top of page
News Articles
Sathyapatha News Plus


ಪುತ್ತೂರು: ತಾಯಿ-ಮಗು ಕೆರೆಗೆ ಹಾರಿ ಸಾವು; ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲು
ಪುತ್ತೂರು: ತಾಲೂಕಿನ ವ್ಯಾಪ್ತಿಯಲ್ಲಿ ತಾಯಿ ಮತ್ತು ಮಗು ಕೆರೆಗೆ ಹಾರಿ ಮೃತಪಟ್ಟಿರುವ ಅತ್ಯಂತ ಹೃದಯವಿದ್ರಾವಕ ಘಟನೆ ವರದಿಯಾಗಿದೆ. ಮೃತರನ್ನು 34 ವರ್ಷದ ಮಹಿಳೆ ಮತ್ತು ಆಕೆಯ ಮೂರು ವರ್ಷದ ಗಂಡು ಮಗು ಎಂದು ಗುರುತಿಸಲಾಗಿದೆ. ಈ ದಾರುಣ ಘಟನೆಯು ಸ್ಥಳೀಯರಲ್ಲಿ ತೀವ್ರ ಶೋಕವನ್ನುಂಟು ಮಾಡಿದ್ದು, ಸಾವಿನ ನಿಖರ ಕಾರಣಗಳ ಬಗ್ಗೆ ತನಿಖೆ ಚುರುಕುಗೊಂಡಿದೆ. ಘಟನೆಗೆ ಸಂಬಂಧಿಸಿದಂತೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಈಗಾಗಲೇ ಎರಡು ಪ್ರತ್ಯೇಕ ದೂರುಗಳು ದಾಖಲಾಗಿವೆ. ಮೃತ ಮಹಿಳೆಯ ತಂದೆ ರುಕ್ಕಯ್ಯ ಗೌಡ (66) ಅವರು ನೀಡಿದ ದೂರಿನಂತೆ, ಮಗಳು ತನ್ನ ಮಗುವಿನೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್
Jan 51 min read


ಮಂಗಳೂರು: ಕಾರು ಅಪಘಾತದಿಂದ ಬೋಂಡೇಲ್ ಚರ್ಚ್ನ ಧರ್ಮಗುರುಗಳು ಪವಾಡಸದೃಶ ಪಾರು
ಮಂಗಳೂರು: ನಗರದ ಹೊರವಲಯದ ಕಾವೂರು-ಮರಕಡ ರಸ್ತೆಯ ಮರಕಡ ಎಂಬಲ್ಲಿ ಗುರುವಾರ ಸಂಜೆ ನಡೆದ ಭೀಕರ ಕಾರು ಅಪಘಾತದಲ್ಲಿ ಬೋಂಡೇಲ್ನ ಸಂತ ಲಾರೆನ್ಸರ ಪುಣ್ಯಕ್ಷೇತ್ರದ ಧರ್ಮಗುರುಗಳಾದ ಫಾ. ಆಂಡ್ರ್ಯೂ ಲಿಯೋ ಡಿಸೋಜಾ ಅವರು ಅದೃಷ್ಟವಶಾತ್ ಯಾವುದೇ ಗಾಯಗಳಿಲ್ಲದೆ ಪವಾಡಸದೃಶವಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹೊಸ ವರ್ಷದ ಸಂಭ್ರಮದ ನಡುವೆಯೇ ನಡೆದ ಈ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿತ್ತು. ಫಾ. ಆಂಡ್ರ್ಯೂ ಅವರು ನೀರುಮಾರ್ಗದಲ್ಲಿ ಆಯೋಜಿಸಲಾಗಿದ್ದ ಹೊಸ ವರ್ಷಾಚರಣೆಯ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು, ಬಜಪೆ ಮಾರ್ಗವಾಗಿ ಬೋಂಡೇಲ್ ಕಡೆಗೆ ತಮ್ಮ ಕಾರಿನಲ್ಲಿ ವಾಪಸ್ಸು ಬರುತ್ತಿದ್ದರು. ಈ ವೇಳೆ ಮರಕ
Jan 41 min read


ವಿಟ್ಲ: ದ್ವಿಚಕ್ರ ವಾಹನದ ಹಿಂಬದಿ ಸವಾರರಿಗೂ ಹೆಲ್ಮೆಟ್ ಕಡ್ಡಾಯ – ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ
ವಿಟ್ಲ: ರಸ್ತೆ ಸುರಕ್ಷತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವ ನಿಟ್ಟಿನಲ್ಲಿ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಹತ್ವದ ಕ್ರಮ ಕೈಗೊಳ್ಳಲಾಗಿದೆ. ದ್ವಿಚಕ್ರ ವಾಹನ ಚಾಲಕರು ಮಾತ್ರವಲ್ಲದೆ, ಅವರ ಹಿಂದೆ ಕುಳಿತು ಸಂಚರಿಸುವ ಹಿಂಬದಿ ಸವಾರರು ಕೂಡ ಇನ್ನು ಮುಂದೆ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಎಂದು ವಿಟ್ಲ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಅಪಘಾತಗಳ ಸಂದರ್ಭದಲ್ಲಿ ಪ್ರಾಣಹಾನಿ ತಪ್ಪಿಸುವ ಉದ್ದೇಶದಿಂದ ಈ ಮುನ್ನೆಚ್ಚರಿಕಾ ಕ್ರಮವನ್ನು ಕೈಗೊಳ್ಳಲಾಗಿದೆ. ಈ ನಿಯಮದ ಕುರಿತು ಜಾಗೃತಿ ಮೂಡಿಸಲು ಈಗಾಗಲೇ ವಿಟ್ಲ ಪೇಟೆಯಲ್ಲಿ ಪೊಲೀಸರು ವಿಶೇಷ ಕಾರ್ಯಾಚರಣೆಗೆ ಇಳಿದಿದ್ದಾ
Jan 41 min read


