top of page
News Articles
Sathyapatha News Plus


ಬೆಳ್ತಂಗಡಿ: ಅಪ್ರಾಪ್ತ ಬಾಲಕರ ಮೇಲೆ ಹಲ್ಲೆ ಆರೋಪ - ಜುವೆಲ್ಲರಿ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲು
ಬೆಳ್ತಂಗಡಿ: ಪಟ್ಟಣದ ಜುವೆಲ್ಲರಿಯೊಂದರ ಹಿಂಭಾಗದಲ್ಲಿ ಬಹಿರ್ದೆಸೆಗೆ ತೆರಳಿದ್ದ ಅಪ್ರಾಪ್ತ ಬಾಲಕರ ಮೇಲೆ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡಿಸೆಂಬರ್ 15, 2025 ರಂದು ಸಂಜೆ ಈ ಘಟನೆ ಸಂಭವಿಸಿದೆ. ದೂರಿನ ಪ್ರಕಾರ, ಅಪ್ರಾಪ್ತ ವಯಸ್ಸಿನ ಪಿರ್ಯಾದಿದಾರರು ತಮ್ಮ ಇಬ್ಬರು ಸ್ನೇಹಿತರೊಂದಿಗೆ ಬೆಳ್ತಂಗಡಿ ಪಟ್ಟಣದ ಜುವೆಲ್ಲರಿಯೊಂದರ ಹಿಂಭಾಗದ ಪ್ರದೇಶಕ್ಕೆ ತೆರಳಿದ್ದರು. ಈ ವೇಳೆ ಅಲ್ಲಿಗೆ ಬಂದ ಜುವೆಲ್ಲರಿ ಸಿಬ್ಬಂದಿ, "ನೀವು ವಿಡಿಯೋ ಮಾಡುತ್ತಿದ್ದೀರಿ" ಎಂದು ಆರೋಪಿಸಿ ಮೂವರು ಬಾಲಕರನ್ನು ತಡೆದು ನಿಲ್ಲಿಸಿ ಹಲ್ಲೆ ನಡೆಸಿದ್ದಾರೆ ಎಂ
19 hours ago1 min read


ಬಿಸಿರೋಡು: ಮದುವೆ ನಿಶ್ಚಯವಾಗಿದ್ದ ಯುವತಿ ನಾಪತ್ತೆ!
ಬಂಟ್ವಾಳ: ಮದುವೆಯ ಸಂಭ್ರಮದಲ್ಲಿದ್ದ ಮನೆಯಲ್ಲಿ ಈಗ ಆತಂಕದ ಛಾಯೆ ಆವರಿಸಿದೆ. ಮದುವೆಗೆ ಕೆಲವೇ ದಿನಗಳು ಬಾಕಿ ಇರುವಾಗ ಮದುಮಗಳು ಮನೆಯಿಂದ ನಾಪತ್ತೆಯಾದ ಘಟನೆ ಬಿಸಿರೋಡಿನ ಪಲ್ಲಮಜಲು ಎಂಬಲ್ಲಿ ಸಂಭವಿಸಿದೆ. ಡಿ.14 ರಂದು ಅಶ್ಪಿಯಳನ್ನು . ಬಿ ಮೂಡ ಗ್ರಾಮದ ಬಂಟ್ವಾಳದ ಯುವಕನೋರ್ವನಿಗೆ ಮದುವೆ ಮಾಡುವುದಾಗಿ ಹಿರಿಯರೊಂದಿಗೆ ಮಾತುಕತೆ ಮಾಡಿ ಯುನಿಟಿ ಹಾಲ್ ಅಲ್ಲಿ ಮದುವೆ ನಿಶ್ಷಯಿಸಿರುತ್ತಾರೆ. ಡಿ. 14 ರಂದು ಬೆಳಗ್ಗೆ ಸುಮಾರು 03:30 ಗಂಟೆ ತನಕ ಮನೆಯಲ್ಲೇ ಮಲಗಿದ್ದು ಆ ಬಳಿಕ ಬೆಳಿಗ್ಗೆ ಸುಮಾರು 04:30 ಗಂಟೆಗೆ ಬೆಳಗಿನ ಜಾವ ನೋಡಿದಾಗ ಅಕ್ಕನ ಮನೆಯಲ್ಲಿ ಇಲ್ಲದೇ ಇರುವುದು ತಿಳಿದು ಬಂದಿದೆ. ಬಳಿಕ
3 days ago1 min read


