top of page
News Articles
Sathyapatha News Plus


ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮೂವರು ಆರೋಪಿಗಳು ನ್ಯಾಯಾಂಗ ಬಂಧನಕ್ಕೆ
ವಿಟ್ಲ: ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ವಿಟ್ಲ ಠಾಣಾ ವ್ಯಾಪ್ತಿಯ ನಿವಾಸಿಯಾಗಿರುವ ಸಂತ್ರಸ್ತ ಅಪ್ರಾಪ್ತ ಬಾಲಕ ನೀಡಿದ ದೂರಿನಂತೆ, 2026ರ ಫೆಬ್ರವರಿಯಿಂದ ಆಗಸ್ಟ್ ತಿಂಗಳ ಅವಧಿಯಲ್ಲಿ ಲೈಂಗಿಕ ದೌರ್ಜನ್ಯ ನಡೆದಿರುವುದಾಗಿ ಆರೋಪಿಸಲಾಗಿದೆ. ಈ ಕುರಿತು ಸೆಪ್ಟೆಂಬರ್ 4, 2026ರಂದು ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು. ದೂರಿನ ಆಧಾರದ ಮೇಲೆ ವಿಟ್ಲ ಪೊಲೀಸ್ ಠಾಣೆಯಲ್ಲಿ
Sep 81 min read


ಕಡಬ: ಪ.ಪಂ ಅಧ್ಯಕ್ಷೆಯ ಮನೆಯಲ್ಲೇ ಕಳ್ಳತನ
ಕಡಬ ಪಟ್ಟಣ ಪಂಚಾಯತ್ ವ್ಯಾಪ್ತಿಯ ಅಡ್ಡಗದ್ದೆ ಎಂಬಲ್ಲಿ ಮನೆಯ ಮರದ ಬಾಕ್ಸ್ ಒಡೆದು ಅದರಲ್ಲಿದ್ದ ₹84,800/- ನಗದು ಹಣವನ್ನು ಕಳ್ಳರು ದೋಚಿರುವ ಘಟನೆ ನಡೆದಿದೆ. ಕಡಬ ಪಟ್ಟಣ ಪಂಚಾಯತ್ ಅಧ್ಯಕ್ಷೆ ತಮನ್ನಾ ಜಬೀನ್ (43) ಅವರ ಮನೆಯಲ್ಲಿ ಈ ಕಳವು ಸಂಭವಿಸಿದ್ದು, ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರೆ ತಮನ್ನಾ ಜಬೀನ್ ಅವರು ಕುಟುಂಬದೊಂದಿಗೆ ಕಡಬ ಅಡ್ಡಗದ್ದೆಯಲ್ಲಿರುವ ಗಂಡನ ಮನೆಯಲ್ಲಿ ವಾಸವಾಗಿದ್ದು, ಮಲಗುವ ಕೋಣೆಯ ಮರದ ಬಾಕ್ಸ್ನಲ್ಲಿ ಹಣ ಸಂಗ್ರಹಿಸಿಟ್ಟಿದ್ದರು. ಆಗಸ್ಟ್ 18 ರಂದು ಕಾರ್ಯಕ್ರಮ ನಿಮಿತ್ತ ಕುಟುಂಬ ಸಮೇತ ಉಡುಪಿಗೆ ತೆರಳಿ ಅಂದೇ ಮನೆಗೆ ಹಿಂತಿರುಗಿದ್ದರು. ಬಳಿಕ
Aug 281 min read


ಬಿಜೆಪಿಗೆ ಆಘಾತ: ಕಾಂಗ್ರೆಸ್ ಸೇರಿದ ನೆರಿಯಾ ಮಾಜಿ ಗ್ರಾ.ಪಂ. ಸದಸ್ಯೆ ಮರಿಯಮ್ಮ
ಬೆಳ್ತಂಗಡಿ: ತಾಲೂಕಿನ ನೆರಿಯಾ ಗ್ರಾಮ ಪಂಚಾಯತ್ನ ಮಾಜಿ ಬಿಜೆಪಿ ಬೆಂಬಲಿತ ಸದಸ್ಯೆಯಾಗಿದ್ದ ಮರಿಯಮ್ಮ ಅವರು ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರು. ಪಕ್ಷದ ತತ್ವ, ಸಿದ್ಧಾಂತ ಹಾಗೂ ಜನಪರ ಕಾರ್ಯವೈಖರಿಯನ್ನು ಮೆಚ್ಚಿ ಅವರು ಈ ನಿರ್ಧಾರ ಕೈಗೊಂಡಿದ್ದಾರೆ. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರು ಮರಿಯಮ್ಮ ಅವರನ್ನು ಪಕ್ಷಕ್ಕೆ ಆತ್ಮೀಯವಾಗಿ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ರಕ್ಷಿತ್ ಶಿವರಾಂ, "ಕಾಂಗ್ರೆಸ್ ಅಭಿವೃದ್ಧಿ ಹಾಗೂ ಸಾಮಾಜಿಕ ನ್ಯಾಯಕ್ಕೆ ಆದ್ಯತೆ ನೀಡುವ ಪಕ್ಷವಾಗಿದೆ. ಮರಿಯಮ್ಮ ಅವರ ಸೇರ್ಪಡೆಯಿಂದ ನೆರಿಯಾ ಭಾಗದಲ್ಲಿ ಪಕ್ಷದ ಸಂಘಟನೆ ಇನ
Aug 251 min read


