top of page
News Articles
Sathyapatha News Plus


ಎಣ್ಮೂರು ಶ್ರೀ ನಾಗಬ್ರಹ್ಮ ಕೋಟಿ ಚೆನ್ನಯ ಗರಡಿಯಲ್ಲಿ ಚೌತಿ ತಂಬಿಲ ಮತ್ತು ಕದಿರು ಪ್ರಸಾದ ವಿತರಣೆ
ಇತಿಹಾಸ ಪ್ರಸಿದ್ಧ ಎಣ್ಮೂರು ಶ್ರೀ ನಾಗಬ್ರಹ್ಮ ಕೋಟಿ ಚೆನ್ನಯರ ಆದಿ ಬೈದೇರುಗಳ ಗರಡಿಯಲ್ಲಿ ಪೂರ್ವ ಸಂಪ್ರದಾಯದಂತೆ ಪತ್ತನಾಜೆಯಂದು ಮುಚ್ಚಿದ್ದ ಗರ್ಭಗುಡಿಯ ಬಾಗಿಲನ್ನು ಚೌತಿಯಂದು ತೆರೆದು ವಿಶೇಷ ತಂಬಿಲ ಸೇವೆ ನೆರವೇರಿಸಲಾಯಿತು. ಬೈದೇರುಗಳ ತಂಬಿಲ, ದರ್ಶನ ಬಲಿ ಹಾಗೂ ದೇಯಿ ಬೈದೇತಿಯವರ ಗರ್ಭಗುಡಿಯಲ್ಲಿ ವಿಶೇಷ ತಂಬಿಲ ನಡೆದು ಭಕ್ತರಿಗೆ ಕದಿರು ಪ್ರಸಾದ ವಿತರಿಸಲಾಯಿತು. ಕಂಚುಕಲ್ಲಿಗೆ ತೆಂಗಿನಕಾಯಿ ಒಡೆದು ಊರಿನ ಕ್ಷೇಮಕ್ಕಾಗಿ ಪ್ರಾರ್ಥಿಸಲಾಯಿತು. ಅನುವಂಶಿಕ ಆಡಳಿತದಾರ ಕಟ್ಟಬೀಡು ರಾಮಕೃಷ್ಣ ಶೆಟ್ಟಿಯವರ ಪ್ರಾರ್ಥನೆಯೊಂದಿಗೆ ಭಕ್ತರಿಗೆ ಗಂಧ ಪ್ರಸಾದ ನೀಡಲಾಯಿತು. ನಂತರ ಸಾರ್ವಜನಿಕ ಅನ್ನಸಂತರ
1 day ago1 min read


ಮೂರು ಗಂಟೆಗಳ ಕಾಲ ಸುಳ್ಯ ನಗರ ಬ್ಲಾಕ್: ಸಾರ್ವಜನಿಕರಿಗೆ ತೀವ್ರ ತೊಂದರೆ — ತುರ್ತು ಸೇವೆಗಳಿಗೂ ಅಡ್ಡಿಯಾಗಿದ್ದರೆ ಹೊಣೆ ಯಾರು?
ಸುಳ್ಯ: ಸುಮಾರು 500 ಮಂದಿಯ ಮೆರವಣಿಗೆಗಾಗಿ ಸುಳ್ಯ ನಗರದ ಪ್ರಮುಖ ರಸ್ತೆಯೇ ಸುಮಾರು ಮೂರು ಗಂಟೆಗಳ ಕಾಲ ಬಂದ್ ಆಗಿದ್ದರಿಂದ ವಿದ್ಯಾರ್ಥಿಗಳು, ಉದ್ಯೋಗಿಗಳು ಹಾಗೂ ಸಾರ್ವಜನಿಕರು ಪರದಾಡುವಂತಾದ ಘಟನೆ ಸೆ.11ರಂದು ನಡೆದಿದೆ. ಯಾವುದೇ ಪರ್ಯಾಯ ಮಾರ್ಗದ ವ್ಯವಸ್ಥೆಯಿಲ್ಲದೆ ಮುಖ್ಯ ರಸ್ತೆಯಲ್ಲಿ ಸಂಚಾರ ಸಂಪೂರ್ಣ ಸ್ಥಗಿತಗೊಂಡ ಪರಿಣಾಮ ನಗರದಲ್ಲಿ ಭಾರೀ ಸಂಚಾರ ದಟ್ಟಣೆ ಉಂಟಾಯಿತು. ಪ್ರವಾದಿ ಮುಹಮ್ಮದ್ ಅವರ ಜನ್ಮದಿನದ ಅಂಗವಾಗಿ ನಡೆದ ಕಾಲ್ನಡಿಗೆ ಜಾಥಾ ಹಾಗೂ ದಫ್ ಪ್ರದರ್ಶನ ಸಂಜೆ 4 ಗಂಟೆಗೆ ನಿಗದಿಯಾಗಿತ್ತು. ಆದರೆ ಮೆರವಣಿಗೆ ರಾತ್ರಿ 7.30ರವರೆಗೂ ಮುಂದುವರಿದ ಪರಿಣಾಮ ಈ ಅವಧಿಯಲ್ಲಿ ಮುಖ್ಯ ರಸ್ತ
3 days ago1 min read


