top of page
News Articles
Sathyapatha News Plus


ಪ್ರಧಾನಿ ಮೋದಿ 'ನಾಟಕ' ಎಂಬ ಹೇಳಿಕೆಗೆ ಪ್ರಿಯಾಂಕಾ ಗಾಂಧಿ ತಿರುಗೇಟು
ಸಂಸತ್ತಿನ ಚಳಿಗಾಲದ ಅಧಿವೇಶನ ಪ್ರಾರಂಭವಾಗುತ್ತಿದ್ದಂತೆ ಆಡಳಿತಾರೂಢ ಬಿಜೆಪಿ ಮತ್ತು ವಿರೋಧ ಪಕ್ಷಗಳ ನಡುವಿನ ವಾಕ್ಸಮರ ತಾರಕಕ್ಕೇರಿದೆ. ಅಧಿವೇಶನಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ವಿರೋಧ ಪಕ್ಷಗಳ ವರ್ತನೆಯನ್ನು 'ನಾಟಕ' ಎಂದು ಟೀಕಿಸಿದ್ದಕ್ಕೆ ಕಾಂಗ್ರೆಸ್ ನಾಯಕಿ ಹಾಗೂ ವಯನಾಡು ಸಂಸದೆ ಪ್ರಿಯಾಂಕಾ ಗಾಂಧಿ ಅವರು ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಧಾನಿಯವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ ಪ್ರಿಯಾಂಕಾ ಗಾಂಧಿ, ಸಂಸತ್ತಿನಲ್ಲಿ ಜನರ ಜ್ವಲಂತ ಸಮಸ್ಯೆಗಳನ್ನು ಎತ್ತಿ ತೋರಿಸುವುದು ನಾಟಕವಲ್ಲ. ಬದಲಾಗಿ, ಈ ಸಮಸ್ಯೆಗಳ ಬಗ್ಗೆ ಚರ್ಚಿಸಲು ಅವಕಾಶ ನೀಡದೆ ಸರ್ಕಾರವೇ ಪಲಾಯನ ಮಾಡ
Dec 2, 20251 min read


ನೆರೆಯ ದೇಶಗಳಿಂದ ಅಡಿಕೆ ಆಮದು: ಸಂಸತ್ತಿನಲ್ಲಿ ಗಂಭೀರ ವಿಷಯ ಪ್ರಸ್ತಾಪಿಸಿದ ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ
ಸುಂಕಮುಕ್ತ ವ್ಯವಸ್ಥೆಯ ದುರ್ಬಳಕೆಯಿಂದ ದೇಶದ ಅಡಿಕೆ ಬೆಳೆಗಾರರಿಗೆ ಆರ್ಥಿಕ ಸಂಕಷ್ಟ: ಸಂಸದರ ಮನವಿ ನವದೆಹಲಿ: ಭೂತಾನ್, ಮಯನ್ಮಾರ್ ಮತ್ತು ಶ್ರೀಲಂಕಾದಂತಹ ನೆರೆಯ ದೇಶಗಳಿಂದ ಭಾರೀ ಪ್ರಮಾಣದಲ್ಲಿ ಅಡಿಕೆ ಆಮದು ಆಗುತ್ತಿರುವುದು ದೇಶದ ಅಡಿಕೆ ಬೆಳೆಗಾರರ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಲೋಕಸಭೆಯ ಚಳಿಗಾಲದ ಅಧಿವೇಶನದ ಮೊದಲ ದಿನವೇ ಪ್ರಸ್ತಾಪಿಸಿ ಸದನದ ಗಮನ ಸೆಳೆದಿದ್ದಾರೆ. ನೆರೆಯ ಸಣ್ಣ ದೇಶಗಳಿಗೆ ವ್ಯಾಪಾರ ಉತ್ತೇಜನ ನೀಡುವ ಸದುದ್ದೇಶದಿಂದ ಜಾರಿಯಲ್ಲಿರುವ ಸುಂಕ ಮುಕ್ತ (Duty-Free Quota-Free - DFQF) ವ್ಯವಸ್ಥೆಯಡಿ ಶೂನ್ಯ ಸು
Dec 2, 20251 min read


