top of page
News Articles
Sathyapatha News Plus


ಚಿನ್ನದ ಪದಕ ವಿಜೇತೆ ಧನಲಕ್ಷ್ಮಿ ಪೂಜಾರಿಗೆ ಸುವರ್ಣಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಅಭಿನಂದನೆ
ಬೆಳಗಾವಿ: ಢಾಕಾದಲ್ಲಿ ನಡೆದ ಮಹಿಳಾ ಕಬಡ್ಡಿ ಪಂದ್ಯಾವಳಿಯಲ್ಲಿ ಚಿನ್ನದ ಪದಕ ಗೆದ್ದ ಭಾರತ ತಂಡದ ರಾಜ್ಯದ ಆಟಗಾರ್ತಿ ಧನಲಕ್ಷ್ಮಿ ಪೂಜಾರಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುವರ್ಣಸೌಧದಲ್ಲಿ ನಡೆಯುತ್ತಿರುವ ವಿಧಾನಮಂಡಲ ಅಧಿವೇಶನದಲ್ಲಿ ಅಭಿನಂದಿಸಿದರು. ಬುಧವಾರ ಸದನದ ಕಲಾಪ ವೀಕ್ಷಣೆಗಾಗಿ ಆಗಮಿಸಿದ್ದ ಧನಲಕ್ಷ್ಮಿ ಪೂಜಾರಿ ಮತ್ತು ಅವರ ತರಬೇತುದಾರರನ್ನು ಮುಖ್ಯಮಂತ್ರಿಗಳು ಸ್ವಾಗತಿಸಿ, ರಾಜ್ಯಕ್ಕೆ ಮತ್ತು ದೇಶಕ್ಕೆ ಹೆಮ್ಮೆ ತಂದಿರುವ ಅವರ ಸಾಧನೆಯನ್ನು ಶ್ಲಾಘಿಸಿ ಅಭಿನಂದನಾ ನುಡಿಗಳನ್ನಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಜ್ಯ ಸರ್ಕಾರವು ಧನ
Dec 10, 20251 min read


ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣ – ಜೈಲಿನಲ್ಲಿ ದರ್ಶನ್ ಗಲಾಟೆ ವದಂತಿ, ಅಧಿಕಾರಿಗಳ ಖಂಡನೆ
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿ ನಟ ದರ್ಶನ್ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಇತರೆ ಆರೋಪಿಗಳ ಜೊತೆ ರಂಪಾಟ ನಡೆಸಿದ್ದಾರೆ ಎನ್ನುವ ವದಂತಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ದರ್ಶನ್, ಆರ್. ನಾಗರಾಜ್, ಚಾಲಕ ಲಕ್ಷ್ಮಣ್, ಉದ್ಯಮಿ ಪ್ರದೂಷ್ ರಾವ್ ಹಾಗೂ ಆಟೋ ಚಾಲಕರು ಅನುಕುಮಾರ್ (ಅನು), ಜಗದೀಶ್ (ಜಗ್ಗ) – ಎಲ್ಲರೂ ಒಂದೇ ಬ್ಯಾರಕ್ನಲ್ಲಿ ಇರಿಸಿರುವುದು ತಿಳಿದುಬಂದಿದೆ. ದರ್ಶನ್ ಅವರು ಆರ್. ನಾಗರಾಜ್ ಹೊರತುಪಡಿಸಿ ಉಳಿದವರ ಜೊತೆ ಗಲಾಟೆ, ಅವಾಚ್ಯ ಶಬ್ದ ಬಳಕೆ ಹಾಗೂ ಕಾಲಿನಿಂದ ಒದ್ದಿದ್ದಾರೆ ಎನ್ನುವ ಆರೋಪಗಳು ಕೇಳಿಬಂದಿದ್ದರೂ, ಕಾರಾಗೃಹದ ಎಸ್ಪಿ
Dec 9, 20251 min read


ಜಪಾನ್ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ, 23 ಮಂದಿಗೆ ಗಾಯ
ಜಪಾನ್: ಉತ್ತರ ಜಪಾನ್ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಹಲವು ಮನೆಗಳು ನೆಲಸಮಗೊಂಡಿವೆ. ಘಟನೆಯಲ್ಲಿ 23 ಮಂದಿ ಗಾಯಗೊಂಡಿದ್ದಾರೆ. ಸುನಾಮಿ ಅಲೆಗಳು ಎದ್ದಿವೆ. ಅಮೋರಿ ಕರಾವಳಿಯಿಂದ ಸುಮಾರು 80 ಕಿ.ಮೀ ದೂರದಲ್ಲಿರುವ ಪೆಸಿಫಿಕ್ ಮಹಾಸಾಗರದಲ್ಲಿ ರಾತ್ರಿ 11.15 ಕ್ಕೆ ಭೂಕಂಪ ಸಂಭವಿಸಿದೆ. ಹಲವು ವಿಡಿಯೋಗಳು ವೈರಲ್ ಆಗಿವೆ.ಹಚಿನೋಹೆಯ ಹೋಟೆಲ್ನಲ್ಲಿ ಹಲವಾರು ಜನರು ಗಾಯಗೊಂಡಿದ್ದಾರೆ. ಇವಾಟೆ ಪ್ರಿಫೆಕ್ಚರ್ನ ಕುಜಿ ಬಂದರಿನಲ್ಲಿ 70 ಸೆಂ.ಮೀ.ವರೆಗಿನ ಸುನಾಮಿ ಅಲೆಗಳು ಎದ್ದಿವೆ.ಮುನ್ನೆಚ್ಚರಿಕೆಯಾಗಿ ದುರ್ಬಲ ಪ್ರದೇಶಗಳಲ್ಲಿರುವ ನಿವಾಸಿಗಳು ಎತ್ತರದ ಪ್ರದೇಶಗಳಿಗೆ ತೆರಳುವಂತೆ ಸೂ
Dec 9, 20251 min read


ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ನಿಂದ ಸಹ ಕೈದಿಗಳಿಗೆ ಕಿರುಕುಳ ಆರೋಪ
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ವಿರುದ್ಧ ಗಂಭೀರ ಆರೋಪವೊಂದು ಕೇಳಿಬಂದಿದೆ. ಅವರು ತಮ್ಮ ಸಹ ಕೈದಿಗಳಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ವರದಿಯಾಗಿದೆ. ಈ ಬಾರಿ ದರ್ಶನ್ ಜೈಲು ಸೇರಿದಾಗಿನಿಂದ ಜೈಲಿನಲ್ಲಿ ಕಠಿಣ ನಿಯಮಗಳು ಜಾರಿಯಲ್ಲಿದ್ದು, ಇತ್ತೀಚೆಗೆ ಜೈಲಿನ ಪಾರ್ಟಿ ವಿಡಿಯೋ ವೈರಲ್ ಆದ ನಂತರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಿದೆ. ಜೈಲಿನ ಮುಖ್ಯ ಸೂಪರಿಂಟೆಂಡೆಂಟ್ ಆಗಿ ಐಪಿಎಸ್ ಅಧಿಕಾರಿ ಅಂಶು ಕುಮಾರ್ ನೇಮಕಗೊಂಡ ನಂತರ, ಜೈಲಿನಲ್ಲಿ ಅತಿ ಕಠಿಣ ರೂಲ್ಸ್ಗಳನ್ನು ಜಾರಿಗೆ ತಂದಿದ್ದಾರೆ. ಜೈಲಿನಲ್ಲ
Dec 8, 20251 min read


ಪ್ರಯಾಣಿಕರ ತುರ್ತು ಚಿಕಿತ್ಸೆಗೆ ಮಂಗಳೂರಿನಲ್ಲಿ ವಿಮಾನ ಇಳಿಕೆ: ಏರ್ ಇಂಡಿಯಾ ಎಕ್ಸ್ಪ್ರೆಸ್ಗೆ ಕ್ಷಿಪ್ರ ಸ್ಪಂದನೆ
ಮಂಗಳೂರು: ರಿಯಾದ್ನಿಂದ ತಿರುವನಂತಪುರಕ್ಕೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನವೊಂದು (Air India Express), ವಿಮಾನದಲ್ಲಿದ್ದ ಪ್ರಯಾಣಿಕರೊಬ್ಬರಿಗೆ ತುರ್ತು ವೈದ್ಯಕೀಯ ಚಿಕಿತ್ಸೆಯ ಅಗತ್ಯ ಎದುರಾದ ಹಿನ್ನೆಲೆಯಲ್ಲಿ, ಸೋಮವಾರ ತಡರಾತ್ರಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಸಮಯಕ್ಕೆ ಸರಿಯಾಗಿ ವಿಮಾನ ನಿಲ್ದಾಣದ ಅಧಿಕಾರಿಗಳು ಮತ್ತು ವೈದ್ಯಕೀಯ ತಂಡದ ಕ್ಷಿಪ್ರ ಪ್ರತಿಕ್ರಿಯೆಯಿಂದಾಗಿ ಅಸ್ವಸ್ಥ ಪ್ರಯಾಣಿಕರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲು ಸಾಧ್ಯವಾಗಿದೆ. ರಿಯಾದ್ನಿಂದ ತಿರುವನಂತಪುರಂ ಕಡೆಗೆ ಪ್ರಯಾಣಿಸುತ್ತಿದ್ದ ವಿಮಾನದೊಳಗೆ ಸು
Dec 3, 20251 min read


