top of page
News Articles
Sathyapatha News Plus


ಬೈಕ್ ಡಿಕ್ಕಿ: ಪ್ರಗತಿಪರ ಕೃಷಿಕ ದಿನೇಶ್ ಗಟ್ಟಿ ನಿಧನ
ಮಂಗಳೂರಿನ ಕುತ್ತಾರು ಸಮೀಪದ ಮದನಿ ನಗರದಲ್ಲಿ ರಸ್ತೆ ದಾಟುತ್ತಿದ್ದಾಗ ವೇಗವಾಗಿ ಬಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ, ಮುಂಡೋಳಿ ನಿವಾಸಿ ಹಾಗೂ ಪ್ರಗತಿಪರ ಕೃಷಿಕ ದಿನೇಶ್ ಗಟ್ಟಿ (50) ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ. ಬೈಕ್ ಸವಾರನ ಅತಿವೇಗ ಮತ್ತು ನಿರ್ಲಕ್ಷ್ಯವೇ ಈ ಅಪಘಾತಕ್ಕೆ ನೇರ ಕಾರಣ ಎನ್ನಲಾಗಿದೆ. ಕೂಡಲೇ ದಿನೇಶ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದರು. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಈ ಘಟನೆ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಹಾಗ
Mar 121 min read


ಸುಳ್ಯದಲ್ಲಿ ದುರಂತ: ಕಾಲೇಜು ಉಪನ್ಯಾಸಕ ಹಠಾತ್ ಕುಸಿದು ಬಿದ್ದು ಸಾವು
ಸುಳ್ಯ ಕೊಡಿಯಾಲ್ ಬೈಲ್ನಲ್ಲಿರುವ ಸರ್ಕಾರಿ ಪದವಿ ಕಾಲೇಜಿನ ಕನ್ನಡ ಉಪನ್ಯಾಸಕರಾದ ಮಂಜು (42) ಅವರು ಹಠಾತ್ ಕುಸಿದು ಬಿದ್ದು ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಮಂಜು ಅವರು ಕಳೆದ ಎರಡು ವರ್ಷಗಳಿಂದ ಈ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದರು. ಆರಂಭದಲ್ಲಿ ಹೈಸ್ಕೂಲ್ನಲ್ಲಿ ಪಾಠ ನಿರ್ವಹಿಸುತ್ತಿದ್ದ ಅವರು ನಂತರ ಪದವಿ ಕಾಲೇಜಿಗೆ ಭಡ್ತಿ ಪಡೆದು ಉಪನ್ಯಾಸಕರಾಗಿ ಕೆಲಸ ಮಾಡುತ್ತಿದ್ದರು. ಅವರು ಮೂಲತಃ ಮೈಸೂರು ಜಿಲ್ಲೆಯ ಕೆ.ಆರ್. ನಗರ ಮೂಲದವರಾಗಿದ್ದಾರೆ ಎಂದು ತಿಳಿದುಬಂದಿದೆ. Ad ಗುರುವಾರ ಮಧ್ಯಾಹ್ನ ಕಾಲೇಜಿನ ಸಿಬ್ಬಂದಿಯೊಂದಿಗೆ ಮಾತನಾಡಿದ ನಂತರ ಮಂಜು ಅವರು “ಸ್
Mar 121 min read


ಐತಿಹಾಸಿಕ ತೀರ್ಪು: ಹರೀಶ್ ರಾಣಾಗೆ ಸುಪ್ರೀಂ ಕೋರ್ಟ್ನಿಂದ 'ಪರೋಕ್ಷ ದಯಾಮರಣ' ಅನುಮತಿ
13 ವರ್ಷಗಳಿಂದ ಕೋಮಾದಲ್ಲಿದ್ದ 32 ವರ್ಷದ ಹರೀಶ್ ರಾಣಾ ಅವರಿಗೆ ಗೌರವಯುತವಾಗಿ ಸಾಯಲು ಸುಪ್ರೀಂ ಕೋರ್ಟ್ ಐತಿಹಾಸಿಕ ಅನುಮತಿ ನೀಡಿದೆ. ಚೇತರಿಕೆಯ ಸಾಧ್ಯತೆಯಿಲ್ಲದ ಕಾರಣ, ಅವರಿಗೆ ನೀಡಲಾಗುತ್ತಿರುವ ಕೃತಕ ಆಹಾರ ಮತ್ತು ವೈದ್ಯಕೀಯ ಚಿಕಿತ್ಸೆಯನ್ನು ಹಿಂಪಡೆಯಲು ನ್ಯಾಯಾಲಯವು ಹಸಿರು ನಿಶಾನೆ ತೋರಿಸಿದೆ. ಈ ಹಿಂದೆ ಕೇವಲ ವೆಂಟಿಲೇಟರ್ಗಳಂತಹ ವ್ಯವಸ್ಥೆ ತೆಗೆಯಲು ಮಾತ್ರ ಅವಕಾಶವಿತ್ತು. ಆದರೆ, ಈ ತೀರ್ಪಿನ ಮೂಲಕ 'ಫೀಡಿಂಗ್ ಟ್ಯೂಬ್' ಮೂಲಕ ಜೀವ ಬೆಂಬಲ ಪಡೆಯುತ್ತಿರುವ ರೋಗಿಗಳಿಗೂ ದಯಾಮರಣ ಅನ್ವಯಿಸಬಹುದು ಎಂದು ನ್ಯಾಯಮೂರ್ತಿಗಳಾದ ಜೆ.ಬಿ. ಪರ್ದಿವಾಲಾ ಮತ್ತು ಕೆ.ವಿ. ವಿಶ್ವನಾಥನ್ ಅವರ ಪೀಠವು ಸ್
Mar 111 min read


ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗೆ ಹವಾಮಾನ ಇಲಾಖೆಯಿಂದ ಯೆಲ್ಲೋ ಅಲರ್ಟ್ ಘೋಷಣೆ
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಬಿಸಿಲಿನ ತೀವ್ರತೆ ಹೆಚ್ಚಾಗಲಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್ ಘೋಷಿಸಿದೆ. ಈ ಭಾಗಗಳಲ್ಲಿ ಬಿಸಿ ಗಾಳಿ ಬೀಸುವ ಸಾಧ್ಯತೆಯಿದ್ದು, ಸಾರ್ವಜನಿಕರು ಅನಿವಾರ್ಯ ಕೆಲಸಗಳ ಹೊರತಾಗಿ ಮಧ್ಯಾಹ್ನದ ಸಮಯದಲ್ಲಿ ಹೊರಗೆ ಓಡಾಡುವಾಗ ಹೆಚ್ಚಿನ ಮುನ್ನೆಚ್ಚರಿಕೆ ವಹಿಸಬೇಕು. ವಾಹನಗಳನ್ನು ಉರಿ ಬಿಸಿಲಿನಲ್ಲಿ ನಿಲ್ಲಿಸಿದಾಗ ಅದರೊಳಗೆ ಮಕ್ಕಳು ಅಥವಾ ವೃದ್ಧರು ಇರದಂತೆ ವಿಶೇಷ ನಿಗಾ ವಹಿಸುವುದು ಅತ್ಯಗತ್ಯವಾಗಿದೆ. ಬಿಸಿಲಿನ ಬೇಗೆಯಿಂದ ಆರೋಗ್ಯವನ್ನು ರಕ್ಷಿಸಿಕೊಳ್ಳಲು ಸಾರ್ವಜನಿಕರು ಹೆಚ್ಚಿನ ಪ್ರಮಾ
Mar 111 min read


ಕುಕ್ಕೆ ಸುಬ್ರಹ್ಮಣ್ಯಕ್ಕೂ ತಟ್ಟಿದ ಇರಾನ್-ಅಮೆರಿಕ ಯುದ್ಧದ ಬಿಸಿ: ಇಂದಿನಿಂದ ಭಕ್ತರ ಉಪಹಾರದಲ್ಲಿ ಬದಲಾವಣೆ!
ಇರಾನ್ ಮತ್ತು ಅಮೆರಿಕ ನಡುವಿನ ಯುದ್ಧದ ಪರಿಣಾಮವಾಗಿ ಉಂಟಾಗಿರುವ ಅನಿಲ ಪೂರೈಕೆ ವ್ಯತ್ಯಯವು ಇದೀಗ ರಾಜ್ಯದ ಶ್ರೀಮಂತ ದೇವಸ್ಥಾನ ಕುಕ್ಕೆ ಸುಬ್ರಹ್ಮಣ್ಯಕ್ಕೂ ತಟ್ಟಿದೆ. ಗ್ಯಾಸ್ ಕೊರತೆಯಿಂದಾಗಿ ಮಾರ್ಚ್ 11ರ ಬುಧವಾರದಿಂದ ಭಕ್ತರಿಗೆ ನೀಡಲಾಗುವ ಬೆಳಗ್ಗಿನ ಉಪಹಾರದ ಮೆನುವಿನಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ನಿತ್ಯ ನೀಡಲಾಗುತ್ತಿದ್ದ ಬಿಸಿಬಿಸಿ ವೈವಿಧ್ಯಮಯ ತಿಂಡಿಗಳ ಬದಲಾಗಿ, ಗ್ಯಾಸ್ ಉಳಿತಾಯ ಮಾಡುವ ಉದ್ದೇಶದಿಂದ ಇಂದಿನಿಂದ ಭಕ್ತರಿಗೆ ಅವಲಕ್ಕಿ ಮತ್ತು ಮೊಸರನ್ನು ವಿತರಿಸಲು ದೇವಸ್ಥಾನದ ಆಡಳಿತ ಮಂಡಳಿ ನಿರ್ಧರಿಸಿದೆ. ಪ್ರಸ್ತುತ ದೇವಸ್ಥಾನದಲ್ಲಿ ಕೇವಲ ಮೂರು ದಿನಗಳಿಗೆ ಸಾಕಾಗುವಷ್ಟು ಮಾತ
Mar 111 min read


