top of page
News Articles
Sathyapatha News Plus


ಶರಣ್ ಪಂಪ್ವೆಲ್ಗೆ ಜಿಲ್ಲಾ ಪ್ರವೇಶ ನಿಷೇಧ: ಶಾಂತಿ ಕಾಪಾಡಲು ಜಿಲ್ಲಾಧಿಕಾರಿ ಕ್ರಮ
ಹಾಸನ: ಶ್ರವಣಬೆಳಗೊಳ ಹಾಗೂ ಅರಸೀಕೆರೆಯಲ್ಲಿ ಭಾನುವಾರ ಆಯೋಜಿಸಲಾಗಿದ್ದ 'ಹಿಂದೂ ಸಮಾಜೋತ್ಸವ' ಕಾರ್ಯಕ್ರಮದಲ್ಲಿ ಭಾಗವಹಿಸಬೇಕಿದ್ದ ವಿಶ್ವ ಹಿಂದೂ ಪರಿಷತ್ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ಅವರಿಗೆ ಜಿಲ್ಲಾ ಪ್ರವೇಶವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಅವರು ಆದೇಶ ಹೊರಡಿಸಿದ್ದಾರೆ. ಶರಣ್ ಪಂಪ್ವೆಲ್ ಅವರು ಈ ಹಿಂದೆ ವಿವಿಧ ಜಿಲ್ಲೆಗಳಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಅವರ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿವೆ. ಈ ಇತಿಹಾಸವನ್ನು ಗಮನಿಸಿ ಮುನ್ನೆಚ್ಚರಿಕಾ ಕ್ರಮವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು
Jan 261 min read


ಜಾಮೀನು ನೀಡುವ ಮುನ್ನ ಎಚ್ಚರ: ರೌಡಿಗಳು ಸಿಗದಿದ್ದರೆ ಜಾಮೀನುದಾರರಿಗೆ ಸಂಕಷ್ಟ; ಮಂಗಳೂರು ಕಮಿಷನರ್ ವಾರ್ನಿಂಗ್!
ಮಂಗಳೂರು: ಗಂಭೀರ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿ ನ್ಯಾಯಾಲಯದಿಂದ ಜಾಮೀನು ಪಡೆದು ತಲೆಮರೆಸಿಕೊಳ್ಳುವ ಆರೋಪಿಗಳಿಗೆ ಮಾತ್ರವಲ್ಲ, ಅವರಿಗೆ ಶ್ಯೂರಿಟಿ (ಜಾಮೀನು ಭರವಸೆ) ನೀಡುವವರಿಗೂ ಇನ್ಮುಂದೆ ಪೊಲೀಸರು ಬಿಸಿ ಮುಟ್ಟಿಸಲಿದ್ದಾರೆ. "ಅಪರಾಧಿಗಳಿಗೆ ಜಾಮೀನು ನೀಡುವಾಗ ಸಾರ್ವಜನಿಕರು ಎಚ್ಚರಿಕೆ ವಹಿಸಬೇಕು, ಇಲ್ಲದಿದ್ದರೆ ಗಂಭೀರ ಕಾನೂನು ಪರಿಣಾಮ ಎದುರಿಸಬೇಕಾಗುತ್ತದೆ" ಎಂದು ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರು ಕಡಕ್ ಎಚ್ಚರಿಕೆ ನೀಡಿದ್ದಾರೆ. ಈ ಮೂಲಕ ನ್ಯಾಯಾಂಗ ಪ್ರಕ್ರಿಯೆಯಿಂದ ತಪ್ಪಿಸಿಕೊಳ್ಳುವ ರೌಡಿಗಳಿಗೆ ಸಾಥ್ ನೀಡುವವರಿಗೆ ಆಯುಕ್ತರು ನೇರ ಸಂದೇಶ ರವಾನಿಸಿದ್ದಾರೆ.
Jan 251 min read