'ಕಾಂತಾರ ಅಧ್ಯಾಯ 1' ದೈವದ ಪಾತ್ರದ ಅನುಕರಣೆ: ವಿವಾದದ ಬಳಿಕ ಕ್ಷಮೆಯಾಚಿಸಿದ ನಟ ರಣವೀರ್ ಸಿಂಗ್
ಗೋವಾದಲ್ಲಿ ಇತ್ತೀಚೆಗೆ ನಡೆದ ಭಾರತೀಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ (IFFI) ಸಮಾರೋಪ ಸಮಾರಂಭದಲ್ಲಿ ಬಾಲಿವುಡ್ ನಟ ರಣವೀರ್ ಸಿಂಗ್ ಅವರು 'ಕಾಂತಾರ ಅಧ್ಯಾಯ 1' ಚಿತ್ರದ ದೈವದ ಪಾತ್ರವನ್ನು ತಮಾಷೆಯಾಗಿ ಅನುಕರಣೆ ಮಾಡಿ ವಿವಾದಕ್ಕೆ ಸಿಲುಕಿದ್ದಾರೆ. ರಣವೀರ್ ಸಿಂಗ್ ಅವರು ದೈವದ ಪಾತ್ರವನ್ನು 'ಹೆಣ್ಣು ದೆವ್ವ' ಎಂದು ಉಲ್ಲೇಖಿಸಿ ಟೀಕೆಗೆ ಗುರಿಯಾಗಿದ್ದರು. ಕರಾವಳಿ ಪ್ರದೇಶದ ಹಲವರು ಈ ಹೇಳಿಕೆ ಮತ್ತು ಅನುಕರಣೆಯ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು, ನಟನು ತಕ್ಷಣವೇ ಕ್ಷಮೆಯಾಚಿಸಬೇಕು ಎಂದು ವ್ಯಾಪಕವಾಗಿ ಆಗ್ರಹಿಸಿದ್ದರು. ಈ ವಿವಾದವು ಹಿಂದೂ ಸಮುದಾಯದ ಭಾವ
Dec 2, 20251 min read


25 ವರ್ಷಗಳ ಹಳೆಯ ಉಡುಪಿ-ಹೈದರಾಬಾದ್ ಕೆಎಸ್ಆರ್ಟಿಸಿ ಬಸ್ ಸೇವೆ ಸ್ಥಗಿತ!
ಕರಾವಳಿ ಕರ್ನಾಟಕದಿಂದ ಆಂಧ್ರಪ್ರದೇಶದ ಹೈದರಾಬಾದ್ಗೆ ಸಂಪರ್ಕ ಕಲ್ಪಿಸುತ್ತಿದ್ದ, 25 ವರ್ಷಗಳಷ್ಟು ಹಳೆಯದಾದ ಕೆಎಸ್ಆರ್ಟಿಸಿ (KSRTC) ನಾನ್-ಎಸಿ ಸ್ಲೀಪರ್ ಬಸ್ ಸೇವೆಯನ್ನು ಭಾರಿ ನಷ್ಟದ ಕಾರಣದಿಂದಾಗಿ ದಿಢೀರನೆ ಸ್ಥಗಿತಗೊಳಿಸಲಾಗಿದೆ. ಸುಮಾರು 10-15 ದಿನಗಳಿಂದ ಕಾರ್ಯಾಚರಣೆಯನ್ನು ನಿಲ್ಲಿಸಿರುವ ಈ ಬಸ್, ಉಡುಪಿ, ಕುಂದಾಪುರ, ಸಿದ್ದಾಪುರದಿಂದ ಹೊರಟು ಶಿವಮೊಗ್ಗ, ರಾಯಚೂರು ಮೂಲಕ ಹೈದರಾಬಾದ್ಗೆ ತಲುಪುತ್ತಿತ್ತು. ಸತತವಾಗಿ ಹಲವು ತಿಂಗಳುಗಳಿಂದ ನಷ್ಟ ಅನುಭವಿಸುತ್ತಿದ್ದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಬಸ್ ಸೇವೆಯನ್ನು ಅವಲಂಬಿಸಿದ್ದ ಕರಾವಳಿ ಜಿಲ್ಲೆಗಳ ಅನೇಕ ಪ್ರಯಾಣಿ
Nov 30, 20251 min read


ಶಕ್ತಿ ಯೋಜನೆ: ಮಹಿಳಾ ಮೀಸಲು ಸೀಟುಗಳ ಬಗ್ಗೆ ಬಸ್ ನಿರ್ವಾಹಕರ ಬೇಜವಾಬ್ದಾರಿ
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ 'ಶಕ್ತಿ' ಯೋಜನೆಯಡಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಗಳಲ್ಲಿ ಮಹಿಳಾ ಪ್ರಯಾಣಿಕರಿಗೆ ಉಚಿತ ಪ್ರಯಾಣದ ಗ್ಯಾರಂಟಿ ಜಾರಿಗೊಂಡಿದೆ. ಆದರೆ, ಈ ಗ್ಯಾರಂಟಿ ಯೋಜನೆಯು ಬಸ್ಗಳಲ್ಲಿನ ಮಹಿಳಾ ಮೀಸಲು ಸೀಟುಗಳ ಹಕ್ಕಿಗೆ ಸಂಚಕಾರ ತಂದಿದೆಯೇ ಎಂಬ ಪ್ರಶ್ನೆ ಇದೀಗ ಮೂಡಿದೆ. ಇಂದು ಬೆಳಿಗ್ಗೆ ಮಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ (KA.19, F-3196) ಬಸ್ನಲ್ಲಿ ನಡೆದ ಘಟನೆಯೊಂದು ಇದಕ್ಕೆ ಸಾಕ್ಷಿಯಾಗಿದೆ. ಬಸ್ಸಿನಲ್ಲಿ ಆಸನಗಳು ಖಾಲಿ ಇದ್ದರೂ ಸಹ, ಮಹಿಳೆಯರಿಗಾಗಿ ಮೀಸಲಾಗಿದ್ದ ಸೀಟುಗಳಲ್ಲಿ ಪುರುಷ ಪ್ರಯಾಣಿಕರು ಕುಳಿತುಕೊಂಡಿದ್ದರು ಎಂದು ವರದಿಯಾಗಿದೆ. ಘಟನೆಯ ಬ
Nov 30, 20251 min read


