top of page
News Articles
Sathyapatha News Plus


ಹೆಸರಘಟ್ಟದಲ್ಲಿ ಹಕ್ಕಿ ಜ್ವರ ದೃಢ: ಬೆಂಗಳೂರಿನಲ್ಲಿ ಹೈ ಅಲರ್ಟ್
ಬೆಂಗಳೂರಿನ ಹೆಸರಘಟ್ಟದ ಸರ್ಕಾರಿ ಕೋಳಿ ಫಾರಂನಲ್ಲಿ ಹಕ್ಕಿ ಜ್ವರ (H5N1) ಪತ್ತೆಯಾಗಿದ್ದು, ರಾಜ್ಯದಾದ್ಯಂತ ತೀವ್ರ ಹೈ ಅಲರ್ಟ್ ಘೋಷಿಸಲಾಗಿದೆ. ಇಲ್ಲಿಂದಲೇ ರಾಜ್ಯದ ವಿವಿಧ ಭಾಗಗಳಿಗೆ ಕೋಳಿಗಳು ಸರಬರಾಜಾಗಿರುವುದು ಆತಂಕ ಮೂಡಿಸಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಸುತ್ತಮುತ್ತಲಿನ ಒಂದು ಕಿಲೋಮೀಟರ್ ವ್ಯಾಪ್ತಿಯ ಕೋಳಿಗಳನ್ನು ನಾಶಪಡಿಸಲು ಪಶುಸಂಗೋಪನಾ ಇಲಾಖೆ ನಿರ್ಧರಿಸಿದೆ. ಸಾರ್ವಜನಿಕರು ಆತಂಕಪಡದೆ ಜಾಗರೂಕರಾಗಿರಲು ಸೂಚಿಸಲಾಗಿದೆ. ಕೋಳಿ ಮಾಂಸ ಮತ್ತು ಮೊಟ್ಟೆಯನ್ನು ಕನಿಷ್ಠ 70°C ಗಿಂತ ಹೆಚ್ಚಿನ ತಾಪಮಾನದಲ್ಲಿ ಚೆನ್ನಾಗಿ ಬೇಯಿಸಿ ಸೇವಿಸಬೇಕು. ಹಕ್ಕಿಗಳ ಅಸಹಜ ಸಾವು ಕಂಡುಬಂದಲ್ಲಿ ಕೂಡಲೇ
Apr 171 min read


ಚಾರಣಿಗರಿಗೆ ರಾಜ್ಯ ಸರ್ಕಾರದ ಹೊಸ ಕಟ್ಟುನಿಟ್ಟಿನ ನಿಯಮ ಜಾರಿ
ರಾಜ್ಯದಲ್ಲಿ ಚಾರಣದ ವೇಳೆ ಸಂಭವಿಸುತ್ತಿರುವ ಅಪಘಾತಗಳನ್ನು ತಡೆಗಟ್ಟಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೊಸ ಕಾರ್ಯವಿಧಾನವನ್ನು (SOP) ಬಿಡುಗಡೆ ಮಾಡಿದ್ದಾರೆ. ಇನ್ಮುಂದೆ ಚಾರಣಕ್ಕೆ ಹೋಗುವವರು ಆನ್ಲೈನ್ ಮೂಲಕವೇ ಮುಂಗಡ ಬುಕ್ಕಿಂಗ್ ಮಾಡುವುದು ಕಡ್ಡಾಯವಾಗಿದೆ. ಪ್ರತಿ ಹತ್ತು ಮಂದಿ ಚಾರಣಿಗರ ತಂಡಕ್ಕೆ ಒಬ್ಬ ಅನುಭವಿ ಗೈಡ್ ಇರಲೇಬೇಕು, ಗೈಡ್ ಇಲ್ಲದೆ ಚಾರಣಕ್ಕೆ ಅವಕಾಶ ನೀಡಲಾಗುವುದಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಸುರಕ್ಷತೆಯ ದೃಷ್ಟಿಯಿಂದ ಚಾರಣಿಗರ ಮೊಬೈಲ್ಗಳಲ್ಲಿ ಕಡ್ಡಾಯವಾಗಿ ಟ್ರ್ಯಾಕಿಂಗ್ ಆ್ಯಪ್ ಅಳವಡಿಸಲಾಗುತ್ತದೆ. ಇದರಿಂದ ತುರ್ತು ಸಂದರ್ಭಗಳಲ್ಲಿ ಚಾರಣಿಗರ ಸ್ಥಳವನ್ನು ಪತ್ತೆ
Apr 171 min read