ಕಾಸರಗೋಡು: ತೆಯ್ಯಂ ಉತ್ಸವದಲ್ಲಿ ಅವಘಡ; ಗುರಾಣಿ ತಗುಲಿ ಯುವಕ ಪ್ರಜ್ಞೆ ತಪ್ಪಿ ಸಾವು ಬಚಾವ್!
ಕಾಸರಗೋಡು: ಜಿಲ್ಲೆಯ ನೀಲೇಶ್ವರದಲ್ಲಿ ನಡೆಯುತ್ತಿದ್ದ ತೆಯ್ಯಂ ಉತ್ಸವದ ವೇಳೆ ಆಕಸ್ಮಿಕವಾಗಿ ದೈವನರ್ತಕನ ಕೈಯಲ್ಲಿದ್ದ ಗುರಾಣಿ ತಗುಲಿ ಯುವಕನೊಬ್ಬ ಕುಸಿದು ಬಿದ್ದ ಘಟನೆ ಸಂಭವಿಸಿದೆ. ನೀಲೇಶ್ವರದ ರೈಲ್ವೆ ಮೇಲ್ಸೇತುವೆ ಸಮೀಪವಿರುವ ಪಲ್ಲಿಕ್ಕರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಈ ಅವಘಡ ನಡೆದಿದೆ. ದೇವಸ್ಥಾನದ ಉತ್ಸವದ ಅಂಗವಾಗಿ ಪೂಮಾರುತನ್ ದೈವದ ‘ವೆಲ್ಲಟ್ಟಂ’ ಆಚರಣೆ ನಡೆಯುತ್ತಿತ್ತು. ಈ ವೇಳೆ ದೈವನರ್ತಕರು ಸಾಂಪ್ರದಾಯಿಕ ವೇಗದಲ್ಲಿ ಮರದ ಗುರಾಣಿಯನ್ನು ತಿರುಗಿಸುತ್ತಿದ್ದಾಗ, ಹತ್ತಿರದಲ್ಲಿದ್ದ ಪ್ರೇಕ್ಷಕ ಯುವಕನ ತಲೆಗೆ ಗುರಾಣಿ ಬಲವಾಗಿ ತಾಕಿದೆ. ಗುರಾಣಿ ತಲೆಗೆ ತಗುಲಿದ ತಕ್ಷಣ ಯುವಕ ಪ್ರಜ
3 days ago1 min read


ಮಂಗಳೂರು: ವೃದ್ಧೆ ಮನೆಯಲ್ಲಿ ದರೋಡೆ ಪ್ರಕರಣ- ಮೂವರು ಬಂಧನ
ಮಂಗಳೂರು: ಸುರತ್ಕಲ್ ಸಮೀಪದ ಮುಕ್ಕ ಪ್ರದೇಶದಲ್ಲಿ 85 ವರ್ಷದ ವೃದ್ಧೆ ಜಲಜಾ ಅವರ ಮನೆಗೆ ನುಗ್ಗಿ ಚಿನ್ನಾಭರಣ ಮತ್ತು ನಗದು ದೋಚಿದ್ದ ಪ್ರಕರಣವನ್ನು ಸುರತ್ಕಲ್ ಪೊಲೀಸರು ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಡಿಸೆಂಬರ್ 3 ರಂದು ಕುಡಿಯುವ ನೀರು ಕೇಳುವ ನೆಪದಲ್ಲಿ ಬಂದ ಅಪರಿಚಿತರು, ವೃದ್ಧೆಯ ಮನೆ ಹಂಚು ತೆಗೆದು ಒಳನುಗ್ಗಿ, ಬೆದರಿಸಿ ಅವರ ಕುತ್ತಿಗೆಗೆ ಬೈರಾಸು ಬಿಗಿದು ಸುಮಾರು 50 ಗ್ರಾಂ ಚಿನ್ನಾಭರಣ ಮತ್ತು ₹14,000 ನಗದು ದೋಚಿ ಪರಾರಿಯಾಗಿದ್ದರು. ತನಿಖೆ ನಡೆಸಿದ ಪೊಲೀಸರು, ಶೈನ್ ಎಚ್. ಪುತ್ರನ್ ಅಲಿಯಾಸ್ ಶಯನ್ ಎಂಬಾತನನ್ನು ಮೊದಲು ಬಂಧಿಸಿದ
3 days ago1 min read


ಬೆಳ್ತಂಗಡಿ: ಅರ್ಚಕನಿಂದ ವಾಮಾಚಾರದ ಹೆಸರಿನಲ್ಲಿ ವಂಚನೆ, ಯುವತಿಗೆ ಕಿರುಕುಳ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದ ತುರ್ಕಜೆಯಲ್ಲಿ ಆಘಾತಕಾರಿ ಘಟನೆಯೊಂದು ವರದಿಯಾಗಿದೆ. ದೇವಾಲಯದ ಅರ್ಚಕನೋರ್ವ ಯುವತಿಯ ಅನಾರೋಗ್ಯಕ್ಕೆ ವಾಮಾಚಾರವೇ ಕಾರಣ ಎಂದು ನಂಬಿಸಿ, ಪರಿಹಾರದ ನೆಪದಲ್ಲಿ ಆಕೆಯ ಕುಟುಂಬದ ವಿಶ್ವಾಸಗಳಿಸಿ, ಬಳಿಕ ಆಕೆಯನ್ನು ತನಗೆ ಕೊಟ್ಟು ಮದುವೆ ಮಾಡಿಕೊಡುವಂತೆ ಪೀಡಿಸಿದ್ದಾನೆ ಎನ್ನಲಾಗಿದೆ. ಮೂಲತಃ ಶಿರಸಿ ಮೂಲದ ಶಿವಗಿರಿ ಎಂಬಾತ ಸ್ಥಳೀಯ ದೇವಾಲಯವೊಂದರಲ್ಲಿ ಅರ್ಚಕನಾಗಿ ಕೆಲಸ ಮಾಡುತ್ತಿದ್ದನು. ಅನಾರೋಗ್ಯದ ಸಮಸ್ಯೆಯಿಂದ ಬಳಲುತ್ತಿದ್ದ ನರ್ಸಿಂಗ್ ಕಲಿಯುತ್ತಿರುವ ಯುವತಿಯೊಬ್ಬಳು ತನ್ನ ಮನೆಯವರೊಂದಿಗೆ ಹಾಲು ಪಾಯಸದ ಸೇವೆ ಸಲ್ಲಿಸಲು ದೇವಸ್ಥಾನಕ್ಕೆ ಬಂ
6 days ago1 min read


