top of page
News Articles
Sathyapatha News Plus


ಭಾರೀ ಮಳೆ ಹಿನ್ನೆಲೆ: ಜು. 25ರಂದು ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಶಾಲೆ, ಪಿಯು, ಐಟಿಐ ಹಾಗೂ ಡಿಪ್ಲೋಮಾ ಕಾಲೇಜುಗಳಿಗೆ ರಜೆ
ಮಂಗಳೂರು, ಜು. 24: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆ ಹಾಗೂ ಹವಾಮಾನ ಇಲಾಖೆಯ ಮುನ್ನೆಚ್ಚರಿಕೆ ಹಿನ್ನೆಲೆಯಲ್ಲಿ, ಜುಲೈ 25 (ಶನಿವಾರ) ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ ಹಾಗೂ ಖಾಸಗಿ ಶಾಲೆಗಳು, ಪದವಿಪೂರ್ವ (ಪಿಯು) ಕಾಲೇಜುಗಳು, ಐಟಿಐ ಹಾಗೂ ಡಿಪ್ಲೋಮಾ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ. ಈ ಕುರಿತು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅವರು ಆದೇಶ ಹೊರಡಿಸಿದ್ದು, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಯ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ.
Jul 241 min read


ಬಂಟ್ವಾಳದಲ್ಲಿ ಖಾಸಗಿ ಶಾಲಾ ಬಸ್ ಮೇಲೆ ಬೃಹತ್ ಮರ ಉರುಳಿ ಬಿದ್ದು ಮೂವರಿಗೆ ಗಾಯ
ಮಂಗಳೂರು, ಜುಲೈ 22: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ಸಮೀಪ ಬುಧವಾರ ಖಾಸಗಿ ಶಾಲೆಯ ಬಸ್ ಮೇಲೆ ಬೃಹತ್ ಗಾತ್ರದ ಮರ ಏಕಾಏಕಿ ಉರುಳಿಬಿದ್ದ ಪರಿಣಾಮ ಹಲವು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ನಡೆದಿದೆ. ಗಾಯಗೊಂಡವರಲ್ಲಿ ಮೂವರು ವಿದ್ಯಾರ್ಥಿಗಳ ಸ್ಥಿತಿ ಗಂಭೀರವಾಗಿದ್ದು, ಓರ್ವ ವಿದ್ಯಾರ್ಥಿಯ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ. ಕಲ್ಲಡ್ಕದ ಖಾಸಗಿ ಶಾಲೆಗೆ ಸೇರಿದ ಬಸ್ ವಿದ್ಯಾರ್ಥಿಗಳನ್ನು ಕರೆದುಕೊಂಡು ತೆರಳುತ್ತಿದ್ದ ವೇಳೆ ರಸ್ತೆ ಬದಿಯಲ್ಲಿದ್ದ ಬೃಹತ್ ಮರ ಏಕಾಏಕಿ ಬಸ್ ಮೇಲೆ ಉರುಳಿಬಿದ್ದಿದೆ. ಮರ ಬಿದ್ದ ರಭಸಕ್ಕೆ ಬಸ್ನ ಮೇ
Jul 221 min read


2026-27ರ ಕಂಬಳ ವೇಳಾಪಟ್ಟಿ ಬಿಡುಗಡೆ: ಅಕ್ಟೋಬರ್ 18ರಿಂದ ಮೈಸೂರು ದಸರಾ ಕಂಬಳದೊಂದಿಗೆ ಸೀಸನ್ ಆರಂಭ!
ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳ 2026-27ನೇ ಸಾಲಿನ ಅಧಿಕೃತ ಕಂಬಳ ವೇಳಾಪಟ್ಟಿಯನ್ನು ರಾಜ್ಯ ಕಂಬಳ ಸಮಿತಿ ಅಧ್ಯಕ್ಷ ಬೆಳಪು ದೇವಿಪ್ರಸಾದ್ ಶೆಟ್ಟಿ ಬಿಡುಗಡೆ ಮಾಡಿದ್ದಾರೆ. ಈ ಬಾರಿಯ ಕಂಬಳ ಋತುವು ಅಕ್ಟೋಬರ್ 18 ಮತ್ತು 19ರಂದು ಸಾಂಸ್ಕೃತಿಕ ನಗರಿ ಮೈಸೂರು ದಸರಾ ಅಂಗವಾಗಿ ನಡೆಯುವ ಕಂಬಳದೊಂದಿಗೆ ಆರಂಭಗೊಳ್ಳಲಿದೆ. ನವೆಂಬರ್ 7ರಂದು ಪಣಪಿಲ, ನವೆಂಬರ್ 14ರಂದು ಸಾಣೂರು, ಡಿಸೆಂಬರ್ 19ರಂದು ಮಂಗಳೂರು ಹಾಗೂ ಜನವರಿ 23ರಂದು ಮೂಡುಬಿದಿರೆಯಲ್ಲಿ ಕಂಬಳ ಕೂಟಗಳು ನಡೆಯಲಿವೆ. 2027ರ ಜನವರಿ 30ರಂದು ಪುತ್ತೂರಿನ ಪ್ರಸಿದ್ಧ ಕೋಟಿಚೆನ್ನಯ ಜೋಡುಕರೆ ಕಂಬಳ ಹಾಗೂ ಮಾರ್ಚ್ 27ರಂದು ಉಪ್ಪಿ
Jul 221 min read


ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ; ಗರ್ಭಿಣಿಯಾದ ಪ್ರಕರಣದಲ್ಲಿ ಆಟೋ ಚಾಲಕ ಬಂಧನ
ಬೆಳ್ತಂಗಡಿ, ಜು. 21: ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿಯನ್ನಾಗಿಸಿದ ಆರೋಪದಡಿ ಆಟೋ ರಿಕ್ಷಾ ಚಾಲಕನನ್ನು ಬೆಳ್ತಂಗಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಉಪ್ಪಿನಂಗಡಿ ಮೂಲದ ಶುಭರಾಜ್ (28) ಎಂದು ಗುರುತಿಸಲಾಗಿದೆ. ಆರೋಪಿಯು ಅಪ್ರಾಪ್ತ ವಿದ್ಯಾರ್ಥಿನಿಯೊಂದಿಗೆ ಪರಿಚಯ ಬೆಳೆಸಿ, ಆಕೆಯನ್ನು ಪುಸಲಾಯಿಸಿ ಹಲವು ಬಾರಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎನ್ನಲಾಗಿದೆ. ಅಲ್ಲದೆ, ಈ ವಿಷಯವನ್ನು ಯಾರಿಗೂ ತಿಳಿಸದಂತೆ ಬೆದರಿಕೆ ಹಾಕಿದ್ದನೆಂಬ ಆರೋಪವೂ ಕೇಳಿಬಂದಿದೆ. ಇತ್ತೀಚೆಗೆ ಬಾಲಕಿಗೆ ತೀವ್ರ ಹೊಟ್ಟೆನೋವು ಕಾಣಿಸಿಕೊಂಡ ಹಿನ್ನ
Jul 211 min read


ಇಂದಿನಿಂದ ಪವಿತ್ರ ಆಷಾಢ ಮಾಸ ಆರಂಭ: ಈ ತಿಂಗಳಲ್ಲಿ ಮದುವೆ, ಗೃಹಪ್ರವೇಶದಂತಹ ಶುಭಕಾರ್ಯಗಳನ್ನು ಏಕೆ ಮುಂದೂಡುತ್ತಾರೆ? ತಿಳಿಯಿರಿ ಕಾರಣ
ಆಷಾಢ ಮಾಸ ಆರಂಭ: ಆಗಸ್ಟ್ 12ರವರೆಗೆ ಭಕ್ತಿ, ಉಪವಾಸ, ದಾನಧರ್ಮಕ್ಕೆ ವಿಶೇಷ ಮಹತ್ವ ಬೆಂಗಳೂರು: ಹಿಂದೂ ಪಂಚಾಂಗದ ಪ್ರಕಾರ ಪವಿತ್ರ ಆಷಾಢ ಮಾಸ ಆರಂಭವಾಗಿದ್ದು, ಈ ವರ್ಷ ಅದು ಜುಲೈ 15ರಿಂದ ಆಗಸ್ಟ್ 12ರವರೆಗೆ ನಡೆಯಲಿದೆ. ಭಕ್ತಿ, ಆಧ್ಯಾತ್ಮಿಕತೆ ಮತ್ತು ಧಾರ್ಮಿಕ ಆಚರಣೆಗಳಿಗೆ ಮೀಸಲಾದ ಈ ತಿಂಗಳು ದೇವರ ಆರಾಧನೆ, ಉಪವಾಸ, ಜಪ-ತಪ ಹಾಗೂ ದಾನಧರ್ಮಕ್ಕೆ ಅತ್ಯಂತ ಶುಭಕರವೆಂದು ಪರಿಗಣಿಸಲಾಗುತ್ತದೆ. ಆಷಾಢ ಮಾಸದಲ್ಲಿ ಶ್ರೀ ಮಹಾವಿಷ್ಣು, ಪರಮಶಿವ ಹಾಗೂ ಆದಿಶಕ್ತಿಯ ಆರಾಧನೆಗೆ ವಿಶೇಷ ಪ್ರಾಮುಖ್ಯತೆ ಇದೆ. ದೇವಾಲಯಗಳಲ್ಲಿ ವಿಶೇಷ ಪೂಜೆ, ಭಜನೆ, ಪ್ರವಚನ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತವೆ. ಈ
Jul 151 min read


