top of page
News Articles
Sathyapatha News Plus


ಬಿಜೆಪಿಗೆ ಆಘಾತ: ಕಾಂಗ್ರೆಸ್ ಸೇರಿದ ನೆರಿಯಾ ಮಾಜಿ ಗ್ರಾ.ಪಂ. ಸದಸ್ಯೆ ಮರಿಯಮ್ಮ
ಬೆಳ್ತಂಗಡಿ: ತಾಲೂಕಿನ ನೆರಿಯಾ ಗ್ರಾಮ ಪಂಚಾಯತ್ನ ಮಾಜಿ ಬಿಜೆಪಿ ಬೆಂಬಲಿತ ಸದಸ್ಯೆಯಾಗಿದ್ದ ಮರಿಯಮ್ಮ ಅವರು ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರು. ಪಕ್ಷದ ತತ್ವ, ಸಿದ್ಧಾಂತ ಹಾಗೂ ಜನಪರ ಕಾರ್ಯವೈಖರಿಯನ್ನು ಮೆಚ್ಚಿ ಅವರು ಈ ನಿರ್ಧಾರ ಕೈಗೊಂಡಿದ್ದಾರೆ. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರು ಮರಿಯಮ್ಮ ಅವರನ್ನು ಪಕ್ಷಕ್ಕೆ ಆತ್ಮೀಯವಾಗಿ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ರಕ್ಷಿತ್ ಶಿವರಾಂ, "ಕಾಂಗ್ರೆಸ್ ಅಭಿವೃದ್ಧಿ ಹಾಗೂ ಸಾಮಾಜಿಕ ನ್ಯಾಯಕ್ಕೆ ಆದ್ಯತೆ ನೀಡುವ ಪಕ್ಷವಾಗಿದೆ. ಮರಿಯಮ್ಮ ಅವರ ಸೇರ್ಪಡೆಯಿಂದ ನೆರಿಯಾ ಭಾಗದಲ್ಲಿ ಪಕ್ಷದ ಸಂಘಟನೆ ಇನ
Aug 251 min read


ಮಹಿಳೆಯರ ಆರೋಗ್ಯಕ್ಕೆ ರಾಜ್ಯ ಸರ್ಕಾರದ ‘ಋತುತಾರೆ’ ಯೋಜನೆ: ನಟಿ ರಮ್ಯಾ ಬ್ರ್ಯಾಂಡ್ ಅಂಬಾಸಿಡರ್
ಬೆಂಗಳೂರು: ಮಹಿಳೆಯರ ಆರೋಗ್ಯ ಮತ್ತು ಆರೋಗ್ಯ ಜಾಗೃತಿಗೆ ಉತ್ತೇಜನ ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರ ‘ಋತುತಾರೆ’ ಎಂಬ ಹೊಸ ಯೋಜನೆಯನ್ನು ಆರಂಭಿಸಿದೆ. ಈ ಯೋಜನೆಯ ಕುರಿತು ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಆರೋಗ್ಯ ಸಚಿವ ಯು.ಟಿ. ಖಾದರ್ ಮಾಹಿತಿ ನೀಡಿದರು. ಸಚಿವ ಯು.ಟಿ. ಖಾದರ್ ಮಾತನಾಡಿ, ಮಹಿಳೆಯರ ಆರೋಗ್ಯ ಸಂಬಂಧಿತ ಸಮಸ್ಯೆಗಳ ಕುರಿತು ಸಮಗ್ರವಾಗಿ ಕಾರ್ಯನಿರ್ವಹಿಸುವ ಉದ್ದೇಶದಿಂದ ‘ಋತುತಾರೆ’ ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು. ಈ ಯೋಜನೆಗೆ ಮಹಿಳಾ ತಜ್ಞೆ ಡಾ. ಜೋಸ್ನಾ ಅವರ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿಯನ್ನು ರಚಿಸಲಾಗಿದ್ದು, ಮಹಿಳೆಯರ ಆರೋಗ್ಯ, ಮಾನಸಿಕ ಒತ್ತಡ ಸೇ
Aug 41 min read


ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧೆ ಇಲ್ಲ
ಕೆ.ಆರ್. ಪೇಟೆ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಕ್ರಿಯ ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗುವುದಾಗಿ ಘೋಷಿಸಿದ್ದಾರೆ. ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆಯಲ್ಲಿ ನಡೆದ ಡಿ.ಕೆ.ಆರ್. ಪೇಟೆ ಕೃಷ್ಣ ಅವರ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 2028ರ ವಿಧಾನಸಭೆ ಚುನಾವಣೆಗೆ ತಾವು ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಕಾರ್ಯಕ್ರಮದ ವೇಳೆ ಉಪಸ್ಥಿತರಿದ್ದ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಇನ್ನೂ 10 ವರ್ಷಗಳ ಕಾಲ ಚುನಾವಣಾ ರಾಜಕೀಯದಲ್ಲಿ ಸಕ್ರಿಯರಾಗಿರಬೇಕು ಎಂದು ಮನವಿ ಮಾಡಿದರು. ಆದರೆ, ಅದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, "2028ರ ಚುನಾವಣೆಗೆ
Jul 261 min read


ನೀಟ್ ರಾಜೀನಾಮೆ ಬಳಿಕ KPSC ಹಗರಣ ಸದ್ದು: ರಾಜ್ಯ ರಾಜಕೀಯದಲ್ಲಿ ಸಂಚಲನ
ಬೆಂಗಳೂರು, ಜು. 26: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಯ ಬಳಿಕ ಕರ್ನಾಟಕದಲ್ಲಿ ನೀಟ್ ಪರೀಕ್ಷೆ ಮತ್ತು ಕೆಪಿಎಸ್ಸಿ (KPSC) ನೇಮಕಾತಿ ವಿವಾದ ರಾಜಕೀಯ ಕದನಕ್ಕೆ ಕಾರಣವಾಗಿದೆ. ನೀಟ್ ಪರೀಕ್ಷೆಯ ಅಕ್ರಮಗಳ ವಿಚಾರವನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದರೆ, ಇದಕ್ಕೆ ಪ್ರತಿಯಾಗಿ ಬಿಜೆಪಿ ಕೆಪಿಎಸ್ಸಿ ನೇಮಕಾತಿ ಹಗರಣದ ಆರೋಪಗಳನ್ನು ಮುಂದಿಟ್ಟು ಕಾಂಗ್ರೆಸ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಪಶುವೈದ್ಯಾಧಿಕಾರಿ ನೇಮಕಾತಿಯಲ್ಲಿ ಅಕ್ರಮದ ಆರೋಪ ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿ (Veterinar
Jul 261 min read


ಬಿಜೆಪಿ ಉನ್ನತ ಮಟ್ಟದ ಸಭೆ: ಸಂಪುಟ ವಿಸ್ತರಣೆ ಮತ್ತು ಚುನಾವಣಾ ಕಾರ್ಯತಂತ್ರದ ಕುರಿತು ಚರ್ಚೆ
ಸಂಸತ್ತಿನ ಮಳೆಗಾಲದ ಅಧಿವೇಶನಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದಲ್ಲಿ ಬುಧವಾರ ರಾತ್ರಿ ಬಿಜೆಪಿಯ ಮಹತ್ವದ ಉನ್ನತ ಮಟ್ಟದ ಸಭೆ ನಡೆಯಿತು. ಸುಮಾರು ಎರಡೂವರೆ ಗಂಟೆಗಳ ಕಾಲ ನಡೆದ ಈ ಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ, ಪಕ್ಷದ ಹಿರಿಯ ನಾಯಕರು ಹಾಗೂ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಭಾಗವಹಿಸಿದ್ದರು. ಸಭೆಯಲ್ಲಿ ಪ್ರಮುಖವಾಗಿ ಪಕ್ಷದ ಸಂಘಟನಾ ಪುನರ್ರಚನೆ, ಮುಂಬರುವ ರಾಜ್ಯಗಳ ವಿಧಾನಸಭಾ ಚುನಾವಣೆ ಎದುರಿಸುವ ಕಾರ್ಯತಂತ್ರ ಹಾಗೂ ಕೇಂದ್ರ ಸಚಿವ ಸಂಪುಟದ ಸಂಭಾವ್ಯ ವಿಸ್ತರಣೆಯ ಕುರಿತು ಸುದೀರ್ಘ ಚರ್ಚೆ ನಡೆಸಲಾಯಿತು. ಹೊಸ ಸಂಘಟನಾ ತಂಡದ ರಚನೆ ಮತ್ತು ಚುನಾವಣಾ ಪ್ರಚಾರ
Jul 161 min read


