top of page
News Articles
Sathyapatha News Plus


ಭಾರತದ ಅಧಿಕೃತ ನಕ್ಷೆಗಳಲ್ಲಿ ಅರುಣಾಚಲ ಪ್ರದೇಶದ 27 ಸ್ಥಳಗಳ ಹೆಸರು: ಚೀನಾಗೆ ಭಾರತದ ತಕ್ಕ ತಿರುಗೇಟು
ಅರುಣಾಚಲ ಪ್ರದೇಶದ 27 ಪ್ರಮುಖ ಸ್ಥಳಗಳನ್ನು ಸರ್ವೇ ಆಫ್ ಇಂಡಿಯಾದ ಅಧಿಕೃತ ನಕ್ಷೆಗಳಲ್ಲಿ ಔಪಚಾರಿಕವಾಗಿ ಗುರುತಿಸುವ ಮೂಲಕ ಭಾರತ ಸರ್ಕಾರವು ಚೀನಾಗೆ ಸೂಕ್ತ ಪ್ರತ್ಯುತ್ತರ ನೀಡಿದೆ. ಗಡಿ ಪ್ರದೇಶದ ಸ್ಥಳಗಳ ಹೆಸರುಗಳನ್ನು ಪದೇ ಪದೆ ಏಕಪಕ್ಷೀಯವಾಗಿ ಬದಲಾಯಿಸಲು ಯತ್ನಿಸುತ್ತಿದ್ದ ಬೀಜಿಂಗ್ನ ನಡೆಯನ್ನು ಭಾರತ ಇದರಿಂದ ವಿಫಲಗೊಳಿಸಿದೆ. ಅರುಣಾಚಲ ಪ್ರದೇಶ ಸರ್ಕಾರ ಹಾಗೂ ಕೇಂದ್ರ ಗೃಹ ಸಚಿವಾಲಯದ ಸಮಾಲೋಚನೆಯೊಂದಿಗೆ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗಿದೆ. ಚೀನಾ 'ಝಂಗ್ನಾನ್' ಎಂದು ಪ್ರತಿಪಾದಿಸುವ ಈ ಪ್ರದೇಶಗಳ ಭೌಗೋಳಿಕ ಸ್ಥಳಗಳಿಗೆ ನಿಖರವಾದ ಭಾರತೀಯ ಗುರುತನ್ನು ನೀಡುವುದು ಹಾಗೂ ಸಾರ್ವಜನಿಕರ
Aug 81 min read


ವಿಮಾನದ ತುರ್ತು ಬಾಗಿಲು ತೆರೆಯಲು ಯತ್ನಿಸಿದ ಪ್ರಯಾಣಿಕ: ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಆತಂಕ
ಕೌಲಾಲಂಪುರದಿಂದ ಕೊಚ್ಚಿಗೆ ಆಗಮಿಸುತ್ತಿದ್ದ ಬಾಟಿಕ್ ಏರ್ ವಿಮಾನದಲ್ಲಿ ಪ್ರಯಾಣಿಕನೊಬ್ಬ ತುರ್ತು ನಿರ್ಗಮನ ದ್ವಾರ ತೆರೆಯಲು ಯತ್ನಿಸಿದ ಭೀಕರ ಘಟನೆ ನಡೆದಿದೆ. ವಿಮಾನವು ಲ್ಯಾಂಡಿಂಗ್ ಆಗುವ ಕೆಲವೇ ನಿಮಿಷಗಳ ಮೊದಲು ನಡೆದ ಈ ಕೃತ್ಯದಿಂದಾಗಿ ವಿಮಾನದಲ್ಲಿದ್ದ ಪ್ರಯಾಣಿಕರು ತೀವ್ರ ಭಯಭೀತರಾಗಿದ್ದರು. ಆರೋಪಿಯನ್ನು ಕೇರಳದ ಪಾಲಕ್ಕಾಡ್ ಜಿಲ್ಲೆಯ ಕೂತನಾಡ್ ನಿವಾಸಿ, 34 ವರ್ಷದ ಜಮ್ಶೀರ್ ಅಥಾನಿಕ್ಕಲ್ ಎಂದು ಗುರುತಿಸಲಾಗಿದೆ. ತುರ್ತು ಬಾಗಿಲನ್ನು ತೆರೆಯಲು ಯತ್ನಿಸಿದ ಈತನನ್ನು ತಡೆಯಲು ಬಂದ ಕ್ಯಾಬಿನ್ ಸಿಬ್ಬಂದಿ ಹಾಗೂ ಸಹ ಪ್ರಯಾಣಿಕರಿಗೆ ಈತ ಬೆದರಿಕೆ ಹಾಕಿದ್ದಾನೆ. ಬಳಿಕ ಎಲ್ಲರೂ ಸೇರಿ ಆತನನ್ನು
Aug 81 min read