ಕೊಡಿಯಾಲಬೈಲು ಜೈಲಿನಲ್ಲಿ ಕೈದಿಗಳ ಬಳಿ ಮೊಬೈಲ್ ಪತ್ತೆ
ಮಂಗಳೂರಿನ ಕೊಡಿಯಾಲಬೈಲು ಜಿಲ್ಲಾ ಕಾರಾಗೃಹದಲ್ಲಿ ಇಬ್ಬರು ವಿಚಾರಣಾಧೀನ ಕೈದಿಗಳ ಬಳಿ ಅಕ್ರಮವಾಗಿ ಮೊಬೈಲ್ ಫೋನ್ಗಳು ಪತ್ತೆಯಾಗಿದ್ದು, ಜೈಲಿನ ಭದ್ರತೆಯ ಬಗ್ಗೆ ತೀವ್ರ ಆತಂಕ ಮೂಡಿಸಿದೆ. ಜುಲೈ 7ರಂದು ರಾತ್ರಿ ಜೈಲಿನ ಅಧೀಕ್ಷಕ ಶರಣ ಬಸಪ್ಪ ಸಿಬಂದಿಯೊಂದಿಗೆ ‘ಎ‘ ಬ್ಲಾಕ್ನಲ್ಲಿ ದಿಢೀರ್ ತಪಾಸಣೆ ನಡೆಸಿದಾಗ, ಕೈದಿಗಳಾದ ಮೊಹಮ್ಮದ್ ಅಜ್ಮಲ್ ಮತ್ತು ಮೊಹಮ್ಮದ್ ಇಕ್ಬಾಲ್ ಬಳಿ ಮೊಬೈಲ್ ಪತ್ತೆಯಾಗಿವೆ. ಜೈಲಿನ ನಿಯಮ ಉಲ್ಲಂಘಿಸಿ ಮೊಬೈಲ್ ಬಳಸುತ್ತಿದ್ದ ಈ ಇಬ್ಬರು ಆರೋಪಿಗಳ ವಿರುದ್ಧ ಬರ್ಕೆ ಪೊಲೀಸ್ ಠಾಣೆಯಲ್ಲಿ ಸದ್ಯ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
Jul 101 min read


ಸು ಫ್ರಮ್ ಸೋ' ನಟನ ಕಲ್ಯಾಣೋತ್ಸವ: ರಶ್ಮಿಕಾ ಜೊತೆ ಸಪ್ತಪದಿ ತುಳಿದ ಜೆಪಿ ತುಮ್ಮಿನಾಡು
ಮಂಗಳೂರು, ಮೇ 6: ಕನ್ನಡ ಹಾಗೂ ತುಳು ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ಜೆಪಿ ತುಮ್ಮಿನಾಡು ಇಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ತಮ್ಮ ದೀರ್ಘಕಾಲದ ಗೆಳತಿ ರಶ್ಮಿಕಾ ಜೊತೆ ಮಂಗಳೂರಿನಲ್ಲಿ ನಡೆದ ಸರಳ ಹಾಗೂ ಸಂಪ್ರದಾಯಬದ್ಧ ಸಮಾರಂಭದಲ್ಲಿ ಸಪ್ತಪದಿ ತುಳಿದರು. ರಾಜ್ ಬಿ ಶೆಟ್ಟಿ ನಿರ್ಮಾಣದ Su From So ಚಿತ್ರದ ಮೂಲಕ ನಿರ್ದೇಶಕ ಹಾಗೂ ನಟನಾಗಿ ಗಮನ ಸೆಳೆದಿದ್ದ ಜೆಪಿ ತುಮ್ಮಿನಾಡು ಅವರ ಮದುವೆ ಸಮಾರಂಭಕ್ಕೆ ಕುಟುಂಬಸ್ಥರು, ಆಪ್ತರು ಹಾಗೂ ಸ್ನೇಹಿತರು ಸಾಕ್ಷಿಯಾದರು. ನಟ ಪ್ರಕಾಶ್ ತುಮ್ಮಿನಾಡು ಸೇರಿದಂತೆ ಅನೇಕರು ಸಮಾರಂಭದಲ್ಲಿ ಭಾಗವಹಿಸಿ ನವದಂಪತಿಗಳಿಗೆ ಶುಭ ಹಾರೈಸಿದರು. ಕಳೆದ ಎರ
May 61 min read