ಭ್ರಷ್ಟಾಚಾರ ಮುಕ್ತ ತಮಿಳುನಾಡು: ಕರೂರ್ನಲ್ಲಿ ಕಟ್ಟುನಿಟ್ಟಿನ ಸಂದೇಶ ರವಾನಿಸಿದ ಸಿಎಂ ವಿಜಯ್
ತಮಿಳುನಾಡಿನ ಕರೂರ್ನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮುಖ್ಯಮಂತ್ರಿ ವಿಜಯ್ ಅವರು ಲಂಚ ಮತ್ತು ಭ್ರಷ್ಟಾಚಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಯಾವುದೇ ಕಾರಣಕ್ಕೂ ಯಾರದೇ ಒತ್ತಡಕ್ಕೂ ಮಣಿಯದೆ ಸಾರ್ವಜನಿಕರು ಲಂಚ ನೀಡುವುದನ್ನು ಕಟ್ಟುನಿಟ್ಟಾಗಿ ನಿರಾಕರಿಸಬೇಕು ಎಂದು ಅವರು ಕರೆ ನೀಡಿದರು. ಭ್ರಷ್ಟಾಚಾರದ ವಿರುದ್ಧ ಧ್ವನಿ ಎತ್ತುವ ಪ್ರತಿಯೊಬ್ಬ ನಾಗರಿಕನ ಪರವಾಗಿ ರಾಜ್ಯದ ಮುಖ್ಯಮಂತ್ರಿಯಾಗಿ ತಾವೂ ಸಂಪೂರ್ಣ ಬೆಂಬಲವಾಗಿ ನಿಲ್ಲುವುದಾಗಿ ಭರವಸೆ ನೀಡಿದರು. ತಮ್ಮ 55 ದಿನಗಳ ಆಡಳಿತ ಅವಧಿಯಲ್ಲಿ ತಂದಿರುವ ಆಡಳಿತಾತ್ಮಕ ಬದಲಾವಣೆಗಳನ್ನು ಪಟ್ಟಿ ಮಾಡಿದ ಸಿಎಂ, ಭ್ರಷ್ಟಾಚಾರ ನಮ್ಮ ರಕ್ತದಲ್ಲ
Jul 111 min read


ಎಸ್ಐಆರ್ ವೇಳೆ ಬಿಎಲ್ಒಗಳ ಅಸಡ್ಡೆ ನಡೆ: ಕ್ರಮಕ್ಕೆ ಮುಂದಾದ ರಾಜ್ಯ ಮುಖ್ಯ ಚುನಾವಣಾಧಿಕಾರಿ
ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಪಾರದರ್ಶಕತೆಯನ್ನು ಕಾಪಾಡಲು ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಮಹತ್ವದ ಕ್ರಮ ಕೈಗೊಂಡಿದ್ದಾರೆ. ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್ಒಗಳು) ಕ್ಷೇತ್ರ ಕಾರ್ಯದಲ್ಲಿ ತೋರಿಸುತ್ತಿರುವ ಅಸಡ್ಡೆ ಹಾಗೂ ನಿಯಮಬಾಹಿರವಾಗಿ ಒಂದೇ ಸ್ಥಳದಲ್ಲಿ ಕುಳಿತು ನಮೂನೆಗಳನ್ನು ವಿತರಿಸುತ್ತಿರುವ ಬಗ್ಗೆ ದೂರುಗಳು ಬಂದ ಹಿನ್ನೆಲೆ, ಎಲ್ಲಾ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಭಾರತ ಚುನಾವಣಾ ಆಯೋಗದ ಮಾರ್ಗಸೂಚಿಗಳ ಪ್ರಕಾರ, ಬಿಎಲ್ಒಗಳು ಮನೆಮನೆಗೆ ಭೇಟಿ ನೀಡ
Jul 31 min read


