top of page
News Articles
Sathyapatha News Plus


ಸತತ ಮೂರು ದಿನ ಬ್ಯಾಂಕ್ ಬಂದ್: ಯಾವೆಲ್ಲ ಬ್ಯಾಂಕುಗಳ ಸೇವೆ ಸ್ಥಗಿತ?
ನಾಳೆ (ಜನವರಿ 27) ಬ್ಯಾಂಕ್ ಮುಷ್ಕರ ನಡೆಯಲಿದೆ. ಹೀಗಾಗಿ, ದೇಶಾದ್ಯಂತ ಈ ಬ್ಯಾಂಕುಗಳು ಮಂಗಳವಾರವೂ ಮುಚ್ಚಿರುತ್ತವೆ. ಭಾರತದಾದ್ಯಂತ ಬ್ಯಾಂಕ್ ಉದ್ಯೋಗಿ ಮತ್ತು ಅಧಿಕಾರಿ ಸಂಘಗಳು ಜನವರಿ 27ರಂದು ರಾಷ್ಟ್ರವ್ಯಾಪಿ ಮುಷ್ಕರವನ್ನು ಘೋಷಿಸಿವೆ. ಇದು ಹೆಚ್ಚಿನ ಸಾರ್ವಜನಿಕ ವಲಯದ ಬ್ಯಾಂಕುಗಳ ಸೇವೆಗಳನ್ನು ಅಡ್ಡಿಪಡಿಸುವ ನಿರೀಕ್ಷೆಯಿದೆ. ಈ ಮುಷ್ಕರಕ್ಕೆ ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿದೆ. ತಮಗೆ ವಾರದಲ್ಲಿ 5 ದಿನಗಳ ಕಾಲ ಮಾತ್ರ ಕೆಲಸ ಮಾಡಲು ಅವಕಾಶ ನೀಡಬೇಕು, ಶನಿವಾರ ಹಾಗೂ ಭಾನುವಾರ ರಜೆ ನೀಡಬೇಕು ಎಂದು ಒತ್ತಾಯಿಸಿ ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್
7 days ago1 min read


ಬಾಹ್ಯಾಕಾಶ ವೀರ ಶುಭಾಂಶು ಶುಕ್ಲಾಗೆ ದೇಶದ ಅತ್ಯುನ್ನತ 'ಅಶೋಕ ಚಕ್ರ' ಗೌರವ:
2026ರ ಗಣರಾಜ್ಯೋತ್ಸವದ ಐತಿಹಾಸಿಕ ಸಂದರ್ಭದಲ್ಲಿ, ಭಾರತದ ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿದ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಅತ್ಯುನ್ನತ ಶಾಂತಿಕಾಲದ ಶೌರ್ಯ ಪ್ರಶಸ್ತಿಯಾದ 'ಅಶೋಕ ಚಕ್ರ' ನೀಡಿ ಗೌರವಿಸಿದರು. ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ (ISS) ಭಾರತದ ಕೀರ್ತಿ ಪತಾಕೆಯನ್ನು ಹಾರಿಸಿ, ಅವರು ತೋರಿದ ಅಪ್ರತಿಮ ಧೈರ್ಯ ಮತ್ತು ತಾಂತ್ರಿಕ ನೈಪುಣ್ಯವನ್ನು ಪರಿಗಣಿಸಿ ಈ ಶ್ರೇಷ್ಠ ಗೌರವವನ್ನು ಅರ್ಪಿಸಲಾಗಿದೆ. ಅಶೋಕ ಚಕ್ರವು ಯುದ್ಧಭೂಮಿಯ ಹೊರಗೆ ತೋರುವ ಅದ್ಭುತ ಸಾಹಸಕ್ಕಾಗಿ ನೀಡಲಾಗುವ ಅತ್ಯುನ್ನತ
Jan 261 min read


ಗಗನಕ್ಕೆರುತ್ತಿರುವ ಚಿನ್ನದ ದರ- ಇಂದಿನ ದರ ಚೆಕ್ ಮಾಡಿ
ಇಂದು (ಜನವರಿ 26, 2026) ಚಿನ್ನದ ಬೆಲೆ ಭಾರಿ ಏರಿಕೆ ಕಂಡಿದೆ. 24 ಕ್ಯಾರೆಟ್ನ ಅಪರಂಜಿ ಚಿನ್ನದ ಬೆಲೆ ಪ್ರತಿ ಗ್ರಾಮ್ಗೆ ₹16,000 ಗಡಿ ದಾಟಿದೆ. ಇಂದಿನ ಪ್ರಮುಖ ದರ ವಿವರಗಳು ಇಲ್ಲಿವೆ (1 ಗ್ರಾಮ್ಗೆ): 24 ಕ್ಯಾರೆಟ್ ಚಿನ್ನ (ಅಪರಂಜಿ): ₹16,271 (ನಿನ್ನೆಯ ದರಕ್ಕಿಂತ ₹245 ಏರಿಕೆ). 22 ಕ್ಯಾರೆಟ್ ಚಿನ್ನ (ಆಭರಣ): ₹14,915 (ನಿನ್ನೆಯ ದರಕ್ಕಿಂತ ₹225 ಏರಿಕೆ). 18 ಕ್ಯಾರೆಟ್ ಚಿನ್ನ: ₹12,203 (ನಿನ್ನೆಯ ದರಕ್ಕಿಂತ ₹184 ಏರಿಕೆ). ಬೆಳ್ಳಿ ಬೆಲೆ: ಪ್ರತಿ 1 ಗ್ರಾಮ್ಗೆ ₹340 ಮತ್ತು 1 ಕೆಜಿಗೆ ₹3,40,000 ಆಗಿದೆ.
Jan 261 min read


