top of page
News Articles
Sathyapatha News Plus


ಗಣರಾಜ್ಯೋತ್ಸವ ಪರೇಡ್ ವೀಕ್ಷಣೆಗೆ ಟಿಕೆಟ್: ಸಾರ್ವಜನಿಕರಿಗೆ ಅವಕಾಶ
ನವದೆಹಲಿ: 77ನೇ ಗಣರಾಜ್ಯೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಜನವರಿ 26ರಂದು ನಡೆಯಲಿರುವ ಗಣರಾಜ್ಯೋತ್ಸವ ಪರೇಡ್ ವೀಕ್ಷಣೆಗೆ ಕೇಂದ್ರ ಸರ್ಕಾರ ಸಾರ್ವಜನಿಕರಿಗೆ ಅವಕಾಶ ನೀಡಿದೆ. ಈ ಸಂಬಂಧ ಟಿಕೆಟ್ ಮಾರಾಟ ಈಗಾಗಲೇ ಆರಂಭವಾಗಿದ್ದು, ಪ್ರತಿದಿನ 2,225 ಟಿಕೆಟ್ಗಳನ್ನು ಬಿಡುಗಡೆ ಮಾಡಲಾಗುತ್ತಿದೆ. ಜನವರಿ 5ರಿಂದ ಟಿಕೆಟ್ ಮಾರಾಟ ಆರಂಭವಾಗಿದ್ದು, ಜನವರಿ 14 ಟಿಕೆಟ್ ಪಡೆಯಲು ಕೊನೆಯ ದಿನವಾಗಿದೆ. ಗಣರಾಜ್ಯೋತ್ಸವ ಪರೇಡ್ ವೀಕ್ಷಣೆಗೆ ರೂ.100 ಮತ್ತು ರೂ.20 ದರದ ಟಿಕೆಟ್ಗಳನ್ನು ನಿಗದಿಪಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪರೇಡ್ ಜೊತೆಗೆ ಗಣರಾಜ್
Jan 81 min read


ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ಸಾಲುಸಾಲು ಹತ್ಯೆ: ಭಾರತದಿಂದ ತೀವ್ರ ಕಳವಳ
ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂ ಸಮುದಾಯದ ಮೇಲೆ ಹಿಂಸಾಚಾರ ತೀವ್ರಗೊಂಡಿರುವುದು ಗಂಭೀರ ಆತಂಕಕ್ಕೆ ಕಾರಣವಾಗಿದೆ. ಜನವರಿ 5ರಂದು ಒಂದೇ ದಿನ ಕೇವಲ ನಾಲ್ಕು ಗಂಟೆಗಳ ಅಂತರದಲ್ಲಿ ಇಬ್ಬರು ಹಿಂದೂಗಳನ್ನು ಹತ್ಯೆ ಮಾಡಿರುವ ಘಟನೆ ವರದಿಯಾಗಿದೆ. ಲಭ್ಯವಿರುವ ಮಾಹಿತಿಯಂತೆ, ಕಳೆದ 35 ದಿನಗಳ ಅವಧಿಯಲ್ಲಿ ಒಟ್ಟು 11 ಹಿಂದೂಗಳು ಹತ್ಯೆಯಾಗಿದ್ದಾರೆ. ಇದರ ಜೊತೆಗೆ ಹಿಂದೂ ಸಮುದಾಯದ ಮೇಲೆ ದೌರ್ಜನ್ಯ, ಹಲ್ಲೆ ಮತ್ತು ಬೆದರಿಕೆ ಪ್ರಕರಣಗಳು ಹೆಚ್ಚುತ್ತಿರುವುದು ತಿಳಿದುಬಂದಿದೆ. ಇತ್ತೀಚೆಗೆ ವಿಧವೆ ಮಹಿಳೆಯೊಬ್ಬರ ಮೇಲೆ ಗುಂಪು ಅತ್ಯಾಚಾರ ನಡೆದಿರುವ ಘಟನೆ ಕೂಡ ವರದಿಯಾಗಿದ್ದು, ಮಾನವ ಹಕ್ಕುಗಳ ಸ್ಥಿತ
Jan 81 min read


ಏಪ್ರಿಲ್ 1ರಿಂದ 2027ರ ಭಾರತದ ಜನಗಣತಿಯ ಮೊದಲ ಹಂತ ಆರಂಭ; ದೇಶದಲ್ಲಿ ಮೊದಲ ಬಾರಿಗೆ ನಡೆಯಲಿದೆ ಡಿಜಿಟಲ್ ಗಣತಿ
ಭಾರತದ ಬಹುನಿರೀಕ್ಷಿತ 2027ರ ಜನಗಣತಿ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಅಧಿಕೃತ ಚಾಲನೆ ನೀಡಿದ್ದು, ಏಪ್ರಿಲ್ 1, 2026 ರಿಂದ ಸೆಪ್ಟೆಂಬರ್ 30, 2026 ರ ನಡುವೆ ಮೊದಲ ಹಂತದ 'ಮನೆ ಪಟ್ಟಿ' (House Listing) ಅಭಿಯಾನ ನಡೆಯಲಿದೆ. ಈ ಕುರಿತು ಅಧಿಸೂಚನೆ ಹೊರಡಿಸಿರುವ ಭಾರತದ ರಿಜಿಸ್ಟ್ರಾರ್ ಜನರಲ್ ಮೃತ್ಯುಂಜಯ್ ಕುಮಾರ್ ನಾರಾಯಣ್ ಅವರು, ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ನಿಗದಿಪಡಿಸಿದ 30 ದಿನಗಳ ಅವಧಿಯಲ್ಲಿ ಈ ಕಾರ್ಯ ಪೂರ್ಣಗೊಳ್ಳಲಿದೆ ಎಂದು ತಿಳಿಸಿದ್ದಾರೆ. ಈ ಹಂತದಲ್ಲಿ ಪ್ರಮುಖವಾಗಿ ಮನೆಗಳು ಮತ್ತು ಲಭ್ಯವಿರುವ ಮೂಲಭೂತ ಸೌಕರ್ಯಗಳ ಬಗ್ಗೆ ವಿವರಗಳನ್ನು ದಾಖಲಿಸಲಾಗುತ್
Jan 81 min read


