೆ ಆದ್ಯತೆ ನೀಡಿರುವ ಸರ್ಕಾರ, ಪೊಲೀಸ್ ಇಲಾಖೆಯನ್ನು ಮತ್ತಷ್ಟು ಬಲಪಡಿಸಲು ಈ ಕ್ರಮ ಕೈಗೊಂಡಿದೆ. ದಕ್ಷಿಣ ಕನ್ನಡದ ಈ ಭಾಗದ ಜನರಿಗೆ ಇನ್ನು ಮುಂದೆ ಪೊಲೀಸ್ ಸೇವೆಗಳು ಸುಲಭವಾಗಿ ಲಭ್ಯವಾಗ
Mar 61 min read


ಬಿಪಿಎಲ್ ಕಾರ್ಡುದಾರರಿಗೆ ‘ಇಂದಿರಾ ಆಹಾರ ಕಿಟ್’ – ಅನ್ನಭಾಗ್ಯ ಯೋಜನೆಯಲ್ಲಿ ಹೊಸ ಬದಲಾವಣೆ
ಬೆಂಗಳೂರು: ಕರ್ನಾಟಕ ಸರ್ಕಾರವು 2026-27ನೇ ಸಾಲಿನ ಬಜೆಟ್ನಲ್ಲಿ ಬಿಪಿಎಲ್ ಕಾರ್ಡುದಾರರಿಗೆ ಮಹತ್ವದ ಘೋಷಣೆ ಮಾಡಿದೆ. ಸರ್ಕಾರದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಇದುವರೆಗೆ ನೀಡಲಾಗುತ್ತಿದ್ದ ಹೆಚ್ಚುವರಿ 5 ಕೆಜಿ ಅಕ್ಕಿಯ ಬದಲಿಗೆ ಇನ್ನು ಮುಂದೆ ಪ್ರತಿ ತಿಂಗಳು ‘ಇಂದಿರಾ ಆಹಾರ ಕಿಟ್’ ವಿತರಿಸುವ ಯೋಜನೆಯನ್ನು ಸರ್ಕಾರ ಘೋಷಿಸಿದೆ. Ad ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಭಾಷಣದಲ್ಲಿ ಈ ಕುರಿತು ಮಾಹಿತಿ ನೀಡಿದ್ದು, ರಾಜ್ಯದ ಸುಮಾರು 4.54 ಕೋಟಿ ಬಡ ಫಲಾನುಭವಿಗಳಿಗೆ ಈ ಯೋಜನೆಯ ಲಾಭ ದೊರೆಯಲಿದೆ ಎಂದು ತಿಳಿಸಿದ್ದಾರೆ. ಇಂದಿರಾ ಆಹಾರ ಕಿಟ್ನಲ್ಲಿ ತೊಗರಿಬೇಳೆ, ಸಕ್ಕರೆ,
Mar 61 min read


ರೇಷನ್ ಕಾರ್ಡ್ ತಿದ್ದುಪಡಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್-ಅರ್ಜಿ ಸಲ್ಲಿಕೆ ಹೇಗೆ?
ಪಡಿತರ ಚೀಟಿ ತಿದ್ದುಪಡಿ ಹಾಗೂ ಹೊಸ ಸದಸ್ಯರ ಸೇರ್ಪಡೆಗೆ ರಾಜ್ಯ ಸರ್ಕಾರವು ಸುವರ್ಣಾವಕಾಶ ನೀಡಿದ್ದು, ಸಾರ್ವಜನಿಕರು ಆನ್ಲೈನ್ ಮತ್ತು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಕುಟುಂಬದ ಮುಖ್ಯಸ್ಥರ ಬದಲಾವಣೆ, ವಿಳಾಸ ತಿದ್ದುಪಡಿ, ಮಗುವಿನ ಹೆಸರು ಸೇರ್ಪಡೆ ಅಥವಾ ಮದುವೆಯಾದ ನಂತರ ಪತ್ನಿಯ ಹೆಸರು ಸೇರಿಸಲು ಈ ಪ್ರಕ್ರಿಯೆ ಸಹಕಾರಿಯಾಗಲಿದೆ. ಈ ಸುಧಾರಣೆಯು ಪಡಿತರ ವ್ಯವಸ್ಥೆಯನ್ನು ಮತ್ತಷ್ಟು ಪಾರದರ್ಶಕಗೊಳಿಸಲು ಸಹಕಾರಿಯಾಗಲಿದೆ. ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳಾದ ಆಧಾರ್ ಕಾರ್ಡ್, ಜನನ ಪ್ರಮಾಣ ಪತ್ರ (6 ವರ್ಷದೊಳಗಿನ ಮಕ್ಕಳಿಗೆ), ಮತ್ತು ಜಾತಿ ಹಾಗೂ ಆದಾಯ ಪ್ರಮಾಣ ಪತ್ರಗಳನ್ನು...
Mar 61 min read


