top of page
News Articles
Sathyapatha News Plus


ಸುಳ್ಯಕ್ಕೆ ನೂತನ ಕ್ಷೇತ್ರ ಶಿಕ್ಷಣಾಧಿಕಾರಿ ನೇಮಕ: ಇಂದು ಅಧಿಕಾರ ಸ್ವೀಕಾರ
ಸುಳ್ಯ: ಕಳೆದ ಒಂದು ವರ್ಷದಿಂದ ಖಾಯಂ ಕ್ಷೇತ್ರ ಶಿಕ್ಷಣಾಧಿಕಾರಿಗಳಿಲ್ಲದೆ ತೊಂದರೆ ಅನುಭವಿಸುತ್ತಿದ್ದ ಸುಳ್ಯ ತಾಲೂಕಿಗೆ ಕೊನೆಗೂ ನೂತನ ಬಿಇಒ (BEO) ನೇಮಕವಾಗಿದೆ. ಯಾದಗಿರಿ ಜಿಲ್ಲೆಯ ಶಹಪೂರ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿದ್ದ ಯಮನೂರಪ್ಪ ಸಿದ್ದಪ್ಪ ಹರಗಿ (ವೈ.ಎಸ್. ಹರಗಿ) ಅವರನ್ನು ಸುಳ್ಯಕ್ಕೆ ವರ್ಗಾವಣೆಗೊಳಿಸಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ನೂತನ ಅಧಿಕಾರಿ ವೈ.ಎಸ್. ಹರಗಿ ಅವರು ಫೆಬ್ರವರಿ 2ರಂದು (ಇಂದು) ಸುಳ್ಯಕ್ಕೆ ಆಗಮಿಸಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ. ಸುಳ್ಯ ತಾಲೂಕಿನಲ್ಲಿ ದೀರ್ಘಕಾಲದಿಂದ ಶೈಕ್ಷಣಿಕ ಆಡಳಿತಾತ್ಮಕ ಸಮಸ್ಯೆಗಳು ಎದುರಾಗಿದ್ದ
9 hours ago1 min read


ಪುತ್ತೂರು: ಮೋರಿಗೆ ಡಿಕ್ಕಿಯಾಗಿ ಹೊತ್ತಿ ಉರಿದ ಕಾರು; ಯುವಕ-ಯುವತಿ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು
ಪುತ್ತೂರು: ರಾಷ್ಟ್ರೀಯ ಹೆದ್ದಾರಿ 75ರ ನೀರಕಟ್ಟೆ ಸಮೀಪದ ಕಾಂಚನ ಕ್ರಾಸ್ ಬಳಿ ಶುಕ್ರವಾರ ಭೀಕರ ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿದ ಕಾರು ಮೋರಿಗೆ ಡಿಕ್ಕಿಯಾಗಿ ಬೆಂಕಿಗಾಹುತಿಯಾಗಿದೆ. ಕಾರಿನಲ್ಲಿದ್ದ ಯುವಕ ಮತ್ತು ಯುವತಿ ಸಮಯಪ್ರಜ್ಞೆ ಮೆರೆದು ತಕ್ಷಣ ಹೊರಬಂದಿದ್ದರಿಂದ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ. ಹಾಸನದಿಂದ ಉಪ್ಪಿನಂಗಡಿ ಕಡೆಗೆ ಸಂಚರಿಸುತ್ತಿದ್ದ ಈ ಕಾರು, ಹೆದ್ದಾರಿ ಚತುಷ್ಪಥ ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲಿ ನಿಯಂತ್ರಣ ತಪ್ಪಿ ವಿರುದ್ಧ ದಿಕ್ಕಿನ ಮೋರಿಗೆ ವೇಗವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಇಂಜಿನ್ ಭಾಗದಲ್ಲಿ ಕಿಡಿ ಕಾಣಿಸಿಕೊಂಡು ಕ್ಷಣಾರ್
2 days ago1 min read


ಕೋಳಿ ಅಂಕಕ್ಕೆ ಪೊಲೀಸರ ಬ್ರೇಕ್: ಸಂಪ್ರದಾಯ ಉಳಿಸಲು ಫೆ.1ರಂದು ಪುತ್ತೂರಿನಲ್ಲಿ ಬೃಹತ್ ಸಮಾಲೋಚನಾ ಸಭೆ
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೂಜಿನ ನೆಪವೊಡ್ಡಿ ಪೊಲೀಸರು ಸಾಂಪ್ರದಾಯಿಕ ಕೋಳಿ ಅಂಕಗಳಿಗೆ ತಡೆ ನೀಡುತ್ತಿರುವುದನ್ನು ವಿರೋಧಿಸಿ ಈಗ ಹೋರಾಟದ ಕಿಚ್ಚು ಹತ್ತಿಕೊಂಡಿದೆ. ಕರಾವಳಿಯ ಈ ಪ್ರಾಚೀನ ಸಂಪ್ರದಾಯವನ್ನು ಉಳಿಸುವ ನಿಟ್ಟಿನಲ್ಲಿ 'ದಕ್ಷಿಣ ಕನ್ನಡ ಸಾಂಪ್ರದಾಯಿಕ ಆಚರಣಾ ಹಿತರಕ್ಷಣಾ ವೇದಿಕೆ'ಯು ಫೆಬ್ರವರಿ 1ರಂದು ಪುತ್ತೂರಿನ ಕೊಟೇಚಾ ಹಾಲ್ನಲ್ಲಿ ಬೃಹತ್ ಸಮಾಲೋಚನಾ ಸಭೆಯನ್ನು ಆಯೋಜಿಸಿದೆ. ಈ ಸಭೆಯಲ್ಲಿ ಕೋಳಿ ಅಂಕದ ಅಭಿಮಾನಿಗಳು, ದೈವಾರಾಧಕರು ಹಾಗೂ ಮುಖಂಡರು ಭಾಗವಹಿಸಿ ಮುಂದಿನ ಹೋರಾಟದ ರೂಪುರೇಷೆಗಳ ಬಗ್ಗೆ ಚರ್ಚಿಸಲಿದ್ದಾರೆ. ಕರಾವಳಿಯ ಧಾರ್ಮಿಕ ಚೌಕಟ್ಟಿನಲ್ಲಿ ಕೋಳಿ ಅಂಕಕ
2 days ago1 min read