ಬಂಟ್ವಾಳ: ಬ್ಯಾಂಕ್ ಆಫ್ ಬರೋಡಾ ಶಾಖೆಯಲ್ಲಿ 71 ಲಕ್ಷ ರೂ. ವಂಚನೆ; ಜಂಟಿ ವ್ಯವಸ್ಥಾಪಕನ ವಿರುದ್ಧ ಕೇಸ್ ದಾಖಲು
ಬಂಟ್ವಾಳ: ತಾಲೂಕಿನ ಪೆರ್ನೆ ಗ್ರಾಮದ ಬ್ಯಾಂಕ್ ಆಫ್ ಬರೋಡಾ ಶಾಖೆಯಲ್ಲಿ ಎಟಿಎಂ ನಗದು ಮತ್ತು ಚಿನ್ನಾಭರಣ ದುರುಪಯೋಗಪಡಿಸಿಕೊಂಡ ಭಾರಿ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ಶಾಖೆಯ ಜಂಟಿ ವ್ಯವಸ್ಥಾಪಕ ಸುಬ್ರಹ್ಮಣ್ಯಂ (30) ಎಂಬುವವರ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಆರೋಪಿತನು ಕಳೆದ ಎರಡು ವರ್ಷಗಳಿಂದ ಇದೇ ಶಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಎಟಿಎಂ ಮೇಲ್ವಿಚಾರಣೆಯ ಹೊಣೆ ಹೊತ್ತಿದ್ದ ಎಂದು ತಿಳಿದುಬಂದಿದೆ. ತನಿಖೆಯ ವರದಿಯ ಪ್ರಕಾರ, ಆರೋಪಿತ ಸುಬ್ರಹ್ಮಣ್ಯಂ 2024ರ ಫೆಬ್ರವರಿಯಿಂದ 2025ರ ಡಿಸೆಂಬರ್ ಅವಧಿಯಲ್ಲಿ ಎಟಿಎಂಗೆ ನಗದು ತುಂಬಿಸುವ ಸಂದರ್ಭ
Jan 31 min read


ಕರಾವಳಿ ಜನತೆಗೆ ಗುಡ್ ನ್ಯೂಸ್: ಬೆಂಗಳೂರು-ಮಂಗಳೂರು ನಡುವೆ ಶೀಘ್ರವೇ ವಂದೇ ಭಾರತ್ ಸಂಚಾರ
ಮಂಗಳೂರು: ಕರಾವಳಿ ಭಾಗದ ಜನರ ದಶಕಗಳ ಬೇಡಿಕೆಯಾಗಿದ್ದ ಬೆಂಗಳೂರು-ಮಂಗಳೂರು ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸೇವೆಗೆ ಕೊನೆಗೂ ಚಾಲನೆ ಸಿಗುವ ಕಾಲ ಸನ್ನಿಹಿತವಾಗಿದೆ. ಈ ಕುರಿತು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಅಧಿಕೃತವಾಗಿ ಭರವಸೆ ನೀಡಿದ್ದು, ಮಂಗಳೂರಿಗೆ ವಂದೇ ಭಾರತ್ ರೈಲು ಓಡಿಸಲು ಈಗ ಮಾರ್ಗ ಮುಕ್ತವಾಗಿದೆ ಎಂದು ತಿಳಿಸಿದ್ದಾರೆ. ಈ ಮೊದಲು ತಾಂತ್ರಿಕ ಕಾರಣಗಳಿಂದಾಗಿ ವಿಳಂಬವಾಗಿದ್ದ ಈ ಯೋಜನೆಯು ಈಗ ಗತಿ ಪಡೆದುಕೊಂಡಿದ್ದು, ರಾಜ್ಯದ ಪ್ರಮುಖ ಎರಡು ನಗರಗಳ ನಡುವಿನ ಪ್ರಯಾಣದ ಸಮಯ ಗಣನೀಯವಾಗಿ ಕಡಿತಗೊಳ್ಳಲಿದೆ. ಈ ಐತಿಹಾಸಿಕ ಬದಲಾವಣೆಗೆ ಮುಖ್ಯ ಕಾರಣವೆಂದರೆ ಸಕಲೇಶಪುರ-ಸು
Jan 11 min read