ಕುಕ್ಕೆ ಸುಬ್ರಹ್ಮಣ್ಯ ದೇವಳಕ್ಕೆ ಪ್ರಾಧಿಕಾರ ರಚನೆಗೆ ನಿರ್ಧಾರ ರಾಜ್ಯ ಬಜೆಟ್ ನಲ್ಲಿ ಸಿಎಂ ಘೋಷಣೆ
ರಾಜ್ಯದ ಪ್ರಸಿದ್ಧ ಧಾರ್ಮಿಕ ಕೇಂದ್ರಗಳಾದ ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳ ಸಮಗ್ರ ಪ್ರಗತಿಗಾಗಿ ಪ್ರತ್ಯೇಕ 'ಅಭಿವೃದ್ಧಿ ಪ್ರಾಧಿಕಾರ' ರಚಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಇತ್ತೀಚಿನ ರಾಜ್ಯ ಬಜೆಟ್ ಮಂಡನೆಯಲ್ಲಿ ಈ ಮಹತ್ವದ ನಿರ್ಧಾರವನ್ನು ಪ್ರಕಟಿಸಲಾಗಿದೆ. ಸೌಲಭ್ಯಗಳ ಸುಧಾರಣೆಗೆ ಆದ್ಯತೆ ದಿನೇ ದಿನೇ ಹೆಚ್ಚುತ್ತಿರುವ ಭಕ್ತರ ಸಂಖ್ಯೆಯನ್ನು ಪರಿಗಣಿಸಿ, ಮೂಲಸೌಕರ್ಯ ಹಾಗೂ ಪ್ರವಾಸೋದ್ಯಮಕ್ಕೆ ಹೆಚ್ಚಿನ ವೇಗ ನೀಡಲು ಈ ಪ್ರಾಧಿಕಾರಗಳು ಸಹಕಾರಿಯಾಗಲಿವೆ. ಈ ಯೋಜನೆಯ ಮೂಲಕ ಈ ಪುಣ್ಯಕ್ಷೇತ್ರಗಳ ಆಡಳಿತ ಮತ್ತು ಅಭಿವೃದ್ಧಿ ಕಾರ್ಯಗಳು ಇನ್ನ
Mar 61 min read


ಸಾಮಾಜಿಕ ಜಾಲತಾಣ ಬಳಕೆಗೆ ರಾಜ್ಯ ಬಜೆಟ್ನಲ್ಲಿ ಬ್ರೇಕ್!
ಬಜೆಟ್ನಲ್ಲಿ ರಾಜ್ಯ ಸರ್ಕಾರವು ಮಕ್ಕಳ ಮಾನಸಿಕ ಆರೋಗ್ಯದ ಹಿತದೃಷ್ಟಿಯಿಂದ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣಗಳ ಬಳಕೆಯನ್ನು ಸಂಪೂರ್ಣ ನಿಷೇಧಿಸುವ ಮಹತ್ವದ ನಿರ್ಧಾರ ಪ್ರಕಟಿಸಿದೆ. ಸ್ಮಾರ್ಟ್ಫೋನ್ ವ್ಯಸನದಿಂದ ಮಕ್ಕಳನ್ನು ಪಾರುಮಾಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಫೇಸ್ಬುಕ್, ಇನ್ಸ್ಟಾಗ್ರಾಮ್ನಂತಹ ಜಾಲತಾಣಗಳಿಂದ ಮಕ್ಕಳ ಏಕಾಗ್ರತೆ ಕುಂಠಿತವಾಗುತ್ತಿರುವುದನ್ನು ಮನಗಂಡು ಈ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಇದರೊಂದಿಗೆ ವಿದ್ಯಾರ್ಥಿಗಳಿಗೆ ವೃತ್ತಿಪರ ಮಾನಸಿಕ ಸಲಹೆಗಾರರ ಬೆಂಬಲ ನೀಡುವ ವಿಶೇಷ ಯೋಜನೆಯನ್ನು ಘೋಷಿಸಲಾಗಿದೆ. ಡಿಜಿಟಲ್ ವ್ಯಸನ ಮುಕ್ತ ಶೈಕ್ಷಣಿಕ ವಾತಾವರಣ ನ
Mar 61 min read