ಬೆಳ್ತಂಗಡಿಯಲ್ಲಿ ಲೋಕಾಯುಕ್ತ ದಾಳಿ: ಕುವೆಟ್ಟು, ಮಡಂತ್ಯಾರು ಗ್ರಾ.ಪಂ. ಕಚೇರಿಗಳಲ್ಲಿ ಕಡತಗಳ ಪರಿಶೀಲನೆ
ಬೆಳ್ತಂಗಡಿ: ತಾಲೂಕಿನ ಕುವೆಟ್ಟು ಮತ್ತು ಮಡಂತ್ಯಾರು ಗ್ರಾಮ ಪಂಚಾಯತ್ ಕಚೇರಿಗಳ ಮೇಲೆ ಮಂಗಳವಾರ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ಕೈಗೊಂಡಿದ್ದಾರೆ. ಗ್ರಾಮ ಪಂಚಾಯತ್ಗಳಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಲೋಕಾಯುಕ್ತ ಕೇಂದ್ರ ಕಚೇರಿಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಈ ಪರಿಶೀಲನೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಉಡುಪಿ ಜಿಲ್ಲೆಯ ಲೋಕಾಯುಕ್ತ ಇನ್ಸ್ಪೆಕ್ಟರ್ ಮಂಜುನಾಥ್ ಶಂಕರಹಳ್ಳಿ ನೇತೃತ್ವದಲ್ಲಿ ರಾಘವೇಂದ್ರ ಸಾಲಿಗ್ರಾಮ, ಆದರ್ಶ್, ಅರುಣ್ ಕುಮಾರ್, ಸೂರಜ್ ಕಾಪು ಸೇರಿದಂತೆ ಒಟ್ಟು ಎಂಟು ಮಂದಿಯ ತಂಡ ಬೆಳಗ್ಗೆ ಸುಮ
6 days ago1 min read


ಬೇಕರಿ ಉದ್ಯಮಿ ಮೋಹನ್ ನಾಯ್ಕ ದಡ್ಡು ಮೆದುಳಿನ ರಕ್ತಸ್ರಾವದಿಂದ ನಿಧನ
ಕಡಬ: ಎಡಮಂಗಲದ ಯುವ ಬೇಕರಿ ಉದ್ಯಮಿ, ದಡ್ಡು ನಿವಾಸಿ ಮೋಹನ್ ನಾಯ್ಕ (35) ಮೆದುಳಿನ ರಕ್ತಸ್ರಾವದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಸೆ.6 ರಂದು ಬೇಕರಿ ಉತ್ಪನ್ನ ಸರಬರಾಜು ಮಾಡಲು ಕಾರಿನಲ್ಲಿ ತೆರಳುತ್ತಿದ್ದಾಗ ರಕ್ತದೊತ್ತಡ ಹೆಚ್ಚಾಗಿ ಅವರಿಗೆ ಬ್ರೈನ್ ಹ್ಯಾಮರೇಜ್ ಸಂಭವಿಸಿತ್ತು. ತಕ್ಷಣ ಅವರನ್ನು ಕಡಬ ಆಸ್ಪತ್ರೆಗೆ ಹಾಗೂ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಕೆ.ಎಸ್.ಹೆಗ್ಡೆ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಿಸದೆ ಅವರು ಕೊನೆಯುಸಿರೆಳೆದಿದ್ದಾರೆ. ಮೃತರು ಪತ್ನಿ, ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಯುವ ಉದ್ಯಮಿಯ ಅಕಾಲಿಕ ಮರಣಕ್ಕೆ ಗ್ರಾಮಸ
Sep 71 min read


ಬೆಂಗಳೂರು–ಮಂಗಳೂರು ವಂದೇ ಭಾರತ್: ಪುತ್ತೂರಿನಲ್ಲಿ ನಿಲುಗಡೆಗೆ ಡಾ. ಅರುಣಾ ಶ್ಯಾಮ್ ಮನವಿ
ಬೆಂಗಳೂರು ಮತ್ತು ಮಂಗಳೂರು ನಡುವೆ ಸಂಚರಿಸಲಿರುವ 16 ಬೋಗಿಗಳ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಪುತ್ತೂರು ರೈಲು ನಿಲ್ದಾಣದಲ್ಲಿ ನಿಯಮಿತ ನಿಲುಗಡೆ ಕಲ್ಪಿಸುವಂತೆ ಹಿರಿಯ ವಕೀಲರಾದ ಡಾ. ಅರುಣಾ ಶ್ಯಾಮ್. ಎಂ. ಅವರು ರೈಲ್ವೆ ಮಂಡಳಿಗೆ ಮನವಿ ಮಾಡಿದ್ದಾರೆ. ಸೆಪ್ಟೆಂಬರ್ 5ರಂದು ಯಶವಂತಪುರ–ಮಂಗಳೂರು ಸೆಂಟ್ರಲ್ ನಡುವೆ ಮತ್ತೊಂದು ಪ್ರಾಯೋಗಿಕ ಸಂಚಾರ ನಿಗದಿಯಾಗಿದ್ದು, ಈ ವೇಳೆಯಲ್ಲೇ ಪುತ್ತೂರಿನಲ್ಲಿ ಪ್ರಾಯೋಗಿಕ ನಿಲುಗಡೆ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಪುತ್ತೂರು ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ವಾಣಿಜ್ಯ, ಶೈಕ್ಷಣಿಕ ಹಾಗೂ ಆಡಳಿತ ಕೇಂದ್ರವಾಗಿದೆ. ಇಲ್ಲಿಂದ ಪ್ರತಿನಿತ್ಯ ಬೆಂ
Sep 71 min read