ಪುತ್ತೂರಿನಲ್ಲಿ ಮುಂದುವರಿದ ಬಿಜೆಪಿ-ಪುತ್ತಿಲ ಪರಿವಾರ ಜಟಾಪಟಿ: ಕಾರ್ಯಕ್ರಮದಿಂದ ಬಿಜೆಪಿ ಉಪಾಧ್ಯಕ್ಷ ಹೊರಕ್ಕೆ!
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಬಿಜೆಪಿ ಮತ್ತು ಪುತ್ತಿಲ ಪರಿವಾರದ ನಡುವಿನ ಮುಸುಕಿನ ಜಟಾಪಟಿ ತಾರಕಕ್ಕೇರಿದೆ. ಇತ್ತೀಚೆಗೆ ನಡೆದ ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮದಲ್ಲಿ ಈ ಭಿನ್ನಮತ ಸ್ಫೋಟಗೊಂಡಿದ್ದು, ಪುತ್ತಿಲ ಪರಿವಾರದ ಕಾರ್ಯಕರ್ತರು ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತ ಅವರನ್ನು ಕಾರ್ಯಕ್ರಮದಿಂದ ಹೊರದಬ್ಬಿದ ಘಟನೆ ವರದಿಯಾಗಿದೆ. ರಾಜಕೀಯ ಕೆಸರೆರೆಚಾಟ ಈಗ ದೇವರ ಕಾರ್ಯಕ್ರಮಕ್ಕೂ ಹಬ್ಬಿರುವುದು ಸ್ಥಳೀಯ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಯು ಪುತ್ತೂರಿನಲ್ಲಿ ಪಕ್ಷದೊಳಗೆ ನಡೆಯುತ್ತಿರುವ ಆಂತರಿಕ ತಿಕ್ಕಾಟವನ್ನು ಮತ
Dec 1, 20251 min read


ಇಂದಿನ ಚಿನ್ನದ ದರ
ಇಂದಿನ (ನವೆಂಬರ್ 20, 2025) ಚಿನ್ನದ ದರಗಳು ಇಲ್ಲಿವೆ. ಕರ್ನಾಟಕದ ಪ್ರಮುಖ ನಗರಗಳಾದ ಬೆಂಗಳೂರು, ಮಂಗಳೂರು ಮತ್ತು ಮೈಸೂರಿನಲ್ಲಿ 22 ಕ್ಯಾರೆಟ್ ಮತ್ತು 24 ಕ್ಯಾರೆಟ್ ಚಿನ್ನದ ಬೆಲೆಗಳಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ. ಕರ್ನಾಟಕದಲ್ಲಿ ಇಂದಿನ ಚಿನ್ನದ ದರ (ಪ್ರತಿ 10 ಗ್ರಾಂಗೆ): 24 ಕ್ಯಾರೆಟ್ ಚಿನ್ನ: ₹1,24,690 (ನಿನ್ನೆಗೆ ಹೋಲಿಸಿದರೆ ₹170 ಇಳಿಕೆ) 22 ಕ್ಯಾರೆಟ್ ಚಿನ್ನ: ₹1,14,300 (ನಿನ್ನೆಗೆ ಹೋಲಿಸಿದರೆ ₹150 ಇಳಿಕೆ)
Dec 1, 20251 min read


ಮಹಿಳೆಯರ ರಕ್ಷಣೆಗಾಗಿ 'ಸುರಕ್ಷಾ' SOS ಆ್ಯಪ್ ಲೋಕಾರ್ಪಣೆ: ತುರ್ತು ನೆರವಿಗೆ ತಕ್ಷಣದ ಸ್ಪಂದನೆ
ಮಹಿಳೆಯರ ಸುರಕ್ಷತೆಯನ್ನು ಬಲಪಡಿಸುವ ನಿಟ್ಟಿನಲ್ಲಿ ತುಮಕೂರು ಪೊಲೀಸರು ಮಹತ್ವದ ಹೆಜ್ಜೆಯನ್ನಿಟ್ಟಿದ್ದು, ಬೆಂಗಳೂರಿನ ನಂತರ ಇದೀಗ ತುಮಕೂರಿನಲ್ಲೂ 'ಸುರಕ್ಷಾ' SOS ಆ್ಯಪ್ಗೆ ಅಧಿಕೃತವಾಗಿ ಚಾಲನೆ ನೀಡಲಾಗಿದೆ. ಕೆಲಸಕ್ಕೆ ಹೋಗುವ ಮಹಿಳೆಯರು, ಕಾಲೇಜು ವಿದ್ಯಾರ್ಥಿನಿಯರು ಹಾಗೂ ನಿರ್ಜನ ಪ್ರದೇಶಗಳಲ್ಲಿ ಸಂಚರಿಸುವಾಗ ಎದುರಾಗುವ ಯಾವುದೇ ಆತಂಕ ಅಥವಾ ಅಪಾಯಕಾರಿ ಸನ್ನಿವೇಶಗಳಲ್ಲಿ ತ್ವರಿತ ನೆರವು ಒದಗಿಸಲು ಈ ಆ್ಯಪ್ ಅತ್ಯಂತ ಪರಿಣಾಮಕಾರಿ ಸಾಧನವಾಗಲಿದೆ. ಮಹಿಳಾ ರಕ್ಷಣೆಗೆ ಪ್ರಾಮುಖ್ಯತೆ ನೀಡುವ ರಾಜ್ಯ ಸರ್ಕಾರದ ಯೋಜನೆಯಡಿ, ತುಮಕೂರು ಸ್ಮಾರ್ಟ್ ಸಿಟಿ ಘಟಕವು ಈ ಮಹತ್ವದ ಆ್ಯಪ್ ಅನ್ನು ಅಭಿವೃದ್ಧಿ
Dec 1, 20251 min read