ಕುಂದಾಪುರ ಶೂಟೌಟ್ ಬಳಿಕ ಉಡುಪಿಯಲ್ಲಿ ಮತ್ತೊಂದು ರಕ್ತಪಾತಕಾಂಗ್ರೆಸ್ ಮುಖಂಡ ಡೇವಿಡ್ ಡಿಸೋಜಾ ಗುಂಡಿನ ದಾಳಿಗೆ ಬಲಿ
ಉಡುಪಿ: ಕುಂದಾಪುರದಲ್ಲಿ ನಡೆದ ಶೂಟೌಟ್ ಘಟನೆ ಮಾಸುವ ಮುನ್ನವೇ, ಉಡುಪಿ ಜಿಲ್ಲೆಯಲ್ಲಿ ಮತ್ತೊಂದು ಭೀಕರ ಗುಂಡಿನ ದಾಳಿ ಸಂಭವಿಸಿದ್ದು, ಕಾಂಗ್ರೆಸ್ ಮುಖಂಡ ಡೇವಿಡ್ ಡಿಸೋಜಾ (ಪ್ರಿನ್ಸ್) ದುಷ್ಕರ್ಮಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದಾರೆ. ಈ ಘಟನೆಯಿಂದ ಕರಾವಳಿ ಭಾಗವೇ ಬೆಚ್ಚಿಬಿದ್ದಿದೆ. ಸ್ಥಳೀಯವಾಗಿ ಪ್ರಭಾವಿ ನಾಯಕನಾಗಿದ್ದ ಡೇವಿಡ್ ಡಿಸೋಜಾ ಅವರು ಮುದರಂಗಡಿ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷರಾಗಿದ್ದು, ಸಾರ್ವಜನಿಕ ಸೇವೆಯಲ್ಲಿ ಸಕ್ರಿಯರಾಗಿದ್ದರು. ಅಪರಿಚಿತರು ನಡೆಸಿದ ಗುಂಡಿನ ದಾಳಿಯಲ್ಲಿ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಶೂಟೌಟ್ಗೆ ನಿಖರ ಕಾರಣ ಇನ್ನಷ್ಟೇ ತಿಳಿದುಬ
Aug 71 min read


ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ ಉಡುಪಿಯ ಯುವತಿ ಆತ್ಮಹತ್ಯೆ
ಉಡುಪಿ, ಆ.7: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿಯೊಬ್ಬರು ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸ್ ಠಾಣೆ ವ್ಯಾಪ್ತಿಯ ಕಲ್ಮಾಡಿಯಲ್ಲಿರುವ ತಮ್ಮ ನಿವಾಸದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ. ಮೃತರನ್ನು ಕಲ್ಮಾಡಿ ನಿವಾಸಿ ಕೃತಿ ಬಂಗೇರಾ (27) ಎಂದು ಗುರುತಿಸಲಾಗಿದೆ. ಅವರು ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದು, ನಗರದ ಕಡಿಯಾಳಿ ಸಮೀಪದ ಖಾಸಗಿ ಹೋಟೆಲ್ನಲ್ಲಿ ಕೆಲಸ ಮಾಡುತ್ತಿದ್ದರು. ಕಳೆದ ಕೆಲವು ತಿಂಗಳಿಂದ ಅವರು ಕೆಲಸಕ್ಕೆ ತೆರಳದೆ ಮನೆಯಲ್ಲೇ ಇದ್ದರು ಎಂದು ತಿಳಿದುಬಂದಿದೆ. ಘಟನೆಯ ದಿನ ತಾಯಿ ಕೆಲಸದ ನಿಮಿತ್ತ ಹೊರಗೆ ತೆರಳಿ
Aug 71 min read


