top of page
News Articles
Sathyapatha News Plus


ಕೊಡಿಯಾಲಬೈಲು ಜೈಲಿನಲ್ಲಿ ಕೈದಿಗಳ ಬಳಿ ಮೊಬೈಲ್ ಪತ್ತೆ
ಮಂಗಳೂರಿನ ಕೊಡಿಯಾಲಬೈಲು ಜಿಲ್ಲಾ ಕಾರಾಗೃಹದಲ್ಲಿ ಇಬ್ಬರು ವಿಚಾರಣಾಧೀನ ಕೈದಿಗಳ ಬಳಿ ಅಕ್ರಮವಾಗಿ ಮೊಬೈಲ್ ಫೋನ್ಗಳು ಪತ್ತೆಯಾಗಿದ್ದು, ಜೈಲಿನ ಭದ್ರತೆಯ ಬಗ್ಗೆ ತೀವ್ರ ಆತಂಕ ಮೂಡಿಸಿದೆ. ಜುಲೈ 7ರಂದು ರಾತ್ರಿ ಜೈಲಿನ ಅಧೀಕ್ಷಕ ಶರಣ ಬಸಪ್ಪ ಸಿಬಂದಿಯೊಂದಿಗೆ ‘ಎ‘ ಬ್ಲಾಕ್ನಲ್ಲಿ ದಿಢೀರ್ ತಪಾಸಣೆ ನಡೆಸಿದಾಗ, ಕೈದಿಗಳಾದ ಮೊಹಮ್ಮದ್ ಅಜ್ಮಲ್ ಮತ್ತು ಮೊಹಮ್ಮದ್ ಇಕ್ಬಾಲ್ ಬಳಿ ಮೊಬೈಲ್ ಪತ್ತೆಯಾಗಿವೆ. ಜೈಲಿನ ನಿಯಮ ಉಲ್ಲಂಘಿಸಿ ಮೊಬೈಲ್ ಬಳಸುತ್ತಿದ್ದ ಈ ಇಬ್ಬರು ಆರೋಪಿಗಳ ವಿರುದ್ಧ ಬರ್ಕೆ ಪೊಲೀಸ್ ಠಾಣೆಯಲ್ಲಿ ಸದ್ಯ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
6 days ago1 min read


ಅಪ್ರಾಪ್ತ ಫುಟ್ಬಾಲ್ ಆಟಗಾರ್ತಿ ಮೇಲೆ ಅತ್ಯಾಚಾರ: ಕೋಚ್ ಬಂಧನ
ಫುಟ್ಬಾಲ್ನಲ್ಲಿ ದೊಡ್ಡ ಅವಕಾಶಗಳ ಭರವಸೆ ನೀಡಿ ಅಪ್ರಾಪ್ತ ಆಟಗಾರ್ತಿ ಮೇಲೆ ಮೂರು ವರ್ಷಗಳ ಕಾಲ ಅತ್ಯಾಚಾರ ಎಸಗಿದ ಹಾಗೂ ವಿಡಿಯೋ ಮಾಡಿ ಬ್ಲ್ಯಾಕ್ಮೇಲ್ ಮಾಡಿದ ಆರೋಪದ ಮೇಲೆ ಫುಟ್ಬಾಲ್ ತರಬೇತುದಾರನನ್ನು ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಖಾಸಗಿ ಫುಟ್ಬಾಲ್ ತರಬೇತುದಾರ ಅಭಿಜಿತ್ ಮೆಂಡಲ್ (36) ಬಂಧಿತ ಆರೋಪಿಯಾಗಿದ್ದಾನೆ. ಈತನ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. 2023 ರಲ್ಲಿ ವಸಾಯಿಯಲ್ಲಿರುವ ತರಬೇತಿ ಅಕಾಡೆಮಿಗೆ ಸೇರಿದ್ದ 17 ವರ್ಷದ ಬಾಲಕಿಯ ನಂಬಿಕೆ ಗಳಿಸಿ ಈ ಕೃತ್ಯ ಎಸಗಿ
Jun 141 min read