ತಂಬಾಕು ಮತ್ತು ಪಾನ್ ಮಸಾಲಾ ಮೇಲೆ ಹೊಸ ಸೆಸ್ ವಿಧಿಸುವ ಮಸೂದೆ ಮಂಡನೆ: ಬೆಲೆ ಇಳಿಕೆ ತಡೆಯಲು ಸರ್ಕಾರದ ನಿರ್ಧಾರ
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸೋಮವಾರ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ತಂಬಾಕು, ತಂಬಾಕು ಉತ್ಪನ್ನಗಳು ಮತ್ತು ಪಾನ್ ಮಸಾಲಾ ಮೇಲೆ ಹೊಸ ಸೆಸ್ ವಿಧಿಸುವ ಸಂಬಂಧದ ಮಹತ್ವದ ಮಸೂದೆಯನ್ನು ಮಂಡಿಸಲಿದ್ದಾರೆ. ಜಿಎಸ್ಟಿ ದರ ಕಡಿತದ ನಂತರವೂ ಈ ಉತ್ಪನ್ನಗಳ ಬೆಲೆ ಇಳಿಯಬಾರದು ಎಂಬ ಉದ್ದೇಶದಿಂದ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ. ಈ ಉತ್ಪನ್ನಗಳ ಮೇಲೆ ಸದ್ಯಕ್ಕೆ 2026ರ ಮಾರ್ಚ್ವರೆಗೆ ವಿಧಿಸಲಾಗುತ್ತಿರುವ ಪರಿಹಾರಾತ್ಮಕ ಸೆಸ್ನ ಬದಲು, ಇನ್ನು ಮುಂದೆ ಆರೋಗ್ಯ ಮತ್ತು ಭದ್ರತಾ ಸೆಸ್ ರೂಪದಲ್ಲಿ ಸುಂಕ ವಿಧಿಸಲು ಸರ್ಕಾರ ತೀರ್ಮಾನಿಸಿದೆ. ಈ ಹೊಸ ಸುಂಕವನ್ನು ವಿಧಿಸುವುದರ ಹಿಂದ
Dec 1, 20251 min read


ಕೋಣಿ ಗ್ರಾಮದಲ್ಲಿ ಅಪಘಾತ: ಮೂವರಿಗೆ ಗಾಯ
ಕೋಣಿ ಗ್ರಾಮದ ಎಚ್ಎಂಟಿ ಕ್ರಾಸ್ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಮತ್ತು ರಿಕ್ಷಾದಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡಿದ್ದಾರೆ. ಈ ಘಟನೆಯು ನಿನ್ನೆ, ಸೋಮವಾರ ಮಧ್ಯಾಹ್ನ ಸುಮಾರು 3:30 ರ ಸುಮಾರಿಗೆ ನಡೆದಿದೆ. ಗಾಯಗೊಂಡವರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಬಂದ ಸಂಚಾರ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ಅಪಘಾತಕ್ಕೆ ಆಟೋ ರಿಕ್ಷಾ ಚಾಲಕನ ಅಜಾಗರೂಕತೆ ಕಾರಣ ಎಂದು ತಿಳಿದುಬಂದಿದೆ. ಬಸ್ರೂರು ಪೇಟೆ ಕಡೆಯಿಂದ ಮೂರುಕೈ ಕಡೆಗೆ ಬರುತ್ತಿದ್ದ ಬೈಕ್ (KA 20 EB 6656) ಇದ್ದಕ್ಕಿದ್ದಂತೆ ಸೂಚನೆ ನೀಡದೆ ರಸ್ತೆಯಲ್ಲಿ ತಿರುಗಿಸಿದ ರಿಕ್ಷಾ (KA
Dec 1, 20251 min read


