top of page
News Articles
Sathyapatha News Plus


ದಸರಾಗೆ 'ಗಜಪಯಣ' ಚಾಲನೆ: ಈ ಬಾರಿ ಸಾಂಪ್ರದಾಯಿಕ ಕಂಬಳ ಸಂಭ್ರಮ
ಈ ಬಾರಿಯ ಮೈಸೂರು ದಸರಾ ಮಹೋತ್ಸವದಲ್ಲಿ ಕಂಬಳ ಕ್ರೀಡೆ ಆಯೋಜಿಸಲಾಗುವುದು ಎಂದು ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ. ವೀರನಹೊಸಹಳ್ಳಿಯಲ್ಲಿ ಸಾಂಪ್ರದಾಯಿಕ 'ಗಜಪಯಣ'ಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಸೂಚನೆಯಂತೆ ಈಗಾಗಲೇ ಗುರುತಿಸಲಾದ ಜಾಗದಲ್ಲಿ ಕಂಬಳ ನಡೆಯಲಿದೆ ಎಂದರು. ಇದೇ ವೇಳೆ ದಸರಾದ ಪ್ರಮುಖ ಆಕರ್ಷಣೆಯಾಗಿದ್ದ 'ಅಭಿಮನ್ಯು' ಆನೆಗೆ ವಿಶೇಷ ಪೂಜೆ ಸಲ್ಲಿಸಿ ಗೌರವದ ಬೀಳ್ಕೊಡುಗೆ ನೀಡಲಾಯಿತು. ಕಳೆದ 25 ವರ್ಷಗಳಿಂದ ದಸರಾದಲ್ಲಿ ಸಕ್ರಿಯವಾಗಿ ಭಾಗವಹಿಸಿ, 6 ಬಾರಿ ಯಶಸ್ವಿಯಾಗಿ ಚಿನ್ನದ ಅಂಬಾರಿ ಹೊತ್ತಿದ್ದ ಅಭಿಮನ್ಯು ಈ ಬಾರಿ ನಿವೃತ್ತಿ ಹೊಂದಿದ್ದಾ
Aug 271 min read


ಶಾಸ್ತ್ರಿ ಸರ್ಕಲ್ನಲ್ಲಿ ಗುಂಡಿ ಗಂಡಾಂತರ ಬಾಳೆಗಿಡ ನೆಟ್ಟರೂ ಎಚ್ಚೆತ್ತುಕೊಳ್ಳದ ಆಡಳಿತ: ಈ ‘ಮರಣಗುಂಡಿ’ಗೆ ಕಾಯಂ ಪರಿಹಾರ ಎಂದು?
ಸುಳ್ಯದ ಹೃದಯಭಾಗ ಶಾಸ್ತಿ ಸರ್ಕಲ್ನಲ್ಲಿ ಬೇಸಿಗೆಯಲ್ಲಿ ತೆಗೆದ ಪೈಪ್ಲೈನ್ ಗುಂಡಿ ಈಗ ಸಾರ್ವಜನಿಕರನ್ನು ಬಲಿ ಪಡೆಯಲು ಕಾದಿದೆ. ಆಟೋ ಚಾಲಕರು ಬಾಳೆಗಿಡ ನೆಟ್ಟು ಮೂರು ಬಾರಿ ಪ್ರತಿಭಟಿಸಿದರೂ, ಆಡಳಿತ ವರ್ಗದ ‘ಕಣ್ಣೊರೆಸುವ ತಂತ್ರ’ ಬರೀ ಜಲ್ಲಿಕಲ್ಲು ಹಾಕುವುದಕ್ಕಷ್ಟೇ ಸೀಮಿತವಾಗಿದೆ. ಮಳೆಗೆ ಕಲ್ಲು ಕೊಚ್ಚಿಹೋಗಿ ವಾಹನ ಸವಾರರು ಅಡ್ಡಬಿದ್ದು ಮೂಳೆ ಮುರಿದುಕೊಳ್ಳುವ ಭೀತಿಯಲ್ಲಿದ್ದಾರೆ. ಅಷ್ಟೇ ಏಕೆ, ಕೆಲವು ದಿನಗಳ ಹಿಂದೆಯಷ್ಟೇ ಆಂಬುಲೆನ್ಸ್ ಒಂದಕ್ಕೆ ಈ ಗುಂಡಿಯಿಂದಾಗಿ ಪಲ್ಟಿಯಾಗುವ ಪರಿಸ್ಥಿತಿ ಎದುರಾಗಿತ್ತು! ಅದೃಷ್ಟವಶಾತ್ ದೊಡ್ಡ ಅನಾಹುತ ತಪ್ಪಿದೆ. ರಸ್ತೆ ದುರಸ್ತಿ ಮಾಡಲು ಇನ್ನೆಷ್ಟು ಬ
Aug 271 min read