ಶಿವಮೊಗ್ಗ: ಪೊಲೀಸ್ ಠಾಣೆಯಲ್ಲೇ ಹೆಡ್ ಕಾನ್ಸ್ಟೇಬಲ್ ಆತ್ಮಹತ್ಯೆ
ಶಿವಮೊಗ್ಗದಲ್ಲಿ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಒಬ್ಬರು ಪೊಲೀಸ್ ಠಾಣೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭೀತಿಯನ್ನು ಮೂಡಿಸಿದೆ. ಪಶ್ಚಿಮ ಸಂಚಾರ ಠಾಣೆಯ ಹೆಡ್ ಕಾನ್ಸ್ಟೇಬಲ್ ಆಗಿದ್ದ ಮುಹಮ್ಮದ್ ಝಕ್ರಿಯಾ (55) ಮೃತಪಟ್ಟವರು. ಕಳೆದ 26 ವರ್ಷಗಳಿಂದ ಇಲಾಖೆಯಲ್ಲಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದ ಇವರು, ಬುಧವಾರ ರಾತ್ರಿ ಕರ್ತವ್ಯ ಮುಗಿಸಿ ಬಂದ ನಂತರ ಠಾಣೆಯ ಹಿಂಭಾಗದ ಸೆಲ್ಗಳಿರುವ ಪ್ರದೇಶದಲ್ಲಿ ಈ ಅನಾಹುತ ಮಾಡಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ. ಸೇರಿದಂತೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸ
Jan 81 min read


ಬಸ್ ನಿಲ್ಲಿಸದ ವಿಚಾರಕ್ಕೆ ಗಲಾಟೆ: ಮಹಿಳಾ ಕಂಡಕ್ಟರ್ ಮೇಲೆ ಹಲ್ಲೆ — ಇಬ್ಬರ ಬಂಧನ
ಬಸ್ ನಿಲ್ಲಿಸದಿದ್ದಕ್ಕೆ ಸಿಟ್ಟುಗೊಂಡ ಗ್ರಾಮಸ್ಥರು ಬಸ್ನ್ನು ಅಡ್ಡಗಟ್ಟಿ ಗಲಾಟೆ ನಡೆಸಿ, ಕರ್ತವ್ಯದಲ್ಲಿದ್ದ ಮಹಿಳಾ ಕಂಡಕ್ಟರ್ ಮೇಲೆ ಹಲ್ಲೆ ಮಾಡಿದ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ. ಗದಗ ತಾಲೂಕಿನ ಅಡವಿಸೋಮಾಪುರ ಗ್ರಾಮದಲ್ಲಿ ಶಾಲಾ ಮಕ್ಕಳು ಬಸ್ಗಾಗಿ ಕಾಯುತ್ತಿದ್ದರು. ಆದರೆ ಬಸ್ ನಿಲ್ಲಿಸದೇ ಮುಂದೆ ಸಾಗಿದ ಕಾರಣ, ಮಕ್ಕಳಿಗೆ ಪರೀಕ್ಷೆ ತಪ್ಪುತ್ತದೆ ಎಂಬ ಆತಂಕದಲ್ಲಿ ಬಾಲಕಿಯ ಪೋಷಕರು ಬೈಕ್ನಲ್ಲಿ ಬಸ್ನ್ನು ಬೆನ್ನಟ್ಟಿ ಟೋಲ್ ನಾಕಾ ಬಳಿ ಅಡ್ಡಗಟ್ಟಿದ್ದಾರೆ. ಈ ವೇಳೆ ವಿದ್ಯಾರ್ಥಿನಿ ಬಸ್ ಹತ್ತಲು ಮುಂದಾದಾಗ, ಪರಿಶೀಲನೆ ವೇಳೆ ಸಮಸ್ಯೆಯಾಗಬಹುದು ಎಂಬ ಕಾರಣ ನೀಡಿ ಕಂಡಕ್ಟರ್ ನೇತ್ರಾವತಿ
Jan 71 min read