ವಿಟ್ಲದಲ್ಲಿ ಭೀಕರ ಅಗ್ನಿ ಅವಘಡ: ಎಲೆಕ್ಟ್ರಾನಿಕ್ಸ್ ಅಂಗಡಿ ಬೆಂಕಿಗೆ ಆಹುತಿ - ಪಕ್ಕದ ಅಂಗಡಿಗಳಿಗೂ ವ್ಯಾಪಿಸಿದ ಜ್ವಾಲೆ!
ವಿಟ್ಲ: ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಪೇಟೆಯ ಮಂಗಳೂರು ರಸ್ತೆಯಲ್ಲಿರುವ 'ಶ್ರೀ ಎಲೆಕ್ಟ್ರಾನಿಕ್ಸ್' ಅಂಗಡಿಯಲ್ಲಿ ಇಂದು ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿವೆ. ಗಣೇಶ್ ಡ್ರೈವಿಂಗ್ ಸ್ಕೂಲ್ ಪಕ್ಕದಲ್ಲಿರುವ ಈ ಅಂಗಡಿಯಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಬೆಂಕಿಯ ತೀವ್ರತೆಗೆ ಅಂಗಡಿಯೊಳಗಿನಿಂದ ಸ್ಫೋಟದ ಸದ್ದುಗಳು ಕೇಳಿಬರುತ್ತಿದ್ದು, ಇಡೀ ಪರಿಸರದಲ್ಲಿ ದಟ್ಟವಾದ ಹೊಗೆ ಆವರಿಸಿದೆ. ಸ್ಥಳೀಯರು ನೀರು ಮತ್ತು ಮರಳನ್ನು ಎಸೆದು ಬೆಂಕಿ ನಂದಿಸಲು ಹರಸಾಹಸ ಪಟ್ಟರೂ, ಜ್ವಾಲೆಯ ಅಬ್ಬರ ಕಡಿಮ
Dec 31, 20251 min read


ವಿಟ್ಲ ಶ್ರೀ ಇಲೆಕ್ಟ್ರಾನಿಕ್ಸ್ ಅಂಗಡಿಗೆ ಬೆಂಕಿ – ಪಕ್ಕದ ಅಂಗಡಿಗೂ ವ್ಯಾಪ್ತಿ; ಸ್ಥಳೀಯರ ಹರಸಾಹಸ, ಅಗ್ನಿಶಾಮಕ ತಂಡ
ವಿಟ್ಲ ಪೇಟೆಯ ಮಂಗಳೂರು ರಸ್ತೆಯಲ್ಲಿ ಗಣೇಶ್ ಡ್ರೈವಿಂಗ್ ಸ್ಕೂಲ್ ಪಕ್ಕದಲ್ಲಿರುವ ಶ್ರೀ ಇಲೆಕ್ಟ್ರಾನಿಕ್ಸ್ ಅಂಗಡಿಗೆ ಇಂದು ಅಕಸ್ಮಾತ್ತಾಗಿ ಬೆಂಕಿ ತಗುಲಿದ ಘಟನೆ ನಡೆದಿದೆ. ಪ್ರಾಥಮಿಕ ಮಾಹಿತಿ ಪ್ರಕಾರ ಶಾರ್ಟ್ ಸರ್ಕ್ಯೂಟ್ ಕಾರಣವಾಗಿರಬಹುದೆಂದು ಶಂಕಿಸಲಾಗಿದೆ. ಅಂಗಡಿಯೊಳಗೆ ಬೆಂಕಿಯ ತೀವ್ರತೆ ಹೆಚ್ಚಾಗುತ್ತಿದ್ದಂತೆ ಭಾರೀ ಸದ್ದುಗಳು ಕೇಳಿಬಂದಿದ್ದು, ಸ್ಥಳೀಯರು ನೀರು ಮತ್ತು ಮರಳು ಎಸೆದು ಬೆಂಕಿ ನಂದಿಸಲು ಹರಸಾಹಸ ಪಟ್ಟರೂ ಉರಿ ಇನ್ನಷ್ಟು ತೀವ್ರಗೊಂಡಿದೆ. ಸುತ್ತಮುತ್ತ ಹಲವು ಅಂಗಡಿ ಮುಂಗಟ್ಟುಗಳಿರುವುದರಿಂದ ಬೆಂಕಿ ವಿಸ್ತಾರಗೊಳ್ಳುವ ಭಾರೀ ಅಪಾಯ ಎದುರಾಗಿದೆ. ಶ್ರೀ ಇಲೆಕ್ಟ್ರಾನಿಕ್ಸ್ಗೆ
Dec 31, 20251 min read


ಬೆಳ್ಳಾರೆ: ಜಲದುರ್ಗಾದೇವಿ ದೇವಸ್ಥಾನದ ಆಡಳಿತಾಧಿಕಾರಿ ವಿರುದ್ಧ ಎಸಿ ಅವರಿಗೆ ದೂರು - ತನಿಖೆಗೆ ಆಗ್ರಹ
ಬೆಳ್ಳಾರೆ: ಸುಪ್ರಸಿದ್ಧ ಶ್ರೀ ಜಲದುರ್ಗಾದೇವಿ ದೇವಾಲಯದ ವಾರ್ಷಿಕ ಜಾತ್ರೋತ್ಸವದ ಸಿದ್ಧತೆಗಳ ನಡುವೆಯೇ ಆಡಳಿತಾಧಿಕಾರಿಯ ನಡೆ ವಿವಾದಕ್ಕೆ ಕಾರಣವಾಗಿದೆ. ಕಳೆದ ಕೆಲವು ವರ್ಷಗಳಿಂದ 'ಜಲಧಿ ಇವೆಂಟ್ಸ್ ಪೆರುವಾಜೆ' ಸಂಸ್ಥೆಯು ದೇವಿಯ ಮೇಲಿನ ಭಕ್ತಿಯಿಂದ ಜಾತ್ರೋತ್ಸವಕ್ಕೆ ಬೇಕಾದ ಶಾಮಿಯಾನ ವ್ಯವಸ್ಥೆಯನ್ನು ಸಂಪೂರ್ಣ ಉಚಿತವಾಗಿ ನೀಡುತ್ತಾ ಬಂದಿದೆ. ಆದರೆ, ಈ ಬಾರಿ ಉಚಿತ ಸೇವೆ ಲಭ್ಯವಿದ್ದರೂ ಸಹ ಆಡಳಿತಾಧಿಕಾರಿಯವರು ಶಾಮಿಯಾನಕ್ಕೆ ಪ್ರತ್ಯೇಕವಾಗಿ ಕೋಟೇಶನ್ (ದರಪಟ್ಟಿ) ಆಹ್ವಾನಿಸಿರುವುದು ಭಕ್ತರ ವಲಯದಲ್ಲಿ ತೀವ್ರ ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಅನುಮಾನಾಸ್ಪದ ನಡೆ ಹಾಗೂ ದೂರು: ಉಚಿತವಾಗಿ
Dec 31, 20251 min read