ಬಿ.ಸಿ.ರೋಡ್ನಲ್ಲಿ ಭೀಕರ ಅಪಘಾತ: ಟಿಪ್ಪರ್ ಡಿಕ್ಕಿಯಾಗಿ ಸ್ಕೂಟರ್ ಸಹಸವಾರ ಸಾವು, ಸವಾರನಿಗೆ ತೀವ್ರ ಗಾಯ
ಬಂಟ್ವಾಳದ ಬಿ.ಸಿ.ರೋಡ್ನ ಎನ್.ಜಿ. ಸರ್ಕಲ್ನಲ್ಲಿ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸಹಸವಾರ ಯಶ್ವಂತ್ ಕುಲಾಲ್ ಮೃತಪಟ್ಟಿದ್ದು, ಸವಾರ ದಯಾನಂದ ಗಂಭೀರವಾಗಿ ಗಾಯಗೊಂಡಿದ್ದಾರೆ. ಕಲ್ಲಡ್ಕ ಕಡೆಯಿಂದ ಲೊರೆ ಕಡೆಗೆ ಅತಿವೇಗ ಮತ್ತು ಅಜಾಗರೂಕತೆಯಿಂದ ಧಾವಿಸಿ ಬಂದ ಟಿಪ್ಪರ್ ಲಾರಿಯು, ಮಂಗಳೂರಿನಿಂದ ಧರ್ಮಸ್ಥಳದ ಕಡೆಗೆ ತೆರಳುತ್ತಿದ್ದ ಸ್ಕೂಟರ್ಗೆ ನೇರವಾಗಿ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಸ್ಕೂಟರ್ನಲ್ಲಿದ್ದ ಇಬ್ಬರೂ ರಸ್ತೆಗೆ ಬಿದ್ದು ತೀವ್ರ ಗಾಯಗೊಂಡಿದ್ದರು. ಗಾಯಾಳುಗಳನ್ನು ತಕ್ಷಣವೇ ಮಂಗಳೂರಿನ ಜಿಲ್ಲಾ ಸರ್ಕಾರಿ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಯಿ
Aug 71 min read


ವಿಟ್ಲ : ಅಡ್ಯನಡ್ಕದಲ್ಲಿ ಆಕಸ್ಮಿಕ ದುರಂತ: ಕೆರೆಗೆ ಬಿದ್ದು 32 ವರ್ಷದ ವ್ಯಕ್ತಿ ಸಾವು
ವಿಟ್ಲ, ಆ.7: ವಿಟ್ಲ ಸಮೀಪದ ಅಡ್ಯನಡ್ಕ ಗ್ರಾಮದ ಮನಿಮುಂಡ ಪ್ರದೇಶದಲ್ಲಿ ಕಾಲು ಜಾರಿ ಕೆರೆಗೆ ಬಿದ್ದ ಪರಿಣಾಮ ಕೂಲಿ ಕಾರ್ಮಿಕನೋರ್ವ ಮೃತಪಟ್ಟ ದುರ್ಘಟನೆ ನಡೆದಿದೆ. ಮೃತರನ್ನು ದಿನೇಶ್ ನಾಯ್ಕ (32) ಎಂದು ಗುರುತಿಸಲಾಗಿದೆ. ಅವರು ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದು, ಪತ್ನಿ ಹಾಗೂ ತಂದೆ-ತಾಯಿಯನ್ನು ಅಗಲಿದ್ದಾರೆ. ಲಭ್ಯವಾದ ಮಾಹಿತಿಯಂತೆ, ದಿನೇಶ್ ಅವರು ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದಿದ್ದು, ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮು
Aug 71 min read


ರಾಷ್ಟ್ರೀಯ ಹಸ್ತಮಗ್ಗ ದಿನ: ಕೈಮಗ್ಗ ಉತ್ಪನ್ನಗಳೊಂದಿಗೆ GRWM ವಿಡಿಯೋ ಹಂಚಿಕೊಳ್ಳಿ – ಪ್ರಧಾನಿ ಮೋದಿ ಕರೆ
ನವದೆಹಲಿ, ಆ. 6: ಭಾರತದ ಸಮೃದ್ಧ ಹಸ್ತಮಗ್ಗ ಪರಂಪರೆಯನ್ನು ವಿಶ್ವದಾದ್ಯಂತ ಜನಪ್ರಿಯಗೊಳಿಸುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ವಿಶೇಷ ಕರೆ ನೀಡಿದ್ದಾರೆ. ಆಗಸ್ಟ್ 7ರಂದು ಆಚರಿಸಲಾಗುವ ರಾಷ್ಟ್ರೀಯ ಹಸ್ತಮಗ್ಗ ದಿನದ ಅಂಗವಾಗಿ ತಮ್ಮ ನೆಚ್ಚಿನ ಹಸ್ತಮಗ್ಗ ಉಡುಪುಗಳು ಮತ್ತು ಉತ್ಪನ್ನಗಳೊಂದಿಗೆ GRWM (Get Ready With Me) ಸೇರಿದಂತೆ ಸೃಜನಾತ್ಮಕ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವಂತೆ ಅವರು ಮನವಿ ಮಾಡಿದ್ದಾರೆ. ಜೊತೆಗೆ #NationalHandloomDay ಹ್ಯಾಶ್ಟ್ಯಾಗ್ ಬಳಸುವಂತೆ ಕರೆ ನೀಡಿದ್ದಾರೆ. ಸಾಮಾಜಿಕ ಜಾಲತಾಣ 'ಎಕ್ಸ್' ಮತ್ತು ಇನ್ಸ್ಟಾಗ್ರಾಂನಲ್ಲ
Aug 61 min read


