top of page
News Articles
Sathyapatha News Plus


ಹೋರ್ಮುಝ್ ಜಲಸಂಧಿಯಲ್ಲಿ ಉದ್ವಿಗ್ನತೆ: ಅನುಮತಿ ಇಲ್ಲದೆ ಸಾಗಿದ ತೈಲ ಹಡಗು ಮೇಲೆ ದಾಳಿ
ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಉದ್ವಿಗ್ನ ಪರಿಸ್ಥಿತಿಯ ನಡುವೆ ಹೋರ್ಮುಝ್ ಜಲಸಂಧಿಯಲ್ಲಿ ಮತ್ತೊಂದು ಆತಂಕಕಾರಿ ಘಟನೆ ನಡೆದಿದೆ. ಅನುಮತಿ ಇಲ್ಲದೆ ಜಲಸಂಧಿ ಮೂಲಕ ಸಾಗಲು ಯತ್ನಿಸಿದ ತೈಲ ಹಡಗು ಮೇಲೆ ದಾಳಿ ನಡೆಸಲಾಗಿದೆ ಎಂದು ವರದಿಗಳು ತಿಳಿಸಿವೆ. ಮಾಹಿತಿಯ ಪ್ರಕಾರ, ಇರಾನ್ ತನ್ನ ಸಮುದ್ರ ಗಡಿ ನಿಯಂತ್ರಣವನ್ನು ಕಠಿಣಗೊಳಿಸಿದ್ದು, ಅನುಮತಿ ಇಲ್ಲದೆ ಪ್ರವೇಶಿಸುವ ಹಡಗುಗಳ ವಿರುದ್ಧ ಕ್ರಮ ಕೈಗೊಳ್ಳುತ್ತಿದೆ. ಇತ್ತೀಚಿನ ದಿನಗಳಲ್ಲಿ ಹಲವಾರು ಹಡಗುಗಳು ಪರಿಶೀಲನೆಗೆ ಒಳಗಾಗಿದ್ದು, ಕೆಲವು ಹಡಗುಗಳು ದಾಳಿಗೂ ಗುರಿಯಾಗಿವೆ ಎನ್ನಲಾಗಿದೆ. ಹೋರ್ಮುಝ್ ಜಲಸಂಧಿ ವಿಶ್ವದ ಪ್ರಮುಖ ತೈಲ ಸಾಗಾಟ ಮಾರ್ಗವಾ
Mar 271 min read


ದೇಶದಲ್ಲಿ ಲಾಕ್ಡೌನ್ ವದಂತಿ: ಕೇಂದ್ರ ಸರ್ಕಾರದಿಂದ ಮಹತ್ವದ ಸ್ಪಷ್ಟೀಕರಣ
ಮಧ್ಯಪ್ರಾಚ್ಯದ ಯುದ್ಧದ ಹಿನ್ನೆಲೆಯಲ್ಲಿ ದೇಶಾದ್ಯಂತ ಮತ್ತೆ ಲಾಕ್ಡೌನ್ ಜಾರಿಯಾಗಲಿದೆ ಎಂಬ ವದಂತಿಗಳನ್ನು ಕೇಂದ್ರ ಸರ್ಕಾರ ಅಧಿಕೃತವಾಗಿ ತಳ್ಳಿಹಾಕಿದೆ. ಪ್ರಧಾನಿ ಮೋದಿ ಅವರು ಇತ್ತೀಚೆಗೆ ನೀಡಿದ್ದ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದ್ದು, ಸದ್ಯಕ್ಕೆ ಅಂತಹ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಸ್ಪಷ್ಟಪಡಿಸಿದ್ದಾರೆ. ಜಾಗತಿಕ ಬಿಕ್ಕಟ್ಟಿನಿಂದ ಇಂಧನ ಮತ್ತು ಅಗತ್ಯ ವಸ್ತುಗಳ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಸರ್ಕಾರ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ ಎಂದು ಸಚಿವರು ತಿಳಿಸಿದ್ದಾರೆ. ಸಾರ್ವಜನಿಕರು ಇಂತಹ ಸುಳ್ಳು ಸುದ್ದಿಗಳ
Mar 271 min read


