top of page
News Articles
Sathyapatha News Plus


ಕರಾವಳಿ ಅಭಿವೃದ್ಧಿಗೆ ಹೊಸ ಪ್ರವಾಸೋದ್ಯಮ ನೀತಿ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಣೆ
ಕಾರವಾರ: ಮಂಗಳೂರು, ಉಡುಪಿ ಮತ್ತು ಕಾರವಾರ ಸೇರಿದಂತೆ ರಾಜ್ಯದ ಸುಮಾರು 300 ಕಿ.ಮೀ ಉದ್ದದ ಕರಾವಳಿ ತೀರದ ಸಮಗ್ರ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರವು ನೂತನ ಪ್ರವಾಸೋದ್ಯಮ ನೀತಿಯನ್ನು ಜಾರಿಗೆ ತರಲು ನಿರ್ಧರಿಸಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾರವಾರದಲ್ಲಿ ಆಯೋಜಿಸಲಾಗಿದ್ದ 'ಕರಾವಳಿ ಉತ್ಸವ'ದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಈ ಭಾಗದ ನೈಸರ್ಗಿಕ ಸೌಂದರ್ಯವನ್ನು ಬಳಸಿಕೊಂಡು ಪ್ರವಾಸೋದ್ಯಮಕ್ಕೆ ಹೊಸ ಕಳೆ ನೀಡುವ ಸರ್ಕಾರದ ಯೋಜನೆಯನ್ನು ಅನಾವರಣಗೊಳಿಸಿದರು. ಕರಾವಳಿ ಭಾಗದ ಯುವಜನತೆ ಉದ್ಯೋಗ ಅರಸಿ ಬೆಂಗಳೂರು ಅಥವಾ ಸೌದಿ ಅರೇಬಿಯಾದಂತಹ ವಿದೇಶಗಳಿಗೆ ವಲಸೆ ಹೋ
Dec 30, 20251 min read


ನಟನೆಗೆ ದಳಪತಿ ವಿಜಯ್ ಗುಡ್ಬೈ: ಸಿನಿಪಯಣ ಮುಗಿಸಿ ರಾಜಕೀಯದತ್ತ ಸಂಪೂರ್ಣ ಚಿತ್ತ
ಚೆನ್ನೈ: ತಮಿಳು ಚಿತ್ರರಂಗದ ಅಪ್ರತಿಮ ನಟ, ಸೂಪರ್ಸ್ಟಾರ್ ದಳಪತಿ ವಿಜಯ್ ಅವರು ತಮ್ಮ 33 ವರ್ಷಗಳ ಸುದೀರ್ಘ ನಟನಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ್ದಾರೆ. ಮಲೇಷ್ಯಾದಲ್ಲಿ ನಡೆದ ತಮ್ಮ ಕೊನೆಯ ಚಿತ್ರ ‘ಜನ ನಾಯಗನ್’ ಆಡಿಯೋ ಲಾಂಚ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇನ್ನು ಮುಂದೆ ತಾವು ಬಣ್ಣದ ಲೋಕದಿಂದ ದೂರ ಸರಿದು ಸಂಪೂರ್ಣವಾಗಿ ರಾಜಕೀಯ ಜೀವನದಲ್ಲಿ ತೊಡಗಿಸಿಕೊಳ್ಳುವುದಾಗಿ ಭಾವುಕರಾಗಿ ತಿಳಿಸಿದರು. "ನಾನು ಮರಳಿನಲ್ಲಿ ಸಣ್ಣ ಮನೆ ಕಟ್ಟಲು ಬಂದವನು, ಆದರೆ ನೀವು ನನಗೆ ಅರಮನೆ ಕಟ್ಟಿಕೊಟ್ಟಿದ್ದೀರಿ" ಎಂದು ಅಭಿಮಾನಿಗಳ ಪ್ರೀತಿಗೆ ವಿಜಯ್ ಕೃತಜ್ಞತೆ ಸಲ್ಲಿಸಿದರು. 1992ರಲ್ಲಿ ನಾ
Dec 28, 20251 min read


