top of page
News Articles
Sathyapatha News Plus


ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಮೈಸೂರು ಸಂಸದ ಯದುವೀರ್ ಒಡೆಯರ್ ಭಕ್ತಿಪೂರ್ವಕ ದರ್ಶನ
ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ನಾಗಾರಾಧನೆಯ ಪುಣ್ಯಕ್ಷೇತ್ರವಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಮೈಸೂರು ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಜನವರಿ 27ರಂದು ಭೇಟಿ ನೀಡಿ ದೇವರ ದರ್ಶನ ಪಡೆದರು. ಸುಬ್ರಹ್ಮಣ್ಯದ ಮಠದಲ್ಲಿ ಆಯೋಜಿಸಲಾಗಿದ್ದ 'ರಾಷ್ಟ್ರೀಯ ವಿದ್ವತ್ ಸಮ್ಮೇಳನ – ವಿಶ್ವ ಸಂಭ್ರಮ' ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಅವರು, ಈ ಸಂದರ್ಭದಲ್ಲಿ ಕ್ಷೇತ್ರದ ಅಧಿದೇವತೆ ಶ್ರೀ ಸುಬ್ರಹ್ಮಣ್ಯ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ಕೃತಾರ್ಥರಾದರು. ದೇವಳಕ್ಕೆ ಆಗಮಿಸಿದ ಸಂಸದರನ್ನು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾ
5 days ago1 min read


ಕೇರಳದಲ್ಲಿ ಭೀಕರ ಕಾರು ಅಪಘಾತ: ಸುರತ್ಕಲ್ ಮೂಲದ ಯುವಕ ಸಾವು, ನಾಲ್ವರಿಗೆ ಗಾಯ
ಮಂಗಳೂರು: ಕೇರಳದ ಕೊಟ್ಟಾಯಂನಲ್ಲಿ ಬುಧವಾರ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಮಂಗಳೂರಿನ ಸುರತ್ಕಲ್ ಸಮೀಪದ ಕಾನಾ ನಿವಾಸಿ ಶಾನವಾಜ್ ಅಲಿಯಾಸ್ ಶಮೀಮ್ (26) ಎಂಬ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೂಲತಃ ಮುಲ್ಕಿ ತಾಲ್ಲೂಕಿನ ಅಂಗರಗುಡ್ಡೆ ನಿವಾಸಿಯಾಗಿದ್ದ ಶಮೀಮ್, ಪ್ರಸ್ತುತ ಕಾನಾದ ಚಿರಾಗ್ ಫ್ಲಾಟ್ಸ್ನಲ್ಲಿ ವಾಸವಿದ್ದರು. ಈ ಘಟನೆಯಲ್ಲಿ ಕಾರಿನಲ್ಲಿದ್ದ ಇತರ ನಾಲ್ವರು ಗಾಯಗೊಂಡಿದ್ದು, ಒಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಮೃತ ಶಮೀಮ್ ಮತ್ತು ಅವರ ಸ್ನೇಹಿತರು ಕೊಟ್ಟಾಯಂನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವೊಂದಕ್ಕೆ ಬೌನ್ಸರ್ಗಳಾಗಿ ತೆರಳಿದ್ದರು. ಬುಧವಾರ ಬೆಳಿಗ್
5 days ago1 min read


ಬಾಲಕ ಸುಮಂತ್ ಸಾವು ಪ್ರಕರಣ: ಕೂಲಂಕುಷ ತನಿಖೆಗೆ ಗೃಹ ಸಚಿವರಿಗೆ ಶಾಸಕ ಹರೀಶ್ ಪೂಂಜ ಆಗ್ರಹ
ಬೆಳ್ತಂಗಡಿ: ಓಡಿಲ್ನಾಳ ಗ್ರಾಮದ ಸಂಬೋಳ್ಯ ನಿವಾಸಿ ಸುಮಂತ್ ಎಂಬ ಬಾಲಕನ ಅನುಮಾನಾಸ್ಪದ ಸಾವಿನ ಪ್ರಕರಣವು ತಾಲ್ಲೂಕಿನಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಈ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಶಾಸಕ ಹರೀಶ್ ಪೂಂಜ ಅವರು ಒತ್ತಾಯಿಸಿದ್ದಾರೆ. ಇತ್ತೀಚೆಗೆ ಬೆಂಗಳೂರಿನಲ್ಲಿ ಗೃಹ ಸಚಿವ ಜಿ. ಪರಮೇಶ್ವರ್ ಅವರನ್ನು ಭೇಟಿಯಾದ ಶಾಸಕರು, ಪ್ರಕರಣದ ಸತ್ಯಾಸತ್ಯತೆಯನ್ನು ಶೀಘ್ರವಾಗಿ ಹೊರತರುವಂತೆ ಅಧಿಕೃತವಾಗಿ ಮನವಿ ಸಲ್ಲಿಸಿದರು. ಬಾಲಕ ಸುಮಂತ್ ಸಾವಿನ ಹಿಂದೆ ಹಲವಾರು ಅನುಮಾನಗಳು ವ್ಯಕ್ತವಾಗುತ್ತಿದ್ದು, ಇದು ಕೇವಲ ಆಕಸ್ಮಿಕವೇ ಅಥವಾ ಬೇರೆನಾದರೂ ಸಂಚು ಇದೆಯೇ ಎಂಬ ಆತಂಕ ಕುಟುಂಬಸ್ಥರನ್ನು ಕಾಡುತ್ತಿ
5 days ago1 min read