25 ವರ್ಷಗಳ ಹಳೆಯ ಉಡುಪಿ-ಹೈದರಾಬಾದ್ ಕೆಎಸ್ಆರ್ಟಿಸಿ ಬಸ್ ಸೇವೆ ಸ್ಥಗಿತ!
ಕರಾವಳಿ ಕರ್ನಾಟಕದಿಂದ ಆಂಧ್ರಪ್ರದೇಶದ ಹೈದರಾಬಾದ್ಗೆ ಸಂಪರ್ಕ ಕಲ್ಪಿಸುತ್ತಿದ್ದ, 25 ವರ್ಷಗಳಷ್ಟು ಹಳೆಯದಾದ ಕೆಎಸ್ಆರ್ಟಿಸಿ (KSRTC) ನಾನ್-ಎಸಿ ಸ್ಲೀಪರ್ ಬಸ್ ಸೇವೆಯನ್ನು ಭಾರಿ ನಷ್ಟದ ಕಾರಣದಿಂದಾಗಿ ದಿಢೀರನೆ ಸ್ಥಗಿತಗೊಳಿಸಲಾಗಿದೆ. ಸುಮಾರು 10-15 ದಿನಗಳಿಂದ ಕಾರ್ಯಾಚರಣೆಯನ್ನು ನಿಲ್ಲಿಸಿರುವ ಈ ಬಸ್, ಉಡುಪಿ, ಕುಂದಾಪುರ, ಸಿದ್ದಾಪುರದಿಂದ ಹೊರಟು ಶಿವಮೊಗ್ಗ, ರಾಯಚೂರು ಮೂಲಕ ಹೈದರಾಬಾದ್ಗೆ ತಲುಪುತ್ತಿತ್ತು. ಸತತವಾಗಿ ಹಲವು ತಿಂಗಳುಗಳಿಂದ ನಷ್ಟ ಅನುಭವಿಸುತ್ತಿದ್ದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಬಸ್ ಸೇವೆಯನ್ನು ಅವಲಂಬಿಸಿದ್ದ ಕರಾವಳಿ ಜಿಲ್ಲೆಗಳ ಅನೇಕ ಪ್ರಯಾಣಿ
Nov 30, 20251 min read


ತುಳುನಾಡಿನ ದೈವಕ್ಕೆ ರಣವೀರ್ ಸಿಂಗ್ ಅಪಮಾನ: 'ಹೆಣ್ಣು ದೆವ್ವ' ಎಂದಿದ್ದಕ್ಕೆ ವ್ಯಾಪಕ ಟೀಕೆ
ಬಾಲಿವುಡ್ ನಟ ರಣವೀರ್ ಸಿಂಗ್ ಅವರು 'ಕಾಂತಾರ' (Kantara) ಸಿನಿಮಾದಲ್ಲಿ ಬರುವ ತುಳುನಾಡಿನ ದೈವದ ಕುರಿತು ನೀಡಿದ ಹೇಳಿಕೆ ಮತ್ತು ಮಾಡಿದ ಅನುಕರಣೆ ಇದೀಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಗೋವಾ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ (IFFI) ನಿರೂಪಕರಾಗಿದ್ದ ರಣವೀರ್ ಸಿಂಗ್, ನಟ-ನಿರ್ದೇಶಕ ರಿಷಬ್ ಶೆಟ್ಟಿ (Rishab Shetty) ಅವರ ಅಭಿನಯವನ್ನು ಹೊಗಳುವ ಭರದಲ್ಲಿ ದೈವವನ್ನು 'ಹೆಣ್ಣು ದೆವ್ವ' (Lady Ghost) ಎಂದು ಉಲ್ಲೇಖಿಸಿ ಅಪಹಾಸ್ಯ ಮಾಡಿದ್ದಾರೆ ಎನ್ನಲಾಗಿದೆ. ಅವರ ಈ ನಡೆಯು ದೈವಾರಾಧಕರ ಮತ್ತು ಸೋಷಿಯಲ್ ಮೀಡಿಯಾ ಬಳಕೆದಾರರ ಕೆಂಗಣ್ಣಿಗೆ ಗುರಿಯಾಗಿದ್ದು, ತುಳುನಾಡಿನ ಧಾರ್ಮಿಕ ಮತ್ತು
Nov 30, 20251 min read


