top of page
News Articles
Sathyapatha News Plus


ಬಾಂಗ್ಲಾದೇಶದಲ್ಲಿ ಭಾರತೀಯ ವೀಸಾ ಕೇಂದ್ರಗಳು ತಾತ್ಕಾಲಿಕವಾಗಿ ಬಂದ್
ಢಾಕಾ: ಭದ್ರತಾ ಹಿತದೃಷ್ಟಿಯಿಂದ ಬಾಂಗ್ಲಾದೇಶದಲ್ಲಿರುವ ಭಾರತೀಯ ವೀಸಾ ಅರ್ಜಿ ಕೇಂದ್ರಗಳನ್ನು (IVAC) ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಬಾಂಗ್ಲಾದೇಶದ ಢಾಕಾ, ಖುಲ್ನಾ ಹಾಗೂ ರಾಜಶಾಹಿ ನಗರಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಭಾರತೀಯ ವೀಸಾ ಅರ್ಜಿ ಕೇಂದ್ರಗಳು ಈ ಕ್ರಮಕ್ಕೆ ಒಳಪಟ್ಟಿವೆ. ಇತ್ತೀಚೆಗೆ ಈ ಪ್ರದೇಶಗಳಲ್ಲಿ ತೀವ್ರ ಪ್ರತಿಭಟನೆಗಳು ನಡೆದಿದ್ದು, ಭಾರತೀಯ ಅಧಿಕಾರಿಗಳಿಗೆ ಬೆದರಿಕೆಗಳು ಬಂದಿರುವ ಹಿನ್ನೆಲೆಯಲ್ಲಿ ಭದ್ರತಾ ಪರಿಸ್ಥಿತಿಯನ್ನು ಪರಿಶೀಲಿಸಿದ ಬಳಿಕ ಕೇಂದ್ರ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಸಾರ್ವಜನಿಕ ಸುರಕ್ಷತೆ ಹಾಗೂ ಸಿಬ್ಬಂದಿಯ ರಕ್ಷಣೆಯನ್ನು
Dec 20, 20251 min read


ದ್ವೇಷ ಭಾಷಣ ಮಸೂದೆ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ – ಶೋಭಾ ಕರಂದ್ಲಾಜೆ
ಬೆಂಗಳೂರು | ವಿಶೇಷ ವರದಿ ಕರ್ನಾಟಕ ವಿಧಾನಸಭೆಯಲ್ಲಿ ಇತ್ತೀಚೆಗೆ ಅಂಗೀಕೃತಗೊಂಡ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ತಡೆಗಟ್ಟುವಿಕೆ) ಮಸೂದೆ–2025 ಸಾಂವಿಧಾನಿಕವಾಗಿ ಗಂಭೀರ ಕಳವಳಗಳನ್ನು ಹುಟ್ಟುಹಾಕಿದೆ ಎಂದು ಕೇಂದ್ರ ಕಾರ್ಮಿಕ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಈ ಮಸೂದೆ ಸರ್ಕಾರಿ ಅಧಿಕಾರಿಗಳಿಗೆ ಜನರು ಯಾವ ಮಾತುಗಳನ್ನು ಮಾತನಾಡಬಹುದು ಎಂಬುದನ್ನು ನಿರ್ಧರಿಸುವ ವ್ಯಾಪಕ ಅಧಿಕಾರ ನೀಡುತ್ತದೆ. ಇದು ಸಾರ್ವಜನಿಕ ಹಿತಾಸಕ್ತಿಗೆ ಸ್ಪಷ್ಟ ಹಾಗೂ ತಕ್ಷಣದ ಅಪಾಯ ಉಂಟುಮಾಡುವ ಮಾತುಗಳನ್ನು ಮಾತ್ರ ಗುರಿಯಾಗಿಸದೆ, ಸರ್ಕಾರವಿರೋಧಿ ಧ್ವನಿಗಳನ್ನು ಮುಚ್ಚಿಹಾಕುವ ಸಾಧನವಾ
Dec 20, 20251 min read


ದೆಹಲಿಯಲ್ಲಿ 'ವಿಷಗಾಳಿ' ಅಟ್ಟಹಾಸ: ಹಳೆಯ ವಾಹನಗಳಿಗೆ ನಿರ್ಬಂಧ!
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯು ಮಾಲಿನ್ಯದ ಮಟ್ಟ (AQI) 400ರ ಗಡಿ ದಾಟಿ 'ಅಪಾಯಕಾರಿ' ಹಂತ ತಲುಪಿದೆ. ದಟ್ಟ ಮಂಜು ಮತ್ತು ವಿಷಕಾರಿ ಹೊಗೆಯಿಂದಾಗಿ ಜನರ ಆರೋಗ್ಯದ ಮೇಲೆ ತೀವ್ರ ಪರಿಣಾಮ ಬೀರುತ್ತಿರುವ ಹಿನ್ನೆಲೆಯಲ್ಲಿ, ದೆಹಲಿ ಸರ್ಕಾರ ಇಂದಿನಿಂದ ಅತ್ಯಂತ ಕಠಿಣ ನಿಯಮಗಳನ್ನು ಜಾರಿಗೆ ತಂದಿದೆ. ಮನೆ ಕೆಲಸಕ್ಕೆ (WFH) ಸೂಚನೆ ಮಾಲಿನ್ಯ ನಿಯಂತ್ರಿಸುವ ಭಾಗವಾಗಿ ಸರ್ಕಾರಿ ಮತ್ತು ಖಾಸಗಿ ಕಚೇರಿಗಳ ಶೇ. 50ರಷ್ಟು ಸಿಬ್ಬಂದಿಗೆ 'ವರ್ಕ್ ಫ್ರಂ ಹೋಮ್' (Work From Home) ಮಾಡಲು ಸರ್ಕಾರ ಸೂಚಿಸಿದೆ. ರಸ್ತೆಗಳಲ್ಲಿ ವಾಹನಗಳ ಸಂಚಾರ ಕಡಿಮೆ ಮಾಡುವ ಮೂಲಕ ಹೊಗೆಯ ಪ್ರಮಾಣ ತಗ್ಗಿಸುವುದು
Dec 18, 20251 min read


