top of page
News Articles
Sathyapatha News Plus


ಹೆಚ್ಚುತ್ತಿರುವ ಬಿಸಿಲ ಬೇಗೆ: ದೇಶಾದ್ಯಂತ ಹವಾಮಾನ ಇಲಾಖೆ ಎಚ್ಚರಿಕೆ
ಭಾರತದಾದ್ಯಂತ ಬೇಸಿಗೆಯ ತಾಪಮಾನವು ತೀವ್ರವಾಗಿ ಏರುತ್ತಿದ್ದು, ಮುಂಬರುವ ತಿಂಗಳುಗಳಲ್ಲಿ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುವ ಸಾಧ್ಯತೆಯಿದೆ. ಭಾರತೀಯ ಹವಾಮಾನ ಇಲಾಖೆಯ (IMD) ವರದಿಯಂತೆ, ರಾಜಸ್ಥಾನ, ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರ ಸೇರಿದಂತೆ ದೇಶದ ಬಹುತೇಕ ಭಾಗಗಳಲ್ಲಿ ತಾಪಮಾನವು 40°C ನಿಂದ 44°C ವರೆಗೆ ತಲುಪಿದೆ. ವಾಯುವ್ಯ ಮತ್ತು ಪೂರ್ವ ಭಾರತದ ರಾಜ್ಯಗಳಲ್ಲಿ ಉಷ್ಣ ಅಲೆಯ ತೀವ್ರತೆ ಹೆಚ್ಚಿದ್ದು, ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ವಿಶ್ವ ಹವಾಮಾನ ಸಂಸ್ಥೆಯು (WMO) ಮೇ ನಿಂದ ಜುಲೈ ಅವಧಿಯಲ್ಲಿ ಜಾಗತಿಕ ತಾಪಮಾನವು ಸಾಮಾನ್ಯಕ್ಕಿಂತ ಹೆಚ್ಚಿರಲಿದೆ ಎಂದು ಮುನ್ಸೂಚನೆ ನೀಡಿದ
Apr 271 min read


ಹೆಚ್ಚುತ್ತಿರುವ ಬಿಸಿಲ ಬೇಗೆ: ದೇಶಾದ್ಯಂತ ಹವಾಮಾನ ಇಲಾಖೆ ಎಚ್ಚರಿಕೆ
ಭಾರತದಾದ್ಯಂತ ಬೇಸಿಗೆಯ ತಾಪಮಾನವು ತೀವ್ರವಾಗಿ ಏರುತ್ತಿದ್ದು, ಮುಂಬರುವ ತಿಂಗಳುಗಳಲ್ಲಿ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುವ ಸಾಧ್ಯತೆಯಿದೆ. ಭಾರತೀಯ ಹವಾಮಾನ ಇಲಾಖೆಯ (IMD) ವರದಿಯಂತೆ, ರಾಜಸ್ಥಾನ, ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರ ಸೇರಿದಂತೆ ದೇಶದ ಬಹುತೇಕ ಭಾಗಗಳಲ್ಲಿ ತಾಪಮಾನವು 40°C ನಿಂದ 44°C ವರೆಗೆ ತಲುಪಿದೆ. ವಾಯುವ್ಯ ಮತ್ತು ಪೂರ್ವ ಭಾರತದ ರಾಜ್ಯಗಳಲ್ಲಿ ಉಷ್ಣ ಅಲೆಯ ತೀವ್ರತೆ ಹೆಚ್ಚಿದ್ದು, ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ವಿಶ್ವ ಹವಾಮಾನ ಸಂಸ್ಥೆಯು (WMO) ಮೇ ನಿಂದ ಜುಲೈ ಅವಧಿಯಲ್ಲಿ ಜಾಗತಿಕ ತಾಪಮಾನವು ಸಾಮಾನ್ಯಕ್ಕಿಂತ ಹೆಚ್ಚಿರಲಿದೆ ಎಂದು ಮುನ್ಸೂಚನೆ ನೀಡಿದ
Apr 271 min read