ಹುಟ್ಟುಹಬ್ಬದ ಪಾರ್ಟಿಯಲ್ಲಿ ದುರಂತ; ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು
ಶಿವಮೊಗ್ಗ ಜಿಲ್ಲೆಯ ಕುಂಸಿ ಸಮೀಪದ ಚೆನ್ನಹಳ್ಳಿ ಗ್ರಾಮದಲ್ಲಿ ಹುಟ್ಟುಹಬ್ಬದ ಸಂಭ್ರಮವು ದುರಂತದಲ್ಲಿ ಅಂತ್ಯಗೊಂಡಿದೆ. ಗೆಳೆಯನ ಬರ್ತ್ಡೇ ಪಾರ್ಟಿಯಲ್ಲಿ ಪಾಲ್ಗೊಂಡಿದ್ದ 21 ವರ್ಷದ ಸಚಿನ್ ಎಂಬ ಯುವಕ, ಊಟದ ವೇಳೆ ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಅಕಾಲಿಕ ಮರಣಕ್ಕೀಡಾಗಿದ್ದಾನೆ. ಪಾರ್ಟಿ ಮುಗಿಸಿ ನಿರ್ಮಾಣ ಹಂತದ ಕಟ್ಟಡವೊಂದಕ್ಕೆ ತೆರಳಿದ್ದ ಯುವಕ, ಮರುದಿನ ಮುಂಜಾನೆ ಶವವಾಗಿ ಪತ್ತೆಯಾಗಿದ್ದಾನೆ. ಘಟನಾ ಸ್ಥಳಕ್ಕೆ ಧಾವಿಸಿದ ಕುಂಸಿ ಪೊಲೀಸರು ತನಿಖೆ ನಡೆಸಿದ್ದು, ಮರಣೋತ್ತರ ಪರೀಕ್ಷೆಯಲ್ಲಿ ಸಾವಿನ ರಹಸ್ಯ ಬಯಲಾಗಿದೆ. ಸಚಿನ್ ಮದ್ಯಪಾನ ಮಾಡಿದ್ದರಿಂದ ಆಹಾರ ಗಂಟಲಲ್ಲಿ ಸಿಲುಕಿದಾಗ ಉಸಿರುಗಟ್ಟಿ ಪ್
Apr 191 min read


ಮಗ ತನ್ನಂತೆ ಇಲ್ಲ ಎಂದಿದ್ದಕ್ಕೆ ನದಿಗೆ ತಳ್ಳಿ ಕೊಂದ ಪಾಪಿ ತಂದೆ!
ಮಗ ತನ್ನಂತೆ ಇಲ್ಲ ಎಂದು ಗ್ರಾಮಸ್ಥರು ಚುಡಾಯಿಸಿದ್ದಕ್ಕೆ ತಂದೆಯೇ ಮಗನನ್ನು ಹತ್ಯೆ ಮಾಡಿದ ಭೀಕರ ಘಟನೆ ವಿಜಯಪುರ ಜಿಲ್ಲೆಯ ನಾಗಠಾಣ ಗ್ರಾಮದಲ್ಲಿ ನಡೆದಿದೆ. ಮಾರ್ಚ್ 16ರಂದು ಮಗ ಸಿದ್ದಾರ್ಥನನ್ನು ಶಾಲೆಗೆ ಸೇರಿಸುವುದಾಗಿ ಕರೆದೊಯ್ದ ತಂದೆ ಮಲ್ಲಿಕಾರ್ಜುನ, ಮಹಾರಾಷ್ಟ್ರದ ಕರಾಡ್ ಬಳಿ ಕೃಷ್ಣಾ ನದಿಗೆ ತಳ್ಳಿ ಕೊಲೆ ಮಾಡಿದ್ದಾನೆ. ಮಗನನ್ನು ಹಾಸ್ಟೆಲ್ನಲ್ಲಿ ಇಟ್ಟಿರುವುದಾಗಿ ಸುಳ್ಳು ಹೇಳಿದ್ದ ಮಲ್ಲಿಕಾರ್ಜುನ, ಏಪ್ರಿಲ್ 1ರಂದು ಮಗನ ಹುಟ್ಟುಹಬ್ಬಕ್ಕೆ ತಾಯಿ ಪಟ್ಟು ಹಿಡಿದಾಗ ಪರಾರಿಯಾಗಿದ್ದಾನೆ. ಇದರಿಂದ ಅನುಮಾನಗೊಂಡ ತಾಯಿ ಭಾಗ್ಯಶ್ರೀ ಪೊಲೀಸರಿಗೆ ದೂರು ನೀಡಿದ್ದು, ತನಿಖೆ ವೇಳೆ ಪಾಪಿ ತಂದೆಯ
Apr 171 min read