ಬೆಳ್ತಂಗಡಿ: ಅಪ್ರಾಪ್ತ ಬಾಲಕರ ಮೇಲೆ ಹಲ್ಲೆ ಆರೋಪ - ಜುವೆಲ್ಲರಿ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲು
ಬೆಳ್ತಂಗಡಿ: ಪಟ್ಟಣದ ಜುವೆಲ್ಲರಿಯೊಂದರ ಹಿಂಭಾಗದಲ್ಲಿ ಬಹಿರ್ದೆಸೆಗೆ ತೆರಳಿದ್ದ ಅಪ್ರಾಪ್ತ ಬಾಲಕರ ಮೇಲೆ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡಿಸೆಂಬರ್ 15, 2025 ರಂದು ಸಂಜೆ ಈ ಘಟನೆ ಸಂಭವಿಸಿದೆ. ದೂರಿನ ಪ್ರಕಾರ, ಅಪ್ರಾಪ್ತ ವಯಸ್ಸಿನ ಪಿರ್ಯಾದಿದಾರರು ತಮ್ಮ ಇಬ್ಬರು ಸ್ನೇಹಿತರೊಂದಿಗೆ ಬೆಳ್ತಂಗಡಿ ಪಟ್ಟಣದ ಜುವೆಲ್ಲರಿಯೊಂದರ ಹಿಂಭಾಗದ ಪ್ರದೇಶಕ್ಕೆ ತೆರಳಿದ್ದರು. ಈ ವೇಳೆ ಅಲ್ಲಿಗೆ ಬಂದ ಜುವೆಲ್ಲರಿ ಸಿಬ್ಬಂದಿ, "ನೀವು ವಿಡಿಯೋ ಮಾಡುತ್ತಿದ್ದೀರಿ" ಎಂದು ಆರೋಪಿಸಿ ಮೂವರು ಬಾಲಕರನ್ನು ತಡೆದು ನಿಲ್ಲಿಸಿ ಹಲ್ಲೆ ನಡೆಸಿದ್ದಾರೆ ಎಂ
Dec 18, 20251 min read


ದೇಶದಲ್ಲೇ ಕರ್ನಾಟಕಕ್ಕೆ 2ನೇ ಸ್ಥಾನ: ಶೇ. 2.8ಕ್ಕೆ ಕುಸಿದ ನಿರುದ್ಯೋಗ ದರ!
ಬೆಂಗಳೂರು: ಉದ್ಯೋಗ ಕ್ಷೇತ್ರದಲ್ಲಿ ಕರ್ನಾಟಕ ರಾಜ್ಯವು ದೇಶದಲ್ಲೇ ಅತ್ಯುತ್ತಮ ಸಾಧನೆ ಮಾಡಿದ್ದು, ಅತಿ ಕಡಿಮೆ ನಿರುದ್ಯೋಗ ದರ ಹೊಂದಿರುವ ರಾಜ್ಯಗಳ ಪಟ್ಟಿಯಲ್ಲಿ ದ್ವಿತೀಯ ಸ್ಥಾನವನ್ನು ಅಲಂಕರಿಸಿದೆ. ಕೇಂದ್ರ ಸಾಂಖ್ಯಿಕ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವಾಲಯ ಇತ್ತೀಚೆಗೆ ಬಿಡುಗಡೆ ಮಾಡಿರುವ ‘ಆವರ್ತಕ ಕಾರ್ಮಿಕ ಬಲ ಸಮೀಕ್ಷೆ’ (PLFS - ಜುಲೈ-ಸೆಪ್ಟೆಂಬರ್ 2025) ವರದಿಯಲ್ಲಿ ಈ ಅಂಶ ಬಹಿರಂಗವಾಗಿದೆ. ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಈ ವರದಿಯನ್ನು ಮಂಡಿಸಲಾಗಿದ್ದು, ರಾಜ್ಯದ ಆರ್ಥಿಕ ಪ್ರಗತಿ ಮತ್ತು ಉದ್ಯೋಗ ಸೃಷ್ಟಿಯ ಬಲವಾದ ಚಿತ್ರಣವನ್ನು ಇದು ಬಿಂಬಿಸಿದೆ. ವರದಿಯ ಅನ್ವಯ, ರಾಷ್ಟ್ರಮಟ
Dec 17, 20251 min read