ಶಕ್ತಿ ಯೋಜನೆ: ಮಹಿಳಾ ಮೀಸಲು ಸೀಟುಗಳ ಬಗ್ಗೆ ಬಸ್ ನಿರ್ವಾಹಕರ ಬೇಜವಾಬ್ದಾರಿ
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ 'ಶಕ್ತಿ' ಯೋಜನೆಯಡಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಗಳಲ್ಲಿ ಮಹಿಳಾ ಪ್ರಯಾಣಿಕರಿಗೆ ಉಚಿತ ಪ್ರಯಾಣದ ಗ್ಯಾರಂಟಿ ಜಾರಿಗೊಂಡಿದೆ. ಆದರೆ, ಈ ಗ್ಯಾರಂಟಿ ಯೋಜನೆಯು ಬಸ್ಗಳಲ್ಲಿನ ಮಹಿಳಾ ಮೀಸಲು ಸೀಟುಗಳ ಹಕ್ಕಿಗೆ ಸಂಚಕಾರ ತಂದಿದೆಯೇ ಎಂಬ ಪ್ರಶ್ನೆ ಇದೀಗ ಮೂಡಿದೆ. ಇಂದು ಬೆಳಿಗ್ಗೆ ಮಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ (KA.19, F-3196) ಬಸ್ನಲ್ಲಿ ನಡೆದ ಘಟನೆಯೊಂದು ಇದಕ್ಕೆ ಸಾಕ್ಷಿಯಾಗಿದೆ. ಬಸ್ಸಿನಲ್ಲಿ ಆಸನಗಳು ಖಾಲಿ ಇದ್ದರೂ ಸಹ, ಮಹಿಳೆಯರಿಗಾಗಿ ಮೀಸಲಾಗಿದ್ದ ಸೀಟುಗಳಲ್ಲಿ ಪುರುಷ ಪ್ರಯಾಣಿಕರು ಕುಳಿತುಕೊಂಡಿದ್ದರು ಎಂದು ವರದಿಯಾಗಿದೆ. ಘಟನೆಯ ಬ
Nov 30, 20251 min read


ಇತಿಹಾಸ ಪ್ರಸಿದ್ಧ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಧನು ಪೂಜೆ ಆಮಂತ್ರಣ ಪತ್ರಿಕೆ ಬಿಡುಗಡೆ
ಇತಿಹಾಸ ಪ್ರಸಿದ್ಧವಾದ ಸುಳ್ಯ ಸೀಮೆಯ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಡಿಸೆಂಬರ್ 16 ರಿಂದ ಆರಂಭಗೊಳ್ಳಲಿರುವ ಧನು ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ನವೆಂಬರ್ 29 ರಂದು ದೇವಳದ ಅಕ್ಷಯ ಮಂದಿರದಲ್ಲಿ ನೆರವೇರಿತು. ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಕೇಶವ ಕೊಳಲು ಮೂಲೆ ಅವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ದೇವಳದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಪಿ.ಬಿ. ದಿವಾಕರ ರೈ ಮತ್ತು ವ್ಯವಸ್ಥಾಪನ ಸಮಿತಿ ನಿಕಟ ಪೂರ್ವ ಅಧ್ಯಕ್ಷರಾದ ಕಿಶೋರ್ ಕುಮಾರ್ ಉಳುವಾರು ಅವರು ವೇದಿಕೆಯನ್ನು ಅಲಂಕರಿಸಿದ್ದರು. ನಿರಂತರ ಒಂದು ತಿಂಗಳ ಕಾಲ, ಪ್ರತಿದಿನ ಪ್ರಾತಃ
Nov 29, 20251 min read


