ಕಡಬ ಪಟ್ಟಣ ಪಂಚಾಯತ್ ವ್ಯಾಪ್ತಿಯ ಅಡ್ಡಗದ್ದೆ ಎಂಬಲ್ಲಿ ಮನೆಯ ಮರದ ಬಾಕ್ಸ್ ಒಡೆದು ಅದರಲ್ಲಿದ್ದ ₹84,800/- ನಗದು ಹಣವನ್ನು ಕಳ್ಳರು ದೋಚಿರುವ ಘಟನೆ ನಡೆದಿದೆ. ಕಡಬ ಪಟ್ಟಣ ಪಂಚಾಯತ್ ಅಧ್ಯಕ್ಷೆ ತಮನ್ನಾ ಜಬೀನ್ (43) ಅವರ ಮನೆಯಲ್ಲಿ ಈ ಕಳವು ಸಂಭವಿಸಿದ್ದು, ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರೆ ತಮನ್ನಾ ಜಬೀನ್ ಅವರು ಕುಟುಂಬದೊಂದಿಗೆ ಕಡಬ ಅಡ್ಡಗದ್ದೆಯಲ್ಲಿರುವ ಗಂಡನ ಮನೆಯಲ್ಲಿ ವಾಸವಾಗಿದ್ದು, ಮಲಗುವ ಕೋಣೆಯ ಮರದ ಬಾಕ್ಸ್ನಲ್ಲಿ ಹಣ ಸಂಗ್ರಹಿಸಿಟ್ಟಿದ್ದರು. ಆಗಸ್ಟ್ 18 ರಂದು ಕಾರ್ಯಕ್ರಮ ನಿಮಿತ್ತ ಕುಟುಂಬ ಸಮೇತ ಉಡುಪಿಗೆ ತೆರಳಿ ಅಂದೇ ಮನೆಗೆ ಹಿಂತಿರುಗಿದ್ದರು. ಬಳಿಕ
ಚೆನ್ನೈ / ತಿರುವಳ್ಳೂರು: ತಮಿಳುನಾಡು ರಾಜ್ಯದ ತಿರುವಳ್ಳೂರು ಜಿಲ್ಲೆಯ ಬಳಿ ವಲಸೆ ಕಾರ್ಮಿಕನೊಬ್ಬನ ಮೇಲೆ ನಾಲ್ವರು ಬಾಲಕರು ಮಾರಕವಾಗಿ ಹಲ್ಲೆ ನಡೆಸಿದ ಘಟನೆ ಭಾರೀ ಚರ್ಚೆಗೆ ಕಾರಣವಾಗಿದೆ. ಕೆಲಸಕ್ಕಾಗಿ ಬೇರೆ ರಾಜ್ಯದಿಂದ ಬಂದಿದ್ದ ಕಾರ್ಮಿಕನ ಮೇಲೆ ತೀಕ್ಷ್ಣ ಆಯುಧಗಳಿಂದ ದಾಳಿ ನಡೆಸಲಾಗಿದ್ದು, ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ಹಲ್ಲೆಗೈದ ಯುವಕರು ದಾಳಿ ನಡೆಸಿದ ಬಳಿಕ ಗಾಯಗೊಂಡ ಕಾರ್ಮಿಕನ ಪಕ್ಕದಲ್ಲಿ ನಿಂತು “ವಿಕ್ಟರಿ ಸೈನ್” ತೋರಿಸುತ್ತಾ ವಿಡಿಯೋ ಮಾಡಿದ್ದು, ಆ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಈ ಅಮಾನವೀಯ ವರ್ತನೆಗೆ
ಬಲ್ನಾಡಿನ ಪಾಲೆಚ್ಚಾರ್ ಎಂಬಲ್ಲಿ ಕಳ್ಳರು ಮನೆಯೊಂದರ ಬೀಗ ಒಡೆದು ನುಗ್ಗಿ, ಲಕ್ಷಾಂತರ ಮೌಲ್ಯದ ಚಿನ್ನಾಭರಣ ಮತ್ತು ನಗದು ಹಣವನ್ನು ಕಳವು ಮಾಡಿದ ಘಟನೆ ವರದಿಯಾಗಿದೆ. ಈ ಕುರಿತು ಮನೆಯಲ್ಲಿ ವಾಸವಿದ್ದ ಉಮಾವತಿ ಅವರು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಗೆ ಅಧಿಕೃತ ದೂರು ನೀಡಿದ್ದಾರೆ. ಕಳುವಾದ ಸಾಮಾನುಗಳ ಒಟ್ಟು ಮೌಲ್ಯದ ಕುರಿತು ತನಿಖೆ ನಡೆಯುತ್ತಿದ್ದು, ಘಟನೆಯಿಂದಾಗಿ ಸ್ಥಳೀಯ ನಿವಾಸಿಗಳಲ್ಲಿ ಆತಂಕ ಮನೆ ಮಾಡಿದೆ. ಕುದ್ದುಪದವಿನಲ್ಲಿರುವ ಅಂಗನವಾಡಿಯ ಸಹಾಯಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಉಮಾವತಿ ಅವರು, ಕುದ್ದುಪದವಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದಾರೆ. ಪಾಲೆಚ್ಚಾರ್ನಲ್ಲಿರುವ ತಮ್
"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.