top of page
News Articles
Sathyapatha News Plus


ದಕ್ಷಿಣ ಕನ್ನಡದ ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ವೇಗ: ದೆಹಲಿಯಲ್ಲಿ ಕೇಂದ್ರ ಕಾರ್ಯದರ್ಶಿಗಳೊಂದಿಗೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಚರ್ಚೆ
ನವದೆಹಲಿ/ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಗತಿಯಲ್ಲಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ ಯೋಜನೆಗಳನ್ನು ತ್ವರಿತವಾಗಿ ಪೂರ್ಣಗೊಳಿಸುವ ನಿಟ್ಟಿನಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಮಹತ್ವದ ಹೆಜ್ಜೆ ಇಟ್ಟಿದ್ದಾರೆ. ಇಂದು ನವದೆಹಲಿಯಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಕಾರ್ಯದರ್ಶಿ ಉಮಾಶಂಕರ್ ಅವರನ್ನು ಭೇಟಿಯಾದ ಸಂಸದರು, ಜಿಲ್ಲೆಯ ಹೆದ್ದಾರಿ ಕಾಮಗಾರಿಗಳ ಪ್ರಸ್ತುತ ಸ್ಥಿತಿಗತಿಗಳ ಬಗ್ಗೆ ಸವಿಸ್ತಾರವಾಗಿ ಚರ್ಚಿಸಿದರು. ಯಾವುದೇ ಕಾರಣಕ್ಕೂ ಕಾಮಗಾರಿಗಳು ವಿಳಂಬವಾಗದಂತೆ ಎಚ್ಚರವಹಿಸಿ, ನಿಗದಿತ ಕಾಲಮಿತಿಯೊಳಗೆ ಯೋಜನೆಗಳನ್ನು ಲೋಕಾರ್ಪಣೆಗೊಳಿಸಬೇಕೆಂದು ಅವರ
Feb 61 min read


ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿಸುದ್ದಿ: ಶೀಘ್ರವೇ ಎರಡು ಕಂತಿನ ಹಣ ಬಿಡುಗಡೆ!
ರಾಜ್ಯದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಹತ್ವದ ಸುದ್ದಿಯೊಂದನ್ನು ನೀಡಿದ್ದಾರೆ. ಈಗಾಗಲೇ 24 ಕಂತುಗಳನ್ನು ಯಶಸ್ವಿಯಾಗಿ ವಿತರಿಸಲಾಗಿದ್ದು, ಈಗ ಬಾಕಿ ಇರುವ ಎರಡು ಕಂತುಗಳ ಹಣವನ್ನು ಒಟ್ಟಾಗಿ ಬಿಡುಗಡೆ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ. ಇದರಿಂದ ಪ್ರತಿ ಮಹಿಳೆಗೆ ಒಟ್ಟು 52 ಸಾವಿರ ರೂಪಾಯಿ ತಲುಪಿದಂತಾಗುತ್ತದೆ. ಒಂದು ವೇಳೆ ನಿಮಗೆ ಹಣ ಬಾರದೆ ಇದ್ದಲ್ಲಿ, ಇನ್ನು ಮುಂದೆ ಕಚೇರಿಗಳಿಗೆ ಅಲೆಯುವ ಅಗತ್ಯವಿಲ್ಲ. ಸಾರ್ವಜನಿಕರ ಅನುಕೂಲಕ್ಕಾಗಿ ಇಲಾಖೆಯು '181' ಸಹಾಯವಾಣಿ ಸಂಖ್ಯೆಯನ್ನು ಪ್ರಕಟಿಸಿದೆ. ಇ-ಕೆವೈಸಿ ಸಮಸ್ಯೆ ಅಥವಾ ತಾಂತ್ರಿಕ ದೋಷಗಳಿಂದ
Feb 21 min read


ಬಜೆಟ್ 2026: 'ವಿಕಸಿತ ಭಾರತ'ದ ಸಂಕಲ್ಪಕ್ಕೆ ಬಲ ತುಂಬುವ ಬಜೆಟ್ - ಪ್ರಧಾನಿ ಮೋದಿ ಶ್ಲಾಘನೆ
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ 2026-27ನೇ ಸಾಲಿನ ಬಜೆಟ್ ಅನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. "ಈ ಬಜೆಟ್ ಭಾರತದ 'ಅಭಿವೃದ್ಧಿ ಎಕ್ಸ್ಪ್ರೆಸ್’ಗೆ ಹೊಸ ಶಕ್ತಿ ಮತ್ತು ವೇಗವನ್ನು ನೀಡಲಿದೆ" ಎಂದು ಅವರು ಬಣ್ಣಿಸಿದ್ದಾರೆ. ಬಜೆಟ್ ಕುರಿತು ಮಾತನಾಡಿದ ಪ್ರಧಾನಿಯವರು, "ನಮ್ಮ ಸರ್ಕಾರವು ಕೇವಲ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯಿಂದ ತೃಪ್ತವಾಗಿಲ್ಲ. ಭಾರತವನ್ನು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯನ್ನಾಗಿ ಮಾಡುವ ಗುರಿಯನ್ನು ಈ ಬಜೆಟ್ ಹೊಂದಿದೆ. ಇದು 140 ಕೋಟಿ ಭಾರತೀಯರ ಆಕಾಂಕ್ಷೆಗಳನ್ನು ಪ್ರತಿಬಿಂಬಿಸುವ ಮತ್ತು 2047ರ ವೇಳೆಗೆ 'ವಿ
Feb 11 min read