ಸುಳ್ಯದ ಮೂವರು ಶಿಕ್ಷಕರಿಗೆ ಜಿಲ್ಲಾ ಮಟ್ಟದ ‘ಉತ್ತಮ ಶಿಕ್ಷಕ’ ಪ್ರಶಸ್ತಿ
ಸುಳ್ಯ: ಶಿಕ್ಷಕರ ದಿನಾಚರಣೆಯ ಶುಭ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ‘ಉತ್ತಮ ಶಿಕ್ಷಕ’ ಪ್ರಶಸ್ತಿಯನ್ನು ಪ್ರಕಟಿಸಲಾಗಿದ್ದು, ಸುಳ್ಯ ತಾಲೂಕಿನ ಮೂವರು ಸಾಧಕ ಶಿಕ್ಷಕರು ಈ ಗೌರವಕ್ಕೆ ಭಾಜನರಾಗಿದ್ದಾರೆ. * ಕಿರಿಯ ಪ್ರಾಥಮಿಕ ವಿಭಾಗ: ಪಾಂಡಿಗದ್ದೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕ ಯಶೋಧರ ಕೆ. * ಹಿರಿಯ ಪ್ರಾಥಮಿಕ ವಿಭಾಗ: ಏಣ್ಮೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕಿ ಭುವನೇಶ್ವರಿ ಕೆ. * ಪ್ರೌಢಶಾಲಾ ವಿಭಾಗ: ಅರಂತೋಡು ಎನ್ಎಂಪಿಯು ಕಾಲೇಜಿನ ಪ್ರೌಢಶಾಲಾ ವಿಭಾಗದ ಸಹಶಿಕ್ಷಕ ಕಿಶೋರ್ ಕುಮಾರ್. ಶಿಕ್ಷಣ ಕ್ಷೇತ್ರಕ್ಕೆ ಸಲ್ಲಿಸಿದ ಗಣನೀಯ ಸೇವೆಯನ್ನು ಗು
Sep 51 min read


ಶೇಣಿಯಲ್ಲಿ 23ನೇ ವರ್ಷದ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಮತ್ತು ಸತ್ಯನಾರಾಯಣ ಪೂಜೆ
ಸುಳ್ಯ: ಚೊಕ್ಕಾಡಿ ಸಮೀಪದ ಶೇಣಿಯಲ್ಲಿ ಸಾರ್ವಜನಿಕ ಶ್ರೀ ಕೃಷ್ಣ ಸೇವಾ ಸಮಿತಿ (ರಿ.) ಆಶ್ರಯದಲ್ಲಿ 23ನೇ ವರ್ಷದ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಹಾಗೂ ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮವು 2026ರ ಸೆಪ್ಟೆಂಬರ್ 6ರ ಆದಿತ್ಯವಾರ ಬೆಳಿಗ್ಗೆ 9-00 ಗಂಟೆಗೆ ಜರುಗಲಿದೆ. ಕಾರ್ಯಕ್ರಮದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಸಮಿತಿಯ ಅಧ್ಯಕ್ಷರಾದ ಶ್ರೀ ಶಿವ ಸುಬ್ರಹ್ಮಣ್ಯ ಭಟ್ ನಾಟಿಕೇರಿ ವಹಿಸಲಿದ್ದು, ಚೊಕ್ಕಾಡಿ ಶ್ರೀ ರಾಮ ದೇವಾಲಯದ ಅರ್ಚಕರಾದ ಶ್ರೀ ರಘುರಾಮ ಭಟ್ ಉದ್ಘಾಟನೆ ನೆರವೇರಿಸಲಿದ್ದಾರೆ. ನಿವೃತ್ತ ಮುಖ್ಯೋಪಾಧ್ಯಾಯಿನಿ ಶ್ರೀಮತಿ ನಳಿನಿ ವಿ. ಮುಖ್ಯ ಅತಿಥಿಗಳಾಗಿ ಹಾಗೂ ದ
Sep 31 min read