ನಾಯಕತ್ವ ಗೊಂದಲಕ್ಕೆ ತೆರೆ: ಸಿಎಂ-ಡಿಸಿಎಂ ಜಂಟಿ ಸುದ್ದಿಗೋಷ್ಠಿ, ಒಗ್ಗಟ್ಟಿನ ಸಂದೇಶ ರವಾನೆ
ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ಕಳೆದ ಕೆಲವು ದಿನಗಳಿಂದ ಭಾರೀ ಚರ್ಚೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧಿಕೃತ ನಿವಾಸ 'ಕಾವೇರಿ'ಗೆ ಭೇಟಿ ನೀಡಿದ್ದು ಎಲ್ಲರ ಗಮನ ಸೆಳೆಯಿತು. ಡಿಕೆ ಶಿವಕುಮಾರ್ ಅವರು ಆಗಮಿಸುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡರು. ಉಭಯ ನಾಯಕರು ಉಪಾಹಾರ ಸೇವಿಸಿದರು. ಕಾಂಗ್ರೆಸ್ ಹೈಕಮಾಂಡ್ನ ನಿರ್ಧಾರದಂತೆ ನಡೆದ ಈ 'ಬ್ರೇಕ್ಫಾಸ್ಟ್ ಮೀಟಿಂಗ್' ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿತ್ತು. 2028ರ ಚುನಾವ
Nov 29, 20251 min read


ಮುಂಡಗೋಡು: ಪೊಲೀಸರ ಭರ್ಜರಿ ಕಾರ್ಯಾಚರಣೆ; 8 ಲಕ್ಷ ಮೌಲ್ಯದ ಚರಸ್ ಸಹಿತ ಇಂಜಿನಿಯರ್ ಬಂಧನ
ಮುಂಡಗೋಡು: ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡು ಪೊಲೀಸರು ಮಾದಕ ದ್ರವ್ಯ ಮಾರಾಟ ಜಾಲದ ಮೇಲೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಸುಮಾರು 8 ಲಕ್ಷ ರೂಪಾಯಿ ಮೌಲ್ಯದ 781 ಗ್ರಾಂ ನಿಷೇಧಿತ ಮಾದಕ ವಸ್ತು 'ಚರಸ್' ಅನ್ನು ವಶಪಡಿಸಿಕೊಂಡು, ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಮುಂಡಗೋಡಿನ ಸುಭಾಷ್ ನಗರದ ನಿವಾಸಿ, ವೃತ್ತಿಯಲ್ಲಿ ಇಂಜಿನಿಯರ್ ಆಗಿರುವ ಸಚಿನ್ ಟೇಕಬಹುದ್ದೂರ್ ಗೋರ್ಖಾ (26) ಎಂದು ಗುರುತಿಸಲಾಗಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆಗಿಳಿದ ಮುಂಡಗೋಡು ಠಾಣೆಯ ಸಿ.ಪಿ.ಐ ರಂಗನಾಥ್ ನೀಲಮ್ಮನವರ್ ಹಾ
Nov 23, 20251 min read


ದೆಹಲಿ ವಾಯು ಮಾಲಿನ್ಯ: ನವೆಂಬರ್, ಡಿಸೆಂಬರ್ನಲ್ಲಿ ಮಕ್ಕಳ ಕ್ರೀಡಾ ಚಟುವಟಿಕೆಗಳಿಗೆ ಸುಪ್ರೀಂ ಕೋರ್ಟ್ ನಿಷೇಧ!
ದೆಹಲಿಯಲ್ಲಿ ಪ್ರತಿ ವರ್ಷ ನವೆಂಬರ್ ಮತ್ತು ಡಿಸೆಂಬರ್ ತಿಂಗಳುಗಳಲ್ಲಿ ವಾಯು ಮಾಲಿನ್ಯದ ಮಟ್ಟವು ಅತ್ಯಂತ ಅಪಾಯಕಾರಿ ಸ್ಥಿತಿಗೆ ತಲುಪುವ ಹಿನ್ನೆಲೆಯಲ್ಲಿ, ಮಕ್ಕಳ ಆರೋಗ್ಯವನ್ನು ರಕ್ಷಿಸಲು ಸುಪ್ರೀಂ ಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಈ ಎರಡು ತಿಂಗಳುಗಳ ಅವಧಿಯಲ್ಲಿ ರಾಷ್ಟ್ರ ರಾಜಧಾನಿಯಾದ್ಯಂತ ಶಾಲಾ-ಕಾಲೇಜುಗಳಲ್ಲಿ ಅಥವಾ ಯಾವುದೇ ಮೈದಾನಗಳಲ್ಲಿ ಮಕ್ಕಳ ಕ್ರೀಡಾ ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಮಾಲಿನ್ಯ ಸುರಕ್ಷಿತವಾಗಿರುವ ತಿಂಗಳುಗಳಿಗೆ ಈ ಕ್ರೀಡಾ ಚಟುವಟಿಕೆಗಳನ್ನು ಸ್ಥಳಾಂತರಿಸುವಂತೆ ಸುಪ್ರೀಂ ಕೋರ್ಟ್, 'ಕಮಿಷನ್ ಫಾರ್ ಏರ್ ಕ್ವಾಲಿಟಿ ಮ್ಯಾನೇಜ್ಮೆಂಟ್ಗೆ (CAQM)'
Nov 19, 20251 min read