ಕೇಂದ್ರ ಬಜೆಟ್ 2026 ಪ್ರಮುಖ ಪಟ್ಟಿ
ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಮಂಡಿಸಿದ 2026ರ ಕೇಂದ್ರ ಬಜೆಟ್ನಲ್ಲಿ ದೇಶದ ಮೂಲಸೌಕರ್ಯ ಮತ್ತು ತಂತ್ರಜ್ಞಾನ ವಲಯಕ್ಕೆ ಕ್ರಾಂತಿಕಾರಿ ವೇಗ ನೀಡಿದ್ದಾರೆ. ಈ ಬಾರಿಯ ಬಜೆಟ್ನಲ್ಲಿ ಕರ್ನಾಟಕಕ್ಕೆ ಭರ್ಜರಿ ಕೊಡುಗೆ ಸಿಕ್ಕಿದ್ದು, ಒಟ್ಟು 7 ಹೈಸ್ಪೀಡ್ ಬುಲೆಟ್ ರೈಲು ಕಾರಿಡಾರ್ಗಳ ಪೈಕಿ ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ಹೈದರಾಬಾದ್-ಬೆಂಗಳೂರು ಮತ್ತು ಚೆನ್ನೈ-ಬೆಂಗಳೂರು ಮಾರ್ಗಗಳನ್ನು ಘೋಷಿಸಲಾಗಿದೆ. ಇದು ದಕ್ಷಿಣ ಭಾರತದ ಸಾರಿಗೆ ವ್ಯವಸ್ಥೆಯಲ್ಲಿ ಹೊಸ ಸಂಚಲನ ಮೂಡಿಸಲಿದೆ. ತಾಂತ್ರಿಕವಾಗಿ ಭಾರತವನ್ನು ಬಲಿಷ್ಠಗೊಳಿಸಲು ಸೆಮಿಕಂಡಕ್ಟರ್ 2.0 ಮಿಷನ್ ಹಾಗೂ ಔಷಧೀಯ ಕ್
Feb 11 min read


ಇಂದು ಕೇಂದ್ರ ಬಜೆಟ್: ಸತತ 9ನೇ ಬಾರಿ ಇತಿಹಾಸ ನಿರ್ಮಿಸಲಿರುವ ನಿರ್ಮಲಾ ಸೀತಾರಾಮನ್
ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು (ಫೆಬ್ರವರಿ 1) ಬೆಳಗ್ಗೆ 11 ಗಂಟೆಗೆ 2026-27ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಲಿದ್ದಾರೆ. ಇದು ಅವರು ಮಂಡಿಸುತ್ತಿರುವ ಸತತ 9ನೇ ಬಜೆಟ್ ಆಗಿದ್ದು, ಈ ಮೂಲಕ ಹೊಸ ದಾಖಲೆ ಬರೆಯುತ್ತಿದ್ದಾರೆ. ಈ ಬಾರಿಯ ಬಜೆಟ್ ಭಾನುವಾರ ಮಂಡನೆಯಾಗುತ್ತಿರುವುದು ವಿಶೇಷ. ವಿಶ್ವದ ಅತಿ ವೇಗದ ಆರ್ಥಿಕತೆಯ ಗತಿಯನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಸರ್ಕಾರವು ರಕ್ಷಣೆ, ಮೂಲಸೌಕರ್ಯ, ರೈಲ್ವೆ ಮತ್ತು ಇಂಧನ ವಲಯಗಳಿಗೆ ಹೆಚ್ಚಿನ ಒತ್ತು ನೀಡುವ ಸಾಧ್ಯತೆಯಿದೆ. ಮಧ್ಯಮ ವರ್ಗದವರು ಆದಾಯ ತೆರಿಗೆ ವಿನಾಯಿತಿ ಮತ್ತು ಅಗ್ಗದ ಮನೆಗಳ ಯೋಜನೆಗಳ ಬಗ್ಗೆ ನಿರೀಕ್ಷ
Feb 11 min read