ಪುತ್ತೂರು ಮಗು ಡೆಲಿವರಿ ಪ್ರಕರಣ: ಸಂಧಾನ ವಿಫಲ, ಶೀಘ್ರವೇ ಅಸಲಿ ಮುಖವಾಡ ಬಯಲು- ಕೆ.ಪಿ. ನಂಜುಂಡಿ
ಮಂಗಳೂರು: ಪುತ್ತೂರಿನ ಮಗು ಡೆಲಿವರಿ ಪ್ರಕರಣದಲ್ಲಿ ಡಿಎನ್ಎ ವರದಿ ಪಾಸಿಟಿವ್ ಬಂದಿದ್ದರೂ ಸಹ ಆರೋಪಿ ಶ್ರೀಕೃಷ್ಣನ ಕುಟುಂಬದವರು ಒಪ್ಪಿಕೊಳ್ಳಲು ಅಸಾಧ್ಯವಾದ ಮತ್ತು ಕಠಿಣವಾದ ಷರತ್ತುಗಳನ್ನು ವಿಧಿಸುವ ಮೂಲಕ ಸಂಧಾನ ಪ್ರಕ್ರಿಯೆಯನ್ನು ಹಳಿ ತಪ್ಪಿಸಿದ್ದಾರೆ ಎಂದು ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾದ ಅಧ್ಯಕ್ಷ ಕೆ.ಪಿ. ನಂಜುಂಡಿ ಆಕ್ರೋಶ ವ್ಯಕ್ತಪಡಿಸಿದರು. ಮಂಗಳೂರಿನ ಪ್ರೆಸ್ಕ್ಲಬ್ನಲ್ಲಿ ಸಂತ್ರಸ್ತೆ ಮತ್ತು ಆಕೆಯ ಕುಟುಂಬದೊಂದಿಗೆ ಪತ್ರಿಕಾಗೋಷ್ಠಿ ನಡೆಸಿದ ಅವರು, ಹಿರಿಯ ವಕೀಲರೊಂದಿಗೆ ಚರ್ಚಿಸಿದ ನಂತರ ಆರೋಪಿಗಳು ವಿಧಿಸಿರುವ ಅಸಂಗತ ಷರತ್ತುಗಳನ್ನು ದಾಖಲೆ ಸಮೇತ ಸಾರ್ವಜನಿಕವಾಗಿ ಬಹಿರಂ
Dec 30, 20251 min read


ರಾಜ್ಯದ ಶ್ರೀಮಂತ ದೇಗುಲಗಳ ಪಟ್ಟಿ ಬಿಡುಗಡೆ: ಕುಕ್ಕೆ ಸುಬ್ರಹ್ಮಣ್ಯಕ್ಕೆ ಮೊದಲ ಸ್ಥಾನ, ಚಾಮುಂಡಿ ಬೆಟ್ಟದ ಆದಾಯದಲ್ಲಿ ಕುಸಿತ
ಬೆಂಗಳೂರು: ರಾಜ್ಯ ಮುಜರಾಯಿ ಇಲಾಖೆಯು ಇತ್ತೀಚೆಗೆ ಬಿಡುಗಡೆ ಮಾಡಿರುವ 'ಎ' ಗ್ರೇಡ್ ದೇವಾಲಯಗಳ ಆದಾಯ ಪಟ್ಟಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರವು ಸತತವಾಗಿ ಅಗ್ರಸ್ಥಾನವನ್ನು ಕಾಯ್ದುಕೊಂಡಿದೆ. 2023-24ರಲ್ಲಿ 146.01 ಕೋಟಿ ಇದ್ದ ಕುಕ್ಕೆ ದೇಗುಲದ ಆದಾಯವು 2024-25ರ ಅವಧಿಯಲ್ಲಿ 155.95 ಕೋಟಿ ರೂಪಾಯಿಗಳಿಗೆ ಏರಿಕೆಯಾಗಿದೆ. ರಾಜ್ಯದ ಟಾಪ್ 10 ಶ್ರೀಮಂತ ದೇವಾಲಯಗಳ ಪೈಕಿ ಕರಾವಳಿ ಭಾಗದ ಕುಕ್ಕೆ, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳ ಮತ್ತು ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಗಳು ಪ್ರಮುಖ ಸ್ಥಾನಗಳನ್ನು ಪಡೆಯುವ ಮೂಲಕ ಕರಾವಳಿ ದೇಗುಲಗಳ ಪಾರಮ್ಯ
Dec 30, 20251 min read