ಅರಂತೋಡು–ಎಲಿಮಲೆ ಸಂಪರ್ಕ ರಸ್ತೆಯ ದುರವಸ್ಥೆ-ಮರ್ಕಂಜ ದಾಟುವಲ್ಲಿ ವಾಹನ ಸವಾರರಿಗೆ ಭಾರಿ ಸಂಕಷ್ಟ
ಸುಬ್ರಹ್ಮಣ್ಯ ಹಾಗೂ ಮಡಿಕೇರಿಯನ್ನು ಸಂಪರ್ಕಿಸುವ ಪ್ರಮುಖ ಮಾರ್ಗಗಳಲ್ಲಿ ಒಂದಾದ ಅರಂತೋಡು–ಎಲಿಮಲೆ ರಸ್ತೆ ನಿತ್ಯ ಅನೇಕ ವಾಹನಗಳ ಸಂಚಾರಕ್ಕೆ ಸಾಕ್ಷಿಯಾಗುತ್ತಿದೆ. ಆದರೆ ಈ ರಸ್ತೆಯ ಮಾರ್ಕಂಜ ವ್ಯಾಪ್ತಿಯಲ್ಲಿ ಮಾತ್ರ ರಸ್ತೆ ಸಂಪೂರ್ಣ ಹದಗೆಟ್ಟು, ಸಾರ್ವಜನಿಕರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ. ಒಂದೆಡೆ ಗುಂಡಿಗಳಿಂದ ತುಂಬಿದ ರಸ್ತೆ, ಮತ್ತೊಂದೆಡೆ ಮಣ್ಣು ಮತ್ತು ಜಲ್ಲಿಯು ರಸ್ತೆಮೇಲೆ ಹರಡಿಕೊಂಡಿರುವುದರಿಂದ ದ್ವಿಚಕ್ರ ವಾಹನ ಸವಾರರು, ಕಾರುಗಳು ಹಾಗೂ ಬಸ್ಗಳು ಸಂಚರಿಸುವುದು ಅತಿ ಕಷ್ಟಕರವಾಗಿದೆ. ವಿಶೇಷವಾಗಿ ಮಳೆಯಾದ ಸಂದರ್ಭಗಳಲ್ಲಿ ರಸ್ತೆ ಇನ್ನಷ್ಟು ಅಪಾಯಕಾರಿಯಾಗಿ ಮಾರ್ಪಡುತ್ತಿದ್ದ
4 days ago1 min read


ಬಾಲಕ ಸುಮಂತ್ ಸಾವು ಪ್ರಕರಣ: ಕೂಲಂಕುಷ ತನಿಖೆಗೆ ಗೃಹ ಸಚಿವರಿಗೆ ಶಾಸಕ ಹರೀಶ್ ಪೂಂಜ ಆಗ್ರಹ
ಬೆಳ್ತಂಗಡಿ: ಓಡಿಲ್ನಾಳ ಗ್ರಾಮದ ಸಂಬೋಳ್ಯ ನಿವಾಸಿ ಸುಮಂತ್ ಎಂಬ ಬಾಲಕನ ಅನುಮಾನಾಸ್ಪದ ಸಾವಿನ ಪ್ರಕರಣವು ತಾಲ್ಲೂಕಿನಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಈ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಶಾಸಕ ಹರೀಶ್ ಪೂಂಜ ಅವರು ಒತ್ತಾಯಿಸಿದ್ದಾರೆ. ಇತ್ತೀಚೆಗೆ ಬೆಂಗಳೂರಿನಲ್ಲಿ ಗೃಹ ಸಚಿವ ಜಿ. ಪರಮೇಶ್ವರ್ ಅವರನ್ನು ಭೇಟಿಯಾದ ಶಾಸಕರು, ಪ್ರಕರಣದ ಸತ್ಯಾಸತ್ಯತೆಯನ್ನು ಶೀಘ್ರವಾಗಿ ಹೊರತರುವಂತೆ ಅಧಿಕೃತವಾಗಿ ಮನವಿ ಸಲ್ಲಿಸಿದರು. ಬಾಲಕ ಸುಮಂತ್ ಸಾವಿನ ಹಿಂದೆ ಹಲವಾರು ಅನುಮಾನಗಳು ವ್ಯಕ್ತವಾಗುತ್ತಿದ್ದು, ಇದು ಕೇವಲ ಆಕಸ್ಮಿಕವೇ ಅಥವಾ ಬೇರೆನಾದರೂ ಸಂಚು ಇದೆಯೇ ಎಂಬ ಆತಂಕ ಕುಟುಂಬಸ್ಥರನ್ನು ಕಾಡುತ್ತಿ
5 days ago1 min read