ಬಿಸಿರೋಡು: ಮದುವೆ ನಿಶ್ಚಯವಾಗಿದ್ದ ಯುವತಿ ನಾಪತ್ತೆ!
ಬಂಟ್ವಾಳ: ಮದುವೆಯ ಸಂಭ್ರಮದಲ್ಲಿದ್ದ ಮನೆಯಲ್ಲಿ ಈಗ ಆತಂಕದ ಛಾಯೆ ಆವರಿಸಿದೆ. ಮದುವೆಗೆ ಕೆಲವೇ ದಿನಗಳು ಬಾಕಿ ಇರುವಾಗ ಮದುಮಗಳು ಮನೆಯಿಂದ ನಾಪತ್ತೆಯಾದ ಘಟನೆ ಬಿಸಿರೋಡಿನ ಪಲ್ಲಮಜಲು ಎಂಬಲ್ಲಿ ಸಂಭವಿಸಿದೆ. ಡಿ.14 ರಂದು ಅಶ್ಪಿಯಳನ್ನು . ಬಿ ಮೂಡ ಗ್ರಾಮದ ಬಂಟ್ವಾಳದ ಯುವಕನೋರ್ವನಿಗೆ ಮದುವೆ ಮಾಡುವುದಾಗಿ ಹಿರಿಯರೊಂದಿಗೆ ಮಾತುಕತೆ ಮಾಡಿ ಯುನಿಟಿ ಹಾಲ್ ಅಲ್ಲಿ ಮದುವೆ ನಿಶ್ಷಯಿಸಿರುತ್ತಾರೆ. ಡಿ. 14 ರಂದು ಬೆಳಗ್ಗೆ ಸುಮಾರು 03:30 ಗಂಟೆ ತನಕ ಮನೆಯಲ್ಲೇ ಮಲಗಿದ್ದು ಆ ಬಳಿಕ ಬೆಳಿಗ್ಗೆ ಸುಮಾರು 04:30 ಗಂಟೆಗೆ ಬೆಳಗಿನ ಜಾವ ನೋಡಿದಾಗ ಅಕ್ಕನ ಮನೆಯಲ್ಲಿ ಇಲ್ಲದೇ ಇರುವುದು ತಿಳಿದು ಬಂದಿದೆ. ಬಳಿಕ
Dec 16, 20251 min read


ಮಾಂಸ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ₹300ರ ಗಡಿಯತ್ತ ಚಿಕನ್ ದರ!
ಬೆಂಗಳೂರು: ರಾಜ್ಯದ ಮಾಂಸ ಪ್ರಿಯರಿಗೆ ಬೆಲೆ ಏರಿಕೆಯ ಬಿಸಿ ತಟ್ಟಲಾರಂಭಿಸಿದೆ. ಈಗಾಗಲೇ ಮೊಟ್ಟೆ ಬೆಲೆ ಏರಿಕೆಯಿಂದ ಕಂಗಾಲಾಗಿದ್ದ ಜನರಿಗೆ, ಈಗ ಕೋಳಿ ಮಾಂಸದ ದರವೂ ಏರಿಕೆಯಾಗುತ್ತಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ. ಮುಖ್ಯಾಂಶಗಳು: * ಮೊಟ್ಟೆ ದರ ಏರಿಕೆ: ಡಿಸೆಂಬರ್ ಆರಂಭದಲ್ಲಿ 6 ರೂಪಾಯಿ ಇದ್ದ ಮೊಟ್ಟೆ ಬೆಲೆ ಈಗ 8 ರೂಪಾಯಿಗೆ ತಲುಪಿದೆ. ಕ್ರಿಸ್ಮಸ್ ಕೇಕ್ ತಯಾರಿಕೆಗೆ ಹೆಚ್ಚಿದ ಬೇಡಿಕೆ ಹಾಗೂ ವಿದೇಶಗಳಿಗೆ ರಫ್ತಾಗುತ್ತಿರುವುದು ಇದಕ್ಕೆ ಪ್ರಮುಖ ಕಾರಣ. * ಚಿಕನ್ ದರ ಹೀಗಿದೆ: ಸದ್ಯ ಮಾರುಕಟ್ಟೆಯಲ್ಲಿ ಜೀವಂತ ಕೋಳಿ ಕೆಜಿಗೆ ₹170 ರಿಂದ ₹180 ತಲುಪಿದ್ದರೆ, ಚಿಕನ್ ಮಾಂಸದ ಬೆಲೆ ₹2
Dec 16, 20251 min read