ಗುಟ್ಕಾ, ಪಾನ್ ಮಸಾಲಾ ನಿಷೇಧದ ಎಚ್ಚರಿಕೆ ನೀಡಿದ ಸಿಎಂ ಡಿ.ಕೆ.ಶಿವಕುಮಾರ್
ಪಾನ್ ಮಸಾಲಾ ಮತ್ತು ಗುಟ್ಕಾಗಳಲ್ಲಿ ಅಮಲು ಪದಾರ್ಥಗಳನ್ನು ಬೆರೆಸಲಾಗುತ್ತಿದೆ ಎಂಬ ಮಾಹಿತಿ ಬರುತ್ತಿದ್ದು, ಇದು ನಿಜವಾಗಿದ್ದರೆ ರಾಜ್ಯದಲ್ಲಿ ಇವುಗಳ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ನಗರದ ಕಂಠೀರವ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ನಶಾ ಮುಕ್ತ ಭಾರತ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಾದಕದ್ರವ್ಯ ಮುಕ್ತ ಕರ್ನಾಟಕ ನಿರ್ಮಾಣ ಮಾಡುವುದು ಸರ್ಕಾರದ ಗುರಿಯಾಗಿದೆ. ಇಂತಹ ಕಂಪನಿಗಳಿಂದ ಬರುವ 100 ಕೋಟಿ ರೂ. ಆದಾಯ ಹೋದರೂ ಚಿಂತೆಯಿಲ್ಲ ಎಂದು ಸ್ಪಷ್ಟಪಡಿಸಿದರು. ಮಾದಕ ವ್ಯಸನ ತಡೆಯುವುದು ದೊಡ್ಡ ಸವ
Jun 291 min read


ಯು.ಟಿ. ಖಾದರ್ಗೆ ದಕ್ಷಿಣ ಕನ್ನಡ ಸೇರಿ ನಾಲ್ಕು ಜಿಲ್ಲೆಗಳ ಉಸ್ತುವಾರಿ ಜವಾಬ್ದಾರಿ
ಮಂಗಳೂರು ಶಾಸಕ ಹಾಗೂ ಪ್ರಸ್ತುತ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾಗಿರುವ ಯು.ಟಿ. ಖಾದರ್ ಅವರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸ್ಥಾನವನ್ನು ನೀಡಿ ಆದೇಶ ಹೊರಡಿಸಲಾಗಿದೆ. ಸಿದ್ದರಾಮಯ್ಯ ನೇತೃತ್ವದ ಈ ಹಿಂದಿನ ಸರ್ಕಾರದಲ್ಲಿ ಸ್ಪೀಕರ್ ಆಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ್ದ ಖಾದರ್ ಅವರಿಗೆ ಈಗ ಮಹತ್ವದ ಜವಾಬ್ದಾರಿ ಸಿಕ್ಕಿದೆ. ಸದ್ಯಕ್ಕೆ ಜಿಲ್ಲೆಯಲ್ಲಿ ಎದುರಾಗಿರುವ ಪ್ರಕೃತಿ ವಿಕೋಪದ ಸಮರ್ಥ ನಿರ್ವಹಣೆಗಾಗಿ ಮಾತ್ರ ಈ ಉಸ್ತುವಾರಿ ಜವಾಬ್ದಾರಿಯನ್ನು ನೀಡಲಾಗಿದೆ ಎಂದು ತಿಳಿದುಬಂದಿದೆ. ಮುಂಬರುವ ದಿನಗಳಲ್ಲಿ ಜಿಲ್ಲೆಗಳಿಗೆ ಪೂರ್ಣ ಪ್ರಮಾಣದ ಉಸ್ತುವಾರಿ ಸಚಿವರ ಸ್ಥಾನದ ಮರು ಹಂಚ
Jun 251 min read