ಅಜಿತ್ ಪವಾರ್ ಪತ್ನಿಗೆ ಉಪಮುಖ್ಯಮಂತ್ರಿ ಪಟ್ಟ
ಮಹಾರಾಷ್ಟ್ರ ರಾಜಕಾರಣದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದ್ದು, ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಇಂದು ಸಂಜೆ ಉಪ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಮುಂಬರುವ ಪುಣೆ ಜಿಲ್ಲಾ ಪಂಚಾಯತ್ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಎನ್ಸಿಪಿ (NCP) ಈ ನಿರ್ಧಾರ ಕೈಗೊಂಡಿದ್ದು, ಪಕ್ಷದ ಸಂಘಟನೆಯನ್ನು ಬಲಪಡಿಸಲು ಈ ಹೆಜ್ಜೆ ಇಡಲಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಕುಟುಂಬದ ಆಂತರಿಕ ಚರ್ಚೆಯ ಬಳಿಕ ಈ ಹುದ್ದೆಯನ್ನು ಅಲಂಕರಿಸಲು ಸುನೇತ್ರಾ ಅವರು ಒಪ್ಪಿಗೆ ಸೂಚಿಸಿದ್ದು, ಈ ಹಿಂದೆ ಅಜಿತ್ ಪವಾರ್ ಅವರು ನಿಭಾಯಿಸುತ್ತಿದ್ದ ಅಬಕಾರಿ ಮತ್ತು ಕ್ರೀಡಾ ಇಲಾಖೆಗಳ
Jan 311 min read


'ಇ-ಸ್ವತ್ತು 2.0' ತಾಂತ್ರಿಕ ದೋಷ: ಸದನದಲ್ಲಿ ಸರ್ಕಾರದ ವಿರುದ್ಧ ಕಿಶೋರ್ ಕುಮಾರ್ ಪುತ್ತೂರು ಆಕ್ರೋಶ
ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಧಾನ ಪರಿಷತ್ ಅಧಿವೇಶನದ ಶೂನ್ಯ ವೇಳೆಯಲ್ಲಿ, ಸದಸ್ಯರಾದ ಶ್ರೀ ಕಿಶೋರ್ ಕುಮಾರ್ ಪುತ್ತೂರು ಅವರು ರಾಜ್ಯದ ಗ್ರಾಮೀಣ ಭಾಗದ ಜನರು ಎದುರಿಸುತ್ತಿರುವ 'ಇ-ಸ್ವತ್ತು 2.0' ತಂತ್ರಾಂಶದ ವೈಫಲ್ಯದ ಬಗ್ಗೆ ಸರ್ಕಾರದ ಗಮನ ಸೆಳೆದರು. ಉದಯವಾಣಿ ದಿನಪತ್ರಿಕೆಯ ವರದಿಯನ್ನು ಉಲ್ಲೇಖಿಸಿದ ಅವರು, ಗ್ರಾಮೀಣ ನಾಗರಿಕರಿಗೆ ಆಸ್ತಿ ದಾಖಲೆಗಳನ್ನು ಸುಲಭವಾಗಿ ಒದಗಿಸಲು ಡಿಸೆಂಬರ್ 1ರಿಂದ ಜಾರಿಗೆ ತಂದ ಈ ಹೊಸ ತಂತ್ರಾಂಶವು, ಆರಂಭವಾದ ಒಂದೇ ತಿಂಗಳೊಳಗೆ ತಾಂತ್ರಿಕ ದೋಷಗಳಿಂದಾಗಿ ಸಂಪೂರ್ಣವಾಗಿ ಕೈಕೊಟ್ಟಿದೆ ಎಂದು ದೂರಿದರು. ತಂತ್ರಾಂಶದ ವಿಳಂಬದಿಂದಾಗಿ ಪ್ರಸ್ತುತ 36,000ಕ್ಕೂ ಹೆ
Jan 281 min read


ಸಂಸತ್ ಬಜೆಟ್ ಅಧಿವೇಶನ ಆರಂಭ: ಫೆಬ್ರವರಿ 1ಕ್ಕೆ ನಿರ್ಮಲಾ ಸೀತಾರಾಮನ್ ಅವರಿಂದ ಬಜೆಟ್ ಮಂಡನೆ
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಸಂಸತ್ತಿನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡುವ ಮೂಲಕ ಪ್ರಸಕ್ತ ಸಾಲಿನ ಬಜೆಟ್ ಅಧಿವೇಶನಕ್ಕೆ ಅದ್ಧೂರಿ ಚಾಲನೆ ನೀಡಲಿದ್ದಾರೆ. ರಾಷ್ಟ್ರಪತಿಗಳ ಭಾಷಣವು ಸರ್ಕಾರದ ನೀತಿ ನಿರೂಪಣೆ ಮತ್ತು ದೇಶದ ಭವಿಷ್ಯದ ಗುರಿಗಳ ದಿಕ್ಸೂಚಿಯಾಗಿದ್ದು, ಇಂದಿನಿಂದ ಸಂಸತ್ತಿನ ಉಭಯ ಸದನಗಳಲ್ಲಿ ಚರ್ಚೆಗಳು ಗರಿಗೆದರಲಿವೆ. ವೇಳಾಪಟ್ಟಿಯಂತೆ ಜನವರಿ 28 ರಿಂದ ಏಪ್ರಿಲ್ 2 ರವರೆಗೆ ಅಧಿವೇಶನ ನಡೆಯಲಿದ್ದು, ಒಟ್ಟು 30 ದಿನಗಳ ಕಲಾಪಗಳನ್ನು ನಿಗದಿಪಡಿಸಲಾಗಿದೆ. ಮೊದಲ ಹಂತದ ಅಧಿವೇಶನವು ಫೆಬ್ರವರಿ 13 ರವರೆಗೆ ನಡೆಯಲಿದ್ದು, ನಂತರ ಸಣ್ಣ ವಿರಾಮದ ಬಳಿಕ ಮಾರ್ಚ್ 9 ರಿಂ
Jan 281 min read