ಚಿನ್ನಪ್ರಿಯರಿಗೆ ಶಾಕ್; ಮತ್ತೆ ಗಗನಕ್ಕೇರಿದ ಬಂಗಾರದ ಬೆಲೆ!
ಇಂದಿನ ಚಿನ್ನದ ಮಾರುಕಟ್ಟೆಯಲ್ಲಿ ಭರ್ಜರಿ ಏರಿಕೆ ಕಂಡುಬಂದಿದ್ದು, ಬಂಗಾರದ ದರ ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ತಲುಪಿದೆ. ಜಾಗತಿಕ ಮಾರುಕಟ್ಟೆಯ ಏರಿಳಿತಗಳು ಮತ್ತು ಹೂಡಿಕೆದಾರರಿಂದ ಹೆಚ್ಚುತ್ತಿರುವ ಬೇಡಿಕೆಯು ಭಾರತೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ದಿಢೀರ್ ಹೆಚ್ಚಾಗಲು ಪ್ರಮುಖ ಕಾರಣವಾಗಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿ 22 ಕ್ಯಾರೆಟ್ ಆಭರಣ ಚಿನ್ನದ ಬೆಲೆ ಪ್ರತಿ ಗ್ರಾಮ್ಗೆ ಅಂದಾಜು ₹13,442 ತಲುಪಿದ್ದರೆ, 10 ಗ್ರಾಮ್ ಚಿನ್ನದ ಬೆಲೆ ₹1,34,420 ರ ಆಸುಪಾಸಿನಲ್ಲಿದೆ. ಅದೇ ರೀತಿ, ಅತ್ಯಂತ ಶುದ್ಧವಾದ 24 ಕ್ಯಾರೆಟ್ ಅಪರಂಜಿ ಚಿನ್ನದ ಬೆಲೆ ಪ್ರತಿ ಗ್ರಾಮ್ಗೆ ಅಂದಾಜು ₹14,674 ಕ್ಕ
Aug 61 min read


ವಾಲಿಬಾಲ್ ಆಡುವಾಗ ಕುಸಿದು ಬಿದ್ದು 10ನೇ ತರಗತಿ ವಿದ್ಯಾರ್ಥಿ ಸಾವು
ಸುರತ್ಕಲ್ ಸಮೀಪದ ಸೂರಿಂಜೆಯಲ್ಲಿ ಬುಧವಾರ ಸಂಜೆ ಶೋಕದ ವಾತಾವರಣ ಆವರಿಸಿದೆ. ಸ್ನೇಹಿತರೊಂದಿಗೆ ಮೈದಾನದಲ್ಲಿ ವಾಲಿಬಾಲ್ ಆಡುತ್ತಿದ್ದ 10ನೇ ತರಗತಿ ವಿದ್ಯಾರ್ಥಿ ಲಿಖಿತ್ ಅಮೀನ್ (15) ಇದ್ದಕ್ಕಿದ್ದಂತೆ ಕುಸಿದು ಬಿದ್ದು ಮೃತಪಟ್ಟಿದ್ದಾನೆ. ಈತ ಸ್ಥಳೀಯ ಮಾಧವ ಅಮೀನ್ ಅವರ ಪುತ್ರ. ಆಟದ ಮಧ್ಯೆ ಕುಸಿದು ಬಿದ್ದ ಬಾಲಕನನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾನೆ. ಸೂರಿಂಜೆ ಕೋಟೆ ಬೋಳ್ಳಾರು ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಯಾಗಿದ್ದ ಈತನ ಅಕಾಲಿಕ ಸಾವು ಕುಟುಂಬಸ್ಥರು ಹಾಗೂ ಗ್ರಾಮಸ್ಥರಲ್ಲಿ ತೀವ್ರ ದುಃಖ ಸೃಷ್ಟಿಸಿದೆ.
Aug 61 min read


ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಉಮರ್ ಫಾರೂಕ್ ಎನ್ಐಎ ಬಲೆಗೆ
ಮಂಗಳೂರು, ಆ.6: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮತ್ತೊಬ್ಬ ಆರೋಪಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಅಧಿಕಾರಿಗಳು ಕೇರಳದ ಕೊಚ್ಚಿಯಲ್ಲಿ ಬಂಧಿಸಿದ್ದಾರೆ. ಬಂಧಿತನನ್ನು ಸುಳ್ಯ ತಾಲೂಕಿನ ಕಲ್ಲುಮುಟ್ಟು ನಿವಾಸಿ ಉಮರ್ ಫಾರೂಕ್ ಎಂದು ಗುರುತಿಸಲಾಗಿದೆ. ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳ ಪಟ್ಟಿಯಲ್ಲಿ ಈತನ ಹೆಸರು ಇದ್ದು, ಮಾಹಿತಿ ನೀಡಿದವರಿಗೆ ಎನ್ಐಎ ₹2 ಲಕ್ಷ ಬಹುಮಾನ ಘೋಷಿಸಿತ್ತು. 2022ರ ಜುಲೈ 26ರಂದು ನಡೆದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆಯಲ್ಲಿ, ಪಿಎಫ್ಐ ಸಂಘಟನೆಯ ಕಾರ್ಯಕರ್ತರು ಹಿಂದ
Aug 61 min read


ಮಂಗಳೂರು ಕಾಲೇಜು ಕ್ಯಾಂಪಸ್ಗೆ ಗಾಂಜಾ ತಂದಿದ್ದ ಮೂವರು ವಿದ್ಯಾರ್ಥಿಗಳು ಪೊಲೀಸರ ವಶಕ್ಕೆ; ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲು
ಮಂಗಳೂರು, ಆ.5: ಖಾಸಗಿ ಕಾಲೇಜಿನ ಕ್ಯಾಂಪಸ್ಗೆ ಗಾಂಜಾ ತಂದಿದ್ದ ಮೂವರು ವಿದ್ಯಾರ್ಥಿಗಳನ್ನು ಕಾಲೇಜು ಆಡಳಿತ ಮಂಡಳಿ ಪತ್ತೆಹಚ್ಚಿ ಪೊಲೀಸರಿಗೆ ಒಪ್ಪಿಸಿದ ಘಟನೆ ಮಂಗಳವಾರ ಮಂಗಳೂರಿನಲ್ಲಿ ನಡೆದಿದೆ. ಕಾಲೇಜು ಆಡಳಿತ ಮಂಡಳಿ ನಡೆಸಿದ ತಪಾಸಣೆಯ ವೇಳೆ ವಿದ್ಯಾರ್ಥಿಗಳ ಬಳಿ ಸಣ್ಣ ಸಣ್ಣ ಪೊಟ್ಟಣಗಳಲ್ಲಿ ಪ್ಯಾಕ್ ಮಾಡಲಾಗಿದ್ದ ಸುಮಾರು 290 ಗ್ರಾಂ ಗಾಂಜಾ ಪತ್ತೆಯಾಗಿದೆ. ಕೂಡಲೇ ಕಾಲೇಜು ಅಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೂವರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತ ವಿದ್ಯಾರ್ಥಿಗಳನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ, ಮೂವರೂ ಮಾ
Aug 51 min read


ಸಾಲಗಾರರಿಗೆ ಬಿಗ್ ರಿಲೀಫ್: RBI ರೆಪೋ ದರ 5.25%ರಲ್ಲೇ ಯಥಾಸ್ಥಿತಿ; EMIನಲ್ಲಿ ಸದ್ಯಕ್ಕೆ ಬದಲಾವಣೆ ಇಲ್ಲ
ನವದೆಹಲಿ, ಆ. 5: ಭಾರತೀಯ ರಿಸರ್ವ್ ಬ್ಯಾಂಕ್ (RBI) ಹಣಕಾಸು ನೀತಿ ಸಮಿತಿ (MPC) ಸಭೆಯಲ್ಲಿ ರೆಪೋ ದರವನ್ನು 5.25%ರಲ್ಲೇ ಯಥಾಸ್ಥಿತಿಯಲ್ಲಿ ಮುಂದುವರಿಸಲು ನಿರ್ಧರಿಸಿದೆ. ಆರ್ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು, ಜಾಗತಿಕ ಕಚ್ಚಾ ತೈಲದ ಬೆಲೆ ಏರಿಕೆ ಹಾಗೂ ಹಣದುಬ್ಬರದ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಎಚ್ಚರಿಕೆಯ ನಿಲುವು ಅನುಸರಿಸಲಾಗಿದೆ. ಆರು ಸದಸ್ಯರ ಹಣಕಾಸು ನೀತಿ ಸಮಿತಿ (MPC) ಏಕಮತದಿಂದ ರೆಪೋ ದರದಲ್ಲಿ ಯಾವುದೇ ಬದಲಾವಣೆ ಮಾಡದಿರಲು ತೀರ್ಮಾನಿಸಿದೆ. ಜೊತೆಗೆ, ತನ್ನ "ತಟಸ್ಥ (Neutral)" ಹಣಕಾಸು ನೀತಿ ನಿಲುವನ್ನು ಸಹ ಮ
Aug 51 min read