ರಾಜ್ಯ ರಾಜಕೀಯದಲ್ಲಿ ಸಂಚಲನ: 'ಸಿದ್ದರಾಮಯ್ಯ ಬಿಡುವವರೆಗೂ ಸಿಎಂ ಕುರ್ಚಿ ಸಿಗಲ್ಲ' - ಕೋಡಿಶ್ರೀ ಭವಿಷ್ಯ
ಬೆಳಗಾವಿ: ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ಭಾರೀ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಹಾರನಹಳ್ಳಿ ಕೋಡಿಮಠ ಸಂಸ್ಥಾನದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ಸ್ಫೋಟಕ ಭವಿಷ್ಯವೊಂದನ್ನು ನುಡಿದಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀಗಳು, ಸದ್ಯದ ರಾಜಕೀಯ ಪರಿಸ್ಥಿತಿಯಲ್ಲಿ ಸಿದ್ದರಾಮಯ್ಯ ಅವರ ನಾಯಕತ್ವದ ಕುರಿತು ಮಾರ್ಮಿಕವಾಗಿ ಪ್ರತಿಕ್ರಿಯಿಸಿದ್ದಾರೆ. ಈ ಸಂದರ್ಭದಲ್ಲಿ ಶ್ರೀಗಳು, "ಹಾಲುಮತ ಸಮಾಜದವರಿಂದ ಅಧಿಕಾರ ಕಿತ್ತುಕೊಳ್ಳುವುದು ಅಷ್ಟು ಸುಲಭದ ಮಾತಲ್ಲ, ಅದು ಅಸಾಧ್ಯವಾದ ಕಷ್ಟದ ಕೆಲಸ.
Dec 28, 20251 min read


ಕರ್ನಾಟಕ ಈಗ ‘ಬುಲ್ಡೋಜರ್ ರಾಜ್ಯ’: ಕೋಗಿಲು ಬಡಾವಣೆ ತೆರವು ಕಾರ್ಯಾಚರಣೆಗೆ ಕೇರಳ ಸಿಎಂ ಪಿಣರಾಯಿ ವಿಜಯನ್ ಆಕ್ರೋಶ
ಬೆಂಗಳೂರಿನ ಯಲಹಂಕ ಸಮೀಪದ ಕೋಗಿಲು ಬಡಾವಣೆಯಲ್ಲಿ ನಡೆದ ಮನೆಗಳ ಧ್ವಂಸ ಪ್ರಕರಣದ ಕುರಿತು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ತೀವ್ರವಾಗಿ ಆಕ್ಷೇಪಿಸಿದ್ದಾರೆ. ಈ ಕುರಿತು ಎಕ್ಸ್ (ಟ್ವಿಟರ್) ಮೂಲಕ ಪ್ರತಿಕ್ರಿಯಿಸಿರುವ ಅವರು, ಕರ್ನಾಟಕವನ್ನು ‘ಬುಲ್ಡೋಜರ್ ರಾಜ್ಯ’ ಎಂದು ಬಣ್ಣಿಸಿದ್ದಾರೆ. ಉತ್ತರ ಭಾರತದಲ್ಲಿ ಸಂಘ ಪರಿವಾರವು ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆಸುವ ದಮನಕಾರಿ ರಾಜಕೀಯವನ್ನು ಈಗ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಜಾರಿಗೆ ತರುತ್ತಿರುವುದು ದುರದೃಷ್ಟಕರ ಎಂದು ಅವರು ಟೀಕಿಸಿದ್ದಾರೆ. ಬೆಂಗಳೂರಿನ ಫಕೀರ್ ಕಾಲೋನಿ ಮತ್ತು ವಸೀಮ್ ಲೇಔಟ್ನಲ್ಲಿ ದಶಕಗಳಿಂದ ವಾಸಿಸುತ್ತ
Dec 27, 20251 min read