ಪಂಜ : ಕಾಡುಪ್ರಾಣಿ ಡಿಕ್ಕಿ: ಕುಕ್ಕೆ ಮಠದ ಅರ್ಚಕ ಗಂಭೀರ, ಆಸ್ಪತ್ರೆಗೆ ದಾಖಲು
ಪಂಜ: ಕುಕ್ಕೆ ಸುಬ್ರಹ್ಮಣ್ಯ ಮಠಕ್ಕೆ ಪೂಜೆಗೆಂದು ತೆರಳುತ್ತಿದ್ದ ಅರ್ಚಕರೊಬ್ಬರ ದ್ವಿಚಕ್ರ ವಾಹನಕ್ಕೆ ಕಾಡುಪ್ರಾಣಿಯೊಂದು ಡಿಕ್ಕಿ ಹೊಡೆದ ಪರಿಣಾಮ ಸವಾರ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡಿರುವ ಘಟನೆ ಡಿ. 12ರ ಮುಂಜಾನೆ ಪಂಜ ಸಮೀಪ ನಡೆದಿದೆ. ಗಾಯಾಳು ಅರ್ಚಕರನ್ನು ಪಂಜ ಗ್ರಾಮದ ನಿವಾಸಿ ವಾಸು ಭಟ್ ಎಂದು ಗುರುತಿಸಲಾಗಿದೆ. ವಾಸು ಭಟ್ ಅವರು ಮುಂಜಾನೆ ಸುಮಾರು 4 ರಿಂದ 5 ಗಂಟೆಯ ವೇಳೆಯಲ್ಲಿ ಪಂಜದ ತಮ್ಮ ಮನೆಯಿಂದ ಕುಕ್ಕೆ ಸುಬ್ರಹ್ಮಣ್ಯ ಮಠದಲ್ಲಿ ಸರ್ಪಸಂಸ್ಕಾರ ಪೂಜೆ ನೆರವೇರಿಸಲು ಬೈಕ್ನಲ್ಲಿ ತೆರಳುತ್ತಿದ್ದರು. ಈ ವೇಳೆ, ಬಳ್ಳ ಸಮೀಪದ ಎಡೋಣಿ ಪ್ರದೇಶದಲ್ಲಿ ರಸ್ತೆಗೆ ಅಡ್ಡ ಬಂದ ಕ
6 days ago1 min read


ಉಪ್ಪಿನಂಗಡಿ: ಅಡಿಕೆ ಬೆಳೆಗಾರರಿಗೆ ವಿಮಾ ಪರಿಹಾರದಲ್ಲಿ ಅನ್ಯಾಯ
ಪುತ್ತೂರು: ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ಅಡಿಕೆ ಕೃಷಿಕರಿಗೆ ಬಿಡುಗಡೆಯಾಗಿರುವ ಪರಿಹಾರ ಮೊತ್ತವು ಅನ್ಯಾಯದಿಂದ ಕೂಡಿದೆ. ಕೃಷಿಕರು ಮತ್ತು ಸರ್ಕಾರದಿಂದ ಒಟ್ಟು ಪಾವತಿಯಾದ ವಿಮಾ ಕಂತಿಗೆ ಹೋಲಿಸಿದರೆ ಪರಿಹಾರ ಮೊತ್ತವು ಬಹಳ ಕಡಿಮೆಯಾಗಿದ್ದು, ಈ ಅನ್ಯಾಯವನ್ನು ಸರಿಪಡಿಸಲು ರಾಜ್ಯ ಸರ್ಕಾರ ತಕ್ಷಣ ಮಧ್ಯಪ್ರವೇಶಿಸಬೇಕು ಎಂದು ಒತ್ತಾಯಿಸಿ ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದ ವತಿಯಿಂದ ಪುತ್ತೂರು ಸಹಾಯಕ ಕಮಿಷನರ್ ಅವರಿಗೆ ಮನವಿ ಸಲ್ಲಿಸಲಾಯಿತು. ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷರಾದ ಸುನೀಲ್ ಕುಮಾರ್ ದಡ್ಡು ಅವರು ಈ ಸಂದರ್ಭದಲ್ಲಿ ಮಾತನಾಡಿ, ಅಡಿಕೆ ಕೃಷಿಕರ ಬೆಳೆ
7 days ago1 min read


