top of page
News Articles
Sathyapatha News Plus


ಇಂದಿನಿಂದ ಪವಿತ್ರ ಆಷಾಢ ಮಾಸ ಆರಂಭ: ಈ ತಿಂಗಳಲ್ಲಿ ಮದುವೆ, ಗೃಹಪ್ರವೇಶದಂತಹ ಶುಭಕಾರ್ಯಗಳನ್ನು ಏಕೆ ಮುಂದೂಡುತ್ತಾರೆ? ತಿಳಿಯಿರಿ ಕಾರಣ
ಆಷಾಢ ಮಾಸ ಆರಂಭ: ಆಗಸ್ಟ್ 12ರವರೆಗೆ ಭಕ್ತಿ, ಉಪವಾಸ, ದಾನಧರ್ಮಕ್ಕೆ ವಿಶೇಷ ಮಹತ್ವ ಬೆಂಗಳೂರು: ಹಿಂದೂ ಪಂಚಾಂಗದ ಪ್ರಕಾರ ಪವಿತ್ರ ಆಷಾಢ ಮಾಸ ಆರಂಭವಾಗಿದ್ದು, ಈ ವರ್ಷ ಅದು ಜುಲೈ 15ರಿಂದ ಆಗಸ್ಟ್ 12ರವರೆಗೆ ನಡೆಯಲಿದೆ. ಭಕ್ತಿ, ಆಧ್ಯಾತ್ಮಿಕತೆ ಮತ್ತು ಧಾರ್ಮಿಕ ಆಚರಣೆಗಳಿಗೆ ಮೀಸಲಾದ ಈ ತಿಂಗಳು ದೇವರ ಆರಾಧನೆ, ಉಪವಾಸ, ಜಪ-ತಪ ಹಾಗೂ ದಾನಧರ್ಮಕ್ಕೆ ಅತ್ಯಂತ ಶುಭಕರವೆಂದು ಪರಿಗಣಿಸಲಾಗುತ್ತದೆ. ಆಷಾಢ ಮಾಸದಲ್ಲಿ ಶ್ರೀ ಮಹಾವಿಷ್ಣು, ಪರಮಶಿವ ಹಾಗೂ ಆದಿಶಕ್ತಿಯ ಆರಾಧನೆಗೆ ವಿಶೇಷ ಪ್ರಾಮುಖ್ಯತೆ ಇದೆ. ದೇವಾಲಯಗಳಲ್ಲಿ ವಿಶೇಷ ಪೂಜೆ, ಭಜನೆ, ಪ್ರವಚನ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತವೆ. ಈ
1 day ago1 min read


ಕೊಡಿಯಾಲಬೈಲು ಜೈಲಿನಲ್ಲಿ ಕೈದಿಗಳ ಬಳಿ ಮೊಬೈಲ್ ಪತ್ತೆ
ಮಂಗಳೂರಿನ ಕೊಡಿಯಾಲಬೈಲು ಜಿಲ್ಲಾ ಕಾರಾಗೃಹದಲ್ಲಿ ಇಬ್ಬರು ವಿಚಾರಣಾಧೀನ ಕೈದಿಗಳ ಬಳಿ ಅಕ್ರಮವಾಗಿ ಮೊಬೈಲ್ ಫೋನ್ಗಳು ಪತ್ತೆಯಾಗಿದ್ದು, ಜೈಲಿನ ಭದ್ರತೆಯ ಬಗ್ಗೆ ತೀವ್ರ ಆತಂಕ ಮೂಡಿಸಿದೆ. ಜುಲೈ 7ರಂದು ರಾತ್ರಿ ಜೈಲಿನ ಅಧೀಕ್ಷಕ ಶರಣ ಬಸಪ್ಪ ಸಿಬಂದಿಯೊಂದಿಗೆ ‘ಎ‘ ಬ್ಲಾಕ್ನಲ್ಲಿ ದಿಢೀರ್ ತಪಾಸಣೆ ನಡೆಸಿದಾಗ, ಕೈದಿಗಳಾದ ಮೊಹಮ್ಮದ್ ಅಜ್ಮಲ್ ಮತ್ತು ಮೊಹಮ್ಮದ್ ಇಕ್ಬಾಲ್ ಬಳಿ ಮೊಬೈಲ್ ಪತ್ತೆಯಾಗಿವೆ. ಜೈಲಿನ ನಿಯಮ ಉಲ್ಲಂಘಿಸಿ ಮೊಬೈಲ್ ಬಳಸುತ್ತಿದ್ದ ಈ ಇಬ್ಬರು ಆರೋಪಿಗಳ ವಿರುದ್ಧ ಬರ್ಕೆ ಪೊಲೀಸ್ ಠಾಣೆಯಲ್ಲಿ ಸದ್ಯ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
6 days ago1 min read