ರಾಜ್ಯದ ಗೃಹಲಕ್ಷ್ಮಿಯರಿಗೆ ಸಿಹಿ ಸುದ್ದಿ: ನಾಳೆಯಿಂದಲೇ ಖಾತೆಗೆ ಬರಲಿದೆ 24ನೇ ಕಂತಿನ ಹಣ
ಬೆಂಗಳೂರು: ರಾಜ್ಯದ ಕೋಟ್ಯಂತರ ಮಹಿಳೆಯರು ಕಾತರದಿಂದ ಕಾಯುತ್ತಿದ್ದ 'ಗೃಹಲಕ್ಷ್ಮಿ' ಯೋಜನೆಯ ಹಣ ಬಿಡುಗಡೆಗೆ ಸಂಬಂಧಿಸಿದಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಹತ್ವದ ಮಾಹಿತಿ ನೀಡಿದ್ದಾರೆ. ಸೋಮವಾರದಿಂದಲೇ (ಡಿಸೆಂಬರ್ 22) ಅರ್ಹ ಫಲಾನುಭವಿಗಳ ಖಾತೆಗಳಿಗೆ ಯೋಜನೆಯ ಒಂದು ಕಂತಿನ ಹಣ ಜಮೆಯಾಗಲು ಆರಂಭವಾಗಲಿದೆ ಎಂದು ಅವರು ತಿಳಿಸಿದ್ದಾರೆ. ಇದು ಯೋಜನೆಯ 24ನೇ ಕಂತಿನ ಹಣವಾಗಿದ್ದು, ಹೊಸ ವರ್ಷದ ಮುನ್ನವೇ ಗೃಹಲಕ್ಷ್ಮಿಯರಿಗೆ ಸರ್ಕಾರದಿಂದ ಉಡುಗೊರೆ ಸಿಕ್ಕಂತಾಗಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, "ನಾನು ಯಾವಾಗಲೂ ಯೋಜನೆಯ ಹಣವನ್ನು ಕಂತುಗಳ ರೂಪದಲ್ಲಿ ಹೇ
Dec 21, 20251 min read


ದ್ವೇಷ ಭಾಷಣ ಮಸೂದೆ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ – ಶೋಭಾ ಕರಂದ್ಲಾಜೆ
ಬೆಂಗಳೂರು | ವಿಶೇಷ ವರದಿ ಕರ್ನಾಟಕ ವಿಧಾನಸಭೆಯಲ್ಲಿ ಇತ್ತೀಚೆಗೆ ಅಂಗೀಕೃತಗೊಂಡ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ತಡೆಗಟ್ಟುವಿಕೆ) ಮಸೂದೆ–2025 ಸಾಂವಿಧಾನಿಕವಾಗಿ ಗಂಭೀರ ಕಳವಳಗಳನ್ನು ಹುಟ್ಟುಹಾಕಿದೆ ಎಂದು ಕೇಂದ್ರ ಕಾರ್ಮಿಕ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಈ ಮಸೂದೆ ಸರ್ಕಾರಿ ಅಧಿಕಾರಿಗಳಿಗೆ ಜನರು ಯಾವ ಮಾತುಗಳನ್ನು ಮಾತನಾಡಬಹುದು ಎಂಬುದನ್ನು ನಿರ್ಧರಿಸುವ ವ್ಯಾಪಕ ಅಧಿಕಾರ ನೀಡುತ್ತದೆ. ಇದು ಸಾರ್ವಜನಿಕ ಹಿತಾಸಕ್ತಿಗೆ ಸ್ಪಷ್ಟ ಹಾಗೂ ತಕ್ಷಣದ ಅಪಾಯ ಉಂಟುಮಾಡುವ ಮಾತುಗಳನ್ನು ಮಾತ್ರ ಗುರಿಯಾಗಿಸದೆ, ಸರ್ಕಾರವಿರೋಧಿ ಧ್ವನಿಗಳನ್ನು ಮುಚ್ಚಿಹಾಕುವ ಸಾಧನವಾ
Dec 20, 20251 min read


ಗ್ರಾಮೀಣ ಉದ್ಯೋಗ ಖಾತರಿ ಯೋಜನೆಗೆ ಹೊಸ ಹೆಸರು, ‘ಪೂಜ್ಯ ಬಾಪು ಗ್ರಾಮೀಣ ರೋಜ್ಗಾರ್ ಯೋಜನೆ’ಗೆ ಕೇಂದ್ರ ಸಂಪುಟ ಅನುಮೋದನೆ
ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗ ಖಾತ್ರಿ ನೀಡುವ ಮಹತ್ವದ ಯೋಜನೆಯಲ್ಲಿ ಕೇಂದ್ರ ಸರ್ಕಾರವು ಮಹತ್ವದ ಬದಲಾವಣೆಗಳನ್ನು ತರಲು ನಿರ್ಧರಿಸಿದೆ. ಈ ಯೋಜನೆಗೆ ಹೊಸ ಹೆಸರನ್ನು ನೀಡುವ ಮಸೂದೆಗೆ ಕೇಂದ್ರ ಸಚಿವ ಸಂಪುಟವು ಅನುಮೋದನೆ ನೀಡಿದ್ದು, ಇನ್ನು ಮುಂದೆ ಇದು ‘ಪೂಜ್ಯ ಬಾಪು ಗ್ರಾಮೀಣ ರೋಜ್ಗಾರ್ ಯೋಜನೆ’ ಎಂಬ ಹೆಸರಿನಲ್ಲಿ ಪರಿಚಿತವಾಗಲಿದೆ. ಹೆಚ್ಚಾದ ಕೆಲಸದ ದಿನಗಳು ಮತ್ತು ಪರಿಗಣನೆಯಲ್ಲಿರುವ ದಿನಗೂಲಿ ಹೆಚ್ಚಳ ಹೊಸ ಮಸೂದೆಯ ಪ್ರಮುಖ ನಿರ್ಧಾರಗಳ ಪ್ರಕಾರ, ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ನೀಡಲಾಗುವ ಕೆಲಸದ ದಿನಗಳ ಸಂಖ್ಯೆಯನ್ನು ಪ್ರಸ್ತುತ ಇರುವ 100 ದಿನಗಳಿಂದ 125 ದಿನಗಳಿಗೆ ಹೆಚ್ಚಿಸಲು
Dec 15, 20251 min read