ಬೆಳ್ಳಿ ಆಭರಣಗಳಿಗೂ ಶೀಘ್ರದಲ್ಲೇ ಬರಲಿದೆ ಹಾಲ್ಮಾರ್ಕ್ ಕಡ್ಡಾಯ: ಗ್ರಾಹಕರಿಗೆ ಸಿಗಲಿದೆ ಶುದ್ಧತೆಯ ಭರವಸೆ
ನವದೆಹಲಿ: ಚಿನ್ನದ ಆಭರಣಗಳ ಗುಣಮಟ್ಟವನ್ನು ಖಚಿತಪಡಿಸಿಕೊಳ್ಳಲು ಬಳಕೆಯಾಗುವ 'ಹಾಲ್ಮಾರ್ಕ್' ಗುರುತಿನ ವ್ಯವಸ್ಥೆಯು ಈಗ ಶೀಘ್ರದಲ್ಲೇ ಬೆಳ್ಳಿಯ ವಸ್ತುಗಳಿಗೂ ಅನ್ವಯವಾಗಲಿದೆ. ಬೆಳ್ಳಿಯ ಪರಿಶುದ್ಧತೆಯನ್ನು ಪತ್ತೆಹಚ್ಚಲು ಹಾಲ್ಮಾರ್ಕಿಂಗ್ ಮುದ್ರೆಯನ್ನು ಕಡ್ಡಾಯಗೊಳಿಸಲು ಕೇಂದ್ರ ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ಈ ಕುರಿತು ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (BIS) ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದು, ಬೆಳ್ಳಿಯ ಆಭರಣ ಮತ್ತು ವಸ್ತುಗಳ ಮಾರಾಟದಲ್ಲಿ ಪಾರದರ್ಶಕತೆ ತರಲು ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವರದಿಯಾಗಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿ ಬೆಳ್ಳಿಯ ವಸ್ತುಗಳಿಗೆ ಹಾಲ್
Jan 71 min read


ಶಾಲಾ-ಕಾಲೇಜು ವಿದ್ಯಾರ್ಥಿನಿಯರಿಗೆ ಇನ್ಮುಂದೆ 'ಮುಟ್ಟಿನ ಕಪ್' ವಿತರಣೆ: ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ
ಬೆಂಗಳೂರು: ರಾಜ್ಯದ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿನಿಯರ ಆರೋಗ್ಯ ಮತ್ತು ನೈರ್ಮಲ್ಯವನ್ನು ಸುಧಾರಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರವು ಮಹತ್ವದ ಹೆಜ್ಜೆಯನ್ನಿಟ್ಟಿದೆ. ಆಯ್ದ ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಜಾರಿಗೊಳಿಸಲಾಗಿದ್ದ 'ಮುಟ್ಟಿನ ಕಪ್' ವಿತರಣಾ ಯೋಜನೆಯು ಅಭೂತಪೂರ್ವ ಯಶಸ್ಸು ಕಂಡ ಹಿನ್ನೆಲೆಯಲ್ಲಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಈಗ ಈ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸಲು ಅಧಿಕೃತವಾಗಿ ನಿರ್ಧರಿಸಿದೆ. ಈ ಹೊಸ ಕ್ರಮವು ವಿದ್ಯಾರ್ಥಿನಿಯರಿಗೆ ಮುಟ್ಟಿನ ಸಮಯದಲ್ಲಿ ಎದುರಾಗುವ ಸಮಸ್ಯೆಗಳನ್ನು ನಿವಾರಿಸುವುದಲ್ಲದೆ, ಪರಿಸರ ಸ್ನೇಹಿ ನೈರ್ಮಲ್ಯ ವ್ಯವಸ್ಥೆಯನ್ನು ಉತ
Jan 71 min read


ಹೊಸಕೋಟೆ: ಚೀಟಿ ವಿವಾದ – ಸಹೋದರನ ಮನೆಗೆ ಬೆಂಕಿ ಹಚ್ಚಲು ಹೋಗಿ ತಾನೇ ಸುಟ್ಟ ಆರೋಪಿ
ಚೀಟಿ ವ್ಯವಹಾರದಲ್ಲಿ ನಷ್ಟ ಅನುಭವಿಸಿದ ವ್ಯಕ್ತಿಯೋರ್ವ, ಹಣಕಾಸಿನ ವಿವಾದದ ಹಿನ್ನೆಲೆಯಲ್ಲಿ ಸಹೋದರನ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಯತ್ನಿಸಿದ ವೇಳೆ ತಾನೇ ಗಂಭೀರವಾಗಿ ಸುಟ್ಟುಕೊಂಡ ಘಟನೆ ಹೊಸಕೋಟೆ ತಾಲೂಕಿನ ಗೋವಿಂದಪುರ ಗ್ರಾಮದಲ್ಲಿ ಮಂಗಳವಾರ ಮಧ್ಯರಾತ್ರಿ ನಡೆದಿದೆ. ಗಾಯಗೊಂಡ ವ್ಯಕ್ತಿಯನ್ನು ಮುನಿರಾಜು ಎಂದು ಗುರುತಿಸಲಾಗಿದ್ದು, ಆತ ಸಹೋದರ ರಾಮಕೃಷ್ಣನ ಮನೆಯನ್ನೇ ಸುಡಲು ಸಂಚು ರೂಪಿಸಿದ್ದಾನೆ ಎನ್ನಲಾಗಿದೆ. ಬೆಂಕಿ ಹಚ್ಚುವ ವೇಳೆ ಕೈಯಲ್ಲಿದ್ದ ಪೆಟ್ರೋಲ್ ಡಬ್ಬದಿಂದ ಏಕಾಏಕಿ ಬೆಂಕಿ ಹೊತ್ತಿಕೊಂಡು ಮುನಿರಾಜುವೇ ಸುಟ್ಟುಕೊಂಡಿದ್ದಾನೆ. “ಕಾಪಾಡಿ, ಕಾಪಾಡಿ” ಎಂದು ಕಿರುಚಿದ ಶಬ್ದ
Jan 71 min read