ಗಣರಾಜ್ಯೋತ್ಸವ ಸಂಭ್ರಮದ ನಡುವೆ ದುರಂತ: ಸ್ಪೀಕರ್ ಬಿದ್ದು ಮೂರು ವರ್ಷದ ಬಾಲಕಿ ಸಾವು
ಮುಂಬೈ: ಗಣರಾಜ್ಯೋತ್ಸವದ ಸಂಭ್ರಮದಲ್ಲಿದ್ದ ಮುಂಬೈನ ವಿಖ್ರೋಲಿ ಪ್ರದೇಶದಲ್ಲಿ ಶನಿವಾರ ಅತ್ಯಂತ ದಾರುಣ ಘಟನೆಯೊಂದು ಸಂಭವಿಸಿದೆ. ಹಬ್ಬದ ಆಚರಣೆಗಾಗಿ ಅಳವಡಿಸಲಾಗಿದ್ದ ಬೃಹತ್ ಧ್ವನಿವರ್ಧಕವೊಂದು (ಸ್ಪೀಕರ್) ಆಕಸ್ಮಿಕವಾಗಿ ಕುಸಿದು ಬಿದ್ದ ಪರಿಣಾಮ, ಅಲ್ಲಿಯೇ ಆಟವಾಡುತ್ತಿದ್ದ ಮೂರು ವರ್ಷದ ಪುಟ್ಟ ಬಾಲಕಿ ಮೃತಪಟ್ಟಿದ್ದಾಳೆ. ಸಂಭ್ರಮದ ವಾತಾವರಣವಿದ್ದ ಜಾಗದಲ್ಲಿ ಕ್ಷಣಾರ್ಧದಲ್ಲಿ ಮಗು ಪ್ರಾಣ ಕಳೆದುಕೊಂಡಿರುವುದು ಇಡೀ ಭಾಗವನ್ನು ಶೋಕಸಾಗರದಲ್ಲಿ ಮುಳುಗಿಸಿದೆ. ಈ ಮನಕಲಕುವ ಘಟನೆಯ ದೃಶ್ಯಾವಳಿಗಳು ಸ್ಥಳೀಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.
Jan 271 min read


ದೇಶಾದ್ಯಂತ 77ನೇ ಗಣರಾಜ್ಯೋತ್ಸವ ಸಡಗರ: 'ವಿಕಸಿತ ಭಾರತ' ಸಂಕಲ್ಪದೊಂದಿಗೆ ಜನತೆಗೆ ಶುಭ ಕೋರಿದ ಮೋದಿ!
ನವದೆಹಲಿ: ದೇಶದ 77ನೇ ಗಣರಾಜ್ಯೋತ್ಸವದ ಅಂಗವಾಗಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸಂಭ್ರಮ ಮನೆಮಾಡಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಬೆಳಿಗ್ಗೆ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ (National War Memorial) ಭೇಟಿ ನೀಡಿ, ದೇಶದ ರಕ್ಷಣೆಗಾಗಿ ಪ್ರಾಣಾರ್ಪಣೆ ಮಾಡಿದ ಹುತಾತ್ಮ ಸೈನಿಕರಿಗೆ ಪುಷ್ಪಗುಚ್ಛ ಅರ್ಪಿಸಿ ಗೌರವ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ರಕ್ಷಣಾ ಸಚಿವರು ಸೇರಿದಂತೆ ಮೂರು ಸೇನಾ ಪಡೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು. ಈ ಬಾರಿಯ ಗಣರಾಜ್ಯೋತ್ಸವಕ್ಕೆ ವಿಶೇಷ ಅತಿಥಿಗಳಾಗಿ ಯುರೋಪಿಯನ್ ಕಮಿಷನ್ ಅಧ್ಯಕ್ಷೆ ಉರ್ಸುಲಾ ವಾನ್ ಡೆರ್ ಲೇಯನ್ ಮತ್ತು ಯುರೋಪಿಯನ್ ಕೌನ್ಸಿಲ
Jan 261 min read


