top of page
News Articles
Sathyapatha News Plus


ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು
ಕಾಂಗ್ರೆಸ್ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರನ್ನು ಮಂಗಳವಾರ ತಡರಾತ್ರಿ ದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅನಾರೋಗ್ಯದ ಕಾರಣದಿಂದಾಗಿ ಆಸ್ಪತ್ರೆ ಸೇರಿರುವ ಅವರ ಆರೋಗ್ಯದ ಮೇಲೆ ವೈದ್ಯರ ತಂಡವು ತೀವ್ರ ನಿಗಾ ವಹಿಸಿದೆ ಎಂದು ಮೂಲಗಳು ತಿಳಿಸಿವೆ. ಶೀತ ಮತ್ತು ವಾಯುಮಾಲಿನ್ಯದಿಂದಾಗಿ ಉಂಟಾಗುವ ಶ್ವಾಸನಾಳದ ಆಸ್ತಮಾ ಸಮಸ್ಯೆಯಿಂದ ಅವರು ಬಳಲುತ್ತಿದ್ದಾರೆ ಎಂದು ತಿಳಿದುಬಂದಿದೆ. ಕಳೆದ ಜನವರಿಯಲ್ಲಿಯೂ ಸಹ ಇದೇ ರೀತಿಯ ಉಸಿರಾಟದ ತೊಂದರೆಯಿಂದಾಗಿ ಅವರು ಚಿಕಿತ್ಸೆ ಪಡೆದಿದ್ದರು. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎನ್ನಲಾಗಿದೆ.
Mar 251 min read


ಐಪಿಎಲ್ ಇತಿಹಾಸದಲ್ಲೇ ಅತಿ ದುಬಾರಿ ಡೀಲ್: ಆರ್ಸಿಬಿ ₹16,600 ಕೋಟಿ ಮೊತ್ತಕ್ಕೆ ಮಾರಾಟ!
ಬೆಂಗಳೂರು, ಮಾರ್ಚ್ 24: ಐಪಿಎಲ್ ಫ್ರಾಂಚೈಸಿ Royal Challengers Bengaluru (RCB) ತಂಡವು ಐಪಿಎಲ್ ಇತಿಹಾಸದಲ್ಲೇ ಅತಿ ದೊಡ್ಡ ವಹಿವಾಟಿನಲ್ಲಿ ಮಾರಾಟಗೊಂಡಿದೆ. ಸುಮಾರು 1.78 ಬಿಲಿಯನ್ ಡಾಲರ್ (₹16,600 ಕೋಟಿ) ಮೊತ್ತಕ್ಕೆ ಈ ತಂಡವನ್ನು ಹೊಸ ಹೂಡಿಕೆದಾರರ ಒಕ್ಕೂಟ ಖರೀದಿಸಿದೆ ಎಂದು ತಿಳಿದುಬಂದಿದೆ. ಈ ಮೂಲಕ Indian Premier League (IPL) ಇತಿಹಾಸದಲ್ಲಿ ಅತಿ ಹೆಚ್ಚು ಮೌಲ್ಯ ಪಡೆದ ತಂಡವಾಗಿ ಆರ್ಸಿಬಿ ಹೊರಹೊಮ್ಮಿದೆ. ಇದುವರೆಗೆ ತಂಡದ ಮಾಲೀಕತ್ವ ಹೊಂದಿದ್ದ Diageo ಸಂಸ್ಥೆಯಿಂದ ಈ ಫ್ರಾಂಚೈಸಿಯನ್ನು ಖರೀದಿಸಿರುವ ಹೂಡಿಕೆದಾರರ ಗುಂಪಿನಲ್ಲಿ Aditya Birla Group, Times Group, B
Mar 241 min read


ಮತಾಂತರವಾದರೆ ಎಸ್ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು
ನವದೆಹಲಿ: ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮಗಳನ್ನು ಹೊರತುಪಡಿಸಿ ಅನ್ಯ ಧರ್ಮಗಳಿಗೆ ಮತಾಂತರವಾಗುವ ವ್ಯಕ್ತಿಗಳು ತಮ್ಮ ಪರಿಶಿಷ್ಟ ಜಾತಿ (SC) ಸ್ಥಾನಮಾನವನ್ನು ಕಳೆದುಕೊಳ್ಳುತ್ತಾರೆ ಎಂದು ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ಆಂಧ್ರಪ್ರದೇಶದ ಪಾದ್ರಿಯೊಬ್ಬರು ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾಗೊಳಿಸಿದ ನ್ಯಾಯಮೂರ್ತಿ ಪಿ.ಕೆ. ಮಿಶ್ರಾ ಮತ್ತು ಮನಮೋಹನ್ ಅವರಿದ್ದ ಪೀಠವು, 1950ರ ಸಂವಿಧಾನದ ಆದೇಶದ ಪ್ರಕಾರ ಅನ್ಯ ಧರ್ಮದ ಅನುಯಾಯಿಗಳನ್ನು ಎಸ್ಸಿ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ. ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡು ಪಾದ್ರಿಯಾಗಿದ್ದ ವ್ಯಕ್ತಿಯೊಬ್ಬರು ತಮ್ಮ ಮೇಲಿನ
Mar 241 min read