ಮಗ ತನ್ನಂತೆ ಇಲ್ಲ ಎಂದಿದ್ದಕ್ಕೆ ನದಿಗೆ ತಳ್ಳಿ ಕೊಂದ ಪಾಪಿ ತಂದೆ!
ಮಗ ತನ್ನಂತೆ ಇಲ್ಲ ಎಂದು ಗ್ರಾಮಸ್ಥರು ಚುಡಾಯಿಸಿದ್ದಕ್ಕೆ ತಂದೆಯೇ ಮಗನನ್ನು ಹತ್ಯೆ ಮಾಡಿದ ಭೀಕರ ಘಟನೆ ವಿಜಯಪುರ ಜಿಲ್ಲೆಯ ನಾಗಠಾಣ ಗ್ರಾಮದಲ್ಲಿ ನಡೆದಿದೆ. ಮಾರ್ಚ್ 16ರಂದು ಮಗ ಸಿದ್ದಾರ್ಥನನ್ನು ಶಾಲೆಗೆ ಸೇರಿಸುವುದಾಗಿ ಕರೆದೊಯ್ದ ತಂದೆ ಮಲ್ಲಿಕಾರ್ಜುನ, ಮಹಾರಾಷ್ಟ್ರದ ಕರಾಡ್ ಬಳಿ ಕೃಷ್ಣಾ ನದಿಗೆ ತಳ್ಳಿ ಕೊಲೆ ಮಾಡಿದ್ದಾನೆ. ಮಗನನ್ನು ಹಾಸ್ಟೆಲ್ನಲ್ಲಿ ಇಟ್ಟಿರುವುದಾಗಿ ಸುಳ್ಳು ಹೇಳಿದ್ದ ಮಲ್ಲಿಕಾರ್ಜುನ, ಏಪ್ರಿಲ್ 1ರಂದು ಮಗನ ಹುಟ್ಟುಹಬ್ಬಕ್ಕೆ ತಾಯಿ ಪಟ್ಟು ಹಿಡಿದಾಗ ಪರಾರಿಯಾಗಿದ್ದಾನೆ. ಇದರಿಂದ ಅನುಮಾನಗೊಂಡ ತಾಯಿ ಭಾಗ್ಯಶ್ರೀ ಪೊಲೀಸರಿಗೆ ದೂರು ನೀಡಿದ್ದು, ತನಿಖೆ ವೇಳೆ ಪಾಪಿ ತಂದೆಯ
Apr 171 min read


ಉಜಿರೆ: ಮನೆಯಲ್ಲೇ ನೇಣು ಬಿಗಿದುಕೊಂಡು ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆ
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ಪಿಯುಸಿ ವಿದ್ಯಾರ್ಥಿಯೊಬ್ಬ ತನ್ನ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ನಡೆದಿದೆ. ಟಿ.ಬಿ. ಕ್ರಾಸ್ ನಿವಾಸಿ ಮಹಮ್ಮದ್ ಅಯಾನ್ (17) ಮೃತಪಟ್ಟ ದುರ್ದೈವಿ. ಈತ ಸ್ಥಳೀಯ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿದ್ದನು ಎಂದು ತಿಳಿದುಬಂದಿದೆ. ಬುಧವಾರ ತನ್ನ ಅಪಾರ್ಟ್ಮೆಂಟ್ನ ಕೊಠಡಿಯ ಫ್ಯಾನ್ಗೆ ಅಯಾನ್ ನೇಣು ಹಾಕಿಕೊಂಡಿದ್ದು, ಮನೆಯವರು ಗಮನಿಸಿದಾಗ ವಿಷಯ ಬೆಳಕಿಗೆ ಬಂದಿದೆ. ವಿದ್ಯಾರ್ಥಿಯ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಯ
Apr 161 min read


ಲೋಕಸಭೆ ಸದಸ್ಯರ ಸಂಖ್ಯೆ 815ಕ್ಕೆ ಏರಿಕೆ: ಮಹಿಳೆಯರಿಗೆ 272 ಸ್ಥಾನ ಮೀಸಲು ಅನ್ವಯ!
ಲೋಕಸಭೆಯ ಒಟ್ಟು ಸದಸ್ಯರ ಸಂಖ್ಯೆಯನ್ನು 543ರಿಂದ 815ಕ್ಕೆ ಏರಿಸುವ ಪ್ರಸ್ತಾವನೆಯನ್ನು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಸದನದಲ್ಲಿ ಮಂಡಿಸಿದ್ದಾರೆ. ನಾರಿ ಶಕ್ತಿ ಮಸೂದೆಯ ಜಾರಿಯಿಂದಾಗಿ ಈ ಮಹತ್ವದ ಬದಲಾವಣೆ ಸಾಧ್ಯವಾಗಲಿದ್ದು, ದೇಶದ ಸಂಸದೀಯ ಇತಿಹಾಸದಲ್ಲಿ ಇದು ಹೊಸ ಮೈಲಿಗಲ್ಲಾಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸೀಟುಗಳ ಸಂಖ್ಯೆ ಹೆಚ್ಚಳವಾಗುವುದರಿಂದ ಮಹಿಳೆಯರಿಗೆ ಒಟ್ಟು 272 ಸ್ಥಾನಗಳು ಮೀಸಲಾಗಲಿವೆ. ಕ್ಷೇತ್ರ ಮರು ವಿಂಗಡನೆಯ ಪ್ರಕ್ರಿಯೆಯಿಂದ ಯಾವುದೇ ರಾಜ್ಯಗಳಿಗೆ ಅನ್ಯಾಯವಾಗದಂತೆ ಕ್ರಮವಹಿಸಲಾಗುವುದು ಎಂದು ಸಚಿವರು ಭರವಸೆ ನೀಡಿದ್ದು, ಪ್ರತಿಪಕ್ಷಗಳು
Apr 161 min read