ದತ್ತ ಜಯಂತಿ ಹಿನ್ನೆಲೆ ಚಿಕ್ಕಮಗಳೂರು ಪ್ರವಾಸಕ್ಕೆ ನಿರ್ಬಂಧ: ಪ್ರವಾಸಿಗರಿಗೆ ಹೊಸ ಆದೇಶ
ದತ್ತ ಜಯಂತಿ ಮಹೋತ್ಸವದ ಹಿನ್ನೆಲೆಯಲ್ಲಿ ಕಾಫಿನಾಡು ಚಿಕ್ಕಮಗಳೂರು ಪ್ರವಾಸಕ್ಕೆ ಯೋಜಿಸಿರುವ ಪ್ರವಾಸಿಗರಿಗೆ ಪ್ರಮುಖ ಸುದ್ದಿ ಹೊರಬಿದ್ದಿದೆ. ಜಿಲ್ಲಾಡಳಿತವು ಡಿಸೆಂಬರ್ 1 ರಿಂದ 4 ರವರೆಗೆ ಚಿಕ್ಕಮಗಳೂರು ತಾಲೂಕಿನ ಪ್ರಮುಖ ಪ್ರವಾಸಿ ತಾಣಗಳಾದ ಮುಳ್ಳಯ್ಯನಗಿರಿ ಭಾಗಕ್ಕೆ ಸಾರ್ವಜನಿಕರ ಹಾಗೂ ಪ್ರವಾಸಿಗರ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಿದೆ. ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರು ಈ ಸಂಬಂಧ ಆದೇಶ ಹೊರಡಿಸಿದ್ದು, ಡಿಸೆಂಬರ್ 5 ರ ಬೆಳಗ್ಗೆ 10 ಗಂಟೆಯ ನಂತರವಷ್ಟೇ ಈ ಭಾಗವನ್ನು ಪ್ರವಾಸಿಗರಿಗೆ ಪುನಃ ತೆರೆಯಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ. ಹೀಗಾಗಿ, ಈ ದಿನಾಂಕಗಳಲ್ಲಿ ಪ್ರವಾಸ ಕೈ
Nov 19, 20251 min read


ಇಂದಿನ ಚಿನ್ನದ ದರ
ಇಂದು, ನವೆಂಬರ್ 19, 2025 ರಂದು ಪ್ರಮುಖ ಲೋಹಗಳಾದ ಚಿನ್ನ (Gold), ಬೆಳ್ಳಿ (Silver), ಮತ್ತು ಪ್ಲಾಟಿನಂ (Platinum) ದರಗಳಲ್ಲಿನ ಏರಿಳಿತದ ಕುರಿತು ಪ್ರಮುಖ ವರದಿ ಇಲ್ಲಿದೆ. | ಚಿನ್ನ 24 ಕ್ಯಾರೆಟ್ (99.9% ಶುದ್ಧ) | 12,485/- | | ಚಿನ್ನ 22 ಕ್ಯಾರೆಟ್ (ಆಭರಣ ತಯಾರಿಕೆಗೆ) | 11,445/- | | ಚಿನ್ನ 18 ಕ್ಯಾರೆಟ್ | 9,364/- | | ಚಿನ್ನ 14 ಕ್ಯಾರೆಟ್ | 7,282/- | | ಬೆಳ್ಳಿ (ಪ್ರತಿ ಗ್ರಾಂಗೆ) | 159/- | | ಪ್ಲಾಟಿನಂ (Platinum) | 5,925/- |
Nov 19, 20251 min read