ಪುತ್ತೂರು: ಡಿಜಿಟಲ್ ಸೇವಾ ಕೇಂದ್ರದಲ್ಲಿ ದಾಖಲೆ ವಿವಾದಕ್ಕೆ ಗಲಾಟೆ; ಓರ್ವನ ಬಂಧನ, ಮೂರು ಪ್ರಕರಣ ದಾಖಲು
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ದರ್ಬೆ ಪ್ರದೇಶದಲ್ಲಿರುವ ಡಿಜಿಟಲ್ ಸೇವಾ ಕೇಂದ್ರವೊಂದರಲ್ಲಿ ದಾಖಲೆಗಳಿಗೆ ಸಂಬಂಧಿಸಿದ ವಿವಾದ ವಿಕೋಪಕ್ಕೆ ತಿರುಗಿ ಎರಡು ಗುಂಪುಗಳ ನಡುವೆ ಭೀಕರ ಗಲಾಟೆ ನಡೆದಿದೆ. ತಾಂತ್ರಿಕ ದೋಷದಿಂದ ಕೆಲವು ಪ್ರಮುಖ ದಾಖಲೆಗಳು ಹಾನಿಗೊಳಗಾದ ವಿಚಾರವಾಗಿ ಆರಂಭವಾದ ವಾಗ್ವಾದವು ಅಂತಿಮವಾಗಿ ಪರಸ್ಪರ ಹಲ್ಲೆ ಮತ್ತು ಕ್ರಿಮಿನಲ್ ಬೆದರಿಕೆಗೆ ಕಾರಣವಾಗಿದೆ. ಘಟನೆಗೆ ಸಂಬಂಧಿಸಿದಂತೆ ಹಲ್ಲೆಗೊಳಗಾದ ಮಹಿಳೆಯೊಬ್ಬರು ನೀಡಿದ ದೂರಿನನ್ವಯ, ಹಾನಿಗೊಳಗಾದ ದಾಖಲೆಗಳನ್ನು ಸರಿಪಡಿಸಿಕೊಡಲು ಅಥವಾ ₹300 ವೆಚ್ಚ ಪಾವತಿಸಲು ಕೋರಿದಾಗ ಅಂಗಡಿ ಮಾಲೀಕರು ತಮ್ಮ ಮೇಲೆ ಹಲ್ಲೆ ನಡೆಸಿ ಬೆದರಿಕೆ ಹ
Aug 231 min read


ಮಂಗಳೂರು: ಚಲಿಸುತ್ತಿದ್ದ ರೈಲಿನಡಿ ಸಿಲುಕುತ್ತಿದ್ದ ವೃದ್ಧನ ರಕ್ಷಣೆ; ಪಾಯಿಂಟ್ಸ್ಮ್ಯಾನ್ ಸಮಯಪ್ರಜ್ಞೆಗೆ ಮೆಚ್ಚುಗೆ
ಮಂಗಳೂರು: ಚಲಿಸುತ್ತಿದ್ದ ರೈಲನ್ನು ಹತ್ತಲು ಮುಂದಾಗಿ ಹಳಿಗೆ ಬಿದ್ದ ವೃದ್ಧ ಪ್ರಯಾಣಿಕರೊಬ್ಬರನ್ನು ರೈಲ್ವೆ ಪಾಯಿಂಟ್ಸ್ಮ್ಯಾನ್ ಸಮಯಪ್ರಜ್ಞೆಯಿಂದ ರಕ್ಷಿಸಿದ ಘಟನೆ ಸೋಮವಾರ ಸುರತ್ಕಲ್ ರೈಲು ನಿಲ್ದಾಣದಲ್ಲಿ ನಡೆದಿದೆ. ಮುಂಬೈನಿಂದ ಮಂಗಳೂರು ಕಡೆಗೆ ಬರುತ್ತಿದ್ದ ರೈಲು ಸುರತ್ಕಲ್ ನಿಲ್ದಾಣದಲ್ಲಿ ನಿಂತಿದ್ದ ವೇಳೆ ವೃದ್ಧ ಪ್ರಯಾಣಿಕರೊಬ್ಬರು ಕೆಳಗಿಳಿದು ಅಂಗಡಿಗೆ ತೆರಳಿದ್ದರು. ಅವರು ವಾಪಸ್ ಬರುವಷ್ಟರಲ್ಲಿ ರೈಲು ಚಲಿಸಲು ಆರಂಭಿಸಿತ್ತು. ಅಂಗಡಿಯಲ್ಲಿ ಬಿಟ್ಟು ಬಂದಿದ್ದ ವಸ್ತುವನ್ನು ತರಲು ಅವಸರದಲ್ಲಿ ಚಲಿಸುತ್ತಿದ್ದ ರೈಲನ್ನು ಹತ್ತಲು ಯತ್ನಿಸಿದಾಗ ಆಯತಪ್ಪಿ ಹಳಿಗೆ ಬಿದ್ದಿದ್ದಾರೆ. ಈ ವೇಳ
Aug 111 min read