ಪುತ್ತೂರು ದರ್ಬೆ ಬೈಪಾಸ್ನಲ್ಲಿ ಬ್ರೇಕ್ ವೈಫಲ್ಯ; ಚಾಲಕನ ನಿಯಂತ್ರಣ ತಪ್ಪಿ ಮನೆಯ ಕಾಂಪೌಂಡ್ಗೆ ಡಿಕ್ಕಿ
ಪುತ್ತೂರು: ದರ್ಬೆ ಬೈಪಾಸ್ನ ಅಶ್ವಿನಿ ಸರ್ಕಲ್ ಬಳಿ ಚಾಲಕನ ನಿಯಂತ್ರಣ ತಪ್ಪಿದ ಬಸ್ಸೊಂದು ಮನೆಯ ಕಾಂಪೌಂಡ್ಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಬಸ್ಸಿನಲ್ಲಿ ಬ್ರೇಕ್ ವೈಫಲ್ಯ ಉಂಟಾದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಬಸ್ ರಸ್ತೆ ಬದಿಯಲ್ಲಿದ್ದ ಮನೆಯ ಕಾಂಪೌಂಡ್ಗೆ ನುಗ್ಗಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಕಾಂಪೌಂಡ್ಗೆ ಹಾನಿಯಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಅಪಘಾತದ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.
Aug 261 min read


ಕಡಬ: ಅಂಬೇಡ್ಕರ್ ಭವನದಲ್ಲಿ ಅಕ್ರಮ ಮನಿ ಸರ್ಕ್ಯುಲೇಷನ್ ಜಾಲ ಪತ್ತೆ, 8 ಜನರ ವಿರುದ್ಧ ಎಫ್ಐಆರ್
ಕಡಬ ಪೇಟೆಯ ಅಂಬೇಡ್ಕರ್ ಭವನದಲ್ಲಿ ಸಾರ್ವಜನಿಕರಿಗೆ ಆಮಿಷವೊಡ್ಡಿ ನಿಷೇಧಿತ ಮನಿ ಸರ್ಕ್ಯುಲೇಷನ್ ಯೋಜನೆ ನಡೆಸುತ್ತಿದ್ದ ಜಾಲವನ್ನು ಕಡಬ ಪೊಲೀಸರು ಭೇದಿಸಿದ್ದಾರೆ. ಈ ಸಂಬಂಧ ಸಂಸ್ಥೆಯ ಮಾಲೀಕರು ಹಾಗೂ ಸ್ಥಳೀಯ ಏಜೆಂಟರು ಸೇರಿದಂತೆ ಒಟ್ಟು 8 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ. ದಿನಾಂಕ 23.08.2026 ರಂದು ಸಿಕ್ಕ ಗುಪ್ತಚರ ಮಾಹಿತಿ ಆಧರಿಸಿ ಕಡಬ ಪೊಲೀಸರು ದಾಳಿ ನಡೆಸಿದಾಗ, ಹಾವೇರಿ ಮೂಲದ 'ಕಿಂಗ್ಸ್ ಬಜಾರ್' (KINGS Bazaar) ಹೆಸರಿನಲ್ಲಿ ಸಾರ್ವಜನಿಕರನ್ನು ಸೇರಿಸಿ ಸಭೆ ನಡೆಸುತ್ತಿರುವುದು ಕಂಡುಬಂದಿದೆ. "ಕಂಪನಿಗೆ ಹಣ ತೊಡಗಿಸಿದರೆ ಶೀಘ್ರವಾಗಿ ಭಾರಿ ಲಾಭ ಗಳಿಸಬಹುದು, ರಿಯಾಯಿತಿ ದರದಲ
Aug 261 min read


ಹಬ್ಬದ ಸಂಭ್ರಮಕ್ಕೆ ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ
ಮಂಗಳೂರು: ಹಬ್ಬದ ಕಾರ್ಯಕ್ರಮಗಳು ಹಾಗೂ ಮೆರವಣಿಗೆಗಳ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಪೊಲೀಸರು ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದಾರೆ. ಕಾರ್ಯಕ್ರಮ ಆಯೋಜಕರು ಕಡ್ಡಾಯವಾಗಿ ಪೂರ್ವಾನುಮತಿ ಪಡೆಯಬೇಕು. ಖಾಸಗಿ ಜಾಗದಲ್ಲಿ ಕಾರ್ಯಕ್ರಮ ನಡೆಸುವುದಾದರೆ ಜಾಗದ ಮಾಲೀಕರಿಂದ ಎನ್ಒಸಿ ಪಡೆಯುವುದು ಕಡ್ಡಾಯವಾಗಿದೆ. ಡಿಜೆ ಹಾಗೂ ಅತಿಯಾದ ಶಬ್ದದ ಸ್ಪೀಕರ್ಗಳ ಬಳಕೆಗೆ ಸಂಪೂರ್ಣ ನಿಷೇಧವಿದ್ದು, ಅನುಮತಿಯೊಂದಿಗೆ ಬಳಸುವ ಧ್ವನಿವರ್ಧಕಗಳನ್ನು ರಾತ್ರಿ 10 ಗಂಟೆಯೊಳಗೆ ಬಂದ್ ಮಾಡಬೇಕು. ಮೆರವಣಿಗೆಗಳನ್ನು ರಾತ್ರಿ 11.30ರೊಳಗೆ ಮುಕ್ತಾಯಗೊಳಿಸಬೇಕು. ನಿಗದಿತ ಮಾರ್ಗ ಅಥವಾ ಸ್ಥಳವನ್ನು ಬದಲಾಯಿಸಿ
Aug 251 min read