ಬೈಕ್ ಅಪಘಾತ: ಸವಾರ ದುರ್ಮರಣ
ನಿಂತಿಕಲ್ಲು: ಇಲ್ಲಿನ ಕೆನರಾ ಬ್ಯಾಂಕ್ ಮುಂಭಾಗದಲ್ಲಿ ಬೈಕ್ ಮತ್ತು ವಿದ್ಯುತ್ ಕಂಬದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸವಾರ ಲೋಕೇಶ್ ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯ ಹೆಚ್ಚಿನ ವಿವರಗಳು ಇನ್ನಷ್ಟೇ ಲಭ್ಯವಾಗಬೇಕಿದೆ.
Mar 241 min read


ರಾಯಲ್ ಚಾಲೆಂಜರ್ಸ್ ಬೆಂಗಳೂರು ಜೊತೆ ಕೈಜೋಡಿಸಿದ ನಂದಿನಿ: ಜಾಗತಿಕ ಬ್ರಾಂಡ್ ಗುರಿ
ಬೆಂಗಳೂರು: ಕರ್ನಾಟಕ ಮಿಲ್ಕ್ ಫೆಡರೇಷನ್ (ಕೆಎಂಎಫ್) ತನ್ನ ಪ್ರಸಿದ್ಧ ನಂದಿನಿ ಬ್ರಾಂಡ್ಗೆ ದೊಡ್ಡ ಮಟ್ಟದ ಉತ್ತೇಜನ ನೀಡುವ ಕ್ರಮವಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡದ ಅಧಿಕೃತ ಡೈರಿ ಪಾಲುದಾರನಾಗಿ ಘೋಷಿಸಲಾಗಿದೆ. ಈ ಒಪ್ಪಂದದ ಮೂಲಕ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಎಂಬ ಜಾಗತಿಕ ಮಟ್ಟದ ವೇದಿಕೆಯಲ್ಲಿ ನಂದಿನಿ ತನ್ನ ಬ್ರಾಂಡ್ ಗುರುತನ್ನು ದೇಶ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಮತ್ತಷ್ಟು ಬಲಪಡಿಸಲು ಕೆಎಂಎಫ್ ಉದ್ದೇಶಿಸಿದೆ. ಒಪ್ಪಂದದ ಪ್ರಮುಖ ಅಂಶವಾಗಿ, ಆರ್ಸಿಬಿ ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಅವರ ಭಾವಚಿತ್ರವನ್ನು ನಂದಿನಿ ಉತ್ಪನ್ನಗಳ ಪ್ಯಾಕೇಜಿಂಗ್
Mar 241 min read


ಇಂದಿನ ಚಿನ್ನದ ದರ ಎಷ್ಟಿದೆ ಚೆಕ್ ಮಾಡಿ
ಇಂದು, ಮಾರ್ಚ್ 24, 2026 ರಂತೆ ಬೆಂಗಳೂರು ಮತ್ತು ಕರ್ನಾಟಕದ ಪ್ರಮುಖ ನಗರಗಳಲ್ಲಿ ಚಿನ್ನದ ದರಗಳು ಈ ಕೆಳಗಿನಂತಿವೆ: 24 ಕ್ಯಾರೆಟ್ ಚಿನ್ನ (ಶುದ್ಧ ಚಿನ್ನ): 1 ಗ್ರಾಂ: ₹13,564 10 ಗ್ರಾಂ: ₹1,35,640 22 ಕ್ಯಾರೆಟ್ ಚಿನ್ನ (ಆಭರಣ ಚಿನ್ನ): 1 ಗ್ರಾಂ: ₹12,434 10 ಗ್ರಾಂ: ₹1,24,340 18 ಕ್ಯಾರೆಟ್ ಚಿನ್ನ: 1 ಗ್ರಾಂ: ₹10,173
Mar 241 min read