ಪುತ್ತೂರು: ವಿದ್ಯುತ್ ತಂತಿ ತುಂಡಾಗಿ ಬಿದ್ದು ಅಗ್ನಿ ಅವಘಡ - 900ಕ್ಕೂ ಅಧಿಕ ಅಡಿಕೆ ಗಿಡಗಳು ಭಸ್ಮ
ಪುತ್ತೂರು: ತಾಲೂಕಿನ ಕುರಿಯ ಗ್ರಾಮದ ಬೂಡಿಯಾರು ಎಂಬಲ್ಲಿ ಮಂಗಳವಾರ ಮಧ್ಯಾಹ್ನ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಸುಮಾರು 900ಕ್ಕೂ ಹೆಚ್ಚು ಅಡಿಕೆ ಗಿಡಗಳು ಬೆಂಕಿಗಾಹುತಿಯಾಗಿವೆ. ಬೂಡಿಯಾರಿನ ಗಣೇಶ್ ರೈ ಎಂಬವರಿಗೆ ಸೇರಿದ ತೋಟದ ಮೇಲೆ ಹಾದು ಹೋಗಿದ್ದ ವಿದ್ಯುತ್ ತಂತಿ ಇದ್ದಕ್ಕಿದ್ದಂತೆ ತುಂಡಾಗಿ ಬಿದ್ದಿದ್ದೇ ಈ ದುರಂತಕ್ಕೆ ಕಾರಣವಾಗಿದೆ. ಉತ್ತಮವಾಗಿ ಬೆಳೆದು ನಿಂತಿದ್ದ ಅಡಿಕೆ ಗಿಡಗಳು ಕ್ಷಣಾರ್ಧದಲ್ಲಿ ಸುಟ್ಟು ಕರಕಲಾಗಿದ್ದು, ಕೃಷಿಕರ ಶ್ರಮವೆಲ್ಲವೂ ಬೂದಿಯಾಗಿದೆ. ಮಂಗಳವಾರ ಮಧ್ಯಾಹ್ನದ ವೇಳೆಗೆ ವಿದ್ಯುತ್ ತಂತಿ ಕಡಿದು ಬಿದ್ದಾಗ, ಅದರಲ್ಲಿ ಹರಿಯುತ್ತಿದ್ದ ವಿದ್ಯುತ್ನಿಂದಾಗಿ ಕಿಡಿ ಉ
Jan 71 min read


ಫೆಬ್ರವರಿ 1ರ ಭಾನುವಾರವೇ ಕೇಂದ್ರ ಬಜೆಟ್ ಮಂಡನೆ ಸಾಧ್ಯತೆ: ಇತಿಹಾಸದಲ್ಲೇ ಮೊದಲ ಬಾರಿ ಇಂತಹದೊಂದು ನಿರ್ಧಾರ!
ಹೊಸದಿಲ್ಲಿ: ಮುಂದಿನ 2026-27ರ ಹಣಕಾಸು ವರ್ಷದ ಕೇಂದ್ರ ಬಜೆಟ್ ಅನ್ನು ಫೆಬ್ರವರಿ 1ರಂದು ಮಂಡಿಸಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸುತ್ತಿದೆ. ವಿಶೇಷವೆಂದರೆ, ಬಜೆಟ್ ಇತಿಹಾಸದಲ್ಲೇ ಮೊಟ್ಟಮೊದಲ ಬಾರಿಗೆ ಭಾನುವಾರದಂದು ಈ ಆಯವ್ಯಯ ಮಂಡನೆಯಾಗುತ್ತಿದೆ. ಬಜೆಟ್ ಅಧಿವೇಶನವು ಜನವರಿ 28ರಂದು ರಾಷ್ಟ್ರಪತಿಗಳ ಭಾಷಣದೊಂದಿಗೆ ಆರಂಭವಾಗಲಿದ್ದು, ಸಂಸದೀಯ ವ್ಯವಹಾರಗಳ ಕುರಿತ ಸಂಪುಟ ಸಮಿತಿಯು (CCPA) ಬುಧವಾರದ ಸಭೆಯಲ್ಲಿ ಈ ಕುರಿತು ಅಂತಿಮ ಮೊಹರು ಒತ್ತಲಿದೆ ಎಂದು ತಿಳಿದುಬಂದಿದೆ. ೨೦೧೭ರಿಂದೀಚೆಗೆ ಬಜೆಟ್ ಅನ್ನು ಫೆಬ್ರವರಿ 1ರ ಬೆಳಿಗ್ಗೆ 11 ಗಂಟೆಗೆ ಮಂಡಿಸುವ ಸಂಪ್ರದಾಯವನ್ನು ಮಾಜಿ ಹಣಕಾಸು ಸಚಿವ ಅರ
Jan 71 min read