ಬೆಂಗಳೂರು ಕಂಬಳಕ್ಕೆ ಸುಪ್ರೀಂ ಕೋರ್ಟ್ ಹಸಿರು ನಿಶಾನೆ
ಕರಾವಳಿಯ ಸಾಂಪ್ರದಾಯಿಕ ಕ್ರೀಡೆ 'ಕಂಬಳ'ವನ್ನು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಹೊರಗೆ ನಡೆಸುವುದನ್ನು ಪ್ರಶ್ನಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ರಾಜ್ಯದ ಸಂಸ್ಕೃತಿಯನ್ನು ವಿವಿಧ ಭಾಗಗಳಲ್ಲಿ ಪ್ರದರ್ಶಿಸುವುದರಲ್ಲಿ ತಪ್ಪೇನಿದೆ ಎಂದು ನ್ಯಾಯಪೀಠವು ಈ ಸಂದರ್ಭದಲ್ಲಿ ಪ್ರಶ್ನಿಸಿದೆ. ಬೆಂಗಳೂರಿನಲ್ಲಿ ಕಂಬಳ ನಡೆಸುವುದಕ್ಕೆ ಯಾವುದೇ ಸಾಂಪ್ರದಾಯಿಕ ಸಂಬಂಧವಿಲ್ಲ ಎಂಬ ವಾದವನ್ನು ತಳ್ಳಿಹಾಕಿದ ಕೋರ್ಟ್, ಕ್ರೀಡೆಯನ್ನು ಒಂದು ನಿರ್ದಿಷ್ಟ ಪ್ರದೇಶಕ್ಕೆ ಸೀಮಿತಗೊಳಿಸಲು ನಿರಾಕರಿಸಿತು. ಇದರಿಂದಾಗಿ ಬೆಂಗಳೂರಿನಲ್ಲಿ ಕಂಬಳ ಆಯೋಜಿಸಲು ಇದ್ದ ಅಡ್ಡಿಗಳು ನಿವಾರಣೆಯಾದಂತಾಗಿದೆ
Mar 111 min read


ಉಪ್ಪಿನಂಗಡಿ: ಅಕ್ರಮವಾಗಿ ಸಂಗ್ರಹಿಸಿದ್ದ 4,175 ಲೀಟರ್ ಡೀಸೆಲ್ ವಶ
ಉಪ್ಪಿನಂಗಡಿ ಸಮೀಪದ ಕಣಿಯೂರು ಗ್ರಾಮದಲ್ಲಿ ಅಕ್ರಮವಾಗಿ ಶೇಖರಿಸಿಟ್ಟಿದ್ದ ಸುಮಾರು 4,175 ಲೀಟರ್ ಡೀಸೆಲ್ ಅನ್ನು ಪೊಲೀಸರು ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ. ಡಿವೈಎಸ್ಪಿ ರೋಹಿಣಿ ಸಿ.ಕೆ. ಅವರಿಗೆ ಲಭಿಸಿದ ಖಚಿತ ಮಾಹಿತಿ ಮೇರೆಗೆ ಈ ಕಾರ್ಯಾಚರಣೆ ನಡೆದಿದೆ. ಸ್ಥಳೀಯ ನಿವಾಸಿ ಜಗದೀಶ್ ಎಂಬಾತನ ಮನೆಯ ಶೆಡ್ನಲ್ಲಿ 20 ಬ್ಯಾರೆಲ್ ಹಾಗೂ 5 ಕ್ಯಾನ್ಗಳಲ್ಲಿ ಇಂಧನ ಪತ್ತೆಯಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ಸುಮಾರು ರೂ. 3,50,000 ಎಂದು ಅಂದಾಜಿಸಲಾಗಿದ್ದು, ಯಾವುದೇ ಪರವಾನಗಿ ಇಲ್ಲದೆ ಇದನ್ನು ಸಂಗ್ರಹಿಸಲಾಗಿತ್ತು. ಈ ಸಂಬಂಧ ಆರೋಪಿ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) ಹಾಗ
Mar 111 min read