ಪಡೀಲ್-ಕಣ್ಣೂರು ಮುಖ್ಯ ಪೈಪ್ಲೈನ್ ಹಾನಿ: ಮಂಗಳೂರು ನಗರಕ್ಕೆ ಎರಡು ದಿನದಿಂದ ನೀರು ಪೂರೈಕೆ ಸ್ಥಗಿತ
ಮಂಗಳೂರು: ನಗರದ ವಿವಿಧ ಪ್ರದೇಶಗಳಿಗೆ ನೀರು ಸರಬರಾಜು ಮಾಡುವ ಮುಖ್ಯ ಪೈಪ್ಲೈನ್ ಪಡೀಲ್-ಕಣ್ಣೂರು ಬಳಿ ಕಾಮಗಾರಿಯ ವೇಳೆ ಹಾನಿಗೊಳಗಾದ ಕಾರಣ ಸೋಮವಾರ ಮತ್ತು ಮಂಗಳವಾರ ನಗರದಲ್ಲಿ ನೀರು ಪೂರೈಕೆ ಸಂಪೂರ್ಣ ಸ್ಥಗಿತಗೊಂಡಿದೆ. ಈ ಅನಿರೀಕ್ಷಿತ ಅಡಚಣೆಯಿಂದಾಗಿ ಮಂಗಳೂರು ನಗರದಾದ್ಯಂತ ತೀವ್ರ ನೀರಿನ ಸಮಸ್ಯೆ ತಲೆದೋರಿದ್ದು, ಜನಜೀವನ ಅಸ್ತವ್ಯಸ್ತಗೊಂಡು ಜನರು ಪರದಾಡುವಂತಾಗಿದೆ. ತುಂಬೆ ಡ್ಯಾಂನಿಂದ ಪಡೀಲ್ ಟ್ಯಾಂಕ್ಗೆ ನೀರು ಸರಬರಾಜು ಮಾಡುವ ಮುಖ್ಯ ಪೈಪ್ಲೈನ್ 18 ಅಡಿ ಆಳದಲ್ಲಿ ಹಾದುಹೋಗಿದ್ದು, ಈ ಪೈಪ್ಲೈನ್ಗೆ ಹಾನಿಯಾಗಿರುವುದು ಸಮಸ್ಯೆಗೆ ಮೂಲ ಕಾರಣವಾಗಿದೆ. ಪಡೀಲ್ ಪಂಪೌಸ್ನಿಂದ ನೀರು ಪಡೆಯ
Nov 19, 20251 min read


ಶಬರಿಮಲೆ ಯಾತ್ರೆ: ಎರಡೇ ದಿನದಲ್ಲಿ 2 ಲಕ್ಷ ಭಕ್ತರ ಆಗಮನ, ಭಾರಿ ನೂಕುನುಗ್ಗಲು, ಓರ್ವ ಭಕ್ತ ಮಹಿಳೆ ಸಾವು
ಪ್ರಸಿದ್ಧ ವಾರ್ಷಿಕ ಶಬರಿಮಲೆ ಅಯ್ಯಪ್ಪನ 'ಮಂಡಲ ಮಕರವಿಳಕ್ಕು' ಯಾತ್ರೆ ಆರಂಭವಾದ ಎರಡನೇ ದಿನದಲ್ಲಿ ಭಾರಿ ಅವ್ಯವಸ್ಥೆ ಉಂಟಾಗಿದ್ದು, ಕರ್ನಾಟಕದ ಭಕ್ತರು ಸೇರಿದಂತೆ ಕೇವಲ 48 ಗಂಟೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಭಕ್ತರು ಆಗಮಿಸಿದ್ದಾರೆ. ನಿರೀಕ್ಷೆಗೂ ಮೀರಿದ ಭಕ್ತರ ದಂಡು ಆಗಮಿಸಿದ ಕಾರಣ ಅಯ್ಯಪ್ಪನ ಸನ್ನಿಧಿಯ 18 ಮೆಟ್ಟಿಲುಗಳ ಬಳಿ ಭಾರೀ ನೂಕುನುಗ್ಗಲು ವಾತಾವರಣ ಸೃಷ್ಟಿಯಾಗಿದೆ. ಈ ಅವ್ಯವಸ್ಥೆಗಳ ನಡುವೆ, ದರ್ಶನಕ್ಕಾಗಿ ಸರದಿಯಲ್ಲಿ ನಿಂತಿದ್ದ ಕಲ್ಲಿಕೋಟೆ ಮೂಲದ 58 ವರ್ಷದ ಮಹಿಳಾ ಭಕ್ತರೊಬ್ಬರು ಕುಸಿದು ಸಾವನ್ನಪ್ಪಿರುವ ದುರಂತ ಸಂಭವಿಸಿದೆ. ದೇವಸ್ಥಾನದ ಬಾಗಿಲು ತೆರೆದ ಎರಡೇ ದಿನದಲ್ಲಿ ಇಷ್
Nov 19, 20251 min read