ಮಂಗಳೂರಿನ ನೆಹರೂ ಮೈದಾನದಲ್ಲಿ ನೂತನ ಆಸ್ಟ್ರೋ ಟರ್ಫ್ ಫುಟ್ಬಾಲ್ ಕ್ರೀಡಾಂಗಣ ಉದ್ಘಾಟನೆ
ಮಂಗಳೂರು ನಗರದ ಹೃದಯಭಾಗದಲ್ಲಿರುವ ನೆಹರೂ ಮೈದಾನದಲ್ಲಿ ಸುಸಜ್ಜಿತ ಆಸ್ಟ್ರೋ ಟರ್ಫ್ ಫುಟ್ಬಾಲ್ ಕ್ರೀಡಾಂಗಣವು ಬುಧವಾರದಂದು ವಿಧ್ಯುಕ್ತವಾಗಿ ಉದ್ಘಾಟನೆಗೊಂಡಿತು. ಕ್ರೀಡಾಭಿಮಾನಿಗಳ ಬಹುಕಾಲದ ಕನಸಾಗಿದ್ದ ಈ ಕ್ರೀಡಾಂಗಣವನ್ನು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಮಂಗಳೂರಿನಲ್ಲಿ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಂಗಣ ನಿರ್ಮಾಣಗೊಂಡಿರುವುದು ಸಂತಸ ತಂದಿದೆ. ಮುಂದಿನ ದಿನಗಳಲ್ಲಿ ಈ ಕ್ರೀಡಾಂಗಣಕ್ಕೆ ಇನ್ನಷ್ಟು ಅಗತ್ಯ ಸೌಲಭ್ಯಗಳನ್ನು ಒದಗಿಸುವ ಮೂಲಕ ಇದನ್ನು ಉನ್ನತ ದರ್ಜೆಗೆ ಏರಿಸಲಾಗುವುದು ಎಂದು ಭರವಸೆ ನ
Dec 31 min read


ಇಂದಿನ ಚಿನ್ನದ ದರ
ಇಂದಿನ (ನವೆಂಬರ್ 20, 2025) ಚಿನ್ನದ ದರಗಳು ಇಲ್ಲಿವೆ. ಕರ್ನಾಟಕದ ಪ್ರಮುಖ ನಗರಗಳಾದ ಬೆಂಗಳೂರು, ಮಂಗಳೂರು ಮತ್ತು ಮೈಸೂರಿನಲ್ಲಿ 22 ಕ್ಯಾರೆಟ್ ಮತ್ತು 24 ಕ್ಯಾರೆಟ್ ಚಿನ್ನದ ಬೆಲೆಗಳಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ. ಕರ್ನಾಟಕದಲ್ಲಿ ಇಂದಿನ ಚಿನ್ನದ ದರ (ಪ್ರತಿ 10 ಗ್ರಾಂಗೆ): 24 ಕ್ಯಾರೆಟ್ ಚಿನ್ನ: ₹1,24,690 (ನಿನ್ನೆಗೆ ಹೋಲಿಸಿದರೆ ₹170 ಇಳಿಕೆ) 22 ಕ್ಯಾರೆಟ್ ಚಿನ್ನ: ₹1,14,300 (ನಿನ್ನೆಗೆ ಹೋಲಿಸಿದರೆ ₹150 ಇಳಿಕೆ)
Dec 11 min read


ಕೋಣಿ ಗ್ರಾಮದಲ್ಲಿ ಅಪಘಾತ: ಮೂವರಿಗೆ ಗಾಯ
ಕೋಣಿ ಗ್ರಾಮದ ಎಚ್ಎಂಟಿ ಕ್ರಾಸ್ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಮತ್ತು ರಿಕ್ಷಾದಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡಿದ್ದಾರೆ. ಈ ಘಟನೆಯು ನಿನ್ನೆ, ಸೋಮವಾರ ಮಧ್ಯಾಹ್ನ ಸುಮಾರು 3:30 ರ ಸುಮಾರಿಗೆ ನಡೆದಿದೆ. ಗಾಯಗೊಂಡವರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಬಂದ ಸಂಚಾರ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ಅಪಘಾತಕ್ಕೆ ಆಟೋ ರಿಕ್ಷಾ ಚಾಲಕನ ಅಜಾಗರೂಕತೆ ಕಾರಣ ಎಂದು ತಿಳಿದುಬಂದಿದೆ. ಬಸ್ರೂರು ಪೇಟೆ ಕಡೆಯಿಂದ ಮೂರುಕೈ ಕಡೆಗೆ ಬರುತ್ತಿದ್ದ ಬೈಕ್ (KA 20 EB 6656) ಇದ್ದಕ್ಕಿದ್ದಂತೆ ಸೂಚನೆ ನೀಡದೆ ರಸ್ತೆಯಲ್ಲಿ ತಿರುಗಿಸಿದ ರಿಕ್ಷಾ (KA
Dec 11 min read