ಬಾಂಗ್ಲಾದಲ್ಲಿ ಮತ್ತೆ ಮೃತ್ಯು ನರ್ತನ: ಗ್ಯಾರೇಜ್ಗೆ ಬೆಂಕಿ ಹಚ್ಚಿ ಹಿಂದೂ ಯುವಕನ ಸಜೀವ ದಹನ!
ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂ ಸಮುದಾಯದವರನ್ನು ಗುರಿಯಾಗಿಸಿಕೊಂಡು ನಡೆಸಲಾಗುತ್ತಿರುವ ದಾಳಿಗಳು ನಿಲ್ಲುವ ಲಕ್ಷಣ ಕಾಣುತ್ತಿಲ್ಲ. ನರಸಿಂಗ್ಲಿ ಜಿಲ್ಲೆಯಲ್ಲಿ 23 ವರ್ಷದ ಹಿಂದೂ ಯುವಕ ಚಂಚಲ್ ಚಂದ್ರ ಭೌಮಿಕ್ ಎಂಬುವವರನ್ನು ಅವರು ಮಲಗಿದ್ದ ಗ್ಯಾರೇಜ್ ಒಳಗೇ ಸುಟ್ಟು ಹಾಕಿರುವ ಭೀಕರ ಘಟನೆ ನಡೆದಿದೆ. ಮೂಲತಃ ಕುಮಿಲ್ಲಾ ಜಿಲ್ಲೆಯ ಲಕ್ಷ್ಮೀಪುರ ಗ್ರಾಮದವರಾದ ಚಂಚಲ್, ಕೆಲಸದ ನಿಮಿತ್ತ ನರಸಿಂಗ್ಲಿಯಲ್ಲಿ ವಾಸವಿದ್ದರು. ಇಡೀ ಕುಟುಂಬಕ್ಕೆ ಆಧಾರವಾಗಿದ್ದ ಏಕೈಕ ಪುತ್ರನನ್ನೇ ಕಳೆದುಕೊಂಡ ಕುಟುಂಬ ಈಗ ಬೀದಿಗೆ ಬಿದ್ದಂತಾಗಿದ್ದು, ಇಡೀ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಶುಕ್ರವಾ
Jan 251 min read


ಇಂದಿನ ಚಿನ್ನದ ದರ ಎಷ್ಟಿದೆ ಚೆಕ್ ಮಾಡಿ
ಜನವರಿ 13, 2026ರ ಮಂಗಳವಾರದಂದು ಕರ್ನಾಟಕದಲ್ಲಿ ಚಿನ್ನದ ಬೆಲೆ ಗಣನೀಯವಾಗಿ ಏರಿಕೆ ಕಂಡಿದೆ. ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ದರಗಳು ಈ ಕೆಳಗಿನಂತಿವೆ: 22 ಕ್ಯಾರೆಟ್ ಚಿನ್ನ (ಆಭರಣ ಚಿನ್ನ): 1 ಗ್ರಾಂ: ₹13,065 10 ಗ್ರಾಂ: ₹1,30,650 (ನಿನ್ನೆಗಿಂತ ₹350 ಏರಿಕೆ) 24 ಕ್ಯಾರೆಟ್ ಚಿನ್ನ (ಅಪರಂಜಿ ಚಿನ್ನ): 1 ಗ್ರಾಂ: ₹14,253 10 ಗ್ರಾಂ: ₹1,42,530 (ನಿನ್ನೆಗಿಂತ ₹380 ಏರಿಕೆ) 18 ಕ್ಯಾರೆಟ್ ಚಿನ್ನ: 1 ಗ್ರಾಂ: ₹10,690 ಬೆಳ್ಳಿ ದರ: ಬೆಳ್ಳಿಯ ಬೆಲೆಯೂ ಸಹ ಇಂದು ಹೊಸ ದಾಖಲೆ ಬರೆದಿದ್ದು, ಪ್ರತಿ ಕೆ.ಜಿ ಬೆಳ್ಳಿಯ ಬೆಲೆ ₹2,75,000 ತಲುಪಿದೆ. ನಿನ್ನೆಗಿಂತ ಬೆಳ್ಳಿ ಬೆಲೆಯಲ್ಲಿ ಸ
Jan 251 min read


ಹಿಮಪಾತದ ಅಬ್ಬರಕ್ಕೆ ಹಿಮಾಚಲ ಸ್ತಬ್ಧ: 600ಕ್ಕೂ ಹೆಚ್ಚು ರಸ್ತೆಗಳು ಬಂದ್, ಮೈಕೊರೆಯುವ ಚಳಿಯಲ್ಲಿ ಪ್ರವಾಸಿಗರ ಪರದಾಟ!
ಶಿಮ್ಲಾ: ದೇವಭೂಮಿ ಹಿಮಾಚಲ ಪ್ರದೇಶದಲ್ಲಿ ಪ್ರಕೃತಿಯ ಮುನಿಸು ಮುಂದುವರಿದಿದ್ದು, ಭಾರೀ ಹಿಮಪಾತದಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಮನಾಲಿ, ಶಿಮ್ಲಾ ಮತ್ತು ಕಾಲ್ಕಾ ಸೇರಿದಂತೆ ಪ್ರಮುಖ ಪ್ರವಾಸಿ ತಾಣಗಳಲ್ಲಿ ಸತತವಾಗಿ ಹಿಮ ಬೀಳುತ್ತಿದ್ದು, ಒಂದೆಡೆ ಪ್ರವಾಸಿಗರು ಹಿಮದ ಸಂಭ್ರಮದಲ್ಲಿದ್ದರೆ, ಮತ್ತೊಂದೆಡೆ ಸಾವಿರಾರು ಜನರು ಊರುಗಳಿಗೆ ಮರಳಲಾಗದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕುಲು ಜಿಲ್ಲೆಯ ಕೋಥಿ ಮತ್ತು ಮನಾಲಿಯಲ್ಲಿ ಸುಮಾರು 8 ಕಿಲೋಮೀಟರ್ಗೂ ಅಧಿಕ ಉದ್ದದವರೆಗೆ ವಾಹನಗಳು ಸಾಲುಗಟ್ಟಿ ನಿಂತಿದ್ದು, ಪ್ರವಾಸಿಗರು ರಸ್ತೆಯಲ್ಲೇ ಕಾಲ ಕಳೆಯುವಂತಾಗಿದೆ. ರಾಜ್ಯಾದ್ಯಂತ ಹಿಮದ ಹೊದಿ
Jan 251 min read