ಚಿನಾಬ್ ಕಣಿವೆಯಲ್ಲಿ ಭಾರತದ ಶಕ್ತಿ ಪ್ರದರ್ಶನ: ನಾಲ್ಕು ಬೃಹತ್ ಜಲವಿದ್ಯುತ್ ಯೋಜನೆಗಳಿಗೆ ವೇಗ
ಪಾಕಿಸ್ತಾನಕ್ಕೆ ತಂತ್ರಾತ್ಮಕ ನಡುಕ: ಜಲ ಮತ್ತು ವಿದ್ಯುತ್ ಮೇಲೆ ಭಾರತದ ಬಿಗಿ ಹಿಡಿತ ನವದೆಹಲಿ: ಜಮ್ಮು-ಕಾಶ್ಮೀರದ ಚಿನಾಬ್ ನದಿಯ ಪಾತ್ರದಲ್ಲಿ ಭಾರತವು ಕೈಗೆತ್ತಿಕೊಂಡಿರುವ ನಾಲ್ಕು ಮಹತ್ವದ ಜಲವಿದ್ಯುತ್ ಯೋಜನೆಗಳ ಕಾಮಗಾರಿ ಈಗ ಅಂತಿಮ ಹಂತದತ್ತ ಸಾಗುತ್ತಿದೆ. ಈ ಬೆಳವಣಿಗೆಯು ಗಡಿಯಾಚೆಗಿನ ಪಾಕಿಸ್ತಾನಕ್ಕೆ ರಾಜತಾಂತ್ರಿಕ ಹಾಗೂ ತಂತ್ರಾತ್ಮಕ ಒತ್ತಡವನ್ನು ಹೆಚ್ಚಿಸಿದೆ. ಸಿಂಧೂ ನದಿ ನೀರು ಹಂಚಿಕೆ ಒಪ್ಪಂದದ ಚೌಕಟ್ಟಿನಲ್ಲೇ ಇದ್ದರೂ, ನದಿಯ ನೀರಿನ ಹರಿವಿನ ಮೇಲೆ ಭಾರತ ಸಾಧಿಸಲಿರುವ ನಿಯಂತ್ರಣವು ಭವಿಷ್ಯದಲ್ಲಿ ನೆರೆಯ ರಾಷ್ಟ್ರಕ್ಕೆ ಬಿಸಿ ಮುಟ್ಟಿಸುವ ಸಾಧ್ಯತೆಯಿದೆ. ಚಿನಾಬ್ ನದಿಯ ಮೇಲೆ ನಿರ
Jan 72 min read


ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು: ಆರೋಗ್ಯ ಸ್ಥಿರ
ನವದೆಹಲಿ: ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಹಾಗೂ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರನ್ನು ಸೋಮವಾರ ತಡರಾತ್ರಿ ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ಕರೆತರಲಾಗಿದ್ದು, ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಆಸ್ಪತ್ರೆಯ ಮೂಲಗಳು ಮತ್ತು ವೈದ್ಯಕೀಯ ಬುಲೆಟಿನ್ ತಿಳಿಸಿದೆ. ಆಸ್ಪತ್ರೆಯ ಅಧ್ಯಕ್ಷ ಡಾ. ಅಜಯ್ ಸ್ವರೂಪ್ ಅವರ ಪ್ರಕಾರ, ಚಳಿಗಾಲದ ತೀವ್ರತೆ ಮತ್ತು ದೆಹಲಿಯ ವಾಯು ಮಾಲಿನ್ಯದ ಕಾರಣದಿಂದಾಗಿ ಸೋನಿಯಾ ಗಾಂಧಿ ಅವರಲ್ಲಿ ದೀರ್ಘಕಾಲದ ಕೆಮ್ಮು ಮತ್ತು ಬ್ರಾಂಚಿಯಲ್ ಆಸ್ತಮಾ ಸಮಸ್ಯೆ ತುಸ
Jan 61 min read


ಕೆಎಸ್ಆರ್ಟಿಸಿ ಪ್ರೀಮಿಯಂ ಬಸ್ ಟಿಕೆಟ್ ದರ ಕಡಿತ
ಪ್ರಯಾಣಿಕರಿಗೆ ಸಂತೋಷದ ಸುದ್ದಿ: ಆಯ್ದ ಪ್ರೀಮಿಯಂ ಬಸ್ಗಳಿಗೆ 5–15% ಟಿಕೆಟ್ ದರ ಇಳಿಕೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ) ಬೆಂಗಳೂರು ಕೇಂದ್ರವಾಗಿಸಿಕೊಂಡು ಸಂಚರಿಸುವ ಆಯ್ದ ಪ್ರೀಮಿಯಂ ಬಸ್ ಸೇವೆಗಳ ಟಿಕೆಟ್ ದರವನ್ನು ಇಳಿಕೆ ಮಾಡಿದೆ. ಜನವರಿ 5, 2026ರಿಂದಲೇ ಈ ದರ ಕಡಿತ ಜಾರಿಯಾಗಿದ್ದು, ಪ್ರಯಾಣಿಕರಿಗೆ 5ರಿಂದ 15 ಶೇಕಡಾವರೆಗೆ ರಿಯಾಯಿತಿ ಲಭ್ಯವಾಗುತ್ತಿದೆ. ಈ ರಿಯಾಯಿತಿ ಕ್ರಮವು ಜನಪ್ರಿಯ ಅಂತರ್ಜಿಲ್ಲಾ ಹಾಗೂ ಅಂತರ್ರಾಜ್ಯ ಮಾರ್ಗಗಳಲ್ಲಿನ ಆಯ್ದ ಪ್ರೀಮಿಯಂ ಸೇವೆಗಳಿಗೆ ಅನ್ವಯವಾಗುತ್ತದೆ. ಏರ್ಕಂಡಿಷನ್ಡ್ ವೋಲ್ವೋ, ಮಲ್ಟಿ-ಆಕ್ಸಲ್, ಸ್ಲೀಪರ್ ಸೇರಿದಂತೆ ಕೆ
Jan 61 min read