ನಾಯಕತ್ವ ಗೊಂದಲಕ್ಕೆ ತೆರೆ: ಸಿಎಂ-ಡಿಸಿಎಂ ಜಂಟಿ ಸುದ್ದಿಗೋಷ್ಠಿ, ಒಗ್ಗಟ್ಟಿನ ಸಂದೇಶ ರವಾನೆ
ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ಕಳೆದ ಕೆಲವು ದಿನಗಳಿಂದ ಭಾರೀ ಚರ್ಚೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧಿಕೃತ ನಿವಾಸ 'ಕಾವೇರಿ'ಗೆ ಭೇಟಿ ನೀಡಿದ್ದು ಎಲ್ಲರ ಗಮನ ಸೆಳೆಯಿತು. ಡಿಕೆ ಶಿವಕುಮಾರ್ ಅವರು ಆಗಮಿಸುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡರು. ಉಭಯ ನಾಯಕರು ಉಪಾಹಾರ ಸೇವಿಸಿದರು. ಕಾಂಗ್ರೆಸ್ ಹೈಕಮಾಂಡ್ನ ನಿರ್ಧಾರದಂತೆ ನಡೆದ ಈ 'ಬ್ರೇಕ್ಫಾಸ್ಟ್ ಮೀಟಿಂಗ್' ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿತ್ತು. 2028ರ ಚುನಾವ
Nov 29, 20251 min read


ಅಕ್ರಮ ಗೋ ಸಾಗಾಟ: ನರಿಮೊಗರು ಬಳಿ ವಾಹನ ಕೆಟ್ಟು ನಿಂತು ಗೋವುಗಳನ್ನು ಬಿಟ್ಟು ಪರಾರಿ
ಪುತ್ತೂರು: ಪುತ್ತೂರು ತಾಲೂಕಿನ ನರಿಮೊಗರು ಗ್ರಾಮದ ಗಡಿಪಿಲ ಎಂಬಲ್ಲಿ ಇಂದು ಶನಿವಾರ ಮುಂಜಾನೆ ಅಕ್ರಮ ಗೋ ಸಾಗಾಟಕ್ಕೆ ಯತ್ನಿಸಿದ ಘಟನೆಯೊಂದು ನಡೆದಿದೆ. ಮುಂಜಾನೆ ಸುಮಾರು 5 ಗಂಟೆಯ ಸುಮಾರಿಗೆ ಗೋವುಗಳನ್ನು ತುಂಬಿಕೊಂಡು ಬರುತ್ತಿದ್ದ ವಾಹನವು ತಾಂತ್ರಿಕ ದೋಷದಿಂದ ಕೆಟ್ಟು ನಿಂತಿದೆ ಎಂದು ತಿಳಿದುಬಂದಿದೆ. ವಾಹನ ಕೆಟ್ಟು ನಿಂತದ್ದನ್ನು ಅರಿತ ಗೋ ಸಾಗಾಟ ಮಾಡುತ್ತಿದ್ದ ವ್ಯಕ್ತಿಗಳು ವಾಹನದಲ್ಲಿದ್ದ ಗೋವುಗಳನ್ನು ನಡುರಸ್ತೆಯಲ್ಲೇ ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾರೆ. ಈ ಘಟನೆಯ ಕುರಿತು ಮಾಹಿತಿ ಪಡೆದ ತಕ್ಷಣ, ಪುತ್ತಿಲ ಪರಿವಾರ ಸೇವಾ ಟ್ರಸ್ಟ್ನ ಕಾರ್ಯಕರ್ತರು ಸ್ಥಳಕ್ಕೆ ಧಾವಿಸಿ ಪರಿಶೀಲನೆ
Nov 29, 20251 min read


ಇಂದಿನ ಬಂಗಾರದ ಧಾರಣೆ
ಇಂದಿನ (ನವೆಂಬರ್ 20, 2025) ಚಿನ್ನದ ದರಗಳು ಇಲ್ಲಿವೆ. ಕರ್ನಾಟಕದ ಪ್ರಮುಖ ನಗರಗಳಾದ ಬೆಂಗಳೂರು, ಮಂಗಳೂರು ಮತ್ತು ಮೈಸೂರಿನಲ್ಲಿ 22 ಕ್ಯಾರೆಟ್ ಮತ್ತು 24 ಕ್ಯಾರೆಟ್ ಚಿನ್ನದ ಬೆಲೆಗಳಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ. ಕರ್ನಾಟಕದಲ್ಲಿ ಇಂದಿನ ಚಿನ್ನದ ದರ (ಪ್ರತಿ 10 ಗ್ರಾಂಗೆ): 24 ಕ್ಯಾರೆಟ್ ಚಿನ್ನ: ₹1,24,690 (ನಿನ್ನೆಗೆ ಹೋಲಿಸಿದರೆ ₹170 ಇಳಿಕೆ) 22 ಕ್ಯಾರೆಟ್ ಚಿನ್ನ: ₹1,14,300 (ನಿನ್ನೆಗೆ ಹೋಲಿಸಿದರೆ ₹150 ಇಳಿಕೆ)
Nov 29, 20251 min read