ಬಿಜೆಪಿಗೆ ಆಘಾತ: ಕಾಂಗ್ರೆಸ್ ಸೇರಿದ ನೆರಿಯಾ ಮಾಜಿ ಗ್ರಾ.ಪಂ. ಸದಸ್ಯೆ ಮರಿಯಮ್ಮ
ಬೆಳ್ತಂಗಡಿ: ತಾಲೂಕಿನ ನೆರಿಯಾ ಗ್ರಾಮ ಪಂಚಾಯತ್ನ ಮಾಜಿ ಬಿಜೆಪಿ ಬೆಂಬಲಿತ ಸದಸ್ಯೆಯಾಗಿದ್ದ ಮರಿಯಮ್ಮ ಅವರು ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರು. ಪಕ್ಷದ ತತ್ವ, ಸಿದ್ಧಾಂತ ಹಾಗೂ ಜನಪರ ಕಾರ್ಯವೈಖರಿಯನ್ನು ಮೆಚ್ಚಿ ಅವರು ಈ ನಿರ್ಧಾರ ಕೈಗೊಂಡಿದ್ದಾರೆ. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರು ಮರಿಯಮ್ಮ ಅವರನ್ನು ಪಕ್ಷಕ್ಕೆ ಆತ್ಮೀಯವಾಗಿ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ರಕ್ಷಿತ್ ಶಿವರಾಂ, "ಕಾಂಗ್ರೆಸ್ ಅಭಿವೃದ್ಧಿ ಹಾಗೂ ಸಾಮಾಜಿಕ ನ್ಯಾಯಕ್ಕೆ ಆದ್ಯತೆ ನೀಡುವ ಪಕ್ಷವಾಗಿದೆ. ಮರಿಯಮ್ಮ ಅವರ ಸೇರ್ಪಡೆಯಿಂದ ನೆರಿಯಾ ಭಾಗದಲ್ಲಿ ಪಕ್ಷದ ಸಂಘಟನೆ ಇನ
Aug 251 min read


ಸುಳ್ಯದಲ್ಲಿ ಧರ್ಮಸ್ಥಳಕ್ಕೆ ಸೇರಿದ ಜಾಗದಲ್ಲಿ ಅಕ್ರಮ ಕಟ್ಟಡ ನಿರ್ಮಾಣ ಆರೋಪ; ವಿಹೆಚ್ಪಿ–ಬಜರಂಗದಳ ಸ್ಥಳ ಪರಿಶೀಲನೆ, ತೆರವು ಕಾರ್ಯಾಚರಣೆ
ಸುಳ್ಯ: ಆಲೆಟ್ಟಿ ಕ್ರಾಸ್ನ ಗುರುಂಪು ಬಳಿ ಧರ್ಮಸ್ಥಳಕ್ಕೆ ಸಂಬಂಧಿಸಿದ ಜಾಗದಲ್ಲಿ ಅನುಮತಿ ಇಲ್ಲದೆ ಕಟ್ಟಡ ನಿರ್ಮಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದೀಗ ಕಟ್ಟಡ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಗುರುಂಪು ಬಳಿಯ ಸರ್ವೇ ನಂಬರ್ 263-6ರ ಜಾಗದಲ್ಲಿ ಸ್ಥಳೀಯ ಅನ್ಯಮತೀಯ ವ್ಯಕ್ತಿಯೊಬ್ಬರು ಕೆಲವೇ ದಿನಗಳಲ್ಲಿ ಕಟ್ಟಡ ನಿರ್ಮಿಸಿ, ಗೋಡೆ ಹಾಗೂ ಕಬ್ಬಿಣದ ಛಾವಣಿ ಅಳವಡಿಸಿ ಬಾಡಿಗೆಗೆ ನೀಡಲು ಸಿದ್ಧತೆ ನಡೆಸಿದ್ದರು ಎನ್ನಲಾಗಿದೆ. ಈ ಕುರಿತು ಧರ್ಮಸ್ಥಳದ ಆಡಳಿತಕ್ಕೆ ಮಾಹಿತಿ ತಲುಪಿದ ಬಳಿಕ, ಕೆಲವು ದಿನಗಳ ಹಿಂದೆ ಧರ್ಮಸ್ಥಳದ ವ್ಯವಸ್ಥಾಪಕರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎನ
Aug 251 min read


ಪುತ್ತೂರು: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯ ವಿರುದ್ಧ ಪೋಕ್ಸೋ ಪ್ರಕರಣ ದಾಖಲು
ಪುತ್ತೂರು: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ದಕ್ಷಿಣ ಕನ್ನಡ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಗಸ್ಟ್ 23ರ ರಾತ್ರಿ ಕಾರ್ಯಕ್ರಮವೊಂದರಿಂದ ಬಾಲಕಿಯನ್ನು ಮನೆಗೆ ತಲುಪಿಸುವ ನೆಪದಲ್ಲಿ ಆರೋಪಿ ಅದ್ದು ಪಡೀಲ್ ತನ್ನ ದ್ವಿಚಕ್ರ ವಾಹನದಲ್ಲಿ ಕರೆದೊಯ್ಯುವಾಗ ದಾರಿಮಧ್ಯೆ ಈ ಕೃತ್ಯ ಎಸಗಿದ್ದಾನೆ ಎಂದು ದೂರಲ್ಲಿ ತಿಳಿಸಲಾಗಿದೆ. ಬಾಲಕಿಯ ತಾಯಿ ನೀಡಿದ ದೂರಿನನ್ವಯ ಪೊಲೀಸರು ಬಿಎನ್ಎಸ್ ಕಲಂ 75 ಹಾಗೂ ಪೋಕ್ಸೋ ಕಾಯ್ದೆಯಡಿ (ಅ.ಕ್ರ. 46/2026) ಪ್ರಕರಣ ದಾಖಲಿಸಿಕೊಂಡು ಆರೋಪಿಯ ಪತ್ತೆಗೆ ತನಿಖೆ ಮುಂದುವರಿಸಿದ್ದಾರೆ.
Aug 241 min read