ಖಿನ್ನತೆಗೆ ಬಲಿಯಾಯಿತೇ ಮತ್ತೊಂದು ಜೀವ? ಕಡಬದ ಯುವಕನ ದುರಂತ ಅಂತ್ಯ
ಕಡಬದ ಪುಳಿಕುಕ್ಕು ಸಮೀಪ ಮಡಪ್ಪಾಡಿ ಗ್ರಾಮದ ಕಿಶನ್ ಎ ಹೆಚ್ (32) ಎಂಬ ಯುವಕ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗುತ್ತಿಗಾರಿನ ಬ್ಯಾಂಕೊಂದರಲ್ಲಿ ಲೋನ್ ಆಫೀಸರ್ ಆಗಿದ್ದ ಇವರು, ಕಳೆದ ಕೆಲವು ಸಮಯದಿಂದ ತೀವ್ರ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಮಾರ್ಚ್ 21ರಂದು ವಿಷ ಸೇವಿಸಿದ್ದ ಇವರನ್ನು ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸುಮಾರು 20 ದಿನಗಳ ಕಾಲ ಸಾವು ಬದುಕಿನ ನಡುವೆ ಹೋರಾಡಿದ ಕಿಶನ್, ಏಪ್ರಿಲ್ 14ರಂದು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಮೃತರ ಸಹೋದರ ನೀಡಿದ ದೂರಿನಂತೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊ
Apr 161 min read


ಇವಿಎಂ ಬದಲು ಇನ್ಮುಂದೆ ಮತಪತ್ರ ಬಳಕೆ; ರಾಜ್ಯಪಾಲರ ಅಂಕಿತ
ಇನ್ಮುಂದೆ ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಮತಪತ್ರಗಳ ಯುಗ ಮರಳಲಿದೆ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕ-2026ಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಹಾಕಿದ್ದು, ಸರ್ಕಾರವು ಅಧಿಕೃತವಾಗಿ ಗೆಜೆಟ್ ಪ್ರಕಟಣೆ ಹೊರಡಿಸಿದೆ. ಈ ಮಹತ್ವದ ಬದಲಾವಣೆಯು ಗ್ರಾಮ, ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಗಳಿಗೆ ಅನ್ವಯವಾಗಲಿದೆ. ಚುನಾವಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಹೆಚ್ಚಿಸಲು ಹಾಗೂ ಮತದಾನದ ಗೌಪ್ಯತೆಯನ್ನು ಭದ್ರಪಡಿಸಲು ಈ ಐತಿಹಾಸಿಕ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸರ್ಕಾರ ತಿಳಿಸಿದ್ದು, ಇಂದಿನಿಂದಲೇ ರಾಜ್ಯಾದ್ಯಂತ
Apr 161 min read


ಮೋದಿ-ಸಿದ್ದರಾಮಯ್ಯ ನಡುವೆ 'ಗುಸುಗುಸು ಮಾತು': ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಆ ಒಂದು ಫೋಟೊ!
ಪ್ರಧಾನಿ ಮೋದಿ ಮತ್ತು ಸಿಎಂ ಸಿದ್ದರಾಮಯ್ಯ ಅವರ ಈ ಅಪರೂಪದ ಕ್ಷಣ ಈಗ ಎಲ್ಲೆಡೆ ಸದ್ದು ಮಾಡುತ್ತಿದೆ. ರಾಜಕೀಯ ಅಖಾಡದಲ್ಲಿ ಪರಸ್ಪರ ವಾಗ್ದಾಳಿ ನಡೆಸುವ ಈ ಇಬ್ಬರು ನಾಯಕರು, ಏರ್ಪೋರ್ಟ್ನಲ್ಲಿ ಮಾತ್ರ ಹಳೆಯ ಸ್ನೇಹಿತರಂತೆ ಆತ್ಮೀಯವಾಗಿ ಮಾತುಕತೆ ನಡೆಸುತ್ತಿರುವುದು ಕುತೂಹಲ ಕೆರಳಿಸಿದೆ. ಸಿದ್ದರಾಮಯ್ಯನವರು ಮೋದಿಯವರ ಕಿವಿಯಲ್ಲಿ ಗುಟ್ಟಾಗಿ ಹೇಳಿದ ಆ ವಿಚಾರವೇನಿರಬಹುದು ಎಂಬ ಚರ್ಚೆ ರಾಜಕೀಯ ವಲಯದಲ್ಲಿ ಜೋರಾಗಿದೆ. ಸೈದ್ಧಾಂತಿಕ ಭಿನ್ನಾಭಿಪ್ರಾಯಗಳ ನಡುವೆಯೂ ಕಂಡುಬಂದ ಈ ಸೌಹಾರ್ದಯುತ ನಡವಳಿಕೆ, ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ಹೊಸ ಸಂಚಲನ ಸೃಷ್ಟಿಸಿದೆ.
Apr 151 min read


ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಸಾಮ್ರಾಟ್ ಚೌಧರಿ ಆಯ್ಕೆ: ಬಿಜೆಪಿಗೆ ಮೊದಲ ಬಾರಿ ಸಿಎಂ ಪಟ್ಟ!
ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಸಾಮ್ರಾಟ್ ಚೌಧರಿ ಅವರನ್ನು ಬಿಜೆಪಿ ಆಯ್ಕೆ ಮಾಡಿದ್ದು, ಅವರು ನಾಳೆ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ. ಈ ಮೂಲಕ ಬಿಹಾರದಲ್ಲಿ ಮುಖ್ಯಮಂತ್ರಿ ಹುದ್ದೆ ಅಲಂಕರಿಸಲಿರುವ ಮೊದಲ ಬಿಜೆಪಿ ನಾಯಕ ಎಂಬ ಹೆಗ್ಗಳಿಕೆಗೆ 57 ವರ್ಷದ ಚೌಧರಿ ಪಾತ್ರರಾಗಿದ್ದಾರೆ. ಇವರು ರಾಜ್ಯದ ಪ್ರಭಾವಿ ಒಬಿಸಿ ಸಮುದಾಯವಾದ ಕುಶ್ವಾಹ ಜಾತಿಗೆ ಸೇರಿದವರಾಗಿದ್ದು, ರಾಜಕೀಯವಾಗಿ ಈ ನೇಮಕವು ಅತ್ಯಂತ ಮಹತ್ವ ಪಡೆದುಕೊಂಡಿದೆ. 2005 ರಿಂದಲೂ ಮೈತ್ರಿಕೂಟದಲ್ಲಿ ಕಿರಿಯ ಪಾಲುದಾರನಾಗಿದ್ದ ಬಿಜೆಪಿಗೆ, ತನ್ನದೇ ನಾಯಕನನ್ನು ಉನ್ನತ ಹುದ್ದೆಯಲ್ಲಿ ಕೂರಿಸಲು ದಶಕಗಳ ಕಾಯುವಿಕೆ ಅಂತ್ಯವಾಗಿದೆ. ಪ್ರ
Apr 141 min read


ಏಷ್ಯಾ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್: ಆಯುಷ್ ಶೆಟ್ಟಿಗೆ ಐತಿಹಾಸಿಕ ಬೆಳ್ಳಿ ಪದಕ!
ಬ್ಯಾಡ್ಮಿಂಟನ್ ಏಷ್ಯಾ ಚಾಂಪಿಯನ್ಶಿಪ್ನ ಪುರುಷರ ಸಿಂಗಲ್ಸ್ ಫೈನಲ್ನಲ್ಲಿ ಭಾರತದ ಆಯುಷ್ ಶೆಟ್ಟಿ ಬೆಳ್ಳಿ ಪದಕ ಗೆದ್ದು ಐತಿಹಾಸಿಕ ಸಾಧನೆ ಮಾಡಿದ್ದಾರೆ. ಚೀನಾದ ಶಿ ಯು ಕಿ ವಿರುದ್ಧ ನಡೆದ ರೋಚಕ ಹಣಾಹಣಿಯಲ್ಲಿ ಸೋಲೊಪ್ಪಿಕೊಂಡರೂ, 59 ವರ್ಷಗಳ ನಂತರ ಈ ಟೂರ್ನಿಯ ಫೈನಲ್ ತಲುಪಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಅದ್ಭುತ ಪಯಣದಲ್ಲಿ ಆಯುಷ್ ವಿಶ್ವದ ನಂಬರ್ 1 ಆಟಗಾರ ಕುನ್ಹಾವುಟ್ ವಿಟಿಕ್ಸರ್ನ್ ಸೇರಿದಂತೆ ಹಲವು ದಿಗ್ಗಜರನ್ನು ಮಣಿಸಿ ಸಂಚಲನ ಮೂಡಿಸಿದ್ದರು. ಅಂತಿಮ ಹಂತದಲ್ಲಿ ಸೋಲು ಕಂಡರೂ, ಅವರ ಈ ಹೋರಾಟಗಾರ ಗುಣವು ಭಾರತೀಯ ಬ್ಯಾಡ್ಮಿಂಟನ್ ಅಭಿಮಾನಿಗಳ ಮನ ಗೆಲ್ಲುವಲ್
Apr 141 min read


