top of page
News Articles
Sathyapatha News Plus


ಇರಾನ್ ಪ್ರತೀಕಾರದ ಎಚ್ಚರಿಕೆ: ಮಧ್ಯಪ್ರಾಚ್ಯದ 8 ಪ್ರಮುಖ ಸೇತುವೆಗಳ ಮೇಲೆ ದಾಳಿಗೆ ಸಂಚು; ರಹಸ್ಯ ಪಟ್ಟಿ ಬಿಡುಗಡೆ
ಅಮೆರಿಕ ತನ್ನ ಪ್ರಮುಖ ಬಿ1 ಸೇತುವೆಯನ್ನು ಧ್ವಂಸಗೊಳಿಸಿದ್ದಕ್ಕೆ ಪ್ರತಿಯಾಗಿ ಇರಾನ್ ಈಗ ಭೀಕರ ಪ್ರತೀಕಾರದ ಎಚ್ಚರಿಕೆ ನೀಡಿದೆ. ಅರಬ್ ರಾಷ್ಟ್ರಗಳಲ್ಲಿರುವ ಎಂಟು ಆಯಕಟ್ಟಿನ ಬೃಹತ್ ಸೇತುವೆಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲು ಇರಾನ್ ಸಜ್ಜಾಗಿದ್ದು, ಈ ಸಂಬಂಧಿತ ರಹಸ್ಯ ಹಿಟ್ ಲಿಸ್ಟ್ ಬಿಡುಗಡೆ ಮಾಡಿದೆ. ಕುವೈತ್, ಯುಎಇ, ಸೌದಿ ಅರೇಬಿಯಾ ಮತ್ತು ಜೋರ್ಡಾನ್ನಲ್ಲಿರುವ ಪ್ರಮುಖ ಸಂಪರ್ಕ ಸೇತುವೆಗಳ ಮೇಲೆ ದಾಳಿ ನಡೆಸುವ ಇರಾನ್ ಬೆದರಿಕೆಯಿಂದಾಗಿ ಇಡೀ ಮಧ್ಯಪ್ರಾಚ್ಯದಲ್ಲಿ ಯುದ್ಧದ ಆತಂಕ ಹೆಚ್ಚಿದೆ. ಅಮೆರಿಕದ ದಾಳಿಗೆ ತಕ್ಕ ಉತ್ತರ ನೀಡಲು ಇರಾನ್ ಈ ಮಾರಕ ಸಂಚು ರೂಪಿಸಿದೆ.
Apr 31 min read


ಔಷಧ ವಲಯದಲ್ಲಿ ಟ್ರಂಪ್ ಸಂಚಲನ: ಬ್ರಾಂಡೆಡ್ ಔಷಧಿಗಳ ಮೇಲೆ 100% ಆಮದು ಸುಂಕ ವಿಧಿಸಲು ಆದೇಶ
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬ್ರಾಂಡೆಡ್ ಔಷಧಗಳ ಮೇಲೆ ಶೇ. 100ರಷ್ಟು ಭಾರಿ ಸುಂಕ ವಿಧಿಸುವ ಮಹತ್ವದ ಕಾರ್ಯಾದೇಶಕ್ಕೆ ಸಹಿ ಹಾಕಿದ್ದಾರೆ. ವಿದೇಶಗಳಿಂದ ಆಮದು ಮಾಡಿಕೊಳ್ಳುವ ಪೇಟೆಂಟ್ ಹೊಂದಿರುವ ಔಷಧಗಳ ಮೇಲೆ ಈ ಸುಂಕ ಅನ್ವಯವಾಗಲಿದ್ದು, ಪ್ರಮುಖವಾಗಿ ಚೀನಾದಂತಹ ದೇಶಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡುವುದು ಇದರ ಉದ್ದೇಶವಾಗಿದೆ. ಈ ಕಟ್ಟುನಿಟ್ಟಿನ ಕ್ರಮದ ಮೂಲಕ ಔಷಧ ತಯಾರಿಕಾ ಕಂಪನಿಗಳು ತಮ್ಮ ಉತ್ಪಾದನಾ ಘಟಕಗಳನ್ನು ಅಮೆರಿಕಕ್ಕೆ ಸ್ಥಳಾಂತರಿಸುವಂತೆ ಒತ್ತಡ ಹೇರಲಾಗುತ್ತಿದೆ. ಇದರಿಂದ ದೇಶದೊಳಗೆ ಉದ್ಯೋಗಾವಕಾಶಗಳನ್ನು ಹೆಚ್ಚಿಸುವ ಮತ್ತು ಸ್ಥಳೀಯವಾಗಿ ಔಷಧ ಉತ್ಪಾದನೆಗೆ ಹೆಚ್ಚಿನ
Apr 31 min read