ಪೆಟ್ರೋಲ್ ಸಿಗಲ್ಲ ಎಂಬ ಫೇಕ್ ಮೆಸೇಜ್ ನಂಬಿ ಕಂಗಾಲಾದ ಬೆಳಗಾವಿ ಜನ; ರಾತ್ರೋರಾತ್ರಿ ಬಂಕ್ಗಳಿಗೆ ಮುಗಿಬಿದ್ದ ವಾಹನ ಸವಾರರು!
ಬೆಳಗಾವಿಯಲ್ಲಿ ಪೆಟ್ರೋಲ್ ಅಭಾವದ ಸುಳ್ಳು ಸುದ್ದಿ ಹಬ್ಬಿದ್ದರಿಂದ, ಗಾಬರಿಗೊಂಡ ಸಾರ್ವಜನಿಕರು ಬಂಕ್ಗಳ ಮುಂದೆ ಮುಗಿಬಿದ್ದ ಘಟನೆ ನಡೆದಿದೆ. ಸೋಮವಾರ ರಾತ್ರಿ ನಗರದ ಪ್ರಮುಖ ವೃತ್ತಗಳ ಪೆಟ್ರೋಲ್ ಬಂಕ್ಗಳಲ್ಲಿ ಕಿಲೋಮೀಟರ್ಗಟ್ಟಲೆ ಸಾಲು ಕಂಡುಬಂದಿದ್ದು, ಜನರು ಬಾಟಲಿಗಳಲ್ಲೂ ಇಂಧನ ತುಂಬಿಸಿಕೊಳ್ಳಲು ಪರದಾಡಿದರು. ದೇಶದಲ್ಲಿ ಇಂಧನ ಪೂರೈಕೆಗೆ ಯಾವುದೇ ಅಡಚಣೆಯಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ಸಾರ್ವಜನಿಕರು ಇಂತಹ ವದಂತಿಗಳಿಗೆ ಕಿವಿಗೊಡಬಾರದು ಎಂದು ಅಧಿಕಾರಿಗಳು ಮನವಿ ಮಾಡಿದ್ದಾರೆ. ದಿಢೀರ್ ದಟ್ಟಣೆಯಿಂದಾಗಿ ಬಂಕ್ ಸಿಬ್ಬಂದಿ ಪರಿಸ್ಥಿತಿ ನಿಯಂತ್ರಿಸಲು ಹರಸಾಹಸ ಪಡಬೇಕಾಯಿತು.
Mar 241 min read


ಗ್ಯಾಸ್ ಅಭಾವದ ಬೆನ್ನಲ್ಲೇ ಮಿತಿಮೀರಿದ ಕಳ್ಳರ ಹಾವಳಿ: ಶಾಲೆಗಳ ಬಿಸಿಯೂಟದ ಸಿಲಿಂಡರ್ಗಳಿಗೂ ಬಿತ್ತು ಕನ್ನ!
ರಾಜ್ಯದಲ್ಲಿ ವಾಣಿಜ್ಯ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವ ಬೆನ್ನಲ್ಲೇ, ಗ್ಯಾಸ್ ಸಿಲಿಂಡರ್ ಕಳ್ಳರ ಹಾವಳಿ ಮಿತಿಮೀರಿದೆ. ಹೋಟೆಲ್ ಉದ್ಯಮ ಸಂಕಷ್ಟದಲ್ಲಿರುವ ಈ ಸಮಯದಲ್ಲಿ ಕಳ್ಳತನ ಪ್ರಕರಣಗಳು ಜನರಲ್ಲಿ ಆತಂಕ ಮೂಡಿಸಿವೆ. ಇತ್ತೀಚೆಗೆ ಬೀದರ್ ಜಿಲ್ಲೆಯ ಹುಲಸೂರು ತಾಲೂಕಿನ ಗೋರ್ಟಾ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯ ಅಡುಗೆ ಕೋಣೆಯ ಬೀಗ ಮುರಿದು, ಮಧ್ಯಾಹ್ನದ ಬಿಸಿಯೂಟಕ್ಕಾಗಿ ಇಟ್ಟಿದ್ದ ಆರು ಸಿಲಿಂಡರ್ಗಳನ್ನು ಕಳ್ಳರು ಹೊತ್ತೊಯ್ದಿದ್ದಾರೆ. ಈ ಸಂಬಂಧ ಬಸವಕಲ್ಯಾಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಕಳ್ಳತನದ ಸರಣಿ ಮುಂದುವರ
Mar 241 min read