ಕೆಲಿಂಜ ಸರ್ಕಾರಿ ಶಾಲೆಯಲ್ಲಿ ಗಣರಾಜ್ಯೋತ್ಸವದ ಸಡಗರ: ರಾಷ್ಟ್ರಧ್ವಜಕ್ಕೆ ಗೌರವ ನಮನ
ದ. ಕ.ಪಂ. ಹಿ. ಪ್ರಾ. ಶಾಲೆಯಲ್ಲಿ 77ನೇ ಗಣರಾಜ್ಯೋತ್ಸವವನ್ನು ಇಂದು ಅತ್ಯಂತ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ಶಾಲಾ ಆವರಣದಲ್ಲಿ ನಡೆದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ (SDMC) ಅಧ್ಯಕ್ಷರಾದ ಮೋಹಿತ್ ಶೆಟ್ಟಿ ಅವರು ಧ್ವಜಾರೋಹಣ ನೆರವೇರಿಸಿ, ವಿದ್ಯಾರ್ಥಿಗಳಿಗೆ ಸಂವಿಧಾನದ ಮಹತ್ವ ಹಾಗೂ ರಾಷ್ಟ್ರಪ್ರೇಮದ ಬಗ್ಗೆ ಸಂದೇಶ ನೀಡಿದರು. ಈ ಸಂದರ್ಭದಲ್ಲಿ ಎಸ್ಡಿಎಂಸಿ ಉಪಾಧ್ಯಕ್ಷೆ ಜಯಂತಿ, ಶಾಲಾ ಮುಖ್ಯೋಪಾಧ್ಯಾಯರು, ಕ್ಲಸ್ಟರ್ ಸಿಆರ್ಪಿ ಮತ್ತು ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ಅಲ್ಲದೆ ಪಂಚಾಯತ್ ಸದಸ್ಯರಾದ ಪ್ರಸಾದ್ ಮತ್ತು ಸಂದೀಪ್, ಎಸ್
Jan 261 min read


ದೇಶಾದ್ಯಂತ 77ನೇ ಗಣರಾಜ್ಯೋತ್ಸವ ಸಡಗರ: 'ವಿಕಸಿತ ಭಾರತ' ಸಂಕಲ್ಪದೊಂದಿಗೆ ಜನತೆಗೆ ಶುಭ ಕೋರಿದ ಮೋದಿ!
ನವದೆಹಲಿ: ದೇಶದ 77ನೇ ಗಣರಾಜ್ಯೋತ್ಸವದ ಅಂಗವಾಗಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸಂಭ್ರಮ ಮನೆಮಾಡಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಬೆಳಿಗ್ಗೆ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ (National War Memorial) ಭೇಟಿ ನೀಡಿ, ದೇಶದ ರಕ್ಷಣೆಗಾಗಿ ಪ್ರಾಣಾರ್ಪಣೆ ಮಾಡಿದ ಹುತಾತ್ಮ ಸೈನಿಕರಿಗೆ ಪುಷ್ಪಗುಚ್ಛ ಅರ್ಪಿಸಿ ಗೌರವ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ರಕ್ಷಣಾ ಸಚಿವರು ಸೇರಿದಂತೆ ಮೂರು ಸೇನಾ ಪಡೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು. ಈ ಬಾರಿಯ ಗಣರಾಜ್ಯೋತ್ಸವಕ್ಕೆ ವಿಶೇಷ ಅತಿಥಿಗಳಾಗಿ ಯುರೋಪಿಯನ್ ಕಮಿಷನ್ ಅಧ್ಯಕ್ಷೆ ಉರ್ಸುಲಾ ವಾನ್ ಡೆರ್ ಲೇಯನ್ ಮತ್ತು ಯುರೋಪಿಯನ್ ಕೌನ್ಸಿಲ
Jan 261 min read