ಇರಾನ್-ಇಸ್ರೇಲ್ ಯುದ್ಧ: ಅಮೆರಿಕದ ಬೆಂಬಲದೊಂದಿಗೆ ಮುಂದುವರೆದ ಕ್ಷಿಪಣಿ ದಾಳಿ; ತೈಲ ರಾಜತಾಂತ್ರಿಕತೆ ಪ್ರದರ್ಶಿಸಿದ ಟ್ರಂಪ್
ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಕರಾಜ್ನ ಬಿ1 ಸೇತುವೆಯ ಧ್ವಂಸವು ಯುದ್ಧದ ಭೀಕರತೆಯನ್ನು ಎತ್ತಿ ತೋರಿಸಿದೆ. ಕ್ಷಿಪಣಿ ದಾಳಿಯಿಂದಾಗಿ ಇಡೀ ಪ್ರಾಂತ್ಯ ಕತ್ತಲಲ್ಲಿ ಮುಳುಗಿದ್ದು, ಸ್ಥಳೀಯರ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಮತ್ತೊಂದೆಡೆ, ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಯು ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಸಂಚಲನ ಮೂಡಿಸಿದೆ. ಹಾರ್ಮುಜ್ ಜಲಸಂಧಿಯ ಹಂಗು ತಮಗಿಲ್ಲ ಎಂದು ಸಾರುವ ಮೂಲಕ, ಅವರು ಅಮೆರಿಕದ ತೈಲ ಸ್ವಾವಲಂಬನೆಯನ್ನು ಅಸ್ತ್ರವಾಗಿ ಬಳಸಿ ಇತರ ರಾಷ್ಟ್ರಗಳಿಗೆ ಪರೋಕ್ಷ ಎಚ್ಚರಿಕೆ ನೀಡಿದ್ದಾರೆ.
Apr 31 min read


ಡಾಲರ್ ಎದುರು ರೂಪಾಯಿ ಭರ್ಜರಿ ಚೇತರಿಕೆ: 12 ವರ್ಷಗಳಲ್ಲೇ ದಾಖಲೆಯ ಏರಿಕೆ!
ಭಾರತೀಯ ರೂಪಾಯಿ ಅಮೆರಿಕನ್ ಡಾಲರ್ ಎದುರು ಕಳೆದ 12 ವರ್ಷಗಳಲ್ಲೇ ಒಂದೇ ದಿನದಲ್ಲಿ ಅತಿದೊಡ್ಡ ಏರಿಕೆಯನ್ನು ದಾಖಲಿಸುವ ಮೂಲಕ ಗಮನಸೆಳೆದಿದೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ರೂಪಾಯಿ ಮೌಲ್ಯದ ಮೇಲೆ ನಡೆಯುವ ಊಹಾಪೋಹದ ವಹಿವಾಟುಗಳಿಗೆ ಕಠಿಣ ಕಡಿವಾಣ ಹಾಕಿದ ಬೆನ್ನಲ್ಲೇ ಈ ಬದಲಾವಣೆ ಕಂಡಬಂದಿದೆ. ಆರ್ಬಿಐನ ಈ ಸಮಯೋಚಿತ ಕ್ರಮದಿಂದಾಗಿ ರೂಪಾಯಿ ಮೌಲ್ಯವು ಒಂದೇ ದಿನದಲ್ಲಿ ಸುಮಾರು 1.8% ನಷ್ಟು ಭರ್ಜರಿ ಏರಿಕೆ ಕಂಡಿದೆ. ಮಾರ್ಚ್ 31ರಂದು ಪ್ರತಿ ಡಾಲರ್ಗೆ 95 ರೂಪಾಯಿ ಗಡಿ ದಾಟಿದ್ದ ಮೌಲ್ಯವು, ಇಂದು ಇಳಿಕೆ ಕಂಡು 93.14 ರೂಪಾಯಿ ಅಸುಪಾಸಿನಲ್ಲಿ ವ್ಯವಹಾರ ನಡೆಸುತ್ತಿದೆ. ವಿದೇಶಿ ಹೂಡಿಕೆದ
Apr 21 min read