ಬೆಂಗಳೂರಿನಲ್ಲೇ ಆರ್ಸಿಬಿ ಅಬ್ಬರ? ಚಿನ್ನಸ್ವಾಮಿ ಕ್ರೀಡಾಂಗಣ ಉಳಿಸಿಕೊಳ್ಳಲು ಫ್ರಾಂಚೈಸಿ ಒಲವು!
ಬೆಂಗಳೂರು: ಐಪಿಎಲ್ ಅಭಿಮಾನಿಗಳಿಗೆ, ವಿಶೇಷವಾಗಿ ಆರ್ಸಿಬಿ (RCB) ಬೆಂಬಲಿಗರಿಗೆ ಶುಭ ಸುದ್ದಿಯೊಂದು ಕೇಳಿಬರುತ್ತಿದೆ. ಮುಂಬರುವ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ತನ್ನ ತವರು ಪಂದ್ಯಗಳನ್ನು ಎಂದಿನಂತೆ ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿಯೇ ಆಡುವ ಇಂಗಿತ ವ್ಯಕ್ತಪಡಿಸಿದೆ ಎಂದು ಮೂಲಗಳು ತಿಳಿಸಿವೆ. ತಂಡಗಳ ತವರು ಮೈದಾನಗಳನ್ನು ಖಚಿತಪಡಿಸಲು ಬಿಸಿಸಿಐ (BCCI) ನೀಡಿದ್ದ ಜ. 27ರ ಗಡುವು ಮುಕ್ತಾಯಗೊಂಡಿದ್ದು, ಆರ್ಸಿಬಿ ತನ್ನ ಪಂದ್ಯಗಳನ್ನು ಬೆಂಗಳೂರಿನಲ್ಲೇ ಆಡುವುದಾಗಿ ತಿಳಿಸಿದೆ ಎನ್ನಲಾಗಿದೆ. ಕ್ರೀಡಾಂಗಣದ ಸುರಕ್ಷತೆ ಮತ್ತು ಇತರೆ ತಾಂತ್ರಿಕ
5 days ago1 min read


'ಇ-ಸ್ವತ್ತು 2.0' ತಾಂತ್ರಿಕ ದೋಷ: ಸದನದಲ್ಲಿ ಸರ್ಕಾರದ ವಿರುದ್ಧ ಕಿಶೋರ್ ಕುಮಾರ್ ಪುತ್ತೂರು ಆಕ್ರೋಶ
ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಧಾನ ಪರಿಷತ್ ಅಧಿವೇಶನದ ಶೂನ್ಯ ವೇಳೆಯಲ್ಲಿ, ಸದಸ್ಯರಾದ ಶ್ರೀ ಕಿಶೋರ್ ಕುಮಾರ್ ಪುತ್ತೂರು ಅವರು ರಾಜ್ಯದ ಗ್ರಾಮೀಣ ಭಾಗದ ಜನರು ಎದುರಿಸುತ್ತಿರುವ 'ಇ-ಸ್ವತ್ತು 2.0' ತಂತ್ರಾಂಶದ ವೈಫಲ್ಯದ ಬಗ್ಗೆ ಸರ್ಕಾರದ ಗಮನ ಸೆಳೆದರು. ಉದಯವಾಣಿ ದಿನಪತ್ರಿಕೆಯ ವರದಿಯನ್ನು ಉಲ್ಲೇಖಿಸಿದ ಅವರು, ಗ್ರಾಮೀಣ ನಾಗರಿಕರಿಗೆ ಆಸ್ತಿ ದಾಖಲೆಗಳನ್ನು ಸುಲಭವಾಗಿ ಒದಗಿಸಲು ಡಿಸೆಂಬರ್ 1ರಿಂದ ಜಾರಿಗೆ ತಂದ ಈ ಹೊಸ ತಂತ್ರಾಂಶವು, ಆರಂಭವಾದ ಒಂದೇ ತಿಂಗಳೊಳಗೆ ತಾಂತ್ರಿಕ ದೋಷಗಳಿಂದಾಗಿ ಸಂಪೂರ್ಣವಾಗಿ ಕೈಕೊಟ್ಟಿದೆ ಎಂದು ದೂರಿದರು. ತಂತ್ರಾಂಶದ ವಿಳಂಬದಿಂದಾಗಿ ಪ್ರಸ್ತುತ 36,000ಕ್ಕೂ ಹೆ
5 days ago1 min read