ಶರಣ್ ಪಂಪ್ವೆಲ್ಗೆ ಜಿಲ್ಲಾ ಪ್ರವೇಶ ನಿಷೇಧ: ಶಾಂತಿ ಕಾಪಾಡಲು ಜಿಲ್ಲಾಧಿಕಾರಿ ಕ್ರಮ
ಹಾಸನ: ಶ್ರವಣಬೆಳಗೊಳ ಹಾಗೂ ಅರಸೀಕೆರೆಯಲ್ಲಿ ಭಾನುವಾರ ಆಯೋಜಿಸಲಾಗಿದ್ದ 'ಹಿಂದೂ ಸಮಾಜೋತ್ಸವ' ಕಾರ್ಯಕ್ರಮದಲ್ಲಿ ಭಾಗವಹಿಸಬೇಕಿದ್ದ ವಿಶ್ವ ಹಿಂದೂ ಪರಿಷತ್ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ಅವರಿಗೆ ಜಿಲ್ಲಾ ಪ್ರವೇಶವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಅವರು ಆದೇಶ ಹೊರಡಿಸಿದ್ದಾರೆ. ಶರಣ್ ಪಂಪ್ವೆಲ್ ಅವರು ಈ ಹಿಂದೆ ವಿವಿಧ ಜಿಲ್ಲೆಗಳಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಅವರ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿವೆ. ಈ ಇತಿಹಾಸವನ್ನು ಗಮನಿಸಿ ಮುನ್ನೆಚ್ಚರಿಕಾ ಕ್ರಮವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು
Jan 261 min read


ಜಾಮೀನು ನೀಡುವ ಮುನ್ನ ಎಚ್ಚರ: ರೌಡಿಗಳು ಸಿಗದಿದ್ದರೆ ಜಾಮೀನುದಾರರಿಗೆ ಸಂಕಷ್ಟ; ಮಂಗಳೂರು ಕಮಿಷನರ್ ವಾರ್ನಿಂಗ್!
ಮಂಗಳೂರು: ಗಂಭೀರ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿ ನ್ಯಾಯಾಲಯದಿಂದ ಜಾಮೀನು ಪಡೆದು ತಲೆಮರೆಸಿಕೊಳ್ಳುವ ಆರೋಪಿಗಳಿಗೆ ಮಾತ್ರವಲ್ಲ, ಅವರಿಗೆ ಶ್ಯೂರಿಟಿ (ಜಾಮೀನು ಭರವಸೆ) ನೀಡುವವರಿಗೂ ಇನ್ಮುಂದೆ ಪೊಲೀಸರು ಬಿಸಿ ಮುಟ್ಟಿಸಲಿದ್ದಾರೆ. "ಅಪರಾಧಿಗಳಿಗೆ ಜಾಮೀನು ನೀಡುವಾಗ ಸಾರ್ವಜನಿಕರು ಎಚ್ಚರಿಕೆ ವಹಿಸಬೇಕು, ಇಲ್ಲದಿದ್ದರೆ ಗಂಭೀರ ಕಾನೂನು ಪರಿಣಾಮ ಎದುರಿಸಬೇಕಾಗುತ್ತದೆ" ಎಂದು ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರು ಕಡಕ್ ಎಚ್ಚರಿಕೆ ನೀಡಿದ್ದಾರೆ. ಈ ಮೂಲಕ ನ್ಯಾಯಾಂಗ ಪ್ರಕ್ರಿಯೆಯಿಂದ ತಪ್ಪಿಸಿಕೊಳ್ಳುವ ರೌಡಿಗಳಿಗೆ ಸಾಥ್ ನೀಡುವವರಿಗೆ ಆಯುಕ್ತರು ನೇರ ಸಂದೇಶ ರವಾನಿಸಿದ್ದಾರೆ.
Jan 251 min read