ನೆಟ್ಟಣ: ಬಾರ್ ಮಾಲೀಕರಿಗೆ ಲಕ್ಷಾಂತರ ರೂಪಾಯಿ ವಂಚಿಸಿ ಕೆಲಸಗಾರ ಪರಾರಿ
ಕಡಬ: ಕಳೆದ ಏಳು ವರ್ಷಗಳಿಂದ ನಂಬಿಕಸ್ತನಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬನೇ ಬಾರ್ ಮಾಲೀಕರಿಗೆ ಸುಮಾರು 6.57 ಲಕ್ಷ ರೂಪಾಯಿ ವಂಚಿಸಿ ಪರಾರಿಯಾಗಿರುವ ಘಟನೆ ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ನೆಟ್ಟಣದಲ್ಲಿ ನಡೆದಿದೆ. ಬಿಳಿನೆಲೆ ಗ್ರಾಮದ ವಿಶಾಲ್ ಸ್ಟೀಫನ್ ಅವರ ತಾಯಿಯ ಹೆಸರಿನಲ್ಲಿ ನಡೆಯುತ್ತಿರುವ ಬಾರ್ ಅಂಡ್ ರೆಸ್ಟೋರೆಂಟ್ನಲ್ಲಿ ಹರ್ಷಿತ್ ಬಿ.ಕೆ. ಎಂಬಾತ ದೀರ್ಘಕಾಲದಿಂದ ಮ್ಯಾನೇಜರ್ ಮಾದರಿಯ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದನು. ಹಣಕಾಸಿನ ವ್ಯವಹಾರ ಹಾಗೂ ಸ್ಟಾಕ್ ನಿರ್ವಹಣೆಯ ಸಂಪೂರ್ಣ ಹೊಣೆ ಹೊತ್ತಿದ್ದ ಈತ, ಮಾಲೀಕರ ನಂಬಿಕೆಯನ್ನೇ ಬಂಡವಾಳವಾಗಿಸಿಕೊಂಡು ಈ ಕೃತ್ಯ ಎಸಗಿದ್ದಾನ
Dec 26, 20251 min read


ಕಡಬ ತಾಲೂಕು ಕಾರ್ಯನಿರತ ಪತ್ರಕರ್ತ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಬಾಲಕೃಷ್ಣ ಕೆ.ಎಸ್.
ಕಡಬ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಡಬ ತಾಲೂಕು ಘಟಕದ 2025-28ನೇ ಸಾಲಿನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಇತ್ತೀಚೆಗೆ ನಡೆದಿದ್ದು, ನೂತನ ಅಧ್ಯಕ್ಷರಾಗಿ ಬಾಲಕೃಷ್ಣ ಕೆ.ಎಸ್. ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್ ಚೆನ್ನಾವರ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ತಾಲೂಕಿನ ಪತ್ರಕರ್ತರ ಹಿತರಕ್ಷಣೆ ಮತ್ತು ಸಂಘಟನೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಈ ಆಯ್ಕೆ ನಡೆದಿದೆ. ಸಂಘದ ಇತರ ಪ್ರಮುಖ ಜವಾಬ್ದಾರಿಗಳಿಗೆ ಈ ಕೆಳಗಿನವರು ಆಯ್ಕೆಯಾಗಿದ್ದಾರೆ: ನೂತನ ಪದಾಧಿಕಾರಿಗಳ ಪಟ್ಟಿ: * ಅಧ್ಯಕ್ಷರು: ಬಾಲಕೃಷ್ಣ ಕೆ.ಎಸ್. * ಪ್ರಧಾನ ಕಾರ್ಯದರ್ಶಿ: ಪ್ರವೀಣ್ ಚೆನ್ನಾವರ * ಉಪಾಧ್ಯಕ್
Dec 25, 20251 min read


ಕಲ್ಲೇರಿ: ತಿಂಗಳಿನಿಂದ ರಸ್ತೆ ಪಾಲಾಗುತ್ತಿದೆ ಕುಡಿಯುವ ನೀರು; ಪಂಚಾಯತ್ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ
ಎಡಮಂಗಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಎನ್ಮೂರು ಗ್ರಾಮದ ಕಲ್ಲೇರಿ ಪ್ರದೇಶದಲ್ಲಿ ಕುಡಿಯುವ ನೀರಿನ ಪೈಪ್ ಒಂದು ತಿಂಗಳಿಂದ ತನ್ನದೇ ಆದ ದಾರಿಯನ್ನು ಹುಡುಕಿಕೊಂಡು, ನಿಶ್ಚಿಂತವಾಗಿ ನೀರು ವ್ಯರ್ಥ ಮಾಡುತ್ತಾ ಸಾಗುತ್ತಿದೆ. ಎಡಮಂಗಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಎನ್ಮೂರು ಗ್ರಾಮದ ಕಲ್ಲೇರಿ ಪ್ರದೇಶದಲ್ಲಿ ಕಳೆದ ಒಂದು ತಿಂಗಳಿನಿಂದ ಕುಡಿಯುವ ನೀರಿನ ಪೈಪ್ ಒಡೆದು ಹೋಗಿದೆ. ಪೈಪ್ನಿಂದ ಚಿಮ್ಮುತ್ತಿರುವ ನೀರು ವ್ಯರ್ಥವಾಗಿ ಹರಿಯುತ್ತಿದ್ದು, ಸ್ಥಳೀಯ ನಿವಾಸಿಗಳಿಗೆ ತಲುಪಬೇಕಾದ ನೀರು ರಸ್ತೆಯಲ್ಲಿ ಹರಿಯುತ್ತಿದೆ. ಅಧಿಕಾರಿಗಳ ಮೌನ: ಪೈಪ್ ಒಡೆದಿರುವ ವಿಚಾರ ಗ್ರಾಮ ಪಂಚಾಯತ್ ಆಡಳಿತ ಮತ್ತು ಸಂಬಂಧಪಟ
Dec 24, 20251 min read