ಇಂಡಿಗೋ ಸಿಇಒ ಪೀಟರ್ ಎಲ್ಬರ್ಸ್ ದಿಢೀರ್ ರಾಜೀನಾಮೆ
ಡಿಸೆಂಬರ್ನಲ್ಲಿ ಎದುರಾದ ವಿಮಾನ ಬಿಕ್ಕಟ್ಟಿನ ಬೆನ್ನಲ್ಲೇ ಇಂಡಿಗೋ ಸಿಇಒ ಪೀಟರ್ ಎಲ್ಬರ್ಸ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ವೈಯಕ್ತಿಕ ಕಾರಣ ನೀಡಿರುವ ಅವರು, ನೋಟಿಸ್ ಅವಧಿ ಮನ್ನಾ ಮಾಡುವಂತೆ ಕೋರಿದ್ದಾರೆ. ಸದ್ಯ ಎಂಡಿ ರಾಹುಲ್ ಭಾಟಿಯಾ ಸಂಸ್ಥೆಯ ಮಧ್ಯಂತರ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಸಂಸ್ಥೆಯ ಸಹ-ಸಂಸ್ಥಾಪಕ ಭಾಟಿಯಾಗೆ ಪತ್ರ ಬರೆದಿರುವ ಎಲ್ಬರ್ಸ್, ತಕ್ಷಣವೇ ಹುದ್ದೆಯಿಂದ ಬಿಡುಗಡೆ ಮಾಡುವಂತೆ ವಿನಂತಿಸಿದ್ದಾರೆ. ಈ ಬದಲಾವಣೆಯು ವಿಮಾನಯಾನ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.
Mar 101 min read


ಸರಗಳ್ಳತನಕ್ಕೆ ಮುಂದಾದ ಖದೀಮ: ಕೈಕೊಟ್ಟ ಬೈಕ್, ಸಾರ್ವಜನಿಕರಿಂದ ಧರ್ಮದೇಟು!
ಶ್ರೀಲಂಕಾದ ವೆಣ್ಣಪ್ಪುವಾದಲ್ಲಿ ಸ್ಕೂಟಿಯಲ್ಲಿ ತೆರಳುತ್ತಿದ್ದ ಯುವತಿಯನ್ನು ಅಡ್ಡಗಟ್ಟಿದ ದುಷ್ಕರ್ಮಿಯೊಬ್ಬ ಆಕೆಯ ಚಿನ್ನದ ಸರವನ್ನು ಕಸಿದು ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಯುವತಿ ಕೆಳಕ್ಕೆ ಬಿದ್ದಿದ್ದು, ಆರೋಪಿ ಆಕೆಯ ಕುತ್ತಿಗೆಯಲ್ಲಿದ್ದ ಸರವನ್ನು ಬಲವಂತವಾಗಿ ಕಿತ್ತುಕೊಂಡಿದ್ದಾನೆ. ಘಟನೆಯ ಸಂಪೂರ್ಣ ದೃಶ್ಯಾವಳಿಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಸರ ಕಸಿದು ಎಸ್ಕೇಪ್ ಆಗುವ ಸಂಭ್ರಮದಲ್ಲಿದ್ದ ಕಳ್ಳನಿಗೆ ಆತನ ಬೈಕ್ ಕೈಕೊಟ್ಟಿದೆ. ಬೈಕ್ ಸ್ಟಾರ್ಟ್ ಆಗದ ಕಾರಣ ಸ್ಥಳದಲ್ಲಿದ್ದ ಜನರು ಆತನನ್ನು ಹಿಡಿದು ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ಕಳ್ಳನ ದುರದೃಷ್ಟ ಮತ್ತು ಸಾರ್ವಜ
Mar 101 min read


ವಿಜಯ್ ರಾಜಕೀಯ ಅಖಾಡಕ್ಕೆ ಸಜ್ಜು: ಟಿಕೆಟ್ ಹಂಚಿಕೆಗಾಗಿ ಆಕಾಂಕ್ಷಿಗಳ ಮುಖಾಮುಖಿ ಸಂದರ್ಶನ
ತಮಿಳುನಾಡು ವಿಧಾನಸಭಾ ಚುನಾವಣೆಗೆ ಸಜ್ಜಾಗುತ್ತಿರುವ ನಟ ವಿಜಯ್, ತಮ್ಮ 'ತಮಿಳಗ ವೆಟ್ರಿ ಕಳಗಂ' ಪಕ್ಷದಿಂದ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ರಾಜ್ಯದ ಎಲ್ಲಾ ಕ್ಷೇತ್ರಗಳಲ್ಲಿ ಸ್ಪರ್ಧಿಸುವುದಾಗಿ ಈಗಾಗಲೇ ಘೋಷಿಸಿರುವ ಅವರು, ಗೆಲ್ಲುವ ಕುದುರೆಗಳನ್ನು ಪತ್ತೆಹಚ್ಚಲು ಸ್ವತಃ ಆಕಾಂಕ್ಷಿಗಳ ಸಂದರ್ಶನ ನಡೆಸುತ್ತಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ. ಚುನಾವಣಾ ದಿನಾಂಕ ಘೋಷಣೆಗೆ ಮುನ್ನವೇ ತಯಾರಿ ನಡೆಸಿರುವ ವಿಜಯ್, ಅಭ್ಯರ್ಥಿಗಳ ಸಾಮರ್ಥ್ಯ ಮತ್ತು ಜನಪ್ರಿಯತೆಯನ್ನು ಅಳೆದು ಅಂತಿಮ ಪಟ್ಟಿಯನ್ನು ಸಿದ್ಧಪಡಿಸುತ್ತಿದ್ದಾರೆ. ಅರ್ಹರಿಗೆ
Mar 101 min read