ಕಡಬ : ಮರ್ದಾಳದಲ್ಲಿ ಅವಘಡ: ಚರಂಡಿಗೆ ಉರುಳಿದ ಸಿಮೆಂಟ್ ಇಟ್ಟಿಗೆ ತುಂಬಿದ ಲಾರಿ
ಕಡಬ, ಆ.10: ಮೆಲ್ಕಾರ್ನಿಂದ ಸುಬ್ರಹ್ಮಣ್ಯಕ್ಕೆ ಸಿಮೆಂಟ್ ಇಟ್ಟಿಗೆಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಬಿದ್ದ ಘಟನೆ ರವಿವಾರ ಕಡಬ ಸಮೀಪದ ಮರ್ದಾಳದಲ್ಲಿ ನಡೆದಿದೆ. ಚಾಲಕನ ನಿಯಂತ್ರಣ ಕಳೆದುಕೊಂಡ ಲಾರಿ ರಸ್ತೆ ಬದಿಗೆ ಚಲಿಸಿ ಚರಂಡಿಗೆ ಬಿದ್ದಿದೆ. ಅದೃಷ್ಟವಶಾತ್ ಲಾರಿ ಚಾಲಕ ಯಾವುದೇ ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ. ಘಟನೆಯ ಬಳಿಕ ಲಾರಿಯಲ್ಲಿದ್ದ ಸಿಮೆಂಟ್ ಇಟ್ಟಿಗೆಗಳನ್ನು ಮತ್ತೊಂದು ಲಾರಿಗೆ ಸ್ಥಳಾಂತರಿಸಿ ಸುಬ್ರಹ್ಮಣ್ಯಕ್ಕೆ ಕಳುಹಿಸಲಾಯಿತು. ಬಳಿಕ ಕ್ರೇನ್ನ್ನು ಸ್ಥಳಕ್ಕೆ ಕರೆಸಿ ಚರಂಡಿಗೆ ಬಿದ್ದಿದ್ದ ಲಾರಿಯನ್ನು ಮೇಲಕ್ಕೆತ್ತ
Aug 101 min read


ಕುಂದಾಪುರ ಶೂಟೌಟ್ ಬಳಿಕ ಉಡುಪಿಯಲ್ಲಿ ಮತ್ತೊಂದು ರಕ್ತಪಾತಕಾಂಗ್ರೆಸ್ ಮುಖಂಡ ಡೇವಿಡ್ ಡಿಸೋಜಾ ಗುಂಡಿನ ದಾಳಿಗೆ ಬಲಿ
ಉಡುಪಿ: ಕುಂದಾಪುರದಲ್ಲಿ ನಡೆದ ಶೂಟೌಟ್ ಘಟನೆ ಮಾಸುವ ಮುನ್ನವೇ, ಉಡುಪಿ ಜಿಲ್ಲೆಯಲ್ಲಿ ಮತ್ತೊಂದು ಭೀಕರ ಗುಂಡಿನ ದಾಳಿ ಸಂಭವಿಸಿದ್ದು, ಕಾಂಗ್ರೆಸ್ ಮುಖಂಡ ಡೇವಿಡ್ ಡಿಸೋಜಾ (ಪ್ರಿನ್ಸ್) ದುಷ್ಕರ್ಮಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದಾರೆ. ಈ ಘಟನೆಯಿಂದ ಕರಾವಳಿ ಭಾಗವೇ ಬೆಚ್ಚಿಬಿದ್ದಿದೆ. ಸ್ಥಳೀಯವಾಗಿ ಪ್ರಭಾವಿ ನಾಯಕನಾಗಿದ್ದ ಡೇವಿಡ್ ಡಿಸೋಜಾ ಅವರು ಮುದರಂಗಡಿ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷರಾಗಿದ್ದು, ಸಾರ್ವಜನಿಕ ಸೇವೆಯಲ್ಲಿ ಸಕ್ರಿಯರಾಗಿದ್ದರು. ಅಪರಿಚಿತರು ನಡೆಸಿದ ಗುಂಡಿನ ದಾಳಿಯಲ್ಲಿ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಶೂಟೌಟ್ಗೆ ನಿಖರ ಕಾರಣ ಇನ್ನಷ್ಟೇ ತಿಳಿದುಬ
Aug 71 min read