ಮಾರಕಾಸ್ತ್ರಗಳಿಂದ ಕೊಚ್ಚಿ ಸರ್ಕಾರಿ ಶಾಲಾ ಶಿಕ್ಷಕಿಯ ಭೀಕರ ಕೊಲೆ
ಕಲಬುರಗಿ: ಜಿಲ್ಲೆಯ ಕಮಲಾಪುರ ತಾಲೂಕಿನ ಕಲ್ಮೂಡ ಗ್ರಾಮದ ಬಳಿ ಸರ್ಕಾರಿ ಶಾಲಾ ಶಿಕ್ಷಕಿ ಜ್ಯೋತಿ ಕಪಾಳೆ ಹಿರೇಮಠ (57) ಅವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಹಂತಕರು ಸಾಕ್ಷ್ಯ ನಾಶಪಡಿಸಲು ಪೆಟ್ರೋಲ್ ಸುರಿದು ಶವವನ್ನು ಸುಟ್ಟುಹಾಕಿದ್ದು, ಈ ಕೃತ್ಯವು ಇಡೀ ಜಿಲ್ಲೆಯನ್ನು ಬೆಚ್ಚಿಬೀಳಿಸಿದೆ. ಮೃತರು ಬೀದರ್ ಜಿಲ್ಲೆಯ ವಂದರಖೇಡ ಗ್ರಾಮದ ಶಾಲೆಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಕಲಬುರಗಿಯಿಂದ ಬೀದರ್ಗೆ ತೆರಳುವ ಮಾರ್ಗಮಧ್ಯೆ ಈ ಅಮಾನುಷ ಘಟನೆ ನಡೆದಿದೆ. ಆರಂಭದಲ್ಲಿ ಅಪರಿಚಿತ ಮಹಿಳೆಯ ಕೊಲೆ ಎಂದು ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು, ನಂತರ ತನಿಖ
Apr 71 min read