ಜೈ ತುಳುನಾಡು ಬೆಂಗಳೂರು ಘಟಕಕ್ಕೆ ನೂತನ ಸಮಿತಿ ಆಯ್ಕೆ: ವಿನಯ್ ಮಣಿಯಾನಮನೆ ನೂತನ ಅಧ್ಯಕ್ಷ
ಬೆಂಗಳೂರಿನಲ್ಲಿ ನೆಲೆಸಿರುವ ತುಳುನಾಡಿನ ಜನರನ್ನು ಒಗ್ಗೂಡಿಸಿ, ತುಳು ಭಾಷೆಗೆ ರಾಜ್ಯದ ಅಧಿಕೃತ ಭಾಷಾ ಮಾನ್ಯತೆಗಾಗಿ ಶ್ರಮಿಸುತ್ತಿರುವ 'ಜೈ ತುಳುನಾಡು (ರಿ.)' ಬೆಂಗಳೂರು ಘಟಕದ 2026-27ನೇ ಸಾಲಿನ ವಾರ್ಷಿಕ ಮಹಾಸಭೆಯು ಮಾ. 29ರಂದು ಮೆಜೆಸ್ಟಿಕ್ ಸಮೀಪದ ಸ್ವಾಗತ್ ಹೋಟೆಲ್ನಲ್ಲಿ ಯಶಸ್ವಿಯಾಗಿ ಜರುಗಿತು. ಸಭೆಯಲ್ಲಿ ಸಂಘಟನೆಯ ಸಮಾಜಮುಖಿ ಕಾರ್ಯಗಳ ಕುರಿತು ಸುದೀರ್ಘ ಚರ್ಚೆ ನಡೆಸಲಾಯಿತು. ಈ ಮಹಾಸಭೆಯಲ್ಲಿ ಮುಂದಿನ ಸಾಲಿನ ನೂತನ ಸಮಿತಿಯನ್ನು ರಚಿಸಲಾಗಿದ್ದು, ಪದಾಧಿಕಾರಿಗಳ ಆಯ್ಕೆಗೆ ಚುನಾವಣೆ ನಡೆಸಲಾಯಿತು. ಸಂಘಟನೆಯ ನೂತನ ಅಧ್ಯಕ್ಷರಾಗಿ ವಿನಯ್ ಮಣಿಯಾನಮನೆ ಅವರು ಬಹುಮತದಿಂದ ಆಯ್ಕೆಯಾದರು. ವ
Apr 21 min read


ಬೆಂಗಳೂರಿನ ಪಬ್ನಲ್ಲಿ 5 ರೂಪಾಯಿಯ ‘ಬೋಟಿ’ಗೆ 150 ರೂ. ಬಿಲ್: ಯುವಕನ ಪೋಸ್ಟ್ ವೈರಲ್!
ಬೆಂಗಳೂರಿನ ಐಷಾರಾಮಿ ಪಬ್ಗಳ ದುಬಾರಿ ಬೆಲೆಯ ಬಗ್ಗೆ ಯುವಕನೋರ್ವ ಹಂಚಿಕೊಂಡ ಪೋಸ್ಟ್ ಈಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ಚರ್ಚೆಗೆ ನಾಂದಿ ಹಾಡಿದೆ. ಕೇವಲ 5 ರೂಪಾಯಿಗೆ ಸಿಗುವ ಸಾಮಾನ್ಯ 'ಬೋಟಿ'ಗೆ ಪಬ್ನಲ್ಲಿ 'ಚಿಲ್ಲಿ ಡಸ್ಟೆಡ್ ಗೋಲ್ಡ್ ಫಿಂಗರ್ಸ್' ಎಂದು ಹೆಸರಿಟ್ಟು, ಬರೋಬ್ಬರಿ 150 ರೂಪಾಯಿ ವಸೂಲಿ ಮಾಡಲಾಗಿದೆ. ಈ ವಂಚನೆಯನ್ನು ಕಂಡು ಹತಾಶನಾದ ಅರುಣ್ ರಾಜ್ ಪತ್ತಾರ್ ಎಂಬ ಯುವಕ, "ಇದಕ್ಕೆ 150 ರೂ. ನೀಡಿದ ಮೊದಲ ವ್ಯಕ್ತಿ ನಾನೇ ಇರಬೇಕು" ಎಂದು ಎಕ್ಸ್ (X) ಖಾತೆಯಲ್ಲಿ ವ್ಯಂಗ್ಯವಾಡಿದ್ದಾನೆ. ಈ ಪೋಸ್ಟ್ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಪಬ್ಗಳ ಲೂಟಿಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್
Apr 21 min read


ಇಂದಿನಿಂದ ದೇಶಾದ್ಯಂತ E20 ಪೆಟ್ರೋಲ್ ಕಡ್ಡಾಯ: ಹಳೆಯ ವಾಹನ ಸವಾರರು ಎಚ್ಚರ!
ದೇಶದ ಇಂಧನ ಸ್ವಾವಲಂಬನೆ ಹೆಚ್ಚಿಸಲು ಇಂದಿನಿಂದ (ಏಪ್ರಿಲ್ 1) ಎಲ್ಲಾ ಪೆಟ್ರೋಲ್ ಬಂಕ್ಗಳಲ್ಲಿ ಶೇ. 20ರಷ್ಟು ಎಥೆನಾಲ್ ಮಿಶ್ರಿತ 'E20' ಪೆಟ್ರೋಲ್ ಮಾರಾಟವನ್ನು ಕೇಂದ್ರ ಸರ್ಕಾರ ಕಡ್ಡಾಯಗೊಳಿಸಿದೆ. ಕಚ್ಚಾ ತೈಲ ಆಮದು ಕಡಿಮೆ ಮಾಡುವುದು ಮತ್ತು ರೈತರ ಆದಾಯ ಹೆಚ್ಚಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಇದು ಪರಿಸರ ಮಾಲಿನ್ಯವನ್ನು ಗಣನೀಯವಾಗಿ ತಗ್ಗಿಸಲಿದ್ದು, ದೇಶದ ಆರ್ಥಿಕತೆಗೆ ಬಲ ನೀಡಲಿದೆ. ಆದರೆ, 2023ಕ್ಕಿಂತ ಮೊದಲು ತಯಾರಾದ ಹಳೆಯ ವಾಹನಗಳ ಮಾಲೀಕರಿಗೆ ಇದು ಸ್ವಲ್ಪ ಆತಂಕಕಾರಿ ವಿಷಯವಾಗಿದೆ. ಹಳೆಯ ಎಂಜಿನ್ಗಳಲ್ಲಿರುವ ರಬ್ಬರ್ ಸೀಲ್ಗಳು ಮತ್ತು ಪೈಪ್ಗಳು ಕೇವಲ ಶುದ್ಧ ಪೆಟ್ರ
Apr 21 min read