ಕುಕ್ಕೆ ಸುಬ್ರಹ್ಮಣ್ಯ: ಭಾರೀ ಮಳೆಗೆ ಗುಡ್ಡ ಕುಸಿತ, ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದ ಕಾಂಪೌಂಡ್ ಹಾನಿ
ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ಪರಿಸರದಲ್ಲಿ ಇಂದು ಭಾರೀ ಮಳೆಯಾಗಿದೆ. ಮಳೆಯ ರಭಸಕ್ಕೆ ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದ ಹಿಂಬಾಗದ ಗುಡ್ಡ ಜರಿದು ಬಿದ್ದಿದೆ. ಗುಡ್ಡ ಜರಿತದ ಜೊತೆಗೆ ಬೃಹತ್ ಮರವೊಂದು ಉರುಳಿ ಬಿದ್ದ ಪರಿಣಾಮವಾಗಿ, ದೈವಸ್ಥಾನದ ಕಾಂಪೌಂಡ್ ಸಂಪೂರ್ಣವಾಗಿ ಹಾನಿಗೀಡಾಗಿದೆ. ಅದೃಷ್ಟವಶಾತ್ ದೊಡ್ಡ ಮಟ್ಟದ ಅನಾಹುತವೊಂದು ತಪ್ಪಿದಂತಾಗಿದೆ. ಈ ಪ್ರದೇಶದಲ್ಲಿ ಗುಡ್ಡ ಇನ್ನೂ ಜರಿಯುವ ಅಪಾಯವಿದ್ದು, ಸ್ಥಳದಲ್ಲಿ ಅನೇಕ ಮರಗಳು ಅಪಾಯಕಾರಿ ಸ್ಥಿತಿಯಲ್ಲಿವೆ. ಇದರಿಂದಾಗಿ ಸ್ಥಳೀಯರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
Aug 21 min read


ಸ್ನೇಹಿತರ ಬಳಗ (ರಿ.) ಕಲ್ಪಡ ಇದರ 10ನೆ ವರುಷದ ದಶಮ ಸಂಭ್ರಮ ಲೋಗೋ ಹಾಗೂ ಲಕ್ ಡಿಪ್ ಬಿಡುಗಡೆ
ಸ್ನೇಹಿತರ ಬಳಗ (ರಿ.) ಕಲ್ಪಡ ಇದರ 10ನೆ ವರುಷದ ದಶಮ ಸಂಭ್ರಮ ಲೋಗೋ ಹಾಗೂ ಲಕ್ ಡಿಪ್ ಬಿಡುಗಡೆ ಕಾರ್ಯಕ್ರಮವನ್ನು ದಿನಾಂಕ 21/6/2026 ನೇ ಭಾನುವಾರ ಬೆಳಿಗ್ಗೆ ಶ್ರೀ ಉಳ್ಳಾಕುಲು ದೈವಸ್ಥಾನದ ಆಡಳಿತ ಮು ಕ್ತೇಸರರು ಹಾಗೂ ಸ್ನೇಹಿತರ ಬಳಗದ ಗೌರವಧ್ಯಕ್ಷ ರಾದ ಶ್ರೀ ಶಿವರಾಮ ಉಪಾಧ್ಯಾಯ ಕಲ್ಪಡ ಇವರು ಬಿಡುಗಡೆ ಮಾಡಿದರು. ಈ ಸಂಧರ್ಭದಲ್ಲಿ ಶ್ರೀ ಉಳ್ಳಾಕುಲು ದೈವಸ್ಥಾನದ ಮಾಜಿ ಅಧ್ಯಕ್ಷರಾದ ಭಾಸ್ಕರ ಗೌಡ ಕಲ್ಪಡ ಗುತ್ತು, ಬಳಗದ ಅಧ್ಯಕ್ಷರಾದ ಸುರೇಶ್ ಗುತ್ತು, ದೈವದ ಪರಿಚಾರಕ ರಾದ ಶ್ರೀಧರ ಕಲ್ಪಡ, ಲಿಂಗಪ್ಪ ಕಲ್ಪಡ ಹಾಗೂ ಬಳಗದ ಎಲ್ಲಾ ಪದಾಧಿಕಾರಿಗಳು, ಸರ್ವಸದಸ್ಯರು ಪಾಲ್ಗೊಂಡಿದ್ದರು. ದಶಮಾನೋತ್
Jun 211 min read


ಸ್ನೇಹಿತರ ಬಳಗ (ರಿ.) ಕಲ್ಪಡ ವತಿಯಿಂದ ದಶಮ ಸಂಭ್ರಮ ಅಂಗವಾಗಿ ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್ ಮತ್ತು ಪುಸ್ತಕ ವಿತರಣೆ
ಕೊಡಿಯಾಲ, ಜೂನ್ 1: ಸ್ನೇಹಿತರ ಬಳಗ (ರಿ.) ಕಲ್ಪಡವು ತನ್ನ ದಶಮ ವಾರ್ಷಿಕೋತ್ಸವವನ್ನು ಸಂಭ್ರಮದಿಂದ ಆಚರಿಸುತ್ತಿದ್ದು, ಅದರ ಅಂಗವಾಗಿ ಸಮಾಜಮುಖಿ ಕಾರ್ಯಗಳನ್ನು ಕೈಗೊಂಡಿದೆ. ಈ ಪ್ರಯುಕ್ತ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ, ಮೂವಪ್ಪೆ ಇಲ್ಲಿನ 2026-27ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿಗಳಿಗೆ ಉಚಿತವಾಗಿ ಶಾಲಾ ಬ್ಯಾಗ್ಗಳು, ಪುಸ್ತಕಗಳು ಹಾಗೂ ಪೆನ್-ಪೆನ್ಸಿಲ್ಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಬಳಗದ ಅಧ್ಯಕ್ಷರಾದ ಸುರೇಶ್ ಗುತ್ತು, ಗೌರವಾಧ್ಯಕ್ಷರಾದ ಶಿವರಾಮ ಉಪಾಧ್ಯಾಯ, ಗೌರವ ಸಲಹೆಗಾರರಾದ ಚಿದಾನಂದ ಉಪಾಧ್ಯಾಯ ಉಪಸ್ಥಿತರಿದ್ದರು. ಸಂಚಾಲಕರಾದ ಕೇಶವ ಕಲ್ಪಡ ತೋಟ, ಸಹ ಸಂಚಾಲಕರಾದ ಯ
Jun 11 min read