ದಾವಣಗೆರೆ: ಪತ್ನಿ ಓಡಿಹೋದ ಅವಮಾನ ತಾಳಲಾರದೆ ನವವಿವಾಹಿತ ಹಾಗೂ ಮದುವೆ ಮಾಡಿಸಿದ ಮಾವ ಬಲಿ!
ದಾವಣಗೆರೆ ತಾಲೂಕಿನ ಗುಮ್ಮನೂರಿನಲ್ಲಿ ಮದುವೆಯಾದ ಕೇವಲ 45 ದಿನಕ್ಕೆ ಹರೀಶ್ (30) ಎಂಬ ನವವಿವಾಹಿತ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ನಡೆದಿದೆ. ಮೃತ ಹರೀಶ್ ಸಾವಿಗೂ ಮುನ್ನ ಎರಡು ಪುಟಗಳ ಡೆತ್ನೋಟ್ ಬರೆದಿದ್ದು, ಅದರಲ್ಲಿ ತನ್ನ ಪತ್ನಿಯ ಕಿರುಕುಳ ಹಾಗೂ ಆಕೆಯ ವರ್ತನೆಯೇ ಸಾವಿಗೆ ನೇರ ಕಾರಣ ಎಂದು ಉಲ್ಲೇಖಿಸಿದ್ದಾರೆ. ಪತ್ನಿ ಬೇರೆ ಯುವಕನೊಂದಿಗೆ ಓಡಿಹೋಗಿದ್ದಲ್ಲದೆ, ತನ್ನ ಮೇಲೆಯೇ ಸುಳ್ಳು ಆರೋಪಗಳನ್ನು ಮಾಡಿ ತನಗೆ ಹಾಗೂ ತನ್ನ ಕುಟುಂಬಕ್ಕೆ ಜೀವಬೆದರಿಕೆ ಒಡ್ಡಿದ್ದಳು ಎಂದು ಹರೀಶ್ ಡೆತ್ನೋಟ್ನಲ್ಲಿ ಅಳಲು ತೋಡಿಕೊಂಡಿದ್ದಾರೆ. ಹರೀಶ್ ಸಾವಿನ ಬೆನ್ನಲ್ಲೇ, ಈ ಮದುವೆಯನ್ನು ಮುಂದ
5 days ago1 min read


ಸಂಸತ್ ಬಜೆಟ್ ಅಧಿವೇಶನ ಆರಂಭ: ಫೆಬ್ರವರಿ 1ಕ್ಕೆ ನಿರ್ಮಲಾ ಸೀತಾರಾಮನ್ ಅವರಿಂದ ಬಜೆಟ್ ಮಂಡನೆ
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಸಂಸತ್ತಿನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡುವ ಮೂಲಕ ಪ್ರಸಕ್ತ ಸಾಲಿನ ಬಜೆಟ್ ಅಧಿವೇಶನಕ್ಕೆ ಅದ್ಧೂರಿ ಚಾಲನೆ ನೀಡಲಿದ್ದಾರೆ. ರಾಷ್ಟ್ರಪತಿಗಳ ಭಾಷಣವು ಸರ್ಕಾರದ ನೀತಿ ನಿರೂಪಣೆ ಮತ್ತು ದೇಶದ ಭವಿಷ್ಯದ ಗುರಿಗಳ ದಿಕ್ಸೂಚಿಯಾಗಿದ್ದು, ಇಂದಿನಿಂದ ಸಂಸತ್ತಿನ ಉಭಯ ಸದನಗಳಲ್ಲಿ ಚರ್ಚೆಗಳು ಗರಿಗೆದರಲಿವೆ. ವೇಳಾಪಟ್ಟಿಯಂತೆ ಜನವರಿ 28 ರಿಂದ ಏಪ್ರಿಲ್ 2 ರವರೆಗೆ ಅಧಿವೇಶನ ನಡೆಯಲಿದ್ದು, ಒಟ್ಟು 30 ದಿನಗಳ ಕಲಾಪಗಳನ್ನು ನಿಗದಿಪಡಿಸಲಾಗಿದೆ. ಮೊದಲ ಹಂತದ ಅಧಿವೇಶನವು ಫೆಬ್ರವರಿ 13 ರವರೆಗೆ ನಡೆಯಲಿದ್ದು, ನಂತರ ಸಣ್ಣ ವಿರಾಮದ ಬಳಿಕ ಮಾರ್ಚ್ 9 ರಿಂ
5 days ago1 min read


ಇಂದಿನ ಚಿನ್ನದ ದರ
ಇಂದು (ಜನವರಿ 26, 2026) ಚಿನ್ನದ ಬೆಲೆ ಭಾರಿ ಏರಿಕೆ ಕಂಡಿದೆ. 24 ಕ್ಯಾರೆಟ್ನ ಅಪರಂಜಿ ಚಿನ್ನದ ಬೆಲೆ ಪ್ರತಿ ಗ್ರಾಮ್ಗೆ ₹16,000 ಗಡಿ ದಾಟಿದೆ. ಇಂದಿನ ಪ್ರಮುಖ ದರ ವಿವರಗಳು ಇಲ್ಲಿವೆ (1 ಗ್ರಾಮ್ಗೆ): 24 ಕ್ಯಾರೆಟ್ ಚಿನ್ನ (ಅಪರಂಜಿ): ₹16,271 (ನಿನ್ನೆಯ ದರಕ್ಕಿಂತ ₹245 ಏರಿಕೆ). 22 ಕ್ಯಾರೆಟ್ ಚಿನ್ನ (ಆಭರಣ): ₹14,915 (ನಿನ್ನೆಯ ದರಕ್ಕಿಂತ ₹225 ಏರಿಕೆ). 18 ಕ್ಯಾರೆಟ್ ಚಿನ್ನ: ₹12,203 (ನಿನ್ನೆಯ ದರಕ್ಕಿಂತ ₹184 ಏರಿಕೆ). ಬೆಳ್ಳಿ ಬೆಲೆ: ಪ್ರತಿ 1 ಗ್ರಾಮ್ಗೆ ₹340 ಮತ್ತು 1 ಕೆಜಿಗೆ ₹3,40,000 ಆಗಿದೆ.
5 days ago1 min read