ಸಾರಿಗೆ ನೌಕರರಿಗೆ ಸಿಹಿ ಸುದ್ದಿ :ಏಪ್ರಿಲ್ 6ಕ್ಕೆ ಮಹತ್ವದ ಸಭೆ
ರಾಜ್ಯ ಬಜೆಟ್ ಘೋಷಣೆಯಂತೆ ಸಾರಿಗೆ ನೌಕರರ ವೇತನ ಹೆಚ್ಚಿಸಲು ಸರ್ಕಾರ ಮುಂದಾಗಿದ್ದು, ಈ ನಿಟ್ಟಿನಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಅಕ್ರಂಪಾಷ ನೇತೃತ್ವದಲ್ಲಿ ವೇತನ ಹೆಚ್ಚಳದ ಸಾಧಕ-ಬಾಧಕಗಳ ಕುರಿತು ಚರ್ಚಿಸಲು ವಿಶೇಷ ಸಭೆ ಆಯೋಜಿಸಲಾಗಿದೆ. ಈ ನಿರ್ಧಾರವು ಸಾವಿರಾರು ಸಾರಿಗೆ ನೌಕರರಲ್ಲಿ ಹೊಸ ಭರವಸೆಯನ್ನು ಮೂಡಿಸಿದ್ದು, ಆರ್ಥಿಕ ಸುಧಾರಣೆಯ ನಿರೀಕ್ಷೆಯಿದೆ. ಬರುವ ಏಪ್ರಿಲ್ 6ರಂದು ನೌಕರರ ಸಂಘಟನೆಗಳ ಪದಾಧಿಕಾರಿಗಳೊಂದಿಗೆ ಎಂಡಿ ಸಮಾಲೋಚನೆ ನಡೆಸಲಿದ್ದಾರೆ. ಅಂದೇ ವೇತನ ಪರಿಷ್ಕರಣೆಯ ಬಗ್ಗೆ ಅಂತಿಮ ತೀರ್ಮಾನ ಹೊರಬೀಳುವ ಸಾಧ್ಯತೆಯಿದೆ. ಸಾರಿಗೆ ಇಲಾಖ
Apr 21 min read


ಮಸೀದಿಯಲ್ಲಿ ಹರಕೆ ಹುಂಡಿ ಕಳವು: ಸಿಸಿಟಿವಿಯಲ್ಲಿ ಆರೋಪಿ ಸೆರೆ
ಮಾರ್ಚ್ 30ರಂದು ಮಧ್ಯಾಹ್ನ ಸುಮಾರು 12 ಗಂಟೆಗೆ ಮಸೀದಿಯೊಂದರ ಆವರಣದಲ್ಲಿ ಹರಕೆ ಹುಂಡಿಯನ್ನು ಕಳವು ಮಾಡಿರುವ ಘಟನೆ ನಡೆದಿದೆ. ಅಪರಿಚಿತ ವ್ಯಕ್ತಿಯೊಬ್ಬ ಮಸೀದಿಯೊಳಗೆ ಪ್ರವೇಶಿಸಿ, ಯಾರೂ ಇಲ್ಲದ ಸಮಯ ನೋಡಿ ಹುಂಡಿಯೊಂದಿಗೆ ಪರಾರಿಯಾಗಿದ್ದಾನೆ. ಈ ಕೃತ್ಯದಿಂದ ಮಸೀದಿಯ ಆಡಳಿತ ಮಂಡಳಿ ಹಾಗೂ ಭಕ್ತರು ಆತಂಕಕ್ಕೊಳಗಾಗಿದ್ದಾರೆ. ಕಳ್ಳತನದ ದೃಶ್ಯಗಳು ಮಸೀದಿಯ ಸಿಸಿಟಿವಿ ಕ್ಯಾಮೆರಾದಲ್ಲಿ ಸ್ಪಷ್ಟವಾಗಿ ದಾಖಲಾಗಿವೆ. ಆರೋಪಿಯು ನೀಲಿ ಬಣ್ಣದ ಟಿ-ಶರ್ಟ್ ಮತ್ತು ಬಿಳಿ ಪ್ಯಾಂಟ್ ಧರಿಸಿರುವುದು ಕಂಡುಬಂದಿದ್ದು, ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸಿಸಿಟಿವಿ ಆಧಾರದ ಮೇಲೆ ಪೊಲೀಸರು
Apr 21 min read