ಇಂದೋರ್ನಲ್ಲಿ ಭೀಕರ ಘಟನೆ: ಇನ್ಫೋಸಿಸ್ ಮಹಿಳಾ ಇಂಜಿನಿಯರ್ ಕಾರಿನಿಂದ ಹೊಡೆದು ಕೊಲೆ
ಮಧ್ಯಪ್ರದೇಶದ ಇಂದೋರ್ ನಗರದಲ್ಲಿ ಬುಧವಾರ ರಾತ್ರಿ ಸಂಭವಿಸಿದ ಭೀಕರ ಘಟನೆಯಲ್ಲಿ ಇನ್ಫೋಸಿಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ಸಾಫ್ಟ್ವೇರ್ ಇಂಜಿನಿಯರ್ ಶಾಂಪಾ ಪಾಠಕ್ ಪಾಂಡೆ (Shampa Pathak Pandey) ಅವರು ಕಾರು ಹರಿದು ಸಾವನ್ನಪ್ಪಿದ್ದಾರೆ. ಲಸೂಡಿಯಾ ಪೊಲೀಸ್ ಠಾಣಾ ವ್ಯಾಪ್ತಿಯ ಶಿವ ವಾಟಿಕಾ ಸಮೃದ್ಧಿ ಎಂಕ್ಲೇವ್ ಅಪಾರ್ಟ್ಮೆಂಟ್ನಲ್ಲಿ ರಾತ್ರಿ ಸುಮಾರು 10:30ರ ವೇಳೆ ಈ ಘಟನೆ ನಡೆದಿದೆ. ಅಪಾರ್ಟ್ಮೆಂಟ್ ನಿವಾಸಿಗಳು ಮತ್ತು ಪೆಂಟ್ಹೌಸ್ ಮಾಲೀಕ ಕುಲದೀಪ್ ಚೌಧರಿ ಹಾಗೂ ಅವರ 18 ವರ್ಷದ ಮಗ ಮೋಹಿತ್ ಚೌಧರಿ ನಡುವೆ ಗಲಾಟೆ ನಡೆದಿತ್ತು. ಪೆಂಟ್ಹೌಸ್ ಅನ್ನು Airbnb ಮೂಲಕ ಹೊರಗಿನ
Mar 271 min read


ಐಪಿಎಲ್ ಸಂಭ್ರಮ: ನಾಳೆಯಿಂದ ಕ್ರಿಕೆಟ್ ಹಬ್ಬ ಆರಂಭ
19ನೇ ಆವೃತ್ತಿಯ ಐಪಿಎಲ್ ಕ್ರಿಕೆಟ್ ಸರಣಿಯು ಮಾರ್ಚ್ 28ರಿಂದ ಆರಂಭವಾಗಲಿದ್ದು, ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಆರ್ಸಿಬಿ ಮತ್ತು ಸನ್ರೈಸರ್ಸ್ ಹೈದರಾಬಾದ್ ತಂಡಗಳು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಲಿವೆ. ಎರಡು ತಿಂಗಳ ಕಾಲ ನಡೆಯಲಿರುವ ಈ ಕ್ರೀಡಾಕೂಟದ ಪಂದ್ಯಗಳು ಪ್ರತಿದಿನ ಸಂಜೆ 7:30ಕ್ಕೆ ಶುರುವಾಗಲಿವೆ. ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಸಿಸಿಐ ವೇಳಾಪಟ್ಟಿಯನ್ನು ಎರಡು ಹಂತಗಳಲ್ಲಿ ಬಿಡುಗಡೆ ಮಾಡಿದೆ. ಒಟ್ಟು 70 ಪಂದ್ಯಗಳು ನಡೆಯಲಿದ್ದು, ಮೊದಲ ಹಂತದ 20 ಪಂದ್ಯಗಳ ನಂತರ, ಏಪ್ರಿಲ್ 13ರಿಂದ ಮೇ 24ರವರೆಗೆ ಉಳಿದ 50 ಪಂದ್ಯಗಳು ಜರುಗಲಿವೆ. ಕ್ರ
Mar 271 min read


ಇಂದಿನ (ಮಾರ್ಚ್ 27) ಚಿನ್ನದ ದರ
ಇಂದು (ಮಾರ್ಚ್ 27, 2026) ಕರ್ನಾಟಕದಲ್ಲಿ 22 ಕ್ಯಾರೆಟ್ ಮತ್ತು 24 ಕ್ಯಾರೆಟ್ ಚಿನ್ನದ ದರಗಳು ಈ ಕೆಳಗಿನಂತಿವೆ: 24 ಕ್ಯಾರೆಟ್ ಚಿನ್ನ (ಶುದ್ಧ ಚಿನ್ನ): 1 ಗ್ರಾಂಗೆ ₹14,471 ರಿಂದ ₹14,621 ವರೆಗೆ. 10 ಗ್ರಾಂ ಬೆಲೆ ಸುಮಾರು ₹1,44,710 ರಿಂದ ₹1,46,210 ಆಗಿದೆ. 22 ಕ್ಯಾರೆಟ್ ಚಿನ್ನ (ಆಭರಣ ಚಿನ್ನ): 1 ಗ್ರಾಂಗೆ ₹13,265 ರಿಂದ ₹13,555 ವರೆಗೆ. 10 ಗ್ರಾಂ ಬೆಲೆ ಸುಮಾರು ₹1,32,650 ರಿಂದ ₹1,35,550 ಆಗಿದೆ. 18 ಕ್ಯಾರೆಟ್ ಚಿನ್ನ: 1 ಗ್ರಾಂಗೆ ಸುಮಾರು ₹10,853 ಆಗಿದೆ.
Mar 271 min read