ಬೆದ್ರುಪಣೆ: ಆನೆಗಳ ದಾಳಿಗೆ ಮರಿಯಾನೆ ಬಲಿ?
ಅರಂತೋಡು ಗ್ರಾಮದ ಬೆದ್ರುಪಣೆ ಎಂಬಲ್ಲಿ ಸುಮಾರು ಒಂದು ವರ್ಷದ ಮರಿಯಾನೆಯೊಂದು ನಿಗೂಢವಾಗಿ ಸಾವನ್ನಪ್ಪಿದೆ. ಸ್ಥಳೀಯ ನಿವಾಸಿ ಅಶೋಕ್ ಎಂಬುವವರ ಖಾಸಗಿ ತೋಟದಲ್ಲಿ ಸೋಮವಾರ ಮುಂಜಾನೆ ಈ ದುರ್ಘಟನೆ ಬೆಳಕಿಗೆ ಬಂದಿದೆ. ಗಂಡಾನೆಗಳ ನಡುವೆ ನಡೆದ ಭೀಕರ ದಾಳಿಯೇ ಈ ಮರಿಯಾನೆಯ ಸಾವಿಗೆ ಮುಖ್ಯ ಕಾರಣ ಎನ್ನಲಾಗುತ್ತಿದೆ. ರಾತ್ರಿ ವೇಳೆ ತೋಟಕ್ಕೆ ಆನೆಗಳು ನುಗ್ಗಿದ್ದರಿಂದ ಅರಣ್ಯ ಇಲಾಖೆ ಸಿಬ್ಬಂದಿ ಅವುಗಳನ್ನು ಕಾಡಿಗೆ ಅಟ್ಟುವ ಕಾರ್ಯಾಚರಣೆ ನಡೆಸಿದ್ದರು. ಆದರೆ, ಮುಂಜಾನೆ ಸುಮಾರು 3 ಗಂಟೆಯ ವೇಳೆಗೆ ಆನೆಗಳ ಹಿಂಡಿನ ನಡುವೆ ಪರಸ್ಪರ ತೀವ್ರ ಕಿತ್ತಾಟ ನಡೆದಿರಬಹುದು ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ಅರಣ್ಯಾ
May 251 min read


ಮಂಗಳೂರು–ಸುಬ್ರಹ್ಮಣ್ಯ ಮಾರ್ಗಕ್ಕೆ MEMU ರೈಲು ಬೇಡಿಕೆ: ಸಚಿವ ಸೋಮಣ್ಣಗೆ ಮನವಿ, ಸಂಸದ ಬ್ರಿಜೇಶ್ ಚೌಟ ಬೆಂಬಲ
ಮಂಗಳೂರು, ಮೇ 23: ಮಂಗಳೂರು ಜಂಕ್ಷನ್ನಲ್ಲಿ ನಡೆದ ಅಮೃತ ಭಾರತ್ ಅಭಿವೃದ್ಧಿ ಪರಿಶೀಲನಾ ಸಭೆಯಲ್ಲಿ, ಮಂಗಳೂರು–ಸುಬ್ರಹ್ಮಣ್ಯ ರೋಡ್ ಪ್ಯಾಸೆಂಜರ್ ರೈಲನ್ನು MEMU (ಮೆಮು) ರೈಲಿಗೆ ಮೇಲ್ದರ್ಜೆಗೇರಿಸುವಂತೆ ಮಹತ್ವದ ಬೇಡಿಕೆ ಮುಂದಿರಿಸಲಾಯಿತು. ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೆ ಈ ಕುರಿತು ಮನವಿ ಸಲ್ಲಿಸಿದರು. ಈ ಬೇಡಿಕೆಗೆ ಸ್ಥಳೀಯ ಸಂಸದರು ಸಹ ಬೆಂಬಲ ಸೂಚಿಸಿದ್ದು, ಶೀಘ್ರದಲ್ಲೇ ಸಕಾರಾತ್ಮಕ ಸ್ಪಂದನೆ ದೊರೆಯುವ ನಿರೀಕ್ಷೆ ವ್ಯಕ್ತವಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ ಸಂಚರಿಸುವ ಪ್ರಯಾಣಿಕರಿಗೆ ವೇಗವಾದ ಹಾಗೂ ಹೆಚ್ಚು ಆವೃತ್ತಿಯ ರೈಲು ಸೇವೆ ಒದಗಿಸುವ ದೃಷ್ಟಿಯಿಂದ MEMU ರೈಲ
May 231 min read