ಸಿರಿಂಜ್ ಮರುಬಳಕೆ: ಪಾಕಿಸ್ತಾನದ 331 ಮಕ್ಕಳಿಗೆ ಹೆಚ್ಐವಿ ಸೋಂಕು!
ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಸರ್ಕಾರಿ ಆಸ್ಪತ್ರೆಯೊಂದರಲ್ಲಿ ಸಿರಿಂಜ್ಗಳ ಮರುಬಳಕೆಯಿಂದಾಗಿ 331 ಮಕ್ಕಳಿಗೆ ಹೆಚ್ಐವಿ ಸೋಂಕು ತಗುಲಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಅಸುರಕ್ಷಿತ ಇಂಜೆಕ್ಷನ್ ಪದ್ಧತಿ ಮತ್ತು ಕಲುಷಿತ ಬಾಟಲುಗಳ ಬಳಕೆಯೇ ಈ ದುರಂತಕ್ಕೆ ಕಾರಣವೆಂದು ತನಿಖಾ ವರದಿಗಳು ಸ್ಪಷ್ಟಪಡಿಸಿವೆ. ಸ್ಥಳೀಯ ವೈದ್ಯರು ಮಕ್ಕಳಲ್ಲಿ ಹಠಾತ್ ಸೋಂಕು ಏರಿಕೆಯಾಗಿರುವುದನ್ನು ಗುರುತಿಸಿದ ನಂತರ ಈ ವ್ಯವಸ್ಥಿತ ವೈಫಲ್ಯ ಬಯಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರನ್ನು ಅಮಾನತುಗೊಳಿಸಲಾಗಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು
Apr 141 min read


ಸಿಬಿಎಸ್ಇ 10ನೇ ತರಗತಿ ಫಲಿತಾಂಶ ಶೀಘ್ರ ಪ್ರಕಟ: 25 ಲಕ್ಷ ವಿದ್ಯಾರ್ಥಿಗಳ ಕಾಯುವಿಕೆ ಅಂತ್ಯ; ಚೆಕ್ ಮಾಡುವುದು ಹೇಗೆ?
2025-26ನೇ ಸಾಲಿನ ಸಿಬಿಎಸ್ಇ 10ನೇ ತರಗತಿಯ ಬೋರ್ಡ್ ಪರೀಕ್ಷೆಯ ಫಲಿತಾಂಶಗಳು ಶೀಘ್ರದಲ್ಲೇ ಪ್ರಕಟಗೊಳ್ಳಲಿದ್ದು, ಸುಮಾರು 25 ಲಕ್ಷ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದಾರೆ. ಕಳೆದ ಫೆಬ್ರವರಿ 17 ರಿಂದ ಮಾರ್ಚ್ 11ರ ವರೆಗೆ ನಡೆದ ಪರೀಕ್ಷೆಯ ಫಲಿತಾಂಶವನ್ನು ಮಂಡಳಿಯ ಅಧಿಕೃತ ವೆಬ್ಸೈಟ್ಗಳಾದ results.cbse.nic.in ಅಥವಾ cbse.gov.in ನಲ್ಲಿ ವೀಕ್ಷಿಸಬಹುದಾಗಿದೆ. ವಿದ್ಯಾರ್ಥಿಗಳು ತಮ್ಮ ಶಾಲಾ ಸಂಖ್ಯೆ ಮತ್ತು ಅಡ್ಮಿಟ್ ಕಾರ್ಡ್ ಐಡಿ ಬಳಸಿ ಅಂಕಪಟ್ಟಿ ಡೌನ್ಲೋಡ್ ಮಾಡಿಕೊಳ್ಳಬಹುದು. ಫಲಿತಾಂಶ ಘೋಷಣೆಯಾದ ನಂತರ ಡಿಜಿಟಲ್ ಅಂಕಪಟ್ಟಿಗಳು ಮತ್ತು ಪ್ರಮಾಣಪತ್ರಗಳು 'ಡಿಜಿಲಾಕರ್' (DigiL
Apr 141 min read


ರಾಜ್ಯದಲ್ಲಿ ₹18,430 ಕೋಟಿ ಬಂಡವಾಳ ಹೂಡಿಕೆಗೆ ಒಪ್ಪಿಗೆ: 15 ಸಾವಿರ ಉದ್ಯೋಗ ಸೃಷ್ಟಿಗೆ ಸಿಎಂ ಸಿದ್ದರಾಮಯ್ಯ ಹಸಿರು ನಿಶಾನೆ
ರಾಜ್ಯದಲ್ಲಿ ಕೈಗಾರಿಕಾ ಅಭಿವೃದ್ಧಿಗೆ ವೇಗ ನೀಡುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯು (SHLCC) ಮಹತ್ವದ ತೀರ್ಮಾನ ಕೈಗೊಂಡಿದೆ. ಒಟ್ಟು 18,430.44 ಕೋಟಿ ರೂ. ಮೊತ್ತದ 17 ಬೃಹತ್ ಬಂಡವಾಳ ಹೂಡಿಕೆ ಯೋಜನೆಗಳಿಗೆ ಸಭೆಯಲ್ಲಿ ಅಧಿಕೃತ ಅನುಮೋದನೆ ನೀಡಲಾಗಿದ್ದು, ಇದರಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸುಮಾರು 15 ಸಾವಿರ ಹೊಸ ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ. ಮುಖ್ಯಮಂತ್ರಿಯವರ ಗೃಹ ಕಚೇರಿ 'ಕೃಷ್ಣಾ'ದಲ್ಲಿ ನಡೆದ ಈ 67ನೇ ಸಭೆಯಲ್ಲಿ, 11 ಹೊಸ ಪ್ರಸ್ತಾವನೆಗಳು ಹಾಗೂ 6 ವಿಸ್ತರಣಾ ಯೋಜನೆಗಳಿಗೆ ಸಮ್ಮತಿ ಸೂಚಿಸಲಾಯಿತು. ಬಾ
Apr 141 min read


ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನಕ್ಕೆ ನಜೀರ್ ಅಹ್ಮದ್ ರಾಜೀನಾಮೆ
ಸಚಿವ ಸಂಪುಟ ಪುನಾರಚನೆ ಅಥವಾ ಪಕ್ಷದ ಆಂತರಿಕ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಸ್ಥಾನಕ್ಕೆ ಎಂಎಲ್ಸಿ ನಜೀರ್ ಅಹ್ಮದ್ ಕೊನೆಗೂ ರಾಜೀನಾಮೆ ನೀಡಿದ್ದಾರೆ. ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ನೀಡಿದ್ದ ಕಟ್ಟುನಿಟ್ಟಿನ ಗಡುವಿಗೆ ಮಣಿದ ನಜೀರ್ ಅಹ್ಮದ್, ಸೋಮವಾರ ಸಂಜೆ ತಮ್ಮ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಧಿಕೃತವಾಗಿ ರವಾನಿಸಿದ್ದಾರೆ. ಒಂದು ವೇಳೆ ನಿಗದಿತ ಸಮಯದೊಳಗೆ ರಾಜೀನಾಮೆ ನೀಡದಿದ್ದರೆ ಅವರನ್ನು ಹುದ್ದೆಯಿಂದ ವಜಾಗೊಳಿಸುವಂತೆ ಸಿಎಂಗೆ ಸೂಚಿಸಲಾಗುವುದು ಎಂದು ಹೈಕಮಾಂಡ್ ಎಚ್ಚರಿಕೆ ನೀಡಿತ್ತು. ಈ ತೀವ
Apr 141 min read


ಬೆಂಗಳೂರು: ಬೆಕ್ಕುಗಳ 'ಲವ್ ಸ್ಟೋರಿ'ಗೆ ಪೊಲೀಸರ ಎಂಟ್ರಿ; ವಿಚಿತ್ರ ಜಗಳಕ್ಕೆ ಸುಖಾಂತ್ಯ
ಬೆಂಗಳೂರಿನಲ್ಲಿ ಬೆಕ್ಕುಗಳ 'ಪ್ರೇಮ್ ಕಹಾನಿ' ನೆರೆಹೊರೆಯವರ ನಡುವೆ ದೊಡ್ಡ ಜಗಳಕ್ಕೆ ಕಾರಣವಾದ ವಿಚಿತ್ರ ಘಟನೆ ನಡೆದಿದೆ. ಹೆಣ್ಣು ಬೆಕ್ಕು ನಾಲ್ಕು ಮರಿಗಳಿಗೆ ಜನ್ಮ ನೀಡಿದ್ದಕ್ಕೆ, ಗಂಡು ಬೆಕ್ಕಿನ ಮಾಲೀಕರೇ ಕಾರಣ ಎಂದು ಆರೋಪಿಸಿ ಜಗಳ ಶುರುವಾಗಿದೆ. ಮರಿಗಳನ್ನು ನೀವೇ ಸಾಕಬೇಕೆಂದು ಗಂಡು ಬೆಕ್ಕಿನ ಮನೆಯ ಮುಂದೆ ಬಿಟ್ಟು, ಆ್ಯಸಿಡ್ ಹಾಕುವುದಾಗಿ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಪೊಲೀಸರು ಮಧ್ಯಪ್ರವೇಶಿಸಬೇಕಾಯಿತು. ಸ್ಥಳಕ್ಕೆ ಬಂದ ಪೊಲೀಸರು ಎರಡೂ ಕುಟುಂಬಗಳ ನಡುವೆ ಸಂಧಾನ ನಡೆಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದರು. ಕೊನೆಗೆ ಜನಿಸಿದ ನಾಲ್ಕು ಮರಿಗಳಲ್ಲಿ ತಲಾ ಎರಡು ಮರಿಗಳನ್ನು ಎರಡೂ ಮನೆಯ
Apr 131 min read