MRPLನಲ್ಲಿ 26 ಅಸಿಸ್ಟೆಂಟ್ ಇಂಜಿನಿಯರ್ ಹುದ್ದೆಗಳ ನೇಮಕಾತಿ: ಆಕರ್ಷಕ ವೇತನ, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಕೇಂದ್ರ ಸರ್ಕಾರದ ಅಧೀನದಲ್ಲಿರುವ ಮಂಗಳೂರು ರಿಫೈನರಿ ಅಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ಸಂಸ್ಥೆಯು ಮ್ಯಾನೇಜ್ಮೆಂಟ್ ಕೇಡರ್ನ (ಇ-2 ಗ್ರೇಡ್) ಅಸಿಸ್ಟೆಂಟ್ ಇಂಜಿನಿಯರ್ ಹುದ್ದೆಗಳ ಭರ್ತಿಗೆ ಅಧಿಸೂಚನೆ (Advt. No. 94/2026) ಹೊರಡಿಸಿದೆ. ಕೆಮಿಕಲ್, ಮೆಕ್ಯಾನಿಕಲ್ ಹಾಗೂ ಎಲೆಕ್ಟ್ರಿಕಲ್ ವಿಭಾಗಗಳಲ್ಲಿ ಒಟ್ಟು 26 ಹುದ್ದೆಗಳು ಲಭ್ಯವಿದ್ದು, ಗೇಟ್-2026 (GATE 2026) ಸ್ಕೋರ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಖಾಲಿ ಹುದ್ದೆಗಳಲ್ಲಿ ಭಾಗ 'ಎ' ಅಡಿಯಲ್ಲಿ ಮೆಕ್ಯಾನಿಕಲ್ (08) ಮತ್ತು ಎಲೆಕ್ಟ್ರಿಕಲ್ (03) ಹುದ್ದೆಗಳನ್ನು ಎಸ್ಸಿ, ಎಸ್
Aug 241 min read


ಉಡುಪಿ, ದ.ಕ. ಜಿಲ್ಲೆಯಲ್ಲಿ ನಾಳೆ (ಆಗಸ್ಟ್ 25) ಈದ್ ಮಿಲಾದ್ ಸಾರ್ವತ್ರಿಕ ರಜೆ ಘೋಷಣೆ
ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಈ ಹಿಂದೆ ನಿಗದಿಯಾಗಿದ್ದ ದಿನಾಂಕ 26-08-2026ರ ಬದಲಾಗಿ, ನಾಳೆ ಅಂದರೆ ದಿನಾಂಕ 25-08-2026ರ ಮಂಗಳವಾರದಂದು ಸಾರ್ವತ್ರಿಕ ರಜೆಯನ್ನು ಘೋಷಿಸಿ ಜಿಲ್ಲಾಡಳಿತ ಅಧಿಕೃತ ಆದೇಶ ಹೊರಡಿಸಿದೆ. ನಿರೀಕ್ಷಿತ ಚಂದ್ರ ದರ್ಶನದ ಆಧಾರದ ಮೇಲೆ ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 25 ರಂದೇ ಹಬ್ಬವನ್ನು ಆಚರಿಸಲಾಗುತ್ತಿರುವುದರಿಂದ ಸ್ಥಳೀಯ ಮುಸ್ಲಿಂ ಒಕ್ಕೂಟಗಳು ಮತ್ತು ಜಿಲ್ಲಾಧಿಕಾರಿಗಳ ಕೋರಿಕೆಯಂತೆ ಸರ್ಕಾರವು ಈ ಬದಲಾವಣೆಗೆ ಅಸ್ತು ಎಂದಿದೆ. ಸರ್ಕಾರದ ಆದೇಶದನ್ವಯ ಆಗಸ್ಟ್ 25ರಂದು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ
Aug 241 min read