ತೊಕ್ಕೊಟ್ಟು: ರೌಡಿಶೀಟರ್ ಟ್ಯಾಬ್ಲೆಟ್ ಆರೀಫ್ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ
ಮಂಗಳೂರಿನ ತೊಕ್ಕೊಟ್ಟು ಫ್ಲೈ ಓವರ್ ಮೇಲೆ ಇಂದು ನಸುಕಿನ ಜಾವ ಭೀಕರ ಕೊಲೆಯೊಂದು ನಡೆದಿದೆ. ಬಂದರು ಪೊಲೀಸ್ ಠಾಣೆಯ ರೌಡಿಶೀಟರ್ ಆರೀಫ್ ಹುಸೇನ್ (42) ಯಾನೆ 'ಟ್ಯಾಬ್ಲೆಟ್ ಆರೀಫ್' ಎಂಬಾತನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬಲಿ ಪಡೆದಿದ್ದಾರೆ. ಬೆಳಗ್ಗೆ 3:30ರ ಸುಮಾರಿಗೆ ಈ ಘಟನೆ ನಡೆದಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಮೃತ ಆರೀಫ್ ಮೀನು ವ್ಯಾಪಾರಿಯಾಗಿದ್ದು, ಇಂದು ಮುಂಜಾನೆ ಬುಲೆಟ್ ಬೈಕಿನಲ್ಲಿ ಧಕ್ಕೆಯ ಕಡೆಗೆ ತೆರಳುತ್ತಿದ್ದಾಗ ಈ ದಾಳಿ ನಡೆದಿದೆ. ಫ್ಲೈ ಓವರ್ ಮೇಲೇರುತ್ತಿದ್ದಂತೆ ಅಡ್ಡಗಟ್ಟಿದ ಹಂತಕರು ಆತನ ಮೇಲೆ ಮನಸೋಇಚ್ಛೆ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಹಳ
Mar 271 min read


ಮಂಗಳೂರು ಶಾಕ್: ಫ್ಲೈಓವರ್ ಮೇಲೆ ದಾಳಿ – ‘ಟಾಬ್ಲೆಟ್ ಆರಿಫ್’ ಭೀಕರ ಹತ್ಯೆ!
ಮಂಗಳೂರು ನಗರದ ಹೊರವಲಯದ ತೊಕ್ಕೊಟ್ಟು ಫ್ಲೈಓವರ್ ಮೇಲ್ಬಾಗದಲ್ಲಿ ಶುಕ್ರವಾರ ಬೆಳಿಗ್ಗೆ ವ್ಯಕ್ತಿಯೋರ್ವನನ್ನು ಮಾರಕಾಸ್ತ್ರಗಳಿಂದ ಕಡಿದು ಹತ್ಯೆ ಮಾಡಿರುವ ಘಟನೆ ನಡೆದಿದೆ. Ad ಮೃತರನ್ನು ಮುಳ್ಳುಗುಡ್ಡೆ ಹೌಸ್, ತಲಪಾಡಿ ನಿವಾಸಿ ಆರಿಫ್ (46), ಅಲಿಯಾಸ್ ‘ಟಾಬ್ಲೆಟ್ ಆರಿಫ್’ ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ಆರಿಫ್ ಅವರು ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಹಿಂಬದಿಯಿಂದ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಢಿಕ್ಕಿ ಹೊಡೆದಿದ್ದಾರೆ. ಢಿಕ್ಕಿಯಿಂದ ರಸ್ತೆಗೆ ಬಿದ್ದ ಬಳಿಕ, ಆರೋಪಿಗಳು ಅವರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆಗೈದಿದ್ದಾರೆ ಎಂದು ತಿಳಿದುಬಂದಿದ
Mar 271 min read