ಮಹಾರಾಷ್ಟ್ರದಲ್ಲಿ ಭೀಕರ ಹೆಲಿಕಾಪ್ಟರ್ ಅಪಘಾತ: ಡಿಸಿಎಂ ಅಜಿತ್ ಪವಾರ್ ಸೇರಿ ಆರು ಮಂದಿ ದುರ್ಮರಣ
ಮಹಾರಾಷ್ಟ್ರ ರಾಜಕಾರಣದಲ್ಲಿ ಇಂದು ಕರಾಳ ದಿನ ಎದುರಾಗಿದೆ. ರಾಜ್ಯದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರು ಪ್ರಯಾಣಿಸುತ್ತಿದ್ದ ಖಾಸಗಿ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಪವಾರ್ ಸೇರಿದಂತೆ ಒಟ್ಟು ಆರು ಮಂದಿ ಸಾವನ್ನಪ್ಪಿದ್ದಾರೆ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಮುಂಬೈನಿಂದ ಹೊರಟಿದ್ದ ವಿಮಾನವು ಬಾರಾಮತಿ ವಿಮಾನ ನಿಲ್ದಾಣದ ಬಳಿ ಲ್ಯಾಂಡಿಂಗ್ ಆಗುವ ಸಮಯದಲ್ಲಿ ತಾಂತ್ರಿಕ ದೋಷದಿಂದಾಗಿ ಈ ದುರಂತ ಸಂಭವಿಸಿದೆ ಎಂದು ತಿಳಿದುಬಂದಿದೆ. ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಚಾರಕ್ಕಾಗಿ ಅಜಿತ್ ಪವಾರ್ ಅವರು ಬಾರಾಮತಿಗೆ ತೆರಳುತ್ತಿದ್ದರು. ಮುಂಬೈನಿಂದ ಬೆಳಿಗ್ಗೆ 8 ಗಂಟೆಗೆ ಹೆಲಿಕ
5 days ago1 min read


ಗಾಯಕ ಅರಿಜಿತ್ ಸಿಂಗ್ ನಿವೃತ್ತಿ ಘೋಷಣೆ: ಸಂಗೀತ ಲೋಕಕ್ಕೆ ದಿಢೀರ್ ಶಾಕ್!
ಭಾರತೀಯ ಸಂಗೀತ ಲೋಕದ ಧ್ರುವತಾರೆ, ಸುಮಧುರ ಧ್ವನಿಯ ಗಾಯಕ ಅರಿಜಿತ್ ಸಿಂಗ್ ಅವರು ಹಿನ್ನೆಲೆ ಗಾಯನಕ್ಕೆ ವಿದಾಯ ಹೇಳುವ ಮೂಲಕ ತಮ್ಮ ಅಭಿಮಾನಿಗಳಿಗೆ ಭಾರಿ ಅಚ್ಚರಿ ನೀಡಿದ್ದಾರೆ. ಈ ಕುರಿತು ತಮ್ಮ ಇನ್ಸ್ಟಾಗ್ರಾಮ್ ಹ್ಯಾಂಡಲ್ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, "ಇನ್ನು ಮುಂದೆ ನಾನು ಹಿನ್ನೆಲೆ ಗಾಯಕನಾಗಿ ಯಾವುದೇ ಹೊಸ ಅವಕಾಶಗಳನ್ನು ಒಪ್ಪಿಕೊಳ್ಳುವುದಿಲ್ಲ ಎಂದು ಘೋಷಿಸಲು ನನಗೆ ಸಂತೋಷವಾಗಿದೆ. ನಾನು ಈ ವೃತ್ತಿಜೀವನವನ್ನು ಇಲ್ಲಿಗೆ ಅಂತ್ಯಗೊಳಿಸುತ್ತಿದ್ದೇನೆ. ಇದೊಂದು ಅದ್ಭುತ ಪ್ರಯಾಣವಾಗಿತ್ತು" ಎಂದು ಭಾವುಕರಾಗಿ ಬರೆದುಕೊಂಡಿದ್ದಾರೆ. ಅರಿಜಿತ್ ಸಿಂಗ್ ಇಂದು ಭಾರತೀಯ ಸಂಗೀತ ಚಿತ್ರೋದ್
6 days ago1 min read