ಪುತ್ತೂರು ದರ್ಬೆ ಗಲಾಟೆ: ಹಿಂದೂ ಜಾಗರಣ ವೇದಿಕೆಯಿಂದ ನಾಳೆ ಸ್ವಯಂಪ್ರೇರಿತ ಬಂದ್ಗೆ ಕರೆ
ಪುತ್ತೂರು: ನಗರದ ದರ್ಬೆಯಲ್ಲಿ ವರ್ತಕರ ಮೇಲೆ ನಡೆದ ದಾಳಿಯನ್ನು ಖಂಡಿಸಿ ಹಾಗೂ ಪೊಲೀಸ್ ಇಲಾಖೆಯ ವೈಫಲ್ಯವನ್ನು ಆರೋಪಿಸಿ ಹಿಂದೂ ಜಾಗರಣ ವೇದಿಕೆ ಆಗಸ್ಟ್ 25ರಂದು ಪುತ್ತೂರು ನಗರದಲ್ಲಿ ಸ್ವಯಂಪ್ರೇರಿತ ಬಂದ್ಗೆ ಕರೆ ನೀಡಿದೆ. ಘಟನೆಯನ್ನು ಖಂಡಿಸಿ ವ್ಯಾಪಾರಿಗಳು ಹಾಗೂ ಸಾರ್ವಜನಿಕರು ಆಗಸ್ಟ್ 25ರಂದು ಸ್ವಯಂಪ್ರೇರಿತವಾಗಿ ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡಿ ಪ್ರತಿಭಟನೆಗೆ ಬೆಂಬಲ ನೀಡುವಂತೆ ಹಿಂದೂ ಜಾಗರಣ ವೇದಿಕೆ ಮನವಿ ಮಾಡಿದೆ. ದರ್ಬೆ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಂಘಟನೆ ಆಗ್ರಹಿಸಿದೆ.
Aug 241 min read


ಉಡುಪಿ: ಹೆತ್ತ ತಂದೆ-ತಾಯಿಯನ್ನೇ ಸುತ್ತಿಗೆಯಿಂದ ಹೊಡೆದು ಕೊಂದ ಮಗ!
ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಬೈಕಾಡಿ ಗ್ರಾಮದಲ್ಲಿ ಅತ್ಯಂತ ಭೀಕರ ಹಾಗೂ ಆಘಾತಕಾರಿ ಘಟನೆಯೊಂದು ನಡೆದಿದೆ. ಬೈಕಾಡಿಯ ಗಾಂಧಿನಗರ ನಿವಾಸಿಗಳಾದ ಮೆಹಬೂಬ್ ಹಾಗೂ ಸಂಶದ್ ಬೇಗಂ ದಂಪತಿಯನ್ನು ಅವರ ಸ್ವಂತ ಮಗನೇ ಸುತ್ತಿಗೆಯಿಂದ ಕ್ರೂರವಾಗಿ ಹೊಡೆದು ಕೊಲೆ ಮಾಡಿದ್ದಾನೆ. ಕೊಲೆ ಮಾಡಿದ ಆರೋಪಿಯನ್ನು 31 ವರ್ಷದ ಶಾಹಿದ್ ಅಲಿ ಎಂದು ಗುರುತಿಸಲಾಗಿದೆ. ಮನೆಯಲ್ಲಿದ್ದ ಸುತ್ತಿಗೆಯಿಂದ ಹೆತ್ತವರ ತಲೆಗೆ ತೀವ್ರವಾಗಿ ಹಲ್ಲೆ ನಡೆಸಿದ್ದರಿಂದ, ತಂದೆ ಮತ್ತು ತಾಯಿ ಇಬ್ಬರೂ ಸ್ಥಳದಲ್ಲೇ ರಕ್ತದ ಮಡುವಿನಲ್ಲಿ ಕೊನೆಯುಸಿರೆಳೆದಿದ್ದಾರೆ. ಘಟನೆ ತಿಳಿದ ತಕ್ಷಣ ಬ್ರಹ್ಮಾವರ ಠಾಣೆಯ ಪೊಲೀಸರು ಸ್ಥಳಕ್ಕೆ ದೌಡಾಯಿಸ
Aug 241 min read


ಕಬಕ ಪುತ್ತೂರು ನಿಲ್ದಾಣದಲ್ಲಿ ವಂದೇ ಭಾರತ್ ನಿಲುಗಡೆಗೆ ಆಗ್ರಹ: ಸಹಿ ಅಭಿಯಾನಕ್ಕೆ ಭರ್ಜರಿ ಬೆಂಬಲ
ಪ್ರಸ್ತಾವಿತ ಮಂಗಳೂರು-ಬೆಂಗಳೂರು ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಕಬಕ ಪುತ್ತೂರು ರೈಲು ನಿಲ್ದಾಣದಲ್ಲಿ ನಿಲುಗಡೆ ನೀಡಬೇಕು ಎಂದು ಆಗ್ರಹಿಸಿ ಆರಂಭಿಸಲಾದ ಆನ್ಲೈನ್ ಸಹಿ ಅಭಿಯಾನಕ್ಕೆ ಸಾರ್ವಜನಿಕರಿಂದ ಭರ್ಜರಿ ಸ್ಪಂದನೆ ವ್ಯಕ್ತವಾಗಿದೆ. ಸ್ಥಳೀಯ ಪ್ರಯಾಣಿಕರ ಹಿತದೃಷ್ಟಿಯಿಂದ ಆರಂಭಗೊಂಡ ಈ ಅಭಿಯಾನದಲ್ಲಿ ಸಾವಿರಾರು ಜನರು ಉತ್ಸಾಹದಿಂದ ಭಾಗವಹಿಸಿ ಸಹಿ ಹಾಕುವ ಮೂಲಕ ತಮ್ಮ ಬೆಂಬಲ ಸೂಚಿಸುತ್ತಿದ್ದಾರೆ. ಈ ಅಭಿಯಾನವು ಸಾರ್ವಜನಿಕ ವಲಯದಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಭಾನುವಾರ ಸಂಜೆಯ ವೇಳೆಗೆ 2,500ಕ್ಕೂ ಅಧಿಕ ಮಂದಿ ಸಹಿ ಮಾಡಿ ತಮ್ಮ ಆಗ್ರಹವನ್ನು ರೈಲ್ವೆ ಇಲಾಖೆಗೆ ಮುಟ್ಟಿಸುವ ಪ
Aug 241 min read