ಭಾರತದ ಟಾಪ್ 10 ಶ್ರೀಮಂತ ಮಹಿಳಾ ಉದ್ಯಮಿಗಳ ಪಟ್ಟಿ ಪ್ರಕಟ: ಮಂಗಳೂರು ಮೂಲದ ಜಯಶ್ರೀ ಉಳ್ಳಾಲ್ಗೆ ಅಗ್ರಸ್ಥಾನ
ಹ್ಯುರೂನ್ ರೀಸರ್ಚ್ ಬಿಡುಗಡೆ ಮಾಡಿದ 'ಇಂಡಿಯಾ ರಿಚ್ ಲಿಸ್ಟ್ 2025' ರ ಪ್ರಕಾರ ಭಾರತದ ಅತ್ಯಂತ ಶ್ರೀಮಂತ ಮಹಿಳಾ ಉದ್ಯಮಿಗಳ ಪಟ್ಟಿ ಪ್ರಕಟಗೊಂಡಿದೆ. ಈ ಪಟ್ಟಿಯಲ್ಲಿ ಮಂಗಳೂರು ಮೂಲದ ಜಯಶ್ರೀ ಉಳ್ಳಾಲ್ ಅವರು 50,170 ಕೋಟಿ ರೂಪಾಯಿಗಳ ಸಂಪತ್ತಿನೊಂದಿಗೆ ಅಗ್ರಸ್ಥಾನ ಪಡೆದುಕೊಂಡು ಎಲ್ಲರ ಗಮನ ಸೆಳೆದಿದ್ದಾರೆ. ಅವರು 2008 ರಿಂದ ಕಂಪ್ಯೂಟರ್ ನೆಟ್ವರ್ಕಿಂಗ್ ಸಂಸ್ಥೆಯಾದ ಅರಿಸ್ಟಾ ನೆಟ್ವರ್ಕ್ಸ್ನ ಅಧ್ಯಕ್ಷೆ ಮತ್ತು ಸಿಇಒ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕಳೆದ ವರ್ಷ $7 ಬಿಲಿಯನ್ ಆದಾಯವನ್ನು ದಾಖಲಿಸಿದ ಅರಿಸ್ಟಾ ನೆಟ್ವರ್ಕ್ಸ್ನಲ್ಲಿ ಉಳ್ಳಾಲ್ ಅವರು ಸುಮಾರು ಶೇ 3ರಷ್ಟು ಷೇರುಗಳನ್
Nov 18, 20251 min read


ಆರ್.ವಿ. ರಸ್ತೆ ಮೆಟ್ರೋ ನಿಲ್ದಾಣದಲ್ಲಿ ಪ್ರಯಾಣಿಕರಿಂದ ಸಂಚಾರ ತಡೆ: BMRCL ನಿಂದ ದೂರು ದಾಖಲು
ಸೋಮವಾರ ಬೆಳಗ್ಗೆ ಬೆಂಗಳೂರಿನ ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದ್ದು, ಆರ್.ವಿ. ರಸ್ತೆ ಮೆಟ್ರೋ ನಿಲ್ದಾಣದಲ್ಲಿ ಪ್ರಯಾಣಿಕರ ಗುಂಪೊಂದು ರೈಲು ಹೊರಡುವುದನ್ನು ತಡೆದು ಪ್ರತಿಭಟನೆ ನಡೆಸಿದ ಗಂಭೀರ ಘಟನೆ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಕಾನೂನು ಕ್ರಮ ಕೈಗೊಳ್ಳುವಂತೆ BMRCL ಅಧಿಕಾರಿಗಳು ಜಯನಗರ ಪೊಲೀಸ್ ಠಾಣೆಗೆ ಅಧಿಕೃತ ದೂರು ಸಲ್ಲಿಸಿದ್ದಾರೆ. ಬೆಳಿಗ್ಗೆ 6 ಗಂಟೆಗೆ ನಿಲ್ದಾಣದಿಂದ ಹೊರಡಬೇಕಿದ್ದ ರೈಲು, ಪ್ರತಿಭಟನಾಕಾರರ ಗಲಾಟೆಯಿಂದಾಗಿ ಸುಮಾರು 35 ನಿಮಿಷಗಳ ಕಾಲ ನಿಲ್ದಾಣದಲ್ಲೇ ನಿಂತುಬಿಟ್ಟಿತ್ತು. ಮೆಟ್ರೋ ನಿರ್ವಾಹಕ ಅಜಿತ್ ಜೆ. ಅವರು ಪ್ರಯಾಣಿಕರನ್ನು ಮನವಿ ಮಾಡಿದರೂ ಸಹ
Nov 18, 20251 min read