ರಾಜ್ಯದ ವಾಹನ ಸವಾರರಿಗೆ ಶಾಕ್..!
ರಾಜ್ಯದ ವಾಹನ ಸವಾರರಿಗೆ ಬೆಲೆ ಏರಿಕೆಯ ಬಿಸಿ ತಟ್ಟಲಿದ್ದು, ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ದರ ಏರಿಕೆಯಾಗುವುದು ಬಹುತೇಕ ಖಚಿತವಾಗಿದೆ. ಹೋಲ್ಸೇಲ್ ಪ್ರೈಸ್ ಇಂಡೆಕ್ಸ್ ಆಧಾರದ ಮೇಲೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಪ್ರತಿ ವರ್ಷದಂತೆ ಈ ಬಾರಿಯೂ ಶೇ 3 ರಿಂದ 5 ರಷ್ಟು ದರ ಹೆಚ್ಚಿಸಲು ನಿರ್ಧರಿಸಿದೆ. ಈ ಕುರಿತು ಶೀಘ್ರದಲ್ಲೇ ಅಧಿಕೃತ ಅಧಿಸೂಚನೆ ಹೊರಬೀಳಲಿದ್ದು, ಅಗತ್ಯ ವಸ್ತುಗಳ ಸಾಗಾಣಿಕೆ ವೆಚ್ಚವೂ ಅಧಿಕವಾಗುವ ಆತಂಕ ಎದುರಾಗಿದೆ. ಈಗಾಗಲೇ ಇಂಧನ ಬೆಲೆ ಏರಿಕೆಯಿಂದ ಕಂಗಾಲಾಗಿರುವ ಜನಸಾಮಾನ್ಯರಿಗೆ ಈ ಪರಿಷ್ಕೃತ ಟೋಲ್ ದರಗಳು ಮತ್ತಷ್ಟು ಹೊರೆಯಾಗಲಿವೆ. ವಿಶೇಷವಾಗಿ
Mar 241 min read


ಕೊಲಂಬಿಯಾ ವಿಮಾನ ದುರಂತ: ಸಾವಿನ ಸಂಖ್ಯೆ 66ಕ್ಕೆ ಏರಿಕೆ
ದಕ್ಷಿಣ ಕೊಲಂಬಿಯಾದ ಪುಟುಮಾಯೋ ಪ್ರಾಂತ್ಯದಲ್ಲಿ 121 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಅಮೆರಿಕ ನಿರ್ಮಿತ ಹೆರ್ಕ್ಯುಲಿಸ್ ಸಿ-130 ಸೇನಾ ವಿಮಾನ ಪತನಗೊಂಡಿದೆ. ಟೇಕ್ಆಫ್ ಆದ ಕೇವಲ 1.5 ಕಿಲೋಮೀಟರ್ ದೂರದಲ್ಲೇ ಈ ಅವಘಡ ಸಂಭವಿಸಿದ್ದು, ಮೃತಪಟ್ಟವರ ಸಂಖ್ಯೆ 66ಕ್ಕೆ ಏರಿಕೆಯಾಗಿದೆ ಎಂದು ರಕ್ಷಣಾ ಸಚಿವ ಪೆಟ್ರೋ ಸಾಂಚೆಝ್ ದೃಢಪಡಿಸಿದ್ದಾರೆ. ಅಮೆಜಾನ್ ಪ್ರದೇಶದ ಪ್ಯೂರ್ಟೋ ಲೆಗುಇಜಾಮೋದಲ್ಲಿ ಸಂಭವಿಸಿದ ಈ ಅಪಘಾತದಲ್ಲಿ ವಿಮಾನದಲ್ಲಿದ್ದ ಸ್ಫೋಟಕಗಳು ಬೆಂಕಿಯಿಂದ ಸ್ಫೋಟಗೊಂಡಿವೆ. ಈ ಘಟನೆಯಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಗಾಯಾಳುಗಳನ್ನು ರಾಜಧಾನಿ ಬೋಗೋಟಾ ಮ
Mar 241 min read


ಇರಾನ್ ಸಂತ್ರಸ್ತರ ನೆರವಿಗೆ ಧಾವಿಸಿದ ಕಾಶ್ಮೀರ: ಬೆಳೆಬಾಳುವ ವಸ್ತುಗಳನ್ನ ದಾನ ಮಾಡಿದ ಕಾಶ್ಮೀರದ ಜನತೆ
ಶ್ರೀನಗರ: ಯುದ್ಧಪೀಡಿತ ಇರಾನ್ ಜನತೆಯ ಸಹಾಯಕ್ಕಾಗಿ ಜಮ್ಮು-ಕಾಶ್ಮೀರದ ಮುಸ್ಲಿಂ ಕುಟುಂಬಗಳು ಮಾನವೀಯತೆ ಮೆರೆದಿವೆ. ಬುಡ್ಯಾಮ್ ಮತ್ತು ಬಾರಾಮುಲ್ಲಾ ಜಿಲ್ಲೆಗಳಲ್ಲಿ ಬೃಹತ್ ದೇಣಿಗೆ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಜನರು ನಗದು ಮಾತ್ರವಲ್ಲದೆ ಚಿನ್ನಾಭರಣ, ಜಾನುವಾರು ಹಾಗೂ ತಾಮ್ರದ ಪಾತ್ರೆಗಳನ್ನು ದಾನವಾಗಿ ನೀಡುತ್ತಿದ್ದಾರೆ. ಪುಟ್ಟ ಮಕ್ಕಳು ತಮ್ಮ ಪಿಗ್ಗಿ ಬ್ಯಾಂಕ್ ಹಣ ನೀಡುವ ಮೂಲಕ ಗಮನ ಸೆಳೆದಿದ್ದಾರೆ. ಈ ಅಭೂತಪೂರ್ವ ಬೆಂಬಲಕ್ಕೆ ಭಾರತದಲ್ಲಿರುವ ಇರಾನ್ ರಾಯಭಾರ ಕಚೇರಿಯು ಕೃತಜ್ಞತೆ ಸಲ್ಲಿಸಿದ್ದು, ಕಾಶ್ಮೀರಿಗರ ಈ ದಯೆಯ ಕಾರ್ಯವನ್ನು ಎಂದಿಗೂ ಮರೆಯುವುದಿಲ್ಲ ಎಂದು ಶ್ಲಾಘಿಸಿದೆ.
Mar 231 min read