ಬೆಂಗಳೂರು: ಬಿಎಂಟಿಸಿ ಬಸ್ಸಿಗೆ ರೈಲು ಡಿಕ್ಕಿ;
ಬೆಂಗಳೂರು: ನಗರದ ಕಾಡುಗೋಡಿಯ ಸಾದರಮಂಗಲ ರೈಲ್ವೆ ಕ್ರಾಸಿಂಗ್ ಬಳಿ ಬಿಎಂಟಿಸಿ ಬಸ್ ಮತ್ತು ರೈಲಿನ ನಡುವೆ ಭೀಕರ ಅಪಘಾತ ಸಂಭವಿಸಿದೆ. ಸಾದರಮಂಗಲದಲ್ಲಿ ಪ್ರಯಾಣಿಕರನ್ನು ಇಳಿಸಿ ಖಾಲಿ ಬಸ್ಸು ಡಿಪೋಗೆ ಹಿಂತಿರುಗುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಅದೃಷ್ಟವಶಾತ್ ಬಸ್ಸಿನಲ್ಲಿ ಪ್ರಯಾಣಿಕರು ಯಾರೂ ಇಲ್ಲದ ಕಾರಣ ಯಾವುದೇ ಜೀವಹಾನಿ ಸಂಭವಿಸಿಲ್ಲ. ಆದರೆ ರೈಲಿನ ಡಿಕ್ಕಿಯ ರಭಸಕ್ಕೆ ಬಿಎಂಟಿಸಿ ಬಸ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಡಿಪೋ ಸಂಖ್ಯೆ 51ಕ್ಕೆ ಸೇರಿದ್ದ ಈ ಬಸ್ಸು, ಇಕ್ಕಟ್ಟಾದ ರಸ್ತೆಯಲ್ಲಿ ಹಿಂಬದಿಗೆ ಚಲಿಸಿ ನಂತರ ಮುಂದಕ್ಕೆ ಹೋಗಲು ಪ್ರಯತ್ನಿಸುತ್ತಿತ್ತು. ಈ ಸಂದರ್ಭದಲ್ಲಿ ಚಾಲಕನು ಹಳಿ
6 days ago1 min read


ಕೋಡಿಬೆಂಗ್ರೆ ಬಳಿ ಸಮುದ್ರಕ್ಕೆ ಮಗುಚಿದ ಪ್ರವಾಸಿ ಬೋಟ್; 15 ಮಂದಿ ರಕ್ಷಣೆ, ನಾಲ್ವರ ಸ್ಥಿತಿ ಗಂಭೀರ
ಉಡುಪಿ: ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಕೋಡಿಬೆಂಗ್ರೆ ಅಳಿವೆ ಬಾಗಿಲಿನ ಬಳಿ ಅಲೆಗಳ ಅಬ್ಬರಕ್ಕೆ ಸಿಲುಕಿ ಪ್ರವಾಸಿ ಬೋಟ್ ಒಂದು ಸಮುದ್ರಕ್ಕೆ ಮಗುಚಿದೆ. ಬೋಟ್ನಲ್ಲಿ ವಿಹಾರಕ್ಕೆ ತೆರಳಿದ್ದ 15 ಮಂದಿ ಪ್ರವಾಸಿಗರು ಆಕಸ್ಮಿಕವಾಗಿ ಸಮುದ್ರದ ನೀರಿಗೆ ಬಿದ್ದಿದ್ದು, ಸ್ಥಳೀಯ ಮೀನುಗಾರರು ಮತ್ತು ಸಾರ್ವಜನಿಕರ ಸಮಯಪ್ರಜ್ಞೆಯಿಂದ ದೊಡ್ಡ ದುರಂತವೊಂದು ತಪ್ಪಿದೆ. ತಕ್ಷಣವೇ ಕಾರ್ಯಪ್ರವೃತ್ತರಾದ ಸ್ಥಳೀಯರು ಸಮುದ್ರಕ್ಕೆ ಇಳಿದು ಎಲ್ಲಾ 15 ಮಂದಿಯನ್ನು ದಡಕ್ಕೆ ಸೇರಿಸುವಲ್ಲಿ ಯಶಸ್ವಿಯಾಗಿದ್ದಾರೆ. ನೀರುಪಾಲಾದವರ ಪೈಕಿ ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ತಕ್ಷಣವೇ ಮಲ್ಪೆಯ ಖಾಸಗಿ ಆಸ್ಪತ
6 days ago1 min read