ಇಂದಿನ ಚಿನ್ನದ ದರ ಎಷ್ಟಿದೆ ಚೆಕ್ ಮಾಡಿ
ಇಂದು (ಡಿಸೆಂಬರ್ 16, 2025) 24 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ ಸುಮಾರು ₹13,473 ಮತ್ತು 22 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹12,350 ಇದೆ, ಬೆಳ್ಳಿ ಬೆಲೆಯೂ ಏರಿಕೆಯಾಗಿದೆ. ಇಂದಿನ ಚಿನ್ನದ ಬೆಲೆ (ಅಂದಾಜು): 24 ಕ್ಯಾರೆಟ್ (1 ಗ್ರಾಂ): ~₹13,473 22 ಕ್ಯಾರೆಟ್ (1 ಗ್ರಾಂ): ~₹12,350 ಬೆಳ್ಳಿ (1 ಗ್ರಾಂ): ~₹201
Dec 16, 20251 min read


ಮಂಗಳೂರು: ವೃದ್ಧೆ ಮನೆಯಲ್ಲಿ ದರೋಡೆ ಪ್ರಕರಣ- ಮೂವರು ಬಂಧನ
ಮಂಗಳೂರು: ಸುರತ್ಕಲ್ ಸಮೀಪದ ಮುಕ್ಕ ಪ್ರದೇಶದಲ್ಲಿ 85 ವರ್ಷದ ವೃದ್ಧೆ ಜಲಜಾ ಅವರ ಮನೆಗೆ ನುಗ್ಗಿ ಚಿನ್ನಾಭರಣ ಮತ್ತು ನಗದು ದೋಚಿದ್ದ ಪ್ರಕರಣವನ್ನು ಸುರತ್ಕಲ್ ಪೊಲೀಸರು ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಡಿಸೆಂಬರ್ 3 ರಂದು ಕುಡಿಯುವ ನೀರು ಕೇಳುವ ನೆಪದಲ್ಲಿ ಬಂದ ಅಪರಿಚಿತರು, ವೃದ್ಧೆಯ ಮನೆ ಹಂಚು ತೆಗೆದು ಒಳನುಗ್ಗಿ, ಬೆದರಿಸಿ ಅವರ ಕುತ್ತಿಗೆಗೆ ಬೈರಾಸು ಬಿಗಿದು ಸುಮಾರು 50 ಗ್ರಾಂ ಚಿನ್ನಾಭರಣ ಮತ್ತು ₹14,000 ನಗದು ದೋಚಿ ಪರಾರಿಯಾಗಿದ್ದರು. ತನಿಖೆ ನಡೆಸಿದ ಪೊಲೀಸರು, ಶೈನ್ ಎಚ್. ಪುತ್ರನ್ ಅಲಿಯಾಸ್ ಶಯನ್ ಎಂಬಾತನನ್ನು ಮೊದಲು ಬಂಧಿಸಿದ
Dec 16, 20251 min read


ದೇವಚಳ್ಳದಲ್ಲಿ ಕೋಟಿ ಮೌಲ್ಯದ ಮರದ ದಿಮ್ಮಿಗಳು ವಶ: ಇಬ್ಬರ ಬಂಧನ, ಅಕ್ರಮ ಮರ ಕಡಿತಕ್ಕೆ ಅರಣ್ಯ ಇಲಾಖೆಯಿಂದ ಬ್ರೇಕ್
ದೇವಚಳ್ಳ ಗ್ರಾಮದ ಮುಂಡೋಡಿ ಪ್ರದೇಶದಲ್ಲಿ ಅಕ್ರಮವಾಗಿ ಕಡಿದು ಸಾಗಿಸಲಾಗುತ್ತಿದ್ದ ಅಂದಾಜು ರೂ. 10 ಲಕ್ಷ ಮೌಲ್ಯದ ಮರದ ದಿಮ್ಮಿಗಳನ್ನು ಮತ್ತು ಅವುಗಳ ಸಾಗಾಟಕ್ಕೆ ಬಳಸಿದ ವಾಹನಗಳನ್ನು ಡಿಸೆಂಬರ್ 13 ರಂದು ಅರಣ್ಯ ಇಲಾಖೆ ಅಧಿಕಾರಿಗಳು ವಿಶೇಷ ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡಿದ್ದಾರೆ. ಮುಂಡೋಡಿಯ ನಾಗೇಶ್ ಎಂಬುವವರಿಗೆ ಸೇರಿದ ಜಾಗದಿಂದ ಒಂದು ಹೆಬ್ಬಲಸಿನ ಮರ ಮತ್ತು ಒಂದು ಮಾವಿನ ಮರವನ್ನು ಅಕ್ರಮವಾಗಿ ಕಡಿದು ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಉಪ ವಲಯ ಅರಣ್ಯಾಧಿಕಾರಿ ಸೌಮ್ಯಾ ಪಿ. ಎನ್. ಅವರ ನೇತೃತ್ವದಲ್ಲಿ ನೆಲ್ಲೂರು-ಕೆಮ್ರಾಜೆ ವಲಯದ ಅಧಿಕಾರಿಗಳು ಸ್ಥಳಕ್ಕೆ ದಾಳಿ ನಡೆಸಿದ
Dec 15, 20251 min read