ಎಲ್ಪಿಜಿ ಸಿಲಿಂಡರ್ ಕೊರತೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ
ದೇಶದ ಹಲವೆಡೆ ಗೃಹಬಳಕೆಯ ಎಲ್ಪಿಜಿ ಸಿಲಿಂಡರ್ ಕೊರತೆ ಎದುರಾಗಿದ್ದು, ಜನಸಾಮಾನ್ಯರು ಆತಂಕಗೊಂಡಿದ್ದಾರೆ. ಗಲ್ಫ್ ರಾಷ್ಟ್ರಗಳಿಂದ ಪೂರೈಕೆ ವ್ಯತ್ಯಯವಾಗಿರುವುದರಿಂದ ಕಾಳಸಂತೆಯಲ್ಲಿ ಸಿಲಿಂಡರ್ ಬೆಲೆ 1,500 ರೂಪಾಯಿವರೆಗೆ ಏರಿಕೆಯಾಗಿದೆ. ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರ, ತಕ್ಷಣವೇ ಉತ್ಪಾದನೆ ಹೆಚ್ಚಿಸುವಂತೆ ತೈಲ ಕಂಪನಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ದಾಸ್ತಾನು ಮತ್ತು ಕಾಳಸಂತೆ ಮಾರಾಟ ತಡೆಯಲು ಸಿಲಿಂಡರ್ ಬುಕ್ಕಿಂಗ್ ಅವಧಿಯನ್ನು 21 ರಿಂದ 25 ದಿನಗಳಿಗೆ ಏರಿಸಲಾಗಿದೆ. ಆಸ್ಪತ್ರೆ ಮತ್ತು ಶಿಕ್ಷಣ ಸಂಸ್ಥೆಗಳಿಗೆ ಆದ್ಯತೆಯ ಮೇಲೆ ಅನಿಲ ಪೂರೈಸಲು ಪೆಟ್ರೋಲಿ
Mar 101 min read


ಉಪ್ಪಿನಂಗಡಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು-ಆಟೋ ಡಿಕ್ಕಿ: ಐವರು ಶಾಲಾ ಮಕ್ಕಳಿಗೆ ಗಾಯ
ರಾಷ್ಟ್ರೀಯ ಹೆದ್ದಾರಿ 75 ರ ಸರ್ವೀಸ್ ರಸ್ತೆಯಲ್ಲಿ ಸೋಮವಾರ ಸಂಜೆ ಕಾರು ಮತ್ತು ಆಟೋ ರಿಕ್ಷಾ ನಡುವೆ ಭೀಕರ ಅಪಘಾತ ಸಂಭವಿಸಿದೆ. ಉಪ್ಪಿನಂಗಡಿ ಸರ್ಕಾರಿ ಶಾಲೆಯ ಐವರು ವಿದ್ಯಾರ್ಥಿಗಳು ಹಾಗೂ ಆಟೋ ಚಾಲಕ ಕಲಂದರ್ ಶಾಫಿ (46) ಗಾಯಗೊಂಡಿದ್ದಾರೆ. ಶಾಲೆಯಿಂದ ಮನೆಗೆ ಮರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಗಾಯಗೊಂಡ ವಿದ್ಯಾರ್ಥಿಗಳಾದ ಮಹಮ್ಮದ್ ಜಾಝೀಬ್, ಇರ್ಷಾದ್, ನೂರ್ ಮಹಮದ್, ರಾಝೀಲ್ ಮತ್ತು ಪುಟ್ಟ ಬಾಲಕಿ ಸಜ್ಮಾ ಅವರನ್ನು ತಕ್ಷಣ ಸ್ಥಳೀಯ ಸೂರ್ಯ ಆಸ್ಪತ್ರೆಗೆ ದಾಖಲಿಸಲಾಯಿತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ನೆಕ
Mar 101 min read