ರೈಲಿನಲ್ಲಿ ಹೆರಿಗೆ: ಪ್ರಯಾಣಿಕ ಮಹಿಳೆಯರ ಸಾಹಸ – ತಾಯಿ, ಮಗು ಸುರಕ್ಷಿತ
ಬಂಟ್ವಾಳ (ಬಿ.ಸಿ.ರೋಡ್), ಏ.27: ಮಂಗಳೂರುದಿಂದ ಬೆಂಗಳೂರು ಕಡೆಗೆ ಸಂಚರಿಸುತ್ತಿದ್ದ ರೈಲಿನಲ್ಲಿ ಗರ್ಭಿಣಿ ಮಹಿಳೆಗೆ ತುರ್ತು ಹೆರಿಗೆ ನಡೆಸಿದ ಘಟನೆ ಭಾನುವಾರ ಮುಸ್ಸಂಜೆ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ಸಮೀಪ ನಡೆದಿದೆ. ಮೈಸೂರು ಮೂಲದ ತುಂಬು ಗರ್ಭಿಣಿ ಮಹಿಳೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದಾಗ ಏಕಾಏಕಿ ಹೆರಿಗೆ ನೋವು ಕಾಣಿಸಿಕೊಂಡಿದೆ. ರೈಲು ಬಿ.ಸಿ.ರೋಡ್ ತಲುಪುವಷ್ಟರಲ್ಲಿ ಆಕೆಗೆ ತೀವ್ರ ರಕ್ತಸ್ರಾವವೂ ಉಂಟಾಗಿದ್ದು, ಪರಿಸ್ಥಿತಿ ಗಂಭೀರವಾಗಿದೆ. ಇದರಿಂದಾಗಿ ರೈಲನ್ನು ತಕ್ಷಣ ನಿಲ್ಲಿಸಿ, ವೈದ್ಯಕೀಯ ನೆರವಿಗಾಗಿ ಸುಮಾರು 30 ನಿಮಿಷಗಳ ಕಾಲ ಕಾಯಲಾಗಿದೆ. ಆದರೆ ಸಮಯಕ್ಕೆ ಸರಿಯಾಗಿ ವೈದ್ಯರು
Apr 271 min read


ದೇವನಹಳ್ಳಿಯಲ್ಲಿ ಅಮಾಯಕ ಟೀ ಮಾರಾಟಗಾರನ ಮೇಲೆ ಪೊಲೀಸ್ ದೌರ್ಜನ್ಯ !
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಬಡ ಟೀ ಮಾರಾಟಗಾರನ ಮೇಲೆ ಪೊಲೀಸರು ಹಲ್ಲೆ ನಡೆಸಿದರೆಂಬ ಗಂಭೀರ ಆರೋಪ ಕೇಳಿಬಂದಿದೆ. ರಾತ್ರಿ ತಡವಾಗಿ ಅಂಗಡಿ ತೆರೆದಿಟ್ಟಿದ್ದ ಕಾರಣಕ್ಕೆ ಪೊಲೀಸರು ಆತನ ಮೇಲೆ ದೌರ್ಜನ್ಯ ನಡೆಸಿದ್ದಾರೆ ಎಂಬ ಮಾಹಿತಿ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. “ನನ್ನನ್ನು ಹೊಡೆಯಬೇಡಿ, ನಾನು ಕೇವಲ ಜೀವನ ನಡೆಸಲು ಪ್ರಯತ್ನಿಸುತ್ತಿದ್ದೇನೆ” ಎಂದು ಆ ಟೀ ಮಾರಾಟಗಾರ ಬೇಡಿಕೊಂಡಿದ್ದಾನೆ ಎನ್ನುವ ದೃಶ್ಯಗಳು ಜನರಲ್ಲಿ ಆಕ್ರೋಶ ಹುಟ್ಟಿಸಿದ್ದವು. ಬಡತನದಲ್ಲಿರುವ ವ್ಯಕ್ತಿ ತನ್ನ ಜೀವನೋಪಾಯಕ್ಕಾಗಿ ಕೆಲಸ ಮಾಡುತ್ತಿದ್ದಾಗ ಈ ರೀತಿಯ ವರ್ತನೆ ಸರಿಯೇ ಎಂಬ
Apr 261 min read