ರೈಲಿನಲ್ಲಿ ಹೆರಿಗೆ: ಪ್ರಯಾಣಿಕ ಮಹಿಳೆಯರ ಸಾಹಸ – ತಾಯಿ, ಮಗು ಸುರಕ್ಷಿತ
ಬಂಟ್ವಾಳ (ಬಿ.ಸಿ.ರೋಡ್), ಏ.27: ಮಂಗಳೂರುದಿಂದ ಬೆಂಗಳೂರು ಕಡೆಗೆ ಸಂಚರಿಸುತ್ತಿದ್ದ ರೈಲಿನಲ್ಲಿ ಗರ್ಭಿಣಿ ಮಹಿಳೆಗೆ ತುರ್ತು ಹೆರಿಗೆ ನಡೆಸಿದ ಘಟನೆ ಭಾನುವಾರ ಮುಸ್ಸಂಜೆ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ಸಮೀಪ ನಡೆದಿದೆ. ಮೈಸೂರು ಮೂಲದ ತುಂಬು ಗರ್ಭಿಣಿ ಮಹಿಳೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದಾಗ ಏಕಾಏಕಿ ಹೆರಿಗೆ ನೋವು ಕಾಣಿಸಿಕೊಂಡಿದೆ. ರೈಲು ಬಿ.ಸಿ.ರೋಡ್ ತಲುಪುವಷ್ಟರಲ್ಲಿ ಆಕೆಗೆ ತೀವ್ರ ರಕ್ತಸ್ರಾವವೂ ಉಂಟಾಗಿದ್ದು, ಪರಿಸ್ಥಿತಿ ಗಂಭೀರವಾಗಿದೆ. ಇದರಿಂದಾಗಿ ರೈಲನ್ನು ತಕ್ಷಣ ನಿಲ್ಲಿಸಿ, ವೈದ್ಯಕೀಯ ನೆರವಿಗಾಗಿ ಸುಮಾರು 30 ನಿಮಿಷಗಳ ಕಾಲ ಕಾಯಲಾಗಿದೆ. ಆದರೆ ಸಮಯಕ್ಕೆ ಸರಿಯಾಗಿ ವೈದ್ಯರು
Apr 271 min read


ಎಣ್ಮೂರು ಶ್ರೀ ಆದಿಬೈದೇರುಗಳ ನೇಮೋತ್ಸವ: ಏಪ್ರಿಲ್ 1 ರಿಂದ ವೈಭವದ ಧಾರ್ಮಿಕ ಕಾರ್ಯಕ್ರಮಗಳು
ದಕ್ಷಿಣ ಕನ್ನಡ ಜಿಲ್ಲೆಯ ಎಣ್ಮೂರು ಕಟ್ಟಬೀಡಿನಲ್ಲಿ ಸುಗ್ಗಿ ತಿಂಗಳ ಪೂವೆಯಂದು ಶ್ರೀ ಆದಿಬೈದೇರುಗಳ ನೇಮೋತ್ಸವವು ಅತ್ಯಂತ ಶ್ರದ್ಧಾಭಕ್ತಿಯಿಂದ ಜರಗಲಿದೆ. ಮಾರ್ಚ್ 25 ರಿಂದಲೇ ವಿವಿಧ ಧಾರ್ಮಿಕ ವಿಧಿವಿಧಾನಗಳು ಆರಂಭಗೊಂಡಿದ್ದು, ಉಳ್ಳಾಕ್ಕುಳ ಬೀಡಿನಲ್ಲಿ ತಂಬಿಲ ಹಾಗೂ ಗರಡಿಯಲ್ಲಿ ಗೊನೆ ಕಡಿಯುವ ಮುಖಾಂತರ ಚಾಲನೆ ನೀಡಲಾಗಿದೆ. ಮಾರ್ಚ್ 30 ಮತ್ತು 31 ರಂದು ಶ್ರೀ ಉಳ್ಳಾಕುಳ ಮತ್ತು ಇಷ್ಟ ದೇವತೆಗಳ ನೇಮೋತ್ಸವ ಹಾಗೂ ಸಾರ್ವಜನಿಕ ಅನ್ನಸಂತರ್ಪಣೆ ನೆರವೇರಲಿದೆ. ಏಪ್ರಿಲ್ 1ರ ಬುಧವಾರದಂದು ಈ ಉತ್ಸವದ ಪ್ರಮುಖ ಘಟ್ಟಗಳು ನಡೆಯಲಿವೆ. ಅಂದು ಮಧ್ಯಾಹ್ನ 12:30ಕ್ಕೆ ಎಣ್ಮೂರು ಕಟ್ಟಬೀಡಿನಿಂದ ಸಂಪ್ರದಾಯ
Mar 301 min read