ಹುಬ್ಬಳ್ಳಿಯಲ್ಲಿ ಇಂದು 42,345 ಮನೆಗಳ ಐತಿಹಾಸಿಕ ಹಂಚಿಕೆ; ಖರ್ಗೆ–ಸಿದ್ದರಾಮಯ್ಯ–ಡಿಕೆಶಿ ಚಾಲನೆ
ಹುಬ್ಬಳ್ಳಿ: ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ವತಿಯಿಂದ ನಿರ್ಮಿಸಲಾದ 42,345 ಮನೆಗಳನ್ನು ಬಡ ಕುಟುಂಬಗಳಿಗೆ ಹಂಚಿಕೆ ಮಾಡುವ ಐತಿಹಾಸಿಕ ಕಾರ್ಯಕ್ರಮ ಜ.24ರಂದು ಹುಬ್ಬಳ್ಳಿಯ ಮಂಟೂರ ರಸ್ತೆಯಲ್ಲಿ ಯಶಸ್ವಿಯಾಗಿ ನೆರವೇರಿತು. ವಸತಿ ಸಚಿವ ಝಮೀರ್ ಅಹ್ಮದ್ ಖಾನ್ ಅವರ ನೇತೃತ್ವದಲ್ಲಿ ನಡೆದ ಈ ಬೃಹತ್ ಸಮಾರಂಭಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭಾಗವಹಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ರಾಜ್ಯಾದ್ಯಂತ ನಿರ್ಮಾಣಗೊಂಡ ಮನೆಗಳ ಪೈಕಿ ಇದು ಎರಡನೇ ಹಂತದ ಹಂಚಿಕೆಯಾಗ
Jan 251 min read


ದೇಶದ ಅತಿ ದೊಡ್ಡ ರಾಬರಿ: ಬೆಳಗಾವಿ ಗಡಿಭಾಗದಲ್ಲಿ 400 ಕೋಟಿ ರೂ ಹಣವಿದ್ದ 2 ಕಂಟೇನರ್ ಹೈಜಾಕ್
ಗೋವಾದಿಂದ ಮಹಾರಾಷ್ಟ್ರಕ್ಕೆ ಸುಮಾರು ₹400 ಕೋಟಿ ನಗದು ಸಾಗಿಸುತ್ತಿದ್ದ ಎರಡು ಕಂಟೇನರ್ಗಳನ್ನು ಹೈಜಾಕ್ ಮಾಡಿರುವ ಘಟನೆ ದೇಶದ ಅಪರಾಧ ಇತಿಹಾಸದಲ್ಲೇ ಅತಿದೊಡ್ಡ ದರೋಡೆ ಪ್ರಕರಣಗಳಲ್ಲೊಂದು ಎಂದು ಪರಿಗಣಿಸಲಾಗಿದೆ. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಅಪಾಯಕಾರಿ ಹಾಗೂ ಅರಣ್ಯ ಪ್ರದೇಶವಾದ ಚೋರ್ಲಾ ಘಾಟ್ ಮಾರ್ಗದಲ್ಲಿ ಈ ಕೃತ್ಯ ನಡೆದಿದ್ದು, ಘಟನೆ ನಡೆದ ಹಲವು ತಿಂಗಳ ಬಳಿಕ ಇದೀಗ ಪ್ರಕರಣ ಬಹಿರಂಗವಾಗಿದೆ. 2025ರ ಅಕ್ಟೋಬರ್ 16ರಂದು ನಡೆದ ಈ ದರೋಡೆ ಪ್ರಕರಣ, ಕರ್ನಾಟಕ, ಮಹಾರಾಷ್ಟ್ರ ಮತ್ತು ಗೋವಾ – ಈ ಮೂರು ರಾಜ್ಯಗಳ ಪೊಲೀಸ್ ವ್ಯವಸ್ಥೆಯನ್ನು ತೀವ್ರ ಎಚ್ಚರಿಕೆಯಲ್ಲಿರಿಸಿದೆ. ಗೋವಾದಿಂದ ಮಹ
Jan 251 min read