ತಿರುಪರಂಕುಂದ್ರಂ ಬೆಟ್ಟದ ದೀಪ ಬೆಳಗುವ ವಿಚಾರ:ಮಹತ್ವದ ತೀರ್ಪು ನೀಡಿದ ಹೈಕೋರ್ಟ್
ತಮಿಳುನಾಡಿನ ಐತಿಹಾಸಿಕ ಹಾಗೂ ಧಾರ್ಮಿಕ ಮಹತ್ವ ಹೊಂದಿರುವ Thirupparankundram ಬೆಟ್ಟದಲ್ಲಿ ಕಾರ್ತಿಗೈ ದೀಪಂ ಬೆಳಗುವ ವಿಚಾರಕ್ಕೆ ಸಂಬಂಧಿಸಿದ ವಿವಾದದಲ್ಲಿ Madras High Court ಮಹತ್ವದ ತೀರ್ಪು ನೀಡಿದೆ. ಬೆಟ್ಟದ ಮೇಲಿರುವ ದೀಪಥೂನ್ ಎಂಬ ಶಿಲಾ ಸ್ತಂಭದ ಬಳಿ ದೀಪ ಬೆಳಗಲು ಅವಕಾಶ ನೀಡಿದ್ದ ಹಿಂದಿನ ಆದೇಶವನ್ನು ನ್ಯಾಯಾಲಯ ಬಲಪಡಿಸಿದೆ. ನ್ಯಾಯಾಲಯದ ಅಭಿಪ್ರಾಯದಂತೆ, ದೀಪ ಬೆಳಗುವ ಆಚರಣೆ Thirupparankundram Murugan Templeನ ದೀರ್ಘಕಾಲದ ಧಾರ್ಮಿಕ ಪರಂಪರೆಯ ಭಾಗವಾಗಿದೆ. ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಆಚರಣೆ ನಡೆಸುವ ಹೊಣೆ ಅಧಿಕಾರಿಗಳ ಮೇಲಿದೆ ಎಂದ
Jan 61 min read


ಹದಗೆಟ್ಟ ಕಡಬ ಜೂನಿಯರ್ ಕಾಲೇಜು ರಸ್ತೆ, ದುರಸ್ತಿಗೆ ಆಗ್ರಹ.
ಕಡಬ ಪಟ್ಟಣದ ಪ್ರಮುಖ ಕೇಂದ್ರ ಬಿಂದುವಾದ ತಾಲೂಕು ಕಚೇರಿಯಿಂದ ಜೂನಿಯರ್ ಕಾಲೇಜಿಗೆ ಸಂಪರ್ಕ ಕಲ್ಪಿಸುವ ರಸ್ತೆಯು ಸಂಪೂರ್ಣವಾಗಿ ಹದಗೆಟ್ಟಿದ್ದು, ಸಾರ್ವಜನಿಕರ ಸಂಚಾರಕ್ಕೆ ದುಸ್ಥಿತಿಯಲಿದೆ. ರಸ್ತೆಯುದ್ದಕ್ಕೂ ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣವಾಗಿದ್ದು, ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಸಾಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಮಳೆಗಾಲದಲ್ಲಿ ಈ ಗುಂಡಿಗಳಲ್ಲಿ ನೀರು ತುಂಬಿ ಕೆರೆಯಂತಾಗುತ್ತಿದ್ದು, ರಸ್ತೆಯ ಆಳ ತಿಳಿಯದೆ ದ್ವಿಚಕ್ರ ವಾಹನ ಸವಾರರು ಬಿದ್ದು ಗಾಯಗೊಂಡಿರುವ ನಿದರ್ಶನಗಳೂ ಇವೆ. ಈ ರಸ್ತೆಯು ದೈನಂದಿನ ನೂರಾರು ವಿದ್ಯಾರ್ಥಿಗಳು, ಸರ್ಕಾರಿ ಕಚೇರಿಗೆ ಬರುವ ಸಾರ್ವಜನಿಕರು ಹಾಗೂ
Jan 61 min read