ಸಾಮಾಜಿಕ ಬಹಿಷ್ಕಾರ ನಿಷೇಧಕ್ಕೆ ಕರ್ನಾಟಕದಲ್ಲಿ ಕಠಿಣ ಕಾನೂನು
ಕರ್ನಾಟಕ ಸರ್ಕಾರವು ವಿಧಾನಸಭೆಯಲ್ಲಿ ಇಂದು ಕರ್ನಾಟಕ ಸಾಮಾಜಿಕ ಬಹಿಷ್ಕಾರದಿಂದ ಜನರ ರಕ್ಷಣೆ (ತಡೆ, ನಿಷೇಧ ಮತ್ತು ಪರಿಹಾರ) ಮಸೂದೆಯನ್ನು ಮಂಡಿಸುವ ಮೂಲಕ ಮಹತ್ವದ ಐತಿಹಾಸಿಕ ಹೆಜ್ಜೆಯಿಟ್ಟಿದೆ. ಈ ಮಸೂದೆಯ ಮುಖ್ಯ ಉದ್ದೇಶವು ಯಾವುದೇ ವ್ಯಕ್ತಿ, ಕುಟುಂಬ ಅಥವಾ ಕುಟುಂಬದ ಸದಸ್ಯರನ್ನು ಸಾಮಾಜಿಕವಾಗಿ ಬಹಿಷ್ಕರಿಸುವುದನ್ನು ಸಂಪೂರ್ಣವಾಗಿ ನಿಷೇಧಿಸುವುದಾಗಿದೆ. ಈ ಹೊಸ ಕಾನೂನಿನ ಅನ್ವಯ, ಯಾರಾದರೂ ಸಾಮಾಜಿಕ ಬಹಿಷ್ಕಾರದಂತಹ ಕೃತ್ಯಕ್ಕೆ ಮುಂದಾದರೆ, ಅವರಿಗೆ 1 ಲಕ್ಷ ರೂ.ಗಳ ದಂಡ ಹಾಗೂ 3 ವರ್ಷಗಳವರೆಗೆ ಜೈಲು ಶಿಕ್ಷೆಯನ್ನು ವಿಧಿಸಲಾಗುತ್ತದೆ. ಬಹಿಷ್ಕಾರ ಹಾಕಲು ಸಭೆ-ಪಂಚಾಯಿತಿ ನಡೆಸುವುದು, ಅದಕ್ಕೆ
Dec 12, 20251 min read