ಸು ಫ್ರಮ್ ಸೋ' ನಟನ ಕಲ್ಯಾಣೋತ್ಸವ: ರಶ್ಮಿಕಾ ಜೊತೆ ಸಪ್ತಪದಿ ತುಳಿದ ಜೆಪಿ ತುಮ್ಮಿನಾಡು
ಮಂಗಳೂರು, ಮೇ 6: ಕನ್ನಡ ಹಾಗೂ ತುಳು ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ಜೆಪಿ ತುಮ್ಮಿನಾಡು ಇಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ತಮ್ಮ ದೀರ್ಘಕಾಲದ ಗೆಳತಿ ರಶ್ಮಿಕಾ ಜೊತೆ ಮಂಗಳೂರಿನಲ್ಲಿ ನಡೆದ ಸರಳ ಹಾಗೂ ಸಂಪ್ರದಾಯಬದ್ಧ ಸಮಾರಂಭದಲ್ಲಿ ಸಪ್ತಪದಿ ತುಳಿದರು. ರಾಜ್ ಬಿ ಶೆಟ್ಟಿ ನಿರ್ಮಾಣದ Su From So ಚಿತ್ರದ ಮೂಲಕ ನಿರ್ದೇಶಕ ಹಾಗೂ ನಟನಾಗಿ ಗಮನ ಸೆಳೆದಿದ್ದ ಜೆಪಿ ತುಮ್ಮಿನಾಡು ಅವರ ಮದುವೆ ಸಮಾರಂಭಕ್ಕೆ ಕುಟುಂಬಸ್ಥರು, ಆಪ್ತರು ಹಾಗೂ ಸ್ನೇಹಿತರು ಸಾಕ್ಷಿಯಾದರು. ನಟ ಪ್ರಕಾಶ್ ತುಮ್ಮಿನಾಡು ಸೇರಿದಂತೆ ಅನೇಕರು ಸಮಾರಂಭದಲ್ಲಿ ಭಾಗವಹಿಸಿ ನವದಂಪತಿಗಳಿಗೆ ಶುಭ ಹಾರೈಸಿದರು. ಕಳೆದ ಎರ
May 61 min read


ರೈಲಿನಲ್ಲಿ ಹೆರಿಗೆ: ಪ್ರಯಾಣಿಕ ಮಹಿಳೆಯರ ಸಾಹಸ – ತಾಯಿ, ಮಗು ಸುರಕ್ಷಿತ
ಬಂಟ್ವಾಳ (ಬಿ.ಸಿ.ರೋಡ್), ಏ.27: ಮಂಗಳೂರುದಿಂದ ಬೆಂಗಳೂರು ಕಡೆಗೆ ಸಂಚರಿಸುತ್ತಿದ್ದ ರೈಲಿನಲ್ಲಿ ಗರ್ಭಿಣಿ ಮಹಿಳೆಗೆ ತುರ್ತು ಹೆರಿಗೆ ನಡೆಸಿದ ಘಟನೆ ಭಾನುವಾರ ಮುಸ್ಸಂಜೆ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ಸಮೀಪ ನಡೆದಿದೆ. ಮೈಸೂರು ಮೂಲದ ತುಂಬು ಗರ್ಭಿಣಿ ಮಹಿಳೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದಾಗ ಏಕಾಏಕಿ ಹೆರಿಗೆ ನೋವು ಕಾಣಿಸಿಕೊಂಡಿದೆ. ರೈಲು ಬಿ.ಸಿ.ರೋಡ್ ತಲುಪುವಷ್ಟರಲ್ಲಿ ಆಕೆಗೆ ತೀವ್ರ ರಕ್ತಸ್ರಾವವೂ ಉಂಟಾಗಿದ್ದು, ಪರಿಸ್ಥಿತಿ ಗಂಭೀರವಾಗಿದೆ. ಇದರಿಂದಾಗಿ ರೈಲನ್ನು ತಕ್ಷಣ ನಿಲ್ಲಿಸಿ, ವೈದ್ಯಕೀಯ ನೆರವಿಗಾಗಿ ಸುಮಾರು 30 ನಿಮಿಷಗಳ ಕಾಲ ಕಾಯಲಾಗಿದೆ. ಆದರೆ ಸಮಯಕ್ಕೆ ಸರಿಯಾಗಿ ವೈದ್ಯರು
Apr 271 min read