ದಕ್ಷಿಣ ಕನ್ನಡ: ಸೆಪ್ಟೆಂಬರ್ 1 ರಿಂದ ಆಟೋ ರಿಕ್ಷಾ ಪ್ರಯಾಣ ದರ ಬದಲಾವಣೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಟೋ ರಿಕ್ಷಾ ಪ್ರಯಾಣ ದರಗಳನ್ನು ಪರಿಷ್ಕರಿಸಲಾಗಿದ್ದು, ಸೆಪ್ಟೆಂಬರ್ 1ರಿಂದಲೇ ಹೊಸ ದರಗಳು ಜಾರಿಗೆ ಬಂದಿವೆ. ಉಪ ಆಯುಕ್ತ ದರ್ಶನ್ ಎಚ್ವಿ ಅಧ್ಯಕ್ಷತೆಯಲ್ಲಿ ನಡೆದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ (RTA) ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಹೊಸ ನಿಯಮದಂತೆ, ಮೊದಲ 1.5 ಕಿಲೋಮೀಟರ್ಗೆ ಕನಿಷ್ಠ ದರವನ್ನು ರೂ.40 (ಗರಿಷ್ಠ ಮೂವರು ಪ್ರಯಾಣಿಕರು) ನಿಗದಿಪಡಿಸಲಾಗಿದೆ. ತದನಂತರದ ಪ್ರತಿ ಹೆಚ್ಚುವರಿ ಕಿಲೋಮೀಟರ್ಗೆ ರೂ.20 ಪಾವತಿಸಬೇಕಾಗುತ್ತದೆ. ಇನ್ನು ಕಾಯುವಿಕೆ ಶುಲ್ಕಕ್ಕೆ ಸಂಬಂಧಿಸಿದಂತೆ ಮೊದಲ 10 ನಿಮಿಷ ಉಚಿತವಾಗಿದ್ದು, ನಂತರದ ಪ್ರತಿ
Sep 11 min read


ಕೃಷ್ಣ ಜನ್ಮಾಷ್ಟಮಿ, ತೆನೆ ಹಬ್ಬಕ್ಕೆ ಸ್ಥಳೀಯ ರಜೆ ಘೋಷಿಸಲು ಶಾಸಕ ವೇದವ್ಯಾಸ ಕಾಮತ್ ಮನವಿ
ಮಂಗಳೂರು: ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಕ್ರೈಸ್ತ ಸಮುದಾಯದ ಮರಿಯ ಜಯಂತಿ (ತೆನೆ ಹಬ್ಬ) ಆಚರಣೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಸ್ಥಳೀಯ ರಜೆ ಘೋಷಿಸುವಂತೆ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಅವರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಇದೇ ಸೆಪ್ಟೆಂಬರ್ 4 ರಂದು ಕರಾವಳಿ ಜಿಲ್ಲೆಗಳಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಅತ್ಯಂತ ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುತ್ತದೆ. ಇದು ಕೇವಲ ಧಾರ್ಮಿಕ ಆಚರಣೆಯಾಗಿರದೆ, ಭಾರತೀಯ ಸಂಸ್ಕೃತಿ, ಕುಟುಂಬ ಮೌಲ್ಯಗಳು ಹಾಗೂ ನೈತಿಕ ಶಿಕ್ಷಣವನ್ನು ಮುಂದಿನ ಪೀಳಿಗೆಗೆ ತಲುಪಿಸುವ ಮಹತ್ವ
Sep 11 min read


ದರ್ಬೆ ಸೈಬರ್ ಸೆಂಟರ್ ಗಲಾಟೆ ಪ್ರಕರಣ: ಸತ್ಯಾಸತ್ಯತೆ ಬಿಚ್ಚಿಟ್ಟ ಸಂತ್ರಸ್ತ ಮುಬಾಶಿರ; ಕ್ಷಮೆ ಕೇಳಿದರೆ ಕೇಸ್ ವಾಪಸ್ ಪಡೆಯಲು ಸಿದ್ಧ
ಪುತ್ತೂರು / ಮಂಗಳೂರು: ಪುತ್ತೂರು ನಗರದ ದರ್ಬೆಯ ಸೈಬರ್ ಕೇಂದ್ರವೊಂದರಲ್ಲಿ ಜನನ ಪ್ರಮಾಣಪತ್ರ ಲ್ಯಾಮಿನೇಷನ್ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಗಲಾಟೆ ಪ್ರಕರಣವು ರಾಜಕೀಯ ಹಾಗೂ ಕೋಮು ಸ್ವರೂಪ ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ, ಸಂತ್ರಸ್ತ ಮಂಡೆಕೋಲು ನಿವಾಸಿ ಮುಬಾಶಿರ ಅವರು ಮಂಗಳೂರಿನಲ್ಲಿ ಮಾಧ್ಯಮಗಳ ಮುಂದೆ ಹಾಜರಾಗಿ ಘಟನೆಯ ಪೂರ್ಣ ವಾಸ್ತವಾಂಶವನ್ನು ಸ್ಪಷ್ಟಪಡಿಸಿದ್ದಾರೆ. ಆಗಸ್ಟ್ 21ರಂದು ಊಟಕ್ಕೆ ಬಂದಿದ್ದಾಗ ಪಕ್ಕದ ಸೈಬರ್ ಸೆಂಟರ್ಗೆ ಮಗುವಿನ ಬರ್ತ್ ಸರ್ಟಿಫಿಕೇಟ್ ಲ್ಯಾಮಿನೇಷನ್ ಮತ್ತು ಆಧಾರ್ ಕಾರ್ಡ್ ಪ್ರಿಂಟ್ಗೆ ನೀಡಿದ್ದೆವು. ಆದರೆ ಸಿಬ್ಬಂದಿಯ ನಿರ್ಲಕ್ಷ್ಯದಿಂದ ಸರ್ಟಿ
Aug 281 min read