ಬಜಪೆ ಪಟ್ಟಣ ಪಂಚಾಯತ್ ಚುನಾವಣೆ: ಬಿಜೆಪಿಗೆ ಭರ್ಜರಿ ಬಹುಮತ, ಕಾಂಗ್ರೆಸ್ಗೆ ಹಿನ್ನಡೆ
ಮಂಗಳೂರು: ಮಂಗಳೂರು ತಾಲೂಕಿನ ಬಜಪೆ ಪಟ್ಟಣ ಪಂಚಾಯತ್ಗೆ ನಡೆದ ಚೊಚ್ಚಲ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಸ್ಪಷ್ಟ ಬಹುಮತದೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಒಟ್ಟು 19 ಸ್ಥಾನಗಳಿಗೆ ನಡೆದ ಈ ಹಣಾಹಣಿಯಲ್ಲಿ ಬಿಜೆಪಿ 11 ವಾರ್ಡ್ಗಳಲ್ಲಿ ಗೆಲುವು ಸಾಧಿಸುವ ಮೂಲಕ ಪಂಚಾಯತ್ ಮೇಲೆ ಬಿಜೆಪಿ ಧ್ವಜ ಹಾರಿಸಿದೆ. ಬುಧವಾರ ಮಂಗಳೂರಿನ ಮಿನಿ ವಿಧಾನಸೌಧದಲ್ಲಿ ನಡೆದ ಮತ ಎಣಿಕೆ ಪ್ರಕ್ರಿಯೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ನಿರಂತರ ಮುನ್ನಡೆ ಕಾಯ್ದುಕೊಳ್ಳುವ ಮೂಲಕ ಗೆಲುವಿನ ನಗೆ ಬೀರಿದ್ದಾರೆ. ಚುನಾವಣಾ ಫಲಿತಾಂಶದ ಅಂಕಿಅಂಶಗಳ ಪ್ರಕಾರ, ಪ್ರಮುಖ ವಿರೋಧ ಪಕ್ಷವಾದ ಕಾಂಗ್ರೆಸ್ ಕೇವಲ 4 ಸ್
Dec 24, 20252 min read


ನೆಲ್ಯಾಡಿ: ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕಾಡುಹಂದಿ ದಾಳಿ- ಮಹಿಳೆಗೆ ತೀವ್ರ ಗಾಯ
ಕಡಬ: ತಾಲೂಕಿನ ಕೌಕ್ರಾಡಿ ಗ್ರಾಮದ ಪೊಟ್ಟುಕೆರೆ ಎಂಬಲ್ಲಿ ಶನಿವಾರ (ಡಿ. 20) ಬೆಳಗ್ಗೆ ಕಾಡುಹಂದಿಯೊಂದು ಮಹಿಳೆಯ ಮೇಲೆ ಭೀಕರ ದಾಳಿ ನಡೆಸಿದೆ. ತೋಟದಲ್ಲಿ ಹುಲ್ಲು ಕೊಯ್ಯುತ್ತಿದ್ದ ನಿವಾಸಿ ಉಮೇಶ್ ಗೌಡರ ಪತ್ನಿ ಲೀಲಾವತಿ (36) ಅವರು ಈ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದಾರೆ. ಅರಣ್ಯ ಪ್ರದೇಶದಿಂದ ಏಕಾಏಕಿ ನುಗ್ಗಿ ಬಂದ ಕಾಡುಹಂದಿಯು ಮಹಿಳೆಯ ಮೇಲೆ ಎರಗಿದ್ದು, ದಾಳಿಯ ರಭಸಕ್ಕೆ ಅವರ ಎರಡು ಕೈಗಳಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ. ಕೂಡಲೇ ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಸದ್ಯ ಲೀಲಾವತಿ ಅವರ ಆರೋಗ್ಯ ಸ್ಥಿತಿ ಸ್ಥಿರವಾಗ
Dec 24, 20251 min read