ಬಜೆಟ್ಗೆ ಮುನ್ನ ‘ಹಲ್ವಾ ಸಂಪ್ರದಾಯ’: ದಶಕಗಳ ಹಳೆಯ ರಹಸ್ಯತಾ ಆಚರಣೆ
ನವದೆಹಲಿ: ಕೇಂದ್ರ ಬಜೆಟ್ ಮಂಡನೆಗೂ ಮುನ್ನ ನಡೆಯುವ ‘ಹಲ್ವಾ ಸಮಾರಂಭ’ವು ದಶಕಗಳಷ್ಟು ಹಳೆಯದಾದ ವಿಶಿಷ್ಟ ಸಂಪ್ರದಾಯವಾಗಿದೆ. ಸ್ವಾತಂತ್ರ್ಯ ನಂತರದಿಂದಲೇ ಬಜೆಟ್ ತಯಾರಿಕಾ ಪ್ರಕ್ರಿಯೆಯ ಅವಿಭಾಜ್ಯ ಅಂಗವಾಗಿ ಈ ಆಚರಣೆ ನಡೆದು ಬರುತ್ತಿದೆ. ಭಾರತೀಯ ಸಂಪ್ರದಾಯದಂತೆ ಯಾವುದೇ ಮಹತ್ವದ ಕಾರ್ಯ ಆರಂಭಕ್ಕೂ ಮೊದಲು ಸಿಹಿ ತಿನ್ನುವುದು ಶುಭವೆಂದು ಪರಿಗಣಿಸಲಾಗುತ್ತದೆ. ಅದೇ ನಂಬಿಕೆಯ ಹಿನ್ನೆಲೆಯಲ್ಲಿ, ಹಣಕಾಸು ಸಚಿವರು ನಾರ್ತ್ ಬ್ಲಾಕ್ನಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಹಲ್ವಾ ವಿತರಿಸುವ ಮೂಲಕ ಬಜೆಟ್ ಮುದ್ರಣ ಪ್ರಕ್ರಿಯೆಗೆ ಅಧಿಕೃತ ಚಾಲನೆ ನೀಡುತ್ತಾರೆ. ಈ ಸಮಾರಂಭದ ನಂತರ ಬಜೆಟ್ಗೆ ಸಂಬಂಧಿಸ
6 days ago1 min read


ಭಾರತ-ಯುರೋಪಿಯನ್ ಒಕ್ಕೂಟದ ನಡುವೆ ಐತಿಹಾಸಿಕ ವ್ಯಾಪಾರ ಒಪ್ಪಂದ: ಕರ್ನಾಟಕದ ರಫ್ತು ವಲಯಕ್ಕೆ 6.4 ಲಕ್ಷ ಕೋಟಿ ರೂ. ಬೂಸ್ಟ್!
ನವದೆಹಲಿ: ಭಾರತ ಮತ್ತು ಯುರೋಪಿಯನ್ ಯೂನಿಯನ್ ನಡುವಿನ ಸಂಬಂಧದಲ್ಲಿ ಹೊಸ ಅಧ್ಯಾಯ ಆರಂಭವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಬಹುನಿರೀಕ್ಷಿತ ಮುಕ್ತ ವ್ಯಾಪಾರ ಒಪ್ಪಂದವನ್ನು (FTA) ಘೋಷಿಸಿದ್ದಾರೆ. ಜಾಗತಿಕ ಜಿಡಿಪಿಯ ಶೇ. 25ರಷ್ಟು ಪಾಲನ್ನು ಹೊಂದಿರುವ ಈ ಒಪ್ಪಂದವು, ವಿಶ್ವ ವ್ಯಾಪಾರದ ಮೂರನೇ ಒಂದು ಭಾಗವನ್ನು ಒಳಗೊಂಡಿದೆ. 140 ಕೋಟಿ ಭಾರತೀಯರು ಹಾಗೂ ಕೋಟ್ಯಂತರ ಯುರೋಪಿಯನ್ನರಿಗೆ ಈ ಒಪ್ಪಂದವು ಉದ್ಯೋಗ ಮತ್ತು ಆರ್ಥಿಕ ಪ್ರಗತಿಯ ಹೊಸ ಬಾಗಿಲುಗಳನ್ನು ತೆರೆಯಲಿದೆ ಎಂದು ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ತಿಳಿಸಿದ್ದಾರೆ. ಈ ಒಪ್ಪಂದದಿಂದಾಗಿ ಕರ್ನಾಟಕದ ಕೈಗಾರಿಕಾ ಕ್ಷೇತ್ರಕ್ಕೆ ಅಭೂತಪೂರ್
6 days ago1 min read


ಗಣರಾಜ್ಯೋತ್ಸವ ಸಂಭ್ರಮದ ನಡುವೆ ದುರಂತ: ಸ್ಪೀಕರ್ ಬಿದ್ದು ಮೂರು ವರ್ಷದ ಬಾಲಕಿ ಸಾವು
ಮುಂಬೈ: ಗಣರಾಜ್ಯೋತ್ಸವದ ಸಂಭ್ರಮದಲ್ಲಿದ್ದ ಮುಂಬೈನ ವಿಖ್ರೋಲಿ ಪ್ರದೇಶದಲ್ಲಿ ಶನಿವಾರ ಅತ್ಯಂತ ದಾರುಣ ಘಟನೆಯೊಂದು ಸಂಭವಿಸಿದೆ. ಹಬ್ಬದ ಆಚರಣೆಗಾಗಿ ಅಳವಡಿಸಲಾಗಿದ್ದ ಬೃಹತ್ ಧ್ವನಿವರ್ಧಕವೊಂದು (ಸ್ಪೀಕರ್) ಆಕಸ್ಮಿಕವಾಗಿ ಕುಸಿದು ಬಿದ್ದ ಪರಿಣಾಮ, ಅಲ್ಲಿಯೇ ಆಟವಾಡುತ್ತಿದ್ದ ಮೂರು ವರ್ಷದ ಪುಟ್ಟ ಬಾಲಕಿ ಮೃತಪಟ್ಟಿದ್ದಾಳೆ. ಸಂಭ್ರಮದ ವಾತಾವರಣವಿದ್ದ ಜಾಗದಲ್ಲಿ ಕ್ಷಣಾರ್ಧದಲ್ಲಿ ಮಗು ಪ್ರಾಣ ಕಳೆದುಕೊಂಡಿರುವುದು ಇಡೀ ಭಾಗವನ್ನು ಶೋಕಸಾಗರದಲ್ಲಿ ಮುಳುಗಿಸಿದೆ. ಈ ಮನಕಲಕುವ ಘಟನೆಯ ದೃಶ್ಯಾವಳಿಗಳು ಸ್ಥಳೀಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.
6 days ago1 min read