ಕೆಲಿಂಜ ಸರ್ಕಾರಿ ಶಾಲೆಯಲ್ಲಿ ಗಣರಾಜ್ಯೋತ್ಸವದ ಸಡಗರ: ರಾಷ್ಟ್ರಧ್ವಜಕ್ಕೆ ಗೌರವ ನಮನ
ದ. ಕ.ಪಂ. ಹಿ. ಪ್ರಾ. ಶಾಲೆಯಲ್ಲಿ 77ನೇ ಗಣರಾಜ್ಯೋತ್ಸವವನ್ನು ಇಂದು ಅತ್ಯಂತ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ಶಾಲಾ ಆವರಣದಲ್ಲಿ ನಡೆದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ (SDMC) ಅಧ್ಯಕ್ಷರಾದ ಮೋಹಿತ್ ಶೆಟ್ಟಿ ಅವರು ಧ್ವಜಾರೋಹಣ ನೆರವೇರಿಸಿ, ವಿದ್ಯಾರ್ಥಿಗಳಿಗೆ ಸಂವಿಧಾನದ ಮಹತ್ವ ಹಾಗೂ ರಾಷ್ಟ್ರಪ್ರೇಮದ ಬಗ್ಗೆ ಸಂದೇಶ ನೀಡಿದರು. ಈ ಸಂದರ್ಭದಲ್ಲಿ ಎಸ್ಡಿಎಂಸಿ ಉಪಾಧ್ಯಕ್ಷೆ ಜಯಂತಿ, ಶಾಲಾ ಮುಖ್ಯೋಪಾಧ್ಯಾಯರು, ಕ್ಲಸ್ಟರ್ ಸಿಆರ್ಪಿ ಮತ್ತು ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ಅಲ್ಲದೆ ಪಂಚಾಯತ್ ಸದಸ್ಯರಾದ ಪ್ರಸಾದ್ ಮತ್ತು ಸಂದೀಪ್, ಎಸ್
Jan 261 min read


ಬೆಳ್ತಂಗಡಿ: ವಿದ್ಯುತ್ ಪಂಪ್ ಆನ್ ಮಾಡುವಾಗ ಶಾಕ್ ತಗುಲಿ ವ್ಯಕ್ತಿ ದುರ್ಮರಣ
ಬೆಳ್ತಂಗಡಿ: ತಾಲೂಕಿನ ಗುರಿಪಳ್ಳದಲ್ಲಿ ಗಣರಾಜ್ಯೋತ್ಸವದ ದಿನವಾದ ಇಂದು (ಜನೆವರಿ 26) ಬೆಳಿಗ್ಗೆ ಸಂಭವಿಸಿದ ವಿದ್ಯುತ್ ಅವಘಡದಲ್ಲಿ 48 ವರ್ಷದ ವ್ಯಕ್ತಿಯೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಗುರಿಪಳ್ಳದ ಕಡಿಯಾರು ಗ್ರಾಮದ ನಿವಾಸಿ ಶಿವಪ್ರಸಾದ್ ಆದಪ್ಪ ಎಂಬವರೇ ಮೃತಪಟ್ಟ ದುರ್ದೈವಿ. ಮನೆಯ ಬಳಿಯ ನೀರಿನ ಪಂಪ್ ಆನ್ ಮಾಡಲು ಹೋದಾಗ ಈ ಘೋರ ದುರಂತ ಸಂಭವಿಸಿದೆ. ಕುಟುಂಬದ ಮೂಲಗಳ ಪ್ರಕಾರ, ಶಿವಪ್ರಸಾದ್ ಅವರು ಎಂದಿನಂತೆ ತಮ್ಮ ಬೆಳಗಿನ ದಿನಚರಿಯ ಕೆಲಸಕ್ಕೆಂದು ಹೊರಬಂದಿದ್ದರು. ಈ ವೇಳೆ ಪಂಪ್ ಸೆಟ್ ಸ್ವಿಚ್ ಹಾಕುವಾಗ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಗಂಭೀರವಾಗಿ ಗಾಯಗೊಂಡು ನೆಲಕ್ಕೆ ಉರುಳಿ ಬಿ
Jan 261 min read