ಗ್ರಾಮೀಣ ಉದ್ಯೋಗ ಖಾತರಿ ಯೋಜನೆಗೆ ಹೊಸ ಹೆಸರು, ‘ಪೂಜ್ಯ ಬಾಪು ಗ್ರಾಮೀಣ ರೋಜ್ಗಾರ್ ಯೋಜನೆ’ಗೆ ಕೇಂದ್ರ ಸಂಪುಟ ಅನುಮೋದನೆ
ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗ ಖಾತ್ರಿ ನೀಡುವ ಮಹತ್ವದ ಯೋಜನೆಯಲ್ಲಿ ಕೇಂದ್ರ ಸರ್ಕಾರವು ಮಹತ್ವದ ಬದಲಾವಣೆಗಳನ್ನು ತರಲು ನಿರ್ಧರಿಸಿದೆ. ಈ ಯೋಜನೆಗೆ ಹೊಸ ಹೆಸರನ್ನು ನೀಡುವ ಮಸೂದೆಗೆ ಕೇಂದ್ರ ಸಚಿವ ಸಂಪುಟವು ಅನುಮೋದನೆ ನೀಡಿದ್ದು, ಇನ್ನು ಮುಂದೆ ಇದು ‘ಪೂಜ್ಯ ಬಾಪು ಗ್ರಾಮೀಣ ರೋಜ್ಗಾರ್ ಯೋಜನೆ’ ಎಂಬ ಹೆಸರಿನಲ್ಲಿ ಪರಿಚಿತವಾಗಲಿದೆ. ಹೆಚ್ಚಾದ ಕೆಲಸದ ದಿನಗಳು ಮತ್ತು ಪರಿಗಣನೆಯಲ್ಲಿರುವ ದಿನಗೂಲಿ ಹೆಚ್ಚಳ ಹೊಸ ಮಸೂದೆಯ ಪ್ರಮುಖ ನಿರ್ಧಾರಗಳ ಪ್ರಕಾರ, ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ನೀಡಲಾಗುವ ಕೆಲಸದ ದಿನಗಳ ಸಂಖ್ಯೆಯನ್ನು ಪ್ರಸ್ತುತ ಇರುವ 100 ದಿನಗಳಿಂದ 125 ದಿನಗಳಿಗೆ ಹೆಚ್ಚಿಸಲು
Dec 15, 20251 min read


ರಾಜ್ಯವನ್ನಾವರಿಸಿದ ಕೊರೆಯುವ ಚಳಿ: ಉತ್ತರ ಒಳನಾಡಿನ 5 ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’
ಬೆಂಗಳೂರು: ರಾಜ್ಯದಾದ್ಯಂತ ಮೈ ಕೊರೆಯುವ ಚಳಿಯ ತೀವ್ರತೆ ಹೆಚ್ಚಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಕಳೆದ ಕೆಲವು ದಿನಗಳಿಂದ ತಾಪಮಾನದಲ್ಲಿ ಭಾರೀ ಇಳಿಕೆ ಕಂಡುಬಂದಿದ್ದು, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಶೀತದ ಅಲೆಯು ಆವರಿಸಿದೆ. ಹವಾಮಾನ ಇಲಾಖೆಯು ಮುಂಜಾಗ್ರತಾ ಕ್ರಮವಾಗಿ 5 ಜಿಲ್ಲೆಗಳಿಗೆ 'ಆರೆಂಜ್ ಅಲರ್ಟ್' ಘೋಷಿಸಿದೆ. ಮುಖ್ಯ ಹೈಲೈಟ್ಸ್: * ಎಚ್ಚರಿಕೆ (Warning): ಡಿಸೆಂಬರ್ 14 ರಿಂದ 16 ರವರೆಗೆ ರಾಜ್ಯದಲ್ಲಿ ತೀವ್ರ ಶೀತಗಾಳಿ ಬೀಸುವ ಸಾಧ್ಯತೆಯಿದೆ. * ಆರೆಂಜ್ ಅಲರ್ಟ್ ಜಿಲ್ಲೆಗಳು: ಬೀದರ್, ಕಲಬುರಗಿ, ರಾಯಚೂರು, ವಿಜಯಪುರ ಮತ್ತು ಯಾದಗಿರಿ. * ವಾತಾವರಣ: ರಾತ್ರಿ ವೇಳೆ ಕೊರ
Dec 15, 20251 min read