ಅಣ್ಣಾಮಲೈ ರಾಜೀನಾಮೆ ಅಂಗೀಕಾರ
ಚೆನ್ನೈ: ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಐಪಿಎಸ್ ಅಧಿಕಾರಿ ಅವರು ಪಕ್ಷಕ್ಕೆ ರಾಜೀನಾಮೆ ನೀಡಿದ್ದು, ಅದನ್ನು ರಾಷ್ಟ್ರೀಯ ಅಧ್ಯಕ್ಷ ಅಂಗೀಕರಿಸಿದ್ದಾರೆ. ಈ ಮೂಲಕ ಅವರು ಬಿಜೆಪಿಯೊಂದಿಗೆ ಹೊಂದಿದ್ದ ಆರು ವರ್ಷಗಳ ಸುದೀರ್ಘ ಸಂಬಂಧಕ್ಕೆ ಅಂತ್ಯವನ್ನಿಟ್ಟಿದ್ದಾರೆ. ರಾಜೀನಾಮೆ ಅಂಗೀಕಾರಗೊಂಡ ಬೆನ್ನಲ್ಲೇ ಇಂದು ಮಧ್ಯಾಹ್ನ ಅಣ್ಣಾಮಲೈ ಸುದ್ದಿಗೋಷ್ಠಿ ನಡೆಸಲಿದ್ದು, ತಮ್ಮ ಮುಂದಿನ ರಾಜಕೀಯ ನಡೆ ಕುರಿತು ಮಹತ್ವದ ಮಾಹಿತಿ ನೀಡುವ ನಿರೀಕ್ಷೆಯಿದೆ. ಇದಕ್ಕೂ ಮೊದಲು ಅವರು ತಮಿಳುನಾಡು ವಿಧಾನಸಭಾ ಚುನಾವಣೆಯ ಉಸ್ತುವಾರಿ ಸ್ಥಾನ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನಗಳಿಗೆ ರಾಜೀನಾ
Jun 51 min read
ಡಿಕೆಶಿ ಸರ್ಕಾರಕ್ಕೆ ಆರಂಭದಲ್ಲೇ ಶಾಕ್: ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ!
ಖಾತೆ ಹಂಚಿಕೆ ಬೆನ್ನಲ್ಲೇ ಅಸಮಾಧಾನ ಸ್ಫೋಟ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಂಪುಟದ ಖಾತೆ ಹಂಚಿಕೆಯಾದ ಕೇವಲ 48 ಗಂಟೆಗಳಲ್ಲಿಯೇ ಕಾಂಗ್ರೆಸ್ ಸರ್ಕಾರಕ್ಕೆ ಭಾರಿ ಹಿನ್ನಡೆಯಾಗಿದೆ. ತಮಗೆ ಹಂಚಿಕೆಯಾಗಿದ್ದ ಜಲಸಂಪನ್ಮೂಲ ಖಾತೆಯಿಂದ ಅಸಮಾಧಾನಗೊಂಡ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ಅವರು ಸಚಿವ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ. ಮಾತು ತಪ್ಪಿದ ಸಿಎಂ: ರೆಡ್ಡಿ ಆಕ್ರೋಶ ಬೆಂಗಳೂರು ನಗರಾಭಿವೃದ್ಧಿ ಖಾತೆಯ ಮೇಲೆ ಕಣ್ಣಿಟ್ಟಿದ್ದ ರೆಡ್ಡಿಗೆ ನಿರಾಸೆಯಾಗಿದ್ದು, ಆ ಖಾತೆ ಕೃಷ್ಣಭೈರೇಗೌಡ ಪಾಲಾಗಿದೆ. 2023 ರಲ್ಲಿ ಡಿ.ಕೆ. ಶಿವಕುಮಾರ್ ಅವರು ನೀಡಿದ್ದ ಭರವಸೆಯನ್ನು ಉಳಿಸಿಕೊಳ್
Jun 51 min read