ಕಡಬ: ಕಾಡಾನೆ ಎದುರಾದಾಗ ಬೈಕ್ ಬಿಟ್ಟು ಓಡಿ ಪ್ರಾಣ ಉಳಿಸಿಕೊಂಡ ಸವಾರ - ಆನೆ ದಾಳಿಗೆ ಬೈಕ್ ನಜ್ಜುಗುಜ್ಜು
ಅರಣ್ಯ ಇಲಾಖೆಯ ವ್ಯಾಪ್ತಿಗೆ ಒಳಪಡುವ ಸುಬ್ರಹ್ಮಣ್ಯ ವಲಯದ ಕೊಂಬಾರು ಗ್ರಾಮದ ಕಾಯರ್ತಡ್ಕ–ಮಣಿಭಾಂಡ ರಸ್ತೆಯಲ್ಲಿ ಗುರುವಾರ ರಾತ್ರಿ ರಸ್ತೆ ಮಧ್ಯೆ ಕಾಡಾನೆ ಎದುರಾದ ಪರಿಣಾಮ ಬೈಕ್ ಸವಾರೊಬ್ಬರು ಕೂದಲೆಳೆಯ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಘಟನೆ ಸಂಭವಿಸಿದೆ. ಸ್ಥಳೀಯ ಅಗರಿ ನಿವಾಸಿ ವಿನಯ್ ಎಂಬವರು ಗುರುವಾರ ರಾತ್ರಿ ಬೈಕ್ನಲ್ಲಿ ಸಂಚರಿಸುತ್ತಿದ್ದ ವೇಳೆ ಅಚಾನಕ್ ಕಾಡಾನೆ ಎದುರಾಗಿದೆ. ಗಾಬರಿಗೊಂಡ ಅವರು ತಕ್ಷಣ ಬೈಕ್ ಬಿಟ್ಟು ಓಡಿ ಪ್ರಾಣ ಉಳಿಸಿಕೊಂಡಿದ್ದಾರೆ. ಈ ವೇಳೆ ಆನೆಯು ರಸ್ತೆಯಲ್ಲಿದ್ದ ಬೈಕ್ ಅನ್ನು ತುಳಿದು ಗಂಭೀರವಾಗಿ ಹಾನಿಗೊಳಿಸಿದೆ. ಘಟನೆಯ ಸುದ್ದಿ ತಿಳಿದ ತಕ್ಷಣ ಅರಣ್ಯ ಇಲಾಖೆ
Jan 241 min read


ಪುತ್ತೂರು ಕೋಟಿ-ಚೆನ್ನಯ್ಯ ಜೋಡುಕೆರೆ ಕಂಬಳ: ಮದ್ಯ ಮಾರಾಟ ನಿಷೇದ
ಪುತ್ತೂರಿನ ಐತಿಹಾಸಿಕ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವಮಾರು ಗದ್ದೆಯಲ್ಲಿ 33ನೇ ವರ್ಷದ ‘ಕೋಟಿ-ಚೆನ್ನಯ್ಯ’ ಜೋಡುಕೆರೆ ಕಂಬಳವು ಜನವರಿ 24ರಿಂದ ಅದ್ದೂರಿಯಾಗಿ ಪ್ರಾರಂಭಗೊಳ್ಳಲಿದೆ. ಜನವರಿ 25ರವರೆಗೆ ನಡೆಯಲಿರುವ ಈ ಜಾನಪದ ಕ್ರೀಡಾಕೂಟಕ್ಕೆ ರಾಜ್ಯದ ವಿವಿಧೆಡೆಯಿಂದ ಸಾವಿರಾರು ಸಂಖ್ಯೆಯಲ್ಲಿ ಕಂಬಳಾಭಿಮಾನಿಗಳು ಹಾಗೂ ಪ್ರವಾಸಿಗರು ಆಗಮಿಸುವ ನಿರೀಕ್ಷೆಯಿದೆ. ಈ ಬೃಹತ್ ಜನಸಂದಣಿಯನ್ನು ಗಮನದಲ್ಲಿಟ್ಟುಕೊಂಡು ಕಾರ್ಯಕ್ರಮದ ಯಶಸ್ವಿ ನಿರ್ವಹಣೆಗೆ ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಪುತ್ತೂರು ನಗರವು ಮತೀಯವಾಗಿ ಅತೀ ಸೂಕ್ಷ್ಮ ಪ್ರದೇಶವೆಂದು...
Jan 231 min read


ಮಂಗಳೂರಿಗೆ ಒಲಿದ ‘ದೇಶದ ಅತ್ಯಂತ ಸುರಕ್ಷಿತ ನಗರ’ ಎಂಬ ಹೆಗ್ಗಳಿಕೆ: ನಂಬಿಯೋ (Numbeo) ಜಾಗತಿಕ ವರದಿ ಬಿಡುಗಡೆ
ನಂಬಿಯೋ (Numbeo) ಸಂಸ್ಥೆಯು ಬಿಡುಗಡೆ ಮಾಡಿರುವ ‘ಸೇಫ್ಟಿ ಇಂಡೆಕ್ಸ್–2026’ರ (ಸುರಕ್ಷತಾ ಸೂಚ್ಯಂಕ) ವರದಿಯಲ್ಲಿ ಕರಾವಳಿಯ ಹೆಮ್ಮೆಯ ನಗರಿ ಮಂಗಳೂರು ಭಾರತದಲ್ಲೇ ಅತ್ಯಂತ ಸುರಕ್ಷಿತ ನಗರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ವಿಶ್ವದಾದ್ಯಂತ ಒಟ್ಟು 304 ಪ್ರಮುಖ ನಗರಗಳನ್ನು ಒಳಗೊಂಡ ಈ ಸಮಗ್ರ ಸಮೀಕ್ಷೆಯಲ್ಲಿ, ಮಂಗಳೂರು ಅಗ್ರಸ್ಥಾನ ಪಡೆಯುವ ಮೂಲಕ ರಾಷ್ಟ್ರಮಟ್ಟದಲ್ಲಿ ಗಮನ ಸೆಳೆದಿದೆ. ಈ ವರದಿಯು ಮಂಗಳೂರಿನ ನಾಗರಿಕರ ನೆಮ್ಮದಿಯ ಜೀವನ ಹಾಗೂ ನಗರದ ಶಿಸ್ತುಬದ್ಧ ವಾತಾವರಣಕ್ಕೆ ಹಿಡಿದ ಕನ್ನಡಿಯಾಗಿದೆ. ಸಾರ್ವಜನಿಕ ಸುರಕ್ಷತೆ, ಅಪರಾಧ ಚಟುವಟಿಕೆಗಳ ಬಗ್ಗೆ ಸಾರ್ವಜನಿಕರ ಅಭಿಪ್ರಾಯ ಹಾಗೂ ನಗರದ ಭದ
Jan 231 min read