ಸಿದ್ದರಾಮಯ್ಯ 'ಬಜೆಟ್' ಅಬ್ಬರ: 83 ಲಕ್ಷ ರೈತರಿಗೆ ಸಾಲದ ಆಸರೆ, ಶಿಕ್ಷಣಕ್ಕೆ ದಾಖಲೆ ಅನುದಾನ!
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದಲ್ಲಿ ತಮ್ಮ ದಾಖಲೆಯ 17ನೇ ಬಜೆಟ್ ಮಂಡಿಸಿದರು. ಸಚಿವ ಸಂಪುಟದ ಅನುಮೋದನೆ ಪಡೆದ ಬಳಿಕ ಕೆಂಪು ಸೂಟ್ಕೇಸ್ನೊಂದಿಗೆ ಆಗಮಿಸಿದ ಸಿಎಂ, ರಾಜ್ಯದ ಸಮಗ್ರ ಅಭಿವೃದ್ಧಿಯ ದೂರದೃಷ್ಟಿಯೊಂದಿಗೆ ಭಾಷಣ ಆರಂಭಿಸಿದರು. ಈ ಬಜೆಟ್ನಲ್ಲಿ ಸಮಾಜದ ವಿವಿಧ ವರ್ಗಗಳಿಗೆ ಭರಪೂರ ಅನುದಾನ ಘೋಷಿಸಲಾಗಿದೆ. ಬಜೆಟ್ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಸಿಂಹಪಾಲು ನೀಡಲಾಗಿದ್ದು, ದಾಖಲೆಯ 47,224 ಕೋಟಿ ರೂಪಾಯಿ ಮೀಸಲಿಡಲಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣಕ್ಕೆ 34,929 ಕೋಟಿ ಹಾಗೂ ನಗರಾಭಿವೃದ್ಧಿಗೆ 22,203 ಕೋಟಿ ರೂಪಾಯಿ ನೀಡಲಾಗಿದೆ. ಇದು ರಾಜ್ಯದ ಮೂಲಸೌಕರ್ಯ ಮತ್ತ
Mar 61 min read