‘ಬುದ್ಧಿವಂತರ ಜಿಲ್ಲೆಗೆ ಕೆಟ್ಟ ಹೆಸರು ತರಬೇಡಿ’: ಪುತ್ತೂರು ಶಾಂತಿ ಸಭೆಯಲ್ಲಿ ಎಸಿ ಸ್ಟೆಲ್ಲಾ ವರ್ಗೀಸ್ ಕರೆ
ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆಯು ಪ್ರಕರಣಗಳನ್ನು ದಾಖಲಿಸಿಕೊಂಡು ಅತ್ಯಂತ ನಿಷ್ಪಕ್ಷಪಾತ ಹಾಗೂ ಪಾರದರ್ಶಕ ತನಿಖೆ ನಡೆಸುತ್ತಿದೆ ಎಂದು ಪುತ್ತೂರು ಡಿವೈಎಸ್ಪಿ ಪ್ರಮೋದ್ ಕುಮಾರ್ ತಿಳಿಸಿದ್ದಾರೆ. ಪುತ್ತೂರು ತಾಲೂಕು ಆಡಳಿತ ಹಾಗೂ ಪೊಲೀಸ್ ಇಲಾಖೆಯ ವತಿಯಿಂದ ಕೋ-ಆಪರೇಟಿವ್ ಟೌನ್ ಬ್ಯಾಂಕ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಶಾಂತಿ ಸಭೆಯಲ್ಲಿ ಅವರು ಮಾತನಾಡಿದರು. ಹಬ್ಬಗಳ ಸಂದರ್ಭದಲ್ಲಿ ಮನಸ್ಸಿನಲ್ಲಿ ಯಾವುದೇ ದ್ವೇಷವಿಟ್ಟುಕೊಳ್ಳದೆ, ಎಲ್ಲರೂ ಕಾನೂನಿನ ಮೇಲೆ ನಂಬಿಕೆಯಿಟ್ಟು ಶಾಂತಿ ಮತ್ತು ಸೌಹಾರ್ದತೆಯಿಂದ ಆಚರಿಸಬೇಕು ಎಂದು ಅವರು ಕರೆ ನೀಡಿದರು. ಇತ್ತೀಚಿನ ಘಟನೆಯ ಹಿನ್ನೆಲೆಯಲ್ಲಿ ಜಿಲ್
Aug 241 min read


ಕೋಳಿ ಫಾರ್ಮ್ ಹೆಸರಿನಲ್ಲಿ ಡ್ರಗ್ಸ್ ತಯಾರಿಕೆ: ಮಹಾರಾಷ್ಟ್ರದಲ್ಲಿ ಇಬ್ಬರು ಕನ್ನಡಿಗರು ಸೇರಿ ಏಳು ಮಂದಿಯ ಬಂಧನ
ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಚಂದಗಡ ತಾಲೂಕಿನ ರಾಜಗೋಳಿ ಗ್ರಾಮದಲ್ಲಿ ಕೋಳಿ ಫಾರ್ಮ್ ಹೆಸರಿನಲ್ಲಿ ಅಕ್ರಮವಾಗಿ ನಡೆಸಲಾಗುತ್ತಿದ್ದ ಎಂಡಿಎಂಎ (MDMA) ಮಾದಕ ವಸ್ತು ತಯಾರಿಕಾ ಫ್ಯಾಕ್ಟರಿ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಮಹಾರಾಷ್ಟ್ರ ಮಾದಕ ವಸ್ತು ವಿರೋಧಿ ಟಾಸ್ಕ್ ಫೋರ್ಸ್ (Anti-Narcotics Task Force) ನಡೆಸಿದ ಈ ಭಾರಿ ಕಾರ್ಯಾಚರಣೆಯಲ್ಲಿ ಬೆಳಗಾವಿಯ ಇಬ್ಬರು ಆರೋಪಿಗಳು ಸೇರಿದಂತೆ ಒಟ್ಟು ಏಳು ಜನರನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳಿಂದ ಸುಮಾರು 1.13 ಕೋಟಿ ರೂಪಾಯಿ ಮೌಲ್ಯದ 208 ಗ್ರಾಂ ತೂಕದ ಎಂಡಿಎಂಎ ಡ್ರಗ್ಸ್, ಮಾದಕ ದ್ರವ್ಯ ತಯಾರಿಕೆಗೆ ಬಳಸುತ್ತಿದ್ದ ರಾಸಾಯನಿಕ ವಸ್
Aug 241 min read