ಬೆಳ್ತಂಗಡಿಯಲ್ಲಿ ಬೆಚ್ಚಿಬೀಳಿಸಿದ ಘಟನೆ: ದಿಡುಪೆ ಜಲಪಾತದಲ್ಲಿ ಯುವತಿಗೆ ಲೈಂಗಿಕ ಕಿರುಕುಳ – ಮೂವರು ಆರೋಪಿಗಳು ಬಂಧನ
ಬೆಳ್ತಂಗಡಿ, ದಕ್ಷಿಣ ಕನ್ನಡ: ಪ್ರಸಿದ್ಧ ಪ್ರವಾಸಿ ತಾಣವಾದ ದಿಡುಪೆ ಜಲಪಾತದಲ್ಲಿ ನಡೆದ ಆಘಾತಕಾರಿ ಘಟನೆಯೊಂದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಜಲಪಾತದಲ್ಲಿ ನೀರಾಟ ಆಡುತ್ತಿದ್ದ ವೇಳೆ ಪ್ರವಾಸಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಕೇರಳದ ಕಾಸರಗೋಡು ಮೂಲದ ಮೂವರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಅಬ್ದುಲ್ ಖಾದರ್ (36), ಫೈಜಲ್ ಆದಿಲ್ (27) ಮತ್ತು ಉಸ್ಮಾನ್ ಸಲೀಂ (18) ಎಂದು ಗುರುತಿಸಲಾಗಿದೆ. ಇವರು ಯುವತಿಯರನ್ನು ದಿಡುಪೆ ಜಲಪಾತಕ್ಕೆ ಕರೆದುಕೊಂಡು ಬಂದಿದ್ದರು ಎಂದು ತಿಳಿದುಬಂದಿದೆ. ಘಟನೆಯ ವಿವರಗಳ ಪ್ರಕಾರ, ಜಲಪಾತದಲ್ಲಿ ಸ್ನಾನ ಮಾಡುತ್ತಿದ್ದ
May 211 min read


ಕಡಬದಲ್ಲಿ ಭೀಕರ ಘಟನೆ: ಅತ್ತಿಗೆಯ ಮೇಲೆ ಪೆಟ್ರೋಲ್ ಸುರಿದು ಕೊಲೆ ಯತ್ನ
ಕಡಬ, ಮೇ 6: ಆಸ್ತಿ ವಿಚಾರ ಹಾಗೂ ಅಸೂಯೆಯಿಂದ ಮೈದುನನೊಬ್ಬ ಅತ್ತಿಗೆಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಲು ಯತ್ನಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಐತ್ತೂರು ಗ್ರಾಮದ ಪಾದೆಮಜಲು ಎಂಬಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ. ಐತ್ತೂರು ಗ್ರಾಮದ ನಿವಾಸಿ ಬೇಬಿ ಕೆ.ಎಸ್ (35) ಅವರು ಈ ಘಟನೆಯಲ್ಲಿ ಸಾವಿನ ಅಂಚಿನಿಂದ ಪಾರಾಗಿದ್ದಾರೆ. ಅವರು ತಮ್ಮ ಪತಿ ನೋಣಯ್ಯ ಗೌಡ ಮತ್ತು ಇಬ್ಬರು ಮಕ್ಕಳೊಂದಿಗೆ ವಾಸವಾಗಿದ್ದು, ಕುಟುಂಬಕ್ಕೆ ಸೇರಿದ ಜಾಗವನ್ನು ಮೊದಲು ಅತ್ತೆಯವರು ಇಬ್ಬರು ಸಹೋದರರಿಗೆ ಹಂಚಿಕೆ ಮಾಡಿದ್ದರು. ತಮಗೆ ಸಿಕ್ಕ ಜಾಗದಲ್ಲಿ ಮನೆ ನಿರ್ಮಾಣಕ್ಕಾಗಿ ಬೇಬಿ ಅವರು ಅ
May 61 min read


ಸವಣೂರಿನಲ್ಲಿ ಭೀಕರ ಅಪಘಾತ: ಲಾರಿಗೆ ಡಿಕ್ಕಿ ಹೊಡೆದ ಬೈಕ್ – ಯುವಕ ಸಾವು, ಮತ್ತೋರ್ವ ಗಂಭೀರ ಗಾಯ
ಸವಣೂರಿನ ಕಾಣಿಯೂರು–ಮಂಜೇಶ್ವರ ಅಂತಾರಾಜ್ಯ ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ ಹೊಡೆದ ಪರಿಣಾಮ ಯುವಕನೊಬ್ಬ ಮೃತಪಟ್ಟಿದ್ದಾನೆ. ಸವಣೂರಿನಿಂದ ಸ್ವಲ್ಪ ಮುಂದಿನ ತಿರುವಿನಲ್ಲಿ ಈ ದುರ್ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಅಪಘಾತದ ತೀವ್ರತೆಯಿಂದ ದ್ವಿಚಕ್ರ ವಾಹನ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ಮೂಲಗಳು ತಿಳಿಸಿವೆ. ಮೃತ ಯುವಕ ಮಿತ್ತೂರು ಮೂಲದವನು ಎಂದು ಹೇಳಲಾಗುತ್ತಿದ್ದು, ಬೈಕ್ನಲ್ಲಿ ಇದ್ದ ಮತ್ತೊಬ್ಬ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ. ಗಾಯಾಳುವನ್ನು ಸಮೀಪದ ಆಸ್ಪತ್ರೆಗೆ
May 51 min read