ನೇತ್ರಾವತಿ ನದಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್ ಪತ್ತೆ: ತನಿಖೆಗೆ ಸ್ಪೀಕರ್ ಯು.ಟಿ. ಖಾದರ್ ಸೂಚನೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಫರಂಗಿಪೇಟೆ ಸಮೀಪದ ನೇತ್ರಾವತಿ ನದಿ ತೀರದಲ್ಲಿ ನೂರಾರು ಆಧಾರ್ ಕಾರ್ಡ್ಗಳು ಅನಾಥವಾಗಿ ಬಿದ್ದಿರುವುದು ಪತ್ತೆಯಾಗಿದ್ದು, ಸಾರ್ವಜನಿಕರಲ್ಲಿ ತೀವ್ರ ಆಕ್ರೋಶ ಮೂಡಿಸಿದೆ. ಪುದು ಗ್ರಾಮದ ನಿವಾಸಿಗಳ ವಿಳಾಸ ಹೊಂದಿರುವ ಈ ಕಾರ್ಡ್ಗಳು ನದಿಯಲ್ಲಿ ತೇಲಿ ಬರುತ್ತಿರುವುದನ್ನು ಗಮನಿಸಿದ ಸ್ಥಳೀಯರು ಕೂಡಲೇ ಗ್ರಾಮ ಪಂಚಾಯತ್ ಗಮನಕ್ಕೆ ತಂದಿದ್ದಾರೆ. ಸರ್ಕಾರದ ಪ್ರಮುಖ ಗುರುತಿನ ಚೀಟಿಗಳು ಹೀಗೆ ನದಿ ಪಾಲಾಗಿರುವುದು ವ್ಯವಸ್ಥೆಯ ಬೇಜವಾಬ್ದಾರಿತನಕ್ಕೆ ಹಿಡಿದ ಕನ್ನಡಿಯಾಗಿದೆ ಎಂದು ಸ್ಥಳೀಯರು ಆಪಾದಿಸಿದ್ದಾರೆ. ಈ ಗಂಭೀರ ಘಟನೆಯನ್ನು ಗಮನಿಸಿದ ಸ್ಥಳ
Mar 51 min read


ದಾಖಲೆಯ 17ನೇ ಬಜೆಟ್ ಮಂಡನೆಗೆ ಸಿಎಂ ಸಿದ್ದರಾಮಯ್ಯ ಸಜ್ಜು
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ 2026-27ನೇ ಸಾಲಿನ ಆಯವ್ಯಯ ಮಂಡಿಸುವ ಮೂಲಕ ಕರ್ನಾಟಕದ ಇತಿಹಾಸದಲ್ಲಿ 17 ಬಾರಿ ಬಜೆಟ್ ಮಂಡಿಸಿದ ಮೊದಲ ನಾಯಕ ಎಂಬ ಹೊಸ ದಾಖಲೆ ಬರೆಯಲಿದ್ದಾರೆ. ಈಗಾಗಲೇ ಎಲ್ಲಾ ಇಲಾಖೆಗಳೊಂದಿಗೆ ಸಮಾಲೋಚನೆ ನಡೆಸಿರುವ ಅವರು, ಬಜೆಟ್ಗೆ ಅಂತಿಮ ರೂಪ ನೀಡಿದ್ದಾರೆ. ಈ ಬಾರಿ ಜನಸಾಮಾನ್ಯರ ನಿರೀಕ್ಷೆಗಳು ಗಗನಕ್ಕೇರಿದ್ದು, ಗ್ಯಾರಂಟಿ ಯೋಜನೆಗಳ ಮುಂದುವರಿಕೆಯೊಂದಿಗೆ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುವ ಸಾಧ್ಯತೆಯಿದೆ. ವಿಶೇಷವಾಗಿ ಕೃಷಿ ಮತ್ತು ಆರೋಗ್ಯ ಕ್ಷೇತ್ರಗಳಿಗೆ ಈ ಬಜೆಟ್ನಲ್ಲಿ ಬಂಪರ್ ಕೊಡುಗೆಗಳನ್ನು ನಿರೀಕ್ಷಿಸಲಾಗಿದೆ. ಬೆಂಗಳೂರಿನ ಸಮಗ್ರ
Mar 51 min read