ಬೆಳ್ತಂಗಡಿ: ಅರ್ಚಕನಿಂದ ವಾಮಾಚಾರದ ಹೆಸರಿನಲ್ಲಿ ವಂಚನೆ, ಯುವತಿಗೆ ಕಿರುಕುಳ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದ ತುರ್ಕಜೆಯಲ್ಲಿ ಆಘಾತಕಾರಿ ಘಟನೆಯೊಂದು ವರದಿಯಾಗಿದೆ. ದೇವಾಲಯದ ಅರ್ಚಕನೋರ್ವ ಯುವತಿಯ ಅನಾರೋಗ್ಯಕ್ಕೆ ವಾಮಾಚಾರವೇ ಕಾರಣ ಎಂದು ನಂಬಿಸಿ, ಪರಿಹಾರದ ನೆಪದಲ್ಲಿ ಆಕೆಯ ಕುಟುಂಬದ ವಿಶ್ವಾಸಗಳಿಸಿ, ಬಳಿಕ ಆಕೆಯನ್ನು ತನಗೆ ಕೊಟ್ಟು ಮದುವೆ ಮಾಡಿಕೊಡುವಂತೆ ಪೀಡಿಸಿದ್ದಾನೆ ಎನ್ನಲಾಗಿದೆ. ಮೂಲತಃ ಶಿರಸಿ ಮೂಲದ ಶಿವಗಿರಿ ಎಂಬಾತ ಸ್ಥಳೀಯ ದೇವಾಲಯವೊಂದರಲ್ಲಿ ಅರ್ಚಕನಾಗಿ ಕೆಲಸ ಮಾಡುತ್ತಿದ್ದನು. ಅನಾರೋಗ್ಯದ ಸಮಸ್ಯೆಯಿಂದ ಬಳಲುತ್ತಿದ್ದ ನರ್ಸಿಂಗ್ ಕಲಿಯುತ್ತಿರುವ ಯುವತಿಯೊಬ್ಬಳು ತನ್ನ ಮನೆಯವರೊಂದಿಗೆ ಹಾಲು ಪಾಯಸದ ಸೇವೆ ಸಲ್ಲಿಸಲು ದೇವಸ್ಥಾನಕ್ಕೆ ಬಂ
Dec 13, 20251 min read


ಮತ್ತೆ ಗಗನಕ್ಕೇರಿದ ಚಿನ್ನದ ದರ
ಇಂದು (ಡಿಸೆಂಬರ್ 13, 2025) ಚಿನ್ನದ ಬೆಲೆ ಏರಿಕೆಯಾಗಿದೆ, ಬೆಂಗಳೂರಿನಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ ಸುಮಾರು ₹13,266 ಮತ್ತು 22 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹12,160 ಇದೆ, ಬೆಳ್ಳಿ ಬೆಲೆಯೂ ಏರಿಕೆಯಾಗಿದ್ದು 1 ಗ್ರಾಂಗೆ ₹204 ಇದೆ ಇಂದಿನ ಚಿನ್ನದ ದರ (ಡಿಸೆಂಬರ್ 13, 2025) - ಒಂದು ಅಂದಾಜು: 24 ಕ್ಯಾರೆಟ್ (1 ಗ್ರಾಂ): ~₹13,320 - ₹13,321 (ಬೆಂಗಳೂರಿನಲ್ಲಿ ₹13,266) 22 ಕ್ಯಾರೆಟ್ (1 ಗ್ರಾಂ): ~₹12,210 - ₹12,211 (ಬೆಂಗಳೂರಿನಲ್ಲಿ ₹12,160) ಇಂದಿನ ಬೆಳ್ಳಿ ದರ (ಡಿಸೆಂಬರ್ 12): 1 ಗ್ರಾಂ: ~₹204 (ಬೆಂಗಳೂರು)
Dec 13, 20251 min read


ಪಂಜ : ಕಾಡುಪ್ರಾಣಿ ಡಿಕ್ಕಿ: ಕುಕ್ಕೆ ಮಠದ ಅರ್ಚಕ ಗಂಭೀರ, ಆಸ್ಪತ್ರೆಗೆ ದಾಖಲು
ಪಂಜ: ಕುಕ್ಕೆ ಸುಬ್ರಹ್ಮಣ್ಯ ಮಠಕ್ಕೆ ಪೂಜೆಗೆಂದು ತೆರಳುತ್ತಿದ್ದ ಅರ್ಚಕರೊಬ್ಬರ ದ್ವಿಚಕ್ರ ವಾಹನಕ್ಕೆ ಕಾಡುಪ್ರಾಣಿಯೊಂದು ಡಿಕ್ಕಿ ಹೊಡೆದ ಪರಿಣಾಮ ಸವಾರ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡಿರುವ ಘಟನೆ ಡಿ. 12ರ ಮುಂಜಾನೆ ಪಂಜ ಸಮೀಪ ನಡೆದಿದೆ. ಗಾಯಾಳು ಅರ್ಚಕರನ್ನು ಪಂಜ ಗ್ರಾಮದ ನಿವಾಸಿ ವಾಸು ಭಟ್ ಎಂದು ಗುರುತಿಸಲಾಗಿದೆ. ವಾಸು ಭಟ್ ಅವರು ಮುಂಜಾನೆ ಸುಮಾರು 4 ರಿಂದ 5 ಗಂಟೆಯ ವೇಳೆಯಲ್ಲಿ ಪಂಜದ ತಮ್ಮ ಮನೆಯಿಂದ ಕುಕ್ಕೆ ಸುಬ್ರಹ್ಮಣ್ಯ ಮಠದಲ್ಲಿ ಸರ್ಪಸಂಸ್ಕಾರ ಪೂಜೆ ನೆರವೇರಿಸಲು ಬೈಕ್ನಲ್ಲಿ ತೆರಳುತ್ತಿದ್ದರು. ಈ ವೇಳೆ, ಬಳ್ಳ ಸಮೀಪದ ಎಡೋಣಿ ಪ್ರದೇಶದಲ್ಲಿ ರಸ್ತೆಗೆ ಅಡ್ಡ ಬಂದ ಕ
Dec 13, 20251 min read