ಬೆಳ್ತಂಗಡಿ: ವಿದ್ಯುತ್ ಪಂಪ್ ಆನ್ ಮಾಡುವಾಗ ಶಾಕ್ ತಗುಲಿ ವ್ಯಕ್ತಿ ದುರ್ಮರಣ
ಬೆಳ್ತಂಗಡಿ: ತಾಲೂಕಿನ ಗುರಿಪಳ್ಳದಲ್ಲಿ ಗಣರಾಜ್ಯೋತ್ಸವದ ದಿನವಾದ ಇಂದು (ಜನೆವರಿ 26) ಬೆಳಿಗ್ಗೆ ಸಂಭವಿಸಿದ ವಿದ್ಯುತ್ ಅವಘಡದಲ್ಲಿ 48 ವರ್ಷದ ವ್ಯಕ್ತಿಯೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಗುರಿಪಳ್ಳದ ಕಡಿಯಾರು ಗ್ರಾಮದ ನಿವಾಸಿ ಶಿವಪ್ರಸಾದ್ ಆದಪ್ಪ ಎಂಬವರೇ ಮೃತಪಟ್ಟ ದುರ್ದೈವಿ. ಮನೆಯ ಬಳಿಯ ನೀರಿನ ಪಂಪ್ ಆನ್ ಮಾಡಲು ಹೋದಾಗ ಈ ಘೋರ ದುರಂತ ಸಂಭವಿಸಿದೆ. ಕುಟುಂಬದ ಮೂಲಗಳ ಪ್ರಕಾರ, ಶಿವಪ್ರಸಾದ್ ಅವರು ಎಂದಿನಂತೆ ತಮ್ಮ ಬೆಳಗಿನ ದಿನಚರಿಯ ಕೆಲಸಕ್ಕೆಂದು ಹೊರಬಂದಿದ್ದರು. ಈ ವೇಳೆ ಪಂಪ್ ಸೆಟ್ ಸ್ವಿಚ್ ಹಾಕುವಾಗ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಗಂಭೀರವಾಗಿ ಗಾಯಗೊಂಡು ನೆಲಕ್ಕೆ ಉರುಳಿ ಬಿ
Jan 261 min read


ಶರಣ್ ಪಂಪ್ವೆಲ್ಗೆ ಜಿಲ್ಲಾ ಪ್ರವೇಶ ನಿಷೇಧ: ಶಾಂತಿ ಕಾಪಾಡಲು ಜಿಲ್ಲಾಧಿಕಾರಿ ಕ್ರಮ
ಹಾಸನ: ಶ್ರವಣಬೆಳಗೊಳ ಹಾಗೂ ಅರಸೀಕೆರೆಯಲ್ಲಿ ಭಾನುವಾರ ಆಯೋಜಿಸಲಾಗಿದ್ದ 'ಹಿಂದೂ ಸಮಾಜೋತ್ಸವ' ಕಾರ್ಯಕ್ರಮದಲ್ಲಿ ಭಾಗವಹಿಸಬೇಕಿದ್ದ ವಿಶ್ವ ಹಿಂದೂ ಪರಿಷತ್ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ಅವರಿಗೆ ಜಿಲ್ಲಾ ಪ್ರವೇಶವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಅವರು ಆದೇಶ ಹೊರಡಿಸಿದ್ದಾರೆ. ಶರಣ್ ಪಂಪ್ವೆಲ್ ಅವರು ಈ ಹಿಂದೆ ವಿವಿಧ ಜಿಲ್ಲೆಗಳಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಅವರ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿವೆ. ಈ ಇತಿಹಾಸವನ್ನು ಗಮನಿಸಿ ಮುನ್ನೆಚ್ಚರಿಕಾ ಕ್ರಮವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು
Jan 261 min read


ಜಾಮೀನು ನೀಡುವ ಮುನ್ನ ಎಚ್ಚರ: ರೌಡಿಗಳು ಸಿಗದಿದ್ದರೆ ಜಾಮೀನುದಾರರಿಗೆ ಸಂಕಷ್ಟ; ಮಂಗಳೂರು ಕಮಿಷನರ್ ವಾರ್ನಿಂಗ್!
ಮಂಗಳೂರು: ಗಂಭೀರ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿ ನ್ಯಾಯಾಲಯದಿಂದ ಜಾಮೀನು ಪಡೆದು ತಲೆಮರೆಸಿಕೊಳ್ಳುವ ಆರೋಪಿಗಳಿಗೆ ಮಾತ್ರವಲ್ಲ, ಅವರಿಗೆ ಶ್ಯೂರಿಟಿ (ಜಾಮೀನು ಭರವಸೆ) ನೀಡುವವರಿಗೂ ಇನ್ಮುಂದೆ ಪೊಲೀಸರು ಬಿಸಿ ಮುಟ್ಟಿಸಲಿದ್ದಾರೆ. "ಅಪರಾಧಿಗಳಿಗೆ ಜಾಮೀನು ನೀಡುವಾಗ ಸಾರ್ವಜನಿಕರು ಎಚ್ಚರಿಕೆ ವಹಿಸಬೇಕು, ಇಲ್ಲದಿದ್ದರೆ ಗಂಭೀರ ಕಾನೂನು ಪರಿಣಾಮ ಎದುರಿಸಬೇಕಾಗುತ್ತದೆ" ಎಂದು ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರು ಕಡಕ್ ಎಚ್ಚರಿಕೆ ನೀಡಿದ್ದಾರೆ. ಈ ಮೂಲಕ ನ್ಯಾಯಾಂಗ ಪ್ರಕ್ರಿಯೆಯಿಂದ ತಪ್ಪಿಸಿಕೊಳ್ಳುವ ರೌಡಿಗಳಿಗೆ ಸಾಥ್ ನೀಡುವವರಿಗೆ ಆಯುಕ್ತರು ನೇರ ಸಂದೇಶ ರವಾನಿಸಿದ್ದಾರೆ.
Jan 251 min read