ಸೌಜನ್ಯ ಹತ್ಯೆ ಪ್ರಕರಣ: ಸಿಬಿಐಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ
ದಶಕದ ಹಿಂದೆ ನಡೆದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಇಂದು ಸಿಬಿಐಗೆ (CBI) ನೋಟಿಸ್ ಜಾರಿ ಮಾಡಿದೆ. 2012ರಲ್ಲಿ ಧರ್ಮಸ್ಥಳ ಸಮೀಪ ನಡೆದ ಈ ಭೀಕರ ಘಟನೆಯ ತನಿಖೆಯಲ್ಲಿನ ಲೋಪದೋಷಗಳ ಕುರಿತು ಸಲ್ಲಿಸಲಾದ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಾಲಯವು, ಕೇಂದ್ರ ತನಿಖಾ ಸಂಸ್ಥೆಯಿಂದ ಸಮಗ್ರ ವಿವರಣೆಯನ್ನು ಕೇಳಿದೆ. ಇದು ಪ್ರಕರಣಕ್ಕೆ ಈಗ ಹೊಸ ತಿರುವು ನೀಡಿದೆ. ಈ ಹಿಂದೆ ಕೆಳಹಂತದ ನ್ಯಾಯಾಲಯವು ಆರೋಪಿ ಸಂತೋಷ್ ರಾವ್ನನ್ನು ಸಾಕ್ಷ್ಯಾಧಾರಗಳ ಕೊರತೆಯಿಂದ ಬಿಡುಗಡೆ ಮಾಡಿತ್ತು. ಬೆಳ್ತಂಗಡಿ ಪೊಲೀಸರಿಂದ ಆರಂಭವಾಗಿ ಸಿಐಡಿ ಮತ್ತು ಬಳಿಕ ಸಿಬಿಐ ಕೈ ಸೇರಿದ ಈ ತ
Mar 231 min read


ಮಂಗಳೂರು: ಯುದ್ಧದ ಕಾರ್ಮೋಡ; ಪಾತಾಳಕ್ಕೆ ಕುಸಿದ ಮೀನಿನ ದರ
ಕೊಲ್ಲಿ ರಾಷ್ಟ್ರಗಳ ಯುದ್ಧದ ಭೀತಿಯು ಕರಾವಳಿಯ ಮೀನುಗಾರಿಕೆ ಉದ್ಯಮವನ್ನು ಸಂಕಷ್ಟಕ್ಕೆ ದೂಡಿದೆ. ರಫ್ತು ವಹಿವಾಟು ಸಂಪೂರ್ಣ ಸ್ಥಗಿತಗೊಂಡಿರುವುದರಿಂದ ಮಾರುಕಟ್ಟೆಯಲ್ಲಿ ಮೀನಿನ ಬೇಡಿಕೆ ಕುಸಿದಿದ್ದು, ಪ್ರತಿ ಕೆಜಿಗೆ ಸುಮಾರು 100 ರಿಂದ 200 ರೂಪಾಯಿಗಳಷ್ಟು ದರ ಇಳಿಕೆಯಾಗಿದೆ. ಇದರಿಂದ ಮೀನುಗಾರರು ಮತ್ತು ವ್ಯಾಪಾರಸ್ಥರು ಅಸಲು ಕೂಡ ಸಿಗದೆ ಕಣ್ಣೀರು ಹಾಕುವಂತಾಗಿದೆ. ಅಡುಗೆ ಅನಿಲದ (LPG) ವ್ಯತ್ಯಯ ಹಾಗೂ ಯುದ್ಧದ ಆತಂಕದಿಂದಾಗಿ ನಗರದ ಪ್ರಮುಖ ಮೀನು ಉಟದ ಹೋಟೆಲ್ಗಳು ಮುಚ್ಚುತ್ತಿವೆ. ಹೋಟೆಲ್ ಮಾಲೀಕರು ಮಾರುಕಟ್ಟೆಗೆ ಬಾರದ ಕಾರಣ ಲಕ್ಷಾಂತರ ರೂಪಾಯಿ ಮೌಲ್ಯದ ವಹಿವಾಟು ಸ್ಥಗಿತಗೊಂಡಿದೆ. ನ
Mar 231 min read