ನೆಟ್ಟಣ ರೈಲು ನಿಲ್ದಾಣಕ್ಕೆ ಶಾಸಕಿ ಭಾಗೀರಥಿ ಮುರುಳ್ಯ ದಿಢೀರ್ ಭೇಟಿ: ಅಧಿಕಾರಿಗಳಿಗೆ ತರಾಟೆ
ಸಾರ್ವಜನಿಕರ ದೂರು ಹಾಗೂ ರೈಲು ಬಳಕೆದಾರರ ಸಂಘದ ಮನವಿಯ ಹಿನ್ನೆಲೆಯಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಮಂಗಳವಾರ ಕಡಬ ತಾಲೂಕಿನ ನೆಟ್ಟಣ (ಸುಬ್ರಹ್ಮಣ್ಯ ರೋಡ್) ರೈಲು ನಿಲ್ದಾಣಕ್ಕೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಿಲ್ದಾಣದ ಆವರಣ ಮತ್ತು ಶೌಚಾಲಯಗಳಲ್ಲಿ ಸ್ವಚ್ಛತೆ ಇಲ್ಲದಿರುವುದನ್ನು ಕಂಡು ಅಧಿಕಾರಿಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಅವರು, ಪ್ರತಿದಿನ ಪರಿಸರವನ್ನು ಶುಚಿಯಾಗಿಡಲು ಕಟ್ಟುನಿಟ್ಟಿನ ಸೂಚನೆ ನೀಡಿದರು. ಪರಿಶೀಲನೆಯ ವೇಳೆ ಮಹಿಳಾ ವಿಶ್ರಾಂತಿ ಗೃಹದಲ್ಲಿ ಪುರುಷರು ವಾಸ್ತವ್ಯ ಹೂಡಿರುವುದನ್ನು ಗಮನಿಸಿದ ಶಾಸಕರು, ಭದ್ರತಾ ಲೋಪದ ಬಗ್ಗೆ ಅಧಿಕಾರಿಗಳ
Mar 41 min read


ಕಡಬ: ಆನೆದಂತ ಮಾರಾಟಕ್ಕೆ ಯತ್ನ - ಪೊಲೀಸ್ ಅರಣ್ಯ ಸಂಚಾರಿ ದಳದಿಂದ ಆರೋಪಿಯ ಬಂಧನ
ಕಡಬದ ಪೇಟೆಯಲ್ಲಿ ಅಕ್ರಮವಾಗಿ ಆನೆದಂತ ಮಾರಾಟ ಮಾಡಲು ಸಂಚು ರೂಪಿಸಿದ್ದ ಜಾಲವೊಂದನ್ನು ಮಂಗಳೂರಿನ ಪೊಲೀಸ್ ಅರಣ್ಯ ಸಂಚಾರಿ ದಳ (Forest Mobile Squad) ಯಶಸ್ವಿಯಾಗಿ ಭೇದಿಸಿದೆ. ಕಡಬ ಪೇಟೆಯಲ್ಲಿ ಮಟನ್ ಸ್ಟಾಲ್ ನಡೆಸುತ್ತಿದ್ದ ತಾಜು ಎಂಬಾತನೇ ಬಂಧಿತ ಆರೋಪಿಯಾಗಿದ್ದು, ಈತ ಅಕ್ರಮವಾಗಿ ಆನೆದಂತಗಳನ್ನು ಸಂಗ್ರಹಿಸಿ ಹೆಚ್ಚಿನ ಹಣಕ್ಕೆ ಮಾರಾಟ ಮಾಡಲು ಹೊಂಚು ಹಾಕುತ್ತಿದ್ದಾಗ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಖಚಿತ ಮಾಹಿತಿಯ ಆಧಾರದ ಮೇಲೆ ಸೋಮವಾರ ಮಧ್ಯಾಹ್ನ ಕಡಬಕ್ಕೆ ಧಾವಿಸಿದ ಪೊಲೀಸ್ ತಂಡವು ಮಿಂಚಿನ ಕಾರ್ಯಾಚರಣೆ ನಡೆಸಿತು. ಈ ವೇಳೆ ಆರೋಪಿಯಿಂದ ಅಂದಾಜು 26 ಕೆ.ಜಿ ತೂಕದ ಆನೆದಂತಗಳನ್ನು ವಶಪಡ
Mar 41 min read