ಬಾಂಗ್ಲಾದಲ್ಲಿ ಮತ್ತೆ ಮೃತ್ಯು ನರ್ತನ: ಗ್ಯಾರೇಜ್ಗೆ ಬೆಂಕಿ ಹಚ್ಚಿ ಹಿಂದೂ ಯುವಕನ ಸಜೀವ ದಹನ!
ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂ ಸಮುದಾಯದವರನ್ನು ಗುರಿಯಾಗಿಸಿಕೊಂಡು ನಡೆಸಲಾಗುತ್ತಿರುವ ದಾಳಿಗಳು ನಿಲ್ಲುವ ಲಕ್ಷಣ ಕಾಣುತ್ತಿಲ್ಲ. ನರಸಿಂಗ್ಲಿ ಜಿಲ್ಲೆಯಲ್ಲಿ 23 ವರ್ಷದ ಹಿಂದೂ ಯುವಕ ಚಂಚಲ್ ಚಂದ್ರ ಭೌಮಿಕ್ ಎಂಬುವವರನ್ನು ಅವರು ಮಲಗಿದ್ದ ಗ್ಯಾರೇಜ್ ಒಳಗೇ ಸುಟ್ಟು ಹಾಕಿರುವ ಭೀಕರ ಘಟನೆ ನಡೆದಿದೆ. ಮೂಲತಃ ಕುಮಿಲ್ಲಾ ಜಿಲ್ಲೆಯ ಲಕ್ಷ್ಮೀಪುರ ಗ್ರಾಮದವರಾದ ಚಂಚಲ್, ಕೆಲಸದ ನಿಮಿತ್ತ ನರಸಿಂಗ್ಲಿಯಲ್ಲಿ ವಾಸವಿದ್ದರು. ಇಡೀ ಕುಟುಂಬಕ್ಕೆ ಆಧಾರವಾಗಿದ್ದ ಏಕೈಕ ಪುತ್ರನನ್ನೇ ಕಳೆದುಕೊಂಡ ಕುಟುಂಬ ಈಗ ಬೀದಿಗೆ ಬಿದ್ದಂತಾಗಿದ್ದು, ಇಡೀ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಶುಕ್ರವಾ
Jan 251 min read


ಇಂದಿನ ಚಿನ್ನದ ದರ ಎಷ್ಟಿದೆ ಚೆಕ್ ಮಾಡಿ
ಜನವರಿ 13, 2026ರ ಮಂಗಳವಾರದಂದು ಕರ್ನಾಟಕದಲ್ಲಿ ಚಿನ್ನದ ಬೆಲೆ ಗಣನೀಯವಾಗಿ ಏರಿಕೆ ಕಂಡಿದೆ. ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ದರಗಳು ಈ ಕೆಳಗಿನಂತಿವೆ: 22 ಕ್ಯಾರೆಟ್ ಚಿನ್ನ (ಆಭರಣ ಚಿನ್ನ): 1 ಗ್ರಾಂ: ₹13,065 10 ಗ್ರಾಂ: ₹1,30,650 (ನಿನ್ನೆಗಿಂತ ₹350 ಏರಿಕೆ) 24 ಕ್ಯಾರೆಟ್ ಚಿನ್ನ (ಅಪರಂಜಿ ಚಿನ್ನ): 1 ಗ್ರಾಂ: ₹14,253 10 ಗ್ರಾಂ: ₹1,42,530 (ನಿನ್ನೆಗಿಂತ ₹380 ಏರಿಕೆ) 18 ಕ್ಯಾರೆಟ್ ಚಿನ್ನ: 1 ಗ್ರಾಂ: ₹10,690 ಬೆಳ್ಳಿ ದರ: ಬೆಳ್ಳಿಯ ಬೆಲೆಯೂ ಸಹ ಇಂದು ಹೊಸ ದಾಖಲೆ ಬರೆದಿದ್ದು, ಪ್ರತಿ ಕೆ.ಜಿ ಬೆಳ್ಳಿಯ ಬೆಲೆ ₹2,75,000 ತಲುಪಿದೆ. ನಿನ್ನೆಗಿಂತ ಬೆಳ್ಳಿ ಬೆಲೆಯಲ್ಲಿ ಸ
Jan 251 min read