ಎಸ್ಎಸ್ಎಲ್ಸಿ ಪರೀಕ್ಷೆ ಮುಂದೂಡಿಕೆ
ಮಾರ್ಚ್ 30ರಂದು ನಡೆಯಬೇಕಿದ್ದ ಎಸ್ಎಸ್ಎಲ್ಸಿ ತೃತೀಯ ಭಾಷೆ (ಹಿಂದಿ) ಪರೀಕ್ಷೆಯನ್ನು ಮಾರ್ಚ್ 31ಕ್ಕೆ ಮುಂದೂಡಲಾಗಿದೆ ಎಂದು ಪರೀಕ್ಷಾ ಮಂಡಳಿ ತಿಳಿಸಿದೆ. ಮಹಾವೀರ ಜಯಂತಿ ರಜೆಯನ್ನು ಸರ್ಕಾರವು ಮಾರ್ಚ್ 31ರ ಬದಲಿಗೆ ಮಾರ್ಚ್ 30ಕ್ಕೆ ಮರುನಿಗದಿಪಡಿಸಿದ ಹಿನ್ನೆಲೆಯಲ್ಲಿ ಈ ಮಹತ್ವದ ಬದಲಾವಣೆ ಮಾಡಲಾಗಿದೆ. ಈ ಮೊದಲು ರಜೆ ಇದ್ದ ದಿನದಂದೇ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿತ್ತು, ಆದರೆ ಈಗ ರಜಾ ದಿನಾಂಕ ಪರಿಷ್ಕರಣೆಯಾದ ಕಾರಣ ಪರೀಕ್ಷಾ ವೇಳಾಪಟ್ಟಿಯಲ್ಲೂ ಬದಲಾವಣೆಯಾಗಿದೆ. ಈ ನಿರ್ಧಾರದಿಂದಾಗಿ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಸಿದ್ಧತೆ ನಡೆಸಲು ಹೆಚ್ಚುವರಿ ಒಂದು ದಿನ ಕಾಲಾವಕಾಶ ಸಿಕ್ಕಂತಾಗಿದ
Mar 261 min read


ಕಲಬುರಗಿ ಜಿಲ್ಲೆಯಲ್ಲಿ ಹೃದಯ ವಿದ್ರಾವಕ ಘಟನೆ – ಚೂರಿಯಿಂದ ಪತ್ನಿ ಕೊಲೆ
ಕಲಬುರಗಿ ಜಿಲ್ಲೆಯ ಅಫಜಲ್ಪುರ ತಾಲ್ಲೂಕಿನ ಬಾಳೂರಗಿ ಗ್ರಾಮದ ಸಮೀಪ ಗುರುವಾರ ಭೀಕರ ಘಟನೆ ನಡೆದಿದೆ. ಪತ್ನಿಯನ್ನು ಪತಿ ಚೂರಿಯಿಂದ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ಆರೋಪಿಯನ್ನು ಅಕ್ಷಯ್ ಜಾಧವ್ ಎಂದು ಗುರುತಿಸಲಾಗಿದ್ದು, ಅವನನ್ನು ಪೋಷಕರೊಂದಿಗೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೃತಪಟ್ಟ ಮಹಿಳೆಯನ್ನು ಶೈಲಾ (28) ಎಂದು ಗುರುತಿಸಲಾಗಿದ್ದು, ಆಕೆ ಮಹಾರಾಷ್ಟ್ರದ ಬಾರಾಮತಿ ಮೂಲದವರು. ಪೊಲೀಸರ ಮಾಹಿತಿಯ ಪ್ರಕಾರ, ದಂಪತಿ ಗಣಗಾಪುರಕ್ಕೆ ಹೋಗುವ ನೆಪದಲ್ಲಿ ಕಲಬುರಗಿಗೆ ಬಂದಿದ್ದರು. ಮಾರ್ಗಮಧ್ಯೆ ಹೊಲದ ಬಳಿ ಕಾರನ್ನು ನಿಲ್ಲಿಸಿದ ಆರೋಪಿಯು ಪತ್ನಿಯ ಮೇಲೆ ಚೂರಿಯಿಂದ ದಾಳಿ ನಡೆಸಿದ್ದಾನೆ. ದಾಳಿ
Mar 261 min read


1ನೇ ತರಗತಿ ಪ್ರವೇಶಕ್ಕೆ ವಯಸ್ಸಿನ ಸಡಿಲಿಕೆ: ಪೋಷಕರ ಗೊಂದಲಕ್ಕೆ ತೆರೆ ಎಳೆದ ಸರ್ಕಾರ
ರಾಜ್ಯದಲ್ಲಿ ಒಂದನೇ ತರಗತಿ ದಾಖಲಾತಿಗೆ ಆರು ವರ್ಷ ತುಂಬಿರಬೇಕೆಂಬ ಕಡ್ಡಾಯ ನಿಯಮದಲ್ಲಿ ಸರ್ಕಾರ ಈ ವರ್ಷವೂ 60 ದಿನಗಳ ವಿನಾಯಿತಿ ನೀಡುವ ಮಹತ್ವದ ತೀರ್ಮಾನ ಕೈಗೊಂಡಿದೆ. ವಿಧಾನಸಭೆಯಲ್ಲಿ ಈ ಕುರಿತು ಘೋಷಣೆ ಮಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, 2026-27ನೇ ಶೈಕ್ಷಣಿಕ ಸಾಲಿಗೆ ಅನ್ವಯವಾಗುವಂತೆ ವಯಸ್ಸಿನ ಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ ಎಂದು ತಿಳಿಸಿದರು. ಈ ನಿರ್ಧಾರದಿಂದಾಗಿ ದಾಖಲಾತಿ ಸಮಯದಲ್ಲಿ ಮಕ್ಕಳ ವಯಸ್ಸಿನ ಬಗ್ಗೆ ಇದ್ದ ಗೊಂದಲಗಳಿಗೆ ಸದ್ಯ ಮುಕ್ತಿ ಸಿಕ್ಕಂತಾಗಿದೆ. ಈ ನೂತನ ನಿಯಮದ ಅನ್ವಯ, 5 ವರ್ಷ 10 ತಿಂಗಳು ಪೂರೈಸಿರುವ ಮಕ್ಕಳು ಕೂಡ ಈ ಬಾರಿ ಒಂದನೇ ತರಗತಿಗೆ ಅಧಿಕೃತವಾಗಿ ಪ್ರ
Mar 261 min read