ಇಂದಿನಿಂದ ವಿಧಾನಸಭೆ ವಿಶೇಷ ಅಧಿವೇಶನ
ಕೇಂದ್ರ ಸರ್ಕಾರ ನರೇಗಾ ಯೋಜನೆಯ ಹೆಸರನ್ನು ಬದಲಾಯಿಸಿ ವಿಬಿ ಜಿ ರಾಮ್ ಜಿ ಎಂದು ಮರು ನಾಮಕರಣ ಮಾಡಿರುವುದರ ವಿರುದ್ಧ ನಿರ್ಣಯ ಕೈಗೊಳ್ಳಲು ಕರ್ನಾಟಕ ಕಾಂಗ್ರೆಸ್ ಸರ್ಕಾರ ವಿಶೇಷ ಅಧಿವೇಶನ ಕರೆದಿದೆ. ವಿಶೇಷ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ಇದೀಗ ರಾಜ್ಯಪಾಲರು ನಿರಾಕರಿಸಿದ್ದಾರೆ. ಹೀಗಾಗಿ ಅಧಿವೇಶನಕ್ಕೆ ಗೈರಾಗುತ್ತಾರೆಯೇ ಎಂಬ ಪ್ರಶ್ನೆಯೂ ಮೂಡಿದೆ. ಒಂದು ವೇಳೆ ಗೈರಾದರೆ ಸುಪ್ರೀಂ ಕೋರ್ಟ್ ಮೊರೆ ಹೋಗಲು ಸರ್ಕಾರ ಸಿದ್ಧತೆ ಮಾಡಿದೆ.ಅಧಿವೇಶನಕ್ಕೆ ಹಾಜರಾಗಿಯೇ ಸರ್ಕಾರಕ್ಕೆ ಚೆಕ್ ಮೇಟ್ ಇಡ್ತಾರಾ ರಾಜ್ಯಪಾಲ ಥಾವರ್ ಚಂದ್ ಗೆಹೋಟ್ ಎಂಬ ಪ್ರಶ್ನೆಮೂಡಿದೆ.
Jan 221 min read


ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಎಫ್ಐಆರ್ ದಾಖಲು
ಪುತ್ತೂರು: ಖಾಸಗಿ ಕಾಲೇಜೊಂದರಲ್ಲಿ ಕೋಮು ಭಾವನೆ ಕೆರಳಿಸುವ ಹಾಗೂ ಹಿಂಸೆಗೆ ಪ್ರಚೋದಿಸುವ ಭಾಷಣ ಮಾಡಿದ ಆರೋಪದಡಿ ಡಾ. ಕಲ್ಲಡ್ಕ ಪ್ರಭಾಕರ್ ಭಟ್, ಕಾರ್ಯಕ್ರಮ ಆಯೋಜಕರು ಮತ್ತು ಯುಟ್ಯೂಬ್ ಚಾನೆಲ್ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಮಚಂದ್ರ ಕೆ. ನೀಡಿದ ದೂರಿನನ್ವಯ ಪೊಲೀಸರು ಬಿಎನ್ಎಸ್ ವಿವಿಧ ಸೆಕ್ಷನ್ಗಳಡಿ ಎಫ್ಐಆರ್ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
Jan 221 min read


ಕರ್ನಾಟಕದ ಕಾಲೇಜು ಹಾಗೂ ವಿಶ್ವವಿದ್ಯಾಲಯಗಳಲ್ಲಿ ಮತ್ತೆ ಮೊಳಗಲಿದೆ ವಿದ್ಯಾರ್ಥಿ ಚುನಾವಣೆಯ ರಣಕಹಳೆ!
ಕರ್ನಾಟಕದ ಕಾಲೇಜು ಮತ್ತು ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆಗಳನ್ನು ಮತ್ತೆ ಆರಂಭಿಸಲು ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ಈ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯನ್ನಿಟ್ಟಿರುವ ಸರ್ಕಾರ, ಮೊದಲ ಹಂತದ ಉನ್ನತ ಮಟ್ಟದ ಸಭೆಯನ್ನು ಪೂರ್ಣಗೊಳಿಸಿದೆ. ಉನ್ನತ ಶಿಕ್ಷಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಗಳು ಚುನಾವಣೆ ನಡೆಸುವ ಪ್ರಸ್ತಾವನೆಗೆ ಈಗಾಗಲೇ ಪ್ರಾಥಮಿಕ ಹಸಿರು ನಿಶಾನೆ ತೋರಿಸಿವೆ. ಇದರಿಂದಾಗಿ ಕಳೆದ ಹಲವು ವರ್ಷಗಳಿಂದ ಸ್ಥಗಿತಗೊಂಡಿದ್ದ ಕ್ಯಾಂಪಸ್ ರಾಜಕೀಯಕ್ಕೆ ಮತ್ತೆ ಚಾಲನೆ ಸಿಗುವ ಸಾಧ್ಯತೆ ದಟ್ಟವಾಗಿದೆ. ವಿದ್ಯಾರ್ಥಿ ಚುನಾವಣೆಗಳನ್ನು ನಡೆಸುವ ಸಾಧಕ-ಬಾಧಕಗಳನ್
Jan 171 min read