ತಂದೆಗೆ ಚೂರಿ ಇರಿದು, ಬಳಿಕ ಶೂಟೌಟ್ ಮಾಡಿಕೊಂಡು ಆತ್ಮಹತ್ಯೆ: ಕಡಬದಲ್ಲಿ ಭೀಕರ ಘಟನೆ
ಕಡಬ: ತಂದೆಯನ್ನೇ ಚೂರಿಯಿಂದ ಇರಿದು ಕೊಲೆ ಯತ್ನ ನಡೆಸಿದ ಬಳಿಕ ಮನೆಯಲ್ಲಿದ್ದ ಕೋವಿಯಿಂದ ಶೂಟೌಟ್ ಮಾಡಿಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಭೀಕರ ಘಟನೆ ಶನಿವಾರ ಸಂಜೆ ಕಡಬ ಠಾಣಾ ವ್ಯಾಪ್ತಿಯ ರಾಮಕುಂಜ ಗ್ರಾಮದ ಪಾದೆ ಎಂಬಲ್ಲಿ ನಡೆದಿದೆ. ಶೂಟೌಟ್ ಮಾಡಿಕೊಂಡು ಮೃತಪಟ್ಟ ಯುವಕನನ್ನು ರಾಮಕುಂಜ ಗ್ರಾಮದ ಪಾದೆ ನಿವಾಸಿ ವಸಂತ ಅಮೀನ್ ಎಂಬವರ ಪುತ್ರ ಮೋಕ್ಷ ಎಂದು ಗುರುತಿಸಲಾಗಿದೆ. ಶನಿವಾರ ಸಂಜೆ ತಂದೆ–ಮಗನ ನಡುವೆ ತೀವ್ರ ಜಗಳ ನಡೆದಿದ್ದು, ಆ ಸಂದರ್ಭದಲ್ಲಿ ಮೋಕ್ಷ ತನ್ನ ತಂದೆ ವಸಂತ ಅಮೀನ್ ಅವರಿಗೆ ಚೂರಿಯಿಂದ ಇರಿದು ಗಂಭೀರವಾಗಿ ಗಾಯಗೊಳಿಸಿದ್ದಾನೆ ಎನ್ನಲಾಗಿದೆ. ಅನಂತರ ಮನೆಗೆಲ್ಲಿದ್ದ
Jan 241 min read


ಮಂಗಳೂರು: ನಕಲಿ ಚಿನ್ನದ ಬಳೆ ಅಡವಿಟ್ಟು ₹14.89 ಲಕ್ಷ ಸಾಲ – ಮೂವರ ಬಂಧನ
ಕಾವೂರು ವ್ಯಾಪ್ತಿಯ ಸಹಕಾರಿ ಸಂಸ್ಥೆಯೊಂದರಲ್ಲಿ ನಕಲಿ ಚಿನ್ನದ ಬಳೆಗಳನ್ನು ಅಡವಿಟ್ಟು ₹14.89 ಲಕ್ಷ ಸಾಲ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾವೂರು ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಮೊಹಮ್ಮದ್ ನಝೀರ್, ಜಮಾಲುದ್ದೀನ್ ಎ.ಎಚ್. ಹಾಗೂ ಸೈನಾಝ್ ಎಂದು ಗುರುತಿಸಲಾಗಿದೆ. ಪ್ರಕರಣದ ಮತ್ತೊಬ್ಬ ಆರೋಪಿ ದಿಲ್ಶಾದ್ ತಲೆಮರೆಸಿಕೊಂಡಿದ್ದು, ಆಕೆಯ ಪತ್ತೆಗೆ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ಬಂಧಿತರು ಹಾಗೂ ತಲೆಮರೆಸಿಕೊಂಡಿರುವ ಆರೋಪಿ 2024ರ ಜೂನ್ 24ರಿಂದ ಅಕ್ಟೋಬರ್ 5ರವರೆಗೆ ನಕಲಿ ಚಿನ್ನದ ಬಳೆಗಳನ್ನು ಅಡವಿಟ್ಟು ಸಾಲ ಪಡೆದಿದ್ದರು. ಬ್ಯಾಂಕ್ನ ಚಿನ
Jan 241 min read