ಇಂದು (ಏ. 01)ಎಣ್ಮೂರು ಶ್ರೀ ನಾಗಬ್ರಹ್ಮ ಕೋಟಿ-ಚೆನ್ನಯ್ಯ ಆದಿ ಬೈದರ್ಕಳ ನೇಮೋತ್ಸವ
ಇತಿಹಾಸ ಪ್ರಸಿದ್ಧ ಕಾರಣಿಕ ಶಕ್ತಿಗಳಾದ ಶ್ರೀ ನಾಗಬ್ರಹ್ಮ ಕೋಟಿ ಚೆನ್ನಯ್ಯ ಆದಿ ಬೈದರುಗಳ ನೇಮೋತ್ಸವವು ಏಪ್ರಿಲ್ 1ರಂದು ಎಣ್ಣೂರು ಕಟ್ಟಬೀಡು ಮತ್ತು ಗರಡಿಯಲ್ಲಿ ಅತ್ಯಂತ ಸಡಗರದಿಂದ ನಡೆಯಿತು. ಆನುವಂಶಿಕ ಆಡಳಿತದಾರರಾದ ಕಟ್ಟಬೀಡು ರಾಮಕೃಷ್ಣ ಶೆಟ್ಟಿಯವರ ನೇತೃತ್ವದಲ್ಲಿ ನಡೆದ ಈ ಧಾರ್ಮಿಕ ಕಾರ್ಯಕ್ರಮದಲ್ಲಿ ನಾಗ ತಂಬಿಲ, ಮುಹೂರ್ತ ತೋರಣ ಮತ್ತು ಭಂಡಾರ ಏರುವಿಕೆ ಶಾಸ್ತ್ರೋಕ್ತವಾಗಿ ಜರುಗಿದವು. ಈ ಪುಣ್ಯ ಕಾರ್ಯಕ್ರಮಕ್ಕೆ ಜಿಲ್ಲೆ ಹಾಗೂ ಹೊರರಾಜ್ಯಗಳಿಂದ ಸಾವಿರಾರು ಭಕ್ತರು ಆಗಮಿಸಿ ದೈವಗಳ ದರ್ಶನ ಪಡೆದರು. ರಾತ್ರಿ ದೈವಗಳ ಗರಡಿ ಇಳಿಯುವಿಕೆ ಮತ್ತು ಕಿನ್ನಿದಾರು ದರ್ಶನ ರಂಗಸ್ಥಳದಲ್ಲಿ ಸಾರವ
Apr 11 min read


ವಿದ್ಯಾರ್ಥಿಗಳಿಗೆ ಕೆಎಸ್ಆರ್ಟಿಸಿ ಸಿಹಿ ಸುದ್ದಿ: ಏಪ್ರಿಲ್ 10ರವರೆಗೆ ಬಸ್ ಪಾಸ್ ಅವಧಿ ವಿಸ್ತರಣೆ
ರಾಜ್ಯದ 1 ರಿಂದ 9ನೇ ತರಗತಿಯ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಮಹತ್ವದ ವಿನಾಯಿತಿ ನೀಡಿದೆ. 2025-26ನೇ ಸಾಲಿನ ಹಳೆಯ ಬಸ್ ಪಾಸ್ಗಳ ಮಾನ್ಯತಾ ಅವಧಿಯನ್ನು ಏಪ್ರಿಲ್ 10ರವರೆಗೆ ವಿಸ್ತರಿಸಿ ಅಧಿಕೃತ ಆದೇಶ ಹೊರಡಿಸಲಾಗಿದೆ. ವಾರ್ಷಿಕ ಪರೀಕ್ಷೆಗಳ ಸಮಯದಲ್ಲಿ ಸಾರಿಗೆ ಸಮಸ್ಯೆಯಾಗದಂತೆ ತಡೆಯಲು ಈ ಕ್ರಮ ಕೈಗೊಳ್ಳಲಾಗಿದ್ದು, ವಿದ್ಯಾರ್ಥಿಗಳು ಯಾವುದೇ ಆತಂಕವಿಲ್ಲದೆ ಶಾಲಾ ಪರೀಕ್ಷೆಗಳಿಗೆ ಹಾಜರಾಗಲು ಅನುಕೂಲವಾಗಲಿದೆ. ಈ ಆದೇಶದನ್ವಯ, ವಿದ್ಯಾರ್ಥಿಗಳು ತಮ್ಮ ಬಳಿ ಇರುವ ಹಳೆಯ ಪಾಸ್ಗಳನ್ನೇ ತೋರಿಸಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ. ಇದರಿಂದ ಗ್ರಾಮೀಣ ಭಾಗದ ಸಾವಿರಾರು ವ
Apr 11 min read