ಸರ್ಕಾರಿ ಆಸ್ಪತ್ರೆಗಳ ಓಪಿಡಿ ಬಂದ್: ರೋಗಿಗಳಿಗೆ ಚಿಕಿತ್ಸೆ ಆತಂಕ
ಕರ್ನಾಟಕದ ಸರ್ಕಾರಿ ವೈದ್ಯರು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಮಾರ್ಚ್ 11 ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಈ ನಿರ್ಧಾರದಿಂದಾಗಿ ರಾಜ್ಯಾದ್ಯಂತ ಸರ್ಕಾರಿ ಆಸ್ಪತ್ರೆಗಳ ಹೊರರೋಗಿ ವಿಭಾಗ (OPD) ಸೇವೆಗಳು ಸಂಪೂರ್ಣ ಸ್ಥಗಿತಗೊಳ್ಳುವ ಸಾಧ್ಯತೆಯಿದೆ. ಇದರಿಂದ ಬಡ ಮತ್ತು ಮಧ್ಯಮ ವರ್ಗದ ರೋಗಿಗಳಿಗೆ ಆರೋಗ್ಯ ಸೇವೆಯಲ್ಲಿ ಭಾರಿ ವ್ಯತ್ಯಯ ಉಂಟಾಗುವ ಭೀತಿ ಎದುರಾಗಿದೆ. ಮುಷ್ಕರದ ಹಿನ್ನೆಲೆಯಲ್ಲಿ ಜ್ವರ, ಕೆಮ್ಮು ಹಾಗೂ ಸಾಮಾನ್ಯ ಕಾಯಿಲೆಗಳಿಗೆ ಚಿಕಿತ್ಸೆ ಪಡೆಯುವವರು ಪರದಾಡುವಂತಾಗಿದೆ. ಕೇವಲ ವೈದ್ಯಕೀಯ ತಪಾಸಣೆ ಮಾತ್ರವಲ್ಲದೆ, ರಕ್ತ ಪರೀಕ್ಷೆ ಹಾಗೂ ಸ್ಕ್ಯಾನಿಂಗ್ನಂತಹ ಅಗತ್
Mar 101 min read


ಮಲ್ಲಿಕಾರ್ಜುನ ಮುತ್ಯಾಗೆ ಕೋರ್ಟ್ ಶಾಕ್
ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಮಹಲ್ ರೋಜಾ ಮಠದ ಮಲ್ಲಿಕಾರ್ಜುನ ಮುತ್ಯಾಗೆ ಹಿನ್ನಡೆಯಾಗಿದೆ. ಯಾದಗಿರಿಯ ವಿಶೇಷ ನ್ಯಾಯಾಲಯವು ಆರೋಪಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಇಂದು ವಜಾಗೊಳಿಸಿ ಆದೇಶ ಹೊರಡಿಸಿದೆ. ಪ್ರಕರಣದ ಗಂಭೀರತೆಯನ್ನು ಪರಿಗಣಿಸಿದ ನ್ಯಾಯಾಧೀಶರಾದ ಮರಳುಸಿದ್ದರಾಧ್ಯ ಅವರು, ಆರೋಪಿಗೆ ರಕ್ಷಣೆ ನೀಡಲು ನಿರಾಕರಿಸಿದ್ದಾರೆ. ಈ ತೀರ್ಪಿನಿಂದಾಗಿ ಪೋಕ್ಸೋ (POCSO) ಕಾಯಿದೆಯಡಿ ದಾಖಲಾಗಿರುವ ಪ್ರಕರಣದಲ್ಲಿ ಮುತ್ಯಾಗೆ ಬಂಧನದ ಭೀತಿ ಎದುರಾಗಿದೆ. ಜಿಲ್ಲಾ ನ್ಯಾಯಾಲಯದಲ್ಲಿ ಅರ್ಜಿ ವಜಾಗೊಂಡಿರುವ ಹಿನ್ನೆಲೆಯಲ್ಲಿ, ಮಲ್ಲಿಕಾರ್ಜುನ ಮುತ್ಯಾ ಈಗ
Mar 101 min read


ಆಟೋ ಪ್ರಯಾಣಿಕರಿಗೆ ದರ ಏರಿಕೆ ಬಿಸಿ
ಇರಾನ್-ಇಸ್ರೇಲ್ ಸಂಘರ್ಷದ ಹಿನ್ನೆಲೆಯಲ್ಲಿ ಆಟೋ LPG ಬೆಲೆ ಪ್ರತಿ ಲೀಟರ್ಗೆ ₹10 ರಿಂದ ₹20 ರವರೆಗೆ ಏರಿಕೆಯಾಗಿದ್ದು, ಜನಸಾಮಾನ್ಯರಿಗೆ ಭಾರೀ ಹೊರೆಯಾಗಿದೆ. ಅಂತರಾಷ್ಟ್ರೀಯ ಬಿಕ್ಕಟ್ಟಿನಿಂದಾಗಿ ಮುಂದಿನ ವಾರ ಇಂಧನ ದರ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಆಟೋ ಮತ್ತು ಕ್ಯಾಬ್ ಚಾಲಕರು ಈಗಿನಿಂದಲೇ ಪ್ರತಿ ಕಿಲೋಮೀಟರ್ಗೆ ಹೆಚ್ಚುವರಿ ಹಣ ಬೇಡುತ್ತಿದ್ದಾರೆ. ಇದರಿಂದಾಗಿ ಪ್ರಯಾಣಿಕರು ಮತ್ತು ಚಾಲಕರ ನಡುವೆ ದರದ ವಿಚಾರವಾಗಿ ಪ್ರತಿದಿನ ವಾಗ್ವಾದಗಳು ನಡೆಯುತ್ತಿವೆ. ಇಂಧನ ಬೆಲೆ ಏರಿಕೆಗೆ ಅನುಗುಣವಾಗಿ ಅಧಿಕೃತ ಮೀಟರ್ ದರವನ್
Mar 101 min read