ಕುಂದಾಪುರ: ಬಸ್ ಓವರ್ಟೇಕ್ ವೇಳೆ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಸಾವು
ಕುಂದಾಪುರ ತಾಲೂಕಿನ ಶೆಟ್ರಕಟ್ಟೆ ತಿರುವಿನಲ್ಲಿ ಶನಿವಾರ ಬೆಳಿಗ್ಗೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮೃತರನ್ನು ಸೌಕೂರು ನಿವಾಸಿ ವಿಜಯ್ ದೇವಾಡಿಗ (26) ಎಂದು ಗುರುತಿಸಲಾಗಿದೆ. ತ್ರಾಸಿಯಲ್ಲಿ ಫಾಸ್ಟ್ ಫುಡ್ ಅಂಗಡಿ ನಡೆಸುತ್ತಿದ್ದ ವಿಜಯ್, ಶನಿವಾರ ಬೆಳಿಗ್ಗೆ ತ್ರಾಸಿಯಿಂದ ಸೌಕೂರು ಕಡೆಗೆ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಶೆಟ್ರಕಟ್ಟೆ ತಿರುವಿನಲ್ಲಿ ಖಾಸಗಿ ಬಸ್ ಅನ್ನು ಓವರ್ಟೇಕ್ ಮಾಡಲು ಪ್ರಯತ್ನಿಸಿದಾಗ, ಎದುರಿನಿಂದ ಬರುತ್ತಿದ್ದ ಮತ್ತೊಂದು ಖಾಸಗಿ ಬಸ್ಗೆ ಬೈಕ್ ಮುಖಾಮುಖಿ ಢಿಕ್ಕಿ ಹೊಡೆದಿದೆ. ಢಿಕ್ಕಿಯ ತೀ
Jan 241 min read


ಕಡಬ: ಕಾಡಾನೆ ಎದುರಾದಾಗ ಬೈಕ್ ಬಿಟ್ಟು ಓಡಿ ಪ್ರಾಣ ಉಳಿಸಿಕೊಂಡ ಸವಾರ - ಆನೆ ದಾಳಿಗೆ ಬೈಕ್ ನಜ್ಜುಗುಜ್ಜು
ಅರಣ್ಯ ಇಲಾಖೆಯ ವ್ಯಾಪ್ತಿಗೆ ಒಳಪಡುವ ಸುಬ್ರಹ್ಮಣ್ಯ ವಲಯದ ಕೊಂಬಾರು ಗ್ರಾಮದ ಕಾಯರ್ತಡ್ಕ–ಮಣಿಭಾಂಡ ರಸ್ತೆಯಲ್ಲಿ ಗುರುವಾರ ರಾತ್ರಿ ರಸ್ತೆ ಮಧ್ಯೆ ಕಾಡಾನೆ ಎದುರಾದ ಪರಿಣಾಮ ಬೈಕ್ ಸವಾರೊಬ್ಬರು ಕೂದಲೆಳೆಯ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಘಟನೆ ಸಂಭವಿಸಿದೆ. ಸ್ಥಳೀಯ ಅಗರಿ ನಿವಾಸಿ ವಿನಯ್ ಎಂಬವರು ಗುರುವಾರ ರಾತ್ರಿ ಬೈಕ್ನಲ್ಲಿ ಸಂಚರಿಸುತ್ತಿದ್ದ ವೇಳೆ ಅಚಾನಕ್ ಕಾಡಾನೆ ಎದುರಾಗಿದೆ. ಗಾಬರಿಗೊಂಡ ಅವರು ತಕ್ಷಣ ಬೈಕ್ ಬಿಟ್ಟು ಓಡಿ ಪ್ರಾಣ ಉಳಿಸಿಕೊಂಡಿದ್ದಾರೆ. ಈ ವೇಳೆ ಆನೆಯು ರಸ್ತೆಯಲ್ಲಿದ್ದ ಬೈಕ್ ಅನ್ನು ತುಳಿದು ಗಂಭೀರವಾಗಿ ಹಾನಿಗೊಳಿಸಿದೆ. ಘಟನೆಯ ಸುದ್ದಿ ತಿಳಿದ ತಕ್ಷಣ ಅರಣ್ಯ ಇಲಾಖೆ
Jan 241 min read