ಶಬರಿಮಲೆ ಯಾತ್ರೆ ಪ್ರಾರಂಭ ಮೊದಲ ದಿನವೇ 1.36 ಲಕ್ಷ ಭಕ್ತರಿಂದ ಅಯ್ಯಪ್ಪನ ದರ್ಶನ
ಕೇರಳದ ಪ್ರಸಿದ್ಧ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲದ ವಾರ್ಷಿಕ ಮಂಡಲ ಯಾತ್ರೆ ಸೋಮವಾರದಿಂದ ವಿಧ್ಯುಕ್ತ ವಾಗಿ ಆರಂಭವಾಯಿತು. ಮೊದಲ ದಿನವೇ 1.36 ಲಕ್ಷ ಭಕ್ತರು ಅಯ್ಯಪ್ಪನ ದರ್ಶನ ಪಡೆದರು. ಸೋಮವಾರ ಶಬರಿಮಲೆ ಋತುವಿನ ಆರಂಭದ ದಿನವಾದ್ದರಿಂದ ಪ್ರಧಾನ ಆರ್ಚಕರ ನೇತೃತ್ವದಲ್ಲಿ ಸಕಲ ಧಾರ್ಮಿಕ ವಿಧಿ ವಿಧಾನಗಳು ನೆರವೇ ರಿದವು. ಭಾನುವಾರ ಸಂಜೆಯೇ ದೇಗುಲದ ಬಾಗಿಲು ತೆರೆಯಲಾಗಿದ್ದು, ಸೋಮವಾರದಿಂದ 41 ದಿನಗಳ ಮಂಡಲ ಯಾತ್ರೆಗೆ ಚಾಲನೆ ನೀಡಲಾ ಯಿತು. ಈ ಸಮಯದಲ್ಲಿ ಬೇರೆ ಬೇರೆ ರಾಜ್ಯಗಳ ಲಕ್ಷಾಂತರ ಮಂದಿ ಯಾತ್ರೆ ಕೈಗೊಂಡು “ದೇಗುಲಕ್ಕೆ ಭೇಟಿ ನೀಡಲಿದ್ದಾರೆ. ಶಬರಿಮಲೆ ದೇಗುಲದ ದ್ವಾರಪಾಲಕ ವಿಗ್ರಹಗಳ ಚಿ
Nov 18, 20251 min read
ವೈಭವ ಸೂರ್ಯವಂಶಿ ಸಿಡಿಲು ಶತಕ! ಏಷ್ಯಾ ಕಪ್ ರೈಸಿಂಗ್ ಸ್ಟಾರ್ಸ್ನಲ್ಲಿ ಇಂಡಿಯಾ ‘ಎ’ ಅಬ್ಬರ
ದುಬೈ: ಏಷ್ಯಾ ಕಪ್ ರೈಸಿಂಗ್ ಸ್ಟಾರ್ಸ್ 2025ರಲ್ಲಿ ನಡೆದ ಇಂಡಿಯಾ ‘ಎ’ ಮತ್ತು ಯುಎಇ ನಡುವಿನ ಪಂದ್ಯದಲ್ಲಿ ಭಾರತೀಯ ಯುವ ಕ್ರಿಕೆಟಿಗ ವೈಭವ ಸೂರ್ಯವಂಶಿ ತಮ್ಮ ಅದ್ಭುತ ಬ್ಯಾಟಿಂಗ್ ಮೂಲಕ ಅಖಾಡವನ್ನು ರಂಗೇರಿಸಿದರು. ಕೇವಲ 32 ಎಸೆತಗಳಲ್ಲಿ ಸ್ಫೋಟಕ ಶತಕ ಬಾರಿಸಿದ ಸೂರ್ಯವಂಶಿ ಸ್ಟೇಡಿಯಂನಲ್ಲಿ ರನ್ಗಳ ಹೊಳೆ ಹರಿಸಿದರು. ಪರಿಪೂರ್ಣ ಆಕ್ರಮಣಕಾರಿ ಶೈಲಿಯಲ್ಲಿ ಆಡಿದ ಸೂರ್ಯವಂಶಿ ಫೋರ್, ಸಿಕ್ಸರ್ಗಳ ಮಳೆ ಸುರಿಸಿ ಯುಎಇ ಬೌಲರ್ಗಳನ್ನು ಸಂಪೂರ್ಣ ಗಾಬರಿಗೊಳಿಸಿದರು. ಅವರ ಬ್ಯಾಟಿಂಗ್ಗಳಿಂದಾಗಿ ಇಂಡಿಯಾ ‘ಎ’ ತಂಡ ದೊಡ್ಡ ಮೊತ್ತದ ದಿಸೆಯಲ್ಲಿ ಭರ್ಜರಿಯಾಗಿ ಸಾಗಿದೆ. ಪಂದ್ಯದ ಆರಂಭದಿಂದಲೇ ಆಕ್ರಾಮಕ
Nov 14, 20251 min read


ಪರಿಸರ ಮಾತೆ ಸಾಲುಮರದ ತಿಮ್ಮಕ್ಕ ನಿಧನ
ಬೆಂಗಳೂರು: ಪದ್ಮಶ್ರೀ ಪುರಸ್ಕೃತೆ, 'ಪರಿಸರ ಮಾತೆ' ಎಂದೇ ಜಗದ್ವಿಖ್ಯಾತರಾಗಿದ್ದ ಸಾಲುಮರದ ತಿಮ್ಮಕ್ಕ (114) ಅವರು ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೇ ಇಂದು ಜಯನಗರದ ಅಪೋಲೋ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. 1911ರ ಜೂನ್ 30 ರಂದು (ಕೃಷ್ಣಾಪ್ರಭು ಮೈಸೂರಿನ ಕಾಲದಲ್ಲಿ) ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನಲ್ಲಿ ಜನಿಸಿದ ತಿಮ್ಮಕ್ಕನವರು, ಯಾವುದೇ ಔಪಚಾರಿಕ ಶಿಕ್ಷಣವನ್ನು ಪಡೆದವರಲ್ಲ. ಬಡತನದಲ್ಲಿ ಬೆಳೆದ ಇವರು ಕುಟುಂಬದ ಪರಿಸ್ಥಿತಿಯಿಂದಾಗಿ ಕಲ್ಲು ಗಣಿಯಲ್ಲಿ ದಿನಗೂಲಿ ಕಾರ್ಮಿಕರಾಗಿ ದುಡಿದು ಜೀವನ ನಡೆಸುತ್ತಿದ್ದರು. ಜೀವನದುದ್ದಕ್ಕೂ ಶ್ರಮಪೂರ್
Nov 14, 20251 min read
Archive
bottom of page