ಮುಖ್ಯಮಂತ್ರಿ ಕುರ್ಚಿಗೇರಿದ ಬೆನ್ನಲ್ಲೇ ಆ್ಯಕ್ಷನ್ -ಪ್ರತಿ ತಾಲೂಕಿನಲ್ಲೂ ವಿಶೇಷ ಪೊಲೀಸ್ ಸ್ಕ್ವಾಡ್ ರಚನೆಗೆ ಸಿಎಂ ಡಿಕೆ ಶಿವಕುಮಾರ್ ಸೂಚನೆ
ರಾಜ್ಯದಲ್ಲಿ ಹೆಚ್ಚುತ್ತಿರುವ ರೌಡಿಸಂ, ಡ್ರಗ್ಸ್ ದಂಧೆ, ಜೂಜಾಟ ಹಾಗೂ ಮಟ್ಕಾ ಸೇರಿದಂತೆ ವಿವಿಧ ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ. ಈ ನಿಟ್ಟಿನಲ್ಲಿ ಕಾನೂನು ಸುವ್ಯವಸ್ಥೆ ಬಲಪಡಿಸಲು ರಾಜ್ಯದ ಪ್ರತಿ ತಾಲೂಕಿನಲ್ಲಿ ವಿಶೇಷ ಪೊಲೀಸ್ ಸ್ಕ್ವಾಡ್ಗಳನ್ನು ರಚಿಸುವಂತೆ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಮಹತ್ವದ ನಿರ್ದೇಶನ ನೀಡಿದ್ದಾರೆ. ವಿಧಾನಸೌಧದಲ್ಲಿ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಯ ಬಳಿಕ ಮಾತನಾಡಿದ ಸಿಎಂ, ಪ್ರತಿ ತಂಡದಲ್ಲಿ 10 ರಿಂದ 15 ಪೊಲೀಸ್ ಸಿಬ್ಬಂದಿ ಇರಲಿದ್ದಾರೆ ಎಂದು ತಿಳಿಸಿದರು. ಈ ವಿಶೇಷ ಸ್ಕ್ವಾಡ್
Jun 41 min read


ಕೊನೆಗೂ ವಿಧಾನಸೌಧದ ಗದ್ದುಗೆ ಏರಿದ ಕನಕಪುರ ಬಂಡೆ: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಬಹುನಿರೀಕ್ಷಿತ ಬೆಳವಣಿಗೆಯೊಂದಕ್ಕೆ ಇಂದು ತೆರೆಬಿದ್ದಿದ್ದು, ಕೆಪಿಸಿಸಿ ಅಧ್ಯಕ್ಷ ಹಾಗೂ ಕಾಂಗ್ರೆಸ್ನ ಹಿರಿಯ ನಾಯಕ ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಬೆಂಗಳೂರಿನ ಲೋಕಭವನ ಆವರಣದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಅಧಿಕಾರ ಮತ್ತು ಗೌಪ್ಯತೆಯ ಪ್ರತಿಜ್ಞಾವಿಧಿ ಬೋಧಿಸಿದರು. ಸಾವಿರಾರು ಕಾರ್ಯಕರ್ತರು, ಗಣ್ಯರು ಹಾಗೂ ವಿವಿಧ ಕ್ಷೇತ್ರಗಳ ಪ್ರಮುಖರ ಸಮ್ಮುಖದಲ್ಲಿ ನಡೆದ ಸಮಾರಂಭ ರಾಜಕೀಯವಾಗಿ ಮಹತ್ವ ಪಡೆದಿತ್ತು. ಸಾಂಪ್ರದಾಯಿಕ ಉಡುಗೆಯಲ್ಲಿ ವೇದಿಕೆ ಏರಿದ ಡಿ.ಕ
Jun 31 min read