ರಾಘವ್ ಚಡ್ಡಾ ಬಂಡಾಯ ಪರಿಣಾಮ: ಪಂಜಾಬ್ನಲ್ಲಿ ಆಪ್ ಸರ್ಕಾರಕ್ಕೆ ಬಹುಮತ ಭೀತಿ!
ಚಂಡೀಗಢ, ಏ.26: ಆಮ್ ಆದ್ಮಿ ಪಕ್ಷಕ್ಕೆ (ಆಪ್) ದೊಡ್ಡ ರಾಜಕೀಯ ಸಂಕಷ್ಟ ಎದುರಾಗುವ ಲಕ್ಷಣಗಳು ಕಾಣಿಸುತ್ತಿವೆ. ಇತ್ತೀಚೆಗೆ ಬಿಜೆಪಿ ಸೇರ್ಪಡೆಯಾಗಿರುವ ರಾಘವ್ ಚಡ್ಡಾ ಇದೀಗ ಪಂಜಾಬ್ ಆಪ್ ಸರ್ಕಾರವನ್ನು ಅಲುಗಾಡಿಸಲು ಪ್ರಯತ್ನಿಸುತ್ತಿದ್ದಾರೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಹರಿದಾಡುತ್ತಿವೆ. ಮಾಹಿತಿಗಳ ಪ್ರಕಾರ, ಪಂಜಾಬ್ನ 94 ಆಪ್ ಶಾಸಕರ ಪೈಕಿ ಸುಮಾರು 63 ಶಾಸಕರು ರಾಘವ್ ಚಡ್ಡಾ ಸಂಪರ್ಕದಲ್ಲಿದ್ದು, ಯಾವ ಕ್ಷಣದಲ್ಲಾದರೂ ಬಣ ಬದಲಾಯಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಸಂಖ್ಯೆಯು ನಿಜವಾಗಿದ್ದರೆ, ಭಗವಂತ್ ಮಾನ್ ನೇತೃತ್ವದ ಸರ್ಕಾರಕ್ಕೆ ದೊಡ್ಡ ಹೊಡೆತ ಬೀಳುವ ಸಾಧ್ಯತೆ ಇದೆ. ಪ
Apr 261 min read


ಲುಂಗಿ ಎನ್ಗಿಡಿ ಗಾಯ: ಐಪಿಎಲ್ ಮಂಡಳಿ ನೀಡಿದ ಮಹತ್ವದ ಅಪ್ಡೇಟ್
ನವದೆಹಲಿ, ಏಪ್ರಿಲ್ 26: ದಕ್ಷಿಣ ಆಫ್ರಿಕಾ ವೇಗಿ ಲುಂಗಿ ಎನ್ಗಿಡಿ ಅವರು ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ ಗಾಯಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂಡಿಯನ್ ಪ್ರೀಮಿಯರ್ ಲೀಗ್ ಮಂಡಳಿ ಅಧಿಕೃತವಾಗಿ ಅಪ್ಡೇಟ್ ನೀಡಿದೆ. ಶನಿವಾರ ನಡೆದ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯದಲ್ಲಿ ಈ ಘಟನೆ ಸಂಭವಿಸಿತು. ಐಪಿಎಲ್ ಮಂಡಳಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಮಾಹಿತಿಯ ಪ್ರಕಾರ, ಫೀಲ್ಡಿಂಗ್ ವೇಳೆ ಕ್ಯಾಚ್ ಹಿಡಿಯಲು ಪ್ರಯತ್ನಿಸಿದಾಗ ಎನ್ಗಿಡಿ ನಿಯಂತ್ರಣ ತಪ್ಪಿ ಬಿದ್ದು ತಲೆಗೆ ಪೆಟ್ಟು ಬಿದ್ದಿದೆ. ತಕ್ಷಣವೇ ತಲೆನೋವು ಹಾಗೂ ಕುತ್ತಿಗೆ ನೋವು ಕಾಣಿಸಿಕೊಂಡ ಕಾರಣ ಅವರ
Apr 261 min read


ದೈವದ ಭಂಡಾರ ಮೆರವಣಿಗೆ ವೇಳೆ ಕಾಲು ಸಂಕ ಕುಸಿತ; ಎಂಟು ಮಂದಿಗೆ ಗಾಯ
ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ತಾಲೂಕಿನ ಪುಚ್ಚೆಮೊಗರು ಬಾವದಬೈಲಿನಲ್ಲಿ ದೈವದ ಭಂಡಾರ ಮೆರವಣಿಗೆ ವೇಳೆ ಕಾಲು ಸಂಕ ಕುಸಿದು ಎಂಟು ಮಂದಿ ಗಾಯಗೊಂಡಿದ್ದಾರೆ. ತಾಕೋಡೆ ಬರ್ಕೆ ಧರ್ಮನೇಮಕ್ಕೆ ದೈವದ ಭಂಡಾರವನ್ನು ಪಲ್ಲಕ್ಕಿಯಲ್ಲಿ ಹೊತ್ತು ಸಾಗಿಸುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಸಂಕವು ಏಕಾಏಕಿ ಕುಸಿದ ಪರಿಣಾಮ ಪಲ್ಲಕ್ಕಿ ಉರುಳಿ ಬಿದ್ದಿದ್ದು, ಗಾಯಾಳುಗಳನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಅವಘಡದಲ್ಲಿ ಪಲ್ಲಕ್ಕಿಯಲ್ಲಿದ್ದ ದೈವದ ಮೊಗಮೂರ್ತಿ ಹಾಗೂ ಇತರ ಧಾರ್ಮಿಕ ಪರಿಕರಗಳಿಗೆ ಹಾನಿಯುಂಟಾಗಿದೆ. ಪಲ್ಲಕ್ಕಿ ಹೊತ್ತವರು ಮತ್ತು ಮೆರವಣಿಗೆಯಲ್ಲಿದ್ದ ಭಕ್
Apr 251 min read