ಪುತ್ತೂರು ‘ಲವ್-ಸೆಕ್ಸ್-ಧೋಖಾ’ ಪ್ರಕರಣ: ಜನವರಿ 31ರೊಳಗೆ ಮದುವೆಯಾಗದಿದ್ದರೆ ಸಂಧಾನವಿಲ್ಲ - ಪ್ರತಿಭಾ ಕುಳಾಯಿ ಎಚ್ಚರಿಕೆ
ಮಂಗಳೂರು: ಪುತ್ತೂರಿನಲ್ಲಿ ಸಂಚಲನ ಮೂಡಿಸಿರುವ 'ಲವ್-ಸೆಕ್ಸ್-ಧೋಖಾ' ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಧಾನ ಪ್ರಕ್ರಿಯೆಗೆ ಜನವರಿ 31ರ ಗಡುವು ನೀಡಲಾಗಿದೆ ಎಂದು ಹಿಂದುಳಿದ ವರ್ಗಗಳ ಆಯೋಗದ ಸದಸ್ಯೆ ಪ್ರತಿಭಾ ಕುಳಾಯಿ ತಿಳಿಸಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಅವಧಿಯೊಳಗೆ ಮದುವೆ ನಡೆಯದಿದ್ದರೆ ಫೆಬ್ರವರಿ 7ರಂದು ಮಗುವಿನ ನಾಮಕರಣ ಕಾರ್ಯಕ್ರಮವನ್ನು ಅದ್ದೂರಿಯಾಗಿ ನಡೆಸಿ, ಕಾನೂನು ಹೋರಾಟ ಮುಂದುವರಿಸಲಾಗುವುದು ಎಂದು ಎಚ್ಚರಿಸಿದರು. ಆರೋಪಿ ಕೃಷ್ಣ ಜೆ. ರಾವ್ ಕುಟುಂಬದವರು ಮದುವೆಗೆ ಒಪ್ಪಿಗೆ ಸೂಚಿಸಿದ ಹಿನ್ನೆಲೆಯಲ್ಲಿ, ಜ. 24ಕ್ಕೆ ನಿಗದ
Jan 221 min read


ಪುತ್ತೂರು ಕೋರ್ಟ್ನಲ್ಲಿ ಹೈಡ್ರಾಮ: ನ್ಯಾಯಾಧೀಶರ ಮುಂದೆಯೇ ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆಗೆ ಯತ್ನ!
ಪುತ್ತೂರು: ಇಲ್ಲಿನ ನ್ಯಾಯಾಲಯದ ಆವರಣದಲ್ಲಿ ವ್ಯಕ್ತಿಯೊಬ್ಬ ನ್ಯಾಯಾಧೀಶರ ಮುಂದೆಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಆತಂಕಕಾರಿ ಘಟನೆ ನಡೆದಿದೆ. ಕಾವು ನಿವಾಸಿ ರವಿ (35) ಎಂಬಾತನೇ ಈ ಕೃತ್ಯ ಎಸಗಿದವನು. ತಕ್ಷಣವೇ ಆತನನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ರವಾನಿಸಲಾಗಿದೆ. ಆತ್ಮಹತ್ಯೆ ಯತ್ನಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಘಟನೆಯಿಂದ ಕೋರ್ಟ್ ಸಂಕೀರ್ಣದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
Jan 221 min read


ಪುತ್ತೂರು: 53 ಲಕ್ಷ ಮೌಲ್ಯದ 106 ಕೆಜಿ ಗಾಂಜಾ ಜಪ್ತಿ; ಇಬ್ಬರು ಆರೋಪಿಗಳ ಬಂಧನ
ಪುತ್ತೂರು: ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣದ ಗುರಿ ಹೊಂದಿರುವ ಪುತ್ತೂರು ಪೊಲೀಸರು ಭಾನುವಾರ ಸಂಜೆ ಭರ್ಜರಿ ಕಾರ್ಯಾಚರಣೆ ನಡೆಸಿ, 53 ಲಕ್ಷ ರೂಪಾಯಿ ಮೌಲ್ಯದ 106 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಪಡುವನ್ನೂರು ಗ್ರಾಮದ ಸಜಂಕಾಡಿ ಎಂಬಲ್ಲಿ ಸಿನಿಮೀಯ ಮಾದರಿಯಲ್ಲಿ ನಡೆದ ಈ ದಾಳಿಯಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರನ್ನು ಬೆಳ್ತಂಗಡಿಯ ರಫೀಕ್ (37) ಮತ್ತು ಅಬ್ದುಲ್ ಸಾದಿಕ್ (37) ಎಂದು ಗುರುತಿಸಲಾಗಿದೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಎಸ್ಐ ಗುಣಪಾಲ ಜೆ. ನೇತೃತ್ವದ ತಂಡ, ಕಾರು ಮತ್ತು ಗೂಡ್ಸ್ ವಾಹನದಲ್ಲಿ ಸಾಗಿಸುತ್ತಿದ್ದ 73 ಕಟ್ಟುಗಳ ಗಾಂಜಾವನ್ನು ಜ
Jan 201 min read