ಬಸ್ ಮತ್ತು ಟಿಪ್ಪರ್ ಢಿಕ್ಕಿ, 10 ಮಂದಿ ಸಜೀವ ದಹನ
ಮಾರ್ಕಪುರಂ ಸಮೀಪದ ರಾಯವರಂ ಬಳಿ ಹರಿಕೃಷ್ಣ ಟ್ರಾವೆಲ್ಸ್ಗೆ ಸೇರಿದ ಬಸ್ ಮತ್ತು ಟಿಪ್ಪರ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಭೀಕರ ದುರಂತ ನಡೆದಿದೆ. ಅಪಘಾತದ ತೀವ್ರತೆಗೆ ಎರಡೂ ವಾಹನಗಳಲ್ಲಿ ತಕ್ಷಣವೇ ಬೆಂಕಿ ಕಾಣಿಸಿಕೊಂಡಿದ್ದು, ಬಸ್ನಲ್ಲಿದ್ದ ಸುಮಾರು 10 ಪ್ರಯಾಣಿಕರು ಹೊರಬರಲಾಗದೆ ಸಜೀವವಾಗಿ ದಹನವಾಗಿದ್ದಾರೆ. ಬೆಳಿಗ್ಗೆ 6 ರಿಂದ 6:30ರ ಸುಮಾರಿಗೆ ಈ ಘಟನೆ ಸಂಭವಿಸಿದ್ದು, ಜಗಿತಿಯಾಲ್ನಿಂದ ವಿಂಜಾಮುರಿಗೆ ತೆರಳುತ್ತಿದ್ದ ಬಸ್ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಮತ್ತು ಪೊಲೀಸರು ಧಾವಿಸಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ. ಅಪಘಾತದ
Mar 261 min read


ಇಂದಿನ ಚಿನ್ನದ ದರ
ಮಾರ್ಚ್ 26, 2026 ರಂದು ಕರ್ನಾಟಕದ ಪ್ರಮುಖ ನಗರಗಳಲ್ಲಿ ಚಿನ್ನದ ದರಗಳು ಈ ಕೆಳಗಿನಂತಿವೆ: ಬೆಂಗಳೂರು (Bangalore): 22 ಕ್ಯಾರೆಟ್ ಚಿನ್ನ (1 ಗ್ರಾಂ): ₹13,465 (+₹20 ಏರಿಕೆ). 24 ಕ್ಯಾರೆಟ್ ಚಿನ್ನ (1 ಗ್ರಾಂ): ₹14,689 (+₹22 ಏರಿಕೆ). 18 ಕ್ಯಾರೆಟ್ ಚಿನ್ನ (1 ಗ್ರಾಂ): ₹11,017. ಮಂಗಳೂರು (Mangalore): 22 ಕ್ಯಾರೆಟ್ ಚಿನ್ನ (1 ಗ್ರಾಂ): ₹13,465. 24 ಕ್ಯಾರೆಟ್ ಚಿನ್ನ (1 ಗ್ರಾಂ): ₹14,689. ಬೆಳ್ಳಿ ದರ (Silver Rate): ಬೆಂಗಳೂರಿನಲ್ಲಿ ಇಂದು 1 ಕೆಜಿ ಬೆಳ್ಳಿಯ ಬೆಲೆ ಸುಮಾರು ₹2,44,900 ಆಗಿದೆ.
Mar 261 min read