ಪತ್ನಿ ಜೊತೆ ಮಾತನಾಡುತ್ತಲೇ ಕೊನೆಯುಸಿರೆಳೆದ ಪತಿ: ರಿಯಾದ್ ಕ್ಷಿಪಣಿ ದಾಳಿಗೆ ಭಾರತ ಮೂಲದ ಯುವಕ ಬಲಿ
ರಿಯಾದ್ನಲ್ಲಿ ನಡೆದ ಭೀಕರ ಕ್ಷಿಪಣಿ ದಾಳಿಗೆ ಉತ್ತರ ಪ್ರದೇಶದ ಸೀತಾಪುರ ಮೂಲದ ರವಿ ಗೋಪಾಲ್ (26) ಬಲಿಯಾಗಿದ್ದಾರೆ. ಕಳೆದ ಸೆಪ್ಟೆಂಬರ್ನಿಂದ ಸೌದಿ ಅರೇಬಿಯಾದಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ಇವರು, ಮಾರ್ಚ್ 18ರ ಬುಧವಾರ ರಾತ್ರಿ ತಮ್ಮ ಪತ್ನಿ ರಿತು ಅವರೊಂದಿಗೆ ಫೋನ್ನಲ್ಲಿ ಮಾತನಾಡುತ್ತಿದ್ದಾಗಲೇ ಈ ದುರಂತ ಸಂಭವಿಸಿದೆ. ಸುಮಾರು 20 ನಿಮಿಷಗಳ ಕಾಲ ಸಂಭಾಷಣೆ ನಡೆಸುತ್ತಿದ್ದ ವೇಳೆ ಏಕಾಏಕಿ ದೊಡ್ಡ ಸ್ಫೋಟದ ಸದ್ದು ಕೇಳಿ ಫೋನ್ ಕರೆ ಕಡಿತಗೊಂಡಿದ್ದು, ಕುಟುಂಬಸ್ಥರಲ್ಲಿ ಆತಂಕ ಮೂಡಿಸಿತ್ತು. ಸೌದಿ ಅರೇಬಿಯಾವು ರಿಯಾದ್ ಗುರಿಯಾಗಿಸಿಕೊಂಡಿದ್ದ ಇರಾನ್ನ ನಾಲ್ಕು ಬ್ಯಾಲಿಸ್ಟಿಕ್ ಕ್ಷಿಪಣಿಗಳ
Mar 221 min read


ಮಂಗಳೂರು ಸೆಂಟ್ರಲ್ ಮತ್ತು ಸುಬ್ರಹ್ಮಣ್ಯ ರೈಲು ಸಂಚಾರ ರದ್ದು: ಪ್ರಯಾಣಿಕರಿಗೆ ಮುನ್ಸೂಚನೆ
ನರಿಮೊಗರು ಮತ್ತು ಪಡೀಲ್ ನಿಲ್ದಾಣಗಳ ನಡುವೆ ರೈಲ್ವೆ ಹಳಿ ನಿರ್ವಹಣಾ ಕಾರ್ಯ (BCM) ನಡೆಯಲಿರುವ ಹಿನ್ನೆಲೆಯಲ್ಲಿ ಮಂಗಳೂರು ಸೆಂಟ್ರಲ್ ಮತ್ತು ಸುಬ್ರಹ್ಮಣ್ಯ ರೋಡ್ ನಡುವಿನ ಪ್ಯಾಸೆಂಜರ್ ರೈಲು (ಸಂಖ್ಯೆ 56629) ಸಂಚಾರವನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ. ಮಾರ್ಚ್ 23 ರಿಂದ ಏಪ್ರಿಲ್ 14 ರವರೆಗೆ ಮೊದಲ ಹಂತದ ಸೇವೆ ಸ್ಥಗಿತಗೊಳ್ಳಲಿದ್ದು, ಪ್ರಯಾಣಿಕರು ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಲು ಸೂಚಿಸಲಾಗಿದೆ. ದ್ವಿತೀಯ ಹಂತದಲ್ಲಿ ಜೂನ್ 10 ರಿಂದ ಜೂನ್ 21 ರವರೆಗೆ ರೈಲು ಸಂಚಾರ ಮತ್ತೆ ರದ್ದಾಗಲಿದೆ. ಹಳಿಗಳ ಬಲವರ್ಧನೆಗಾಗಿ ಲೈನ್ ಬ್ಲಾಕ್ ಮತ್ತು ಪವರ್ ಬ್ಲಾಕ್ ಅನಿವಾರ್ಯವಾಗಿದ್ದು, ಸುರಕ್ಷ
Mar 221 min read