ಎಸ್ಎಸ್ಎಲ್ಸಿ ಫಲಿತಾಂಶ: ಅಂಧ ವಿದ್ಯಾರ್ಥಿನಿಗೆ ಕೊನೆಗೂ ಸಿಕ್ಕಿತು ನ್ಯಾಯ
ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಅಂಧ ವಿದ್ಯಾರ್ಥಿನಿ ಲೀಸಾ ಖಾನಮ್ ಅವರಿಗೆ ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ಸಂಭವಿಸಿದ್ದ ಅನ್ಯಾಯಕ್ಕೆ ಕೊನೆಗೂ ನ್ಯಾಯ ದೊರೆತಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ತಾಂತ್ರಿಕ ದೋಷದಿಂದ ಆರಂಭಿಕ ಫಲಿತಾಂಶದಲ್ಲಿ ಕೆಲವು ವಿಷಯಗಳಿಗೆ ‘ಗೈರು ಹಾಜರು’ ಎಂದು ನಮೂದಿಸಲಾಗಿದ್ದು, ಅವರು ಅನುತ್ತೀರ್ಣರಾಗಿದ್ದಾರೆ ಎಂಬ ತಪ್ಪು ಮಾಹಿತಿ ಹರಡಿತ್ತು. ಈ ಘಟನೆಯಿಂದ ಆತಂಕಕ್ಕೊಳಗಾದ ವಿದ್ಯಾರ್ಥಿನಿ ಹಾಗೂ ಕುಟುಂಬದವರ ಮನಸ್ಥಿತಿ ಅತೀವ ದುಃಖಕರವಾಗಿತ್ತು. ಆದರೆ ವಿಷಯದ ಗಂಭೀರತೆಯನ್ನು ಅರಿತ ಸ್ಥಳೀಯ ಶಾಸಕರು ಮತ್ತು ಶಿಕ್ಷಣ ಇಲಾಖೆಯ ಹಿರಿಯ ಅಧಿ
Apr 251 min read


ಮಂಗಳೂರು: ಕತ್ತಿ ಹಿಡಿದು ದಾಳಿ ಮಾಡಲು ಯತ್ನಿಸಿದ ವ್ಯಕ್ತಿಯ ಬಂಧನ
ಮಂಗಳೂರಿನ ವಾಮಂಜೂರು ನಿವಾಸಿ ನವೀನ್ ಎಂಬಾತ ಕತ್ತಿ ಹಿಡಿದು ಮನೆಗೆ ನುಗ್ಗಿ ದಾಳಿ ನಡೆಸಲು ಯತ್ನಿಸಿದ ಘಟನೆ ನಡೆದಿದೆ. ಪತ್ನಿಯೊಂದಿಗೆ ವಿಚ್ಛೇದನ ಪಡೆದಿದ್ದ ನವೀನ್, ಈ ದ್ವೇಷದ ಹಿನ್ನೆಲೆಯಲ್ಲಿ ಕಲಾವರ್ ನಿವಾಸಿ ದೇವಿ ಪ್ರಸಾದ್ ಅವರ ಮನೆಗೆ ತೆರಳಿ ಅವರ ಪೋಷಕರ ಮೇಲೆ ಹಲ್ಲೆ ಮಾಡಲು ಯತ್ನಿಸಿದ್ದಾನೆ. ಕೂಡಲೇ ಎಚ್ಚೆತ್ತ ದೇವಿ ಪ್ರಸಾದ್ 112ಕ್ಕೆ ಕರೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದರು. ಈ ವೇಳೆ ಪರಾರಿಯಾಗಲು ಯತ್ನಿಸಿದ ನವೀನ್ ಬೈಕ್ನಿಂದ ಬಿದ್ದು ಗಾಯಗೊಂಡಿದ್ದು, ಕೂಡಲೇ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿ ವಿರುದ್ಧ ಐಪಿಸಿ 307 ಹಾಗೂ ಆರ್ಮ್ಸ್ ಆಕ್ಟ್ ಅಡಿಯಲ್ಲಿ ಪ್ರಕರಣ
Apr 251 min read