ಬೆಳ್ಳಾರೆ: ಬೈಕ್ ಮೋರಿಗೆ ಬಿದ್ದು ಮಗ ಸಾವು, ತಂದೆಗೆ ಗಂಭೀರ ಗಾಯ
ಬೆಳ್ಳಾರೆ: ಇಲ್ಲಿನ ಸಮೀಪದ ಕಲ್ಲೋಣಿ ತಿರುವಿನಲ್ಲಿ ಬೈಕ್ ನಿಯಂತ್ರಣ ತಪ್ಪಿ ಮೋರಿಯಿಂದ ಕೆಳಗೆ ಬಿದ್ದ ಭೀಕರ ಅಪಘಾತದಲ್ಲಿ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಕಡಬದ ಮರ್ದಾಳ ನಿವಾಸಿ ಎಂದು ಗುರುತಿಸಲಾಗಿದ್ದು, ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ. ಶಬರಿಮಲೆ ಪ್ರಸಾದವನ್ನು ಸುಳ್ಯಕ್ಕೆ ತಲುಪಿಸಲು ತಂದೆ-ಮಗ ಬೈಕಿನಲ್ಲಿ ಬರುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಮಗ ಸ್ಥಳದಲ್ಲೇ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಬೆಳ್ಳಾರೆ ಸಮೀಪದ ಕಲ್ಲೋಣಿಯಲ್ಲಿ ನಡೆದಿದೆ. ಮರ್ದಾಳ ಸಮೀಪದ ಕೊಲ್ಯ ನಿವಾಸಿ ನಿಶಾಂತ್ ಮೃತಪಟ್ಟ ದುರ್ದೈವಿ ಯುವಕ. ಇವರ ತಂದೆ ಮೋನಪ್ಪ ಅವರು ಅಪಘಾತದಲ್ಲಿ
Jan 201 min read


ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ
ಜಾಲ್ಲೂರು ಗ್ರಾಮದ ಅಡ್ಕಾರಿನ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಪ್ರತಿಷ್ಠಾ ದಿನ ಹಾಗೂ ವರ್ಷಾವಧಿ ಜಾತ್ರೋತ್ಸವವು ಫೆಬ್ರವರಿ 18ರಿಂದ 20ರವರೆಗೆ ವಿಜೃಂಭಣೆಯಿಂದ ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ನೆರವೇರಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಶಹರಿಪ್ರಕಾಶ್ ಅಡ್ಕಾರು ವಹಿಸಿದ್ದರು. ಈ ಸಂದರ್ಭದಲ್ಲೇ ಸಮಿತಿಯ ಸದಸ್ಯರಾದ ಪುರುಷೋತ್ತಮ, ನಂಗಾರು, ವಿಜಯಕುಮಾರ್ ನರಿಯೂರು, ಶ್ರೀಮತಿ ಪವಿತ್ರಾ ಭಾರತಿ, ಶ್ರೀಮತಿ ಸೌಮ್ಯಲಕ್ಷ್ಮಿ ಬೈತಡ್ಕ, ಮೊಕ್ತೆಸರ ಗುರುರಾಜ್ ಭಟ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಉತ್ಸವ ಸಮಿ
Jan 181 min read


ಸುಬ್ರಹ್ಮಣ್ಯ: ಕುಮಾರಧಾರ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವು
ಸುಬ್ರಹ್ಮಣ್ಯ: ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ಕುಮಾರಧಾರ ನದಿಗೆ ಈಜಲು ತೆರಳಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಂದು ಮಧ್ಯಾಹ್ನ ಸಂಭವಿಸಿದೆ. ಮೃತರನ್ನು ಕೊಲ್ಲಮೊಗ್ರ ನಿವಾಸಿಗಳು ಎಂದು ಗುರುತಿಸಲಾಗಿದ್ದು, ಈ ಘಟನೆಯಿಂದ ಸುಬ್ರಹ್ಮಣ್ಯ ಮತ್ತು ಕೊಲ್ಲಮೊಗ್ರ ಭಾಗದಲ್ಲಿ ಶೋಕದ ಛಾಯೆ ಆವರಿಸಿದೆ. ಮೃತಪಟ್ಟವರನ್ನು ಸುಬ್ರಹ್ಮಣ್ಯದಲ್ಲಿ ಉದ್ಯಮ ನಡೆಸುತ್ತಿದ್ದ ಹರಿಪ್ರಸಾದ್ ಹಾಗೂ ಸುಜೀತ್ ಕೊಲ್ಲಮೊಗ್ರ ಎಂದು ಗುರುತಿಸಲಾಗಿದೆ. ಇವರಿಬ್ಬರು ರಜಾ ದಿನವಾದ ಇಂದು ಮಧ್ಯಾಹ್ನದ ವೇಳೆಗೆ ನದಿಯಲ್ಲಿ ಸ್ನಾನ ಮ
Jan 181 min read