ವಿಮಾನ ಪ್ರಯಾಣಿಕರಿಗೆ ಶಾಕ್: ಪವರ್ಬ್ಯಾಂಕ್ಗಳನ್ನು ಸಂಪೂರ್ಣ ನಿಷೇಧಿಸಿದ ಡಿಜಿಸಿಎ!
ಹೊಸದಿಲ್ಲಿ: ವಿಮಾನ ಪ್ರಯಾಣದ ವೇಳೆ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಿರುವ ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ), ಪವರ್ಬ್ಯಾಂಕ್ಗಳನ್ನು ವಿಮಾನದೊಳಗೆ ಕೊಂಡೊಯ್ಯುವುದನ್ನು ಸಂಪೂರ್ಣವಾಗಿ ನಿಷೇಧಿಸಿ ಆದೇಶ ಹೊರಡಿಸಿದೆ. ಈ ಹಿಂದೆ ಪವರ್ಬ್ಯಾಂಕ್ಗಳನ್ನು ಹ್ಯಾಂಡ್ ಬ್ಯಾಗ್ಗಳಲ್ಲಿ ಕೊಂಡೊಯ್ಯಲು ಅವಕಾಶವಿತ್ತು. ಆದರೆ, ಇನ್ನು ಮುಂದೆ ಚೆಕ್-ಇನ್ ಲಗೇಜ್ ಮಾತ್ರವಲ್ಲದೆ, ಹ್ಯಾಂಡ್ ಬ್ಯಾಗ್ಗಳಲ್ಲೂ ಪವರ್ಬ್ಯಾಂಕ್ ಅಥವಾ ಯಾವುದೇ ರೀತಿಯ ಹೆಚ್ಚುವರಿ ಲೀಥಿಯಂ ಬ್ಯಾಟರಿಗಳನ್ನು ಕೊಂಡೊಯ್ಯುವಂತಿಲ್ಲ ಎಂದು ಸ್ಪಷ್ಟಪಡಿಸಿದೆ. ಪವರ್ಬ್ಯಾಂಕ್ಗಳಲ್ಲಿ ಬಳಸಲಾಗುವ ಲೀಥಿಯಂ ಬ್ಯಾಟರಿಗಳು ತಾಂತ
Jan 51 min read


ಮತ್ತೆ ಏರಿಕೆಗೊಂಡ ಚಿನ್ನದ ದರ
ಇಂದು, ಜನವರಿ 5, 2026 ರಂದು ಕರ್ನಾಟಕದಲ್ಲಿ ಮತ್ತು ವಿಶೇಷವಾಗಿ ಬೆಂಗಳೂರಿನಲ್ಲಿ ಚಿನ್ನದ ಬೆಲೆ ಗಣನೀಯವಾಗಿ ಏರಿಕೆ ಕಂಡಿದೆ. ಬೆಂಗಳೂರಿನಲ್ಲಿ ಇಂದಿನ ಚಿನ್ನದ ದರಗಳು ಈ ಕೆಳಗಿನಂತಿವೆ: 24 ಕ್ಯಾರೆಟ್ ಚಿನ್ನ (ಅಪರಂಜಿ): ಪ್ರತಿ 1 ಗ್ರಾಂಗೆ ₹13,740 ಆಗಿದೆ. ಇದು ನಿನ್ನೆಗಿಂತ ₹158 ರಷ್ಟು ಹೆಚ್ಚಾಗಿದೆ. 10 ಗ್ರಾಂ ಚಿನ್ನದ ಬೆಲೆ ₹1,37,400 ತಲುಪಿದೆ. 22 ಕ್ಯಾರೆಟ್ ಚಿನ್ನ (ಆಭರಣ ಚಿನ್ನ): ಪ್ರತಿ 1 ಗ್ರಾಂಗೆ ₹12,595 ಆಗಿದ್ದು, ನಿನ್ನೆಗಿಂತ ₹145 ಏರಿಕೆಯಾಗಿದೆ. 10 ಗ್ರಾಂ ಚಿನ್ನದ ಬೆಲೆ ₹1,25,950 ಆಗಿದೆ. 18 ಕ್ಯಾರೆಟ್ ಚಿನ್ನ: ಪ್ರತಿ 1 ಗ್ರಾಂಗೆ ₹10,305 ರಂತೆ ಮಾರಾಟವಾಗುತ್
Jan 51 min read


ಪುತ್ತೂರು: ತಾಯಿ-ಮಗು ಕೆರೆಗೆ ಹಾರಿ ಸಾವು; ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲು
ಪುತ್ತೂರು: ತಾಲೂಕಿನ ವ್ಯಾಪ್ತಿಯಲ್ಲಿ ತಾಯಿ ಮತ್ತು ಮಗು ಕೆರೆಗೆ ಹಾರಿ ಮೃತಪಟ್ಟಿರುವ ಅತ್ಯಂತ ಹೃದಯವಿದ್ರಾವಕ ಘಟನೆ ವರದಿಯಾಗಿದೆ. ಮೃತರನ್ನು 34 ವರ್ಷದ ಮಹಿಳೆ ಮತ್ತು ಆಕೆಯ ಮೂರು ವರ್ಷದ ಗಂಡು ಮಗು ಎಂದು ಗುರುತಿಸಲಾಗಿದೆ. ಈ ದಾರುಣ ಘಟನೆಯು ಸ್ಥಳೀಯರಲ್ಲಿ ತೀವ್ರ ಶೋಕವನ್ನುಂಟು ಮಾಡಿದ್ದು, ಸಾವಿನ ನಿಖರ ಕಾರಣಗಳ ಬಗ್ಗೆ ತನಿಖೆ ಚುರುಕುಗೊಂಡಿದೆ. ಘಟನೆಗೆ ಸಂಬಂಧಿಸಿದಂತೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಈಗಾಗಲೇ ಎರಡು ಪ್ರತ್ಯೇಕ ದೂರುಗಳು ದಾಖಲಾಗಿವೆ. ಮೃತ ಮಹಿಳೆಯ ತಂದೆ ರುಕ್ಕಯ್ಯ ಗೌಡ (66) ಅವರು ನೀಡಿದ ದೂರಿನಂತೆ, ಮಗಳು ತನ್ನ ಮಗುವಿನೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್
Jan 51 min read