ಷೇರುಪೇಟೆ ತಲ್ಲಣ: ಇರಾನ್-ಅಮೆರಿಕ ಸಂಘರ್ಷದಿಂದ ಸೆನ್ಸೆಕ್ಸ್ 1,600 ಅಂಕ ಕುಸಿತ
ಅಮೆರಿಕ ಮತ್ತು ಇರಾನ್ ನಡುವಿನ ಮಾತುಕತೆ ವಿಫಲವಾದ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಬ್ಯಾರೆಲ್ಗೆ $100 ದಾಟಿದೆ. ಇದರ ನೇರ ಪರಿಣಾಮವಾಗಿ ಇಂದು ಭಾರತೀಯ ಷೇರುಪೇಟೆ ಭಾರೀ ಕುಸಿತ ಕಂಡಿದ್ದು, ಸೆನ್ಸೆಕ್ಸ್ 1,600ಕ್ಕೂ ಹೆಚ್ಚು ಅಂಕಗಳನ್ನು ಕಳೆದುಕೊಂಡಿದೆ. ನಿಫ್ಟಿ-50 ಕೂಡ 2% ಇಳಿಕೆಯಾಗಿ 23,750 ಮಟ್ಟದಲ್ಲಿ ವಹಿವಾಟು ನಡೆಸುತ್ತಿದೆ. ಹಾರ್ಮುಜ್ ಜಲಸಂಧಿಯ ಉದ್ವಿಗ್ನತೆ ಮತ್ತು ವಿದೇಶಿ ಹೂಡಿಕೆದಾರರ ಸತತ ಷೇರು ಮಾರಾಟವು ಹೂಡಿಕೆದಾರರಲ್ಲಿ ಆತಂಕ ಮೂಡಿಸಿದೆ. ಮಾರುಕಟ್ಟೆಯ ಈ ಅನಿಶ್ಚಿತತೆಯಿಂದಾಗಿ ಸಾವಿರಾರು ಕೋಟಿ ರೂಪಾಯಿ ಹೂಡಿಕೆದಾರರ ಸಂಪತ್ತು ಮಣ್ಣುಪಾಲಾಗಿದೆ. ಪ್ರ
Apr 131 min read


ಪೆರಾಜೆ: ಪಾಳುಬಾವಿಗೆ ಬಿದ್ದ ಆನೆಮರಿ; ಅರಣ್ಯ ಇಲಾಖೆಯಿಂದ ರಕ್ಷಣಾ ಕಾರ್ಯಾಚರಣೆ
ಪೆರಾಜೆಯ ಕಲ್ಬರ್ಪೆ ನಿವಾಸಿ ದಮಯಂತಿ ಎಂಬುವವರ ತೋಟದ ಪಾಳುಬಾವಿಗೆ ಕಳೆದ ರಾತ್ರಿ ಆನೆಮರಿಯೊಂದು ಆಕಸ್ಮಿಕವಾಗಿ ಬಿದ್ದಿದೆ. ವಿಷಯ ತಿಳಿಯುತ್ತಿದ್ದಂತೆಯೇ ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿದ್ದು, ಮರಿಯನ್ನು ಸುರಕ್ಷಿತವಾಗಿ ಹೊರತರಲು ಕಾರ್ಯಾಚರಣೆ ಕೈಗೆತ್ತಿಕೊಂಡಿದ್ದಾರೆ. ಆನೆಮರಿಯನ್ನು ಮೇಲೆತ್ತಲು ಸ್ಥಳಕ್ಕೆ ಹಿಟಾಚಿ ಯಂತ್ರವನ್ನು ತರಿಸಲಾಗಿದ್ದು, ಬಾವಿಯ ಪಾರ್ಶ್ವದಲ್ಲಿ ಮಣ್ಣು ಅಗೆದು ದಾರಿ ಮಾಡಿಕೊಡಲಾಗುತ್ತಿದೆ. ತಾಯಿ ಆನೆಯು ಹತ್ತಿರದಲ್ಲೇ ಇರುವ ಸಾಧ್ಯತೆಯಿರುವುದರಿಂದ ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಅಧಿಕಾರಿಗಳು ಶೀಘ್ರದಲ್ಲೇ ಆನೆಮರಿಯನ್ನು ರಕ್
Apr 131 min read


ರಾಜ್ಯದಲ್ಲಿ ಹೆಚ್ಚಿದ ಬಿಸಿಲ ತಾಪ: ವಿವಿಧ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ
ರಾಜ್ಯದಲ್ಲಿ ದಿನೇ ದಿನೇ ಬಿಸಿಲಿನ ತೀವ್ರತೆ ಏರುತ್ತಿದ್ದು, ಹವಾಮಾನ ಇಲಾಖೆಯು ಮುಂದಿನ ನಾಲ್ಕು ದಿನಗಳ ಕಾಲ ವಿವಿಧ ಜಿಲ್ಲೆಗಳಲ್ಲಿ ಒಣ ಹವೆಯ 'ಯೆಲ್ಲೋ ಅಲರ್ಟ್' ಘೋಷಿಸಿದೆ. ಭಾನುವಾರ ಕಲಬುರಗಿಯಲ್ಲಿ ಗರಿಷ್ಠ 41.6°C ತಾಪಮಾನ ದಾಖಲಾಗುವ ಮೂಲಕ ಅತೀ ಹೆಚ್ಚು ಉಷ್ಣಾಂಶ ಕಂಡುಬಂದಿದೆ. ಏಪ್ರಿಲ್ 13 ರಿಂದ 16 ರವರೆಗೆ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಮೈಸೂರು ಹಾಗೂ ಬಾಗಲಕೋಟೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ತಾಪಮಾನ ಗಣನೀಯವಾಗಿ ಏರಿಕೆಯಾಗಲಿದೆ. ಸಾರ್ವಜನಿಕರು ಬಿಸಿಲಿನಿಂದ ರಕ್ಷಿಸಿಕೊಳ್ಳಲು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಈ ಒಣ ಹವೆಯು ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್
Apr 131 min read