ಆಟೋಮೊಬೈಲ್ ಕ್ಷೇತ್ರದಲ್ಲಿ ಬೆಲೆ ಏರಿಕೆ ಭೀತಿ: ಗ್ರಾಹಕರಿಗೆ ಬಿಳಲಿದೆ ಭಾರ
ಜಾಗತಿಕ ಯುದ್ಧದ ಪರಿಣಾಮ ಕೇವಲ ಕಚ್ಚಾ ತೈಲಕ್ಕೆ ಸೀಮಿತವಾಗದೆ, ವಾಹನ ಉತ್ಪಾದನೆಗೆ ಅಗತ್ಯವಿರುವ ಪ್ಲಾಸ್ಟಿಕ್, ಕಬ್ಬಿಣ ಮತ್ತು ಫೈಬರ್ ಪೂರೈಕೆಯಲ್ಲೂ ಭಾರಿ ವ್ಯತ್ಯಯ ಉಂಟಾಗಿದೆ. ಇದರಿಂದಾಗಿ ಉತ್ಪಾದನಾ ವೆಚ್ಚ ಗಣನೀಯವಾಗಿ ಏರಿಕೆಯಾಗಿದ್ದು, ಮುಂದಿನ ವಾರದಿಂದ ಕಾರು ಮತ್ತು ಬೈಕ್ಗಳ ಬೆಲೆಯಲ್ಲಿ ಶೇಕಡ 10ರಿಂದ 15ರಷ್ಟು ಹೆಚ್ಚಳವಾಗುವ ಸಾಧ್ಯತೆಯಿದೆ. ಪ್ರಮುಖವಾಗಿ ಪ್ರತಿ ಕಾರಿನ ಮೇಲೆ ಅಂದಾಜು 40ರಿಂದ 50 ಸಾವಿರ ರೂಪಾಯಿಗಳವರೆಗೆ ಹೊರೆ ಬೀಳಲಿದೆ ಎಂದು ಅಂದಾಜಿಸಲಾಗಿದೆ. ಮಾರುತಿ ಸುಜುಕಿ, ಟಾಟಾ ಮೋಟಾರ್ಸ್ ಮತ್ತು ಮಹೀಂದ್ರಾ ಸೇರಿದಂತೆ ಪ್ರಮುಖ ಕಂಪನಿಗಳು ಈಗಾಗಲೇ ಬೆಲೆ ಏರಿಕೆಯ ಹಾದಿಯಲ್ಲಿವ
Mar 221 min read


ಡಿಜಿಟಲ್ ವಂಚನೆಗೆ ಬ್ರೇಕ್: ವಾಟ್ಸಾಪ್ಗೆ ಕೇಂದ್ರ ಗೃಹ ಸಚಿವಾಲಯದ ಖಡಕ್ ಸೂಚನೆ
ದೇಶದಲ್ಲಿ ಹೆಚ್ಚುತ್ತಿರುವ 'ಡಿಜಿಟಲ್ ಅರೆಸ್ಟ್' ವಂಚನೆಗಳನ್ನು ತಡೆಗಟ್ಟಲು ಕೇಂದ್ರ ಗೃಹ ಸಚಿವಾಲಯವು ವಾಟ್ಸಾಪ್ ಸಂಸ್ಥೆಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ. ಇನ್ಮುಂದೆ ವಂಚನೆಗೆ ಬಳಕೆಯಾಗುವ ಮೊಬೈಲ್ ಡಿವೈಸ್ ಐಡಿಗಳನ್ನು (Device ID) ಶಾಶ್ವತವಾಗಿ ನಿರ್ಬಂಧಿಸಬೇಕು ಎಂದು ಸೂಚಿಸಲಾಗಿದೆ. ಇದರಿಂದಾಗಿ ವಂಚಕರು ಒಮ್ಮೆ ಸಿಕ್ಕಿಬಿದ್ದ ಫೋನ್ ಬಳಸಿಕೊಂಡು ಮತ್ತೆ ಹೊಸ ಅಕೌಂಟ್ ತೆರೆಯಲು ಸಾಧ್ಯವಾಗುವುದಿಲ್ಲ. ಈ ಕ್ರಮವು ಸೈಬರ್ ಅಪರಾಧಿಗಳ ಜಾಲವನ್ನು ಬುಡಸಮೇತ ಕಿತ್ತೆಸೆಯಲು ನೆರವಾಗಲಿದೆ. ಐಟಿ ನಿಯಮಗಳ ಅನ್ವಯ, ಡಿಲೀಟ್ ಆದ ಅಕೌಂಟ್ಗಳ ಮಾಹಿತಿಯನ್ನು ಕನಿಷ್ಠ 180 ದಿನಗಳ ಕಾಲ ಸಂರಕ್ಷಿಸಿಡಬೇಕ
Mar 211 min read