ಯಲಹಂಕ ರೈಲು ಚಕ್ರ ಕಾರ್ಖಾನೆಯಲ್ಲಿ 192 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರಿನ ಯಲಹಂಕದಲ್ಲಿರುವ ಭಾರತೀಯ ರೈಲ್ವೆಯ ರೈಲು ಚಕ್ರ ಕಾರ್ಖಾನೆಯು (Rail Wheel Factory) 2025-26ನೇ ಸಾಲಿಗೆ ವಿವಿಧ ತಾಂತ್ರಿಕ ವಿಭಾಗಗಳಲ್ಲಿ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. 'ಕೌಶಲ ಭಾರತ' ಅಭಿಯಾನದಡಿ ಒಟ್ಟು 192 ಆಕ್ಟ್ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಈ ಅಧಿಸೂಚನೆ ಹೊರಡಿಸಲಾಗಿದೆ. ಹುದ್ದೆಗಳ ವಿವರ: ಫಿಟ್ಟರ್ (85), ಮಷಿನಿಸ್ಟ್ (31), ಮೋಟಾರ್ ವೆಹಿಕಲ್ ಮೆಕ್ಯಾನಿಕ್ (8), ಟರ್ನರ್ (5), ಎಲೆಕ್ಟ್ರಿಷಿಯನ್ (18), ಎಲೆಕ್ಟ್ರಾನಿಕ್ ಮೆಕ್ಯಾನಿಕ್ (22) ಮತ್ತು ಸಿಎನ್ಸಿ ಪ್ರೋಗ್ರಾಮಿಂಗ್ (23) ವಿಭಾಗಗಳಲ್ಲಿ ಅವಕಾಶಗಳಿವೆ. ಅರ್ಹತೆ ಮತ್ತು ವಯೋ
Mar 41 min read


ಚಿನ್ನದ ದರದಲ್ಲಿ ಭಾರಿ ಕುಸಿತ
ಮಂಗಳೂರಿನಲ್ಲಿ ಇಂದು ಬಂಗಾರದ ಬೆಲೆ ಭಾರಿ ಕುಸಿತ ಕಂಡಿದೆ. 24 ಕ್ಯಾರೆಟ್ ಚಿನ್ನದ ದರವು ಪ್ರತಿ 10 ಗ್ರಾಂಗೆ ₹3,110 ಕಡಿಮೆಯಾಗುವ ಮೂಲಕ ₹1,64,510 ಕ್ಕೆ ತಲುಪಿದೆ. ನಿನ್ನೆ ಇದು ₹1,67,620 ಇತ್ತು. ಜಾಗತಿಕ ಮಾರುಕಟ್ಟೆಯ ಏರಿಳಿತದ ನಡುವೆ ಈ ದರ ಇಳಿಕೆಯಾಗಿದ್ದು, ಆಭರಣ ಪ್ರಿಯರಿಗೆ ಮತ್ತು ಹೂಡಿಕೆದಾರರಿಗೆ ಇದು ಸಮಾಧಾನಕರ ಸುದ್ದಿಯಾಗಿದೆ.
Mar 41 min read


ಪ್ರೇಮ ವೈಫಲ್ಯ: ಒಮಾನ್ನಲ್ಲಿ ಉಳ್ಳಾಲ ಮೂಲದ ಯುವಕ ನೇಣಿಗೆ ಶರಣು
ಉಳ್ಳಾಲ ಸಮೀಪದ ಸೋಮೇಶ್ವರ ಮೂಲದ ಯುವಕ ಪುನೀತ್ ಪೂಜಾರಿ (32) ಎಂಬುವವರು ಪ್ರೇಮ ವೈಫಲ್ಯದ ಹಿನ್ನೆಲೆಯಲ್ಲಿ ಒಮಾನ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ಒಂದೂವರೆ ವರ್ಷದಿಂದ ಒಮಾನ್ನ ಲಿಫ್ಟ್ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಇವರು, ಇತ್ತೀಚೆಗಷ್ಟೇ ಊರಿಗೆ ಬಂದು ಮರಳಿದ್ದರು. ತಾವು ಪ್ರೀತಿಸುತ್ತಿದ್ದ ಯುವತಿಯು ಮದುವೆಗೆ ನಿರಾಕರಿಸಿ, ಕರೆ ಹಾಗೂ ಸಂದೇಶಗಳಿಗೆ ಸ್ಪಂದಿಸದ ಕಾರಣ ಮನನೊಂದ ಪುನೀತ್ ಈ ತೀವ್ರ ನಿರ್ಧಾರ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಆತ್ಮಹತ್ಯೆಗೂ ಮುನ್ನ ಪುನೀತ್ ತಮ್ಮ ನೋವನ್ನು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಮೂಲಕ ಹಂಚಿಕೊಂಡಿದ್ದು, ಈ ದೃಶ್ಯಗಳು ವೈ
Mar 31 min read