ಬೆಳಗಾವಿ: ಪ್ರೇಮದ ಹೆಸರಲ್ಲಿ ಯುವತಿಗೆ ನಂಬಿಕೆ ದ್ರೋಹ; ವಿಡಿಯೋ ಹರಿಬಿಡುವುದಾಗಿ ಬೆದರಿಸಿ ಲಕ್ಷಾಂತರ ಹಣ ದೋಚಿದ ಕಿರಾತಕ - ತನಿಖೆಯಲ್ಲಿ ಪೊಲೀಸರ ಶಾಮೀಲು ಶಂಕೆ!"
ಬೆಳಗಾವಿ: ನಗರದ ಶಾಹಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರೇಮ, ಮದುವೆ ಹೆಸರಿನಲ್ಲಿ ಯುವತಿಯನ್ನು ಮೋಸಗೊಳಿಸಿ, ಅಶ್ಲೀಲ ವಿಡಿಯೋ ಚಿತ್ರೀಕರಿಸಿ ಹಣ ಹಾಗೂ ಚಿನ್ನ ದೋಚಿದ ಆರೋಪದ ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿಯನ್ನು ಇಶ್ವರ ಸಿಂಗ್ ಪ್ರೇಮ್ ಸಿಂಗ್ ಬದ್ಗುಜರ್ ಎಂದು ಗುರುತಿಸಲಾಗಿದ್ದು, ಇವನು ಬೆಳಗಾವಿಯ ಮಾಧವ ಕಾಲೋನಿ ನಿವಾಸಿ ಎಂದು ತಿಳಿದುಬಂದಿದೆ. ಫೇಸ್ಬುಕ್ ಮೂಲಕ ಪರಿಚಯವಾದ ಯುವತಿಯೊಂದಿಗೆ ಆತ ಪ್ರೇಮ ಸಂಬಂಧ ಬೆಳೆಸಿ, ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಹೊಂದಿದ್ದಾನೆ ಎನ್ನಲಾಗಿದೆ. ದೂರುದಾರೆಯ ಪ್ರಕಾರ, ಆಕೆಯ ಅನುಮತಿ ಇಲ್ಲದೇ ಅಶ್ಲೀಲ ವಿಡಿಯೋಗಳನ್ನು ಚಿತ್ರೀಕರಿಸಿದ್ದಾನ
Apr 61 min read


ಜಿಮ್ ಟ್ರೈನರ್ ಸಮೀರ್ ಅಸಲಿ ರೂಪ ಬಯಲು: ಯುವತಿಗೆ ಎಂಟು ಬಾರಿ ಗರ್ಭಪಾತದ ಮಾತ್ರೆ ನೀಡಿದ ಕಿರಾತಕ
ಹುಬ್ಬಳ್ಳಿಯಲ್ಲಿ ಜಿಮ್ ಟ್ರೈನರ್ ಸಮೀರ್ ಎಂಬಾತನ ಲವ್ ಜಿಹಾದ್ ಕೃತ್ಯಗಳು ಬಯಲಾಗುತ್ತಿವೆ. ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಬಲವಂತವಾಗಿ 8 ರಿಂದ 10 ಬಾರಿ ಗರ್ಭಪಾತದ ಮಾತ್ರೆಗಳನ್ನು ನೀಡಿದ್ದ ಎನ್ನುವ ಆಘಾತಕಾರಿ ವಿಚಾರ ಬೆಳಕಿಗೆ ಬಂದಿದೆ. ಆರೋಪಿಯ ಮೊಬೈಲ್ ಪರಿಶೀಲಿಸಿದಾಗ ಯುವತಿ ಮಾತ್ರೆ ಸೇವಿಸುತ್ತಿರುವ ವಿಡಿಯೋಗಳು ಮತ್ತು ಇತರ ಯುವತಿಯರೊಂದಿಗೆ ನಡೆಸಿದ ಚಾಟ್ಗಳು ಪತ್ತೆಯಾಗಿವೆ. ಸಂತ್ರಸ್ತೆಯ ದೂರಿನಂತೆ ವಿದ್ಯಾನಗರ ಠಾಣೆಯಲ್ಲಿ ಬಿಎನ್ಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಜಿಮ್ಗೆ ಬರುತ್ತಿದ್ದ ಹಿಂದೂ ಯುವತಿಯರನ್ನೇ ಗುರಿಯಾಗಿಸಿ ಸಮೀರ್ ವಂಚಿಸುತ್ತಿದ್ದ ಎಂಬ ಆರೋಪ ಕೇಳಿಬಂ
Apr 51 min read