ಮಾಜಿ ಕೇಂದ್ರ ಗೃಹ ಸಚಿವ ಶಿವರಾಜ್ ಪಾಟೀಲ್ ನಿಧನ
ಮಹಾರಾಷ್ಟ್ರದ ಲಾತೂರ್ನಲ್ಲಿ ತಮ್ಮ ನಿವಾಸದಲ್ಲಿ ಕಾಂಗ್ರೆಸ್ನ ಹಿರಿಯ ನಾಯಕ ಹಾಗೂ ಮಾಜಿ ಕೇಂದ್ರ ಗೃಹ ಸಚಿವ ಶಿವರಾಜ್ ಪಾಟೀಲ್ (91) ಅವರು ಶುಕ್ರವಾರ ಬೆಳಗ್ಗೆ 6.30ಕ್ಕೆ ಕೊನೆಯುಸಿರೆಳೆದರು. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಪಾಟೀಲ್ ಅವರು ತೀವ್ರ ಅನಾರೋಗ್ಯದಿಂದಾಗಿ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು. ಅವರ ನಿಧನಕ್ಕೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ಪಾಟೀಲ್ ಅವರ ನಿಧನದಿಂದಾಗಿ ದೇಶದ ರಾಜಕೀಯ ಮತ್ತು ಸಾಮಾಜಿಕ ವಲಯದಲ್ಲಿ ಶೂನ್ಯತೆ ಉಂಟಾದಂತಾಗಿದೆ. ರಾಜಕೀಯದಲ್ಲಿ ಸುದೀರ್ಘ ಅನುಭವ ಹೊಂದಿದ್ದ ಶಿವರಾಜ್ ಪಾಟೀಲ್ ಅವರು 1980
Dec 12, 20251 min read


ಋತುಚಕ್ರದ ರಜೆ ಆದೇಶಕ್ಕೆ ಹೈಕೋರ್ಟ್ನ ತಾತ್ಕಾಲಿಕ ತಡೆ; ಗಂಟೆಗಳಲ್ಲೇ ಆದೇಶ ಹಿಂಪಡೆ
ಕರ್ನಾಟಕ ಹೈಕೋರ್ಟ್, ರಾಜ್ಯ ಸರ್ಕಾರದ ಮುಟ್ಟಿನ ಕಡ್ಡಾಯ ರಜೆ ಆದೇಶಕ್ಕೆ ತಡೆ ನೀಡಿದೆ. ನ. 12ರಂದು ಜಾರಿಯಾಗಿದ್ದ ಈ ಆದೇಶದ ವಿರುದ್ಧ ಹೋಟೆಲ್ ಮಾಲೀಕರ ಸಂಘ ಹೈಕೋರ್ಟ್ ಮೊರೆ ಹೋಗಿತ್ತು. ವಿವಿಧ ಕಾರ್ಮಿಕ ಕಾಯ್ದೆಗಳ ಅಡಿಯಲ್ಲಿ ಬರುವ ಸಂಸ್ಥೆಗಳ ಮಹಿಳೆಯರಿಗೂ ಈ ರಜೆ ಅನ್ವಯವಾಗುತ್ತದೆ ಎಂದು ಸರ್ಕಾರ ಸೂಚಿಸಿತ್ತು. ಆದರೆ, ರಜೆ ನೀತಿಗಳು ಆಂತರಿಕ ಆಡಳಿತಾತ್ಮಕ ವಿಷಯ ಎಂದು ಕರ್ನಾಟಕ ರಾಜ್ಯ ಹೋಟೆಲ್ ಮಾಲೀಕರ ಸಂಘ ಹೈಕೋರ್ಟ್ ನಲ್ಲಿ ತಕರಾರು ತಗೆದಿದೆ. ಸಂಘದ ವಾದ ಆಲಿಸಿದ ಹೈಕೋರ್ಟ್ ನ ಏಕಸದಸ್ಯ ನ್ಯಾಯಪೀಠ ತಡೆಯಾಜ್ಞೆ ನೀಡಿತ್ತು. ಆದರೆ ಋತುಚಕ್ರದ ಸಮಯದಲ್ಲಿ ತಿಂಗಳಲ್ಲಿ ಒಂದು ದಿನದ ವೇತನ ಸಹಿತ
Dec 10, 20251 min read