25 ವರ್ಷಗಳ ಹಳೆಯ ಉಡುಪಿ-ಹೈದರಾಬಾದ್ ಕೆಎಸ್ಆರ್ಟಿಸಿ ಬಸ್ ಸೇವೆ ಸ್ಥಗಿತ!
ಕರಾವಳಿ ಕರ್ನಾಟಕದಿಂದ ಆಂಧ್ರಪ್ರದೇಶದ ಹೈದರಾಬಾದ್ಗೆ ಸಂಪರ್ಕ ಕಲ್ಪಿಸುತ್ತಿದ್ದ, 25 ವರ್ಷಗಳಷ್ಟು ಹಳೆಯದಾದ ಕೆಎಸ್ಆರ್ಟಿಸಿ (KSRTC) ನಾನ್-ಎಸಿ ಸ್ಲೀಪರ್ ಬಸ್ ಸೇವೆಯನ್ನು ಭಾರಿ ನಷ್ಟದ ಕಾರಣದಿಂದಾಗಿ ದಿಢೀರನೆ ಸ್ಥಗಿತಗೊಳಿಸಲಾಗಿದೆ. ಸುಮಾರು 10-15 ದಿನಗಳಿಂದ ಕಾರ್ಯಾಚರಣೆಯನ್ನು ನಿಲ್ಲಿಸಿರುವ ಈ ಬಸ್, ಉಡುಪಿ, ಕುಂದಾಪುರ, ಸಿದ್ದಾಪುರದಿಂದ ಹೊರಟು ಶಿವಮೊಗ್ಗ, ರಾಯಚೂರು ಮೂಲಕ ಹೈದರಾಬಾದ್ಗೆ ತಲುಪುತ್ತಿತ್ತು. ಸತತವಾಗಿ ಹಲವು ತಿಂಗಳುಗಳಿಂದ ನಷ್ಟ ಅನುಭವಿಸುತ್ತಿದ್ದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಬಸ್ ಸೇವೆಯನ್ನು ಅವಲಂಬಿಸಿದ್ದ ಕರಾವಳಿ ಜಿಲ್ಲೆಗಳ ಅನೇಕ ಪ್ರಯಾಣಿ
Nov 301 min read


ಇತಿಹಾಸ ಪ್ರಸಿದ್ಧ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಧನು ಪೂಜೆ ಆಮಂತ್ರಣ ಪತ್ರಿಕೆ ಬಿಡುಗಡೆ
ಇತಿಹಾಸ ಪ್ರಸಿದ್ಧವಾದ ಸುಳ್ಯ ಸೀಮೆಯ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಡಿಸೆಂಬರ್ 16 ರಿಂದ ಆರಂಭಗೊಳ್ಳಲಿರುವ ಧನು ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ನವೆಂಬರ್ 29 ರಂದು ದೇವಳದ ಅಕ್ಷಯ ಮಂದಿರದಲ್ಲಿ ನೆರವೇರಿತು. ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಕೇಶವ ಕೊಳಲು ಮೂಲೆ ಅವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ದೇವಳದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಪಿ.ಬಿ. ದಿವಾಕರ ರೈ ಮತ್ತು ವ್ಯವಸ್ಥಾಪನ ಸಮಿತಿ ನಿಕಟ ಪೂರ್ವ ಅಧ್ಯಕ್ಷರಾದ ಕಿಶೋರ್ ಕುಮಾರ್ ಉಳುವಾರು ಅವರು ವೇದಿಕೆಯನ್ನು ಅಲಂಕರಿಸಿದ್ದರು. ನಿರಂತರ ಒಂದು ತಿಂಗಳ ಕಾಲ, ಪ್ರತಿದಿನ ಪ್ರಾತಃ
Nov 291 min read


ನಾಯಕತ್ವ ಗೊಂದಲಕ್ಕೆ ತೆರೆ: ಸಿಎಂ-ಡಿಸಿಎಂ ಜಂಟಿ ಸುದ್ದಿಗೋಷ್ಠಿ, ಒಗ್ಗಟ್ಟಿನ ಸಂದೇಶ ರವಾನೆ
ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ಕಳೆದ ಕೆಲವು ದಿನಗಳಿಂದ ಭಾರೀ ಚರ್ಚೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧಿಕೃತ ನಿವಾಸ 'ಕಾವೇರಿ'ಗೆ ಭೇಟಿ ನೀಡಿದ್ದು ಎಲ್ಲರ ಗಮನ ಸೆಳೆಯಿತು. ಡಿಕೆ ಶಿವಕುಮಾರ್ ಅವರು ಆಗಮಿಸುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡರು. ಉಭಯ ನಾಯಕರು ಉಪಾಹಾರ ಸೇವಿಸಿದರು. ಕಾಂಗ್ರೆಸ್ ಹೈಕಮಾಂಡ್ನ ನಿರ್ಧಾರದಂತೆ ನಡೆದ ಈ 'ಬ್ರೇಕ್ಫಾಸ್ಟ್ ಮೀಟಿಂಗ್' ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿತ್ತು. 2028ರ ಚುನಾವ
Nov 291 min read