ನಾಳೆ ಡಿ.ಕೆ. ಶಿವಕುಮಾರ್ ಪ್ರಮಾಣವಚನ: ಮಧ್ಯಾಹ್ನದಿಂದ ಸರ್ಕಾರಿ ನೌಕರರಿಗೆ ರಜೆ, ಸಂಚಾರ ಮಾರ್ಪಾಡು
ನಿಯೋಜಿತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪ್ರಮಾಣವಚನ ಸಮಾರಂಭವು ನಾಳೆ ಲೋಕಭವನದಲ್ಲಿ ನಡೆಯಲಿದ್ದು, ಸುತ್ತಮುತ್ತಲ ಪ್ರದೇಶಗಳಲ್ಲಿ ಭದ್ರತೆ ಹಾಗೂ ಸಂಚಾರ ದಟ್ಟಣೆ ನಿಯಂತ್ರಣಕ್ಕಾಗಿ ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡಗಳ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ನಾಳೆ ಮಧ್ಯಾಹ್ನದಿಂದ ರಜೆ ಘೋಷಿಸಲಾಗಿದೆ. ಲೋಕಭವನದ ಕಾರ್ಯಕ್ರಮಕ್ಕೆ ಕೇವಲ ಆಹ್ವಾನಿತರಿಗೆ ಮಾತ್ರ ಪ್ರವೇಶವಿದ್ದು, ಸಾರ್ವಜನಿಕರಿಗೆ ಅವಕಾಶವಿರುವುದಿಲ್ಲ. ಸಾರ್ವಜನಿಕರ ಅನುಕೂಲಕ್ಕಾಗಿ ನಾಳೆ ಮಧ್ಯಾಹ್ನ 12 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಲೋ
Jun 21 min read


ತಮಿಳುನಾಡು ಬಿಜೆಪಿಗೆ ಬಿಗ್ ಶಾಕ್: ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಕೆ. ಅಣ್ಣಾಮಲೈ ರಾಜೀನಾಮೆ
ತಮಿಳುನಾಡು ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ ಬಿಜೆಪಿ ನಾಯಕ ಕೆ. ಅಣ್ಣಾಮಲೈ ಮಂಗಳವಾರ (ಜೂನ್ 2) ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ದೆಹಲಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್ ಅವರನ್ನು ಭೇಟಿಯಾಗಿ ಅವರು ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದರು. ತಮಿಳುನಾಡು ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ನೈನಾರ್ ನಾಗೇಂದ್ರನ್ ಅವರನ್ನು ನೇಮಿಸಿದಾಗಿನಿಂದಲೂ ಅಣ್ಣಾಮಲೈ ಅಸಮಾಧಾನಗೊಂಡಿದ್ದರು. ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್ ಹಾಗೂ ಬಿ.ಎಲ್. ಸಂತೋಷ್ ಅವರೊಂದಿಗಿನ ಸಭೆಯಲ್ಲಿ, ಪಕ್ಷ ತೊರೆದು ಸ್ವಂತವಾಗಿ ಹೊಸ ಆಂದೋಲನ ರೂಪಿಸಿಕೊಳ್ಳುವ ಇಚ್ಛೆಯನ್ನು ಅವರು ವ್ಯಕ
Jun 21 min read


ತಮಿಳುನಾಡು ರಾಜಕೀಯದಲ್ಲಿ ಸಂಚಲನ: ಅಣ್ಣಾಮಲೈ ಹೊಸ ಪಕ್ಷ ಸ್ಥಾಪನೆ ಸಾಧ್ಯತೆ?
ಚೆನ್ನೈ, ಜೂನ್ 1: ತಮಿಳುನಾಡಿನ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾದ ಬೆಳವಣಿಗೆಯಲ್ಲಿ, ಭಾರತೀಯ ಜನತಾ ಪಕ್ಷದ (ಬಿಜೆಪಿ) ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು ಪಕ್ಷವನ್ನು ತೊರೆದು ಹೊಸ ರಾಜಕೀಯ ಸಂಘಟನೆಯನ್ನು ಆರಂಭಿಸುವ ಸಾಧ್ಯತೆ ಇದೆ ಎಂಬ ಸುದ್ದಿ ಹರಿದಾಡುತ್ತಿದೆ. ಆಪ್ತ ಮೂಲಗಳ ಪ್ರಕಾರ, ಅಣ್ಣಾಮಲೈ ಅವರು ಬಿಜೆಪಿ ನಾಯಕರೊಂದಿಗೆ ಉಂಟಾದ ಅಸಮಾಧಾನದ ಹಿನ್ನೆಲೆಯಲ್ಲಿ ಸ್ವಂತ ರಾಜಕೀಯ ವೇದಿಕೆ ರೂಪಿಸುವ ಬಗ್ಗೆ ಚಿಂತನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಜೂನ್ 3 ರಂದು ಅವರು ನಡೆಸಲಿರುವ ಸುದ್ದಿಗೋಷ್ಠಿಯಲ್ಲಿ ತಮ್ಮ ಮುಂದಿನ ರಾಜಕೀಯ ನಡೆ ಕುರಿತು ಮಹತ್ವದ ಘೋಷಣೆ ಮಾಡುವ ಸ
Jun 11 min read