ಕುದ್ಮಾರು ಜಂಕ್ಷನ್: ಕಾರು-ಬೈಕ್ ಭೀಕರ ಡಿಕ್ಕಿ
ಕಡಬ ತಾಲೂಕಿನ ಕಾಣಿಯೂರು ರಸ್ತೆಯ ಕುದ್ಮಾರು ಬಳಿ ಬುಧವಾರ ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದೆ. ಗಾಯಗೊಂಡ ಸವಾರರನ್ನು ತಕ್ಷಣವೇ ಪುತ್ತೂರಿನ ಆಸ್ಪತ್ರೆಗೆ ದಾಖಲಿಸಿ, ತುರ್ತು ಚಿಕಿತ್ಸೆ ನೀಡಲಾಗುತ್ತಿದೆ.
Apr 11 min read


ಜಮ್ಮು-ಕಾಶ್ಮೀರದ ಗಂಡೇಬಲ್ನಲ್ಲಿ ‘ಆಪರೇಷನ್ ಅರಹಮಾ’: ಎನ್ಕೌಂಟರ್ನಲ್ಲಿ ಪಾಕ್ ಉಗ್ರ ಹತ, ಮೂವರ ಬಂಧನ
ಜಮ್ಮು-ಕಾಶ್ಮೀರದ ಗಂಡೇಬಲ್ ಜಿಲ್ಲೆಯಲ್ಲಿ ಭಾರತೀಯ ಸೇನೆಯು 'ಆಪರೇಷನ್ ಅರಹಮಾ' ಕಾರ್ಯಾಚರಣೆ ನಡೆಸುತ್ತಿದೆ. ಗುರುವಾರ ರಾತ್ರಿಯಿಡೀ ನಡೆದ ಭೀಕರ ಎನ್ಕೌಂಟರ್ನಲ್ಲಿ ಓರ್ವ ಪಾಕಿಸ್ತಾನಿ ಉಗ್ರ ಹತ್ಯೆಯಾಗಿದ್ದಾನೆ ಎಂದು ಸೇನೆ ತಿಳಿಸಿದೆ. ಉಗ್ರರು ಏಕಾಏಕಿ ಗುಂಡಿನ ದಾಳಿ ಆರಂಭಿಸಿದಾಗ, ಸೇನೆಯು ತಕ್ಕ ಪ್ರತ್ಯುತ್ತರ ನೀಡುವ ಮೂಲಕ ಉಗ್ರರನ್ನು ಮಟ್ಟಹಾಕಿದೆ. ಈ ಕಾರ್ಯಾಚರಣೆಯಲ್ಲಿ ಓರ್ವ ಉಗ್ರ ಮೃತಪಟ್ಟಿದ್ದರೆ, ಇತರ ಮೂವರು ಉಗ್ರರನ್ನು ಸೇನಾಪಡೆಗಳು ಬಂಧಿಸಿವೆ. ಪ್ರಸ್ತುತ ಗಂಡೇಬಲ್ ವ್ಯಾಪ್ತಿಯಲ್ಲಿ ಶೋಧ ಕಾರ್ಯ ಮುಂದುವರಿದಿದೆ ಎಂದು ಶ್ರೀನಗರದ ಚಿನಾರ್ ಕಾರ್ಪ್ಸ್ ಮಾಹಿತಿ ನೀಡಿದೆ. ಗಡಿ ಭಾಗದಲ್
Apr 11 min read


ಇಸ್ರೇಲ್ ಮೇಲೆ ಇರಾನ್ ಕ್ಷಿಪಣಿ ದಾಳಿ: ಕ್ಷಿಪಣಿಗಳ ಮೇಲೆ 'ಭಾರತಕ್ಕೆ ಧನ್ಯವಾದ' ಸಂದೇಶ ವೈರಲ್
ಇಸ್ರೇಲ್ ಮೇಲೆ ಇರಾನ್ ಇತ್ತೀಚೆಗೆ ನಡೆಸಿದ ಕ್ಷಿಪಣಿ ದಾಳಿಯ ಬೆನ್ನಲ್ಲೇ ಒಂದು ಕುತೂಹಲಕಾರಿ ಬೆಳವಣಿಗೆ ಕಂಡುಬಂದಿದೆ. ದಾಳಿಗೆ ಬಳಸಲಾದ ಕ್ಷಿಪಣಿಗಳ ಮೇಲೆ 'ಭಾರತದ ಜನರಿಗೆ ಧನ್ಯವಾದಗಳು' ಎಂದು ಬರೆಯಲಾಗಿದ್ದು, ಮುಂಬೈನಲ್ಲಿರುವ ಇರಾನ್ ಕಾನ್ಸುಲೇಟ್ ಕಚೇರಿ ಈ ಫೋಟೋಗಳನ್ನು ಸಾಮಾಜಿಕ ಜಾಲತಾಣ 'ಎಕ್ಸ್'ನಲ್ಲಿ ಹಂಚಿಕೊಂಡಿದೆ. ಭಾರತದ ಜೊತೆಗೆ ಪಾಕಿಸ್ತಾನ, ಸ್ಪೇನ್ ಮತ್ತು ಜರ್ಮನಿ ದೇಶಗಳಿಗೂ ಇರಾನ್ ಈ ಮೂಲಕ ಕೃತಜ್ಞತೆ ಸಲ್ಲಿಸಿದೆ. ಮತ್ತೊಂದೆಡೆ, ಆರ್ಥಿಕ ಮತ್ತು ವ್ಯೂಹಾತ್ಮಕ ದೃಷ್ಟಿಯಿಂದ ಮಹತ್ವದ ಹೊರ್ಮುಜ್ ಜಲಸಂಧಿಯನ್ನು ಭಾರತ, ಚೀನಾ ಮತ್ತು ರಷ್ಯಾ ಸೇರಿದಂತೆ ಐದು ರಾಷ್ಟ್ರಗಳಿಗೆ ಮುಕ್ತಗೊಳ
Apr 11 min read


ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ: ಇಂದು (ಏ.1) ಗೊನೆ ಮುಹೂರ್ತ, ಏ.10ರಿಂದ ಜಾತ್ರೋತ್ಸವ ಆರಂಭ
ಪುತ್ತೂರಿನ ಐತಿಹಾಸಿಕ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಸಂಭ್ರಮ ಆರಂಭಗೊಂಡಿದೆ. ಇದರ ಅಂಗವಾಗಿ ಏಪ್ರಿಲ್ 1ರಂದು ಬೆಳಿಗ್ಗೆ 9.15ರ ವೃಷಭ ಲಗ್ನದಲ್ಲಿ ಧಾರ್ಮಿಕ ವಿಧಿವಿಧಾನಗಳೊಂದಿಗೆ ಗೊನೆ ಮುಹೂರ್ತ ನೆರವೇರಲಿದೆ. ನಂತರ ಮಧ್ಯಾಹ್ನ ಭಕ್ತಾದಿಗಳಿಗೆ ಕೊಟ್ಟಿಬೆಟ್ಟು ಏಳ್ಳಾಡುಗುತ್ತು ವತಿಯಿಂದ ಅನ್ನಸಂತರ್ಪಣೆ ನಡೆಯಲಿದೆ. ಏಪ್ರಿಲ್ 10ರಂದು ಭವ್ಯ ಧ್ವಜಾರೋಹಣದೊಂದಿಗೆ ಅಧಿಕೃತವಾಗಿ ಜಾತ್ರೆಗೆ ಚಾಲನೆ ದೊರೆಯಲಿದ್ದು, ಪ್ರತಿದಿನ ಸಂಜೆ ಪೇಟೆ ಸವಾರಿ ಸೇರಿದಂತೆ ವಿವಿಧ ಸಾಂಸ್ಕೃತಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ. ಪುತ್ತೂರಿನ ಆರಾಧ್ಯ ದೈವದ ಈ ಮಹೋತ್ಸವಕ್ಕೆ ಸಾ
Apr 11 min read


ಮೊಬೈಲ್ ಗ್ರಾಹಕರಿಗೆ ಬಿಗ್ ನ್ಯೂಸ್: ಇನ್ನು ಮುಂದೆ 28ರ ಬದಲು 30 ದಿನಗಳ ರೀಚಾರ್ಜ್ ಪ್ಲಾನ್ ಲಭ್ಯ!
ದೇಶದ ಮೊಬೈಲ್ ಬಳಕೆದಾರರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ. ಸದ್ಯ ಬಹುತೇಕ ಟೆಲಿಕಾಂ ಕಂಪನಿಗಳು 28 ದಿನಗಳ ವ್ಯಾಲಿಡಿಟಿ ನೀಡುತ್ತಿದ್ದು, ಇದರಿಂದ ಗ್ರಾಹಕರು ವರ್ಷಕ್ಕೆ 13 ಬಾರಿ ರೀಚಾರ್ಜ್ ಮಾಡಬೇಕಾದ ಅನಿವಾರ್ಯತೆ ಇತ್ತು. ಈ ಬಗ್ಗೆ ಸಂಸದ ರಾಘವ್ ಚಡ್ಡಾ ರಾಜ್ಯಸಭೆಯಲ್ಲಿ ಧ್ವನಿ ಎತ್ತಿದ್ದರು. ಇದರ ಬೆನ್ನಲ್ಲೇ ಕೇಂದ್ರ ಟೆಲಿಕಾಂ ಸಚಿವ ಜ್ಯೋತಿರಾಧಿತ್ಯ ಸಿಂಧಿಯಾ ಅವರು, ಎಲ್ಲಾ ಆಪರೇಟರ್ಗಳು ಕಡ್ಡಾಯವಾಗಿ 30 ದಿನಗಳ ರೀಚಾರ್ಜ್ ಆಯ್ಕೆಯನ್ನು ಗ್ರಾಹಕರಿಗೆ ನೀಡಬೇಕು ಎಂದು ಸೂಚನೆ ನೀಡಿದ್ದಾರೆ. ಈ ಹೊಸ ಸೂಚನೆಯಿಂದಾಗಿ ಗ್ರಾಹಕರಿಗೆ ತಮ್ಮ ಅನುಕೂಲಕ್ಕೆ ತಕ್ಕಂತೆ ತಿಂಗಳ ಪೂರ್ತಿ ಅನ್ವ
Mar 311 min read