ದಶಮ ವಾರ್ಷಿಕೋತ್ಸವದ ಅಂಗವಾಗಿ ಮೇ 10ರಂದು ಸ್ನೇಹಿತರ ಬಳಗ (ರಿ.) ಕಲ್ಪಡ, ಕೊಡಿಯಾಲ ಬೃಹತ್ ಆಧಾರ್ ಹಾಗೂ ವಿಮಾ ಶಿಬಿರ
ಕಲ್ಪಡ–ಕೊಡಿಯಾಲ ಭಾಗದ ಜನತೆಗೆ ಆಧಾರ್ ಸಂಬಂಧಿತ ಸೇವೆಗಳು ಹಾಗೂ ವಿಮಾ ಸೌಲಭ್ಯಗಳನ್ನು ತಲುಪಿಸುವ ಉದ್ದೇಶದಿಂದ ಸ್ನೇಹಿತರ ಬಳಗ (ರಿ.) ಕಲ್ಪಡ, ಕೊಡಿಯಾಲ ತನ್ನ ದಶಮ ವಾರ್ಷಿಕೋತ್ಸವದ ಅಂಗವಾಗಿ ಬೃಹತ್ ಶಿಬಿರವನ್ನು ಆಯೋಜಿಸಿದೆ. ಈ ಶಿಬಿರಕ್ಕೆ ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗದ ಸಹಯೋಗದೊಂದಿಗೆ . ಮೇ 10, 2026 ರಂದು ಕೊಡಿಯಾಲದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮೂವಪ್ಪೆ ನಡೆಯಲಿರುವ ಈ ಶಿಬಿರದಲ್ಲಿ ಬೆಳಿಗ್ಗೆ 9:00ರಿಂದ ಸಂಜೆ 4:30ರವರೆಗೆ ವಿವಿಧ ಸೇವೆಗಳು ಲಭ್ಯವಿರಲಿವೆ ಶಿಬಿರದಲ್ಲಿ ಹೊಸ ಆಧಾರ್ ನೋಂದಣಿ, ಹೆಸರು, ವಿಳಾಸ ಹಾಗೂ ಜನ್ಮ ದಿನಾಂಕ ತಿದ್ದುಪಡಿ ಸೇರಿದಂತೆ ವಿವಿಧ ಆಧಾರ್ ಸ
Apr 291 min read


ಏಳು ವರ್ಷಗಳ ಬಳಿಕ ಸಿಕ್ಕ ದರೋಡೆ ಪ್ರಕರಣದ ಆರೋಪಿ – ಧರ್ಮಸ್ಥಳ ಪೊಲೀಸರ ಚಾಣಾಕ್ಷ ಕಾರ್ಯಾಚರಣೆ
ಧರ್ಮಸ್ಥಳ: ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ರೆಖ್ಯಾ ಗ್ರಾಮದ ವ್ಯಾಪ್ತಿಯಲ್ಲಿ 2017ರಲ್ಲಿ ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಹಲವು ವರ್ಷಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರೆದು ಓಡಾಡುತ್ತಿದ್ದ ಪ್ರಮುಖ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 2017ರಲ್ಲಿ ನಡೆದ ಈ ಪ್ರಕರಣದಲ್ಲಿ ದುಷ್ಕರ್ಮಿಗಳ ತಂಡ ಲಾರಿಯನ್ನು ಅಡ್ಡಗಟ್ಟಿ ದರೋಡೆ ನಡೆಸಿ ಪರಾರಿಯಾಗಿತ್ತು. ಈ ಪ್ರಕರಣದಲ್ಲಿ ಬೆಂಗಳೂರಿನ ಬನಶಂಕರಿ ನಿವಾಸಿ ಮಣಿ ಅಲಿಯಾಸ್ ಮಣಿಕಂಠ (32) ಎರಡನೇ ಆರೋಪಿಯಾಗಿದ್ದ. ಕೃತ್ಯದ ನಂತರ ಜಾಮೀನು ಪಡೆದು ಹೊರಬಂದ ಆತ, ನ್ಯಾಯಾಲಯದ ವಿಚಾರಣೆಗೆ ಹಾಜ
Apr 281 min read