ಹಿಮಪಾತದ ಅಬ್ಬರಕ್ಕೆ ಹಿಮಾಚಲ ಸ್ತಬ್ಧ: 600ಕ್ಕೂ ಹೆಚ್ಚು ರಸ್ತೆಗಳು ಬಂದ್, ಮೈಕೊರೆಯುವ ಚಳಿಯಲ್ಲಿ ಪ್ರವಾಸಿಗರ ಪರದಾಟ!
ಶಿಮ್ಲಾ: ದೇವಭೂಮಿ ಹಿಮಾಚಲ ಪ್ರದೇಶದಲ್ಲಿ ಪ್ರಕೃತಿಯ ಮುನಿಸು ಮುಂದುವರಿದಿದ್ದು, ಭಾರೀ ಹಿಮಪಾತದಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಮನಾಲಿ, ಶಿಮ್ಲಾ ಮತ್ತು ಕಾಲ್ಕಾ ಸೇರಿದಂತೆ ಪ್ರಮುಖ ಪ್ರವಾಸಿ ತಾಣಗಳಲ್ಲಿ ಸತತವಾಗಿ ಹಿಮ ಬೀಳುತ್ತಿದ್ದು, ಒಂದೆಡೆ ಪ್ರವಾಸಿಗರು ಹಿಮದ ಸಂಭ್ರಮದಲ್ಲಿದ್ದರೆ, ಮತ್ತೊಂದೆಡೆ ಸಾವಿರಾರು ಜನರು ಊರುಗಳಿಗೆ ಮರಳಲಾಗದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕುಲು ಜಿಲ್ಲೆಯ ಕೋಥಿ ಮತ್ತು ಮನಾಲಿಯಲ್ಲಿ ಸುಮಾರು 8 ಕಿಲೋಮೀಟರ್ಗೂ ಅಧಿಕ ಉದ್ದದವರೆಗೆ ವಾಹನಗಳು ಸಾಲುಗಟ್ಟಿ ನಿಂತಿದ್ದು, ಪ್ರವಾಸಿಗರು ರಸ್ತೆಯಲ್ಲೇ ಕಾಲ ಕಳೆಯುವಂತಾಗಿದೆ. ರಾಜ್ಯಾದ್ಯಂತ ಹಿಮದ ಹೊದಿ
Jan 251 min read


ಹುಬ್ಬಳ್ಳಿಯಲ್ಲಿ ಇಂದು 42,345 ಮನೆಗಳ ಐತಿಹಾಸಿಕ ಹಂಚಿಕೆ; ಖರ್ಗೆ–ಸಿದ್ದರಾಮಯ್ಯ–ಡಿಕೆಶಿ ಚಾಲನೆ
ಹುಬ್ಬಳ್ಳಿ: ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ವತಿಯಿಂದ ನಿರ್ಮಿಸಲಾದ 42,345 ಮನೆಗಳನ್ನು ಬಡ ಕುಟುಂಬಗಳಿಗೆ ಹಂಚಿಕೆ ಮಾಡುವ ಐತಿಹಾಸಿಕ ಕಾರ್ಯಕ್ರಮ ಜ.24ರಂದು ಹುಬ್ಬಳ್ಳಿಯ ಮಂಟೂರ ರಸ್ತೆಯಲ್ಲಿ ಯಶಸ್ವಿಯಾಗಿ ನೆರವೇರಿತು. ವಸತಿ ಸಚಿವ ಝಮೀರ್ ಅಹ್ಮದ್ ಖಾನ್ ಅವರ ನೇತೃತ್ವದಲ್ಲಿ ನಡೆದ ಈ ಬೃಹತ್ ಸಮಾರಂಭಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭಾಗವಹಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ರಾಜ್ಯಾದ್ಯಂತ ನಿರ್ಮಾಣಗೊಂಡ ಮನೆಗಳ ಪೈಕಿ ಇದು ಎರಡನೇ ಹಂತದ ಹಂಚಿಕೆಯಾಗ
Jan 251 min read


ದೇಶದ ಅತಿ ದೊಡ್ಡ ರಾಬರಿ: ಬೆಳಗಾವಿ ಗಡಿಭಾಗದಲ್ಲಿ 400 ಕೋಟಿ ರೂ ಹಣವಿದ್ದ 2 ಕಂಟೇನರ್ ಹೈಜಾಕ್
ಗೋವಾದಿಂದ ಮಹಾರಾಷ್ಟ್ರಕ್ಕೆ ಸುಮಾರು ₹400 ಕೋಟಿ ನಗದು ಸಾಗಿಸುತ್ತಿದ್ದ ಎರಡು ಕಂಟೇನರ್ಗಳನ್ನು ಹೈಜಾಕ್ ಮಾಡಿರುವ ಘಟನೆ ದೇಶದ ಅಪರಾಧ ಇತಿಹಾಸದಲ್ಲೇ ಅತಿದೊಡ್ಡ ದರೋಡೆ ಪ್ರಕರಣಗಳಲ್ಲೊಂದು ಎಂದು ಪರಿಗಣಿಸಲಾಗಿದೆ. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಅಪಾಯಕಾರಿ ಹಾಗೂ ಅರಣ್ಯ ಪ್ರದೇಶವಾದ ಚೋರ್ಲಾ ಘಾಟ್ ಮಾರ್ಗದಲ್ಲಿ ಈ ಕೃತ್ಯ ನಡೆದಿದ್ದು, ಘಟನೆ ನಡೆದ ಹಲವು ತಿಂಗಳ ಬಳಿಕ ಇದೀಗ ಪ್ರಕರಣ ಬಹಿರಂಗವಾಗಿದೆ. 2025ರ ಅಕ್ಟೋಬರ್ 16ರಂದು ನಡೆದ ಈ ದರೋಡೆ ಪ್ರಕರಣ, ಕರ್ನಾಟಕ, ಮಹಾರಾಷ್ಟ್ರ ಮತ್ತು ಗೋವಾ – ಈ ಮೂರು ರಾಜ್ಯಗಳ ಪೊಲೀಸ್ ವ್ಯವಸ್ಥೆಯನ್ನು ತೀವ್ರ ಎಚ್ಚರಿಕೆಯಲ್ಲಿರಿಸಿದೆ. ಗೋವಾದಿಂದ ಮಹ
Jan 251 min read