ಶಬರಿಮಲೆ ಸನ್ನಿಧಾನದ ಮೇಲೆ ಹೆಲಿಕಾಪ್ಟರ್ ಹಾರಾಟ: ಪ್ರಕರಣ ದಾಖಲು
ಶಬರಿಮಲೆಯ ಪವಿತ್ರ ಸನ್ನಿಧಾನದ ಮೇಲೆ ಭಾರತೀಯ ಕರಾವಳಿ ಕಾವಲು ಪಡೆಯ ಹೆಲಿಕಾಪ್ಟರ್ ಅತಿ ಕಡಿಮೆ ಎತ್ತರದಲ್ಲಿ ಹಾರಾಟ ನಡೆಸಿರುವುದು ಆತಂಕಕ್ಕೆ ಕಾರಣವಾಗಿದೆ. ಪ್ರತಿಕೂಲ ಹವಾಮಾನದಿಂದಾಗಿ ಮಾರ್ಗ ಬದಲಾಗಿದೆ ಎಂದು ಪಡೆ ಸ್ಪಷ್ಟನೆ ನೀಡಿದ್ದರೂ, ಭದ್ರತಾ ನಿಯಮಗಳ ಉಲ್ಲಂಘನೆಯ ಹಿನ್ನೆಲೆಯಲ್ಲಿ ಪಂಪಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಈ ಘಟನೆಯ ಕುರಿತು ಸಮಗ್ರ ತನಿಖೆ ನಡೆಸುವಂತೆ ಎಡಿಜಿಪಿ ಎಸ್. ಶ್ರೀಜಿತ್ ಅವರಿಗೆ ಸೂಚಿಸಲಾಗಿದ್ದು, ವಿಶೇಷ ಆಯುಕ್ತರು ವರದಿ ಕೇಳಿದ್ದಾರೆ. ಮುಖ್ಯವಾಗಿ, ದೇಗುಲದ ನಿಷೇಧಿತ ಪ್ರದೇಶಗಳ ವಿಡಿಯೋ ಅಥವಾ ಫೋಟೋ ಚಿತ್ರೀಕರಣ ಮಾಡಲಾಗಿದೆಯೇ ಎಂಬ ಬಗ್ಗೆ ಅಧಿಕಾರಿಗ
Apr 241 min read


ಪತ್ನಿಯ ಶೀಲ ಶಂಕೆ: ಮಚ್ಚಿನಿಂದ ಕೊಚ್ಚಿ ಕೊಂದ ಪತಿ
ಕೋಲಾರ: ಪತ್ನಿಯ ನಡತೆ ಬಗ್ಗೆ ಅನುಮಾನಗೊಂಡ ಪತಿಯೊಬ್ಬನು ಆಕೆಯನ್ನು ಮಚ್ಚಿನಿಂದ ಹಲ್ಲೆ ಮಾಡಿ ಬರ್ಬರವಾಗಿ ಕೊಲೆ ಮಾಡಿದ ಘಟನೆ ಜಿಲ್ಲೆಯ ಕೆಜಿಎಫ್ ತಾಲ್ಲೂಕಿನ ಚಿನ್ನದ ಗಣಿ ಗ್ರಾಮದ ಬಳಿ ಬುಧವಾರ ನಡೆದಿದೆ. ಮೃತಳನ್ನು ಈಶ್ವರಮ್ಮ ಎಂದು ಗುರುತಿಸಲಾಗಿದ್ದು, ಆರೋಪಿಯನ್ನು ಆಂಧ್ರಪ್ರದೇಶದ ಪೆದ್ದೂರು ಮೂಲದ ಗೋಪಿನಾಥ ಎಂದು ಪೊಲೀಸರು ತಿಳಿಸಿದ್ದಾರೆ. ಮಾಹಿತಿಯ ಪ್ರಕಾರ, ದಂಪತಿ ಬಂಗಾರಪೇಟೆಯಲ್ಲಿರುವ ಸಂಬಂಧಿಕರ ಮನೆಗೆ ಭೇಟಿ ನೀಡಿ ವಾಪಸ್ಸಾಗುತ್ತಿದ್ದ ವೇಳೆ ದಾರಿಯುದ್ದಕ್ಕೂ ಜಗಳ ನಡೆದಿದೆ. ಪತ್ನಿಯ ಶೀಲದ ಬಗ್ಗೆ ಈಗಾಗಲೇ ಶಂಕೆ ಹೊಂದಿದ್ದ ಗೋಪಿನಾಥ ಆಕ್ರೋಶಗೊಂಡು, ಮಚ್ಚಿನಿಂದ ಈಶ್ವರಮ್ಮ ಅವರ ಕೈ
Apr 241 min read