ವಿಧವಾ ಮರು ವಿವಾಹಕ್ಕೆ ಬಂಪರ್ ಕೊಡುಗೆ: ಕರ್ನಾಟಕ ಸರ್ಕಾರದಿಂದ 3 ಲಕ್ಷ ರೂ. ಪ್ರೋತ್ಸಾಹಧನ!
ಬೆಂಗಳೂರು: ಸಮಾಜದಲ್ಲಿ ವಿಧವೆಯರಿಗೆ ಗೌರವಯುತ ಬದುಕು ನೀಡಲು ಮತ್ತು ಅವರ ಜೀವನಕ್ಕೆ ಭದ್ರತೆ ಒದಗಿಸಲು ಕರ್ನಾಟಕ ಸರ್ಕಾರವು ಮಹತ್ವದ ಹೆಜ್ಜೆಯನ್ನಿಟ್ಟಿದೆ. ಪರಿಶಿಷ್ಟ ಜಾತಿಯ (SC) ವಿಧವೆಯರನ್ನು ಮರು ವಿವಾಹವಾಗುವವರಿಗೆ ನೀಡಲಾಗುತ್ತಿದ್ದ ಪ್ರೋತ್ಸಾಹಧನವನ್ನು ರಾಜ್ಯ ಸರ್ಕಾರವು ಭಾರಿ ಮೊತ್ತಕ್ಕೆ ಏರಿಕೆ ಮಾಡಿದೆ. ಹೌದು, ಈ ಹಿಂದೆ ಇದ್ದ 2 ಲಕ್ಷ ರೂ. ಗಳ ಮೊತ್ತವನ್ನು ಈಗ 3 ಲಕ್ಷ ರೂ. ಗಳಿಗೆ ಹೆಚ್ಚಿಸುವ ಮೂಲಕ ಸಮಾಜ ಕಲ್ಯಾಣ ಇಲಾಖೆಯು ಹೊಸ ಆದೇಶ ಹೊರಡಿಸಿದೆ. ಈ ಯೋಜನೆಯು ಮಹಿಳೆಯರ ಸಾಮಾಜಿಕ ಮತ್ತು ಆರ್ಥಿಕ ಸಬಲೀಕರಣಕ್ಕೆ ಪೂರಕವಾಗಲಿದೆ. ಯೋಜನೆಯ ಮುಖ್ಯಾಂಶಗಳು ವಿಧವೆಯರ ಜೀವನದಲ್ಲಿ ಹೊಸ
6 days ago2 min read


ಮನೆ ಮಾಲೀಕರಿಗೆ ಪೊಲೀಸರ ಖಡಕ್ ವಾರ್ನಿಂಗ್: ವಿದೇಶಿ ಪ್ರಜೆಗಳಿಗೆ ಬಾಡಿಗೆ ನೀಡುವ ಮುನ್ನ ಎಚ್ಚರ!
ಹೆಚ್ಚುತ್ತಿರುವ ಡ್ರಗ್ಸ್ ದಂಧೆ ಹಾಗೂ ಅಕ್ರಮ ಚಟುವಟಿಕೆಗಳಲ್ಲಿ ವಿದೇಶಿ ಪ್ರಜೆಗಳ ಕೈವಾಡ ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ, ನಗರ ಪೊಲೀಸರು ಮನೆ ಮಾಲೀಕರಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ. ವಿದೇಶಿ ಪ್ರಜೆಗಳಿಗೆ ಮನೆ ಬಾಡಿಗೆ ನೀಡುವ ಸಂದರ್ಭದಲ್ಲಿ 'ಫಾರ್ಮ್-16' (C-Form/Form-16) ಅನ್ನು ಸಂಬಂಧಪಟ್ಟ ಪೊಲೀಸ್ ಠಾಣೆಗೆ ಸಲ್ಲಿಸುವುದು ಇನ್ನು ಮುಂದೆ ಕಡ್ಡಾಯವಾಗಿದೆ. ಒಂದು ವೇಳೆ ಈ ನಿಯಮವನ್ನು ಉಲ್ಲಂಘಿಸಿ ಮಾಹಿತಿ ನೀಡದೆ ಬಾಡಿಗೆ ನೀಡಿದಲ್ಲಿ, ಅಂತಹ ಮನೆ ಮಾಲೀಕರ ವಿರುದ್ಧವೇ ನೇರವಾಗಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪೊಲೀಸ್ ಇಲಾಖೆ ಸ್ಪಷ್ಟಪಡಿಸಿದೆ. ಇತ್ತೀಚಿನ ದಿನಗ
6 days ago1 min read