ಜ.22ರಿಂದ ವಿಧಾನಮಂಡಲ ಜಂಟಿ ಅಧಿವೇಶನ: 'ವಿಬಿ-ಜಿ ರಾಮ್ ಜಿ' ಕಾಯ್ದೆ ವಿರುದ್ಧ ಗುಡುಗಲು ರಾಜ್ಯ ಸರ್ಕಾರ ಸನ್ನದ್ಧ
ಬೆಂಗಳೂರು: ಕೇಂದ್ರ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (MGNREGA) ರದ್ದತಿ ಮತ್ತು ಅದರ ಬದಲಿಗೆ ಜಾರಿಗೆ ತಂದಿರುವ 'ವಿಕಸಿತ ಭಾರತ್ ಜಿರಾಮಜಿ' (VB-G RAM G) ಕಾಯ್ದೆಯನ್ನು ವಿರೋಧಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ಜನವರಿ 22ರಿಂದ 31ರವರೆಗೆ ವಿಧಾನಮಂಡಲದ ಜಂಟಿ ಅಧಿವೇಶನ ನಡೆಸಲು ಬುಧವಾರ ನಡೆದ ತುರ್ತು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಅಧಿವೇಶನದ ಮೊದಲ ದಿನ ರಾಜ್ಯಪಾಲರು ಜಂಟಿ ಸದನವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದು, ರಜಾ ದಿನಗಳನ್ನು ಹೊರತುಪಡಿಸಿ ಅಧಿವೇಶನದ ಒಟ್ಟು ದಿನಗಳ ಬಗ್ಗೆ ಸ್ಪೀಕರ್ ಅಂತಿಮ ನಿರ್ಧಾರ ತೆಗೆ
Jan 151 min read


ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ ಸಾಧ್ಯತೆ: ಸಿಎಂ ಸಿದ್ದರಾಮಯ್ಯ ಅವರಿಂದ 17ನೇ ದಾಖಲೆಯ ಬಜೆಟ್
ಬೆಂಗಳೂರು: ಕರ್ನಾಟಕ ರಾಜ್ಯದ 2025-26ನೇ ಸಾಲಿನ ಆಯವ್ಯಯ ಮಂಡನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಜ್ಜಾಗುತ್ತಿದ್ದಾರೆ. ಆಪ್ತ ಮೂಲಗಳ ಮಾಹಿತಿ ಪ್ರಕಾರ, ಮಾರ್ಚ್ 6ರಂದು ಸಿಎಂ ಸಿದ್ದರಾಮಯ್ಯ ಅವರು ರಾಜ್ಯ ಬಜೆಟ್ ಮಂಡಿಸುವ ಸಾಧ್ಯತೆಯಿದೆ. ಈ ಕುರಿತು ಈಗಾಗಲೇ ಅವರು ಹಣಕಾಸು ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಮಹತ್ವದ ಚರ್ಚೆ ನಡೆಸಿದ್ದು, ಫೆಬ್ರವರಿ ತಿಂಗಳಿನಿಂದ ಇಲಾಖಾವಾರು ಪೂರ್ವಭಾವಿ ಸಭೆಗಳನ್ನು ನಡೆಸಲು ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ. ಮಾರ್ಚ್ 5ರಿಂದ ರಾಜ್ಯ ವಿಧಾನ ಮಂಡಲದ ಬಜೆಟ್ ಅಧಿವೇಶನ ಆರಂಭವಾಗುವ ಸಾಧ್ಯತೆಯಿದ್ದು, ಅಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಜಂಟಿ ಅಧಿ
Jan 121 min read


ಶಬರಿಮಲೆ ಆಭರಣ ಕಳವು ಪ್ರಕರಣ: ತನಿಖಾ ತಂಡದ ವಶದಲ್ಲಿ ಪ್ರಧಾನ ಅರ್ಚಕ
ಶಬರಿಮಲೆ: ಅಯ್ಯಪ್ಪ ಸ್ವಾಮಿ ಸನ್ನಿಧಿಯ ಅಮೂಲ್ಯ ಹಾಗೂ ಪುರಾತನ ಚಿನ್ನಾಭರಣಗಳ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯಾಗಿದ್ದು, ದೇವಾಲಯದ ಪ್ರಧಾನ ಅರ್ಚಕ (ತಂತ್ರಿ) ಕಂದರಾರು ರಾಜೀವರಾರು ಅವರನ್ನು ವಿಶೇಷ ತನಿಖಾ ತಂಡವು (SIT) ವಿಚಾರಣೆಗಾಗಿ ವಶಕ್ಕೆ ಪಡೆದಿದೆ. ದೇವಾಲಯದ ಭದ್ರತಾ ಕೊಠಡಿಯಲ್ಲಿದ್ದ ಪವಿತ್ರ ಆಭರಣಗಳ ಲೆಕ್ಕಾಚಾರದಲ್ಲಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದ್ದು, ಮುಖ್ಯ ಅರ್ಚಕರನ್ನೇ ವಿಚಾರಣೆಗೆ ಒಳಪಡಿಸಿರುವುದು ಭಕ್ತ ವಲಯದಲ್ಲಿ ಮತ್ತು ದೇವಸ್ವಂ ಮಂಡಳಿಯಲ್ಲಿ ಭಾರೀ ಸಂಚಲನ ಮೂಡಿಸಿದೆ. ಕೆಲವು ದಿನಗಳ ಹಿಂದಷ್ಟೇ ಶಬರಿಮಲೆ ದೇವಾಲಯದ.
Jan 101 min read