ತಂದೆಗೆ ಚೂರಿ ಇರಿದು, ಬಳಿಕ ಶೂಟೌಟ್ ಮಾಡಿಕೊಂಡು ಆತ್ಮಹತ್ಯೆ: ಕಡಬದಲ್ಲಿ ಭೀಕರ ಘಟನೆ
ಕಡಬ: ತಂದೆಯನ್ನೇ ಚೂರಿಯಿಂದ ಇರಿದು ಕೊಲೆ ಯತ್ನ ನಡೆಸಿದ ಬಳಿಕ ಮನೆಯಲ್ಲಿದ್ದ ಕೋವಿಯಿಂದ ಶೂಟೌಟ್ ಮಾಡಿಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಭೀಕರ ಘಟನೆ ಶನಿವಾರ ಸಂಜೆ ಕಡಬ ಠಾಣಾ ವ್ಯಾಪ್ತಿಯ ರಾಮಕುಂಜ ಗ್ರಾಮದ ಪಾದೆ ಎಂಬಲ್ಲಿ ನಡೆದಿದೆ. ಶೂಟೌಟ್ ಮಾಡಿಕೊಂಡು ಮೃತಪಟ್ಟ ಯುವಕನನ್ನು ರಾಮಕುಂಜ ಗ್ರಾಮದ ಪಾದೆ ನಿವಾಸಿ ವಸಂತ ಅಮೀನ್ ಎಂಬವರ ಪುತ್ರ ಮೋಕ್ಷ ಎಂದು ಗುರುತಿಸಲಾಗಿದೆ. ಶನಿವಾರ ಸಂಜೆ ತಂದೆ–ಮಗನ ನಡುವೆ ತೀವ್ರ ಜಗಳ ನಡೆದಿದ್ದು, ಆ ಸಂದರ್ಭದಲ್ಲಿ ಮೋಕ್ಷ ತನ್ನ ತಂದೆ ವಸಂತ ಅಮೀನ್ ಅವರಿಗೆ ಚೂರಿಯಿಂದ ಇರಿದು ಗಂಭೀರವಾಗಿ ಗಾಯಗೊಳಿಸಿದ್ದಾನೆ ಎನ್ನಲಾಗಿದೆ. ಅನಂತರ ಮನೆಗೆಲ್ಲಿದ್ದ
Jan 241 min read


ಮಂಗಳೂರು: ನಕಲಿ ಚಿನ್ನದ ಬಳೆ ಅಡವಿಟ್ಟು ₹14.89 ಲಕ್ಷ ಸಾಲ – ಮೂವರ ಬಂಧನ
ಕಾವೂರು ವ್ಯಾಪ್ತಿಯ ಸಹಕಾರಿ ಸಂಸ್ಥೆಯೊಂದರಲ್ಲಿ ನಕಲಿ ಚಿನ್ನದ ಬಳೆಗಳನ್ನು ಅಡವಿಟ್ಟು ₹14.89 ಲಕ್ಷ ಸಾಲ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾವೂರು ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಮೊಹಮ್ಮದ್ ನಝೀರ್, ಜಮಾಲುದ್ದೀನ್ ಎ.ಎಚ್. ಹಾಗೂ ಸೈನಾಝ್ ಎಂದು ಗುರುತಿಸಲಾಗಿದೆ. ಪ್ರಕರಣದ ಮತ್ತೊಬ್ಬ ಆರೋಪಿ ದಿಲ್ಶಾದ್ ತಲೆಮರೆಸಿಕೊಂಡಿದ್ದು, ಆಕೆಯ ಪತ್ತೆಗೆ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ಬಂಧಿತರು ಹಾಗೂ ತಲೆಮರೆಸಿಕೊಂಡಿರುವ ಆರೋಪಿ 2024ರ ಜೂನ್ 24ರಿಂದ ಅಕ್ಟೋಬರ್ 5ರವರೆಗೆ ನಕಲಿ ಚಿನ್ನದ ಬಳೆಗಳನ್ನು ಅಡವಿಟ್ಟು ಸಾಲ ಪಡೆದಿದ್ದರು. ಬ್ಯಾಂಕ್ನ ಚಿನ
Jan 241 min read