ಬಿಜೆಪಿ ನಾಯಕನ ಪುತ್ರನಿಂದ ಯುವತಿಗೆ ವಂಚನೆ: ಮದುವೆಯಾಗುವುದೇ ಉತ್ತಮ ಎಂದು ಹೈಕೋರ್ಟ್ ಅಭಿಪ್ರಾಯ
ಡಿಎನ್ಎ ಪರೀಕ್ಷೆಯಲ್ಲಿ ಮಗುವಿನ ತಂದೆ ದೃಢ – ಯುವತಿಗೆ ₹10,000 ಜೀವನಾಂಶ ನೀಡಲು ಸಿದ್ಧರೇ? ಎಂದು ಕೋರ್ಟ್ ಪ್ರಶ್ನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಬಿಜೆಪಿ ಮುಖಂಡನ ಪುತ್ರನ ವಿರುದ್ಧ ಕೇಳಿಬಂದ ಪ್ರೀತಿ-ವಂಚನೆ ಪ್ರಕರಣ ಇದೀಗ ಕಾನೂನು ಹಂತದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಬಿಜೆಪಿ ಮುಖಂಡ ಜಗನ್ನಿವಾಸ್ ರಾವ್ ಅವರ ಪುತ್ರ ಕೃಷ್ಣ ಜೆ. ರಾವ್, ಯುವತಿಯನ್ನು ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಗರ್ಭವತಿಯಾಗಿಸಿ ನಂತರ ವಂಚಿಸಿದ ಆರೋಪ ಎದುರಿಸುತ್ತಿದ್ದಾನೆ. ಈ ಪ್ರಕರಣವನ್ನು ರದ್ದುಪಡಿಸುವಂತೆ ಕೃಷ್ಣ ಜೆ. ರಾವ್ ಹೈಕೋರ್ಟ್ ಮೊರೆ ಹೋಗಿದ್ದು, ವಿಚಾರಣೆ ವೇಳೆ ನ್ಯಾಯಾಲಯ ಮಹತ್
Apr 231 min read


ಸುಳ್ಯ: ಸಾಲ ಮರಳಿಸುವ ನೆಪದಲ್ಲಿ ಚಿನ್ನಾಭರಣ ದೋಚಿದ ಮಹಿಳೆ ಆರೋಪಿಯನ್ನು ಬಂಧಿಸಿದ ಪೊಲೀಸರು
ಸಾಲ ಮರುಪಾವತಿಸುವ ನೆಪದಲ್ಲಿ ಮನೆಗೆ ಬಂದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿದ್ದ ಶೃತಿ ಹಾಗೂ ಆಕೆಗೆ ಸಹಕರಿಸಿದ ಪ್ರದೀಪ್ ಎಂಬುವವರನ್ನು ಸುಳ್ಯ ಪೊಲೀಸರು ಬಂಧಿಸಿದ್ದಾರೆ. ಪುಣ್ಯಶ್ರೀ ಎಂಬುವವರ ತಂದೆಯಿಂದ 6 ಲಕ್ಷ ರೂ. ಸಾಲ ಪಡೆದಿದ್ದ ಶೃತಿ, ಏಪ್ರಿಲ್ 7 ರಂದು ಹಣ ನೀಡುವ ನೆಪದಲ್ಲಿ ಅವರ ಮನೆಗೆ ಬಂದಿದ್ದರು. ಮನೆಯವರು ಕೆಲಸಕ್ಕೆ ತೆರಳಿದ್ದನ್ನು ಗಮನಿಸಿ, ಕಪಾಟಿನ ಬೀಗದ ಕೀ ಬಳಸಿ ಸುಮಾರು 62.5 ಗ್ರಾಂ ಚಿನ್ನಾಭರಣಗಳನ್ನು ಕಳವು ಮಾಡಿದ್ದರು. ಮನೆಯವರು ನೀಡಿದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, ಅವರಿಂದ ಕಳವಾದ ಸುಮಾರು 5 ಲಕ್ಷ ರೂ.
Apr 121 min read


ಯುದ್ಧದ ಬಿಸಿ: ಪುತ್ತೂರು ಬೈಪಾಸ್ನಲ್ಲಿ ಇಂಧನಕ್ಕಾಗಿ ಆಟೋ ರಿಕ್ಷಾಗಳ ಕಿಲೋಮೀಟರ್ ಉದ್ದದ ಸಾಲು
ಯುದ್ಧದ ಜಾಗತಿಕ ಪರಿಣಾಮದಿಂದಾಗಿ ಇಂಧನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ಪುತ್ತೂರು ಬೈಪಾಸ್ ರಸ್ತೆಯಲ್ಲಿ ಆಟೋ ರಿಕ್ಷಾಗಳು ಸಾಲಾಗಿ ನಿಂತಿವೆ. ಬೆಳಿಗ್ಗೆಯಿಂದಲೇ ರಿಕ್ಷಾಗಳು ಸರತಿ ಸಾಲಿನಲ್ಲಿ ನಿಂತಿರುವುದರಿಂದ ಸಂಚಾರ ದಟ್ಟಣೆ ಉಂಟಾಗಿದೆ. ಯುದ್ಧದ ಬಿಸಿ ಸ್ಥಳೀಯ ಸಾರಿಗೆಯ ಮೇಲೆ ನೇರ ಪರಿಣಾಮ ಬೀರುತ್ತಿದ್ದು, ಸಾಮಾನ್ಯ ಜನರ ದೈನಂದಿನ ಬದುಕು ಅಸ್ತವ್ಯಸ್ತಗೊಂಡಿದೆ.
Apr 31 min read
Archive
bottom of page