ಬಳ್ಪ -ಕೋಡಿಂಬಾಳ: ಜನವಸತಿ ಪ್ರದೇಶಕ್ಕೆ ಲಗ್ಗೆಯಿಟ್ಟ ಕಾಡಾನೆಗಳ ಹಿಂಡು; ಗ್ರಾಮಸ್ಥರಲ್ಲಿ ಆತಂಕ
ಕೋಡಿಂಬಾಳ: ಬಳ್ಪ ಪರಿಸರದಲ್ಲಿ ಸಂಚರಿಸುತ್ತಿದ್ದ ಕಾಡಾನೆಗಳ ಹಿಂಡು ಇದೀಗ ಪಕ್ಕದ ಕೋಡಿಂಬಾಳ ಗ್ರಾಮಕ್ಕೆ ಲಗ್ಗೆಯಿಟ್ಟಿದೆ. ಎಣ್ಣೆಮಜಲು ಬಳಿಯ ಬೀರಿಕಾಡು ಪ್ರದೇಶದ ಮೂಲಕ ನದಿ ದಾಟಿ ಬಂದಿರುವ ಆನೆಗಳು, ಕೊರಿಯರ್ ಸಮೀಪದ ಖಾಸಗಿ ರಬ್ಬರ್ ತೋಟದಲ್ಲಿ ಠಿಕಾಣಿ ಹೂಡಿವೆ. ಜನವಸತಿ ಹಾಗೂ ಕೃಷಿ ತೋಟಗಳ ಸನಿಹದಲ್ಲೇ ಆನೆಗಳು ಬೀಡುಬಿಟ್ಟಿರುವುದರಿಂದ ಸ್ಥಳೀಯ ಕೃಷಿಕರು, ಕಾರ್ಮಿಕರು ಮತ್ತು ಶಾಲಾ ಮಕ್ಕಳು ತೀವ್ರ ಆತಂಕಕ್ಕೊಳಗಾಗಿದ್ದಾರೆ. ಗ್ರಾಮಸ್ಥರು ಒಂಟಿಯಾಗಿ ಸಂಚರಿಸದೆ ಜಾಗರೂಕರಾಗಿರುವಂತೆ ಎಚ್ಚರಿಕೆ ಸಂದೇಶ ರವಾನಿಸಲಾಗುತ್ತಿದೆ. ಅರಣ್ಯ ಇಲಾಖಾಧಿಕಾರಿಗಳು ತಕ್ಷಣವೇ ಸ್ಥಳಕ್ಕೆ ಆಗಮಿಸಿ, ಕಾಡಾನೆಗಳನ್
Aug 281 min read


ಕಡಬ: ಪ.ಪಂ ಅಧ್ಯಕ್ಷೆಯ ಮನೆಯಲ್ಲೇ ಕಳ್ಳತನ
ಕಡಬ ಪಟ್ಟಣ ಪಂಚಾಯತ್ ವ್ಯಾಪ್ತಿಯ ಅಡ್ಡಗದ್ದೆ ಎಂಬಲ್ಲಿ ಮನೆಯ ಮರದ ಬಾಕ್ಸ್ ಒಡೆದು ಅದರಲ್ಲಿದ್ದ ₹84,800/- ನಗದು ಹಣವನ್ನು ಕಳ್ಳರು ದೋಚಿರುವ ಘಟನೆ ನಡೆದಿದೆ. ಕಡಬ ಪಟ್ಟಣ ಪಂಚಾಯತ್ ಅಧ್ಯಕ್ಷೆ ತಮನ್ನಾ ಜಬೀನ್ (43) ಅವರ ಮನೆಯಲ್ಲಿ ಈ ಕಳವು ಸಂಭವಿಸಿದ್ದು, ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರೆ ತಮನ್ನಾ ಜಬೀನ್ ಅವರು ಕುಟುಂಬದೊಂದಿಗೆ ಕಡಬ ಅಡ್ಡಗದ್ದೆಯಲ್ಲಿರುವ ಗಂಡನ ಮನೆಯಲ್ಲಿ ವಾಸವಾಗಿದ್ದು, ಮಲಗುವ ಕೋಣೆಯ ಮರದ ಬಾಕ್ಸ್ನಲ್ಲಿ ಹಣ ಸಂಗ್ರಹಿಸಿಟ್ಟಿದ್ದರು. ಆಗಸ್ಟ್ 18 ರಂದು ಕಾರ್ಯಕ್ರಮ ನಿಮಿತ್ತ ಕುಟುಂಬ ಸಮೇತ ಉಡುಪಿಗೆ ತೆರಳಿ ಅಂದೇ ಮನೆಗೆ ಹಿಂತಿರುಗಿದ್ದರು. ಬಳಿಕ
Aug 281 min read


ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಹಾಗೂ ಪ್ರತಿಭಾ ಪುರಸ್ಕಾರ
ಬೆಳಂದೂರು: ಸರಕಾರಿ ಪ್ರಥಮ ದರ್ಜೆ ಕಾಲೇಜು, ಬೆಳಂದೂರು ವತಿಯಿಂದ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಸ್ವಾಗತ, ಶೈಕ್ಷಣಿಕ ಚಟುವಟಿಕೆಗಳ ಉದ್ಘಾಟನೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕಾಲೇಜಿನಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಶ್ರೀ ರಾಘವ ಅವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಪದ್ಮನಾಭ ಕೆ., ಪ್ರಾಂಶುಪಾಲರು, ಸರಕಾರಿ ಪ್ರಥಮ ದರ್ಜೆ ಕಾಲೇಜು, ಬೆಳ್ತಂಗಡಿ ಹಾಗೂ ಶ್ರೀ ವಚನ ಜಯರಾಮ್, ಅಧ್ಯಕ್ಷರು ವಿದ್ಯಾಭಿಮಾನಿಗಳ ಸಂಘ ಹಾಗೂ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ವೇಣುಗೋಪಾಲ ಕಳುವಾಜೆ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಪ್ರಥಮ ವರ್ಷದ ವಿದ್ಯ
Aug 271 min read