ಕುಂದಾಪುರ: ಬಸ್ ಓವರ್ಟೇಕ್ ವೇಳೆ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಸಾವು
ಕುಂದಾಪುರ ತಾಲೂಕಿನ ಶೆಟ್ರಕಟ್ಟೆ ತಿರುವಿನಲ್ಲಿ ಶನಿವಾರ ಬೆಳಿಗ್ಗೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮೃತರನ್ನು ಸೌಕೂರು ನಿವಾಸಿ ವಿಜಯ್ ದೇವಾಡಿಗ (26) ಎಂದು ಗುರುತಿಸಲಾಗಿದೆ. ತ್ರಾಸಿಯಲ್ಲಿ ಫಾಸ್ಟ್ ಫುಡ್ ಅಂಗಡಿ ನಡೆಸುತ್ತಿದ್ದ ವಿಜಯ್, ಶನಿವಾರ ಬೆಳಿಗ್ಗೆ ತ್ರಾಸಿಯಿಂದ ಸೌಕೂರು ಕಡೆಗೆ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಶೆಟ್ರಕಟ್ಟೆ ತಿರುವಿನಲ್ಲಿ ಖಾಸಗಿ ಬಸ್ ಅನ್ನು ಓವರ್ಟೇಕ್ ಮಾಡಲು ಪ್ರಯತ್ನಿಸಿದಾಗ, ಎದುರಿನಿಂದ ಬರುತ್ತಿದ್ದ ಮತ್ತೊಂದು ಖಾಸಗಿ ಬಸ್ಗೆ ಬೈಕ್ ಮುಖಾಮುಖಿ ಢಿಕ್ಕಿ ಹೊಡೆದಿದೆ. ಢಿಕ್ಕಿಯ ತೀ
Jan 241 min read


ಕಡಬ: ಕಾಡಾನೆ ಎದುರಾದಾಗ ಬೈಕ್ ಬಿಟ್ಟು ಓಡಿ ಪ್ರಾಣ ಉಳಿಸಿಕೊಂಡ ಸವಾರ - ಆನೆ ದಾಳಿಗೆ ಬೈಕ್ ನಜ್ಜುಗುಜ್ಜು
ಅರಣ್ಯ ಇಲಾಖೆಯ ವ್ಯಾಪ್ತಿಗೆ ಒಳಪಡುವ ಸುಬ್ರಹ್ಮಣ್ಯ ವಲಯದ ಕೊಂಬಾರು ಗ್ರಾಮದ ಕಾಯರ್ತಡ್ಕ–ಮಣಿಭಾಂಡ ರಸ್ತೆಯಲ್ಲಿ ಗುರುವಾರ ರಾತ್ರಿ ರಸ್ತೆ ಮಧ್ಯೆ ಕಾಡಾನೆ ಎದುರಾದ ಪರಿಣಾಮ ಬೈಕ್ ಸವಾರೊಬ್ಬರು ಕೂದಲೆಳೆಯ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಘಟನೆ ಸಂಭವಿಸಿದೆ. ಸ್ಥಳೀಯ ಅಗರಿ ನಿವಾಸಿ ವಿನಯ್ ಎಂಬವರು ಗುರುವಾರ ರಾತ್ರಿ ಬೈಕ್ನಲ್ಲಿ ಸಂಚರಿಸುತ್ತಿದ್ದ ವೇಳೆ ಅಚಾನಕ್ ಕಾಡಾನೆ ಎದುರಾಗಿದೆ. ಗಾಬರಿಗೊಂಡ ಅವರು ತಕ್ಷಣ ಬೈಕ್ ಬಿಟ್ಟು ಓಡಿ ಪ್ರಾಣ ಉಳಿಸಿಕೊಂಡಿದ್ದಾರೆ. ಈ ವೇಳೆ ಆನೆಯು ರಸ್ತೆಯಲ್ಲಿದ್ದ ಬೈಕ್ ಅನ್ನು ತುಳಿದು ಗಂಭೀರವಾಗಿ ಹಾನಿಗೊಳಿಸಿದೆ. ಘಟನೆಯ ಸುದ್ದಿ ತಿಳಿದ ತಕ್ಷಣ ಅರಣ್ಯ ಇಲಾಖೆ
Jan 241 min read