ಜೈಲು ಕೈದಿಗಳ ಭೇಟಿಗೆ ಹೊಸ ನಿಯಮ ಜಾರಿ
ಜೈಲುಗಳಲ್ಲಿನ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಕಾರಾಗೃಹ ಮತ್ತು ಸುಧಾರಣಾ ಇಲಾಖೆ ಡಿಜಿಪಿ ಅಲೋಕ್ ಕುಮಾರ್ ಹೊಸ ಮಾರ್ಗಸೂಚಿ ಹೊರಡಿಸಿದ್ದಾರೆ. ದೀರ್ಘಕಾಲ ಒಂದೇ ಕಡೆ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಯನ್ನು ವರ್ಗಾವಣೆ ಮಾಡಲು ನಿರ್ಧರಿಸಲಾಗಿದ್ದು, ಕೈದಿಗಳ ಭೇಟಿ ಪ್ರಕ್ರಿಯೆಯಲ್ಲಿ ಪ್ರಮುಖ ಬದಲಾವಣೆ ತರಲಾಗಿದೆ. ವಿಶೇಷ ಸಂದರ್ಶನದ ಅಡಿಯಲ್ಲಿ, ಗಂಭೀರ ಅನಾರೋಗ್ಯ ಅಥವಾ ಗಾಯಗೊಂಡು ನಡೆಯಲು ಸಾಧ್ಯವಾಗದ ಕೈದಿಗಳಿಗೆ ಮಾತ್ರ ತಿಂಗಳಿಗೊಮ್ಮೆ ಕುಟುಂಬದವರನ್ನು ಭೇಟಿ ಮಾಡಲು ಅವಕಾಶ ನೀಡಲಾಗಿದೆ. ಸಾಮಾನ್ಯ ಭೇಟಿಗಳ ಮೇಲೆ ನಿಗಾ ಇರಿಸಲು ಮತ್ತು ಶಿಸ್ತು ಕಾಪಾಡಲು ಈ ಕಠಿಣ ನಿಯಮ ರೂಪಿಸಲಾಗಿದೆ.
Mar 101 min read


ಎಲ್ಪಿಜಿ ಬುಕ್ಕಿಂಗ್ ಅವಧಿ 25 ದಿನಕ್ಕೆ ಏರಿಕೆ
ದೇಶದಲ್ಲಿ ಎಲ್ಪಿಜಿ ಸಿಲಿಂಡರ್ಗಳ ಕೃತಕ ಅಭಾವ ಹಾಗೂ ಕಾಳಸಂತೆಯನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಕಠಿಣ ಕ್ರಮ ಕೈಗೊಂಡಿದೆ. ಗ್ಯಾಸ್ ಸಿಲಿಂಡರ್ಗಳ ಅಕ್ರಮ ದಾಸ್ತಾನು ತಡೆಯಲು ಎರಡು ಬುಕ್ಕಿಂಗ್ಗಳ ನಡುವಿನ ಕನಿಷ್ಠ ಅವಧಿಯನ್ನು 21 ದಿನಗಳಿಂದ 25 ದಿನಗಳಿಗೆ ಹೆಚ್ಚಿಸಿ ಹೊಸ ಮಾರ್ಗಸೂಚಿ ಪ್ರಕಟಿಸಿದೆ. ಯುದ್ಧದ ಭೀತಿಯಿಂದಾಗಿ ಜನರು ಮುನ್ನೆಚ್ಚರಿಕೆಯಾಗಿ ಕೇವಲ 15 ದಿನಗಳ ಅಂತರದಲ್ಲೇ ಸಿಲಿಂಡರ್ ಕಾಯ್ದಿರಿಸುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಈ ಹಿಂದೆ ಗ್ರಾಹಕರು ಸರಾಸರಿ 55 ದಿನಗಳಿಗೊಮ್ಮೆ ಬುಕ್ ಮಾಡುತ್ತಿದ್ದರು. ಆದರೆ ಈಗಿನ ಅನಗತ್ಯ ಆತುರವು ಪೂರೈಕೆಯ ಮೇಲೆ ಒತ್ತಡ ಹೇರುತ್ತಿದೆ.
Mar 101 min read