ಪುತ್ತೂರು :ಮದುವೆ ಭರವಸೆ ಪ್ರಕರಣಹೈಕೋರ್ಟ್ ಮಧ್ಯಂತರ ತಡೆ, ₹75 ಸಾವಿರ ಪಾವತಿ ಆದೇಶ
ಬೆಂಗಳೂರು, ಏಪ್ರಿಲ್ 24: ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿ, ನಂತರ ಆಕೆ ಮಗುವಿಗೆ ಜನ್ಮ ನೀಡಿದ ಬಳಿಕ ವಂಚನೆ ಮಾಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ಮಧ್ಯಂತರ ಆದೇಶ ಹೊರಡಿಸಿದೆ. ಪುತ್ತೂರಿನ ಬಿಜೆಪಿ ಮಾಜಿ ಮುಖಂಡನ ಪುತ್ರ ಕೃಷ್ಣ ಜೆ. ರಾವ್ ಸಲ್ಲಿಸಿದ್ದ ಪ್ರಕರಣ ರದ್ದು ಅರ್ಜಿಯನ್ನು ವಿಚಾರಿಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ, ಪ್ರಕರಣಕ್ಕೆ ತಾತ್ಕಾಲಿಕ ತಡೆ ನೀಡಿದರೂ, ಕಟ್ಟುನಿಟ್ಟಿನ ಷರತ್ತುಗಳನ್ನು ವಿಧಿಸಿದೆ. ಈ ಪ್ರಕರಣದಲ್ಲಿ ಪ್ರಮುಖವಾಗಿ ಗಮನಸೆಳೆದ ಅಂಶವೆಂದರೆ, ಆರೋಪಿಯೊಂದಿಗೆ ದೈಹಿಕ ಸಂಬಂಧದಿಂದ ಯುವತಿಗೆ
Apr 241 min read


ತಕ್ಷಣವೇ ಇರಾನ್ ತೊರೆಯುವಂತೆ ಭಾರತೀಯರಿಗೆ ವಿದೇಶಾಂಗ ಇಲಾಖೆ ತುರ್ತು ಎಚ್ಚರಿಕೆ!
ಇರಾನ್ನಲ್ಲಿ ಉಂಟಾಗಿರುವ ತೀವ್ರ ಉದ್ವಿಗ್ನ ಪರಿಸ್ಥಿತಿಯ ಹಿನ್ನೆಲೆಯಲ್ಲಿ, ಭಾರತೀಯ ನಾಗರಿಕರು ತಕ್ಷಣವೇ ಇರಾನ್ ತೊರೆಯುವಂತೆ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ತುರ್ತು ಸಲಹೆ ನೀಡಿದೆ. ಟೆಹ್ರಾನ್ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಈ ಕುರಿತು ಎಚ್ಚರಿಕೆ ನೀಡಿದ್ದು, ಪರಿಸ್ಥಿತಿ ಸ್ಥಿರವಾಗಿಲ್ಲದ ಕಾರಣ ಭಾರತೀಯರು ಅಲ್ಲಿಗೆ ಪ್ರಯಾಣಿಸದಂತೆ ಸೂಚಿಸಿದೆ. ಸದ್ಯ ವಿಮಾನ ಸಂಚಾರ ಆರಂಭವಾಗಿದ್ದರೂ, ವಾಯುಪ್ರದೇಶದ ಮೇಲೆ ನಿರ್ಬಂಧಗಳು ಮತ್ತು ಅನಿಶ್ಚಿತತೆ ಮುಂದುವರಿಯುವ ಸಾಧ್ಯತೆಯಿದೆ. ಇದು ವಿಮಾನಗಳ ಕಾರ್ಯಾಚರಣೆಯ ಮೇಲೆ ನೇರ ಪರಿಣಾಮ ಬೀರಲಿದ್ದು, ಭದ್ರತೆಯ ದೃಷ್ಟಿಯಿಂದ ನಾಗರಿಕರು ವಿಮಾನ
Apr 241 min read