400 ಕೋಟಿ ದರೋಡೆ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್
ಕರ್ನಾಟಕ–ಗೋವಾ ಗಡಿಭಾಗದಲ್ಲಿರುವ Chorla Ghat ನಲ್ಲಿ ನಡೆದಿದೆ ಎಂದು ಹೇಳಲಾಗಿದ್ದ 400 ಕೋಟಿ ರೂಪಾಯಿ ದರೋಡೆ ಪ್ರಕರಣಕ್ಕೆ ಭಾರೀ ತಿರುವು ಸಿಕ್ಕಿದೆ. ಮಹಾರಾಷ್ಟ್ರ ಸರ್ಕಾರ ರಚಿಸಿದ್ದ ವಿಶೇಷ ತನಿಖಾ ತಂಡ (Maharashtra State Investigation Team - SIT) ಸಲ್ಲಿಸಿದ ವರದಿಯಲ್ಲಿ, ಚೋರ್ಲಾ ಘಾಟ್ನಲ್ಲಿ ಯಾವುದೇ ದರೋಡೆ ನಡೆದಿರುವುದಕ್ಕೆ ನಂಬಲರ್ಹ ಸಾಕ್ಷ್ಯಗಳು ಲಭ್ಯವಾಗಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ಪ್ರಕರಣ ಹೇಗೆ ಆರಂಭವಾಯಿತು? ಅಮಾನ್ಯೀಕರಿಸಲ್ಪಟ್ಟ 2000 ರೂ. ನೋಟುಗಳನ್ನು ತುಂಬಿದ್ದ ಕಂಟೈನರ್ ಚೋರ್ಲಾ ಘಾಟ್ ಪ್ರದೇಶದಲ್ಲಿ ದರೋಡೆಗೆ ಒಳಪಟ್ಟಿದೆ ಎಂದು ಸಂದೀಪ್ ಪಾಟೀಲ್ ಎಂಬವರು
Feb 161 min read


ಬಾಂಗ್ಲಾದಲ್ಲಿ ಮತ್ತೆ ಮೃತ್ಯು ನರ್ತನ: ಗ್ಯಾರೇಜ್ಗೆ ಬೆಂಕಿ ಹಚ್ಚಿ ಹಿಂದೂ ಯುವಕನ ಸಜೀವ ದಹನ!
ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂ ಸಮುದಾಯದವರನ್ನು ಗುರಿಯಾಗಿಸಿಕೊಂಡು ನಡೆಸಲಾಗುತ್ತಿರುವ ದಾಳಿಗಳು ನಿಲ್ಲುವ ಲಕ್ಷಣ ಕಾಣುತ್ತಿಲ್ಲ. ನರಸಿಂಗ್ಲಿ ಜಿಲ್ಲೆಯಲ್ಲಿ 23 ವರ್ಷದ ಹಿಂದೂ ಯುವಕ ಚಂಚಲ್ ಚಂದ್ರ ಭೌಮಿಕ್ ಎಂಬುವವರನ್ನು ಅವರು ಮಲಗಿದ್ದ ಗ್ಯಾರೇಜ್ ಒಳಗೇ ಸುಟ್ಟು ಹಾಕಿರುವ ಭೀಕರ ಘಟನೆ ನಡೆದಿದೆ. ಮೂಲತಃ ಕುಮಿಲ್ಲಾ ಜಿಲ್ಲೆಯ ಲಕ್ಷ್ಮೀಪುರ ಗ್ರಾಮದವರಾದ ಚಂಚಲ್, ಕೆಲಸದ ನಿಮಿತ್ತ ನರಸಿಂಗ್ಲಿಯಲ್ಲಿ ವಾಸವಿದ್ದರು. ಇಡೀ ಕುಟುಂಬಕ್ಕೆ ಆಧಾರವಾಗಿದ್ದ ಏಕೈಕ ಪುತ್ರನನ್ನೇ ಕಳೆದುಕೊಂಡ ಕುಟುಂಬ ಈಗ ಬೀದಿಗೆ ಬಿದ್ದಂತಾಗಿದ್ದು, ಇಡೀ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಶುಕ್ರವಾ
Jan 251 min read