ಏಷ್ಯಾ ಬ್ಯಾಡ್ಮಿಂಟನ್ ಫೈನಲ್: ವಿಶ್ವದ ನಂ.2 ಆಟಗಾರನ ಎದುರು ಹೋರಾಡಿ ಸೋತ ದಕ್ಷಿಣ ಕನ್ನಡದ ಆಯುಷ್ ಶೆಟ್ಟಿ
ಏಷ್ಯಾ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ನ ಪುರುಷರ ಸಿಂಗಲ್ಸ್ ಫೈನಲ್ನಲ್ಲಿ ದಕ್ಷಿಣ ಕನ್ನಡದ ಉದಯೋನ್ಮುಖ ತಾರೆ ಆಯುಷ್ ಶೆಟ್ಟಿ ಅವರು ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟಿದ್ದಾರೆ. ಪ್ರಶಸ್ತಿಗಾಗಿ ನಡೆದ ಹಣಾಹಣಿಯಲ್ಲಿ ವಿಶ್ವದ ನಂ.2 ಆಟಗಾರ ಚೀನಾದ ಶಿ ಯುಕಿ ವಿರುದ್ಧ ಆಯುಷ್ 8-21, 10-21 ನೇರ ಸೆಟ್ಗಳಿಂದ ಸೋಲನುಭವಿಸಿದರು. ಅನುಭವಿ ಆಟಗಾರನ ಎದುರು ಹೋರಾಟ ನಡೆಸಿದರೂ, ಚಾಂಪಿಯನ್ ಪಟ್ಟಕ್ಕೇರುವಲ್ಲಿ ಅವರು ವಿಫಲರಾದರು. ಫೈನಲ್ನಲ್ಲಿ ಸೋತರೂ ಆಯುಷ್ ಈ ಟೂರ್ನಿಯಲ್ಲಿ ಅದ್ಭುತ ಸಾಧನೆ ಮಾಡಿದ್ದಾರೆ. ಸೆಮಿಫೈನಲ್ನಲ್ಲಿ ವಿಶ್ವದ ನಂ.1 ಆಟಗಾರ ಕುಲ್ಲಾವುಟ್ ವಿಟಿಡ್ಸರ್ನ್ ಅವರನ್ನು ಮಣಿಸಿ ಫೈನಲ್
Apr 121 min read


ಆಂಧ್ರಪ್ರದೇಶದಲ್ಲಿ ಭೀಕರ ಕಾರು ಅಪಘಾತ: ಸುಳ್ಯ ಮೂಲದ ಸಾಫ್ಟ್ವೇರ್ ಇಂಜಿನಿಯರ್ ಸಾವು
ಆಂಧ್ರಪ್ರದೇಶದ ಕರ್ನೂಲ್ನಲ್ಲಿ ನಡೆದ ಭೀಕರ ಕಾರು ಅಪಘಾತದಲ್ಲಿ ಸುಳ್ಯ ಮೂಲದ ಸಾಫ್ಟ್ವೇರ್ ಇಂಜಿನಿಯರ್ ಕ್ಷಿಪ್ರ (25) ಮೃತಪಟ್ಟಿದ್ದಾರೆ. ಸುಳ್ಯದ ಕಂದಡ್ಕ ನಿವಾಸಿ ಶಶಿಕಲಾ ಅವರ ಏಕೈಕ ಪುತ್ರಿಯಾಗಿದ್ದ ಇವರು, ಬೆಂಗಳೂರಿನಲ್ಲಿ ಉದ್ಯೋಗಿಯಾಗಿದ್ದರು. ರಜೆಯ ನಿಮಿತ್ತ ತನ್ನ ಸಹೋದ್ಯೋಗಿಗಳೊಂದಿಗೆ ಪ್ರವಾಸಕ್ಕೆ ತೆರಳಿದ್ದ ಸಂದರ್ಭದಲ್ಲಿ ಈ ದುರಂತ ಸಂಭವಿಸಿದೆ ಎಂದು ತಿಳಿದುಬಂದಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಮರಕ್ಕೆ ವೇಗವಾಗಿ ಡಿಕ್ಕಿ ಹೊಡೆದ ಪರಿಣಾಮ ಕ್ಷಿಪ್ರ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಅಪಘಾತದಲ್ಲಿ ಕಾರಿನಲ್ಲಿದ್ದ ಇತರ ಸಹೋದ್ಯೋಗಿಗಳಿಗೂ ಗಾಯಗಳಾಗಿದ್ದು, ಅ
Apr 121 min read
Archive
bottom of page