ಅಕ್ರಮ ಗೋ ಸಾಗಾಟ: ನರಿಮೊಗರು ಬಳಿ ವಾಹನ ಕೆಟ್ಟು ನಿಂತು ಗೋವುಗಳನ್ನು ಬಿಟ್ಟು ಪರಾರಿ
ಪುತ್ತೂರು: ಪುತ್ತೂರು ತಾಲೂಕಿನ ನರಿಮೊಗರು ಗ್ರಾಮದ ಗಡಿಪಿಲ ಎಂಬಲ್ಲಿ ಇಂದು ಶನಿವಾರ ಮುಂಜಾನೆ ಅಕ್ರಮ ಗೋ ಸಾಗಾಟಕ್ಕೆ ಯತ್ನಿಸಿದ ಘಟನೆಯೊಂದು ನಡೆದಿದೆ. ಮುಂಜಾನೆ ಸುಮಾರು 5 ಗಂಟೆಯ ಸುಮಾರಿಗೆ ಗೋವುಗಳನ್ನು ತುಂಬಿಕೊಂಡು ಬರುತ್ತಿದ್ದ ವಾಹನವು ತಾಂತ್ರಿಕ ದೋಷದಿಂದ ಕೆಟ್ಟು ನಿಂತಿದೆ ಎಂದು ತಿಳಿದುಬಂದಿದೆ. ವಾಹನ ಕೆಟ್ಟು ನಿಂತದ್ದನ್ನು ಅರಿತ ಗೋ ಸಾಗಾಟ ಮಾಡುತ್ತಿದ್ದ ವ್ಯಕ್ತಿಗಳು ವಾಹನದಲ್ಲಿದ್ದ ಗೋವುಗಳನ್ನು ನಡುರಸ್ತೆಯಲ್ಲೇ ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾರೆ. ಈ ಘಟನೆಯ ಕುರಿತು ಮಾಹಿತಿ ಪಡೆದ ತಕ್ಷಣ, ಪುತ್ತಿಲ ಪರಿವಾರ ಸೇವಾ ಟ್ರಸ್ಟ್ನ ಕಾರ್ಯಕರ್ತರು ಸ್ಥಳಕ್ಕೆ ಧಾವಿಸಿ ಪರಿಶೀಲನೆ
Nov 291 min read


ಕೊಲ್ಲಮೊಗ್ರು : ಶೇಂದಿ ಇಳಿಸಲು ತೆಂಗಿನ ಮರವೇರಿದ್ದ ವ್ಯಕ್ತಿ ಮರದಲ್ಲೇ ಮೃತ
ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯ ಕೊಲ್ಲಮೊಗ್ರ ಗ್ರಾಮದಲ್ಲಿ ತೆಂಗಿನ ಮರವೇರಿ ಶೇಂದಿ ಇಳಿಸುತ್ತಿದ್ದ ಕೇರಳ ಮೂಲದ ವ್ಯಕ್ತಿಯೋರ್ವರು ಮರದಲ್ಲೇ ಮೃತಪಟ್ಟ ದಾರುಣ ಘಟನೆ ಸೋಮವಾರ ನಡೆದಿದೆ. ಕೊಲ್ಲಮೊಗ್ರು ಸಮೀಪದ ಪನ್ನೆಯಲ್ಲಿ ವ್ಯಕ್ತಿಯೊಬ್ಬರ ಜಾಗದಲ್ಲಿ ಕೇರಳ ಮೂಲದ ಈ ವ್ಯಕ್ತಿಯು ಶೇಂದಿ ಮೂರ್ತೆ (ಶೇಂದಿ ಇಳಿಸುವ ಕಾಯಕ) ನಡೆಸುತ್ತಿದ್ದರು. ಎಂದಿನಂತೆ, ಸೋಮವಾರದಂದು ಕೂಡಾ ಶೇಂದಿ ಇಳಿಸುವ ಸಲುವಾಗಿ ಅವರು ತೆಂಗಿನ ಮರವನ್ನು ಏರಿದ್ದರು. ಆದರೆ, ಮರದ ಮೇಲೆ ಇರುವಾಗಲೇ ಅವರು ತೀವ್ರ ಅಸ್ವಸ್ಥಗೊಂಡಿದ್ದು, ಸಹಾಯಕ್ಕಾಗಿ ಕೂಗಿಕೊಂಡಿದ್ದರೆಂದು ಸ್ಥಳೀಯರು ತಿಳಿಸಿದ್ದಾರೆ. ವಿಷಯ ತಿಳಿದ ಕೂಡಲೇ ಸ್ಥಳೀಯ
Nov 251 min read