ಮಹಿಳೆಯರ ಆರೋಗ್ಯಕ್ಕೆ ರಾಜ್ಯ ಸರ್ಕಾರದ ‘ಋತುತಾರೆ’ ಯೋಜನೆ: ನಟಿ ರಮ್ಯಾ ಬ್ರ್ಯಾಂಡ್ ಅಂಬಾಸಿಡರ್
ಬೆಂಗಳೂರು: ಮಹಿಳೆಯರ ಆರೋಗ್ಯ ಮತ್ತು ಆರೋಗ್ಯ ಜಾಗೃತಿಗೆ ಉತ್ತೇಜನ ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರ ‘ಋತುತಾರೆ’ ಎಂಬ ಹೊಸ ಯೋಜನೆಯನ್ನು ಆರಂಭಿಸಿದೆ. ಈ ಯೋಜನೆಯ ಕುರಿತು ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಆರೋಗ್ಯ ಸಚಿವ ಯು.ಟಿ. ಖಾದರ್ ಮಾಹಿತಿ ನೀಡಿದರು. ಸಚಿವ ಯು.ಟಿ. ಖಾದರ್ ಮಾತನಾಡಿ, ಮಹಿಳೆಯರ ಆರೋಗ್ಯ ಸಂಬಂಧಿತ ಸಮಸ್ಯೆಗಳ ಕುರಿತು ಸಮಗ್ರವಾಗಿ ಕಾರ್ಯನಿರ್ವಹಿಸುವ ಉದ್ದೇಶದಿಂದ ‘ಋತುತಾರೆ’ ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು. ಈ ಯೋಜನೆಗೆ ಮಹಿಳಾ ತಜ್ಞೆ ಡಾ. ಜೋಸ್ನಾ ಅವರ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿಯನ್ನು ರಚಿಸಲಾಗಿದ್ದು, ಮಹಿಳೆಯರ ಆರೋಗ್ಯ, ಮಾನಸಿಕ ಒತ್ತಡ ಸೇ
Aug 41 min read


Old Monk ಸೇರಿ ಪ್ರಸಿದ್ಧ ಮದ್ಯ ಬ್ರ್ಯಾಂಡ್ಗಳಿಗೆ ದೇಶದಲ್ಲಿ ನಿಷೇಧ!
ಭಾರತದಲ್ಲಿ ಕೆಲವು ಮದ್ಯ ಬ್ರ್ಯಾಂಡ್ಗಳ ಮಾರಾಟಕ್ಕೆ ತಾತ್ಕಾಲಿಕ ನಿಷೇಧ: ಕಾರಣವೇನು? ನವದೆಹಲಿ: ಭಾರತದ ಆಹಾರ ಸುರಕ್ಷತಾ ಮತ್ತು ಮಾನದಂಡ ಪ್ರಾಧಿಕಾರ (FSSAI) ದೇಶದ ಕೆಲವು ಪ್ರಸಿದ್ಧ ರಮ್ ಮತ್ತು ವಿಸ್ಕಿ ಬ್ರ್ಯಾಂಡ್ಗಳ ಮಾರಾಟಕ್ಕೆ ತಾತ್ಕಾಲಿಕ ನಿಷೇಧ ಹೇರಿದೆ. ಉತ್ಪಾದನಾ ಪ್ರಕ್ರಿಯೆಯಲ್ಲಿ ಅನುಮೋದಿತ ಮಾನದಂಡಗಳನ್ನು ಮೀರಿ ಕೃತಕ ಸುವಾಸನೆ (Artificial Flavouring) ಬಳಸಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ರಾಯಿಟರ್ಸ್ ವರದಿ ಪ್ರಕಾರ, ಡಿಯಾಜಿಯೋ ಇಂಡಿಯಾದ ಯುನೈಟೆಡ್ ಸ್ಪಿರಿಟ್ಸ್, ಇನ್ಬ್ರೂ ಬೆವರೇಜಸ್ ಹಾಗೂ ಮೋಹನ್ ರಾಕಿ ಸ್ಪ್ರಿಂಗ್ವಾಟರ್ ಕಂಪನಿಗಳ ಕಾ
Aug 42 min read