ಮೆಟ್ರೋ ಬಳಸುವ ಉದ್ಯೋಗಿಗಳಿಗೆ ಸಿಗಲಿದೆ ₹2,000
ಬೆಂಗಳೂರಿನ ಟ್ರಾಫಿಕ್ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಬಯೋಕಾನ್ ಸಂಸ್ಥೆ ತನ್ನ ಉದ್ಯೋಗಿಗಳಿಗೆ ವಿಶೇಷ ಕೊಡುಗೆಯನ್ನು ಘೋಷಿಸಿದೆ. ಪರಿಸರ ಸ್ನೇಹಿ ಪ್ರಯಾಣವನ್ನು ಉತ್ತೇಜಿಸಲು ಮತ್ತು ರಸ್ತೆಗಳಲ್ಲಿ ವಾಹನ ದಟ್ಟಣೆ ಕಡಿಮೆ ಮಾಡಲು ಈ ಕ್ರಮ ಕೈಗೊಳ್ಳಲಾಗಿದೆ. ವಾರದಲ್ಲಿ ಕನಿಷ್ಠ ಎರಡು ದಿನಗಳ ಕಾಲ ಮೆಟ್ರೋ ಅಥವಾ ಸಾರ್ವಜನಿಕ ಸಾರಿಗೆಯನ್ನು ಬಳಸುವ ಸಿಬ್ಬಂದಿಗೆ ಸಂಸ್ಥೆಯು ಆರ್ಥಿಕ ನೆರವು ನೀಡಲು ನಿರ್ಧರಿಸಿದೆ. ಈ ಯೋಜನೆಯ ಮೊದಲ ಹಂತವಾಗಿ ಸುಮಾರು 1,000 ಉದ್ಯೋಗಿಗಳಿಗೆ ಪ್ರತಿ ತಿಂಗಳು 2,000 ರೂಪಾಯಿಗಳ ಮೆಟ್ರೋ ಪಾಸ್ ಅಥವಾ ಪ್ರೋತ್ಸಾಹಧನವನ್ನು ನೀಡಲಾಗುವುದು. ಈ ಮೂಲಕ ಉದ್ಯೋಗಿಗಳು ಸಮಯಕ್ಕೆ
Apr 241 min read


ಎಸ್ಎಸ್ಎಲ್ಸಿ ಫಲಿತಾಂಶದ ಬೆನ್ನಲ್ಲೇ ರಾಜಕೀಯ ಕಿಡಿ: ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ–ಜೆಡಿಎಸ್ ವಾಗ್ದಾಳಿ
ಖರ್ಗೆ ಹೇಳಿಕೆಗಳ ವಿರುದ್ಧ ಬಿಜೆಪಿ ಆಕ್ರೋಶ; “ಸ್ವಂತ ಜಿಲ್ಲೆ ಅಭಿವೃದ್ಧಿಗೆ ಗಮನಕೊಡಿ” ಎಂದು ಟೀಕೆ ಬೆಂಗಳೂರು: 2025-26ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆ ಶುರುವಾಗಿದೆ. ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆ ಶೇ.98.40 ಫಲಿತಾಂಶದೊಂದಿಗೆ ಮೊದಲ ಸ್ಥಾನ ಪಡೆದಿದೆ. ಉಡುಪಿ ಜಿಲ್ಲೆ ಶೇ.98.18 ಫಲಿತಾಂಶದೊಂದಿಗೆ ದ್ವಿತೀಯ ಸ್ಥಾನಕ್ಕೇರಿದೆ. ಇದೇ ವೇಳೆ, ಶೇ.85.06 ಫಲಿತಾಂಶದೊಂದಿಗೆ ಕಲಬುರಗಿ ಜಿಲ್ಲೆ ಕೊನೆಯ ಸ್ಥಾನದಲ್ಲಿರುವುದು ವಿವಾದಕ್
Apr 241 min read


ಅತಿಯಾದ ಬೆವರಿನ ವಾಸನೆಗೆ ಪರಿಹಾರ: ಆಲಂ ಕಲ್ಲಿನ ಸರಳ ಬಳಕೆ ಪರಿಣಾಮಕಾರಿ
ಮನೆಯಲ್ಲೇ ಸಿಗುವ ನೈಸರ್ಗಿಕ ವಿಧಾನದಿಂದ ದೇಹದ ದುರ್ವಾಸನೆ ನಿಯಂತ್ರಣ ಸಾಧ್ಯ ಇಂದಿನ ವೇಗದ ಜೀವನಶೈಲಿ, ಬಿಸಿಲಿನ ತಾಪಮಾನ ಮತ್ತು ಹೆಚ್ಚುತ್ತಿರುವ ದೇಹದ ಬೆವರು ಸಮಸ್ಯೆಯಿಂದ ಅನೇಕರು ದುರ್ವಾಸನೆ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಮಾರುಕಟ್ಟೆಯಲ್ಲಿ ದೊರೆಯುವ ಡಿಯೋಡರೆಂಟ್ಗಳ ಜೊತೆಗೆ, ಮನೆಯಲ್ಲೇ ಸಿಗುವ ನೈಸರ್ಗಿಕ ವಿಧಾನಗಳು ಕೂಡ ಪರಿಣಾಮಕಾರಿ ಎಂದು ತಜ್ಞರು ತಿಳಿಸಿದ್ದಾರೆ. ಅಂತಹ ವಿಧಾನಗಳಲ್ಲಿ ಪ್ರಮುಖವಾದುದು ಆಲಂ ಕಲ್ಲು (ಫಿಟ್ಕರಿ) ಬಳಕೆ. ಇದು ಆಂಟಿ-ಬ್ಯಾಕ್ಟೀರಿಯಲ್ ಗುಣಗಳನ್ನು ಹೊಂದಿದ್ದು, ಬೆವರುದಿಂದ ಉಂಟಾಗುವ ದುರ್ವಾಸನೆಗೆ ಕಾರಣವಾಗುವ ಜೀವಾಣುಗಳನ್ನು ಕಡಿಮೆ ಮಾಡುತ್ತದೆ. ಸ
Apr 231 min read