ಮಸೀದಿಗೆ ಬಾಂಬ್ ಬೆದರಿಕೆ: ಉಳ್ಳಾಲದಲ್ಲಿ ಕಿಡಿಗೇಡಿ ವಿರುದ್ಧ ಸುಮೊಟೊ ಪ್ರಕರಣ ದಾಖಲು
ಮಂಗಳೂರಿನ ಉಳ್ಳಾಲದ ಮಸೀದಿಯೊಂದರ ಬಳಿ ಬಾಂಬ್ ಸ್ಫೋಟಿಸುವುದಾಗಿ ಇನ್ಸ್ಟಾಗ್ರಾಂನಲ್ಲಿ ಪ್ರಚೋದನಾಕಾರಿ ಸಂದೇಶ ಹಂಚಿಕೊಂಡ ಕಿಡಿಗೇಡಿಯ ವಿರುದ್ಧ ಉಳ್ಳಾಲ ಪೊಲೀಸರು ಸುಮೊಟೊ ಪ್ರಕರಣ ದಾಖಲಿಸಿದ್ದಾರೆ. ಹಿಂದೂ ಸಂಘಟನೆಯ ಕಾರ್ಯಕರ್ತ ಸುಹಾಸ್ ಶೆಟ್ಟಿ ಎಂಬುವವರ ಭಾವಚಿತ್ರವಿರುವ 'ಶಂಕರ್ 11916' ಎಂಬ ಖಾತೆಯಿಂದ ಈ ವಿಧ್ವಂಸಕ ಕೃತ್ಯಕ್ಕೆ ಬೆಂಬಲ ಕೋರಿ ಪೋಸ್ಟ್ ಹಾಕಲಾಗಿತ್ತು. ಸಾಮಾಜಿಕ ಜಾಲತಾಣದ ಮೇಲೆ ನಿಗಾ ಇರಿಸಿದ್ದ ಪೊಲೀಸ್ ಸಿಬ್ಬಂದಿ ಸಂತೋಷ್ ದೊಡ್ಡಮನಿ ನೀಡಿದ ದೂರಿನನ್ವಯ ಈ ಕ್ರಮ ಕೈಗೊಳ್ಳಲಾಗಿದೆ. ಕೋಮು ಸಾಮರಸ್ಯ ಕದಡುವ ಇಂತಹ ಹಿತಾಸಕ್ತಿಗಳ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ವಿಧಾನಸಭ
Mar 31 min read


ಶಿವಮೊಗ್ಗ: ಖಮೇನಿ ಹತ್ಯೆ ಖಂಡಿಸಿ ಶಿಯಾ ಮುಸ್ಲಿಂ ಸಮುದಾಯದಿಂದ ಬೃಹತ್ ಪ್ರತಿಭಟನೆ- 'ನೂರು ಮಕ್ಕಳನ್ನಾದರೂ ಹೆರುತ್ತೇವೆ, ಶರಣಾಗುವುದಿಲ್ಲ'
ಅಮೆರಿಕ ಮತ್ತು ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ನ ಸರ್ವೋಚ್ಚ ನಾಯಕ ಖಮೇನಿ ಹತ್ಯೆಯಾಗಿರುವುದನ್ನು ವಿರೋಧಿಸಿ ಶಿವಮೊಗ್ಗದಲ್ಲಿ ಶಿಯಾ ಮುಸ್ಲಿಂ ಸಮುದಾಯದವರು ಬೃಹತ್ ಪ್ರತಿಭಟನೆ ನಡೆಸಿದರು. ಇರಾನ್ನಲ್ಲಿ ಅಲ್ಲಿನ ಪ್ರಜೆಗಳು ಈ ಬೆಳವಣಿಗೆಯನ್ನು ಸಂಭ್ರಮಿಸುತ್ತಿದ್ದರೆ, ಇಲ್ಲಿನ ಸಮುದಾಯದವರು ತೀವ್ರ ದುಃಖ ಮತ್ತು ಆಕ್ರೋಶ ವ್ಯಕ್ತಪಡಿಸಿ ಬೀದಿಗಿಳಿದು ಹೋರಾಟ ನಡೆಸುತ್ತಿರುವುದು ವಿಶೇಷವಾಗಿ ಕಂಡುಬಂದಿದೆ. ಪ್ರತಿಭಟನೆಯ ವೇಳೆ ಆಕ್ರೋಶಭರಿತ ಹೇಳಿಕೆ ನೀಡಿದ ಮಹಿಳೆಯೊಬ್ಬರು, ಖಮೇನಿ ಹತ್ಯೆಯನ್ನು ನಾವು ಎಂದಿಗೂ ಸಹಿಸುವುದಿಲ್ಲ ಎಂದು ಎಚ್ಚರಿಸಿದರು. "ಅವರು ಎಷ್ಟು ಜನರನ್ನು ಸಾಯಿಸಿದರೂ ನಾವು ಶರ
Mar 31 min read


ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ: ಮೊದಲ ದಿನ ಶೇ. 96.87 ರಷ್ಟು ಹಾಜರಾತಿ
ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗಿದ್ದು, ಮೊದಲ ದಿನ ಕನ್ನಡ ಮತ್ತು ಅರೇಬಿಕ್ ವಿಷಯಗಳ ಪರೀಕ್ಷೆ ಅತ್ಯಂತ ಸುಸೂತ್ರವಾಗಿ ಜರುಗಿದೆ. ಒಟ್ಟು 1,217 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದ್ದು, ಯಾವುದೇ ಅಕ್ರಮಗಳು ವರದಿಯಾಗಿಲ್ಲ. ಮೊದಲ ದಿನ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ 5,09,085 ವಿದ್ಯಾರ್ಥಿಗಳ ಪೈಕಿ 4,93,132 ಮಂದಿ ಹಾಜರಾಗಿದ್ದು, ಒಟ್ಟು ಶೇ. 96.87 ರಷ್ಟು ಹಾಜರಾತಿ ದಾಖಲಾಗಿದೆ. ಸುಮಾರು 15,953 ವಿದ್ಯಾರ್ಥಿಗಳು ಗೈರುಹಾಜರಾಗಿದ್ದಾರೆ ಎಂದು ಇಲಾಖೆ ತಿಳಿಸಿದೆ. ಈ ವರ್ಷ ಒಟ್ಟು 7,10,363 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದು, ಇದರಲ್ಲಿ 6
Mar 11 min read


ನಾಳೆಯಿಂದ ರಾಜ್ಯದ್ಯಂತ ‘ದ್ವಿತೀಯ ಪಿಯುಸಿ’ ಪರೀಕ್ಷೆ ಆರಂಭ: ಈ ನಿಯಮ ಪಾಲನೆ ಕಡ್ಡಾಯ
ಬೆಂಗಳೂರು, ಫೆ.27: ರಾಜ್ಯಾದ್ಯಂತ ನಾಳೆಯಿಂದ (ಫೆ.28) ದ್ವಿತೀಯ ಪಿಯುಸಿ ಪರೀಕ್ಷೆ-1 ಆರಂಭಗೊಳ್ಳಲಿದೆ. ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಎಲ್ಲಾ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ. ಈ ಬಾರಿ ರಾಜ್ಯದಾದ್ಯಂತ ಒಟ್ಟು 1,217 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಪಾರದರ್ಶಕತೆ ಹಾಗೂ ಶಿಸ್ತಿನ ದೃಷ್ಟಿಯಿಂದ ವಿಶೇಷ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸಿಸಿಟಿವಿ ಹಾಗೂ ವೆಬ್ಕಾಸ್ಟಿಂಗ್ ಮೂಲಕ ನಿಗಾ ಪರೀಕ್ಷಾ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ನಡೆಸಲು ಪ್ರತಿಯೊಂದು ಪರೀಕ್ಷಾ ಕೊಠಡಿಯಲ್ಲೂ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ
Feb 271 min read
Archive
bottom of page