ಪ್ರಧಾನಿ ಮೋದಿ 'ನಾಟಕ' ಎಂಬ ಹೇಳಿಕೆಗೆ ಪ್ರಿಯಾಂಕಾ ಗಾಂಧಿ ತಿರುಗೇಟು
ಸಂಸತ್ತಿನ ಚಳಿಗಾಲದ ಅಧಿವೇಶನ ಪ್ರಾರಂಭವಾಗುತ್ತಿದ್ದಂತೆ ಆಡಳಿತಾರೂಢ ಬಿಜೆಪಿ ಮತ್ತು ವಿರೋಧ ಪಕ್ಷಗಳ ನಡುವಿನ ವಾಕ್ಸಮರ ತಾರಕಕ್ಕೇರಿದೆ. ಅಧಿವೇಶನಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ವಿರೋಧ ಪಕ್ಷಗಳ ವರ್ತನೆಯನ್ನು 'ನಾಟಕ' ಎಂದು ಟೀಕಿಸಿದ್ದಕ್ಕೆ ಕಾಂಗ್ರೆಸ್ ನಾಯಕಿ ಹಾಗೂ ವಯನಾಡು ಸಂಸದೆ ಪ್ರಿಯಾಂಕಾ ಗಾಂಧಿ ಅವರು ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಧಾನಿಯವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ ಪ್ರಿಯಾಂಕಾ ಗಾಂಧಿ, ಸಂಸತ್ತಿನಲ್ಲಿ ಜನರ ಜ್ವಲಂತ ಸಮಸ್ಯೆಗಳನ್ನು ಎತ್ತಿ ತೋರಿಸುವುದು ನಾಟಕವಲ್ಲ. ಬದಲಾಗಿ, ಈ ಸಮಸ್ಯೆಗಳ ಬಗ್ಗೆ ಚರ್ಚಿಸಲು ಅವಕಾಶ ನೀಡದೆ ಸರ್ಕಾರವೇ ಪಲಾಯನ ಮಾಡ
Dec 2, 20251 min read


ಪುತ್ತೂರಿನಲ್ಲಿ ಮುಂದುವರಿದ ಬಿಜೆಪಿ-ಪುತ್ತಿಲ ಪರಿವಾರ ಜಟಾಪಟಿ: ಕಾರ್ಯಕ್ರಮದಿಂದ ಬಿಜೆಪಿ ಉಪಾಧ್ಯಕ್ಷ ಹೊರಕ್ಕೆ!
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಬಿಜೆಪಿ ಮತ್ತು ಪುತ್ತಿಲ ಪರಿವಾರದ ನಡುವಿನ ಮುಸುಕಿನ ಜಟಾಪಟಿ ತಾರಕಕ್ಕೇರಿದೆ. ಇತ್ತೀಚೆಗೆ ನಡೆದ ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮದಲ್ಲಿ ಈ ಭಿನ್ನಮತ ಸ್ಫೋಟಗೊಂಡಿದ್ದು, ಪುತ್ತಿಲ ಪರಿವಾರದ ಕಾರ್ಯಕರ್ತರು ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತ ಅವರನ್ನು ಕಾರ್ಯಕ್ರಮದಿಂದ ಹೊರದಬ್ಬಿದ ಘಟನೆ ವರದಿಯಾಗಿದೆ. ರಾಜಕೀಯ ಕೆಸರೆರೆಚಾಟ ಈಗ ದೇವರ ಕಾರ್ಯಕ್ರಮಕ್ಕೂ ಹಬ್ಬಿರುವುದು ಸ್ಥಳೀಯ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಯು ಪುತ್ತೂರಿನಲ್ಲಿ ಪಕ್ಷದೊಳಗೆ ನಡೆಯುತ್ತಿರುವ ಆಂತರಿಕ ತಿಕ್ಕಾಟವನ್ನು ಮತ
Dec 1, 20251 min read


ಹೈಕಮಾಂಡ್ ತೀರ್ಮಾನಕ್ಕೆ ನಾವು ಬದ್ಧ: ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಏನು ತೀರ್ಮಾನ ಮಾಡುತ್ತದೋ ಅದನ್ನು ನಾನು ಹಾಗೂ ಡಿ.ಕೆ.ಶಿವಕುಮಾರ್ ಕಡ್ಡಾಯವಾಗಿ ಒಪ್ಪಿಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಶಿಡ್ಲಘಟ್ಟದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಐದು ತಿಂಗಳ ಹಿಂದೆ ಹೈಕಮಾಂಡ್ ಭೇಟಿಯಾದ ವೇಳೆ ಸಚಿವ ಸಂಪುಟ ಪುನಾರಚನೆ ಕುರಿತು ಚರ್ಚೆ ನಡೆದಿತ್ತು. ಆದರೆ, “ನಾನು 2.5 ವರ್ಷ ಮುಗಿದ ನಂತರ ಅದನ್ನು ಮಾಡೋಣ ಎಂದು ತಿಳಿಸಿದ್ದೇನೆ. ಈಗ ಹೈಕಮಾಂಡ್ ಏನು ಸೂಚನೆ ನೀಡುತ್ತಾರೋ ಅದರಂತೆ ನಡೆದುಕೊಳ್ಳುತ್ತೇವೆ” ಎಂದು ಹೇಳಿದರು. ಹಣದ ಬಗ್ಗೆ ಬಿಜೆಪಿ ಅಪಪ್ರಚಾರ ಸರ್ಕಾರದ ಬಳಿ ಹಣವಿಲ್ಲ ಎಂಬ ಬಿಜೆಪಿಯ ಆರೋಪವನ್ನು ತಳ್ಳಿಹ
Nov 24, 20251 min read