ಶಾಸ್ತ್ರಿ ಸರ್ಕಲ್ನಲ್ಲಿ ಗುಂಡಿ ಗಂಡಾಂತರ ಬಾಳೆಗಿಡ ನೆಟ್ಟರೂ ಎಚ್ಚೆತ್ತುಕೊಳ್ಳದ ಆಡಳಿತ: ಈ ‘ಮರಣಗುಂಡಿ’ಗೆ ಕಾಯಂ ಪರಿಹಾರ ಎಂದು?
ಸುಳ್ಯದ ಹೃದಯಭಾಗ ಶಾಸ್ತಿ ಸರ್ಕಲ್ನಲ್ಲಿ ಬೇಸಿಗೆಯಲ್ಲಿ ತೆಗೆದ ಪೈಪ್ಲೈನ್ ಗುಂಡಿ ಈಗ ಸಾರ್ವಜನಿಕರನ್ನು ಬಲಿ ಪಡೆಯಲು ಕಾದಿದೆ. ಆಟೋ ಚಾಲಕರು ಬಾಳೆಗಿಡ ನೆಟ್ಟು ಮೂರು ಬಾರಿ ಪ್ರತಿಭಟಿಸಿದರೂ, ಆಡಳಿತ ವರ್ಗದ ‘ಕಣ್ಣೊರೆಸುವ ತಂತ್ರ’ ಬರೀ ಜಲ್ಲಿಕಲ್ಲು ಹಾಕುವುದಕ್ಕಷ್ಟೇ ಸೀಮಿತವಾಗಿದೆ. ಮಳೆಗೆ ಕಲ್ಲು ಕೊಚ್ಚಿಹೋಗಿ ವಾಹನ ಸವಾರರು ಅಡ್ಡಬಿದ್ದು ಮೂಳೆ ಮುರಿದುಕೊಳ್ಳುವ ಭೀತಿಯಲ್ಲಿದ್ದಾರೆ. ಅಷ್ಟೇ ಏಕೆ, ಕೆಲವು ದಿನಗಳ ಹಿಂದೆಯಷ್ಟೇ ಆಂಬುಲೆನ್ಸ್ ಒಂದಕ್ಕೆ ಈ ಗುಂಡಿಯಿಂದಾಗಿ ಪಲ್ಟಿಯಾಗುವ ಪರಿಸ್ಥಿತಿ ಎದುರಾಗಿತ್ತು! ಅದೃಷ್ಟವಶಾತ್ ದೊಡ್ಡ ಅನಾಹುತ ತಪ್ಪಿದೆ. ರಸ್ತೆ ದುರಸ್ತಿ ಮಾಡಲು ಇನ್ನೆಷ್ಟು ಬ
Aug 271 min read


ದೇವರಕೊಲ್ಲಿ ಬಳಿ ಭೀಕರ ಅಪಘಾತ: ಟಿಟಿ ಮೇಲೆ ಮಗುಚಿದ ಲಾರಿ; ಹಲವರಿಗೆ ಗಂಭೀರ ಗಾಯ
ದೇವರಕೊಲ್ಲಿ: ಮಾಣಿ–ಮೈಸೂರು ರಾಷ್ಟ್ರೀಯ ಹೆದ್ದಾರಿಯ ದೇವರಕೊಲ್ಲಿ ಅಬ್ಬಿಕೊಲ್ಲಿ ಬಳಿ ಇಂದು ಸಂಜೆ ಭೀಕರ ಅಪಘಾತ ಸಂಭವಿಸಿದೆ. ಟೆಂಪೋ ಟ್ರಾವೆಲ್ಲರ್ (ಟಿಟಿ) ವಾಹನದ ಮೇಲೆ ಲಾರಿಯೊಂದು ಮಗುಚಿ ಬಿದ್ದಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಅಪಘಾತದ ಬಳಿಕ ಟಿಟಿ ವಾಹನದೊಳಗೆ ಕೆಲವರು ಸಿಲುಕಿಕೊಂಡಿದ್ದರು. ಕ್ರೇನ್ ಮೂಲಕ ಲಾರಿಯನ್ನು ಮೇಲಕ್ಕೆತ್ತಿ ರಕ್ಷಣಾ ಕಾರ್ಯ ನಡೆಸಲಾಗಿದ್ದು, ಗಾಯಾಳುಗಳನ್ನು ಮೂರು ಅಂಬ್ಯುಲೆನ್ಸ್ಗಳ ಮೂಲಕ ಕೆವಿಜಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಘಟನೆಯಲ್ಲಿ ಸಾವು ಸಂಭವಿಸಿರುವ ಶಂಕೆಯೂ ವ್ಯಕ್ತವಾಗಿದ್ದು, ಈ ಕುರಿತು ಅಧಿಕೃತ ಮಾಹಿತಿ ಇನ್ನಷ್ಟೇ ಲ
Aug 261 min read