ಕುಕ್ಕೆ ಸುಬ್ರಹ್ಮಣ್ಯ: ಚಂಪಾಷಷ್ಟಿ ಮಹೋತ್ಸವ ಹಿನ್ನಲೆ ಮದ್ಯದಂಗಡಿ ಮುಚ್ಚಲು ಡಿಸಿ ಆದೇಶ
ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆಯುವ ಪ್ರಸಿದ್ಧ ಚಂಪಾಷಷ್ಠಿ ಜಾತ್ರಾ ಮಹೋತ್ಸವ ಡಿಸೆಂಬರ್ 2 ರವರೆಗೆ ನಡೆಯಲಿದ್ದು, ಜಾತ್ರೆಯ ಮುಖ್ಯ ಕಾರ್ಯಕ್ರಮಗಳ ಅಂಗವಾಗಿ ನವೆಂಬರ್ 25 ರಂದು ಪಂಚಮಿ ರಥೋತ್ಸವ ಹಾಗೂ ತೈಲಾಭ್ಯಂಜನ, 26 ರಂದು ಚಂಪಾಷಷ್ಠಿ ಮಹಾರಥೋತ್ಸವ ಆಯೋಜಿಸಲಾಗಿದೆ. ಈ ಎರಡು ದಿನಗಳಲ್ಲಿ ಸುಮಾರು 50 ರಿಂದ 60 ಸಾವಿರ ಭಕ್ತಾದಿಗಳು ಭಾಗವಹಿಸುವ ನಿರೀಕ್ಷೆಯಿದೆ. ಭಕ್ತರ ಭದ್ರತೆ, ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ನವೆಂಬರ್ 25 ಬೆಳಿಗ್ಗೆ 6 ಗಂಟೆಯಿಂದ 26ರ ರಾತ್ರಿ 12 ಗಂಟೆಯವರೆಗೆ ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾಮ
Nov 251 min read


ಮುಂಡಗೋಡು: ಪೊಲೀಸರ ಭರ್ಜರಿ ಕಾರ್ಯಾಚರಣೆ; 8 ಲಕ್ಷ ಮೌಲ್ಯದ ಚರಸ್ ಸಹಿತ ಇಂಜಿನಿಯರ್ ಬಂಧನ
ಮುಂಡಗೋಡು: ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡು ಪೊಲೀಸರು ಮಾದಕ ದ್ರವ್ಯ ಮಾರಾಟ ಜಾಲದ ಮೇಲೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಸುಮಾರು 8 ಲಕ್ಷ ರೂಪಾಯಿ ಮೌಲ್ಯದ 781 ಗ್ರಾಂ ನಿಷೇಧಿತ ಮಾದಕ ವಸ್ತು 'ಚರಸ್' ಅನ್ನು ವಶಪಡಿಸಿಕೊಂಡು, ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಮುಂಡಗೋಡಿನ ಸುಭಾಷ್ ನಗರದ ನಿವಾಸಿ, ವೃತ್ತಿಯಲ್ಲಿ ಇಂಜಿನಿಯರ್ ಆಗಿರುವ ಸಚಿನ್ ಟೇಕಬಹುದ್ದೂರ್ ಗೋರ್ಖಾ (26) ಎಂದು ಗುರುತಿಸಲಾಗಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆಗಿಳಿದ ಮುಂಡಗೋಡು ಠಾಣೆಯ ಸಿ.ಪಿ.ಐ ರಂಗನಾಥ್ ನೀಲಮ್ಮನವರ್ ಹಾ
Nov 231 min read


ದತ್ತ ಜಯಂತಿ ಹಿನ್ನೆಲೆ ಚಿಕ್ಕಮಗಳೂರು ಪ್ರವಾಸಕ್ಕೆ ನಿರ್ಬಂಧ: ಪ್ರವಾಸಿಗರಿಗೆ ಹೊಸ ಆದೇಶ
ದತ್ತ ಜಯಂತಿ ಮಹೋತ್ಸವದ ಹಿನ್ನೆಲೆಯಲ್ಲಿ ಕಾಫಿನಾಡು ಚಿಕ್ಕಮಗಳೂರು ಪ್ರವಾಸಕ್ಕೆ ಯೋಜಿಸಿರುವ ಪ್ರವಾಸಿಗರಿಗೆ ಪ್ರಮುಖ ಸುದ್ದಿ ಹೊರಬಿದ್ದಿದೆ. ಜಿಲ್ಲಾಡಳಿತವು ಡಿಸೆಂಬರ್ 1 ರಿಂದ 4 ರವರೆಗೆ ಚಿಕ್ಕಮಗಳೂರು ತಾಲೂಕಿನ ಪ್ರಮುಖ ಪ್ರವಾಸಿ ತಾಣಗಳಾದ ಮುಳ್ಳಯ್ಯನಗಿರಿ ಭಾಗಕ್ಕೆ ಸಾರ್ವಜನಿಕರ ಹಾಗೂ ಪ್ರವಾಸಿಗರ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಿದೆ. ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರು ಈ ಸಂಬಂಧ ಆದೇಶ ಹೊರಡಿಸಿದ್ದು, ಡಿಸೆಂಬರ್ 5 ರ ಬೆಳಗ್ಗೆ 10 ಗಂಟೆಯ ನಂತರವಷ್ಟೇ ಈ ಭಾಗವನ್ನು ಪ್ರವಾಸಿಗರಿಗೆ ಪುನಃ ತೆರೆಯಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ. ಹೀಗಾಗಿ, ಈ ದಿನಾಂಕಗಳಲ್ಲಿ ಪ್ರವಾಸ ಕೈ
Nov 191 min read