ಬಿಳಿನೆಲೆ ಹಲ್ಲೆ ಪ್ರಕರಣ: ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ಮಂಜೂರು
ಕೆಲ ದಿನಗಳ ಹಿಂದೆ ಕಡಬ ತಾಲೂಕಿನ ಬಿಳಿನೆಲೆಯಲ್ಲಿ ನಡೆದ ಹಲ್ಲೆ ಹಾಗೂ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ಬಿಳಿನೆಲೆ ಗ್ರಾಮದ ನಿವಾಸಿಗಳಾದ ಸುನಿಲ್, ಮನೋಜ್ ಮತ್ತು ಮನ್ವಿತ್ ಜಾಮೀನು ಪಡೆದ ಆರೋಪಿಗಳಾಗಿದ್ದಾರೆ. ಘಟನೆಯ ವಿವರ: ಜುಲೈ 16ರಂದು ಸಂಜೆ ಸುಮಾರು 7.30ರ ವೇಳೆಗೆ ಬಿಳಿನೆಲೆಯ ಪೌಲ್ಟ್ರಿ ಫಾರ್ಮ್ ಒಂದರ ಹತ್ತಿರ ಅವಿನಾಶ್ ಎಂಬವರು ಸತೀಶ್ ಮತ್ತು ಸುಬ್ರಾಯ ಅವರೊಂದಿಗೆ ಮಾತನಾಡುತ್ತಾ ನಿಂತಿದ್ದರು. ಈ ವೇಳೆ ಅಲ್ಲಿಗೆ ಬಂದ ಸುನಿಲ್, ಮ
Aug 41 min read


ಸಿಪಿಎಸ್ ಪರೀಕ್ಷೆ: ಕೆಇಎಯಿಂದ ತಾತ್ಕಾಲಿಕ ಕೀ ಉತ್ತರ ಪ್ರಕಟ
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ಆಗಸ್ಟ್ 2 ರಂದು ರಾಜ್ಯಾದ್ಯಂತ ಯಶಸ್ವಿಯಾಗಿ ನಡೆಸಿದ್ದ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ (ಸಿಪಿಸಿ) ನೇಮಕಾತಿ ಪರೀಕ್ಷೆಯ ತಾತ್ಕಾಲಿಕ ಕೀ ಉತ್ತರಗಳನ್ನು ತನ್ನ ಅಧಿಕೃತ ವೆಬ್ಸೈಟ್ನಲ್ಲಿ ಪ್ರಕಟಿಸಿದೆ. ಪರೀಕ್ಷೆಗೆ ಹಾಜರಾಗಿದ್ದ ಅಭ್ಯರ್ಥಿಗಳು ತಮ್ಮ ಉತ್ತರಗಳನ್ನು ಪರಿಶೀಲಿಸಿಕೊಳ್ಳಬಹುದು. ಕೆಇಎ ಬಿಡುಗಡೆ ಮಾಡಿರುವ ಕೀ ಉತ್ತರಗಳಿಗೆ ಯಾವುದೇ ಆಕ್ಷೇಪಣೆಗಳಿದ್ದಲ್ಲಿ, ಅವುಗಳನ್ನು ಸಲ್ಲಿಸಲು ಆಸಕ್ತ ಅಭ್ಯರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ. ಆಕ್ಷೇಪಣೆ ಸಲ್ಲಿಸಲು ಆಗಸ್ಟ್ 6 ರ ಬೆಳಿಗ್ಗೆ 10.30 ರವರೆಗೆ ಕಾಲಾವಕಾಶ ನೀಡಲಾಗಿದೆ. ಅಭ್ಯರ್ಥಿಗಳು ಹೆಚ್ಚಿನ
Aug 41 min read


ಕೇರಳದಲ್ಲಿ ಭಾರಿ ಮಳೆ, ಪ್ರವಾಹ ಹಾಗೂ ಭೂಕುಸಿತ: 15 ಮಂದಿ ಬಲಿ, ಹಲವರು ನಾಪತ್ತೆ
ದೇವರನಾಡು ಕೇರಳದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಸಾಲು ಸಾಲು ಅನಾಹುತಗಳು ಸಂಭವಿಸಿವೆ. ಭೀಕರ ಪ್ರವಾಹ ಹಾಗೂ ಭೂಕುಸಿತದ ಪರಿಣಾಮವಾಗಿ ಈವರೆಗೆ 15 ಜನರು ಪ್ರಾಣ ಕಳೆದುಕೊಂಡಿದ್ದು, 7 ಜನರು ನಾಪತ್ತೆಯಾಗಿದ್ದಾರೆ. ಪರಿಸ್ಥಿತಿಯ ಗಂಭೀರತೆಯನ್ನು ಪರಿಗಣಿಸಿ ರಾಜ್ಯ ಸರ್ಕಾರವು ತಕ್ಷಣವೇ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದು, ರಾಜ್ಯಾದ್ಯಂತ ಒಟ್ಟು 316 ಪರಿಹಾರ ಶಿಬಿರಗಳನ್ನು ತೆರೆದು 11,018 ಕ್ಕೂ ಹೆಚ್ಚು ಜನರಿಗೆ ಸುರಕ್ಷಿತ ಆಶ್ರಯ ಕಲ್ಪಿಸಿದೆ. ಮಳೆ ಅಬ್ಬರಕ್ಕೆ ರಾಜ್ಯದ ವಿವಿಧ ಜಿಲ್ಲೆಗಳು ತೀವ್ರವಾಗಿ ತತ್ತರಿಸಿವೆ. ಕೊಟ್ಟಾಯಂ ಜಿಲ್ಲೆಯಲ್ಲಿ ಮಗುವೂ
Aug 41 min read