ಭಾರಿ ಏರಿಕೆ ಕಂಡ ಚಿನ್ನದ ದರ
ಇಂದು, ಡಿಸೆಂಬರ್ 12, 2025 ರಂದು ಬೆಂಗಳೂರಿನಲ್ಲಿ ಚಿನ್ನದ ಬೆಲೆ ಗಣನೀಯವಾಗಿ ಏರಿದೆ; 24 ಕ್ಯಾರೆಟ್ ಚಿನ್ನದ ದರ 13,266 ರೂ/ಗ್ರಾಂ ಮತ್ತು 22 ಕ್ಯಾರೆಟ್ ಚಿನ್ನದ ದರ 12,160 ರೂ/ಗ್ರಾಂ ತಲುಪಿದೆ, ಬೆಳ್ಳಿಯ ದರ ಕೂಡ 204 ರೂ/ಗ್ರಾಂಗೆ ಹೆಚ್ಚಾಗಿದೆ. ಇಂದಿನ ಚಿನ್ನದ ದರ (ಬೆಂಗಳೂರು, 12-12-2025): 24 ಕ್ಯಾರೆಟ್ ಚಿನ್ನ: 13,266 ರೂ (1 ಗ್ರಾಂ). 22 ಕ್ಯಾರೆಟ್ ಚಿನ್ನ: 12,160 ರೂ (1 ಗ್ರಾಂ). ಬೆಳ್ಳಿ: 204 ರೂ (1 ಗ್ರಾಂ).
Dec 12, 20251 min read


ಸಾಮಾಜಿಕ ಬಹಿಷ್ಕಾರ ನಿಷೇಧಕ್ಕೆ ಕರ್ನಾಟಕದಲ್ಲಿ ಕಠಿಣ ಕಾನೂನು
ಕರ್ನಾಟಕ ಸರ್ಕಾರವು ವಿಧಾನಸಭೆಯಲ್ಲಿ ಇಂದು ಕರ್ನಾಟಕ ಸಾಮಾಜಿಕ ಬಹಿಷ್ಕಾರದಿಂದ ಜನರ ರಕ್ಷಣೆ (ತಡೆ, ನಿಷೇಧ ಮತ್ತು ಪರಿಹಾರ) ಮಸೂದೆಯನ್ನು ಮಂಡಿಸುವ ಮೂಲಕ ಮಹತ್ವದ ಐತಿಹಾಸಿಕ ಹೆಜ್ಜೆಯಿಟ್ಟಿದೆ. ಈ ಮಸೂದೆಯ ಮುಖ್ಯ ಉದ್ದೇಶವು ಯಾವುದೇ ವ್ಯಕ್ತಿ, ಕುಟುಂಬ ಅಥವಾ ಕುಟುಂಬದ ಸದಸ್ಯರನ್ನು ಸಾಮಾಜಿಕವಾಗಿ ಬಹಿಷ್ಕರಿಸುವುದನ್ನು ಸಂಪೂರ್ಣವಾಗಿ ನಿಷೇಧಿಸುವುದಾಗಿದೆ. ಈ ಹೊಸ ಕಾನೂನಿನ ಅನ್ವಯ, ಯಾರಾದರೂ ಸಾಮಾಜಿಕ ಬಹಿಷ್ಕಾರದಂತಹ ಕೃತ್ಯಕ್ಕೆ ಮುಂದಾದರೆ, ಅವರಿಗೆ 1 ಲಕ್ಷ ರೂ.ಗಳ ದಂಡ ಹಾಗೂ 3 ವರ್ಷಗಳವರೆಗೆ ಜೈಲು ಶಿಕ್ಷೆಯನ್ನು ವಿಧಿಸಲಾಗುತ್ತದೆ. ಬಹಿಷ್ಕಾರ ಹಾಕಲು ಸಭೆ-ಪಂಚಾಯಿತಿ ನಡೆಸುವುದು, ಅದಕ್ಕೆ
Dec 12, 20251 min read