ಭಾರತಕ್ಕೆ ಬಿಗ್ ರಿಲೀಫ್: ಹಾರ್ಮುಜ್ ಜಲಸಂಧಿ ಮುಕ್ತಗೊಳಿಸಿದ ಇರಾನ್
ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷದಿಂದಾಗಿ ಜಾಗತಿಕ ತೈಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವ ಬೆನ್ನಲ್ಲೇ, ಭಾರತಕ್ಕೆ ಶುಭಸುದ್ದಿಯೊಂದು ಲಭಿಸಿದೆ. ಆಯಕಟ್ಟಿನ ಹಾರ್ಮುಜ್ ಜಲಸಂಧಿಯಲ್ಲಿ ಭಾರತದ ಹಡಗುಗಳ ಸಂಚಾರಕ್ಕೆ ಯಾವುದೇ ನಿರ್ಬಂಧ ವಿಧಿಸುವುದಿಲ್ಲ ಎಂದು ಇರಾನ್ ಘೋಷಿಸಿದೆ. ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಫ್ಟಿ ಈ ಮಹತ್ವದ ನಿರ್ಧಾರ ಪ್ರಕಟಿಸಿದ್ದು, ಭಾರತದ ಜೊತೆಗೆ ರಷ್ಯಾ, ಚೀನಾ, ಇರಾನ್ ಮತ್ತು ಪಾಕಿಸ್ತಾನದ ಹಡಗುಗಳಿಗೂ ಮುಕ್ತ ಅವಕಾಶ ನೀಡಲಾಗಿದೆ. ಅಮೆರಿಕ ಮತ್ತು ಇಸ್ರೇಲ್ ವಿರೋಧಿ ನಿಲುವಿನ ನಡುವೆ ಇರಾನ್ ಈ ಐದು ಮಿತ್ರ ರಾಷ್ಟ್ರಗಳಿಗೆ ಮಾತ್ರ ವಿಶೇಷ ರಿಯಾಯಿತಿ ನೀಡಿದೆ. ಈ
Mar 261 min read


ಎನ್ಐಎ ತನಿಖೆಯಲ್ಲಿದ್ದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗೆ ನ್ಯಾಯಾಲಯದಿಂದ ಜಾಮೀನು
ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ 26ನೇ ಆರೋಪಿ ರಿಯಾಜ್ ಎಚ್. ವೈ.ಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಪ್ರಮುಖ ಆರೋಪಿ ಮುಸ್ತಾಫಾ ಪೈಚಾರ್ಗೆ ಆಶ್ರಯ ನೀಡಿದ ಆರೋಪದ ಮೇಲೆ ಕೊಡಗು ಮೂಲದ ಈತನನ್ನು ಎನ್ಐಎ ಬಂಧಿಸಿತ್ತು. 2022ರ ಜುಲೈನಲ್ಲಿ ನಡೆದ ಈ ಭೀಕರ ಹತ್ಯೆ ಪ್ರಕರಣದಲ್ಲಿ ಒಟ್ಟು 26 ಮಂದಿಯನ್ನು ವಶಕ್ಕೆ ಪಡೆಯಲಾಗಿತ್ತು. ಸುದೀರ್ಘ ವಿಚಾರಣೆಯ ನಂತರ, ಆಶ್ರಯ ನೀಡಿದ ಆರೋಪ ಎದುರಿಸುತ್ತಿದ್ದ ರಿಯಾಜ್ಗೆ ಈಗ ನ್ಯಾಯಾಂಗ ಸಮ್ಮತಿ ದೊರೆತಿದ್ದು, ಜೈಲಿನಿಂದ ಬಿಡುಗಡೆಯಾಗಲಿದ್ದಾನೆ.
Mar 251 min read


ರಾಜ್ಯಾದ್ಯಂತ ಸಂಚಲನ ಮೂಡಿಸಿದ್ದ ಅಕ್ಷಯ್ ಕಲ್ಲೇಗ ಕೊಲೆ ಕೇಸ್ನಲ್ಲಿ ಬಿಗ್ ಅಪ್ಡೇಟ್
ಪುತ್ತೂರಿನ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯಾಗಿದ್ದು, 3ನೇ ಮತ್ತು 4ನೇ ಆರೋಪಿಗಳಿಗೆ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥರಾಗಿದ್ದ ಅಕ್ಷಯ್ ಅವರ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿದ್ದ ಮಂಜುನಾಥ್ ಶೆಣೈ ಮತ್ತು ಕೇಶವ ಅವರಿಗೆ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಬಿಡುಗಡೆಯ ಆದೇಶ ನೀಡಿದೆ. 2023ರ ನವೆಂಬರ್ 6ರಂದು ನೆಹರು ನಗರದಲ್ಲಿ ಅಕ್ಷಯ್ ಅವರನ್ನು ಮಾರಕಾಸ್ತ್ರಗಳಿಂದ ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಪ್ರಕರಣದ ತನಿಖೆ ನಡೆಸಿದ್ದ ಪೊಲೀಸರು ಒಟ್ಟು ನಾಲ್ವರು ಆರೋಪಿಗಳನ್
Mar 251 min read