ಬಿಹಾರ ಚುನಾವಣೆ: ಎನ್ಡಿಎಗೆ ಭರ್ಜರಿ ಮುನ್ನಡೆ, ಕಾಂಗ್ರೆಸ್ಗೆ ತೀವ್ರ ಹಿನ್ನಡೆ
ಬಿಹಾರ ವಿಧಾನಸಭಾ ಚುನಾವಣೆಯ ಮತ ಎಣಿಕೆ ಪ್ರಗತಿಯಲ್ಲಿರುವಂತೆ, ಎನ್ಡಿಎ ಮೈತ್ರಿಕೂಟವು 190ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಭರ್ಜರಿ ಮುನ್ನಡೆ ಸಾಧಿಸಿ ಸ್ಪಷ್ಟ ಬಹುಮತದತ್ತ ಸಾಗುತ್ತಿದೆ. ಮತ್ತೊಂದೆಡೆ, ವಿರೋಧ ಪಕ್ಷದ ಪ್ರಮುಖ ಅಂಗವಾದ ಕಾಂಗ್ರೆಸ್ ಪಕ್ಷವು ಡಬಲ್ ಡಿಜಿಟ್ ಸಂಖ್ಯೆಯನ್ನು ದಾಟಲು ಸಹ ಸವಾಲುಗಳನ್ನು ಎದುರಿಸುತ್ತಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಜಂಟಿ ನಾಯಕತ್ವದಲ್ಲಿ ನಡೆಸಿದ ಸುಶಾಸನ (ಉತ್ತಮ ಆಡಳಿತ) ಮತ್ತು ಅಭಿವೃದ್ಧಿ ಆಧಾರಿತ ಪ್ರಚಾರಗಳು ಮತದಾರರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿವೆ. ವಿಶೇಷವಾಗಿ, ಮಹಿಳಾ ಮತದಾರರ ವಿಶ್ವಾಸವನ್ನು ಗಳಿಸ
Nov 14, 20251 min read


ಬಿಹಾರ ವಿಧಾನಸಭಾ ಚುನಾವಣೆ: ಮತ ಎಣಿಕೆ ಆರಂಭ, ಎನ್ಡಿಎಗೆ ಭರ್ಜರಿ ಮುನ್ನಡೆ
ಬಿಹಾರ ವಿಧಾನಸಭಾ ಚುನಾವಣೆ 2025 ರ ಮತ ಎಣಿಕೆ ಕಾರ್ಯವು ಪ್ರಾರಂಭವಾಗಿದ್ದು, ಆರಂಭಿಕ ಸುತ್ತುಗಳಲ್ಲಿ ಎನ್ಡಿಎ (NDA) ಮೈತ್ರಿಕೂಟವು ಭರ್ಜರಿಯಾದ ಮುನ್ನಡೆಯನ್ನು ಕಂಡುಕೊಂಡಿದೆ. ಪ್ರಸ್ತುತ ದೊರೆತಿರುವ ಮಾಹಿತಿಯ ಪ್ರಕಾರ, ಎನ್ಡಿಎ ಕೂಟವು ಬರೋಬ್ಬರಿ 186 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಕಾಯ್ದುಕೊಂಡಿದೆ. ಇದು ಎಕ್ಸಿಟ್ ಪೋಲ್ಗಳ ಭವಿಷ್ಯವನ್ನು ನಿಜವಾಗಿಸುವ ಮುನ್ಸೂಚನೆ ನೀಡಿದೆ. ಇದಕ್ಕೆ ಪ್ರತಿಯಾಗಿ, ‘ಇಂಡಿಯಾ’ ಮೈತ್ರಿಕೂಟವು ಕೇವಲ 50ರ ಆಸುಪಾಸಿನ ಕ್ಷೇತ್ರಗಳಲ್ಲಿ ಮಾತ್ರ ಮುನ್ನಡೆಯಲ್ಲಿದೆ. ಉಳಿದ ಐದು ಕ್ಷೇತ್ರಗಳಲ್ಲಿ ಇತರೆ ಪಕ್ಷಗಳು ಅಥವಾ ಪಕ್ಷೇತರ ಅಭ್ಯರ್ಥಿಗಳು ಮುನ್ನಡೆ ಕಾಯ್ದುಕ
Nov 14, 20251 min read