ಎಡಮಂಗಲ: ಚಿರತೆ ಅಟ್ಟಹಾಸ – ಮನೆಯಂಗಳದಲ್ಲಿದ್ದ ನಾಯಿಯನ್ನು ಹೊತ್ತೊಯ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಕಡಬ ತಾಲೂಕಿನ ಎಡಮಂಗಲ ಗ್ರಾಮದಲ್ಲಿ ಚಿರತೆ ಹಾವಳಿ ಮಿತಿಮೀರಿದ್ದು, ಸಾರ್ವಜನಿಕರಲ್ಲಿ ತೀವ್ರ ಆತಂಕ ಉಂಟಾಗಿದೆ. ಪಂಜ ಮೀಸಲು ಅರಣ್ಯ ವ್ಯಾಪ್ತಿಗೆ ಒಳಪಡುವ ಈ ಗ್ರಾಮದಲ್ಲಿ ಚಿರತೆಯ ಚಟುವಟಿಕೆಗಳು ದಿನೇದಿನೇ ಹೆಚ್ಚುತ್ತಿವೆ. ಜನವರಿ 7ರಂದು ಎಡಮಂಗಲ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಹಾಗೂ ಹಾಲಿ ಸದಸ್ಯೆ ಸುಮ ನೂಜಿಲ ಅವರ ಮನೆಯಂಗಳಕ್ಕೆ ನುಗ್ಗಿದ ಬೃಹತ್ ಗಾತ್ರದ ಚಿರತೆ, ಸಾಕು ನಾಯಿಯನ್ನು ಬೇಟೆಯಾಡಿ ಹೊತ್ತೊಯ್ದಿದೆ. ಈ ಸಂಪೂರ್ಣ ಘಟನೆ ಮನೆಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಘಟನೆಯ ದಿನ ಕುಟುಂಬದವರು ಕಾರ್ಯಕ್ರಮಕ್ಕಾಗಿ ಹೊರಗಿದ್ದರಿಂದ ಮನೆಗೆ ಬೀಗ ಹಾಕಲಾಗಿತ್ತು. ಸಂಜೆ ಸುಮಾರು 7 ಗ
Jan 121 min read


ಮಂಗಳೂರು ಮೂಲದ ಟೆಕ್ಕಿ ಶರ್ಮಿಳಾ ಸಾವು ಪ್ರಕರಣಕ್ಕೆ ಸ್ಫೋಟಕ ತಿರುವು: ಲೈಂಗಿಕ ದೌರ್ಜನ್ಯಕ್ಕೆ ನಿರಾಕರಿಸಿದ್ದಕ್ಕೆ ಕೊಲೆಗೈದು ಬೆಂಕಿ ಹಚ್ಚಿದ್ದ ನೆರೆಮನೆಯ ಯುವಕ ಅರೆಸ್ಟ್!
ಬೆಂಗಳೂರಿನಲ್ಲಿ ನಡೆದಿದ್ದ ಮಂಗಳೂರು ಮೂಲದ ಮಹಿಳಾ ಟೆಕ್ಕಿ ಶರ್ಮಿಳಾ ಅವರ ನಿಗೂಢ ಸಾವಿನ ಪ್ರಕರಣಕ್ಕೆ ಈಗ ಆಘಾತಕಾರಿ ತಿರುವು ಸಿಕ್ಕಿದ್ದು, ಇದೊಂದು ವ್ಯವಸ್ಥಿತ ಕೊಲೆ ಎಂಬುದು ಪೊಲೀಸರ ತನಿಖೆಯಿಂದ ಬಯಲಾಗಿದೆ. ಜನವರಿ 3ರಂದು ರಾಮಮೂರ್ತಿನಗರದ ಫ್ಲಾಟ್ನಲ್ಲಿ ನಡೆದಿದ್ದ ಬೆಂಕಿ ಅವಘಡದಲ್ಲಿ ಶರ್ಮಿಳಾ ಮೃತಪಟ್ಟಿದ್ದರು. ಮೊದಲು ಇದನ್ನು ಶಾರ್ಟ್ ಸರ್ಕ್ಯೂಟ್ ಎಂದು ಶಂಕಿಸಲಾಗಿತ್ತಾದರೂ, ಮೃತರ ಸ್ನೇಹಿತರು ವ್ಯಕ್ತಪಡಿಸಿದ ಅನುಮಾನದ ಮೇರೆಗೆ ತನಿಖೆ ನಡೆಸಿದ ಪೊಲೀಸರು ನೆರೆಮನೆಯ 18 ವರ್ಷದ ಯುವಕನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪೊಲೀಸರ ಮಾಹಿತಿ ಪ್ರಕಾರ, ಕೇರಳ ಮೂಲದ ಪಿಯುಸಿ ವಿದ್ಯಾರ್
Jan 121 min read
Archive
bottom of page