ಪುತ್ತೂರು: ಡಿಜಿಟಲ್ ಸೇವಾ ಕೇಂದ್ರದಲ್ಲಿ ದಾಖಲೆ ವಿವಾದಕ್ಕೆ ಗಲಾಟೆ; ಓರ್ವನ ಬಂಧನ, ಮೂರು ಪ್ರಕರಣ ದಾಖಲು
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ದರ್ಬೆ ಪ್ರದೇಶದಲ್ಲಿರುವ ಡಿಜಿಟಲ್ ಸೇವಾ ಕೇಂದ್ರವೊಂದರಲ್ಲಿ ದಾಖಲೆಗಳಿಗೆ ಸಂಬಂಧಿಸಿದ ವಿವಾದ ವಿಕೋಪಕ್ಕೆ ತಿರುಗಿ ಎರಡು ಗುಂಪುಗಳ ನಡುವೆ ಭೀಕರ ಗಲಾಟೆ ನಡೆದಿದೆ. ತಾಂತ್ರಿಕ ದೋಷದಿಂದ ಕೆಲವು ಪ್ರಮುಖ ದಾಖಲೆಗಳು ಹಾನಿಗೊಳಗಾದ ವಿಚಾರವಾಗಿ ಆರಂಭವಾದ ವಾಗ್ವಾದವು ಅಂತಿಮವಾಗಿ ಪರಸ್ಪರ ಹಲ್ಲೆ ಮತ್ತು ಕ್ರಿಮಿನಲ್ ಬೆದರಿಕೆಗೆ ಕಾರಣವಾಗಿದೆ. ಘಟನೆಗೆ ಸಂಬಂಧಿಸಿದಂತೆ ಹಲ್ಲೆಗೊಳಗಾದ ಮಹಿಳೆಯೊಬ್ಬರು ನೀಡಿದ ದೂರಿನನ್ವಯ, ಹಾನಿಗೊಳಗಾದ ದಾಖಲೆಗಳನ್ನು ಸರಿಪಡಿಸಿಕೊಡಲು ಅಥವಾ ₹300 ವೆಚ್ಚ ಪಾವತಿಸಲು ಕೋರಿದಾಗ ಅಂಗಡಿ ಮಾಲೀಕರು ತಮ್ಮ ಮೇಲೆ ಹಲ್ಲೆ ನಡೆಸಿ ಬೆದರಿಕೆ ಹ
Aug 231 min read


ಮುಂಬೈನಲ್ಲಿ ಗಣೇಶ ಮೂರ್ತಿ ಕುಸಿದು ದುರಂತ: ಇಬ್ಬರು ಸಾವು, ಐವರಿಗೆ ಗಾಯ
ಮುಂಬೈನ ಭುಲೇಶ್ವರ ಪ್ರದೇಶದ ಜೈ ಅಂಬೆ ಚೌಕ್ನಲ್ಲಿ ಶನಿವಾರ ರಾತ್ರಿ 'ಭುಲೇಶ್ವರಚ ರಾಜ' ಗಣೇಶ ಮೂರ್ತಿಯ ಆಗಮನ ಮೆರವಣಿಗೆಯ ವೇಳೆ 22 ಅಡಿ ಎತ್ತರದ ಬೃಹತ್ ವಿಗ್ರಹ ಏಕಾಏಕಿ ಕುಸಿದು ಬಿದ್ದು ಭೀಕರ ಅಪಘಾತ ಸಂಭವಿಸಿದೆ. ಮೆರವಣಿಗೆ ವಾಹನದಲ್ಲಿ ವಿಗ್ರಹವನ್ನು ಭದ್ರಪಡಿಸಿದ್ದ ಬೋಲ್ಟ್ಗಳಲ್ಲಿ ತಾಂತ್ರಿಕ ದೋಷ ಉಂಟಾಗಿದ್ದೇ ಈ ದುರಂತಕ್ಕೆ ಮುಖ್ಯ ಕಾರಣ ಎಂದು ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (BMC) ತಿಳಿಸಿದೆ. ಈ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸಂಕೇತ್ ನೆವ್ಶೆ (33) ಮತ್ತು ಬ್ರಿಜೇಶ್ ಹೇಮಂತ್ ಜೋಶಿ (30) ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಗಾಯಗೊಂಡ
Aug 231 min read


500 ಸರ್ಕಾರಿ ಶಾಲೆಗಳು ಕೆಪಿಎಸ್ಗಳಾಗಿ ಅಭಿವೃದ್ಧಿ: ಎಡಿಬಿಯಿಂದ ₹1,750 ಕೋಟಿ ನೆರವು
ಬೆಂಗಳೂರು: ರಾಜ್ಯದ 500 ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ (ಕೆಪಿಎಸ್) ಅಭಿವೃದ್ಧಿಪಡಿಸುವ ಮಹತ್ವಾಕಾಂಕ್ಷಿ ಯೋಜನೆಗೆ ಏಷ್ಯನ್ ಡೆವಲಪ್ಮೆಂಟ್ ಬ್ಯಾಂಕ್ (ಎಡಿಬಿ) ₹1,750 ಕೋಟಿ ಆರ್ಥಿಕ ನೆರವು ನೀಡಲಿದೆ. ಈ ಸಂಬಂಧ ರಾಜ್ಯ ಸರ್ಕಾರ ಮತ್ತು ಎಡಿಬಿ ನಡುವೆ ಮಹತ್ವದ ಒಪ್ಪಂದಕ್ಕೆ ಶುಕ್ರವಾರ ವಿಧಾನಸೌಧದಲ್ಲಿ ಸಹಿ ಹಾಕಲಾಯಿತು. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಸಮ್ಮುಖದಲ್ಲಿ ಶಾಲಾ ಶಿಕ್ಷಣ ಇಲಾಖೆ ಹಾಗೂ ಎಡಿಬಿ ಅಧಿಕಾರಿಗಳು ಒಪ್ಪಂದಕ್ಕೆ ಸಹಿ ಹಾಕಿದರು. ಮುಂದಿನ ನಾಲ್ಕು ವರ್ಷಗಳಲ್ಲಿ ರಾಜ್ಯ ಸರ್ಕಾರ ಒಟ್ಟು ₹2,500 ಕೋಟಿ ವ
Aug 221 min read