ಶ್ವೇತಭವನದ ಗುಂಡಿನ ದಾಳಿ ಬೆನ್ನಲ್ಲೇ: 3ನೇ ಜಗತ್ತಿನ ದೇಶಗಳಿಂದ ವಲಸೆ ಶಾಶ್ವತ ಸ್ಥಗಿತಕ್ಕೆ ಟ್ರಂಪ್ ಘೋಷಣೆ
ಶ್ವೇತಭವನದ ಬಳಿ ನಡೆದ ಗುಂಡಿನ ದಾಳಿಯ ಘಟನೆಗೆ ತೀವ್ರ ಪ್ರತಿಕ್ರಿಯೆ ನೀಡಿರುವ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, 3ನೇ ಜಗತ್ತಿನ ದೇಶಗಳಿಂದ ಅಮೆರಿಕಕ್ಕೆ ಶಾಶ್ವತವಾಗಿ ವಲಸೆ ನಿಲ್ಲಿಸುವ ಮಹತ್ವದ ನಿರ್ಧಾರವನ್ನು ಘೋಷಿಸಿದ್ದಾರೆ. ಭದ್ರತಾ ಕಾಳಜಿಗಳನ್ನು ಮುಂದಿಟ್ಟುಕೊಂಡು, ಶ್ವೇತಭವನದ ಘಟನೆಯ ನಂತರ ವಲಸೆ ನೀತಿಯ ವಿರುದ್ಧ ವ್ಯಾಪಕ ಮತ್ತು ತೀವ್ರ ಕ್ರಮ ಕೈಗೊಳ್ಳುವುದಾಗಿ ಅವರು ತಿಳಿಸಿದ್ದಾರೆ. ಅಮೆರಿಕದ ಭದ್ರತಾ ವ್ಯವಸ್ಥೆ ಸಂಪೂರ್ಣವಾಗಿ ಚೇತರಿಸಿಕೊಳ್ಳಲು ಈ ನಿರ್ಧಾರ ಅತ್ಯಗತ್ಯ ಎಂದು ಟ್ರಂಪ್ ಪ್ರತಿಪಾದಿಸಿದ್ದಾರೆ. ಅಲ್ಲದೆ, ದೇಶದ ತಾಂತ್ರಿಕ ಪ್ರಗತಿ ಮತ್ತು ಜನರ ಜೀವನ ಪರಿಸ್ಥಿತಿಗಳ
Nov 29, 20251 min read


ಕೊಲ್ಲಮೊಗ್ರು : ಶೇಂದಿ ಇಳಿಸಲು ತೆಂಗಿನ ಮರವೇರಿದ್ದ ವ್ಯಕ್ತಿ ಮರದಲ್ಲೇ ಮೃತ
ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯ ಕೊಲ್ಲಮೊಗ್ರ ಗ್ರಾಮದಲ್ಲಿ ತೆಂಗಿನ ಮರವೇರಿ ಶೇಂದಿ ಇಳಿಸುತ್ತಿದ್ದ ಕೇರಳ ಮೂಲದ ವ್ಯಕ್ತಿಯೋರ್ವರು ಮರದಲ್ಲೇ ಮೃತಪಟ್ಟ ದಾರುಣ ಘಟನೆ ಸೋಮವಾರ ನಡೆದಿದೆ. ಕೊಲ್ಲಮೊಗ್ರು ಸಮೀಪದ ಪನ್ನೆಯಲ್ಲಿ ವ್ಯಕ್ತಿಯೊಬ್ಬರ ಜಾಗದಲ್ಲಿ ಕೇರಳ ಮೂಲದ ಈ ವ್ಯಕ್ತಿಯು ಶೇಂದಿ ಮೂರ್ತೆ (ಶೇಂದಿ ಇಳಿಸುವ ಕಾಯಕ) ನಡೆಸುತ್ತಿದ್ದರು. ಎಂದಿನಂತೆ, ಸೋಮವಾರದಂದು ಕೂಡಾ ಶೇಂದಿ ಇಳಿಸುವ ಸಲುವಾಗಿ ಅವರು ತೆಂಗಿನ ಮರವನ್ನು ಏರಿದ್ದರು. ಆದರೆ, ಮರದ ಮೇಲೆ ಇರುವಾಗಲೇ ಅವರು ತೀವ್ರ ಅಸ್ವಸ್ಥಗೊಂಡಿದ್ದು, ಸಹಾಯಕ್ಕಾಗಿ ಕೂಗಿಕೊಂಡಿದ್ದರೆಂದು ಸ್ಥಳೀಯರು ತಿಳಿಸಿದ್ದಾರೆ. ವಿಷಯ ತಿಳಿದ ಕೂಡಲೇ ಸ್ಥಳೀಯ
Nov 25, 20251 min read