ಬೆಳ್ತಂಗಡಿ: ಅಪ್ರಾಪ್ತ ಬಾಲಕರ ಮೇಲೆ ಹಲ್ಲೆ ಆರೋಪ - ಜುವೆಲ್ಲರಿ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲು
ಬೆಳ್ತಂಗಡಿ: ಪಟ್ಟಣದ ಜುವೆಲ್ಲರಿಯೊಂದರ ಹಿಂಭಾಗದಲ್ಲಿ ಬಹಿರ್ದೆಸೆಗೆ ತೆರಳಿದ್ದ ಅಪ್ರಾಪ್ತ ಬಾಲಕರ ಮೇಲೆ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡಿಸೆಂಬರ್ 15, 2025 ರಂದು ಸಂಜೆ ಈ ಘಟನೆ ಸಂಭವಿಸಿದೆ. ದೂರಿನ ಪ್ರಕಾರ, ಅಪ್ರಾಪ್ತ ವಯಸ್ಸಿನ ಪಿರ್ಯಾದಿದಾರರು ತಮ್ಮ ಇಬ್ಬರು ಸ್ನೇಹಿತರೊಂದಿಗೆ ಬೆಳ್ತಂಗಡಿ ಪಟ್ಟಣದ ಜುವೆಲ್ಲರಿಯೊಂದರ ಹಿಂಭಾಗದ ಪ್ರದೇಶಕ್ಕೆ ತೆರಳಿದ್ದರು. ಈ ವೇಳೆ ಅಲ್ಲಿಗೆ ಬಂದ ಜುವೆಲ್ಲರಿ ಸಿಬ್ಬಂದಿ, "ನೀವು ವಿಡಿಯೋ ಮಾಡುತ್ತಿದ್ದೀರಿ" ಎಂದು ಆರೋಪಿಸಿ ಮೂವರು ಬಾಲಕರನ್ನು ತಡೆದು ನಿಲ್ಲಿಸಿ ಹಲ್ಲೆ ನಡೆಸಿದ್ದಾರೆ ಎಂ
Dec 18, 20251 min read


ಬಿಸಿರೋಡು: ಮದುವೆ ನಿಶ್ಚಯವಾಗಿದ್ದ ಯುವತಿ ನಾಪತ್ತೆ!
ಬಂಟ್ವಾಳ: ಮದುವೆಯ ಸಂಭ್ರಮದಲ್ಲಿದ್ದ ಮನೆಯಲ್ಲಿ ಈಗ ಆತಂಕದ ಛಾಯೆ ಆವರಿಸಿದೆ. ಮದುವೆಗೆ ಕೆಲವೇ ದಿನಗಳು ಬಾಕಿ ಇರುವಾಗ ಮದುಮಗಳು ಮನೆಯಿಂದ ನಾಪತ್ತೆಯಾದ ಘಟನೆ ಬಿಸಿರೋಡಿನ ಪಲ್ಲಮಜಲು ಎಂಬಲ್ಲಿ ಸಂಭವಿಸಿದೆ. ಡಿ.14 ರಂದು ಅಶ್ಪಿಯಳನ್ನು . ಬಿ ಮೂಡ ಗ್ರಾಮದ ಬಂಟ್ವಾಳದ ಯುವಕನೋರ್ವನಿಗೆ ಮದುವೆ ಮಾಡುವುದಾಗಿ ಹಿರಿಯರೊಂದಿಗೆ ಮಾತುಕತೆ ಮಾಡಿ ಯುನಿಟಿ ಹಾಲ್ ಅಲ್ಲಿ ಮದುವೆ ನಿಶ್ಷಯಿಸಿರುತ್ತಾರೆ. ಡಿ. 14 ರಂದು ಬೆಳಗ್ಗೆ ಸುಮಾರು 03:30 ಗಂಟೆ ತನಕ ಮನೆಯಲ್ಲೇ ಮಲಗಿದ್ದು ಆ ಬಳಿಕ ಬೆಳಿಗ್ಗೆ ಸುಮಾರು 04:30 ಗಂಟೆಗೆ ಬೆಳಗಿನ ಜಾವ ನೋಡಿದಾಗ ಅಕ್ಕನ ಮನೆಯಲ್ಲಿ ಇಲ್ಲದೇ ಇರುವುದು ತಿಳಿದು ಬಂದಿದೆ. ಬಳಿಕ
Dec 16, 20251 min read


ಕಾಸರಗೋಡು: ತೆಯ್ಯಂ ಉತ್ಸವದಲ್ಲಿ ಅವಘಡ; ಗುರಾಣಿ ತಗುಲಿ ಯುವಕ ಪ್ರಜ್ಞೆ ತಪ್ಪಿ ಸಾವು ಬಚಾವ್!
ಕಾಸರಗೋಡು: ಜಿಲ್ಲೆಯ ನೀಲೇಶ್ವರದಲ್ಲಿ ನಡೆಯುತ್ತಿದ್ದ ತೆಯ್ಯಂ ಉತ್ಸವದ ವೇಳೆ ಆಕಸ್ಮಿಕವಾಗಿ ದೈವನರ್ತಕನ ಕೈಯಲ್ಲಿದ್ದ ಗುರಾಣಿ ತಗುಲಿ ಯುವಕನೊಬ್ಬ ಕುಸಿದು ಬಿದ್ದ ಘಟನೆ ಸಂಭವಿಸಿದೆ. ನೀಲೇಶ್ವರದ ರೈಲ್ವೆ ಮೇಲ್ಸೇತುವೆ ಸಮೀಪವಿರುವ ಪಲ್ಲಿಕ್ಕರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಈ ಅವಘಡ ನಡೆದಿದೆ. ದೇವಸ್ಥಾನದ ಉತ್ಸವದ ಅಂಗವಾಗಿ ಪೂಮಾರುತನ್ ದೈವದ ‘ವೆಲ್ಲಟ್ಟಂ’ ಆಚರಣೆ ನಡೆಯುತ್ತಿತ್ತು. ಈ ವೇಳೆ ದೈವನರ್ತಕರು ಸಾಂಪ್ರದಾಯಿಕ ವೇಗದಲ್ಲಿ ಮರದ ಗುರಾಣಿಯನ್ನು ತಿರುಗಿಸುತ್ತಿದ್ದಾಗ, ಹತ್ತಿರದಲ್ಲಿದ್ದ ಪ್ರೇಕ್ಷಕ ಯುವಕನ ತಲೆಗೆ ಗುರಾಣಿ ಬಲವಾಗಿ ತಾಕಿದೆ. ಗುರಾಣಿ ತಲೆಗೆ ತಗುಲಿದ ತಕ್ಷಣ ಯುವಕ ಪ್ರಜ
Dec 16, 20251 min read