ಫೇಲ್ ಆದ ಮಕ್ಕಳಿಗೆ 3ನೇ ಬಾರಿ ಪರೀಕ್ಷೆಯ ಅವಕಾಶವಿಲ್ಲ: ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ
SSLC ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿ ನಡೆಸಿ ಮಹತ್ವದ ಮಾಹಿತಿ ನೀಡಿದ್ದಾರೆ. ಮೊದಲ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮೇ 18 ರಿಂದ 25 ರವರೆಗೆ ಎರಡನೇ ಪರೀಕ್ಷೆ ನಡೆಯಲಿದೆ. ಸುಮಾರು 1000ಕ್ಕೂ ಹೆಚ್ಚು ಮಕ್ಕಳು ಈ ಅವಕಾಶವನ್ನು ಬಳಸಿಕೊಂಡು ತೇರ್ಗಡೆಯಾಗಲು ಉತ್ತಮ ಅವಕಾಶವಿದೆ ಎಂದು ಅವರು ತಿಳಿಸಿದ್ದಾರೆ. ಈ ವರ್ಷ ಮೂರನೇ ಬಾರಿ ಪರೀಕ್ಷೆ ನಡೆಸುವ ಸಂದರ್ಭ ಬರುವುದಿಲ್ಲ ಹಾಗೂ ಅಂತಹ ಯಾವುದೇ ಉದ್ದೇಶ ಸರ್ಕಾರಕ್ಕಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ. ಫೇಲ್ ಆದ ವಿದ್ಯಾರ್ಥಿಗಳು ಧೃತಿಗೆಡದೆ ಲಭ್ಯವಿರುವ ಎರಡನೇ ಪರೀಕ್ಷೆಯಲ್ಲ
Apr 231 min read


ಮೋದಿ ವಿರುದ್ಧ 'ಭಯೋತ್ಪಾದಕ' ಪದ ಬಳಕೆ: ಮಲ್ಲಿಕಾರ್ಜುನ ಖರ್ಗೆಗೆ ಚುನಾವಣಾ ಆಯೋಗದಿಂದ ನೋಟಿಸ್
ಚೆನ್ನೈನಲ್ಲಿ ನಡೆದ ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರನ್ನು "ಭಯೋತ್ಪಾದಕ" ಎಂದು ಕರೆದ ಆರೋಪದ ಮೇಲೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಚುನಾವಣಾ ಆಯೋಗ ನೋಟಿಸ್ ಜಾರಿ ಮಾಡಿದೆ. ಬಿಜೆಪಿ ನೀಡಿದ ದೂರಿನನ್ವಯ ಈ ಕ್ರಮ ಕೈಗೊಳ್ಳಲಾಗಿದ್ದು, ಮಾದರಿ ನೀತಿ ಸಂಹಿತೆ ಉಲ್ಲಂಘನೆಯ ಹಿನ್ನೆಲೆಯಲ್ಲಿ 24 ಗಂಟೆಗಳೊಳಗೆ ಸ್ಪಷ್ಟನೆ ನೀಡುವಂತೆ ಆಯೋಗ ಸೂಚಿಸಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಖರ್ಗೆ, ತಾವು ಆ ಶಬ್ದವನ್ನು ನೇರ ಅರ್ಥದಲ್ಲಿ ಬಳಸಿಲ್ಲವೆಂದು ಸಮರ್ಥಿಸಿಕೊಂಡಿದ್ದಾರೆ. ತನಿಖಾ ಸಂಸ್ಥೆಗಳ ಮೂಲಕ ವಿರೋಧ ಪಕ್ಷಗಳನ್ನು ಬೆದರಿಸುತ್ತಿರುವ ಕ್ರಮವನ್ನು ಟೀಕಿಸಲು ಈ
Apr 231 min read
Archive
bottom of page