ಕುಕ್ಕೆ ಸುಬ್ರಹ್ಮಣ್ಯ: ಚಂಪಾಷಷ್ಟಿ ಮಹೋತ್ಸವ ಹಿನ್ನಲೆ ಮದ್ಯದಂಗಡಿ ಮುಚ್ಚಲು ಡಿಸಿ ಆದೇಶ
ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆಯುವ ಪ್ರಸಿದ್ಧ ಚಂಪಾಷಷ್ಠಿ ಜಾತ್ರಾ ಮಹೋತ್ಸವ ಡಿಸೆಂಬರ್ 2 ರವರೆಗೆ ನಡೆಯಲಿದ್ದು, ಜಾತ್ರೆಯ ಮುಖ್ಯ ಕಾರ್ಯಕ್ರಮಗಳ ಅಂಗವಾಗಿ ನವೆಂಬರ್ 25 ರಂದು ಪಂಚಮಿ ರಥೋತ್ಸವ ಹಾಗೂ ತೈಲಾಭ್ಯಂಜನ, 26 ರಂದು ಚಂಪಾಷಷ್ಠಿ ಮಹಾರಥೋತ್ಸವ ಆಯೋಜಿಸಲಾಗಿದೆ. ಈ ಎರಡು ದಿನಗಳಲ್ಲಿ ಸುಮಾರು 50 ರಿಂದ 60 ಸಾವಿರ ಭಕ್ತಾದಿಗಳು ಭಾಗವಹಿಸುವ ನಿರೀಕ್ಷೆಯಿದೆ. ಭಕ್ತರ ಭದ್ರತೆ, ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ನವೆಂಬರ್ 25 ಬೆಳಿಗ್ಗೆ 6 ಗಂಟೆಯಿಂದ 26ರ ರಾತ್ರಿ 12 ಗಂಟೆಯವರೆಗೆ ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾಮ
Nov 25, 20251 min read


ಹೈಕಮಾಂಡ್ ತೀರ್ಮಾನಕ್ಕೆ ನಾವು ಬದ್ಧ: ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಏನು ತೀರ್ಮಾನ ಮಾಡುತ್ತದೋ ಅದನ್ನು ನಾನು ಹಾಗೂ ಡಿ.ಕೆ.ಶಿವಕುಮಾರ್ ಕಡ್ಡಾಯವಾಗಿ ಒಪ್ಪಿಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಶಿಡ್ಲಘಟ್ಟದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಐದು ತಿಂಗಳ ಹಿಂದೆ ಹೈಕಮಾಂಡ್ ಭೇಟಿಯಾದ ವೇಳೆ ಸಚಿವ ಸಂಪುಟ ಪುನಾರಚನೆ ಕುರಿತು ಚರ್ಚೆ ನಡೆದಿತ್ತು. ಆದರೆ, “ನಾನು 2.5 ವರ್ಷ ಮುಗಿದ ನಂತರ ಅದನ್ನು ಮಾಡೋಣ ಎಂದು ತಿಳಿಸಿದ್ದೇನೆ. ಈಗ ಹೈಕಮಾಂಡ್ ಏನು ಸೂಚನೆ ನೀಡುತ್ತಾರೋ ಅದರಂತೆ ನಡೆದುಕೊಳ್ಳುತ್ತೇವೆ” ಎಂದು ಹೇಳಿದರು. ಹಣದ ಬಗ್ಗೆ ಬಿಜೆಪಿ ಅಪಪ್ರಚಾರ ಸರ್ಕಾರದ ಬಳಿ ಹಣವಿಲ್ಲ ಎಂಬ ಬಿಜೆಪಿಯ ಆರೋಪವನ್ನು ತಳ್ಳಿಹ
Nov 24, 20251 min read
Archive
bottom of page