ರಾಜ್ಯದಲ್ಲಿ ಕೃತಕ ಪನ್ನೀರ್ಗೆ ಒಂದು ವರ್ಷದ ನಿಷೇಧ: ಆಹಾರ ಇಲಾಖೆ ಮಹತ್ವದ ಆದೇಶ
ಬೆಂಗಳೂರು: ರಾಜ್ಯದಲ್ಲಿ ಕೃತಕ ಪನ್ನೀರ್ ಬಳಕೆ ಹಾಗೂ ಮಾರಾಟಕ್ಕೆ ಒಂದು ವರ್ಷದವರೆಗೆ ನಿಷೇಧ ಹೇರಲಾಗಿದೆ. ಗ್ರಾಹಕರಿಗೆ ಕೃತಕ ಪನ್ನೀರ್ ನೀಡಲಾಗುತ್ತಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಈ ಕ್ರಮ ಕೈಗೊಂಡಿದೆ. ಹೋಟೆಲ್, ರೆಸ್ಟೋರೆಂಟ್ ಸೇರಿದಂತೆ ಆಹಾರ ವಲಯದಲ್ಲಿ ಪನ್ನೀರ್ ಬಳಸುವವರು ಕೇವಲ ಗುಣಮಟ್ಟದ ಹಾಲು ಹಾಗೂ ಹಾಲಿನ ಉತ್ಪನ್ನಗಳಿಂದ ತಯಾರಿಸಿದ ನೈಸರ್ಗಿಕ ಪನ್ನೀರ್ನ್ನೇ ಬಳಸಬೇಕು ಎಂದು ಇಲಾಖೆ ಸೂಚಿಸಿದೆ. ಕೃತಕ ಪನ್ನೀರ್ ಎಂದರೆ ನೈಸರ್ಗಿಕ ಹಾಲಿನ ಪನ್ನೀರ್ಗೆ ಬದಲಾಗಿ ಸಸ್ಯಜನ್ಯ ಎಣ್ಣೆ, ಪಿಷ್ಟ, ಕೃತಕ ಬಣ್ಣಗಳು ಅಥವಾ ಇತರೆ ಪದಾರ್ಥಗಳನ್ನ
Aug 221 min read


ಪೋಷಕರಿಗೆ ದೂರು ನೀಡುವ ಭಯ: ತರಗತಿ ಶಿಕ್ಷಕಿಯನ್ನೇ ಸಂಚು ರೂಪಿಸಿ ಕೊಂದ 10ನೇ ತರಗತಿ ವಿದ್ಯಾರ್ಥಿಗಳು!
ತೆಲಂಗಾಣದ ನಲ್ಗೊಂಡ ಜಿಲ್ಲೆಯ ಕೊಂಡಮಲ್ಲೇಪಲ್ಲಿಯಲ್ಲಿ ದುಬಾರಿ ಜೀವನಶೈಲಿಯ ಆಸೆಗೆ ಬಿದ್ದ ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳು, ತಮ್ಮ ಬಳಿಯಿದ್ದ ಅಕ್ರಮ ಹಣ ಮತ್ತು ಮೊಬೈಲ್ ವಿಚಾರವನ್ನು ಪೋಷಕರಿಗೆ ತಿಳಿಸುವುದಾಗಿ ಎಚ್ಚರಿಸಿದ ರೂಪಾ ರೆಡ್ಡಿ ಎಂಬ ಶಿಕ್ಷಕಿಯನ್ನು ಭೀಕರವಾಗಿ ಕೊಲೆ ಮಾಡಿದ್ದಾರೆ. ಹಾಸ್ಟೆಲ್ ತಪಾಸಣೆ ವೇಳೆ ಸಿಕ್ಕಿಬಿದ್ದಿದ್ದ ವಿದ್ಯಾರ್ಥಿಗಳು, ಶಿಕ್ಷಕಿಯ ವಿರುದ್ಧ ದ್ವೇಷ ಸಾಧಿಸಿ ವಾರದ ಹಿಂದೆಯೇ ಕೊಲೆಗೆ ಸಂಚು ರೂಪಿಸಿದ್ದರು. ಚಾಕು, ಮುಖವಾಡ ಧರಿಸಿ ಮನೆಯೊಳಗೆ ನುಗ್ಗಿ ಈ ಕೃತ್ಯ ಎಸಗಿದ್ದಾರೆ. ಕೊನೆಯದಾಗಿ ಶಿಕ್ಷಕಿ ಫೋನ್ನಲ್ಲಿ ಮಾತನಾಡುತ್ತಿದ್ದಾಗ 'ಬಾಬು' ಎಂದು ಉಚ್ಚರಿಸಿ
Aug 201 min read
Archive
bottom of page