ಕಾರವಾರ: ವೈರಲ್ ವೀಡಿಯೋಗೆ ಬಲಿಯಾದ ವೈದ್ಯ; ರಾಜೀವ್ ಪಿಕಳೆ ಪ್ರಕರಣದಲ್ಲಿ ಇಬ್ಬರ ಬಂಧನ
ಕಾರವಾರ: ಸಾಮಾಜಿಕ ಹಾಗೂ ವೈದ್ಯಕೀಯ ವಲಯದಲ್ಲಿ ಗೌರವ ಪಡೆದ ಕುಟುಂಬಕ್ಕೆ ಸೇರಿದ ವೈದ್ಯ ರಾಜೀವ್ ಪಿಕಳೆ ಆತ್ಮಹತ್ಯೆ (Rajiv Pikale Case) ಪ್ರಕರಣಕ್ಕೆ ಸಂಬಂಧಿಸಿದಂತೆ ಅಂಕೋಲಾ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಜಾಲತಾಣದಲ್ಲಿ ಅವಮಾನಕಾರಿ ವೀಡಿಯೋ ವೈರಲ್ ಆಗಿದ್ದೇ ಈ ದುರಂತಕ್ಕೆ ಕಾರಣವೆಂದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲ್ಲೂಕಿನ ಹಟ್ಟಿಕೇರಿಯಲ್ಲಿ ವಾಸವಾಗಿದ್ದ ರಾಜೀವ್ ಪಿಕಳೆ, ತಮ್ಮ ನಿವಾಸದಲ್ಲೇ ಡಬಲ್ ಬ್ಯಾರಲ್ ಗನ್ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಆರ್ಥಿಕವಾಗಿ ಸುಸ್ಥಿತಿಯಲ್ಲಿದ್ದರೂ ಒಂಟಿಯಾಗಿ ವಾಸಿಸುತ್ತಿದ್
Jan 241 min read


ಬಳ್ಳಾರಿ ಬ್ಯಾನರ್ ಗಲಾಟೆ ಮಾಸುವ ಮುನ್ನವೇ ರೆಡ್ಡಿ–ಶ್ರೀರಾಮುಲುಗೆ ಸೇರಿದ ಮಾಡೆಲ್ ಹೌಸ್ಗೆ ಬೆಂಕಿ
ರಾಜ್ಯ ರಾಜಕಾರಣದಲ್ಲಿ ಮತ್ತೆ ಭಾರೀ ಸಂಚಲನ ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ನಡೆದ ಬ್ಯಾನರ್ ಗಲಾಟೆ ಹಾಗೂ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ ಗುಂಡೇಟಿಗೆ ಬಲಿಯಾದ ಪ್ರಕರಣ ಇನ್ನೂ ಮಾಸುವ ಮುನ್ನವೇ ಮತ್ತೊಂದು ಗಂಭೀರ ಘಟನೆ ನಡೆದಿದೆ. ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಹಾಗೂ ಮಾಜಿ ಸಚಿವ ಬಿ. ಶ್ರೀರಾಮುಲು ಅವರಿಗೆ ಸೇರಿದ ಜಿ–ಸ್ಕ್ವೇರ್ ಲೇಔಟ್ನಲ್ಲಿರುವ ಮಾಡೆಲ್ ಹೌಸ್ಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಘಟನೆ ಬೆಳಕಿಗೆ ಬಂದಿದೆ. ಈ ಅಗ್ನಿ ಅವಘಡದ ಹಿಂದೆ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಶಾಸಕರ ಬೆಂಬಲಿಗರೇ ಇದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಪ್ರಕರಣ ರಾಜ್ಯ
Jan 242 min read


ಇಂದಿನ ರಾಶಿಫಲ | ಎಲ್ಲಾ 12 ರಾಶಿಗಳಿಗೆ ಫಲಾಫಲ
ಮೇಷ ರಾಶಿ ನೀರಿನ ಪ್ರದೇಶಗಳಲ್ಲಿ ಇಂದು ವಿಶೇಷ ಎಚ್ಚರಿಕೆ ಅಗತ್ಯ. ಸರ್ಕಾರದಿಂದ ಬರುವ ಗೌರವ ಅಥವಾ ಅವಕಾಶವನ್ನು ತಳ್ಳಿಹಾಕುವ ಸಾಧ್ಯತೆ ಇದೆ. ಹೂಡಿಕೆ ವಿಷಯದಲ್ಲಿ ಯಾರಾದರೂ ತಪ್ಪು ದಾರಿಯತ್ತ ನಿಮ್ಮನ್ನು ಕರೆದೊಯ್ಯಬಹುದು. ಉದ್ಯಮಿಗಳ ಭೇಟಿಯಿಂದ ಹೊಸ ಅವಕಾಶಗಳ ಸುಳಿವು ಸಿಗಲಿದೆ. ಭೂ ಖರೀದಿಗೆ ಇದು ಉತ್ತಮ ಸಮಯ. ಯೋಗಾಭ್ಯಾಸದಿಂದ ಮನಸ್ಸಿನ ಅಶಾಂತಿ ಕಡಿಮೆಯಾಗಲಿದೆ. ಕೆಲವರು ನಿಮ್ಮನ್ನು ಮಾತಿನಿಂದಲೇ ನಿಯಂತ್ರಿಸಲು ಪ್ರಯತ್ನಿಸಬಹುದು. ವೃಷಭ ರಾಶಿ ಆಸ್ತಿ ಗಳಿಕೆಯ ಕುರಿತು ಗಂಭೀರ ಚಿಂತನೆ ನಡೆಸುವಿರಿ. ಎಲ್ಲ ವಿಚಾರಗಳನ್ನು ಎಲ್ಲರೊಂದಿಗೆ ಹಂಚಿಕೊಳ್ಳುವುದು ಒಳಿತಲ್ಲ. ಅನಗತ್ಯ ಗೊಂದಲಗಳನ್ನು ತಪ
Jan 242 min read
Archive
bottom of page