ಹಾರ್ಮುಜ್ ಜಲಸಂಧಿಯಲ್ಲಿ ಭಾರತದ 18 ಹಡಗುಗಳು ಬಂದಿ: ದೇಶದಲ್ಲಿ ಇಂಧನ ಅಭಾವದ ಭೀತಿ!
ಪಶ್ಚಿಮ ಏಷ್ಯಾದಲ್ಲಿ ಉಲ್ಬಣಿಸಿರುವ ಅಮೆರಿಕ-ಇರಾನ್ ಯುದ್ಧವು ಭಾರತದ ಇಂಧನ ಭದ್ರತೆಯ ಮೇಲೆ ನೇರ ಪರಿಣಾಮ ಬೀರಿದೆ. ವಿಶ್ವದ ಅತ್ಯಂತ ಸೂಕ್ಷ್ಮ ಸಮುದ್ರ ಮಾರ್ಗವಾದ ಹಾರ್ಮುಜ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ 18 ಬೃಹತ್ ಹಡಗುಗಳು ಸಿಲುಕಿಕೊಂಡಿದ್ದು, ಇಂಧನ ಸಾಗಾಟ ಸ್ಥಗಿತಗೊಂಡಿದೆ ಎಂದು ಕೇಂದ್ರ ನೌಕಾಯಾನ ಸಚಿವಾಲಯದ ಮೂಲಗಳು ತಿಳಿಸಿವೆ. ಈ ಹಡಗುಗಳಲ್ಲಿ ಭಾರತದ ಅಡುಗೆ ಮನೆಗಳಿಗೆ ಅತ್ಯಗತ್ಯವಾದ ಎಲ್ಪಿಜಿ (LPG) ಮತ್ತು ದೇಶದ ಇಂಧನ ಅಗತ್ಯದ ಬೆನ್ನೆಲುಬಾಗಿರುವ ಕಚ್ಚಾ ತೈಲ (Crude Oil) ಹಾಗೂ ಪೆಟ್ರೋಲಿಯಂ ಉತ್ಪನ್ನಗಳಿವೆ. ಯುದ್ಧದ ಹಿನ್ನೆಲೆಯಲ್ಲಿ ಈ ಮಾರ್ಗದಲ್ಲಿ ಹಡಗುಗಳ ಸಂಚಾರಕ್ಕ
Mar 311 min read


ಇಂದಿನ ಚಿನ್ನದ ದರ ಎಷ್ಟಿದೆ ಚೆಕ್ ಮಾಡಿ
ಇಂದು (ಮಾರ್ಚ್ 31, 2026) ಕರ್ನಾಟಕದಲ್ಲಿ ಚಿನ್ನದ ಬೆಲೆ ದಿಢೀರ್ ಏರಿಕೆ ಕಂಡಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ಇಂದಿನ ತಾಜಾ ದರಗಳ ವಿವರ ಇಲ್ಲಿದೆ: ಇಂದಿನ ಚಿನ್ನದ ಬೆಲೆ (ಪ್ರತಿ 1 ಗ್ರಾಂಗೆ): 24 ಕ್ಯಾರೆಟ್ (ಅಪರಂಜಿ): ₹14,929 22 ಕ್ಯಾರೆಟ್ (ಆಭರಣ ಚಿನ್ನ): ₹13,685 18 ಕ್ಯಾರೆಟ್: ₹11,197 ಬೆಲೆ ಏರಿಕೆ: ನಿನ್ನೆಗಿಂತ ಇಂದು ಚಿನ್ನದ ಬೆಲೆಯಲ್ಲಿ ಗಣನೀಯ ಏರಿಕೆ ಕಂಡುಬಂದಿದೆ. 24 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹14,929 ಕ್ಕೆ ತಲುಪಿದೆ. ಬೆಳ್ಳಿ ದರ: ಬೆಳ್ಳಿ ಬೆಲೆಯಲ್ಲೂ ಭಾರಿ ಏರಿಕೆ ಕಂಡಿದ್ದು, ಪ್ರತಿ ಕೆ.ಜಿಗೆ ₹2.5 ಲಕ್ಷದ ಗಡಿ ತಲುಪಿದೆ. ಪ
Mar 311 min read
Archive
bottom of page