ಮಂಗಳೂರು: ವೃದ್ಧೆ ಮನೆಯಲ್ಲಿ ದರೋಡೆ ಪ್ರಕರಣ- ಮೂವರು ಬಂಧನ
ಮಂಗಳೂರು: ಸುರತ್ಕಲ್ ಸಮೀಪದ ಮುಕ್ಕ ಪ್ರದೇಶದಲ್ಲಿ 85 ವರ್ಷದ ವೃದ್ಧೆ ಜಲಜಾ ಅವರ ಮನೆಗೆ ನುಗ್ಗಿ ಚಿನ್ನಾಭರಣ ಮತ್ತು ನಗದು ದೋಚಿದ್ದ ಪ್ರಕರಣವನ್ನು ಸುರತ್ಕಲ್ ಪೊಲೀಸರು ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಡಿಸೆಂಬರ್ 3 ರಂದು ಕುಡಿಯುವ ನೀರು ಕೇಳುವ ನೆಪದಲ್ಲಿ ಬಂದ ಅಪರಿಚಿತರು, ವೃದ್ಧೆಯ ಮನೆ ಹಂಚು ತೆಗೆದು ಒಳನುಗ್ಗಿ, ಬೆದರಿಸಿ ಅವರ ಕುತ್ತಿಗೆಗೆ ಬೈರಾಸು ಬಿಗಿದು ಸುಮಾರು 50 ಗ್ರಾಂ ಚಿನ್ನಾಭರಣ ಮತ್ತು ₹14,000 ನಗದು ದೋಚಿ ಪರಾರಿಯಾಗಿದ್ದರು. ತನಿಖೆ ನಡೆಸಿದ ಪೊಲೀಸರು, ಶೈನ್ ಎಚ್. ಪುತ್ರನ್ ಅಲಿಯಾಸ್ ಶಯನ್ ಎಂಬಾತನನ್ನು ಮೊದಲು ಬಂಧಿಸಿದ
Dec 16, 20251 min read


ದೇವಚಳ್ಳದಲ್ಲಿ ಕೋಟಿ ಮೌಲ್ಯದ ಮರದ ದಿಮ್ಮಿಗಳು ವಶ: ಇಬ್ಬರ ಬಂಧನ, ಅಕ್ರಮ ಮರ ಕಡಿತಕ್ಕೆ ಅರಣ್ಯ ಇಲಾಖೆಯಿಂದ ಬ್ರೇಕ್
ದೇವಚಳ್ಳ ಗ್ರಾಮದ ಮುಂಡೋಡಿ ಪ್ರದೇಶದಲ್ಲಿ ಅಕ್ರಮವಾಗಿ ಕಡಿದು ಸಾಗಿಸಲಾಗುತ್ತಿದ್ದ ಅಂದಾಜು ರೂ. 10 ಲಕ್ಷ ಮೌಲ್ಯದ ಮರದ ದಿಮ್ಮಿಗಳನ್ನು ಮತ್ತು ಅವುಗಳ ಸಾಗಾಟಕ್ಕೆ ಬಳಸಿದ ವಾಹನಗಳನ್ನು ಡಿಸೆಂಬರ್ 13 ರಂದು ಅರಣ್ಯ ಇಲಾಖೆ ಅಧಿಕಾರಿಗಳು ವಿಶೇಷ ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡಿದ್ದಾರೆ. ಮುಂಡೋಡಿಯ ನಾಗೇಶ್ ಎಂಬುವವರಿಗೆ ಸೇರಿದ ಜಾಗದಿಂದ ಒಂದು ಹೆಬ್ಬಲಸಿನ ಮರ ಮತ್ತು ಒಂದು ಮಾವಿನ ಮರವನ್ನು ಅಕ್ರಮವಾಗಿ ಕಡಿದು ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಉಪ ವಲಯ ಅರಣ್ಯಾಧಿಕಾರಿ ಸೌಮ್ಯಾ ಪಿ. ಎನ್. ಅವರ ನೇತೃತ್ವದಲ್ಲಿ ನೆಲ್ಲೂರು-ಕೆಮ್ರಾಜೆ ವಲಯದ ಅಧಿಕಾರಿಗಳು ಸ್ಥಳಕ್ಕೆ ದಾಳಿ ನಡೆಸಿದ
Dec 15, 20251 min read
Archive
bottom of page