ಬೆಂಗಳೂರು: ಬಿಎಂಟಿಸಿ ಬಸ್ಸಿಗೆ ರೈಲು ಡಿಕ್ಕಿ;
ಬೆಂಗಳೂರು: ನಗರದ ಕಾಡುಗೋಡಿಯ ಸಾದರಮಂಗಲ ರೈಲ್ವೆ ಕ್ರಾಸಿಂಗ್ ಬಳಿ ಬಿಎಂಟಿಸಿ ಬಸ್ ಮತ್ತು ರೈಲಿನ ನಡುವೆ ಭೀಕರ ಅಪಘಾತ ಸಂಭವಿಸಿದೆ. ಸಾದರಮಂಗಲದಲ್ಲಿ ಪ್ರಯಾಣಿಕರನ್ನು ಇಳಿಸಿ ಖಾಲಿ ಬಸ್ಸು ಡಿಪೋಗೆ ಹಿಂತಿರುಗುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಅದೃಷ್ಟವಶಾತ್ ಬಸ್ಸಿನಲ್ಲಿ ಪ್ರಯಾಣಿಕರು ಯಾರೂ ಇಲ್ಲದ ಕಾರಣ ಯಾವುದೇ ಜೀವಹಾನಿ ಸಂಭವಿಸಿಲ್ಲ. ಆದರೆ ರೈಲಿನ ಡಿಕ್ಕಿಯ ರಭಸಕ್ಕೆ ಬಿಎಂಟಿಸಿ ಬಸ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಡಿಪೋ ಸಂಖ್ಯೆ 51ಕ್ಕೆ ಸೇರಿದ್ದ ಈ ಬಸ್ಸು, ಇಕ್ಕಟ್ಟಾದ ರಸ್ತೆಯಲ್ಲಿ ಹಿಂಬದಿಗೆ ಚಲಿಸಿ ನಂತರ ಮುಂದಕ್ಕೆ ಹೋಗಲು ಪ್ರಯತ್ನಿಸುತ್ತಿತ್ತು. ಈ ಸಂದರ್ಭದಲ್ಲಿ ಚಾಲಕನು ಹಳಿ
6 days ago1 min read


ಕೋಡಿಬೆಂಗ್ರೆ ಬಳಿ ಸಮುದ್ರಕ್ಕೆ ಮಗುಚಿದ ಪ್ರವಾಸಿ ಬೋಟ್; 15 ಮಂದಿ ರಕ್ಷಣೆ, ನಾಲ್ವರ ಸ್ಥಿತಿ ಗಂಭೀರ
ಉಡುಪಿ: ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಕೋಡಿಬೆಂಗ್ರೆ ಅಳಿವೆ ಬಾಗಿಲಿನ ಬಳಿ ಅಲೆಗಳ ಅಬ್ಬರಕ್ಕೆ ಸಿಲುಕಿ ಪ್ರವಾಸಿ ಬೋಟ್ ಒಂದು ಸಮುದ್ರಕ್ಕೆ ಮಗುಚಿದೆ. ಬೋಟ್ನಲ್ಲಿ ವಿಹಾರಕ್ಕೆ ತೆರಳಿದ್ದ 15 ಮಂದಿ ಪ್ರವಾಸಿಗರು ಆಕಸ್ಮಿಕವಾಗಿ ಸಮುದ್ರದ ನೀರಿಗೆ ಬಿದ್ದಿದ್ದು, ಸ್ಥಳೀಯ ಮೀನುಗಾರರು ಮತ್ತು ಸಾರ್ವಜನಿಕರ ಸಮಯಪ್ರಜ್ಞೆಯಿಂದ ದೊಡ್ಡ ದುರಂತವೊಂದು ತಪ್ಪಿದೆ. ತಕ್ಷಣವೇ ಕಾರ್ಯಪ್ರವೃತ್ತರಾದ ಸ್ಥಳೀಯರು ಸಮುದ್ರಕ್ಕೆ ಇಳಿದು ಎಲ್ಲಾ 15 ಮಂದಿಯನ್ನು ದಡಕ್ಕೆ ಸೇರಿಸುವಲ್ಲಿ ಯಶಸ್ವಿಯಾಗಿದ್ದಾರೆ. ನೀರುಪಾಲಾದವರ ಪೈಕಿ ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ತಕ್ಷಣವೇ ಮಲ್ಪೆಯ ಖಾಸಗಿ ಆಸ್ಪತ
6 days ago1 min read


ಇಂದಿನ ಚಿನ್ನದ ದರ
ಬೆಂಗಳೂರಿನಲ್ಲಿ ಇಂದು (ಜನವರಿ 26, 2026) ಚಿನ್ನದ ಬೆಲೆ ಭಾರಿ ಏರಿಕೆ ಕಂಡಿದೆ. 24 ಕ್ಯಾರೆಟ್ನ ಅಪರಂಜಿ ಚಿನ್ನದ ಬೆಲೆ ಪ್ರತಿ ಗ್ರಾಮ್ಗೆ ₹16,000 ಗಡಿ ದಾಟಿದೆ. ಇಂದಿನ ಪ್ರಮುಖ ದರ ವಿವರಗಳು ಇಲ್ಲಿವೆ (1 ಗ್ರಾಮ್ಗೆ): 24 ಕ್ಯಾರೆಟ್ ಚಿನ್ನ (ಅಪರಂಜಿ): ₹16,271 (ನಿನ್ನೆಯ ದರಕ್ಕಿಂತ ₹245 ಏರಿಕೆ). 22 ಕ್ಯಾರೆಟ್ ಚಿನ್ನ (ಆಭರಣ): ₹14,915 (ನಿನ್ನೆಯ ದರಕ್ಕಿಂತ ₹225 ಏರಿಕೆ). 18 ಕ್ಯಾರೆಟ್ ಚಿನ್ನ: ₹12,203 (ನಿನ್ನೆಯ ದರಕ್ಕಿಂತ ₹184 ಏರಿಕೆ). ಬೆಳ್ಳಿ ಬೆಲೆ: ಪ್ರತಿ 1 ಗ್ರಾಮ್ಗೆ ₹340 ಮತ್ತು 1 ಕೆಜಿಗೆ ₹3,40,000 ಆಗಿದೆ.
6 days ago1 min read