ಫೆಬ್ರವರಿ 1ರ ಭಾನುವಾರವೇ ಕೇಂದ್ರ ಬಜೆಟ್ ಮಂಡನೆ ಸಾಧ್ಯತೆ: ಇತಿಹಾಸದಲ್ಲೇ ಮೊದಲ ಬಾರಿ ಇಂತಹದೊಂದು ನಿರ್ಧಾರ!
ಹೊಸದಿಲ್ಲಿ: ಮುಂದಿನ 2026-27ರ ಹಣಕಾಸು ವರ್ಷದ ಕೇಂದ್ರ ಬಜೆಟ್ ಅನ್ನು ಫೆಬ್ರವರಿ 1ರಂದು ಮಂಡಿಸಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸುತ್ತಿದೆ. ವಿಶೇಷವೆಂದರೆ, ಬಜೆಟ್ ಇತಿಹಾಸದಲ್ಲೇ ಮೊಟ್ಟಮೊದಲ ಬಾರಿಗೆ ಭಾನುವಾರದಂದು ಈ ಆಯವ್ಯಯ ಮಂಡನೆಯಾಗುತ್ತಿದೆ. ಬಜೆಟ್ ಅಧಿವೇಶನವು ಜನವರಿ 28ರಂದು ರಾಷ್ಟ್ರಪತಿಗಳ ಭಾಷಣದೊಂದಿಗೆ ಆರಂಭವಾಗಲಿದ್ದು, ಸಂಸದೀಯ ವ್ಯವಹಾರಗಳ ಕುರಿತ ಸಂಪುಟ ಸಮಿತಿಯು (CCPA) ಬುಧವಾರದ ಸಭೆಯಲ್ಲಿ ಈ ಕುರಿತು ಅಂತಿಮ ಮೊಹರು ಒತ್ತಲಿದೆ ಎಂದು ತಿಳಿದುಬಂದಿದೆ. ೨೦೧೭ರಿಂದೀಚೆಗೆ ಬಜೆಟ್ ಅನ್ನು ಫೆಬ್ರವರಿ 1ರ ಬೆಳಿಗ್ಗೆ 11 ಗಂಟೆಗೆ ಮಂಡಿಸುವ ಸಂಪ್ರದಾಯವನ್ನು ಮಾಜಿ ಹಣಕಾಸು ಸಚಿವ ಅರ
Jan 71 min read


ಬಳ್ಳಾರಿಯಲ್ಲಿ ಬ್ಯಾನರ್ ಸಮರಕ್ಕೆ ಕಾಂಗ್ರೆಸ್ ಕಾರ್ಯಕರ್ತ ಬಲಿ: ಜನಾರ್ದನ ರೆಡ್ಡಿ, ಶ್ರೀರಾಮುಲು ವಿರುದ್ಧ ಎಫ್ಐಆರ್
ಬಳ್ಳಾರಿ: ನಗರದ ಹವಂಬಾವಿಯಲ್ಲಿ ವಾಲ್ಮೀಕಿ ಪುತ್ಥಳಿ ಅನಾವರಣದ ಬ್ಯಾನರ್ ಕಟ್ಟುವ ವಿಚಾರದಲ್ಲಿ ನಡೆದ ಭೀಕರ ಘರ್ಷಣೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತನೊಬ್ಬ ಗುಂಡೇಟಿಗೆ ಬಲಿಯಾಗಿದ್ದಾನೆ. ಈ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಗಾಲಿ ಜನಾರ್ದನ ರೆಡ್ಡಿ (A1), ಸೋಮಶೇಖರ ರೆಡ್ಡಿ (A2), ಶ್ರೀರಾಮುಲು (A3) ಮತ್ತು ಪಾಲಿಕೆ ವಿರೋಧ ಪಕ್ಷದ ನಾಯಕ ಮೋತ್ಕರ್ ಶ್ರೀನಿವಾಸ್ ಸೇರಿದಂತೆ ಒಟ್ಟು 11 ಜನರ ವಿರುದ್ಧ ಬ್ರೂಸ್ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಾಸಕ ನಾರಾ ಭರತ್ ರೆಡ್ಡಿ ಅವರ ಆಪ್ತ ಚಾನಾಳ್ ಶೇಖರ್ ನೀಡಿದ ದೂರಿನ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ. ಜನೆವರಿ 3ರಂದು ನಿಗದಿಯಾಗಿದ್ದ ವಾ
Jan 21 min read
Archive
bottom of page