ಗ್ಯಾಸ್ ಪಂಪ್ನಲ್ಲಿ ಆಟೋ ಚಾಲಕನ ಅಟ್ಟಹಾಸ: ಸಿಬ್ಬಂದಿ ಮೇಲೆ ಹಲ್ಲೆ, ದಾಂಧಲೆ!
ಬಂಟ್ವಾಳದ ಮೆಲ್ಕಾರ್ ಬಳಿಯ ಗ್ಯಾಸ್ ಪಂಪ್ ಏಜೆನ್ಸಿಯಲ್ಲಿ ಶುಕ್ರವಾರ ಸಂಜೆ ಅಫ್ರೀಝ್ ಎಂಬಾತ ಸಿಬ್ಬಂದಿ ಅಶ್ವಿನ್ ಮೇಲೆ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಮ್ಯಾನೇಜರ್ ಕುನಲ್ ಭುಕ್ಕಿಯಾ ನೀಡಿದ ದೂರಿನಂತೆ, ಆರೋಪಿಯು ಕಚೇರಿಯ ಸೊತ್ತುಗಳನ್ನು ಧ್ವಂಸಗೊಳಿಸಿದ್ದಾನೆ. ಈ ಕೃತ್ಯದಿಂದ ಸುಮಾರು ₹48,000 ಮೌಲ್ಯದ ನಷ್ಟ ಸಂಭವಿಸಿದೆ ಎಂದು ವರದಿಯಾಗಿದೆ. ಘಟನೆಗೆ ಸಂಬಂಧಿಸಿದಂತೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ (BNS) ವಿವಿಧ ಕಲಂ ಅಡಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿ ಅಫ್ರೀಝ್ ವಿರುದ್ಧ ತನಿಖೆ ಆರಂಭಿಸಿದ್ದು, ಆಟೋರಿಕ್ಷಾ ಮೂಲಕ ಪಂಪ್ ಆವರಣಕ್
Mar 211 min read


ಚಿಕ್ಕಮಗಳೂರು: ವಿದ್ಯುತ್ ಕಂಬಕ್ಕೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ; 8 ಪ್ರಯಾಣಿಕರಿಗೆ ಗಾಯ
ಚಿಕ್ಕಮಗಳೂರಿನ ಕೊಡಾಳ್ ಸಮೀಪ ಕಲ್ಯಾಣ ಕರ್ನಾಟಕ ಸಾರಿಗೆ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಕುಕ್ಕನೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಈ ಬಸ್ಸಿನಲ್ಲಿ 40ಕ್ಕೂ ಹೆಚ್ಚು ಪ್ರಯಾಣಿಕರಿದ್ದರು. ಅಪಘಾತದಲ್ಲಿ ಗಾಯಗೊಂಡ ಎಂಟು ಮಂದಿಯನ್ನು ತಕ್ಷಣ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅದೃಷ್ಟವಶಾತ್ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಅಪಘಾತಕ್ಕೆ ನಿಖರ ಕಾರಣವೇನು ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
Mar 211 min read


ರಾಜ್ಯದ 17 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆಯಿಂದ 'ಯೆಲ್ಲೋ ಅಲರ್ಟ್' ಘೋಷಣೆ
ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಪ್ರಮುಖವಾಗಿ ಬೀದರ್, ಕಲಬುರ್ಗಿ, ಶಿವಮೊಗ್ಗ ಹಾಗೂ ಬೆಂಗಳೂರು ಭಾಗದ ಜಿಲ್ಲೆಗಳಿಗೆ 'ಯೆಲ್ಲೋ ಅಲರ್ಟ್' ಘೋಷಿಸಲಾಗಿದ್ದು, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದ್ದು, ಇನ್ನು ಕೆಲವು ದಿನಗಳ ಕಾಲ ಇದೇ ವಾತಾವರಣ ಇರಲಿದೆ ಎಂದು ವರದಿ ತಿಳಿಸಿದೆ. ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಮಳೆಯ ಆರ್ಭಟ ಕಂಡುಬರುವ ಸಾಧ್ಯತೆಯಿದೆ.
Mar 211 min read
Archive
bottom of page