ಬಾಂಗ್ಲಾದೇಶದಲ್ಲಿ ಮುಂದುವರಿದ ಹಿಂದೂಗಳ ಸರಣಿ ಹತ್ಯೆ: 24 ಗಂಟೆಗಳಲ್ಲಿ ಮೂವರ ಬಲಿ
ಢಾಕಾ: ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂ ಸಮುದಾಯದವರನ್ನು ಗುರಿಯಾಗಿಸಿಕೊಂಡು ನಡೆಸಲಾಗುತ್ತಿರುವ ದಾಳಿಗಳು ಮುಂದುವರಿದಿದ್ದು, ಕಳೆದ 24 ಗಂಟೆಗಳಲ್ಲಿ ಮೂವರು ಹಿಂದೂಗಳನ್ನು ಹತ್ಯೆ ಮಾಡಲಾಗಿದೆ. ತಾಜಾ ಘಟನೆಯಲ್ಲಿ ನರಸಿಂಗ್ಲಿ ಜಿಲ್ಲೆಯ ದಿನಸಿ ಅಂಗಡಿ ಮಾಲೀಕ ಮೋನಿ ಚಕ್ರವರ್ತಿ ಎಂಬುವವರನ್ನು ಕಿಡಿಗೇಡಿಗಳು ಕ್ರೂರವಾಗಿ ಹತ್ಯೆ ಮಾಡಿದ್ದಾರೆ. ಸೋಮವಾರ ರಾತ್ರಿ ಸುಮಾರು 10 ಗಂಟೆಯ ವೇಳೆಗೆ ಅಂಗಡಿಯಲ್ಲಿದ್ದ ಮೋನಿ ಅವರ ಮೇಲೆ ಹರಿತವಾದ ಆಯುಧಗಳಿಂದ ದಾಳಿ ನಡೆಸಲಾಗಿದ್ದು, ತೀವ್ರ ರಕ್ತಸ್ರಾವದಿಂದ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಇದಕ್ಕೂ ಕೆಲವು ಗಂಟೆಗಳ ಮೊದಲು ಜಶೋರ್ ಜಿಲ್ಲೆಯ
Jan 61 min read


ಕೋಮು ದ್ವೇಷದ ಹಿನ್ನೆಲೆ: ಸಹಪಾಠಿಗಳೊಂದಿಗೆ ತೆರಳುತ್ತಿದ್ದ ವಿದ್ಯಾರ್ಥಿಯ ಮೇಲೆ ಹಲ್ಲೆ
ಸಹಪಾಠಿಗಳೊಂದಿಗೆ ನಡೆದುಕೊಂಡು ಹೋಗುತ್ತಿದ್ದ ಕಾಲೇಜು ವಿದ್ಯಾರ್ಥಿಯ ಮೇಲೆ ಇಬ್ಬರು ವ್ಯಕ್ತಿಗಳು ಕೋಮು ಭಿನ್ನಾಭಿಪ್ರಾಯಕ್ಕೆ ಸಂಬಂಧಿಸಿದ ವಿವಾದದ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ಕುರಿತು ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಸದ್ಯದ ಮಾಹಿತಿ ಪ್ರಕಾರ, ನವೆಂಬರ್ 6 ರಂದು ಬೆಳಿಗ್ಗೆ, ಪದವಿ ಪಡೆಯುತ್ತಿರುವ ದೂರುದಾರ ವಿದ್ಯಾರ್ಥಿಯು ತಮ್ಮ ಒಂಬತ್ತು ಮಂದಿ ಸಹಪಾಠಿಗಳೊಂದಿಗೆ ಪೆರಿಯಡ್ಕದಲ್ಲಿರುವ ತನ್ನ ಅನಾರೋಗ್ಯ ಪೀಡಿತ ಸಹಪಾಠಿಯನ್ನು ಭೇಟಿ ಮಾಡಲು ಹೋಗಿದ್ದರು. ಈ ವೇಳೆ ಪೆರಿಯಡ್ಕ ಪ್ರದೇಶದಲ್ಲಿ
Nov 7, 20251 min read
Archive
bottom of page