ಬಿಹಾರ ವಿಧಾನಸಭಾ ಚುನಾವಣೆ ಫಲಿತಾಂಶ: ಇಂದು ನಿರ್ಧಾರವಾಗಲಿದೆ ಬಿಹಾರದ ರಾಜಕೀಯ ಭವಿಷ್ಯ
ಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶವು ಇಂದು ಶುಕ್ರವಾರ ಹೊರಬೀಳಲಿದ್ದು, ಇಡೀ ದೇಶದ ಗಮನವು ಬಿಹಾರ ರಾಜ್ಯದತ್ತ ನೆಟ್ಟಿದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಒಳಗೊಂಡ ‘ಇಂಡಿ’ ಮೈತ್ರಿಕೂಟ ಮತ್ತು ಬಿಜೆಪಿ ಒಳಗೊಂಡ ಎನ್ಡಿಎ (NDA) ಮೈತ್ರಿಕೂಟಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿತ್ತು. ರಾಜ್ಯದ ಮತದಾರರು ಯಾವ ಮೈತ್ರಿಕೂಟಕ್ಕೆ ಆಶೀರ್ವಾದ ನೀಡಿದ್ದಾರೆ ಮತ್ತು ಮುಂದಿನ ಐದು ವರ್ಷಗಳ ಕಾಲ ಬಿಹಾರದ ಆಡಳಿತ ಸೂತ್ರ ಯಾರ ಕೈಗೆ ಸಿಗಲಿದೆ ಎಂಬುದು ಇಂದು ಮಧ್ಯಾಹ್ನದ ವೇಳೆಗೆ ಸ್ಪಷ್ಟವಾಗಲಿದೆ. ಈ ಎರಡು ಪ್ರಬಲ ಮೈತ್ರಿಕೂಟಗಳ ಜೊತೆಗೆ, ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರ ಜನಸೂರಜ್ ಪಕ್ಷ ಮತ್ತು
Nov 14, 20251 min read


ಸಿಎಂ-ಡಿಸಿಎಂ ನಕಲಿ ಎಐ ವಿಡಿಯೋ: 'ಕನ್ನಡ ಚಿತ್ರರಂಗ' ಖಾತೆ ವಿರುದ್ಧ ಎಫ್ಐಆರ್ ದಾಖಲು
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ತಳ್ಳುತ್ತಿರುವಂತೆ ತೋರಿಸುವ ಕೃತಕ ಬುದ್ಧಿಮತ್ತೆ (AI) ನಿರ್ಮಿತ ವಿಡಿಯೋವನ್ನು ಪೋಸ್ಟ್ ಮಾಡಿದ ಸಂಬಂಧ, 'ಕನ್ನಡ ಚಿತ್ರರಂಗ' ಹೆಸರಿನ ಇನ್ಸ್ಟಾಗ್ರಾಮ್ ಖಾತೆಯ ಬಳಕೆದಾರರ ವಿರುದ್ಧ ಪ್ರಕರಣ ದಾಖಲಾಗಿದೆ. ವಕೀಲ ದೀಪು ಸಿ.ಆರ್. ಅವರು ನೀಡಿದ ದೂರಿನ ಅನ್ವಯ, ಸದಾಶಿವನಗರ ಠಾಣೆ ಪೊಲೀಸರು ಐಪಿಸಿ ಸೆಕ್ಷನ್ಗಳಾದ ಗಲಭೆ ಪ್ರಚೋದನೆ, ನಕಲಿ ದಾಖಲೆ ಸೃಷ್ಟಿ ಮತ್ತು ಸಾರ್ವಜನಿಕ ಅಶಾಂತಿ ಉಂಟುಮಾಡಿದ ಆರೋಪದ ಅಡಿಯಲ್ಲಿ ಕೇಸ್ ದಾಖಲಿಸಿಕೊಂಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ, ಸಿಎಂ ಮತ್ತು ಡಿಸಿ
Nov 9, 20251 min read
Archive
bottom of page