ಬೆಂಗಳೂರು: ಎಟಿಎಂಗೆ ಹಣ ತುಂಬುವ ನೆಪದಲ್ಲಿ ಒಂದು ಕೋಟಿಗೂ ಅಧಿಕ ನಗದಿನೊಂದಿಗೆ ಸಿಬ್ಬಂದಿ ಪರಾರಿ
ಬೆಂಗಳೂರು: ನಗರದ ಎಟಿಎಂಗಳಿಗೆ ನಗದು ಠೇವಣಿ ಮಾಡುವ ಜವಾಬ್ದಾರಿ ಹೊತ್ತಿದ್ದ ಖಾಸಗಿ ಕಂಪನಿಯ ಸಿಬ್ಬಂದಿಯೇ ಒಂದು ಕೋಟಿ ರೂಪಾಯಿಗೂ ಅಧಿಕ ಹಣವನ್ನು ದೋಚಿ ಪರಾರಿಯಾದ ಘಟನೆ ಕೋರಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹಿಟಾಚಿ ಪೇಮೆಂಟ್ ಸರ್ವಿಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯ ಸಿಬ್ಬಂದಿಗಳು ಆ್ಯಕ್ಸಿಸ್ ಬ್ಯಾಂಕ್ನ ಎಟಿಎಂಗಳಿಗೆ ಜಮಾ ಮಾಡಬೇಕಿದ್ದ ಹಣದೊಂದಿಗೆ ನಾಪತ್ತೆಯಾಗಿದ್ದಾರೆ. ನಗರದಲ್ಲಿ ಇತ್ತೀಚೆಗಷ್ಟೇ 400 ಕೋಟಿ ರೂಪಾಯಿ ದರೋಡೆ ಪ್ರಕರಣ ಸದ್ದು ಮಾಡುತ್ತಿರುವಾಗಲೇ ಈ ಘಟನೆ ಬೆಳಕಿಗೆ ಬಂದಿದ್ದು, ಸಾರ್ವಜನಿಕರಲ್ಲಿ ಭಾರೀ ಆತಂಕ ಮೂಡಿಸಿದೆ. ಜನವರಿ 19ರಂದು ಕೋರಮಂಗಲದ ಆ್ಯಕ್ಸಿಸ್
6 days ago1 min read


ಕುಕ್ಕೆ ಸುಬ್ರಹ್ಮಣ್ಯಕ್ಕೆ ಭಕ್ತರ ಮಹಾಪೂರ: ನಾಲ್ಕು ದಿನಗಳಲ್ಲಿ 2 ಲಕ್ಷಕ್ಕೂ ಅಧಿಕ ಭೇಟಿ
ಸುಬ್ರಹ್ಮಣ್ಯ: ದಕ್ಷಿಣ ಭಾರತದ ಪವಿತ್ರ ನಾಗಾರಾಧನಾ ಕ್ಷೇತ್ರವಾದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಸರಣಿ ರಜೆಗಳ ಹಿನ್ನೆಲೆಯಲ್ಲಿ ಭಕ್ತ ಸಾಗರವೇ ಹರಿದುಬಂದಿದೆ. ಕಳೆದ ನಾಲ್ಕು ದಿನಗಳಲ್ಲಿ ಹಗಲು-ರಾತ್ರಿ ಎನ್ನದೆ ಸುಮಾರು ಎರಡು ಲಕ್ಷಕ್ಕೂ ಅಧಿಕ ಭಕ್ತಾದಿಗಳು ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. ಈ ಭಾರಿ ಭೇಟಿಯಿಂದಾಗಿ ದೇವಸ್ಥಾನದ ಹುಂಡಿ, ವಿವಿಧ ಸೇವೆಗಳು, ಅನ್ನದಾನ ದೇಣಿಗೆ, ವಸತಿ ಛತ್ರಗಳ ಬಾಡಿಗೆ ಹಾಗೂ ಹರಿಕೆ ರೂಪದ ಚಿನ್ನ-ಬೆಳ್ಳಿಯ ದೇಣಿಗೆ ಸೇರಿದಂತೆ ಒಟ್ಟು ಆದಾಯವು ನಾಲ್ಕು ಕೋಟಿ ರೂಪಾಯಿಗಳನ್ನೂ ಮೀರಲಿದೆ ಎಂದು ಅಂದಾಜಿಸಲಾಗಿದೆ. ಭಕ್ತರ ಸಂಖ್ಯೆ ಗಣನೀಯವಾಗಿ ಏರಿ
6 days ago1 min read
Archive
bottom of page