ಕರ್ನಾಟಕಕ್ಕೆ ಹೊಸ ಸಿಎಂ: ಡಿಕೆ ಶಿವಕುಮಾರ್ ಪ್ರಮಾಣವಚನ ಯಾವಾಗ, ಎಲ್ಲಿ? ಇಂದು ತೀರ್ಮಾನ
ಬೆಂಗಳೂರು, ಮೇ 29: ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಮುಖ್ಯಮಂತ್ರಿ ಸ್ಥಾನಕ್ಕೆ ನೀಡಿದ್ದ ರಾಜೀನಾಮೆಯನ್ನು ರಾಜ್ಯಪಾಲ ಶುಕ್ರವಾರ ಬೆಳಗ್ಗೆ ಅಧಿಕೃತವಾಗಿ ಅಂಗೀಕರಿಸಿದ್ದಾರೆ. ಈ ಬೆಳವಣಿಗೆಯಿಂದ ಕರ್ನಾಟಕ ಕಾಂಗ್ರೆಸ್ನಲ್ಲಿ ಅಧಿಕಾರ ಹಂಚಿಕೆ ಪ್ರಕ್ರಿಯೆ ಅಂತಿಮ ಹಂತ ತಲುಪಿದೆ. ನೂತನ ಮುಖ್ಯಮಂತ್ರಿಯಾಗಿ ಯಾರು ಅಧಿಕಾರ ಸ್ವೀಕರಿಸಲಿದ್ದಾರೆ ಎಂಬುದನ್ನು ಪಕ್ಷ ಇನ್ನೂ ಅಧಿಕೃತವಾಗಿ ಘೋಷಿಸಿಲ್ಲ. ಆದರೆ, ಗುರುವಾರ ನಡೆದ ಉಪಹಾರ ಸಭೆಯಲ್ಲಿ ಮುಂದಿನ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಸಚಿವರಿಗೆ ಮಾಹಿತಿ ನೀಡಿದರೆಂಬ ಸುದ್ದಿ ಹರಿದಾಡುತ್ತಿದೆ. ಪ್ರಸ್ತುತ ಮತ್ತು ದೆಹಲಿಯಲ
May 291 min read


ಕಾಕ್ರೋಚ್ ಜನತಾ ಪಕ್ಷದಿಂದ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹ: ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಆನ್ಲೈನ್ ಅಭಿಯಾನ ಆರಂಭ
ಕಾಕ್ರೋಚ್ ಜನತಾ ಪಕ್ಷದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ತಮ್ಮ ಪಕ್ಷದ ಮೊದಲ ಸಾರ್ವಜನಿಕ ಅಭಿಯಾನವನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ನೀಟ್-ಯುಜಿ 2026 ಪ್ರಶ್ನೆಪತ್ರಿಕೆ ಸೋರಿಕೆ ಹಗರಣದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಈ ಆನ್ಲೈನ್ ಅರ್ಜಿಯ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಇತ್ತೀಚೆಗಷ್ಟೇ ಅಸ್ತಿತ್ವಕ್ಕೆ ಬಂದ ಈ ಪಕ್ಷವು ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ವೈರಲ್ ಆಗಿದ್ದು, ಫಾಲೋವರ್ಸ್ ಸಂಖ್ಯೆಯಲ್ಲಿ ಪ್ರಮುಖ ರಾಷ್ಟ್ರೀಯ ಪಕ್ಷಗಳನ್ನೇ ಹಿಂದಿಕ್ಕಿದೆ. ನೀಟ್ ವಿವಾದವು ಕೇವಲ ಪರೀಕ್ಷಾ ಬಿಕ್ಕಟ್ಟಲ್ಲ, ಬದಲಾಗಿ 22 ಲಕ್ಷಕ್ಕೂ ಹೆಚ್
May 231 min read
Archive
bottom of page