ಫಿಲಿಪೈನ್ಸ್ನಲ್ಲಿ ಇಂಧನ ತುರ್ತು ಪರಿಸ್ಥಿತಿ ಘೋಷಣೆ
ಜಾಗತಿಕ ಯುದ್ಧ ಭೀತಿ ಮತ್ತು ಮಧ್ಯಪ್ರಾಚ್ಯದ ಉದ್ವಿಗ್ನತೆ ನಡುವೆಯೇ Philippines ದೇಶವು ಇಂಧನ ತುರ್ತು ಪರಿಸ್ಥಿತಿಯನ್ನು ಘೋಷಿಸಿದೆ. ಇಂತಹ ನಿರ್ಧಾರ ಕೈಗೊಂಡಿರುವುದು ವಿಶ್ವದಲ್ಲೇ ಮೊದಲ ಉದಾಹರಣೆಯಾಗಿ ಪರಿಣಮಿಸಿದೆ. Ad ದೇಶದ ಅಧ್ಯಕ್ಷರಾದ Ferdinand Marcos Jr. ಅವರು ಈ ಕುರಿತು ಅಧಿಕೃತವಾಗಿ ಘೋಷಣೆ ಮಾಡಿದ್ದು, ಇಂಧನ ಭದ್ರತೆ ಖಚಿತಪಡಿಸಿಕೊಳ್ಳುವುದು ಮತ್ತು ಹೆಚ್ಚುತ್ತಿರುವ ವಿದ್ಯುತ್ ದರಗಳಿಂದ ಸಾರ್ವಜನಿಕರನ್ನು ರಕ್ಷಿಸುವುದು ಈ ಕ್ರಮದ ಪ್ರಮುಖ ಉದ್ದೇಶ ಎಂದು ತಿಳಿಸಿದ್ದಾರೆ. ಮಧ್ಯಪ್ರಾಚ್ಯ ಪ್ರದೇಶದಲ್ಲಿ ಉದ್ಭವಿಸಿರುವ ಯುದ್ಧದ ಪರಿಣಾಮವಾಗಿ ಕಚ್ಚಾ ತೈಲ ಸರಬರಾಜಿನಲ್ಲಿ ಅಸ್ಥಿರತ
Mar 251 min read


ದಾಖಲೆ ಮೊತ್ತಕ್ಕೆ ರಾಜಸ್ಥಾನ ರಾಯಲ್ಸ್ ಮಾರಾಟ
ಐಪಿಎಲ್ ಇತಿಹಾಸದಲ್ಲೇ ಅತಿದೊಡ್ಡ ವ್ಯವಹಾರ ನಡೆದಿದ್ದು, ಅಮೆರಿಕದ ಉದ್ಯಮಿ ಕಲ್ ಸೋಮನಿ ನೇತೃತ್ವದ ಒಕ್ಕೂಟವು ರಾಜಸ್ಥಾನ ರಾಯಲ್ಸ್ ತಂಡವನ್ನು ಬರೋಬ್ಬರಿ 15,286 ಕೋಟಿ ರೂಪಾಯಿಗೆ ಖರೀದಿಸಿದೆ. ವಾಲ್ಮಾರ್ಟ್ ಕುಟುಂಬದ ರಾಬ್ ವಾಲ್ಟನ್ ಹಾಗೂ ಹ್ಯಾಂಪ್ ಕುಟುಂಬದ ಬೆಂಬಲದೊಂದಿಗೆ ಈ ಬೃಹತ್ ಒಪ್ಪಂದ ನಡೆದಿದ್ದು, ಆರ್ಆರ್ ಈಗ ಅತ್ಯಂತ ದುಬಾರಿ ಫ್ರಾಂಚೈಸಿಯಾಗಿದೆ. ಈ ಮೆಗಾ ಡೀಲ್ ಕ್ರಿಕೆಟ್ ಜಗತ್ತಿನಲ್ಲಿ ಹೊಸ ಸಂಚಲನ ಮೂಡಿಸಿದೆ. ವಿಶ್ವದ ಪ್ರಸಿದ್ಧ ಉದ್ಯಮಿಗಳು ಭಾರತೀಯ ಕ್ರಿಕೆಟ್ ಮಾರುಕಟ್ಟೆಯ ಮೇಲೆ ಹೂಡಿಕೆ ಮಾಡುತ್ತಿರುವುದಕ್ಕೆ ಈ ವ್ಯವಹಾರವು ಸಾಕ್ಷಿಯಾಗಿದೆ. ಈ ಒಪ್ಪಂದದಿಂದಾಗಿ ಐಪಿಎಲ್ ಮೌಲ
Mar 251 min read


ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು
ಕಾಂಗ್ರೆಸ್ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರನ್ನು ಮಂಗಳವಾರ ತಡರಾತ್ರಿ ದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅನಾರೋಗ್ಯದ ಕಾರಣದಿಂದಾಗಿ ಆಸ್ಪತ್ರೆ ಸೇರಿರುವ ಅವರ ಆರೋಗ್ಯದ ಮೇಲೆ ವೈದ್ಯರ ತಂಡವು ತೀವ್ರ ನಿಗಾ ವಹಿಸಿದೆ ಎಂದು ಮೂಲಗಳು ತಿಳಿಸಿವೆ. ಶೀತ ಮತ್ತು ವಾಯುಮಾಲಿನ್ಯದಿಂದಾಗಿ ಉಂಟಾಗುವ ಶ್ವಾಸನಾಳದ ಆಸ್ತಮಾ ಸಮಸ್ಯೆಯಿಂದ ಅವರು ಬಳಲುತ್ತಿದ್ದಾರೆ ಎಂದು ತಿಳಿದುಬಂದಿದೆ. ಕಳೆದ ಜನವರಿಯಲ್ಲಿಯೂ ಸಹ ಇದೇ ರೀತಿಯ ಉಸಿರಾಟದ ತೊಂದರೆಯಿಂದಾಗಿ ಅವರು ಚಿಕಿತ್ಸೆ ಪಡೆದಿದ್ದರು. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎನ್ನಲಾಗಿದೆ.
Mar 251 min read


ಐಪಿಎಲ್ ಇತಿಹಾಸದಲ್ಲೇ ಅತಿ ದುಬಾರಿ ಡೀಲ್: ಆರ್ಸಿಬಿ ₹16,600 ಕೋಟಿ ಮೊತ್ತಕ್ಕೆ ಮಾರಾಟ!
ಬೆಂಗಳೂರು, ಮಾರ್ಚ್ 24: ಐಪಿಎಲ್ ಫ್ರಾಂಚೈಸಿ Royal Challengers Bengaluru (RCB) ತಂಡವು ಐಪಿಎಲ್ ಇತಿಹಾಸದಲ್ಲೇ ಅತಿ ದೊಡ್ಡ ವಹಿವಾಟಿನಲ್ಲಿ ಮಾರಾಟಗೊಂಡಿದೆ. ಸುಮಾರು 1.78 ಬಿಲಿಯನ್ ಡಾಲರ್ (₹16,600 ಕೋಟಿ) ಮೊತ್ತಕ್ಕೆ ಈ ತಂಡವನ್ನು ಹೊಸ ಹೂಡಿಕೆದಾರರ ಒಕ್ಕೂಟ ಖರೀದಿಸಿದೆ ಎಂದು ತಿಳಿದುಬಂದಿದೆ. ಈ ಮೂಲಕ Indian Premier League (IPL) ಇತಿಹಾಸದಲ್ಲಿ ಅತಿ ಹೆಚ್ಚು ಮೌಲ್ಯ ಪಡೆದ ತಂಡವಾಗಿ ಆರ್ಸಿಬಿ ಹೊರಹೊಮ್ಮಿದೆ. ಇದುವರೆಗೆ ತಂಡದ ಮಾಲೀಕತ್ವ ಹೊಂದಿದ್ದ Diageo ಸಂಸ್ಥೆಯಿಂದ ಈ ಫ್ರಾಂಚೈಸಿಯನ್ನು ಖರೀದಿಸಿರುವ ಹೂಡಿಕೆದಾರರ ಗುಂಪಿನಲ್ಲಿ Aditya Birla Group, Times Group, B
Mar 241 min read


ಮತಾಂತರವಾದರೆ ಎಸ್ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು
ನವದೆಹಲಿ: ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮಗಳನ್ನು ಹೊರತುಪಡಿಸಿ ಅನ್ಯ ಧರ್ಮಗಳಿಗೆ ಮತಾಂತರವಾಗುವ ವ್ಯಕ್ತಿಗಳು ತಮ್ಮ ಪರಿಶಿಷ್ಟ ಜಾತಿ (SC) ಸ್ಥಾನಮಾನವನ್ನು ಕಳೆದುಕೊಳ್ಳುತ್ತಾರೆ ಎಂದು ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ಆಂಧ್ರಪ್ರದೇಶದ ಪಾದ್ರಿಯೊಬ್ಬರು ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾಗೊಳಿಸಿದ ನ್ಯಾಯಮೂರ್ತಿ ಪಿ.ಕೆ. ಮಿಶ್ರಾ ಮತ್ತು ಮನಮೋಹನ್ ಅವರಿದ್ದ ಪೀಠವು, 1950ರ ಸಂವಿಧಾನದ ಆದೇಶದ ಪ್ರಕಾರ ಅನ್ಯ ಧರ್ಮದ ಅನುಯಾಯಿಗಳನ್ನು ಎಸ್ಸಿ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ. ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡು ಪಾದ್ರಿಯಾಗಿದ್ದ ವ್ಯಕ್ತಿಯೊಬ್ಬರು ತಮ್ಮ ಮೇಲಿನ
Mar 241 min read
Archive
bottom of page