ಗಣರಾಜ್ಯೋತ್ಸವ–2026ಕ್ಕೆ ಹೊಸ ಇತಿಹಾಸ: 140 ಪುರುಷರ CRPF ಪಡೆಯ ನೇತೃತ್ವ ವಹಿಸಲಿರುವ ಮಹಿಳಾ ಅಧಿಕಾರಿ ಸಿಮ್ರನ್ ಬಾಲಾ
ನವದೆಹಲಿ: ಗಣರಾಜ್ಯೋತ್ಸವ–2026ರ ಪಥಸಂಚಲನದಲ್ಲಿ ಇತಿಹಾಸ ನಿರ್ಮಾಣವಾಗಲಿದೆ. ಕೇಂದ್ರ ಮೀಸಲು ಪೊಲೀಸ್ ಪಡೆ (CRPF)ಯ 140 ಮಂದಿ ಪುರುಷರನ್ನೊಳಗೊಂಡ ಪಥಸಂಚಲನ ಪಡೆಯನ್ನು ಮೊದಲ ಬಾರಿಗೆ ಮಹಿಳಾ ಅಧಿಕಾರಿ ಸಿಮ್ರನ್ ಬಾಲಾ (Simran Bala) ನೇತೃತ್ವ ವಹಿಸಲಿದ್ದಾರೆ. CRPFನಲ್ಲಿ ಸೇವೆ ಸಲ್ಲಿಸುತ್ತಿರುವ ಸಿಮ್ರನ್ ಬಾಲಾ, ಗಣರಾಜ್ಯೋತ್ಸವದ ಪ್ರಮುಖ ಕಾರ್ಯಕ್ರಮದಲ್ಲಿ ಪುರುಷರ ಪಥಸಂಚಲನ ಪಡೆಗೆ ಕಮಾಂಡ್ ನೀಡುವ ಮೂಲಕ ಹೊಸ ಮೈಲಿಗಲ್ಲು ಸ್ಥಾಪಿಸಲಿದ್ದಾರೆ. ಇದು ಕೇವಲ ವೈಯಕ್ತಿಕ ಸಾಧನೆ ಮಾತ್ರವಲ್ಲದೆ, ಮಹಿಳೆಯರ ಸಾಮರ್ಥ್ಯ ಮತ್ತು ಸಮಾನತೆಯ ಸಂಕೇತವಾಗಿಯೂ ಗುರುತಿಸಲಾಗಿದೆ. ರಾಷ್ಟ್ರೀಯ ಮಟ್ಟದ ಈ ಗೌರವ
Jan 241 min read


ಕಾರವಾರ: ವೈರಲ್ ವೀಡಿಯೋಗೆ ಬಲಿಯಾದ ವೈದ್ಯ; ರಾಜೀವ್ ಪಿಕಳೆ ಪ್ರಕರಣದಲ್ಲಿ ಇಬ್ಬರ ಬಂಧನ
ಕಾರವಾರ: ಸಾಮಾಜಿಕ ಹಾಗೂ ವೈದ್ಯಕೀಯ ವಲಯದಲ್ಲಿ ಗೌರವ ಪಡೆದ ಕುಟುಂಬಕ್ಕೆ ಸೇರಿದ ವೈದ್ಯ ರಾಜೀವ್ ಪಿಕಳೆ ಆತ್ಮಹತ್ಯೆ (Rajiv Pikale Case) ಪ್ರಕರಣಕ್ಕೆ ಸಂಬಂಧಿಸಿದಂತೆ ಅಂಕೋಲಾ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಜಾಲತಾಣದಲ್ಲಿ ಅವಮಾನಕಾರಿ ವೀಡಿಯೋ ವೈರಲ್ ಆಗಿದ್ದೇ ಈ ದುರಂತಕ್ಕೆ ಕಾರಣವೆಂದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲ್ಲೂಕಿನ ಹಟ್ಟಿಕೇರಿಯಲ್ಲಿ ವಾಸವಾಗಿದ್ದ ರಾಜೀವ್ ಪಿಕಳೆ, ತಮ್ಮ ನಿವಾಸದಲ್ಲೇ ಡಬಲ್ ಬ್ಯಾರಲ್ ಗನ್ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಆರ್ಥಿಕವಾಗಿ ಸುಸ್ಥಿತಿಯಲ್ಲಿದ್ದರೂ ಒಂಟಿಯಾಗಿ ವಾಸಿಸುತ್ತಿದ್
Jan 241 min read