ಕಡಬ: ಅಂಬೇಡ್ಕರ್ ಭವನದಲ್ಲಿ ಅಕ್ರಮ ಮನಿ ಸರ್ಕ್ಯುಲೇಷನ್ ಜಾಲ ಪತ್ತೆ, 8 ಜನರ ವಿರುದ್ಧ ಎಫ್ಐಆರ್
ಕಡಬ ಪೇಟೆಯ ಅಂಬೇಡ್ಕರ್ ಭವನದಲ್ಲಿ ಸಾರ್ವಜನಿಕರಿಗೆ ಆಮಿಷವೊಡ್ಡಿ ನಿಷೇಧಿತ ಮನಿ ಸರ್ಕ್ಯುಲೇಷನ್ ಯೋಜನೆ ನಡೆಸುತ್ತಿದ್ದ ಜಾಲವನ್ನು ಕಡಬ ಪೊಲೀಸರು ಭೇದಿಸಿದ್ದಾರೆ. ಈ ಸಂಬಂಧ ಸಂಸ್ಥೆಯ ಮಾಲೀಕರು ಹಾಗೂ ಸ್ಥಳೀಯ ಏಜೆಂಟರು ಸೇರಿದಂತೆ ಒಟ್ಟು 8 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ. ದಿನಾಂಕ 23.08.2026 ರಂದು ಸಿಕ್ಕ ಗುಪ್ತಚರ ಮಾಹಿತಿ ಆಧರಿಸಿ ಕಡಬ ಪೊಲೀಸರು ದಾಳಿ ನಡೆಸಿದಾಗ, ಹಾವೇರಿ ಮೂಲದ 'ಕಿಂಗ್ಸ್ ಬಜಾರ್' (KINGS Bazaar) ಹೆಸರಿನಲ್ಲಿ ಸಾರ್ವಜನಿಕರನ್ನು ಸೇರಿಸಿ ಸಭೆ ನಡೆಸುತ್ತಿರುವುದು ಕಂಡುಬಂದಿದೆ. "ಕಂಪನಿಗೆ ಹಣ ತೊಡಗಿಸಿದರೆ ಶೀಘ್ರವಾಗಿ ಭಾರಿ ಲಾಭ ಗಳಿಸಬಹುದು, ರಿಯಾಯಿತಿ ದರದಲ
Aug 261 min read


ಹಬ್ಬದ ಸಂಭ್ರಮಕ್ಕೆ ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ
ಮಂಗಳೂರು: ಹಬ್ಬದ ಕಾರ್ಯಕ್ರಮಗಳು ಹಾಗೂ ಮೆರವಣಿಗೆಗಳ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಪೊಲೀಸರು ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದಾರೆ. ಕಾರ್ಯಕ್ರಮ ಆಯೋಜಕರು ಕಡ್ಡಾಯವಾಗಿ ಪೂರ್ವಾನುಮತಿ ಪಡೆಯಬೇಕು. ಖಾಸಗಿ ಜಾಗದಲ್ಲಿ ಕಾರ್ಯಕ್ರಮ ನಡೆಸುವುದಾದರೆ ಜಾಗದ ಮಾಲೀಕರಿಂದ ಎನ್ಒಸಿ ಪಡೆಯುವುದು ಕಡ್ಡಾಯವಾಗಿದೆ. ಡಿಜೆ ಹಾಗೂ ಅತಿಯಾದ ಶಬ್ದದ ಸ್ಪೀಕರ್ಗಳ ಬಳಕೆಗೆ ಸಂಪೂರ್ಣ ನಿಷೇಧವಿದ್ದು, ಅನುಮತಿಯೊಂದಿಗೆ ಬಳಸುವ ಧ್ವನಿವರ್ಧಕಗಳನ್ನು ರಾತ್ರಿ 10 ಗಂಟೆಯೊಳಗೆ ಬಂದ್ ಮಾಡಬೇಕು. ಮೆರವಣಿಗೆಗಳನ್ನು ರಾತ್ರಿ 11.30ರೊಳಗೆ ಮುಕ್ತಾಯಗೊಳಿಸಬೇಕು. ನಿಗದಿತ ಮಾರ್ಗ ಅಥವಾ ಸ್ಥಳವನ್ನು ಬದಲಾಯಿಸಿ
Aug 251 min read