ಆ. 4ರಂದು ಭಾರೀ ಮಳೆ ಸಾಧ್ಯತೆ: ಉಡುಪಿ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ
ಉಡುಪಿ: ಹವಾಮಾನ ಇಲಾಖೆ ಭಾರೀ ಮಳೆಯ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಆಗಸ್ಟ್ 4 (ಮಂಗಳವಾರ) ರಜೆ ಘೋಷಿಸಲಾಗಿದೆ. ಉಡುಪಿ ಜಿಲ್ಲಾಧಿಕಾರಿ ಸ್ವರೂಪ್ ಟಿ.ಕೆ. ಅವರು ಈ ಕುರಿತು ಪ್ರಕಟಣೆ ಹೊರಡಿಸಿದ್ದು, ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಇದೀಗ ಕರ್ನಾಟಕದಲ್ಲಿ ನೈರುತ್ಯ ಮುಂಗಾರು ಚುರುಕುಗೊಂಡಿದ್ದು, ಮುಂದಿನ ಮೂರು ದಿನಗಳ ಕಾಲ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಹವಾಮಾನ ಇಲಾಖೆ ಮುನ್ಸೂಚನೆಯ ಪ್ರಕಾರ, ಆಗಸ್ಟ್ 7
Aug 31 min read


ಉಳ್ಳಾಲ: ವಿದ್ಯುತ್ ಆಘಾತದಿಂದ ಮೆಸ್ಕಾಂ ಲೈನ್ಮೆನ್ ದುರಂತ ಸಾವು
ಉಳ್ಳಾಲ ತಾಲೂಕಿನ ಉಚ್ಚಿಲ ನಯಾಪಟ್ಟಣದಲ್ಲಿ ಇಂದು ಬೆಳಿಗ್ಗೆ ಟ್ರಾನ್ಸ್ಫಾರ್ಮರ್ ದುರಸ್ತಿ ವೇಳೆ ವಿದ್ಯುತ್ ಆಘಾತಕ್ಕೊಳಗಾಗಿ ಮೆಸ್ಕಾಂ ಲೈನ್ಮೆನ್ ಮೃತಪಟ್ಟಿದ್ದಾರೆ. ಅಂಬಿಕಾರೋಡ್ ಪಿಲಾರು ನಿವಾಸಿ ಶೇಖ್ ಝಮೀರ್ (49) ಮೃತಪಟ್ಟ ದೌರ್ಭಾಗ್ಯಕರ ವ್ಯಕ್ತಿಯಾಗಿದ್ದಾರೆ. ಟ್ರಾನ್ಸ್ಫಾರ್ಮರ್ನಲ್ಲಿದ್ದ ದೋಷ ಸರಿಪಡಿಸಲು ಬಂದಿದ್ದ ಝಮೀರ್, ಜಿಒಎಸ್ (ಗ್ರೂಪ್ ಆಪರೇಟೆಡ್ ಸ್ವಿಚ್) ಆಫ್ ಆಗಿದೆಯೆಂದು ಭಾವಿಸಿ ಟಿಸಿ ಏರಿದ್ದರು. ಈ ವೇಳೆ ವಿದ್ಯುತ್ ಸ್ಪರ್ಶಿಸಿ ಕೆಳಗೆ ಬಿದ್ದ ಅವರನ್ನು ಆಸ್ಪತ್ರೆಗೆ ಒಯ್ಯುವಾಗ ದಾರಿ ಮಧ್ಯೆ ಕೊನೆಯುಸಿರೆಳೆದರು. ಮೃತ ಶೇಖ್ ಝಮೀರ್ ಅವರು ಪತ್ನಿ ಹಾಗೂ ಓರ್ವ ಹೆಣ್ಣುಮಗಳ
Aug 31 min read
Archive
bottom of page