ಬಳ್ಳಾರಿ ಬ್ಯಾನರ್ ಗಲಾಟೆ ಮಾಸುವ ಮುನ್ನವೇ ರೆಡ್ಡಿ–ಶ್ರೀರಾಮುಲುಗೆ ಸೇರಿದ ಮಾಡೆಲ್ ಹೌಸ್ಗೆ ಬೆಂಕಿ
ರಾಜ್ಯ ರಾಜಕಾರಣದಲ್ಲಿ ಮತ್ತೆ ಭಾರೀ ಸಂಚಲನ ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ನಡೆದ ಬ್ಯಾನರ್ ಗಲಾಟೆ ಹಾಗೂ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ ಗುಂಡೇಟಿಗೆ ಬಲಿಯಾದ ಪ್ರಕರಣ ಇನ್ನೂ ಮಾಸುವ ಮುನ್ನವೇ ಮತ್ತೊಂದು ಗಂಭೀರ ಘಟನೆ ನಡೆದಿದೆ. ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಹಾಗೂ ಮಾಜಿ ಸಚಿವ ಬಿ. ಶ್ರೀರಾಮುಲು ಅವರಿಗೆ ಸೇರಿದ ಜಿ–ಸ್ಕ್ವೇರ್ ಲೇಔಟ್ನಲ್ಲಿರುವ ಮಾಡೆಲ್ ಹೌಸ್ಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಘಟನೆ ಬೆಳಕಿಗೆ ಬಂದಿದೆ. ಈ ಅಗ್ನಿ ಅವಘಡದ ಹಿಂದೆ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಶಾಸಕರ ಬೆಂಬಲಿಗರೇ ಇದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಪ್ರಕರಣ ರಾಜ್ಯ
Jan 242 min read


ಇಂದಿನ ರಾಶಿಫಲ | ಎಲ್ಲಾ 12 ರಾಶಿಗಳಿಗೆ ಫಲಾಫಲ
ಮೇಷ ರಾಶಿ ನೀರಿನ ಪ್ರದೇಶಗಳಲ್ಲಿ ಇಂದು ವಿಶೇಷ ಎಚ್ಚರಿಕೆ ಅಗತ್ಯ. ಸರ್ಕಾರದಿಂದ ಬರುವ ಗೌರವ ಅಥವಾ ಅವಕಾಶವನ್ನು ತಳ್ಳಿಹಾಕುವ ಸಾಧ್ಯತೆ ಇದೆ. ಹೂಡಿಕೆ ವಿಷಯದಲ್ಲಿ ಯಾರಾದರೂ ತಪ್ಪು ದಾರಿಯತ್ತ ನಿಮ್ಮನ್ನು ಕರೆದೊಯ್ಯಬಹುದು. ಉದ್ಯಮಿಗಳ ಭೇಟಿಯಿಂದ ಹೊಸ ಅವಕಾಶಗಳ ಸುಳಿವು ಸಿಗಲಿದೆ. ಭೂ ಖರೀದಿಗೆ ಇದು ಉತ್ತಮ ಸಮಯ. ಯೋಗಾಭ್ಯಾಸದಿಂದ ಮನಸ್ಸಿನ ಅಶಾಂತಿ ಕಡಿಮೆಯಾಗಲಿದೆ. ಕೆಲವರು ನಿಮ್ಮನ್ನು ಮಾತಿನಿಂದಲೇ ನಿಯಂತ್ರಿಸಲು ಪ್ರಯತ್ನಿಸಬಹುದು. ವೃಷಭ ರಾಶಿ ಆಸ್ತಿ ಗಳಿಕೆಯ ಕುರಿತು ಗಂಭೀರ ಚಿಂತನೆ ನಡೆಸುವಿರಿ. ಎಲ್ಲ ವಿಚಾರಗಳನ್ನು ಎಲ್ಲರೊಂದಿಗೆ ಹಂಚಿಕೊಳ್ಳುವುದು ಒಳಿತಲ್ಲ. ಅನಗತ್ಯ ಗೊಂದಲಗಳನ್ನು ತಪ
Jan 242 min read


IND vs NZ T20: 92 ಎಸೆತಗಳಲ್ಲಿ 208 ರನ್ ಚೇಸ್ – ಟೀಂ ಇಂಡಿಯಾ ವಿಶ್ವ ದಾಖಲೆ
ಭಾರತ ಕ್ರಿಕೆಟ್ ತಂಡ ಮತ್ತು ನ್ಯೂಜಿಲೆಂಡ್ ಕ್ರಿಕೆಟ್ ತಂಡ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಟೀಂ ಇಂಡಿಯಾ ಐತಿಹಾಸಿಕ ಸಾಧನೆ ಮಾಡಿದೆ. ರಾಯ್ಪುರದ ಶಹೀದ್ ವೀರ್ ನಾರಾಯಣ್ ಸಿಂಗ್ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಭಾರತ 7 ವಿಕೆಟ್ಗಳಿಂದ ಭರ್ಜರಿ ಗೆಲುವು ದಾಖಲಿಸಿತು. ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ತಂಡ ನಿಗದಿತ 20 ಓವರ್ಗಳಲ್ಲಿ 208 ರನ್ಗಳ ದೊಡ್ಡ ಮೊತ್ತವನ್ನು ಕಲೆಹಾಕಿತು. ಆದರೆ ಈ ಗುರಿಯನ್ನು ಟೀಂ ಇಂಡಿಯಾ ಕೇವಲ 92 ಎಸೆತಗಳಲ್ಲಿ (15.2 ಓವರ್) ಬೆನ್ನಟ್ಟಿ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತಿ ಕಡಿಮೆ ಎಸೆತಗಳಲ್
Jan 231 min read