ಪಡೀಲ್-ಕಣ್ಣೂರು ಮುಖ್ಯ ಪೈಪ್ಲೈನ್ ಹಾನಿ: ಮಂಗಳೂರು ನಗರಕ್ಕೆ ಎರಡು ದಿನದಿಂದ ನೀರು ಪೂರೈಕೆ ಸ್ಥಗಿತ
ಮಂಗಳೂರು: ನಗರದ ವಿವಿಧ ಪ್ರದೇಶಗಳಿಗೆ ನೀರು ಸರಬರಾಜು ಮಾಡುವ ಮುಖ್ಯ ಪೈಪ್ಲೈನ್ ಪಡೀಲ್-ಕಣ್ಣೂರು ಬಳಿ ಕಾಮಗಾರಿಯ ವೇಳೆ ಹಾನಿಗೊಳಗಾದ ಕಾರಣ ಸೋಮವಾರ ಮತ್ತು ಮಂಗಳವಾರ ನಗರದಲ್ಲಿ ನೀರು ಪೂರೈಕೆ ಸಂಪೂರ್ಣ ಸ್ಥಗಿತಗೊಂಡಿದೆ. ಈ ಅನಿರೀಕ್ಷಿತ ಅಡಚಣೆಯಿಂದಾಗಿ ಮಂಗಳೂರು ನಗರದಾದ್ಯಂತ ತೀವ್ರ ನೀರಿನ ಸಮಸ್ಯೆ ತಲೆದೋರಿದ್ದು, ಜನಜೀವನ ಅಸ್ತವ್ಯಸ್ತಗೊಂಡು ಜನರು ಪರದಾಡುವಂತಾಗಿದೆ. ತುಂಬೆ ಡ್ಯಾಂನಿಂದ ಪಡೀಲ್ ಟ್ಯಾಂಕ್ಗೆ ನೀರು ಸರಬರಾಜು ಮಾಡುವ ಮುಖ್ಯ ಪೈಪ್ಲೈನ್ 18 ಅಡಿ ಆಳದಲ್ಲಿ ಹಾದುಹೋಗಿದ್ದು, ಈ ಪೈಪ್ಲೈನ್ಗೆ ಹಾನಿಯಾಗಿರುವುದು ಸಮಸ್ಯೆಗೆ ಮೂಲ ಕಾರಣವಾಗಿದೆ. ಪಡೀಲ್ ಪಂಪೌಸ್ನಿಂದ ನೀರು ಪಡೆಯ
Nov 191 min read


ಕಡಬ: ಪೊಲೀಸ್ ಉಪನಿರೀಕ್ಷಕರ ವರ್ಗಾವಣೆ
ಕಡಬ: ಮಂಗಳೂರು ಪಶ್ಚಿಮ ವಲಯದ ಪೊಲೀಸ್ ಮಹಾ ನಿರೀಕ್ಷಕರಾದ (ಐಜಿಪಿ) ಅಮಿತ್ ಸಿಂಗ್ ಐಪಿಎಸ್ ಅವರು ನವೆಂಬರ್ 14 ರಂದು ಆದೇಶ ಹೊರಡಿಸಿದ್ದು, ಕಡಬ ಪೊಲೀಸ್ ಠಾಣೆಯ ಎಸ್.ಐ. ಅಭಿನಂದನ್ ಎ.ಎಸ್. ಸೇರಿದಂತೆ ಮೂವರು ಪೊಲೀಸ್ ಉಪನಿರೀಕ್ಷಕರನ್ನು (ಪಿಎಸ್ಐ) ವರ್ಗಾವಣೆಗೊಳಿಸಿದ್ದಾರೆ. ಈ ವರ್ಗಾವಣೆಯು ಆಡಳಿತಾತ್ಮಕ ಮತ್ತು ಸಾರ್ವಜನಿಕ ಹಿತದೃಷ್ಟಿಯಿಂದ ಕೂಡಿದ್ದು, ತಕ್ಷಣದಿಂದಲೇ ಜಾರಿಗೆ ಬರುವಂತೆ ಆದೇಶದಲ್ಲಿ ತಿಳಿಸಲಾಗಿದೆ. ಬಂಟ್ವಾಳ ನಗರ ಠಾಣೆಯ ತನಿಖಾ ವಿಭಾಗದ ಪಿಎಸ್ಐ ಗುಣಪಾಲ ಜೆ. ಅವರನ್ನು ಪುತ್ತೂರು ಗ್ರಾಮಾಂತರ ಠಾಣೆಗೆ ವರ್ಗಾಯಿಸಲಾಗಿದ್ದು, ಪುತ್ತೂರು ಗ್ರಾಮಾಂತರ ಠಾಣೆಯಲ್ಲಿದ್ದ ಎಸ್.ಐ. ಜ
Nov 141 min read
Archive
bottom of page