ಕೆಂಪುಕೋಟೆ ಸ್ಫೋಟ ಪ್ರಕರಣ: ‘ಘೋಸ್ಟ್’ ಸಿಮ್ ಹಾಗೂ ಎನ್ಕ್ರಿಪ್ಟ್ ಆ್ಯಪ್ ಬಳಸಿ ಪಾಕ್ ಏಜೆಂಟ್ಗಳೊಂದಿಗೆ ಸಂಪರ್ಕ
ನವೆಂಬರ್ 10ರಂದು ನಡೆದ ಕೆಂಪುಕೋಟೆ ಬಾಂಬ್ ಸ್ಫೋಟ ಪ್ರಕರಣದ ತನಿಖೆಯಲ್ಲಿ ಆಘಾತಕಾರಿ ಮಾಹಿತಿ ಹೊರಬಿದ್ದಿದ್ದು, ಆರೋಪಿಗಳು ಪಾಕಿಸ್ತಾನದ ಗುಪ್ತಚರ ಏಜೆಂಟ್ಗಳನ್ನು ಸಂಪರ್ಕಿಸಲು ‘ಘೋಸ್ಟ್’ ಸಿಮ್ ಕಾರ್ಡ್ಗಳು ಮತ್ತು ಎನ್ಕ್ರಿಪ್ಟ್ ಮಾಡಲಾದ ಸಂವಹನ ಆ್ಯಪ್ಗಳನ್ನು ಬಳಸುತ್ತಿದ್ದರೆಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಮುಝಮ್ಮಿಲ್ ಗ್ಯಾನೀ ಮತ್ತು ಅದೀಲ್ ರಾರ್ಥ ಸೇರಿದಂತೆ ಬಂಧಿತ ಆರೋಪಿಗಳು ಭದ್ರತಾ ಸಂಸ್ಥೆಗಳ ಕಣ್ತಪ್ಪಿಸಲು ‘ಡ್ಯುಯಲ್ ಫೋನ್’ ತಂತ್ರವನ್ನು ಅನುಸರಿಸುತ್ತಿದ್ದರು. ಈ ಜಾಲದಲ್ಲಿ ಉನ್ನತ ಶಿಕ್ಷಣ ಪಡೆದ ವೈದ್ಯರು ಕೂಡ ಭಾಗಿಯಾಗಿರುವುದು ತನಿಖೆಯಿಂದ ದೃಢಪಟ್ಟಿದೆ. ತನಿಖಾ
Jan 51 min read


500 ರೂ. ನೋಟು ಅಮಾನ್ಯೀಕರಣ ಸುಳ್ಳು ಸುದ್ದಿ: ಸಾರ್ವಜನಿಕರಿಗೆ ಕೇಂದ್ರ ಸರ್ಕಾರದಿಂದ ಮಹತ್ವದ ಸ್ಪಷ್ಟನೆ
ನವದೆಹಲಿ: ಸಾಮಾಜಿಕ ಜಾಲತಾಣಗಳಲ್ಲಿ ಕಳೆದ ಕೆಲವು ದಿನಗಳಿಂದ 500 ರೂಪಾಯಿ ಮುಖಬೆಲೆಯ ನೋಟುಗಳನ್ನು ಸರ್ಕಾರ ಅಮಾನ್ಯಗೊಳಿಸಲಿದೆ ಮತ್ತು ಮಾರ್ಚ್ ತಿಂಗಳಿನಿಂದ ಎಟಿಎಂಗಳಲ್ಲಿ ಈ ನೋಟುಗಳು ಲಭ್ಯವಿರುವುದಿಲ್ಲ ಎಂಬ ಸುದ್ದಿಗಳು ವ್ಯಾಪಕವಾಗಿ ವೈರಲ್ ಆಗುತ್ತಿವೆ. ಈ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಕೇಂದ್ರ ಸರ್ಕಾರವು ಇವೆಲ್ಲವೂ ಕೇವಲ ವದಂತಿಗಳಾಗಿದ್ದು, ಇಂತಹ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದೆ. ಈ ಮೂಲಕ ಸಾರ್ವಜನಿಕರಲ್ಲಿ ಮೂಡಿದ್ದ ಆತಂಕಕ್ಕೆ ತೆರೆ ಎಳೆದಿದೆ. ಸರ್ಕಾರದ ಪ್ರೆಸ್ ಇನ್ಫರ್ಮೇಷನ್ ಬ್ಯೂರೋ (PIB) ಅಡಿಯಲ್ಲಿ ಕಾರ್ಯನಿರ್ವಹಿಸುವ 'ಫ್ಯಾಕ್ಟ
Jan 41 min read
Archive
bottom of page