ಪ್ರಾಜೆಕ್ಟ್ ಚೀತಾ ಯಶಸ್ಸು: ಕುನೋದಲ್ಲಿ ಐದು ಮರಿಗಳಿಗೆ ಜನ್ಮ ನೀಡಿದ 'ಜ್ವಾಲಾ'
ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ನಮೀಬಿಯಾದಿಂದ ತರಲಾಗಿದ್ದ 'ಜ್ವಾಲಾ' ಎಂಬ ಚೀತಾ ಇಂದು (ಮಾರ್ಚ್ 09) ಐದು ಮರಿಗಳಿಗೆ ಜನ್ಮ ನೀಡುವ ಮೂಲಕ ವನ್ಯಜೀವಿ ಸಂರಕ್ಷಣೆಯಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿದೆ. ಈ ಸುದಿನದಂದೇ ದೇಶದ ಒಟ್ಟು ಚೀತಾಗಳ ಸಂಖ್ಯೆ 53ಕ್ಕೆ ಏರಿಕೆಯಾಗಿದ್ದು, ಕೇಂದ್ರ ಪರಿಸರ ಸಚಿವ ಭೂಪೇಂದರ್ ಯಾದವ್ ಅವರು ಸಾಮಾಜಿಕ ಜಾಲತಾಣದಲ್ಲಿ ಈ ಸಂತಸದ ಸುದ್ದಿಯನ್ನು ಹಂಚಿಕೊಂಡಿದ್ದಾರೆ. ಇದು 'ಪ್ರಾಜೆಕ್ಟ್ ಚೀತಾ' ಅಡಿಯಲ್ಲಿ ಭಾರತದಲ್ಲಿ ನಡೆದ 10ನೇ ಯಶಸ್ವಿ ಹೆರಿಗೆಯಾಗಿದ್ದು, ಈವರೆಗೆ ಭಾರತದ ಮಣ್ಣಿನಲ್ಲಿ ಜನಿಸಿದ ಮರಿಗಳ ಸಂಖ್ಯೆ 33ಕ್ಕೆ ತಲುಪಿದೆ. ಕೆಲವು ದಿನಗಳ ಹಿಂದ
Mar 91 min read


ಬಳ್ಳಾರಿ: ಹಾಸ್ಟೆಲ್ನಲ್ಲಿ ವಿದ್ಯಾರ್ಥಿಯಿಂದಲೇ ಮಾರಣಾಂತಿಕ ಹಲ್ಲೆ, ಓರ್ವ ಬಾಲಕ ಸಾವು
ಬಳ್ಳಾರಿಯ ಖಾಸಗಿ ಶಾಲೆಯ ಹಾಸ್ಟೆಲ್ನಲ್ಲಿ ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆ ಭೀಕರ ಕೊಲೆಯಲ್ಲಿ ಅಂತ್ಯವಾಗಿದೆ. 9ನೇ ತರಗತಿಯ ವಿದ್ಯಾರ್ಥಿಯೊಬ್ಬ ವಾರ್ಡನ್ ಸೇರಿದಂತೆ ಸಹಪಾಠಿಗಳ ಮೇಲೆ ರಾಡ್ನಿಂದ ಹಲ್ಲೆ ನಡೆಸಿದ್ದು, ಈ ಘಟನೆಯಲ್ಲಿ ಓರ್ವ ಬಾಲಕ ಮೃತಪಟ್ಟು, ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಪಿ ಬಾಲಕ ಸದ್ಯ ಪರಾರಿಯಾಗಿದ್ದಾನೆ. ಘಟನೆಯು ಪೋಷಕರಲ್ಲಿ ತೀವ್ರ ಆಕ್ರೋಶ ಮೂಡಿಸಿದೆ. ವಿದ್ಯಾರ್ಥಿಯು ರಾಡ್ನಿಂದ ಹೊಡೆದಿದ್ದಾನೆ ಎಂದು ಮಂಡಳಿ ಹೇಳುತ್ತಿದ್ದರೂ, ಚಾಕುವಿನಿಂದ ಇರಿದಿರುವ ಶಂಕೆ ವ್ಯಕ್ತವಾಗಿದೆ. ಇಷ್ಟು ಮಂದಿಯ ಮೇ
Mar 91 min read


ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ಬೇಗೆ: ಒಣಹವೆ ಮುಂದುವರಿಕೆ
ರಾಜ್ಯಾದ್ಯಂತ ಬಿಸಿಲಿನ ಅಬ್ಬರ ಜೋರಾಗಿದ್ದು, ಇಂದು ಕೂಡ ಒಣಹವೆಯ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು ಮತ್ತು ಕೋಲಾರದಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆಯಿದ್ದು, ಕರಾವಳಿ ನಗರಿ ಮಂಗಳೂರಿನಲ್ಲಿ 31-25 ಡಿಗ್ರಿ ಸೆಲ್ಸಿಯಸ್ ತಾಪಮಾನವಿರಲಿದೆ. ಕೆಲವೆಡೆ ಮೋಡ ಕವಿದ ವಾತಾವರಣ ಕಂಡುಬಂದರೂ, ಮಧ್ಯಾಹ್ನದ ವೇಳೆಗೆ ಉಷ್ಣಾಂಶ ಏರಿಕೆಯಾಗಲಿದೆ. ಬೆಂಗಳೂರಿನಲ್ಲಿ ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದ್ದು, ಜನರು ಬಿಸಿಲಿನಿಂದ ರಕ್ಷಿಸಿಕೊಳ್ಳಲು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
Mar 91 min read
Archive
bottom of page