ಶೀಘ್ರವೇ ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ಘೋಷಣೆ?
ಕರಾವಳಿ ಜನರ ದಶಕಗಳ ಕನಸಾದ ತುಳು ಭಾಷೆಯನ್ನು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯನ್ನಾಗಿ ಘೋಷಿಸಲು ರಾಜ್ಯ ಸರ್ಕಾರ ಗಂಭೀರ ಕ್ರಮ ಕೈಗೊಂಡಿದೆ. ಈ ಕುರಿತು ವಿಧಾನಸಭೆಯಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ಪ್ರಶ್ನೆಗೆ ಉತ್ತರಿಸಿದ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಶೀಘ್ರದಲ್ಲೇ ಉನ್ನತ ಮಟ್ಟದ ಸಭೆ ನಡೆಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದರು. ತುಳು ಭಾಷೆಯ ಐತಿಹಾಸಿಕ ಹಿನ್ನೆಲೆ, ಲಿಪಿ ಮತ್ತು ಸಾಹಿತ್ಯ ಪರಂಪರೆಯ ಕುರಿತು ಅಧ್ಯಯನ ನಡೆಸಲು ರಚಿಸಲಾಗಿದ್ದ ಡಾ. ಮೋಹನ್ ಆಳ್
Jan 291 min read


ಕರಾವಳಿ ಅಭಿವೃದ್ಧಿಗೆ ಹೊಸ ಪ್ರವಾಸೋದ್ಯಮ ನೀತಿ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಣೆ
ಕಾರವಾರ: ಮಂಗಳೂರು, ಉಡುಪಿ ಮತ್ತು ಕಾರವಾರ ಸೇರಿದಂತೆ ರಾಜ್ಯದ ಸುಮಾರು 300 ಕಿ.ಮೀ ಉದ್ದದ ಕರಾವಳಿ ತೀರದ ಸಮಗ್ರ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರವು ನೂತನ ಪ್ರವಾಸೋದ್ಯಮ ನೀತಿಯನ್ನು ಜಾರಿಗೆ ತರಲು ನಿರ್ಧರಿಸಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾರವಾರದಲ್ಲಿ ಆಯೋಜಿಸಲಾಗಿದ್ದ 'ಕರಾವಳಿ ಉತ್ಸವ'ದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಈ ಭಾಗದ ನೈಸರ್ಗಿಕ ಸೌಂದರ್ಯವನ್ನು ಬಳಸಿಕೊಂಡು ಪ್ರವಾಸೋದ್ಯಮಕ್ಕೆ ಹೊಸ ಕಳೆ ನೀಡುವ ಸರ್ಕಾರದ ಯೋಜನೆಯನ್ನು ಅನಾವರಣಗೊಳಿಸಿದರು. ಕರಾವಳಿ ಭಾಗದ ಯುವಜನತೆ ಉದ್ಯೋಗ ಅರಸಿ ಬೆಂಗಳೂರು ಅಥವಾ ಸೌದಿ ಅರೇಬಿಯಾದಂತಹ ವಿದೇಶಗಳಿಗೆ ವಲಸೆ ಹೋ
Dec 30, 20251 min read
Archive
bottom of page