ಬಿಜೆಪಿಗೆ ಆಘಾತ: ಕಾಂಗ್ರೆಸ್ ಸೇರಿದ ನೆರಿಯಾ ಮಾಜಿ ಗ್ರಾ.ಪಂ. ಸದಸ್ಯೆ ಮರಿಯಮ್ಮ
ಬೆಳ್ತಂಗಡಿ: ತಾಲೂಕಿನ ನೆರಿಯಾ ಗ್ರಾಮ ಪಂಚಾಯತ್ನ ಮಾಜಿ ಬಿಜೆಪಿ ಬೆಂಬಲಿತ ಸದಸ್ಯೆಯಾಗಿದ್ದ ಮರಿಯಮ್ಮ ಅವರು ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರು. ಪಕ್ಷದ ತತ್ವ, ಸಿದ್ಧಾಂತ ಹಾಗೂ ಜನಪರ ಕಾರ್ಯವೈಖರಿಯನ್ನು ಮೆಚ್ಚಿ ಅವರು ಈ ನಿರ್ಧಾರ ಕೈಗೊಂಡಿದ್ದಾರೆ. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರು ಮರಿಯಮ್ಮ ಅವರನ್ನು ಪಕ್ಷಕ್ಕೆ ಆತ್ಮೀಯವಾಗಿ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ರಕ್ಷಿತ್ ಶಿವರಾಂ, "ಕಾಂಗ್ರೆಸ್ ಅಭಿವೃದ್ಧಿ ಹಾಗೂ ಸಾಮಾಜಿಕ ನ್ಯಾಯಕ್ಕೆ ಆದ್ಯತೆ ನೀಡುವ ಪಕ್ಷವಾಗಿದೆ. ಮರಿಯಮ್ಮ ಅವರ ಸೇರ್ಪಡೆಯಿಂದ ನೆರಿಯಾ ಭಾಗದಲ್ಲಿ ಪಕ್ಷದ ಸಂಘಟನೆ ಇನ
Aug 251 min read


ಸುಳ್ಯದಲ್ಲಿ ಧರ್ಮಸ್ಥಳಕ್ಕೆ ಸೇರಿದ ಜಾಗದಲ್ಲಿ ಅಕ್ರಮ ಕಟ್ಟಡ ನಿರ್ಮಾಣ ಆರೋಪ; ವಿಹೆಚ್ಪಿ–ಬಜರಂಗದಳ ಸ್ಥಳ ಪರಿಶೀಲನೆ, ತೆರವು ಕಾರ್ಯಾಚರಣೆ
ಸುಳ್ಯ: ಆಲೆಟ್ಟಿ ಕ್ರಾಸ್ನ ಗುರುಂಪು ಬಳಿ ಧರ್ಮಸ್ಥಳಕ್ಕೆ ಸಂಬಂಧಿಸಿದ ಜಾಗದಲ್ಲಿ ಅನುಮತಿ ಇಲ್ಲದೆ ಕಟ್ಟಡ ನಿರ್ಮಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದೀಗ ಕಟ್ಟಡ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಗುರುಂಪು ಬಳಿಯ ಸರ್ವೇ ನಂಬರ್ 263-6ರ ಜಾಗದಲ್ಲಿ ಸ್ಥಳೀಯ ಅನ್ಯಮತೀಯ ವ್ಯಕ್ತಿಯೊಬ್ಬರು ಕೆಲವೇ ದಿನಗಳಲ್ಲಿ ಕಟ್ಟಡ ನಿರ್ಮಿಸಿ, ಗೋಡೆ ಹಾಗೂ ಕಬ್ಬಿಣದ ಛಾವಣಿ ಅಳವಡಿಸಿ ಬಾಡಿಗೆಗೆ ನೀಡಲು ಸಿದ್ಧತೆ ನಡೆಸಿದ್ದರು ಎನ್ನಲಾಗಿದೆ. ಈ ಕುರಿತು ಧರ್ಮಸ್ಥಳದ ಆಡಳಿತಕ್ಕೆ ಮಾಹಿತಿ ತಲುಪಿದ ಬಳಿಕ, ಕೆಲವು ದಿನಗಳ ಹಿಂದೆ ಧರ್ಮಸ್ಥಳದ ವ್ಯವಸ್ಥಾಪಕರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎನ
Aug 251 min read


ಪುತ್ತೂರು: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯ ವಿರುದ್ಧ ಪೋಕ್ಸೋ ಪ್ರಕರಣ ದಾಖಲು
ಪುತ್ತೂರು: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ದಕ್ಷಿಣ ಕನ್ನಡ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಗಸ್ಟ್ 23ರ ರಾತ್ರಿ ಕಾರ್ಯಕ್ರಮವೊಂದರಿಂದ ಬಾಲಕಿಯನ್ನು ಮನೆಗೆ ತಲುಪಿಸುವ ನೆಪದಲ್ಲಿ ಆರೋಪಿ ಅದ್ದು ಪಡೀಲ್ ತನ್ನ ದ್ವಿಚಕ್ರ ವಾಹನದಲ್ಲಿ ಕರೆದೊಯ್ಯುವಾಗ ದಾರಿಮಧ್ಯೆ ಈ ಕೃತ್ಯ ಎಸಗಿದ್ದಾನೆ ಎಂದು ದೂರಲ್ಲಿ ತಿಳಿಸಲಾಗಿದೆ. ಬಾಲಕಿಯ ತಾಯಿ ನೀಡಿದ ದೂರಿನನ್ವಯ ಪೊಲೀಸರು ಬಿಎನ್ಎಸ್ ಕಲಂ 75 ಹಾಗೂ ಪೋಕ್ಸೋ ಕಾಯ್ದೆಯಡಿ (ಅ.ಕ್ರ. 46/2026) ಪ್ರಕರಣ ದಾಖಲಿಸಿಕೊಂಡು ಆರೋಪಿಯ ಪತ್ತೆಗೆ ತನಿಖೆ ಮುಂದುವರಿಸಿದ್ದಾರೆ.
Aug 241 min read
Archive
bottom of page