ಎಣ್ಮೂರು ಶ್ರೀ ಆದಿಬೈದೇರುಗಳ ನೇಮೋತ್ಸವ: ಏಪ್ರಿಲ್ 1 ರಿಂದ ವೈಭವದ ಧಾರ್ಮಿಕ ಕಾರ್ಯಕ್ರಮಗಳು
ದಕ್ಷಿಣ ಕನ್ನಡ ಜಿಲ್ಲೆಯ ಎಣ್ಮೂರು ಕಟ್ಟಬೀಡಿನಲ್ಲಿ ಸುಗ್ಗಿ ತಿಂಗಳ ಪೂವೆಯಂದು ಶ್ರೀ ಆದಿಬೈದೇರುಗಳ ನೇಮೋತ್ಸವವು ಅತ್ಯಂತ ಶ್ರದ್ಧಾಭಕ್ತಿಯಿಂದ ಜರಗಲಿದೆ. ಮಾರ್ಚ್ 25 ರಿಂದಲೇ ವಿವಿಧ ಧಾರ್ಮಿಕ ವಿಧಿವಿಧಾನಗಳು ಆರಂಭಗೊಂಡಿದ್ದು, ಉಳ್ಳಾಕ್ಕುಳ ಬೀಡಿನಲ್ಲಿ ತಂಬಿಲ ಹಾಗೂ ಗರಡಿಯಲ್ಲಿ ಗೊನೆ ಕಡಿಯುವ ಮುಖಾಂತರ ಚಾಲನೆ ನೀಡಲಾಗಿದೆ. ಮಾರ್ಚ್ 30 ಮತ್ತು 31 ರಂದು ಶ್ರೀ ಉಳ್ಳಾಕುಳ ಮತ್ತು ಇಷ್ಟ ದೇವತೆಗಳ ನೇಮೋತ್ಸವ ಹಾಗೂ ಸಾರ್ವಜನಿಕ ಅನ್ನಸಂತರ್ಪಣೆ ನೆರವೇರಲಿದೆ. ಏಪ್ರಿಲ್ 1ರ ಬುಧವಾರದಂದು ಈ ಉತ್ಸವದ ಪ್ರಮುಖ ಘಟ್ಟಗಳು ನಡೆಯಲಿವೆ. ಅಂದು ಮಧ್ಯಾಹ್ನ 12:30ಕ್ಕೆ ಎಣ್ಮೂರು ಕಟ್ಟಬೀಡಿನಿಂದ ಸಂಪ್ರದಾಯ
Mar 301 min read


ಶೀಘ್ರವೇ ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ಘೋಷಣೆ?
ಕರಾವಳಿ ಜನರ ದಶಕಗಳ ಕನಸಾದ ತುಳು ಭಾಷೆಯನ್ನು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯನ್ನಾಗಿ ಘೋಷಿಸಲು ರಾಜ್ಯ ಸರ್ಕಾರ ಗಂಭೀರ ಕ್ರಮ ಕೈಗೊಂಡಿದೆ. ಈ ಕುರಿತು ವಿಧಾನಸಭೆಯಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ಪ್ರಶ್ನೆಗೆ ಉತ್ತರಿಸಿದ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಶೀಘ್ರದಲ್ಲೇ ಉನ್ನತ ಮಟ್ಟದ ಸಭೆ ನಡೆಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದರು. ತುಳು ಭಾಷೆಯ ಐತಿಹಾಸಿಕ ಹಿನ್ನೆಲೆ, ಲಿಪಿ ಮತ್ತು ಸಾಹಿತ್ಯ ಪರಂಪರೆಯ ಕುರಿತು ಅಧ್ಯಯನ ನಡೆಸಲು ರಚಿಸಲಾಗಿದ್ದ ಡಾ. ಮೋಹನ್ ಆಳ್
Jan 291 min read


ಕರಾವಳಿ ಅಭಿವೃದ್ಧಿಗೆ ಹೊಸ ಪ್ರವಾಸೋದ್ಯಮ ನೀತಿ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಣೆ
ಕಾರವಾರ: ಮಂಗಳೂರು, ಉಡುಪಿ ಮತ್ತು ಕಾರವಾರ ಸೇರಿದಂತೆ ರಾಜ್ಯದ ಸುಮಾರು 300 ಕಿ.ಮೀ ಉದ್ದದ ಕರಾವಳಿ ತೀರದ ಸಮಗ್ರ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರವು ನೂತನ ಪ್ರವಾಸೋದ್ಯಮ ನೀತಿಯನ್ನು ಜಾರಿಗೆ ತರಲು ನಿರ್ಧರಿಸಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾರವಾರದಲ್ಲಿ ಆಯೋಜಿಸಲಾಗಿದ್ದ 'ಕರಾವಳಿ ಉತ್ಸವ'ದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಈ ಭಾಗದ ನೈಸರ್ಗಿಕ ಸೌಂದರ್ಯವನ್ನು ಬಳಸಿಕೊಂಡು ಪ್ರವಾಸೋದ್ಯಮಕ್ಕೆ ಹೊಸ ಕಳೆ ನೀಡುವ ಸರ್ಕಾರದ ಯೋಜನೆಯನ್ನು ಅನಾವರಣಗೊಳಿಸಿದರು. ಕರಾವಳಿ ಭಾಗದ ಯುವಜನತೆ ಉದ್ಯೋಗ ಅರಸಿ ಬೆಂಗಳೂರು ಅಥವಾ ಸೌದಿ ಅರೇಬಿಯಾದಂತಹ ವಿದೇಶಗಳಿಗೆ ವಲಸೆ ಹೋ
Dec 30, 20251 min read
Archive
bottom of page