ಪುತ್ತೂರು ಕೋಟಿ-ಚೆನ್ನಯ್ಯ ಜೋಡುಕೆರೆ ಕಂಬಳ: ಮದ್ಯ ಮಾರಾಟ ನಿಷೇದ
ಪುತ್ತೂರಿನ ಐತಿಹಾಸಿಕ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವಮಾರು ಗದ್ದೆಯಲ್ಲಿ 33ನೇ ವರ್ಷದ ‘ಕೋಟಿ-ಚೆನ್ನಯ್ಯ’ ಜೋಡುಕೆರೆ ಕಂಬಳವು ಜನವರಿ 24ರಿಂದ ಅದ್ದೂರಿಯಾಗಿ ಪ್ರಾರಂಭಗೊಳ್ಳಲಿದೆ. ಜನವರಿ 25ರವರೆಗೆ ನಡೆಯಲಿರುವ ಈ ಜಾನಪದ ಕ್ರೀಡಾಕೂಟಕ್ಕೆ ರಾಜ್ಯದ ವಿವಿಧೆಡೆಯಿಂದ ಸಾವಿರಾರು ಸಂಖ್ಯೆಯಲ್ಲಿ ಕಂಬಳಾಭಿಮಾನಿಗಳು ಹಾಗೂ ಪ್ರವಾಸಿಗರು ಆಗಮಿಸುವ ನಿರೀಕ್ಷೆಯಿದೆ. ಈ ಬೃಹತ್ ಜನಸಂದಣಿಯನ್ನು ಗಮನದಲ್ಲಿಟ್ಟುಕೊಂಡು ಕಾರ್ಯಕ್ರಮದ ಯಶಸ್ವಿ ನಿರ್ವಹಣೆಗೆ ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಪುತ್ತೂರು ನಗರವು ಮತೀಯವಾಗಿ ಅತೀ ಸೂಕ್ಷ್ಮ ಪ್ರದೇಶವೆಂದು...
Jan 231 min read


ಮಂಗಳೂರಿಗೆ ಒಲಿದ ‘ದೇಶದ ಅತ್ಯಂತ ಸುರಕ್ಷಿತ ನಗರ’ ಎಂಬ ಹೆಗ್ಗಳಿಕೆ: ನಂಬಿಯೋ (Numbeo) ಜಾಗತಿಕ ವರದಿ ಬಿಡುಗಡೆ
ನಂಬಿಯೋ (Numbeo) ಸಂಸ್ಥೆಯು ಬಿಡುಗಡೆ ಮಾಡಿರುವ ‘ಸೇಫ್ಟಿ ಇಂಡೆಕ್ಸ್–2026’ರ (ಸುರಕ್ಷತಾ ಸೂಚ್ಯಂಕ) ವರದಿಯಲ್ಲಿ ಕರಾವಳಿಯ ಹೆಮ್ಮೆಯ ನಗರಿ ಮಂಗಳೂರು ಭಾರತದಲ್ಲೇ ಅತ್ಯಂತ ಸುರಕ್ಷಿತ ನಗರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ವಿಶ್ವದಾದ್ಯಂತ ಒಟ್ಟು 304 ಪ್ರಮುಖ ನಗರಗಳನ್ನು ಒಳಗೊಂಡ ಈ ಸಮಗ್ರ ಸಮೀಕ್ಷೆಯಲ್ಲಿ, ಮಂಗಳೂರು ಅಗ್ರಸ್ಥಾನ ಪಡೆಯುವ ಮೂಲಕ ರಾಷ್ಟ್ರಮಟ್ಟದಲ್ಲಿ ಗಮನ ಸೆಳೆದಿದೆ. ಈ ವರದಿಯು ಮಂಗಳೂರಿನ ನಾಗರಿಕರ ನೆಮ್ಮದಿಯ ಜೀವನ ಹಾಗೂ ನಗರದ ಶಿಸ್ತುಬದ್ಧ ವಾತಾವರಣಕ್ಕೆ ಹಿಡಿದ ಕನ್ನಡಿಯಾಗಿದೆ. ಸಾರ್ವಜನಿಕ ಸುರಕ್ಷತೆ, ಅಪರಾಧ ಚಟುವಟಿಕೆಗಳ ಬಗ್ಗೆ ಸಾರ್ವಜನಿಕರ ಅಭಿಪ್ರಾಯ ಹಾಗೂ ನಗರದ ಭದ
Jan 231 min read
Archive
bottom of page