ಮೈಸೂರು ಅರಮನೆ ವರಾಹ ಗೇಟ್ ಬಳಿ ಮುಖ್ಯದ್ವಾರದ ಚಾವಣಿ ಕುಸಿತ: ಭಾರೀ ಅನಾಹುತದಿಂದ ಪಾರಾದ ಸಾರ್ವಜನಿಕರು
ಮೈಸೂರು: ವಿಶ್ವವಿಖ್ಯಾತ ಮೈಸೂರು ಅರಮನೆಯ ಮುಖ್ಯ ಪ್ರವೇಶ ದ್ವಾರವಾದ ವರಾಹ ಗೇಟ್ನ (Varaha Gate) ಮೇಲ್ಪಾವಣೆಯ ಸಣ್ಣ ಭಾಗವೊಂದು ದಿಢೀರ್ ಕುಸಿದು ಬಿದ್ದಿದ್ದು, ಅದೃಷ್ಟವಶಾತ್ ಪ್ರವಾಸಿಗರು ಮತ್ತು ಸಾರ್ವಜನಿಕರು ದೊಡ್ಡ ಅಪಾಯದಿಂದ ಪಾರಾಗಿದ್ದಾರೆ. ಈ ಘಟನೆ ನಡೆದ ಸಂದರ್ಭದಲ್ಲಿ ದ್ವಾರದ ಬಳಿ ಯಾರು ಇಲ್ಲದ ಕಾರಣ ಯಾವುದೇ ರೀತಿಯ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಐತಿಹಾಸಿಕ ಕಟ್ಟಡದ ಭಾಗ ಕುಸಿದಿರುವ ಈ ಘಟನೆಯು ಅರಮನೆಯ ಸಂರಕ್ಷಣೆ ಮತ್ತು ನಿರ್ವಹಣೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಕುಸಿದು ಬಿದ್ದಿರುವುದು ಗೇಟಿನ ಮೇಲ್ಭಾಗದ ಸಣ್ಣ ಪ್ರಮಾಣದ ಚಾವಣಿಯಾಗಿದೆ. ಈ ಘಟನೆ
Dec 11, 20251 min read


ಜೈಲಿನಲ್ಲಿದ್ದರೂ ದರ್ಶನ್ 'ಡೆವಿಲ್' ಸಿನಿಮಾಕ್ಕೆ ಭರ್ಜರಿ ಓಪನಿಂಗ್: ಅಭಿಮಾನಿಗಳಿಂದ ಉತ್ತಮ ಪ್ರತಿಕ್ರಿಯೆ
ಚಿತ್ರದುರ್ಗದ ನಿವಾಸಿ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ ಅವರು ಬಳ್ಳಾರಿ ಜೈಲಿನಿಂದಲೇ ತಮ್ಮ ಅಭಿಮಾನಿಗಳಿಗೆ ಸಂದೇಶ ಕಳುಹಿಸಿ, ತಾವು ನಟಿಸಿರುವ ಬಹುನಿರೀಕ್ಷಿತ 'ಡೆವಿಲ್' ಚಿತ್ರವನ್ನು ಯಶಸ್ವಿಗೊಳಿಸುವಂತೆ ವಿನಂತಿಸಿಕೊಂಡಿದ್ದರು. ಅವರ ಮನವಿಗೆ ಸ್ಪಂದಿಸಿದ ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಚಿತ್ರಮಂದಿರಗಳತ್ತ ದೌಡಾಯಿಸಿದ್ದಾರೆ. ಬುಧವಾರ (ಡಿಸೆಂಬರ್ 10) ಬಿಡುಗಡೆಯಾದ ಈ ಚಿತ್ರಕ್ಕೆ ದರ್ಶನ್ ಅಭಿಮಾನಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹಲವು ಚಿತ್ರಮಂದಿರಗಳಲ್ಲಿ ಬೆಳಿಗ್ಗೆ 6.30 ರಿಂದಲೇ ಪ್ರದರ್ಶನಗಳು ಪ್
Dec 11, 20251 min read


"ದೇವಾಲಯದ ಹಣ ದೇವಾಲಯಕ್ಕೇ ಮೀಸಲು": ಸಹಕಾರಿ ಬ್ಯಾಂಕ್ಗಳಿಗೆ ನಿಧಿ ಬಳಕೆ ಇಲ್ಲ - ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
ನವದೆಹಲಿ: ದೇವಾಲಯದ ನಿಧಿಯನ್ನು ಆರ್ಥಿಕವಾಗಿ ದುರ್ಬಲವಾಗಿರುವ ಸಹಕಾರಿ ಬ್ಯಾಂಕುಗಳನ್ನು ಬೆಂಬಲಿಸಲು ಬಳಸಲಾಗದು. ದೇವಾಲಯದ ಹಣವು ಸಂಪೂರ್ಣವಾಗಿ ದೇವಾಲಯದ ಹಿತಾಸಕ್ತಿಗಳಿಗೆ ಮಾತ್ರ ಮೀಸಲಾಗಿರಬೇಕು ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಯಲ್ಯ ಬಾಗ್ನಿ ಅವರಿದ್ದ ನ್ಯಾಯಪೀಠವು ಈ ನಿರ್ಧಾರವನ್ನು ಪ್ರಕಟಿಸಿದೆ. ತಿರುನೆಲ್ಲಿ ದೇವಸ್ಥಾನದ ದೇವಸ್ವಂ ಠೇವಣಿಗಳನ್ನು ಹಿಂದಿರುಗಿಸುವಂತೆ ಕೇರಳ ಹೈಕೋರ್ಟ್ ನೀಡಿದ್ದ ಆದೇಶವನ್ನು ನ್ಯಾಯಪೀಠವು ಎತ್ತಿಹಿಡಿದಿದೆ. ಬ್ಯಾಂಕುಗಳು ಹಣವನ್ನು ಸುರಕ್ಷಿತ ರಾಷ್ಟ್ರೀಕೃತ ಬ್ಯಾಂಕ್ಗೆ ವರ್
Dec 10, 20251 min read
Archive
bottom of page


